Home Blog Page 15

ಅಂತ್ಯ ಸಂಸ್ಕಾರಕ್ಕೂ ಲಂಚ : ಅಶೋಕ್‌ ಆಕ್ರೋಶ

ಬೆಂಗಳೂರು,ಅ.31– ಕಾಂಗ್ರೆಸ್‌‍ ಹೈಕಮಾಂಡ್‌ ಮತ್ತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಜೋಳಿಗೆ ತುಂಬಿಸಿ, ಸಿಎಂ ಕುರ್ಚಿ ಗಿಟ್ಟಿಸಿಕೊಳ್ಳಲು ಪಾಲಿಕೆ ಅಧಿಕಾರಿ ಗಳಿಗೆ ಎಷ್ಟು ಸುಲಿಗೆ ಟಾರ್ಗೆಟ್‌ ಕೊಟ್ಟಿದ್ದೀರಿ? ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮರಣೋತ್ತರ ಪರೀಕ್ಷೆ ವರದಿ ಪಡೆಯಲು ಲಂಚ, ಮರಣ ಪ್ರಮಾಣಪತ್ರ ಪಡೆಯಲು ಲಂಚ, ಅಂತ್ಯಸಂಸ್ಕಾರ ಮಾಡೋದಕ್ಕೆ ಲಂಚ.ನಿಮ ಕುರ್ಚಿ ಆಸೆಗೆ ಜನಸಾಮಾನ್ಯರ ರಕ್ತ ಇನ್ನೆಷ್ಟು ಹೀರುತ್ತೀರಿ ಉಪಮುಖ್ಯಮಂತ್ರಿಗಳೇ? ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಡಿ.ಕೆ ಶಿವಕುಮಾರ್‌ ಅವರೇ, ಪಾಲಿಕೆ ಶಿಕ್ಷಕರಿಗೆ 6 ತಿಂಗಳಿಂದ ಸಂಬಳ ಕೊಟ್ಟಿಲ್ಲ. ಪಾಲಿಕೆಯ ಸಶಾನ ಸಿಬ್ಬಂದಿಗೆ 8 ತಿಂಗಳಿಂದ ಸಂಬಳ ಕೊಟ್ಟಿಲ್ಲ. ಪಾಲಿಕೆಯ ಕಿರಿಯ ಆರೋಗ್ಯಾಧಿಕರಿಗಳಿಗೆ 8 ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ವಾಗ್ದಳಿ ನಡೆಸಿದ್ದಾರೆ.

ಮಾತೆತ್ತಿದರೆ ಟನಲ್‌ ರೋಡು, ಸ್ಕೈ ಡೆಕ್ಕು, ಬ್ರ್ಯಾಂಡ್‌ ಬೆಂಗಳೂರು ಎಂದು ದೊಡ್ಡ ದೊಡ್ಡ ಮಾತು ಅಡಿ ಬೊಗಳೆ ಬಿಡುವುದಲ್ಲ ಸ್ವಾಮಿ, ಮೊದಲು ಪಾಲಿಕೆ ನೌಕರರಿಗೆ ಸರಿಯಾಗಿ ಸಾಲ ಕೊಡಿ. ನಿಮ ಘನಂದಾರಿ ಆಡಳಿತದಲ್ಲಿ ದಿನಬೆಳಗಾದರೆ ದಿನಪತ್ರಿಕೆಗಳಲ್ಲಿ , ಟಿವಿಗಳಲ್ಲಿ ಬೆಂಗಳೂರಿನ ಎಡವಟ್ಟುಗಳ ಬಗ್ಗೆ ಒಂದಲ್ಲ ಒಂದು ನಕಾರಾತಕ ಸುದ್ದಿ ಬಂದು ನಗರದ ಹೆಸರು ಹಾಳಾಗುತ್ತಿದೆ. ಒಳ್ಳೆಯ ಆಡಳಿತ ಕೊಡಲು ಸಾಧ್ಯವಾದರೆ ಮುಂದುವರೆಯಿರಿ, ಇಲ್ಲವಾದರೆ ಯಾರಾದರೂ ಸಮರ್ಥರಿಗೆ ದಾರಿ ಮಾಡಿಕೊಡಿ ಎಂದು ಅಶೋಕ್‌ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಭಾರತದಲ್ಲಿ ನೇಮಕಾತಿ ಆರಂಭಿಸಿದ ಸ್ಪೇಸ್‌‍ ಎಕ್ಸ್

ಮುಂಬೈ, ಅ.31-ಎಲಾನ್‌ ಮಸ್ಕ್‌ ಒಡೆತನದ ಸ್ಪೇಸ್‌‍ X ಸಂಸ್ಥೆ ಭಾರತದಲ್ಲಿ ತನ್ನ ಮೊದಲ ಸುತ್ತಿನ ನೇಮಕಾತಿಯನ್ನು ಪ್ರಾರಂಭಿಸಿದೆ.ಭಾರತದಲ್ಲಿ ತನ್ನ ಬಹುನಿರೀಕ್ಷಿತ ಉಪ ಗ್ರಹ ಬ್ರಾಡ್‌ಬ್ಯಾಂಡ್‌‍ ಬಿಡುಗಡೆಯತ್ತ ಮಹತ್ವದ ಹೆಜ್ಜೆಯಾಗಿ, ಸ್ಪೇಸ್‌‍X ಒಡೆತನದ ಸ್ಟಾರ್‌ಲಿಂಕ್‌ ದೇಶದಲ್ಲಿ ತನ್ನ ಮೊದಲ ಸುತ್ತಿನ ನೇಮಕಾತಿಯನ್ನು ಪ್ರಾರಂಭಿಸಿದೆ.ತನ್ನ ನೇಮಕಾತಿ ಅಭಿಯಾನದ ಭಾಗವಾಗಿ, ಎಲೋನ್‌ ಮಸ್ಕ್‌ ನಡೆಸುವ ಕಂಪನಿಯು ತನ್ನ ಲಿಂಕ್ಡ್ ಇನ್‌ ಮತ್ತು ಸ್ಪೇಸ್‌‍ಎಕ್‌್ಸ ವೃತ್ತಿಜೀವನದ ಪೋರ್ಟಲ್‌ನಲ್ಲಿ ಹಲವಾರು ಹುದ್ದೆಗಳನ್ನು ಪೋಸ್ಟ್‌ ಮಾಡಿದೆ.

ಕಂಪನಿಯು ಅರ್ಜಿಗಳನ್ನು ಆಹ್ವಾನಿಸುತ್ತಿರುವ ಹುದ್ದೆಗಳು ತೆರಿಗೆ ವ್ಯವಸ್ಥಾಪಕ, ಲೆಕ್ಕಪತ್ರ ವ್ಯವಸ್ಥಾಪಕ, ಪಾವತಿ ವ್ಯವಸ್ಥಾಪಕ ಮತ್ತು ಭಾರತದಲ್ಲಿ ಸ್ಟಾರ್‌ಲಿಂಕ್‌ನ ಕಾರ್ಯಾಚರಣಾ ಕೇಂದ್ರವಾದ ಬೆಂಗಳೂರಿನಲ್ಲಿ ಹಿರಿಯ ಖಜಾನೆ ವಿಶ್ಲೇಷಕ ಸೇರಿದಂತೆ ಹಣಕಾಸು ಮತ್ತು ಲೆಕ್ಕಪತ್ರ ಪಾತ್ರಗಳಾಗಿವೆ.

ಸ್ಟಾರ್‌ಲಿಂಕ್‌‍ ವಿಶ್ವಾದ್ಯಂತ ಕಡಿಮೆ-ಲೇಟೆನ್ಸಿ ಉಪಗ್ರಹ ಬ್ರಾಡ್‌ಬ್ಯಾಂಡ್‌‍ ಸೇವೆಗಳನ್ನು ನೀಡಲು ತನ್ನ ಜಾಗತಿಕ ಹೆಜ್ಜೆಗುರುತನ್ನು ವಿಸ್ತರಿಸುತ್ತಿದ್ದಂತೆ, ಅದರ ಭಾರತೀಯ ಅಂಗಸಂಸ್ಥೆಯು ಹಣಕಾಸು ವರದಿ ಮತ್ತು ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಲೆಕ್ಕಪತ್ರ ವ್ಯವಸ್ಥಾಪಕರನ್ನು ನೇಮಿಸಿಕೊಳ್ಳಲು ನೋಡುತ್ತಿದೆ ಎಂದು ಕಂಪನಿಯು ತನ್ನ ಉದ್ಯೋಗ ಪೋಸ್ಟ್‌ನಲ್ಲಿ ತಿಳಿಸಿದೆ.

ಭಾರತದಲ್ಲಿ ಸ್ಟಾರ್‌ಲಿಂಕ್‌ನ ಕಾರ್ಯಾಚರಣೆಗಳನ್ನು ಬೆಂಬಲಿಸುವ ಸಲುವಾಗಿ, ಈ ಹುದ್ದೆಯು ಲೆಕ್ಕಪತ್ರ ನಿರ್ವಹಣೆ, ವರದಿ ಮಾಡುವಿಕೆ ಮತ್ತು ಶಾಸನಬದ್ಧ ಅನುಸರಣೆ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದು ಮತ್ತು ವಿಸ್ತರಿಸುವುದನ್ನು ಒಳಗೊಂಡಿರುತ್ತದೆ. ಯಾವುದೇ ದೂರಸ್ಥ ಅಥವಾ ಹೈಬ್ರಿಡ್‌ ಆಯ್ಕೆಗಳು ಲಭ್ಯವಿಲ್ಲ ಎಂದು ಕಂಪನಿಯು ಸ್ಪಷ್ಟಪಡಿಸಿದೆ; ಕಾನೂನುಬದ್ಧ ಕೆಲಸದ ಅಧಿಕಾರ ಹೊಂದಿರುವ ಸ್ಥಳೀಯವಾಗಿ ಆಧಾರಿತ ಅರ್ಜಿದಾರರನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ.

2025 ರ ಕೊನೆಯಲ್ಲಿ ಅಥವಾ 2026 ರ ಆರಂಭದಲ್ಲಿ ಭಾರತದಲ್ಲಿ ತನ್ನ ಉಪಗ್ರಹ ಇಂಟರ್ನೆಟ್‌ ಸೇವೆಗಳ ವಾಣಿಜ್ಯ ಉಡಾವಣೆಗೆ ಸಿದ್ಧತೆಯಾಗಿ ಸ್ಟಾರ್‌ಲಿಂಕ್‌‍ ನೇಮಕಾತಿ ಮಾಡಿಕೊಳ್ಳುತ್ತಿದೆ. ಸರ್ಕಾರಿ ನಿಯಮಗಳಿಗೆ ಅನುಸಾರವಾಗಿ, ಕಂಪನಿಯು ಈಗ ನೆಲದ ಮೂಲಸೌಕರ್ಯವನ್ನು ಸ್ಥಾಪಿಸುತ್ತಿದೆ ಮತ್ತು ಅಗತ್ಯವಿರುವ ಭದ್ರತಾ ಪ್ರಯೋಗಗಳನ್ನು ನಡೆಸುತ್ತಿದೆ.

ಸ್ಪೆಕ್ಟ್ರಮ್‌ ಹಂಚಿಕೆಗೆ ಮೊದಲು ಕಾನೂನುಬದ್ಧ ಪ್ರತಿಬಂಧ ಮತ್ತು ಭದ್ರತಾ ಅನುಸರಣೆಗಾಗಿ ದೂರಸಂಪರ್ಕ ಇಲಾಖೆಯ ಅವಶ್ಯಕತೆಗಳನ್ನು ಅನುಸರಿಸಲು, ಸ್ಟಾರ್‌ಲಿಂಕ್‌‍ ಮುಂಬೈನಲ್ಲಿ ಅಧಿಕಾರಿಗಳಿಗೆ ತನ್ನ ಬ್ರಾಡ್‌ಬ್ಯಾಂಡ್‌‍ ಸೇವೆಯ ಪ್ರದರ್ಶನವನ್ನು ಮೊದಲೇ ನೀಡಿತು.ವರದಿಗಳ ಪ್ರಕಾರ, ಕಂಪನಿಯು ಮುಂಬೈ, ಚೆನ್ನೈ ಮತ್ತು ನೋಯ್ಡಾದಲ್ಲಿ ಮೂರು ಗೇಟ್‌ವೇ ಕೇಂದ್ರಗಳನ್ನು ತೆರೆಯಲು ಅನುಮತಿಗಾಗಿ ಅರ್ಜಿ ಸಲ್ಲಿಸಿದೆ.

ನಂತರ, ಚಂಡೀಗಢ, ಕೋಲ್ಕತ್ತಾ ಮತ್ತು ಲಕ್ನೋ ಸೇರಿದಂತೆ ಒಂಬತ್ತರಿಂದ ಹತ್ತು ಗೇಟ್‌ವೇ ಸ್ಥಳಗಳನ್ನು ತೆರೆಯಲು ಉದ್ದೇಶಿಸಿದೆ.ಒಮ್ಮೆ ಕಾರ್ಯರೂಪಕ್ಕೆ ಬಂದ ನಂತರ, ಸ್ಟಾರ್‌ಲಿಂಕ್‌‍ ಜಿಯೋ ಸ್ಯಾಟಲೈಟ್‌ ಮತ್ತು ಯುಟೆಲ್‌ಸ್ಯಾಟ್‌‍ ಒನ್‌ವೆಬ್‌ನಿಂದ ಸ್ಪರ್ಧೆಯನ್ನು ಎದುರಿಸಲಿದೆ, ಇವೆರಡೂ ನಿಯಂತ್ರಕ ಅನುಮತಿಗಳನ್ನು ಪಡೆದಿವೆ ಆದರೆ ಅಂತಿಮ ಸ್ಪೆಕ್ಟ್ರಮ್‌ ಹಂಚಿಕೆಗಾಗಿ ಕಾಯುತ್ತಿವೆ.ಉಪಗ್ರಹ ಬ್ರಾಡ್‌ಬ್ಯಾಂಡ್‌‍ ಸ್ಪೆಕ್ಟ್ರಮ್‌ ಬೆಲೆ ಮತ್ತು ಹಂಚಿಕೆಗಾಗಿ ಚೌಕಟ್ಟುಗಳನ್ನು ಮತ್ತು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಇನ್ನೂ ಅಂತಿಮಗೊಳಿಸುತ್ತಿದೆ.

ಸುಹಾಸ್‌‍ ಶೆಟ್ಟಿ ಹತ್ಯೆ ಪ್ರಕರಣ ದೋಷಾರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಬೆಂಗಳೂರು,ಅ.31– ಬರ್ಬರವಾಗಿ ಕೊಲೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಜರಂಗದಳದ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆಯು ಪೂರ್ವ ನಿಯೋಜಿತ ಕೃತ್ಯ ಎಂದು ರಾಷ್ಟ್ರೀಯ ತನಿಖಾ ದಳ( ಎನ್‌ ಐಎ) ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ನ್ಯಾಯಸಂಹಿತಾ 2023 ಮತ್ತು ಶಸಾ್ತ್ರಸ್ತ್ರ ಕಾಯಿದೆ, 1959ರ ವಿವಿಧ ವಿಭಾಗಗಳಡಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. 2025ರ ಮೇ ತಿಂಗಳಿನಲ್ಲಿ ಸುಹಾಸ್‌‍ ಶೆಟ್ಟಿಯನ್ನು ಮಾರಕಾಯುಧಗಳಿಂದ ಶಸ್ತ್ರಸಜ್ಜಿತವಾದ ಏಳು ಮಂದಿ ಬರ್ಭರವಾಗಿ ಹತ್ಯೆ ಮಾಡಿದ್ದರು. ಇದೊಂದು ವ್ಯವಸ್ಥಿತ ಹಾಗೂ ಪೂರ್ವ ನಿಯೋಜಿತ ಕೊಲೆಯಾಗಿದ್ದು, ಸುಹಾಸ್‌‍ ಶೆಟ್ಟಿಯನ್ನು ಹತ್ಯೆ ಮಾಡಲು , ಮೊದಲೇ ದುಷ್ಕರ್ಮಿಗಳು ಸಂಚು ರೂಪಿಸಿದ್ದರು. ಆತನನ್ನು ಅಟ್ಟಾಡಿಸಿಕೊಂಡು ಹತ್ಯೆ ಮಾಡಲಾಗಿದೆ.

ಹಲ್ಲೆ ನಡೆಸಿದಾಗ ಸುಹಾಸ್‌‍ ಶೆಟ್ಟಿ ಪ್ರಾಣ ಉಳಿಸಿಕೊಳ್ಳಲು ಓಡಿದ್ದರು. ಈ ವೇಳೆ ಅವರನ್ನು ಅಟ್ಟಾಡಿಸಿಕೊಂಡರೂ ಕೊಲೆಗಾರರು ಯಾವುದೇ ದಯೆ ತೋರಿಲ್ಲ ಎಂದು ದಾಖಲೆಗಳು ಹೇಳುತ್ತವೆ. ಆರೋಪಿಗಳು ಉದ್ದೇಶಪೂರ್ವಕವಾಗಿ ಸುಹಾಸ್‌‍ ಶೆಟ್ಟಿ ಚಲಾಯಿಸುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ ಎಂಬುದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಂಗಳೂರು ಮೂಲದ ಸುಹಾಸ್‌‍ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿಸಲಾದ 11 ಆರೋಪಿಗಳ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ. ಬಜರಂಗದಳದ ಸದಸ್ಯ ಶೆಟ್ಟಿ ಅವರನ್ನು ಈ ವರ್ಷದ ಮೇ 1ರಂದು ಏಳು ಜನರು ಹತ್ಯೆಗೈದಿದ್ದರು. ಸಮಾಜದಲ್ಲಿ ಭೀತಿ ಹುಟ್ಟಿಸಲು ಮತ್ತು ಭಯೋತ್ಪಾದನೆಯನ್ನು ಹರಡಲು ಗುರಿಯಿಟ್ಟು ಈ ಹತ್ಯೆ ಮಾಡಲಾಗಿದೆ ಎಂದು ಎನ್‌ಐಎ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಪ್ರಕರಣವನ್ನು ಕೈಗೆತ್ತಿಕೊಂಡ ಸಂಸ್ಥೆ, ಹತ್ಯೆ ಹಿಂದೆ ದೊಡ್ಡ ಪಿತೂರಿಯಿದೆ. ಸುಹಾಸ್‌‍ ಶೆಟ್ಟಿ ಅವರ ಚಟುವಟಿಕೆ, ಚಲನವಲನಗಳನ್ನು ಹಲವಾರು ತಿಂಗಳುಗಳ ಕಾಲ ಸೂಕ್ಷ್ಮವಾಗಿ ಪತ್ತೆಹಚ್ಚಿ ಈ ಏಳು ಆರೋಪಿಗಳು, ಅವರ ಟೊಯೋಟಾ ಇನ್ನೋವಾ ಕಾರನ್ನು ಎರಡು ಕಾರುಗಳಲ್ಲಿ ಹಿಂಬಾಲಿಸಿ ಹತ್ಯೆಗೈದಿದ್ದಾರೆ ಎಂದು ತಿಳಿದುಬಂದಿದೆ.

ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) ಮಾಜಿ ಸದಸ್ಯನಾಗಿರುವ ಆರೋಪಿ ಅಬ್ದುಲ್‌ ಸಫ್ವಾನ್‌ ಅಲಿಯಾಸ್‌‍ ಕಲವಾರು ಸಫ್ವಾನ್‌ ಅಲಿಯಾಸ್‌‍ ಚೋಪು ಸಫ್ವಾನ್‌, ನಿಯಾಜ್‌ ಅಲಿಯಾಸ್‌‍ ನಿಯಾ, ಮೊಹಮದ್‌ ಮುಸಮಿರ್‌ ಅಲಿಯಾಸ್‌‍ ಮೊಹಮದ್‌ ಅಲಿಯಾಸ್‌‍ ಮುಜಮಿಲಸ್ತ್‌ ನೊವಾಸ್‌‍ ಅಲಿಯಾಸ್‌‍ ನೊವಾಸ್‌‍ಅಲಿಸ್ತ್‌, ವಮನದ್‌ ಅಲಿಯಾಸ್‌‍ ನೊವಾಸ್‌‍ ಅಲಿಸ್ತ್‌, ನೌಶಾದ್‌ ಅಲಿಯಾಸ್‌‍ ಚೋಟು ಎಂಬಾತನೊಂದಿಗೆ ಭಯೋತ್ಪಾದನಾ ಸಂಚು ರೂಪಿಸಿದ್ದನು.

ಅಬ್ದುಲ್‌ ಸಫ್ವಾನ್‌ ಕರ್ನಾಟಕ ಫೋರಂ ಫಾರ್‌ ಡಿಗ್ನಿಟಿ ಮತ್ತು ಪಿಎಫ್‌ಐನ ಮಾಜಿ ಸದಸ್ಯನಾಗಿದ್ದಾನೆ. ಆರೋಪಿ ಆದಿಲ್‌ ಮಹರೂಫ್‌ ಅಲಿಯಾಸ್‌‍ ಆದಿಲ್‌ ಹಣ ಪಾವತಿಸುವ ಭರವಸೆ ಮೇಲೆ ಇತರ ಆರೋಪಿಗಳನ್ನು ನೇಮಿಸಿಕೊಳ್ಳಲು ಹಣ ನೀಡಿದ್ದ ಎಂದು ಎನ್‌ಐಎ ಹೇಳಿದೆ.

ಕಲಂದರ್‌ ಶಫಿ ಅಲಿಯಾಸ್‌‍ ಮಂದೆ ಶಫಿ, ಎಂ.ನಾಗರಾಜ ಅಲಿಯಾಸ್‌‍ ನಾಗ ಅಲಿಯಾಸ್‌‍ ಅಪ್ಪು, ರಂಜಿತ್‌, ಮಹಮದ್‌ ರಿಜ್ವಾನ್‌ ಅಲಿಯಾಸ್‌‍ ರಿಜ್ಜು, ಅಜರುದ್ದೀನ್‌ ಅಲಿಯಾಸ್‌‍ ಅಜರ್‌ ಅಲಿಯಾಸ್‌‍ ಅಜ್ಜು ಮತ್ತು ಅಬ್ದುಲ್‌ ಖಾದರ್‌ ಅಲಿಯಾಸ್‌‍ ನೌಫಲ್‌ ಸೇರಿದಂತೆ ಐವರು ಆರೋಪಿಗಳನ್ನು ಆರೋಪಪಟ್ಟಿಯಲ್ಲಿ ಹೆಸರಿಸಲಾಗಿದೆ. ಬಂಧಿತ ಮತ್ತೊಬ್ಬ ಆರೋಪಿ ಅಬ್ದುಲ್‌ ರಜಾಕ್‌ ವಿರುದ್ಧ ತನಿಖೆ ನಡೆಯುತ್ತಿದೆ.

ದಕ್ಷಿಣ ಕನ್ನಡದ ಬಜ್ಪೆಯ ಕಿನ್ನಿಪದವು ಜಂಕ್ಷನ್‌ ಬಳಿ 2025ರ ಮೇ 1ರಂದು ಸುಹಾಸ್‌‍ ಶೆಟ್ಟಿ ಹತ್ಯೆಯಾಗಿತ್ತು. ಹಿಂದೂ ಕಾರ್ಯಕರ್ತ, ಬಜರಂಗ ದಳದ ಸದಸ್ಯ ಸುಹಾಸ್‌‍ ಶೆಟ್ಟಿ ಕಾರನ್ನು ಪಿಕಪ್‌ ಟ್ರಕ್‌ನಿಂದ ಹೊಡೆದು ಅಟ್ಟಿಸಿಕೊಂಡು ಹೋದ ದುಷ್ಕರ್ಮಿಗಳು, ಚೂರಿ, ಕತ್ತಿ ಸಹಿತ ಬರ್ಬರವಾಗಿ ಕೊಂದಿದ್ದರು. ಇತರೇ 5 ಸಹಚರರಲ್ಲಿ ಒಬ್ಬರು ಗಾಯಗೊಂಡಿದ್ದರು.

ಬಜರಂಗ ದಳದ ಜಾತ್ಯತೀತ ಕಾರ್ಯಕರ್ತರಾಗಿ ಗೋರಕ್ಷಣೆ, ಲವ್‌ ಜಿಹಾದ ವಿರುದ್ಧ ಹೋರಾಗಳನ್ನು ಮಾಡಿಕೊಂಡ ಸುಹಾಸ್‌‍, 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಮೊಹಮದ್‌ ಫಝಿಲ್‌ ಕೊಲೆಯ ಮುಖ್ಯ ಆರೋಪಿಯಾಗಿ ಜೈಲಿನಿಂದ ಬೇಲ್‌ ಮೇಲೆ ಬಿಡುಗಡೆಯಾಗಿದ್ದರು. ಫಝಿಲ್‌ ಕೊಲೆಯು ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿತ್ತು. ಈ ಸುದೀರ್ಘ ಸಂಘರ್ಷದಲ್ಲಿ ಗುರಿಯಾಗಿದ್ದು ಸುಹಾಸ್‌‍.
ಈ ಪ್ರಕರಣ ಸಂಬಂಧ ಎನ್‌ಐಎ ಈವರೆಗೂ ಅಬ್ದುಲ್‌ ಸಫ್ವಾನ್‌, ನಿಯಾಜ್‌, ಮೊಹಮದ್‌ ಮುಝಮಿಲ್‌, ಕಲಂದರ್‌ ಶಾಫಿ, ಮೊಹಮದ್‌ ರಿಜ್ವಾನ್‌, ರಂಜಿತ್‌ ಹಾಗೂ ನಾಗರಾಜ್ನನ್ನ ಬಂಧಿಸಿದ್ದಾರೆ. ಈ ವೇಳೆ ಸುಹಾಸ್‌‍ ಕೊಲೆಯಲ್ಲಿ ಒಂಬತ್ತು ಜನ ಶಾಮೀಲಾಗಿರುವುದು ಗೊತ್ತಾಗಿದೆ.

ತನಿಖೆ ಆರಂಭಿಸಿದ ಪೊಲೀಸರಿಗೆ 2023ರ ಪ್ರಕರಣವೊಂದರ ಲಿಂಕ್‌ ಇರುವುದು ಗೊತ್ತಾಗಿತ್ತು. ಅದುವೇ ಸಫ್ವಾನ್‌ ಹಾಗೂ ಸುಹಾಸ್‌‍ ಶೆಟ್ಟಿಯ ಆಪ್ತನ ನಡುವಿನ ಗಲಾಟೆ. ಸಫ್ವಾನ್‌ ಎಂಬಾತನ ಜತೆಗೆ ಸುಹಾಸ್‌‍ ಶೆಟ್ಟಿ ಆಪ್ತ ಪ್ರಶಾಂತ್‌ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವಿಚಾರಕ್ಕೆ ಮಾತುಕತೆ ನಡೆಸೋದಕ್ಕೆ ಸಫ್ವಾನ್ನನ್ನು ಕರೆದಿದ್ದ. ಮಾತಾನಾಡುವುದಕ್ಕೆ ಎಂದು ಕರೆದ ಪ್ರಶಾಂತ್‌ ಹಾಗೂ ಗ್ಯಾಂಗ್‌ 2023ರ ಸೆಪ್ಟೆಂಬರ್ನಲ್ಲಿ ಸಫ್ವಾನ್ಗೆ ಡ್ರ್ಯಾಗನರ್ನಿಂದ ಇರಿದಿತ್ತು. ಬಳಿಕ ಚೂರಿ ಇರಿತಕ್ಕೆ ಒಳಗಾದ ಸಫ್ವಾನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ಚೂರಿ ಇರಿತ ಪ್ರಕರಣ ಬಳಿಕ ಸಫ್ವಾನ್‌ ಹಾಗೂ ಪ್ರಶಾಂತ್‌ ನಡುವೆ ದ್ವೇಷ ಹುಟ್ಟಿಸಿತ್ತು.

ಪ್ರಶಾಂತ್‌ ಬದಲು ಸುಹಾಸ್‌‍ ಹತ್ಯೆ!
ಹಲ್ಲೆಗೆ ಪ್ರತಿಯಾಗಿ ಪ್ರಶಾಂತ್‌ ಮೇಲೆ ದಾಳಿ ಮಾಡುವುದಕ್ಕೆ ಸಫ್ವಾನ್‌ ಅನೇಕ ಬಾರಿ ಸಂಚು ಹೂಡಿದ್ದ. ಈ ವೇಳೆ ಪ್ರಶಾಂತ್ಗೆ ಬೆಂಬಲವಾಗಿ ನಿಂತಿದ್ದು ಸುಹಾಸ್‌‍ ಶೆಟ್ಟಿ. ಇದೇ ವಿಚಾರಕ್ಕೆ ಪ್ರಶಾಂತ್‌ ಮೇಲಿನ ಸಫ್ವಾನ್‌ ಸಂಘರ್ಷ, ಸುಹಾಸ್‌‍ ಶೆಟ್ಟಿ ಕಡೆಗೆ ತಿರುಗಿತ್ತು. ಹೀಗಾಗಿಯೇ ಪ್ರಶಾಂತ್ನನ್ನು ಬಿಟ್ಟ ಸಫ್ವಾನ್‌, ಸುಹಾಸ್‌‍ ಹತ್ಯೆಗೆ ಸ್ಕೆಚ್‌ ಹಾಕಿದ್ದ. ಒಂದಷ್ಟು ಕ್ರಿಮಿನಲ್‌ಗಳ ಜೊತೆ ಸೇರಿ ಸಂಚು ರೂಪಿಸಿದ್ದ. ಅದರಂತೆ ಮಿನಿ ಕಂಟೇನರ್‌ ಚಲಾಯಿಸಿದ್ದ ಸಫ್ವಾನ್‌, ಸುಹಾಸ್‌‍ ಕಾರಿಗೆ ಗುದ್ದಿದ್ದ. ಬಲಿಕ ಮುಝಮಿಲ್‌ ಎಂಬಾತ ಚಲಾಯಿಸಿಕೊಂಡು ಬಂದ ಸ್ವಿಫ್ಟ್ ಕಾರಿನಲ್ಲಿದ್ದ ಹಂತಕರು, ನಟ್ಟ ನಡುರಸ್ತೆಯಲ್ಲೇ ಸುಹಾಸ್‌‍ನನ್ನು ಕೊ ೆಮಾಡಿದ್ದರು.

ಭಾರತವನ್ನು ಒಗ್ಗೂಡಿಸಿದ ಸರ್ದಾರ್‌ ಪಟೇಲ್‌ ಅವರನ್ನು ಶ್ಲಾಘಿಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು, ಅ.31– ಸ್ವಾತಂತ್ರ್ಯದ ನಂತರ ಭಾರತವನ್ನು ಒಟ್ಟುಗೂಡಿಸುವಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರು ತೋರಿಸಿದ ಕೌಶಲ್ಯ ಮತ್ತು ದೃಢಸಂಕಲ್ಪವನ್ನು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಶ್ಲಾಘಿಸಿದ್ದಾರೆ.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150 ನೇ ಜನ ದಿನಾಚರಣೆಯಾದ ಇಂದು ನನ್ನ ಗೌರವಗಳನ್ನು ಸಲ್ಲಿಸುತ್ತೇನೆ ಎಂದು ಗೌಡರು ಹೇಳಿದ್ದಾರೆ. ಭಾರತದ ಸ್ವಾತಂತ್ರ್ಯದ ಹೋರಾಟದಲ್ಲಿ ಅವರ ಪಾತ್ರ ಮತ್ತು ತ್ಯಾಗವು ಅವರನ್ನು ನಮ ರಾಷ್ಟ್ರದ ಶ್ರೇಷ್ಠ ಪುತ್ರರಲ್ಲಿ ಒಬ್ಬರನ್ನಾಗಿ ಮಾಡಿದೆ ಎಂದು ಅವರು ಮೆಚ್ಚುಗೆ ಸೂಚಿಸಿದ್ದಾರೆ.

ಶತ್ರು ದೇಶಗಳಿಗೆ ನುಗ್ಗಿ ಹೊಡೆಯುವ ಸಾಮರ್ಥ್ಯ ಭಾರತಕ್ಕಿದೆ : ಪ್ರಧಾನಿ ಮೋದಿ

ಅಹಮದಾಬಾದ್‌, ಅ.31– ಶತ್ರುಗಳಿಗೆ ಭಾರತದ ಪ್ರತಿಕ್ರಿಯೆ ಈಗ ನಿರ್ಣಾಯಕವಾಗಿದೆ. ನಾವೀಗ ಬಲಿಷ್ಠರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿಲ್ಲಿ ಕೆಲವು ರಾಷ್ಟ್ರಗಳಿಗೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 150 ನೇ ಜನ್ಮ ದಿನಾಚರಣೆಯ ಸಂದರ್ಭವನ್ನು ಬಳಸಿಕೊಂಡು, ಭಾರತದ ಶತ್ರುಗಳಿಗೆ ಭಾರತದ ಪ್ರತಿಕ್ರಿಯೆ ಈಗ ನಿರ್ಣಾಯಕ, ಬಲಿಷ್ಠ ಮತ್ತು ಜಗತ್ತಿಗೆ ಗೋಚರಿಸುತ್ತದೆ ಎಂದು ಅವರು ಪ್ರತಿಪಾದಿಸಿದರು. ಆಪರೇಷನ್‌ ಸಿಂಧೂರ್‌ ಕಾರ್ಯಚರಣೆ ನಮ ಸೇನೆ ಶತ್ರು ಪ್ರದೇಶವನ್ನು ಪ್ರವೇಶಿಸಿ ದಾಳಿ ಮಾಡಬಹುದು ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದೆ ಎಂದು ಹೇಳಿದರು.ಆಪರೇಷನ್‌ ಸಿಂಧೂರ್‌ ಸಮಯದಲ್ಲಿ,

ಇಡೀ ಜಗತ್ತು ಭಾರತದ ಕಡೆಗೆ ಕಣ್ಣು ಎತ್ತಲು ಧೈರ್ಯ ಮಾಡಿದರೆ, ಭಾರತ್‌ ಘರ್‌ ಮೇ ಘುಸ್‌‍ ಕರ್‌ ಮಾರ್ತಾ ಹೈ (ಭಾರತ ಶತ್ರುಗಳ ಪ್ರದೇಶಕ್ಕೆ ನುಗ್ಗಿ ಹೊಡೆಯುತ್ತದೆ) ಎಂದು ಹೇಳಿದರು.
ಇಂದು, ಪಾಕಿಸ್ತಾನ ಮತ್ತು ಭಯೋತ್ಪಾದನೆಯನ್ನು ನಿರ್ವಹಿಸುವವರಿಗೆ ಭಾರತದ ನಿಜವಾದ ಶಕ್ತಿ ಏನೆಂದು ತಿಳಿದಿದೆ ಎಂದು ಪ್ರಧಾನಿ ಹೇಳಿದರು, ದೇಶದ ದೃಢವಾದ ಭದ್ರತಾ ನಿಲುವನ್ನು ಸರ್ದಾರ್‌ ಪಟೇಲ್‌ ಅವರ ಸ್ವಾಭಿಮಾನಿ ಮತ್ತು ಏಕೀಕೃತ ಭಾರತದ ದೃಷ್ಟಿಕೋನಕ್ಕೆ ಜೋಡಿಸಿದರು.

ಕಾಂಗ್ರೆಸ್‌‍ ಪಕ್ಷ ಪಟೇಲ್‌ ಅವರ ದೃಷ್ಟಿಕೋನವನ್ನು ಮರೆತಿದೆ ಎಂದು ಅವರು ಆರೋಪಿಸಿದರು. ಪಟೇಲ್‌ ಅವರ ಆದರ್ಶಗಳು ಬಾಹ್ಯ ಬೆದರಿಕೆಗಳಿಗೆ ಮಾತ್ರವಲ್ಲದೆ ನಕ್ಸಲಿಸಂ ಮತ್ತು ಒಳನುಸುಳುವಿಕೆಯಂತಹ ಆಂತರಿಕ ಸವಾಲುಗಳಿಗೂ ಸರ್ಕಾರದ ವಿಧಾನವನ್ನು ಮಾರ್ಗದರ್ಶಿಸಿದವು ಎಂದು ಪ್ರಧಾನಿ ಮೋದಿ ಹೇಳಿದರು.

2014 ರ ಮೊದಲು, ನಕ್ಸಲರು ದೇಶದ ದೊಡ್ಡ ಭಾಗಗಳಲ್ಲಿ ತಮ್ಮದೇ ಆದ ಆಡಳಿತವನ್ನು ನಡೆಸುತ್ತಿದ್ದರು. ಶಾಲೆಗಳು, ಕಾಲೇಜುಗಳು ಮತ್ತು ಆಸ್ಪತ್ರೆಗಳನ್ನು ಸ್ಫೋಟಿಸಲಾಯಿತು ಮತ್ತು ಆಡಳಿತವು ಅಸಹಾಯಕವಾಗಿ ಕಾಣುತ್ತಿತ್ತು. ನಾವು ನಗರ ನಕ್ಸಲರ ವಿರುದ್ಧ ದೃಢವಾಗಿ ಕಾರ್ಯನಿರ್ವಹಿಸಿದೆವು, ಮತ್ತು ಇಂದು, ಫಲಿತಾಂಶಗಳು ಗೋಚರಿಸುತ್ತಿವೆ – ಈ ಹಿಂದೆ 125 ಪೀಡಿತ ಜಿಲ್ಲೆಗಳಲ್ಲಿ ಕೇವಲ 11 ಮಾತ್ರ ಉಳಿದಿವೆ ಮತ್ತು ನಕ್ಸಲ್‌ ಪ್ರಾಬಲ್ಯ ಮೂರಕ್ಕೆ ಸೀಮಿತವಾಗಿದೆ ಎಂದು ಅವರು ಹೇಳಿದರು.

ಒಳನುಸುಳುವಿಕೆ ಭಾರತದ ಏಕತೆಗೆ ಗಂಭೀರ ಬೆದರಿಕೆಯನ್ನು ಒಡ್ಡಿದೆ ಎಂದು ಪ್ರಧಾನಿ ಮೋದಿ ಎಚ್ಚರಿಸಿದರು. ಮತ ಬ್ಯಾಂಕ್‌ಗಳಿಗಾಗಿ, ಹಿಂದಿನ ಸರ್ಕಾರಗಳು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದವು. ನುಸುಳುಕೋರರಿಗಾಗಿ ಹೋರಾಡುತ್ತಿರುವವರಿಗೆ ರಾಷ್ಟ್ರ ದುರ್ಬಲಗೊಂಡರೂ ಚಿಂತೆಯಿಲ್ಲ. ಆದರೆ ದೇಶದ ಭದ್ರತೆ ಮತ್ತು ಗುರುತು ಅಪಾಯದಲ್ಲಿದ್ದರೆ, ಪ್ರತಿಯೊಬ್ಬ ನಾಗರಿಕನೂ ಅಪಾಯದಲ್ಲಿದ್ದಾನೆ ಎಂದು ಅವರು ಹೇಳಿದರು.

ತಮ್ಮ ಸರ್ಕಾರದ ನಿಲುವನ್ನು ಪುನರುಚ್ಚರಿಸುತ್ತಾ, ಭಾರತದಲ್ಲಿ ಅಕ್ರಮವಾಗಿ ವಾಸಿಸುವ ಪ್ರತಿಯೊಬ್ಬ ನುಸುಳುಕೋರನನ್ನು ತೆಗೆದುಹಾಕಲು ನಾವು ಸಂಕಲ್ಪ ಮಾಡಬೇಕು ಎಂದು ಅವರು ಹೇಳಿದರು.

ಅಖಿಲ ಭಾರತದಲ್ಲಿ, ವಿಚಾರಗಳ ವೈವಿಧ್ಯತೆಯನ್ನು ಗೌರವಿಸಬೇಕು. ಅಭಿಪ್ರಾಯ ವ್ಯತ್ಯಾಸಗಳಿರಬಹುದು, ಆದರೆ ಹೃದಯ ವ್ಯತ್ಯಾಸಗಳಲ್ಲ ಎಂದು ಅವರು ಹೇಳಿದರು.ತಮ್ಮ ಭಾಷಣಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಸರ್ದಾರ್‌ ಪಟೇಲ್‌ ಅವರ 182 ಮೀಟರ್‌ ಎತ್ತರದ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು ಮತ್ತು ಸಭೆಗೆ ಏಕತಾ ದಿವಸ್‌‍ ಪ್ರತಿಜ್ಞೆಯನ್ನು ಬೋಧಿಸಿದರು. ಸ್ವಾತಂತ್ರ್ಯದ ನಂತರ ಭಾರತವನ್ನು ಏಕೀಕರಿಸುವಲ್ಲಿ ಪಟೇಲ್‌ ಅವರ ಪಾತ್ರವನ್ನು ಸ್ಮರಿಸಲು 2014 ರಿಂದ ಪ್ರತಿ ಅಕ್ಟೋಬರ್‌ 31 ರಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದೆ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ : ಅಪ್ಪ-ಮಗ ಸಾವು, ಬದುಕುಳಿದ ತಾಯಿ ಮತ್ತೊಬ್ಬ ಮಗ

ಬೆಂಗಳೂರು,ಅ.31-ಕಿರುಕುಳದಿಂದಾಗಿ ಒಂದೇ ಕುಟುಂಬದ ನಾಲ್ವರು ಆತಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿ ಅಪ್ಪ-ಮಗ ಮೃತಪಟ್ಟು , ತಾಯಿ ಹಾಗೂ ಮತ್ತೊಬ್ಬ ಮಗ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದ ಕುಮಾರಪ್ಪ (60) ಅವರು ರಿಯಲ್‌ಎಸ್ಟೇಟ್‌ ಉದ್ಯಮ ನಡೆಸುತ್ತಿದ್ದರು.

ಇತ್ತೀಚೆಗೆ ಉದ್ಯಮದಲ್ಲಿ ನಷ್ಟ ಉಂಟಾಗಿದ್ದರಿಂದ ಕೆಲವರಿಂದ ಸಾಲ ಪಡೆದುಕೊಂಡಿದ್ದರು. ಸಾಲ ತೀರಿಸುವಂತೆ ಒತ್ತಡ, ಕಿರುಕುಳ ಹೆಚ್ಚಾದಾಗ ಮುಂದೇನು ಮಾಡುವುದೆಂಬುವುದು ತಿಳಿಯದೆ ಪತ್ನಿ ರಮಾ (55) ಹಾಗೂ ಮಕ್ಕಳಾದ ಅರುಣ್‌ಕುಮಾರ್‌(30) ಮತ್ತೊಬ್ಬ ಮಗ ಅಕ್ಷಯ್‌ಕುಮಾರ್‌ (25) ಜೊತೆ ಚರ್ಚಿಸಿ ಎಲ್ಲರೂ ಆತಹತ್ಯೆಗೆ ನಿರ್ಧರಿಸಿದ್ದಾರೆ.

ನಿನ್ನೆ ಸಂಜೆ ಅರುಣ್‌ ನೇಣಿಗೆ ಶರಣಾದರೆ ಉಳಿದ ಮೂವರು ವಿಷ ಸೇವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಿಕ್ಕಜಾಲ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಗಿಲು ಒಡೆದು ಒಳಗೆ ಹೋಗಿ ನೋಡಿದಾಗ ಅಪ್ಪ-ಮಗ ಮೃತಪಟ್ಟಿದ್ದು, ತಾಯಿ -ಮಗ ಒದ್ದಾಡುತ್ತಿರುವುದು ಕಂಡು ಬಂದಿದೆ.

ತಕ್ಷಣ ಆಂಬ್ಯುಲೆನ್ಸ್ ನಲ್ಲಿ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಅವರಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪೊಲೀಸರು ಮನೆಯನ್ನು ಶೋಧಿಸಿದಾಗ ಡೆತ್‌ನೋಟ್‌ ಪತ್ತೆಯಾಗಿದ್ದು, ಅದರಲ್ಲಿ ಕೆಲವರು ನಮಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಮನೆಯವರೆಲ್ಲಾ ಆತಹತ್ಯೆ ಮಾಡಿಕೊಳ್ಳುತ್ತಿದ್ದೇವೆಂದು ಬರೆಯಲಾಗಿದೆ. ಆ ಪತ್ರವನ್ನು ಪೊಲೀಸರು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ರೋಸಿಹೋಗಿ ಪಕ್ಷದಿಂದ ದೂರವಾಗುತ್ತಿರುವ ಕಾರ್ಯಕರ್ತರು

ಬೆಂಗಳೂರು,ಅ.31- ಎತ್ತು ಏರಿಗೆ, ಕೋಣ ನೀರಿಗೆ ಎಂಬಂತೆ ಪ್ರತಿಪಕ್ಷ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಕಾಣುತ್ತಿಲ್ಲ. ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ಕೊಂಡೊಯ್ಯುವಲ್ಲಿ ವಿಫಲವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಮನೆಯೊಂದು ಮೂರು ಬಾಗಿಲು ಎಂಬಂತಿರುವ ಬಿಜೆಪಿಯ ಬಣ ರಾಜಕೀಯದಿಂದ ಸ್ವತಃ ಕಾರ್ಯಕರ್ತರೇ ಬೇಸರಗೊಂಡಿದ್ದು, ಪಕ್ಷದ ಚಟುವಟಿಕೆಗಳಿಂದ ವಿಮುಖರಾಗುತ್ತಿದ್ದಾರೆ. ಇದು ಸಹಜವಾಗಿ ನಾಯಕರ ನಿದ್ದೆಗೆಡುವಂತೆ ಮಾಡಿದೆ. ಎಷ್ಟೇ ಅಸಮಾಧಾನ ಆರೋಪ, ಕುಟುಂಬ ಪ್ರೇಮ ಇದ್ದರೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಅಧ್ಯಕ್ಷರು ಇಲ್ಲವೇ ಪ್ರತಿಪಕ್ಷದ ನಾಯಕನ ಸ್ಥಾನದಲ್ಲಿ ಇದ್ದಾಗ ಕಾರ್ಯಕರ್ತರನ್ನು ಗುರುತಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿದ್ದರು.

ಇದರಿಂದ ಬಿಎಸ್‌‍ವೈ ಬಗ್ಗೆ ಎಷ್ಟೇ ಅಸಮಾಧಾನ ಇದ್ದರೂ ಕಾರ್ಯಕರ್ತರು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಈಗ ಕಾಲ ಬದಲಾದಂತೆ ನಿಷ್ಠಾವಂತರನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಬದಲಿಗೆ ತಮ ಹಿಂಬಾಲಕರಿಗೆ ಮಾತ್ರ ಆಯಾಕಟ್ಟಿನ ಜಾಗದಲ್ಲಿ ಮಣೆ ಹಾಕಲಾಗುತ್ತದೆ ಎಂಬ ನೋವು ಕಾರ್ಯಕರ್ತರಲ್ಲಿ ಮನೆ ಮಾಡಿದೆ.

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ನಾಯಕರು ಎಷ್ಟೇ ಹೇಳಿಕೊಂಡರೂ ವಾಸ್ತವ ಬೇರೆ ಇದೆ ಎಂದು ಪಕ್ಷದವರೇ ಹೇಳುತ್ತಾರೆ. ದೇಶದಲ್ಲಿ ಬಿಜೆಪಿ ಬಲಿಷ್ಠವಾಗಿದ್ದರೂ ಇಲ್ಲಿ ಮಾತ್ರ ಅದಕ್ಕೆ ವಿರುದ್ದವಾದ ಪರಿಸ್ಥಿತಿ ಇದೆ. ಯಡಿಯೂರಪ್ಪನವರಂಥ ಬಲಿಷ್ಠ ನಾಯಕ ಇಲ್ಲದಿರುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದೇ ಪಕ್ಷದ ಈ ಸ್ಥಿತಿಗೆ ಕಾರಣ ಎಂಬುದು ಬಹುತೇಕರ ಆಳಲು.

ಬಿಜೆಪಿ ಅಧ್ಯಕ್ಷ ಸ್ಥಾನ ಘೋಷಣೆಗೆ ಕ್ಷಣಗಣನೆ ಎಂಬ ಚರ್ಚೆಗಳು ನಡೆಯುತ್ತಿದ್ದರೂ, ಹೈಕಮಾಂಡ್‌ ನಾಯಕರು ಅಧಿಕೃತ ಘೋಷಣೆಗೆ ಮುಂದಾಗುತ್ತಿಲ್ಲ. ರಾಜ್ಯ ಮಟ್ಟದ ಬಣ ರಾಜಕೀಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೈಕಮಾಂಡ್‌ ನಾಯಕರ ಅಂಗಳಕ್ಕೆ ತಲುಪುತ್ತಿರುವ ಆರೋಪಗಳ ಸುರಿಮಳೆ ಇದಕ್ಕೆ ಕಾರಣವಾಗುತ್ತಿದೆ.

ಬಿಜೆಪಿಯಲ್ಲಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆಯ ಬಳಿಕ ಎಲ್ಲವೂ ಸರಿಹೋಗಲಿದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ಅಧ್ಯಕ್ಷರ ಬಣ ಇತ್ತು. ಆದರೆ ಅಂದುಕೊಂಡಂತೆ ಆಗುತ್ತಿಲ್ಲ. ಯತಾಳ್‌ ಬಣದ ಅತೃಪ್ತರು ತಮ ತಗಾದೆ ಎತ್ತುತ್ತಲೇ ಇದ್ದಾರೆ. ಪ್ರತ್ಯೇಕ ಸಭೆಗಳ ಮೂಲಕ ಆಂತರಿಕ ಬಂಡಾಯದ ಸುಳಿವು ನೀಡುತ್ತಾ ಬಂದಿದ್ದಾರೆ.

ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಇದ್ದಾರೆ. ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಆದರೆ ಬಿಜೆಪಿ ಅಧ್ಯಕ್ಷರ ನೇಮಕ ಪ್ರಕ್ರಿಯೆಯಂತೆ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಈ ಪ್ರಕ್ರಿಯೆ ಚಾಲ್ತಿಯಲ್ಲಿದ್ದರೂ ಸಾಕಷ್ಟು ತಡವಾಗುತ್ತಿದೆ. ಅಧಿಕೃತವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷರನ್ನಾಗಿ ಏಕೆ ಘೋಷಣೆ ಮಾಡುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ.
ಬಿಜೆಪಿಯಲ್ಲಿರುವ ಆಂತರಿಕ ಗೊಂದಲಕ್ಕೆ ತಡೆ ಬಿದ್ದಿಲ್ಲ. ಒಂದು ಕಡೆಯಲ್ಲಿ ಅತೃಪ್ತ ಬಣ ಹಾಗೂ ವಿಜಯೇಂದ್ರ ಬಣದ ನಡುವೆ ಸಮಸ್ಯೆ ಬಿಗಡಾಯಿಸುತ್ತಿದೆ. ಮತ್ತೊಂದು ಕಡೆ ವಿಪಕ್ಷ ನಾಯಕ ಆರ್‌.ಅಶೋಕ್‌ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ಎಲ್ಲಾ ಗೊಂದಲಗಳ ನೇರ ಪರಿಣಾಮ ಬಿಜೆಪಿ ಪಕ್ಷದ ಚಟುವಟಿಕೆಗಳ ಮೇಲಾಗುತ್ತಿದೆ.
ರಾಜ್ಯದಲ್ಲಿ ಬಿಜೆಪಿ 2023 ಚುನಾವಣೆಯ ಹಿನ್ನಡೆ ಅನುಭವಿಸಿದ ನಂತರದಲ್ಲಿ ಎದ್ದೇಳಲಿಲ್ಲ. ವಿಜಯೇಂದ್ರರ ಕೈಗೆ ಅಧಿಕಾರ ಹಸ್ತಾಂತರ ಮಾಡಿದ್ದರೂ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿಲ್ಲ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುವಲ್ಲೂ ಬಿಜೆಪಿ ಹಿನ್ನಡೆ ಅನುಭವಿಸುತ್ತಿದೆ.

ಸದ್ಯ ಬಿಜೆಪಿ ರಾಜ್ಯ ನಾಯಕತ್ವದ ವಿರುದ್ಧ ಕೇಳಿ ಬರುತ್ತಿರುವ ಬಹುದೊಡ್ಡ ಆರೋಪವಾಗಿದೆ. ರಾಜ್ಯ ಬಿಜೆಪಿ ಆಡಳಿತಾರೂಢ ಪಕ್ಷದ ಜೊತೆಗೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ ಎಂಬ ಆರೋಪವಿದೆ. ಅತೃಪ್ತ ಬಣ ಈ ಆರೋಪವನ್ನು ನಿರಂತರವಾಗಿ ಮಾಡುತ್ತಿದೆ. ಈ ಹಿಂದೆ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಈ ಆರೋಪ ಮಾಡುತ್ತಿದ್ದರು. ಇದೀಗ ಅತೃಪ್ತ ಬಣದ ಇತರರಿಂದಲೂ ಇದೇ ಆರೋಪ ಕೇಳಿಬರುತ್ತಿದೆ.

ಸದ್ಯ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಕೆಲವರು ನಾಯಕತ್ವದ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಉಸ್ತುವಾರಿ ಡಾ.ರಾಧಮೋಹನ್‌ ಅವರು ಹೇಳಿಕೆ ನೀಡಿದ್ದರು. ಆದರೆ ಸದ್ಯಕ್ಕೆ ಯಾವುದೇ ಕ್ರಮಗಳು ಜರುಗಲಿಲ್ಲ. ಸಹಜವಾಗಿ ಇವೆಲ್ಲವೂ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸದ್ಯ ಬಿಜೆಪಿಯ ಭಿನ್ನಮತಕ್ಕೆ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ. ರಾಜ್ಯ ಸರ್ಕಾರ 2 ವರ್ಷವನ್ನು ಈಗಾಗಲೇ ಪೂರೈಸಿದೆ. ಅದರೆ ವಿರೋಧಪಕ್ಷವಾಗಿ ಬಿಜೆಪಿ ವಿಫಲವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಯಾವ ರೀತಿಯಲ್ಲಿ ಹೋರಾಟ ನಡೆಸಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್‌ ನಡೆ ಏನು ಎಂಬುವುದು ಕಾದುನೋಡಬೇಕು.

ದುರ್ಬಲಗೊಂಡ ಹಿಂಗಾರು, ಸದ್ಯಕ್ಕಿಲ್ಲ ಮಳೆ

ಬೆಂಗಳೂರು, ಅ.31- ಮೊಂತಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಹಿಂಗಾರು ಮಳೆ ದುರ್ಬಲಗೊಂಡಿದ್ದು, ನವೆಂಬರ್ ಮೂರರವರೆಗೆ ರಾಜ್ಯದಲ್ಲಿ ಒಣಹವೆ ಕಂಡುಬರಲಿದೆ. ಹಗಲಿನ ವೇಳೆ ಬಿಸಿಲು ಇರಲಿದ್ದು, ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗಲಿದೆ.

ನಿನ್ನೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಿದ್ದು, ಉಳಿದೆಡೆ ಕೆಲವೆಡೆ ಮಾತ್ರ ಮಳೆಯಾಗಿದೆ. ಮೈಸೂರು, ವಿಜಯಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ, ಆದರೆ, ಕೆಲವೆಡೆ ಮಾತ್ರ ಹಗುರದಿಂದ ಸಾಧಾರಣ ಮಳೆ ಮುಂದುವರೆಯಬಹುದು. ಇಂದಿನಿಂದ ರಾಜ್ಯದಲ್ಲಿ ಮಳೆ ಪ್ರಮಾಣ ತಗ್ಗಲಿದ್ದು, ನವೆಂಬರ್ ಮೂರರವರೆಗೂ ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ನವೆಂಬರ್ 3ರವರೆಗೂ ಒಣ ಹವೆ ಮುಂದುವರೆಯಲಿದೆ. ಆನಂತರ ನವೆಂಬರ್ 6ರವರೆಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.

ಮಲೆನಾಡು, ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ನವೆಂಬರ್ ಮೂರರಿಂದ 6ರವರೆಗೆ ಕೆಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ನವೆಂಬರ್ 4ರಿಂದ 6ರವರೆಗೆ ಕೆಲವೆಡೆ ಸಾಧಾರಣ ಮಳೆ ಪ್ರಮಾಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಬಾರಿ ಜಲಾನಯನ ಭಾಗದಲ್ಲಿ ಉತ್ತಮ ಮುಂಗಾರು ಮಳೆ ಬಿದ್ದ ಪರಿಣಾಮ ಅಕ್ಟೋಬರ್ ಅಂತ್ಯದ ವೇಳೆಗೂ ಕೆಆರ್‌ಎಸ್, ಕಬಿನಿ, ಹೇಮಾವತಿ, ಭದ್ರಾ, ಘಟಪ್ರಭಾ, ಮಲಪ್ರಭಾ, ಆಲಮಟ್ಟಿ, ವಾಣಿವಿಲಾಸ ಸಾಗರ ಜಲಾಶಯಗಳು ಗರಿಷ್ಠ ಪ್ರಮಾಣದಲ್ಲಿ ಭರ್ತಿಯಾಗಿವೆ. ಉಳಿದ ಜಲಾಶಯಗಳಲ್ಲೂ ಉತ್ತಮ ನೀರಿನ ಸಂಗ್ರಹವಿದೆ. ಹಿಂಗಾರು ಮಳೆಯ ಅವಧಿಯಲ್ಲೂ ಇನ್ನೂ ರಾಜ್ಯದ ಪ್ರಮುಖ ಜಲಾಶಯಗಳಿಗೆ ಸಾಕಷ್ಟು ಪ್ರಮಾಣದ ಒಳಹರಿವು ಇರುವುದರಿಂದ ಜಲಾಶಯಗಳಿಂದ ನೀರಾವರಿ ಬೆಳೆಗಳಿಗೆ ನೀರು ಹರಿಸಿದರೂ ಭರ್ತಿಯಾಗಿಯೇ ಇವೆ.

ಶವ ಪರೀಕ್ಷೆಗೂ ಲಂಚ, ರಾಜ್ಯದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜು : ಶೋಭಾ ಕರಂದ್ಲಾಜೆ

ಬೆಂಗಳೂರು, ಅ.31- ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಲಂಚ ಪಡೆದುಕೊಂಡ ಕೆಲಸ ಮಾಡಿಕೊಡುತ್ತಿದ್ದಾರೆ. ಸಿಎಂ ಮನೆಯನ್ನೇ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ಮಗಳ ಶವ ಪರೀಕ್ಷೆಗೂ ಲಂಚ ಪಡೆದ ಪ್ರಕರಣದಿಂದ ಕರ್ನಾಟಕದ ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ರಾಜ್ಯದಲ್ಲಿ ಚಾವತಾರ ತಾಂಡವವಾಡುತ್ತಿದೆ. ಅಧಿಕಾರಿಗಳು ಹಣ ಕೊಟ್ಟು ಪೋಸ್ಟಿಂಗ್ ಮಾಡಿಕೊಳ್ಳುತ್ತಿದ್ದಾರೆ. ಲಂಚವಿಲ್ಲದೆ ಈ ಸರ್ಕಾರದಲ್ಲಿ ಏನೂ ನಡೆಯುವುದಿಲ್ಲ ಎಂದು ದೂರಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮತ್ತು ಲಂಚಿ ಸಿದ್ದರಾಮಯ್ಯನವರ ಮೂಗಿನ ನೇರಕ್ಕೆ ನಡೆಯುತ್ತಿದೆ. ಇಂದು ಸಿಎಂ ಮನೆಗೆ ನೀವು ಹಣವಿಲ್ಲದೆ ಹೋದರೆ ಯಾವ ಕೆಲಸವೂ ನಡೆಯುವುದಿಲ್ಲ. ಅವರ ಮಗ ಲಂಚ ಪಡೆದುಕೊಂಡು ಯಾವ ಕೆಲಸವನ್ನಾದರೂ ಮಾಡಿಕೊಡುತ್ತಾರೆ. ಇದು ಲಂಚಾವತಾರ ಸರ್ಕಾರ ಎಂದು ಆರೋಪ ಮಾಡಿದರು.

ಸಹಾರ ವಿಧಾನಸಭಾ ಚುನಾವಣೆಗೆ ರಾಜ್ಯದ ಜನರಿಂದ ಲೂಟಿ ಮಾಡುವ ಕೆಲಸವಾಗುತ್ತಿದೆ. ಇದರ ಬಗ್ಗೆ ನಾವು ಮಾತನಾಡಿದರೆ ಕೆಲವರು ನಮ್ಮ ಮೇಲೆ ವ್ಯಂಗ್ಯವಾಗಿ ಮಾತನಾಡುತ್ತಾರೆ. ಇದ್ದುದ್ದನ್ನು ಇದ್ದಂಗೆ ಹೇಳಿದರೆ ಇವರಿಗೇಕೆ ಕಷ್ಟ ಎಂದು ಪ್ರಶ್ನೆ ಮಾಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಗೃಹ ಸಚಿವರು ಇದ್ದಾರೋ ಇಲ್ಲವೋ ಗೊತ್ತಿಲ್ಲ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ. ಗೊತ್ತಿಲ್ಲ ಅನ್ನೋ ಅವರ ಸಿದ್ದ ಉತ್ತರ ನೀಡುತ್ತಾರೆ. ಪೊಲೀಸರ ಟೋಪಿ ಬದಲಾಯಿಸುವ ಯೋಚನೆ ಮಾಡುತ್ತಾರೆ. ಕಾನೂನು ಕಾಪಾಡುವ ಯೋಚನೆ ಇಲ್ಲ ಎಂದು ಕಿಡಿಕಾರಿದರು.

ಸಿಎಂ ಆಕಾಶದಲ್ಲಿ ಓಡಾಡುತ್ತಿದ್ದಾಎರೆ, ನೆಲದಲ್ಲಿ ಏನಾಗುತ್ತಿದೆ ಎಂಬುದು ಅವರಿಗೂ ಗೊತ್ತಿಲ್ಲ. ಇದರ ಪರಿಣಾಮ ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಹೆಚ್ಚಾಗಿದೆ. ಅಧಿಕಾರಿಗಳು ವರ್ಗಾವಣೆಗೆ ಹಣ ಕೊಡುತ್ತಿದ್ದಾರೆ. ಹಣ ಎಲ್ಲಿ ಸಿಗುತ್ತದೆ ಟ್ರಾನ್ಸ್ಫರ್ ಮಾಡಲು ಎಂದು
ಪ್ರಶ್ನಿಸಿದರು.

ಸಿಎಂ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಬಾಲಕಿ ಅತ್ಯಾಚಾರ, ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಆಗಿದೆ. ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಲಾಗಿದೆ. ಉಪನ್ಯಾಸಕರು ಅತಿಥಿ ಉಪನ್ಯಾಸಕಿ ಮೇಲೆ ಅತ್ಯಾಚಾರ ಮಾಡುತ್ತಾರೆ. ಮಲತಂದೆ ಮಗಳ ಮೇಲೆಯೇ ಅತ್ಯಾಚಾರ ಮಾಡುತ್ತಾನೆ, ಬಿಹಾರದ ಕುಟುಂಬ, ಒರಿಸ್ಸಾದ ಕುಟುಂಬಗಳ ಮಕ್ಕಳನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡುತ್ತಾರೆ. ದುರುಳರಿಗೆ ಇಷ್ಟು ಧೈರ್ಯ ಹೇಗೆ ಬಂತು ಅಲ್ಲಿನ ಸರ್ಕಾರ ಸತ್ತಿದೆ, ಅದಕ್ಕೆ ಅತ್ಯಾಚಾರಿಗಳಿಗೆ ಅಷ್ಟೊಂದು ಧೈರ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳ ಆತ್ಮಹತ್ಯೆ ನಡೆಯುತ್ತಿದೆ. ಗುತ್ತಿಗೆದಾರರು ಕಮೀಷನ್ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹೆಣ್ಣುಮಕ್ಕಳ ಪ್ರಾಣ, ಮಾನಕ್ಕೆ ಗ್ಯಾರಂಟಿ.ಯಾರು ಇಷ್ಟು ದುರ್ಬಲ ಗೃಹಮಂತ್ರಿ ಇಟ್ಟುಕೊಂಡು ಹೇಗೆ ರಾಜ್ಯ ನಡೆಸುತ್ತಿದ್ದಾರೆ ಎಂದು ಗುಡುಗಿದರು.

ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಆಯಿತು. ಎನ್ ಐಎ ವರದಿ ಬಂದಿದೆ. ಧರ್ಮ, ಜಾತಿ ಹೆಸರಲ್ಲಿ ಕೊಲೆಗಡುಕರ ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಮಹಿಳೆಯರಿಗೆ ರಕ್ಷಣೆ ಕೊಡಿ. ನಿಮ್ಮ ಕುರ್ಚಿ ಕಲಹ ದೂರ ಇಡಿ. ಯಾರನ್ನು ಸಿಎಂ ಮಾಡುತ್ತೀರೋ ನಮಗೆ ಗೊತ್ತಿಲ್ಲ. ಯಾರಾದರೂ ಸಿಎಂ ಆಗಿ ಮೊದಲು ಮಹಿಳೆಯರಿಗೆ ರಕ್ಷಣೆ ಕೊಡಿ ಎಂದು ಕರಂದ್ಲಾಜೆ ಆಗ್ರಹಿಸಿದರು.

ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಮಾಜಿ ಕುಲಸಚಿವ ಪ್ರೊ. ಮೈಲಾರಪ್ಪ ಬಂಧನ

ಬೆಂಗಳೂರು, ಅ.31 – ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಪ್ರೊ. ಬಿ.ಸಿ. ಮೈಲಾರಪ್ಪ ಅವರನ್ನು ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಮೈಲಾರಪ್ಪ ಅವರು ನಡೆಸುತ್ತಿದ್ದ ಕರ್ನಾಟಕ ರಾಜ್ಯ ಹರಿಜನ ಸೇವಕ ಸಂಘದಲ್ಲಿ 2 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಾವನ್ನಪ್ಪಿದ್ದರು.

ಮಗನ ಸಾವಿಗೆ ಆಕೆಯೇ ಕಾರಣವೆಂದು ಆಕೆಯ ಅತ್ತೆ, ಮಾವ ಮಹಾಲಕ್ಷ್ಮೀ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ವಿಷಯ ತಿಳಿದ ಮೈಲಾರಪ್ಪ ಇಸ್ಕಾನ್ ಹತ್ತಿರವಿರುವ ಹೋಟೆಲ್ ಬಳಿ ಸಂತ್ರಸ್ತೆಯನ್ನು ಮಾತನಾಡಬೇಕೆಂದು ಕರೆಸಿಕೊಂಡಿದ್ದರು. ಕೆಲವು ಪತ್ರಗಳಿಗೆ ಸಹಿ ಹಾಕುವಂತೆ ಮೈಲಾರಪ್ಪ ಅವರು ಹೇಳಿದಾಗ ಸಂತ್ರಸ್ತೆ ನಿರಾಕರಿಸಿದ್ದರು. ಅದರಿಂದ ಕೋಪಗೊಂಡು ಮೈಲಾರಪ್ಪ ಅವರು ನಡುರಸ್ತೆಯಲ್ಲಿಯೇ ನಿಂದಿಸಿ, ಆಕೆಯ ಜುಟ್ಟನ್ನು ಹಿಡಿದು ಹಲ್ಲೆ ನಡೆಸಿದ್ದಾರೆ.

ಅಲ್ಲದೇ ಸಂತ್ರಸ್ತೆ ಮನೆ ಬಳಿ ಹೋಗಿ ಬೆದರಿಕೆ ಹಾಕಿ ಲೈಗಿಂಕ ಕಿರುಕುಳ ನೀಡಿದ್ದರಿಂದ ಆಕೆ ಬಸವೇಶ್ವರನಗರ ಠಾಣೆ ಪೊಲೀಸರಿಗೆ ಮೈಲಾರಪ್ಪ ವಿರುದ್ಧ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಮೈಲಾರಪ್ಪ ಅವರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಫ್‌ಐಆರ್: ಮೈಲಾರಪ್ಪ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಈ ಸಂತ್ರಸ್ತೆ ಮಹಿಳೆ ದೂರು ನೀಡಿದ್ದು, ಎಫ್‌ಐಆ‌ದಾಖಲಾಗಿದೆ. ವಕೀಲನ ಜೊತೆ ಸಂತ್ರಸ್ತೆ ಮಹಿಳೆಯು ಅನೈತಿಕ ಸಂಬಂಧ ಹೊಂದಿದ್ದಾಳೆ. ನನ್ನ ಬಳಿ ದಾಖಲೆಗಳಿವೆ ಎಂದು ಹೇಳಿ ಆಕೆಯ ಮಾವ -ಅತ್ತೆಯನ್ನು ಜ್ಞಾನಭಾರತಿ ಕ್ಯಾಂಪಸ್‌ಗೆ ಕರೆಸಿಕೊಂಡು ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಮೈಲಾರಪ್ಪ ಧಮ್ಮಿ ಹಾಕಿದ್ದರಿಂದ ಆಕೆ ದೂರು ನೀಡಿದ್ದಾರೆ.