Home Blog Page 114

ಮದ್ಯದ ಅಮಲಿನಲ್ಲಿ ಪತ್ನಿಯನ್ನು ಇರಿದು ಕೊಂದ ಪತಿ

ಹಾಸನ,ಸೆ.12- ಮದ್ಯದ ಅಮಲಿನಲ್ಲಿ ಪತಿ ಮನೆಗೆ ಹೋಗಿ ಪತ್ನಿಯೊಂದಿಗೆ ಜಗಳವಾಡಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ನಡೆದಿದೆ.

ರೇಖಾ (38) ಕೊಲೆಯಾದ ಮಹಿಳೆ. ಆರೋಪಿ ಪತಿ ರಘು ಘಟನೆ ನಂತರ ಪರಾರಿಯಾಗಿದ್ದಾನೆ. ರಘು ಪ್ರತಿನಿತ್ಯ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾ ಡುತ್ತಿದ್ದ.ನಿನ್ನೆ ರಾತ್ರಿ ಮನೆಯಲ್ಲಿದ್ದ ಇಬ್ಬರು ಗಂಡು ಮಕ್ಕಳು ಟ್ಯೂಷನ್‌ಗೆ ತೆರಳಿದ್ದ ವೇಳೆ, ಮದ್ಯದ ಅಮಲಿನಲ್ಲಿ ರಘು ಮನೆಗೆ ಹೋಗಿದ್ದಾನೆ.

ಆ ಸಂದರ್ಭದಲ್ಲಿ ಪತ್ನಿಯೊಂದಿಗೆ ಜಗಳವಾಡಿ, ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ಚಾಕುವಿನಿಂದ ಎದೆಗೆ ಇರಿದು ಪರಾರಿಯಾಗಿದ್ದಾನೆ.ತೀವ್ರ ರಕ್ತಸ್ರಾವದಿಂದ ರೇಖಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಹಿರೀಸಾವೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ರಘು ಪತ್ತೆಗೆ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಪತಿ ಕೊಂದು ನಾಟಕವಾಡಿದ್ದ ಪತ್ನಿ ಬಂಧನ
ಹುಣಸೂರು,ಸೆ.12- ಪತಿಗೆ ವಿಷ ಹಾಕಿ ಕೊಂದು ತಿಪ್ಪೆಗುಂಡಿಗೆ ಎಸೆದು, ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಪತ್ನಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಸಲ್ಲಾಪುರಿ ಬಂಧಿತ ಮಹಿಳೆಯಾಗಿದ್ದು,ಹುಣಸೂರು ತಾಲ್ಲೂಕು ಚಿಕ್ಕ ಹೆಜ್ಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪರಿಹಾರ ಹಣದ ಆಸೆಗೆ ಪತಿ ವೆಂಕಟಸ್ವಾಮಿನ್ನು ತಾನೇ ಕೊಂದು ಹುಲಿ ಕೊಂದಿದೆ ಎಂದು ನಾಟಕವಾಡಿದ್ದ ಸಲ್ಲಾಪುರಿ ಪಾಪ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ದಂಪತಿ ಅಡಿಕೆ ತೋಟದಲ್ಲಿ ಕೆಲಸ ಮಾಡಿಕೊಂಡು ಅಲ್ಲೇ ವಾಸ ಇದ್ದರು. ಒಂದು ವಾರದ ಹಿಂದೆ ಪತಿ ನಾಪತ್ತೆಯಾಗಿದ್ದಾರೆ ಎಂದು ಪತ್ನಿ ದೂರು ನೀಡಿದ್ದರು.

ಹುಲಿ ಆತನನ್ನು ಕೊಂದು ಎಳೆದುಕೊಂಡು ಹೋಗಿರಬಹುದೆಂದು ಅನುಮಾನ ವ್ಯಕ್ತಪಡಿಸಿದ್ದಳು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿ ಯಾವುದೇ ಪ್ರಾಣಿ ಬಂದ ಕುರುಹು ಇರಲಿಲ್ಲ. ಅನುಮಾನಗೊಂಡು ಮನೆಯಲ್ಲಿ ಹುಡುಕಾಟ ವೇಳೆ ಮನೆಯ ಹಿಂದೆ ತಿಪ್ಪೆಗುಂಡಿಯಲ್ಲಿ ವೆಂಕಟಸ್ವಾಮಿ ಶವ ಪತ್ತೆಯಾಗಿತ್ತು.

ವಿಷ ಹಾಕಿ ಪತಿ ಕೊಲೆ ಮಾಡಿದ್ದ ಪತ್ನಿ ನಂತರ ತಿಪ್ಪೆಗುಂಡಿಗೆ ಎಸೆದಿದ್ದಳು ನಂತರ ಪರಿಹಾರ ಸಿಗುತ್ತದೆ, ಐಷಾರಾಮಿ ಜೀವನ ನಡೆಸಬಹುದು ಎಂಬ ಆಕೆಯ ಆಸೆ ಕೊನೆಗೆ ಅವಳು ಜೈಲು ಕಂಬಿ ಎಣಿಸುವ ಸ್ಥಿತಿಗೆ ತಲುಪಿದೆ.ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬುರುಡೆ ಪ್ರಕರಣ : ಎಸ್‌‍ಐಟಿ ಕಚೇರಿಯಲ್ಲಿ ಮತ್ತೆ ಮೂವರ ವಿಚಾರಣೆ

ಬೆಂಗಳೂರು,ಸೆ.12– ಬುರುಡೆ ಪ್ರಕರಣದಲ್ಲಿ ಇಂದು ಮತ್ತೆ ಮೂವರು ಬೆಳ್ತಂಗಡಿಯ ಎಸ್‌‍ಐಟಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು.ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಗಿರೀಶ್‌ ಮಟ್ಟಣ್ಣನವರ್‌, ಜಯಂತ್‌ ಟಿ. ಹಾಗೂ ಯೂಟ್ಯೂಬರ್‌ ಪ್ರದೀಪ್‌ಗೆ ಸೂಚಿಸಲಾಗಿತ್ತು.

ಹಾಗಾಗಿ ಇಂದು ಈ ಮೂವರು ಬೆಳ್ತಂಗಡಿ ಎಸ್‌‍ಐಟಿ ಕಚೇರಿಗೆ ಹಾಜರಾಗಿದ್ದಾರೆ.ಬುರುಡೆ ಪ್ರಕರಣದ ದೂರುದಾರ ಚಿನ್ನಯ್ಯ ಬಂಧನವಾಗುತ್ತಿದ್ದಂತೆ ಆತ ವಿಚಾರಣೆ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಈ ಮೂವರನ್ನು ಈಗಾಗಲೇ ಎರಡು-ಮೂರು ಬಾರಿ ವಿಚಾರಣೆಗೆ ಒಳಪಡಿಸಿ ಎಸ್‌‍ಐಟಿ ಅಧಿಕಾರಿಗಳು ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದ್ದಾರೆ. ಇಂದು ಮತ್ತೆ ಅಧಿಕಾರಿಗಳು ಈ ಮೂವರನ್ನು ವಿಚಾರಣೆಗೆ ಒಳಪಡಿಸಿ ತನಿಖೆಯ ಭಾಗವಾಗಿ ಮತ್ತಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

ಬೆಂಗಳೂರು : ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಕಾರು

ಬೆಂಗಳೂರು, ಸೆ.12– ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಹತ್ತಿಕೊಂಡಿದ್ದು ಸಾಫ್ಟ್ ವೇರ್‌ ಎಂಜಿನಿಯರ್‌ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಚಿನ್‌ ಎಂಬುವವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿರುವ ಸಬ್‌ರಿಜಿಸ್ಟ್ರರ್‌ ಕಚೇರಿಗೆ ಆಸ್ತಿ ನೋಂದಣಿಗಾಗಿ ಬೆಳಗ್ಗೆ ತೆರಳುತ್ತಿದ್ದರು. ಸುಮಾರು 11.30ರ ಸಂದರ್ಭದಲ್ಲಿ ಸಿಎಂ ಮನೆ ಸಮೀಪದ ಅರಮನೆ ರಸ್ತೆಯ ವಿಲ್ಸನ್‌ ಮ್ಯಾನರ್‌ ಸೇತುವೆಯ ಸರ್ವೀಸ್‌‍ ರಸ್ತೆಯಲ್ಲಿ ಕಾರಿನ ಮುಂಭಾಗದ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಚಾಲಕ ಅಪಾಯ ಅರಿತು ಕಾರನ್ನು ರಸ್ತೆ ಬದಿ ನಿಲ್ಲಿಸಿದ್ದಾರೆ. ಸಚಿನ್‌ ಕೂಡ ಕಾರಿನಿಂದ ಹೊರಗೆ ಇಳಿದು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಚಾಲಕ ಕಾರಿನ ಮುಂದಿನ ಬಾನೆಟ್‌ ತೆಗೆಯುತ್ತಿದ್ದಂತೆಯೇ ಬೆಂಕಿ ಆವರಿಸಿದ್ದರಿಂದ ಅವರು ಹಿಂದೆ ಸರಿದಿದ್ದಾರೆ. ಸಚಿನ್‌ ಅವರು ಎಚ್ಚೆತ್ತುಕೊಂಡು ತಮ ಬಳಿ ಇದ್ದ ದಾಖಲೆ ಮತ್ತು ಕೆಲ ವಸ್ತುಗಳನ್ನು ಕಾರಿನಿಂದ ಹೊರಗೆ ತೆಗೆದುಕೊಂಡಿದ್ದಾರೆ.

ನೋಡ ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟೋತ್ತಿಗೆ ಕಾರು ಶೇ. 75ರಷ್ಟು ಭಾಗ ಸುಟ್ಟು ಕರಕಲಾಗಿದೆ. ಘಟನೆಯಿಂದ ಸಾಫ್ಟ್ ವೇರ್‌ ಎಂಜಿನಿಯರ್‌ ದಿಗ್ಭ್ರಮೆ ಗೊಂಡಿದ್ದಾರೆ. ಸ್ಥಳೀಯರು ರಸ್ತೆ ಮಧ್ಯೆಯೇ ಕಾರು ಹೊತ್ತು ಉರಿಯುತ್ತಿದ್ದಿದ್ದನ್ನು ನೋಡಿ ಗಾಬರಿಗೊಂಡಿದ್ದಾರೆ. ಹೈಗ್ರೌಂಡ್ಸ್ ಠಾಣೆ ಪೊಲೀಸರು ಸುಟ್ಟು ಹೋದ ಕಾರನ್ನು ಅಲ್ಲಿಂದ ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕ್ರಿಮಿನಲ್‌ಗಳ ಜೊತೆ ಗುರುತಿಸಿಕೊಂಡರೆ ಕಠಿಣ ಕ್ರಮ : ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಕೆ

ಬೆಂಗಳೂರು,ಸೆ.12- ಕ್ರಿಮಿನಲ್‌ಗಳ ಜೊತೆ ಗುರುತಿಸಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಎಚ್ಚರಿಸಿದ್ದಾರೆ.

ಥಣಿಸಂದ್ರದ ಸಿಎಆರ್‌ ಕವಾಯತು ಮೈದಾನದಲ್ಲಿಂದು ಹಮಿಕೊಂಡಿದ್ದ ಮಾಸಿಕ ಪರೇಡ್‌ನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಕ್ರಿಮಿನಲ್‌ಗಳ ಜೊತೆ ಸೇರಿಕೊಂಡರೆ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತದೆ, ಯಾವ ಕಾರಣಕ್ಕೂ ಅಂತಹ ಸಿಬ್ಬಂದಿಯನ್ನು ಬಿಡುವು ದಿಲ್ಲ, ಪೊಲೀಸ್‌‍ ಇಲಾಖೆಗೆ ಸೇರಿದ್ದೀರಿ, ಒಂದು ಟೀಂ ಆಗಿ ಉತ್ತಮವಾಗಿ ಕೆಲಸ ಮಾಡಬೇಕು ಎಂದು ಅವರು ಎಚ್ಚರಿಸಿದರು.

ಬಂದೋಬಸ್ತ್‌ ವೇಳೆ ಮೊದಲು ನಿಮನ್ನು ನೀವು ರಕ್ಷಣೆ ಮಾಡಿಕೊಂಡು ಹೆಲೆಟ್‌, ಲಾಠಿ ಹಿಡಿದು ಕರ್ತವ್ಯದಲ್ಲಿ ತೊಡಗಿಕೊಂಡರೆ ಸಾರ್ವಜನಿಕರನ್ನು ರಕ್ಷಣೆ ಮಾಡಬಹುದು ಎಂದು ಸಿಬ್ಬಂದಿಗಳಿಗೆ ಸಲಹೆ ನೀಡಿದರು.

ಇತ್ತೀಚೆಗೆ ಬಂದೋಬಸ್ತ್‌ನಲ್ಲಿ ಯಾರೂ ಕೂಡ ಹೆಲೆಟ್‌ ಹಾಗೂ ಲಾಠಿ ತೆಗೆದುಕೊಂಡು ಹೋಗದಿರುವುದನ್ನು ಗಮನಿಸಿದ್ದೇನೆ. ಕಾಟಾಚಾರಕ್ಕೆ ನಿಂತರೆ ಆಗುವುದಿಲ್ಲ. ಪ್ರತಿ ಹಂತದಲ್ಲೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ಅತಿಮುಖ್ಯ. ಅಧಿಕಾರಿಗಳು ಬಂದೋಬಸ್ತ್‌ ಕರ್ತವ್ಯಕ್ಕೆ ಹೋಗುವ ಸಿಬ್ಬಂದಿಯನ್ನು ತಪಾಸಣೆ ಮಾಡಿ ಕಳುಹಿಸಬೇಕು ಎಂದರು.

ನೀವು ಕರ್ತವ್ಯಕ್ಕೆ ತೆರಳುವಾಗ ಸಮವಸ್ತ್ರ ಇದ್ದರೆ ಸಾಲುವುದಿಲ್ಲ, ಬಂದೋಬಸ್ತ್‌ ನೋಡಿಕೊಳ್ಳುವವರು ಆಯುಧಗಳ ಜೊತೆಗೆ ತೆರಳಬೇಕು. ನಗರಕ್ಕೆ ಕೆಎಸ್‌‍ಆರ್‌ಪಿ ತುಕಡಿ ಬಂದಾಗಲೂ ಸಹ ಕಡ್ಡಾಯವಾಗಿ ಲಾಠಿ, ಹೆಲೆಟ್‌ ಜೊತೆಯಲ್ಲಿರಬೇಕು ಎಂದು ಅವರು ಹೇಳಿದರು.

ಸರ್ಕಾರದ ಗೃಹ ಇಲಾಖೆಯಿಂದ ಪೊಲೀಸ್‌‍ ಇಲಾಖೆಗೆ ಸೌಲಭ್ಯಗಳು ಬರುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅದೇ ರೀತಿ ಸಮಾಜಕ್ಕೆ ಒಳ್ಳೆಯ ರೀತಿ ಸೇವೆ ಮಾಡಲು ನೀವು ಕಾರಣರಾಗಬೇಕು ಎಂದು ಅವರು ತಿಳಿಸಿದರು.

ವೃತ್ತಿ ಆಧಾರಿತ ಹಾಗೂ ವೈಯಕ್ತಿಕ ಜೀವನ ಎರಡನ್ನೂ ನಿಭಾಯಿಸಬೇಕು. ಹಬ್ಬಗಳನ್ನು ಕುಟುಂಬದೊಂದಿಗೆ ಆಚರಿಸಿ, ಕರ್ತವ್ಯವಿದ್ದಾಗ ನಿಷ್ಠೆಯಿಂದ ಸೇವೆ ಸಲ್ಲಿಸಿ ಬೆಂಗಳೂರು ನಗರಕ್ಕೆ ಒಳ್ಳೆಯ ಹೆಸರು ಬರಲು ಕಾರಣರಾಗಬೇಕು ಎಂದು ಸಿಬ್ಬಂದಿಗಳಿಗೆ ಕರೆ ನೀಡಿದರು.

ಪೊಲೀಸ್‌‍ ಸಿಬ್ಬಂದಿಗಳಿಗಾಗಿ ಆರೋಗ್ಯ ತಪಾಸಣೆಗಾಗಿ ಖುಷಿ ಅಭಿಯಾನ ಆರಂಭವಾಗಿದೆ. ಎಲ್ಲಾ ಸಿಬ್ಬಂದಿಯೂ ತಪಾಸಣೆ ಮಾಡಿಸಿಕೊಂಡು ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ವಿಯಾದರೆ ಮೂರು ತಿಂಗಳಿಗೊಮೆ ಈ ಅಭಿಯಾನವನ್ನು ಮಾಡಲಾಗುವುದು ಎಂದರು.

ಪ್ರತಿ ಶುಕ್ರವಾರ ಕಡ್ಡಾಯವಾಗಿ ಪೆರೇಡ್‌ನಲ್ಲಿ ಪಾಲ್ಗೊಳ್ಳಬೇಕು. ಪರೇಡ್‌ ಮಾಡುವುದರಿಂದ ಶಿಸ್ತು ಬರಲಿದೆ. ಪರೇಡ್‌ ಮೈದಾನಕ್ಕೆ ಬಂದ ತಕ್ಷಣ ತಾವು ತರಬೇತಿ ಸಮಯದಲ್ಲಿ ಕಲಿಸಿದ ಪಾಠವನ್ನು ನೆನಪಿಸಿಕೊಳ್ಳಬೇಕು. ಕಾನ್ಸ್ ಸ್ಟೇಬಲ್‌ ಮಟ್ಟದಿಂದ ಅಧಿಕಾರಿ ಮಟ್ಟದವರೆಗೂ ಪರೇಡ್‌ನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರತಿ ಮಂಗಳವಾರ ಮತ್ತು ಶುಕ್ರವಾರ ಇಲಾಖೆಯ ನಿಯಮಾನುಸಾರ ಎಷ್ಟು ಸಿಬ್ಬಂದಿ ಇರುತ್ತಾರೊ, ಅಷ್ಟು ಮಂದಿಯೂ ವೆಪನ್‌ ಡ್ರಿಲ್‌, ಲಾಠಿ ಡ್ರಿಲ್‌ ಮಾಡಬೇಕು ಎಂದು ಅವರು ಸೂಚಿಸಿದರು. ಇದಕ್ಕೂ ಮೊದಲು ಉತ್ತಮವಾಗಿ ಪರೇಡ್‌ ಮಾಡಿದ ಕಾನ್‌್ಸಸೇಬಲ್‌ ಹಾಗೂ ಅಧಿಕಾರಿ ವರ್ಗವನ್ನು ಆಯುಕ್ತರು ಶ್ಲಾಘಿಸಿದರು.

ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ : ಎಸ್‌‍.ನಾರಾಯನ್

ಬೆಂಗಳೂರು,ಸೆ.12– ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ, ಅನ್ಯಾಯದ ವಿರುದ್ಧ ನಾನು ಕಾನೂನು ಹೋರಾಟ ನಡೆಸುತ್ತೇನೆ, ಧರ್ಮೋ ರಕ್ಷತಿ ರಕ್ಷಿತಃ ಎಂದು ಖ್ಯಾತ ನಟ, ನಿರ್ದೇಶಕರಾದ ಎಸ್‌‍.ನಾರಾಯಣ ಹೇಳಿದ್ದಾರೆ.

ಈ ಸಂಜೆಯೊಂದಿಗೆ ಮಾತನಾಡಿದ ಅವರು, ನನ್ನ ಹಾಗೂ ನನ್ನ ಕುಟುಂಬದ ಮೇಲೆ ಸೊಸೆ ಮಾಡಿರುವ ಆರೋಪಗಳು ಶುದ್ಧ ಸುಳ್ಳು. ಆಕೆ ಪೊಲೀಸ್‌‍ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾನೂನು ಪ್ರಕಾರ ಪ್ರಕ್ರಿಯೆಗಳು ನಡೆಯಲಿ. ನಾನು ಅದನ್ನು ಕಾನೂನಿನ ಮೂಲಕವೇ ಎದುರಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ಇಂದಿನ ಸಮಾಜದಲ್ಲಿ ಮೌಲ್ಯಗಳು ಹಾಳಾಗುತ್ತಿವೆ. ಸಂಸ್ಕಾರ ಮರೆಯಾಗುತ್ತಿದೆ. ಇದು ಸಾಕಷ್ಟು ನೋವು ತರುತ್ತಿದೆ. ಇಂತಹ ಘಟನೆಗಳಿಗೆ ಪ್ರತಿಷ್ಠಿತ ವ್ಯಕ್ತಿಗಳನ್ನು ಟಾರ್ಗೆಟ್‌ ಮಾಡುವ ಪ್ರವೃತ್ತಿ ಹೆಚ್ಚುತ್ತಿರುವುದು ಆತಂಕಕಾರಿ ಎಂದು ಹೇಳಿದರು.

ಪಾಶ್ಚಿಮಾತ್ಯ ಸಂಸ್ಕೃತಿಗೆಮಾರು ಹೋಗಿ ಈಗ ಕೆಲವರು ನಮತನವನ್ನೇ ಮರೆಯುತ್ತಿದ್ದಾರೆ. ಕಾಲುಂಗುರ ತೊಡುವುದು, ಹಣೆಗೆ ಸಿಂಧೂರ, ಕೊರಳಿಗೆ ಮಾಂಗಲ್ಯ ಸರ ತೊಡುವುದನ್ನೂ ಸಹ ಕೆಲವರು ಬಿಟ್ಟಿದ್ದಾರೆ. ಇಂತಹ ಪರಿಸ್ಥಿತಿ ಮುಂದೆ ಯಾವ ಹಂತಕ್ಕೆ ತಲುಪುತ್ತದೆ ಎಂಬುದೇ ನನಗೆ ಕಳವಳ ಮೂಡಿಸಿದೆ.

ನಮ ಕುಟುಂಬದಲ್ಲಿ ಯಾರೂ ಕೂಡ ಆಕೆಗೆ ಯಾವುದೇ ಹಿಂಸೆ ನೀಡಿಲ್ಲ. ನಮ ಮನೆಯ ಹೆಣ್ಣುಮಗಳು ಎಂಬಂತೆ ನೋಡಿಕೊಂಡಿದ್ದೆವು. ಆದರೆ ಸುಮಾರು ಒಂದೂವರೆ ವರ್ಷದ ನಂತರ ಈಗ ನಮ ಕುಟುಂಬದ ಮೇಲೆ ದೂರು ನೀಡಿರುವುದರ ಹಿಂದೆ ಯಾವುದೋ ದುರುದ್ದೇಶವಿದ್ದಂತೆ ಕಾಣುತ್ತಿದೆ. ಕಾನೂನಿನ ಮೇಲೆ ನನಗೆ ನಂಬಿಕೆಯಿದ್ದು, ಸತ್ಯ ಹೊರಬರಲಿದೆ ಎಂದು ಹೇಳಿದರು. ಆದರೆ ಇಂತಹ ಘಟನೆಗಳಿಂದ ಕುಟುಂಬದಲ್ಲಿ ಮನಃಶಾಂತಿ ಹಾಳಾಗುತ್ತದೆ. ಇದರ ನೋವು ಏನು ಎಂಬುದು ಅನುಭವಿಸಿದವರಿಗೇ ತಿಳಿದಿರುತ್ತದೆ ಎಂದು ಭಾವುಕರಾದರು.

ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು,ಸೆ.12- ಕೋಟ್ಯಂತರ ರೂ. ವಂಚನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡು ಮೂಲದ ಪೊತೀಸ್‌‍ ಬಟ್ಟೆ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ)ಯ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ.

ಚೆನ್ನೈನಿಂದ ಆಗಮಿಸಿದ್ದ 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ಬೆಳಗ್ಗೆಯೇ ನಗರದ ಕೆ.ಜಿ.ರಸ್ತೆಯಲ್ಲಿರುವ ಪೊತೀಸ್‌‍ ಸೇರಿದಂತೆ ಹಲವು ಬಟ್ಟೆ ಮಳಿಗೆಗಳ ಮೇಲೆ ದಾಳಿ ನಡೆಸಿ ತೆರಿಗೆ ವಂಚನೆ ಪ್ರಕರಣ ಸಂಬಂಧ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕೆಲವು ಬಟ್ಟೆ ಮಳಿಗೆಗಳು ಇನ್ನು ಬಾಗಿಲು ತೆರೆದಿರಲಿಲ್ಲ. ಐಟಿ ಅಧಿಕಾರಿಗಳು ದೂರವಾಣಿ ಮೂಲಕ ಮಾಹಿತಿ ನೀಡಿ ಬಲವಂತವಾಗಿ ಬೀಗ ತೆರೆಸಿ ಪರಿಶೀಲನೆ ನಡೆಸಿದ್ದಾರೆ. ಮೈಸೂರುರಸ್ತೆಯ ಟೆಂಬರ್‌ ಲೇಔಟ್‌, ಗಾಂಧಿನಗರದ ಅತೀ ದೊಡ್ಡ ಶೋ ರೂಮ್‌ ಮೇಲೆ ಐಟಿ ದಾಳಿಯಾಗಿದೆ. 30ಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರತ್ಯೇಕ ತಂಡವಾಗಿ ಪೊತೀಸ್‌‍ ಮಳಿಗೆ ಮೇಲೆ ದಾಳಿ ನಡೆಸಲಾಗಿದೆ. ಆದಾಯ ತೆರಿಗೆ ವಂಚನೆ ಹಿನ್ನಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ.

ಚೆನ್ನೈಯಿಂದ ಬೆಂಗಳೂರಿಗೆ ಬಂದ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ಟೆಂಬರ್‌ ಲೇಔಟ್‌ನಲ್ಲಿರುವ ಪೊತೀಸ್‌‍ ಮಳಿಗೆ ಮೇಲೆ 25ಕ್ಕೂ ಹೆಚ್ಚು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ನಗದು ವಹಿವಾಟು, ಆನ್ಲೈನ್‌ ವಹಿವಾಟು, ಮಳಿಗೆಯಲ್ಲಿರುವ ಬಟ್ಟೆಗಳು, ಮೌಲ್ಯ ಸೇರಿದಂತೆ ಮಳಿಗೆಯಲ್ಲಿನ ಎಲ್ಲಾ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಈ ಪೊತೀಸ್‌‍ ಮಳಿಗೆಗಳು ಚೆನ್ನೈ ಉದ್ಯಮಿಗೆ ಸೇರಿದ ಮಳಿಗೆಗಳಾಗಿವೆ. ರೇಷೆ ಸೀರೆಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದರು. ಆದರೆ ಇಂದು ಎಲ್ಲಾ ರೀತಿಯ ಉಡುಪುಗಳನ್ನು ಮಾರಾಟ ಮಾಡಲಾಗುತ್ತದೆ.

ಚೆನ್ನೈನಲ್ಲಿರುವ ಪ್ರಮುಖ ಅಂಗಡಿಯನ್ನು ಪೊತೀಸ್‌‍ ಪ್ಯಾಲೇಸ್‌‍ ಎಂದು ಕರೆಯಲಾಗುತ್ತದೆ. ಕೆಲವೇ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆದಿದ್ದ ಪೊತೀಸ್‌‍ ಬಟ್ಟೆ ಮಳಿಗೆಯ ಶೋ ರೂಮ್‌ಗಳು ಬೆಂಗಳೂರು, ತಮಿಳುನಾಡು ಸೇರಿದಂತೆ ಹಲವು ಕಡೆ ಇವೆ.

ದೆಹಲಿ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ

ನವದೆಹಲಿ,ಸೆ.12- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿರುವ ಹೈಕೋರ್ಟ್‌ಗೆ ಬಾಂಬ್‌ ಬೆದರಿಕೆ ಪತ್ರ ಬಂದಿದ್ದು, ಆವರಣದಲ್ಲಿರುವ ಎಲ್ಲರನ್ನು ಸ್ಪೋಟಿಸಿ ಕಗ್ಗೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಪೊಲೀಸರು ಹೈಕೋರ್ಟ್‌ನಲ್ಲಿದ್ದ ನ್ಯಾಯಾಧೀಶರು, ವಕೀಲರು, ದೂರುದಾರರು, ಕಕ್ಷಿದಾರರು, ಸಾರ್ವಜನಿಕರು, ಸಿಬ್ಬಂದಿ ಸೇರಿದಂತೆ ಎಲ್ಲರನ್ನು ಹೊರ ಕಳುಹಿಸಿದ್ದಾರೆ.

ನ್ಯಾಯಾಧೀಶರ ಕೊಠಡಿಯಲ್ಲಿ ಮತ್ತು ಆವರಣದ ಇತರ ಸ್ಥಳಗಳಲ್ಲಿ ಮೂರು ಸ್ಫೋಟಕಗಳನ್ನು ಇಡಲಾಗಿದೆ ಎಂದು ಬೆದರಿಕೆ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಮಧ್ಯಾಹ್ನ 2 ಗಂಟೆಯೊಳಗೆ ಸ್ಥಳಾಂತರ ಪೂರ್ಣಗೊಳಿಸಬೇಕು ಎಂದು ಪತ್ರದಲ್ಲಿ ಎಚ್ಚರಿಸಲಾಗಿದೆ.

ನ್ಯಾಯಾಧೀಶರ ಕೊಠಡಿ ಮಧ್ಯಾಹ್ನ ಇಸ್ಲಾಮಿಕ್‌ ಪ್ರಾರ್ಥನೆಯ ನಂತರ ಸ್ವಲ್ಪ ಸಮಯದ ನಂತರ ಸ್ಫೋಟಗೊಳ್ಳುತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಪತ್ರವು ಪಾಕಿಸ್ತಾನದ ಐಎಸ್‌‍ಐ ಕೋಶಗಳೊಂದಿಗಿನ ಸಂಪರ್ಕಗಳನ್ನು ಉಲ್ಲೇಖಿಸಿದೆ. ಇಮೇಲ್‌ ಮೂಲಕವೂ ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ನ್ಯಾಯಾಲಯದ ಬಗ್ಗೆ ಉಲ್ಲೇಖಿಸಲಾಗಿದೆ. ಆದರೆ ನಿಖರವಾದ ಸ್ಥಳವನ್ನು ನಿರ್ದಿಷ್ಟಪಡಿಸಲಾಗಿಲ್ಲ.

ಬಾಂಬ್‌ ಪತ್ತೆ ಮತ್ತು ವಿಲೇವಾರಿ ದಳವನ್ನು ತಕ್ಷಣವೇ ನಿಯೋಜಿಸಲಾಯಿತು ಮತ್ತು ಸಂಪೂರ್ಣ ಶೋಧಕ್ಕಾಗಿ ಪ್ರದೇಶವನ್ನು ಸುತ್ತುವರಿಯಲಾಯಿತು.ಇತ್ತೀಚಿನ ತಿಂಗಳುಗಳಲ್ಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ವಿವಿಧ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ಇದೇ ರೀತಿಯ ವಂಚನೆ ಬೆದರಿಕೆಗಳು ಬಂದಿರುವ ನಡುವೆಯೇ ಈ ಘಟನೆ ನಡೆದಿದೆ.

3 ತಿಂಗಳಲ್ಲಿ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ : ಯತ್ನಾಳ್‌ ಭವಿಷ್ಯ

ಮೈಸೂರು, ಸೆ.12- ಹಿಂದೂಗಳ ಧರ್ಮಾಚರಣೆಗೆ ಅಡ್ಡಿ ಪಡಿಸುತ್ತಿರುವ ಸಿದ್ದರಾಮಯ್ಯ ಅವರ ಸರ್ಕಾರ ಮುಂದಿನ 3 ತಿಂಗಳಲ್ಲೇ ಪತನವಾಗಲಿದೆ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಭವಿಷ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣಪತಿ ವಿಸರ್ಜನೆ ಹಾಗೂ ಇತರೆ ಸಂದರ್ಭಗಳಲ್ಲಿ ಮಸೀದಿಗಳಿಂದ ಕಲ್ಲು ತೂರಾಟ ನಡೆಸಿರುವುದು, ಹಲವು ಕಡೆ ಪಾಕಿಸ್ತಾನದ ಧ್ವಜರೋಹಣ, ಪಾಕಿಸ್ತಾನದ ಪರ ಘೋಷಣೆ ಸೇರಿದಂತೆ ಅನೇಕ ದೇಶ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ. ಹಿಂದೂ ವಿರೋಧಿ ಧೋರಣೆಯನ್ನು ಬದಲಾಯಿಸಿಕೊಳ್ಳದಿದ್ದರೆ 2028ಕ್ಕೂ ಮುಂಚೆಯೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶೋತ್ಸವದ ಮೇಲೆ ಕಲ್ಲು ತೂರಿದ ಪ್ರಕರಣದ ವಿರುದ್ಧ ಪ್ರತಿಭಟನೆಗಳಾದಾಗ ಬಿಜೆಪಿ ನಾಯಕರ ಎದುರು ಕಾರ್ಯಕರ್ತರು ಯತ್ನಾಳ್‌ ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದರು. ಅದರಂತೆ ನಾನು ಅಲ್ಲಿಗೆ ಹೋಗಿದ್ದೆ. ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ತೊಲಗಬೇಕು, ಹೊಂದಾಣಿಕೆಯ ರಾಜಕಾರಣ ಕೊನೆಯಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು.

ಗಣೇಶ ವಿಸರ್ಜನಾ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಲು ಆಶ್ರಯ ನೀಡಿರುವ ಅಕ್ರಮ ಮಸೀದಿಗಳನ್ನು ನೆಲ ಸಮಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುತ್ತೇನೆ. ಒಂದು ವೇಳೆ ಕ್ರಮ ತೆಗೆದುಕೊಳ್ಳದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಇದೇ ಧೋರಣೆ ಮುಂದುವರೆದರೆ, ರಾಜ್ಯದಲ್ಲಿ ನೇಪಾಳದ ಮಾದರಿಯಲ್ಲಿ ಕ್ರಾಂತಿಯಾಗುತ್ತದೆ. ರಾಜ್ಯದಲ್ಲಿ ಮಸೀದಿಗಳನ್ನು ಪರಿಶೀಲನೆಗೊಳಪಡಿಸಬೇಕು. ಕಲ್ಲು ತೂರಾಟಕ್ಕೆ ಮುಂಚಿತವಾಗಿಯೇ ಮಸೀದಿಗಳಲ್ಲಿ ಕಲ್ಲುಗಳನ್ನು ಸಂಗ್ರಹಿಸಲಾಗಿದೆ. ಇದಕ್ಕೆ ಅವಕಾಶ ನೀಡಿದ ಬಗ್ಗೆ ತನಿಖೆಯಾಗಬೇಕು ಹಾಗೂ ಮಸೀದಿಗಳನ್ನು ತಪಾಸಣೆಗೊಳಪಡಿಸಬೇಕು ಎಂದರು.

ಕಾಂಗ್ರೆಸ್‌‍ ಸರ್ಕಾರ ತಮಗೆ ಮುಸ್ಲಿಮರು ಮಾತ್ರ ಮತ ಹಾಕಿದ್ದಾರೆ ಎಂಬಂತೆ ವರ್ತಿಸುತ್ತಿದೆ. ಹಿಂದೂ ವಿರೋಧಿ ನಿಲುವುಗಳನ್ನು ಪಾಲಿಸುತ್ತಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ರನ್ನು ಅಹ್ವಾನಿಸುವ ಸಿದ್ದರಾಮಯ್ಯ ಅವರಿಗೆ ಚಾಮುಂಡಿ ದೇವಿಯ ಶಾಪ ತಟ್ಟಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಸಾವಿರಾರು ಕೋಟಿ ಲೂಟಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿಗಮಗಳ ಹಣವನ್ನು ದೋಚಲಾಗಿದೆ. ಭ್ರಷ್ಟ ಸರ್ಕಾರದ ಜೊತೆ ಬಿಜೆಪಿ ನಾಯಕರು ಕೈ ಜೋಡಿಸಿದ್ದಾರೆ. ಯಡಿಯೂರಪ್ಪ ಅವರ ವಿರುದ್ಧವೂ ಸಾಕಷ್ಟು ಭ್ರಷ್ಟಚಾರ ಪ್ರಕರಣಗಳಿವೆ. ಹೀಗಾಗಿ ಭ್ರಷ್ಟರೆಲ್ಲಾ ಸೇರಿ ಲೂಟಿ ಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ನಮ ತಂಡದ ಸರ್ಕಾರ ರಚನೆಯಾಗಲಿದೆ. ಭ್ರಷ್ಟಾಚಾರ ರಹಿತವಾದ ಸರ್ಕಾರ ನೀಡುತ್ತೇವೆ. ಹಿಂದುತ್ವದ ರಕ್ಷಣೆ ಹಾಗೂ ಅಭಿವೃದ್ಧಿ ಪರ ಆಡಳಿತ ನಡೆಸುತ್ತೇವೆ ಎಂದು ಭರವಸೆ ನೀಡಿದರು.

ಪೂಜ್ಯ ತಂದೆ ಮತ್ತು ಮಗ ಹೊರತು ಪಡಿಸಿ ಉಳಿದ ಎಲ್ಲಾ ಬಿಜೆಪಿ ನಾಯಕರೂ ನನ್ನ ಸಂಪರ್ಕದಲ್ಲಿದ್ದಾರೆ. ಯಡಿಯೂರಪ್ಪ ಅವರು ಅಮಿತ್‌ ಶಾ ಅವರ ಮುಂದೆ ಕುಳಿತು ಯತ್ನಾಳರನ್ನು ಉಚ್ಚಾಟನೆ ಮಾಡದೇ ಇದ್ದರೆ ನಾನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಬ್ಲಾಕ್‌ಮೇಲ್‌ ಮಾಡಿದ್ದರು. ಅದಕ್ಕಾಗಿ ನನ್ನನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಈ ಕ್ರಮ ತೆಗೆದುಕೊಂಡಿದ್ದು ತಪ್ಪಾಗಿದೆ ಎಂದು ಖುದ್ದು ಅಮಿತ್‌ ಶಾ ಅವರೇ ಪಶ್ಚಾತ್ತಾಪದ ಮಾತುಗಳನ್ನಾಡಿದ್ದಾರೆ ಎಂದು ತಿಳಿದು ಬಂದಿದೆ ಎಂದರು.

ಪ್ರಧಾನ ಮಂತ್ರಿಯವರು ಭ್ರಷ್ಟಚಾರ ರಹಿತ ಹಾಗೂ ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಾರೆ. ರಾಜ್ಯ ಬಿಜೆಪಿಯಲ್ಲಿ ಈ ಎರಡೂ ಇವೆ. ಮುಂದಿನ ದಿನಗಳಲ್ಲಿ ಇದು ಸರಿ ಹೋಗದೇ ಇದ್ದರೆ 2028ರ ವೇಳೆಗೆ ಹೊಸ ಪಕ್ಷ ಸ್ಥಾಪನೆ ಮಾಡಿ, ಚುನಾವಣೆ ಎದುರಿಸುತ್ತೇವೆ. ನಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಧರ್ಮಾಂಧರಿಂದ ಕಲ್ಲು ತೂರಾಟ ಪ್ರಕರಣ : ಮದ್ದೂರು ಠಾಣೆ ಇನ್ಸ್ ಪೆಕ್ಟರ್‌ ಅಮಾನತು

ಬೆಂಗಳೂರು,ಸೆ.12– ಕರ್ತವ್ಯ ಲೋಪದ ಅರೋಪದ ಮೇಲೆ ಮದ್ದೂರು ಪೊಲೀಸ್‌‍ ಠಾಣೆಯ ಇನ್‌್ಸಪೆಕ್ಟರ್‌ ಶಿವಕುಮಾರ್‌ರವರನ್ನು ಅಮಾನತು ಮಾಡಲಾಗಿದೆ. ಭಾನುವಾರ ರಾತ್ರಿ ಮದ್ದೂರು ನಗರದ ಚೆನ್ನೇಗೌಡನ ದೊಡ್ಡಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ರಾಮ್‌ ರಹೀಂ ನಗರದ ಮಸೀದಿ ಮುಂದೆ ಸಾಗುತ್ತಿದ್ದಾಗ ಲೈಟ್‌ ಆಫ್‌ ಮಾಡಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸಂಘರ್ಷ ಉಂಟಾಗಿದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮಾರನೇ ದಿನ ಅಂದಿನ ಘಟನೆಯನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರಿಂದ ಸಾವಿರಾರು ಮಂದಿ ಜಮಾಯಿಸಿದ್ದರು.

ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಗುಂಪನ್ನು ಚದುರಿಸಲು ಲಾಠಿಪ್ರಹಾರ ನಡೆಸಿದರು. ಆ ವೇಳೆ ಆರೇಳು ಮಂದಿ ಗಾಯಗೊಂಡರು.ಮಂಗಳವಾರ ಬಿಜೆಪಿ ಹಾಗೂ ಜೆಡಿಎಸ್‌‍ ನಾಯಕರು ಹಾಗೂ ಸಹಸ್ರಾರು ಮಂದಿ ಪಾಲ್ಗೊಂಡು ಸಾಮೂಹಿಕ ಗಣೇಶ ಮೂರ್ತಿಗಳನ್ನು ವಿಸರ್ಜಿಸಿದ್ದಾರೆ.

ಮದ್ದೂರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಇದೀಗ ಇನ್‌್ಸಪೆಕ್ಟರ್‌ರವರನ್ನು ಅಮಾನತು ಮಾಡಿದೆ.ಈ ನಡುವೆಯೇ ಮಂಡ್ಯ ಜಿಲ್ಲಾ ಅಡಿಷನಲ್‌ ಎಸ್ಪಿ ತಿಮಯ್ಯ ಅವರನ್ನೂ ಸಹ ಸರ್ಕಾರ ವರ್ಗಾವಣೆ ಮಾಡಿದೆ.

420 ಕೋಟಿ ರೂ.ವೆಚ್ಚದಲ್ಲಿ ಸೆ.22ರಿಂದ ಅ.7ರವರೆಗೆ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಬೆಂಗಳೂರು, ಸೆ.12- ಬಹು ಚರ್ಚಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇದೇ ತಿಂಗಳ 22ರಿಂದ ಅ.7ರವರೆಗೆ ಕೈಗೊಳ್ಳಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಸಮೀಕ್ಷೆಯಲ್ಲಿ ಭಾಗವಹಿಸಿ ಮಾಹಿತಿ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮನವಿ ಮಾಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ಎಂದೇ ಪರಿಗಣಿಸಲಾಗುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಸಮಗ್ರ ಮಾಹಿತಿ ನೀಡಿದರು.

ರಾಜ್ಯದಲ್ಲಿ 2 ಕೋಟಿ ಮನೆಗಳಿದ್ದು, 7 ಕೋಟಿ ಜನಸಂಖ್ಯೆ ಇದೆ. ಎಲ್ಲಾ ಮನೆಗಳ ಸಮೀಕ್ಷೆ ನಡೆಸಲು, ದಸರಾ ರಜೆಯ ಸಂದರ್ಭದಲ್ಲಿ 1.75 ಲಕ್ಷ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರತಿ ಶಿಕ್ಷಕರಿಗೆ 120 ರಿಂದ 150 ಮನೆಗಳ ಸಮೀಕ್ಷೆಯ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದರು.
ಶಿಕ್ಷಕರು, ಆಶಾ ಕಾರ್ಯಕರ್ತರ ಗೌರವ ಧನಕ್ಕಾಗಿಯೇ 375 ಕೋಟಿ ರೂ. ವೆಚ್ಚವಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯ ಸರ್ಕಾರ 420 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಅಗತ್ಯವಾದರೆ ಮತ್ತಷ್ಟು ಅನುದಾನ ಒದಗಿಸಲಾಗುವುದು ಎಂದರು.

ಈ ಹಿಂದೆ ಕಾಂತರಾಜು ಆಯೋಗ ನಡೆಸಿದ್ದ 15 ದಿನಗಳ ಸಮೀಕ್ಷೆಗೆ 165 ಕೋಟಿ ರೂ. ಖರ್ಚಾಗಿತ್ತು. ಆ ವರದಿಗೆ 10 ವರ್ಷ ವಾಗಿದ್ದರಿಂದಾಗಿ ಅವಧಿ ಮೀರಿದೆ ಎಂದು ತಿರಸ್ಕರಿಸಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಪ್ರಸ್ತುತವಾಗಿ ನಡೆಸಲಾಗುತ್ತಿರುವ ಮರು ಸಮೀಕ್ಷೆಗೆ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಲಾಗಿದೆ. ಡಿಸೆಂಬರ್‌ ವೇಳೆಗೆ ಸಮೀಕ್ಷಾ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.

ಪ್ರತಿ ಮನೆಗೂ ವಿದ್ಯುತ್‌ ಸಂಪರ್ಕದ ಜೊತೆ ಆರ್‌ಆರ್‌ ಸಂಖ್ಯೆಯನ್ನು ನೀಡಲಾಗಿರುತ್ತದೆ. ಜಿಯೋ ಟ್ಯಾಗ್‌ ಮಾಡಿ ಸಿದ್ದಪಡಿಸಲಾದ ಯೂನಿಕ್‌ ಹೌಸ್‌‍ವೊಲ್‌್ಡ ಐಡೆಂಟಿಟಿ (ಯುಎಚ್‌ಐಡಿ) ಪಟ್ಟಿಗಳನ್ನು (ಸ್ಟಿಕ್ಕರ್‌) ಮೀಟರ್‌ ರೀಡರ್‌ಗಳು ಆರ್‌ಆರ್‌ ಸಂಖ್ಯೆ ಆಧಾರಿತವಾಗಿ ಪ್ರತಿ ಮನೆಗೆ ಅಂಟಿಸಿರುತ್ತಾರೆ. ಆ ನಂತರ ಸಮೀಕ್ಷಾದಾರರು ಹೋಗುವ ಮೂರು ದಿನಗಳ ಮುಂಚಿತವಾಗಿ ಆಶಾ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ, ಸಮೀಕ್ಷೆಯ ವೇಳೆ ಭರ್ತಿ ಮಾಡಿಕೊಳ್ಳುವ ಪ್ರಶ್ನಾವಳಿಗಳ ನಮೂನೆಯನ್ನು ನೀಡಿರುತ್ತಾರೆ.

ವಿದ್ಯಾವಂತರೂ ಆ ನಮೂನೆಗಳನ್ನು ಓದಿಕೊಂಡು ಸಮೀಕ್ಷದಾರರಿಗೆ ಉತ್ತರ ನೀಡಲು ಸಿದ್ಧವಾಗಲು ಇದರಿಂದ ಅನುಕೂಲವಾಗುತ್ತದೆ. ಸಮೀಕ್ಷೆಯಿಂದ ಯಾರೂ ತಪ್ಪಿಸಿಕೊಳ್ಳಬಾರದು ಎಂಬ ಕಾರಣಕ್ಕೆ ಈ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.ಹಿಂದೆ ಕಾಂತರಾಜ್‌ ಆಯೋಗ 54 ಪ್ರಶ್ನೆಗಳನ್ನು ಕೇಳಿತ್ತು. ಪ್ರಸ್ತುತ ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ವಿವರಿಸಿದರು.

ಸಮೀಕ್ಷೆಯಲ್ಲಿ ಜಾತಿಯನ್ನು ನಮೂದಿಸಲು ಮುಜುಗರ ಪಟ್ಟುಕೊಳ್ಳುವವರಿಗೆ ಪರ್ಯಾಯ ಮಾರ್ಗಗಳಿವೆ. ಆಯೋಗದ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಬಹುದು ಅಥವಾ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ಸ್ಥಾಪಿಸಲಾಗಿರುವ ಸಹಾಯವಾಣಿ ಸಂಖ್ಯೆ 8050770004ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದರು.

ಮತಾಂತರಗೊಂಡಿರುವವರು ತಾವು ಅನುಸರಿಸುತ್ತಿರುವ ಧರ್ಮವನ್ನು ನಮೂದಿಸಬೇಕು. ಸಮೀಕ್ಷೆಯಲ್ಲಿ ಪ್ರಸ್ತುತ ಪಾಲಿಸುತ್ತಿರುವ ಧರ್ಮವನ್ನು ಮಾತ್ರ ಪರಿಗಣಿಸಲಾಗುತ್ತದೆ. ಜಾತಿ ಹೇಳಲು ಹಿಂಜರಿಯುವವರಿಗೆ ಸಮಾಧಾನದಿಂದ ತಿಳುವಳಿಕೆ ಹೇಳಿ ಮಾಹಿತಿ ಪಡೆದುಕೊಳ್ಳಲು ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.

ಪ್ರತಿಯೊಂದು ಮನೆಯ ಆಧಾರ್‌ ಕಾರ್ಡ್‌, ಪಡಿತರ ಚೀಟಿಯನ್ನು ಮೊಬೈಲ್‌ ನಂಬರ್‌ ಜೊತೆ ಜೋಡಣೆ ಮಾಡಲಾಗುತ್ತದೆ. ಮೊಬೈಲ್‌ ನಂಬರ್‌ ಇಲ್ಲದೇ ಹೋದರೆ ಬೇರೆ ರೀತಿಯ ಕ್ರಮಗಳನ್ನು ಅನುಸರಿಸಲಾಗುವುದು. ಒಂದು ವೇಳೆ ಯುಎಚ್‌ಐಡಿ ನಂಬರ್‌ ಇಲ್ಲದೇ ಇದ್ದರೂ ಅಂತಹ ಮನೆಯನ್ನು ಗುರುತಿಸಿ ಸಮೀಕ್ಷೆ ನಡೆಸಲು ಶಿಕ್ಷಕರಿಗೆ ಅವಕಾಶವಿದೆ. ಅದಕ್ಕಾಗಿ ಹೆಚ್ಚುವರಿ 100 ರೂ. ಗೌರವ ಧನ ನೀಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರವೂ ಜನಗಣತಿಯ ಜೊತೆ ಜಾತಿಗಣತಿ ನಡೆಸಲು ನಿರ್ಧರಿಸಿದೆ. ಒಂದು ವೇಳೆ ಜಾತಿ ಹೇಳಲು ಈಗ ಹಿಂದೇಟು ಹಾಕಿದರೆ ಕೇಂದ್ರ ಸರ್ಕಾರ ಸಮೀಕ್ಷೆ ನಡೆಸಿದಾಗಲಾದರೂ ಹೇಳಬೇಕಾಗುತ್ತದೆ. ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತದೆಯೇ ಹೊರತು ಸಾಮಾಜಿಕ ಶೈಕ್ಷಣಿಕ ಮಾಹಿತಿಗಳನ್ನು ಕಲೆ ಹಾಕುವುದಿಲ್ಲ. ಅಸಮಾನತೆಯನ್ನು ನಿವಾರಣೆ ಮಾಡಲು ಹಾಗೂ ಸಾಮಾಜಿ ನ್ಯಾಯ ಕಾಪಾಡಲು ಈ ಸಮೀಕ್ಷೆ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಸಮರ್ಥಿಸಿಕೊಂಡರು.

ಲಿಂಗಾಯಿತರು, ವೀರಶೈವರು ಯಾವ ಧರ್ಮ ಎಂದು ಬರೆಸಬಹುದು. ನಾವು ಸಾಮಾಜಿಕ, ಶೈಕ್ಷಣಿಕ ಮಾಹಿತಿಯನ್ನು ಸಂಗ್ರಹಿಸಲು ಸಮೀಕ್ಷೆ ನಡೆಸುತ್ತಿದ್ದೇವೆ. ಧರ್ಮವನ್ನು ನಿರ್ಧರಿಸಲು ಅಲ್ಲ, 78 ವರ್ಷವಾದರೂ ಅಸಮಾನತೆಯಿದೆ. ಅಂಬೇಡ್ಕರ್‌ ಅವರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ, ಭಾತೃತ್ವವನ್ನು ಅನುಷ್ಠಾನಕ್ಕೆ ತರಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್‌ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಮಧುಸೂದನ್‌, ಆಯೋಗದ ಅಧಿಕಾರಿಗಳು ಪತ್ರಿಕಾಗೊಷ್ಠಿಯಲ್ಲಿದ್ದರು.
ಇದೇ ವೇಳೆ ಶಿಕ್ಷಕರ ತರಬೇತಿಯ ಚಾಟ್‌ಬೂತ್‌ನ್ನು ಮುಖ್ಯಮಂತ್ರಿ ಅನಾವರಣಗೊಳಿಸಿದರು.