Home Blog Page 1813

ನನ್ನ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆ ಮೇಲು ಆಗಿದೆ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ನ.16-ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಐದು ರಾಜ್ಯಗಳಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದು ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು.

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ. ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ. ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ ಎಂದ ಅವರು,

ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತುಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ ಬಹಳ ಹಿಂದಿನಿಂದಲೂ ನಡೆದಿದೆ. ಪಕ್ಷಕ್ಕಾಗಿ ಸಂಘಟನೆ ಮಾಡಿದವರನ್ನು, ದುಡಿದವರನ್ನು ದೂರವಿಡಲಾಗುತ್ತಿದೆ ಎಂದರು.

ಇನ್ನು ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಸದಾನಂದ ಗೌಡರನ್ನು ದೆಹಲಿಗೆ ಕರೆಯಿಸಿ ಮೂರು ದಿನ ಕಾಯಿಸಿದರು. ಐದು ನಿಮಿಷ ಮಾತನಾಡುವಷ್ಟು ಸೌಜನ್ಯವನ್ನು ತೋರಲಿಲ್ಲ. ಬಿಜೆಪಿ ಹಿರಿಯರನ್ನು ನಡೆಸಿಕೊಳ್ಳುವ ರೀತಿಗೆ ಇದೊಂದು ಉದಾಹರಣೆ. ಎಲ್‍ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ ಮೊದಲಾದವರಿಗೆ ರಾಜಕೀಯ ನಿವೃತ್ತಿ ಕೊಟ್ಟುಬಿಟ್ಟರು.

ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ

ನನಗೆ, ಲಕ್ಷ್ಮಣ್ ಸವದಿ ಮತ್ತು ಈಶ್ವರಪ್ಪಗೆ ಕರ್ನಾಟಕದಲ್ಲಿ ಟಿಕೆಟ್ ಕೊಡಲಿಲ್ಲ. ನನಗೆ ಟಿಕೆಟ್ ತಪ್ಪಿಸಲು ಏನು ಕಾರಣ ಅಂತ ಇದುವರೆಗೂ ಹೇಳಿಲ್ಲ. ಇದರ ಪರಿಣಾಮ ಏನಾಯ್ತು ಅಂತ ಇಡೀ ಜಗತ್ತಿಗೆ ಗೊತ್ತಿದೆ. ಬಿಜೆಪಿ ವರಿಷ್ಠರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಅನ್ನೋ ಆಸೆಆದರೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿತು ಎಂದರು.

ಹೀಗಾಗಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಹಿರಿಯರಿಗೆ ಮಣೆ ಹಾಕಲಾಗಿದೆ. ಈಗ 70-75 ಯಸ್ಸಾದಂತವರಿಗೂ ಟಿಕೆಟ್ ನೀಡಲಾಗಿದ್ದು ಅವರಿಗೆ ಯಾಕೆ ಟಿಕೆಟ್ ಕೊಟ್ಟರು. ನಿಯಮ ಎಲ್ಲರಿಗೂ ಒಂದೇ ಅನ್ವಯ ಆಗಬೇಕಲ್ಲವೇ ಅಧಿಕಾರ ಆಸೆಯಲ್ಲಿ ಎಲ್ಲ ನಿಯಮಗಳನ್ನು ಗಾಳಿಗೆ ತೂರುತ್ತಾರೆ.
ವಯಸ್ಸಿನ ನೆಪದಲ್ಲಿ ಅಡ್ವಾಣಿ ಮುರಳಿ ಮನೋಹರ್ ಜೋಶಿಯವರನ್ನು ಮನೆಗೆ ಕಳಿಸಿದ್ರು ಈಗ ನೋಡಿದರೆ 80 ವರ್ಷ ಆದವರಿಗೂ ಟಿಕೆಟ್ ಕೊಟ್ಟಿದ್ದಾರೆ.

ಜಗದೀಶ್ ಶೆಟ್ಟರ್ ಎಫೆಕ್ಟ್ ಪಂಚ ರಾಜ್ಯಗಳಲ್ಲಿಯೂ ಆಗಿದೆ. ಹಾಗಾಗಿ ವಯಸ್ಸು ದಾಟಿದರೂ ಟಿಕೆಟ್ ನೀಡಲಾಗಿದೆ. ನನ್ನ ಪಕ್ಷಾಂತರದ ಎಫೆಕ್ಟ್ ತಿಳಿದುಕೊಂಡು ಮೂರ್ನಾಲ್ಕು ಮಾಜಿ ಸಿಎಂ ಗಳಿಗೆ ಟಿಕೆಟ್ ಕೊಟ್ಟಿದ್ದಾರೆ ಆದ್ದರಿಂದ ಈಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವುದರಿಂದ ಯಾವುದೇ ಆಗಲ್ಲ. ಬಿಜೆಪಿ ಕುಸಿತಿರುವ ಸಂದರ್ಭದಲ್ಲಿ ಹೆಚ್ಚಿನ ಶಕ್ತಿ ತೋರಿಸಲು ಸಾಧ್ಯವಿಲ್ಲ. ಬಿಜೆಪಿ ಕಾರ್ಯಕರ್ತರು ಧೃತಿಗೆಟ್ಟಿದ್ದಾರೆ, ಭರವಸೆ ಕಳೆದುಕೊಂಡಿದ್ದಾರೆ. ನಾಯಕನಿಲ್ಲದ ಪಕ್ಷ ಅನ್ನೋ ಕೊರಗು ಅವರನ್ನು ಕಾಡ್ತಿದೆ ಎಂದರು.

ಇನ್ನು ಆಪರೇಷನ್ ಕಮಲ ಪ್ರಕ್ರಿಯೆ ನಡೆದೆ ಇದೆ ಈ ರೀತಿ ಮಾಡಿದ್ರೆ ಕೈ ಶಾಸಕರು ತಮ್ಮ ಪಕ್ಷಕ್ಕೆ ಬರ್ತಾರೆ ಅನ್ನೋ ಭ್ರಮೆಯಲ್ಲಿದ್ದಾರೆ. ಆಪರೇಷನ್ ಕಮಲ ಪ್ರಯತ್ನ ಸಫಲವಾಗಲ್ಲ ಎಂದರು.

ಮತದಾರರ ಕರಡು ಪಟ್ಟಿ ಸಿದ್ಧ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು, ನ.16-ರಾಜಧಾನಿ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಕರಡು ಪಟ್ಟಿ ಸಿದ್ಧವಾಗಿದ್ದು, ಈ ಸಂಬಂಧ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೂ ಅವಕಾಶ ಕಲ್ಪಿಸಲಾಗಿದೆ, ಜತೆಗೆ ಹೊಸ ಹೆಸರು ಸೇರ್ಪಡೆಗೆ ವಿಶೇಷ ಅಭಿಯಾನ ನಡೆಸಲಾಗುತ್ತಿದೆ.

ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಅ.27 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.9ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಇನ್ನೂ, ಈ ಅವಧಿವರೆಗೂ ವಿಶೇಷ ನೋಂದಣಿ ಅಭಿಯಾನಗಳನ್ನು ಬಿಬಿಎಂಪಿಯ ಎಲ್ಲಾ ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು, ವಾರ್ಡ್ ಕಚೇರಿಗಳು, ಮತಗಟ್ಟೆಗಳಲ್ಲಿ ಆಯೋಜಿಸಲಾಗಿದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ.

ವಾಹನಗಳಿಗೆ ಹಾನಿ: ಗೊಂಬೆ ಗ್ಯಾಂಗ್‍ನ ಐದು ಮಂದಿ ಸೆರೆ

ಕರಡು ಮತದಾರರ ಪಟ್ಟಿಗೆ ಸಂಬಂಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಹಮ್ಮಿಕೊಂಡಿರುವ ವಿಶೇಷ ಅಭಿಯಾನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಲು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಗಳ ಮೇಲಿನ ವ್ಯಾಮೋಹವೇ ನಾಲ್ವರ ಕೊಲೆಗೆ ಕಾರಣ..?

ಬೆಂಗಳೂರು, ನ.16- ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಹಂತಕ ಪ್ರವೀಣ್ ಅರುಣ್ ಚೌಗಲೆ , ಹಸೀನಾ ಅವರ ಎರಡನೇ ಮಗಳ ಮೇಲಿನ ವ್ಯಾಮೋಹದಿಂದ ಕೊಲೆ ಮಾಡಿರುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಹಸೀನಾ ಅವರ ಎರಡನೇ ಮಗಳು ಅಜ್ಞಾಝ್‍ಳನ್ನು ವಿಮಾನದಲ್ಲಿ ಕರ್ತವ್ಯದಲ್ಲಿದ್ದಾಗ ಆರೋಪಿ ಪ್ರವೀಣ್ ಆಕೆಯ ಸ್ನೇಹ ಬೆಳೆಸಿದ್ದ. ಆರೋಪಿ ಪ್ರವೀಣ್ ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದು ಇಬ್ಬರು ಮಕ್ಕಳಿರುವ ವಿಷಯ ಅಜ್ಞಾಝ್‍ಗೆ ಗೊತ್ತಾಗಿ ಪ್ರವೀಣ್‍ನಿಂದ ಅಂತರ ಕಾಯ್ದುಕೊಂಡು ಆತನನ್ನು ದೂರ ಮಾಡಿದ್ದಳು.

ಆರೋಪಿ ಪ್ರವೀಣ್ ತನ್ನಿಂದ ದೂರವಿದ್ದ ಅಜ್ಞಾಝ್‍ಳ ಪ್ರೀತಿ ಸಿಗುವುದಿಲ್ಲವೆಂದು ತಿಳಿದು ಆಕೆಯ ಜೊತೆ ಕುಟುಂಬವನ್ನೆ ಮುಗಿಸಲು ಸಂಚು ರೂಪಿಸಿ ಅ.12ರಂದು ಅವರ ಮನೆಗೆ ನುಗ್ಗಿ ಮೊದಲು ಆಕೆಯ ತಾಯಿಯನ್ನು ಕೊಲೆ ಮಾಡಿ ನಂತರ ಅಜ್ಞಾಝ್, ಈಕೆಯ ಸಹೋದರಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಲೆ ಮಾಡಿ ಬೆಳಗಾವಿಯಲ್ಲಿ ತಲೆಮರೆಸಿಕೊಂಡಿದ್ದನು.

ಪ್ರವೀಣ್ ಈ ಹಿಂದೆ ಮಹರಾಷ್ಟ್ರದಲ್ಲಿ ಎರಡು ವರ್ಷ ಪೊಲೀಸ್ ಸೇವೆ ಮಾಡಿರುವುದು ತನಿಖೆಯಿಂದ ಗೊತ್ತಾಗಿದೆ.

ಬೆಂಗಳೂರಿನ ಹಲವು ಪ್ರದೇಶಗಳು ಸುರಕ್ಷಿತವಲ್ಲ: ಪೊಲೀಸರಿಗೆ ಟ್ಯಾಗ್ ಮಾಡಿ ಆತಂಕ ವ್ಯಕ್ತಪಡಿಸಿದ ಟೆಕ್ಕಿ

ಬೆಂಗಳೂರು, ನ.16- ನಗರದ ಹಲವು ಪ್ರದೇಶಗಳು ಸುರಕ್ಷಿತವಲ್ಲವೆಂದು ಭಾಸವಾಗುತ್ತಿದೆಯೆಂದು ಟೆಕ್ಕಿಯೊಬ್ಬ ಎಕ್ಸ್ ಮೂಲಕ ತನ್ನ ಪತ್ನಿಗೆವುಂಟಾದ ಕಿರುಕುಳದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡು ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿದ್ದಾರೆ.

ಸೃಜನ್ ಶೆಟ್ಟಿ ಎಂಬುವವರು ಎಕ್ಸ್ ನಲ್ಲಿ ಅಪ್‍ಡೇಟ್ ಮಾಡಿರುವ ವಿಡಿಯೋದಲ್ಲಿ ಕಳೆದ ನ.8ರಂದು ತಮ್ಮ ಪತ್ನಿ ಕೆಲಸ ಮುಗಿಸಿ ಕ್ಯಾಬ್‍ಗೆ ಕಾಯುತ್ತಿದ್ದರು, ಅದು ಬರಲು ತಡವಾದ ಕಾರಣ ಇಬ್ಬರೂ ಮಹಿಳಾ ಸಹೋದ್ಯೋಗಿ ಹಾಗೂ ಒಬ್ಬ ಪುರುಷರೊಂದಿಗೆ ಅವರ ಕಾರಿನಲ್ಲಿ ಹೊರಟಿದ್ದರು. ಸರ್ಜಾಪುರದ ಬಳಿ ರಾತ್ರಿ 10 ಗಂಟೆ ಸುಮಾರಿನಲ್ಲಿ ಟೆಂಫೋಚಾಲಕರು ನಮ್ಮ ಕಾರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಅಪಘಾತವಾಗಿದೆಯೆಂದು ನಾಟಕವಾಡಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ

ನಂತರ ಕಾರಿನಲ್ಲಿದ್ದವರನ್ನು ಕೆಳಗಿಳಿಯುವಂತೆ ಬೆದರಿಸಿದ್ದಾರೆ. ಆದರೆ ನನ್ನ ಪತ್ನಿ ದೈರ್ಯ ಮಾಡಿ ಪೊಲೀಸರಿಗೆ ಮಾಹಿತಿ ನೀಡಿ ನಂತರ ಎಚ್ಚೆತ್ತು ಎಲ್ಲರೂ ಕಾರಿನಲ್ಲಿ ವೇಗವಾಗಿ ಗುಂಪಿನಿಂದ ತಪ್ಪಿಸಿಕೊಂಡು ಬಂದಿದ್ದಾರೆ.
ಈ ಘಟನೆ ನಡೆಯುತ್ತಿದ್ದರೂ ಈ ರಸ್ತೆಯಲ್ಲಿ ಹೋಗುತ್ತಿದ್ದ ಯಾರೊಬ್ಬರೂ ಸಹಾಯಕ್ಕೆ ಬರಲಿಲ್ಲ. ಸಮಯಪ್ರಜ್ಞೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಆದರೆ ಅಲ್ಲೇ ಇದ್ದಿದ್ದರೆ ಪರಿಸ್ಥಿತಿಯೇನಾಗುತ್ತಿತ್ತೋ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ

ಈ ಭಾಗದಲ್ಲಿ ಹಲವಾರು ಐಟಿ ಕಂಪನಿಗಳಿದ್ದು, ಸಾವಿರಾರು ಮಂದಿ ಈ ಮಾರ್ಗವಾಗಿ ಸಂಚರಿಸುತ್ತಾರೆ. ಆದರೆ ಇಂತಹ ಘಟನೆಗಳು ಭೀತಿಯುಟ್ಟಿಸುತ್ತದೆ. ಶಾಂತಿಪ್ರಿಯ ಬೆಂಗಳೂರು ಸುರಕ್ಷಿತವೇ ಎಂಬ ಭಾವನೆ ಮೂಡುತ್ತದೆಯೆಂದು ಹೇಳಿಕೊಂಡಿದ್ದಾರೆ. ಇದನ್ನು ಭದ್ರತಾ ಲೋಪವೆಂದು ಹೇಳಲು ಸಾಧ್ಯವಿಲ್ಲ, ಆದರೆ ಪೊಲೀಸರು ಇಂತಹ ಘಟನೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ವಿಡಿಯೋದಲ್ಲಿರುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಟ್ವಿಟ್‍ಗೆ ಪ್ರತಿಕ್ರಿಯಿಸಿರುವ ನಗರ ಪೊಲೀಸರು ಘಟನೆ ನಡೆದ ನಿರ್ದಿಷ್ಟ ಸ್ಥಳ ಮತ್ತು ತಮ್ಮ ವಿವರಗಳನ್ನು ನೀಡುವಂತೆ ಡಿಎಂನಲ್ಲಿ ಕಳಿಸುವಂತೆ ತಿಳಿಸಿದ್ದಾರೆ.

ವಾಹನಗಳಿಗೆ ಹಾನಿ: ಗೊಂಬೆ ಗ್ಯಾಂಗ್‍ನ ಐದು ಮಂದಿ ಸೆರೆ

ಬೆಂಗಳೂರು, ನ.16- ರಸ್ತೆ ಬದಿ ನಿಲ್ಲಿಸಿದಂತಹ 15ಕ್ಕೂ ಹೆಚ್ಚು ಕಾರುಗಳು ಹಾಗೂ ಬೈಕ್‍ಗಳ ಗಾಜು ಒಡೆದು ಹಾನಿ ಮಾಡಿ ಪರಾರಿಯಾಗಿದ್ದ ಬೊಂಬೆ ಮಾಸ್ಕ್ ಗ್ಯಾಂಗ್‍ನ ಐದು ಮಂದಿಯನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಒಂದು ದ್ವಿಚಕ್ರ ವಾಹನ, ಲಾಂಗು, ಮುಖವಾಡಗಳು, ಎರಡು ಕಬ್ಬಿಣದ ರಾಡುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡಿ ಆ ಪ್ರದೇಶದಲ್ಲಿ ತಮ್ಮದೇ ಪಾರುಪತ್ಯ ಹೊಂದುವ ಸಲುವಾಗಿ ಈ ಕೃತ್ಯ ಎಸಗಿರುವುದು ತನಿಖೆಯಿಂದ ಕಂಡು ಬಂದಿದೆ. ಮೊದಲನೇ ಆರೋಪಿ ಪೀಣ್ಯ, ಗಂಗಮ್ಮನ ಗುಡಿ, ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಗಳ ಹಗಲು ಮತ್ತು ರಾತ್ರಿ ಕನ್ನಕಳವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುತ್ತಾನೆ.

ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ

ಕಳೆದ ನ.10ರಂದು ಮುಂಜಾನೆ ಎಂಟತ್ತು ಮಂದಿಯ ಗುಂಪೊಂದು ಬೊಂಬೆ ಮಾಸ್ಕ್ ಹಾಕಿಕೊಂಡು ಲಗ್ಗೆರೆಯ ರಸ್ತೆ ಬದಿಗಳಲ್ಲಿ ನಿಲ್ಲಿಸಿದಂತಹ ಕಾರುಗಳು ಹಾಗೂ ಬೈಕ್‍ಗಳ ಗಾಜುಗಳನ್ನು ಒಡೆದು ಪುಂಡಾಟ ಮೆರೆದಿತ್ತು. ಬೆಳಗಾಗುತ್ತಿದ್ದಂತೆ ಕಾರು ಹಾಗೂ ಬೈಕ್‍ಗಳ ಮಾಲೀಕರು ನೋಡಿ ತಕ್ಷಣ ರಾಜಗೋಪಾಲನಗರ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಈ ರಸ್ತೆಗಳಲ್ಲಿದ್ದಂತಹ ಸಿಸಿ ಕ್ಯಾಮೆರಾ ಪರಿಶೀಲಿಸಿ ಅದರಲ್ಲಿದ್ದ ದೃಶ್ಯಾವಳಿಗಳನ್ನು ಆಧರಿಸಿ ಐದು ಮಂದಿ ಆರೋಪಿ ಗಳನ್ನು ಪತ್ತೆಹಚ್ಚಿ ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕರ ಹತಾಶೆಯಿಂದ ಗೊಂದಲ ಸೃಷ್ಟಿ: ಡಿಕೆಶಿ

ಬೆಂಗಳೂರು,ನ,16- ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಹತಾಶೆ ಹಾಗೂ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್- ಬಿಜೆಪಿಯವರಿಗೆ ಕೆಲಸ ಇಲ್ಲ. ಯತೀಂದ್ರ ಸಿದ್ದರಾಮಯ್ಯ ಕೆಡಿಪಿ ಸದಸ್ಯರಾಗಿದ್ದಾರೆ. ಕ್ಷೇತ್ರದಲ್ಲಿ ಆಶ್ರಯ ಸಮಿತಿಯ ಅಧ್ಯಕ್ಷರು. ಜನಸಂಪರ್ಕ ಸಭೆ ನಡೆಸುವಾಗ ಫೋನಿನಲ್ಲಿ ಮಾತನಾಡಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಕೆಲವು ಶಾಲೆಗಳಿಗೆ ಕುರ್ಚಿ, ಬೆಂಚುಗಳನ್ನು ಪೂರೈಸುವ ಪ್ರಯತ್ನ ನಡೆಯುತ್ತಿದೆ. ಆ ಪಟ್ಟಿ ತಯಾರಿಸುವಾಗ ವಿವೇಕಾನಂದ ಎಂಬ ಅಧಿಕಾರಿ ಒಂದೆರಡು ಹೆಸರುಗಳನ್ನು ಬದಲಾವಣೆ ಮಾಡಿದ್ದಾರೆ. ಸ್ಥಳೀಯರು ಈ ಬಗ್ಗೆ ಯತೀಂದ್ರ ಅವರಿಗೆ ದೂರು ನೀಡಿದ್ದಾರೆ. ಚುನಾವಣೆ ವೇಳೆ ಮಾತುಕೊಟ್ಟಂತೆ ಶಾಲೆಗಳನ್ನು ಅಭಿವೃದ್ಧಿಪಡಿಸುವುದು ಸ್ಥಳೀಯ ಜನಪ್ರತಿನಿಧಿಗಳ ಕರ್ತವ್ಯ. ಯತೀಂದ್ರ ಅದರಂತೆ ನಡೆದುಕೊಂಡಿದ್ದಾರೆ ಎಂದರು.

ತಂದೆ ಮುಖ್ಯಮಂತ್ರಿಯಾಗಿದ್ದಾರೆ. ಅವರ ಪರವಾಗಿ ಯತೀಂದ್ರ ವರುಣಾ ಕ್ಷೇತ್ರವನ್ನು ನೋಡಿಕೊಳ್ಳುತ್ತಿದ್ದಾರೆ. ಫೋನ್‍ನಲ್ಲಿ ಮಾತನಾಡುವಾಗ ಎಲ್ಲಿಯೂ ಅಧಿಕಾರಿಗಳ ಹೆಸರು ಹಾಗೂ ಹುದ್ದೆ ಪ್ರಸ್ತಾಪವಾಗಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಜೆಡಿಎಸ್-ಬಿಜೆಪಿಯವರು ವರ್ಗಾವಣೆ ದಂಧೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವರ್ಗಾವಣೆ ನಿಂತು ಬಹಳ ದಿನವಾಗಿದೆ. ದಂಧೆ ಎಲ್ಲಿ ನಡೆಯುತ್ತಿದೆ ಎಂಬುದನ್ನು ತೋರಿಸಿ ಎಂದು ಸವಾಲು ಹಾಕಿದ ಡಿ.ಕೆ.ಶಿವಕುಮಾರ್, ಯತೀಂದ್ರ ಮಾಜಿ ಶಾಸಕರಾಗಿದ್ದಾರೆ. ಒಂದು ವೇಳೆ ತಮ್ಮ ಕ್ಷೇತ್ರಕ್ಕೆ ಕೆಲಸ ಮಾಡಲು ನಾಲ್ಕೈದು ಅಧಿಕಾರಿಗಳು ಬೇಕು ಎಂದು ಕೇಳಿದ್ದರೂ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡರು.

ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ

ಮುಖ್ಯಮಂತ್ರಿ ಯಾದವರಿಗೆ ತಮ್ಮ ಕ್ಷೇತ್ರ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಉಪ ಮುಖ್ಯಮಂತ್ರಿಯಾದ ನನಗೂ ನನ್ನ ಕ್ಷೇತ್ರಕ್ಕೆ ನಿಯಮಿತವಾಗಿ ಭೇಟಿ ನೀಡಲು ಆಗುತ್ತಿಲ್ಲ. ಹೀಗಾಗಿ ತಮ್ಮ ಸಹೋದರರೂ ಆಗಿರುವ ಸಂಸದ ಡಿ.ಕೆ.ಸುರೇಶ್ ಅವರು ಕ್ಷೇತ್ರದ ಜನರ ಅಹವಾಲು ಕೇಳುತ್ತಾರೆ. ಮನೆಯ ಬೇಡಿಕೆ ಸೇರಿದಂತೆ ಹಲವಾರು ಮನವಿಗಳನ್ನು ಆಧರಿಸಿ ಫಲಾನುಭವಿಗಳ ಆಯ್ಕೆಯಾಗುತ್ತದೆ. ಆ ಪಟ್ಟಿಯನ್ನು ಪರಿಶೀಲಿಸಿ ತಾವು ಸಹಿ ಹಾಕುವುದು ಸಾಮಾನ್ಯ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 40 ವರ್ಷಗಳ ರಾಜಕೀಯ ಪ್ರಜ್ಞೆ ಇದೆ. ಅವರನ್ನು ಯಾರೂ ದಾರಿ ತಪ್ಪಿಸಲು ಆಗುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್‍ನವರಿಂದ ಸಿದ್ದರಾಮಯ್ಯ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದರು.

ಜೆಡಿಎಸ್‍ನ ಶಾಸಕರು ನಿನ್ನೆ ರಾತ್ರಿ ತಮ್ಮನ್ನು ಭೇಟಿಯಾಗಿಲ್ಲ. ಕ್ಷೇತ್ರದ ಅಭಿವೃದ್ದಿ ಕೆಲಸಗಳಿದ್ದರೆ ಬರುತ್ತಾರೆ. ನಾವು ತುರ್ತಾಗಿ ಕೆಲಸ ಮಾಡಿಕೊಡುತ್ತೇವೆ. ಅದರ ಹೊರತಾಗಿ 13 ಮಂದಿ ಜೆಡಿಎಸ್ ಶಾಸಕರು ಕಾಂಗ್ರೆಸ್‍ಗೆ ಬರುತ್ತಾರೆ ಎಂಬುದೆಲ್ಲಾ ವದಂತಿ. ಸದ್ಯಕ್ಕೆ ಯಾವ ಶಾಸಕರೂ ಬರುವುದಿಲ್ಲ. ಯಾರೂ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಪುನರುಚ್ಚರಿಸಿದರು.

ಜೆಡಿಎಸ್‍ನ ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿಯವರು ಹತಾಷೆಯಿಂದ ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ವಿರುದ್ಧ ಟೀಕೆ ಮಾಡುವಾಗ ಜಮೀನುಗಳಿಗೆ ಬೇಲಿ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಲ್ಲಿ, ಯಾವ ಜಮೀನು, ಯಾವ ಬೇಲಿ, ಯಾವ ಬಂಡೆ, ಯಾವ ಕಲ್ಲು ಎಂಬುದನ್ನು ತೋರಿಸಲಿ ಎಂದು ತಿರುಗೇಟು ನೀಡಿದರು.

ಅಕ್ರಮ ವಿದ್ಯುತ್ ಸಂಪರ್ಕಕ್ಕೆ ಸಂಬಂಧ ಪಟ್ಟಂತೆ ಕುಮಾರಸ್ವಾಮಿಯವರೇ ತಪ್ಪು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಯಾರೋ ಗುತ್ತಿಗೆದಾರನಿಗೆ ಮನೆ ಅಲಂಕಾರ ಮಾಡಲು ಹೇಳಿರಬಹುದು. ಆತ ತಪ್ಪು ಮಾಡಿರುತ್ತಾನೆ. ಕಾರು ನನ್ನ ಹೆಸರಿನಲ್ಲಿ ನೋಂದಣಿಯಾಗಿದೆ. ಚಾಲಕ ಅಪಘಾತ ಮಾಡಿದರೆ ಡಿ.ಕೆ.ಶಿವಕುಮಾರ್ ಕಾರು ಅಪಘಾತವಾಗಿದೆ ಎಂದೇ ಹೇಳುತ್ತಾರೆ. ಚಾಲಕ ಅಪಘಾತ ಮಾಡಿದ್ದಾನೆ ಎಂದು ಹೇಳುವುದಿಲ್ಲ. 25 ವರ್ಷಗಳ ಹಿಂದೆ ಇಂಥದ್ದೇ ಪ್ರಕರಣವೊಂದು ತಮ್ಮ ಜೀವನದಲ್ಲಿ ನಡೆದಿತ್ತು ಎಂದು ಉದಾಹರಣೆ ಕೊಟ್ಟರು.

ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’

ಕುಮಾರಸ್ವಾಮಿಯವರು ಪ್ರತಿಬಾರಿಯೂ ಲೂಟಿ.. ಲೂಟಿ.. ಎಂದು ಹೇಳುತ್ತಾರೆ. ಅವರ ಅನುಭವ ಆಚಾರ-ವಿಚಾರಗಳನ್ನು ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದರು. ಬಿಜೆಪಿಗೆ ಈಗಷ್ಟೇ ಹೊಸ ಅಧ್ಯಕ್ಷರ ನೇಮಕವಾಗಿದೆ. ಅಸಮಾಧಾನ ಹೊಂದಿರುವವರ ಕೈ-ಕಾಲು ಕಟ್ಟಿ ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮವಾಗಿ ಪಕ್ಷ ಸಂಘಟನೆ ಮಾಡಬೇಕು ಎಂದು ಪ್ರಶ್ನೆಯೊಂದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಿದರು.

ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ, ನ.16- ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಕಳೆದ ವರ್ಷ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿದ್ದ ಅವರು ತಮ್ಮ ವಕೀಲರ ಮೂಲಕ ಹೈಕೋರ್ಟ್‍ಗೆ ಪ್ರಕರಣ ಸಂಬಂಧ ಜಾಮೀನು ಅರ್ಜಿ ಸಲ್ಲಿಸಿದ್ದರು.

ಕಳೆದ ನವೆಂಬರ್ 8ರಂದು ಫೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು, 14 ತಿಂಗಳ ಕಾರಾಗೃಹ ವಾಸದ ನಂತರ ಇಂದು ಬಿಡುಗಡೆಯಾಗಿದ್ದಾರೆ.

ಷರತ್ತುಬದ್ಧ ಜಾಮೀನಿನಲ್ಲಿ ತಿಳಿಸಿರುವಂತೆ ಚಿತ್ರದುರ್ಗ ಜಿಲ್ಲಾ ಪ್ರವೇಶ ನಿಷೇಧವಾಗಿರುವುದರಿಂದ ಮುರುಘಾ ಶ್ರೀಗಳು ಎಲ್ಲಿಗೆ ತೆರಳುತ್ತಾರೆಂಬುವುದು ತಿಳಿದು ಬಂದಿಲ್ಲ. ಬಿಡುಗಡೆಯಾಗುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಅವರನ್ನು ಸಮಾಧಾನಪಡಿಸಿ ಕಾರಿನಲ್ಲಿ ಕರೆದೊಯ್ದಿದ್ದಾರೆ.

ಯತೀಂದ್ರ ವಿಡಿಯೋ ಅಪಪ್ರಚಾರ: ಸಿಎಂ ಅಸಮಾಧಾನ

ಬೆಂಗಳೂರು,ನ,16- ಮಾಜಿ ಶಾಸಕರೂ ಆಗಿರುವ ತಮ್ಮ ಪುತ್ರ ಡಾ.ಯತೀಂದ್ರ ಅವರು ಫೋನ್‍ನಲ್ಲಿ ಮಾತನಾಡುವಾಗ ಸಿಎಸ್‍ಆರ್ ನಿಯಡಿ ಶಾಲಾ ಕಟ್ಟಡಗಳ ದುರಸ್ತಿಯ ಬಗ್ಗೆ ಚರ್ಚೆ ಮಾಡಿದ್ದಾರೆ. ಅದನ್ನು ತಿರುಚಿ ವರ್ಗಾವಣೆಯ ಪಟ್ಟಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತೀಂದ್ರ ಮಾತನಾಡಿರುವುದರಲ್ಲಿ ಎಲ್ಲಿಯೂ ವರ್ಗಾವಣೆಯ ಪ್ರಸ್ತಾಪವಾಗಿಲ್ಲ. ನನ್ನ ರಾಜಕೀಯ ಜೀವನದಲ್ಲಿ ದುಡ್ಡು ತೆಗೆದುಕೊಂಡು ಒಂದೇ ಒಂದು ವರ್ಗಾವಣೆ ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿಯಾಗುವುದಾಗಿ ಸವಾಲು ಹಾಕಿದರು.

ಬಂಧಿತ ಸಚಿವ ಸೆಂಥಿಲ್ ಬಾಲಾಜಿಗೆ ಆಂಜಿಯೋಗ್ರಾಮ್ ಮಾಡಲು ಸೂಚನೆ

ಯತೀಂದ್ರ ವರುಣಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಸಮಿತಿಯ ಸದಸ್ಯರ ಬಗ್ಗೆ ಚರ್ಚೆ ಮಾಡಲಾಯಿತು. ತಾವು ಆಯ್ಕೆಯಾಗಿರುವ ವರುಣಾ ಕ್ಷೇತ್ರವನ್ನು ನೋಡಿಕೊಳ್ಳಲು ಯತೀಂದ್ರ ಅವರಿಗೆ ಹೇಳಿದ್ದೇನೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‍ಆರ್)ಯಡಿ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ದುರಸ್ತಿ ಮಾಡಿಸಲಾಗುತ್ತಿದೆ. ಸಚಿವ ಎಚ್.ಸಿ.ಮಹದೇವಪ್ಪ ಈ ಪಟ್ಟಿ ನೀಡಿದ್ದಾರೆ. ಯತೀಂದ್ರ ಆ ಕುರಿತು ಚರ್ಚೆ ಮಾಡಿದರು ಎಂದು ಹೇಳಿದರು.

ಸಂಭಾಷಣೆ ವೇಳೆ ಎಲ್ಲಿಯೂ ವರ್ಗಾವಣೆ ಉಲ್ಲೇಖ ಇಲ್ಲ. ಆ ರೀತಿ ಹೇಳಿರುವ ವಿಡಿಯೋ ಇದ್ದರೆ ತೋರಿಸಿ. ನಾಲ್ಕೈದು ಹೆಸರುಗಳು ಎಂದರೆ ಅದು ವರ್ಗಾವಣೆಯ ಪಟ್ಟಿ ಅಲ್ಲ. ಶಾಲೆಗಳ ದುರಸ್ತಿಯ ಪಟ್ಟಿ ಎಂದು ಸಮರ್ಥಿಸಿಕೊಂಡರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯಕ್ಕಾಗಿ ಆರೋಪ ಮಾಡುತ್ತಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಯತೀಂದ್ರ ಮಾತನಾಡಿರುವುದರಲ್ಲಿ ಏನೋ ಇದೆ ಎಂದು ಭಾರೀ ಪ್ರಮಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.

ಸಿದ್ದರಾಮಯ್ಯಗೆ ಆತ್ಮಸಾಕ್ಷಿ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು : HDK

ಬೆಂಗಳೂರು, ನ.16- ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳಲ್ಲಿ ಬಹಿರಂಗವಾಗಿರುವ ಮುಖ್ಯಮಂತ್ರಿ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ವರ್ಗಾವಣೆ ದಂಧೆ ಆರೋಪಕ್ಕೆ ಈ ವಿಡಿಯೋಗಿಂತ ಮತ್ತೊಂದು ಸಾಕ್ಷಿ ಬೇಕೇ ಎಂದು ಪ್ರಶ್ನಿಸಿದರಲ್ಲದೆ, ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಪುತ್ರ ವಿಜಯೇಂದ್ರ ಅವರ ಮೇಲೆ ಶೇ. 20ರಷ್ಟು ಕಮಿಷನ್ ಆರೋಪವನ್ನು ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಮಾಡಿದ್ದರು. ದಾವಣಗೆರೆಯಲ್ಲಿ ಮಾಡಿದ್ದ ಈ ಆರೋಪಕ್ಕೆ ಯಾವ ಸಾಕ್ಷ್ಯವನ್ನು ಒದಗಿಸಿದ್ದರು ಎಂದು ಪ್ರಶ್ನಿಸಿದರು.

ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪೇಸಿಎಂ ಪೋಸ್ಟರ್ ಹಾಕಿದ್ದರು. ಅದಕ್ಕೆ ಯಾವ ದಾಖಲೆ ನೀಡಿದ್ದರು ಎಂದ ಅವರು, ಯತೀಂದ್ರ ಅವರು ಯಾರೊಂದಿಗೆ ಮಾತನಾಡಿದ್ದಾರೆ, ಎಂಬುದನ್ನು ಬಹಿರಂಗ ಪಡಿಸಲಿ. ದೂರವಾಣಿಯಲ್ಲಿ ಅಪ್ಪ ಎಂದು ಯಾರನ್ನು ಕರೆದರು, ದೂರವಾಣಿ ಮಾಡಿ ಯತೀಂದ್ರ ಅವರನ್ನು ಕೇಳಿದ್ದು, ಮುಖ್ಯಮಂತ್ರಿ ಅಲ್ಲವೆ? ಎಂದು ವಿಡಿಯೋದಲ್ಲಿದೆ ಎನ್ನಲಾದ ಮಾಹಿತಿಯನ್ನು ಪ್ರಸ್ತಾಪಿಸಿದರು.

ಪಂಚರಾಜ್ಯಗಳ ಚುನಾವಣೆ : ನಾಳೆ ಮಧ್ಯಪ್ರದೇಶದಲ್ಲಿ ಮತದಾನ

ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರು ಮಾಡಿದ ಆರೋಪದ ವಿಡಿಯೋವನ್ನು ಪ್ರದರ್ಶಿಸಿದ ಅವರು, ಮುಖ್ಯಮಂತ್ರಿಯಾದವರು ಪುತ್ರನನ್ನು ಕೇಳಿ ಆಡಳಿತ ನಡೆಸುವುದೇ, ವಿವೇಕಾನಂದ ಯಾರು? ಮಹದೇವ ಯಾರು ಎಂದು ಪ್ರಶ್ನಿಸಿದರು.

ಕಂಬದಿಂದ ವಿದ್ಯುತ್ ಕದಿಯುವ ದಾರಿದ್ರ್ಯ ನನಗೆ ಬಂದಿಲ್ಲ. ಆಚಾರ್ತುದಿಂದ ಉಂಟಾಗಿದ್ದ ತಪ್ಪಿಗೆ ವಿಷಾದ ವ್ಯಕ್ತಪಡಿಸಿದ್ದೇನೆ. ಆದರೂ ಜೆಡಿಎಸ್ ಕಚೇರಿಯ ಕಾಂಪೌಂಡ್‍ಗೆ ಆಕ್ಷೇಪಾರ್ಹ ಪೋಸ್ಟನ್ನು ಅಂಟಿಸಲಾಗಿದೆ ಎಂದರು. ವಿಜಯೇಂದ್ರ ಅವರನ್ನು ಅನಧಿಕೃತ ಸಿಎಂ ಎಂದು ಆರೋಪಿಸುತ್ತಿದ್ದ ನೀವು ಈಗ ಸೂಪರ್ ಸಿಎಂ ಯಾರು ಹೇಳಿ ಎಂದು ಪ್ರಶ್ನಿಸಿದರು.

ನಾಡಿನ ಜನತೆ ಒಳ್ಳೆಯ ರೀತಿಯಲ್ಲಿ ಅಧಿಕಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಲೂಟಿ ಮಾಡಲು ಅಲ್ಲ. ಯತೀಂದ್ರ ಅವರು ಶಾಲೆಗಳ ಸಿಎಸ್‍ಆರ್ ನಿ ಬಗ್ಗೆ ಮಾತನಾಡಿದ್ದಾರೆ. ವರ್ಗಾವಣೆ ಬಗ್ಗೆ ಅಲ್ಲ ಎನ್ನುವುದಾದರೆ ದಾಖಲೆಗಳನ್ನು ಜನರ ಮುಂದಿಡಿ. ಮೈಸೂರು ಜಿಲ್ಲೆಯ ಡಿಡಿಪಿಐಗೆ ಕಳುಹಿಸಿರುವ ಮಾಹಿತಿಯನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸ್ಥಾನ ಶಾಶ್ವತವಲ್ಲ. ಚುನಾವಣೆಗಾಗಿ ಕೆಲವರಿಂದ ಸಹಕಾರ ಪಡೆದಿದ್ದು, ನಾನು ಶೇ. 100ರಷ್ಟು ಶುದ್ಧನಲ್ಲ ಎಂಬುದನ್ನು ಒಪ್ಪಿಕೊಳ್ಳುತ್ತೇನೆ ಎಂದರು.

ತನಿಖೆಗೆ ಸಿದ್ಧ:
ನಮ್ಮ ಕುಟುಂಬದ ಆಸ್ತಿ ತನಿಖೆಗೆ ಈಗಲೂ ಸಿದ್ದ ಎಂದ ಅವರು, ದಾಸನಪುರ ಹೋಬಳಿಯಲ್ಲಿ ಮೂರುವರೆ ಎಕರೆ ಕೆರೆ ನುಂಗಿ ಹಾಕಿದವರು ಯಾರು ಎಂದು ಪ್ರಶ್ನಿಸಿದ ಅವರು, ನಮ್ಮ ಆಸ್ತಿಯ ಬಗ್ಗೆ ಆರೋಪ ಮಾಡಿದವರನ್ನೇ ಕೇಳಿ? ಸರ್ಕಾರದ ಆದೇಶವನ್ನು ಮಾರಾಟಕ್ಕೆ ಇಡಬೇಡಿ ಎಂದರು.

ಸಿದ್ದರಾಮಯ್ಯ ಅವರು ರಾಜಕೀಯ ಜೀವನದಲ್ಲಿ ಮಾಡಿರುವ ಯಾವ ಆರೋಪವನ್ನು ಸಾಬೀತುಪಡಿಸಿದ್ದಾರೆ ಎಂದು ಪ್ರಶ್ನಿಸಿದ ಅವರು, ನೈಸ್ ಸಂಸ್ಥೆಯ ಬಗ್ಗೆ ಸದನ ಸಮಿತಿ ನೀಡಿರುವ ವರದಿಯ ಶಿಫಾರಸ್ಸು ಏಕೆ ಅನುಷ್ಠಾನಗೊಳಿಸಿಲ್ಲ ಎಂದು ಪ್ರಶ್ನಿಸಿದರು.

ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಸುದೀರ್ಘ ಪೋಸ್ಟ್ ಮಾಡಿದ್ದ ಅವರು ವರ್ಗಾವಣೆ ವಿಚಾರ ಎನ್ನಲಾದ ವಿಡಿಯೋ ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.

ವಿಡಿಯೋ ಆದರಿಸಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಆರೋಪಗಳ ಸುರಿ ಮಳೆಗೈದು ವರ್ಗಾವಣೆ ದಂಧೆ ನಡೆಯುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ವಿಧಾನಪರಿಷತ್ ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ರಮೇಶ್ ಗೌಡ ಉಪಸ್ಥಿತರಿದ್ದರು.

ಡಿ.4 ರಿಂದ ಬೆಳಗಾವಿಯಲ್ಲಿ ಅಧಿವೇಶನ, ಗಲಾಟೆ ‘ಗ್ಯಾರಂಟಿ’

ಬೆಂಗಳೂರು, ನ.16-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಡಿ.4ರಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಂದು ಬೆಳಿಗ್ಗೆ 11ಗಂಟೆಗೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಅವೇಶನಗಳು ಸಮಾವೇಶಗೊಳಲಿವೆ.

ಅಂದಿನಿಂದ ಡಿ.15ರವರೆಗೆ ಹತ್ತು ದಿನಗಳ ಅಧಿವೇಶನ ನಡೆಸಲು ನಿಗದಿಪಡಿಸಲಾಗಿದೆ. ಈ ಸಂಬಂಧ ವಿಧಾನಸಭೆ ಸಚಿವಾಲಯ ಅಕೃತ ಪ್ರಕಟಣೆ ಹೊರಡಿಸಿದೆ. ಪ್ರತಿ ವರ್ಷದಂತೆ ಎರಡು ವಾರ ಕಾಲ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಾಗುತ್ತದೆ. ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿದ್ದಾರೆ. ಉಭಯ ಸಚಿವಾಲಯಗಳು ಅಧಿವೇಶನಕ್ಕೆ ಸಿದ್ಧತೆ ಆರಂಭಿಸಿವೆ.

16ನೇ ವಿಧಾನಸಭೆಯ ಎರಡನೇ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಸರ್ಕಾರದ ಗ್ಯಾರಂಟಿ ಯೋಜನೆಯ ಲೋಪ-ದೋಷಗಳು, ಬರಪರಿಸ್ಥಿತಿಯಿಂದ ಉಂಟಾಗಿರುವ ಸಮಸ್ಯೆಗಳು, ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡದಿರುವುದು ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗುತ್ತಿವೆ.

ಗುಂಡಿನ ಚಕಮಕಿ : ಕೊಡಗು ಜಿಲ್ಲೆಯ ಅರಣ್ಯ ವ್ಯಾಪ್ತಿಯಲ್ಲಿ ಹೈಅಲರ್ಟ್

ಹಾಗೆಯೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ತೀವ್ರ ಬರಪರಿಸ್ಥಿತಿ ಇದ್ದರೂ ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಸ್ಪಂಸುತ್ತಿಲ್ಲ ಎಂದು ಆರೋಪಿಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಕೂಡ ಸರ್ಕಾರವನ್ನು ಸಮರ್ಥಿಸಿಕೊಳ್ಳಲು ಸಿದ್ಧತೆ ನಡೆಸಿದೆ.

ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರು, ಗುಳೆ ಹೋಗದಂತೆ ಉದ್ಯೋಗ, ಜಾನುವಾರುಗಳ ಮೇವು, ವಿದ್ಯುತ್ ಅಭಾವ ಮೊದಲಾದ ಜ್ವಲಂತ ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರದ ವೇದಿಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.