Saturday, July 27, 2024
Homeರಾಜಕೀಯಆಪರೇಷನ್ ಅಗತ್ಯವಿಲ್ಲ, ಕಾಂಗ್ರೆಸ್ ಶಾಸಕರೇ ಸಿದ್ದು ಸರ್ಕಾರವನ್ನು ಉರುಳಿಸುತ್ತಾರೆ : ಶೆಟ್ಟರ್

ಆಪರೇಷನ್ ಅಗತ್ಯವಿಲ್ಲ, ಕಾಂಗ್ರೆಸ್ ಶಾಸಕರೇ ಸಿದ್ದು ಸರ್ಕಾರವನ್ನು ಉರುಳಿಸುತ್ತಾರೆ : ಶೆಟ್ಟರ್

ಹುಬ್ಬಳ್ಳಿ, ಮೇ 16- ಸಿದ್ದರಾಮಯ್ಯ ಸರ್ಕಾರ ಉರುಳಲು ಆಪರೇಷನ್ ಕಮಲ ನಡೆಸುವ ಆವಶ್ಯಕತೆಯಿಲ್ಲ, ಅಸಮಾಧಾನದಿಂದ ಕುದಿಯುತ್ತಿರುವ ಕಾಂಗ್ರೆಸ್ ಶಾಸಕರೇ ಪತನಕ್ಕೆ ಕಾರಣರಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆಯಾಗದ ಕಾರಣ ಶಾಸಕರೆಲ್ಲಾ ಕೊತಕೊತ ಕುದಿಯುತ್ತಿದ್ದಾರೆ, ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಯಾವುದೇ ಕ್ಷಣದಲ್ಲಿ ಅವರ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯೆತೆಯಿದೆ ಎಂದರು.

ಸಿಎಂ ಮತ್ತು ಡಿಸಿಎಂ ನಡುವೆ ಸಿಎಂ ಕುರ್ಚಿ ಗುದ್ದಾಟ ಸರ್ಕಾರ ರಚನೆಯಾಗುವ ಮೊದಲಿಂದ ನಡೆಯುತ್ತಿದೆ. ಸಿದ್ದರಾಮಯ್ಯ 5 ವರ್ಷ ಅವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆಯೇ ಅಥವಾ ಅರ್ಧ ಅವಧಿಯ ನಂತರ ನಿರ್ಗಮಿಸುತ್ತಾರೆಯೇ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಸಿಎಂ ಕುರ್ಚಿಗಾಗಿ ಡಿ.ಕೆ. ಶಿವಕುಮಾರ್ ನಡೆಸುತ್ತಿರುವ ಕಸರತ್ತು ಸಹ ಸರ್ಕಾರದ ಪತನಕ್ಕೆ ಕಾರಣವಾಗಲಿದೆ ಎಂದು ಶೆಟ್ಟರು ಹೇಳಿದರು.

RELATED ARTICLES

Latest News