Friday, June 6, 2025
Homeರಾಜ್ಯRCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು : ಮೃತರ ಸಂಖ್ಯೆ 11ಕ್ಕೆ ಏರಿಕೆ, ತಲಾ 10 ಲಕ್ಷ...

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು : ಮೃತರ ಸಂಖ್ಯೆ 11ಕ್ಕೆ ಏರಿಕೆ, ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Over 15 fall ill in stampede during RCB celebrations

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ 30 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು ಅವರನ್ನು ಹತ್ತಿರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಶ್ವತ್ ತಗೊಂಡಿದ್ದ ವ್ಯಕ್ತಿ ಒಬ್ಬನನ್ನು ಸ್ಥಳೀಯರು ಆಸ್ಪತ್ರೆಗೆ ಕೊಂಡಯುವಾಗ ಮಾರ್ಗ ಮಧ್ಯೆ ಆತ ಮೃತಪಟ್ಟಿದ್ದಾನೆ. ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧ ಮುಂಭಾಗ ಜನಸಾಗರವೇ ತುಂಬಿ ಬಂದಿದ್ದು ಮಕ್ಕಳು ಮಹಿಳೆಯರು ಯುವಕರು ಯುವತಿಯರು ಕೊಹ್ಲಿ ಹಾಗೂ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕಾತರದಿಂದ ಕಾದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ವಿಧಾನಸೌಧ ಮುಂಭಾಗ ಜನಸಾಗರವೇ ತುಂಬಿ ಬಂದಿದ್ದು ಮಕ್ಕಳು ಮಹಿಳೆಯರು ಯುವಕರು ಯುವತಿಯರು ಕೊಹ್ಲಿ ಹಾಗೂ ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕಾತರದಿಂದ ಕಾದಿದ್ದರು. ನಿರೀಕ್ಷೆಗೂ ಮೀರಿದ ಜನ ಸಮೂಹ ಬಂದಿದ್ದರಿಂದ ಈ ಎಡವಟ್ಟು ಸಂಭವಿಸಿದೆ.

ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು : ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿದದ ಕುರಿತು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ಇಷ್ಟೊಂದು ಅಭಿಮಾನಿಗಳು ಸೇರುತ್ತಾರೆ ಎಂದು ಯಾರೂ ಊಹೆ ಮಾಡಿರಲಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಸೇರಿದ್ದರಿಂದ ನೂಕುನುಗ್ಗಲಾಗಿ ಕಾಲ್ತುಳಿತ ಸಂಭವಿಸಿದೆ.

ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು ಎಲ್ಲರೂ ಯುವಕ-ಯುವತಿಯರಾಗಿದ್ದಾರೆ. 35ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮೃತರ ಕುರ್ಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದರು. ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸುವುದಾಗಿ ತಿಳಿಸಿದ ಸಿಎಂ ಸಿದ್ದರಾಮಯ್ಯ, ತಪ್ಪಿದಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅನಿರೀಕ್ಷಿತವಾಗಿ ಜನ ಸೇರಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಅವರು ಹೇಳಿದರು.

ಗಾಯಾಳುಗಳನ್ನ ಭೇಟಿಯಾದ ನಿಖಿಲ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನ ನಿಖಿಲ್ ಕುಮಾರಸ್ವಾಮಿ ಅವರು ಬೌರಿಂಗ್ ಆಸ್ಪತ್ರೆಗೆ ತೆರಳಿ ಕ್ಷೇಮ ವಿಚಾರಿಸಿ, ಸಾಂತ್ವನ ಹೇಳಿದರು.

ಬೌರಿಂಗ್ ಅಸ್ಪತ್ರೆಗೆ ವಿಜಯೇಂದ್ರ ಭೇಟಿ :
ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಗಾಯಗೊಂಡು ಬೌರಿಂಗ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆಗಾಗಿ ದಾಖಲಾಗಿರುವವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ.ವಿಜಯೇಂದ್ರ ಭೇಟಿಯಾಗಿ ಸಾಂತ್ವನ ಹೇಳಿದರು. ಘಟನೆಯಲ್ಲಿ 27ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

Latest News