Home Blog Page 1809

ಸುಳ್ಳಿನ ಕಂತೆಗಳ ಸಂಚಿನ ವಿಫಲ ಯತ್ನ: ಎಚ್‍ಡಿಕೆಗೆ ಸಿಎಂ ತಿರುಗೇಟು

ಬೆಂಗಳೂರು,ನ.18- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪದೇ ಪದೇ ಸುಳ್ಳು ಕತೆಗಳ ಸಂಚು ರೂಪಿಸುವ ವಿಫಲ ಯತ್ನ ನಡೆಸುತ್ತಿದ್ದಾರೆ. ಸೋಲು, ವೈಫಲ್ಯಗಳಿಂದ ಹತಾಶರಾಗಿರುವ ಅವರು ಹಿಸ್ಟ್ರಿಯಾನಿಕ್ ಪರ್ಸನಾಲಿಟಿ ಡಿಸಾರ್ಡರ್ ಎಂಬ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೊಬೈಲ್‍ನಲ್ಲಿ ಮಾತನಾಡುವಾಗ ವಿವೇಕಾನಂದ ಎಂಬುವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದನ್ನು ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ನಡೆದ ಮಾತುಕತೆ ಎಂದು ಕುಮಾರಸ್ವಾಮಿ ಮೊದಲಿನಿಂದಲೂ ಆರೋಪ ಮಾಡುತ್ತಲೇ ಇದ್ದಾರೆ. ನಿನ್ನೆ ಪೊಲೀಸ್ ಅಧಿಕಾರಿಗಳ ವರ್ಗಾವಣೆಯಾಗಿದ್ದು ಅದರಲ್ಲಿ ವಿವೇಕಾನಂದ ಎಂಬ ಅಧಿಕಾರಿಯನ್ನು ಮೈಸೂರಿನ ವಿ.ವಿ.ಪುರಂ ಠಾಣೆಗೆ ನಿಯೋಜಿಸಲಾಗಿದೆ. ಅದನ್ನು ಮುಂದಿಟ್ಟುಕೊಂಡು ಕುಮಾರಸ್ವಾಮಿ ಇಂದು ಸರಣಿ ಟ್ವಿಟ್‍ಗಳ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಪ್ರತಿಯಾಗಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಸುದೀರ್ಘ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ರಾಜಕೀಯ ವಾಸ್ತವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ನಿದ್ದೆಗೆಡಿಸಿ ಮಾನಸಿಕ ಸ್ವಾಸ್ತ್ಯವನ್ನು ಕಲಕಿದ ಹಾಗೆ ಕಾಣುತ್ತಿದೆ. ಸುಳ್ಳುಕೋರನೆಂಬ ಅಪಖ್ಯಾತಿಯನ್ನು ಸ್ವಯಂ ತಾನೇ ಸಾಬೀತುಪಡಿಸುವ ಪೈಪೋಟಿಗೆ ಬಿದ್ದಿರುವ ಈ ಮಾಜಿಮುಖ್ಯಮಂತ್ರಿ ಇಂದು ಬೆಳ್ಳಂಬೆಳಗೆ ಎದ್ದು ಮತ್ತೊಂದಷ್ಟು ಸುಳ್ಳುಗಳನ್ನು ಉದುರಿಸಿದ್ದು ನೋಡಿದರೆ ರಾತ್ರಿಯಿಡೀ ನಿದ್ದೆಯಿಲ್ಲದೆ ಹೊರಳಾಡಿದ್ದು ಸ್ಪಷ್ಟವಾಗಿದೆ. ಯಾರಾದರೂ ಹಿತೈಷಿಗಳು ಇವರಿಗೆ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಬಾರದೇ ಎಂದು ಮರುಕ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

ಮಾಜಿ ಶಾಸಕ ಡಾ.ಯತೀಂದ್ರ ಅವರ ಜೊತೆಗಿನ ನನ್ನ ಸಂಭಾಷಣೆ ವರುಣ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸಂಬಂಧಪಟ್ಟಿದ್ದು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಿದ್ದರೂ ಹೆಚ್.ಡಿ.ಕುಮಾರಸ್ವಾಮಿ ಇಂದು ಮತ್ತೊಂದು ಸುಳ್ಳನ್ನು ಸೃಷ್ಟಿಸ ಜನತೆಯ ದಾರಿ ತಪ್ಪಿಸಲು ಹೆಣಗಾಡಿದ್ದಾರೆ. ನಮ್ಮ ಸಂಭಾಷಣೆಯಲ್ಲಿ ಪ್ರಸ್ತಾಪವಾಗಿರುವ ವಿವೇಕಾನಂದ ಅವರು ಮೈಸೂರು ತಾಲೂಕಿನ ಬಿಇಒ ಎನ್ನುವುದು ಸ್ಪಷ್ಟವಾಗಿದ್ದರೂ ಯಾವುದೋ ವರ್ಗಾವಣೆಯ ಪಟ್ಟಿಯಲ್ಲಿನ ವಿವೇಕಾನಂದ ಎಂಬ ಅಧಿಕಾರಿಯ ಹೆಸರು ಹುಡುಕಿ ತನ್ನ ಸುಳ್ಳಿಗೆ ಸಾಕ್ಷಿ ನೀಡುವ ಹತಾಶ ಪ್ರಯತ್ನ ಮಾಡಿದ್ದಾರೆ. ಇದನ್ನು ಮಾನಸಿಕ ಅಸ್ವಸ್ಥತೆ ಎನ್ನದೆ ಬೇರೆ ಏನು ಹೇಳಲು ಸಾಧ್ಯ?

ರಾಜ್ಯದಲ್ಲಿ ಕುಮಾರಸ್ವಾಮಿ ಎಂಬ ಹೆಸರಿನವರು ಸಾವಿರಾರು ಮಂದಿ ಇದ್ದಾರೆ. ಅವರಲ್ಲಿಯೂ ಒಂದಷ್ಟು ಪಕ್ಕಾ ಕ್ರಿಮಿನಲ್ ಗಳೂ ಇದ್ದಾರೆ. ಹೆಸರಿನ ಕಾರಣಕ್ಕಾಗಿ ಅವರೆಲ್ಲರ ಪಾಪಕರ್ಮಗಳ ಹೊರೆಯನ್ನು ಹೆಚ್.ಡಿ.ಕುಮಾರಸ್ವಾಮಿಯವರ ತಲೆ ಮೇಲೆ ಹೊರಿಸಲಿಕ್ಕೆ ಆಗುತ್ತದೆಯೇ, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಶಿಕ್ಷೆಗೆ ಗುರಿಯಾಗಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿಗೆ ಶಿಕ್ಷೆಯಾಗಿದೆ ಎಂದು ನಾವು ಹೇಳಿದ್ದೇವೆಯೇ? ಎಲ್ಲಿದಿಯಪ್ಪಾ ನಿಖಿಲ್ ಎಂದು ಸಾರ್ವಜನಿಕ ಸಭೆಯಲ್ಲಿ ಕುಮಾರಸ್ವಾಮಿ ಕೂಗಿದಾಗ ಅಲ್ಲಿ ಎಷ್ಟು ಮಂದಿ ಆ ಹೆಸರಿನವರಿದ್ದರೋ ಏನೋ? ಓಗೊಟ್ಟಿದ್ದು ಇವರ ಮಗ ಮಾತ್ರ ಅಲ್ಲವೇ? ಉಳಿದವರು ಓಗೊಟ್ಟಿದ್ದರೂ ಅವರನ್ನು ಮಕ್ಕಳು ಎಂದು ಇವರು ಒಪ್ಪಿಕೊಳ್ಳುತ್ತಿದ್ದರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಒಬ್ಬ ಜವಾಬ್ದಾರಿಯುತ ರಾಜಕೀಯ ನಾಯಕನಾಗಿ ಕುಮಾರಸ್ವಾಮಿಯವರು ವಿಶ್ವಾಸಾರ್ಹ ದಾಖಲೆಗಳನ್ನು ಇಟ್ಟುಕೊಂಡು ಮಾತನಾಡಬೇಕೇ ಹೊರತು ತಾವೇ ಸೃಷ್ಟಿಸಿರುವ ಸುಳ್ಳಿನ ಕಂತೆಗಳನ್ನಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೊತೆಗೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವರೆಂದೂ ಈ ರೀತಿಯ ಸಡಿಲ ಮಾತುಗಳನ್ನು ಆಡಿಲ್ಲ. ಕುಮಾರಸ್ವಾಮಿಯವರು ಕನಿಷ್ಠ ಅವರ ಅಣ್ಣ ಹೆಚ್.ಡಿ.ರೇವಣ್ಣ ಅವರಿಂದಾದರೂ ಒಂದಿಷ್ಟು ರಾಜಕೀಯ ನಡವಳಿಕೆಯನ್ನು ಕಲಿಯಬಾರದಾ?

ಜವಾಬ್ದಾರಿಯುತ ರಾಜಕೀಯ ನಾಯಕರಾಗಿ ಸತ್ಯಗಳನ್ನು ಪ್ರಸ್ತುತಪಡಿಸಬೇಕು, ಪಿತೂರಿ ಸಿದ್ಧಾಂತಗಳನ್ನಲ್ಲ. ಕುಮಾರಸ್ವಾಮಿಯವರ ಈ ಸರಣಿ ವಿಫಲ ಹತಾಶ ಪ್ರಯತ್ನಗಳು ಅವರ ಬೇಜವಾಬ್ದಾರಿಯನ್ನು ತೋರಿಸುತ್ತವೆ. ದುಃಖಕರವೆಂದರೆ ಜನರ ಗಮನ ಸೆಳೆಯುವುದಕ್ಕಾಗಿ ಅವರು ಮತ್ತಷ್ಟು ಅಳಲು ಮುಂದುವರೆಸಿದ್ದಾರೆ. ಸುಳ್ಳು ನಿರೂಪಣೆಗಳ ಮೂಲಕ ಸಮಯವನ್ನು ವ್ಯರ್ಥ ಮಾಡುವ ಬದಲು, ತಮ್ಮ ಮೈತ್ರಿ ಪಾಲುದಾರರೊಂದಿಗೆ ಮಾತನಾಡಿ ವಿವಿಧ ವಿಷಯಗಳಲ್ಲಿ ಕರ್ನಾಟಕಕ್ಕೆ ನ್ಯಾಯ ದೊರೆಕಿಸುವ ಪ್ರಯತ್ನ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಡಾ.ಯತೀಂದ್ರ ವಿರುದ್ದ ತಾನು ಮಾಡಿರುವ ಆರೋಪ ಸುಳ್ಳು ಎನ್ನುವುದು ಹೆಚ್.ಡಿ.ಕುಮಾರಸ್ವಾಮಿವಯರಿಗೆ ಖಂಡಿತ ಮನವರಿಕೆ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ತಪ್ಪನ್ನು ಒಪ್ಪಿಕೊಂಡರೆ ಯಾರೂ ಸಣ್ಣವರಾಗುವುದಿಲ್ಲ. ಒಂದು ಸುಳ್ಳನ್ನು ಸಮರ್ಥಿಸಲು ನೂರು ಸುಳ್ಳುಗಳನ್ನು ಹೇಳುವುದರ ಬದಲಿಗೆ ಮಾಡಿದ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳುವುದು ಉತ್ತಮ ನಡೆ. ಆ ಸದ್ಬುದ್ದಿ ಅವರಿಗೆ ಬರಲಿ ಎಂದು ಹಾರೈಸುತ್ತೇನೆ.

ಶ್ರೀಘ್ರದಲ್ಲೇ 1500 ಪಿಎಸ್‍ಐ ಹುದ್ದೆಗಳ ನೇಮಕಾತಿ: ಪರಮೇಶ್ವರ್

ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್‍ಪೇಕ್ಟರ್ ಹುದ್ದೆಗಳಿಗೆ 1500 ಮಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮರು ಪರೀಕ್ಷೆ ಹಾಗೂ ಹೊಸ ಪರೀಕ್ಷೆಗಳನ್ನು ನಡೆಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು 545 ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ನಡೆದಿದ್ದ ಪರೀಕ್ಷೆ ಸಂಬಂಧಿಸಿದ ತಗಾದೆ ನ್ಯಾಯಾಲಯಲ್ಲಿತ್ತು. ಸರ್ಕಾರ ಮರು ಪರೀಕ್ಷೆ ಅವಕಾಶ ನೀಡುವಂತೆ ಸರ್ಕಾರ ವಾದ ಮಂಡಿಸಿತ್ತು. ಹಿಂದಿನ ಸರ್ಕಾರವೂ ಮರು ಪರೀಕ್ಷೆಗೆ ಅಧಿಸೂಚನೆ ಹೊರಡಿಸಿತ್ತು. ಕೆಲ ಅಭ್ಯರ್ಥಿಗಳು ಅದಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಕೊನೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿ, ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸಿ ಎಂದು ಸೂಚನೆ ನೀಡಿದೆ. ಪೊಲೀಸ್ ಇಲಾಖೆಯಿಂದ ಪರೀಕ್ಷೆ ನಡೆಸಬಾರದು ಎಂದು ಹೇಳಿದೆ ಎಂದರು.

ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಸ್ವತಂತ್ರ ಸಂಸ್ಥೆಗಳಿವೆ. ನ್ಯಾಯಾಲಯದ ಆದೇಶ ದೊರೆತ ನಾಲ್ಕೈದು ದಿನಗಳಲ್ಲೇ ಸರ್ಕಾರ ಅಧಿಸೂಚನೆ ಹೊರಡಿಸಿ, ಕರ್ನಾಟಕ ಪರೀಕ್ಷಾ ಪ್ರಾಕಾರದಿಂದ ಪಿಎಸ್‍ಐ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.

ವಿದ್ಯಾರ್ಥಿಗಳ ಭವಿಷ್ಯ ಹಾಗೂ ಇಲಾಖೆಯ ಕಾರ್ಯಧ್ಯಕ್ಷತೆ ದೃಷ್ಟಿಯಿಂದ ಶೀಘ್ರವೇ ಮರು ಪರೀಕ್ಷೆಯಾಗಬೇಕಿದೆ. ವಿಳಂಬ ಮಾಡಲು ಸಾಧ್ಯವಿಲ್ಲ. ಬೇರೆ ಇಲಾಖೆಗಳಂತೆ ನೇಮಕಾತಿಯಾದ ತಕ್ಷಣವೇ ಕೆಲಸಕ್ಕೆ ನಿಯೋಜನೆ ಮಾಡಲು ಪೊಲೀಸ್ ಇಲಾಖೆಯಲ್ಲಿ ಸಾಧ್ಯವಿಲ್ಲ. ಒಂದು ವರ್ಷ ತರಬೇತಿ ನೀಡಬೇಕಿದೆ. ಮೈಸೂರಿನಲ್ಲಿರುವ ನಮ್ಮ ತರಬೇತಿ ಸಂಸ್ಥೆಯ ಸಾಮಥ್ರ್ಯ 300 ರಿಂದ 400 ಮಂದಿಯಷ್ಟೆ ,ಅದನ್ನು ಹೆಚ್ಚಿಸಬೇಕಿದೆ. ನೇಮಕಾತಿಯ ಜೊತೆಗೆ ತರಬೇತಿಯ ಸಾಮಥ್ರ್ಯವನ್ನು ಗಮನದಲ್ಲಿ ಇರಿಸಿಕೊಳ್ಳಬೇಕಿದೆ ಎಂದು ಹೇಳಿದರು.

ನಮ್ಮ ಪೊಲೀಸ್‍ಠಾಣೆಗಳಲ್ಲಿ ಪಿಎಸ್‍ಐಗಳೇ ಇಲ್ಲವಾಗಿ, ಸಾವಿರಾರು ಹುದ್ದೆಗಳು ಖಾಲಿ ಇವೆ. ನಿಯಮ 32ನ್ನು ಜಾರಿ ಮಾಡಿ 600 ಪಿಎಸ್‍ಐಗಳಿಗೆ ಇತ್ತೀಚೆಗೆ ಬಡ್ತಿ ನೀಡಿದ್ದೇವೆ. ಅವರು ಈಗ ಪಿಎಸ್‍ಐಗಳಾಗಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಈಗಾಗಲೇ 400 ಹುದ್ದೆಗಳು ಈಗಾಗಲೇ ಖಾಲಿಯಾಗಿವೆ. ಜೊತೆಯಲ್ಲಿ 600 ಹೆಚ್ಚುವರಿ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಹಾಗೂ ಗೃಹ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ಒಂದು ಸಾವಿರ ಹಾಗೂ ಹಿಂದಿನ 540 ಸೇರಿ 1540 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಬೇಕಿದೆ. ಅಭ್ಯರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇಂದು ಸಭೆ ನಡೆಸಿ ಈ ನಿಟ್ಟಿನಲ್ಲಿ ಚರ್ಚೆ ಮಾಡಲಾಗುವುದು ಎಂದರು.

ಪೊಲೀಸ್ ಇನ್ ಸ್ಪೆಕ್ಟರ್ ವರ್ಗಾವಣೆ ಸ್ವಾಭಾವಿಕ. ಅದಕ್ಕಾಗಿ ಇಲಾಖೆಯಲ್ಲಿ ಮಂಡಳಿ ರಚನೆ ಮಾಡಲಾಗಿದೆ. ಅನೇಕ ಕಾರಣದಿಂದ ವರ್ಗಾವಣೆಗಳಾಗುತ್ತವೆ. ಪೊಲೀಸ್ ಇಲಾಖೆ ಬೇರೆ ಇಲಾಖೆಯಂತಲ್ಲ, ಠಾಣೆಗಳಲ್ಲಿ ಅಧಿಕಾರಿಗಳ ಹುದ್ದೆಗಳನ್ನು ಹೆಚ್ಚು ಸಮಯ ಖಾಲಿ ಇಡಲಾಗಲ್ಲ. ಠಾಣೆಯಲ್ಲಿ ಇನ್ ಸ್ಪೆಕ್ಟರ್ ಇಲ್ಲ ಅಂದರೆ ಮುಂದಿನ ವರ್ಷ ವರ್ಗಾವಣೆ ಸಮಯ ಬರುವವರೆಗೂ ಕಾಯಲು ಆಗಲ್ಲ, ಅದಕ್ಕಾಗಿ ಮಂಡಳಿಯ ಮೂಲಕ ಕಾಲ ಕಾಲಕ್ಕೆ ವರ್ಗಾವಣೆ ಮಾಡುತ್ತಲೇ ಇರುತ್ತೇವೆ. ಕೆಲವೊಮ್ಮೆ ಕಾರ್ಯಧ್ಯಕ್ಷತೆ ಕೊರತೆಯಾದಾಗಲೂ ಬದಲಾವಣೆ ಮಾಡುತ್ತೇವೆ ಎಂದರು.

ಮೈಸೂರಿನ ವಿ.ವಿ.ಪುರಂ ಠಾಣೆಗೆ ವಿವೇಕಾನಂದ ಎಂಬ ಅಧಿಕಾರಿ ವರ್ಗಾವಣೆಯಾಗಿರುವುದು, ಯತೀಂದ್ರ ಅವರ ವಿಡಿಯೋದಲ್ಲಿ ವಿವೇಕಾನಂದ ಹೆಸರು ಹೇಳಿರುವುದು ಕಾಕತಾಳೀಯ ಇರಬಹುದು. ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ನನ್ನ ಮೇಲೆ ಯಾರು ಒತ್ತಡ ಹೇರಿಲ್ಲ. ಯತೀಂದ್ರ ನನ್ನ ಬಳಿ ಯಾವ ಹೆಸರನ್ನು ಹೇಳಿಲ್ಲ, ಪೊಲೀಸ್ ಅಧಿಕಾರಿಗಳ ವರ್ಗಾವಣೆಗೂ ಯತೀಂದ್ರ ಅವರ ವಿಡಿಯೋದಲ್ಲಿನ ಸಂಭಾಷಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟ ಪಡಿಸಿದರು.

ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಡಿಸೆಂಬರ್ 4 ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಸದನದಲ್ಲಿ ಇದರ ಬಗ್ಗೆ ಚರ್ಚೆ ಮಾಡಲಿ. ಹಣ ತೆಗೆದುಕೊಂಡಿರುವ ಬಗ್ಗೆ ದಾಖಲೆ ಇದ್ದರೆ ಪ್ರಸ್ತಾಪ ಮಾಡಲಿ. ನಾವು ಸಮರ್ಥವಾಗಿ ಉತ್ತರ ನೀಡುತ್ತೇವೆ, ಅವರಿಗೆ ಸಮಾಧಾನ ಆಗುವ ರೀತಿಯಲ್ಲೇ ಉತ್ತರ ನೀಡುತ್ತೇವೆ, ನಾವೇನು ಉದ್ವೇಗಕ್ಕೆ ಒಳಗಾಗುವುದಿಲ್ಲ ಎಂದರು ಹೇಳಿದರು.

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಬಿಜೆಪಿಯಿಂದ ವಿರೋಧ ಪಕ್ಷ ನಾಯಕನಾಗಿ ಆಯ್ಕೆಯಾದ ಆರ್.ಅಶೋಕ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಪಕ್ಷ ದೊಡ್ಡ ಜವಾಬ್ದಾರಿ ನೀಡಿದೆ. ಸರ್ಕಾರಕ್ಕೆ ಸಲಹೆ ಕೊಟ್ಟು, ಎಚ್ಚರಿಸುವ ಕೆಲಸ ಮಾಡಲಿ, ವಿರೋಧ ಪಕ್ಷದ ನಾಯಕರಾದ ಮೇಲೆ ಟೀಕೆ ಮಾಡುವುದು, ಸರ್ಕಾರದ ತಪ್ಪು ಹೇಳುವುದು ಸ್ವಾಭಾವಿಕ. ಸತ್ಯಾಸತ್ಯತೆ ಅರಿತು ಮಾತನಾಡಲಿ.

ಸರ್ಕಾರ ಬಿಳಿಸುತ್ತೇನೆ ಎಂದು ಹೇಳುತ್ತಿದ್ದಾರೆ, ಕಾಂಗ್ರೆಸ್‍ಗೆ ಜನ 135 ಶಾಸಕರನ್ನು ಆರಿಸಿಕಳಿಸಿದ್ದಾರೆ. ನಮಗೆ ಅಧಿಕಾರ ಕೊಟ್ಟಿದ್ದಾರೆ, ಸರ್ಕಾರ ಬಿಳಿಸಲು ಇವರ್ಯಾರು. ಬೇರೆ ರೀತಿಯಲ್ಲಿ ಹೇಳಿಕೆ ಕೊಟ್ಟರೆ ಅದಕ್ಕೆ ಅರ್ಥ ಇರಲ್ಲ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್‍ನ ಹಿರಿಯ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿರುವ ಕುರಿತಂತೆ ಮಾತನಾಡಿದ ಅವರು, ಇತರ ಪಕ್ಷಗಳ ನಾಯಕರು ಆಸಕ್ತಿ ತೋರಿಸಿದರೆ ನಾವು ಕರೆಯುತ್ತೇವೆ. ನಮ್ಮ ಪಕ್ಷದತ್ತ ಆಸಕ್ತಿ ತೋರಿಸಿದರೆ ಕರೆಯುವುದರಲ್ಲಿ ತಪ್ಪೇನಿದೆ. ಇಬ್ಬರು ನಾಯಕರ ಭೇಟಿ ಸೌಜನ್ಯದಷ್ಟೆ, ಅಲ್ಲಿ ಏನು ಚರ್ಚೆಯಾಗಿದೆ ಎಂದು ಮಾಹಿತಿ ಇಲ್ಲ. ಸರಿಯಾದ ವಿವರ ಇಲ್ಲದೆ ಪಕ್ಷ ಸೇರ್ಪಡೆಗೆ ಚರ್ಚೆಯಾಗಿದೆ ಎಂದರೆ ಹೇಗೆ ಎಂದರು.

ಬಿಜೆಪಿ ಮಾಜಿ ಶಾಸಕ ವಿ.ಸೋಮಣ್ಣ ಮೊನ್ನೆ ನಮ್ಮ ಮನೆಗೆ ಬಂದಿದ್ದರು, ಅವರ ಮನೆಯಲ್ಲಿ ಕಾರ್ಯಕ್ರಮವೊಂದಿದೆ, ಅದಕ್ಕೆ ನಾನು ಹೋಗುತ್ತೇನೆ. ಅದನ್ನು ಪಕ್ಷಕ್ಕೆ ಕರೆಯಲು ಹೋಗಿದ್ದರು, ಕಳುಹಿಸಲು ಹೋಗಿದ್ದರು ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಅಶೋಕ್ ಭೇಟಿ

ಬೆಂಗಳೂರು,ನ.18- ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಅಶೋಕ್ ಅವರು ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿದರು.

ಆರ್.ಟಿ.ನಗರದ ನಿವಾಸದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬೊಮ್ಮಾಯಿ ಮತ್ತು ಅಶೋಕ್ ಪಕ್ಷದ ಸಂಘಟನೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬೆಳವಣಿಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಆತ್ಮಿಯ ಗೆಳೆಯ ಮಾಜಿ ಸಿಎಂ ಬೊಮ್ಮಾಯಿ ಜೊತೆ ಒಂದು ಗಂಟೆ ಕಾಲ ಪಕ್ಷದ ಸಂಘಟನೆ, ಬೆಳಗಾವಿ ಅವೇಶದಲ್ಲಿ ನಮ್ಮ ನಿಲುವು ಲೊಕಸಭೆ ಚುನಾವಣೆ ಸಿದ್ದತೆ ಕುರಿತು ಚರ್ಚೆ ಮಾಡಿದ್ದೇನೆ. ಇನ್ನರಡು ದಿನದಲ್ಲಿ ಕೋರ್ ಕಮಿಟಿ ರಚನೆ ಮಾಡಿ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ ನಡೆಸುವುದಗಿ ಹೇಳಿದರು.

ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್

ಕಾವೇರಿ ಹೊರಾಟದಲ್ಲಿ ಜನರಿಗೆ ಮಾಡಿದ ಮೊಸ, ಬರಗಾಲದಲ್ಲಿ ಮಂತ್ರಿಗಳು ಬೆಂಗಳೂರಲ್ಲಿ ಠಿಕಾಣಿ ಹೂಡಿರುವುದು. ಡಿಕೆಶಿ ಸಿದ್ದರಾಮಯ್ಯ ಟೀಮ್ ಮಾಡಿಕೊಂಡು ಸಭೆ ಮಾಡುತ್ತಿರುವುದು. ಟ್ರಾನ್ಸ್ ಫರ್ ದಂಧೆಯಲ್ಲಿ ತೊಡಗಿದ್ದು 60% ಪರ್ಸೆಂಟ್ ಸರ್ಕಾರ ಎಂದು ಜನರು ಹೇಳುತ್ತಿದ್ದಾರೆ.
ಶಾಸಕರಿಗೆ ಅನುದಾನ ನೀಡುತ್ತಿಲ್ಲ ಅವರು ಜನರ ಬಳಿ ಹೋಗುತ್ತಿಲ್ಲ. ಫ್ರಿ ಹೆಸರಿನಲ್ಲಿ ಹಣ ನೀಡುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆ ಹಣ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಎಲ್ಲ ಹಣ ಪಂಚರಾಜ್ಯ ಚುನಾವಣೆ ಗೆ ಹೋಗುತ್ತಿದೆ ಎಂದರು.

ಅವರ ಸರ್ಕಾರವನ್ನು ಕೆಡವೊಕೆ ನಾನ್ಯಾರು ಅವರ್ಯಾರು ಮುಖ್ಯವಲ್ಲ. ಹಿಂದೆ ಅವರ ಸರ್ಕಾರ ಹೇಗೆ ಬಿದ್ದು ಹೊಯಿತು ಎಂದು ಅವರಿಗೆ ಗೊತ್ತಿದೆ. ಅವರ ನಡುವಿನ ಕಿತ್ತಾಟದಿಂದಲೇ ಸರ್ಕಾರ ಬಿದ್ದು ಹೋಗುತ್ತದೆ. ನಾವ್ಯಾಕೆ ಬೀಳಿಸೋಣ ಎಂದು ಪ್ರಶ್ನಿಸಿದರು.

ಇಲ್ಲ ಅಂದರೆ ಪರಮೇಶ್ವರ್ ತಮ್ಮ ಮನೆಯಲ್ಲಿ ಯಾಕೆ ಸಭೆ ಮಾಡಿದರು. ಪಕ್ಕದ ಮನೆಯಲ್ಲಿರುವ ಡಿಕೆಶಿ ಅವರನ್ನು ದೂರ ಇಟ್ಟು ಸಭೆ ಮಾಡಿದ್ದೇಕೆ. ಜಮೀರ್ ಹೇಳಿಕೆ ಕುರಿತು ಅವೇಶನದಲ್ಲಿ ಮಾತನಾಡುತ್ತೇವೆ. ಅವರದು ಸಂವಿಧಾನ ವಿರೋಧಿ ನಡೆ. ಅದನ್ನು ಖಂಡಿಸಿದ್ದೇವೆ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಲು ಹೈಕಮಾಂಡ್ ಸೂಚನೆ ನೀಡಿದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಉತ್ತರದಕ್ಷಿಣ ಕರ್ನಾಟಕ ಎಂದಿಲ್ಲ. ನಾವೆಲ್ಲರೂ ಒಟ್ಟಾಗಿ ಹೋಗುತ್ತೇವೆ. ಎಲ್ಲರೂ ಸೇರಿ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲು ಶ್ರಮಿಸುತ್ತೇವೆ ಎಂದು ಹೇಳಿದರು.

ಮೊಹಮ್ಮದ್ ಶಮಿ ಹುಟ್ಟೂರಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ

ಲಕ್ನೋ,ನ.18-ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ತವರೂರು ಅಮ್ರೋಹಾ ಜಿಲ್ಲೆಯ ಸಹಸ್ಪುರ್ ಅಲಿನಗರದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ. ವಿಶ್ವಕಪ್ ಇತಿಹಾಸದಲ್ಲಿ ಟೀಂ ಇಂಡಿಯಾ ವೇಗದ ಬೌಲರ್ ಮೊಹಮ್ಮದ್ ಶಮಿ ಭಾರತದ ಪರ ಅತೀ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದಾರೆ.

ಇದುವರೆಗೂ 2023ರ ವಿಶ್ವಕಪ್‍ನಲ್ಲಿ ಶಮಿ 23 ವಿಕೆಟ್‍ಗಳನ್ನು ಪಡೆದು, ಒಟ್ಟಾರೆ 51 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ. ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಪ್ರತಿ ಪಂದ್ಯದಲ್ಲೂ ಎದುರಾಳಿಗಳ ವಿಕೆಟ್ ಉರುಳಿಸುತ್ತಾ ಭಾರತ ತಂಡ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ.

ಟೀಂ ಇಂಡಿಯಾ ಸಂಕಷ್ಟದಲ್ಲಿ ಸಿಲುಕಿದ ಸಮಯದಲ್ಲಿ ತಂಡಕ್ಕೆ ಬೆನ್ನೆಲುಬಾಗಿ ನಿಲ್ಲುತ್ತಾರೆ. ಇದಕ್ಕೆ ತಾಜಾ ಉದಾಹಣೆ ಎಂದರೆ ಮುಂಬೈ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕಿವೀಸ್ ವಿರುದ್ಧದ ಸೆಮೀಫೈನಲ್‍ನಲ್ಲಿ ಬರೋಬ್ಬರಿ 7 ವಿಕೆಟ್ ಉರುಳಿಸಿದ್ದಾರೆ.

ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ತೋರುತ್ತಿರುವ ಶಮಿಗೆ ಬಂಪರ್ ಗಿಫ್ಟ್ ನೀಡಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆ ನಡೆಸಿದ್ದು, ಶಮಿಯವರ ಸ್ವಗ್ರಾಮದಲ್ಲಿ ಮಿನಿ ಕ್ರೀಡಾಂಗಣ ನಿರ್ಮಾಣ ಮಾಡಲು ತೀರ್ಮಾನ ಕೈಗೊಂಡಿದ್ದಾರೆ.

ಈಗಾಗಲೇ ಇದಕ್ಕಾಗಿ ಆ ಗ್ರಾಮದಲ್ಲಿ ಭೂಮಿಯನ್ನು ಗುರುತಿಸಿದ್ದಾರೆ. ಈ ಸಂಬಂಧ ಡೆವಲಫ್‍ಮೆಂಟ್ ಆಫೀಸರ್ ಒಬ್ಬರನ್ನು ಸಹ ಸರ್ಕಾರ ನೇಮಕ ಮಾಡಿದೆ. ಗ್ರಾಮದಲ್ಲಿರುವ ಜನರ ಸಮಸ್ಯೆಗಳನ್ನು ನಿವಾಸಿರುವ ಕೂಡಲೇ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಆದೇಶ ನೀಡಿದ್ದಾರೆ.

ಅಧಿಕಾರಿಗಳು ಶಮಿ ಅವರ ಗ್ರಾಮದಲ್ಲಿರುವ ಜೋಯಾ ಡೆವಲಪ್‍ಮೆಂಟ್ ಬ್ಲಾಕ್‍ಗೆ ಭೇಟಿ ನೀಡಿದ್ದಾರೆ. ಶಮಿ ಅವರ ಕುಟುಂಬವು ಗ್ರಾಮದಲ್ಲಿಯೇ ನೆಲೆಸಿದೆ. ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಾಣಕ್ಕೆ ಸಂಬಂಧಿಸಿದ ಕಡತವನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಕಳುಹಿಸಲಾಗಿದೆ.

ಇದಕ್ಕೂ ಮುನ್ನ ಡಿ.ಎಂ.ರಾಜೇಶ್ ತ್ಯಾಗಿ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳ ತಂಡ ಸಾಹಸಪುರ ಅಲಿನಗರಕ್ಕೆ ಆಗಮಿಸಿ ಮಿನಿ ಕ್ರೀಡಾಂಗಣ ಮತ್ತು ಓಪನ್ ಜಿಮ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದೆ ಎಂದು ಅಕಾರಿಗಳು ತಿಳಿಸಿದ್ದಾರೆ.

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

ಅಹಮದಾಬಾದ್, ನ.18- ಪ್ರಸಕ್ತ ಸಾಲಿನ ವಿಶ್ವಕಪ್ ಕ್ರಿಕೆಟ್‍ನ ಫೈನಲ್ ಪಂದ್ಯ ನಾಳೆ ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಹಣಾಹಣಿ ಕ್ರೀಡಾ ರಸಿಕರಿಗೆ ರಸದೌತಣ ಉಣಬಡಿಸಲಿದೆ.

ಈ ಬಾರಿ ಫೈನಲ್ ಪಂದ್ಯಕ್ಕೆ ಘಟಾನುಘಟಿಗಳು ಫೈನಲ್ ಪಂದ್ಯಕ್ಕೆ ಸಾಕ್ಷಿ ಯಾಗುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸೂಪರ್ ಸ್ಟಾರ್‍ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್, ಸಚಿನ್, ಧೋನಿ ಸೇರಿದಂತೆ ಅತಿಗಣ್ಯ ವ್ಯಕ್ತಿಗಳು ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.

ಪಂದ್ಯ ವೀಕ್ಷಣೆಗೆ ಆಸ್ಟ್ರೇಲಿಯಾ ಪ್ರಧಾನಿಗಳಿಗೂ ಮೋದಿ ಆಹ್ವಾನ ನೀಡಿದ್ದು ಅವರು ಪಂದ್ಯ ವೀಕ್ಷಣೆಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರ ಫಾರ್ಮ್ ನೋಡಿದಾಗ ನಿಶ್ಚಿತವಾಗಿ ಭಾರತ ಈ ಫೈನಲ್ ಪಂದ್ಯ ಗೆಲ್ಲುವ ನೆಚ್ಚಿನ ತಂಡ ಎನಿಸಿಕೊಂಡಿದೆ.

ಆದರೆ ಆಸ್ಟ್ರೇಲಿಯಾ ತಡ ಈಗಾಗಲೇ ಐದು ಬಾರಿ ವಿಶ್ವಕಪ್ ಟ್ರೋಫಿನ್ನು ಎತ್ತಿಹಿಡಿದಿರುವ ತಂಡವಾಗಿದ್ದು ಯಾವ ಕಾರಣಕ್ಕೂ ಆಸಿಸ್ ಪಡೆಯನ್ನು ಹಗುರವಾಗಿ ಪಡಿಗಣಿಸುವಂತಿಲ್ಲ ಎನ್ನುವುದು ಅತ್ಯಂತ ಸ್ಪಷ್ಟ.
ಇನ್ನು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳ ಮಧ್ಯೆ ಕಠಿಣ ಪೈಪೋಟಿ ನಡೆಯುವುದು ನಿಶ್ಚಿತ. ಈಗಾಗಲೇ ಲೀಗ್ ಹಂತದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದಾಗ ಭಾರತ ತಂಡ ಆಸ್ಟ್ರೇಲಿಯಾ ತಂಡವನ್ನು ಸುಲಭವಾಗಿ ಮಣಿಸಿತ್ತು.

ರಾಜ್ಯಪಾಲರು ತಿರಸ್ಕರಿಸಿದ ಮಸೂದೆ ಮರು ಮಂಡನೆ ಮಾಡಿದ ಸ್ಟಾಲಿನ್

ಹಾಗಾಗಿ ಭಾರತ ತಂಡದ ಆಟಗಾರರ ಆತ್ಮವಿಶ್ವಾಸ ಹೆಚ್ಚಿರಲಿದೆ. ಆದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಆಸ್ಟ್ರೇಲಿಯಾದ ಈ ನಾಲ್ವರು ಆಟಗಾರರು ಸವಾಲಾಗಲಿದ್ದಾರೆ. ಈ ನಾಲ್ಕು ಆಟಗಾರರನ್ನು ಭಾರತಕ್ಕೆ ಕಟ್ಟಿ ಹಾಕಲು ಸಾಧ್ಯವಾದರೆ ಟೀಮ್ ಇಂಡಿಯಾ ಗೆಲುವು ನಿಶ್ಚಿತ. ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್, ಸ್ಮಿತ್, ಗ್ಲೆನ್ ಮ್ಯಾಕ್ಸ್‍ವೆಲ್ ಹಾಗೂ ಆಡಂ ಜಂಪ ಅವರನ್ನು ಕಟ್ಟಿ ಹಾಕುವಲ್ಲಿ ಭಾರತೀಯ ಬೌಲರ್‍ಗಳು ಯಶಸ್ವಿಯಾದರೆ ಭಾರತ ಮೂರನೇ ಬಾರಿ ವಿಶ್ವಕಪ್ ಎತ್ತಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಐದು ಬಾರಿಯ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯ ಮೊದಲ ಎರಡು ಪಂದ್ಯಗಳನ್ನು ಸೋಲುವ ಮೂಲಕ ಸೇಮಿಫೈನಲ್ ಪ್ರವೇಶಿಸುವುದೇ ಕಷ್ಟ ಸಾಧ್ಯ ಎನ್ನುವಂತಿದ್ದ ಪರಿಸ್ಥಿತಿಯಲ್ಲಿ ಆ ತಂಡ ಪುಟಿದೆದ್ದು ಬಂದು ಫೈನಲ್ ತಲುಪಿರುವುದು ಸಾಮಾನ್ಯದ ವಿಷಯವೇನಲ್ಲ.

ಆದರೂ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಎಂತಹ ಸಂದರ್ಭದಲ್ಲೂ ಮಿಂಚಬಲ್ಲ ಸಾಮಥ್ರ್ಯ ಹೊಂದಿರುವುದರಿಂದ ಎರಡು ತಂಡಗಳ ನಡುವೆ ಸಮಬಲದ ಹೋರಾಟ ನಿರೀಕ್ಷಿಸಲಾಗಿದೆ.

ರೋಹಿತ್ ಶರ್ಮ, ಶುಭಮನ್‍ಗಿಲ್, ಕೋಹ್ಲಿ, ರಾಹುಲ್, ಶ್ರೇಯಸ್ ಅಯ್ಯರ್ ಬ್ಯಾಟಿಂಗ್‍ನಲ್ಲಿ ಮಿಂಚು ಹರಿಸುತ್ತಿದ್ದರೆ, ಬೌಲಿಂಗ್ ವಿಭಾಗದಲ್ಲಿ ಶಮಿ, ಬೂಮ್ರಾ, ಕುಲದಿಪ್, ರವೀಂದ್ರ ಜಡೆಜಾ ಚಮತ್ಕಾರ ಮಾಡುತ್ತಿರುವುದರಿಂದ ಈ ಬಾರಿ ವಿಶ್ವಕಪ್ ನಮ್ಮದೇ ಎಂಬ ವಿಶ್ವಾಸ ಮೂಡಿಸಿದೆ.

ಕಾಂಗ್ರೆಸ್ 60% ಕಮಿಷನ್ ಸರ್ಕಾರ: ಅಶೋಕ್

ಬೆಂಗಳೂರು,ನ.18- ವರ್ಗಾವಣೆ ದಂಧೆ ಈಗಲೂ ಎಗ್ಗಿಲ್ಲದೆ ನಡೆಯುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು 40% ಕಮಿಷನ್ ಸರ್ಕಾರ ಎಂದು ಇದೇ ಕಾಂಗ್ರೆಸ್‍ನಾಯಕರು ಆರೋಪಿಸಿದ್ದರು. ಅಂದು ಯಾವುದೇ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಿರಲಿಲ್ಲ. ಈಗ ಇವರ ವರ್ಗಾವಣೆ ದಂಧೆಗೆ ದಾಖಲೆಗಳೇ ಬಹಿರಂಗಗೊಂಡಿವೆ. ನನ್ನ ಪ್ರಕಾರ ಇದು60% ಕಮಿಷನ್ ಸರ್ಕಾರ ಎಂದು ಆಪಾದಿಸಿದರು.

ಪಕ್ಷದೊಳಗೆ ಏನೇ ಅಸಮಾಧಾನ ಇದ್ದರೂ ಅಸಮಾಧಾನವಿದ್ದರೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮರ್ಥ ವಿರೋಧ ಪಕ್ಷವಾಗಿ ಹೊರಹೊಮ್ಮಲಿದ್ದೇವೆ ಎಂದರು. ಒಂದು ರಾಜಕೀಯ ಪಕ್ಷವೆಂದ ಮೇಲೆ ಸಣ್ಣಪುಟ್ಟ ವ್ಯತ್ಯಾಸಗಳು ಇದ್ದೇ ಇರುತ್ತವೆ. ಒಬ್ಬರಿಗೆ ಒಂದು ಸ್ಥಾನ ಸಿಕ್ಕಾಗ ಕೈ ತಪ್ಪಿದವರು ಅಸಮಾಧಾನಗೊಳ್ಳುವುದು ಸಹಜ. ಆದರೆ ನಮ್ಮ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಇರಲಿದ್ದಾರೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ

ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಯಾರು ಬೇಸರಪಟ್ಟುಕೊಂಡಿದ್ದಾರೋ ಅವರ ಜೊತೆ ನಾನೇ ಖುದ್ದು ಮಾತನಾಡುತ್ತೇನೆ. ಯಾರೂ ಕೂಡ ಪಕ್ಷದ ತೀರ್ಮಾನವನ್ನು ವಿರೋಧಿಸಬಾರದು. ಕೆಲವು ಸಂದರ್ಭಗಳಲ್ಲಿ ನಮ್ಮ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷದ ಹಿತಾಸಕ್ತಿ ಮುಖ್ಯ ಎಂದು ತಿಳಿಸಿದರು.

ಬಿಜೆಪಿ ಎಲ್ಲ ಸಂದರ್ಭಗಳಲ್ಲೂ ಸರ್ಕಾರಕ್ಕೆ ಅಗತ್ಯವಾದ ಸಲಹೆಸೂಚನೆಗಳನ್ನು ಕೊಟ್ಟು ಸಹಕಾರವನ್ನೂ ನೀಡಲಿದ್ದೇವೆ. ಸದನದ ಒಳಗೆ, ಹೊರಗೆ ಒಂದು ರಚನಾತ್ಮಕ ರಾಜಕೀಯ ಪಕ್ಷವಾಗಿ ನಾವು ಕೆಲಸ ಮಾಡಲಿದ್ದೇವೆ. ಅದನ್ನು ತಪ್ಪು ಎಂದು ಹೇಳಲು ಹಿಂದೆಮುಂದೆ ನೋಡುವುದಿಲ್ಲ. ಸರ್ಕಾರದ ಕಿವಿ ಹಿಂಡುವುದನ್ನು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ವಿರೋಧ ಪಕ್ಷವಾಗಿ ನಾವು ಎಲ್ಲವನ್ನು ವಿರೋಧ ಮಾಡುವುದೇ ನಮ್ಮ ಕೆಲಸವಲ್ಲ. ನಾಡಿನ ಪ್ರಚಲಿತ ಸಮಸ್ಯೆಗಳ ಬಗ್ಗೆ ಜನರ ದನಿಯಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ತಪ್ಪು ಮಾಡಿದಾಗ ಕಿವಿ ಹಿಂಡುತ್ತೇವೆ. ಅದಕ್ಕೂ ಬಗ್ಗದಿದ್ದಾಗ ಸರ್ಕಾರವನ್ನೇ ಕಿತ್ತೆಸೆಯಲು ಹಿಂದೆಮುಂದೆ ನೋಡುವುದಿಲ್ಲ ಎಂದು ಎಚ್ಚರಿಸಿದರು.

ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಎಂದೂ ಕೂಡ ಯಾವುದೇ ಹುದ್ದೆಗೆ ಲಾಬಿ ಮಾಡಿದವನಲ್ಲ. ವರಿಷ್ಠರು ನನ್ನ ಮೇಲೆ ಯಾವ ವಿಶ್ವಾಸ ಇಟ್ಟುಕೊಂಡು ಉನ್ನತ ಸ್ಥಾನ ನೀಡಿದ್ದಾರೋ ಅವರ ಗೌರವಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ.

ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು

ಬೆಳಗಾವಿ ಅವೇಶನದಿಂದಲೇ ಸರ್ಕಾರದ ವಿರುದ್ಧ ನಮ್ಮ ಹೋರಾಟ ಆರಂಭವಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲುವುದೇ ನಮ್ಮ ಮುಂದಿರುವ ಸವಾಲು. ಅದನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂಬ ವಿಶ್ವಾಸವಿದೆ. ಈ ಬಾರಿ ಕಾಂಗ್ರೆಸ್ ಅಕಾರದಲ್ಲಿದ್ದರೂ ಹೆಚ್ಚಿನ ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಅಶೋಕ್ ವ್ಯಕ್ತಪಡಿಸಿದರು.

ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು, ನ.18- ರಾಜ್ಯ ಸರ್ಕಾರದ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ. ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಎಂದು ಆರೋಪಸಿದ್ದಾರೆ.

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ವ್ಯಂಗ್ಯವಾಡಿದ್ದಾರೆ.
ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್‍ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಬೇಕು. ಅದು ನಿಮ್ಮ ದುರ್ವಿಧಿ. ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ, 71 ಪೊಲೀಸ್ ಇನಸ್ಪೆಕ್ಟರ್‍ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲೆ ನಿಮ್ಮ ಸುಲಿಗೆಪುತ್ರನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಎಂದು ಅವರು ಆರೋಪಿಸಿದ್ದಾರೆ.

ಈ ಪಾಪದ ಕಾಸಿನ ದುರ್ನಾತ ಅಸಹ್ಯಕರ. ವರ್ಗಾವರ್ಗಿ ಬಜೆಟ್‍ನಲ್ಲಿ ನಿಮ್ಮ ಪಟಾಲಂದು ಶಿಖರ ಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಂ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಂ ನಿರ್ದೇಶಕ ಎಂದು ಟೀಕಿಸಿದ್ದಾರೆ.

ಸತ್ಯ ಹೇಳಿದರೆ ಗುಂಪು ಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಪಾಲರು ತಿರಸ್ಕರಿಸಿದ ಮಸೂದೆ ಮರು ಮಂಡನೆ ಮಾಡಿದ ಸ್ಟಾಲಿನ್

ಚೆನ್ನೈ, ನ.18 (ಪಿಟಿಐ) – ರಾಜ್ಯಪಾಲ ಆರ್ ಎನ್ ರವಿ ಅವರು ಹಿಂತಿರುಗಿಸಿದ್ದ 10 ಮಸೂದೆಗಳನ್ನು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಇಂದು ಮತ್ತೆ ವಿಧಾನಸಭೆಯಲ್ಲಿ ಮರುಪರಿಶೀಲನೆಗೆ ನಿರ್ಣಯವನ್ನು ಮಂಡಿಸಿದ್ದಾರೆ.

ನಿರ್ಣಯವನ್ನು ಮಂಡಿಸಿದ ಸ್ಟಾಲಿನ್, ಯಾವುದೇ ಕಾರಣಗಳನ್ನು ನೀಡದೆ, ರವಿ ಅವರು ಬಿಲ್‍ಗಳಿಗೆ ನಾನು ಒಪ್ಪಿಗೆಯನ್ನು ತಡೆಹಿಡಿಯುತ್ತೇನೆ ಎಂದು ನಮೂದಿಸಿ ಹಿಂದಿರುಗಿಸಿದ್ದಾರೆ ಎಂದು ಆರೋಪಿಸಿದ್ದಾರೆ.
2020 ಮತ್ತು 2023ರಲ್ಲಿ ತಲಾ 2 ಮಸೂದೆಗಳನ್ನು ಸದನವು ಅಂಗೀಕರಿಸಿದ್ದರೆ, ಇತರ ಆರು ಮಸೂದೆಗಳನ್ನು ಕಳೆದ ವರ್ಷ ಅಂಗೀಕರಿಸಲಾಗಿತ್ತು.

ಭಾರತದ ಸಂವಿಧಾನದ 200 ನೇ ವಿಧಿಯ ನಿಬಂಧನೆಯ ಅಡಿಯಲ್ಲಿ, ಮೇಲಿನ ಮಸೂದೆಗಳನ್ನು ಮತ್ತೊಮ್ಮೆ ಅಂಗೀಕರಿಸಿದರೆ ಮತ್ತು ಒಪ್ಪಿಗೆಗಾಗಿ ರಾಜ್ಯಪಾಲರಿಗೆ ಸಲ್ಲಿಸಿದರೆ, ಅವರು ಅದರಿಂದ ಒಪ್ಪಿಗೆಯನ್ನು ತಡೆಹಿಡಿಯುವುದಿಲ್ಲ ಎಂದು ಸದನವು ಗಮನಿಸುತ್ತದೆ ಎಂದು ಅವರು ಹೇಳಿದರು.

ಹಿಮಾಚಲದಲ್ಲಿ ಪತ್ತೆಯಾಯ್ತು ರಷ್ಯಾ ದಂಪತಿ ಬೆತ್ತಲೆ ಶವಗಳು

ತಮಿಳುನಾಡು ವಿಧಾನಸಭೆಯ ನಿಯಮ 143 ರ ಅಡಿಯಲ್ಲಿ ಈ ಕೆಳಗಿನ ಮಸೂದೆಗಳನ್ನು ಈ ಸಭೆಯು ಮರುಪರಿಶೀಲಿಸಬಹುದು ಎಂದು ಈ ಸದನವು ನಿರ್ಧರಿಸುತ್ತದೆ ಎಂದು ಸ್ಟಾಲಿನ್ ಮಂಡಿಸಿದ ನಿರ್ಣಯವು ತಿಳಿಸಿದೆ. ರವಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ, ಸರ್ಕಾರದ ಉಪಕ್ರಮಗಳನ್ನು ತಡೆಯಲು ರಾಜ್ಯಪಾಲರು ಉತ್ಸುಕರಾಗಿದ್ದಾರೆ ಎಂದು ಆರೋಪಿಸಿದರು.

ಅವರು ತಮ್ಮ ವೈಯಕ್ತಿಕ ಆಸೆ ಮತ್ತು ಅಭಿಮಾನದ ಕಾರಣದಿಂದ ಮಸೂದೆಗಳನ್ನು ಹಿಂದಿರುಗಿಸಿದ್ದಾರೆ…ಸಮ್ಮತಿ ನೀಡದಿರುವುದು ಪ್ರಜಾಪ್ರಭುತ್ವ ವಿರೋಧಿ ಮತ್ತು ಜನವಿರೋಯಾಗಿದೆ ಎಂದು ಸಿಎಂ ಹೇಳಿದರು.
ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಸುಪ್ರೀಂ ಕೋರ್ಟ್‍ನಿಂದ ಕೊಲಿಜಿಯಂ ಶಿಫಾರಸು ವಿಳಂಬ ವಿಚಾರಣೆ

ನವದೆಹಲಿ, ನ.18 (ಪಿಟಿಐ) – ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೊಲಿಜಿಯಂ ಶಿಫಾರಸು ಮಾಡಿರುವ ಹೆಸರುಗಳನ್ನು ಇತ್ಯರ್ಥಗೊಳಿಸುವಲ್ಲಿ ಕೇಂದ್ರದ ಕಡೆಯಿಂದ ವಿಳಂಬವಾಗಿದೆ ಎಂಬ ಆರೋಪ ಸೇರಿದಂತೆ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ, ಸುಧಾಂಶು ಧುಲಿಯಾ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು ಸೋಮವಾರ ವಿಚಾರಣೆ ನಡೆಸಲಿದೆ ನ. 7 ರಂದು ಅರ್ಜಿಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದ ನ್ಯಾಯಮೂರ್ತಿಗಳನ್ನು ಕೇಂದ್ರವು ಆಯ್ದು ಆಯ್ಕೆ ಮತ್ತು ನೇಮಕ ಮಾಡುತ್ತಿರುವುದು ತೊಂದರೆ ಎಂದು ಹೇಳಿದೆ.

ಭಾರತದಿಂದ 20 ಶತಕೋಟಿ ಮೌಲ್ಯದ ಸರಕು ರಫ್ತು ಗುರಿ: ಅಮೆಜಾನ್

ಒಂದು ಹೈಕೋರ್ಟ್‍ನಿಂದ ಇನ್ನೊಂದು ಹೈಕೋರ್ಟ್‍ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾದ ಹೆಸರುಗಳ ಬಾಕಿ ಇರುವ ಬಗ್ಗೆಯೂ ಅದು ಕಳವಳ ವ್ಯಕ್ತಪಡಿಸಿದೆ.

ಒಮ್ಮೆ ಈ ಜನರು ಈಗಾಗಲೇ ನ್ಯಾಯಾೀಶರಾಗಿ ನೇಮಕಗೊಂಡರೆ, ಅವರು ನ್ಯಾಯಾಂಗ ಕರ್ತವ್ಯಗಳನ್ನು ನಿರ್ವಹಿಸುವ ವಿಷಯವು ನಿಜವಾಗಿಯೂ ಸರ್ಕಾರಕ್ಕೆ ಕಾಳಜಿಯ ವಿಷಯವಾಗಬಾರದು ಮತ್ತು ಈ ನ್ಯಾಯಾಲಯ ಅಥವಾ ಕೊಲಿಜಿಯಂ ಸಂಭವಿಸುವ ಪರಿಸ್ಥಿತಿ ಬರುವುದಿಲ್ಲ ಎಂದು ನಾವು ಅವರಿಗೆ ಮತ್ತೊಮ್ಮೆ ಒತ್ತಿಹೇಳಿದ್ದೇವೆ. ರುಚಿಕರವಲ್ಲದ ನಿರ್ಧಾರವನ್ನು ತೆಗೆದುಕೊಳ್ಳಬೇಕು, ಎಂದು ಅದು ಹೇಳಿದೆ.

ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಗವರ್ನರ್‌ಗೆ ದೂರು

ನವದೆಹಲಿ,ನ.18- ತಮ್ಮ ಮಗ ಪಾಲುದಾರರಾಗಿರುವ ಕಂಪನಿ ಮತ್ತು ಐಎಲ್‍ಬಿಎಸ್ ನಡುವೆ ಲಾಭದಾಯಕ ಸಹಯೋಗವನ್ನು ಸಕ್ರಿಯಗೊಳಿಸಲು ಮುಖ್ಯ ಕಾರ್ಯದರ್ಶಿ ನರೇಶ್ ಕುಮಾರ್ ತಮ್ಮ ಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ವಿಜಿಲೆನ್ಸ್ ಸಚಿವ ಅತಿಶಿ ನೀಡಿರು ವರದಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೆಫ್ಟಿನೆಂಟ್ ಗವರ್ನರ್‍ಗೆ ಕಳುಹಿಸಿದ್ದಾರೆ.

ಕಂಪನಿ ಮತ್ತು ಐಎಲ್‍ಬಿಎಸ್ ನಡುವಿನ ಯಾವುದೇ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಅವರ ಮಗ ಸಹಿ ಹಾಕಿಲ್ಲ ಎಂದು ಮುಖ್ಯ ಕಾರ್ಯದರ್ಶಿಯ ಆಪ್ತ ಮೂಲಗಳು ಹೇಳಿಕೊಂಡಿವೆ. ಅವರು ಷೇರುದಾರ ಅಥವಾ ನಿರ್ದೇಶಕ ಅಥವಾ ಪಾಲುದಾರ ಅಥವಾ ಉದ್ಯೋಗಿಯಾಗಿ ಪ್ರಶ್ನೆಯಲ್ಲಿರುವ ಕಂಪನಿಯೊಂದಿಗೆ ಸಂಪರ್ಕ ಹೊಂದಿಲ್ಲ ಎಂದು ಅವರು ಹೇಳಿದ್ದಾರೆ.

ಇನ್‍ಸ್ಟಿಟ್ಯೂಟ್ ಆಫ್ ಲಿವರ್ ಅಂಡ್ ಪಿಲಿಯರಿ ಸೈನ್ಸಸ್ (ಐಎಲ್‍ಬಿಎಸ) ಗುರುವಾರ ಹೇಳಿಕೆಯಲ್ಲಿ ಸಂಪೂರ್ಣವಾಗಿ ಆಧಾರರಹಿತ ಮತ್ತು ಅರ್ಹತೆಯಿಲ್ಲದ ಆರೋಪಗಳನ್ನು ನಿರಾಕರಿಸಿದೆ.
ಐಎಲ್‍ಬಿಎಸ್ ಯಾವುದೇ ಖರೀದಿ ಆದೇಶವನ್ನು ನೀಡಿಲ್ಲ ಅಥವಾ ಯಾವುದೇ ಅಲ್ ಸಾಫ್ಟ್‍ವೇರ್ ಡೆವಲಪರ್ ಅಥವಾ ಕಂಪನಿಗೆ ಯಾವುದೇ ಪಾವತಿ ಮಾಡಿಲ್ಲ ಎಂದು ಖಚಿತಪಡಿಸುತ್ತದೆ ಎಂದು ಐಎಲ್‍ಬಿಎಸ್ ಹೇಳಿಕೆ ತಿಳಿಸಿದೆ.

ಜನವರಿ 24, 2023 ರಂದು ಐಎಲ್‍ಬಿಎಸ್ ಮತ್ತು ಮುಖ್ಯ ಕಾರ್ಯದರ್ಶಿಯವರ ಮಗನ ಕಂಪನಿಯ ನಡುವೆ ಎಂಒಯುಗೆ ಸಹಿ ಹಾಕಲಾಗಿದೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ, ಇದು ಅಭಿವೃದ್ಧಿ ಹೊಂದಿದ ಯಾವುದೇ ಬೌದ್ಧಿಕ ಆಸ್ತಿಗೆ ಜಂಟಿ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಒದಗಿಸುವ ಮೂಲಕ ಕಂಪನಿಗೆ ಲಾಭದಾಯಕವಾಗಲು ದೊಡ್ಡ ಅವಕಾಶವನ್ನು ಒದಗಿಸಿದೆ. ಯೋಜನೆಯ ಮೂಲಕ ಮತ್ತು ಯಾವುದೇ ಭವಿಷ್ಯದ ವಾಣಿಜ್ಯೀಕರಣಕ್ಕಾಗಿ ಎರಡೂ ಪಕ್ಷಗಳಿಂದ ಲಾಭದ ಶೇಕಡಾ 50 ರಷ್ಟು ಪಾಲು ಇರುತ್ತದೆ.

ರಾಹುಲ್ ವಿರುದ್ಧ ಮಾನನಷ್ಟ ದಾಖಲಿಸಿದ್ದ ಪೂರ್ಣೇಶ್ ಮೋದಿಗೆ ಖುಲಾಯಿಸಿದ ಲಕ್

ನರೇಶ್ ಕುಮಾರ್ ಅವರು ಅಖಿಲ ಭಾರತ ಸೇವೆಗಳ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಮತ್ತು ಸಾರ್ವಜನಿಕ ಖಜಾನೆಗೆ ನಷ್ಟವನ್ನುಂಟುಮಾಡುವ ಮೂಲಕ ತಮ್ಮ ಮಗನ ಕಂಪನಿಗೆ ಲಾಭದಾಯಕ ಸಹಯೋಗವನ್ನು ಸಕ್ರಿಯಗೊಳಿಸಲು ತಮ್ಮ ಸ್ಥಾನವನ್ನು ಬಳಸಿಕೊಂಡಿದ್ದಾರೆ ಎಂದು ಪ್ರಾಥಮಿಕವಾಗಿ ತೋರುತ್ತಿದೆ ಎಂದು ವರದಿ ಆರೋಪಿಸಿದ್ದು, ಅವರನ್ನು ಅಮಾನತುಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿಕೊಳ್ಳಲಾಗಿದೆ.