Home Blog Page 1816

ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ : ವಿಚಾರಣೆಗೆ ದರ್ಶನ್ ಹಾಜರು

ಬೆಂಗಳೂರು,ನ.15- ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರು ಆರ್.ಆರ್. ನಗರ ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಹಾಜರಾದರು. ಅಮಿತಾ ಜಿಂದಾಲ್ ಎಂಬುವವರು ದರ್ಶನ್ ಅವರ ಮನೆ ಮುಂಭಾಗದ ಖಾಲಿ ಜಾಗದಲ್ಲಿ ಕಾರು ಪಾರ್ಕಿಂಗ್ ಮಾಡಿದ್ದಾಗ ಕಾರನ್ನು ತೆಗೆದುಕೊಳ್ಳುವ ವೇಳೆ ದರ್ಶನ್ ಅವರ ಸಾಕು ನಾಯಿ ಅವರ ಮೇಲೆ ದಾಳಿ ಮಾಡಿ ಕಚ್ಚಿತ್ತು.

ಈ ಬಗ್ಗೆ ಅಮಿತಾ ಅವರು ದೂರು ನೀಡಿದ್ದರು. ಈ ಸಂಬಂಧ ದರ್ಶನ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರೂ ಹಾಜರಾಗಲಿಲ್ಲ. 2ನೇ ಭಾರಿ ನೋಟಿಸ್ ಜಾರಿ ಮಾಡಿದ್ದರಿಂದ ಇಂದು ದರ್ಶನ್ ಅವರು ವಿಚಾರಣೆಗಾಗಿ ಠಾಣೆಗೆ ಹಾಜರಾಗಿ ತನಿಖಾಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಗೆದ್ದರೆ ಮಹಿಳೆಯರಿಗೆ ಉಚಿತ ಆಯೋಧ್ಯೆ ದರ್ಶನ

ರತ್ಲಾಮ್, ನ.14 (ಪಿಟಿಐ)- ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನು ಉಳಿಸಿಕೊಂಡರೆ ಮಹಿಳೆಯರು ಮತ್ತು ಹಿರಿಯ ನಾಗರಿಕರನ್ನು ಉಚಿತವಾಗಿ ರಾಮಮಂದಿರ ದರ್ಶನಕ್ಕಾಗಿ ಅಯೋಧ್ಯೆಗೆ ಕರೆದೊಯ್ಯಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಶುಕ್ರವಾರದ ವಿಧಾನಸಭಾ ಚುನಾವಣೆಗೆ ಮುನ್ನ ರತ್ಲಾಮ್ ಜಿಲ್ಲೆಯ ಜೌರಾ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಸಿಂಗ್, 1980 ರಲ್ಲಿ ಪಕ್ಷವು ತನ್ನ ಪ್ರಯಾಣವನ್ನು ಪ್ರಾರಂಭಿಸಿದಾಗ, ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಪಡೆದ ನಂತರ ಅಯೋಧ್ಯೆಯಲ್ಲಿ ರಾಮನ ಭವ್ಯ ಮಂದಿರ ನಿರ್ಮಾಣ ಮಾಡುವುದನ್ನು ವಿಶ್ವದ ಯಾವುದೇ ಶಕ್ತಿಯು ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಜ್ಞಾ ಮಾಡಿತ್ತು.

ಜನವರಿ 22, 2024 ರಂದು ದೇವಸ್ಥಾನದ ಪ್ರತಿಷ್ಠಾಪನೆ ಸಮಾರಂಭಕ್ಕೆ ನಿಮ್ಮನ್ನು ಆಹ್ವಾನಿಸಲು ನಾನು ಬಂದಿದ್ದೇನೆ ಎಂದು ಅವರು ಹೇಳಿದರು.ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡರೆ, ರಾಮಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ವೃದ್ಧರು ಮತ್ತು ಮಹಿಳೆಯರನ್ನು ಅಯೋಧ್ಯೆಗೆ ಕರೆದೊಯ್ಯಲು ಬಿಜೆಪಿ ನಿರ್ಧರಿಸಿದೆ ಎಂದು ಕೇಂದ್ರ ಸಚಿವರು ಹೇಳಿದರು.

ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದ ಹಂತಕನ ಬಂಧನ

ಬಿಜೆಪಿ ಸರ್ಕಾರ ಯಾವುದೇ ವ್ಯಕ್ತಿಯನ್ನು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ ಎಂದರು.ಒಂದು ಧರ್ಮಕ್ಕೆ ಸೇರಿದ ಸಹೋದರಿಯರ ಗಂಡಂದಿರು ಮೂರು ಬಾರಿ ತಲಾಖ್ ಹೇಳುವ ಮೂಲಕ ತಮ್ಮ ವೈವಾಹಿಕ ಸಂಬಂಧವನ್ನು ಮುರಿದುಕೊಳ್ಳುವುದನ್ನು ನಾವು ನೋಡಿದ್ದೇವೆ. ನಾವು ಮತಗಳ ಬಗ್ಗೆ ಕಾಳಜಿ ವಹಿಸಲಿಲ್ಲ ಮತ್ತು ತ್ವರಿತ ತ್ರಿವಳಿ ತಲಾಖ್ ಪದ್ಧತಿಯನ್ನು ಕೊನೆಗೊಳಿಸಲು ಕಾನೂನನ್ನು ಜಾರಿಗೊಳಿಸಿದ್ದೇವೆ ಎಂದು ಸಿಂಗ್ ಹೇಳಿದರು.

ಒಂದು ಕಾಲದಲ್ಲಿ ಗರೀಬಿ ಹಠಾವೋ (ಬಡತನ ನಿರ್ಮೂಲನೆ) ಘೋಷಣೆಯನ್ನು ನೀಡಿದ ಕಾಂಗ್ರೆಸ್ 50-55 ವರ್ಷಗಳ ಕಾಲ ಅಡೆತಡೆಯಿಲ್ಲದೆ ದೇಶವನ್ನು ಆಳಿದರೂ ಬಡತನವನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ನಾಯಕ ಹೇಳಿದರು. ಮಧ್ಯಪ್ರದೇಶದ ಹಿಂದಿನ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ರಾಜಕೀಯ ದುರುದ್ದೇಶದಿಂದ ಕೇಂದ್ರದ ಅನೇಕ ಯೋಜನೆಗಳನ್ನು ನಿಲ್ಲಿಸಿತು ಎಂದು ಅವರು ಆರೋಪಿಸಿದರು.

ಒಂದೇ ಕುಟುಂಬದ ನಾಲ್ವರನ್ನು ಕೊಂದಿದ್ದ ಹಂತಕನ ಬಂಧನ

ಬೆಂಗಳೂರು,ನ.15-ತಾಯಿ ಹಾಗೂ ಮೂವರು ಮಕ್ಕಳನ್ನು ಬರ್ಬರವಾಗಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ ಹಂತಕನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ ಪ್ರವೀಣ್ ಅರುಣ್ ಚೌಗಲೆ (37) ಬಂತ ಹಂತಕ. ಈತ ಮಂಗಳೂರು ಏರ್ ಪೋರ್ಟ್ ಉದ್ಯೋಗಿ.

ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಹಸೀನಾ(46),ಅತ್ತೆ ಹಾಜಿರಾ, ಇಬ್ಬರು ಹೆಣ್ಣುಮಕ್ಕಳಾದ ಅಫ್ನಾನ್ (23) ಅಜ್ಞಝ್ (21) ಮತ್ತು ಪುತ್ರ ಆಸೀಂ (12) ವಾಸವಾಗಿದ್ದರು. ಇವರ ಪತಿ ನೂರ್ ಮಹಮ್ಮದ್ ದುಬೈನಲ್ಲಿ ನೆಲೆಸಿದ್ದರೆ, ಇವರ ಮೊದಲ ಮಗ ಬೆಂಗಳೂರಿನಲ್ಲಿ ಏರ್ ಪೋರ್ಟ್ ಉದ್ಯೋಗಿ.

ನ.12ರಂದು ಬೆಳಗ್ಗೆ 8.30 ಸುಮಾರಿನಲ್ಲಿ ಹಂತಕ ಆಟೋದಲ್ಲಿ ಇವರ ಮನೆ ಬಳಿ ಡ್ರಾಪ್ ಪಡೆದುಕೊಂಡಿದ್ದಾನೆ. ನಂತರ ಮನೆಯೊಳಗೆ ಹೋಗಿದ್ದು ಅಡುಗೆ ಮನೆಯಲ್ಲಿದ್ದ ಹಸೀನಾಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಇಬ್ಬರೂ ಹೆಣ್ಣು ಮಕ್ಕಳನ್ನು ಸಾಯಿಸಿದ್ದಾನೆ. ಅಷ್ಟಕ್ಕೆ ಸುಮ್ಮನಾಗದ ಆರೋಪಿ ಹೊರಗೆ ಆಟವಾಡುತ್ತಿದ್ದ ಬಾಲಕ ಆಸೀಂ ಮನೆಯೊಳಗೆ ಬರುತ್ತಿದ್ದಂತೆ ಆತನಿಗೂ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಮನೆಯೊಳಗೆ ನಡೆಯುತ್ತಿದ್ದ ಕೊಲೆಯನ್ನು ತಪ್ಪಿಸಲು ತಡೆಯಲು ಬಂದ ಹಸೀನಾ ಅವರ ಅತ್ತೆ ಹಾಜಿರಾ ಅವರ ಮೇಲೂ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದಾಗ ಇವರ ಮನೆಯಿಂದ ಕಿರುಚಾಟ, ಕೂಗಾಟ ಕೇಳಿ ನೆರೆಮನೆಯ ಯುವತಿ ಇವರ ಮನೆ ಬಳಿ ಬಂದಾಗ ಆರೋಪಿ ಆಕೆಗೆ ಚಾಕು ತೋರಿಸಿ ಹೆದರಿಸಿ ಪರಾರಿಯಾಗಿದ್ದನು.

ಸುದ್ದಿ ತಿಳಿದು ಉಡುಪಿ ಜಿಲ್ಲೆಯ ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ನಾಲ್ವರ ಮೃತದೇಹಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ಎಫ್ಎಸ್ಎಲ್ ತಂಡ ಹಾಗೂ ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ

ಚಾಕುವಿನಿಂದ ಇರಿತಕ್ಕೊಳಗಾಗಿ ಗಾಯಗೊಂಡಿದ್ದ ಹಾಜಿರಾ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ದುಬೈನಿಂದ ಹಸೀನಾ ಅವರ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರು ಏರ್ ಪೋರ್ಟ್ ಉದ್ಯೋಗಿಯಾಗಿರುವ ಮೊದಲನೆಯ ಮಗ ಮನೆಗೆ ಬಂದು ಕಣ್ಣೀರು ಹಾಕಿದ್ದರು.

ಐದು ತಂಡ ರಚನೆ
ಆರೋಪಿ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಹಸೀನಾ ಮನೆಯ ಬಳಿ ವ್ಯಕ್ತಿಯೊಬ್ಬನಿಗೆ ಆಟೋ ಚಾಲಕರೊಬ್ಬರು ಡ್ರಾಪ್ ಕೊಟ್ಟಿರುವುದಾಗಿ ಹೇಳಿದ ಮಾಹಿತಿ ಮೇರೆಗೆ ತನಿಖೆ ಚುರುಕುಗೊಳಿಸಿ ಹಲವು ಮಾಹಿತಿಗಳನ್ನು ಕಲೆ ಹಾಕಿದರು.

ಆರೋಪಿಯು ಬೆಳಗಾವಿ ಜಿಲ್ಲೆ ರಾಯಭಾಗ ತಾಲ್ಲೂಕಿನ ಕುಡಚಿಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ತಾಂತ್ರಿಕ ಆಧಾರದಲ್ಲಿ ಪತ್ತೆ ಹಚ್ಚಿದ ಪೊಲೀಸ್ ತಂಡ ತಕ್ಷಣ ಅಲ್ಲಿಗೆ ತೆರಳಿ ಕಾರ್ಯಾಚರಣೆ ಕೈಗೊಂಡು ಸಂಬಂಕರ ಮನೆಯಲ್ಲಿ ಅವಿತುಕೊಂಡಿದ್ದ ಆರೋಪಿಯನ್ನು ಬಂಧಿಸಿ ಮಲ್ಪೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೇಮ ವೈಫಲ್ಯ ಶಂಕೆ
ಹಸೀನಾ ಅವರ ಎರಡನೇ ಮಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಹೋಸ್ಟರ್ ವೃತ್ತಿ ಮಾಡುತ್ತಿದ್ದು, ಅದೇ ವಿಮಾನ ನಿಲ್ದಾಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಕೆಲಸ ಮಾಡುತ್ತಿದ್ದಾಗ ಆಕೆಯ ಪರಿಚಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೇಮ ವೈಫಲ್ಯದಿಂದಾಗಿ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಆರೋಪಿ ಪ್ರವೀಣ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಪರ್ವ ಆರಂಭ

ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು. ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ.

ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಧಿಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ.

ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ.

ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.

ವಿಜಯೇಂದ್ರಗೆ ಬೆಂಗಾವಲಾಗಿ ಕೆಲಸ ಮಾಡುತ್ತೇನೆ : ಕಟೀಲ್

ಬೆಂಗಳೂರು,ನ.15- ಬಿಜೆಪಿ ಪಕ್ಷವನ್ನು ನಾಲ್ಕು ವರ್ಷ ಮೂರು ತಿಂಗಳ ಕಾಲ ಯಶಸ್ವಿಯಾಗಿ ನಿಭಾಯಿಸಿದ ಸಮಾಧಾನ ನನಗಿದೆಯೆಂದು ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನಾನು ಪಕ್ಷದ ಅಧ್ಯಕ್ಷನಾಗಿ ಸೇವೆ ಸಲ್ಲಿಸುವ ಸೌಭಾಗ್ಯ ಸಿಕ್ಕಿತ್ತು, ಇದನ್ನು ನಿಸ್ವಾರ್ಥವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆಂಬ ತೃಪ್ತಿಯಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ನಾವು ಸೇವಾ ಕಾರ್ಯದ ರೂಪದಲ್ಲಿ ಜನತೆಗೆ ಸ್ಪಂದಿಸುವಂತಹ ಕಾರ್ಯ ಮಾಡಿದ್ದೇವೆ, ಕೇಂದ್ರ ನಾಯಕರು ನಮಗೆ ನೀಡಿದ ನಿರ್ದೇಶನದಂತೆ ಈ ಮಹಾಮಾರಿ ವಿರುದ್ಧ ಹೋರಾಟದಲ್ಲಿ ನಮ್ಮ ಕಾರ್ಯಕರ್ತರು ಹಗಲಿರುಳು ದುಡಿದಿದ್ದಾರೆ ಎಂದರು.
ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರು ಮುಂದಿನ ದಿನಗಳಲ್ಲಿ ಎಲ್ಲರ ಜೊತೆಗೆ ಸೇರಿ ಯಶಸ್ವಿಯಾಗಿ ಪಕ್ಷವನ್ನು ಮುನ್ನಡೆಸುತ್ತಾರೆಂಬ ವಿಶ್ವಾಸ ಇದೆ. ಅವರ ಬೆಂಗಾವಲಾಗಿ ಅವರ ಜೊತೆ ಸದಾ ನಾವು ಕೆಲಸ ಮಾಡುತ್ತೇವೆ ಎಂದರು.

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ನನಗೆ ಸಹಕಾರ ನೀಡಿದ ಎಲ್ಲಾ ಹಿರಿಯರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ನನಗೆ ನೀಡಿದ ಸಹಕಾರವನ್ನು ವಿಜಯೇಂದ್ರ ಅವರಿಗೂ ನೀಡುತ್ತೀರೆಂಬ ವಿಶ್ವಾಸವಿದೆ. ಎಲ್ಲರೂ ಜೊತೆಗೂಡಿ ವಿಜಯೇಂದ್ರ ಅವರಿಗೆ ಶಕ್ತಿ ತುಂಬಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಗೆಲ್ಲೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ

ಹಾಸನ, ನ.15- ಕಳೆದ 12 ದಿನಗಳಿಂದ ಭಕ್ತರಿಗೆ ದರ್ಶನ ನೀಡಿದ್ದ ನಗರದ ಅದೇವತೆ ಹಾಸನಾಂಬಾ ದೇವಾಲದ ಗರ್ಭಗುಡಿಯ ಬಾಗಿಲನ್ನು ಇಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ದರ್ಶನೋತ್ಸವಕ್ಕೆ ತೆರೆ ಎಳೆಯಲಾಯಿತು.

ನ.2ರಿಂದ ಆರಂಭವಾಗಿದ್ದ ಹಾಸನಾಂಬ ದರ್ಶನೋತ್ಸವಕ್ಕೆ ಇಂದು ತೆರೆ ಬಿದ್ದಿದ್ದು, ಮತ್ತೆ ದರ್ಶನಕ್ಕೆ ಒಂದು ವರ್ಷ ಕಾಯಬೇಕಾಗಿದೆ. ಈ ಬಾರಿ 13. 5 ಲಕ್ಷ ಭಕ್ತರು ದರ್ಶನ ಪಡೆದು ಪುನೀತರಾಗಿರುವುದು ದಾಖಲೆಯಾಗಿದೆ. ನಿನ್ನೆ ಬೆಳಗ್ಗೆ 6 ಗಂಟೆವರೆಗೂ ವಿಶೇಷ ದರ್ಶನ ಸಾವಿರ ರೂ. ಹಾಗೂ 300 ರೂ. ಮತ್ತು ಲಾಡು ಪ್ರಸಾದ ಮಾರಾಟದಿಂದ 5,79,56,460 ರೂ. ಹಣ ಸಂಗ್ರಹವಾಗಿದ್ದು ದಾಖಲೆಯಾಗಿದೆ.

ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ

ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇವಿಗೆ ಅಲಂಕಾರ ಮಾಡಲಾಗಿದ್ದ ಆಭರಣಗಳನ್ನು ತೆಗೆದು ಪೂಜೆ ಸಲ್ಲಿಸಿ ದೀಪ ಹಚ್ಚಿ ಹೂ ನೈವೇದ್ಯವಿಟ್ಟು ವಿವಿಧ ಗಣ್ಯರು ಅಕಾರಿಗಳ ಸಮ್ಮುಖದಲ್ಲಿ ವಿಶ್ವರೂಪ ದರ್ಶನದ ಬಳಿಕ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಯಿತು.

ಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ಈ ಬಾರಿ ರಾಜ್ಯದ ವಿವಿಧ ಮೂಲೆಗಳಿಂದ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಪ್ರಾರಂಭದಲ್ಲಿ ಕೆಲ ಗೊಂದಲಗಳಾಗಿದ್ದು, ನೂಕುನುಗ್ಗುಲು ಉಂಟಾಗಿತ್ತು. ಭಕ್ತರನ್ನು ನಿಯಂತ್ರಿಸಲು ಪೊಲೀಸರು, ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಕೊನೆಗೆ ಜಿಲ್ಲಾಧಿಕಾರಿಗಳೇ ದೇವಾಲಯದ ಆವರಣದಲ್ಲಿ ನಿಂತು ಭಕ್ತರಿಗೆ ಮಾರ್ಗದರ್ಶನ ನೀಡುತ್ತ ದೇವಿಯ ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟಿದ್ದರು.

ಹಾಸನಾಂಬೆ ದರ್ಶನೋತ್ಸವಕ್ಕೆ ವಿದ್ಯುಕ್ತ ತೆರೆ: 14.20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ

ಹಾಸನಾಂಬ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಎಳೆಯಲಾಯಿತು. ಇಂದು ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಗರ್ಭಗುಡಿ ಬಾಗಿಲನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹಾಗೂ ಅಕಾರಿಗಳ ಸಮ್ಮುಖದಲ್ಲಿ ಮುಚ್ಚಲಾಯಿತು.ಹಾಸನಾಂಬಾ ಜಾತ್ರಾ ಮಹೋತ್ಸವದ ಕಡೇ ದಿನದ ಹಿನ್ನೆಲೆಯಲ್ಲಿ ಅರ್ಚಕರು ಗರ್ಭಗುಡಿ ಬಾಗಿಲು ಮುಚ್ಚುವ ಮುನ್ನ ದೇವರ ಮುಂದೆ ದೀಪ ಹಚ್ಚಿ, ಹೂವು, ನೈವೇದ್ಯ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಮುಂದಿನ ವರ್ಷ ಬಾಗಿಲು ತೆರೆಯುವವರೆಗೂ ಅರ್ಚಕರು ಇಟ್ಟ ಹೂವು ಬಾಡುವುದಿಲ್ಲ, ದೀಪ ಆರುವುದಿಲ್ಲ ಎಂಬ ಪ್ರತೀತಿ ಇದೆ.

ಗರ್ಭಗುಡಿ ಬಾಗಿಲನ್ನು ನ.2 ರಿಂದ 15ರ ವರೆಗೆ ತೆರೆದಿದ್ದು, 14 ದಿನಗಳಲ್ಲಿ 12 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದುವರೆಗೆ ಸುಮಾರು 14.20 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. 1000, 300ರೂ. ವಿಶೇಷ ಟಿಕೆಟï, ಲಾಡು ಮಾರಾಟದಿಂದ ದಾಖಲೆಯೆ 6 ಕೋಟಿಗೂ ಅಕ ಆದಾಯ ಬರಲಿದೆ ಎಂದು ಅಂದಾಜಿಸಲಾಗಿದ್ದು , ಹುಂಡಿ ಕಾಣಿಕೆಯಿಂದ ಹೆಚ್ಚು ಆದಾಯ ಬರುವ ನಿರೀಕ್ಷೆ ಇದೆ.

ಧಾರ್ಮಿಕ ವಿ-ವಿಧಾನಗಳೊಂದಿಗೆ ಹಾಸನಾಂಬ ದೇವಿ ಬಾಗಿಲು ಹಾಕಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನಾಂಬೆ ದರ್ಶನೋತ್ಸವ ಅದ್ಧೂರಿಯಾಗಿ ಮುಕ್ತಾಯಗೊಂಡಿದೆ. ಜಿಲ್ಲಾಡಳಿತ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಸಹಕಾರದಿಂದ ಯಶಸ್ವಿ ಕಂಡಿದೆ. 12 ದಿನಗಳ ಸಾರ್ವಜನಿಕ ದರ್ಶನದಲ್ಲಿ ಪ್ರತಿಯೊಬ್ಬ ಭಕ್ತರಿಗೂ ದರ್ಶನ ಪಡೆಯಲು ಉತ್ತಮ ರೀತಿಯ ಅವಕಾಶ ಕಲ್ಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.

ಮುಂದಿನ ಬಾರಿ 11 ದಿನ ಮಾತ್ರ ದರ್ಶನ: 2014 ಅಕ್ಟೋಬರ್ 23 ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದೇವಿಯ ದೇವಾಲಯ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 11 ದಿನ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿರುತ್ತದೆ.

ಹೂವಿನ ಹಾಸಿಗೆಯಲ್ಲ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾದಿ

ಬೆಂಗಳೂರು, ನ.15- ಹಲವರ ಅಪಸ್ವರದ ನಡುವೆಯೂ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದು ಅವರ ಪಾಲಿಗೆ ಹೂವಿನ ಹಾಸಿಗೆಯಲ್ಲ. ಬದಲಿಗೆ ಕೆಳ ಹೀನವಾಗಿರುವ ಪಕ್ಷಕ್ಕೆ ಹೊಸ ಹುರುಪು ನೀಡಿ, ಪಕ್ಷವನ್ನು ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ.

ಇದೀಗ ರಾಜ್ಯಾಧ್ಯಕ್ಷ ಸ್ಥಾನ ಜವಾಬ್ದಾರಿ ವಹಿಸಿಕೊಂಡಿರುವ ವಿಜಯೇಂದ್ರ ಮುಂದೆ ಸಾಲು ಸಾಲು ಸವಾಲುಗಳು ಇವೆ. ಅದರಲ್ಲೂ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪಕ್ಷ ಸಂಘಟನೆ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಲವು ಅಸ್ತ್ರಗಳೂ ಮುಂದಿದೆ.

ಜಾತಿ ಗಣತಿ ಬಿಜೆಪಿಯ ಮುಂದೆ ಇರುವ ಪ್ರಮುಖ ಅಸ್ತ್ರ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸುತ್ತಿದೆ. ಶಾಶ್ವತ ಹಿಂದುಳಿದ ಆಯೋಗ ಶೀಘ್ರದಲ್ಲಿ ವರದಿ ಸಲ್ಲಿಸುವುದಾಗಿ ತಿಳಿಸಿದೆ. ಆದರೆ ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ.

ಮಹಾರಾಷ್ಟ್ರ : ಮರಾಠ ಮೀಸಲಾತಿ ಹೋರಾಟಕ್ಕೆ ಮೊದಲ ಬಲಿ

ಅದರಲ್ಲೂ ಲಿಂಗಾಯತ ಸಮುದಾಯ ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿದೆ. ಈ ನಿಟ್ಟಿನಲ್ಲಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪುಸುವಲ್ಲಿ ವಿಜಯೇಂದ್ರಗೆ ಅವಕಾಶ ಇದೆ. ಜಾತಿಗಣತಿ ವೈಜ್ಞಾನಿಕವಾಗಿಲ್ಲ ಎಂದು ಅಭಿಪ್ರಾಯ ರೂಪಿಸುವ ಮೂಲಕ ಹೋರಾಟ ರೂಪಿಸಲು ಅವಕಾಶ ಇದೆ.

ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿದೆ. ವರ್ಗಾವಣೆ ದಂಧೆಯಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಆರೋಪಗಳನ್ನು ಮಾಡುತ್ತಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಆರೋಪಗಳು ಕೇಳಿಬಂದಿದೆ. ಈ ವಿಚಾರವಾಗಿ ಬಿಜೆಪಿಗಿಂತ ಹೆಚ್ಚಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದರು. ಸರ್ಕಾರದ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿದ್ದರು. ಆದರೆ ಬಿಜೆಪಿ ಸೈಲೆಂಟಾಗಿತ್ತು. ಇದೀಗ ವಿಜಯೇಂದ್ರ ಅವರಿಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಹೋರಾಟ ರೂಪಿಸಲು ಅವಕಾಶ ಇದೆ.

ಐದು ಗ್ಯಾರಂಟಿ ಘೋಷಣೆ ಮಾಡುವ ಮೂಲಕ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಲಾಭವನ್ನು ಪಡೆದುಕೊಂಡಿತ್ತು. ಇದೀಗ ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಜಾರಿ ಮಾಡಿರುವುದನ್ನು ಮುಂದಿಟ್ಟುಕೊಂಡು ವರ್ಚಸ್ಸು ಹೆಚ್ಚಿಸುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ. ಆದರೆ ಗ್ಯಾರಂಟಿ ಜಾರಿಯಲ್ಲಿ ಹಲವು ಎಡವಟ್ಟುಗಳು ಮಾಡಿದೆ. ಗೃಹಲಕ್ಷ್ಮೀ ಯೋಜನೆ ಜಾರಿಯಲ್ಲಿ ಸಮಸ್ಯೆಗಳು ಎದುರಾಗುತ್ತಿದೆ. ಇದನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಿಜಯೇಂದ್ರ ಹೋರಾಟದವನ್ನು ರೂಪಿಸಲು ಅವಕಾಶ ಇದೆ.

ರಾಜ್ಯದಲ್ಲಿ ಕೇವಲ ಗ್ಯಾರಂಟಿ ಯೋಜನೆಗಳ ಜಾರಿಗೆ ಆದ್ಯತೆ ನೀಡಲಾಗುತ್ತಿದೆ. ಆದರೆ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಎಂಬ ಆರೋಪ ಇದೆ. ಸರ್ಕಾರ ಅಕಾರಕ್ಕೆ ಬಂದು ಆರು ತಿಂಗಳಾದರೂ ಅಭಿವೃದ್ದಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಇಲಾಖಾವಾರು ಕೆಲಸಗಳು ನಡೆದಿಲ್ಲ ಎಂಬ ಆರೋಪಗಳು ಇವೆ.

ಈ ವಿಚಾರವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ರೂಪಿಸಲು ವಿಜಯೇಂದ್ರ ಮುಂದಾಗುತ್ತಾರಾ ಎಂಬುದು ಕೂಡ ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಸಾಕಷ್ಟು ಅಸ್ತ್ರಗಳು ವಿಜಯೇಂದ್ರ ಮುಂದಿದೆ. ವಿರೋಧ ಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಸರ್ಕಾರದ ವಿರುದ್ಧ ಹೇಗೆ ಹೋರಾಟ ರೂಪಿಸಿ ಜನಾಭಿಪ್ರಾಯ ರೂಪಿಸುತ್ತಾರೆ ಎಂಬುದನ್ನು ಕಾದುನೊಡಬೇಕಿದೆ.

ಪೋಸ್ಟರ್ ವಾರ್‌ಗೆ ನಾಂದಿಹಾಡುತ್ತಾ ‘ಕರೆಂಟ್ ಕಳ್ಳ’ ಎಂಬ ವಿವಾದಿತ ಪೋಸ್ಟರ್

ಬೆಂಗಳೂರು, ನ.15-ಜೆಡಿಎಸ್ ಕೇಂದ್ರ ಕಚೇರಿ ಜೆ.ಪಿ.ಭವನದ ಗೋಡೆಗೆ ಕರೆಂಟ್ ಕಳ್ಳ ಎಂಬ ವಿವಾದಿತ ಪೋಸ್ಟರ್ ಹಂಟಿಸಿರುವುದು ಕೆಲ ಕಾಲಗೊಂದಲಕ್ಕೆ ಕಾರಣವಾಗಿತ್ತು. ಈ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಪೋಸ್ಟರ್ ವಾರ್ ಸೃಷ್ಟಿಯಾಗುವ ಸಂಭವನಿಯತೆಯನ್ನು ಹೆಚ್ಚಿಸಿದೆ. ದೀಪಾವಳಿ ಹಬ್ಬದ ವಿದ್ಯುತ್ ಅಲಂಕಾರಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿಯವರ ಜೆ.ಪಿ.ನಗರದ ಮನೆಗೆ ಅಕ್ರಮ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿತ್ತು ಎಂಬ ಆರೋಪಗಳಿವೆ. ಈ ಕುರಿತಂತೆ ದೂರು ದಾಖಲಾಗಿದೆ.

ಕುಮಾರಸ್ವಾಮಿಯವರು ಖುದ್ದು ಆರೋಪವನ್ನು ಒಪ್ಪಿಕೊಂಡಿದ್ದು, ಮನೆಯ ದೀಪಾಲಂಕಾರಕ್ಕೆ ಖಾಸಗಿ ಡೆಕೋರೆಟರ್‍ಗೆ ವಹಿಸಲಾಗಿತ್ತು. ಆತ ವಿದ್ಯುತ್ ಕಂಬದಿಂದ ನೇರ ಸಂಪರ್ಕ ಕಲ್ಪಿಸಿದ್ದಾನೆ, ಪ್ರಕರಣ ತಮ್ಮ ಗಮನಕ್ಕೆ ಬಂದ ತಕ್ಷಣ ಸರಿ ಪಡಿಸಲಾಗಿದೆ. ಈ ಸಂಬಂಧಿಸಿದ ದಂಡ ಪಾವತಿಸಲು ತಾವು ಸಿದ್ಧ ಎಂದಿದ್ದರು. ಮುಂದುವರೆದು ಕಾಂಗ್ರೆಸ್ ಹಾಗೂ ಕುಮಾರಸ್ವಾಮಿ ಅವರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿದ್ದವು.

ವಿಜಯೇಂದ್ರ ಕೇವಲ ಬಿಎಸ್‍ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ..? : ಕಾಂಗ್ರೆಸ್ ಲೇವಡಿ

ಪ್ರಕರಣದ ಬೆನ್ನಲ್ಲೆ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿಯ ತಡೆಗೋಡೆಗೆ ನಿನ್ನೆ ರಾತ್ರಿ ಪೋಸ್ಟರ್ ಅಂಟಿಸಲಾಗಿದೆ. ಆಕ್ಷೇಪಾರ್ಹ ಪೋಸ್ಟರ್ ಜೊತೆಗೆ ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‍ವರೆಗೂ ಉಚಿತ ವಿದ್ಯುತ್‍ಸೌಲಭ್ಯ ಇದೆ. ಹೆಚ್ಚಿನ ವಿದ್ಯುತ್ ಕಳ್ಳತನ ಮಾಡಬೇಡಿ ಎಂದು ಮತ್ತೊಂದು ಪೋಸ್ಟರ್ ಅಂಟಿಸಲಾಗಿದೆ.

ಪೋಸ್ಟರ್ ಅಂಟಿಸಿರುವುದು ಗಮನಕ್ಕೆ ಬರುತ್ತಿದ್ದಂತೆ ಶೇಷಾದ್ರಿಪುರಂ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಅವುಗಳನ್ನು ತೆರವು ಮಾಡಿದ್ದಾರೆ. ತಡರಾತ್ರಿ ಈ ಪೋಸ್ಟರ್ ಅಂಟಿಸಿರುವ ಸಾಧ್ಯತೆ ಇದೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು, ಕೃತ್ಯ ಎಸಗಿದವರ ಪತ್ತೆಗೆ ಮುಂದಾಗಿದ್ದಾರೆ.

ಈ ಮೊದಲು ವಿಧಾನಸಭೆ ಚುನಾವಣೆಗೂ ಮುನ್ನಾ ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿದ್ದ ಪೇಸಿಎಂ ಪೋಸ್ಟರ್ ಭಾರಿ ಪರಿಣಾಮ ಬೀರಿತ್ತು. ಈಗ ಜೆಡಿಎಸ್ ನಾಯಕ ವಿರುದ್ಧವೂ ಅದೇ ರೀತಿಯ ಪೋಸ್ಟರ್ ವಾರ್ ಕಂಡು ಬಂದಿದೆ.

ವಿಜಯೇಂದ್ರ ಕೇವಲ ಬಿಎಸ್‍ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ..? : ಕಾಂಗ್ರೆಸ್ ಲೇವಡಿ

ಬೆಂಗಳೂರು,ನ.15- ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅತ್ತ ಬಿ.ವೈ.ವಿಜಯೆಂದ್ರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಲೇವಡಿ ಮಾಡಿರುವ ಕಾಂಗ್ರೆಸ್, ವಿಜಯೇಂದ್ರ ಕೇವಲ ಬಿಎಸ್‍ವೈ ಬಣಕ್ಕೆ ಮಾತ್ರ ಅಧ್ಯಕ್ಷರೇ ಎಂದು ಪ್ರಶ್ನಿಸಿದೆ.

ಬಿಜೆಪಿಯ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈವರೆಗೂ ನಳೀನ್ ಕುಮಾರ್ ಕಟೀಲ್ ಅವರ ಫೋಟೋವೇ ಉಳಿದಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. ಪೋಸ್ಟರ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ, ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಭಾವಚಿತ್ರಗಳು ಕಂಡು ಬಂದಿವೆ.

ಇದನ್ನು ಪೋಸ್ಟ್ ಮಾಡಿರುವ ಕಾಂಗ್ರೆಸ್, ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ.ಅದೇ ಸಂತೋಷ ಕೂಟದ ಭಾಗವಾಗಿರುವ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೆಂದ್ರರನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದಿದೆ.

ವಿಜಯೆಂದ್ರ ಅಧ್ಯಕ್ಷರಾಗಿ ನೇಮಕವಾಗಿ ಮೂರ್ನಾಲ್ಕು ದಿನ ಕಳೆದಾಗಿದೆ, ಪದಗ್ರಹಣವೂ ಆಗಿದೆ, ಆದರೆ ಇನ್ನೂ ಸಹ ಬಿಜೆಪಿ ಪಕ್ಷದ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ನಳಿನ್ ಕುಮಾರ್ ಕಟೀಲ್ ಕಂಗೊಳಿಸುತ್ತಿದ್ದಾರೆ. ಬಿಜೆಪಿ ಪಕ್ಷ ವಿಜಯೆಂದ್ರರನ್ನು ಒಪ್ಪಿಕೊಂಡಿಲ್ಲ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ? ವಿಜಯೆಂದ್ರ ಬಿಎಸ್‍ವೈ ಬಣಕ್ಕೆ ಮಾತ್ರ ಅಧ್ಯಕ್ಷರೆ ಎಂದು ಲೇವಡಿ ಮಾಡಲಾಗಿದೆ.

ಕಾರ್ಯಕರ್ತರ ಹರ್ಷೋದ್ಘಾರಗಳ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಪದಗ್ರಹಣ

ಬೆಂಗಳೂರು,ನ.15- ಕಳೆಗುಂದಿದ್ದ ಪಕ್ಷಕ್ಕೆ ಹೊಸ ಚೈತನ್ಯ ನೀಡುವ ದೃಢಸಂಕಲ್ಪ ಹಾಗೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಿಸುವ ಪ್ರತಿಜ್ಞೆಯೊಂದಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು.

ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿಂದು ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಹರ್ಷೋದ್ಘಾರಗಳ ನಡುವೆ ಪದಗ್ರಹಣ ಮಾಡಿದರು.ನಿರ್ಗಮಿತ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ನೂತನ ಅಧ್ಯಕ್ಷರಿಗೆ ಪಕ್ಷದ ಬಾವುಟ ನೀಡಿ ವಿದ್ಯುಕ್ತವಾಗಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರ ಸಮ್ಮುಖದಲ್ಲಿ ಅಕಾರ ಸ್ವೀಕಾರ ಮಾಡಿದ್ದು, ರಾಜ್ಯದಲ್ಲಿ ಇಂದಿನಿಂದ ವಿಜಯೇಂದ್ರ ಪರ್ವ ಆರಂಭವಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಪುಟಿದೇಳಲು ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕಲ್ಪಿಸಿದೆ.

ರಶ್ಮಿಕಾ ಮಂದಣ್ಣ ಡೀಪ್‍ಫೇಕ್ ಪ್ರಕರಣದಲ್ಲಿ ಬಿಹಾರದ ಯುವಕನ ವಿಚಾರಣೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಬಲ ಸಮುದಾಯ ವೀರಶೈವ ಲಿಂಗಾಯುತ ಸಮುದಾಯ ಹಿಂದೆ ಸರಿದಿದ್ದರಿಂದ ಪಕ್ಷಕ್ಕೆ ಹೀನಾಯ ಸೋಲುನ್ನುಂಟಾಗಿತ್ತು. ಮತ್ತೆ ಮತದಾರರನ್ನು ತನ್ನತ್ತ ಸೆಳೆಯಲು ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮಣೆ ಹಾಕಿತ್ತು. ಹಲವು ಹಿರಿಯ ನಾಯಕರ ಅಸಮಾಧಾನದೊಂದಿಗೆ ಇದೀಗ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿ ಅಕಾರ ಸ್ವೀಕರಿಸಿದ್ದು, 2024ರ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮಹತ್ವದ ಹೊಣೆಗಾರಿಕೆ ಬಿ.ವೈ.ವಿ ಅವರ ಮೇಲಿದೆ.

ಮುಖಂಡರಾದ ವಿ. ಸೋಮಣ್ಣ, ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರು ಬಹಿರಂಗವಾಗಿ ಪಕ್ಷದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿಲ್ಲವಾದರೂ ಆಂತರಿಕವಾಗಿ ಅಸಮಾಧಾನಗೊಂಡಿದ್ದು, ಮುಂದಿನ ದಿನಗಳಲ್ಲಿ ಸಹಕಾರ ನೀಡಲಿದ್ದಾರೆಯೇ ಎಂಬುವುದು ಯಕ್ಷಪಪ್ರಶ್ನೆಯಾಗಿದೆ.

ಇಂದು ಬೆಳಿಗ್ಗೆ ಡಾಲರ್ಸ್ ಕಾಲೋನಿ ಧವಳಗಿರಿ ನಿವಾಸದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಯಡಿಯೂರಪ್ಪ ಅವರ ಆಶೀರ್ವಾದ ಪಡೆದು ಪಕ್ಷದ ಕಚೇರಿಗೆ ವಿಜಯೇಂದ್ರ ಅವರು ಆಗಮಿಸಿದರು.ಈ ವೇಳೆ ಹಿರಿಯ ನಾಯಕರು, ಕಾರ್ಯಕರ್ತರು ಹೂಗುಚ್ಛ ನೀಡಿ ಅಭಿನಂದನೆಗಳ ಸುರಿಮಳೆ ಗೈದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಸದಾನಂದಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬಿ.ವೈ. ರಾಘವೇಂದ್ರ, ಜಿಎಸ್ ಬಸವರಾಜ್, ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಆರ್. ಆಶೋಕ್, ಈಶ್ವರಪ್ಪ , ಕಾರಜೋಳ ಸೇರಿದಂತೆ ಹಾಲಿ ಶಾಸಕರು, ನಾಯಕರು, ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.