Thursday, November 6, 2025
Home Blog Page 1804

ವ್ಯಕ್ತಿಯನ್ನು ಅಪಹರಿಸಿ ಹಣ ವಸೂಲಿ: ಪ್ರೊಬೇಶನರಿ ಪಿಎಸ್‍ಐ ಸೇರಿ ನಾಲ್ವರ ಬಂಧನ

ಬೆಂಗಳೂರು, ನ.20- ವ್ಯಕ್ತಿಯೊಬ್ಬರನ್ನು ಅಪಹರಣ ಮಾಡಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇಲೆ ಪ್ರೊಬೇಶನರಿ ಪಿಎಸ್‍ಐ, ಕಾನ್‍ಸ್ಟೇಬಲ್ ಹಾಗೂ ಮಾಜಿ ಹೋಂಗಾರ್ಡ್ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹೋಂಗಾರ್ಡ್ ಎಂದು ಪರಿಚಿಸಿಕೊಂಡು ರಾಜ್ ಕಿಶೋರ್, ನಮ್ಮ ಅಣ್ಣನಿಗೆ ಕಾರ್ತಿಕ್ ಎಂಬಾತ ಹಣ ನೀಡಬೇಕು. ನೀವು ಕೊಡಿಸಿ ಎಂದು ಪ್ರೊಬೇಶನರಿ ಪಿಎಸ್‍ಐ ಅವರಿಗೆ ಹೇಳಿದ್ದಾನೆ. ಪ್ರೊಬೇಶನರಿ ಪಿಎಸ್‍ಐ ಅವರು ಕಾನ್‍ಸ್ಟೇಬಲ್ ಜೊತೆ ಸ್ಥಳಕ್ಕೆ ಹೋಗಿ ಮಾತುಕತೆ ನಡೆಸಿದ್ದಾರೆ. ಆ ಸಂದರ್ಭದಲ್ಲಿ ಕಾರ್ತಿಕ್‍ನನ್ನು ಎಚ್‍ಎಸ್‍ಆರ್ ಲೇಔಟ್‍ನಿಂದ ಅಪಹರಿಸಿ ಒಂದೂವರೆ ಕೋಟಿ ಕ್ರಿಫ್ಟೋ ಕರೆನ್ಸಿ ಹಾಗೂ 20 ಲಕ್ಷ ಹಣ ಕೊಡುವಂತೆ ಬೆದರಿಕೆ ಹಾಕಿದ್ದಾರೆ.

ಕಾರ್ತಿಕ್ ಹೆದರಿ ಆರೋಪಿಗಳ ಅಕೌಂಟ್‍ಗೆ ಹಣ ವರ್ಗಾವಣೆ ಮಾಡಿದ್ದಾರೆ, ಘಟನೆ ಬಳಿಕ ಕಾರ್ತಿಕ್ ಕೆಜಿ ಹಳ್ಳಿ ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆ ವಿವರಿಸಿ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಕೈಗೆತ್ತಿಕೊಂಡು ಮಾಹಿತಿಗಳನ್ನು ಸಂಗ್ರಹಿಸಿದಾಗ ಈ ಪ್ರಕರಣದಲ್ಲಿ ಪ್ರೊಬೇಶನರಿ ಪಿಎಸ್‍ಐ ಶಾಮೀಲಾಗಿರುವುದು ಗೊತ್ತಾಗಿದೆ.

ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿ ಪಿಎಸ್‍ಐ ಅಲ್ಲದೆ ಕಾನ್‍ಸ್ಟೇಬಲ್ ಹಾಗೂ ಮಾಜಿ ಹೋಂಗಾರ್ಡ್ ಸೇರಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.
ಆರೋಪಿಗಳ ಅಕೌಂಟ್‍ನಲ್ಲಿದ್ದ 24 ಲಕ್ಷ ಹಣ ಹಾಗೂ ಕ್ರಿಫ್ಟೋ ಹಣ ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ ಎಂದು ಸಿಸಿಬಿಯ ಡಿಸಿಪಿ ಶ್ರೀನಿವಾಸ್‍ಗೌಡ ಅವರು ಈ ಸಂಜೆಗೆ ತಿಳಿಸಿದ್ದಾರೆ.

ಬರ ಪರಿಹಾರ ಕೆಲಸ ಆರಂಭವಾಗಿದೆ: ಸಿಎಂ ಸಿದ್ದರಾಮಯ್ಯ

ವಿಜಯಪುರ, ನ.20- ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ ಎಂದರು.

ಬರ ಪರಿಸ್ಥಿತಿಯ ಬಗ್ಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ನೀಡಿ ಒಂದು ತಿಂಗಳಾಗಿದೆ. ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ ಎಂದರು.

ಐಸಿಸಿ ವಿಶ್ವಕಪ್ ಪ್ಲೇಯಿಂಗ್11ಗೆ ರೋಹಿತ್ ಶರ್ಮಾ ನಾಯಕ

ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯವರು ಈಗ ಮಧ್ಯ ಪ್ರದೇಶ ಹಾಗೂ ಇತರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು. ಅಧಿಕಾರಲ್ಲಿದ್ದಾಗ ಏನು ಮಾಡದ ಬಿಜೆಪಿಯವರು ಈಗ ಜನಪ್ರಿಯ ಯೋಜನೆಗಳ ಬೆನ್ನು ಹತ್ತಿದ್ದಾರೆ. ಆದರೆ ಬಿಜೆಪಿಯವರು ನುಡಿದಂತೆ ನಡೆಯುವ ಜನ ಅಲ್ಲ. ಅವರು ಏನೇ ಹೇಳಿದರು ಸಾರ್ವಜನಿಕರು ನಂಬುವುದಿಲ್ಲ ಎಂದರು.

ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ತಮ್ಮ ಮಗಳ ಮದುವೆಗಾಗಿ ಆಹ್ವಾನ ನೀಡಲು ಇಂದು ತಮ್ಮ ಮನೆಗೆ ಭೇಟಿ ನೀಡಿದ್ದರು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕುಮಾರಸ್ವಾಮಿಯವರಿಗೆ ನಮ್ಮನ್ನು ಪ್ರಶ್ನಿಸುವ ನೈತಿಕತೆ ಹೊಂದಿಲ್ಲ. ವಿದ್ಯುತ್ ಕಳ್ಳತನ ಮಾಡಿ ತಪ್ಪು ಒಪ್ಪಿಕೊಂಡು ದಂಡ ಕಟ್ಟಿದ್ದಾರೆ. ಅಂತಹವರು ಇನ್ನೊಬ್ಬರನ್ನು ಪ್ರಶ್ನಿಸುವ ಅಧಿಕಾರ ಹೊಂದಿದ್ದಾರೆಯೇ ? ಅವರ ಕಾಲದಲ್ಲಿ ವರ್ಗಾವಣೆಯಲ್ಲಿ ದಂಧೆ ಮಾಡಿದ್ದು ಜಗತ್ತಿಗೆ ಗೋತ್ತಿದೆ. ನಮ್ಮ ವಿರುದ್ಧ ದ್ವೇಷ, ಅಸೂಯೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಟೀಕೆಗಳಿಗೆ ಯಾವುದಕ್ಕೂ ಆಧಾರಗಳಿಲ್ಲ ಎಂದು ಹೇಳಿದರು.

ಮಾರ್ಷಲ್‍ಗಳ ಸೇವೆಯಲ್ಲಿ ಕೋಟಿ ಕೋಟಿ ಲೂಟಿ

ಡಿ.ಕೆ.ಶಿವಕುಮರ್ ಅವರು ಮುಖ್ಯಮಂತ್ರಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೆಂದ್ರರ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಪಕ್ಷದ ವ್ಯವಹಾರಗಳನ್ನು ನಾವು ನೋಡಿಕೊಳ್ಳುತ್ತೇವೆ, ಅವರಿಗೆ ಏಕೆ ಚಿಂತೆ ಎಂದು ಹೇಳಿದರು.

ವಿಶ್ವಕಪ್ ಮೇಲೆ ಕಾಲಿಟ್ಟು ಉದ್ದಟತನ ಮೆರೆದ ಮಿಚೆಲ್ ಮಾರ್ಷ್

ಅಹಮದಾಬಾದ್, ನ. 20- ವಿಶ್ವಕಪ್ ಗೆಲ್ಲುವುದೇ ಪೂರ್ವಜನ್ಮದ ಸುಕೃತ ಎಂದು ಹೇಳುತ್ತಾರೆ, ಆದರೆ ಅಂತಹ ವಿಶ್ವಕಪ್ ಅನ್ನು ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ಅವರು ತಮ್ಮ ಕಾಲ ಕೆಳಗೆ ಹಾಕಿಕೊಂಡು ವಿಶ್ರಾಂತಿ ಪಡೆಯುವ ಮೂಲಕ ತಮ್ಮ ಉದ್ಧಟತನ ಮೆರೆದಿದ್ದಾರೆ.

2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ 6 ವಿಕೆಟ್‍ಗಳ ಭರ್ಜರಿ ಗೆಲುವು ಸಾಧಿಸಿ 6ನೇ ಬಾರಿ ವಿಶ್ವಕಪ್ ಗೆದ್ದಿದ್ದಾರೆ.

ದಿ ವೆಕೆಂಟ್ ಹೌಸ್: ಇದು ಪ್ರಯೋಗಾತ್ಮಕ ಚಿತ್ರ

ನಂತರ ಆಸ್ಟ್ರೇಲಿಯಾದ ಡ್ರೆಸಿಂಗ್ ರೂಮ್‍ನಲ್ಲಿ ಮಿಚೆಲ್ ಮಾರ್ಷ್ ಅವರು ತಮಗೆ ಸಿಕ್ಕ ಮೆಡೆಲ್ ಅನ್ನು ಕೊರಳಿಗೆ ಹಾಕಿಕೊಂಡು ತಮ್ಮ ಕಾಲನ್ನು ವಿಶ್ವಕಪ್ ಮೇಲೆ ಇಟ್ಟಿದ್ದಾರೆ.

ಈ ಫೋಟೋವನ್ನು ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹಚ್ಚಿಕೊಂಡಿದ್ದಾರೆ.
ಆಸ್ಟ್ರೇಲಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಮಾರ್ಷ್ ವಿಶ್ವಕಪ್ ಗೆ ಅಗೌರವ ತೋರಿಸಿರುವ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯಲ್ಲಿ ಟೀಕಿಸಿದ್ದಾರೆ.

ಐಸಿಸಿ ವಿಶ್ವಕಪ್ ಪ್ಲೇಯಿಂಗ್11ಗೆ ರೋಹಿತ್ ಶರ್ಮಾ ನಾಯಕ

ಅಹಮದಾಬಾದ್, ನ. 20- ತವರಿನ ಅಂಗಳದಲ್ಲಿ ನಡೆದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 6 ವಿಕೆಟ್‍ಗಳಿಂದ ಸೋಲು ಕಂಡು 3ನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತ್ತು.

ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದಿದ್ದ 2022ರ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 10 ವಿಕೆಟ್‍ಗಳ ಸೋಲು ಕಂಡು ಟ್ರೋಫಿ ಗೆಲ್ಲುವ ಅವಕಾಶ ಕೈ ಚೆಲ್ಲಿದ್ದ ರೋಹಿತ್‍ಶರ್ಮಾ, ಏಕದಿನ ವಿಶ್ವಕಪ್ ಗೆಲ್ಲುವಲ್ಲೂ ಎಡವಿದ್ದಾರೆ.

ಆದರೆ ಐಸಿಸಿ ಪ್ರಕಟಿಸಿದ 2023ರ ಏಕದಿನ ವಿಶ್ವಕಪ್ ಟೂರ್ನಿಯ ಅತ್ಯುತ್ತಮ ಪ್ಲೇಯಿಂಗ್ 11ಗೆ ಹಿಟ್‍ಮ್ಯಾನ್ ರೋಹಿತ್ ಶರ್ಮಾರವರನ್ನು ನಾಯಕನಾಗಿ ಐಸಿಸಿ ಆಯ್ಕೆ ಮಂಡಳಿ ಪ್ರಕಟಿಸಿದೆ.

BIG NEWS : ಮತ್ತೆ ಮುರುಘಾ ಶ್ರೀ ಬಂಧನ?

ಐಸಿಸಿ ಪ್ರಕಟಿಸಿದ ಅತ್ಯುತ್ತಮ ವಿಶ್ವಕಪ್ ಪ್ಲೇಯಿಂಗ್ 11 ಇಂತಿದೆ:
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್, 594 ರನ್), ರೋಹಿತ್ ಶರ್ಮಾ (ನಾಯಕ,597 ರನ್), ವಿರಾಟ್ ಕೊಹ್ಲಿ (765 ರನ್), ಡೇರಿಲ್ ಮಿಚೆಲ್ (552 ರನ್) , ಕೆ.ಎಲ್.ರಾಹುಲ್ (452 ರನ್), ಗ್ಲೆನ್ ಮ್ಯಾಕ್ಸ್‍ವೆಲ್ (400 ರನ್), ರವೀಂದ್ರ ಜಡೇಜಾ (120 ರನ್, 16 ವಿಕೆಟ್), ಜಸ್ಪ್ರೀತ್ ಬುಮ್ರಾ (20 ವಿಕೆಟ್), ದಿಲ್ಷನ್ ಮಧುಶಂಕ (21 ವಿಕೆಟ್), ಅಡಂ ಝಂಪಾ (23 ವಿಕೆಟ್), ಮೊಹಮ್ಮದ್ ಶಮಿ (24 ವಿಕೆಟ್).

ದಿ ವೆಕೆಂಟ್ ಹೌಸ್: ಇದು ಪ್ರಯೋಗಾತ್ಮಕ ಚಿತ್ರ

ನೀನಂದ್ರೆ ನನಗೆ ತುಂಬಾ ಇಷ್ಟ. ನೀನೆ ನನ್ನ ಪ್ರಪಂಚ, ನಿನ್ನ ಬಿಟ್ಟು ಒಂದು ಕ್ಷಣವು ಇರಲಾರೆ, ನೀನಿಲ್ಲದ್ದಿದ್ದರೆ ನನ್ನ ಬದುಕೇ ಇಲ್ಲ, ನಿನಗೇನಾದರೂ ಆದರೆ ನಿನ್ನ ಜೊತೆ ನಾನು ಬಂದುಬಿಡುತ್ತೇನೆ ಹೀಗೆ ಪ್ರತಿಗೆ ಬಿದ್ದ ಹುಡುಗರು ತಾನು ಪ್ರೀತಿಸುತ್ತಿರುವ ಹುಡುಗಿಗೆ ಹೇಳುವ ಮಾತುಗಳು. ಹುಡುಗ ಹೇಳುವ ಇಷ್ಟು ಮಾತುಗಳು ನಿಜಾನಾ.

ಆಕಸ್ಮಿಕವಾಗಿ ತಾನು ಪ್ರೀತಿಸಿದ ಹುಡುಗಿ ಉಸಿರು ಚೆಲ್ಲಿದಾಗ ಅವನು ಅವಳ ಹಿಂದೆ ಹೋಗುತ್ತಾನ. ಈ ಪ್ರಶ್ನೆಗಳನ್ನೇ ಕಥೆಯ ವಸ್ತುವಾಗಿಸಿ ಸ್ಕ್ರೀನ್ ಪ್ಲೇ ಬರೆದು ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿರುವ ನಟಿ ಎಸ್ತರ್ ನರೋನ ಹೊಸ ಪ್ರಯೋಗಕ್ಕೆ ಮುಂದಾಗಿ ಈ ವಾರ ಪ್ರೇಕ್ಷಕರ ಮುಂದಿ ಬಂದಿದ್ದಾರೆ. ಹೌದು ಈ ವಾರ ರಾಜ್ಯಾದ್ಯಂತ ಬಿಡುಗಡೆಗೊಂಡು ಪ್ರೇಕ್ಷಕರಿಗೆ ಬೇರೆಯದ್ದೆ ಕಥೆ ಪರಿಚಯ ಮಾಡಿರುವ ದಿ ವೆಕೆಂಟ್ ಹೌಸ್ ಚಿತ್ರ ಪ್ರೇಮ ಕಥೆ ಅನಿಸಿದರು ಹಾರರ್, ಸಸ್ಪೆನ್ಸ್ ಜಾನರಿಗೆ ಸೇರುತ್ತದೆ.

ತಂದೆ ತಾಯಿಯನ್ನು ಕಳೆದುಕೊಂಡ ಯುವಕ ಮೋಹಕ್ ಜೀವನದ ಬಗ್ಗೆ ಜಿಗುಪ್ಸೆಗೊಂಡು, ನಾನಿನ್ನು ಬದುಕಿರಬಾರದು ಎಂದು ತೀರ್ಮಾನಿಸಿ ವಿಷ ಸೇವಿಸುವ ಸಂದರ್ಭದಲ್ಲಿ ತನ್ನ ಮನೆಯ ಮುಂದೆ ಕಾಲಿ ಇರುವ ಮನೆಗೆ ಸ್ವಲ್ಪ ವಯಸ್ಸಾದ ಗಂಡಸು ಮತ್ತು ಸುಂದರವಾದ ಟೀನೇಜ್ ಹುಡುಗಿ ಮೋಹಾಳ ಆಗಮನವಾಗುತ್ತದೆ. ಇದು ಸಾಯಲು ನಿರ್ಧರಿಸುವ ನಾಯಕನಿಗೆ ಹುಡುಗಿಯ ಆಗಮನ ಹೊಸ ಉರುಪನ್ನ ನೀಡುತ್ತದೆ. ಹುಡುಗಿಗೆ ಹತ್ತಿರವಾಗಲು ಪ್ರಯತ್ನಪಟ್ಟು ಅದರಲ್ಲಿ ಯಶಸ್ಸು ಕಾಣುತ್ತಾನೆ. ಹುಡುಗಿಗೂ ಇಷ್ಟವಾಗುತ್ತದೆ.

ಹುಡುಗಿಯ ಜೊತೆ ಇರುವುದು ಆಕೆಯ ತಂದೆ ಎಂದು ನಂಬಿರುತ್ತಾನೆ. ಆದರೆ ಆತ ಗಂಡನಾಗಿರುತ್ತಾನೆ. ಇದನ್ನು ತಿಳಿದು ಹುಡುಗಿ ಒಪ್ಪಿದರು ಪ್ರೀತಿ ಮುಂದುವರಿಸುವುದು ಬೇಡ ಎಂದು ತೀರ್ಮಾನಿಸಿ, ಊರು ಬಿಡುತ್ತಾನೆ. ಈ ಸಮಯದಲ್ಲಿ ಗಂಡ ಹೆಂಡತಿಗೆ ಅಪಘಾತವಾಗಿ ಅದರಲ್ಲಿ ಗಂಡ ಇನ್ನಿಲ್ಲ ಎಂದು ತಿಳಿದ ನಾಯಕ ಮತ್ತೆ ಊರಿಗೆ ವಾಪಸ್ ಆಗುತ್ತೇನೆ. ಮತ್ತೆ ಇವರಿಬ್ಬರ ಪ್ರೀತಿ ಚಿಗುರಿ ಹೆಮ್ಮರವಾಗಿ ಒಂದೇ ಮನೆಯಲ್ಲಿ ವಾಸ, ಪ್ರತಿಕ್ಷಣವೂ ಸರಸ ಸಲ್ಲಾಪ, ಯೌವ್ವನ ಬಯಸುವ ಸುಖದ ಉತ್ತುಂಗದಲ್ಲಿ ಇಬ್ಬರು ಮಿಂದು ತೇಲುತ್ತಾರೆ. ಈ ಸಂದರ್ಭದಲ್ಲಿ ಪ್ರೇಕ್ಷಕರಿಗೆ ದಡ್ ಎಂದು ಒಂದು ಆಘಾತದ ಸಂಗತಿ ಇದರಾಗುತ್ತದೆ ಅದು ಮಾನವ ಜೊತೆ ಇಷ್ಟು ಸಮಯ ಪ್ರೇಯಸಿಯಾಗಿ ಕಳೆದ ಮೋಹ ಜೀವಂತವಿಲ್ಲ ಅದು ದೆವ್ವವೆಂದು. ನಂತರ ನಡೆಯುವುದೆಲ್ಲವೂ ನೋಡುಗರಿಗೆ ಹೊಸ ಅನುಭವ ಕಟ್ಟಿ ಕೊಡುತ್ತದೆ.

ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ

ಮೋಹ ಮತ್ತು ಮಾನವ್ ಎಂಬ ಎರಡು ಪಾತ್ರಗಳನ್ನು ಸೃಷ್ಟಿಸಿರುವ ನಿರ್ದೇಶಕಿ ಮತ್ತು ಈ ಚಿತ್ರದ ನಾಯಕಿ ಎಸ್ತರ್ ನರೋನ ಮೋಹಕ್ಕೆ ಸಿಲುಕುವ ಮಾನವ ಅಂದರೆ ಯುವ ಮನಸ್ಸಿನ ಹುಡುಗರು ಆ ಸಂದರ್ಭದಲ್ಲಿ ಹುಡುಗಿಯರಿಗೆ ಕೊಡುವ ಭರವಸೆ ಹೊಗಳಿಕೆಗಳು ಅವಳನ್ನು ಆಕರ್ಷಿಸಿ ಅನುಭವಿಸುವುದಕ್ಕೆ ಮಾತ್ರ ಎಂದು ಸ್ಕ್ರೀನ್ ಪ್ಲೇನಲ್ಲಿ ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ.

ನಾಯಕನಾಗಿ ಅಭಿನಯಿಸಿರುವ ಶ್ರೇಯಸ್ ಚಿಂಗಾ ಎಸ್ತರ್ ನರೋನಗೆ ಒಳ್ಳೆ ಸಾಥ್ ಕೊಟ್ಟಿದ್ದಾರೆ. ಕೇವಲ ನಾಲ್ಕು ಪಾತ್ರಗಳ ಮೇಲೆ ಸಾಗುವ ಕಥೆಯಲ್ಲಿ ಸನ್ನಿವೇಶಗಳಿಗೆ ತಕ್ಕ ಬ್ಯಾಗ್ರೌಂಡ್ ಮ್ಯೂಸಿಕ್ ಮತ್ತು ಸಂಗೀತದ ಪತ್ರ ಮಹತ್ವದ್ದಾಗಿದೆ. ಈ ಹಿಂದೆ ಪರದೆಯ ಮೇಲೆ ರೋಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದ ನಟಿ ಎಸ್ತರ್ ನರೋನ ಮೊದಲ ಬಾರಿಗೆ ಈ ರೀತಿ ಒಂದು ಪ್ರಯೋಗಾತ್ಮಕ ಕಥೆಗೆ ನಿರ್ದೇಶನ, ನಿರ್ಮಾಣದ ಮೂಲಕ ಕೈ ಹಾಕಿರುವುದು ಉತ್ತಮ ಬೆಳವಣಿಗೆ.

BIG NEWS : ಮತ್ತೆ ಮುರುಘಾ ಶ್ರೀ ಬಂಧನ?

ಚಿತ್ರದುರ್ಗ, ನ.20- ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣಾೀಧಿನವಾಗಿದ್ದು, ಒಂದನೇ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾಗಿದ್ದ ಚಿತ್ರದುರ್ಗದ ಶಿವಮೂರ್ತಿ ಮುರುಘಾರಾಜೇಂದ್ರ ಶರಣರಿಗೆ ಎರಡನೇ ಪ್ರಕರಣ ಮುಳುವಾಗಿದ್ದು ಬಂಧನದ ಭೀತಿ ಎದುರಾಗಿದೆ.

ಚಿತ್ರದುರ್ಗದಲ್ಲಿನ ಮಠದಲ್ಲಿದ್ದಾಗ ಅಲ್ಲಿನ ವಸತಿ ಶಾಲೆಗಳಲ್ಲಿರುವ ಬಾಲಕೀಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪಗಳಿದ್ದವು. ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ಫೋಕ್ಸೋ ಸೇರಿದಂತೆ ವಿವಿಧ ಸೆಕ್ಸನ್‍ಗಳ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಶರಣರನ್ನು ಬಂಧಿಸಿದ್ದರು, ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದ ಶಿವಮೂರ್ತಿ ಶರಣರು ನವೆಂಬರ್ 16ರಂದು ಮೊದಲ ಪ್ರಕರಣದಲ್ಲಿ ಜಾಮೀನು ಪಡೆದ್ದರು. ಎರಡನೇ ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿ ಇರುವುದರಿಂದ ಶರಣರು ನ್ಯಾಯಾಲಯದ ಮುಂದೆ ಹಾಜರಾಗಬೇಕಾಗುತ್ತದೆ ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾೀಧಿಶರಾದ ಕೋಮಲ ಅವರು ಸೂಚನೆ ನೀಡಿದ್ದರು.

ನ.16ರಂದು ಬೆಳಗ್ಗೆ 11ಗಂಟೆಗೆ ವಿಚಾರಣೆಗೆ ಹಾಜರಾಗಿದ್ದ ಶರಣರು 11.45ಕ್ಕೆ ಜೈಲಿನಿಂದ ಬಿಡುಗಡೆಯಾಗಿದ್ದರು. ಇದನ್ನು ಪ್ರಶ್ನಿಸಿ ದೂರುದಾರರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಎರಡನೇ ಪ್ರಕರಣದಲ್ಲಿ ಜಾಮೀನು ದೊರೆಯದೇ ಇರುವ ಕಾರಣ ಆರೋಪಿಯನ್ನು ಬಿಡುಗಡೆ ಮಾಡಿರುವುದು ಸರಿಯಲ್ಲ, ಕೂಡಲೇ ಬಂಧನಾದೇಶ ನೀಡಬೇಕು ಎಂದು ಸರ್ಕಾರದ ಅಭಿಯೋಜಕರಾದ ಜಗದೀಶ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು.

ನ್ಯಾಯಾಲಯದ ಆದೇಶದ ಹೊರತಾಗಿಯೂ ಆರೋಪಿಯನ್ನು ಬಿಡುಗಡೆ ಮಾಡಿದ ಬಗ್ಗೆ ಜೈಲಿನ ಅಧಿಕಾರಿಗಳನ್ನು ನ್ಯಾಯಾೀಧಿಶರು ಪ್ರಶ್ನೆ ಮಾಡಿದ್ದರು. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಿಂದ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು. ಈ ನಡುವೆ ಸರ್ಕಾರಿ ಅಭಿಯೋಜಕರ ವಾದವನ್ನು ಪರಿಗಣಿಸಿದ ಜಿಲ್ಲಾ ನ್ಯಾಯಾಲಯ ಬಂಧನಾದೇಶ ಜಾರಿ ಮಾಡಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮುದ್ದುರಾಜ ವಾರೆಂಟ್‍ನೊಂದಿಗೆ ದಾವಣಗೆರೆಯ ವಿರಕ್ತಮಠಕ್ಕೆ ಭೇಟಿ ನೀಡಿದ್ದಾರೆ.

ಮೊದಲ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಶರಣರಿಗೆ ಚಿತ್ರದುರ್ಗದ ಮಠಕ್ಕೆ ಭೇಟಿ ನೀಡಬಾರದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಾರದು ಎಂಬ ಷರತ್ತು ವಿಧಿಸಲಾಗಿತ್ತು. ಆ ಕಾರಣಕ್ಕೆ ಶರಣರು ದಾವಣಗೆರೆಯ ವಿರಕ್ತ ಮಠದಲ್ಲಿದ್ದಾರೆ.

ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಜೈಲಿನಿಂದ ಶರಣರನ್ನು ಬಿಡುಗಡೆ ಮಾಡಿದ್ದಕ್ಕೆ ಹಲವು ರೀತಿಯ ವ್ಯಾಖ್ಯಾನಗಳು ಕೇಳಿ ಬಂದಿವೆ. ಒಂದೇ ಮಾದರಿಯ ಮೊದಲ ಪ್ರಕರಣದಲ್ಲಿ ಜಾಮೀನು ದೊರೆತ ಕಾರಣಕ್ಕೆ ಎರಡನೇ ಪ್ರಕರಣಕ್ಕೂ ಅದು ಅನ್ವಯಗೊಳ್ಳುತ್ತದೆ ಎಂದು ಅಧಿಕಾರಿಗಳು ಅರ್ಥೈಸಿಕೊಂಡು ಬಿಡುಗಡೆ ಮಾಡಿರುವುದಾಗಿ ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಮೊದಲ ಪ್ರಕರಣದಲ್ಲಿ ಶರಣರನ್ನು ಬಂಧಿಸಲಾಗಿತ್ತು. ಎರಡನೇ ಪ್ರಕರಣದಲ್ಲಿ ಶರಣರನ್ನು ಬಂಧಿಸಿರಲಿಲ್ಲ. ಬದಲಾಗಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಶ್ರೀಗಳನ್ನು ಬಾಡಿ ವಾರೆಂಟ್ ಮೇಲೆ ವಿಚಾರಣೆ ನಡೆಸಿದ್ದರು. ಬಂಧನವಾಗದೆ ಇರುವುದರಿಂದ ಜಾಮೀನಿನ ಅಗತ್ಯ ಇಲ್ಲ ಎಂಬ ವಾದಗಳಿದ್ದವು. ಒಂದು ವರ್ಷ ಎರಡು ತಿಂಗಳ ಬಳಿಕ ಎರಡನೇ ಪ್ರಕರಣದಲ್ಲಿ ಈಗ ಬಂಧಿಸಲು ಅವಕಾಶವಿದೆಯೇ ಎಂಬ ಪ್ರಶ್ನೆಗಳು ಕೇಳಿ ಬಂದಿವೆ. ಮೊದಲನೇ ಪ್ರಕರಣದಲ್ಲಿ ಬಂಧನವಾಗಿದ್ದರಿಂದ ಜಾಮೀನು ಪಡೆಯಬೇಕು, ಎರಡನೇ ಪ್ರಕರಣದಲ್ಲಿ ಬಂಧನವಾಗದೆ ಬಾಡಿ ವಾರೆಂಟ್ ಮೇಲಷ್ಟೆ ವಿಚಾರಣೆಯಾಗಿದ್ದರಿಂದ ಜಾಮೀನು ಪಡೆಯುವ ಅಗತ್ಯ ಇಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರಲ್ಲಿ ತೀರ್ಪು ನೀಡಿತ್ತು. ಅದನ್ನು ಬಳಸಿಕೊಂಡು ಶರಣರ ಪರ ವಕೀಲರು ವಾದ ಮಂಡಿಸಿದ್ದರು.

ದೂರುದಾರರ ಪರ ವಕೀಲರು ಇದಕ್ಕೆ ಪ್ರಬಲ ವಿರೋಧ ವ್ಯಕ್ತ ಪಡಿಸಿದ್ದು, ಎಲ್ಲಾ ಪ್ರಕರಣಗಳು ಪ್ರತ್ಯೇಕವಾದ ಜಾಮೀನು ಪಡೆದುಕೊಳ್ಳುವುದು ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಎರಡನೇ ಪ್ರಕರಣದಲ್ಲಿ ಜಾಮೀನು ಪಡೆಯದೆ ಹೊರಗೆ ಇದ್ದಾಗ ಮರು ಬಂಧನಕ್ಕೆ ಆದೇಶಿಸಿದ ಕೇರಳ ಪ್ರಕರಣವನ್ನು ವಕೀಲರು ಉಲ್ಲೇಖಿಸಿದ್ದರು.

ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ

ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ ಶರಣರ ಪರ ವಕೀಲರಾದ ಉಮೇಶ್, ಶ್ರೀಗಳು ಕಾನೂನಿಗೆ ತಲೆ ಬಾಗಿದ್ದಾರೆ. ಷರತ್ತಿನ ಅನ್ವಯ ಚಿತ್ರದುರ್ಗ ಮಠಕ್ಕೆ ಭೇಟಿ ನೀಡದೆ ದೂರ ಉಳಿದಿದ್ದಾರೆ. ಅದರ ಹೊರತಾಗಿಯೂ ದುರುದ್ದೇಶ ಪೂರ್ವಕವಾಗಿ ಮರು ಬಂಧನಕ್ಕೆ ಮನವಿ ಮಾಡಲಾಗುತ್ತಿದೆ.

ಈಗಾಗಲೇ ಜಾಮೀನು ದೊರೆತಿರುವುದರಿಂದ ಮತ್ತೆ ಬಂಧನದ ಅಗತ್ಯ ಇಲ್ಲ ಎಂದು ವಾದಿಸಿದ್ದರು. ಆದರೆ ದೂರುದಾರರ ಪರ ವಾದವನ್ನು ನ್ಯಾಯಾಲಯ ಎತ್ತಿ ಹಿಡಿದಿತ್ತು. ಜಿಲ್ಲಾ ನ್ಯಾಯಾಲಯ ವಾರೆಂಟ್ ಜಾರಿ ಮಾಡುತ್ತಿದ್ದಂತೆ ಶರಣರ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಮಾರ್ಷಲ್‍ಗಳ ಸೇವೆಯಲ್ಲಿ ಕೋಟಿ ಕೋಟಿ ಲೂಟಿ

ಬೆಂಗಳೂರು, ನ.20- ಕಳೆದ ಆರೂವರೆ ವರ್ಷಗಳಿಂದ ನಿರಂತರ ವಾಗಿ ಬಿಬಿಎಂಪಿಯಲ್ಲಿ ಒಂದಕ್ಕೆ ಎರಡು ಪಟ್ಟು ಸಂಖ್ಯೆಗಳನ್ನು ತೋರಿಸಿ ಮಾರ್ಷಲ್‍ಗಳ ಸೇವೆಯ ಹೆಸರಿನಲ್ಲಿ ಬೃಹತ್ ಲೂಟಿ ಕಾರ್ಯ ನಡೆಯುತ್ತಿದ್ದು, ಈ ಸಂಬಂಧ ಬೆಂಗಳೂರು ಉಸ್ತುವಾರಿ ಸಚಿವರು, ಆಡಳಿತಾಧಿಕಾರಿಗಳು ಮತ್ತು ಮುಖ್ಯ ಆಯುಕ್ತರಿಗೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ದಾಖಲೆಗಳ ಸಹಿತ ದೂರು ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 198 ವಾರ್ಡ್‍ಗಳಲ್ಲಿ ತ್ಯಾಜ್ಯ ವಿಂಗಡಣೆ ಕಾರ್ಯವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹಾಕುವವರಿಗೆ ದಂಡ ವಿಧಿಸಲು ಮತ್ತು ಟಿಪ್ಪರ್ ಆಟೋಗಳ ಹಾಜರಾತಿ ಬಗ್ಗೆ ನಿಗಾವಹಿಸಲೆಂದು 2017 ರಲ್ಲಿ ಪ್ರತೀ ವಾರ್ಡ್ ಗೆ ಒಬ್ಬರಂತೆ ನಿವೃತ್ತ ಸೈನಿಕರು ಅಥವಾ ಎನ್‍ಸಿಸಿ ತರಬೇತಿ ಪೂರ್ಣ ಗೊಳಿಸಿರುವವರನ್ನು ಮಾರ್ಷಲ್‍ಗಳ ಹೆಸರಿನಲ್ಲಿ ನಿಯೋಜಿಸಿಕೊಳ್ಳುವ ಕಾರ್ಯಕ್ಕೆ ಅಂದಿನ ರಾಜ್ಯ ಸರ್ಕಾರವು ಚಾಲನೆ ನೀಡಿತ್ತು.

ಆದರೆ, ಅದಾದ ನಂತರ – ವಾರ್ಡ್ ಮಟ್ಟದ ಮಾರ್ಷಲ್‍ಗಳು, ಎಂಎಸ್‍ಜಿಪಿ ಘಟಕ, ಪಾಲಿಕೆ ಕಚೇರಿಗಳು, ವೈರ್‍ಲೆಸ್ ಅಪರೇಟರ್ಸ್, ಪ್ರಹರಿ ದಳ, ಕೆ.ಆರ್, ಮಾರ್ಕೆಟ್, ರಸೆಲ್ ಮಾರ್ಕೆಟ್, ಮಡಿವಾಳ ಮಾರ್ಕೆಟ್, ಕಲಾಸಿಪಾಳ್ಯ ಮಾರ್ಕೆಟ್ ಮತ್ತು ಭೂಭರ್ತಿ ಕೇಂದ್ರಗಳಲ್ಲಿ ಒಟ್ಟು 384 ಮಂದಿ ಮಾರ್ಷಲ್‍ಗಳು ಸೇವೆ ಸಲ್ಲಿಸುತ್ತಿದ್ದಾರೆ.

ಇದರ ಜತೆಗೆ ಇಂದಿರಾ ಕ್ಯಾಂಟೀನ್‍ಗಳು, 07 ತ್ಯಾಜ್ಯ ಸಂಸ್ಕರಣಾ ಘಟಕಗಳು, ಜಯನಗರ ವಾಣಿಜ್ಯ ಸಂಕೀರ್ಣ ಮತ್ತು ಬೆಳ್ಳಂದೂರು ಕೆರೆ, ವರ್ತೂರು ಕೆರೆಗಳಲ್ಲಿ ಒಟ್ಟು 366 ಮಂದಿ ಸೇರಿದಂತೆ ಒಟ್ಟಾರೆಯಾಗಿ 750 ಮಂದಿ ಮಾರ್ಷಲ್ ಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ

ಈ ಪೈಕಿ 18 ಮಂದಿ ಜೆಸಿಒಗಳು ಮತ್ತು 09 ಮಂದಿ ಎಜೆಸಿಒಗಳೂ ಸಹ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಇವರೆಲ್ಲರಿಗೂ ಅತ್ಯುನ್ನತ ಅಕಾರಿಯಾಗಿ ಒಬ್ಬರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಮಾರ್ಷಲ್‍ಗಳಿಗೆ ವಾರ್ಷಿಕ ವಾಗಿ ಒಟ್ಟು 24,18,40,656/- (ಇಪ್ಪತ್ತನಾಲ್ಕು ಕೋಟಿ ಹದಿನೆಂಟು ಲಕ್ಷದ ನಲವತ್ತು ಸಾವಿರದ ಆರು ನೂರಾ ಐವತ್ತಾರು) ಗಳಷ್ಟು ಬೃಹತ್ ಮೊತ್ತದ ಹಣವನ್ನು ಇವರುಗಳ ವೇತನಕ್ಕೆಂದು ವ್ಯಯಿಸಲಾಗುತ್ತಿದೆ.

2017 ರಿಂದ ಈವರೆಗಿನ ಆರೂವರೆ ವರ್ಷಗಳಲ್ಲಿ ಮಾರ್ಷಲ್ ಗಳ ಸೇವೆಗೆಂದು ಪಾಲಿಕೆಯು ಒಟ್ಟಾರೆ . 157,19,64,264/- (ಒಂದು ನೂರಾ ಐವತ್ತೇಳು ಕೋಟಿ ಹತ್ತೊಂಬತ್ತು ಲಕ್ಷದ ಅರವತ್ತನಾಲ್ಕು ಸಾವಿರದ ಎರಡು ನೂರಾ ಅರವತ್ತನಾಲ್ಕು) ಗಳಷ್ಟು ಬೃಹತ್ ಮೊತ್ತದ ಸಾರ್ವಜನಿಕ ತೆರಿಗೆ ಹಣವನ್ನು ಅನವಶ್ಯಕವಾಗಿ ವೆಚ್ಛ ಮಾಡಿದೆ !!!

ಮನೆ – ಮನೆಗಳಿಂದ ತ್ಯಾಜ್ಯ ಸಂಗ್ರಹದ ಹಂತದಲ್ಲಿ ತ್ಯಾಜ್ಯ ವಿಂಗಡಣೆ ಕಾರ್ಯ, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಹಾಕುವವರಿಗೆ ದಂಡ ವಿಸುವ ಕಾರ್ಯ ಮತ್ತು ಟಿಪ್ಪರ್ ಆಟೋಗಳ ಹಾಜರಾತಿ ಬಗ್ಗೆ ನಿಗಾವಹಿಸುವ ಕಾರ್ಯಗಳಿಗೆಂದು ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾರ್ಷಲ್ ಗಳನ್ನು ನಿಯೋಜನೆ ಮಾಡಿಕೊಂಡು ಆರೂವರೆ ವರ್ಷಗಳೇ ಕಳೆದಿದ್ದರೂ ಸಹ, ಈವರೆಗೆ ಮೇಲೆ ತಿಳಿಸಿರುವ ಕಾರ್ಯಗಳಲ್ಲಿ ಶೇ. 25% ರಷ್ಟು ಸಫಲತೆಯನ್ನೂ ಸಹ ಪಾಲಿಕೆಯು ಕಂಡಿಲ್ಲ. ಬೆಳ್ಳಂದೂರು ಮತ್ತು ವರ್ತೂರು ಕೆರೆಗಳಲ್ಲಿ 42 ಮಂದಿ ಮಾರ್ಷಲ್‍ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಸುಳ್ಳು ಮಾಹಿತಿ ನೀಡಲಾಗಿದೆ. ಈ ರೀತಿ ಎಲ್ಲಾ ಹಂತಗಳಲ್ಲೂ ಅತ್ಯಂತ ವಿಫಲತೆಯನ್ನು ಕಂಡಿರುವ ಮಾರ್ಷಲ್‍ಗಳ ನಿಯೋಜನೆ ಕಾರ್ಯದಿಂದಾಗಿ ಪಾಲಿಕೆಯು ಪ್ರತೀ ವರ್ಷ ಸುಮಾರು 25 ಕೋಟಿ ರೂ.ಗಳಷ್ಟು ಬೃಹತ್ ಮೊತ್ತವನ್ನು ಅನವಶ್ಯಕವಾಗಿ ದುಂದು ವೆಚ್ಛ ಮಾಡುತ್ತಿದೆ !!!

ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’

ಈ ಕೂಡಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಬಿಳಿ ಆನೆಯಾಗಿ ಪರಿಣಮಿಸಿರುವ ಮಾರ್ಷಲ್‍ಗಳ ನಿಯೋಜನೆ ಕಾರ್ಯವನ್ನು ಕೂಡಲೇ ಹಿಂಪಡೆಯುವ ಮೂಲಕ ಪಾಲಿಕೆಗೆ ಈಗಾಗಲೇ ಆಗಿರುವ 160 ಕೋಟಿ ರೂಪಾಯಿಗಳಷ್ಟು ಬೃಹತ್ ಮೊತ್ತದ ಅನಗತ್ಯ ವೆಚ್ಛ ಮುಂದಿನ ದಿನಗಳಲ್ಲಿ ಪುನರಾವರ್ತನೆಯಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಸಂಪೂರ್ಣ ದಾಖಲೆಗಳನ್ನು ಸಲ್ಲಿಸಿ ಬೆಂಗಳೂರು ಉಸ್ತುವಾರಿ ಸಚಿವರು ಹಾಗೂ ರಾಜ್ಯದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಪಾಲಿಕೆಯ ಆಡಳಿತಾಕಾರಿಗಳಾದ ರಾಕೇಶ್ ಸಿಂಗ್ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರನ್ನು ರಮೇಶ್ ಆಗ್ರಹಿಸಿದ್ದಾರೆ.

ಕಂದಾಯ ಇಲಾಖೆಯನ್ನು ಜನ ಸ್ನೇಹಿ ಮಾಡಲು ಹಲವು ಕ್ರಮ : ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ನ. 20-ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಮತ್ತು ಭ್ರಷ್ಟ ಅಧಿಕಾರಿಗಳಿಗೂ ಕಾನೂನಿನ ರುಚಿ ತೋರಿಸಲಾಗಿದೆ ಎಂದು ಕಂದಾಯ ಸಚಿವಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳಾದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜನರ ದೈನಂದಿನ ಬದುಕಿನ ಜೊತೆಗೆ ಒಂದಲ್ಲ ಒಂದು ರೀತಿಯಲ್ಲಿ ಬೆಸೆದುಕೊಂಡಿರುವ ಕಂದಾಯ ಇಲಾಖೆಯಲ್ಲಿ ಮನೆ ಮಾಡಿರುವ ನೂರಾರು ಸಮಸ್ಯೆಗಳಿಗೆ ಪರಿಹಾರ ನೀಡುವ ಮತ್ತು ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವ ಉದ್ದೇಶದಿಂದಾಗಿಯೇ ಈ ಮಹತ್ವದ ಇಲಾಖೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನಗೆ ವಸಿದ್ದರು ಎಂದಿದ್ದಾರೆ.

ಕಳೆದ ಆರು ತಿಂಗಳಿನಿಂದ ಇಲಾಖೆಯ ಕೆಲಸದ ಕಾರ್ಯವೈಖರಿಯನ್ನು ಬದಲಿಸಲು ಸಾಕಷ್ಟು ಶ್ರಮಿಸಲಾಗಿದೆ. ಜನರ ನೂರಾರು ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಬಗೆಹರಿಸಲಾಗಿದೆ. ಜನಸ್ನೇಯಾಗಿ ಕಾರ್ಯನಿರ್ವಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.

16 ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನಾ ಸಭೆ: ಕಳೆದ ಆರು ತಿಂಗಳಲ್ಲಿ ಬೀದರ್, ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ಗದಗ, ರಾಮನಗರ, ಹಾಸನ ಸೇರಿದಂತೆ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ.

ಅಲ್ಲದೆ, ಬೆಳಗಾವಿ, ಮೈಸೂರು, ಕಲಬುರಗಿ ಹಾಗೂ ಬೆಂಗಳೂರು ವಿಭಾಗಾವಾರು ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ಅಕಾರಿಗಳಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಕೆಲಸಗಳು ಜನರಿಗೆ ಮತ್ತಷ್ಟು ಹತ್ತಿರವಾಗಲು ಅಗತ್ಯವಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ. ಪರಿಣಾಮ ಜನರ ದಶಕಗಳ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದು ಹೇಳಿದ್ದಾರೆ.

ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಕ್ರಮ, ಕಂದಾಯ ಗ್ರಾಮಗಳ ಶೀಘ್ರ ಘೋಷಣೆ, ರೈತರಿಗೆ ಬರ ಪರಿಹಾರ ಮತ್ತು ಅಗತ್ಯ ಸೇವೆಗಳನ್ನು ನೀಡುವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಶೇಷ ಸೂಚನೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 5 ವರ್ಷಕ್ಕೂ ಹಳೆಯ ಸಾವಿರಾರು ತಕರಾರು ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಜನರಿಗೆ ನೆಮ್ಮದಿ ನೀಡಲಾಗಿದೆ ಎಂದಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಉಪ ಭಾಗಾಧಿಕಾರಿ (ಎಸಿ ಕೋರ್ಟ್) ನ್ಯಾಯಾಲಯದಲ್ಲೇ ರಾಜ್ಯಾದ್ಯಂತ ಸುಮಾರು 62,000 ತಕರಾರು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದವು. ಆದರೆ, ನಾನು ಇಲಾಖೆಯ ಜವಾಬ್ದಾರಿ ವಸುತ್ತಿದ್ದಂತೆ ಈ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಸೂಚಿಸಿದ್ದರ ಪರಿಣಾಮ ಇಂದು ಸುಮಾರು 30,000 ಅರ್ಜಿಗಳನ್ನು ಕೇವಲ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ.

ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ

ಇನ್ನೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇದ್ದ ಸುಮಾರು ಶೇ.60 ರಷ್ಟು ತಕರಾರು ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಮಾಸಿಕ ಸಭೆ: ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ವಿಚಾರದ ಕುರಿತು ತಿಳಿದುಕೊಳ್ಳುವ ಸಲುವಾಗಿಯೇ ಕಳೆದ ಆರು ತಿಂಗಳಿಂದ ಪ್ರತೀ ತಿಂಗಳು ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಶೀಲಿಸಲಾಗಿದೆ. ಇಲಾಖೆಯಲ್ಲಿ ಅಕ್ರಮ ಎಸಗಿ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಲುಕಿಬಿದ್ದೂ ಸಹ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದಿದ್ದ, ಸುಮಾರು 350ಕ್ಕೂ ಅಕ ಭ್ರಷ್ಟ ಅಧಿಕಾರಿಗಳ ಫೈಲ್‍ಗಳನ್ನು ಕಳೆದ ಆರು ತಿಂಗಳಲ್ಲಿ ಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪಟ್ಟಿಯಲ್ಲಿ ಹಲವು ತಹಶೀಲ್ದಾರರು, ಉಪ ಭಾಗಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಇದ್ದು, ಹಲವರಿಗೆ ಕಡ್ಡಾಯ ನಿವೃತ್ತಿ, ಪಿಂಚಣಿಯಲ್ಲಿ ಕಡಿತ ಸೇರಿದಂತೆ ಹಲವು ಶಿಕ್ಷೆಗಳಿಗೆ ಗುರಿಪಡಿಸಲಾಗಿದೆ. ಅಲ್ಲದೆ, ಇನ್ನುಳಿದ ಪ್ರಕರಣಗಳನ್ನೂ ಸಹ ಶೀಘ್ರದಲ್ಲಿ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ

ಜನರ ಸಮಸ್ಯಗಳಿಗೆ ಸ್ಥಳದಲ್ಲೇ ಸ್ಪಂದನೆ: ಕಳೆದ ಆರು ತಿಂಗಳ ಅವಯಲ್ಲಿ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಾಗಿದೆ. ಈ ಎಲ್ಲಾ ಅವಧಿಯಲ್ಲೂ ಸ್ಥಳೀಯ ತಾಲೂಕು ಕಚೇರಿ ಮತ್ತು ನಾಡ ಕಚೇರಿಗಳಿಗೆ ದಿಢೀರ್ ಭೇಟಿ ನೀಡಲಾಗಿತ್ತು. ಈ ವೇಳೆ ರೆಕಾರ್ಡ್ ರೂಂಗಳನ್ನು ಪರಿಶೀಲಿಸುವ ಜೊತೆಗೆ, ಅಧಿಕಾರಿಗಳು ಯಾವೆಲ್ಲಾ ಸೇವೆಗಳನ್ನು ಜನರಿಗೆ ಎಷ್ಟು ದಿನದಲ್ಲಿ ನೀಡುತ್ತಿದ್ದಾರೆ? ಎಂಬ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿತ್ತು.

ಅಲ್ಲದೆ, ಸಾರ್ವಜನಿಕರಿಂದಲೂ ಅಹವಾಲು ಸ್ವೀಕರಿಸಲಾಗಿತ್ತು. ಸಣ್ಣ ಪುಟ್ಟ ಕೆಲಸಗಳಿಗೆ ತಿಂಗಳು-ವರ್ಷಗಳಿಂದ ಅಲೆದಿದ್ದರೂ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಜನರ ಸೇವೆಗೆ ತ್ವರಿತವಾಗಿ ಸ್ಪಂದಿಸದ ಅಧಿಕಾರಿಗಳಿಗೆ ಸ್ಥಳದಲ್ಲೇ ನೊಟೀಸ್ ಜಾರಿ ಮಾಡಲಾಗಿದೆ. ಅಲ್ಲದೆ, ಜನರ ಕೆಲಸಗಳನ್ನೂ ಅಲ್ಲಿಯೇ ಮಾಡಿಕೊಟ್ಟು, ಜನಸ್ನೇಹಿ ಸೇವೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಬೆಂಗಳೂರಿನ ಒತ್ತುವರಿ ತೆರವಿಗೆ ಶೇಷ ಕಾರ್ಯತಂತ್ರ: ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ಖಾಸಗಿಯವರ-ಭೂಗಳ್ಳರ ಪಾಲಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ಸಲುವಾಗಿ ಜಿಲ್ಲಾಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡಕ್ಕೆ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ.

ಈ ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಕನಿಷ್ಟ 60 ಎಕರೆಗೂ ಅಧಿಕ ಸರ್ಕಾರಿ ಭೂಮಿಯಲ್ಲಿ ಖಾಸಗಿ ಒತ್ತುವರಿಯನ್ನು ತೆರವುಗೊಳಿಸಿದೆ. ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ರಕ್ಷಿಸುವ ಅಕಾರಿಗಳ ಬೀಟ್ ವ್ಯವಸ್ಥೆಗೂ ಈಗಾಗಲೇ ಚಾಲನೆ ನೀಡಲಾಗಿದೆ.

ಜಿಲ್ಲಾ ಪ್ರವಾಸ, ಪ್ರಗತಿ ಪರಿಶೀಲನಾ ಸಭೆ, ಸರ್ಕಾರಿ ಕಚೇರಿಗಳಿಗೆ ದಿಡೀರ್ ಭೇಟಿಯ ಜೊತೆಗೆ ಕಳೆದ ಆರು ತಿಂಗಳಿನಿಂದ ವಿಕಾಸಸೌಧದ ಕಚೇರಿಯಲ್ಲೂ ಅಧಿಕಾರಿಗಳ ನೂರಾರು ಸಭೆಗಳನ್ನು ನಡೆಸಲಾಗಿದೆ. ಸರಳ ಆಡಳಿತಕ್ಕೆ ಸೂಚಿಸಲಾಗಿದೆ. ದಿನಂಪ್ರತಿ ಕಚೇರಿಗೆ ಆಗಮಿಸುವ ನೂರಾರು ಜನರನ್ನು ಮಾತನಾಡಿಸಿ ಅವರ ನ್ಯಾಯಯುತ ಮನವಿ, ಕೋರಿಕೆಗೆ ಸ್ಪಂದಿಸಲಾಗಿದೆ. ಅವರ ಸಮಸ್ಯಗಳನ್ನು ಬಗೆಹರಿಸಲಾಗಿದೆ. ಮುಂದಿನ ದಿನಗಳಲ್ಲೂ ಸಹ ಜನರಿಗೆ ಸರಳ, ಸುಲಭ ಮತ್ತು ತ್ವರಿತ ಆಡಳಿತ ನೀಡುವ ನಿಟ್ಟಿನಲ್ಲೇ ನಮ್ಮ ಕಾರ್ಯವೈಖರಿ ಇರಲಿದೆ ಎಂದು ಸಚಿವರು ಹೇಳಿದ್ದಾರೆ.

ಬರಪೀಡಿತ ಪ್ರದೇಶಗಳಿಗೆ ಪ್ರವಾಸ: ಆರ್. ಅಶೋಕ್

ಬೆಂಗಳೂರು, ನ.20-ನಾಳೆಯಿಂದ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ಅಧ್ಯಯನ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ವಿಜಯನಗರದ ಆದಿಚುಂಚನಗಿರಿ ಶಾಖ ಮಠದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕರ ಜೊತೆ ಮಾತನಾಡಿದ್ದು, ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತೇವೆ.

ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪರಿಹಾರ ನೀಡದೆ, ಕೇಂದ್ರ ಸರ್ಕಾರದ ಕಡೆ ಸರ್ಕಾರ ಬೆರಳು ಮಾಡುತ್ತಿದೆ. ಎಲ್ಲ ಶಾಸಕರಿಗೆ ಅಧ್ಯಯನ ಮಾಡಿಕೊಂಡು ವರದಿ ಸಿದ್ದಮಾಡಿಕೊಂಡು ಬರುವಂತೆ ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ನಿದ್ದೆ ಮಾಡುತ್ತಿದ್ದು, ಎಚ್ಚರಿಸುವ ಕೆಲಸ ಮಾಡಬೇಕಿದೆ. ಸರ್ಕಾರಕ್ಕೆ ಕಿವಿ ಹಿಂಡುವ ಕೆಲಸ ಮಾಡುತ್ತೇವೆ. ಆದರೂ ಎಚ್ಚರವಾಗದಿದ್ದರೆ ಬೇರೆ ಮದ್ದು ಹುಡುಕುತ್ತೇವೆ. ಎಲ್ಲ ವಿಚಾರವನ್ನು ವಿಧಾನ ಮಂಡಲದ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ಸಮರ್ಥ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುವ ಪ್ರಯತ್ನ ಮಾಡುತ್ತೇನೆ. ಸದನದಲ್ಲಿ ಸಚಿವ ಜಮೀರ್ ಅಹಮದ್ ಹೇಳಿಕೆ ವಿಚಾರ ಚರ್ಚೆ ಮಾಡುತ್ತೇವೆ. ರಾಜ್ಯದ ಜನರ ಸಮಸ್ಯೆ ವಿಚಾರವಾಗಿ ಸದನದಲ್ಲಿ ನಿಲುವಳಿ ಸೂಚನೆ ಮಂಡಿಸುತ್ತೇವೆ. ಉತ್ತರ ಕರ್ನಾಟಕದ ವಿಚಾರಕ್ಕೆ ಹೆಚ್ಚು ಒತ್ತು ಕೊಡುತ್ತೇವೆ. ಜೆಡಿಎಸ್ ಕೂಡ ಬೆಂಬಲ ನೀಡಲಿದ್ದು, ಬರ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ತಂಡವಾಗಿ ಎಲ್ಲರೂ ಕೆಲಸ ಮಾಡುತ್ತೇವೆ. ಕಲ್ಯಾಣ ಕರ್ನಾಟಕದಿಂದ ಪ್ರವಾಸ ಕೈಗೊಂಡು, ಪಕ್ಷದ ಅಸಮಾಧಾನಿತರ ಜೊತೆ ಮಾತನಾಡುತ್ತೇನೆ. ಅವರ ಮನೆಗೇ ಹೋಗಿ ಮಾತಾಡಲಾಗುವುದು. ಯಾರೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಮಾಜಿ ಸಚಿವ ವಿ.ಸೋಮಣ್ಣ ಸೇರಿದಂತೆ ಎಲ್ಲರ ಜೊತೆ ಚರ್ಚೆ ಮಾಡುವುದಾಗಿ ತಿಳಿಸಿದರು.

ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ

ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಸೋಮಣ್ಣ ಅವರಿಗೆ ಸೋಲಾಗಿದೆ. ನಾನು ಅವರು ಸಹೋದರರ ರೀತಿ ಇದ್ದೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಜನ ಭಾರತ ಮಾತಾಕಿ ಜೈ ಎನ್ನಲು ಆರಂಭಿಸಿದ್ದಾರೆ. ಕುಮಾರಸ್ವಾಮಿ ದತ್ತಮಾಲೆ ಧರಿಸುತ್ತೇನೆ ಎಂದು ಹೇಳಿರುವುದನ್ನು ಸ್ವಾಗತಿಸಲಾಗುವುದು. ಇದು ಭಾರತದ ಪರಂಪರೆ. ನಮ್ಮ ತಂದೆ, ಅಜ್ಜ ಎಲ್ಲರೂ ಮಾಲೆ ಧರಿಸಿದ್ದರು.

ಶಿವಮಾಲೆ, ದತ್ತಮಾಲೆ, ಶಬರಿ ಮಾಲೆ ಹೀಗೆ ಅನೇಕ ಮಾಲೆ ಧರಿಸುವುದು ನಮ್ಮ ಪರಂಪರೆ. ದೇವರ ಮೇಲೆ ಭಕ್ತಿ ತೋರಿಸುವುಕ್ಕೆ ಭೇದ ಭಾವ ಬೇಡ ಮಾಡುವುದು ಬೇಡ. ಆ ರೀತಿ ಮಾಡುವುದು ಏನಿದ್ದರು ಕಾಂಗ್ರೆಸ್ ಎಂದು ಆರೋಪಸಿದರು. ಹಿಂದೂ ದ್ವೇಷ ಮಾಡೋದು, ಮುಸ್ಲಿಂರಿಗೆ ಸೆಲ್ಯುಟ್ ಹೊಡೆದು ನಿಲ್ಲಬೇಕು ಎಂಬ ದುರಹಂಕಾರದ ಹೇಳಿಕೆಗೆ ನಮ್ಮಲ್ಲಿ ಅವಕಾಶ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಸಮರ್ಥ ವಿರೋಧಪಕ್ಷದ ನಾಯಕನಾಗಿ ಕೆಲಸ ಮಾಡಿ ಎಂದು ಹೇಳಿದ್ದಾರೆ. ನಿನ್ನೆ ಸುತ್ತೂರು ಶ್ರೀಗಳಿಗೆ ಕರೆ ಮಾಡಿದ್ದೆ. ಎಲ್ಲ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದರು. ಇದೇ ಸಂದರ್ಭದಲ್ಲಿ ಶಾಸಕರಾದ ಕೆ.ಗೋಪಾಲಯ್ಯ ಎಸ್. ಮುನಿರಾಜು ಹಾಗೂ ಮುಖಂಡರು ಹಾಜರಿದ್ದರು.

ಜನವರಿ ಬಳಿಕ ರಾಜಕೀಯ ಧ್ರುವೀಕರಣ: ಲಕ್ಷ್ಮಣ್ ಸವದಿ

ಬಾಗಲಕೋಟೆ, ನ.20- ಲೋಕಸಭೆ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಸಾಧನೆಗಾಗಿ ಅನ್ಯ ಪಕ್ಷಗಳಿಂದ ನಾಯಕರನ್ನು ಕರೆ ತರುವುದು ಸೇರಿದಂತೆ ರಾಜಕೀಯ ಧ್ರುವೀಕರಣಕ್ಕೆ ಜನವರಿ 26ರ ಬಳಿಕ ಚಾಲನೆ ನೀಡುವುದಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಬಹಳಷ್ಟು ಅಸಮಾಧಾನ ಇದೆ. ಅದು ಸ್ಪೋಟವಾಗುವುದು ಮಾತ್ರ ಬಾಕಿ ಇದೆ. ನನಗೆ ಆ ಪಕ್ಷದಲ್ಲಿ ಬಹಳಷ್ಟು ಜನ ಸ್ನೇಹಿತರಿದ್ದಾರೆ. ಅಸಮಾಧಾನ ಯಾವಾಗ ಹೊರ ಬೀಳಲಿದೆಯೋ ಗೋತ್ತಿಲ್ಲ. ಜ್ವಾಲಾಮುಖಿ ಹೊರ ಬರುವುದಂತೂ ಖಚಿತ ಎಂದರು.

ಬಿಜೆಪಿಯಿಂದ ಬಹಳಷ್ಟು ನಾಯಕರು ಕಾಂಗ್ರೆಸ್‍ಗೆ ಬರುವ ಪ್ರಕ್ರಿಯೆ ಜನವರಿ 26ರ ನಂತರ ಸಕ್ರಿಯವಾಗಲಿದೆ. ಎಷ್ಟು ಜನ ಬರುತ್ತಾರೆ ಎಂದು ಕಾದು ನೋಡಿ. ಸದ್ಯಕ್ಕೆ ಯಾವುದೇ ಮುನ್ಸೂಚನೆ ನೀಡುವುದಿಲ್ಲ. ಜ.26ರ ಬಳಿಕ ನಮ್ಮ ಚಟುವಟಿಕೆಗಳನ್ನು ಆರಂಭಿಸುತ್ತೇವೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲು ಅಗತ್ಯವಾದ ಬ್ಲೂ ಪ್ರಿಂಟ್ ತಯಾರು ಮಾಡಿದ್ದೇವೆ ಎಂದು ಹೇಳಿದರು.

ತಮಗೆ ಲಿಂಗಾಯಿತ ಸಮುದಾಯದ ನಾಯಕರನ್ನಷ್ಟೇ ಅಲ್ಲ; ಎಲ್ಲಾ ಸಮುದಾಯದ ನಾಯಕರನ್ನು ಸೆಳೆಯುವ ಜಬಾಬ್ದಾರಿಯು ಇದೆ. ಕಾಂಗ್ರೆಸ್ ಪಕ್ಷವು ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಬದ್ಧತೆ ಹೊಂದಿದೆ. ಬಿಜೆಪಿಯಲ್ಲಿ ಹಿಂದುತ್ವ, ಹಿಂದುತ್ವ ವಿರೋಧಿ ಎಂಬ ಭಾವನೆಗಳಿವೆ. ಆದರೆ, ನಮ್ಮಲ್ಲಿ ಆ ರೀತಿ ಇಲ್ಲ ಎಂದರು.

ಅನ್ಯ ಪಕ್ಷಗಳ ಬಹಳಷ್ಟು ಜನ ನಮ್ಮ ಸಂಪರ್ಕದಲ್ಲಿದ್ದಾರೆ. ಆದರೆ, ಅವರನ್ನು ಇಲ್ಲಿಗೆ ಕರೆ ತಂದ ಮೇಲೆ ಅವರಿಗೆ ಸೂಕ್ತ ಮಾನ ನೀಡುವ ಬಗ್ಗೆಯೂ ಚಿಂತನೆ ಮಾಡಬೇಕಿದೆ. ಇಲ್ಲಿದ್ದವರಿಗೆ ಮನಸ್ಸಿಗೆ ನೋವು ಆಗಬಾರದು. ಹೊರಗಿನಿಂದ ಬಂದವರಿಗೆ ನೀಡಲು ಇಲ್ಲಿ ಸೂಕ್ತ ಸ್ಥಾನ ಮಾನ ಇರಬೇಕು. ಆ ನಿಟ್ಟಿನಲ್ಲಿ ಚರ್ಚೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಭಾರೀ ಚರ್ಚೆಗೆ ಗ್ರಾಸವಾದ `ಹಲೋ ಅಪ್ಪ’

ಬಿಜೆಪಿಯಿಂದ ಎಷ್ಟು ಜನ ಬರುತ್ತಾರೆ ಎಂಬುದಕ್ಕೆ ಮುಗುಮ್ಮಾಗಿ ಉತ್ತರ ನೀಡಿದ ಅವರು, ಗೋಳಿ ಹೊಡೆಯುವುದು ಅಂದರೆ ಬಂದೂಕು ಹಿಡಿಯುವಾಗ ಎರಡು ರೀತಿ ಇರುತ್ತದೆ. ಚರ್ರಿಗೋಳಿ ಚಿದ್ರವಾಗಿರುತ್ತದೆ. ಎಷ್ಟು ಮಂದಿಗೆ ಬಡಿಯುತ್ತದೆ ಎಂದು ಗೊತ್ತಿರುವುದಿಲ್ಲ. ಫೈರಿಂಗ್ ಮಾಡುವಾಗ ಎರಡು ರೀತಿ ಇರುತ್ತದೆ, ಯಾವ ಸಮಯಕ್ಕೆ ಯಾವುದನ್ನು ಫೈರಿಂಗ್ ಮಾಡಬೇಕೋ ಅದನ್ನು ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನ ಗೆಲ್ಲಬೇಕಾದರೆ ಫೈರಿಂಗ್ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ರಾಜಕೀಯದಲ್ಲಿ ದ್ರುವೀಕರಣ ಅನಿವಾರ್ಯ ಎಂದರು.

ನಾವು ಆಪರೇಷನ್ ಹಸ್ತ ಮಾಡುವುದಿಲ್ಲ. ಬಿಜೆಪಿಯಲ್ಲಿ ತಿರಸ್ಕಾರಕ್ಕೆ ಒಳಗಾಗಿ, ನಮಗೆ ಗೌರವ ನೀಡುತ್ತಿಲ್ಲ. ಅವಹೇಳನಕಾರಿಯಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ನೋಂದು ನಮ್ಮ ಪಕ್ಷಕ್ಕೆ ಬರುವವರನ್ನು ಕರೆದುಕೊಂಡು ಗೌರವಯುತವಾಗಿ ನಡೆಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಬಿಜೆಪಿಯಲ್ಲಿ ಪಕ್ಷದ ರಾಜಾಧ್ಯಕ್ಷ ಸ್ಥಾನ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಎರಡನ್ನು ಮಲೆನಾಡು ಮತ್ತು ಬೆಂಗಳೂರಿಗೆ ನೀಡಲಾಗಿದೆ. ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯಿಸಲಾಗಿದೆ. ಅದರಲ್ಲೂ ಲಿಂಗಾಯಿತ ಸಮುದಾಯ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ದಾವಣೆಗೆರೆಯಿಂದ ಕಿತ್ತೂರು ಕರ್ನಾಟಕ ಭಾಗದವರೆಗೂ ಲಿಂಗಾಯಿತರು ಹೆಚ್ಚಿದ್ದಾರೆ. ಬಿಜೆಪಿಯಲ್ಲಿನ ಅಧಿಕಾರಗಳು ಬೆಂಗಳೂರು, ಶಿವಮೊಗ್ಗಕ್ಕೆ ಸೀಮಿತವಾಗಿವೆ. ಈಗ ನಡೆದಿರುವ ಆಯ್ಕೆ ಬಹಳಷ್ಟು ಮಂದಿಗೆ ಸಮಾಧಾನ ತಂದಿಲ್ಲ. ತಮಗಿಂತಲೂ ಕಿರಿಯರ ಕೈ ಕೆಳಗೆ ಹೇಗೆ ಕೆಲಸ ಮಾಡುವುದು ಎಂಬ ಹಿಂಜರಿಕೆ ಆ ಪಕ್ಷ ಬಹಳಷ್ಟು ನಾಯಕರಲ್ಲಿದೆ ಎಂದರು.

ತಾವು ಬಿಜೆಪಿ ಬಿಟ್ಟ ಬಂದ ಮೇಲೆ ಅದರ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ. ಈಗ ನಾವು ಇರುವ ಪಕ್ಷದ ಬಗ್ಗೆ ಚರ್ಚೆ ಮಾಡುವುದು ಸೂಕ್ತ. ಪ್ರಶ್ನೆ ಎದುರಾದ ಕಾರಣಕ್ಕೆ ಉತ್ತರಿಸುವುದಾದರೆ ಇವತ್ತಿನ ಪರಿಸ್ಥಿತಿಯಲ್ಲಿ ವಿಜಯೇಂದ್ರ ಸೇರಿದಂತೆ ಯಾರೇ ಬಿಜೆಪಿ ಅಧ್ಯಕ್ಷರಾದರೂ ಆ ಪಕ್ಷ ಚೇತರಿಸಿಕೊಳ್ಳುವ ಸಾಧ್ಯತೆ ಇಲ್ಲ.

ಅಶೋಕ್ ಮತ್ತು ವಿಜಯೆಂದ್ರ ಜೋಡೆತ್ತುಗಳಂತೆ ಪಕ್ಷ ಕಟ್ಟುತ್ತೇವೆ ಎನ್ನುತ್ತಾರೆ. ಜೋಡೆತ್ತು ಅಷ್ಟೆ ಅಲ್ಲ, ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ಕು ಎತ್ತುಗಳನ್ನು ಹೂಡಿ ನೇಗಿಲು ಹೂಳುವ ಪದ್ಧತಿ ಇದೆ. ಸದ್ಯದ ಪರಿಸ್ಥಿತಿಯಲ್ಲಿ ನಾಲ್ಕು ಎತ್ತುಗಳನ್ನು ಹೂಡಿದರೂ ಹೊಲದಲ್ಲಿನ ಗಳೇ ಜಗ್ಗಲು ಆಗಲ್ಲ. ಆ ಶಕ್ತಿ ಬಿಜೆಪಿಗೆ ಇಲ್ಲ, ನೆಲ ಗಟ್ಟಿಯಾಗಿದೆ, ಬಿರುಸಾಗಿದೆ. ಅಲ್ಲಿ ಎರಡು ಎತ್ತುಗಳಿಗೆ ಜಗ್ಗುವ ಪರಿಸ್ಥಿತಿ ಉಳಿದಿಲ್ಲ. ಆ ನೇಗಿಲು ಜಗ್ಗ ಬೇಕಾದರೆ ಎಂಟತ್ತು ಎತ್ತುಗಳನ್ನು ಹೂಡಿದರೂ ಸಾಧ್ಯವಾಗುವುದಿಲ್ಲ ಎಂದರು.

ವಿಧಾನಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್ ಅವರಿಗೆ ಬಿಜೆಪಿಯವರು ಗೌರವ ಸಲ್ಲಿಸುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆಯನ್ನು ತಾವು ಕೂಡ ಒಪ್ಪಲ್ಲ. ಮಾತಿನ ಭರದಲ್ಲಿ ಜಮೀರ್ ಆ ರೀತಿ ಹೇಳಿರಬಹುದು. ಸ್ಥಾನಕ್ಕೆ ಗೌರವ ಇರುತ್ತದೆ. ಅದು ವ್ಯಕ್ತಿಗೆ ಸೀಮಿತವಲ್ಲ. ಸಂವಿಧಾನ ಬದ್ಧವಾದ ಹುದ್ದೆ ಒಂದು ಸಮಾಜಕ್ಕೆ ಸೇರಿದ್ದಲ್ಲ. ಮುಖ್ಯಮಂತ್ರಿಯಾದಿಯಾಗಿ ಎಲ್ಲರೂ ಸ್ಪೀಕರ್ ಹುದ್ದೆಗೆ ಗೌರವ ನೀಡುತ್ತಾರೆ. ವ್ಯಕ್ತಿ ಸ್ಥಾನದಿಂದ ಕೆಳಗಿಳಿದ ಮೇಲೆ ಅವರ ಕುರಿತ ಗೌರವ ಬದಲಾಗುತ್ತದೆ ಎಂದರು.

ಮಾಜಿ ಶಾಸಕ ಯತೀಂದ್ರ ವಿಡಿಯೋ ಕುರಿತು ಟೀಕೆ ಮಾಡುವವರನ್ನು ನೋಡಿದರೆ ನನಗೆ ನಗು ಬರುತ್ತದೆ. ಮಾತನಾಡುವವರೆಲ್ಲಾ ಸತ್ಯ ಹರಿಶ್ಚಂದ್ರ ರಾಜರ ಮನೆಯಲ್ಲಿ ಬಾಡಿಗೆ ಇದ್ದಂತೆ ಮಾತನಾಡುತ್ತಾರೆ. ಬೇರೆಯವರಿಗೆ ಗೊತ್ತಿಲ್ಲದೆ ಇರಬಹುದು, ನಾನು ಇಪ್ಪತ್ತು ವರ್ಷ ಅವರ ಜೊತೆ ಇದ್ದು ನೋಡಿದ್ದೇನೆ. ಬಹಳ ಚೆನ್ನಾಗಿ ಗೊತ್ತಿದೆ. ಆರೋಪ ಮಾಡಲಿ, ಆದರೆ ಒಂದು ಬೆರಳನ್ನು ಬೇರೆಯವರತ್ತ ತೋರಿಸುವ ಮುನ್ನಾ ನಾಲ್ಕು ಬೆರಳು ತಮ್ಮತ್ತ ಇರುತ್ತವೆ ಎಂಬ ಅರಿವಿರಬೇಕು ಎಂದರು.

ಸ್ವಲ್ಪ ದಿನ ಕಳೆದ ಮೇಲೆ ಜನ ಸರ್ಕಾರ ನಡೆಸುವವರನ್ನು ಕಲ್ಲು ತೆಗೆದುಕೊಂಡು ಹೊಡೆಯುತ್ತಾರೆ ಎಂದು ಮಾಜಿ ಸಚಿವ ಶ್ರೀರಾಮಲು ನೀಡಿರುವ ವಿವಾದಿತ ಹೇಳಿಕೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ ಸವದಿ, ಶ್ರೀರಾಮುಲುರಿಗೆ ಸಮಯ ಪ್ರಜ್ಞೆ ಬಹಳ ಕಡಿಮೆ ಇದೆ. ಅವರು ಬಳ್ಳಾರಿ ಜಿಲ್ಲೆಯನ್ನೂ ಈಗಾಗಲೇ ಕಳೆದುಕೊಂಡಿದ್ದಾರೆ. ಅವರ ಬಗ್ಗೆ ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ, ಯಾರದರೂ ಪ್ರಭುದ್ಧ ರಾಜಕಾರಣಿ ಮಾತನಾಡಿದರೆ ಪ್ರತಿಕ್ರಿಯಿಸುತ್ತೇನೆ ಎಂದರು.

ನನ್ನ ಕ್ಷೇತ್ರದಲ್ಲಿ ಗಂಭೀರ ಸಮಸ್ಯೆಗಳಿವೆ, ನೀರಾವರಿ ಸೇರಿದಂತೆ ಅನೇಕ ಯೋಜನೆಗಳು ನಡೆಯಬೇಕಿದೆ. ಮಂತ್ರಿಯಾದ ಮೇಲೆ ರಾಜ್ಯ ಸುತ್ತ ಬೇಕಿದೆ. ಕ್ಷೇತ್ರ ಸಮಸ್ಯೆಗಳತ್ತ ಗಮನ ಹರಿಸಲು ಕಷ್ಟವಾಗುತ್ತದೆ. ಕಳೆದ ನಾಲ್ಕೈದು ವರ್ಷದಿಂದ ಕ್ಷೇತ್ರ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಮೊದಲು ಅವುಗಳನ್ನು ಸರಿ ಪಡಿಸಿ, ಬಳಿಕ ಸಚಿವ ಸ್ಥಾನದ ಬಗ್ಗೆ ಗಮನ ಹರಿಸುತ್ತೇನೆ ಎಂದರು.