Tuesday, November 4, 2025
Homeರಾಜ್ಯಕ್ರೀಡಾಪಟುಗಳ ಉತ್ತೇಜನಕ್ಕೆ ಒಲಿಂಪಿಕ್‌ ಪದಕ ಯೋಜನೆ ಆರಂಭ

ಕ್ರೀಡಾಪಟುಗಳ ಉತ್ತೇಜನಕ್ಕೆ ಒಲಿಂಪಿಕ್‌ ಪದಕ ಯೋಜನೆ ಆರಂಭ

Olympic Medal Scheme launched to encourage athletes

ಬೆಂಗಳೂರು,ನ.4– ಮುಂಬರುವ ಲಾಸ್‌‍ ಏಂಜಲೀಸ್‌‍ ಒಲಿಂಪಿಕ್ಸ್ 2028 ಅನ್ನು ಗಮನದಲ್ಲಿಟ್ಟುಕೊಂಡು, ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಒಲಿಂಪಿಕ್‌ ಮೆಡ್‌ಲ್‌ ಸ್ಕೀಮ್‌ (ಒಲಂಪಿಕ್‌ ಪದಕ ಯೋಜನೆ) ಯೋಜನೆಯನ್ನು ಪ್ರಾರಂಭಿಸಿದೆ.

ಈ ಯೋಜನೆಯಡಿ 60 ಕ್ರೀಡಾಪಟುಗಳನ್ನು ಗುರುತಿಸಿ ಪ್ರತಿಯೊಬ್ಬರಿಗೂ ಮೂರು ವರ್ಷಗಳವರೆಗೆ ಪ್ರತಿ ವರ್ಷ 10 ಲಕ್ಷ ಹಣವನ್ನು ಯುವಜನ ಕ್ರೀಡಾ ಇಲಾಖೆಯಿಂದ ನೀಡಲಾಗುತ್ತದೆ. ಈ ಯೋಜನೆಗೆ ಒಟ್ಟು 6 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.

- Advertisement -

ಹೊಸ ಮಾರ್ಗಸೂಚಿಗಳ ಪ್ರಕಾರ, ಕ್ರೀಡಾಪಟು ಗಳು ಸೇವಾ ಸಿಂಧು- ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕ್ರೀಡಾ ಮತ್ತು ಯುವಜನ ಸೇವೆಗಳ ಇಲಾಖೆಯು ಮುಂದಿನ ವಾರ ಅರ್ಜಿ ಆಹ್ವಾನಿಸಲಿದೆ ಎಂದು ತಿಳಿದುಬಂದಿದೆ.ಅದರಂತೆ ಇಲಾಖೆಯು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಯ್ಕೆ ಮಾಡುತ್ತದೆ.

ವಿಶ್ವ ಅಥವಾ ಏಷ್ಯನ್‌ ಚಾಂಪಿಯನ್‌ಶಿಪ್‌ಗಳು, ಏಷ್ಯನ್‌ ಆಟಗಳು ಮತ್ತು ಕಾಮನ್‌ವೆಲ್ತ್‌ ಗೇಮ್‌ಗಳಲ್ಲಿ ಭಾಗವಹಿಸಿದವರು ಅರ್ಜಿ ಸಲ್ಲಿಸಬಹುದು. ಸೀನಿಯರ್‌ ಮತ್ತು ಜೂನಿಯರ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಪದಕ ಗೆದ್ದವರು ಅರ್ಜಿ ಸಲ್ಲಿಸಬಹುದು.
ಗುಂಪು ಆಟದ ವಿಭಾಗದಡಿ ರಾಷ್ಟ್ರೀಯ ಶಿಬಿರಗಳಲ್ಲಿ ಭಾಗವಹಿಸಿದ ಅಥವಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸತತ ಮೂರು ವರ್ಷಗಳ ಕಾಲ ಕರ್ನಾಟಕವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಇಲಾಖೆ ಸಮಿತಿಗಳನ್ನು ರಚಿಸಿದೆ.

ಈ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ಕ್ರೀಡಾಪಟುಗಳ ಕಾರ್ಯಕ್ಷಮತೆಯ ಆಧಾರದ ಮೇಲೆ, ಎರಡನೇ ಮತ್ತು ಮೂರನೇ ವರ್ಷಕ್ಕೆ ಅವರಿಗೆ ಹಣಕಾಸಿನ ನೆರವು ನೀಡಲಾಗುತ್ತದೆ. ಈ ಹಣವನ್ನು ತರಬೇತಿ, ಉಪಕರಣಗಳು ಮತ್ತು ಪೌಷ್ಠಿಕಾಂಶ ಪೂರಕಗಳನ್ನು ಖರೀದಿಸಲು ಮತ್ತು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಬಳಸಬಹುದಾಗಿದೆ ಎಂದು ತಿಳಿಸಲಾಗಿದೆ.

ಗೋರಿ, ರಾಷ್ಟ್ರೀಯ ಶಿಬಿರಗಳಲ್ಲಿ ಭಾಗವಹಿಸಿದ ಅಥವಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಸತತ ಮೂರು ವರ್ಷಗಳಿಂದ ಕರ್ನಾಟಕವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಅರ್ಹರಾಗಿರುತ್ತಾರೆ. ಇಲಾಖೆಯು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಮಿಟಿಗಳನ್ನು ರಚಿಸಿದೆ. ಮೊದಲ ಬಾರಿಗೆ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಅರ್ಹರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಆಧರಿಸಿ, ಅವರಿಗೆ ಎರಡನೇ ಮತ್ತು ಮೂರನೇ ವರ್ಷಕ್ಕೆ ಆರ್ಥಿಕ ನೆರವು ನೀಡಲಾಗುವುದು. ಹಣವನ್ನು ತರಬೇತಿ, ಉಪಕರಣಗಳು ಮತ್ತು ಪೌಷ್ಠಿಕಾಂಶದ ಪೂರಕಗಳನ್ನು ಖರೀದಿಸಲು ಮತ್ತು ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯಗಳಲ್ಲಿ ಭಾಗವಹಿಸಲು ಬಳಸಬಹುದು.

ಇಲಾಖೆಯು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಆಯ್ಕೆ ಮಾಡುತ್ತದೆ. ವಿಶ್ವ ಅಥವಾ ಏಷ್ಯನ್‌ ಚಾಂಪಿಯನ್‌ಶಿಪ್‌ಗಳು, ಏಷ್ಯನ್‌ ಮತ್ತು ಕಾಮನ್‌ವೆಲ್ತ್‌ ಕ್ರೀಡಾಕೂಟಗಳಲ್ಲಿ ಭಾಗವಹಿಸಿದವರು ಅರ್ಜಿ ಸಲ್ಲಿಸಬಹುದು. ಸೀನಿಯರ್‌ ಮತ್ತು ಜೂನಿಯರ್‌ ರಾಷ್ಟ್ರೀಯ ಚಾಂಪಿಯನ್‌ಶಿಪ್‌ಗಳಲ್ಲಿ ಪದಕಗಳನ್ನು ಗೆದ್ದವರು ಸಹ ಅರ್ಜಿ ಸಲ್ಲಿಸಬಹುದು.

ಬಜೆಟ್‌ನಲ್ಲಿ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಾರಿ ಘೋಷಿಸಿರುವ ಬಜೆಟ್‌ ಯುವಜನ ಮತ್ತು ಕ್ರೀಡಾ ವಲಯಕ್ಕೆ ಅನೇಕ ಕೊಡುಗೆಗಳನ್ನು ಘೋಷಿಸಿತ್ತು. ಕ್ರೀಡಾಪಟುಗಳ ಹಾಜರಾತಿ ಸಮಸ್ಯೆ ಮತ್ತು ಕೃಪಾಂಕದ ಬೇಡಿಕೆಯನ್ನು ಮನ್ನಿಸಿತ್ತು. . ಗ್ರಾಮಾಂತರ ವಲಯದಲ್ಲಿ ಕ್ರೀಡೆಯನ್ನು ಪ್ರೋತ್ಸಾಹಿಸುವ ಸಲುವಾಗಿ 12 ತಾಲೂಕುಗಳಲ್ಲಿ ಕೇಂದ್ರಗಳಲ್ಲಿ ಸುಸಜ್ಜಿತ ಕ್ರೀಡಾಂಗಣಗಳ ನಿರ್ಮಾಣ, ಜೊತೆಗೆ ಗ್ರಾಮೀಣ ಕ್ರೀಡೆಗಳಿಗೂ ಪ್ರೋತ್ಸಾಹ ನೀಡುವ ಸಲುವಾಗಿ ಹಲವು ಕಾರ್ಯಕ್ರಮಗಳನ್ನು ಹಮಿಕೊಂಡಿತ್ತು.

ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದ ವಿದ್ಯಾರ್ಥಿಗಳಿಗೆ ಇದುವರೆಗೂ ಹಾಜರಾತಿಯ ಸಮಸ್ಯೆ ಎದುರಾಗುತ್ತಿತ್ತು. ಬಜೆಟ್‌ನಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶೇಕಡಾ 15 ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ಶೇ.25ರವರೆಗೂ ಹಾಜರಾತಿ ನೀಡಲಾಗುವುದರ ಜೊತೆಗೆ ಇನ್ನು ಪದವಿ, ಉನ್ನತ ಶಿಕ್ಷಣ, ವೃತ್ತಿಪರ ಶಿಕ್ಷಣಗಳಿಗೆ ಪ್ರವೇಶ ಬಯಸುವ ಕ್ರೀಡಾಪಟುಗಳಿಗೆ ಶೇಕಡಾ 5ರಷ್ಟು ಕೃಪಾಂಕವನ್ನು ಘೋಷಿಸಲಾಗಿತ್ತು.

ಒಲಿಂಪಿಕ್‌, ಪ್ಯಾರಾ ಒಲಿಂಪಿಕ್‌ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ ಮೀಸಲಿಡಲಾಗಿದೆ. ಡಿವೈಎಸ್ಪಿ ಸೇರಿ ಇತರೆ ಪೊಲೀಸ್‌‍ ಹುದ್ದೆಗಳಲ್ಲೂ ಶೇ 2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ 3ಕ್ಕೆ ಹೆಚ್ಚಳ ಜೊತೆಗೆ ಒಲಿಂಪಿಕ್ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂ. ಬಹುಮಾನ, ಒಲಿಂಪಿಕ್ಗೆ ತರಬೇತಿ ಪಡೆಯಲು 10 ಲಕ್ಷ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು.

- Advertisement -
RELATED ARTICLES

Latest News