Home Blog Page 12

ಬ್ರಿಟನ್‌ : ರೈಲಿನಲ್ಲಿ ಸಾಮೂಹಿಕ ಚೂರಿ ಇರಿತ, 9 ಮಂದಿಗೆ ಗಂಭೀರ ಗಾಯ

ಲಂಡನ್‌,ನ.2- ಬ್ರಿಟನ್‌ನ ಕೇಂಬ್ರಿಡ್ಜ್ ಶೈರ್‌ನಲ್ಲಿ ರೈಲಿನಲ್ಲಿ ಚೂರಿ ಇರಿತದ ದಾಳಿಯಲ್ಲಿ 9 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಸಶಸ್ತ್ರ ಪೊಲೀಸರು ಬಂಧಿಸಿದ್ದಾರೆ.

ಬ್ರಿಟಿಷ್‌ ಸಾರಿಗೆ ಪೊಲೀಸರ ಪ್ರಕಾರ, ಹತ್ತು ಜನರು ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ ಒಂಬತ್ತು ಮಂದಿಗೆ ಮಾರಣಾಂತಿಕ ಗಾಯಗಳಿವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರೈಲು ಕೇಂಬ್ರಿಡ್‌್ಜಶೈರ್‌ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು ಮತ್ತು ಅದು ಹಂಟಿಂಗ್ಡನ್‌ ಸಮೀಪಿಸುತ್ತಿದ್ದಂತೆ, ಪೊಲೀಸರು ಆ ಪ್ರದೇಶವನ್ನು ಸುತ್ತುವರೆದಿದ್ದು, ಸಶಸ್ತ್ರ ಪೊಲೀಸ್‌‍ ಅಧಿಕಾರಿಗಳು ರೈಲು ಹತ್ತಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.

ದಾಳಿಯಿಂದಾಗಿ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿದ್ದು, ಅನೇಕ ಪ್ರಯಾಣಿಕರಿಗೆ ಅನಾನುಕೂಲ ಉಂಟಾಗಿದೆ. ಪೊಲೀಸರು ಘಟನಾ ಸ್ಥಳವನ್ನು ಸುತ್ತುವರೆದಿದ್ದು, ವಿಧಿವಿಜ್ಞಾನ ತಂಡಗಳು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿವೆ.

ಗಾಯಗೊಂಡವರ ಸಂಖ್ಯೆ ಮತ್ತು ಅವರ ಸ್ಥಿತಿಯ ಕುರಿತು ವಿವರಗಳನ್ನು ಇನ್ನೂ ಬಿಡುಗಡೆ ಮಾಡಲಾಗಿಲ್ಲ. ಕೇಂಬ್ರಿಡ್‌್ಜಶೈರ್‌ ಪೊಲೀಸರು ಮತ್ತು ಬ್ರಿಟಿಷ್‌ ಸಾರಿಗೆ ಪೊಲೀಸರು (ಬಿಟಿಪಿ) ಜಂಟಿಯಾಗಿ ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.

ಪ್ರಯಾಣಿಕರ ಮೇಲೆ ಚಾಕು ದಾಳಿ ನಡೆಸಿದ ಹಿಂದಿನ ಉದ್ದೇಶವೇನೆಂಬುದು ಪ್ರಸ್ತುತ ಸ್ಪಷ್ಟವಾಗಿಲ್ಲ. ಘಟನೆಯನ್ನು ವೀಕ್ಷಿಸಿದ ಅಥವಾ ತಮ ಮೊಬೈಲ್‌ ಫೋನ್‌ಗಳಲ್ಲಿ ಯಾವುದೇ ವೀಡಿಯೊ/ಫೋಟೋಗಳನ್ನು ವಿಡಿಯೋ ಮಾಡಿದ ಪ್ರಯಾಣಿಕರಿಗೆ ಪೊಲೀಸರು ಫೂಟೇಜ್‌ ನೀಡುವಂತೆ ಮನವಿ ಮಾಡಿದ್ದಾರೆ.

ರೈಲು ನಿಂತ ನಂತರ ಪ್ಲಾಟ್‌ಫಾರ್ಮ್‌ನಲ್ಲಿ ದೊಡ್ಡ ಚಾಕು ಹಿಡಿದಿದ್ದ ವ್ಯಕ್ತಿಯನ್ನು ನೋಡಿದ್ದೇವೆ. ನಂತರ ಪೊಲೀಸರು ಆ ವ್ಯಕ್ತಿಯನ್ನು ಎಳೆದು ತಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದು ಭಯಾನಕ ಮತ್ತು ಕಳವಳಕಾರಿ ಘಟನೆ ಎಂದು ಯುಕೆ ಪ್ರಧಾನಿ ಕೀರ್‌ ಸ್ಟಾರ್ಮರ್‌ ಪ್ರತಿಕ್ರಿಯಿಸಿದ್ದು, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಎಲ್ಲಾ ಸಂತ್ರಸ್ತರೊಂದಿಗೆ ತಾವಿದ್ದು, ತುರ್ತು ಸೇವೆಗಗಳನ್ನು ಒದಗಿಸಿದ ಸಿಬ್ಬಂದಿಗೆ ಧನ್ಯವಾದಗಳು. ಪ್ರದೇಶದ ಜನರು ಪೊಲೀಸರ ಸೂಚನೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಈತನಧ್ಯೆ, ಯುಕೆ ಗೃಹ ಕಾರ್ಯದರ್ಶಿ ಶಬಾನಾ ಮಹಮೂದ್‌ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ದುರಂತ ಘಟನೆಯಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಈ ಸಮಯದಲ್ಲಿ ಊಹಾಪೋಹ ಮತ್ತು ತಪ್ಪು ಮಾಹಿತಿಗೆ ಕಿವಿಗೊಡಬಾರದೆಂದು ಸಲಹೆ ಮಾಡಿದ್ದಾರೆ.

ಕೋಲಾರ : ನೀರಿನ ಕಟ್ಟೆಯಲ್ಲಿ ಮುಳುಗಿ ತಾಯಿ-ಮಗು ಸಾವು

ಕೋಲಾರ,ನ.2– ನೀರಿನ ಕಟ್ಟೆಯಲ್ಲಿ ಮುಳುಗಿ ತಾಯಿ-ಮಗ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾಲಾಶ್ರೀ(27), ಚಕ್ರವರ್ತಿ(5) ಮೃತಪಟ್ಟ ತಾಯಿ-ಮಗು.

ಗ್ರಾಮದ ಹೊರವಲಯದಲ್ಲಿರುವ ನೀರಿನ ಕಟ್ಟೆಯಲ್ಲಿ ತಾಯಿ, ಮಗುವಿನ ಶವಗಳು ತೇಲುತ್ತಿದ್ದು, ಗ್ರಾಮಸ್ಥರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದು, ಯಾವ ಕಾರಣಕ್ಕಾಗಿ ತಾಯಿ-ಮಗು ಕಟ್ಟೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿಲ್ಲ. ತನಿಖೆಯ ನಂತರ ಘಟನೆಗೆ ನಿಖರ ಕಾರಣ ಗೊತ್ತಾಗಲಿದೆ.

ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಾಡಿನಾದ್ಯಂತ ತುಳಸಿ ಹಬ್ಬದ ಸಂಭ್ರಮ

ಬೆಂಗಳೂರು, ನ.2- ದೀಪಾವಳಿ ಹಬ್ಬದ ನಂತರ ಕಾರ್ತಿಕ ಮಾಸದಲ್ಲಿ ಆಚರಿಸುವ ತುಳಸಿ ಹಬ್ಬವನ್ನು ಇಂದು ನಾಡಿನಾದ್ಯಂತ ಆಚರಿಸಲಾಯಿತು.ಪ್ರತಿಯೊಂದು ಮನೆ ಮುಂದೆ ತುಳಸಿ ಗಿಡ ಇದ್ದೇ ಇರುತ್ತದೆ. ಪ್ರತಿಯೊಬ್ಬರೂ ದಿನನಿತ್ಯ ಪೂಜೆ ಸಲ್ಲಿಸುತ್ತಾರೆ. ಆದರೆ, ಇಂದು ತುಳಸಿಕಟ್ಟೆಗೆ ಅಲಂಕಾರ ಮಾಡಿ ಪೂಜೆ ಸಲ್ಲಿಸುವುದು ವಿಶೇಷ. ತುಳಸಿ ಗಿಡವನ್ನು ಲಕ್ಷ್ಮೀದೇವಿ ಅವತಾರವೆಂದು ಪರಿಗಣಿಸಲಾಗಿದೆ.

ಮನೆಯಲ್ಲಿ ಐಶ್ವರ್ಯ, ಸಂತೋಷ, ಶಾಂತಿ ನೆಲೆಸಲಿ ಎಂದು ತುಳಸಿ ಗಿಡಗಳನ್ನು ಬೆಳೆಸಲಾಗುತ್ತದೆ. ಸಾಮಾನ್ಯವಾಗಿ ತುಳಸಿ ಹಬ್ಬದ ಸಂದರ್ಭದಲ್ಲಿ ಬೆಟ್ಟದ ನೆಲ್ಲಿಕಾಯಿ ಗಿಡದ ಕೊಂಬೆಯನ್ನು ತುಳಸಿ ಗಿಡದ ಪಕ್ಕದಲ್ಲಿಟ್ಟು ಪೂಜೆ ಮಾಡುತ್ತಾರೆ.

ನೆಲ್ಲಿಕಾಯಿ ಕೊಂಬೆಯಲ್ಲಿ ವಿಷ್ಣುವಿನ ಅಂಶವಿದೆ ಎಂಬ ನಂಬಿಕೆಯಿದೆ. ಹೀಗಾಗಿ ತುಳಸಿ ಗಿಡದ ಪಕ್ಕದಲ್ಲಿ ಬೆಟ್ಟದ ನೆಲ್ಲಿಕಾಯಿ ಕೊಂಬೆಯನ್ನಿಟ್ಟು ಪೂಜಿಸಲಾಗುತ್ತದೆ. ಬೆಂಗಳೂರಿನಲ್ಲಿ ಎಲ್ಲಿ ನೋಡಿದರೂ ತುಳಸಿ ಗಿಡ, ಬೆಟ್ಟದ ನೆಲ್ಲಿಕಾಯಿ ಕೊಂಬೆಗಳ ಮಾರಾಟ ಜೋರಾಗಿತ್ತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-11-2025)

ನಿತ್ಯ ನೀತಿ : ಯಾವುದಕ್ಕೂ ಭಯ ಪಡದಿರು..! ನಿನ್ನ ಕರ್ಮ, ನಿನ್ನ ಶ್ರಮ, ಭಗವಂತನ ಮೇಲಿರುವ ನಿನ್ನ ಪ್ರೇಮ ನಿನ್ನನ್ನು ರಕ್ಷಿಸುತ್ತದೆ.

ಪಂಚಾಂಗ : ಭಾನುವಾರ, 02-11-2025
ವಿಶ್ವಾವಸುನಾಮ ಸಂವತ್ಸರ / ಆಯನ: ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವ್ಯಾಘಾತ / ಕರಣ: ಭವ
ಸೂರ್ಯೋದಯ – ಬೆ.06.14
ಸೂರ್ಯಾಸ್ತ – 5.54
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ವೃಷಭ: ಹಣ ನಿಮ್ಮ ಮೂಲಕ ಸುಲಭವಾಗಿ ಜಾರಿಹೋದರೂ ನಿಮ್ಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಉದ್ಯೋಗ ಸ್ಥಳದಲ್ಲಿ ಯಶಸ್ಸಿನ ಭರವಸೆ ಮೂಡಲಿದೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರ.

ಕಟಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ.
ಸಿಂಹ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಕನ್ಯಾ: ವ್ಯಾಪಾರದಲ್ಲಿ ಲಾಭ ವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

ತುಲಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಶ್ಚಿಕ: ಇತರರಿಗೆ ಮುಜು ಗರ ಉಂಟುಮಾಡ ಬೇಡಿ ಮತ್ತು ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ಧನುಸ್ಸು: ಕೆಲವು ದೊಡ್ಡ ಸಮಸ್ಯೆ ಎದುರಿಸಬಹುದು.

ಮಕರ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ್ಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ಕುಂಭ: ಮಕ್ಕಳ ನಡವಳಿಕೆಯಿಂದ ಬೇಸರವಾಗಲಿದೆ.
ಮೀನ: ಪತ್ನಿಯ ಸಹಕಾರದಿಂದ ನಿಮ್ಮ ಕೆಲಸ-ಕಾರ್ಯಗಳು ಸುಸೂತ್ರವಾಗಿ ನೆರವೇರಲಿವೆ.

ಎಂಇಎಸ್‌‍ ಪುಂಡರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪೊಲೀಸಪ್ಪ, ಕೆರಳಿ ಕೆಂಡವಾದ ಕನ್ನಡಿಗರು

ಬೆಳಗಾವಿ,ನ.1- ಕರ್ನಾಟಕ ರಾಜ್ಯ ವಿರೋಧಿ ಎಂಇಎಸ್‌‍ ನಾಯಕನೊಂದಿಗೆ ಪೊಲೀಸ್‌‍ ಅಧಿಕಾರಿ ತನ್ನಮೊಬೈಲ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡ ಘಟನೆ ನಗರದಲ್ಲಿ ನಡೆದಿದೆ. ರಾಜ್ಯೋತ್ಸವ ಸಂಭ್ರಮಕ್ಕೆ ವಿರೋಧಿಸಿರುವ ಪುಂಡ ಎಂಇಎಸ್‌‍ ಕರಾಳ ಹೆಸರಿನ ರ್ಯಾಲಿಯಲ್ಲಿ ಬಂದೋಬಸ್ತ್‌ಗೆ ನಿಯೋಜಿತಗೊಂಡಿದ್ದ ಪೊಲೀಸ್‌‍ ಅಧಿಕಾರಿ ಜೆ.ಎಂ. ಕಾಲಿಮಿರ್ಚಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಸಿಪಿಐ ದುರ್ವರ್ತನೆ ಜಿಲ್ಲಾಡಳಿತ ಹಾಗೂ ಪೊಲೀಸ್‌‍ ಕಮಿಷ್ನರ್‌ ಗಂಭೀರವಾಗಿ ಪರಿಗಣಿಸಿದ್ದಾರೆ. ಸತತ ರಾಜ್ಯ ಸರಕಾರ ಹಾಗೂ ಕನ್ನಡಿಗರ ವಿರುದ್ಧ ಕತ್ತಿ ಮಸೆಯುವ ಎಂ ಎಂಎಸ್‌‍ ಮುಖಂಡ ಶುಭಂ ಸೆಳಕೆ ಜೊತೆಗೆ ಪೊಲೀಸ್‌‍ ಅಧಿಕಾರಿಯ ಅತಿ ಸಲುಗೆಯಿಂದ ವರ್ತಿಸಿರುವ ವಿಡಿಯೋ ವೈರಲ್‌ ಆಗಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ 47 ಕೋಟಿ ಮೌಲ್ಯದ ಕೊಕೇನ್‌ ವಶ

ನವದೆಹಲಿ, ನ. 1 (ಪಿಟಿಐ)- ಮುಂಬೈ ವಿಮಾನ ನಿಲ್ದಾಣದಲ್ಲಿ ಕೊಲಂಬೊದಿಂದ ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರಿಂದ ಸುಮಾರು 47 ಕೋಟಿ ರೂ. ಮೌಲ್ಯದ 4.7 ಕೆಜಿ ಕೊಕೇನ್‌ ಅನ್ನು ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಮತ್ತು ಐದು ಜನರನ್ನು ಬಂಧಿಸಿದ್ದಾರೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಡಿಆರ್‌ಐ ಅಧಿಕಾರಿಗಳು ಪ್ರಯಾಣಿಕಳ ಆಗಮನದ ಸ್ವಲ್ಪ ಸಮಯದ ನಂತರ ಅವರನ್ನು ತಡೆದು ಅವರ ಲಗೆಜ್‌ಗಳನ್ನು ವಿವರವಾದ ಪರೀಕ್ಷೆಗೆ ಒಳಪಡಿಸಿದರು ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.ಪರಿಶೀಲನೆಯಲ್ಲಿ ಕಾಫಿ ಪ್ಯಾಕೆಟ್‌ಗಳ ಒಳಗೆ ಮರೆಮಾಡಲಾಗಿರುವ ಬಿಳಿ ಪುಡಿಯ ವಸ್ತುವಿನ ಒಂಬತ್ತು ಚೀಲಗಳು ಪತ್ತೆಯಾಗಿವೆ. ಎನ್‌ಡಿಪಿಎಸ್‌‍ ಫೀಲ್ಡ್ ಕಿಟ್‌ನೊಂದಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ ಆ ವಸ್ತುವು ಕೊಕೇನ್‌ ಎಂದು ದೃಢಪಟ್ಟಿದೆ.

ಅಂತರರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಣೆ ಜಾಲಗಳಿಗೆ ದೊಡ್ಡ ಹೊಡೆತವಾಗಿ, ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಸಿಎಸ್‌‍ಎಂಐಎ) ಕೊಲಂಬೊದಿಂದ ಆಗಮಿಸಿದ ಮಹಿಳಾ ಪ್ರಯಾಣಿಕರೊಬ್ಬರಿಂದ ಅಕ್ರಮ ಮಾರುಕಟ್ಟೆಯಲ್ಲಿ ಸುಮಾರು 47 ಕೋಟಿ ರೂ. ಮೌಲ್ಯದ 4.7 ಕೆಜಿ ಕೊಕೇನ್‌ ಅನ್ನು ವಶಪಡಿಸಿಕೊಂಡಿದೆ ಎಂದು ಹೇಳಿಕೆ ತಿಳಿಸಿದೆ.

ಡಿಆರ್‌ಐ ಸಿಂಡಿಕೇಟ್‌ನ ನಾಲ್ವರು ಹೆಚ್ಚುವರಿ ವ್ಯಕ್ತಿಗಳನ್ನು ಬಂಧಿಸಿದೆ – ಒಬ್ಬರು ಸಾಗಣೆಯನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರು ಮತ್ತು ಕಳ್ಳಸಾಗಣೆ ಮಾಡಿದ ಮಾದಕ ವಸ್ತುಗಳ ಹಣಕಾಸು, ಲಾಜಿಸ್ಟಿಕ್‌್ಸ ಮತ್ತು ವಿತರಣಾ ಜಾಲಕ್ಕೆ ಸಂಬಂಧಿಸಿದ ಮೂವರು ಸೇರಿದಂತೆ ಐದು ಆರೋಪಿಗಳನ್ನು ಮಾದಕ ದ್ರವ್ಯಗಳು ಮತ್ತು ಮನೋವಿಶ್ಲೇಷಕ ವಸ್ತುಗಳ (ಎನ್‌ಡಿಪಿಎಸ್‌‍) ಕಾಯ್ದೆ, 1985 ರ ನಿಬಂಧನೆಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಡಿಆರ್‌ಐ ಇತ್ತೀಚೆಗೆ ವಶಪಡಿಸಿಕೊಂಡ ಕೆಲವು ಪ್ರಕರಣಗಳು, ಅಂತರರಾಷ್ಟ್ರೀಯ ಮಾದಕ ದ್ರವ್ಯ ಸಿಂಡಿಕೇಟ್‌ಗಳು ಭಾರತೀಯ ಮಹಿಳೆಯರನ್ನು ಕೊರಿಯರ್‌ಗಳಾಗಿ ಹೆಚ್ಚಾಗಿ ಬಳಸಿಕೊಳ್ಳುತ್ತಿವೆ, ಆದರೆ ಆಹಾರ ಪದಾರ್ಥಗಳು ಮತ್ತು ದಿನನಿತ್ಯದ ಖಾದ್ಯಗಳಲ್ಲಿ ಮಾದಕ ದ್ರವ್ಯಗಳನ್ನು ಮರೆಮಾಚಲು ಮತ್ತು ಪತ್ತೆಹಚ್ಚುವಿಕೆಯಿಂದ ತಪ್ಪಿಸಿಕೊಳ್ಳಲು ಬಳಸುತ್ತಿವೆ ಎಂಬ ಕಳವಳಕಾರಿ ಪ್ರವೃತ್ತಿಯನ್ನು ಸೂಚಿಸುತ್ತವೆ ಎಂದು ಸಚಿವಾಲಯ ತಿಳಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸುವ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ : ಡಿಕೆಶಿ

ಬೆಂಗಳೂರು, ನ.1- ಇಡೀ ನವೆಂಬರ್‌ ತಿಂಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳ ಪಥಸಂಚಲನದಲ್ಲಿ ವಂದನೆ ಸ್ವೀಕರಿಸಿ ಹಾಗೂ ಇದಕ್ಕೂ ಮೊದಲು ವಿಧಾನಸೌಧದ ಭುವನೇಶ್ವರಿ ಪ್ರತಿಮೆ ಬಳಿ ಮಾಧ್ಯಮಗಳ ಜತೆ ಮಾತನಾಡಿದರು. ಕರ್ನಾಟಕ ಕೇವಲ ನಾಡಲ್ಲ, ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ, ನಮ ಅಂತರಂಗದ ಮಾತು. ಕಲಿತವರಿಗೆ ಅಮೃತ, ನಡೆದವರಿಗೆ ನೆರಳು, ದಾರಿದೀಪ.

ಕನ್ನಡ ಎನ್ನುವುದು ಜೀವನದ ವಿಧಾನ. ಇಂತಹ ಕನ್ನಡವನ್ನು ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯ ದಾಳಿಯಿಂದ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕನ್ನಡಕ್ಕೆ ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಈ ನೆಲದಲ್ಲಿ ಏನೋ ವೈಶಿಷ್ಟ್ಯ ಅಡಗಿದೆ. ಇಲ್ಲಿಗೆ ಬಂದವರು ಯಾವುದೇ ಕಾರಣಕ್ಕೂ ಮರಳಿ ಹೋಗುವುದಿಲ್ಲ. ಎಲ್ಲರನ್ನೂ ಒಳಗೊಂಡಿರುವ ನಮ ಕರ್ನಾಟಕ ಶಾಂತಿಯಿಂದ ಕೂಡಿದೆ. ಹೊರಗಿನಿಂದ ಬಂದವರು ಸಹ ಊಟ, ವಸತಿ ಗಳಿಸಿಕೊಂಡಿದ್ದಾರೆ. ಇದೇ ನಮ ಕನ್ನಡ ತಾಯಿ, ಭೂಮಿಯ ವಿಶೇಷ. ಇಲ್ಲಿ ಇರುವ ಅತ್ಯುತ್ತಮ ವಾತಾವರಣ ದೇಶದ ಯಾವ ಭಾಗದಲ್ಲಿಯೂ ಇಲ್ಲ. ನಮ್ಮ ಸಂಸ್ಕೃತಿ ಹಾಗೂ ನೆಲ, ಜಲಕ್ಕೆ ಎಲ್ಲರನ್ನೂ ಆಕರ್ಷಿಸುವ ಗುಣವಿದೆ ಎಂದರು.

ಎಲ್ಲಾ ಕನ್ನಡಿಗರನ್ನು ಒಗ್ಗೂಡಿಸಬೇಕು. ಕನ್ನಡಿಗರ ತ್ಯಾಗ, ಬಲಿದಾನ, ಶ್ರಮವನ್ನು ನಾವುಗಳು ಮರೆಯಬಾರದು. ಅನೇಕ ಹಿರಿಯರು ಈ ಭಾಷೆ, ನೆಲ, ಜಲ, ಬಾವುಟದ ಗೌರವವನ್ನು ಕಾಪಾಡಿದ್ದಾರೆ. ದೇಶದ ಯಾವ ರಾಜ್ಯವೂ ಧ್ವಜ, ನಾಡಗೀತೆ ಹೊಂದಿಲ್ಲ. ಆದರೆ ನಾವು ಇವೆರಡನ್ನೂ ಹೊಂದಿದ್ದೇವೆ. ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಿದ್ದೇವೆ. ಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಕಡ್ಡಾಯಗೊಳಿಸಿದ್ದೇವೆ. ಬೆಂಗಳೂರಿನಲ್ಲಿರುವ ಉದ್ದಿಮೆಗಳು, ಕಾರ್ಖಾನೆಗಳು, ವಾಣಿಜ್ಯ ಕೇಂದ್ರಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯ ಮಾಡಿದ್ದೇವೆ ಎಂದರು.

ಈ ವರ್ಷ ಸಮೃದ್ಧಿಯಿಂದ ಕೂಡಿದೆ. ಮಳೆ ಇಳೆಯನ್ನು ತಂಪುಗೊಳಿಸಿದೆ. ಕೆಆರ್‌ಎಸ್‌‍ ಒಂದೇ ವರ್ಷದಲ್ಲಿ ಮೂರು ಬಾರಿ ತುಂಬಿದೆ ಎಂದು ಹೇಳಿದರು.ಕುವೆಂಪು ಅವರು ಹೇಳಿರುವಂತೆ ಕರ್ನಾಟಕ ಶಾಂತಿಯ ತೋಟ. ನಾವೆಲ್ಲರೂ ಜಾತಿ, ಧರ್ಮಗಳನ್ನು ಬಿಟ್ಟು ಸಹಬಾಳ್ವೆಯಿಂದ ಕರ್ನಾಟಕದ ಏಳಿಗೆಗೆ ದುಡಿಯಬೇಕು. ಜಾಗತಿಕವಾಗಿ ಬೆಂಗಳೂರು ಬೆಳಗುತ್ತಿದೆ. ಪ್ರಪಂಚದ ಜನರು ನಮನ್ನು ಗಮನಿಸುತ್ತಿದ್ದಾರೆ. ಕನ್ನಡ, ಕರ್ನಾಟಕವನ್ನು ಜಾಗತಿಕ ಮಟ್ಟಕ್ಕೆ ನಾವೆಲ್ಲರೂ ಕೊಂಡೊಯ್ಯಬೇಕು. ಭುವನೇಶ್ವರಿ ತಾಯಿ ಇಡೀ ಭೂಮಿಗೆ ಒಡತಿ. ಕರ್ನಾಟಕದ ನಾಡದೇವತೆ ಎಂದರು.

ಶಾಲಾ ಮಕ್ಕಳ ಪಥಸಂಚಲನ ನೋಡುತ್ತಿದ್ದರೆ ನನಗೂ ಸಹ ನನ್ನ ಬಾಲ್ಯದ ದಿನಗಳು ನೆನಪಾಗುತ್ತದೆ. ನಾನು ಸಹ ಇದೇ ರೀತಿ ಸಮವಸ್ತ್ರ ಧರಿಸಿ ಶಿಸ್ತಿನಿಂದ ನಡೆಯುತ್ತಿದ್ದೆ. ಬೇಸ್‌‍ಡ್ರಮ್‌ ನುಡಿಸುವವನಾಗಿ ಹೆಜ್ಜೆ ಹಾಕಿದ್ದೆ. ಇದೇ ಕ್ರೀಡಾಂಗಣದಲ್ಲಿ ನಾನು ನಡೆದಾಡಿದ್ದು ನೆನಪಾಯಿತು ಎಂದು ಶಾಲಾ ದಿನವನ್ನು ಮೆಲುಕು ಹಾಕಿದರು.

ಸಾಮ್ರಾಟ್‌ ಅಶೋಕ ಚಕ್ರವರ್ತಿಯ ಕಾಲದಿಂದಲೂ ಕನ್ನಡದ ಹಿರಿಮೆಯಿದೆ. ಕನ್ನಡ ಹಾಗೂ ಕರ್ನಾಟಕದ ಇತಿಹಾಸವನ್ನು ಮಾಧ್ಯಮಗಳು ಅತ್ಯುತ್ತಮವಾಗಿ ವರದಿ ಮಾಡಿವೆ. ಕರ್ನಾಟಕದ ಸಮಸ್ತ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನುತಿಳಿಸುತ್ತೇನೆ ಎಂದರು.

ಬೆಂಗಳೂರಲ್ಲಿ ಹೆಚ್ಚುತ್ತಲೇ ಇವೆ ರೋಡ್‌ರೇಜ್‌ ಪ್ರಕರಣಗಳು

ಬೆಂಗಳೂರು,ನ.1-ನಗರದಲ್ಲಿ ಪ್ರತಿ ದಿನ ಒಂದಲ್ಲಾ ಒಂದು ಕಡೆ ರೋಡ್‌ ರೇಜ್‌ ಪ್ರಕರಣಗಳು ನಡೆಯುತ್ತಿವೆ. ನಗರದ ಟಿನ್‌ ಫ್ಯಾಕ್ಟರಿ ಬಳಿ ಇಂತಹದೊಂದು ಘಟನೆ ನಡೆದಿದ್ದು, ದಾರಿಯಲ್ಲಿ ಸೈಡ್‌ ಕೊಡುವ ವಿಚಾರಕ್ಕೆ ಕ್ಯಾಬ್‌ ಚಾಲಕ ಹಾಗೂ ಬೈಕ್‌ ಸವಾರನ ನಡುವೆ ಗಲಾಟೆಯಾಗಿದೆ.

ಬೈಕ್‌ ಸವಾರ ಸ್ವಲ್ಪ ಮುಂದೆ ಹೋಗಿ ಕ್ಯಾಬ್‌ ಚಾಲಕನಿಗೆ ಪ್ರಶ್ನೆ ಮಾಡಿದಾಗ ಕೋಪಗೊಂಡ ಕ್ಯಾಬ್‌ಚಾಲಕ ಕಾರಿನಿಂದ ಬೈಕ್‌ಗೆ ಗುದ್ದಿಸಿ ಸವಾರನನ್ನು ಬೀಳಿಸಿ ಹೋಗಿರುವುದು ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕಾರೊಂದರ ಡ್ಯಾಶ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಕ್ಯಾಬ್‌ ಚಾಲಕನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಆತನ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಹಿಂದೆ ಬೆಂಗಳೂರು ದಕ್ಷಿಣ ವಿಭಾಗದ ಪುಟ್ಟೇನಹಳ್ಳಿ ಸೇರಿದಂತೆ ನಗರದ ಮತ್ತಿತರ ಪ್ರದೇಶಗಳಲ್ಲೂ ರೋಡ್‌ರೇಜ್‌ ಪ್ರಕರಣಗಳು ನಡೆದಿದ್ದವು.

ಅ.27ರಂದು ರಾತ್ರಿ ವೇಳೆ ಕಾರಿನ ಸೈಡ್‌ ಮಿರರ್‌ಗೆ ಬೈಕ್‌ ಡಿಕ್ಕಿ ಹೊಡೆದ ಘಟನೆ ನಂತರ ಕಾರಿನಲ್ಲಿದ್ದವರು ಬೈಕ್‌ ಸವಾರರನ್ನು ಬೆನ್ನತ್ತಿ ಹೋಗಿ ಡಿಕ್ಕಿ ಹೊಡೆದಿದ್ದ ಪರಿಣಾಮ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದ ಘಟನೆ ಪುಟ್ಟೇನಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಅದೇ ರೀತಿ ಇದೇ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಬೈಕ್‌ ತಾಗಿದ ವಿಚಾರದಲ್ಲಿ ಸಾಫ್‌್ಟವೇರ್‌ ಎಂಜಿನಿಯರ್‌ ಒಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದರಿಂದ ಅವರು ಗಾಯಗೊಂಡಿದ್ದರು.

ಒಂಟಿ ಮಹಿಳೆಯರ ಸರ ಎಗರಿಸುತ್ತಿದ್ದ ಕುಖ್ಯಾತ ಐದು ಮಂದಿ ಸರಗಳ್ಳರ ಬಂಧನ

ಬೆಂಗಳೂರು,ನ.1-ದಾರಿಹೋಕ ಒಂಟಿ ಮಹಿಳೆಯರ ಸರಗಳನ್ನು ಎಗರಿಸುತ್ತಿದ್ದ ಕುಖ್ಯಾತ ಐದು ಮಂದಿ ಸರಗಳ್ಳರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿ 8ಲಕ್ಷ ರೂ ಮೌಲ್ಯದ 75 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆಂಗೇರಿಯ ನವೀನ್‌ (32), ಮಹೇಶ್‌ (26), ಸುದೀಪ್‌ (24), ದರ್ಶನ್‌ (23) ಮತ್ತು ಮೂಲತಃ ಕೋಲಾರದ ಆರ್‌ಆರ್‌ನಗರದಲ್ಲಿ ವಾಸವಾಗಿದ್ದ ಹರ್ಷವರ್ಧನ್‌ (23)ಬಂಧಿತ ಸರಗಳ್ಳರು.
ಕೆಂಗೇರಿಯ ಕೆಹೆಚ್‌ಬಿ ಪ್ಲಾಟಿನಂ ಅಪಾರ್ಟ್‌ಮೆಂಟ್‌ ಹಿಂಭಾಗದ ನಿವಾಸಿ ಹೇಮಾವತಿ ಎಂಬುವವರು ಅ.20 ರಂದು ಸಂಜೆ 6.30 ರ ಸುಮಾರಿನಲ್ಲಿ ಕೆಂಗೇರಿ ಉಪನಗರದ 80 ಅಡಿ ರಸ್ತೆಯ ಜೆಕೆ ಮೋಟಾರ್‌ರ‍ಸ ಕಾರ್‌ ಕೇರ್‌ ಸೆಂಟರ್‌ ಎದುರಿನ ಪುಟ್‌ಪಾತ್‌ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಹಿಂಭಾಲಿಸಿಕೊಂಡು ಬಂದ ಸರಗಳ್ಳರು 75 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾಗಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸರಗಳ್ಳರ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು.ಈ ತಂಡ ಕಾರ್ಯಾಚರಣೆ ನಡೆಸಿ ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕಿ ಐದು ಮಂದಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆ ನಡೆಸಿ ಎರಡು ದ್ವಿಚಕ್ರ ವಾಹನಗಳು, ನಾಲ್ಕು ಮೊಬೈಲ್‌ ಫೋನ್‌ಗಳು 75 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಈ ಕಾರ್ಯಾಚರಣೆಯನ್ನು ಇನ್‌್ಸಪೆಕ್ಟರ್‌ ಜಗದೀಶ್‌ ಅವರನ್ನೊಳಗೊಂಡ ಸಿಬ್ಬಂದಿ ತಂಡ ಕೈಗೊಂಡು ಐದು ಮಂದಿ ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಕನ್ನಡ ಭಾಷೆ ಮೇಲ್ದರ್ಜೆಗೆ ಹೊಸ ನೀತಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.1- ಕೃತಕಬುದ್ಧಿಮತ್ತೆಯ ತಂತ್ರಜ್ಞಾನ ಇಡೀ ಜಗತ್ತನ್ನು ಆಕ್ರಮಿಸುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗುವ ಆತಂಕವಿದೆ. ಹೊಸ ಸವಾಲಿಗೆ ತಕ್ಕ ಹಾಗೆ ಭಾಷೆಯನ್ನು ಸಜ್ಜುಗೊಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಗೆ ಅನುಗುಣವಾಗಿ ಭಾಷೆಯನ್ನು ಮೇಲ್ದರ್ಜೆಗೆರಿಸಲು ತಂತ್ರಜ್ಞರು ಹಾಗೂ ವಿದ್ವಾಂಸರು ಒಗ್ಗೂಡಿ ಕೆಲಸ ಮಾಡಬೇಕು. ಸರ್ಕಾರ ಕೂಡ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟಕ್ಕೇರಿಸಲು ಹೊಸ ನೀತಿ ರೂಪಿಸಲಿದೆ ಎಂದು ಹೇಳಿದರು.

ಕನ್ನಡಕ್ಕೆ ಸಾಕಷ್ಟು ಸವಾಲುಗಳಿವೆ. ಹೊಸ ತಲೆ ಮಾರಿನ ಮಕ್ಕಳಲ್ಲಿ ಭಾಷಾಭಿಮಾನ ಮೂಡಿಸಿ ನಮ ಸವಾಲುಗಳನ್ನೇ ಅವಕಾಶಗಳನ್ನಾಗಿ ಪರಿವರ್ತಿಸಿಕೊಳ್ಳೋಣ. ಯುವ ತಲೆಮಾರು ಎದ್ದು ನಿಂತು ಕನ್ನಡ ಮತ್ತು ಕರ್ನಾಟಕವನ್ನು ಮುಂದುವರೆದ ದೇಶಗಳ ಮಟ್ಟಕ್ಕೆ ಬೆಳೆಸಬೇಕಾಗಿದೆ ಎಂದರು.

ಭಾಷೆ ನಮ ಹೆಮೆಯ ಪರಂಪರೆ ಮತ್ತು ಸಂಸ್ಕೃತಿ ಅಭಿವ್ಯಕ್ತಿಯ ರೂಪ. ಕನ್ನಡಕ್ಕೆ ಹಲವು ವರ್ಷಗಳ ಇತಿಹಾಸವಿದೆ. ಮಹಾ ಕಾವ್ಯ ಮಹಾಭಾರತದಲ್ಲಿ ಹಾಗೂ ದಕ್ಷಿಣ ಭಾರತದ ಶಿಲ್ಪ ಕಾವ್ಯಗಳಲ್ಲಿ ಕನ್ನಡ ಉಲ್ಲೇಖ ಕಂಡು ಬರುತ್ತಿದೆ. ಕನ್ನಡ ನಾಡಿನ ಸಾಮ್ರಾಜ್ಯ ಪ್ರಭಾವ ಭಾರತದೆಲ್ಲೆಡೆ ಇದೆ. ಬಂಗಾಳದ ಸೇನಾ ರಾಜವಂಶರು ಹಾಗೂ ಬಿಹಾರದ ಯಾದವರು ತಮನ್ನು ತಾವು ಕನ್ನಡದ ವಂಶಸ್ಥರು ಎಂದು ಹೇಳಿಕೊಂಡಿದ್ದಾರೆ.

ಆದಿಕವಿ ಪಂಪನಿಂದ ಹಿಡಿದು ಇಲ್ಲಿಯವರೆಗೂ ಕನ್ನಡಕ್ಕೆ ತನ್ನದೇ ಆದ ಭಾಷಾ ಸ್ಥಾನಮಾನ ಸಿಕ್ಕಿದೆ. ಬಹು ಭಾಷೆ, ಬಹು ಧರ್ಮ, ಬಹು ಸಂಸ್ಕೃತಿ, ಬಹು ಜನಾಂಗಗಳು ಒಗ್ಗೂಡಿ ಬದಕುವುದನ್ನು ನಮ ಹಿರಿಯರು ಕಂಡುಕೊಂಡಿದ್ದರು. ಮೊದಲಿನಿಂದಲೂ ಐಕ್ಯತೆಯೊಂದಿಗೆ ನಮಲ್ಲಿ ನಾಡನ್ನು ಕಟ್ಟಿ ಬೆಳೆಸಲಾಗಿದೆ. ನಾವು ಕನ್ನಡದ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬೇಕಿದೆ ಎಂದು ಹೇಳಿದರು.

ಶಿಕ್ಷಣ ಬಲರ್ವಧನೆಗೆ 65 ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದೆ. ವಸತಿ ಶಾಲೆಗಳಲ್ಲಿ 8.36 ಲಕ್ಷ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಅಗತ್ಯ ಇರುವ ಕಡೆಗಳಲ್ಲಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ಆರಂಭಿಸುತ್ತಿದ್ದೇವೆ. ರಾಜ್ಯಗಳಲ್ಲಿ ಶತಮಾನ ಪೂರೈಸಿದ 3 ಸಾವಿರ ಸರ್ಕಾರಿ ಶಾಲೆಗಳಿವೆ, ಅವುಗಳ ಜೀರ್ಣೋದ್ಧಾರ ಮಾಡಲಾಗುವುದು ಎಂದರು.

800 ಸರ್ಕಾರಿ ಶಾಲೆಗಳನ್ನು ಪಬ್ಲಿಕ್‌ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. 180 ಮದ್ರಾಸ್‌‍ಗಳಲ್ಲಿ ಕನ್ನಡ ಕಲಿಸಲಾಗುತ್ತಿದ್ದು, ಅದನ್ನು 1,500 ಮದ್ರಾಸಗಳಿಗೆ ವಿಸ್ತರಿಸಲಾಗುತ್ತಿದೆ. 483 ಕೋಟಿ ರೂ. ವೆಚ್ಚಗಳಲ್ಲಿ 100 ಉರ್ದು ಶಾಲೆಗಳನ್ನು ಕೆಪಿಎಸ್‌‍ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ವೈದ್ಯಕೀಯ ಚಿಕಿತ್ಸೆಯೊಂದಿಗೆ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಶಿಕ್ಷಕರ ನೇಮಕಾತಿ ಹಾಗೂ ತರಬೇತಿಗಳನ್ನು ಕಾಲಕಾಲಕ್ಕೆ ಕೈಗೊಳ್ಳಲಾಗಿದೆ. 800 ಪದವಿ ಪೂರ್ವ ಉಪನ್ಯಾಸಕರು ಸೇರಿ ಹೊಸದಾಗಿ 18 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ವಿವರಿಸಿದರು.
ಪ್ರೊಫೆಸರ್‌ ಸುಖದೇವ್‌ ಭೋರಟ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗ ತನ್ನ ವರದಿ ನೀಡಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಾಗುವುದು. ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವೊಂದು ತನ್ನದೇ ಆದ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ ಎಂದರು.

ಮೊಬೈಲ್‌ ಬಳಕೆಯಿಂದ ಮಕ್ಕಳಲ್ಲಿನ ಅಪಾಯಗಳ ಬಗ್ಗೆ ಇದೇ ವೇಳೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ತಂತ್ರಜ್ಞಾನ ಬಳಕೆ ಅನುಕೂಲದ ಜೊತೆಗೆ ಅನಾನುಕೂಲಗಳನ್ನು ತಂದೊಡ್ಡುತ್ತಿದೆ ಎಂದರು.

ರಾಜ್ಯದಲ್ಲಿ ಪಂಚಖಾತ್ರಿ ಯೋಜನೆಗಳ ಮೂಲಕ 1.04 ಕೋಟಿ ರೂಪಾಯಿಗಳನ್ನು ನೇರವಾಗಿ ಜನರಿಗೆ ರವಾನಿಸಲಾಗಿದೆ ಎಂದು ಯೋಜನೆ ಫಲಾನುಭವಿಗಳ ಬಗ್ಗೆ ವಿವರಣೆ ನೀಡಿದರು. 2024-25ನೇ ಸಾಲಿನ ವಿದೇಶಿ ಹೂಡಿಕೆಯಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೇರಿದೆ. 50,107 ಕೋಟಿ ವಿದೇಶಿ ನೇರ ಹೂಡಿಕೆ ರಾಜ್ಯದಲ್ಲಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ದೇಶದಲ್ಲೇ ಶೇ.51ರಷ್ಟು ಹೂಡಿಕೆ ಪಾಲನ್ನು ಹೊಂದಿವೆ ಎಂದರು. ಹಿಂದಿನ ಸರ್ಕಾರ ವಿದ್ಯುತ್‌ ಉತ್ಪಾದನೆಯನ್ನು ನಿರ್ಲಕ್ಷ್ಯಿಸಿತ್ತು, ನಮ ಸರ್ಕಾರ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ನವೀಕೃತ ಇಂಧನವೇ 24 ಸಾವಿರ ಮೇಗಾವ್ಯಾಟ್‌ ನಷ್ಟವಾಗಿದೆ.

ತಲಾ ಆದಾಯದಲ್ಲೂ ಕಳೆದ 10 ವರ್ಷದಲ್ಲಿ ಶೇ.101ರಷ್ಟು ಸಾಧನೆ ಮಾಡಲಾಗಿದೆ. ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದೆ. ಹೈನುಗಾರಿಕೆ ಪ್ರೋತ್ಸಾಹಿಸಲು ಗೋವಿನಿಂದ ಗ್ರಾಹಕರವರೆಗೆ ಎಂಬ ಶೀರ್ಷಿಕೆಯಲ್ಲಿ ನಂದಿನ ಬ್ರಾಂಡ್‌ನ 175ಕ್ಕೂ ಹೆಚ್ಚು ಹಾಲಿನ ಉತ್ಪನ್ನಗಳನ್ನು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದರು.

ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಬಂಡವಾಳ ವೆಚ್ಚ ಹೆಚ್ಚಿಸಲಾಗಿದೆ. ನಿರುದ್ಯೋಗದ ಪ್ರಮಾಣ ದೇಶದಲ್ಲಿ ಶೇ.7ರಷ್ಟಿದ್ದರೆ, ರಾಜ್ಯದಲ್ಲಿ ಶೇ.2.7ರಷ್ಟಿದೆ. ಶೇ.60ರಷ್ಟು ಜೈವಿಕ ತಂತ್ರಜ್ಞಾನ ಕಂಪನಿಗಳು ರಾಜ್ಯದಲ್ಲಿವೆ. ರಫ್ತಿನಲ್ಲಿ ಶೇ.58ರಷ್ಟು ಕೊಡುಗೆ ನೀಡುತ್ತಿದೆ. ಐಟಿ, ಹಣಕಾಸು, ಆತಿಥ್ಯ, ರಿಯಲ್‌ ಎಸ್ಟೇಟ್‌ ನಲ್ಲಿ, ಕೃಷಿಯಲ್ಲಿ ಕಾಫಿ, ಎಣ್ಣೆಕಾಳು, ರಾಗಿ ಸೇರಿ ಅನೇಕ ಉತ್ಪನ್ನಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಹೇಳಿಕೊಂಡರು.

ಜನರಲ್ಲಿ ಭಾಷೆ ಮತ್ತು ಸಂಸ್ಕೃತಿಯ ಅಭಿಮಾನ ಹೆಚ್ಚಿಸುವ ಕಾರ್ಯಕ್ರಮಗಳನ್ನು ತಮ ಸರ್ಕಾರ ಆಯೋಜಿಸುತ್ತಲೆ ಇದೆ. ವಾಣಿಜ್ಯ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯಗೊಳಿಸಲಾಗಿದ್ದು, ಹೆಸರಾಯಿತು ಕನ್ನಡ ಉಸಿರಾಯಿತು ಕನ್ನಡ ಅಭಿಯಾನ ನಡೆಸಲಾಗಿದೆ. ವಿಧಾನಸೌಧದ ಬಳಿ ಭುವನೇಶ್ವರಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ವಿವರಿಸಿದರು.

ಕನ್ನಡಕ್ಕೆ ಈ ವರ್ಷ ಬಾನುಮುಷ್ತಾಕ್‌ ಮತ್ತು ದೀಪಾಬಸ್ತಿ ಬೂಕರ್‌ ಪ್ರಶಸ್ತಿಯನ್ನು ತಂದುಕೊಡುವ ಮೂಲಕ ಕನ್ನಡವನ್ನು ಜಾಗತಿಕ ವೇದಿಕೆಗೆ ತೆಗೆದುಕೊಂಡು ಹೋಗಿದ್ದಾರೆ ಎಂದು ಸರಿಸಿದರು.
ಏಕೀಕರಣಕ್ಕಾಗಿ ನಡೆದ ಚಳವಳಿಯಲ್ಲಿ ಅನೇಕ ಮಹನೀಯರು ತ್ಯಾಗ ಬಲಿದಾನ ಮಾಡಿದ್ದಾರೆ. ನಾಡಿನ ಅಸೀತೆಗಾಗಿ ನಡೆದ ಗೋಕಾಕ್‌ ಚಳುವಳಿಗಾರರನ್ನು ಸರಿಸಿಕೊಳ್ಳುವುದು ಅನಿವಾರ್ಯ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಾಸಕರಾದ ರಿಜ್ವಾನ್‌ ಅರ್ಷದ್‌, ಗಣೇಶ್‌ ಹುಕ್ಕೇರಿ, ವಿಧಾನ ಪರಿಷತ್‌ ಸದಸ್ಯರಾದ ಹಣಮಂತ ನಿರಾಣಿ, ಬಿ.ಜಿ.ಪಾಟೀಲ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌, ಡಿಜಿಪಿ ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಮತ್ತಿತರರು ಉಪಸ್ಥಿತರಿದ್ದರು.