Home Blog Page 1808

ಸರ್ಕಾರದ ವಿರುದ್ಧ ಬಿಜೆಪಿ ಪೋಸ್ಟರ್ ಸಮರ

ಬೆಂಗಳೂರು,ನ.18- ರಾಜ್ಯ ಕಾಂಗ್ರೆಸ್ ಸರಕಾರ ಘೋಷಿಸಿದ ಗ್ಯಾರಂಟಿಗಳ ವಿರುದ್ಧ ಬಿಜೆಪಿ ಸರಕಾರ ಪೋಸ್ಟರ್ ಅಭಿಯಾನ ಆರಂಭಿಸಿದ್ದು, ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಚಿಕ್ಕಮಗಳೂರಿನಲ್ಲಿ ಬಿಜೆಪಿ ವತಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿದ್ದು, ತಾಲೂಕು ಆಫೀಸ್, ಮೆಸ್ಕಾಂ ಕಚೇರಿ, ತಾಲೂಕು ಪಂಚಾಯಿತಿ, ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಶ್ಯಾಡೋ ಸಿಎಂ ಎಂಬ ವ್ಯಂಗ್ಯಚಿತ್ರದ ಮೂಲಕ ವ್ಯಂಗ್ಯವಾಡಿದ್ದಾರೆ.

ಎರಡು ದಿನಗಳ ಹಿಂದೆ ಯತೀಂದ್ರ ಸಿದ್ದರಾಮಯ್ಯ ಅವರು ಫೋನ್ ಮೂಲಕ ಮಾತನಾಡುವ ವಿಡಿಯೋ ವೈರಲ್ಲಾಗಿತ್ತು. ಇದರ ವಿರುದ್ದವೂ ಶ್ಯಾಡೋ ಸಿಎಂ ಫೋಸ್ಟರ್ ಅಂಟಿಸಿ ಬಿಜೆಪಿ ಟೀಕೆ ಮಾಡಿದೆ.
ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಜೆ ಜಾರ್ಜ್ ವಿರುದ್ಧವೂ ಪೋಸ್ಟರ್ ಹಾಕಿದ್ದು, ರಾಜ್ಯವನ್ನ ಕತ್ತಲೆಗೆ ದೂಡಿ ಇಂಧನ ಸಚಿವರು ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಹಾಕಿದೆ.

ಈ ಅಭಿಯಾನದಲ್ಲಿ ಸೋನಿಯಾ ಗಾಂಧಿ ಸಿ.ಎಂ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟರ್ ವಾರ್ ನಡೆಸಿದ್ದಾರೆ. ಸರ್ಕಾರ ಒಂದೆಡೆ ಉಚಿತ ಎಂದು ಹೇಳಿಕೊಂಡು ಮತ್ತೊಂದೆಡೆ ಸುಲಿಗೆ ಮಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ಇದು ಫ್ರೀ ಭಾಗ್ಯವಲ್ಲ. ಹಗಲು ದರೋಡೆ ಎಂದು ಚಿಕ್ಕಮಗಳೂರು ನಗರದಾದ್ಯಂತ ಅಲ್ಲಲ್ಲೇ ಪೆÇೀಸ್ಟರ್ ಹಾಕಿದ್ದಾರೆ. ಅದೇ ರೀತಿ, ವೈಎಸ್‍ಟಿ (ಯತೀಂದ್ರ ಸಿದ್ದರಾಮಯ್ಯ ಟ್ಯಾಕ್ಸ್) ಸಂಗ್ರಹ ಸಮಿತಿಯ ಸುತ್ತೋಲೆ ಎಂಬ ಶೀರ್ಷಿಕೆ ನೀಡಿ, ಯಾವುದೇ ಸರ್ಕಾರಿ ಸಂಬಂತ ಸೇವೆಗಳಿಗಾಗಿ ಹಲೋ ಅಪ್ಪಾ.. ಆಪ್ ಡೌನ್‍ಲೋಡ್ ಮಾಡಿಕೊಳ್ಳಿ ಹಾಗೂ ಪೇಮೆಂಟ್ ಮಾಡಿ ಎಂದು ಬರೆಯಲಾಗಿದೆ. ಈ ಪೋಸ್ಟರ್‍ನಲ್ಲಿ ಯತೀಂದ್ರ ಅವರನ್ನು ಶ್ಯಾಡೋ ಸಿಎಂ ಎಂದು ಕರೆಯಲಾಗಿದೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂ ಮತ್ತು ಕೆಜೆ ಜಾರ್ಜ್ ಸಂಭಾಷಣೆ ನಡೆಸುವ ರೀತಿಯಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಈ ತಿಂಗಳ ಕಪ್ಪ ಎಲ್ಲಿ ಎಂದು ಸೋನಿಯಾ ಗಾಂ ಕೇಳುತ್ತಾರೆ. ಇದಕ್ಕೆ ಕೆಜೆ ಜಾರ್ಜ್, ಈಗ ತಾನೇ ವಿದ್ಯುತ್ ಬಿಲ್ ಜಾಸ್ತಿ ಮಾಡಿದ್ದೀವಿ. ಬರುತ್ತೆ ತಡೀರಿ ಮೇಡಂ ಎಂದು ಹೇಳುವ ರೀತಿ ಬರೆಯಲಾಗಿದೆ.
ಅಲ್ಲದೆ ಬಸ್ ಟಿಕೆಟ್ ದರಗಳನ್ನು ಸದ್ದಿಲ್ಲದೆ ಏರಿಸಿದ್ದನ್ನು ಮುಂದಿಟ್ಟುಕೊಂಡು ಪೋಸ್ಟರ್ ಅಂಟಿಸಲಾಗಿದೆ.

ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಫ್ರೀ ಬಸ್ ಟಿಕೆಟ್ ಅಂತಾ ನಂಬಿಸಿ 3 ಬಾರಿ ಬಸ್ ಟಿಕೆಟ್ ದರ ಏರಿಸಲಾಗಿದೆ. ಮೈಸೂರು-ಬೆಂಗಳೂರಿಗೆ 160 ರೂ. ಇದ್ದ ಟಿಕೆಟ್ ದರ ಈಗ 200 ರೂ. ಆಗಿದೆ. ಒಂದು ಕಡೆ ಸುಲಿಗೆ.. ಇನ್ನೊಂದು ಕಡೆ ಉಚಿತ.. ಇದು ಫ್ರೀ ಭಾಗ್ಯವಲ್ಲ, ಹಗಲು ದರೋಡೆ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.

ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ಕಪಟ ಐದು ಗ್ಯಾರಂಟಿಗಳು ಎಂದು ಶೀರ್ಷಿಕೆಯುಳ್ಳ ಪೋಸ್ಟರ್ ಕೂಡ ಅಂಟಿಸಲಾಗಿದೆ. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರೆಂಟ್ ಬಿಲ್ ಏರಿಕೆ, ಲೋಡ್ ಶೆಡ್ಡಿಂಗ್ ಶುರು, ಸದ್ದಿಲ್ಲದೇ ಬಸ್ ದರ ಏರಿಕೆ ಮಾಡಿದ್ದು, ಕಾವೇರಿ ನೀರನ್ನು ಬೇಕಾಬಿಟ್ಟಿ ತಮಿಳುನಾಡಿಗೆ ದಾನ ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳ ಆಚರಣೆಗೆ ಅನುದಾನ ನೀಡದೆ ಸುಮ್ಮನೆ ಕೂತಿದ್ದು, ಆಸ್ತಿ ನೋಂದಣಿ ದರ ಏರಿಕೆ, ಗೃಹಲಕ್ಷ್ಮಿ ಬರುತ್ತಿಲ್ಲ, ಶಕ್ತಿ ಯೋಜನೆಗೆ ಬಸ್ ಸಾಲುತ್ತಿಲ್ಲ. ಯುವನಿಯಿನ್ನೂ ಶುರುವೇ ಆಗಿಲ್ಲ ಎಂದು ಪೋಸ್ಟರ್‍ನಲ್ಲಿ ಬರೆಯಲಾಗಿದೆ.

ಭ್ರಷ್ಟಾಚಾರದ ಆರೋಪಗಳ ಸುರಿಮಳೆಗೈದು ಪೇಸಿಎಮ್, 40 ಪರ್ಸೆಂಟ್ ಪೋಸ್ಟರ್ ಸೇರಿದಂತೆ ಹಲವು ಪೋಸ್ಟರ್‍ಗಳನ್ನು ಬಿಜೆಪಿ ಸರ್ಕಾರದ ವಿರುದ್ಧ ಅಂಟಿಸಿ ಚುನಾವಣೆಯಲ್ಲಿ ಲಾಭ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ವಿರುದ್ಧವೇ ಇದೀಗ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ವಾರ್ ಆರಂಭಿಸಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ: ಸ್ವಲ್ಪ ದಿನ ಕಾದು ನೋಡಿ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು, ನ.18- ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆಯ ನಂತರ ಅಸಮಾಧಾನಗಳು ಹೊರ ಬಂದಿದ್ದು, ಸ್ವಲ್ಪ ದಿನ ಕಾದು ನೋಡಿದರೆ ಮತ್ತಷ್ಟು ಬೆಳವಣಿಗೆಗಳಾಗುತ್ತವೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಅಶೋಕ್ ಅವರನ್ನು ಪ್ರತಿಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ.

ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಹೇಳಿದರು.

ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿರುವುದು ಭ್ರಮೆ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ನಾಯಕರು ಅಸಮಧಾನಗೊಂಡಿದ್ದಾರೆ.

ವಿಜೆಯೆಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ, ಆರ್.ಅಶೋಕರನ್ನು ವಿಪಕ್ಷ ನಾಯಕನ್ನಾಗಿ ಮಾಡಿರುವುದಕ್ಕೆ ಅವರೆಲ್ಲಾ ಅಸಮಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ಕಾದು ನೋಡಿ ಬಿಜೆಪಿಯ ಪರಿಸ್ಥಿತಿ ಗೋತ್ತಾಗಲಿದೆ ಎಂದರು.

ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕ ಹರೀಶ್‍ಗೌಡರನ್ನು ಕೇಳಿ ಎಂದರು.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಯವರು, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಹತಾಶರಾದ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸುಳ್ಳು ಆರೋಪಗಳಿಗೆ ಉತ್ತರ ನೀಡುವುದಿಲ್ಲ: ಕಾಂಗ್ರೆಸ್ ನವರು ಕೌರವ ಸಂಸ್ಕøತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಸುಳ್ಳು ಹೇಳುವುದರಿಂದಲೇ 38 ಕ್ಷೇತ್ರಗಳಲ್ಲಿ ಗೆದ್ದಿದ್ದವು 19 ಸ್ಥಾನಕ್ಕೆ ಕುಸಿದಿದ್ದಾರೆ ಎಂದರು.

ತಮ್ಮ ಪುತ್ರ ಮಾಜಿ ಶಾಸಕ ಯತೀಂದ್ರರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದರೆ ಅಂತಹ ವ್ಯತ್ಯಾಸವೇನು ಆಗುವುದಿಲ್ಲ ಎಂದ ಅವರು, ಮೈಸೂರು ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಪೆನ್ ಡ್ರೈವ್ ನಲ್ಲಿ ಸಾಕಷ್ಟು ಮಾಹಿತಿಗಳಿದ್ದು, ಆಡಳಿತ ಪಕ್ಷದವರು ಅದನ್ನು ಬಹಿರಂಗಗೊಳಿಸದಂತೆ ಮನವಿ ಮಾಡಿದ್ದಾರೆ ಎಂಬ ಕುಮಾರಸ್ವಾಮಿಯವರ ಹೇಳಿಕೆ ಬಾಲಿಶವಾದದ್ದು, ಪೆನ್ ಡ್ರೈವ್ ತೋರಿಸಿದ ಬಳಿಕ ವಿಧಾನಸಭೆ ಅಧಿವೇಶನ ನಡೆದಿತ್ತು. ಅಲ್ಲಿ ಏಕೆ ಪ್ರಸ್ತಾಪ ಮಾಡಲಿಲ್ಲ. ಪೆನ್ ಡ್ರೈವ್ ಬಹಿರಂಗಗೊಳಿಸಬೇಡಿ ಎಂದು ಕುಮಾರಸ್ವಾಮಿಯವರಿಗೆ ಯಾರು ಮನವಿ ಮಾಡಿದವರು ಎಂಬ ಮಾಹಿತಿಯನ್ನು ಬಹಿರಂಗ ಪಡಿಸಲಿ.

ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ವಿದ್ಯುತ್ ಕಳವು ಮಾಡಿರುವ ಕುಮಾರಸ್ವಾಮಿಯವರಿಗೆ ಇಂತಹ ಹೇಳಿಕೆಗಳನ್ನು ನೀಡಲು ಯಾವ ನೈತಿಕತೆಯೂ ಇಲ್ಲ. ದಂಡ ಕಟ್ಟುವ ಮೂಲಕ ವಿದ್ಯುತ್ ಕಳುವು ಮಾಡಿರುವ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಅಪರಾಧ ಚಿಕ್ಕದಾಗಲಿ, ದೊಡ್ಡದಾಗಲಿ ಅಪರಾಧವೇ ಆಗಿದೆ. ಅವರಿಗೆ ಟೀಕೆ ಮಾಡುವ ನೈತಿಕತೆ ಇಲ್ಲ ಎಂದರು.

ಸಂಸದ ಪುತ್ರನ ಲವ್ವಿ-ಡವ್ವಿ ಪ್ರಕರಣ ಮೈಸೂರಿಗೆ ಹಸ್ತಾಂತರಿಸಲು ಸಿದ್ಧತೆ

ಬೆಂಗಳೂರು, ನ.18- ಬಳ್ಳಾರಿ ಸಂಸದ ದೇವೇಂದ್ರಪ್ಪರ ಪುತ್ರ, ಉಪನ್ಯಾಸಕ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸ್ನೇಹ, ಪ್ರೀತಿ, ವಂಚನೆ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರಿನ ವಿಜಯನಗರದ ನಿವಾಸಿ, 24 ವರ್ಷದ ಸಂತ್ರಸ್ತೆ ದೂರು ನೀಡಿದ್ದು, ಉಪನ್ಯಾಸಕನ ಜೊತೆ ಆಕೆಗೆ ಮೈಸೂರಿನಲ್ಲಿ ಒಡನಾಟವಿದುದ್ದು. ಬೆಂಗಳೂರಿನಲ್ಲಿ ಈ ಸಂಬಂಧ ಯಾವುದೇ ದಾಖಲೆಗಳಿಲ್ಲ. ಹಾಗಾಗಿ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಈ ಪ್ರಕರಣವನ್ನು ಮೈಸೂರಿಗೆ ವರ್ಗಾವಣೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಉಪನ್ಯಾಸಕ ರಂಗನಾಥ್ ಆಕೆಯ ಸ್ನೇಹ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿ ಮೈಸೂರಿಗೆ ಕರೆಸಿಕೊಂಡು ಅಲ್ಲಿನ ಹೊಟೇಲ್‍ಗೆ ಕರೆದೊಯ್ದು ಲೈಂಗಿಕ ಸಂಪರ್ಕ ಹೊಂದಿ ನಂತರ ಆಕೆಗೆ ವಂಚಿಸಿರುವ ಬಗ್ಗೆ ಆರೋಪ ಕೇಳಿ ಬಂದಿದೆ. ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆ ಕೈಗೊಂಡಿರುವ ಪೊಲೀಸರು, ಈ ಪ್ರಕರಣವನ್ನು ಇದೀಗ ಮೈಸೂರು ನಗರ ಪೊಲೀಸರಿಗೆ ವರ್ಗಾಯಿಸಲು ಸಿದ್ಧತೆ ನಡೆಸಿದ್ದಾರೆ.

ಈ ನಡುವೆ ಯುವತಿಯು ಫೋಟೋ, ಆಡಿಯೋ ಇಟ್ಟುಕೊಂಡು 15 ಲಕ್ಷ ಕೊಡುವಂತೆ ಬ್ಲಾಕ್‍ಮೇಲ್ ಮಾಡುತ್ತಿದ್ದಾರೆಂದು ಆಕೆ ವಿರುದ್ಧ ರಂಗನಾಥ್ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕುಮಾರಸ್ವಾಮಿ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಕಿಡಿ

ಮೈಸೂರು,ನ.18- ಲಿಸ್ಟ್ ಎನ್ನುತ್ತಿದ್ದಂತೆ ಅದು ವರ್ಗಾವಣೆಯ ಪಟ್ಟಿ ಎಂದೇ ಭಾವಿಸುವುದೇಕೆ ಎಂದು ಪ್ರಶ್ನಿಸಿರುವ ಮಾಜಿ ಶಾಸಕ ಯತೀಂದ್ರಸಿದ್ದರಾಮಯ್ಯ, ಕುಮಾರಸ್ವಾಮಿ ಕಾಲದಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರೆನೋ ಗೋತ್ತಿಲ್ಲ. ಅದಕ್ಕಾಗಿ ಪ್ರತಿ ವರ್ಗಾವಣೆಯಲ್ಲೂ ದಂಧೆ ನಡೆದಿದೆ ಎಂದು ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವೈರಲ್ ಆಗಿರುವ ವಿಡಿಯೋ ಬಗ್ಗೆ ನಾನು ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ. ನಾನು ಹತ್ತಾರು ವಿಚಾರಗಳ ಬಗ್ಗೆ ಮುಖ್ಯಮಂತ್ರಿಯವರ ಜೊತೆ ಮಾತನಾಡುತ್ತೇನೆ. ಮೊಬೈಲ್ ಸಂಭಾಷಣೆಯಲ್ಲಿ ನಾನು ದುಡ್ಡಿನ ಕುರಿತು ಮಾತನಾಡಿದ್ದರೆ ಸ್ಪಷ್ಟನೆ ಕೊಡಬಹುದಿತ್ತು ಎಂದಿದ್ದಾರೆ.

ಆದರೂ ಈಗ ಅದರ ಬಗ್ಗೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿಎಸ್‍ಆರ್ ಫಂಡ್ ವಿಚಾರದ ಬಗ್ಗೆ, ಲಿಸ್ಟ್ ಎಂದ ಕೂಡಲೇ ಅದನ್ನು ವರ್ಗಾವಣೆ ಎಂದು ಏಕೆ ಭಾವಿಸುತ್ತಾರೆ. ಇವರ ಅವಧಿಯಲ್ಲಿ ಲಿಸ್ಟ್ ಅಂದರೇ ವರ್ಗಾವಣೆ ಅಂದರೇ ಮಾತ್ರವಾಗಿತ್ತಾ, ಅದು ದಂಧೆಯಾಗಿತ್ತಾ ಎಂದು ಯತೀಂದ್ರ ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಯವರ ಪತ್ನಿ, ಪುತ್ರ ಮತ್ತು ಇಡೀ ಕುಟುಂಬವೇ ರಾಜಕಾರಣದಲ್ಲಿದೆ. ಅವರ ಮೇಲೂ ನಾವೂ ಅದೇ ರೀತಿ ಮಾತನಾಡಲು ಆಗುತ್ತದಾ? ಹಾಗಾದರೇ ಇವರ ಅವಧಿಯಲ್ಲಿ ಮಾಡಿದ ವರ್ಗಾವಣೆಗಳಲ್ಲೆಲ್ಲಾ ದಂಧೆಯೇ ನಡೆದಿದೆಯೇ ? ಹಣ ಪಡೆದೇ ವರ್ಗಾವಣೆ ಮಾಡಿದ್ದಾರಾ ಎಂದು ಕೇಳಿದ್ದಾರೆ.

ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್

ನನಗೆ ವರುಣ ಕ್ಷೇತ್ರದ ಜವಾಬ್ದಾರಿ ಇದೆ. ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿಸಿದರೂ ಅದರಲ್ಲಿ ತಪ್ಪೇನಿದೆ. ಎಲ್ಲಾ ವರ್ಗಾವಣೆಯನ್ನೂ ಇವರು ಹಣದ ದೃಷ್ಟಿಯಲ್ಲಿ ನೋಡಿದರೆ, ಅವರು ಅದೇ ಕೆಲಸ ಮಾಡುತ್ತಿದ್ದರು ಎಂದು ಅರ್ಥ ಅಲ್ಲವೇ ? ಆರೋಪಗಳನ್ನ ಮಾಡುವಾಗ ದಾಖಲೆ ಇಟ್ಟು ಮಾತನಾಡಲಿ. ದಾಖಲೆ ಇಲ್ಲದೆ ಸುಖಾಸುಮ್ಮನೆ ಆರೋಪ ಮಾಡಬೇಡಿ. ನಾನು ನನ್ನ ಪಾಡಿಗೆ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದರು.

ಅನಗತ್ಯವಾಗಿ ಎಲ್ಲಾ ವಿಚಾರಗಲಿಗೂ ನನ್ನ ಹೆಸರನ್ನು ಎಳೆದು ತರಬೇಡಿ, ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ. ವಿವೇಕಾನಂದ ಎನ್ನುವವರ ವರ್ಗಾವಣೆ ಎಲ್ಲಿಗೆ ಆಗಿದೆ. ಆ ಕ್ಷೇತ್ರದ ವ್ಯಾಪ್ತಿ ಯಾವುದು. ಅದರ ಬಗ್ಗೆ ಕ್ಷೇತ್ರದ ಶಾಸಕರನ್ನ ಕೇಳಿಕೊಳ್ಳಿ. ಅದಕ್ಕೂ ನನಗೂ ಏನೂ ಸಂಬಂಧ ಎಂದರು.

ನಮ್ಮ ಕ್ಷೇತ್ರದಲ್ಲಿ ಒಬ್ಬರು ಬಿಇಒ ವಿವೇಕಾನಂದ ಇದ್ದಾರೆ. ಇವತ್ತಿನ ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಎಂಬುವರ ಹೆಸರು ಇರುವುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಪಕ್ಷ ನಾಯಕನ ಆಯ್ಕೆ ಬಿಜೆಪಿಯಲ್ಲಿನ ಬೆಂಕಿಗೆ ತುಪ್ಪ ಸುರಿದಂತೆ: ಸಚಿವ ಖರ್ಗೆ

ಬೆಂಗಳೂರು,ನ.18- ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಫಲಿತಾಂಶ ಬಂದು ಆರು ತಿಂಗಳ ನಂತರ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿ ಬಿಜೆಪಿ ಪ್ರಜಾಪ್ರಭುತ್ವಕ್ಕೆ ಗೌರವ ಕೊಟ್ಟಿದೆ. ಆದರೆ ಅವರದೇ ಪಕ್ಷದ ಶಾಸಕರು ಮಾಡಿರುವ ಆರೋಪಗಳಿಗೆ ಬಿಜೆಪಿ ಸಾರ್ವಜನಿಕವಾಗಿ ಉತ್ತರ ಕೊಡಬೇಕು ಎಂದರು.

ನಮ್ಮ ಸರ್ಕಾರವನ್ನು ಹೇಗೆ? ಕಿತ್ತೊಗೊಯ್ಯುತ್ತಾರೆ. ಅವರಲ್ಲಿರುವ ಭಿನ್ನತೆಯನ್ನು ಸರಿಪಡಿಸಿಕೊಂಡು ಜೋಡಿಸಿಕೊಳ್ಳಲಿ ಎಂದು ಪ್ರಿಯಾಂಕ ಖರ್ಗೆ ತಿರುಗೇಟು ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಆರ್.ಅಶೋಕ್ ಅವರಿಗೆ ಅಭಿನಂದಿಸುತ್ತೇನೆ. ಈ ಆಯ್ಕೆಯಿಂದ ಕಾಂಗ್ರೆಸ್‍ಗೆ ಖುಷಿಯಾಗಿದೆ. ಆದರೆ ಬಿಜೆಪಿಗೆ ಸಂತೋಷವಿಲ್ಲ. ಚಾಪ್ಟರ್-2 ಸುಲಭವಾಗಲಿದೆ ಎಂದರು.

ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

ಈ ಹಿಂದೆ ಅಶೋಕ್ ಅವರಿಗೆ ಮಂಡ್ಯದಿಂದ ಗೋಬ್ಯಾಕ್ ಎಂಬ ಪೆÇೀಸ್ಟರ್ ಹಾಕಲಾಗಿತ್ತು. ಮತ್ತೆ ಬಿಜೆಪಿ ಕಚೇರಿಯಿಂದ ಗೋಬ್ಯಾಕ್ ಅಶೋಕ್ ಪೋಸ್ಟರ್ ಬರಬಹುದು ಎಂದು ಅವರು ವ್ಯಂಗ್ಯವಾಡಿದರು.
ಬಿಜೆಪಿಯನ್ನು ಒಂದು ಕುಟುಂಬದ ಪಕ್ಷವಾಗಲು ಬಿಡುವುದಿಲ್ಲ. ಬೆಟ್ಟದ ಹುಲಿ ಮಾಡಬೇಡಿ, ರಾಜ್ಯಾಧ್ಯಕ್ಷ ಸ್ಥಾನದ ಖರೀದಿಗೆ ಬಂದಿದ್ದರು ಎಂಬೆಲ್ಲ ಹೇಳಿಕೆಯನ್ನು ಅವರದೇ ಪಕ್ಷದವರು ನೀಡಿದ್ದಾರೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಎಷ್ಟು ಕೊಟ್ಟರು? ಬಿಜೆಪಿಯಲ್ಲಿ ಎಲ್ಲವೂ ಮಾರಾಟಕ್ಕಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಬಗ್ಗೆ ಕೊಡುವ ಗಮನವನ್ನು ಜೆಡಿಎಸ್ ಶಾಸಕರ ಬಗ್ಗೆ ಕಾಳಜಿ ತೋರಿದರೆ 19 ಶಾಸಕರು ಹತ್ತು ಆಗುವುದಿಲ್ಲ. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ ಎಂದು ವ್ಯಂಗ್ಯವಾಡಿದರು.

ವಿವೇಕಾನಂದ ಎಂಬುದು ಕಾಮನ್ ಹೆಸರು. ವರುಣಾ ಕ್ಷೇತ್ರದ ಬಿಇಒ ಒಬ್ಬರ ಹೆಸರು ಕೂಡ ಆಗಿದೆ. ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಬಗ್ಗೆ ಪದೇ ಪದೇ ಆರೋಪ ಮಾಡುತ್ತಿದ್ದಾರೆ. ಪೆನ್ ಡ್ರೈವ್‍ನಲ್ಲಿನ ಮಾಹಿತಿಯನ್ನು ಏಕೆ ಪ್ರದರ್ಶಿಸಲಿಲ್ಲ. ಕೇವಲ ತಿರುಚುವುದರಲ್ಲೇ ಏನು ಉಪಯೋಗ?

ಕರೆಂಟ್ ವಿಚಾರಕ್ಕೆ ತಪ್ಪು ಮಾಡಿ ದಂಡ ಕಟ್ಟಿದ್ದಾರೆ. ಅದನ್ನು ವಿಷಯಾಂತರ ಮಾಡಲು ಯತೀಂದ್ರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ವರ್ಗಾವಣೆ ದಂಧೆ ಆರೋಪಕ್ಕೆ ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ನೀಡಲಿ, ಬೆಳಗಾವಿ ಅಧಿವೇಶನದಲ್ಲಿ ಚರ್ಚೆಗೆ ಸಿದ್ದ. ಅದನ್ನು ಬಿಟ್ಟು ಮೊಸರಲ್ಲಿ ಕಲ್ಲು ಹುಡುಕುವುದರಿಂದ ಏನು ಪ್ರಯೋಜನ ಎಂದರು.

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಸಭಾಧ್ಯಕ್ಷರಾಗಿರುವ ಯು.ಟಿ.ಖಾದರ್‍ಗೆ ಬಿಜೆಪಿಯವರು ತಲೆ ಬಾಗಿಸುತ್ತಾರೆ ಎಂದು ಹೇಳಿರುವುದು ಸಭಾಧ್ಯಕ್ಷರ ಪೀಠಕ್ಕೆ ಗೌರವ ಸಲ್ಲಿಸುತ್ತಾರೆ ಎಂಬರ್ಥದಲ್ಲಿ. ಅದನ್ನು ಬೇರೆ ರೀತಿ ಅರ್ಥೈಸುವುದು ಸರಿಯಲ್ಲ ಎಂದರು.

ಸುಳ್ಳಿನ ಕಂತೆಗಳ ಸಂಚಿನ ವಿಫಲ ಯತ್ನ: ಎಚ್‍ಡಿಕೆಗೆ ಸಿಎಂ ತಿರುಗೇಟು

ಬೆಂಗಳೂರು,ನ.18- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪದೇ ಪದೇ ಸುಳ್ಳು ಕತೆಗಳ ಸಂಚು ರೂಪಿಸುವ ವಿಫಲ ಯತ್ನ ನಡೆಸುತ್ತಿದ್ದಾರೆ. ಸೋಲು, ವೈಫಲ್ಯಗಳಿಂದ ಹತಾಶರಾಗಿರುವ ಅವರು ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೊಬೈಲ್‍ನಲ್ಲಿ ಮಾತನಾಡುವಾಗ ವಿವೇಕಾನಂದ ಎಂಬುವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದನ್ನು ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ನಡೆದ ಮಾತುಕತೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ನಿನ್ನೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಅದರಲ್ಲಿ ವಿವೇಕಾನಂದ ಎಂಬ ಅಧಿಕಾರಿಯನ್ನು ಮೈಸೂರಿನ ವಿ.ವಿ.ಪುರಂ ಠಾಣೆಗೆ ನಿಯೋಜಿಸಲಾಗಿದೆ. ಅದನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಇಂದು ಸರಣಿ ಟ್ವಿಟ್‍ಗಳ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರತಿಯಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ?

ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್ ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತದೆಯೇ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಗೆ ಶಿಕ್ಷೆಯಾಗಿದೆ ಎಂದು ನಾವು ಹೇಳಿದ್ದೇವೆಯೇ? ಎಲ್ಲಿದಿಯಪ್ಪಾ ನಿಖಿಲ್ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ಲವೇ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?

ಜವಾಬ್ದಾರಿಯುತ ರಾಜಕೀಯ ನಾಯಕರಾಗಿ ಸತ್ಯಗಳನ್ನು ಪ್ರಸ್ತುತಪಡಿಸಬೇಕು, ಪಿತೂರಿ ಸಿದ್ಧಾಂತಗಳನ್ನಲ್ಲ. ಕುಮಾರಸ್ವಾಮಿಯವರ ಈ ಸರಣಿ ವಿಫಲ ಹತಾಶ ಪ್ರಯತ್ನಗಳು ಅವರ ಬೇಜವಾಬ್ದಾರಿಯನ್ನು ತೋರಿಸುತ್ತವೆ. ದುಃಖಕರವೆಂದರೆ ಜನರ ಗಮನ ಸೆಳೆಯುವುದಕ್ಕಾಗಿ ಅವರು ಮತ್ತಷ್ಟು ಅಳಲು ಮುಂದುವರೆಸಿದ್ದಾರೆ. ಸುಳ್ಳು ನಿರೂಪಣೆಗಳ ಮೂಲಕ ಸಮಯವನ್ನು ವ್ಯರ್ಥ ಮಾಡುವ ಬದಲು, ತಮ್ಮ ಮೈತ್ರಿ ಪಾಲುದಾರರೊಂದಿಗೆ ಮಾತನಾಡಿ ವಿವಿಧ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ದೊರೆಕಿಸುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಹೆಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ.

ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್

ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೇಕ್ಟರ್ ಹುದ್ದೆಗಳಿಗೆ 1500 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆ ಹಾಗೂ ಹೊಸ ಪರೀಕ್ಷೆಗಳನ್ನು ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಸಂಬಂಧಿಸಿದ ತಗಾದೆ ನ್ಯಾಯಾಲಯಲ್ಲಿತ್ತು. ಸರ್ಕಾರ ಮರು ಪರೀಕ್ಷೆ ಅವಕಾಶ ನೀಡುವಂತೆ ಸರ್ಕಾರ ವಾದ ಮಂಡಿಸಿತ್ತು. ಹಿಂದಿನ ಸರ್ಕಾರವೂ ಮರು ಪರೀಕ್ಷೆಗೆ ಅಧಿಸೂಚನೆ ಹೊರಡಿಸಿತ್ತು. ಕೆಲ ಅಭ್ಯರ್ಥಿಗಳು ಅದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಕೊನೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ ಎಂದರು.

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಸ್ವತಂತ್ರ ಸಂಸ್ಥೆಗಳಿವೆ. ನ್ಯಾಯಾಲಯದ ಆದೇಶ ದೊರೆತ ನಾಲ್ಕೈದು ದಿನಗಳಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.

ವಿದ್ಯಾರ್ಥಿಗಳ ಭವಿಷ್ಯ ಹಾಗೂ ಇಲಾಖೆಯ ಕಾರ್ಯಧ್ಯಕ್ಷತೆ ದೃಷ್ಟಿಯಿಂದ ಶೀಘ್ರವೇ ಮರು ಪರೀಕ್ಷೆಯಾಗಬೇಕಿದೆ. ವಿಳಂಬ ಮಾಡಲು ಸಾಧ್ಯವಿಲ್ಲ. ಬೇರೆ ಇಲಾಖೆಗಳಂತೆ ನೇಮಕಾತಿಯಾದ ತಕ್ಷಣವೇ ಕೆಲಸಕ್ಕೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಧ್ಯವಿಲ್ಲ. ಒಂದು ವರ್ಷ ತರಬೇತಿ ನೀಡಬೇಕಿದೆ. ಮೈಸೂರಿನಲ್ಲಿರುವ ನಮ್ಮ ತರಬೇತಿ ಸಂಸ್ಥೆಯ ಸಾಮಥ್ರ್ಯ 300 ರಿಂದ 400 ಮಂದಿಯಷ್ಟೆ ,ಅದನ್ನು ಹೆಚ್ಚಿಸಬೇಕಿದೆ. ನೇಮಕಾತಿಯ ಜೊತೆಗೆ ತರಬೇತಿಯ ಸಾಮಥ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಹೇಳಿದರು.

ನಮ್ಮ ಪೊಲೀಸ್‍ಠಾಣೆಗಳಲ್ಲಿ ಪಿಎಸ್‍ಐಗಳೇ ಇಲ್ಲವಾಗಿ, ಸಾವಿರಾರು ಹುದ್ದೆಗಳು ಖಾಲಿ ಇವೆ. ನಿಯಮ 32ನ್ನು ಜಾರಿ ಮಾಡಿ 600 ಪಿಎಸ್‍ಐಗಳಿಗೆ ಇತ್ತೀಚೆಗೆ ಬಡ್ತಿ ನೀಡಿದ್ದೇವೆ. ಅವರು ಈಗ ಪಿಎಸ್‍ಐಗಳಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈಗಾಗಲೇ 400 ಹುದ್ದೆಗಳು ಈಗಾಗಲೇ ಖಾಲಿಯಾಗಿವೆ. ಜೊತೆಯಲ್ಲಿ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಹಾಗೂ ಗೃಹ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಒಂದು ಸಾವಿರ ಹಾಗೂ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇಂದು ಸಭೆ ನಡೆಸಿ ಈ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ. ಅದಕ್ಕಾಗಿ ಇಲಾಖೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ. ಅನೇಕ ಕಾರಣದಿಂದ ವರ್ಗಾವಣೆಗಳಾಗುತ್ತವೆ. ಪೊಲೀಸ್ ಇಲಾಖೆ ಬೇರೆ ಇಲಾಖೆಯಂತಲ್ಲ, ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಇಡಲಾಗಲ್ಲ. ಠಾಣೆಯಲ್ಲಿ ಇನ್ ಸ್ಪೆಕ್ಟರ್ ಇಲ್ಲ ಅಂದರೆ ಮುಂದಿನ ವರ್ಷ ವರ್ಗಾವಣೆ ಸಮಯ ಬರುವವರೆಗೂ ಕಾಯಲು ಆಗಲ್ಲ, ಅದಕ್ಕಾಗಿ ಮಂಡಳಿಯ ಮೂಲಕ ಕಾಲ ಕಾಲಕ್ಕೆ ವರ್ಗಾವಣೆ ಮಾಡುತ್ತಲೇ ಇರುತ್ತೇವೆ. ಕೆಲವೊಮ್ಮೆ ಕಾರ್ಯಧ್ಯಕ್ಷತೆ ಕೊರತೆಯಾದಾಗಲೂ ಬದಲಾವಣೆ ಮಾಡುತ್ತೇವೆ ಎಂದರು.

ಮೈಸೂರಿನ ವಿ.ವಿ.ಪುರಂ ಠಾಣೆಗೆ ವಿವೇಕಾನಂದ ಎಂಬ ಅಧಿಕಾರಿ ವರ್ಗಾವಣೆಯಾಗಿರುವುದು, ಯತೀಂದ್ರ ಅವರ ವಿಡಿಯೋದಲ್ಲಿ ವಿವೇಕಾನಂದ ಹೆಸರು ಹೇಳಿರುವುದು ಕಾಕತಾಳೀಯ ಇರಬಹುದು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ನನ್ನ ಮೇಲೆ ಯಾರು ಒತ್ತಡ ಹೇರಿಲ್ಲ. ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೂ ಯತೀಂದ್ರ ಅವರ ವಿಡಿಯೋದಲ್ಲಿನ ಸಂಭಾಷಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡಲಿ. ಹಣ ತೆಗೆದುಕೊಂಡಿರುವ ಬಗ್ಗೆ ದಾಖಲೆ ಇದ್ದರೆ ಪ್ರಸ್ತಾಪ ಮಾಡಲಿ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ, ಅವರಿಗೆ ಸಮಾಧಾನ ಆಗುವ ರೀತಿಯಲ್ಲೇ ಉತ್ತರ ನೀಡುತ್ತೇವೆ, ನಾವೇನು ಉದ್ವೇಗಕ್ಕೆ ಒಳಗಾಗುವುದಿಲ್ಲ ಎಂದರು ಹೇಳಿದರು.

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಬಿಜೆಪಿಯಿಂದ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾದ ಆರ್.ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಸರ್ಕಾರಕ್ಕೆ ಸಲಹೆ ಕೊಟ್ಟು, ಎಚ್ಚರಿಸುವ ಕೆಲಸ ಮಾಡಲಿ, ವಿರೋಧ ಪಕ್ಷದ ನಾಯಕರಾದ ಮೇಲೆ ಟೀಕೆ ಮಾಡುವುದು, ಸರ್ಕಾರದ ತಪ್ಪು ಹೇಳುವುದು ಸ್ವಾಭಾವಿಕ. ಸತ್ಯಾಸತ್ಯತೆ ಅರಿತು ಮಾತನಾಡಲಿ.

ಸರ್ಕಾರ ಬಿಳಿಸುತ್ತೇನೆ ಎಂದು ಹೇಳುತ್ತಿದ್ದಾರೆ, ಕಾಂಗ್ರೆಸ್‍ಗೆ ಜನ 135 ಶಾಸಕರನ್ನು ಆರಿಸಿಕಳಿಸಿದ್ದಾರೆ. ನಮಗೆ ಅಧಿಕಾರ ಕೊಟ್ಟಿದ್ದಾರೆ, ಸರ್ಕಾರ ಬಿಳಿಸಲು ಇವರ್ಯಾರು. ಬೇರೆ ರೀತಿಯಲ್ಲಿ ಹೇಳಿಕೆ ಕೊಟ್ಟರೆ ಅದಕ್ಕೆ ಅರ್ಥ ಇರಲ್ಲ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್‍ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿರುವ ಕುರಿತಂತೆ ಮಾತನಾಡಿದ ಅವರು, ಇತರ ಪಕ್ಷಗಳ ನಾಯಕರು ಆಸಕ್ತಿ ತೋರಿಸಿದರೆ ನಾವು ಕರೆಯುತ್ತೇವೆ. ನಮ್ಮ ಪಕ್ಷದತ್ತ ಆಸಕ್ತಿ ತೋರಿಸಿದರೆ ಕರೆಯುವುದರಲ್ಲಿ ತಪ್ಪೇನಿದೆ. ಇಬ್ಬರು ನಾಯಕರ ಭೇಟಿ ಸೌಜನ್ಯದಷ್ಟೆ, ಅಲ್ಲಿ ಏನು ಚರ್ಚೆಯಾಗಿದೆ ಎಂದು ಮಾಹಿತಿ ಇಲ್ಲ. ಸರಿಯಾದ ವಿವರ ಇಲ್ಲದೆ ಪಕ್ಷ ಸೇರ್ಪಡೆಗೆ ಚರ್ಚೆಯಾಗಿದೆ ಎಂದರೆ ಹೇಗೆ ಎಂದರು.

ಬಿಜೆಪಿ ಮಾಜಿ ಶಾಸಕ ವಿ.ಸೋಮಣ್ಣ ಮೊನ್ನೆ ನಮ್ಮ ಮನೆಗೆ ಬಂದಿದ್ದರು, ಅವರ ಮನೆಯಲ್ಲಿ ಕಾರ್ಯಕ್ರಮವೊಂದಿದೆ, ಅದಕ್ಕೆ ನಾನು ಹೋಗುತ್ತೇನೆ. ಅದನ್ನು ಪಕ್ಷಕ್ಕೆ ಕರೆಯಲು ಹೋಗಿದ್ದರು, ಕಳುಹಿಸಲು ಹೋಗಿದ್ದರು ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ

ಬೆಂಗಳೂರು,ನ.18- ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಶೋಕ್ ಅವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು.

ಆರ್.ಟಿ.ನಗರದ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೊಮ್ಮಾಯಿ ಮತ್ತು ಅಶೋಕ್ ಪಕ್ಷದ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಕಾಲ ಪಕ್ಷದ ಸಂಘಟನೆ, ಬೆಳಗಾವಿ ಅವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ. ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ನಡೆಸುವುದಗಿ ಹೇಳಿದರು.

ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್

ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.
ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆ ಗೆ ಹೋಗುತ್ತಿದೆ ಎಂದರು.

ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ. ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸೋಣ ಎಂದು ಪ್ರಶ್ನಿಸಿದರು.

ಇಲ್ಲ ಅಂದರೆ ಪರಮೇಶ್ವರ್ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮೀರ್ ಹೇಳಿಕೆ ಕುರಿತು ಅವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರದಕ್ಷಿಣ ಕರ್ನಾಟಕ ಎಂದಿಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

ಲಕ್ನೋ,ನ.18-ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ತವರೂರು ಅಮ್ರೋಹಾ ಜಿಲ್ಲೆಯ ಸಹಸ್ಪುರ್ ಅಲಿನಗರದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ. ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದುವರೆಗೂ 2023ರ ವಿಶ್ವಕಪ್‍ನಲ್ಲಿ ಶಮಿ 23 ವಿಕೆಟ್‍ಗಳನ್ನು ಪಡೆದು, ಒಟ್ಟಾರೆ 51 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಎದುರಾಳಿಗಳ ವಿಕೆಟ್ ಉರುಳಿಸುತ್ತಾ ಭಾರತ ತಂಡ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ.

ಟೀಂ ಇಂಡಿಯಾ ಸಂಕಷ್ಟದಲ್ಲಿ ಸಿಲುಕಿದ ಸಮಯದಲ್ಲಿ ತಂಡಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಇದಕ್ಕೆ ತಾಜಾ ಉದಾಹಣೆ ಎಂದರೆ ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕಿವೀಸ್ ವಿರುದ್ಧದ ಸೆಮೀಫೈನಲ್‍ನಲ್ಲಿ ಬರೋಬ್ಬರಿ 7 ವಿಕೆಟ್ ಉರುಳಿಸಿದ್ದಾರೆ.

ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರುತ್ತಿರುವ ಶಮಿಗೆ ಬಂಪರ್ ಗಿಫ್ಟ್ ನೀಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆ ನಡೆಸಿದ್ದು, ಶಮಿಯವರ ಸ್ವಗ್ರಾಮದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.

ಈಗಾಗಲೇ ಇದಕ್ಕಾಗಿ ಆ ಗ್ರಾಮದಲ್ಲಿ ಭೂಮಿಯನ್ನು ಗುರುತಿಸಿದ್ದಾರೆ. ಈ ಸಂಬಂಧ ಡೆವಲಫ್‍ಮೆಂಟ್ ಆಫೀಸರ್ ಒಬ್ಬರನ್ನು ಸಹ ಸರ್ಕಾರ ನೇಮಕ ಮಾಡಿದೆ. ಗ್ರಾಮದಲ್ಲಿರುವ ಜನರ ಸಮಸ್ಯೆಗಳನ್ನು ನಿವಾಸಿರುವ ಕೂಡಲೇ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ.

ಅಧಿಕಾರಿಗಳು ಶಮಿ ಅವರ ಗ್ರಾಮದಲ್ಲಿರುವ ಜೋಯಾ ಡೆವಲಪ್‍ಮೆಂಟ್ ಬ್ಲಾಕ್‍ಗೆ ಭೇಟಿ ನೀಡಿದ್ದಾರೆ. ಶಮಿ ಅವರ ಕುಟುಂಬವು ಗ್ರಾಮದಲ್ಲಿಯೇ ನೆಲೆಸಿದೆ. ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಾಣಕ್ಕೆ ಸಂಬಂಧಿಸಿದ ಕಡತವನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಲಾಗಿದೆ.

ಇದಕ್ಕೂ ಮುನ್ನ ಡಿ.ಎಂ.ರಾಜೇಶ್ ತ್ಯಾಗಿ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳ ತಂಡ ಸಾಹಸಪುರ ಅಲಿನಗರಕ್ಕೆ ಆಗಮಿಸಿ ಮಿನಿ ಕ್ರೀಡಾಂಗಣ ಮತ್ತು ಓಪನ್ ಜಿಮ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಅಹಮದಾಬಾದ್, ನ.18- ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯ ನಾಳೆ ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಹಣಾಹಣಿ ಕ್ರೀಡಾ ರಸಿಕರಿಗೆ ರಸದೌತಣ ಉಣಬಡಿಸಲಿದೆ.

ಈ ಬಾರಿ ಫೈನಲ್ ಪಂದ್ಯಕ್ಕೆ ಘಟಾನುಘಟಿಗಳು ಫೈನಲ್ ಪಂದ್ಯಕ್ಕೆ ಸಾಕ್ಷಿ ಯಾಗುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸೂಪರ್ ಸ್ಟಾರ್‍ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್, ಸಚಿನ್, ಧೋನಿ ಸೇರಿದಂತೆ ಅತಿಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಪಂದ್ಯ ವೀಕ್ಷಣೆಗೆ ಆಸ್ಟ್ರೇಲಿಯಾ ಪ್ರಧಾನಿಗಳಿಗೂ ಮೋದಿ ಆಹ್ವಾನ ನೀಡಿದ್ದು ಅವರು ಪಂದ್ಯ ವೀಕ್ಷಣೆಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರ ಫಾರ್ಮ್ ನೋಡಿದಾಗ ನಿಶ್ಚಿತವಾಗಿ ಭಾರತ ಈ ಫೈನಲ್ ಪಂದ್ಯ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.

ಆದರೆ ಆಸ್ಟ್ರೇಲಿಯಾ ತಡ ಈಗಾಗಲೇ ಐದು ಬಾರಿ ವಿಶ್ವಕಪ್ ಟ್ರೋಫಿನ್ನು ಎತ್ತಿಹಿಡಿದಿರುವ ತಂಡವಾಗಿದ್ದು ಯಾವ ಕಾರಣಕ್ಕೂ ಆಸಿಸ್ ಪಡೆಯನ್ನು ಹಗುರವಾಗಿ ಪಡಿಗಣಿಸುವಂತಿಲ್ಲ ಎನ್ನುವುದು ಅತ್ಯಂತ ಸ್ಪಷ್ಟ.
ಇನ್ನು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ಮಧ್ಯೆ ಕಠಿಣ ಪೈಪೋಟಿ ನಡೆಯುವುದು ನಿಶ್ಚಿತ. ಈಗಾಗಲೇ ಲೀಗ್ ಹಂತದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಸುಲಭವಾಗಿ ಮಣಿಸಿತ್ತು.

ರಾಜ್ಯಪಾಲರು ತಿರಸ್ಕರಿಸಿದ ಮಸೂದೆ ಮರು ಮಂಡನೆ ಮಾಡಿದ ಸ್ಟಾಲಿನ್

ಹಾಗಾಗಿ ಭಾರತ ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಿರಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾದ ಈ ನಾಲ್ವರು ಆಟಗಾರರು ಸವಾಲಾಗಲಿದ್ದಾರೆ. ಈ ನಾಲ್ಕು ಆಟಗಾರರನ್ನು ಭಾರತಕ್ಕೆ ಕಟ್ಟಿ ಹಾಕಲು ಸಾಧ್ಯವಾದರೆ ಟೀಮ್ ಇಂಡಿಯಾ ಗೆಲುವು ನಿಶ್ಚಿತ. ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್, ಸ್ಮಿತ್, ಗ್ಲೆನ್ ಮ್ಯಾಕ್ಸ್‍ವೆಲ್ ಹಾಗೂ ಆಡಂ ಜಂಪ ಅವರನ್ನು ಕಟ್ಟಿ ಹಾಕುವಲ್ಲಿ ಭಾರತೀಯ ಬೌಲರ್‍ಗಳು ಯಶಸ್ವಿಯಾದರೆ ಭಾರತ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯ ಮೊದಲ ಎರಡು ಪಂದ್ಯಗಳನ್ನು ಸೋಲುವ ಮೂಲಕ ಸೇಮಿಫೈನಲ್ ಪ್ರವೇಶಿಸುವುದೇ ಕಷ್ಟ ಸಾಧ್ಯ ಎನ್ನುವಂತಿದ್ದ ಪರಿಸ್ಥಿತಿಯಲ್ಲಿ ಆ ತಂಡ ಪುಟಿದೆದ್ದು ಬಂದು ಫೈನಲ್ ತಲುಪಿರುವುದು ಸಾಮಾನ್ಯದ ವಿಷಯವೇನಲ್ಲ.

ಆದರೂ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಎಂತಹ ಸಂದರ್ಭದಲ್ಲೂ ಮಿಂಚಬಲ್ಲ ಸಾಮಥ್ರ್ಯ ಹೊಂದಿರುವುದರಿಂದ ಎರಡು ತಂಡಗಳ ನಡುವೆ ಸಮಬಲದ ಹೋರಾಟ ನಿರೀಕ್ಷಿಸಲಾಗಿದೆ.

ರೋಹಿತ್ ಶರ್ಮ, ಶುಭಮನ್‍ಗಿಲ್, ಕೋಹ್ಲಿ, ರಾಹುಲ್, ಶ್ರೇಯಸ್ ಅಯ್ಯರ್ ಬ್ಯಾಟಿಂಗ್‍ನಲ್ಲಿ ಮಿಂಚು ಹರಿಸುತ್ತಿದ್ದರೆ, ಬೌಲಿಂಗ್ ವಿಭಾಗದಲ್ಲಿ ಶಮಿ, ಬೂಮ್ರಾ, ಕುಲದಿಪ್, ರವೀಂದ್ರ ಜಡೆಜಾ ಚಮತ್ಕಾರ ಮಾಡುತ್ತಿರುವುದರಿಂದ ಈ ಬಾರಿ ವಿಶ್ವಕಪ್ ನಮ್ಮದೇ ಎಂಬ ವಿಶ್ವಾಸ ಮೂಡಿಸಿದೆ.