Home Blog Page 1798

ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ : ಸಚಿವ ರಾಜಣ್ಣ

ತುಮಕೂರು,ನ.23- ಬಿಹಾರದಲ್ಲಿ ಜಾತಿಗಣತಿ ವರದಿ ಅಂಗೀಕಾರಗೊಂಡಿರುವುದರಿಂದ ಆಕಾಶವೇನೂ ಬಿದ್ದುಹೋಗಿಲ್ಲ ಎಂದು ಹೇಳುವ ಮೂಲಕ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ತಮ್ಮ ಮನೆಯಲ್ಲಿಂದು ಗೃಹಸಚಿವ ಪರಮೇಶ್ವರ್ ಅವರೊಂದಿಗೆ ಉಪಹಾರಕೂಟ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಮೀಕ್ಷಾ ವರದಿಯಲ್ಲಿ ಏನಿದೆ ಎಂದು ಈವರೆಗೂ ಯಾರಿಗೂ ಗೊತ್ತಿಲ್ಲ. ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಬೇಕು. ಅದರಲ್ಲಿ ಏನಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಬೇಕು. ಬಳಿಕ ನಿರ್ಧಾರ ತೆಗೆದುಕೊಳ್ಳಬೇಕು. ಯಾವುದೂ ಆಗದೆ ವಿರೋಧ ವ್ಯಕ್ತಪಡಿಸುವುದರಲ್ಲಿ ಅರ್ಥವಿಲ್ಲ ಎಂದರು.

ಎಮ್ಮೆಯನ್ನು ನೀರಿನಲ್ಲಿ ನಿಲ್ಲಿಸಿ ಹಾಲು ಕರೆದಂತಾಗಿದೆ ಈಗಿನ ಪರಿಸ್ಥಿತಿ. ನೀರಿನಲ್ಲಿ ನಿಂತಿರುವುದು ಎಮ್ಮೆಯೋ? ಕೋಣವೋ ಎಂಬುದೇ ಗೊತ್ತಿಲ್ಲ ಎಂದು ಮುಗುಮ್ಮಾಗಿ ಹೇಳಿದರು. ಬಿಹಾರದಲ್ಲಿ ಜಾತಿಗಣತಿ ನಡೆದಿದೆ. ವರದಿ ಸಲ್ಲಿಕೆಯಾಗಿ ಅಂಗೀಕಾರಗೊಂಡಿದೆ. ಬಳಿಕ ಆಕಾಶವೇನು ಬಿದ್ದು ಹೋಗಿಲ್ಲ ಎಂದು ಪುನರುಚ್ಚರಿಸಿದರು.

ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ

ಪರಮೇಶ್ವರ್ ಅವರೊಂದಿಗೆ ಭೇಟಿ ಸೌಹಾರ್ದಯುತವಾಗಿದೆ. ಉಪಹಾರಕೂಟದ ವೇಳೆ ನಡೆದ ಚರ್ಚೆಯ ಬಗ್ಗೆ ಮುಂದಿನ ದಿನಗಳಲ್ಲಿ ವಿವರಣೆ ನೀಡುತ್ತೇವೆ. ಹಿರಿಯೂರಿನ ಕಾರ್ಯಕ್ರಮವೊಂದಕ್ಕೆ ನಾವಿಬ್ಬರು ಭೇಟಿ ನೀಡಬೇಕಾಗಿತ್ತು. ಹೀಗಾಗಿ ಜೊತೆಯಲ್ಲಿ ಉಪಹಾರ ಸೇವಿಸಿದ್ದೇವೆ ಎಂದರು.

ಬಿಜೆಪಿಯ ನಾಯಕ ಮಾಜಿ ಸಚಿವ ವಿ.ಸೋಮಣ್ಣ ನಮ್ಮ ಸ್ನೇಹಿತ. ಅವರೊಂದಿಗೆ ಮಾತನಾಡುವುದರಲ್ಲಿ ವಿಶೇಷತೆ ಏನಿಲ್ಲ. ನಾನಾಗಿಯೇ ಅವರಿಗೆ ಕರೆ ಮಾಡುತ್ತೇನೆ. ನನ್ನನ್ನು ಅವರು ಬಿಜೆಪಿಗೆ ಆಹ್ವಾನಿಸಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು ಸೋಮಣ್ಣ ಸೇರಿದಂತೆ ಯಾರೇ ಕಾಂಗ್ರೆಸ್‍ಗೆ ಬರುವಂತಿದ್ದರೆ ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಚರ್ಚೆಯಾಗುತ್ತದೆ. ತಮಗೆ ಮಾಹಿತಿ ಇರುವುದಿಲ್ಲ ಎಂದು ತಿಳಿಸಿದರು.

ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್ ಕಾವೇರಿ ನೀರು ಬಿಡುವಂತೆ ಆದೇಶ

ಬೆಂಗಳೂರು,ನ.23-ತಮಿಳುನಾಡಿಗೆ ಪ್ರತಿದಿನ 2700 ಕ್ಯೂಸೆಕ್ಸ್‍ನಂತೆ ಒಂದು ತಿಂಗಳು ಕಾವೇರಿ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ. ನ.23ರಿಂದ ಡಿ.23ರವರೆಗೂ ಒಂದು ತಿಂಗಳ ಕಾಲ ನೀರು ಹರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಮಳೆ ಕೊರತೆ ಇದೆ. ಜಲಾಶಯಗಳಲ್ಲಿ ನೀರಿನ ಕೊರತೆ ಇದೆ. ಹಲವು ಬಾರಿ ಮನವಿ ಮಾಡಿದರೂ ಅದನ್ನು ಪರಿಗಣಿಸಿಲ್ಲ. ಸುಪ್ರೀಂಕೋರ್ಟ್‍ನ ಆದೇಶದ ಪ್ರಕಾರ ನೀರು ಹರಿಸುವಂತೆ ತಾಕೀತು ಮಾಡಲಾಗಿದೆ. ಕಾವೇರಿ ನದಿಕೊಳ್ಳದಲ್ಲಿ ಮಳೆಯಾಗುತ್ತಿದೆ. ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ನೀರು ಹರಿಸಬೇಕು ಎಂದು ತಮಿಳುನಾಡು ವಾದ ಮಂಡಿಸಿದೆ.

ಕಾವೇರಿ ನದಿಪಾತ್ರದಿಂದ ಯಾಂತ್ರಿತವಾಗಿ ಮೂರು ಸಾವಿರ ಕ್ಯೂಸೆಕ್ ನೀರು ಹರಿದು ಹೋಗುತ್ತದೆ. ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ವಾದವನ್ನು ಪರಿಗಣಿಸಿ ನೀರಿನ ಹರಿವಿನ ಪ್ರಮಾಣವನ್ನು 2700 ಕ್ಯೂಸೆಕ್ಸ್‍ಗೆ ಮಿತಿಗೊಳಿಸಲಾಗಿದೆ ಎಂಬ ಅಭಿಪ್ರಾಯಗಳಿವೆ.

ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ

ಬೆಂಗಳೂರಿಗೆ ಕುಡಿಯುವ ನೀರಿನ ಕೊರತೆ ಇದೆ ಎಂಬ ಕಾರಣಕ್ಕಾಗಿ ತಮಿಳುನಾಡಿಗೆ ನೀರು ಬಿಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಬೆಂಗಳೂರಿನ ಕುಡಿಯುವ ನೀರಿಗೆ ಸುಪ್ರೀಂಕೋರ್ಟ್ ಹಂಚಿಕೆ ಮಾಡಿದ ಪ್ರಕಾರ ನೀರಿನ ಪ್ರಮಾಣವನ್ನು 18 ಟಿಎಂಸಿಯಿಂದ 24 ಟಿಎಂಸಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಇತ್ತೀಚೆಗೆ ಅಸೂಚನೆ ಹೊರಡಿಸಿದೆ.

ಒಂದಷ್ಟು ದಿನ ಮಳೆಯಾದ ಕಾರಣಕ್ಕೆ ನೀರಿನ ಒಳಹರಿವು ಸುಧಾರಿಸತ್ತಾದರೂ ಮತ್ತೆ ತಗ್ಗಿದೆ. ಇದರ ನಡುವೆ ಪದೇ ಪದೇ ನೀರು ಬಿಡುವಂತೆ ನಿಯಂತ್ರಣ ಸಮಿತಿ ಆದೇಶಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ನಿಯಂತ್ರಣ ಸಮಿತಿಯ ತೀರ್ಪನ್ನು ನೀರು ನಿರ್ವಹಣಾ ಪ್ರಾಕಾರದ ಮುಂದೆ ಪ್ರಶ್ನಿಸುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಜಾತಿಗಣತಿ ಸಮೀಕ್ಷೆಯನ್ನು ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ : ಆರ್.ಅಶೋಕ್

ಬೆಂಗಳೂರು, ನ.23- ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಿರುವ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ನಡೆಸಿರುವ ಸಮೀಕ್ಷೆ ಎಲ್ಲೋ ಕುಳಿತುಕೊಂಡು ಇನ್ನಾರದ್ದೋ ಮನೆಯಲ್ಲಿ ತಯಾರಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಮೊದಲಿನಿಂದಲೂ ವರದಿ ಬಗ್ಗೆ ಸಾಕಷ್ಟು ಸಂಶಯಗಳಿದ್ದವು. ಇದನ್ನು ಮನೆ ಮನೆಗೆ ತೆರಳಿ ಜನರಿಂದ ಮಾಹಿತಿ ಪಡೆದು ಸಮೀಕ್ಷೆ ನಡೆಸಿದ್ದರೆ ಖಂಡಿತವಾಗಿಯೂ ನಮ್ಮ ತಕರಾರು ಇರುತ್ತಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಆಯೋಗ ನೇಮಿಸಿದ್ದ ಸಿಬ್ಬಂದಿಗಳು ಮನೆ ಮನೆಗೆ ತೆರಳದೆ ಎಲ್ಲೋ ಕುಳಿತುಕೊಂಡು ತಮಗೆ ಬೇಕಾದ ರೀತಿಯಲ್ಲಿ ವರದಿಯನ್ನು ತಯಾರಿಸಿ ಆತುರಾತುರವಾಗಿ ಸರ್ಕಾರಕ್ಕೆ ಸಲ್ಲಿಸಲು ಸಿದ್ದರಾಗಿದ್ದಾರೆ. ಇದನ್ನು ಒಪ್ಪಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ವರದಿಯನ್ನು ವೈಜ್ಞಾನಿಕವಾಗಿಯೇ ನಡೆಸಲಾಗಿದೆ ಎಂದು ಹಿಂದಿನ ಆಯೋಗದ ಅಧ್ಯಕ್ಷರಾದ ಕಾಂತರಾಜ್ ಹೇಳಿದ್ದಾರೆ. ಹಾಗಾದರೆ ಇದು ವೈಜ್ಞಾನಿಕವಾಗಿ ಮತ್ತು ವಸ್ತುನಿಷ್ಠವಾಗಿದ್ದರೆ ಅಂತಿಮ ವರದಿಗೆ ಅಲ್ಲಿನ ಸದಸ್ಯ ಕಾರ್ಯದರ್ಶಿಯವರು ಏಕೆ ಸಹಿ ಹಾಕಲಿಲ್ಲ. ಇದನ್ನು ಅವರು ಮೊದಲು ಸ್ಪಷ್ಟಪಡಿಸಲಿ ಎಂದು ಒತ್ತಾಯ ಮಾಡಿದರು.

ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ

ವರದಿಗೆ ಸದಸ್ಯ ಕಾರ್ಯದರ್ಶಿ ಸಹಿ ಹಾಕುವುದನ್ನೇ ಮರೆತುಬಿಟ್ಟಿದ್ದಾರೆ ಎನ್ನುವುದಾದರೆ ಇನ್ನು ವರದಿ ತಯಾರಿಸುವಾಗ ಇನ್ನಷ್ಟು ಅವಾಂತರಗಳನ್ನು ಮಾಡಿರಬಹುದು. ಕಾಂತರಾಜ ಅವರು ಬಹಳಷ್ಟು ಬುದ್ದಿವಂತರು ಎಂದುಕೊಂಡಿದ್ದೆ. ಯಾರನ್ನೋ ಓಲೈಸಲು ಈ ರೀತಿ ಹಸಿಬಿಸಿ ವರದಿಯನ್ನು ತಯಾರಿಸುತ್ತಾರೆ ಎಂದುಕೊಂಡಿರಲಿಲ್ಲ ಎಂದು ವ್ಯಂಗ್ಯವಾಡಿದರು.

ವೈಜ್ಞಾನಿಕವಾಗಿ ವರದಿ ಇದ್ದಿದ್ದರೆ ಕಾರ್ಯದರ್ಶಿ ಏಕೆ ಸಹಿ ಹಾಕಲಿಲ್ಲ. ಇದಕ್ಕೆ ಕಾಂತರಾಜ್ ಅವರು ಏನು ಉತ್ತರ ಕೊಡುತ್ತಾರೆ? ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕೆಂಬುದು ಹಲವರ ಒತ್ತಾಯವಾಗಿದೆ. ಈ ನಿಲುವಿನಲ್ಲಿ ನಮ್ಮ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಹಿ ಹಾಕುವ ಪರಿಜ್ಞಾನವಿಲ್ಲ ಎಂದರೆ ವರದಿಯನ್ನು ವೈಜ್ಞಾನಿಕವಾಗಿದೆ ಎಂದು ಹೇಗೆ ಒಪ್ಪಿಕೊಳ್ಳಬೇಕು? ವರದಿ ಸರ್ಕಾರಕ್ಕೆ ಹಸ್ತಾಂತರವಾಗುವ ಮೊದಲೇ ಸಾಕಷ್ಟು ಮಾಹಿತಿಗಳು ಸೋರಿಕೆಯಾಗಿವೆ. ಇದನ್ನು ಒಪ್ಪಿಕೊಳ್ಳುವುದಾದರೆ ಹೇಗೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವೈಜ್ಞಾನಿಕ ಮತ್ತು ನ್ಯಾಯಯುತವಾಗಿ ಸಮೀಕ್ಷೆಯಾಗಬೇಕೆಂಬುದು ನಮ್ಮ ಒತ್ತಾಯ. ಜನಸಂಖ್ಯೆ ಆಧಾರದ ಮೇಲೆ ಸಮೀಕ್ಷೆ ನಡೆಸಿದರೆ ನಾವು ವಿರೋಧಿಸುವುದಿಲ್ಲ. ಯಾವುದೋ ಒಂದು ಸಮುದಾಯವನ್ನು ಓಲೈಕೆ ಮಾಡಿಕೊಂಡು ಇನ್ಯಾವುದೋ ಸಮುದಾಯವನ್ನು ತುಳಿಯಲು ಸಿದ್ದಪಡಿಸಿರುವ ಈ ವರದಿಯನ್ನು ಒಪ್ಪಿಕೊಳ್ಳಬೇಕೆ ಎಂದು ಮರುಪ್ರಶ್ನೆ ಮಾಡಿದರು.

ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ

ವರದಿ ಬಗ್ಗೆ ಅನೇಕ ಸಚಿವರೇ ಆಕ್ಷೇಪಿಸಿದ್ದಾರೆ. ಅನೇಕರು ಸರ್ಕಾರ ವರದಿ ಸ್ವೀಕಾರ ಮಾಡಬಾರದೆಂದು ಒತ್ತಡ ಹಾಕಿದ್ದಾರೆ. ಮೊದಲು ಮುಖ್ಯಮಂತ್ರಿಗಳು ಅವರ ಸಂಪುಟ ಸಚಿವರ ಜೊತೆ ಮಾತನಾಡಲಿ, ನಿಜವಾಗಿ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿ ಬರೆಸಿದ್ದಾರೆ ಎಂಬ ಅನುಮಾನವಿದೆ ಎಂದರು. ಮೂಲ ಪ್ರತಿ ಕಳವಾಗಿರುವ ಬಗ್ಗೆ ಸರ್ಕಾರ ಏಕೆ ತನಿಖೆ ಮಾಡಿಸಿಲ್ಲ. ಯಾವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬಗ್ಗೆ ಕ್ರಮ ಏಕೆ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಸರ್ಕಾರ ಮಾಡಬಾರದು. ಈ ಹಿಂದೆ ಪ್ರತ್ಯೇಕ ಧರ್ಮ ಮಾಡಲು ಹೋಗಿ ಕಾಂಗ್ರೆಸ್ ಪರಿಸ್ಥಿತಿ ಏನಾಗಿತ್ತೆಂಬುದನ್ನು ನೋಡಿಕೊಳ್ಳಬೇಕು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಓಲೈಕೆ ಮಾಡಿಕೊಳ್ಳಲು ಮಾಡುತ್ತಿರುವ ಈ ನಾಟಕವನ್ನು ನಿಲ್ಲಿಸಬೇಕೆಂದರು.

ಮಾಜಿ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣನವರು ಹಿರಿಯರಿದ್ದಾರೆ. ಅವರ ಬಗ್ಗೆ ನಮ್ಮ ಪಕ್ಷದ ಪ್ರಮುಖರು ಮಾತಾಡುತ್ತಿದ್ದಾರೆ ಇನ್ನೊಂದು ವಾರದಲ್ಲಿ ಎಲ್ಲವೂ ಸರಿ ಹೋಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಹಕಾರ ನೀಡುತ್ತೇವೆ : ರಮೇಶ್ ಜಾರಕಿಹೊಳಿ

ಬೆಂಗಳೂರು,ನ.23- ಏನೇ ಅಸಮಾಧಾನವಿದ್ದರೂ ವರಿಷ್ಠರು ತೆಗೆದುಕೊಂಡ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಸೇರಿದಂತೆ ಎಲ್ಲ ಹಂತದಲ್ಲೂ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಸಹಕಾರ ನೀಡುವುದಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಚರ್ಚಿಸಿ ಪರಿಹರಿಸಿಕೊಳ್ಳಲಾಗುವುದು. ವರಿಷ್ಠರ ತೀರ್ಮಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಅದಕ್ಕೆ ನಾನು ಕೂಡ ಹೊರತಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲವು ತೀರ್ಮಾನಗಳಿಂದ ಬೇಸರವಾಗಿದ್ದು ನಿಜ. ಇದನ್ನೇ ವಿವಾದ ಮಾಡಿದರೆ ಪ್ರತಿಪಕ್ಷಗಳಿಗೆ ಇದು ಅಸ್ತ್ರವಾಗಲಿದೆ. ಬರುವ ದಿನಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿಕೊಡಬಾರದು. ಇನ್ನು ಮುಂದೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಲಿದ್ದೇವೆ ಎಂದು ಆಶ್ವಾಸನೆ ನೀಡಿದರು.

ಬುಧವಾರ ನಾನು ಮಾಜಿ ಸಚಿವರಾದ ವಿ.ಸುನೀಲ್‍ಕುಮಾರ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಮನೆಯಲ್ಲೇ ಸಭೆ ಸೇರಿ ಪಕ್ಷದ ಬೆಳವಣಿಗೆ ಕುರಿತಂತೆ ಮಾತುಕತೆ ನಡೆಸಿದ್ದೇವೆ. ಅಸಮಾಧಾನವೆಂಬುದು ಮುಗಿದ ಅಧ್ಯಾಯ, ವಿಜಯೇಂದ್ರ ಇನ್ನು ಮುಂದೆ ನಮ್ಮ ಹುಡುಗ. ಅವರಿಗೆ ಸಹಕಾರ ನೀಡಲಿದ್ದೇವೆ ಎಂದು ವಿವರಿಸಿದರು.

ಮರಾಠ ಮೀಸಲಾತಿಗೆ ನಾವು ಬದ್ಧ : ದೇವೇಂದ್ರ ಫಡ್ನವಿಸ್

ದೇಶದಲ್ಲಿ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಿ ಮುಂದುವರೆಯಬೇಕು. ಇದಕ್ಕೆ ಕರ್ನಾಟಕದಿಂದಲೂ ನಾವು ಹೆಚ್ಚಿನ ಸಂಖ್ಯೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಪಕ್ಷ ಸಂಘಟನೆಯಾಗುತ್ತದೆ. ಕೇವಲ ವಿಜಯೇಂದ್ರ ಒಬ್ಬರೇ ಏನೂ ಮಾಡಲು ಸಾಧ್ಯವಿಲ್ಲ ಎಂದರು.

ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸಲು ವಿಜಯೇಂದ್ರಗೆ ಸಲಹೆ ಕೊಟ್ಟಿದ್ದೇನೆ. ಅವರು ಎಲ್ಲವನ್ನು ಸಹನೆಯಿಂದ ಕೇಳಿದ್ದಾರೆ. ಬರುವ ದಿನಗಳಲ್ಲಿ ಬಿಜೆಪಿಗೆ ಖಂಡಿತವಾಗಿಯೂ ಒಳ್ಳೆಯ ದಿನಗಳು ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ರಮೇಶ್ ಜಾರಕಿಹೊಳಿ ಜೊತೆ ವಿಜಯೇಂದ್ರ ರಹಸ್ಯ ಮಾತುಕತೆ

ಬೆಂಗಳೂರು,ನ.23- ವರಿಷ್ಠರ ತೀರ್ಮಾನದಿಂದ ಅಸಮಾಧಾನಗೊಂಡು ಶಾಸಕಾಂಗ ಸಭೆಯಿಂದಲೇ ಅರ್ಧಕ್ಕೆ ಹೊರನಡೆದಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದರು.

ಸದಾಶಿವನಗರದಲ್ಲಿರುವ ಮನೆಗೆ ಆಗಮಿಸಿದ ವಿಜಯೇಂದ್ರ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ರಮೇಶ್ ಜಾರಕಿಹೊಳಿ, ಬೆಳಗಿನ ಉಪಹಾರವನ್ನು ಸೇವಿಸಿದರು. ಬಳಿಕ ಉಭಯ ನಾಯಕರು ಕೆಲಹೊತ್ತು ರಹಸ್ಯ ಮಾತುಕತೆ ನಡೆಸಿದ್ದು, ಪಕ್ಷದ ಸಂಘಟನೆ, ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ತಮಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಏನೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಮರೆತು ಪಕ್ಷದ ಹಿತದೃಷ್ಟಿಯಿಂದ ತಮ್ಮೊಂದಿಗೆ ಸಹಕರಿಸುವಂತೆ ವಿಜಯೇಂದ್ರ ಕೋರಿದ್ದು, ಪ್ರಧಾನಿ ನರೇಂದ್ರಮೋದಿ ಅವರನ್ನು ಮೂರನೇ ಅವಗೆ ಪ್ರಧಾನಿ ಮಾಡಬೇಕಾದರೆ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಹೇಳಿದ್ದಾರೆ.

ವರಿಷ್ಠರು ಈ ಹಿಂದೆ ನಮಗೆ ಇಷ್ಟವಿಲ್ಲದಿದ್ದರೂ ಕೆಲವು ನಿರ್ಧಾರಗಳನ್ನು ಕೈಗೊಂಡಾಗ ನಾವು ಕೂಡ ಒಪ್ಪಿಕೊಂಡಿದ್ದೇವೆ. ನನ್ನನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ವರಿಷ್ಠರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಪಕ್ಷ ಸಂಘಟನೆ ಮಾಡುತ್ತೇನೆ. ಒಂದು ಪಕ್ಷವೆಂದ ಮೇಲೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಎಲ್ಲವನ್ನು ಬದಿಗೊತ್ತಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಮನವಿ ಮಾಡಿಕೊಂಡರು.

ನನಗೆ ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ ರಾಜ್ಯ ನಾಯಕರ ಬಳಿ ಒಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಬೇಕೆಂಬುದು ನನ್ನ ಒತ್ತಾಸೆಯಾಗಿತ್ತು. ಹಿಂದೆ ಕಷ್ಟಕಾಲದಲ್ಲಿದ್ದಾಗಲೂ ಯಡಿಯೂರಪ್ಪನವರ ಜೊತೆ ಇದ್ದೆ. ಮುಂದೆಯೂ ಇರುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆಂದು ಗೊತ್ತಾಗಿದೆ.

ಖಾಸಗಿ ಬಸ್ ಪಲ್ಟಿ, ಒಂದೇ ಕುಟುಂಬದ ಮೂವರ ದುರ್ಮರಣ

ಯಾವುದೇ ನಿರ್ಧಾರವನ್ನು ಪಕ್ಷದ ವೇದಿಕೆಯಲ್ಲೇ ತೀರ್ಮಾನವಾಗಬೇಕು. ಆತುರದ ಇಲ್ಲವೇ ಯಾರದೋ ಒತ್ತಡಕ್ಕೆ ಮಣಿದು ತೀರ್ಮಾನಿಸಬೇಡಿ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ. ಪಕ್ಷ ಸಂಘಟನೆಗೆ ಒತ್ತು ಕೊಡಿ. ನಿಮ್ಮೊಂದಿಗೆ ನಾವು ಕೂಡ ಇರುತ್ತೇವೆ ಎಂದು ಅಭಯ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ರಮೇಶ್ ಜಾರಕಿಹೊಳಿ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಪಾಡಿಕೊಂಡಿದ್ದರು. ಇದರ ಬೆನ್ನಲ್ಲೇ ವಿಜಯೇಂದ್ರ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ವಿಜಯೇಂದ್ರ ಅವರು ಅಸಮಾಧಾನಗೊಂಡಿರುವವರನ್ನು ಸಮಾಧಾನಪಡಿಸಿ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದೇನೆ. ಅವರಲ್ಲಿ ಸಣ್ಣ ಪುಟ್ಟ ಗೊಂದಲ, ಅಸಮಾಧಾನಗಳಿತ್ತು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಪಕ್ಷದ ಅಧ್ಯಕ್ಷನಾಗಿ ನನ್ನ ಕರ್ತವ್ಯ. ಹೀಗಾಗಿ ಇಂದು ಅವರೊಂದಿಗೆ ಮುಕ್ತವಾಗಿ ಮಾತನ್ನಾಡಿದ್ದೇನೆ ಎಂದು ಹೇಳಿದರು.

ಮುಂದಿನ ಲೋಕಸಭಾ ಚುನಾವಣೆಗೆ 28 ಸಂಸದರನ್ನು ಆಯ್ಕೆ ಮಾಡಿ, ಕಳುಹಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹೀಗಾಗಿ, ರಮೇಶ್ ಜಾರಕಿಹೊಳಿ ಅವರು ಕೂಡ ಕೆಲಸ ಮಾಡುತ್ತೇನೆ ಎಂದಿದ್ದಾರೆ. ನಮ್ಮೆಲ್ಲರ ಗುರಿ ಒಂದೇ. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮಾಡುವುದು ಎಂದರು.

ವರದಿ ಜಾರಿಗೂ ಮುನ್ನವೇ ಅವೈಜ್ಞಾನಿಕ ಎಂಬುದು ಸರಿಯಲ್ಲ : ಕಾಂತರಾಜು

ಬೆಂಗಳೂರು,ನ.23- ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಪ್ರಸ್ತುತ ಅಂಕಿ-ಅಂಶಗಳನ್ನು ಸಮೀಕರಿಸಿಕೊಂಡು ಜಾರಿಯಾಗಬೇಕು ಎಂದು ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯನ್ನು ಇನ್ನೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅದು ಅವೈಜ್ಞಾನಿಕ, ಹಳೆಯದು ಎಂಬೆಲ್ಲಾ ಅಭಿಪ್ರಾಯಗಳು ಅಪ್ರಸ್ತುತ ಎಂದರು.

ಸುಪ್ರೀಂಕೋರ್ಟ್‍ನ ಪ್ರಕರಣ ಒಂದರಲ್ಲಿ ತೀರ್ಪು ನೀಡಿದ್ದು, 10 ವರ್ಷಗಳಷ್ಟು ಹಿಂದಿನ ವರದಿಯನ್ನು ಜಾರಿ ಮಾಡಬಹುದು ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ತಮ್ಮ ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಯಾಗಲು ಎಲ್ಲಾ ಅರ್ಹತೆಗಳನ್ನು ಹೊಂದಿದೆ.

ತಳ ಹಾಗೂ ಅವಕಾಶ ವಂಚಿತ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂಬ ಉದ್ದೇಶದಿಂದ 2013ರಲ್ಲಿ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ಸಮೀಕ್ಷೆ ನಡೆಸಲು ನಿರ್ಧರಿಸಿತ್ತು. ಅದರಂತೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಲಾಗಿದೆ. 55 ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಲಾಗಿದೆ. ಇದನ್ನು ಜಾತಿ ಜನಗಣತಿ ಎಂದು ಬಿಂಬಿಸುವುದು ಸರಿಯಲ್ಲ.

ಜಾತಿ ಮಾಹಿತಿ ಕಲೆಹಾಕುವ ಒಂದು ಕಾಲಂ ಇತ್ತು ಎಂಬುದು ಸತ್ಯ. ಆದರೆ, ಅದನ್ನು ಮೀರಿ ಬಹಳಷ್ಟು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಮನೆ, ನಿವೇಶನ ಹೊಂದಿರುವವರು, ರೇಷನ್ ಕಾರ್ಡ್, ಬ್ಯಾಂಕ್ ಖಾತೆ, ಉದ್ಯೋಗ, ಆರ್ಥಿಕ ಸ್ಥಿತಿ-ಗತಿ ಸೇರಿದಂತೆ ಹಲವು ವಿವರಗಳನ್ನು ಸಂಗ್ರಹಿಸಲಾಗಿದೆ.

ಸಂವಿಧಾನದ ಪ್ರಕಾರ ಮೀಸಲಾತಿ ನೀಡಬೇಕಾದರೆ ಸಾಮಾಜಿಕ ಮತ್ತು ಶೈಕ್ಷಣಿಕ ಮಾನದಂಡಗಳು ಅರ್ಹವಾಗಿವೆ. ಜಾತಿ ಆಧಾರಿತವಾಗಿ ಸಮೀಕ್ಷೆ ನಡೆದು ಅದನ್ನು ಪರಿಗಣಿಸಿ ಮೀಸಲಾತಿ ನೀಡಲಾಗುವುದಿಲ್ಲ ಮತ್ತು ಜಾತಿ ಆಧಾರಿತ ಸಮೀಕ್ಷೆಗಳು ಸಂವಿಧಾನ ಬಾಹಿರವಾಗುತ್ತದೆ.

ಈ ಹಿನ್ನೆಲೆಯಲ್ಲಿ ಅರ್ಥಪೂರ್ಣ ಹಾಗೂ ಸಂವಿಧಾನತ್ಮಕವಾಗಿರಬೇಕು ಎಂಬ ಕಾರಣಕ್ಕಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಮಾಹಿತಿಯನ್ನು ಕಲೆಹಾಕಲಾಯಿತು ಎಂದು ಹೇಳಿದರು. ಸಿದ್ದರಾಮಯ್ಯ ಅವರ ಸರ್ಕಾರದಲ್ಲೇ ವರದಿ ನೀಡದಿರುವ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ. ಆದರೆ, ಆಗಿನ್ನೂ ವರದಿ ಸಂಪೂರ್ಣವಾಗಿ ತಯಾರಾಗಿರಲಿಲ್ಲ. 2019ರಲ್ಲಿ ವರದಿ ಸಿದ್ಧಗೊಂಡಿತ್ತು. ಅದನ್ನು ಸರ್ಕಾರಕ್ಕೆ ಸಲ್ಲಿಸಲು ನಾವು ಪ್ರಯತ್ನಿಸಿದೆವು. ಆದರೆ, ಅವಕಾಶ ಸಿಗಲಿಲ್ಲ. ನನ್ನ ಅವ ಮುಗಿದ್ದಿದರಿಂದಾಗಿ ಆಯೋಗದ ಸದಸ್ಯ ಕಾರ್ಯದರ್ಶಿಯವರಿಗೆ ವರದಿ ನೀಡಿ ಸರ್ಕಾರಕ್ಕೆ ತಲುಪಿಸಲು ಸಲಹೆ ನೀಡಿ ಬಂದಿದ್ದೆ.

ಸದಸ್ಯ ಕಾರ್ಯದರ್ಶಿ ಐಎಎಸ್ ಅಧಿಕಾರಿಯಾಗಿದ್ದು, ಆಯೋಗದ ಮುಖ್ಯಸ್ಥರಾಗಿದ್ದರು. ಸಮೀಕ್ಷೆಯ ಕಾರ್ಯತಂಡದ ಸದಸ್ಯರೂ ಆಗಿದ್ದರು. ಅಂತಿಮ ವರದಿಗೆ ಸದಸ್ಯ ಕಾರ್ಯದರ್ಶಿ ಅವರ ಸಹಿ ಇಲ್ಲ ಎಂಬುದು ಸತ್ಯ. ಆದರೆ, ಆಯೋಗದ ಕಾರ್ಯಕಾರಿ ಮಂಡಳಿ ಅಂತಿಮಗೊಂಡಿರುವ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂಬ ನಿರ್ಣಯ ಕೈಗೊಂಡಿತ್ತು. ಅದಕ್ಕೆ ಸದಸ್ಯ ಕಾರ್ಯದರ್ಶಿ ಸಹಿ ಹಾಕಿದ್ದರು ಎಂದು ಹೇಳಿದರು.

ಸಮೀಕ್ಷೆ ನಡೆದು 8 ವರ್ಷಗಳಾಗಿದ್ದರೂ ಪ್ರಸ್ತುತ ಜಾರಿಗೊಳಿಸುವುದು ಸರಿಯಲ್ಲ ಎಂಬ ಆಕ್ಷೇಪಗಳು ಕೇಳಿ ಬರುತ್ತಿವೆ. ಸುಪ್ರೀಂಕೋರ್ಟ್‍ನ ತೀರ್ಪಿನ ಪ್ರಕಾರ 10 ವರ್ಷಗಳ ವರೆಗೂ ಯಾವುದೇ ಆಯೋಗದ ವರದಿಯನ್ನು ಜಾರಿಗೊಳಿಸುವ ಅವಕಾಶವಿದೆ.

ಹಿಂದುಳಿದ ವರ್ಗಗಳ ಆಯೋಗ ಪ್ರತಿಯೊಂದು ಮನೆಗೂ ತೆರಳಿ ಮಾಹಿತಿ ಕಲೆ ಹಾಕಲಿದೆ. ಅಲೆಮಾರಿಗಳು, ಬೀದಿ ಬದಿ ವಾಸಿಗಳು, ಆಸ್ಪತ್ರೆ ಮುಂಭಾಗ, ಶಾಲಾ-ಕಾಲೇಜುಗಳ ಹೊರ ಭಾಗದ ಮರದ ಕೆಳಗೆ, ಸೇತುವೆಗಳ ಕೆಳಗೆ ಹೀಗೆ ಎಲ್ಲೇಲ್ಲಿ ಜನರು ವಾಸಿಸುತ್ತಾರೋ ಅಲ್ಲಿಗೆಲ್ಲಾ ತೆರಳಿ ಮಾಹಿತಿ ಕಲೆ ಹಾಕಲಾಗಿದೆ. ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಅದಕ್ಕೂ ಮುನ್ನವೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ.

ಸರ್ಕಾರ ಮೊದಲು ವರದಿಯನ್ನು ಸ್ವೀಕರಿಸಬೇಕು. ಅದನ್ನು ಮುದ್ರಿಸಿ ಎಲ್ಲರಿಗೂ ಹಂಚಬೇಕು. ಅದನ್ನು ಅಧ್ಯಯನ ನಡೆಸಿದ ಬಳಿಕ ನಿರ್ಣಯ ಕೈಗೊಳ್ಳಬೇಕು. ಏಕಾಏಕಿ ಅವೈಜ್ಞಾನಿಕ ಎಂಬುದು ಸರಿಯಲ್ಲ. ಟೀಕೆ ಮಾಡಲು ಎಲ್ಲರಿಗೂ ಸ್ವತಂತ್ರವಿರುತ್ತದೆ. ನಾನು ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ವರದಿ ಹಳೆಯದು ಎಂಬುದು ಸರಿಯಲ್ಲ.

1980ರಲ್ಲಿ ನೀಡಲಾಗಿದ್ದ ಮಂಡಲ್ ಆಯೋಗದ ವರದಿಯನ್ನು 1993ರಲ್ಲಿ ಜಾರಿಗೊಳಿಸಲಾಗಿದೆ. 2015ರಲ್ಲಿ ಸಿದ್ಧಪಡಿಸಿದ್ದ ಸಮೀಕ್ಷಾ ವರದಿಯ ಮಾಹಿತಿಗಳನ್ನು ಆಧಾರವಾಗಿಟ್ಟುಕೊಂಡು ಪ್ರಸ್ತುತ ದಿನ ಮಾನದ ಅಂಕಿ-ಅಂಶಗಳನ್ನು ಪರಿಗಣಿಸಿ ಜಾರಿ ಮಾಡಬಹುದು. ಈ ರೀತಿಯ ಸಮೀಕರಣಕ್ಕೆ ತಜ್ಞರುಗಳಿದ್ದಾರೆ ಎಂದು ಹೇಳಿದರು.

ರಾಮಮಂದಿರವನ್ನು ಲೋಕಸಭಾ ಚುನಾವಣಾ ಅಸ್ತ್ರವನ್ನಾಗಿಸಲು ಬಿಜೆಪಿ ಪ್ಲಾನ್

ಮೀಸಲಾತಿಯ ಪ್ರಮಾಣ ಶೇ.50ರಷ್ಟೇ ಇರಬೇಕೇ ? ಅದನ್ನು ಮೀರಬೇಕೆ? ಅವಕಾಶ ವಂಚಿತರಿಗೆ ಸೌಲಭ್ಯ ನೀಡುವುದೇಗೆ ಎಂಬೆಲ್ಲಾ ಪ್ರಶ್ನೆಗಳು ನಮ್ಮ ಮುಂದಿವೆ. ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್‍ಗಳು ಹಲವಾರು ಬಾರಿ ಇಂತಹ ಪ್ರಶ್ನೆಗಳು ನಮ್ಮ ಮುಂದಿವೆ. ಅದಕ್ಕೆ ಉತ್ತರ ನೀಡಲು 10 ವರ್ಷಕ್ಕೊಮ್ಮೆ ನಡೆಯುವ ಜನಗಣತಿಯಲ್ಲಿ ಜಾತಿ ಮಾಹಿತಿ ಸಂಗ್ರಹ ಸಮರ್ಪಕ. ಇಲ್ಲವಾದರೆ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಗಳು ಪರ್ಯಾಯವಾಗಲಿವೆ ಎಂದರು.

ಕರ್ನಾಟಕ ದೇಶದಲ್ಲೇ ಪ್ರಥಮ ಬಾರಿಗೆ ಸಮೀಕ್ಷೆಗೆ ಕೈ ಹಾಕಿತು. ಬಿಹಾರದಲ್ಲಿ ಈ ರೀತಿಯ ಪ್ರಯತ್ನಗಳಾದ ಹಲವಾರು ಬಾರಿ ಆಕ್ಷೇಪಗಳು, ಅಡೆತಡೆಗಳು ಎದುರಾಗುತ್ತವೆ. ನ್ಯಾಯಾಲಯಗಳಲ್ಲಿ ತಗಾದೆ ತೆಗೆಯಲಾಗಿತ್ತು. ನ್ಯಾಯಾಲಯ ತಡೆಯಾಜ್ಞೆ ನೀಡಲಿಲ್ಲ. ಅಂತಿಮವಾಗಿ ವರದಿ ಸಿದ್ಧಗೊಂಡು ಜಾರಿಯಾಗಿದೆ ಎಂದು ಹೇಳಿದರು.

ತಮ್ಮ ನೇತೃತ್ವದ ಆಯೋಗದ ವರದಿ ಸದಸ್ಯ ಕಾರ್ಯದರ್ಶಿ ಅವರ ಬಳಿ ಇದೆ. ಅದನ್ನು ಸದಸ್ಯ ಕಾರ್ಯದರ್ಶಿಯಾದರೂ ಸರ್ಕಾರಕ್ಕೆ ತಲುಪಿಸಬೇಕು ಅಥವಾ ಸರ್ಕಾರವೇ ಪಡೆದುಕೊಳ್ಳಬೇಕು. ಮೂಲ ಪ್ರತಿ ನಾಪತ್ತೆಯಾದ ಬಗ್ಗೆ ತಮಗೆ ಮಾಹಿತಿ ಇಲ್ಲ. ನಾವು ಅವ ಮುಗಿಯುವ ಮುನ್ನವೇ ಸದಸ್ಯ ಕಾರ್ಯದರ್ಶಿ ಅವರಿಗೆ ವರದಿ ನೀಡಿ ಬಂದಿದ್ದೇವೆ. ಒಳಗಿನ ಮಾಹಿತಿಗಳು ತಮಗೆ ಗೊತ್ತಿಲ್ಲ ಎಂದು ತಿಳಿಸಿದರು.

ಅಂತಿಮ ಹಂತ ತಲುಪಿದ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ

ಉತ್ತರಕಾಶಿ,ನ.23- ನಿರ್ಮಾಣ ಹಂತದದಲ್ಲಿದ್ದ ಉತ್ತರಕಾಶಿ ಸುರಂಗ ದಿಢೀರ್ ಕುಸಿತ ಕಂಡ ಪರಿಣಾಮ ಅದರ ಅವಶೇಷಗಳಡಿ ಸಿಲುಕಿದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರಗೆ ತರಲು ಕಳೆದ 11 ದಿನಗಳಿಂದ ನಿರಂತರವಾಗಿ ಶ್ರಮಿಸಲಾಗುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ಶೀಘ್ರವೇ ತಲುಪುವ ಪ್ರಯತ್ನಗಳು ಭರದಿಂದ ಸಾಗುತ್ತಿದ್ದು, ಕೊನೆಯ ಪೈಪ್‍ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ.

ರಕ್ಷಣಾ ಕಾರ್ಯವನ್ನು ವೇಗಗೊಳಿಸಲು ಸಹಾಯ ಮಾಡಲು ದೆಹಲಿಯಿಂದ ಏಳು ತಜ್ಞರ ತಂಡವು ಸ್ಥಳಕ್ಕೆ ತಲುಪಿದೆ. ಈ ಮೂಲಕ ರಕ್ಷಣಾ ಕಾರ್ಯವನ್ನು ಮತ್ತಷ್ಟು ಸುಗುಮಗೊಳಿಸಲು ಭಾರೀ ಶ್ರಮ ವಹಿಸಲಾಗುತ್ತಿದೆ. ಒಳಗೆ ಸಿಲುಕಿರುವ 41 ಕಾರ್ಮಿಕರನ್ನು ತಲುಪಲು ಅವರು ಈಗ ಹೆಚ್ಚುವರಿ 12 ಮೀಟರ್ ಕೊರೆಯಬೇಕಿದೆ. ಕಾರ್ಮಿಕರು ಪೈಪ್ ಮೂಲಕ ಹೊರಬರುವುದರಿಂದ ಅವರಿಗೆ ತಕ್ಷಣದ ವೈದ್ಯಕೀಯ ಆರೈಕೆ ನೀಡಲು ಆರೋಗ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ.

ಕಾರ್ಮಿಕರನ್ನು ಸ್ಥಳಾಂತರಿಸಿದ ನಂತರ ತಕ್ಷಣವೇ ವೈದ್ಯಕೀಯ ಸೇವೆಯನ್ನು ಒದಗಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ನಿಯಂತ್ರಣ ಕೊಠಡಿಯಲ್ಲಿ ಎಂಟು ಹಾಸಿಗೆಗಳ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಸ್ಥಳದಲ್ಲಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಆಂಬ್ಯುಲೆನ್ಸ್‍ಗಳು ಮತ್ತು ಹೆಲಿಕಾಪ್ಟರ್‍ಗಳು ತ್ವರಿತ ವೈದ್ಯಕೀಯ ಸಹಾಯವನ್ನು ಖಚಿತಪಡಿಸಿಕೊಳ್ಳಲು ಸಿದ್ಧವಾಗಿವೆ.

ಅವಶೇಷಗಳ ಮೂಲಕ 800 ಎಂಎಂ ವ್ಯಾಸದ ಉಕ್ಕಿನ ಪೈಪ್‍ಗಳನ್ನು ಕೊರೆಯಲು ತಡರಾತ್ರಿ ಕೆಲವು ಕಬ್ಬಿಣದ ರಾಡ್‍ಗಳು ಆಗರ್ ಯಂತ್ರಕ್ಕೆ ಅಡ್ಡಿಪಡಿಸಿದಾಗ ಸಣ್ಣ ಅಡಚಣೆಯಾಗಿದೆ. ಕಳೆದ ಒಂದು ಗಂಟೆಯಲ್ಲಿ ಆರು ಮೀಟರ್ ಉದ್ದ ಕೊರೆಯಲಾಗಿದೆ ಎಂದು ನಿಮಗೆ ತಿಳಿಸಲು ನಮಗೆ ತುಂಬಾ ಸಂತೋಷವಾಗಿದೆ.

ಆಶಾದಾಯಕವಾಗಿ, ಮುಂದಿನ ಎರಡು ಮೂರು ಗಂಟೆಗಳು ಮುಂದಿನ ಕಾರ್ಯ ನಡೆಸಲಾಗುವುದು, ನಾವು ರಾತ್ರಿ 8 ಗಂಟೆಗೆ ಮತ್ತೆ ಒಟ್ಟುಗೂಡಿದಾಗ, ನಿಮ್ಮೊಂದಿಗೆ ಹಂಚಿಕೊಳ್ಳಲು ನಮಗೆ ಅಂತಹದ್ದೇ ಒಳ್ಳೆಯ ಸುದ್ದಿ ಇದೆ ಎಂದು ನಾನು ಭಾವಿಸುತ್ತೇನೆ ಎಂದು ಪ್ರಧಾನ ಮಂತ್ರಿ ಕಚೇರಿಯ ಮಾಜಿ ಸಲಹೆಗಾರರಾದ ಭಾಸ್ಕರ್ ಖುಲ್ಬೆ ಹೇಳಿದ್ದಾರೆ.

ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವನ್ನು ಪಡೆದುಕೊಂಡಿದೆ. ಅಮೆರಿಕದ ಆಗರ್ ಯಂತ್ರವು ಕುಸಿತಗೊಂಡ ಸುರಂಗದ ಅವಶೇಷಗಳ ಒಳಗೆ 45 ಮೀಟರ್ಗಳಷ್ಟು ದೂರ ಕ್ರಮಿಸಿದೆ. ಒಳಗೆ ಸಿಲುಕಿರುವ ಕಾರ್ಮಿಕರನ್ನು ತಲುಪಲು 6 ಮೀಟರ್ ಉದ್ದದ 800 ಎಂಎಂ ವ್ಯಾಸದ ಎರಡು ಉಕ್ಕಿನ ಪೈಪ್‍ಗಳನ್ನು ಹಾಕಲು ಸುಮಾರು 12 ಮೀಟರ್‍ಗಳಷ್ಟು ಅಗೆಯಬೇಕಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

ಸಿಲುಕಿರುವವರು ಅದೃಷ್ಟವಶಾತ್ ಜೀವಂತವಾಗಿದ್ದಾರೆ. ಅವರಿಗೆ ಸೂಕ್ತ ಆಹಾರ ಒದಗಿಸಲಾಗಿದೆ. ರಕ್ಷಣೆಯ ಬಳಿಕ ಅವರ ಆರೈಕೆಗಾಗಿ 15 ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ತಕ್ಷಣದ ವೈದ್ಯಕೀಯ ಆರೈಕೆಗಾಗಿ ಎಂಟು ಹಾಸಿಗೆಗಳನ್ನು ಒಳಗೊಂಡಿರುವ ತಾತ್ಕಾಲಿಕ ಆಸ್ಪತ್ರೆಯನ್ನು ಸಹ ಸ್ಥಳದಲ್ಲಿ ಸ್ಥಾಪಿಸಲಾಗಿದೆ. ಹಲವಾರು ಅಂಬುಲೆನ್ಸ್ಗಳು ಮತ್ತು ಹೆಲಿಕಾಪ್ಟರ್‍ನ್ನು ಸ್ಥಳದಲ್ಲಿ ಇರಿಸಲಾಗಿದೆ.

ಅಲ್ಲದೇ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳು ಹಾಗೂ ಏಮ್ಸ್, ಋಷಿಕೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಶಿಲಾಖಂಡ ರಾಶಿಗಳಿಗೆ ಅಡ್ಡಲಾಗಿ ಕೊರೆಯುವ ಮೂಲಕ 44 ಮೀಟರ್‍ಗಳ ಪೈಪ್‍ಗಳನ್ನು ಸೇರಿಸಲಾಗಿದೆ. ಆದರೆ ಎನ್‍ಡಿಆರ್‍ಎಫ್ ಸಿಬ್ಬಂದಿ ಅದರೊಳಗೆ ಯಂತ್ರವನ್ನು ಕತ್ತರಿಸಲು ಸಾಧ್ಯವಾಗದ ಉಕ್ಕಿನ ರಾಡ್‍ಗಳನ್ನು ಕಂಡುಕೊಂಡಿದ್ದಾರೆ ಎಂದು ಪಾರುಗಾಣಿಕಾ ಅಕಾರಿ ಹರ್ಪಾಲ್ ಸಿಂಗ್ ತಿಳಿಸಿದ್ದಾರೆ.

ಸಿಎಂ ಧಾಮಿ ಭರವಸೆ:
ಸಿಕ್ಕಿಬಿದ್ದಿರುವ 41 ಕಾರ್ಮಿಕರನ್ನು ಬಿಡುಗಡೆ ಮಾಡಲು ನಡೆಯುತ್ತಿರುವ ತೀವ್ರವಾದ ರಕ್ಷಣಾ ಕಾರ್ಯಾಚರಣೆಯಲ್ಲಿ, ಎಲ್ಲಾ ಸಂತ್ರಸ್ತರನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ರಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆಶಾವಾದ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳೊಂದಿಗೆ ನಿರಂತರ ಸಂವಹನದೊಂದಿಗೆ ಸಿಲ್ಕ್ಯಾರಾ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ವೇಗವಾಗಿ ಪ್ರಗತಿಯಲ್ಲಿದೆ. ಯಂತ್ರವನ್ನು ಮರುಪ್ರಾರಂಭಿಸುವ ಮೂಲಕ 45 ಮೀಟರ್ ಆಳದವರೆಗೆ ಕೊರೆಯುವುದು ಪೂರ್ಣಗೊಂಡಿದೆ. ಕೇಂದ್ರದಿಂದ ಪಡೆದ ಉಪಕರಣಗಳನ್ನು ಬಳಸಿಕೊಂಡು ಲಂಬ ಮತ್ತು ಅಡ್ಡ ಕೊರೆಯುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಮುಂಬೈನ ವಸತಿ ಕಟ್ಟಡದಲ್ಲಿ ಬೆಂಕಿ, 135 ಜನರ ರಕ್ಷಣೆ

ಸರ್ಕಾರ ಎಸ್‍ಡಿಆರ್‍ಎಫ್ ಮತ್ತು ಎನ್‍ಡಿಆರ್‍ಎಫ್ ನೆರವಿನೊಂದಿಗೆ ಸಿಕ್ಕಿಬಿದ್ದ ಕಾರ್ಮಿಕರಿಗಾಗಿ ಆಡಿಯೋ ಸಂವಹನ ಸೆಟಪ್‍ನ್ನು ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರೊಂದಿಗೆ ವೈಯಕ್ತಿಕ ಸಂಭಾಷಣೆಗಳನ್ನು ನಡೆಸಲಾಗುತ್ತಿದೆ. ಕಾರ್ಮಿಕರ ಮಾನಸಿಕ ಯೋಗಕ್ಷೇಮಕ್ಕೆ ಆದ್ಯತೆ ನೀಡಿ, ಮನೋವಿಜ್ಞಾನಿಗಳೊಂದಿಗೆ ಚರ್ಚೆಯೂ ನಡೆಯುತ್ತಿದೆ. ಕಾರ್ಮಿಕರ ಆರೋಗ್ಯ ಮತ್ತು ಯೋಗಕ್ಷೇಮವು ನಮ್ಮ ಪ್ರಮುಖ ಆದ್ಯತೆಗಳಾಗಿವೆ ಎಂದು ಹೇಳಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಸಾವು

ಶಿವಮೊಗ್ಗ, ನ.23- ರೈಲಿಗೆ ಸಿಲುಕಿ ರೈಲ್ವೆ ಸ್ಟೇಷನ್ ಮಾಸ್ಟರ್ ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ಇಂದು ನಡೆದಿದೆ. ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಮೃತಪಟ್ಟ ದುರ್ದೈವಿಯಾಗಿದ್ದಾರೆ.

ಮುಂಬೈನ ವಸತಿ ಕಟ್ಟಡದಲ್ಲಿ ಬೆಂಕಿ, 135 ಜನರ ರಕ್ಷಣೆ

ರೈಲ್ವೆ ಹಳಿಗೆ ತಲೆಕೊಟ್ಟು ಮೃತಪಟ್ಟ ರೀತಿಯಲ್ಲಿ ಅರುಣ್‍ಕುಮಾರ್ ಅವರ ಮೃತದೇಹ ಪತ್ತೆಯಾಗಿದೆ.
ನಿನ್ನೆ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ತಾವು ಬಂದಿದ್ದ ರೈಲಿಗೆ ಸಿಲುಕಿ ಸಾವನ್ನಪ್ಪಿರುವುದು ನಿಗೂಢವಾಗಿದೆ. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸೇನಾ ಶಿಬಿರದ ಮೇಲೆ ಗ್ರೆನೇಡ್ ದಾಳಿ

ತಿನ್ಸುಕಿಯಾ, ನ.23 (ಪಿಟಿಐ) ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಸೇನಾ ಶಿಬಿರದ ಗೇಟ್‍ನ ಹೊರಗೆ ಗ್ರೆನೇಡ್ ಸ್ಪೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿನ್ನೆ ಸಂಜೆ ಡಿರಾಕ್‍ನಲ್ಲಿರುವ ಸೇನಾ ಶಿಬಿರದ ಗೇಟ್‍ಗಳ ಮುಂದೆ ಸೋಟ ಸಂಭವಿಸಿದೆ ಎಂದು ಅವರು ಹೇಳಿದರು. ನಮ್ಮ ಮಾಹಿತಿಯ ಪ್ರಕಾರ, ಇಬ್ಬರು ಮೋಟಾರ್‌ಸೈಕಲ್‌ನಲ್ಲಿ ಬಂದ ವ್ಯಕ್ತಿಗಳು ಶಿಬಿರದೊಳಗೆ ಗ್ರೆನೇಡ್ ಅನ್ನು ಎಸೆಯಲು ಪ್ರಯತ್ನಿಸಿದರು ಆದರೆ ಅದು ಹೊರಗೆ ಬಿದ್ದು ಸ್ಪೋಟಗೊಂಡಿದೆ ಎಂದು ಅವರು ಹೇಳಿದರು.

ಹೈದರಾಬಾದ್ : ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ

ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ ಮತ್ತು ಅಪರಾಗಳನ್ನು ಹಿಡಿಯಲು ಶೋಧವನ್ನು ಪ್ರಾರಂಭಿಸಿದ್ದೇವೆ ಎಂದು ಅವರು ಹೇಳಿದರು. ಅಸ್ಸಾಂನ ನಾಲ್ಕು ಜಿಲ್ಲೆಗಳಾದ ದಿಬ್ರುಗಢ್, ತಿನ್ಸುಕಿಯಾ, ಶಿವಸಾಗರ್ ಮತ್ತು ಚರೈಡಿಯೊ ಜಿಲ್ಲೆಗಳಿಗೆ ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರಗಳು) ಕಾಯಿದೆಯನ್ನು ಜಾರಿಗೆ ತರಲಾಗಿದೆ.

ಮರಾಠ ಮೀಸಲಾತಿಗೆ ನಾವು ಬದ್ಧ : ದೇವೇಂದ್ರ ಫಡ್ನವಿಸ್

ಮುಂಬೈ, ನ 23 (ಪಿಟಿಐ) – ಮರಾಠರು ಎತ್ತಿರುವ ಬೇಡಿಕೆಗಳನ್ನು ಪರಿಹರಿಸಲು ಸರ್ಕಾರ ಸಕಾರಾತ್ಮಕವಾಗಿದೆ ಮತ್ತು ಸಮುದಾಯಕ್ಕೆ ಮೀಸಲಾತಿ ನೀಡುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಕಾರ್ತಿಕಿ ಏಕಾದಶಿಯಂದು ಉಪ ಮುಖ್ಯಮಂತ್ರಿ ಮತ್ತು ಅವರ ಪತ್ನಿ ವಿಠ್ಠಲ ಮತ್ತು ರುಕ್ಮಿಣಿ ದೇವಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು ನಂತರ ಸೊಲ್ಲಾಪುರ ಜಿಲ್ಲೆಯ ಪಂಢರಪುರ ಪಟ್ಟಣದಲ್ಲಿ ಮರಾಠ ಸಮುದಾಯದ ನಿಯೋಗದ ಭೇಟಿ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು.

ಹೈದರಾಬಾದ್ : ಸಚಿವ ಜಮೀರ್ ತಂಗಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ

ಮರಾಠ ಸಮುದಾಯದ ಬೇಡಿಕೆಗಳಿಗೆ ರಾಜ್ಯ ಸರ್ಕಾರವು ಸಕಾರಾತ್ಮಕವಾಗಿದೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದಾರೆ. ನಾವು ಸಂಪೂರ್ಣ ಬೆಂಬಲದೊಂದಿಗೆ ಅವರ ಬೆನ್ನಿಗೆ ನಿಂತಿದ್ದೇವೆ ಎಂದು ಅವರು ಎಕ್ಸ್ ಮಾಡಿದ್ದಾರೆ. ಸಮಸ್ಯೆಯನ್ನು ಖಚಿತವಾಗಿ ಪರಿಹರಿಸಲಾಗುವುದು. ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.

ಪಂಢರಪುರದಲ್ಲಿ ಮರಾಠಾ ಭವನ ನಿರ್ಮಾಣ, ಅಣ್ಣಾಸಾಹೇಬ ಪಾಟೀಲ ಆರ್ಥಿಕ ವಿಕಾಸ ಮಹಾಮಂಡಳ ಹಾಗೂ ಸಾರಥಿ ಉಪಕೇಂದ್ರಗಳ ಆರಂಭ, ದೇವಸ್ಥಾನ ಪೇಟೆಯಲ್ಲಿ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸರಕಾರ ನಿವೇಶನ ನೀಡಬೇಕು ಎಂದು ನಿಯೋಗ ಒತ್ತಾಯಿಸಿತು.

ಛತ್ರಪತಿ ಶಾಹು ಮಹಾರಾಜ್ ಸಂಶೋಧನೆ, ತರಬೇತಿ ಮತ್ತು ಮಾನವ ಅಭಿವೃದ್ಧಿ ಸಂಸ್ಥೆ ಮಹಾರಾಷ್ಟ್ರ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, ಮರಾಠ ಮತ್ತು ಮರಾಠ-ಕುಂಬಿ ವಿಭಾಗಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿದೆ.