ವೋಟರ್ ಡೇಟಾ ಅಕ್ರಮ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಅರೆಸ್ಟ್

Social Share

ಬೆಂಗಳೂರು,ನ.28- ಮತದಾರರ ಪಟ್ಟಿ ಪರಿಷ್ಕರಣ ಅಕ್ರಮ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.ಅನಿಲ್ ಬಂತ ಆರೋಪಿ. ಒಟ್ಟಾರೆ ಈ ಪ್ರಕರಣದಲ್ಲಿ ಬಂತರ ಸಂಖ್ಯೆ 12ಕ್ಕೇರಿದೆ.

ಚಿಲುಮೆ ಸಂಸ್ಥೆಯ ಉದ್ಯೋಗಿ ಅನಿಲ್ ಮಹದೇವಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.

ಚಿಲುಮೆ ಸಂಸ್ಥೆ ಮುಖ್ಯಸ್ಥ ರವಿಕುಮಾರ್, ನಿರ್ದೇಶಕ ಕೆಂಪೇಗೌಡ, ಆಡಳಿತಾಕಾರಿ ಲೋಕೇಶ್ ಹಾಗೂ ನಾಲ್ಕು ಮಂದಿ ಸೇರಿದಂತೆ ಆರ್ಒಗಳನ್ನು ಬಂಸಲಾಗಿದೆ.

ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ

ಈ ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ ಆರೋಪಿಗಳಿಗಾಗಿ ಹಲಸೂರು ಗೇಟ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.ಆರೋಪಿಗಳನ್ನು ಬಂಧಿಸಿದ ನಂತರ ಪೊಲೀಸರು ಮನೆ, ಕಚೇರಿಗಳ ಮೇಲೆ ದಾಳಿ ಮಾಡಿ ವಶಪಡಿಸಿಕೊಂಡಿರುವ ದಾಖಲೆಗಳನ್ನು ಸಹ ಪರಿಶೀಲನೆ ಮಾಡುತ್ತಿದ್ದಾರೆ.

Articles You Might Like

Share This Article