Thursday, October 9, 2025
Homeಇದೀಗ ಬಂದ ಸುದ್ದಿದುಡಿಯುವ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ

ದುಡಿಯುವ ಮಹಿಳೆಯರಿಗೆ ಒಂದು ದಿನ ವೇತನ ಸಹಿತ ಋತುಚಕ್ರದ ರಜೆ

One day paid menstrual leave for working women

ಬೆಂಗಳೂರು, ಅ.9- ದುಡಿಯುವ ಮಹಿಳೆಯರಿಗೆ ಪ್ರತಿ ತಿಂಗಳು ಋತುಚಕ್ರದ ಸಮಯದಲ್ಲಿ ಒಂದು ದಿನ ವೇತನ ಸಹಿತ ರಜೆ ನೀಡುವ ಮಹತ್ವದ ನಿರ್ಧಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟಸಭೆಯಲ್ಲಿ ಋತುಚಕ್ರ ರಜೆ ನೀತಿ 2025ರ ಕುರಿತು ಗಂಭೀರ ಚರ್ಚೆಗಳಾಗಿದ್ದು, ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್‌್ಸ ಗಳು, ಬಹುರಾಷ್ಟ್ರೀಯ ಕಂಪನಿಗಳು, ಮಾಹಿತಿ ತಂತ್ರಜ್ಞಾನ ಇತರೆ ಖಾಸಗಿ ಕೈಗಾರಿಕಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ಋತುಚಕ್ರ ಸಮಯದಲ್ಲಿ ವೇತನ ಸಹಿತ ರಜೆ ನೀಡಲು ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಈಗಾಗಲೇ ಬಿಹಾರ ರಾಜ್ಯದಲ್ಲಿ 1992ರಿಂದಲೂ ಸರ್ಕಾರಿ ಸಿಬ್ಬಂದಿಗಳಿಗೆ ರಜೆ ನೀತಿ ಜಾರಿಯಲ್ಲಿದೆ. ಕೇರಳದಲ್ಲಿ 2023ರಿಂದಲೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಡಿಶಾ ಸರ್ಕಾರ, ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಈ ರಜೆ ನೀತಿಯನ್ನು ಜಾರಿಗೆ ತಂದಿದೆ.

ಬಹುತೇಕ ರಾಜ್ಯಗಳಲ್ಲಿ ಈ ನೀತಿ ಏರು ಪೇರುಗಳಾಗಿದ್ದು, ಕೆಲವು ಕಡೆ ಸರ್ಕಾರಿ ಸಿಬ್ಬಂದಿಗಳಿಗೆ ಅನ್ವಯಿಸಲಾಗಿದೆ. ಆದರೆ ರಾಜ್ಯ ಸರ್ಕಾರ ಸಾರ್ವತ್ರಿಕವಾಗಿ ಎಲ್ಲಾ ವಲಯದ ಎಲ್ಲಾ ಮಹಿಳೆಯರಿಗೆ ಮುಟ್ಟಿನ ರಜೆ ಸೌಲಭ್ಯವನ್ನು ಒದಗಿಸುವ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. ಈ ವಿಷಯವಾಗಿ ಶೈಲೇಂದ್ರ ತ್ರಿಪಾಠಿಲ್‌ ಎಂಬುವವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ವಿಚಾರಣ ನಡೆಸಿದ ಅಂದಿನ ಮುಖ್ಯಮಂತ್ರಿ ಡಿ.ವೈ. ಚಂದ್ರಚೂಡ್‌ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠ ಇದು ನೀತಿ ನಿರೂಪಣೆಗೆ ಸಂಬಂಧಪಟ್ಟ ವಿಷಯವಾಗಿದ್ದು, ಸರ್ಕಾರಗಳು ಕ್ರಮಕೈಗೊಳ್ಳಬೇಕೆಂದು ಸಲಹೆ ನೀಡಿದರು. ಅದರಂತೆ ರಾಜ್ಯ ಸರ್ಕಾರ ಕ್ರಮಕೈಗೊಂಡಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕದ ಬಗ್ಗೆಯೂ ಸಂಪುಟದಲ್ಲಿ ಚರ್ಚೆಯಾಗಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕ ಮಕ್ಕಳಿಗೆ ಎರಡನೇ ಹಂತದಲ್ಲಿ ಹನ್ನೊಂದು ಶ್ರಮಿಕ ವಸತಿ ಶಾಲೆಗಳನ್ನು ನಿರ್ಮಿಸಲು 405 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತಕ ಅನುಮೋದನೆ ನೀಡುವ ಬಗ್ಗೆ ಚರ್ಚಿಸಲಾಗಿದೆ.

ಪ್ರಧಾನಮಂತ್ರಿ ಸಿಂಚಾಯ್‌ ಯೋಜನೆ 2.0 ಅಡಿ ರಾಜ್ಯದ 14 ತಾಲ್ಲೂಕುಗಳಲ್ಲಿ 15 ಯೋಜನೆಗಳನ್ನು ಜಾರಿಗೊಳಿಸಿ 39413 ಹೆಕ್ಟೇರ್‌ ಪ್ರದೇಶವನ್ನು 90 ಕೋಟಿ ರೂ. ವೆಚ್ಚದಲ್ಲಿ ಜಲಾನಯನ ವ್ಯಾಪ್ತಿಗೊಳಪಡಿಸಲು ಚರ್ಚಿಸಲಾಗಿದೆ.

ಒಳ ಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರಿ ನೇಮಕಾತಿಗಳು ವಿಳಂಬವಾಗಿದ್ದು, ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗಾಗಿ 3 ವರ್ಷ ಸಡಿಲಿಕೆ ಮಾಡುವುದಾಗಿ ಈಗಾಗಲೇ ಪ್ರಕಟಿಸಲಾಗಿದೆ. ಈ ನಿರ್ಣಯಕ್ಕೆ ಇಂದಿನ ಸಂಪುಟಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗುತ್ತಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ವೈಯಕ್ತಿಕ ದತ್ತಾಂಶಗಳು ಸೋರಿಕೆಯಾಗಲಿವೆ ಎಂಬ ಆತಂಕ ಪ್ರಮುಖವಾಗಿ ಕೇಳಿ ಬಂದಿತು. ನ್ಯಾಯಾಲಯಕ್ಕೂ ಈ ಕುರಿತು ತಕರಾರು ಅರ್ಜಿ ಸಲ್ಲಿಕೆಯಾಗಿದ್ದು, ಹೈಕೋರ್ಟ್‌ ದತ್ತಾಂಶಗಳು ಸೋರಿಕೆಯಾಗದಂತೆ ಎಚ್ಚರಿಕೆ ವಹಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿನ ಭದ್ರತಾ ಕಾರ್ಯಚಲನೆ ಕೇಂದ್ರವನ್ನು ನವೀಕರಿಸಲು ಮತ್ತು ಸೈಬರ್‌ ಭದ್ರತೆಯನ್ನು ಬಲಪಡಿಸಲು 38.33 ಕೋಟಿ ರೂ.ಗಳ ಯೋಜನೆಗೆ ಆಡಳಿತಾತಕ ಅನುಮೋದನೆ ದೊರೆಯುವ ಸಾಧ್ಯತೆಯಿದೆ.ಬೆಂಗಳೂರು ಉತ್ತರ ತಾಲ್ಲೂಕಿನ ಮಾಚೋಹಳ್ಳಿ ಗ್ರಾಮದ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 78 ಎಕರೆಯನ್ನು ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ ವರ್ಗಾಯಿಸಲಾಗಿದ್ದು, ಇದರಲ್ಲಿ ವಿವಿಧ ಸಂಸ್ಥೆಗಳಿಗೆ ಭೂಮಿ ಮಂಜೂರಾತಿ ಮಾಡಲಾಗಿತ್ತು. ಎಲ್ಲಾ ಆದೇಶಗಳನ್ನು ಹಿಂಪಡೆಯಲು ಸರ್ಕಾರ ಮುಂದಾಗಿದೆ.

ಪೊಲೀಸ್‌‍ ಇಲಾಖೆಗೆ ಗಣಕಯಂತ್ರಗಳನ್ನು ಖರೀದಿಸಲು ಹಾಗೂ ತರಬೇತಿಗಾಗಿ ಕೇಂದ್ರ ಗೃಹ ಸಚಿವಾಲಯ 89.22 ಕೋಟಿ ರೂ.ಗಳ ಯೋಜನೆ ರೂಪಿಸಿದ್ದು, ಅದಕ್ಕೆ ರಾಜ್ಯ ಸರ್ಕಾರ ಆಡಳಿತಾತಕ ಅನುಮೋದನೆ ನೀಡುವ ಸಾಧ್ಯತೆಯಿದೆ.

ಪ್ರಮುಖವಾಗಿ ರಾಜ್ಯದಲ್ಲಿ ಹಲವಾರು ಕಡೆ ಸೇತುವೆಗಳ ಪುನರ್‌ ನಿರ್ಮಾಣದ ಅಗತ್ಯ ಇದ್ದು, ಈ ಯೋಜನೆಗೆ 2 ಸಾವಿರ ಕೋಟಿ ರೂ.ಗಳ ಅಗತ್ಯಯಿದ್ದು, ಮೊದಲ ಹಂತದಲ್ಲಿ 39 ಬೃಹತ್‌ ಸೇತುವೆಗಳನ್ನು ಪುನರ್‌ ನಿರ್ಮಿಸಲು 8 ಸಾವಿರ ಕೋಟಿ ರೂ. ಬಳಕೆ ಮಾಡಲಾಗುತ್ತದೆ. ಬೀದರ್‌ ಜಿಲ್ಲೆಯ ಔರಾಧ್‌ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಾಧ್ಯತೆಯಿದೆ.

RELATED ARTICLES

Latest News