Thursday, May 2, 2024
Homeಜಿಲ್ಲಾ ಸುದ್ದಿಗಳುತುಮಕೂರು : ಸ್ಮಶಾನವಿಲ್ಲದ ಕಾರಣ ರಸ್ತೆಬದಿಯೇ ಅಂತ್ಯಸಂಸ್ಕಾರ

ತುಮಕೂರು : ಸ್ಮಶಾನವಿಲ್ಲದ ಕಾರಣ ರಸ್ತೆಬದಿಯೇ ಅಂತ್ಯಸಂಸ್ಕಾರ

ತುಮಕೂರು, ಡಿ.25- ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ದುರ್ಗದಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿ ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ದುರ್ಗದಹಳ್ಳಿ ಗ್ರಾಮದ ಸಾರ್ವಜನಿಕ ಹೋರಾಟಗಾರ ತಿಮ್ಮರಾಜು ಎಂಬುವವರ ತಂದೆ ಪೆದ್ದಯ್ಯ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ನಿಧನರಾಗಿದ್ದರು.

ಅವರ ಅಂತ್ಯ ಸಂಸ್ಕಾರಕ್ಕೆ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ ತಿಮ್ಮನಾಯಕನಹಳ್ಳಿ ಗ್ರಾಮಕ್ಕೆ ತೆರಳುವ ರಸ್ತೆ ಬದಿ ತಮ್ಮ ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.ದುರ್ಗದಹಳ್ಳಿ ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ಮಂಜೂರು ಮಾಡಿಕೊಡಲು ತಹಸೀಲ್ದಾರರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಮಶಾನ ಮಂಜೂರಾತಿಗೆ ಕ್ರಮ ಕೈಗೊಂಡಿಲ್ಲ.

ಎಟಿಎಂನಲ್ಲಿ ಹಣ ಕದ್ದು ಯಂತ್ರಕ್ಕೆ ಬೆಂಕಿ ಇಟ್ಟ ಕಳ್ಳರು

ಅರೆಗುಜ್ಜನ ಹಳ್ಳಿ ಗ್ರಾಮ ಪಂಚಾಯ್ತಿಗೆ ಅರ್ಜಿ ನೀಡಿದರೆ ತಾಲ್ಲೂಕು ಆಡಳಿತ ಬೆಟ್ಟದ ಮೇಲೆ ಸ್ಮಶಾನ ಭೂಮಿಗೆ ಮಂಜೂರಾತಿ ನೀಡಿದ್ದಾರೆ. ಅಲ್ಲಿಗೆ ದಾರಿ ಇಲ್ಲ ಎಂದು ಹೇಳುತ್ತಿದ್ದಾರೆ. ಬಡವರ ಕೂಗಿಗೆ ತಹಸೀಲ್ದಾರ್ ಕಚೇರಿಯಲ್ಲಿ ಬೆಲೆ ಇಲ್ಲ ಎಂದು ವ್ಯವಸ್ಥೆಯ ವಿರುದ್ಧ ತಿಮ್ಮರಾಜು ಅಸಹನೆ ವ್ಯಕ್ತಪಡಿಸಿದ್ದಾರೆ ಮತ್ತು ತುಮಕೂರು ಜಿಲ್ಲಾ ಆಡಳಿತದಿಂದ ದುರ್ಗದ ಹಳ್ಳಿ ಗ್ರಾಮಕ್ಕೆ ಸೂಕ್ತವಾದ ಸ್ಮಶಾನ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿದ್ದಾರೆ.

RELATED ARTICLES

Latest News