ಜಮ್ಮ,ಜು.28- ಆಪರೇಷನ್ ಮಹೇವ್ ರಕ್ಷಣಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಪಹಲ್ಯಾಂಮ್ ನರಮೇಧದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಶ್ರೀನಗರ ಸಮೀಪದ ಡಚಿಗಮ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ನಲ್ಲಿ 3 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ ಚೀನಾ ನಿರ್ಮಿತ ಸ್ಯಾಟಿಲ್ಯಾಟ್ ಫೋನ್ ಗಳು ಹಲವಾರು ಶಸ್ತ್ರಾಸ್ತ್ರವನ್ನು ವಶಪಡಿಸಲಾಗಿದೆ.
ಪಹಲ್ಟಾಂಮ್ ದಾಳಿಯ ಮಾಸ್ಟರ್ ಮೈಂಡ್ ಸುಲೇಮಾನ್ ಈ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ.ತೀವ್ರವಾದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ. ಬೆಳಿಗ್ಗೆ 11 ಗಂಟೆಗೆ ಎನ್ ಕೌಂಟರ್ ಪ್ರಾರಂಭವಾಯಿತು ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಹತ್ಯೆಗೀಡಾದ ಭಯೋತ್ಪಾದಕರ ಗುರುತಿನ ಕುರಿತು ಶ್ರೀನಗರದ ಎಸ್ಎಸ್ಪಿ ಜಿ.ವಿ. ಸುಂದೀಪ್ ಚಕ್ರವರ್ತಿ ಮಾತನಾಡಿ, ಮೂವರೂ ಪಾಕಿಸ್ತಾನಿಗಳು ಮತ್ತು ಲಷ್ಕರ್-ಎ-ತೈಬಾ (ಎಲ್ಇಟಿ) ಗೆ ಸೇರಿದವರು ಎಂದು ಹೇಳಿದರು.
ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್ನನ್ನು ಹತ್ಯೆ ಮಾಡಲಾಗಿದ್ದು, ಗಡಿಯಾಚೆಗಿನ ಭಯೋತ್ಪಾದಕ ಜಾಲಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಮುಖ ಕಾರ್ಯಕರ್ತ ಮೂಸಾನನ್ನು ವಾರಗಳ ಸಂಘಟಿತ ಗುಪ್ತಚರ ಪ್ರಯತ್ನಗಳ ನಂತರ ಹೆಚ್ಚಿನ ತೀವ್ರತೆಯ ಕಾರ್ಯಾಚರಣೆಯಲ್ಲಿ ತಟಸ್ಥಗೊಳಿಸಲಾಯಿತು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಇತರ ಭಯೋತ್ಪಾದಕ ಘಟನೆಗಳ ಹಿಂದೆಯೂ ಅವನ ಕೈವಾಡವಿದೆ ಎಂದು ನಂಬಲಾಗಿದೆ. ಗುಪ್ತಚರ ಮೂಲಗಳ ಪ್ರಕಾರ, ಮೂಸಾ ತನ್ನ ಗುರುತನ್ನು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಗಮನಾರ್ಹವಾಗಿ ತೂಕವನ್ನು ಕಳೆದುಕೊಂಡಿದ್ದ ಮತ್ತು ತನ್ನ ಕೇಶವಿನ್ಯಾಸ ಮತ್ತು ಗಡ್ಡವನ್ನು ಬದಲಾಯಿಸಿಕೊಂಡಿದ್ದ. ಹತ್ಯೆಗೀಡಾದ ಇತರ ಇಬ್ಬರು ಭಯೋತ್ಪಾದಕರು ಯಾಸಿರ್ ಮತ್ತು ಅಬು ಹಣ್ಣಾ ಆಗಿರಬಹುದು ಎಂದು ಮೂಲಗಳು ತಿಳಿಸಿವೆ.
- ವಾರಣಾಸಿ, ಅಯೋಧ್ಯ, ತಿರುಪತಿ ಸೇರಿ ಯಾತ್ರಾ ಸ್ಥಳಗಳಿಗೆ ಬುಕ್ಕಿಂಗ್ ಪ್ರಮಾಣ ಹೆಚ್ಚಳ
- 2 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಜವಳಿ ನೀತಿ ರಚನೆ : ಸಚಿವ ಶಿವಾನಂದ ಪಾಟೀಲ
- ಉಪರಾಷ್ಟ್ರಪತಿ ರಾಧಾಕೃಷ್ಣನ್ ಪ್ರಮಾಣ ವಚನ ಸಂದರ್ಭದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಧನ್ಕರ್
- ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ
- ಬುರುಡೆ ಪ್ರಕರಣ : ಎಸ್ಐಟಿ ಕಚೇರಿಯಲ್ಲಿ ಮತ್ತೆ ಮೂವರ ವಿಚಾರಣೆ