Friday, November 7, 2025
Home Blog Page 1810

ಸೈಬರ್ ಪ್ರಕರಣ ಭೇದಿಸಲು 4 ವಿಶೇಷ ತಂಡ ರಚನೆ

ಬೆಂಗಳೂರು, ನ.17- ನಗರದಲ್ಲಿ ಹೆಚ್ಚುತ್ತಿರುವ ಸೈಬರ್ ಪ್ರಕರಣಗಳನ್ನು ಭೇದಿಸಲು ಡಿಸಿಪಿ ಮಟ್ಟದ ನಾಲ್ಕು ವಿಶೇಷ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚಾಗುತ್ತಿರುವ ಸೈಬರ್ ಪ್ರಕರಣಗಳನ್ನು ವ್ಯವಸ್ಥಿತವಾಗಿ ಭೇದಿಸಲು ನಗರದ ಎಲ್ಲಾ ಠಾಣೆಗಳಲ್ಲಿ ಸಮನ್ವಯ ಹಾಗೂ ಕೇಂದ್ರಸರ್ಕಾರ ಮತ್ತು ಬ್ಯಾಂಕ್‍ನ ನೋಡಲ್ ಸಿಬ್ಬಂದಿಯೊಂದಿಗೆ ಸಂಪರ್ಕ ಸಾಧಿಸಲು ಡಿಸಿಪಿ ಮಟ್ಟದ ಅಧಿಕಾರಿಗಳ ನಾಲ್ಕು ತಂಡವನ್ನು ರಚಿಸಲಾಗಿದೆ.

ನಗರದಲ್ಲಿ ಹೆಚ್ಚು ಸೈಬರ್ ವಂಚನೆ ದೂರುಗಳು ಆಧಾರ್ ಎನೇಬಲ್ ಪೇಮೆಂಟ್ (ಬೆರಳಚ್ಚು) ನಿಂದ ಆಗುತ್ತಿದೆ. ಇವರಿಗೂ 116 ಪ್ರಕರಣಗಳು ದಾಖಲಾಗಿದ್ದು, ಈ ವಂಚನೆಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ವಿಚಾರಣೆ ನಡೆಸಲು ಈಶಾನ್ಯ ವಿಭಾಗದ ಡಿಸಿಪಿ ಲಕ್ಷ್ಮಿ ಪ್ರಸಾದ್ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆನ್‍ಲೈನ್ ಜಾಬ್‍ಗೆ ಸಂಬಂಧಿಸಿದಂತೆ 4000 ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಇವುಗಳ ಸಮಗ್ರ ತನಿಖೆಯ ಜವಾಬ್ದಾರಿಯನ್ನು ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರಿಗೆ ನೀಡಲಾಗಿದೆ.

ಡಿಸಿಎಂ ಭೇಟಿ ರಾಜಕೀಯ ಬಣ್ಣ ಬೇಡ: ಜಿ.ಟಿ.ದೇವೇಗೌಡ

ಮತ್ತೊಂದು ರೀತಿಯ ಸೈಬರ್ ವಂಚನೆ ಕೊರಿಯರ್ ಮೂಲಕ ನಡೆಯುತ್ತಿದ್ದು, ಜನರಿಗೆ ಕೊರಿಯರ್ ಬಂದಿದೆ ಎಂದು ಕರೆ ಮಾಡಿ ಹಣ ಕಟ್ಟುವಂತೆ ಕೇಳಿ ವಂಚನೆ ಮಾಡಲಾಗುತ್ತದೆ. ಇಂತಹ ಪ್ರಕರಣಗಳನ್ನು ಭೇದಿಸಲು ಪೂರ್ವ ವಿಭಾಗದ ಸಂಚಾರಿ ಪೊಲೀಸ್ ಡಿಸಿಪಿ ಕುಲದೀಪ್ ಜೈನ ರವರು ನೀಡಲಾಗಿದೆ. ಇತೀಚಿಗೆ ವಾಟ್ಸಾಪ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಕಾಮ ಪ್ರಚೋದಿತ ವಂಚನೆ ಜಾಲ ಬೆಳಿದಿದ್ದು, ಇಂತಹ ಪ್ರಕರಣಗಳನ್ನೂ ಭೇದಿಸಲು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡವತ್ ಅವರನ್ನು ನೇಮಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಸೈಬರ್ ಪ್ರಕರಣಗಲ್ಲಿ ಒಂದೇ ಆರೋಪಿಯಿಂದ ಬೇರೆ ಬೇರೆ ಕಡೆ ವಂಚನೆ ಆಗಿರುತ್ತದೆ ಹಾಗೂ ಒಂದೇ ಸ್ಥಳ ಅಥವಾ ತಂಡ ಭಾಗಿಯಾಗಿರುತ್ತಾರೆ. ಇಂತಹ ಪ್ರಕರಣಗಳನ್ನು ಭೇದಿಸಲು ಎಲ್ಲಾ ಪೊಲೀಸ್ ಠಾಣೆಗಲ್ಲಿ ದಾಖಲಾಗುವ ಸೈಬರ್ ಪ್ರಕರಣ ವರದಿಯನ್ನು ಪಡೆದು ಸೂಕ್ತ ರೀತಿಯಲ್ಲಿ ತನಿಖೆ ಮಾಡಲು ಸಹಾಯವಾಗುತ್ತದೆ ಎಂದು ಆಯುಕ್ತರು ಹೇಳಿದರು.

ಬೇನಾಮಿ ಬ್ಯಾಂಕ್ ಖಾತೆ ತೆರೆದು ಸೈಬರ್ ವಂಚನೆಯಲ್ಲಿ ಬಳಸಿರುವ ತಂಡವನ್ನು ಬಂಧಿಸಿದ್ದು, ಇವರು ಹೋಟಲ್, ಪೆಟ್ರೋಲ್ ಬಂಕ್, ಬ್ಯಾಂಕ್‍ನಲ್ಲಿ ಕೆಲಸ ಮಾಡುವ ಅಮಾಯಕರಿಗೆ ಐದು – ಹತ್ತು ಸಾವಿರದ ಆಮಿಷವೊಡ್ಡಿ ಆಧಾರ್ ಸಂಖ್ಯೆ, ಪ್ಯಾನ್ ಕಾರ್ಡ್, ಬ್ಯಾಂಕ್ ಕೆವೈಸಿ ಪಡೆದು ವಂಚನೆ ಮಾಡುವಾಗ ಈ ಖಾತೆಗಳನ್ನು ಬಳಸುತ್ತಿದ್ದರು ಎಂದು ವಿಚಾರಣೆ ವೇಳೆ ತಿಳಿದು ಬಂದಿದೆ.

ಒಬ್ಬ ಆರೋಪಿಯು ದುಬೈಗೆ ಹೋಗಿ ಅಲ್ಲಿ ತರಬೇತಿ ಪಡೆದುಬಂದಿದ್ದಾಗಿ ಹೇಳಿದ್ದಾನೆ. ವಂಚಿಸಿದ ಹಣವನ್ನು ಅಂತಾರಾಜ್ಯ ಮತ್ತು ಬೇರೆ ರಾಷ್ಟ್ರಗಳಿಗೂ ವರ್ಗಾವಣೆ ಮಾಡುತ್ತಿದ್ದರು. ದುಬೈನಲ್ಲಿ ಇಂತಹ ವಂಚನೆ ಮಾಡುವ ಬಗ್ಗೆ ತರಬೇತಿ ನೀಡುವ ಕಾರ್ಯಾಗಾರ ಮಾಡುತ್ತಾರೆ ಎಂದು ಹೇಳಿದ್ದಾನೆ. ಈ ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದರು.

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಎಂಪಿ ಪುತ್ರನ ವಿರುದ್ಧ ದೂರು ದಾಖಲು

ಬೆಂಗಳೂರು, ನ.17- ಪ್ರೀತಿಸುವ ನಾಟಕವಾಡಿ, ಮದುವೆಯಾಗುವುದಾಗಿ ನಂಬಿಸಿ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದಿ ಇದೀಗ ಮೋಸ ಮಾಡಿದ್ದಾನೆಂದು ಸಂಸದರೊಬ್ಬರ ಪುತ್ರನ ವಿರುದ್ಧ ನಗರದ ಯುವತಿಯೊಬ್ಬರು ಬಸವನಗುಡಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮೈಸೂರಿನ ಪಿಯು ಕಾಲೇಜಿನ ಉಪನ್ಯಾಸಕ, ಸಂಸದರೊಬ್ಬರ ಪುತ್ರ ರಂಗನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ವಿಜಯನಗರದ ನಿವಾಸಿ 24 ವರ್ಷದ ಯುವತಿಗೆ ರಂಗನಾಥ್ ಸ್ನೇಹಿತರ ಮೂಲಕ ಪರಿಚಯವಾಗಿದ್ದು, ಆಗಾಗ ಫೋನ್ ಮಾಡಿ ಮಾತನಾಡಿಸುತ್ತಿದ್ದನು.

ಸ್ವಲ್ಪ ದಿನಗಳ ನಂತರ ಯುವತಿಗೆ ರಂಗನಾಥ್ ಕರೆ ಮಾಡಿ ನಾನು ನಿನ್ನನ್ನು ಪ್ರೀತಿಸುತ್ತಿದ್ದೇನೆ, ನಾನು ಮೈಸೂರಿನ ಪಿಯು ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದು, ಕೈ ತುಂಬಾ ಸಂಬಳ ಬರುತ್ತದೆ ಎಂದು ಹೇಳಿದ್ದಾನೆ. ಅಲ್ಲದೆ, ನೀನು ನನ್ನನ್ನು ಮದುವೆಯಾದರೆ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ನಂಬಿಸಿದ್ದರಿಂದ ಆ ಯುವತಿ ಸ್ನೇಹ ಮುಂದುವರೆಸಿದ್ದಾರೆ.

ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್

ಕಳೆದ ಜ.23ರಂದು ರಂಗನಾಥ್ ಕರೆ ಮಾಡಿ, ಬೆಂಗಳೂರಿನಲ್ಲಿ ಕೆಲಸವಿದೆ, ನಾನು ಬರುತ್ತಿದ್ದೇನೆಂದು ಹೇಳಿ 24ರಂದು ಬಂದು ಕೊಡಿಗೇಹಳ್ಳಿಯ ಸ್ವಾತಿ ಹೊಟೇಲ್‍ಗೆ ಯುವತಿಯನ್ನು ಕರೆಸಿಕೊಂಡಿದ್ದಾನೆ. ನಂತರ ಅಲ್ಲಿಂದ ಮೈಸೂರಿಗೆ ಹೋಗಿ ಅಲ್ಲಿನ ಲಲಿತ ಮಹಲ್ ಪ್ಯಾಲೆಸ್ ಹೊಟೇಲ್‍ಗೆ ಕರೆದುಕೊಂಡು ಹೋಗಿ ನಿನ್ನನ್ನು ನಮ್ಮ ಮನೆಗೆ ಕರೆದುಕೊಂಡು ಹೋಗಲು ಆಗುವುದಿಲ್ಲ. ಇವತ್ತು ಇಲ್ಲಿಯೇ ಇದ್ದು, ಬೆಳಗ್ಗೆ ನಮ್ಮ ಮನೆಗೆ ಹೋಗೋಣವೆಂದು ನಂಬಿಸಿ ಹೊಟೇಲ್‍ನಲ್ಲೇ ಉಳಿಸಿಕೊಂಡಿದ್ದಾಗ ರಾತ್ರಿ ಮದ್ಯ ಸೇವಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಹೊಂದಿ ಮಾರನೆ ದಿನ ಬೆಳಗ್ಗೆ ನನ್ನನ್ನು ಬೆಂಗಳೂರಿಗೆ ಕಳುಹಿಸಿದ್ದಾನೆಂದು ದೂರಿನಲ್ಲಿ ಯುವತಿ ತಿಳಿಸಿದ್ದಾಳೆ.

ನಂತರದ ದಿನಗಳಲ್ಲಿ ರಂಗನಾಥ್ ನನ್ನ ಜತೆ ಮೊದಲಿನ ಹಾಗೆ ಮಾತನಾಡದೆ ನಿರ್ಲಕ್ಷ್ಯ ಮಾಡಿ ಮದುವೆ ಮಾಡಿಕೊಳ್ಳದೆ ಮೋಸ ಮಾಡಿದ್ದಾನೆ. ಮದುವೆಯಾಗುವಂತೆ ಕೇಳಿದಾಗ ಕೊಲೆ ಬೆದರಿಕೆ ಹಾಕಿರುತ್ತಾನೆಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ನೋಟಿಸ್: ಯುವತಿ ನೀಡಿರುವ ದೂರಿನನ್ವಯ ಬಸವನಗುಡಿ ಮಹಿಳಾ ಠಾಣೆ ಇನ್ಸ್‍ಪೆಕ್ಟರ್ ಅವರು ರಂಗನಾಥ್‍ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ದೂರಿನನ್ವಯ ಯುವತಿಗೆ ಸೂಕ್ತ ದಾಖಲೆಯೊಂದಿಗೆ ಠಾಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ.

ಯುವತಿ ವಿರುದ್ಧ ದೂರು: ರಂಗನಾಥ್ ಸಹ ಯುವತಿ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿಯು ಸ್ನೇಹಿತರ ಮೂಲಕ ಪರಿಯಚವಾಗಿದ್ದು, ಆಕೆ ಜತೆ ನಾನು ಇರುವ ಫೋಟೋಗಳನ್ನು ನನ್ನ ಪತ್ನಿಗೆ ಕಳುಹಿಸಿ ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿ, ಮಾನಸಿಕ ಹಿಂಸೆ ನೀಡಿರುತ್ತಾರೆ. ಪದೇ ಪದೇ ಕರೆ ಮಾಡಿ ಹಣಕ್ಕೆ ಬೇಡಿಕೆ ನೀಡಿದ್ದು, 32,500ರೂ. ಆಕೆ ಖಾತೆಗೆ ವರ್ಗಾವಣೆ ಮಾಡಿದ್ದೆನು.

ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್

ನಂತರದ ದಿನಗಳಲ್ಲಿ 15 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದು, ಹಣ ನೀಡಲು ನಿರಾಕರಿಸಿದಾಗ ಕೊಲೆ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ರಂಗನಾಥ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಯುವತಿ ಹಾಗೂ ರಂಗನಾಥ್ ಪರಸ್ಪರ ದೂರು ದಾಖಲಿಸಿದ್ದು, ಈ ಪ್ರಕರಣ ಮುಂದೆ ಯಾವ ಹಂತಕ್ಕೆ ಹೋಗಿ ನಿಲ್ಲುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಯಾರೇ ಕಾನೂನು ಉಲ್ಲಂಘಿಸಿದರೂ ಕಠಿಣ ಕ್ರಮ: ಪರಮೇಶ್ವರ್

ಬೆಂಗಳೂರು, ನ.17- ಕಾನೂನನ್ನು ಯಾರೇ ಉಲ್ಲಂಘನೆ ಮಾಡಿದರೂ ಕಠಿಣ ಕ್ರಮ ಜರುಗಿಸಲಾಗುವುದು. ಇದರಲ್ಲಿ ವ್ಯಕ್ತಿಗತ ದ್ವೇಷ ಅಥವಾ ರಾಜಕೀಯ ಕಾರಣಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಕರಾವಳಿ ಭಾಗದಲ್ಲಿ ಬಜರಂಗದಳದ ಕಾರ್ಯಕರ್ತರ ಗಡಿಪಾರಿಗೆ ನೋಟಿಸ್ ನೀಡಿರುವುದಕ್ಕೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಇರುವುದೇ ಕಾನೂನು ಪರಿಪಾಲನೆ ಮಾಡಲಿಕ್ಕೆ.
ಕಾನೂನು ಮೀರಿದರೆ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳಿದರು.

ಕಾನೂನನ್ನು ಹೊರತು ಪಡಿಸಿ ಪೊಲೀಸ್ ಇಲಾಖೆ ಕೆಲಸ ಮಾಡಲಾಗುವುದಿಲ್ಲ. ಬಜರಂಗದಳವಾಗಲಿ, ಸಂಘ ಸಂಸ್ಥೆಯಾಗಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದರೆ ನಮ್ಮ ಸಹಕಾರ ಇರುತ್ತದೆ. ಕಾನೂನು ಮೀರಿದರೆ ಏನು ಮಾಡಬೇಕು. ಪೊಲೀಸ್ ಇಲಾಖೆ ಇರುವುದೇ ಕಾನೂನು ಪಾಲನೆಗೆ ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ. ಈ ಹಂತದಲ್ಲಿ ಯಾವುದೇ ವ್ಯಕ್ತಿಗತ ದ್ವೇಷ, ಮತ್ತೊಬ್ಬರನ್ನು ಹತ್ತಿಕ್ಕವ ಉದ್ದೇಶ ಅಥವಾ ರಾಜಕೀಯ ಕಾರಣಗಳು ಇರುವುದಿಲ್ಲ ಎಂದರು.

ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ

ಬಜರಂಗದಳದವರು ಕಾನೂನು ವ್ಯಾಪ್ತಿಯಲ್ಲಿದ್ದರೆ ನಾವು ಅವರ ಜೊತೆಯಲ್ಲಿ ಇರುತ್ತೇವೆ. ಅವರು ಕಾನೂನು ಮೀರಿದರೆ ಕ್ರಮ ಕೈಗೊಳ್ಳುವುದು ಅನಿವಾರ್ಯ. ರಾಜ್ಯದಲ್ಲಿ ಶಾಂತಿ ಕಾಪಾಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಜನಸಾಮಾನ್ಯರಿಗೆ ಭರವಸೆ ನೀಡಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್‍ಗೆ ಬರುವುದಾದರೆ ನನ್ನ ಅಭ್ಯಂತರ ಇಲ್ಲ. ಅವರು ಪಕ್ಷಕ್ಕೆ ಬರುವುದಾದರೆ ಸ್ವಾಗತ ಮಾಡುತ್ತೇನೆ. ಈಗೀನ್ನೂ ಅವರು ಇನ್ನೂ ಬಿಜೆಪಿಯ ಮುಖಂಡರಾಗಿದ್ದಾರೆ. ಈ ಹಂತದಲ್ಲಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದರು.

ಸೋಮಣ್ಣ ವಿಷಯದಲ್ಲಿ ಏನಾಗುತ್ತಿದೆ ಎಂದು ಗೋತ್ತಿಲ್ಲ. ತುಮಕೂರು ಲೋಕಸಭೆ ಕ್ಷೇತ್ರಕ್ಕೆ ಅವರು ಅಭ್ಯರ್ಥಿ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅಧ್ಯಕ್ಷರ ಜೊತೆ ಚರ್ಚೆ ಮಾಡಿರಬಹುದು, ಆದರೆ ತಮಗೆ ಮಾಹಿತಿ ಇಲ್ಲ ಎಂದರು.

ರಾಜಕೀಯದಲ್ಲಿ ಎಲ್ಲರಿಗೂ ತಮ್ಮದೆ ಆದ ಶಕ್ತಿ ಇದೆ, ಹಿಂಬಾಲಕರಾಗಿರುತ್ತಾರೆ. ನಾಯಕರು ಬರುವುದರಿಂದ ಅದು ಪಕ್ಷಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್‍ಖಾನ್ ನೀಡಿರುವ ಹೇಳಿಕೆಯ ಬಗ್ಗೆ ತಮಗೆ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ಗಮನಿಸಿಲ್ಲ, ಗೋತ್ತಿಲ್ಲದೆ ಪ್ರತಿಕ್ರಿಯಿಸಲ್ಲ. ವಿಷಯ ಗೋತ್ತಿಲ್ಲದೆ ಹೇಳಿಕೆ ನೀಡುವುದಿಲ್ಲ ಎಂದರು.

ಡಿಸಿಎಂ ಭೇಟಿ ರಾಜಕೀಯ ಬಣ್ಣ ಬೇಡ: ಜಿ.ಟಿ.ದೇವೇಗೌಡ

ಬೆಂಗಳೂರು,ನ.17- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಕ್ಕೆ ರಾಜಕೀಯ ಬಣ್ಣ ಹಚ್ಚುವ ಅಗತ್ಯವಿಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಉಪಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲಿಲ್ಲ ಎಂದು ಸ್ಪಷ್ಟಪಡಿಸಿದರು. ಲೋಕೋಭಿರಾಮವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಯಾವುದೇ ರಾಜಕೀಯ ಉದ್ದೇಶ ಇಟ್ಟುಕೊಂಡು ಭೇಟಿಯಾಗಿರಲಿಲ್ಲ. ವಯಸ್ಸಾದ ಸಂದರ್ಭದಲ್ಲಿ ನೀವು ತಪ್ಪು ಮಾಡಿದ್ದೀರಿ ಅನಿಸುತ್ತೆ ಎಂದು ಶಿವಕುಮಾರ್ ಹೇಳಿದರು. ಆದರೆ ನಾನು ಜೆಡಿಎಸ್‍ನಲ್ಲೇ ಚೆನ್ನಾಗಿದ್ದೇನೆ ಎಂದು ಹೇಳಿದ್ದೇನೆ.

ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್

ಜೆಡಿಎಸ್ ಬಿಜೆಪಿ ಜೊತೆ ಸದ್ಯಕ್ಕೆ ಹೊಂದಾಣಿಕೆ ಮಾಡಿಕೊಂಡಿದ್ದು, ಅದೇ ರೀತಿ ಮುಂದುವರೆಯಲಿದೆ ಎಂದು ಹೇಳಿದರು. ಮಾಜಿ ಸಿಎಂ ಕುಮಾರಸ್ವಾಮಿ ಯವರನ್ನು ಪದೇ ಪದೇ ಆಕ್ಷೇಪಾರ್ಹವಾಗಿ ಮಾತನಾಡುವುದು ಸರಿಯಲ್ಲ. ನಾವು ಅದೇ ರೀತಿ ಅವರಿಗೆ ಹೇಳಿದರೆ ಸರಿಯಾಗುತ್ತದೆಯೇ ಎಂದು ಪ್ರಶ್ನಿಸಿದರು.

ಇದಕ್ಕೂ ಮುನ್ನ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜಿ.ಟಿ.ದೇವೇಗೌಡರು ಮತ್ತು ಡಿ.ಕೆ.ಶಿವಕುಮಾರ್ ಭೇಟಿಯಾಗಿರುವುದಕ್ಕೆ ಏಕೆ ಬೇರೆ ಅರ್ಥ ಕಲ್ಪಿಸಬೇಕು ಎಂದು ಪ್ರಶ್ನಿಸಿದರು. ಜಿ.ಟಿ.ದೇವೇಗೌಡರು ಶಾಸಕರಾಗಿದ್ದು, ಅವರು ಯಾವುದೋ ಕೆಲಸಕ್ಕೆ ಭೇಟಿಯಾಗಿರಬಹುದು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದರು.

ಕುಟುಂಬದ ಒತ್ತಡಕ್ಕೆ ಮಣಿಯದೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿ: ಯತ್ನಾಳ್

ಬೆಂಗಳೂರು,ನ.17- ಯಾವುದೋ ಒಂದು ಕುಟುಂಬದ ಒತ್ತಡಕ್ಕೆ ಮಣಿಯದೆ ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ವಿಪಕ್ಷ ನಾಯಕನ ಆಯ್ಕೆ ನಡೆಯಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಬ್ಲಾಕ್‍ಮೇಲ್ ಮಾಡಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳುತ್ತಾರೆ. ಅಂಥವರ ಬಗ್ಗೆ ಹೈಕಮಾಂಡ್ ಎಚ್ಚರಿಕೆ ಇಡಬೇಕು. ಬಿಜೆಪಿ ಯಾವುದೇ ಒಂದು ಕುಟುಂಬದ ಆಸ್ತಿಯಲ್ಲ. ಕಾರ್ಯಕರ್ತರೇ ಈ ಪಕ್ಷದ ಆಸ್ತಿ. ಹೀಗಾಗಿ ಎಚ್ಚರಿಕೆಯಿಂದ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಉತ್ತರಕರ್ನಾಟಕ ಭಾಗಕ್ಕೆ ಪ್ರತಿ ಹಂತದಲ್ಲೂ ಅನ್ಯಾಯವಾಗಿದೆ. ಹೀಗಾಗಿ ನಮ್ಮ ಭಾಗಕ್ಕೆ ಕೊಟ್ಟರೆ ಪಕ್ಷದ ಬಲವರ್ಧನೆಗೆ ಸಹಾಯವಾಗಲಿದೆ. ಎಲ್ಲ ಭಾಗಕ್ಕೂ ಅವಕಾಶ ಕಲ್ಪಿಸಿರುವಾಗ ನಮ್ಮ ಭಾಗವನ್ನು ಕಡೆಗಣಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ನಾನು ಏನೇ ಮಾತನಾಡಿದರೂ ಅದು ವಿರೋಧವಾಗಬಹುದು. ಏನು ಹೇಳಬೇಕೋ ಅದನ್ನು ವೀಕ್ಷಕರಿಗೆ ಹೇಳಿದ್ದೇನೆ.

ಸ್ಥಳೀಯ ವಿಷಯಗಳು ದೆಹಲಿ ನಾಯಕರಿಗೆ ಗೊತ್ತಿರುವುದಿಲ್ಲ. ಇದೆಲ್ಲವನ್ನೂ ಗಮನಕ್ಕೆ ತಂದಿದ್ದೇನೆ. ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ನಮ್ಮ ಭಾಗಕ್ಕೆ ಅನ್ಯಾಯ ಮಾಡಿದರೆ ಅಲ್ಲಿನ ಜನ ಸುಮ್ಮನಿರುವುದಿಲ್ಲ. ಪಕ್ಷ ಬಲವರ್ಧನೆಯಾಗಬೇಕಾದರೆ ಉತ್ತರ ಕರ್ನಾಟಕಕ್ಕೆ ನ್ಯಾಯ ಸಿಗಲೇಬೇಕು. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ನೋಡೋಣ ಎಂದು ಸೂಚ್ಯವಾಗಿ ಹೇಳಿದರು.

ನನ್ನನ್ನು ನಿನ್ನೆ ಒಬ್ಬ ಏಜೆಂಟ್ ಖರೀದಿಸಲು ಬಂದಿದ್ದ.ನಾನು ಅಷ್ಟು ಸುಲಭವಾಗಿ ಖರೀದಿಯಾಗುವುದಿಲ್ಲ ಎಂದು ಅವನಿಗೆ ಗೊತ್ತಾಗಿ ಜಾಗ ಖಾಲಿ ಮಾಡಿದ ಎಂದು ಯತ್ನಾಳ್ ಹೇಳಿದರಾದರೂ ಆತನ ಹೆಸರನ್ನು ಬಹಿರಂಗಪಡಿಸಲಿಲ್ಲ.

ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ

ಈ ಯತ್ನಾಳ್ ಯಾರಿಗೂ ಹೆದರುವವನೂ ಅಲ್ಲ, ಜಗ್ಗುವವನೂ ಅಲ್ಲ. ಇದನ್ನು ನಾನು ವೀಕ್ಷಕರ ಗಮನಕ್ಕೂ ತಂದಿದ್ದೇನೆ. ಅವರು ಕೂಡ ನೀವು ಯಾರಿಗೂ ಹೆದರುವುದಿಲ್ಲ ಎಂಬುದು ಗೊತ್ತಿದೆ ಎಂದರು. ಪಂಚಮಸಾಲಿ ಸಮುದಾಯವನ್ನು ಕಡೆಗಣಿಸಿದರೆ ಎಂತಹ ಫಲಿತಾಂಶ ಬರುತ್ತದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯ ಫಲಿತಾಂಶವೇಶ ಸಾಕ್ಷಿ. ಎಲ್ಲದಕ್ಕೂ ನಾವು ಇನ್ನೊಬ್ಬರ ಮನೆ ಬಾಗಿಲಿಗೆ ಸಾರ್ ಸಾರ್ ಎಂದು ಹಿಂದೆ ಹೋಗಲು ಸಾಧ್ಯವೇ. ಪ್ರತಿಯೊಂದು ದಕ್ಷಿಣ ಕರ್ನಾಟಕಕ್ಕೆ ಕೊಟ್ಟರೆ ಉತ್ತರ ಕರ್ನಾಟಕದವರು ಏನು ಮಾಡಬೇಕೆಂದು ಪ್ರಶ್ನಿಸಿದರು.

ನಾನು ಹೆಚ್ಚು ಮಾತನಾಡುವುದಿಲ್ಲ. ವಿಪಕ್ಷ ನಾಯಕನ ಆಯ್ಕೆಯಾದ ಬಳಿಕ ಮಾತನಾಡುತ್ತೇನೆ ಎನ್ನುವ ಮೂಲಕ ಯತ್ನಾಳ್ ಕುತೂಹಲ ಕೆರಳಿಸಿದರು.

ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ, ಬ್ಲಾಕ್‍ಮೇಲ್‍ಗೆಲ್ಲ ಹೆದರುವುದಿಲ್ಲ: ಡಿಸಿಎಂ

ಬೆಂಗಳೂರು, ನ.17- ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಈ ಪೊಗರು, ಬ್ಲಾಕ್‍ಮೆಲ್‍ಗೆಲ್ಲಾ ಹೆದರುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಅವರ ಆರೋಪಗಳಿಗೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರತಿಕ್ರಿಯಿಸಿ ದರು. ಅವರು ಏನೇನು ಕೇಳುತ್ತಾರೆ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಅವರ ಮಾತುಗಳಿಗೆ, ಆಚಾರ ವಿಚಾರ ಎಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ. ಇನ್ನೂ ಬೇಕಾದರೂ ನಾವು ಉತ್ತರ ಕೊಡುತ್ತೇವೆ. ಪಟ್ಟಿ ಕೇಳುತ್ತಿದ್ದಾರೆ ಕೊಡೋಣ ಎಂದರು.

ಬೆಂಗಳೂರಿನಲ್ಲಿ ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಸಂಸ್ಥೆಯದು. ದಾಖಲೆ ಮಾಡಿ ಟೆಂಡರ್ ಹಾಕಿದ್ದರು. ಅದನ್ನು ನನ್ನ ಸ್ನೇಹಿತರು ತೆಗೆದುಕೊಂಡಿದ್ದರು. ನಾನು ಅವರಿಂದ ತೆಗೆದುಕೊಂಡು, ಸಹಭಾಗಿತ್ವದಲ್ಲಿ ಮಾಲ್ ಕಟ್ಟಿದ್ದೇನೆ. ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ಎಂದರು.

ಕೆಲಸಕ್ಕಿದ್ದ ಅಂಗಡಿಯಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರ ಬಂಧನ

ಹಿಂದೆ ಎಲ್ಲಾ ಪ್ರಯತ್ನಗಳಾಗಿವೆ. ಬಹುಶಃ ಕುಮಾರಸ್ವಾಮಿಯವರು ಮರೆತಿರಬಹುದು, ಅವರ ತಂದೆ 10-15 ವರ್ಷದ ಹಿಂದೆಯೇ ಜೈರಾಜ್ ಎಂಬ ಅಧಿಕಾರಿಗೆ ಹೇಳಿ ಖಾತೆ ನಿಲ್ಲಿಸಿದ್ದರು. ಏನು ತನಿಖೆ ಮಾಡಿಸಬೇಕೋ ಎಲ್ಲಾ ಮಾಡಿಸಿದ್ದಾರೆ. ಈಗಲೂ ಏನು ಬೇಕಾದರೂ ತನಿಖೆ ಮಾಡಿಸಿ. ನಾನೇನಾದರೂ ತಪ್ಪು ಮಾಡಿದ್ದರೆ ಗಲ್ಲಿಗೆ ಬೇಕಾದರೆ ಹಾಕಿ ಬಿಡಿ. ಅದಕ್ಕೆಲ್ಲಾ ನಾನು ರೆಡಿ ಇದ್ದೇನೆ. ಈ ಪೊಗರು, ಬ್ಲಾಕ್‍ಮೇಲ್‍ಗೆ ಹೆದರಲ್ಲ. ಸಾರ್ವಜನಿಕ ವ್ಯಕ್ತಿ ಯಾಗಿದ್ದೇನೆ. ಏನು ಬೇಕಾದರೂ ದಾಖಲೆ ಕೊಡುತ್ತೇನೆ ಎಂದರು.

ಮಾಲ್ ಕಟ್ಟಿದ್ದು ನಾನನ್ನಲ್ಲ ಜಾಯಿಂಟ್ ವೆಂಚರ್‍ನಲ್ಲಿ ಶೋಭಾ ಡೆವಲಪರ್ಸ್ ಕಟ್ಟಿದ್ದಾರೆ. ಅವರಿಗೆ ಹೇಳುತ್ತೇನೆ ಯಾವ ವಿದ್ಯುತ್ ಕದ್ದಿದ್ದಾರೆ ದಾಖಲೆ ಬಿಡುಗಡೆ ಮಾಡಿ ಎಂದು ಎಂದ ಅವರು, ಕುಮಾರಸ್ವಾಮಿ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು.

ಪ್ರಾವಿಡೆಂಟ್ ಹೌಸಿಂಗ್‍ನಿಂದ ಮ್ಯಾಂಚೆಸ್ಟರ್ ಟೌನ್‍ಹೌಸ್ ಮನೆಗಳು

ಬೆಂಗಳೂರು,ನ,17- ಪ್ರಾವಿಡೆಂಟ್ ಹೌಸಿಂಗ್ ಲಿಮಿಟೆಡ್, ಬೆಂಗಳೂರಿನಲ್ಲಿನ ತನ್ನ ಹೊಸ ವಸತಿ ಯೋಜನೆಯಾಗಿರುವ ಪ್ರಾವಿಡೆಂಟ್ ಡೀನ್ಸ್‍ಗೇಟ್ ಪ್ರಾರಂಭಿಸುವುದಾಗಿ ಎಂದು ಪ್ರಕಟಿಸಿದೆ.

ಬೆಂಗಳೂರಿನ ಅಂ.ರಾ.ವಿಮಾನ ನಿಲ್ದಾಣ ರಸ್ತೆಯಲ್ಲಿ ಈ ವಿಶೇಷವಾಗಿ ಅಭಿವೃದ್ಧಿಪಡಿಸುತ್ತಿರುವ ವಸತಿ ಯೋಜನೆಯು ಐಷಾರಾಮಿ ಜೀವನವನ್ನು ಮರುವ್ಯಾಖ್ಯಾನಿಸಲಿದೆ, ಮ್ಯಾಂಚೆಸ್ಟರ್ ಟೌನ್‍ಹೌಸ್ ಶೈಲಿಯ ವಾಸ್ತುಶೈಲಿಯ ಮೋಡಿಯ ಜೊತೆಗೆ ಸಮಕಾಲೀನ ವಿನ್ಯಾಸಗಳ ಮಿಶ್ರಣ ಒಳಗೊಂಡ ವಿಶಿಷ್ಟ ವಸತಿ ಯೋಜನೆ ಇದಾಗಿದೆ.

15 ಎಕರೆಗಳಷ್ಟು ಪ್ರದೇಶದಲ್ಲಿ ವ್ಯಾಪಿಸಿರುವ ಡೀನ್ಸ್‍ಗೇಟ್, ನಿಖರವಾಗಿ ವಿನ್ಯಾಸಗೊಳಿಸಿದ 288 ಟೌನ್‍ಹೌಸ್‍ಗಳನ್ನು ಒಳಗೊಂಡಿರಲಿದೆ. ಪ್ರತಿಯೊಂದೂ ಟೌನ್‍ಹೌಸ್ ವಾಸ್ತುಶಿಲ್ಪದ ಮೇರುಕೃತಿಯಾಗಿದೆ.
ಈ ವಸತಿ ಯೋಜನೆಯು 3 ಬಿಎಚ್‍ಕೆಗಳನ್ನು ಹೊಂದಿರುವ 1,900 ರಿಂದ 1,950 ಚದರ ಅಡಿ ವಿಸ್ತಾರದ ಗಾರ್ಡನ್ ಟೌನ್‍ಹೌಸಸ್ ಮತ್ತು 2,100 ರಿಂದ 2,200 ಚದರ ಅಡಿ ವ್ಯಾಪ್ತಿ ಹೊಂದಿರುವ ಟೆರೇಸ್ ಟೌನ್‍ಹೌಸಸ್ ಹೆಸರಿನ ಎರಡು ವಿಭಿನ್ನ ಬಗೆಗಳನ್ನು ಒಳಗೊಂಡಿದೆ.

ಕೆಲಸಕ್ಕಿದ್ದ ಅಂಗಡಿಯಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರ ಬಂಧನ

ಪ್ರಾವಿಡೆಂಟ್ ಹೌಸಿಂಗ್ ಲಿಮಿಟೆಡ್‍ನ ಸಿಇಒ ಮಲ್ಲಣ್ಣ ಸಾಧಿಸಲು ಅವರು ಮಾತನಾಡಿ, ಡೀನ್ಸ್‍ಗೇಟ್, ಚಿಂತನಶೀಲ ಐಷಾರಾಮಿ ಸೌಲಭ್ಯಗಳನ್ನು ಹೊಂದಿರುವುದರ ಜೊತೆಗೆ ಸುಸ್ಥಿರತೆ ಮತ್ತು ಗ್ರಾಹಕರ ಸಂತಸಕ್ಕೆ ಆದ್ಯತೆ ನೀಡುವ ವಸತಿ ಸ್ಥಳಗಳನ್ನು ಅಭಿವೃದ್ಧಿಪಡಿಸುವ ನಮ್ಮ ಸಮರ್ಪಣಾ ಭಾವವನ್ನು ಸಾಕಾರಗೊಳಿಸಲಿದೆ.

ಈ ಯೋಜನೆಯಲ್ಲಿ ಅನನ್ಯ ವಿನ್ಯಾಸದ ಸೌಂದರ್ಯಶಾಸ್ತ್ರ, ನಾವೀನ್ಯತೆ ಮತ್ತು ತಂತ್ರಜ್ಞಾನವನ್ನು ಸೇರ್ಪಡೆ ಮಾಡಿ ಹೆಚ್ಚಿನ ಅನುಭವಕ್ಕೆ ವಿನ್ಯಾಸಗೊಳಿಸಿದ ಮನೆಗಳ ಮೂಲಕ ನಮ್ಮ ಗ್ರಾಹಕರ ಜೀವನಶೈಲಿಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದರು.

ಗಣಿ ಪ್ರಕರಣದ ತನಿಖೆಗೆ ಅಂಜುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ನ.17- ಬಿಡದಿ ಬಳಿ ತಾವು ಖರೀದಿಸಿರುವ ಆಸ್ತಿ ಹಾಗೂ ಜಂತ್ಕಲ್ ಗಣಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತನಿಖೆಯನ್ನು ಬೇಗ ಪೂರ್ಣಗೊಳಿಸಲಿ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನನ್ನನ್ನು ಹೆದುರಿಸಲು ಸಾಧ್ಯವಿಲ್ಲ. ಏಕಾಂಗಿಯಾಗಿ ಹೋರಾಟ ಮಾಡುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ಸಚಿವ ಸಂಪುಟ ಸಭೆ ನಡೆದ ನಂತರ ನನ್ನ ಬಗ್ಗೆಯೇ ಪ್ರತ್ಯೇಕ ಸಭೆ ನಡೆಸಿದ್ದಾರೆ. ಬಿಡದಿ ಬಳಿ ಜಮೀನು ಖರೀದಿಸಿ 38 ವರ್ಷವಾಗಿದೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗಡೆ ಕಾಲದಿಂದ ಇಲ್ಲಿಯವರೆಗೆ ಆಗಿರುವ ತನಿಖೆ ಬಗ್ಗೆ ಪುಸ್ತಕ ಬರೆಯಬಹುದು. ಲೋಕಾಯುಕ್ತ, ಸಿಐಡಿ ತನಿಖೆ ಎಲ್ಲವೂ ಆಗಿದೆ. ಇನ್ನೊಮ್ಮೆ ತನಿಖೆ ಮಾಡಿಸಿ ನನಗಿನ್ನೂ ಮೂರ್ನಾಲ್ಕು ಎಕರೆ ಜಮೀನು ಸಿಕ್ಕಿಲ್ಲ. ಅದನ್ನು ಹುಡುಕಿ ಕೊಡಲಿ ಎಂದು ಹೇಳಿದರು.

ಮುಖ್ಯಮಂತ್ರಿ ಉಸ್ತುವಾರಿಯಲ್ಲೇ ಜಂತ್ಕಲ್ ಗಣಿಗಾರಿಕೆ ಪ್ರಕರಣದ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾನು ಹೆದರಿಕೊಳ್ಳುವುದಿಲ್ಲ. ಜಂತ್ಕಲ್ ಪ್ರಕರಣ ಮುಗಿಸಲು ಮುಖ್ಯಮಂತ್ರಿಯಾಗಿದ್ದಾಗ ಒತ್ತಡವನ್ನೂ ಹೇರಿಲ್ಲ. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿ ಮಾಲೀಕರಿಂದ 20 ಲಕ್ಷ ರೂ.ವನ್ನು ಪುತ್ರನ ಖಾತೆಗೆ ಪಡೆದುಕೊಂಡಿದ್ದ ಅಧಿಕಾರಿ ಜೈಲಿಗೆ ಹೋಗಿದ್ದಾರೆ. ಅದನ್ನು ನನ್ನ ತಲೆಗೆ ಕಟ್ಟಲು ಹುನ್ನಾರ ನಡೆಸಿದ್ದರು ಎಂದರು.

ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಜಂತ್ಕಲ್ ಗಣಿಗಾರಿಕೆ ಪ್ರಕರಣವನ್ನು ಶೀಘ್ರವಾಗಿ ಪೂರ್ಣಗೊಳಿಸಲಿ ಎಂದ ಅವರು, ನಾನು ಯಾವುದೇ ಕಾರಣಕ್ಕೂ ಅಂಜುವುದಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿಲ್ಲ ಎಂದು ಆರೋಪಿಸಿದರು.
ಹಲವು ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಎಸಿಬಿ ರಚಿಸಿಕೊಂಡಿದ್ದರು. ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ರೀಡೂ ವರದಿ ಏನಾಯ್ತು ಎಂದು ಪ್ರಶ್ನಿಸಿದರು.

ಕರಾಬ್ ಜಮೀನಿನಲ್ಲಿ ಮಾಲು: ವಿರೋಧ ಪಕ್ಷದ ಸ್ಥಾನದಲ್ಲಿದ್ದು ಕಾನೂನು ಬಾಹಿರ ಕೃತ್ಯಗಳನ್ನು ಹೊರಗೆ ತರುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ಮಿನರ್ವ ಮಿಲ್‍ಗೆ ಸುಮಾರು 1934ರಲ್ಲಿ ಮಂಜೂರಾಗಿದ್ದ ಜಮೀನು 24 ಎಕರೆ ಕರಾಬ್ ಭೂಮಿಯಲ್ಲಿ ಲೂಲು ಮಾಲ್ ನಿರ್ಮಿಸಲಾಗಿದೆ. ಅಲ್ಲಿದ್ದ ಹೈಟೆನ್ಷನ್ ವೈರ್‍ಗಳನ್ನು ಅಂಡರ್‍ಗ್ರೌಂಡ್‍ನಲ್ಲಿ ತೆಗೆದುಕೊಂಡು ಹೋಗಲಾಗಿದೆ. ಇದಕ್ಕೆ ಕಂಪನಿಯಿಂದ ಹಣ ಕಟ್ಟಿದ್ದಾರೆಯೇ ಎಂದು ಪ್ರಶ್ನಿಸಿದರು.

ಅಲ್ಲದೆ ಮಾಲ್‍ನ ಕಟ್ಟಡ ನಿರ್ಮಾಣ ಮಾಡುವಾಗ ಬಳಸಿದ ವಿದ್ಯುತ್‍ಗೆ ಪೂರ್ವಾನುಮತಿ ಪಡೆದು ಹಣ ಪಾವತಿಸಿದ್ದಾರೆಯೇ ಎಂದು ಪ್ರಶ್ನಿಸಿದರು. ನನ್ನ ವಿರುದ್ಧ ನಾಲ್ಕು ಕೇಸ್‍ಗಳನ್ನು 2009ರಲ್ಲಿ ಹಾಕಲಾಗಿತ್ತು. ವಕೀಲರ ಸಲಹೆ ಮೇರೆಗೆ ಜಾಮೀನನ್ನು ಪಡೆದಿದ್ದಾಗಿ ಸ್ಪಷ್ಟಪಡಿಸಿದರು.

ಕ್ಷಮೆಗೆ ಆಗ್ರಹ: ಸಭಾಧ್ಯಕ್ಷರಾದವರು ವಿಧಾನಸಭೆಯ 224 ಸದಸ್ಯರ ರಕ್ಷಣೆ ಮಾಡಬೇಕು. ಸಭಾಧ್ಯಕ್ಷರ ಹೆಸರನ್ನು ಬಳಸಿ ಸಚಿವರೊಬ್ಬರು ಬಿಜೆಪಿ ನಾಯಕರ ಬಗ್ಗೆ ಬಳಸಿರುವ ಪದಬಳಕೆಗೆ ಕ್ಷಮೆ ಯಾಚಿಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು. ಸಭಾಧ್ಯಕ್ಷರಾದವರು ಒಂದು ಧರ್ಮದ ಪ್ರತಿನಿಧಿಯಲ್ಲ. ಸಂವಿಧಾನ ಬದ್ದವಾಗಿ ಕರ್ತವ್ಯ ನಿರ್ವಹಿಸುವವರು. ಅವರ ಹೆಸರಿನಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ. ಈ ರೀತಿಯಾದರೆ ಸದನದ ನಿಯಮವನ್ನು ಉಳಿಸುತ್ತಾರೆಯೇ ಎಂದು ಪ್ರಶ್ನಿಸಿದರು.

ಉಡುಪಿ ನಾಲ್ವರ ಹತ್ಯೆ ಪ್ರಕರಣ: ಕುಟುಂಬಕ್ಕೆ ಸಾಂತ್ವಾನ ಹೇಳಿದ ಲಕ್ಷ್ಮೀ ಹೆಬ್ಬಾಳ್ಕರ್

ನಂಬಬೇಕೆ?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ಐದು ಶಾಲೆಗಳಿಗೆ ಸಿಎಸ್‍ಆರ್ ನಿಧಿ ಬಳಕೆ ವಿಚಾರಕ್ಕೆ ಮಾತನಾಡಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದನ್ನು ನಾವು ನಂಬಬೇಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಇನ್ನು ಬೆಳಗ್ಗೆ ಮಾಧ್ಯಮಗಳಲ್ಲಿ ಆ ವಿಡಿಯೋ ಪ್ರಸಾರವಾದ ಕೂಡಲೇ ಅಂದರೆ 10-11 ಗಂಟೆಗೆ ಈ ಆರೋಪದ ಬಗ್ಗೆ ಸ್ಪಷ್ಟನೆ ನೀಡಬಹುದಿತ್ತು. ಆದರೆ ಮಧ್ಯಾಹ್ನ 3 ಗಂಟೆವರೆಗೆ ಏಕೆ ಕಾಯಬೇಕಿತ್ತು ಎಂದರು.
ಡೂಪ್ಲಿಕೇಟ್ ಸಿಎಂ ಹೇಳಿದ ಮೇಲೆ ಸಿಎಸ್‍ಆರ್ ನಿಧಿ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದ ಅವರು, ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದರು.

ಮಾತನಾಡುವಾಗ ವಿವೇಕನಂದ ಯಾರೂ ಎಂದು ಪ್ರಶ್ನಿಸಿದ್ದಾರೆ. ಸಿಎಸ್‍ಆರ್ ನಿಧಿ ವಿಚಾರವಾಗಿದ್ದರೆ ಬಿಇಒ ವಿವೇಕನಂದ ಎಂಬುದು ಗೊತ್ತಾಗುತ್ತಿರಲಿಲ್ಲವೇ? ಸಿದ್ದರಾಮಯ್ಯನವರ ಹುಟ್ಟೂರಿನ ಶಾಲೆಗೆ ಈ ನಿಧಿ ಕೊಟ್ಟಿದ್ದಾರೆಯೆ? ಎಂದು ಪ್ರಶ್ನಿಸಿದ ಅವರು, ನನ್ನ ಪುತ್ರ ಹಾಗೂ ಶಾಸಕರಾಗಿದ್ದ ಪತ್ನಿ ಎಂದು ಕೂಡ ಮುಖ್ಯಮಂತ್ರಿ ಕಚೇರಿಯ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಗೋಷ್ಠಿಯಲ್ಲಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಉಪಸ್ಥಿತರಿದ್ದರು.

ಕೆಲಸಕ್ಕಿದ್ದ ಅಂಗಡಿಯಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು: ಇಬ್ಬರ ಬಂಧನ

ಬೆಂಗಳೂರು, ನ.17- ಕೆಲಸ ಕೊಟ್ಟಿದ್ದ ಚಿನ್ನಾಭರಣ ವ್ಯಾಪಾರಿಯ ಕಣ್ತಪ್ಪಿಸಿ ಅಂಗಡಿ ಕೀ ಕಳ್ಳತನ ಮಾಡಿ ಇಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಪುರಾತನ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ರಾಜಸ್ಥಾನದ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿ 1 ಕೋಟಿ 2 ಲಕ್ಷ ಮೌಲ್ಯದ ಚಿನ್ನಾಭರಣ, 5.50 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ರಾಜಸ್ಥಾನ ಮೂಲದ ಕೇತರಾಮ್, ಈತನ ಸ್ನೇಹಿತ ರಾಕೇಶ್ ಬಂಧಿತ ಆರೋಪಿಗಳು. ಮತ್ತೊಬ್ಬ ತಲೆಮರೆಸಿಕೊಂಡಿದ್ದು, ಈತನ ಪತ್ತೆಕಾರ್ಯ ಮುಂದುವರೆದಿದೆ. ನಗರತ್‍ಪೇಟೆಯ ಕಾಂಚನಾ ಜ್ಯುವೆಲರ್ಸ್ ಅಂಗಡಿ ಮಾಲೀಕರಾದ ಅರವಿಂದ್ ಕುನೂರ್ ತಾಡೆ ಅವರ ಬಳಿ ಆರೋಪಿ ಕೇತರಾಮ್ ಎರಡು ತಿಂಗಳ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದನು.

ಆ ಸಂದರ್ಭದಲ್ಲಿ ಮಾಲೀಕನ ನಂಬಿಕೆ-ವಿಶ್ವಾಸ ಗಳಿಸಿ ಅವರ ವ್ಯವಹಾರಗಳನ್ನೆಲ್ಲ ತಿಳಿದುಕೊಂಡಿದ್ದಾನೆ. ಹೇಗಾದರೂ ಮಾಡಿ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಊರಿಗೆ ಹೋಗಿ ಐಷಾರಾಮಿ ಜೀವನ ನಡೆಸಬಹುದು ಎಂದು ಯೋಚಿಸಿದ್ದಾನೆ. ಈ ನಡುವೆ ದಸರಾ ಹಬ್ಬದ ನಿಮಿತ್ತ ಅರವಿಂದ್‍ಕುಮಾರ್ ಅವರು ಮುಂಬೈಗೆ ತೆರಳುವ ಸಂದರ್ಭದಲ್ಲಿ ಅವರ ಬ್ಯಾಗ್‍ನಲ್ಲಿದ್ದ ಅಂಗಡಿಯ ಬೀಗವನ್ನು ಆರೋಪಿ ಕೇತರಾಮ್ ಕಳವು ಮಾಡಿದ್ದಾನೆ.

ನಂತರ ತನ್ನ ಊರಿನ ಸ್ನೇಹಿತರಾದ ರಾಕೇಶ್ ಹಾಗೂ ಮತ್ತೊಬ್ಬನನ್ನು ಕರೆಸಿಕೊಂಡು ಅ.29ರಂದು ಎಂದಿನಂತೆ ಅಂಗಡಿ ಬೀಗ ತೆರೆದು ಕಸ ಗುಡಿಸುವವನಂತೆ ನಾಟಕವಾಡಿದ್ದಾನೆ. ಆ ವೇಳೆ ಅಂಗಡಿಯ ಸಿಸಿಟಿವಿ ಸ್ಥಗಿತಗೊಳಿಸಿದ್ದಾನೆ. ಇನ್ನಿಬ್ಬರು ಅಂಗಡಿಯಲ್ಲಿದ್ದ 4 ಕೆಜಿ ಚಿನ್ನಾಭರಣ, 34 ಕೆಜಿ ಬೆಳ್ಳಿ ವಸ್ತುಗಳು, 9 ಲಕ್ಷ ಹಣವನ್ನು ಬ್ಯಾಗ್‍ಗಳಿಗೆ ತುಂಬಿಕೊಂಡಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಬಳಿಕ ಕೇತರಾಮ್ ಅಂಗಡಿಗೆ ಬೀಗ ಹಾಕಿ ಅವರೊಂದಿಗೆ ಪರಾರಿಯಾಗಿದ್ದನು. ಅಕ್ಕಪಕ್ಕದವರು ಅನುಮಾನಗೊಂಡು ಅಂಗಡಿ ಮಾಲೀಕರ ಮಗನಿಗೆ ತಿಳಿಸಿದ್ದಾರೆ. ಮಾಲೀಕರ ಮಗ ಬಂದು ನೋಡಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಹಲಸೂರು ಗೇಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೊದಲ ಪ್ರಮುಖ ಆರೋಪಿ ಕೇತರಾಮ್‍ನನ್ನು ಬಂಸಿ ನಂತರ ಮತ್ತೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೋಟಿ 2 ಲಕ್ಷ ಬೆಲೆಬಾಳುವ 1 ಕೆಜಿ 624 ಗ್ರಾಂ ಚಿನ್ನಾಭರಣ, 6 ಕೆಜಿ 455 ಗ್ರಾಂ ಬೆಳ್ಳಿ, 5.50 ಲಕ್ಷ ನಗದು, ಹಳೆಯ ನೋಟುಗಳು, ಕೈಗಡಿಯಾರಗಳು ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳ ಬಂಧನದಿಂದ ಹಲಸೂರು ಗೇಟ್ ಹಾಗೂ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗಳ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ.

ಆರೋಪಿ ರಾಕೇಶ್ ವಿರುದ್ಧ ಸಿಟಿ ಮಾರ್ಕೆಟ್, ಹಲಸೂರು, ವರ್ತೂರು, ಬ್ಯಾಡರಹಳ್ಳಿ, ತಾವರೆಕೆರೆ ಪೊಲೀಸ್ ಠಾಣೆಗಳಲ್ಲಿ ಎನ್‍ಡಿಪಿಎಸ್ ಕಾಯ್ದೆ, ಮನೆಗಳವು, ಹಗಲು ಕನ್ನಗಳವು ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಹೋಗಿ ಬಂದಿರುತ್ತಾನೆ. ಹಲಸೂರು ಗೇಟ್ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಹನುಮಂತ ಕೆ.ಭಜಂತ್ರಿ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾಂಗ್ರೆಸ್‍ಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ವಿಜಯೇಂದ್ರ

ಬೆಂಗಳೂರು,ನ.17- ವಿಧಾನಸಭೆಯಲ್ಲಿ ಭಾರೀ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‍ಗೆ ಅಧಿಕಾರದ ಅಮಲು ನೆತ್ತಿಗೇರಿದೆ. ಜನತೆ ಶೀಘ್ರದಲ್ಲೇ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ಕೊಟ್ಟಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದಲೂ ವರ್ಗಾವಣೆಯ ದಂಧೆ ನಡೆಯುತ್ತಲೇ ಇದೆ ಎಂದು ನಾವು ಹೇಳಿದ್ದೆವು. ಈಗ ಅವರ ಪಕ್ಷದವರೇ ನಮ್ಮ ಮಾತನ್ನು ಪುನರುಚ್ಚರಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು.

ಅಧಿಕಾರ ಶಾಶ್ವತವಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ದರ್ಪ, ದುರಹಂಕಾರ, ಮ್ಮಾಕು ಬಹಳ ದಿನ ನಡೆಯುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ನಿಮಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ಕೊಟ್ಟರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಪತ್ತೆಯಾದ ಹಣದ ಮೂಲ ಯಾರಿಗೆ ಸೇರಿದ್ದು ಎಂಬುದನ್ನು ಕಾಂಗ್ರೆಸ್ ನಾಯಕರು ಹೇಳಲು ಸಿದ್ದರಿದ್ದೀರಾ? ಐಟಿ ದಾಳಿಯಾದಾಗ ಮುಖ್ಯಮಂತ್ರಿ ಡಿಸಿಎಂ ಸೇರಿದಂತೆ ಎಲ್ಲರೂ ಬಾಯಿಗೆ ಬಂದಂತೆ ಮಾತನಾಡಿದರು ಎಂದು ಕಿಡಿಕಾರಿದರು.

ಕಾಶ್ಮೀರ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ: ಐವರು ಉಗ್ರರ ಹತ್ಯೆ

ಕಡೆಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಐಟಿ ದಾಳಿಯನ್ನು ಸ್ವಾಗತಿಸಬೇಕು. ಬದಲಿಗೆ ದಾಳಿ ನಡೆದಿದ್ದು ತಪ್ಪು ಎಂಬ ರೀತಿಯಲ್ಲಿ ಮಾತನಾಡಿದರು ಎಂದು ಕಿಡಿಕಾರಿದರು.
ಸ್ಪೀಕರ್ ಸ್ಥಾನದ ಬಗ್ಗೆ ಲಘುವಾಗಿ ಸಚಿವ ಜಮೀರ್ ಅಹಮ್ಮದ್ ನೀಡಿರುವ ಹೇಳಿಕೆ ಅತ್ಯಂತ ದುರದೃಷ್ಟಕರ. ಸ್ಪೀಕರ್ ಸ್ಥಾನದ ಬಗ್ಗೆಯೇ ಗೌರವವಿಲ್ಲ ಎಂದರೆ ಹೇಗೆ ಎಂದು ವಿಜಯೇಂದ್ರ ಪ್ರಶ್ನೆ ಮಾಡಿದರು.

ಜಮೀರ್ ತಮ್ಮ ಮನದಲ್ಲಿರುವ ಇಂಗಿತವನ್ನೇ ವ್ಯಕ್ತಪಡಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜವಾಬ್ದಾರಿಯಿಂದ ಮಾತನಾಡಬೇಕು. ಇತ್ತೀಚೆಗೆ ಅವರಿಗೆ ವಿವಾದ ಎಳೆದುಕೊಳ್ಳುವುದು ಕಾಯಕವಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಮಧ್ಯಪ್ರವೇಶಿಸಿ ಜಮೀರ್‍ಗೆ ಬಾಯಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.