Wednesday, May 22, 2024
Homeರಾಜ್ಯಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌

ಪೆನ್‌ಡ್ರೈವ್‌ ಪ್ರಕರಣದಲ್ಲಿ ಸೂಕ್ತ ಸಾಕ್ಷಿ-ಪುರಾವೆಗಳಿಲ್ಲದೆ ಯಾರನ್ನೂ ಬಂಧಿಸಲ್ಲ : ಗೃಹಸಚಿವ ಪರಮೇಶ್ವರ್‌

ಬೆಂಗಳೂರು,ಮೇ.1- ಹಾಸನದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹಳಷ್ಟು ಮಂದಿಯ ಜೀವನದ ಪ್ರಶ್ನೆ ಅಡಗಿದೆ. ಈ ಕಾರಣಕ್ಕಾಗಿಯೇ ಎಸ್‌ಐಟಿಯ ತನಿಖೆಗೆ ಆದೇಶಿಸಲಾಗಿದೆ. ಸಾಕ್ಷಿ ಪುರಾವೆಗಳನ್ನು ನೋಡದೆ ಏಕಾಏಕಿ ರೇವಣ್ಣ ಅಥವಾ ಯಾರನ್ನೇ ಆಗಲಿ ಬಂಧಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ರಾಜ್ಯಸರ್ಕಾರ ಏನೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ, ಆ ರೀತಿ ಏಕಾಏಕಿ ಕ್ರಮ ತೆಗೆದುಕೊಳ್ಳುವುದು ಸೂಕ್ತ ಅಲ್ಲ. ಸೂಕ್ಷ್ಮ ಪ್ರಕರಣವಾಗಿದ್ದು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಎಚ್ಚರಿಕೆಯಿಂದ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ದೂರುದಾರರಿಂದ ಹೇಳಿಕೆ ಪಡೆಯಲಾಗಿದೆ. ಸಿಆರ್‌ಪಿಸಿ 41/ಎ ಸೆಕ್ಷನ್‌ ಅಡಿ ನೋಟೀಸ್‌ ನೀಡಲಾಗಿದೆ. 24 ಗಂಟೆಯೊಳಗಾಗಿ ವಿಚಾರಣೆಗೆ ಹಾಜರಾಗಬೇಕು, ಇಲ್ಲದೇ ಹೋದರೆ ಕಾನೂನಿನ ಪ್ರಕಾರ ಮುಂದಿನ ಕ್ರಮಗಳನ್ನು ಎಸ್‌ಐಟಿ ಅಧಿ ಕಾರಿಗಳು ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಪ್ರಕರಣದ ಕೇಂದ್ರ ಬಿಂದು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಿರುವುದು ವಿಮಾನದ ಟಿಕೆಟ್‌ಗಳಿಂದ ಪತ್ತೆಯಾಗಿದೆ. ಅವರನ್ನು ವಾಪಸ್‌ ಕರೆತರಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಎಸ್‌ಐಟಿ ಕೈಗೊಳ್ಳಲಿದೆ. ಅಗತ್ಯವಾದರೆ ಕೇಂದ್ರ ಸರ್ಕಾರದ ಸಹಾಯವನ್ನು ಪಡೆಯಲಿದೆ ಎಂದರು.

ಸದ್ಯಕ್ಕೆ ಎಸ್‌ಐಟಿ ಅಧಿ ಕಾರಿಗಳು ಪ್ರಕರಣ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅದಾದ ಬಳಿಕ ವಿಡಿಯೋಗಳ ಮೂಲ ಯಾವುದು? ಎಲ್ಲಿಂದ ಬಿಡುಗಡೆಯಾಗಿದೆ? ಎಂಬ ವಿಚಾರಗಳ ಕುರಿತು ಎಸ್‌ಐಟಿ ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.

ರೇವಣ್ಣ ಅವರನ್ನು ಏಕೆ ಬಂಧಿಸಿಲ್ಲ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ವಿಡಿಯೋ ಬಿಡುಗಡೆ ಹಿಂದೆ ಡಿ.ಕೆ.ಶಿವಕುಮಾರ್‌ ಕೈವಾಡವಿದೆ ಎಂಬ ಟೀಕೆಗಳನ್ನು ಗಮನಿಸಿದ್ದೇನೆ. ಎಸ್‌ಐಟಿ ತನಿಖೆ ನಡೆಯುತ್ತಿರುವುದರಿಂದಾಗಿ ಈ ಹಂತದಲ್ಲಿ ನಾನು ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ. ಬೇರೆಯವರು ಈ ವಿಚಾರವನ್ನು ಚರ್ಚಿಸುವುದು ಸೂಕ್ತವಲ್ಲ. ಆರೋಪಗಳು, ಒತ್ತಡಗಳು, ಟೀಕೆಗಳನ್ನು ಆಧರಿಸಿ ಏಕಾಏಕಿ ಯಾರನ್ನೂ ಬಂಧಿಸಲು ಸಾಧ್ಯವಿಲ್ಲ.

ಹಾಗೆಯೇ ಯಾರನ್ನೂ ರಕ್ಷಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನೇಹಾ ಪ್ರಕರಣದಲ್ಲಿ ಬೊಬ್ಬೆ ಹೊಡೆದಿದ್ದ ಬಿಜೆಪಿಯವರು ಹಾಸನದ ಪೆನ್‌ಡ್ರೈವ್‌ ಪ್ರಕರಣದಲ್ಲಿ ವೌನವಾಗಿರುವುದು ಮತ್ತು ಜೆಡಿಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿರುವುದು ನಮಗೆ ಸಂಬಂಧಟಪ್ಟ ವಿಚಾರಗಳಲ್ಲ. ಆ ಎರಡೂ ಪಕ್ಷಗಳಿಗೆ ಸೇರಿದ ವಿಷಯ ಎಂದು ಹೇಳಿದರು.

ಗ್ಯಾರಂಟಿ ನಿಲ್ಲಲ್ಲ :
ಲೋಕಸಭಾ ಚುನಾವಣೆ ಬಳಿಕ ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸುತ್ತದೆ, ಕಾಂಗ್ರೆಸ್‌ ಸೋತರೆ ಗೃಹಜ್ಯೋತಿ ಯೋಜನೆ ನಿಲ್ಲಸಲಾಗುತ್ತದೆ ಎಂಬೆಲ್ಲಾ ಅಪಪ್ರಚಾರಗಳನ್ನು ವಿರೋಧಪಕ್ಷಗಳು ಮಾಡುತ್ತಿವೆ. ಖ್ಯಮಂತ್ರಿಯಾದಿಯಾಗಿ ಸಂಪುಟದ ಎಲ್ಲಾ ಸಚಿವರು ಸ್ಪಷ್ಟವಾಗಿ ಹೇಳಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈಗಾಗಲೇ ಪಂಚಖಾತ್ರಿಗಳಿಗೆ ಬಜೆಟ್‌ನಲ್ಲಿ ಸಾಕಷ್ಟು ಹಣ ಮೀಸಲಿಡಲಾಗಿದೆ ಎಂದು ಸ್ಪಷ್ಟಪಡಿಸಿದರು.

RELATED ARTICLES

Latest News