Thursday, November 6, 2025
Home Blog Page 104

ಮನೆಗಳ್ಳತನ : ಇಬ್ಬರು ರೌಡಿ ಸೇರಿ ಮೂವರ ಸೆರೆ, 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು,ಸೆ.16- ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ರೌಡಿಗಳು ಸೇರಿದಂತೆ ಮೂವರನ್ನು ಬಂಧಿಸಿರುವ ಜ್ಞಾನಭಾರತಿ ಠಾಣೆ ಪೊಲೀಸರು ನಗದು ಸೇರಿದಂತೆ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿ.ಕೆ.ಅಚ್ಚುಕಟ್ಟು ಪೊಲೀಸ್‌‍ ಠಾಣೆ ರೌಡಿ ಶೀಟರ್‌ಗಳಾದ ಅಬ್ರಹಾಂ ಅಲಿಯಾಸ್‌‍ ಅಭಿ, ಧನುಷ್‌ ಅಲಿಯಾಸ್‌‍ ದಡಿಯ ಹಾಗೂ ಮತ್ತೊಬ್ಬ ಆರೋಪಿ ನಿಖಿಲ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಮರಿಯಪ್ಪನಪಾಳ್ಯದ ನಿವಾಸಿ ಸಾಫ್‌್ಟವೇರ್‌ ಇಂಜಿನಿಯರ್‌ ಕಾಂತರಾಜು ಹಾಗೂ ಕೇಂದ್ರ ಸರ್ಕಾರಿ ನೌಕರರಾದ ಸಹೋದರ ಗಿರೀಶ್‌ಬಾಬು ಅವರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಧ್ಯವೆಂಕಟಾಪುರಕ್ಕೆ ಹೋಗಿದ್ದರು.

ಮಾರನೆದಿನ ಮನೆಗೆ ಬಂದಾಗ ಬಾಗಿಲು ತೆರದುಕೊಂಡಿದ್ದುದನ್ನು ಗಮನಿಸಿ ಒಳಗೆ ಹೋಗಿ ನೋಡಿದಾಗ ಮನೆಗಳ್ಳತನವಾಗಿರುವುದು ಗೊತ್ತಾಗಿದೆ. ಮನೆಯ ಕೊಠಡಿಯ ಬೀರುವಿನಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ವಾಚ್‌, ಹಣ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ ಪೊಲೀಸರು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಸಿ.ಕೆ.ಅಚ್ಚುಕಟ್ಟು ಪೊಲೀಸ್‌‍ ಠಾಣೆಯ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ರೌಡಿ ಧನುಷ್‌ನನ್ನು ತಮ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಮತ್ತಿಬ್ಬರು ಸಹಚರರೊಂದಿಗೆ ಸೇರಿಕೊಂಡು ಮನೆಗಳ್ಳತನ ಮಾಡಿರುವುದಾಗಿ ಹೇಳಿದ್ದಾನೆ.
ಆ ಇಬ್ಬರು ಸಹಚರರ ಬಗ್ಗೆ ಆರೋಪಿ ಧನುಷ್‌ ಮಾಹಿತಿ ನೀಡಿದ್ದು, ಹೆಸರುಘಟ್ಟದಲ್ಲಿರುವ ಸಪ್ತಗಿರಿ ಕಾಲೇಜಿನ ಬಳಿ ಒಬ್ಬನನ್ನು ಹಾಗೂ ನೆಲಮಂಗಲದ ದೇವಿಹಳ್ಳಿ ಬಳಿ ಮತ್ತೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಈ ಮೂವರು ಆರೋಪಿಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ, ಕಳವು ಮಾಡಿದ್ದ ಚಿನ್ನಾಭರಣ ಮತ್ತು ಬೆಳ್ಳಿವಸ್ತುಗಳನ್ನು ಜೆ.ಪಿ.ನಗರದ ಸಹಚರನ ತಮನಿಗೆ ಹಾಗೂ ಇಬ್ಬರು ಸಹಚರರ ಸ್ನೇಹಿತರಿಗೆ ನೀಡಿರುವುದಾಗಿ ಹೇಳಿದ್ದಾರೆ.

ತನಿಖೆ ಮುಂದುವರೆಸಿದ ಪೊಲೀಸರು ಮೂವರು ಆರೋಪಿಗಳಿಂದ 423 ಗ್ರಾಂ ಚಿನ್ನಾಭರಣ, 710 ಗ್ರಾಂ ಬೆಳ್ಳಿವಸ್ತುಗಳು, 2 ವಾಚ್‌ಗಳು, 4,156 ರೂ. ನಗದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 50 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಕೇಂದ್ರ ಕಾರಾಗೃಹದಿಂದ ತಮ ವಶಕ್ಕೆ ಪಡೆದಿದ್ದ ಆರೋಪಿ ಧನುಷ್‌ನನ್ನು ಕೇಂದ್ರ ಕಾರಾಗೃಹಕ್ಕೆ ವಾಪಸ್‌‍ ಕಳುಹಿಸಲಾಗಿದೆ.ಈ ಕಾರ್ಯಾಚರಣೆಯನ್ನು ಡಿಸಿಪಿ ಅನಿತಾ ಹದ್ದಣ್ಣನವರ್‌ ಅವರ ಮಾರ್ಗದರ್ಶನದಲ್ಲಿ ಇನ್‌್ಸಪೆಕ್ಟರ್‌ ರವಿ ಹಾಗೂ ಇತರೆ ಅಧಿಕಾರಿಗಳ ಸಿಬ್ಬಂದಿ ತಂಡ ಕೈಗೊಂಡಿತ್ತು.


ಡೆಲಿವರಿ ಬಾಯ್‌ ಸೆರೆ:10 ಲಕ್ಷ ರೂ. ಮೌಲ್ಯದ 70 ಕೈಗಡಿಯಾರಗಳ ಜಪ್ತಿ
ಪ್ರತಿಷ್ಠಿತ ವಾಚ್‌ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡು ಪ್ರತಿನಿತ್ಯ ಕೈ ಗಡಿಯಾರಗಳನ್ನು ಕಳವು ಮಾಡಿಕೊಂಡು ಹೋಗಿದ್ದ ಕಂಪನಿಯ ಡೆಲಿವರಿ ಬಾಯ್‌ನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿ 10 ಲಕ್ಷ ರೂ. ವೌಲ್ಯದ 70 ಕೈ ಗಡಿಯಾರಗಳನ್ನು ವಶಪಡಿಸಿಕೊಂಡಿದ್ದಾರೆ.

ಮೂಲತಃ ಆಂಧ್ರಪ್ರದೇಶದ ಶೇಷಾದ್ರಿರೆಡ್ಡಿ (27) ಬಂಽತ ಆರೋಪಿ. ಈತ ನಗರದ ಹೊಂಗಸಂದ್ರದಲ್ಲಿ ವಾಸಿಸುತ್ತಿದ್ದ.ಎಲೆಕ್ಟ್ರಾನಿಕ್‌ ಸಿಟಿ 2ನೇ ಹಂತದಲ್ಲಿ ವಾಚ್‌ ಕಂಪನಿಯಿದ್ದು, ಈ ಕಂಪನಿಯಲ್ಲೇ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೆಲಸ ಮುಗಿಸಿಕೊಂಡು ರಾತ್ರಿ ಮನೆಗೆ ಹೋಗುವ ಸಮಯದಲ್ಲಿ ಇತರೆ ಉದ್ಯೋಗಿಗಳಿಗೆ ಗೊತ್ತಾಗದ ಹಾಗೆ ಒಂದೊಂದು ಕೈ ಗಡಿಯಾರಗಳನ್ನು ಆಗಿಂದಾಗ್ಗೆ ಕಳವು ಮಾಡಿಕೊಂಡು ಹೋಗುತ್ತಿದ್ದನು. ನಂತರ ದಿನಗಳಲ್ಲಿ ತಾನು ಸಿಕ್ಕಿಹಾಕಿಕೊಳ್ಳುವ ಭಯದಲ್ಲಿ ಈ ಕಂಪನಿಯಲ್ಲಿ ಕೆಲಸ ತೊರೆದು ಹೋಗಿದ್ದಾನೆ.

ಕಂಪನಿಯಲ್ಲಿ ಕೈಗಡಿಯಾರಗಳು ನಾಪತ್ತೆಯಾಗಿರುವ ಬಗ್ಗೆ ಡೆಪ್ಯೂಟಿ ಮ್ಯಾನೇಜರ್‌ ಗಮನಕ್ಕೆ ಬಂದಿದೆ.ತಕ್ಷಣ ಅವರು ಕೆಲಸ ತೊರೆದಿದ್ದ ಡೆಲಿವರಿ ಬಾಯ್‌ ಮೇಲೆ ಅನುಮಾನಗೊಂಡು ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಹಲವು ಮಾಹಿತಿಗಳನ್ನು ಕಲೆಹಾಕಿ ಹೊಸೂರು ಮುಖ್ಯ ರಸ್ತೆ ಕೂಡ್ಲುಗೇಟ್‌ ಬಳಿಯ ಕಂಪನಿಯಲ್ಲಿ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ವಾಚ್‌ಗಳನ್ನು ಕಳ್ಳತನ ಮಾಡಿರುವುದುದಾಗಿ ತಿಳಿಸಿದ್ದಾನೆ.

ವಿವಿಧ ಕಂಪನಿಗಳ ದುಬಾರಿ ಬೆಲೆಯ ಫಾಸಿಲ್‌, ಅರ್ಮನಿ,ಎಕ್‌್ಸಚೆಂಜ್‌, ಎಂಪೋರಿಯೋ ಅರ್ಮನಿ, ಮೈಕೆಲ್‌ ಕೋರ್‌ರ‍ಸ ಕೈಗಡಿಯಾರಗಳನ್ನು ಡೆಲಿವರಿ ಬಾಯ್‌ ಕಳ್ಳತನ ಮಾಡಿ ಕಂಪನಿಯ ಕೆಲವರಿಗೆ ಮಾರಿರುವುದಾಗಿ ಹೇಳಿದ್ದಾನೆ.ಅಲ್ಲದೇ ಕೆಲವು ಕೈಗಡಿಯಾರ ಗಳನ್ನು ದಾರಿಹೋಕರಿಗೆ ಮಾರಾಟ ಮಾಡಿದ್ದು, ಇನ್ನೂ ಕೆಲ ಕೈಗಡಿಯಾರಗಳನ್ನು ಮಾರಾಟ ಮಾಡುವ ಸಲುವಾಗಿ ತನ್ನ ಬಳಿಯೇ ಇಟ್ಟುಕೊಂಡಿರುವುದಾಗಿ ಡೆಲಿವರಿ ಬಾಯ್‌ ವಿಚಾರಣೆ ವೇಳೆ ತಿಳಿಸಿದ್ದಾನೆ.ಆರೋಪಿ ಡೆಲಿವರಿ ಬಾಯ್‌ ಬಳಿ ಇದ್ದ ಬ್ಯಾಗ್‌ ಪರಿಶೀಲಿಸಿ ಅದರಲ್ಲಿದ್ದ 10 ಲಕ್ಷ ರೂ. ವೌಲ್ಯದ 70 ಕೈಗಡಿಯಾರಗಳನ್ನು ಇನ್‌್ಸಪೆಕ್ಟರ್‌ ಸತೀಶ್‌ ನೇತೃತ್ವದ ತಂಡವು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಕೈಗಡಿಯಾರಗಳನ್ನು ವಶಕ್ಕೆ ಪಡೆಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


ನಕಲಿ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ ಇಬ್ಬರ ಬಂಧನ..
ಕಂಪ್ಯೂಟರ್‌ ಅಂಗಡಿ ಯೊಂದರಲ್ಲಿ ನಕಲಿ ಅಂಕಪಟ್ಟಿ ಹಾಗೂ ಆಧಾರ್‌ಕಾರ್ಡ್‌ ಮತ್ತು ವಿವಿಧ ದಾಖಲಾತಿಗಳನ್ನು ತಿದ್ದುಪಡಿ ಮಾಡಿಕೊಡುತ್ತಿದ್ದ ಇಬ್ಬರನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಂಪ್ಯೂಟರ್‌ ಅಂಗಡಿ ಮಾಲೀಕ ರಘುವೀರ್‌ ಮತ್ತು ಕೆಲಸಗಾರ ಯಶವಂತ್‌ ಬಂಧಿತರು.

ಹೆಬ್ಬಗೋಡಿಯ ಭವಾನಿ ರಸ್ತೆಯಲ್ಲಿರುವ ಕಂಪ್ಯೂಟರ್‌ ಅಂಗಡಿಯೊಂದರಲ್ಲಿ ಸರ್ಕಾರಿ ಗುರುತಿನ ಚೀಟಿ, ನಕಲಿ ಅಂಕಪಟ್ಟಿ ಹಾಗೂ ಆಧಾರ್‌ಕಾರ್ಡ್‌ಗಳನ್ನು ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳದ ಮೇಲೆ ದಾಳಿ ಮಾಡಿ ಒಬ್ಬನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ತಾನು ಅಂಗಡಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಮತ್ತು ದಾಖಲಾತಿಗಳನ್ನು ತಿದ್ದುಪಡಿ ಮಾಡುತ್ತಿದ್ದಾಗಿ ಹೇಳಿದ್ದಾನೆ. ಅಲ್ಲದೆ ಅಂಗಡಿಯ ಮಾಲೀಕನ ಬಗ್ಗೆ ಮಾಹಿತಿ ನೀಡಿದ್ದಾನೆ.
ಅಂಗಡಿಯಲ್ಲಿದ್ದ ಕಂಪ್ಯೂಟರ್‌, ಪ್ರಿಂಟರ್‌, ಲ್ಯಾಮಿನೇಷನ್‌ ಮಿಷನ್‌, ಹಾರ್ಡ್‌ಡಿಸ್ಕ್‌, 2 ಮೊಬೈಲ್‌ಗಳು, 2 ಸಾವಿರ ಹಣ ಹಾಗೂ ನಕಲಿ ಆಧಾರ್‌ಕಾರ್ಡ್‌ಗಳು ಮತ್ತು ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆ ಮುಂದುವರೆಸಿದ ಪೊಲೀಸರು ಹೆಬ್ಬಗೋಡಿ ಪಾರ್ಕ್‌ ಬಳಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆಗೊಳ ಪಡಿಸಿದಾಗ ಕಳೆದ ಒಂದೂವರೆ-ಎರಡು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದುದಾಗಿ ಮಾಲೀಕ ಬಾಯ್ಬಿಟ್ಟಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ನಕಲಿ ದಾಖಲಾತಿಗಳಿಂದ ಲಾಭ ಪಡೆದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿ ಎಲ್ಲರಿಗೂ ನೋಟೀಸ್‌‍ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸುವುದಾಗಿ ಇನ್ಸ್ ಪೆಕ್ಟರ್‌ ಸೋಮಶೇಖರ್‌ ತಿಳಿಸಿದ್ದಾರೆ.


ಐನಾತಿ ಸಹೋದರರ ಬಂಧನ 243 ಗ್ರಾಂ ಆಭರಣ ವಶ
ಜ್ಯೂವೆಲ್ಲರಿ ಮಾಲೀಕರಿಂದ ಚಿನ್ನಾಭರಣ ಪಡೆದುಕೊಂಡು 24 ಕ್ಯಾರೆಟ್‌ ಚಿನ್ನಾಭರಣ ಮಾಡಿಕೊಡದೆ, ಹಣವನ್ನೂ ನೀಡದೇ ಮೋಸ ಮಾಡಿದ್ದ ಇಬ್ಬರು ಸಹೋದರರನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿ 24 ಲಕ್ಷ ರೂ. ಮೌಲ್ಯದ 243 ಗ್ರಾಂ ಆಭರಣವನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣದಲ್ಲಿ ಮತ್ತೊಬ್ಬ ಸಹೋದರ ಭಾಗಿಯಾಗಿದ್ದು, ಆತ ಈಗಾಗಲೇ ಪ್ರಕರಣವೊಂದರಲ್ಲಿ ಚೆನ್ನೈನ ಕಾರಾಗೃಹದಲ್ಲಿದ್ದಾನೆ. ನಗರತ್‌ಪೇಟೆಯ ಜ್ಯೂವೆಲ್ಲರಿ ಅಂಗಡಿಯೊಂದರಿಂದ ಮೂವರು ಸಹೋದರರು ಕಳೆದೆರಡು ವರ್ಷಗಳಿಂದ ಆಗಾಗ್ಗೆ 22 ಕ್ಯಾರೆಟ್‌ನ ಚಿನ್ನಾಭರಣ ಪಡೆದುಕೊಂಡು ಅದಕ್ಕೆ ಸರಿಸಮಾನವಾಗಿ 24 ಕ್ಯಾರೆಟ್‌ ಚಿನ್ನಾಭರಣ ಅಥವಾ ಹಣ ನೀಡುತ್ತಿದ್ದರು. ಕಳೆದ ಜ.6 ರಂದು 350 ಗ್ರಾಂ 250 ಮಿಲಿ ಆಭರಣವನ್ನು ಪಡೆದುಕೊಂಡಿದ್ದ ಈ ಸಹೋದರರು ತದನಂತರ ಚಿನ್ನ ವನ್ನಾಗಲಿ ಅಥವಾ ಹಣವನ್ನಾಗಲಿ ನೀಡದೇ ವಂಚನೆ ಮಾಡಿದ್ದಾರೆ. ಈ ಬಗ್ಗೆ ಅಂಗಡಿ ಮ್ಯಾನೇಜರ್‌ ಪೊಲೀಸರಿಗೆ ದೂರು ನೀಡಿದ್ದರು.

ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಯನ್ನು ಕಲೆಹಾಕಿ ಚೆನ್ನೈನ ಇಬ್ಬರು ಸಹೋದರರನ್ನು ವಶಕ್ಕೆ ಪಡೆದು ಸುದೀರ್ಘ ವಿಚಾರಣೆಗೊಳಪಡಿಸಿ ನಗರತ್‌ಪೇಟೆಯ 2 ಜ್ಯೂವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿದ್ದ 100 ಗ್ರಾಂ ಚಿನ್ನಾಭರಣ, ಮತ್ತೊಂದು ಜ್ಯೂವೆಲ್ಲರಿ ಅಂಗಡಿಯಿಂದ 23 ಗ್ರಾಂ ಚಿನ್ನಾಭರಣ ಹಾಗೂ ಚೆನ್ನೈನ ಚಿನ್ನ ಕರಗಿಸುವ ಎರಡು ಅಂಗಡಿಗಳಿಂದ 120 ಗ್ರಾಂ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಒಟ್ಟು ಮೌಲ್ಯ 24 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.ಈ ಕಾರ್ಯಾಚರಣೆಯನ್ನು ಇನ್‌್ಸಪೆಕ್ಟರ್‌ ಹನುಮಂತ ಕೆ ಭಜಂತ್ರಿ ಹಾಗೂ ಸಿಬ್ಬಂದಿ ತಂಡ ಕೈಗೊಂಡು ಇಬ್ಬರು ಸಹೋದರರನ್ನು ಬಂಧಿಸಿ ಆಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.


ರೌಡಿ ಸೇರಿ ಆರು ಮಂದಿ ಸೆರೆ : ಪಿಸ್ತೂಲ್‌, ಮಾರಕಾಸ್ತ್ರ ಜಪ್ತಿ
ಅಪರಾಧ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ರೌಡಿ ಸೇರಿದಂತೆ ಆರು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ಪಿಸ್ತೂಲ್‌, ಮಾರಕಾಸ್ತ್ರ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.ಸಂಪಿಗೆಹಳ್ಳಿ ಪೊಲೀಸ್‌‍ ಠಾಣಾ ವ್ಯಾಪ್ತಿಯ ಬೆಳ್ಳಹಳ್ಳಿ ಕ್ರಾಸ್‌‍ ಹತ್ತಿರ ರೌಡಿ ಮೌಲಾ ಅಲಿಯಾಸ್‌‍ ಡಾಂಬರ್‌ ಮೌಲಾ (40) ಹಾಗೂ ಸಹಚರರಾದ ಸಯ್ಯದ್‌ ಇಸಾಕ್‌ (22), ಅಪ್ಸರ್‌ ಬಾಷಾ (28), ಶಹಬಾಜ್‌ (26), ಇಬ್ರಾಹಿಂ (26) ಮತ್ತು ಪರಮಾನ್‌ (25) ಎಂಬುವವರನ್ನು ಬಂಧಿಸಲಾಗಿದೆ.

ರೌಡಿ ಮೌಲಾ ಶಿಡ್ಲಘಟ್ಟ ಪೊಲೀಸ್‌‍ ಠಾಣೆಯ ರೌಡಿಶೀಟರ್‌. ಈತ ತನ್ನ ಸಹಚರರೊಂದಿಗೆ ಸೇರಿಕೊಂಡು ಎದುರಾಳಿ ಗ್ಯಾಂಗ್‌ ಮೇಲೆ ಹಲ್ಲೆ ಮಾಡಲು ಸಂಚು ರೂಪಿಸುತ್ತಿದ್ದನು.ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಆರು ಮಂದಿಯನ್ನು ಬಂಧಿಸಿ ವಿವಿಧ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.ತನಿಖೆ ಮುಂದುವರೆಸಿದ ಪೊಲೀಸರು, ಪಿಸ್ತೂಲ್‌ ಅನ್ನು ಅಕ್ರಮವಾಗಿ ತರಿಸಿಕೊಂಡಿದ್ದ ಮೇರೆಗೆ ಸಯ್ಯದ್‌ ಸದ್ದಾಂ(28) ಎಂಬಾತನನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆದಿದೆ.


ನೆರೆಮನೆ ನಿವಾಸಿಯಿಂದಲೇ ಮನೆಗಳ್ಳತನ
ಮನೆಗಳ್ಳತನ ಮಾಡಿದ್ದ ನೆರೆಮನೆ ನಿವಾಸಿಯನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 40 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.ಭೂಪಸಂದ್ರದ ಮನೆಯೊಂದರಲ್ಲಿ ವೃದ್ಧ ದಂಪತಿ ವಾಸವಾಗಿದ್ದು, ಮನೆಗೆಲಸಕ್ಕೆಂದು ಮಹಿಳೆಯನ್ನು ನೇಮಿಸಿಕೊಂಡಿರುತ್ತಾರೆ. ಇವರ ಪಕ್ಕದ ಮನೆಯ ನಿವಾಸಿ, ರಾಜಸ್ಥಾನ ಮೂಲದ ಯಾಸಿನ್‌ (22) ಎಂಬಾತ ಟೈಲ್‌್ಸ ಕೆಲಸ ಮಾಡಿಕೊಂಡಿದ್ದು, ಈ ದಂಪತಿ ನೆರವಿಗೆ ಆಗಾಗ್ಗೆ ಬಂದು ಹೋಗುತ್ತಿದ್ದನು.

ಇದೇ 5 ರಂದು ದಿನಸಿ ತರಲು ಮನೆ ಮಾಲೀಕರು ಹೊರಗೆ ಹೋಗಿದ್ದಾಗ ಅವರ ಪತ್ನಿ ಮನೆಯಲ್ಲಿ ಒಬ್ಬರೇ ಇದ್ದರು. ಆ ಸಂದರ್ಭದಲ್ಲಿ ಅವರಿಗೆ ಗೊತ್ತಾಗದ ಹಾಗೆ ನೆರೆಮನೆಯ ನಿವಾಸಿ ಇವರ ಮನೆಗೆ ನುಗ್ಗಿ ಕಬೋರ್ಡ್‌ನಲ್ಲಿಟ್ಟಿದ್ದ 40 ಸಾವಿರ ರೂ. ನಗದು, 305 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿಕೊಂಡು ಹೋಗಿದ್ದಾನೆ. ಕೆಲಸಮಯದ ಬಳಿಕ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ವೃದ್ಧ ದಂಪತಿಗೆ ಅರಿವಾಗಿದೆ. ಮನೆ ಕೆಲಸದಾಕೆ ಹಾಗೂ ನೆರೆಮನೆಯ ನಿವಾಸಿ ಯಾಸಿನ್‌ ಮೇಲೆ ಅನುಮಾನ ವ್ಯಕ್ತಪಡಿಸಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ನೆರೆಮನೆ ನಿವಾಸಿಯನ್ನು ವಿಚಾರಣೆಗೊಳಪಡಿಸಿದಾಗ ಆಭರಣ ಕಳ್ಳತನ ಮಾಡಿರುವುದಾಗಿ ಹೇಳಿದ್ದಾನೆ.ಕಳವು ಮಾಡಿದ ಆಭರಣವನ್ನು ತನ್ನ ಮನೆಯಲ್ಲಿ ಇಟ್ಟಿರುವುದಾಗಿ ತಿಳಿಸಿದ್ದು, ಆತನ ಮನೆಯಿಂದ 40 ಸಾವಿರ ರೂ. ನಗದು ಹಾಗೂ 150 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.


ನಿವೃತ್ತ ಎಸಿಪಿ ಸುಲಿಗೆ- ಮೂವರ ಬಂಧನ :
ವಾಯು ವಿಹಾರಕ್ಕೆ ಹೋಗಿದ್ದ ನಿವೃತ್ತ ಎಸಿಪಿ ಸುಬ್ಬಣ್ಣ ಅವರನ್ನು ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಕೈಗೆ ಇರಿದು ಚಿನ್ನದ ಸರ ಹಾಗೂ ಬ್ರಾಸ್‌‍ಲೈಟ್‌ ಅನ್ನು ಕಿತ್ತುಕೊಂಡು ಪರಾರಿಯಾಗಿದ್ದ ಮೂವರನ್ನು ಪೊಲೀಸರು ಬಂಧಿಸಿ 8 ಲಕ್ಷ ರೂ. ಮೌಲ್ಯದ 80 ಗ್ರಾಂ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಆರ್‌.ಟಿ.ನಗರದ ಲಕ್ಷ್ಮಯ್ಯ ಬ್ಲಾಕ್‌ನಲ್ಲಿ ವಾಸವಿರುವ ಸುಬ್ಬಣ್ಣ ಅವರು ಸೆ.1 ರಂದು ಬೆಳಿಗ್ಗೆ ಕಾರಿನಲ್ಲಿ ಹೊರಟು ವೆರ್ಟನರಿ ಕಾಲೇಜು ಪಾರ್ಕಿಂಗ್‌ ಸ್ಥಳದಲ್ಲಿ ಕಾರು ನಿಲ್ಲಿಸಿ ವಾಯುವಿಹಾರ ಮಾಡುತ್ತಿದ್ದರು.

ಆ ವೇಳೆ ಇಬ್ಬರು ದರೋಡೆಕೋರರು ಅವರನ್ನು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಒಬ್ಬಾತ ಅವರನ್ನು ಬಿಗಿಯಾಗಿ ಹಿಡಿದುಕೊಂಡಿದ್ದು, ಮತ್ತೊಬ್ಬ ಚಾಕುವಿನಿಂದ ಬಲಗೈಗೆ ಇರಿದು ಬೆದರಿಸಿ ಸರ ಹಾಗೂ ಬ್ರಾಸ್‌‍ಲೈಟ್‌ ಕಿತ್ತುಕೊಂಡು ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕಾರ್ಯಚರಣೆ ಕೈಗೊಂಡು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಖಚಿತ ಮಾಹಿತಿ ಮೇರೆಗೆ ಬುಲ್ಲೇವಾಡ ಪಾರ್ಕ್‌ ಬಳಿ ದ್ವಿಚಕ್ರ ವಾಹನ ಸಮೇತ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಚಿನ್ನಾಭರಣ ಸುಲಿಗೆ ಮಾಡಿರುವುದಾಗಿ ಹೇಳಿದ್ದಾರೆ. ಕಳವು ಮಾಡಿದ ಚಿನ್ನಾಭರಣಗಳನ್ನು ಡಿಜೆ ಹಳ್ಳಿಯ ಸಂಬಂಧಿಕನಿಗೆ ನೀಡಿರುವುದಾಗಿ ಹಾಗೂ ಭೂಪಸಂದ್ರದ ಮೋರಿ ಬಳಿ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ನಿಲ್ಲಿಸಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಪೊಲೀಸರು ಒಟ್ಟು 80 ಗ್ರಾಂ ಚಿನ್ನಾಭರಣ, ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 8 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.ಈ ಮೂವರು ಆರೋಪಿಗಳ ಬಂಧನದಿಂದ 6 ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಇನ್ಸ್ ಪೆಕ್ಟರ್‌ ಭಾಗ್ಯವತಿ ಜೆ. ಬಂತಿ ಅವರ ನೇತೃತ್ವದ ಸಿಬ್ಬಂದಿಯ ತಂಡ ಯಶಸ್ವಿಯಾಗಿದೆ.


ನಕಲಿ ದಾಖಲಾತಿಗಳನ್ನು ಮಾಡಿಕೊಡುತ್ತಿದ್ದ ಇಬ್ಬರ ಬಂಧನ.. ಕಂಪ್ಯೂಟರ್‌ ಅಂಗಡಿ ಯೊಂದರಲ್ಲಿ ನಕಲಿ ಅಂಕಪಟ್ಟಿ ಹಾಗೂ ಆಧಾರ್‌ಕಾರ್ಡ್‌ ಮತ್ತು ವಿವಿಧ ದಾಖಲಾತಿಗಳನ್ನು ತಿದ್ದುಪಡಿ ಮಾಡಿಕೊಡುತ್ತಿದ್ದ ಇಬ್ಬರನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಂಪ್ಯೂಟರ್‌ ಅಂಗಡಿ ಮಾಲೀಕ ರಘುವೀರ್‌ ಮತ್ತು ಕೆಲಸಗಾರ ಯಶವಂತ್‌ ಬಂಧಿತರು.ಹೆಬ್ಬಗೋಡಿಯ ಭವಾನಿ ರಸ್ತೆಯಲ್ಲಿರುವ ಕಂಪ್ಯೂಟರ್‌ ಅಂಗಡಿಯೊಂದರಲ್ಲಿ ಸರ್ಕಾರಿ ಗುರುತಿನ ಚೀಟಿ, ನಕಲಿ ಅಂಕಪಟ್ಟಿ ಹಾಗೂ ಆಧಾರ್‌ಕಾರ್ಡ್‌ಗಳನ್ನು ತಿದ್ದುಪಡಿ ಮಾಡಿಕೊಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸ್ಥಳದ ಮೇಲೆ ದಾಳಿ ಮಾಡಿ ಒಬ್ಬನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ತಾನು ಅಂಗಡಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಮತ್ತು ದಾಖಲಾತಿಗಳನ್ನು ತಿದ್ದುಪಡಿ ಮಾಡುತ್ತಿದ್ದಾಗಿ ಹೇಳಿದ್ದಾನೆ. ಅಲ್ಲದೆ ಅಂಗಡಿಯ ಮಾಲೀಕನ ಬಗ್ಗೆ ಮಾಹಿತಿ ನೀಡಿದ್ದಾನೆ.

ಅಂಗಡಿಯಲ್ಲಿದ್ದ ಕಂಪ್ಯೂಟರ್‌, ಪ್ರಿಂಟರ್‌, ಲ್ಯಾಮಿನೇಷನ್‌ ಮಿಷನ್‌, ಹಾರ್ಡ್‌ಡಿಸ್ಕ್‌, 2 ಮೊಬೈಲ್‌ಗಳು, 2 ಸಾವಿರ ಹಣ ಹಾಗೂ ನಕಲಿ ಆಧಾರ್‌ಕಾರ್ಡ್‌ಗಳು ಮತ್ತು ನಕಲಿ ಅಂಕಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ.

ತನಿಖೆ ಮುಂದುವರೆಸಿದ ಪೊಲೀಸರು ಹೆಬ್ಬಗೋಡಿ ಪಾರ್ಕ್‌ ಬಳಿ ಅಂಗಡಿ ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆಗೊಳ ಪಡಿಸಿದಾಗ ಕಳೆದ ಒಂದೂವರೆ-ಎರಡು ವರ್ಷಗಳಿಂದ ಈ ಕೆಲಸ ಮಾಡುತ್ತಿದ್ದುದಾಗಿ ಮಾಲೀಕ ಬಾಯ್ಬಿಟ್ಟಿದ್ದಾನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ನಕಲಿ ದಾಖಲಾತಿಗಳಿಂದ ಲಾಭ ಪಡೆದಿರುವವರ ಬಗ್ಗೆ ಮಾಹಿತಿ ಕಲೆ ಹಾಕಿ ಎಲ್ಲರಿಗೂ ನೋಟೀಸ್‌‍ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸುವುದಾಗಿ ಇನ್‌್ಸಪೆಕ್ಟರ್‌ ಸೋಮಶೇಖರ್‌ ತಿಳಿಸಿದ್ದಾರೆ.

ಮುಸಲ್ಮಾನರ ವಿಷಯಗಳು ಇಲ್ಲದಿದ್ದರೆ ಬಿಜೆಪಿ ರಾಜಕೀಯ ಮಾಡಲು ಸಾಧ್ಯವಿಲ್ಲ : ಸಂತೋಷ್‌ಲಾಡ್‌ ಕಿಡಿ

ಬೆಂಗಳೂರು, ಸೆ.16- ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷಲಾಡ್‌ ಲೇವಡಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ ದಾಳಿಯಾದಾಗ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜೋರು ಭಾಷಣ ಮಾಡಿ, ನೀರು ಮತ್ತು ರಕ್ತ ಏಕಾಕಾಲಕ್ಕೆ ಹರಿಯಲು ಸಾಧ್ಯವಿಲ್ಲ ಎಂದಿದ್ದರು. ಈಗ ಪಾಕಿಸ್ತಾನದ ಜೊತೆ ಕ್ರಿಕೆಟ್‌ ಆಡುತ್ತಿದ್ದಾರೆ. ಇದನ್ನು ಬಿಜೆಪಿಯವರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಕಿಡಿ ಕಾರಿದರು.

ಬಿಜೆಪಿಯವರಿಗೆ ನಾಚಿಕೆ, ಮಾನಮರ್ಯಾದೆ ಏನೂ ಇಲ್ಲ. ಪಾಕಿಸ್ತಾನದ ಜೊತೆಗಿನ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ನಿಲ್ಲಿಸಿಬಿಡುತ್ತೇವೆ, ಪಾಕಿಸ್ತಾನವನ್ನು ಮುಗಿಸಿ ಬಿಡುತ್ತೇವೆ, ಹಾಗೇ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದೆಲ್ಲಾ ಹೇಳಿದವರು ಇವತ್ತು ಮಾಡುತ್ತಿರುವುದು ಏನು? ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಪುತ್ರ ಜೈ ಷಾ ಅವರ ಅಧ್ಯಕ್ಷತೆಯಲ್ಲಿರುವ ಭಾರತೀಯ ಕ್ರಿಕೆಟ್‌ ಮಂಡಳಿ ಪಾಕಿಸ್ತಾನದ ಜೊತೆ ನಮ ತಂಡ ಆಟವಾಡಲು ಅವಕಾಶ ನೀಡಿದೆ. ಇದನ್ನು ಬಿಜೆಪಿಯವರು ವಿರೋಧಿಸುತ್ತಿಲ್ಲ ಎಂದು ಹೇಳಿದರು.

ಬಿಜೆಪಿಯವರು ಏನೂ ಮಾಡಿದರೂ ಅದು ಅಂಗೀಕೃತ ಎಂಬಂತೆ ವರ್ತಿಸಲಾಗುತ್ತಿದೆ. ಕಾಂಗ್ರೆಸ್‌‍ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರಲ್ಲಿ ಮುಸಲಾನರು ಪಾಕಿಸ್ತಾನ ಎಂಬ ಹುಳುಕು ಹುಡುಕಿ ಟೀಕೆ ಮಾಡುತ್ತಾರೆ. ಇದೇ ಬಿಜೆಪಿಯವರ ಜೀವಾಳ. ಇದನ್ನು ಬಿಟ್ಟರೆ ಅವರಿಗೆ ಬದುಕಿಲ್ಲ ಎಂದು ಕಿಡಿ ಕಾರಿದರು.

ರಾಜ್ಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಶೇ.65ರಷ್ಟು ಬಿಪಿಎಲ್‌ ಕಾರ್ಡ್‌ಗಳು ಇರಬೇಕು. ಆದರೆ ನಮಲ್ಲಿ 90ಕ್ಕಿಂತಲೂ ಹೆಚ್ಚು ಬಿಪಿಎಲ್‌ ಕಾರ್ಡ್‌ಗಳಿವೆ. ಅರ್ಹರಿಗೆ ಬಿಪಿಎಲ್‌ ಸೌಲಭ್ಯ ದೊರಕಿಸಲು ಎಲ್ಲಾ ಸರ್ಕಾರಗಳು ಪ್ರಯತ್ನ ಮಾಡುತ್ತಲೇ ಇವೆ.

ಅನರ್ಹರು ಸೌಲಭ್ಯ ಪಡೆದಿರುವುದನ್ನು ಪತ್ತೆ ಹಚ್ಚಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.ರಾಜ್ಯದಲ್ಲಿ ಒಂದೆಡೆ ಬಿಪಿಎಲ್‌ ಕಾರ್ಡ್‌ಗಳ ಸಂಖ್ಯೆ ಹೆಚ್ಚಿದ್ದರೂ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕವಾಗಿದೆ. ತಲಾ ಆದಾಯದಲ್ಲೂ ದೇಶದಲ್ಲಿ ನಂ.1 ಸ್ಥಾನದಲ್ಲಿದ್ದೇವೆ. ಇದಕ್ಕೆ ಗ್ಯಾರಂಟಿ ಯೋಜನೆಗಳ ಕೊಡುಗೆಯೂ ಮಹತ್ವದ್ದಾಗಿದೆ ಎಂದು ಹೇಳಿದರು.

ಮೃತಪಟ್ಟ ಮಹಿಳೆಯ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಾವತಿಯಾಗಿರುವುದು ಸಹಜ. ಇದು ದೊಡ್ಡ ಪ್ರಮಾಣದ ಯೋಜನೆ. ಸಣ್ಣ ಪ್ರಮಾಣದ ಲೋಪಗಳು ಇರಬಹುದು. ಪ್ರತಿವಾರ ಸಾವು-ನೋವುಗಳು ಘಟಿಸುತ್ತಿರುತ್ತವೆ. ಆ ಮಾಹಿತಿ ಕಾಲಕಾಲಕ್ಕೆ ಅಪ್‌ಡೇಟ್‌ ಆಗದೇ ಇದ್ದಾಗ ಲೋಪಗಳಾಗುವುದು ಸಾಮಾನ್ಯ. ಸರ್ಕಾರ ಇದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಕ್ರಿಶ್ಚಿಯನ್‌ ಧರ್ಮದ ಜತೆ ಜಾತಿ ಸೇರ್ಪಡೆ : ತೀವ್ರಗೊಂಡ ವಿವಾದ, ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು,ಸೆ.16- ಹಿಂದೂ ಸಮುದಾಯದ ಕೆಲವು ಉಪಪಂಗಡಗಳನ್ನು ಕ್ರಿಶ್ಚಿಯನ್‌ ಸಮುದಾಯದ ಜೊತೆ ಸೇರ್ಪಡೆ ಮಾಡಲು ಅನುಮತಿ ನೀಡಿರುವ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ನೀಡಲಿದೆ.

ಮೈಸೂರು-ಕೊಡುಗು ಸಂಸದ ಯದುವೀರ್‌ ಒಡೆಯರ್‌ ಹಾಗೂ ಶಾಸಕ ಸುನೀಲ್‌ಕುಮಾರ್‌ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರಕ್ಕೆ ಸರಿಯಾದ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಿದ್ದಾರೆ. ಇದೇ ತಿಂಗಳ 22ರಿಂದ ಆರಂಭವಾಗಲಿರುವ ಜಾತಿ ಜನಗಣತಿ ವೇಳೆ ಹಿಂದೂ ಸಮುದಾಯದ ಸುಮಾರು 47 ಉಪಜಾತಿಗಳನ್ನು ಕ್ರಿಶ್ಚಿಯನ್‌ ಧರ್ಮದ ಜೊತೆ ಸೇರಿಸಲು ಅವಕಾಶ ನೀಡಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.

ಪ್ರತಿಪಕ್ಷ ಬಿಜೆಪಿ ಇದಕ್ಕೆ ವಿರೋಧ ವ್ಯಕ್ತಪಡಿಸಿ ಇದು ಹಿಂದೂ ಧರ್ಮದವರನ್ನು ಕ್ರಿಶ್ಚಿಯನ್‌ ಸಮುದಾಯಕ್ಕೆ ಮತಾಂತರ ಮಾಡುವ ಹುನ್ನಾರ ಎಂದು ಆರೋಪಿಸಿದೆ. ಹೀಗಾಗಿ ರಾಜ್ಯಪಾಲರು ತಕ್ಷಣವೇ ಮಧ್ಯಪ್ರವೇಶಿಸಿ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕೆಂಬುದು ದೂರಿನಲ್ಲಿ ಮನವಿ ಮಾಡಲಾಗುತ್ತದೆ. ಒಟ್ಟು 47 ಉಪಜಾತಿಗಳನ್ನು ಕ್ರಿಶ್ಚಿಯನ್‌ ಸಮುದಾಯದ ಜೊತೆ ಸೇರ್ಪಡೆಗೆ ಅವಕಾಶ ಕಲ್ಪಿಸಿರುವುದು ಪ್ರತಿಪಕ್ಷದ ಕಣ್ಣು ಕೆಂಪಾಗುವಂತೆ ಮಾಡಿದೆ.

ಮತ್ತೆ ಮುನ್ನೆಲೆಗೆ ಬಂದ ಪರಿಶಿಷ್ಟ ಪಂಗಡದ ಪಟ್ಟಿಗೆ ಕುರುಬ ಜನಾಂಗ ಸೇರ್ಪಡೆ ವಿವಾದ

ಬೆಂಗಳೂರು, ಸೆ.16- ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಕುರುಬ ಸಮುದಾಯದ ಪರಿಶಿಷ್ಟ ಪಂಗಡ ಮೀಸಲು ಪಟ್ಟಿಗೆ ಸೇರ್ಪಡೆ ಕುರಿತ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹಿಂದೆ ಇದೇ ವಿಚಾರ ಚರ್ಚೆಗೆ ಬಂದಾಗ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಯಾವುದೇ ಬೆಂಬಲ ನೀಡದೇ ನಿರಾಸಕ್ತರಾಗಿದ್ದರು. ಆಗ ಸಚಿವರಾಗಿದ್ದ ಕೆ.ಎಸ್‌‍.ಈಶ್ವರಪ್ಪ ಮೀಸಲು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಈಶ್ವರಪ್ಪ ಸಂಪುಟದಿಂದ ನಿರ್ಗಮಿಸಿದ ಬಳಿಕ ವಿಷಯ ತಣ್ಣಗಾಗಿತ್ತು.

ಈಗ ಮತ್ತೇ ಇದೇ ವಿಚಾರ ಮುನ್ನೆಲೆಗೆ ಬಂದಿದೆ. ಸಾಮಾಜಿಕ ವಲಯದಲ್ಲಿ ಕೇಳಿ ಬಂದಿರುವ ಬೇಡಿಕೆಗಳಿಗೆ ಪುಷ್ಠಿ ನೀಡುವಂತೆ ಸರ್ಕಾರದ ಕಾರ್ಯದರ್ಶಿ ಮಟ್ಟದಲ್ಲಿ ಚರ್ಚೆ ನಿಗದಿಯಾಗಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿಂದು ಬೆಂಗಳೂರಿನ ಬಹುಮಹಡಿಗಳ ಕಟ್ಟಡದಲ್ಲಿ ಮಹತ್ವದ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಭಾಗವಹಿಸಲು ಪರಿಶಿಷ್ಟ ಪಂಗಡಗಳ ಇಲಾಖೆಯ ನಿರ್ದೇಶಕರಿಗೆ, ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು, ಸಂಶೋಧನಾ ಸಂಸ್ಥೆ ನಿರ್ದೇಶಕರಿಗೆ, ಸಮಾಜ ಕಲ್ಯಾಣ ಇಲಾಖೆ ಎಸ್‌‍ಸಿಎಸ್‌‍ಪಿ-ಟಿಎಸ್‌‍ಪಿ ನೋಡಲ್‌ ಏಜನ್ಸಿಯ ಸಲಹೆಗಾರರನ್ನು ಸಭೆಗೆ ಆಹ್ವಾನಿಸಲಾಗಿತ್ತು.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಕುರಿತು ಹಾಗೂ ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿರುವ ಗೊಂಡಾ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಹಾಗೂ ದಾಖಲಾತಿಗಳೊಂದಿಗೆ ಸಭೆಗೆ ಹಾಜರಾಗಲು ಸೂಚಿಸಲಾಗಿತ್ತು.ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಹೆಸರಿನಲ್ಲಿ ಜಾತಿ ಜನಗಣತಿ ನಡೆಯುತ್ತಿರುವ ಹೊತ್ತಿನಲ್ಲೇ ಕುರುಬ ಸಮುದಾಯವನ್ನು ಎಸ್‌‍ಟಿಗೆ ಸೇರ್ಪಡೆ ಮಾಡಲು ತಯಾರಿಯಾಗುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಹಿಂದೆ ಎಸ್‌‍ಟಿ ಮೀಸಲಾತಿಗಾಗಿ ಕುರುಬ ಸಮುದಾಯ ಹೋರಾಟ ನಡೆಸಿದಾಗ ಪರ-ವಿರೋಧ ಚರ್ಚೆಗಳಾಗಿದ್ದವು. ಹಿಂದುಳಿದ ವರ್ಗಗಳಲ್ಲಿ ಪ್ರಬಲ ಜಾತಿಯಾಗಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಮೀಸಲು ಪಟ್ಟಿಗೆ ಸೇರ್ಪಡೆ ಮಾಡಿದರೆ, ಅಲ್ಲಿರುವ ಆದಿವಾಸಿ ಹಾಗೂ ಬುಡಕಟ್ಟು ಸಮುದಾಯಗಳಿಗೆ ಅನ್ಯಾಯವಾಗುತ್ತದೆ. ನಿಜವಾದ ಸಂತ್ರಸ್ತರು ತೊಂದರೆಗೊಳಗಾಗುತ್ತಾರೆ ಎಂಬ ಆತಂಕಗಳು ಕೇಳಿ ಬಂದವು.

ಈಶ್ವರಪ್ಪ ಸಚಿವರಾಗುವವರೆಗೂ ಎಸ್‌‍ಟಿ ಮೀಸಲಿನ ಚರ್ಚೆ ತೀವ್ರ ಸ್ವರೂಪದಲ್ಲಿತ್ತು. ಇತ್ತೀಚೆಗೆ ರಾಜ್ಯ ಸರ್ಕಾರವೇ ಚರ್ಚೆ ಮುನ್ನೆಲೆಗೆ ಬರುವಂತೆ ಮಾಡಿರುವುದರಿಂದ ಮತ್ತೇ ಹೋರಾಟಗಳು ಭುಗಿಲೇಳುವ ಸಾಧ್ಯತೆಗಳಿವೆ. ಕುರುಬ ಸಮುದಾಯದಲ್ಲಿ ಸಾಕಷ್ಟು ಸಂಖ್ಯೆಯ ಬಡವರಿದ್ದಾರೆ. ಅವರಿಗೆ ಸಾಮಾಜಿಕ ನ್ಯಾಯ ದೊರೆಯಬೇಕಾದರೆ, ಎಸ್‌‍ಟಿ ಮೀಸಲು ಪಟ್ಟಿಗೆ ಸೇರಿಸುವುದು ಅತ್ಯಗತ್ಯವೆಂಬ ವಾದಗಳಿವೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವ ಕಾಲಘಟ್ಟದಲ್ಲಿ ಈ ಚರ್ಚೆ ಆರಂಭವಾಗಿರುವುದು ಮತ್ತಷ್ಟೂ ಕುತೂಹಲ ಕೆರಳಿಸಿದೆ. ಈ ಹಿಂದೆಲ್ಲಾ ಕುರುಬರ ಎಸ್‌‍ಟಿ ಮೀಸಲಾತಿಗೆ ವಿಷಯವಾಗಿ ಹೆಚ್ಚು ತಲೆ ಕೆಡಸಿಕೊಳ್ಳದ ಸಿದ್ದರಾಮಯ್ಯ ಈಗ ಏಕಾಏಕಿ ಚರ್ಚೆಯನ್ನು ಮುನ್ನೆಲೆಗೆ ತಂದಿರುವುದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.

ಪಕ್ಷದಲ್ಲಿ ಬಹಳಷ್ಟು ಮಂದಿ ಕುರುಬ ಸಮುದಾಯದ ಶಾಸಕರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಲೆಂದು ಬಹಿರಂಗವಾಗಿ ಹೇಳಲಾರಂಭಿಸಿದ್ದಾರೆ. ಇದಕ್ಕಾಗಿ ಜನಾಂಗದ ಬೆಂಬಲ ಪಡೆಯಲು ಸಿದ್ದರಾಮಯ್ಯ ಅವರು ಎಸ್‌‍ಟಿ ಮೀಸಲು ಪಟ್ಟಿ ಎಂಬ ಅಸ್ತ್ರ ಹೂಡಿದ್ದಾರೆ ಎಂದು ಮಾಜಿ ಸಚಿವ ಎಚ್‌.ವಿಶ್ವನಾಥ್‌ ಮೈಸೂರಿನಲ್ಲಿಂದು ಆರೋಪಿಸಿದ್ದಾರೆ.

ಈ ಮೊದಲು ಬಸವರಾಜ ಬೊಮಾಯಿ ಸರ್ಕಾರದಲ್ಲಿ ನಾನು ಸೇರಿದಂತೆ ಅನೇಕರು ಕುರುಬ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸಿದಾಗ ಸಿದ್ದರಾಮಯ್ಯ ಬೆಂಬಲ ನೀಡಲಿಲ್ಲ. ಈಗ ತಮ ಸ್ಥಾನಕ್ಕೆ ಕುತ್ತು ಬಂದಿರುವುದಕ್ಕಾಗಿ ಎಲ್ಲರನ್ನೂ ಕರೆಯುತ್ತಿದ್ದು, ಬೆಂಬಲ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ. ತಮ ಸ್ಥಾನ ಉಳಿಸಿಕೊಳ್ಳಲಿಕ್ಕಾಗಿಯೇ ಎಸ್‌‍ಟಿ ಮೀಸಲಾತಿಯೆಂಬ ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಚರ್ಚೆಗಳು ಏನೇ ಇದ್ದರೂ ಕೆಲವು ದಿನಗಳ ಕಾಲ ಶೈತ್ಯಾವಸ್ಥೆಯಲ್ಲಿದ್ದ ಬೇಡಿಕೆ ಮತ್ತೇ ಮುನ್ನೆಲೆಗೆ ಬಂದಿರುವುದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ.ಸಂಪುಟದಲ್ಲಿ ಎಸ್‌‍ಟಿ ಸಮುದಾಯದಿಂದ ಸಚಿವರಾಗಿದ್ದ ಬಿ. ನಾಗೇಂದ್ರ, ವಾಲಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ್ದರು.

ಕೆ.ಎನ್‌.ರಾಜಣ್ಣ ಮತಗಳ್ಳತನ ಪ್ರಕರಣದಲ್ಲಿ ಕಾಂಗ್ರೆಸ್‌‍ ವರಿಷ್ಠ ನಾಯಕ ರಾಹುಲ್‌ಗಾಂಧಿ ಅವರ ಅಭಿಪ್ರಾಯಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ ಸಚಿವ ಸ್ಥಾನ ಕಳೆದುಕೊಂಡರು. ಉಳಿದಂತೆ ಸತೀಶ್‌ ಜಾರಕಿಹೊಳಿ ಮಾತ್ರ ಪರಿಶಿಷ್ಟ ಪಂಗಡದ ಸಚಿವರಾಗಿ ಸಂಪುಟದಲ್ಲಿ ಮುಂದುವರೆದಿದ್ದಾರೆ. ಈ ಹಂತದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಟ್ಟದ ಚರ್ಚೆಗೆ ಮಿಶ್ರ ಪ್ರತಿಕ್ರಿಯೆ ಕೇಳಿ ಬಂದಿವೆ.

BREAKING : ಮಾಲೂರು ಶಾಸಕ ಕಾಂಗ್ರೆಸ್ ನಂಜೇಗೌಡ ಆಯ್ಕೆ ಅಸಿಂಧು, ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್, ನಾಲ್ಕು ವಾರದೊಳಗೆ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿದೆ. ಅರ್ಜಿದಾರರ ಕೋರಿಕೆಯಂತೆ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ಹೈಕೋರ್ಟ್ ತಾನೇ ನೀಡಿದ್ದ ತೀರ್ಪಿಗೆ 30 ದಿನಗಳ ಕಾಲ ತಡೆಯಾಜ್ಞೆ ನೀಡಿದೆ.
ಅಭ್ಯರ್ಥಿಗಳು ಪಡೆದಿದ್ದ ಮತಗಳ ವಿವರ
ಕೆ.ವೈ, ನಂಜೇಗೌಡ ( ಕಾಂಗ್ರೆಸ್)- 50,955
ಮಂಜುನಾಥ್ ಗೌಡ( ಬಿಜೆಪಿ)- 50707
ಹೂಡಿ ವಿಜಯ್ ಕುಮಾರ್( ಪಕ್ಷೇತರ)- 49362
ಜಿ,ಇ ರಾಮೇಗೌಡ( ಜೆಡಿಎಸ್)- 17.627
ಗೆಲುವಿನ ಅಂತರ 248

ಹೈಕೋರ್ಟ್ ಆದೇಶವನ್ನು ಪ್ರಶ್ನೆಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಿಲು ಅವಕಾಶ ನೀಡಬೇಕು. ಹೀಗಾಗಿ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ನಂಜೇಗೌಡ ಪರ ವಕೀಲರಾದ ನಳೀನ ಮಾಯಾಗೌಡ ಅವರು ನ್ಯಾಯಾಧೀಶರಿಗೆ ಮನವಿ ಮಾಡಿಕೊಂಡರು. ಇದನ್ನು ನ್ಯಾಯಮೂರ್ತಿಗಳು ಮಾನ್ಯ ಮಾಡಿದರು.

ಕೆವೈ ನಂಜೇಗೌಡ ಆಯ್ಕೆ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ಕೆಎಸ್ ಮಂಜುನಾಥಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತಎಣಿಕೆಯಲ್ಲಿ ಲೋಪವಾಗಿದ್ದು, ಮತ್ತೊಮ್ಮೆ ಮರು ಮತಎಣಿಕೆಗೆ ಆದೇಶ ನೀಡುವಂತೆ ಮನವಿ ಮಾಡಿದ್ದರು.ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್,ಏಕಸದಸ್ಯ ಪೀಠದ ನ್ಯಾಯಮೂರ್ತಿ ಆರ್ ದೇವದಾಸ್ ಅವರು, ಮಂಗಳವಾರ ತೀರ್ಪು ಪ್ರಕಟಿಸಿದರು.

ಹೊಸದಾಗಿ ಮರು ಮತಎಣಿಕೆ ನಡೆಸಲು ಹೈಕೋರ್ಟ್ ಆದೇಶ ನೀಡಿದ್ದು, ನಾಲ್ಕು ವಾರದಲ್ಲಿ ಮರು ಮತ ಎಣಿಕೆ ಮಾಡುವಂತೆ ಸೂಚಿಸಿದೆ. ಜಿಲ್ಲಾ ಚುನಾವಣಾ ಅಧಿಕಾರಿ ಮತ ಎಣಿಕೆಯ ವಿಡಿಯೋ ಸಲ್ಲಿಸಿಲ್ಲ. ಹೀಗಾಗಿ .ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.
ಕಳೆದ 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದ ನಂಜೇಗೌಡ ಅವರ ಮತ ಎಣಿಕೆ ಕಾನೂನು ಪ್ರಕರವಾಗಿ ನಡೆದಿಲ್ಲ ಎಂದು ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ ಅವರು ಕಾನೂನು ಹೋರಾಟ ನಡೆಸಿದ್ದರು.

ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಕೆ ವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ಹ್ಯಾಂಡ್ ಸಮನ್ಸ್ ನೀಡಲು ಅರ್ಜಿದಾರರಿಗೆ ಹೈಕೋರ್ಟ್ ಅನುಮತಿಸಿತ್ತು.

ಬೆಂಗಳೂರು: `ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ವೇಳೆ ವಿ.ವಿ ಪ್ಯಾಟ್ ಪೇಪರ್ ಟ್ರಯಲ್ ಅನ್ನು ಇವಿಎಂ ಜೊತೆಗೆ ಹೊಂದಾಣಿಕೆ ಮಾಡುವ ಚಿತ್ರೀಕರಣದ ದೃಶ್ಯಾವಳಿಯನ್ನು ಕೋರ್ಟ್‍ಗೆ ಸಲ್ಲಿಸಿ’ ಎಂದು ಹೈಕೋರ್ಟ್, ಕೋಲಾರ ಜಿಲ್ಲಾಧಿಕಾರಿಗೆ ನಿರ್ದೇಶಿಸಿತ್ತು.

ವಿಚಾರಣೆ ವೇಳೆ ಕೇಂದ್ರ ಚುನಾವಣಾ ಆಯೋಗದ ಪರವಾಗಿ ವಕೀಲ ಶರತ್ ಆರ್.ದೊಡವಾಡ ಅವರು ಹಾಜರಾಗಿ, `ಮತ ಎಣಿಕೆ ವೇಳೆ ವಿ.ವಿ ಪ್ಯಾಟ್ ಪೇಪರ್ ಟ್ರಯಲ್ ಅನ್ನು ಇವಿಎಂ ಜೊತೆಗೆ ಹೊಂದಾಣಿಕೆ ಮಾಡುವ ಕಾರ್ಯದ ಚಿತ್ರೀಕರಣ ಮಾಡಲಾಗಿತ್ತು. ಆ ದೃಶ್ಯಾವಳಿಯನ್ನು ಒಳಗೊಂಡ ಒಂದು ಸಿ.ಡಿಯನ್ನು ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದ್ದರು.

`ನ್ಯಾಯಾಲಯದ ಅನುಮತಿ ಮೇರೆಗೆ ಇವಿಎಂ ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಅನ್ನು ತೆರೆದು ಪರಿಶೀಲಿಸಲಾಗಿದೆ. ಅಲ್ಲಿ ವಿ.ವಿ ಪ್ಯಾಟ್ ಪೇಪರ್ ಟ್ರಯಲ್ ಮತ್ತು ಇವಿಎಂ ಯಂತ್ರ ಹೊಂದಾಣಿಕೆ ಕಾರ್ಯದ ಚಿತ್ರೀಕರಣ ನಡೆಸಿದ ದೃಶ್ಯಾವಳಿಗಳನ್ನು ಒಳಗೊಂಡ ಮೂರು ಸಿ.ಡಿಗಳು ಲಭ್ಯವಾಗಿವೆ. ಮತ ಎಣಿಕೆ ವೇಳೆ ಅಭ್ಯರ್ಥಿಗಳ ಏಜೆಂಟರಿಗೆ ನೀಡಲಾಗಿದ್ದ ಫಾರಂ ನಂ.17(ಸಿ) ನಕಲು ಪ್ರತಿಯೂ ಲಭ್ಯವಾಗಿದೆ. ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಇನ್ನಷ್ಟು ಸಮಯ ನೀಡಬೇಕು’ ಎಂದು ಕೋರಿದ್ದರು.

ವಿಚಾರಣೆ ವೇಳೆ ಅರ್ಜಿದಾರ ಪರ ಹಿರಿಯ ವಕೀಲರು, ಅರ್ಜಿಯಲ್ಲಿ ಶಾಸಕ ಕೆ ವೈ ನಂಜೇಗೌಡ ಮತ್ತು ಚುನಾವಣೆಗೆ ಸ್ಪರ್ಧಿಸಿದ್ದ ಇತರೆ 13 ಮಂದಿ ಪ್ರತಿವಾದಿಗಳಿದ್ದಾರೆ. ಆ ಪೈಕಿ ಅನೇಕ ಪ್ರತಿವಾದಿಗಳಿಗೆ ಅರ್ಜಿ ಸಂಬಂಧ ಈ ಹಿಂದೆ ಹೈಕೋರ್ಟ್ ಜಾರಿ ಮಾಡಿದ್ದ ನೋಟಿಸ್/ಸಮನ್ಸ್ ತಲುಪಿಲ್ಲ. ಅದರಂತೆ ಪ್ರತಿವಾದಿಗಳಿಗೆ ನೋಟಿಸ್/ಹ್ಯಾಂಡ್ ಸಮನ್ಸ್ ಜಾರಿ ನೀಡಲು ಅನುಮತಿಸಬೇಕು ಎಂದು ಮನವಿ ಮಾಡಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಸ್ಪರ್ಧಿಸಿದ್ದ ಕೆ ವೈ ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್‍ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಮತ ಎಣಿಕೆ ಮಾಡಲಾಗಿದೆ. ಆ ಮೂಲಕ ಜನಪ್ರತಿನಿಧಿಗಳ ಕಾಯಿದೆಯ ನಿಯಮಗಳು ಮತ್ತು ಚುನಾವಣಾ ಆಯೋಗ ಪ್ರಕಟಿಸಿದ್ದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ, ನಂಜೇಗೌಡ ಅವರನ್ನು ವಿಜೇತ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಚುನಾವಣಾ ಆಯೋಗದ ಕ್ರಮ ರದ್ದುಪಡಿಸಬೇಕು. ಮತಗಳ ಮರು ಎಣಿಕೆಗೆ ನಿರ್ದೇಶಿಸಬೇಕು ಎಂದು ಕೋರಿದ್ದರು.

ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಅಗತ್ಯ ದಾಖಲಾತಿ ನೀಡುವಂತೆ ಕೇಳಿತ್ತು. ಜಿಲ್ಲಾಧಿಕಾರಿಗಳು ಸ್ಟ್ರಾಂಗ್ ರೂಮ್‍ನಲ್ಲಿದ್ದ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದರು. ಕಳೆದ 2 ವರ್ಷದಿಂದ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು.

ಏಷ್ಯಾ ಕಪ್‌ನ ಉಳಿದ ಪಂದ್ಯಗಳಿಂದ ಮ್ಯಾಚ್‌ ರೆಫರಿ ಆಂಡಿ ಪೈಕ್ರಾಫ್ಟ್ ತೆಗೆದುಹಾಕಬೇಕೆಂಬ ಪಾಕ್ ಬೇಡಿಕೆ ತಿರಸ್ಕರಿಸಿದ ಐಸಿಸಿ

ದುಬೈ,ಸೆ.16- ಏಷ್ಯಾ ಕಪ್‌ನ ಉಳಿದ ಪಂದ್ಯಗಳಿಂದ ಮ್ಯಾಚ್‌ ರೆಫರಿ ಆಂಡಿ ಪೈಕ್ರಾಫ್ಟ್ ಅವರನ್ನು ತೆಗೆದುಹಾಕಬೇಕೆಂಬ ಪಾಕಿಸ್ತಾನದ ಬೇಡಿಕೆಯನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ತಿರಸ್ಕರಿಸಿದೆ.

ಭಾರತ-ಪಾಕಿಸ್ತಾನ ನಡುವೆ ನಡೆದ ಪಂದ್ಯದ ನಂತರ ಔಪಚಾರಿಕವಾಗಿ ಭಾರತೀಯ ಆಟಗಾರರು ಹಸ್ತಲಾಘವ ಮಾಡದಿರುವುದಕ್ಕೆ ಭಾರೀ ವಿವಾದ ಉಂಟಾಗಿತ್ತು. ಹೀಗಾಗಿ ಪಂದ್ಯದ ರೆಫ್ರರಿಯನ್ನು ತೆಗೆದು ಹಾಕಬೇಕೆಂದು ಪಾಕ್‌ ಐಸಿಸಿಗೆ ದೂರು ನೀಡಿತ್ತು. ಆದರೆ ಈ ಮನವಿಯನ್ನು ತಿರಸ್ಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತ ವಿರುದ್ಧ ಭಾನುವಾರ ನಡೆದ ಪಂದ್ಯದ ಸಮಯದಲ್ಲಿ ಮ್ಯಾಚ್‌ ರೆಫರಿ ಆ್ಯಂಡಿ ಪೈಕ್ರಾಫ್ಟ್ ಅವರು ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರನ್ನು ಏಷ್ಯಾ ಕಪ್‌ನಿಂದ ತಕ್ಷಣ ತೆಗೆದುಹಾಕಬೇಕೆಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಒತ್ತಾಯಿಸಿತ್ತು.ಪಂದ್ಯದ ಕೊನೆಯಲ್ಲಿ ಪೈಕ್ರಾಫ್ಟ್ ಅಂಪೈರ್‌ ಆಗಿ ಕಾರ್ಯನಿರ್ವಹಿಸಿದರು. ಆದರೆ, ಪಂದ್ಯ ಮುಗಿದ ಬಳಿಕ ಭಾರತೀಯ ಆಟಗಾರರು ಎದುರಾಳಿ ತಂಡದ ಆಟಗಾರರೊಂದಿಗೆ ಕೈಕುಲುಕಲಿಲ್ಲ ಎಂದು ಪಿಸಿಬಿ ಪೈಕ್ರಾಫ್‌್ಟ ವಿರುದ್ಧ ಐಸಿಸಿಗೆ ಔಪಚಾರಿಕ ದೂರು ದಾಖಲಿಸಿತ್ತು.

ಐಸಿಸಿ ನೀತಿ ಸಂಹಿತೆ ಮತ್ತು ಕ್ರಿಕೆಟ್‌ ಸ್ಫೂರ್ತಿಗೆ ಸಂಬಂಧಿಸಿದ ಎಂಸಿಸಿ ಕಾನೂನುಗಳನ್ನು ಮ್ಯಾಚ್‌ ರೆಫರಿ ಉಲ್ಲಂಘಿಸಿದ್ದಾರೆ. ಏಷ್ಯಾ ಕಪ್‌ನಿಂದ ಮ್ಯಾಚ್‌ ರೆಫರಿಯನ್ನು ತಕ್ಷಣವೇ ತೆಗೆದುಹಾಕಬೇಕೆಂದು ಪಿಸಿಬಿ ಒತ್ತಾಯಿಸಿದೆ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ X ನಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನ ಈ ಹಿಂದೆ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ಎಸಿಸಿ) ಜೊತೆ ಈ ವಿಷಯವನ್ನು ಪ್ರಸ್ತಾಪಿಸಿ, ಭಾರತೀಯ ಆಟಗಾರರ ನಡವಳಿಕೆಯನ್ನು ಕ್ರೀಡಾಯೋಗ್ಯವಲ್ಲ ಎಂದು ಕರೆದಿತ್ತು. ಭಾರತೀಯ ಆಟಗಾರರು ಕೈಕುಲುಕದಿರುವ ವರ್ತನೆಯ ವಿರುದ್ಧ ತಂಡದ ವ್ಯವಸ್ಥಾಪಕ ನವೀದ್‌ ಚೀಮಾ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದರು. ಇದನ್ನು ಕ್ರೀಡಾಯೋಗ್ಯವಲ್ಲದ ಮತ್ತು ಆಟದ ವಿರುದ್ಧವೆಂದು ಪರಿಗಣಿಸಲಾಗಿದೆ. ಪ್ರತಿಭಟನೆಯಾಗಿ ನಾವು ನಮ ತಂಡದ ನಾಯಕನನ್ನು ಪಂದ್ಯದ ನಂತರದ ಸಮಾರಂಭಕ್ಕೆ ಕಳುಹಿಸಲಿಲ್ಲೞ ಎಂದು ಪಿಸಿಬಿ ಈ ಹಿಂದೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಜಮು ಮತ್ತು ಕಾಶೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಮತ್ತು ಮೇ ತಿಂಗಳಲ್ಲಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ ನಂತರ ಮೊದಲ ಬಾರಿಗೆ ಐತಿಹಾಸಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡ ಮುಖಾಮುಖಿಯಾಗಿವೆ.

ಸೆ.23ಕ್ಕೆ ವಾರ್ಡ್‌ ಪರಿಷ್ಕರಣೆ ಪಟ್ಟಿ ಸಲ್ಲಿಕೆ, GBA ಚುನಾವಣೆಗೆ ರೆಡಿಯಾಯ್ತು ಆಖಾಡ

ಬೆಂಗಳೂರು, ಸೆ.16- ಯಾವುದೇ ಕಾನೂನು ಸಂಕಷ್ಟ ಎದುರಾಗದಿದ್ದರೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಅದಷ್ಟು ಬೇಗ ಚುನಾವಣೆ ನಡೆಯುವ ಲಕ್ಷಣಗಳು ಗೋಚರಿಸುತ್ತಿವೆ. ಡಿಸಂಬರ್‌ ವೇಳೆಗೆ ಚುನಾವಣೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು ಇದೇ 23 ರಂದು ವಾರ್ಡ್‌ ಪುನರ್‌ ವಿಂಗಡಣೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಶರವೇಗದಲ್ಲಿ ವಾರ್ಡ್‌ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿದೆ. ಈಗಾಗಲೇ ಶೇ.50ರಷ್ಟು ಕಾರ್ಯ ಮುಗಿಸಿದ್ದೇವೆ. ಒಂದೇರಡು ದಿನಗಳ ಒಳಗೆ ಎಲ್ಲಾ ಕಾರ್ಯಗಳು ಪೂರ್ಣಗೊಳ್ಳಲಿದ್ದು, ಸೆ. 23 ರಂದು ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಹತ್ತು ವರ್ಷಗಳ ಹಿಂದೆ ನಡೆದಿದ್ದ ಬಿಬಿಎಂಪಿ ಚುನಾವಣೆ ನಂತರ 198 ಪಾಲಿಕೆ ಸದಸ್ಯರು ಐದು ವರ್ಷಗಳ ಹಿಂದೆ ಸ್ಥಾನ ಕಳೆದುಕೊಂಡಿದ್ದರು. ಆ ನಂತರ ಐದು ವರ್ಷಗಳವರೆಗೂ ಸರ್ಕಾರ ಬಿಬಿಎಂಪಿಗೆ ಚುನಾವಣೆ ನಡೆಸಿರಲಿಲ್ಲ. ಇದೀಗ ಕಾಂಗ್ರೆಸ್‌‍ ಸರ್ಕಾರ ಬಿಬಿಎಂಪಿ ಅಸ್ಥಿತ್ವವನ್ನು ರದ್ದುಗೊಳಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದೆ.

ಆಡಳಿತಾತಾಕ ದೃಷ್ಟಿಯಿಂದ ಜಿಬಿಎ ವ್ಯಾಪ್ತಿಯಲ್ಲಿ ಐದು ನಗರ ಪಾಲಿಕೆಗಳನ್ನು ರಚನೆ ಮಾಡಿದ್ದು, ಒಟ್ಟು 365ಕ್ಕೂ ಹೆಚ್ಚು ವಾರ್ಡ್‌ಗಳನ್ನು ರಚನೆ ಮಾಡುವ ಸಾಧ್ಯತೆ ಇರುವುದರಿಂದ ಮುಂದಿನ ಚುನಾವಣೆ ತೀವ್ರ ಕೂತುಹಲ ಕೆರಳಿಸಿದೆ.ಅ.10 ರೊಳಿಗೆ ಬಜೆಟ್‌; ಬಿಬಿಎಂಪಿ ಹೋಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಬಂದು ಐದು ನಗರ ಪಾಲಿಕೆ ರಚನೆಯಾಗುತ್ತಿದ್ದಂತೆ ಹೊಸ ಪಾಲಿಕೆಗಳಿಗೆ ಹೊಸ ಬಜೆಟ್‌ ಮಂಡನೆ ಮಾಡಲು ಜಿಬಿಎ ಅಧಿಕಾರಿಗಳು ತೀರ್ಮಾನಿಸಿದ್ದಾರೆ.
ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ 5 ನಗರ ಪಾಲಿಕೆಗೆ ಹೊಸ ಬಜೆಟ್‌ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಆಕ್ಟೋಬರ್‌ 10 ರೊಳಗೆ ಎಲ್ಲಾ ಪಾಲಿಕೆಗಳಲ್ಲೂ ಬಜೆಟ್‌ ಮಂಡನೆಯಾಗುವುದು ಖಚಿತವಾಗಿದೆ.

ಈಗಾಗಲೇ ಹೊಸ ಬಜೆಟ್‌ ಮಂಡನೆಗೆ ಪೂರ್ವ ಬಾವಿ ಸಿದ್ದತೆ ಆರಂಭವಾಗಿದ್ದು, ಆರ್ಥಿಕ ವರ್ಷದ ಕೊನೆಗೆ ಇನ್ನು ಬಾಕಿ ಇರುವ 8 ತಿಂಗಳ ಅವಧಿಗೆ ಪ್ರತ್ಯೇಕ ಬಜೆಟ್‌ ಮಂಡನೆ ಮಾಡಲಾಗುತ್ತಿದೆ
5 ನಗರ ಪಾಲಿಕೆಗಳಿಗೆ ಈಗಾಗಲೇ ಆಯುಕ್ತರುಗಳನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಆಯುಕ್ತರುಗಳು ತಮ ವ್ಯಾಪ್ತಿಯ ಪಾಲಿಕೆಯಲ್ಲಿ ಬಜೆಟ್‌ ಮಂಡನೆ ಮಾಡಲು ತಯಾರಿ ಆರಂಭಿಸಿದ್ದಾರೆ.

ತಮ್ಮ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಸಿಬ್ಬಂದಿ ವೇತನ, ಆಡಳಿತಾತ್ಮಕ ವೆಚ್ಚ, ಸಭೆ ಸಮಾರಂಭಗಳ ವೆಚ್ಚ, ಕಲ್ಯಾಣ ಕಾರ್ಯಕ್ರಮಗಳು, ಕಾಮಗಾರಿಗಳು, ಉದ್ಯಾನವನಗಳು, ಮೈದಾನ, ಶಾಲಾ.ಕಾಲೇಜು, ಅಸ್ಪತ್ರೆ, ರಸ್ತೆ ನಿರ್ವಹಣೆ, ಇಂದಿರಾ ಕ್ಯಾಂಟೀನ್‌ ಖರ್ಚು ವೆಚ್ಚ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಬಜೆಟ್‌ ಮಂಡನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಜಿಬಿಎ ಮೂಲಗಳು ತಿಳಿಸಿವೆ.

ಎಲ್ಲಾ ಅಂದುಕೊಂಡತೆ ನಡೆದರೆ, ಈ ತಿಂಗಳ ಅಂತ್ಯ ಇಲ್ಲವೇ ಆ.10ರೊಳಗೆ ಬಜೆಟ್‌ ಮಾಡುವುದು ಪಕ್ಕಾ ಎನ್ನುತ್ತಿವೆ ಮೂಲಗಳು.ನಗರದಲ್ಲಿ ನಡೆಯುತ್ತಿರುವ ಬೃಹತ್‌ ಕಾಮಗಾರಿಗಳು ಹಾಗೂ ಕಸ ವಿಲೇವಾರಿ ವಿಚಾರಗಳು ಜಿಬಿಎ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅಂತಹ ಕಾಮಗಾರಿಗಳನ್ನು ಬಿಟ್ಟು ಉಳಿದ ಕಾಮಗಾರಿಗಳ ಅಭಿವೃದ್ಧಿ ಗೆ ಹೊಸ ಬಜೆಟ್‌ ಮಂಡನೆ ಮಾಡಲಾಗುತ್ತಿದೆಯಂತೆ.

ಈಗಾಗಲೇ ಅಯಾ ನಗರ ಪಾಲಿಕೆಗೆ ಬರುವ ಅಸ್ತಿ ತೆರಿಗೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ..ಇದರ ಅಧಾರದ ಮೇಲೆ ಬಜೆಟ್‌ ಮಂಡನೆ ಮಾಡಲು 5 ಪಾಲಿಕೆಗಳ ಆಯುಕ್ತರುಗಳು ಸಿದ್ದತೆ ನಡೆಸಿದ್ದಾರೆ.ಈ ಹಿಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ತೀರ್ಮಾನಗೊಂಡ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಉಪಯೋಗವಿದ್ದರೆ ಮಾತ್ರ ಅವುಗಳನ್ನು ಬಜೆಟ್‌ ವ್ಯಾಪ್ತಿಗೆ ತರಲಾಗುವುದು ಇಲ್ಲದಿದ್ದರೆ ಅಂತಹ ಕಾಮಗಾರಿಗಳನ್ನು ಕೈಬಿಡುವ ಸಾಧ್ಯತೆಗಳಿವೆ.ಇನ್ನೂ ಬಿಬಿಎಂಪಿ ಈ ಹಿಂದೆ ಮಾಡಿದ ಸಾಲಗಳನ್ನು ಕೂಡ ಆಯಾ ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಲಾಗಿದೆ.

ನಿರೀಕ್ಷಿತ ಬಜೆಟ್‌ ಗಾತ್ರ: ಬೆಂಗಳೂರು ಪಶ್ಚಿಮ.. 555.37 ಕೋಟಿ ರೂ, ಬೆಂಗಳೂರು ದಕ್ಷಿಣ 316.28 ಕೋಟಿ ರೂ, ಬೆಂಗಳೂರು ಉತ್ತರ 364.58 ಕೋಟಿ, ಬೆಂಗಳೂರು ಪೂರ್ವ 155.50 ಕೋಟಿ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆಯಿಂದ 313.25 ಕೋಟಿ ರೂ. ಸೇರಿದಂತೆ ಒಟ್ಟು 1707.98 ಕೋಟಿ ರೂ. ಬಜೆಟ್‌ ಮಂಡನೆಯಾಗುವ ನಿರೀಕ್ಷೆಯಿದೆ.

ಸುರೇಶ್‌ ರೈನಾ, ಶಿಖರ್‌ ಧವನ್‌, ಯುವರಾಜ್‌ ಸಿಂಗ್‌ ರಾಬಿನ್‌ ಉತ್ತಪ್ಪಗೆ ಇಡಿ ಸಮನ್ಸ್

ನವದೆಹಲಿ,ಸೆ.16- ಭಾರತದ ಮಾಜಿ ಕ್ರಿಕೆಟ್‌ ಆಟಗಾರರಾದ ಸುರೇಶ್‌ ರೈನಾ ಮತ್ತು ಶಿಖರ್‌ ಧವನ್‌ ಅವರನ್ನು ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಇದೀಗ ರಾಬಿನ್‌ ಉತ್ತಪ್ಪ ಹಾಗೂ ಯುವರಾಜ್‌ ಸಿಂಗ್‌ ಅವರಿಗೂ ಸಮನ್ಸ್ ಜಾರಿ ಮಾಡಿದೆ.

ಬಲಗೈ ಬ್ಯಾಟ್ಸ್ ಮನ್‌ ರಾಬಿನ್‌ಉತ್ತಪ್ಪ ಅವರಿಗೆ ಸೆಪ್ಟೆಂಬರ್‌ 22ರಂದು ಹಾಗೂ ಸೆ.23ರಂದು ಯುವರಾಜ್‌ಸಿಂಗ್‌ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ನೀಡಲಾಗಿದೆ.
ಹಲವಾರು ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆಗಳ ವಿರುದ್ಧದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಇಬ್ಬರಿಗೂ ಸಮನ್ಸ್ ಕೊಡಲಾಗಿದೆ.

ಇದೇ ಪ್ರಕರಣದಲ್ಲಿ ಆಗಸ್ಟ್‌ 13 ಮತ್ತು ಸೆಪ್ಟೆಂಬರ್‌ 4ರಂದು ಕ್ರಮವಾಗಿ ರೈನಾ ಮತ್ತು ಧವನ್‌ ಅವರನ್ನು ಹಣಕಾಸು ಅಪರಾಧ ತನಿಖಾ ಸಂಸ್ಥೆ ವಿಚಾರಣೆ ನಡೆಸಿತ್ತು.ತೃಣಮೂಲ ಕಾಂಗ್ರೆಸ್‌‍ (ಟಿಎಂಸಿ) ಮಾಜಿ ಸಂಸದೆ (ಸಂಸದ) ಮಿಮಿ ಚಕ್ರವರ್ತಿ ಅವರನ್ನು ನಿನ್ನೆ ವಿಚಾರಣೆಗೆ ಒಳಪಡಿಸಲಾಗಿತ್ತು. ಬಂಗಾಳಿ ನಟ ಅಂಕುಶ್‌ ಹಜ್ರಾ ಅವರನ್ನು ಇ.ಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ಬಾಲಿವುಡ್‌ ನಟಿ ಊರ್ವಶಿ ರೌಟೇಲಾ ಕೂಡ ಹಾಜರಾಗುವ ನಿರೀಕ್ಷೆಯಿತ್ತು. ಆದರೆ ಈ ವರದಿ ಸಲ್ಲಿಸುವವರೆಗೂ ಅವರು ತಮ ಹೇಳಿಕೆಯನ್ನು ದಾಖಲಿಸಲು ಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಟ್ಟಿಂಗ್‌ ಅಪ್ಲಿಕೇಶನ್‌ಗಳೊಂದಿಗಿನ ಅವರ ಸಂಪರ್ಕಗಳು, ಅವರು ಗಳಿಸಿದ ಯಾವುದೇ ಅನುಮೋದನೆ ಶುಲ್ಕ ಮತ್ತು ಅವರ ನಡುವಿನ ಸಂವಹನ ವಿಧಾನವನ್ನು ಅರ್ಥಮಾಡಿಕೊಳ್ಳಲು ಜಾರಿ ನಿರ್ದೇಶನಾಲಯವು ಹಲವಾರು ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸುತ್ತಿದೆ.
ಆರ್ಥಿಕ ಅಪರಾಧ ತನಿಖಾ ಸಂಸ್ಥೆಯು ಹಲವಾರು ಅಕ್ರಮ ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆಗಳ ತನಿಖೆ ನಡೆಸುತ್ತಿದೆ.

ಜಾಹೀರಾತುಗಳ ರೂಪದಲ್ಲಿ ಹಣವನ್ನು ಪಡೆದಿರುವ ತಂತ್ರಜ್ಞಾನ ಸಂಸ್ಥೆಗಳು, ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳನ್ನು ಪ್ರಶ್ನಿಸಿದೆ. ಈ ತನಿಖೆಯಲ್ಲಿ ಗೂಗಲ್‌ ಮತ್ತು ಮೆಟಾ ಪ್ರತಿನಿಧಿಗಳನ್ನು ಸಹ ಇಡಿ ಕಚೇರಿಗೆ ಕರೆಯಲಾಗಿತ್ತು. ಅಕ್ರಮ ಬೆಟ್ಟಿಂಗ್‌ ಮತ್ತು ಜೂಜಿನ ಲಿಂಕ್‌ಗಳನ್ನು ಹೊಂದಿರುವ ಹಲವಾರು ವೇದಿಕೆಗಳು, ವಿವಿಧ ಸಾಮಾಜಿಕ ಮಾಧ್ಯಮ ಮಳಿಗೆಗಳು ಮತ್ತು ಆ್ಯಪ್‌ ಸ್ಟೋರ್‌ಗಳಲ್ಲಿ ಜಾಹೀರಾತುಗಳನ್ನು ಇರಿಸಿರುವ ನಿದರ್ಶನಗಳು ಸೇರಿದಂತೆ,ಇಡಿ ಸ್ಕ್ಯಾನರ್‌ ಅಡಿಯಲ್ಲಿವೆ.

2023 ರಲ್ಲಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪತ್ರಿಕೆಗಳು, ಪ್ರಸಾರ ಸುದ್ದಿ ವಾಹಿನಿಗಳು, ಮನರಂಜನಾ ವಾಹಿನಿಗಳು, ಆನ್‌ಲೈನ್‌ ಸುದ್ದಿ ಮತ್ತು ಪ್ರಚಲಿತ ವಿದ್ಯಮಾನಗಳ ವಿಷಯದ ಪ್ರಕಾಶಕರು, ಆನ್‌ಲೈನ್‌ ಜಾಹೀರಾತು ಮಧ್ಯವರ್ತಿಗಳು (ಗೂಗಲ್‌ ಮತ್ತು ಫೇಸ್‌‍ಬುಕ್‌ನಂತಹವು) ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಆನ್‌ಲೈನ್‌ ಬೆಟ್ಟಿಂಗ್‌ ವೇದಿಕೆಗಳನ್ನು ಜಾಹೀರಾತು ಮಾಡದಂತೆ ನಾಲ್ಕು ಸಲಹೆಗಳನ್ನು ನೀಡಿತ್ತು.

ಆನ್‌ಲೈನ್‌ ಬೆಟ್ಟಿಂಗ್‌ ಪ್ಲಾಟ್‌ಫಾರ್ಮ್‌ಗಳ ಜಾಹೀರಾತುಗಳನ್ನು ಅನುಮತಿಸಲಾಗುವುದಿಲ್ಲ ಎಂಬ ಕೇಂದ್ರದ ಈ ಸೂಚನೆಗಳ ಹೊರತಾಗಿಯೂ, ಮನರಂಜನೆ ಮತ್ತು ಕ್ರೀಡಾ ಕ್ಷೇತ್ರದ ಪ್ರಸಿದ್ಧ ವ್ಯಕ್ತಿಗಳು ಅವುಗಳನ್ನು ಅನುಮೋದಿಸಿದ್ದಾರೆ. ಈ ನಟರು ಮತ್ತು ಕ್ರೀಡಾಪಟುಗಳು ಸಹ ಜಾರಿ ನಿರ್ದೇಶನಾಲಯದ ಪರಿಶೀಲನೆಯಲ್ಲಿದ್ದಾರೆ ಮತ್ತು ಅವರನ್ನು ಶೀಘ್ರದಲ್ಲೇ ಸಮನ್ಸ್ ಜಾರಿ ಮಾಡಬಹುದು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಹಲವಾರು ತಿಂಗಳುಗಳಿಂದ ಇಆ ಸಂಗ್ರಹಿಸಿದ ಮಾಹಿತಿಯ ಪ್ರಕಾರ, ಹಲವು ವರ್ಷಗಳಿಂದ ನಿಷೇಧಿಸಲ್ಪಟ್ಟಿರುವ ಬಹು ಬೆಟ್ಟಿಂಗ್‌ ವೇದಿಕೆಗಳು ಇನ್ನೂ ಹೆಸರುಗಳನ್ನು ಬದಲಾಯಿಸುವ ಮೂಲಕ ತಮ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಮತ್ತು ಸೆಲೆಬ್ರಿಟಿಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಂದ ಪ್ರಚಾರ ಮಾಡಲ್ಪಡುತ್ತವೆ.

ಈ ವೇದಿಕೆಗಳು ಭಾರತ ಸರ್ಕಾರದ ಬಹು ಕಾನೂನುಗಳು ಮತ್ತು ನಿರ್ದೇಶನಗಳನ್ನು ಉಲ್ಲಂಘಿಸುತ್ತಿವೆ, ಅವುಗಳಲ್ಲಿ ತೆರಿಗೆ ವಂಚನೆ, ಹಣ ವರ್ಗಾವಣೆ ಮತ್ತು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಸೇರಿವೆ. ಏಕೆಂದರೆ ದೇಶದಿಂದ ಅಕ್ರಮವಾಗಿ ಹಣವನ್ನು ವರ್ಗಾಯಿಸಲಾಗುತ್ತದೆ. ಸುಮಾರು 220 ಮಿಲಿಯನ್‌ ಭಾರತೀಯ ಬಳಕೆದಾರರು ಪ್ರಸ್ತುತ ವಿವಿಧ ಬೆಟ್ಟಿಂಗ್‌ ಅಪ್ಲಿಕೇಶನ್‌ಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದೆ ಮತ್ತು ಇವರಲ್ಲಿ 110 ಮಿಲಿಯನ್‌ ಜನರು ನಿಯಮಿತ ಬಳಕೆದಾರರು ಎಂದು ತಿಳಿಸಿದ್ದಾರೆ.

ಆಧಾರ್‌-ಮೊಬೈಲ್‌ ನಂಬರ್ ಲಿಂಕ್‌ಗಾಗಿ ಅಂಚೆ ಇಲಾಖೆ ಅಧಿಕಾರಿಗಳ ನಿಯೋಜನೆ

ಬೆಂಗಳೂರು, ಸೆ.16- ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಧಾರ್‌ ಸಂಖ್ಯೆಗಳನ್ನು ಮೊಬೈಲ್‌ ಸಂಖ್ಯೆಗೆ ಲಿಂಕ್‌ ಮಾಡಲು ಅಂಚೆ ಇಲಾಖೆಯಿಂದ ಅಧಿಕಾರಿ/ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ಆಧಾರ್‌ ಸಂಖ್ಯೆಗೆ ಮೊಬೈಲ್‌ ಸಂಖ್ಯೆ ಲಿಂಕ್‌ ಮಾಡಲು ಆಯಾ ಜಿಲ್ಲೆ ಮತ್ತು ತಾಲ್ಲೂಕುವಾರು ಹಾಗೂ ಗ್ರಾಮವಾರು ಅಧಿಕಾರಿಗಳನ್ನು ನಿಯೋಜಿಸಿದೆ. ನಿಯೋಜನೆಗೊಂಡ ಗ್ರಾಮದ/ಪಟ್ಟಣದ ಅಂಚೆ ಕಚೇರಿಯ ಅಧಿಕಾರಿ/ ಸಿಬ್ಬಂದಿಯ ಹೆಸರು ಹಾಗೂ ದೂರವಾಣಿ ಸಂಖ್ಯೆಗಳನ್ನು ಹಿಂದುಳಿದ ವರ್ಗಗಳ ಆಯೋಗದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ.

ಅಗತ್ಯವಿರುವವರು ತಮ ಗ್ರಾಮದ ವ್ಯಾಪ್ತಿಯಲ್ಲಿ ನಿಯೋಜನೆಗೊಂಡ ಅಂಚೆ ಕಚೇರಿಯ ಅಧಿಕಾರಿ/ ಸಿಬ್ಬಂದಿಯನ್ನು ಸಂಪರ್ಕಿಸಿ, ಆಧಾರ್‌ ಮತ್ತು ಮೊಬೈಲ್‌ ಸಂಖ್ಯೆಗಳನ್ನು ಲಿಂಕ್‌ ಮಾಡಿಸಿಕೊಳ್ಳಬಹುದಾಗಿದೆ.

ಆರು ವರ್ಷ ಮೇಲ್ಪಟ್ಟವರಿಗೆ ಸಮೀಕ್ಷೆಯಲ್ಲಿ ಆಧಾರ್‌ ಸಂಖ್ಯೆ ದಾಖಲಿಸುವುದು ಕಡ್ಡಾಯ ಮಾಡಲಾಗಿದೆ. ಹೀಗಾಗಿ ಮೊಬೈಲ್‌ ಸಂಖ್ಯೆಯೊಂದಿಗೆ ಆಧಾರ್‌ ಸಂಖ್ಯೆ ಲಿಂಕ್‌ ಮಾಡದವರ ಅನುಕೂಲಕ್ಕಾಗಿ ಆಯೋಗ ಈ ಕ್ರಮ ಕೈಗೊಂಡಿದೆ.ಸಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಹಿನ್ನೆಲೆಯಲ್ಲಿ ಈಗಾಗಲೇ ವಿದ್ಯುತ್‌ ಮೀಟರ್‌ ರೀಡರ್‌ಗಳ ಸೇವೆ ಬಳಸಿಕೊಂಡು ಮನೆ ಗಣತಿ ಮಾಡಲಾಗುತ್ತಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ 5 ಪಾಲಿಕೆಗಳಿಗೆ ಹೊಸ ಬಜೆಟ್‌

ಬೆಂಗಳೂರು, ಸೆ.16- ಬಿಬಿಎಂಪಿ ಹೋಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಬಂದು ಐದು ನಗರ ಪಾಲಿಕೆ ರಚನೆಯಾಗುತ್ತಿದ್ದಂತೆ ಹೊಸ ಪಾಲಿಕೆಗಳಿಗೆ ಹೊಸ ಬಜೆಟ್‌ ಮಂಡನೆ ಮಾಡಲು ಜಿಬಿಎ ಅಧಿಕಾರಿಗಳು ತೀರ್ಮಾನಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯ 5 ನಗರ ಪಾಲಿಕೆಗೆ ಹೊಸ ಬಜೆಟ್‌ ಮಂಡನೆಗೆ ದಿನಗಣನೆ ಆರಂಭವಾಗಿದ್ದು, ಆಕ್ಟೋಬರ್‌ 10 ರೊಳಗೆ ಎಲ್ಲಾ ಪಾಲಿಕೆಗಳಲ್ಲೂ ಬಜೆಟ್‌ ಮಂಡನೆಯಾಗುವುದು ಖಚಿತವಾಗಿದೆ.

ಈಗಾಗಲೇ ಹೊಸ ಬಜೆಟ್‌ ಮಂಡನೆಗೆ ಪೂರ್ವ ಬಾವಿ ಸಿದ್ದತೆ ಆರಂಭವಾಗಿದ್ದು, ಆರ್ಥಿಕ ವರ್ಷದ ಕೊನೆಗೆ ಇನ್ನು ಬಾಕಿ ಇರುವ 8 ತಿಂಗಳ ಅವಧಿಗೆ ಪ್ರತ್ಯೇಕ ಬಜೆಟ್‌ ಮಂಡನೆ ಮಾಡಲಾಗುತ್ತಿದೆ
5 ನಗರ ಪಾಲಿಕೆಗಳಿಗೆ ಈಗಾಗಲೇ ಆಯುಕ್ತರುಗಳನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಆಯುಕ್ತರುಗಳು ತಮ ವ್ಯಾಪ್ತಿಯ ಪಾಲಿಕೆಯಲ್ಲಿ ಬಜೆಟ್‌ ಮಂಡನೆ ಮಾಡಲು ತಯಾರಿ ಆರಂಭಿಸಿದ್ದಾರೆ.

ತಮ್ಮ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಸಿಬ್ಬಂದಿ ವೇತನ, ಆಡಳಿತಾತ್ಮಕ ವೆಚ್ಚ, ಸಭೆ ಸಮಾರಂಭಗಳ ವೆಚ್ಚ, ಕಲ್ಯಾಣ ಕಾರ್ಯಕ್ರಮಗಳು, ಕಾಮಗಾರಿಗಳು, ಉದ್ಯಾನವನಗಳು, ಮೈದಾನ, ಶಾಲಾ.ಕಾಲೇಜು, ಅಸ್ಪತ್ರೆ, ರಸ್ತೆ ನಿರ್ವಹಣೆ, ಇಂದಿರಾ ಕ್ಯಾಂಟೀನ್‌ ಖರ್ಚು ವೆಚ್ಚ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಬಜೆಟ್‌ ಮಂಡನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಜಿಬಿಎ ಮೂಲಗಳು ತಿಳಿಸಿವೆ.

ಎಲ್ಲಾ ಅಂದುಕೊಂಡತೆ ನಡೆದರೆ, ಈ ತಿಂಗಳ ಅಂತ್ಯ ಇಲ್ಲವೇ ಆ.10ರೊಳಗೆ ಬಜೆಟ್‌ ಮಾಡುವುದು ಪಕ್ಕಾ ಎನ್ನುತ್ತಿವೆ ಮೂಲಗಳು.ನಗರದಲ್ಲಿ ನಡೆಯುತ್ತಿರುವ ಬೃಹತ್‌ ಕಾಮಗಾರಿಗಳು ಹಾಗೂ ಕಸ ವಿಲೇವಾರಿ ವಿಚಾರಗಳು ಜಿಬಿಎ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಅಂತಹ ಕಾಮಗಾರಿಗಳನ್ನು ಬಿಟ್ಟು ಉಳಿದ ಕಾಮಗಾರಿಗಳ ಅಭಿವೃದ್ಧಿ ಗೆ ಹೊಸ ಬಜೆಟ್‌ ಮಂಡನೆ ಮಾಡಲಾಗುತ್ತಿದೆಯಂತೆ.

ಈಗಾಗಲೇ ಅಯಾ ನಗರ ಪಾಲಿಕೆಗೆ ಬರುವ ಅಸ್ತಿ ತೆರಿಗೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ..ಇದರ ಅಧಾರದ ಮೇಲೆ ಬಜೆಟ್‌ ಮಂಡನೆ ಮಾಡಲು 5 ಪಾಲಿಕೆಗಳ ಆಯುಕ್ತರುಗಳು ಸಿದ್ದತೆ ನಡೆಸಿದ್ದಾರೆ.

ಈ ಹಿಂದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ತೀರ್ಮಾನಗೊಂಡ ಕಾಮಗಾರಿಗಳನ್ನು ಸಾರ್ವಜನಿಕರಿಗೆ ಉಪಯೋಗವಿದ್ದರೆ ಮಾತ್ರ ಅವುಗಳನ್ನು ಬಜೆಟ್‌ ವ್ಯಾಪ್ತಿಗೆ ತರಲಾಗುವುದು ಇಲ್ಲದಿದ್ದರೆ ಅಂತಹ ಕಾಮಗಾರಿಗಳನ್ನು ಕೈಬಿಡುವ ಸಾಧ್ಯತೆಗಳಿವೆ.ಇನ್ನೂ ಬಿಬಿಎಂಪಿ ಈ ಹಿಂದೆ ಮಾಡಿದ ಸಾಲಗಳನ್ನು ಕೂಡ ಆಯಾ ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಲಾಗಿದೆ.

ನಿರೀಕ್ಷಿತ ಬಜೆಟ್‌ ಗಾತ್ರ: ಬೆಂಗಳೂರು ಪಶ್ಚಿಮ.. 555.37 ಕೋಟಿ ರೂ, ಬೆಂಗಳೂರು ದಕ್ಷಿಣ 316.28 ಕೋಟಿ ರೂ, ಬೆಂಗಳೂರು ಉತ್ತರ 364.58 ಕೋಟಿ, ಬೆಂಗಳೂರು ಪೂರ್ವ 155.50 ಕೋಟಿ ಹಾಗೂ ಬೆಂಗಳೂರು ಕೇಂದ್ರ ಪಾಲಿಕೆಯಿಂದ 313.25 ಕೋಟಿ ರೂ. ಸೇರಿದಂತೆ ಒಟ್ಟು 1707.98 ಕೋಟಿ ರೂ. ಬಜೆಟ್‌ ಮಂಡನೆಯಾಗುವ ನಿರೀಕ್ಷೆಯಿದೆ.