Saturday, July 27, 2024
Homeಜಿಲ್ಲಾ ಸುದ್ದಿಗಳುನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ

ನದಿ ಪಕ್ಕದಲ್ಲೇ ಇದ್ದರೂ ಕುಡಿಯಲು ನೀರಿಲ್ಲ

ಮೈಸೂರು,ಜೂ. 8– ಕಪಿಲಾ ನದಿ ದಂಡೆ ಕೂಗಳತೆ ದೂರದಲ್ಲಿದ್ದರೂ ಸಹ ಸ್ಥಳೀಯರಿಗೆ ನೀರಿನ ಸಮಸ್ಯೆ ತಪ್ಪಿಲ್ಲ. ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವಂತಾಗಿದೆ.ಪ್ರತಿದಿನ ಬಿಂದಿಗೆ ಹಿಡಿದು ನೀರಿಗಾಗಿ ಅಲೆದಾಡುವ ಗೋಳೂರು ಗ್ರಾಮಸ್ಥರ ಪರಿಪಾಟಲಿಗೆ ಸ್ಪಂದಿಸುವವರೇ ಇಲ್ಲದಂತಾಗಿದೆ.

ಸುಮಾರು ಮೂರು ಸಾವಿರ ಕುಟುಂಬಗಳಿರುವ ಈ ಗ್ರಾಮ ನಿರ್ಲಕ್ಷಕ್ಕೆ ಒಳಗಾಗಿ ನೀರಿನ ಅಭಾವ ಇಲ್ಲಿನ ಜನಗಳಿಗೆ ನಿರಂತರವಾಗಿ ಕಾಡುತ್ತಿದೆ.ನೀರಿಗಾಗಿ ಪರದಾಡುತ್ತಿರುವ ಗ್ರಾಮಸ್ಥರ ಸಂಯಮ ಮೀರಿದೆ. ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿ ಗಳ ವಿರುದ್ಧ ಆಕೋಶ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ಬಗೆಹರಿಸುವಂತೆ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಮಹಿಳೆಯರು ಆಕೋಶ ವ್ಯಕ್ತಪಡಿಸಿದ್ದಾರೆ. ಮನೆಗೆ ಅಳವಡಿಸಲಾದ ಕೊಳಾಯಿಗಳು ಬರಿದಾಗಿವೆ. ನೀರಿನ ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ಕೊಟ್ಟಿದ್ದಾರೆ.

RELATED ARTICLES

Latest News