Friday, November 7, 2025
Home Blog Page 1818

ಉಡುಪಿಯಲ್ಲಿ ತಾಯಿ-ಮಕ್ಕಳನ್ನು ಕೊಂದಿದ್ದು ಬೋಳುತಲೆಯ ವ್ಯಕ್ತಿಯೇ..?

ಬೆಂಗಳೂರು,ನ.13- ಮುಖಕ್ಕೆ ಮಾಸ್ಕ್ ಹಾಕಿಕೊಂಡಿದ್ದ ಸುಮಾರು 45 ವರ್ಷ ವಯಸ್ಸಿನ ಬೋಳು ತಲೆಯ ವ್ಯಕ್ತಿಯೇ ಉಡುಪಿಯ ನೇಜಾರಿನ ತೃಪ್ತಿನಗರದಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಹತ್ಯೆ ಮಾಡಿರುವ ಆರೋಪಿ ಎಂದು ಶಂಕಿಸಲಾಗಿದೆ. ದುಬೈನಲ್ಲಿ ಉದ್ಯೋಗದಲ್ಲಿರುವ ನೂರ್ ಮಹಮ್ಮದ್ ಅವರ ಪತ್ನಿ ಹಸೀನಾ ಮತ್ತು ಅವರ ಮೂವರು ಮಕ್ಕಳ ಹತ್ಯೆ ಮತ್ತು ವೃದ್ಧೆ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ ಜಿಲ್ಲಾ ಪೊಲೀಸರು ಆರೋಪಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ತಾಯಿ ಮತ್ತು ಅವರ ಮೂವರು ಮಕ್ಕಳನ್ನು ಅಮಾನವೀಯವಾಗಿ ಕೊಲೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಈಗಾಗಲೇ 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಈಗಾಗಲೇ ಆರೋಪಿ ಬಗ್ಗೆ ಕೆಲ ಮಾಹಿತಿಗಳು ದೊರೆತಿದ್ದು, ಪೊಲೀಸರ ಅನುಮಾನ 45 ವರ್ಷದ ಬೋಳು ತಲೆಯ ವ್ಯಕ್ತಿಯ ಮೇಲೆ ಬಿದ್ದಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಿದ್ದಾರೆ. ಕೊಲೆಯಾದ ದಿನ ಬೋಳು ತಲೆಯ ವ್ಯಕ್ತಿಯನ್ನು ಸಂತೆಕಟ್ಟೆಯಿಂದ ತೃಪ್ತಿನಗರಕ್ಕೆ ಡ್ರಾಪ್ ಮಾಡಿದೆ ಆತ ಬಿಳಿ ಅಂಗಿ ಧರಿಸಿದ್ದ ಬೆಳಿಗ್ಗೆ 8.30 ರಲ್ಲಿ ಆತನನ್ನು ಡ್ರಾಪ್ ಮಾಡಿದ್ದೇ ಆದರೆ, ಅದೇ ವ್ಯಕ್ತಿ ಒಂದು ಗಂಟೆಯ ನಂತರ ಸಂತೆಕಟ್ಟೆಯಲ್ಲಿ ಕಾಣಿಸಿಕೊಂಡಿದ್ದ ಎಂದು ಸ್ಥಳೀಯ ಆಟೋ ಚಾಲಕ ನೀಡಿರುವ ಮಾಹಿತಿ ಹಂತಕನ ಬಂಧನಕ್ಕೆ ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ.

ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ

ಆಟೋ ಚಾಲಕನ ಮಾಹಿತಿ ಮೇರೆಗೆ ಪರಾರಿಯಾಗಿರುವ ಬೋಳು ತಲೆ ವ್ಯಕ್ತಿಯ ಬಂಧನಕ್ಕಾಗಿ ಶೋಧ ಮುಂದುವರೆಸಲಾಗಿದೆ. ಆತ ಸಂತೆಕಟ್ಟೆಯಿಂದ ಯಾವ ಕಡೆ ತೆರಳಿದ. ಇಲ್ಲವೇ ಆತನ ನಿವಾಸ ಅಕ್ಕಪಕ್ಕದಲ್ಲೇ ಇರಬಹುದೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳಗ್ಗೆ ಮನೆಗೆ ನುಗ್ಗಿದ ಹಂತಕ ಮೊದಲು ಅಡುಗೆ ಮನೆಯಲ್ಲಿದ್ದ ಹಸೀನಾ ಅವರನ್ನು ಕೊಲೆ ಮಾಡಿದ, ಆಕೆಯನ್ನು ಬಿಡಿಸಿಕೊಳ್ಳಲು ಬಂದ ಮಕ್ಕಳನ್ನು ನಿರ್ದಯಿಯಾಗಿ ಕೊಂದು ಹಾಕಿ ನಂತರ ವೃದ್ಧೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ನೋಡಿದರೆ ಆತನಿಗೆ ಹಸೀನಾ ಕುಟುಂಬದ ಮೇಲೆ ಎಷ್ಟು ದ್ವೇಷ ಇತ್ತು ಎನ್ನುವುದಕ್ಕೆ ಉದಾಹರಣೆಯಾಗಿದೆ. ಅದರಲ್ಲೂ ಆತ ಕೃತ್ಯದ ನಂತರ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗದಿರುವುದನ್ನು ನೋಡಿದರೆ ವೈಯಕ್ತಿಕ ಕಾರಣದಿಂದಾಗಿ ಆತ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ ಎನ್ನುತ್ತಾರೆ ಪೊಲೀಸರು.

ಈ ಮಧ್ಯೆ ದುಬೈನಲ್ಲಿ ಉದ್ಯೋಗದಲ್ಲಿದ್ದ ಪತಿ ನೂರ್ ಮಹಮ್ಮದ್ ಹಾಗೂ ಬೆಂಗಳೂರಿನ ಏರ್‍ಪೆಪೊರ್ಟ್‍ನಲ್ಲಿ ಸೇವೆ ಸಲ್ಲಿಸುತ್ತಿರುವ ಪುತ್ರ ನೇಜಾರಿಗೆ ಆಗಮಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಅವುಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸ್ಥಳಕ್ಕೆ ಎಫ್‍ಎಸ್‍ಎಲ್ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಹಂತಕ ಬಿಟ್ಟು ಹೋಗಿರಬಹುದಾದ ಸಾಕ್ಷ್ಯ ಸಂಗ್ರಹದಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ, ಹೊತ್ತಿ ಉರಿದ ನಾಲ್ಕು ಅಂತಸ್ತಿನ ಕಟ್ಟಡ

ಬೆಂಗಳೂರು, ನ.13- ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಫರ್ನಿಚರ್ ಶೋರೂಂ ಸುಟ್ಟು ಕರಕಲಾಗಿರುವ ಘಟನೆ ಹೊರಮಾವು ಬಳಿಯ ಔಟರ್ ರಿಂಗ್ ರೋಡ್‍ನಲ್ಲಿ ತಡರಾತ್ರಿ ನಡೆದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿನಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೆಲ ಹಾಗೂ ಮೊದಲನೇ ಮಹಡಿಯಲ್ಲಿದ್ದ ಪಿಠೋಪಕರಣದ ಅಂಗಡಿಗೆ ಬೆಂಕಿಯ ಜ್ವಾಲೆ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಪಿಠೋಪಕರಣಗಳು ಹಾಗೂ ದಾಖಲೆಗಳು ಸುಟ್ಟು ಕರಕಲಾಗಿವೆ.

ಶಂಕರ್ ಎಂಬುವವರಿಗೆ ಸೇರಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಎರಡನೇ ಅಂತಸ್ತಿನಲ್ಲಿ ಕೋಚಿಂಗ್ ಸೆಂಟರ್ ಹಾಗೂ 3 ಮತ್ತು 4ನೇ ಅಂತಸ್ತಿನಲ್ಲಿ ಐಟಿ ಕಂಪನಿ ಇದ್ದು, ಅಲ್ಲಿಗೂ ಸಹ ಬೆಂಕಿ ಆವರಿಸಿ ಅಲ್ಲಿದ್ದ ಪಿಠೋಪಕರಣಗಳು, ದಾಖಲೆಗಳು ಸುಟ್ಟು ಬೆಂಕಿಗಾಹುತಿಯಾಗಿದೆ.

ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ

ಕೂಡಲೇ ಎಚ್ಚೆತ್ತ ಸೆಕ್ಯೂರಿಟಿ ಗಾರ್ಡ್‍ಗಳು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಐದು ವಾಹನಗಳಲ್ಲಿ ಬಂದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಭದ್ರತಾ ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ. ಶೋರೂಂನಲ್ಲಿ ಮರದ ಪಿಠೋಪಕರಣಗಳು ಹೆಚ್ಚಾಗಿದ್ದರಿಂದ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಉಳಿದ ಮೇಲಂತಸ್ತಿನ ಕಟ್ಟಡಗಳಿಗೂ ಬೆಂಕಿ ವ್ಯಾಪಿಸುವಷ್ಟರಲ್ಲಿ ಸಿಬ್ಬಂದಿಗಳು ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದು ಸಂಭವಿಸಬಹುದಾದ ಬಾರಿ ಅನಾಹುತವನ್ನು ತಪ್ಪಿಸಿದ್ದಾರೆ.

ಫರ್ನಿಚರ್ ಶೋರೂಂನಲ್ಲಿ ಶಾರ್ಕ್‍ಸಕ್ಯೂರ್ಟ್‍ನಿಂದಾಗಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ನಗರದ ವೀರಭದ್ರ ನಗರದಲ್ಲಿ ಬಸ್ ಗ್ಯಾರೇಜ್‍ನಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ 18 ಖಾಸಗಿ ಬಸ್‍ಗಳು ಸುಟ್ಟು ಕರಕಲಾಗಿದ್ದವು.

ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದ್ದು ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಕಾನ್ ಸಿಟಿಯಲ್ಲಿ ಮೇಲಿಂದ ಮೇಲೆ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇದ್ದು, ಕಾರ್ಖಾನೆ, ಶೋರೂಂ, ಕಚೇರಿ, ಅಂಗಡಿ ಮಾಲೀಕರು ಎಚ್ಚರದಿಂದ ಇರಬೇಕಾಗುವುದರ ಜೊತೆಗೆ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವುದರಿಂದ ಹೆಚ್ಚಿನ ಅನಾಹುತವನ್ನು ನಿಯಂತ್ರಿಸಬಹುದಾಗಿದೆಯೆಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮನವಿ ಮಾಡಿದ್ದಾರೆ.

ದೇವೇಗೌಡರು, ಎಸ್.ಎಂ.ಕೃಷ್ಣ ಹಾಗೂ ಬೊಮ್ಮಾಯಿ ಭೇಟಿ ಮಾಡಿದ ವಿಜಯೇಂದ್ರ

ಬೆಂಗಳೂರು,ನ.13-ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹಲವು ಪ್ರಮುಖ ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಬಸವರಾಜ ಬೊಮ್ಮಾಯಿ ಅವರುಗಳನ್ನು ಭೇಟಿ ಮಾಡಿದರು.

ಮೊದಲು ಬೆಳಗ್ಗೆ ಆರ್.ಟಿ.ನಗರದಲ್ಲಿರುವ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ತೆರಳಿದ ವಿಜಯೇಂದ್ರ ಆರೋಗ್ಯದ ವಿಚಾರಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಬಂದ ಅವರನ್ನು ಬೊಮ್ಮಾಯಿ ಆತ್ಮೀಯವಾಗಿ ಬರಮಾಡಿಕೊಂಡು ಕೆಲಕಾಲ ಉಭಯ ಕುಶಲೋಪರಿ ವಿಚಾರಿಸಿದರು. ಇತ್ತೀಚೆಗೆ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಇದರ ಜೊತೆಗೆ ಅಧ್ಯಕ್ಷರಾದ ಬಿವೈವಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪಕ್ಷದ ಸಾರಥ್ಯ ವಹಿಸಿರುವ ತಮಗೆ ಎಲ್ಲ ರೀತಿಯಿಂದಲೂ ಮಾರ್ಗದರ್ಶನ, ಸಹಕಾರ ನೀಡವುದಾಗಿ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ. ಆರ್‍ಟಿನಗರದಿಂದ ನೇರವಾಗಿ ವಿಜಯೇಂದ್ರ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.

ಮೊದಲ ಬಾರಿಗೆ ತಮ್ಮ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಹಾಸನ ಲೋಕಸಭಾ ಸದಸ್ಯರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ತಮ್ಮಣ್ಣ ಮತ್ತಿತರರು ಬರಮಾಡಿಕೊಂಡರು.

ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ

ವಿಜಯೇಂದ್ರ ಅವರಿಗೆ ದೇವೇಗೌಡರು ಶಾಲು ಹೊದಿಸಿ ಗಂಧದ ಹಾರ ತೊಡಿಸಿ ಶುಭ ಕೋರಿದರು. ನಂತರ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿಕೊಟ್ಟ ವಿಜಯೇಂದ್ರ, ಅವರಿಂದಲೂ ಆಶೀರ್ವಾದ ಪಡೆದುಕೊಂಡರು.

ಪಕ್ಷದ ಸಂಘಟನೆ ವಿಷಯದಲ್ಲಿ ತಮ್ಮನ್ನು ಯಾವಾಗಲಾದರೂ ಭೇಟಿ ಮಾಡಿದರೂ ಅಗತ್ಯ ಸಲಹೆ, ಮಾರ್ಗದರ್ಶನ ಮಾಡುವುದಾಗಿ ಎಸ್.ಎಂ.ಕೃಷ್ಣ ಅವರು ಆಶ್ವಾಸನೆ ನೀಡಿದ್ದಾರೆ. ಬಳಿಕ ಸಂಜೆ ವಿಜಯೇಂದ್ರ ಬಿಜೆಪಿ ಹಿರಿಯ ನಾಯಕ ಆರ್.ಅಶೋಕ್ ಅವರನ್ನು ಭೇಟಿ ಮಾಡಲಿದ್ದಾರೆ.

“ಶ್ರೀಲಂಕಾ ಸೋಲಿಗೆ ಅಮಿತ್ ಷಾ ಮಗ ಜೈ ಶಾ ಕಾರಣ”

ನವದೆಹಲಿ,ನ.13- ಶ್ರೀಲಂಕಾ ಕ್ರಿಕೆಟ್‍ನ ಇಂದಿನ ದುಸ್ಥಿತಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪುತ್ರ ಹಾಗೂ ಬಿಸಿಸಿಐನ ಕಾರ್ಯದರ್ಶಿ ಜೈಶಾ ಕಾರಣ ಎಂದು ಮಾಜಿ ನಾಯಕ ಅರ್ಜುನ ರಣತುಂಗ ಗಂಭೀರ ಆರೋಪ ಮಾಡಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಜೈಶಾ ಸಂಪರ್ಕ ಇಟ್ಟುಕೊಂಡಿದ್ದಾರೆ. ಇದನ್ನು ನಾನು ಸುಖಾಸುಮ್ಮನೆ ಹೇಳುತ್ತಿಲ್ಲ. ಇಂದಿನ ಶ್ರೀಲಂಕಾದ ಕ್ರಿಕೆಟ್ ದುಸ್ಥಿತಿಗೆ ಜೈಶಾ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ಶ್ರೀಲಂಕಾ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು ಮುನ್ನಡೆಸುತ್ತಿರುವುದು ಜೈಶಾ. ಅವರು ಹೇಳಿದಂತೆ ಎಲ್ಲವೂ ನಡೆಯುತ್ತಿದೆ. ಹೀಗಾಗಿಯೇ ನಮ್ಮ ತಂಡ ವಿಶ್ವಕಪ್ ಕ್ರಿಕೆಟ್‍ನಲ್ಲಿ ಸೆಮಿಫೈನಲ್‍ನನ್ನೂ ಪ್ರವೇಶ ಮಾಡದೆ ಲೀಗ್ ಹಂತದಲ್ಲೇ ಹೊರ ಬೀಳಲು ಇದೇ ಪ್ರಮುಖ ಕಾರಣ ಎಂದು ಶ್ರೀಲಂಕಾ ತಂಡದ ಮಾಜಿ ನಾಯಕರಾಗಿರುವ ಅರ್ಜುನ ರಣತುಂಗ ದೂರಿದ್ದಾರೆ.

ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ

ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್‍ಎಲ್‍ಸಿ) ಅಧಿಕಾರಿಗಳು ಮತ್ತು ಜಯ್ ಶಾ ನಡುವಿನ ಸಂಪರ್ಕದಿಂದಾಗಿ ಬಿಸಿಸಿಐಗೆ ಎಸ್‍ಎಲ್‍ಸಿಯನ್ನು ನಿಯಂತ್ರಿಸಬಹುದು ಎಂಬ ಅಭಿಪ್ರಾಯ ಮೂಡಿವಂತೆ ಮಾಡಿದೆ ಎಂದಿದ್ದಾರೆ. ಜಯ್ ಶಾ ಅವರ ಒತ್ತಡ ಶ್ರೀಲಂಕಾ ಕ್ರಿಕೆಟನ್ನು ಹಾಳುಮಾಡುತ್ತಿದೆ ಎಂದಿರುವ ಅವರು, ಭಾರತದ ಗೃಹ ಸಚಿವರಾಗಿರುವ ಅಮಿತ್ ಶಾ ಅವರು ಜಯ್ ಶಾ ತಂದೆಯಾಗಿರುವ ಕಾರಣ ಇಷ್ಟು ಪ್ರಾಬಲ್ಯ ಸಾಧಿಸಲು ಕಾರಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಯ್ ಶಾ ಅವರೇ ಶ್ರೀಲಂಕಾ ಕ್ರಿಕೆಟನ್ನು ಮುನ್ನಡೆಸುತ್ತಿದ್ದಾರೆ. ಜಯ್ ಶಾ ಒತ್ತಡದ ಕಾರಣದಿಂದಾಗಿಯೇ ಶ್ರೀಲಂಕಾ ಕ್ರಿಕೆಟ್ ಹಳ್ಳ ಹಿಡಿದಿದೆ. ಭಾರತದ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಎನ್ನುವ ಒಂದೇ ಕಾರಣಕ್ಕೆ ಜಯ್ ಶಾ ಇಷ್ಟು ಬಲಶಾಲಿಯಾಗಿದ್ದಾರೆ ಎಂದಿದ್ದಾರೆ. ಲಂಕಾ ಮಂಡಳಿಯನ್ನು ಅಮಾನತು ಮಾಡಿದ ಐಸಿಸಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಸರ್ಕಾರ ತನ್ನ ಹಸ್ತಕ್ಷೇಪ ಮಾಡುತ್ತಿದೆ ಎಂಬ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಇತ್ತೀಚೆಗೆ ಮಂಡಳಿಯನ್ನೇ ಅಮನತುಗೊಳಿಸಿದೆ. ಇದು ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ಹೀನಾಯ ಪ್ರದರ್ಶನ ನೀಡಿದ ಶ್ರೀಲಂಕಾ ಕ್ರಿಕೆಟ್‍ಗೆ ಮತ್ತೊಂದು ದೊಡ್ಡ ಆಘಾತ ನೀಡಿದಂತಾಗಿದೆ.

ಈ ವಿಶ್ವಕಪ್‍ನಲ್ಲಿ ಶ್ರೀಲಂಕಾ ಆಡಿದ 9 ಪಂದ್ಯಗಳಲ್ಲಿ ಕೇವಲ 2ರಲ್ಲಿ ಮಾತ್ರ ಗೆಲುವು ಸಾಸಿದೆ. ಅಫ್ಘಾನಿಸ್ತಾನ ಹಾಗೂ ನೆದರ್ಲೆಂಡ್ಸ್ ವಿರುದ್ಧ ಮಾತ್ರವೇ ಲಂಕಾ ಗೆಲುವು ಸಾಸಿತ್ತು. ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ 9ನೇ ಸ್ಥಾನಿಯಾಗಿ ವಿಶ್ವಕಪ್ ಟೂರ್ನಿಯನ್ನು ಅಂತ್ಯಗೊಳಿಸಿದೆ. ಕೇವಲ ನೆದರ್ಲೆಂಡ್ಸ್ ತಂಡ ಮಾತ್ರವೇ ಲಂಕಾ ತಂಡಕ್ಕಿಳತ ಕೆಳಗಿದೆ. ಈ ಕಾರಣದಿಂದಾಗಿ ಶ್ರೀಲಂಕಾ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾಗವಹಿಸುವ ಅರ್ಹತೆ ಕಳೆದುಕೊಂಡಂತಾಗಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಲು ಅಗ್ರ 8ರ ಒಳಗೆ ಸ್ಥಾನ ಪಡೆಯುವುದು ಅಗತ್ಯವಾಗಿತ್ತು.

ದೀಪಾವಳಿ ‘ಗಿಫ್ಟ್’ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಸೆ

ಬೆಂಗಳೂರು, ನ.13- ದೀಪಾವಳಿಗೆ ನಿಗಮ ಮಂಡಳಿಗಳ ನೇಮಕಾತಿಯ ಉಡುಗೊರೆ ಸಿಗಲಿದೆ ಎಂದು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಾಶೆಯಾಗಿದ್ದು, ಮತ್ತೆ ಹೊಸ ವರ್ಷದ ಬಂಪರ್ ಆಫರ್‍ನ ಆಸೆ ತೋರಿಸಲಾಗುತ್ತಿದೆ.ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದೆ, ಸಚಿವರು ದರ್ಬಾರ್ ನಡೆಸುತ್ತಿದ್ದಾರೆ. ಹಿರಿಯ ಶಾಸಕರು ಕೈ ಕೈ ಹಿಸುಕಿಕೊಳ್ಳುತ್ತಿದ್ದಾರೆ.

ಕಿರಿಯ ಶಾಸಕರು ನಿಗಮ ಮಂಡಳಿಗಳಲ್ಲಿಯಾದರೂ ಅವಕಾಶ ಸಿಗಬಹುದು ಎಂದು ಕಾದು ಕುಳಿತಿದ್ದಾರೆ. ಅತ್ತ ಪಕ್ಷವನ್ನು ಅಧಿಕಾರಕ್ಕೆ ತರಲು ತನು, ಮನ, ಧನಪೂರ್ವಕವಾಗಿ ಯೋಧರಂತೆ ಶ್ರಮಿಸಿದ ಕಾರ್ಯಕರ್ತರು ಯಾರೇ ಅಧಿಕಾರದಲ್ಲಿದ್ದರೂ ನಮ್ಮ ಹಣೆಯ ಬರಹ ಇಷ್ಟೆ ಎಂದು ಸಿನಿಕತನಕ್ಕೆ ಜಾರಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಕಿರುಕೂಳಗಳಿಗೆ ಎದೆ ಕೊಟ್ಟು ಹೋರಾಟ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದಲ್ಲಿ ಅನಾಥ ಪ್ರಜ್ಞೆಯಿಂದ ನರಳುತ್ತಿದ್ದಾರೆ ಎಂಬ ಅಸಮಧಾನಗಳು ಕೇಳಿ ಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಕಾರ್ಯಕರ್ತರೇ ಮೊದಲು, ಅವರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಪ್ರತಿ ಕಾರ್ಯಕ್ರಮದಲ್ಲೂ ಒತ್ತಿ ಹೇಳುತ್ತಿದ್ದಾರೆ. ಆದರೆ ಅವರ ಮಾತುಗಳು ಹೇಳಿಕೆಗಳಿಗಷ್ಟೆ ಸೀಮಿತವಾಗಿವೆ. ಮೂಗಿಗೆ ತುಪ್ಪ ಸವರಿ ಮಾಧ್ಯಮಗಳಲ್ಲಿ ದೊಡ್ಡ ದೊಡ್ಡದಾಗಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದೆ. ಪಕ್ಷ ನಿಷ್ಠರಾದ ಡಿ.ಕೆ.ಶಿವಕುಮಾರ್ ಅವರ ಮಾತುಗಳನ್ನು ಕೇಳಿದರೆ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಾಳು ಬಂಗಾರವಾಯಿತು ಎಂದು ಖುಷಿ ಪಡಬೇಕು, ಆದರೆ ಆ ಖುಷಿ ಕಾರ್ಯಕರ್ತರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂಬ ಅಸಹನೆಗಳು ಸಾಮಾನ್ಯವಾಗಿದೆ.

ಸಚಿವರಂತೂ ತಮ್ಮನ್ನು ತಾವು ರಾಜ ಮಹಾರಾಜರು ಎಂದುಕೊಂಡಿದ್ದಾರೆ. ಅವರ ಸುತ್ತಮುತ್ತಾ ಇರುವ ಸಿಬ್ಬಂದಿಗಳು, ಅಧಿಕಾರಿಗಳು, ಗನ್ ಮ್ಯಾನ್‍ಗಳದೇ ದರ್ಬಾರ್ ಆಗಿದೆ. ಒಂದಿಬ್ಬರು ಸಚಿವರನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಮಂತ್ರಿಗಳ ಕಚೇರಿಗಳಲ್ಲಿ ಮಧ್ಯವರ್ತಿಗಳು, ಅಧಿಕಾರಿಗಳದೇ ದರ್ಬಾರ್ ಆಗಿದೆ.

ಸಾಮಾನ್ಯ ಕಾರ್ಯಕರ್ತರ ಪಾಡು ಹೇಳ ತೀರದಾಗಿದೆ. ಬ್ಲಾಕ್, ಜಿಲ್ಲಾಧ್ಯಕ್ಷರ ಮಾತಿಗೂ ಸಚಿವರ ಕಚೇರಿಗಳಲ್ಲಿ ಬೆಲೆ ಇಲ್ಲವಾಗಿದೆ. ವೈಯಕ್ತಿಕ ಕೆಲಸಗಳಿಗೆ ಅಗತ್ಯ ಬೆಲೆಯನ್ನು ಸಂದಾಯ ಮಾಡಲೇಬೇಕು, ಇನ್ನೂ ಕೆಲ ಸಚಿವರು ಸಾರ್ವಜನಿಕ ಸಮಸ್ಯೆಗಳು ಹಾಗೂ ಕೆಲಸಗಳಿಗೂ ಕೈ ಬಾಯಿ ನೋಡುತ್ತಿರುತ್ತಾರೆ. ಅಧಿಕಾರಿಗಳು ಬರಿಗೈನಲ್ಲೇ ಬರುತ್ತಿರಾ ಎಂದು ನೇರವಾಗಿ ಮಾತನಾಡುತ್ತಿದ್ದಾರೆ ಎಂಬ ಆಕ್ಷೇಪಗಳಿವೆ.

ಪ್ರತಿಯೊಬ್ಬ ಸಚಿವರ ಮನೆಯ ಮುಂದೆಯೂ ನೂರೈವತ್ತರಿಂದ 300 ಮಂದಿ ಮಂದಿ ಠಳಾಯಿಸಿರುತ್ತಾರೆ. ಅವರಲ್ಲಿ ಶೇ.50ರಷ್ಟು ಮಂದಿ ಮಧ್ಯವರ್ತಿಗಳಿದ್ದರೆ, ಶೇ.40ರಷ್ಟು ಅಧಿಕಾರಿಗಳು, ಉಳಿದ ಶೇ.10ರಷ್ಟು ಕಾರ್ಯಕರ್ತರು.

ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ

ಮಧ್ಯವರ್ತಿಗಳಲ್ಲಿ ಹಿಂದಿನ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದವರ ಪ್ರಮಾಣವೇ ಹೆಚ್ಚು ಕಾಣುತ್ತಿದೆ. ಠಾಕುಠೀಕಾಗಿ ಬಟ್ಟೆ ಧರಿಸಿ ತಿರುಗಾಡುವ ಪಿಆರ್ ಏಜೆನ್ಸಿಗಳ ಪ್ರತಿನಿಧಿಗಳು ಕಡ್ಡಾಯವಾಗಿ ಕಾಣಸಿಗುತ್ತಾರೆ. ಸಚಿವರ ಭೇಟಿಗೆ ಮೊದಲ ಆದತೆ ಲಾಭ ಮಾಡಿಕೊಡುವವರಿಗೆ ಸಿಗುತ್ತಿದೆ. ಸಮಯ ಉಳಿದರೆ ಕಾರ್ಯಕರ್ತರ ಮನವಿಗಳನ್ನು ಸಚಿವರು ಕಸಿದುಕೊಂಡು ಕಾರು ಏರುತ್ತಾರೆ ಎಂದು ಹೇಳಲಾಗುತ್ತಿದೆ.

2013ರಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಾಗಲೂ ನಿಗಮ ಮಂಡಳಿಗಳ ನೇಮಕಾತಿಗೆ ಒಂದುವರೆ ವರ್ಷ ತಡ ಮಾಡಲಾಗಿತ್ತು. ಪ್ರಸ್ತುತ ಸರ್ಕಾರದಲ್ಲೂ ಅದೇ ನಡೆಯಬಹುದೇನೋ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡುತ್ತಿದೆ. ಆಡಳಿತ ವೆಚ್ಚ ತಗ್ಗಿಸುವ ನೆಪವೊಡ್ಡಿ ನೇಮಕಾತಿಯನ್ನು ಮುಂದೂಡಲಾಗುತ್ತಿದೆ. ಆದರೆ ಮತ್ತೊಂದೆಡೆ ಸಚಿವರು ಹೊಸ ಕಾರ್ ಖರೀದಿ, ಮನೆ, ಕಚೇರಿಗಳ ನವೀಕರಣಕ್ಕೆ ಕೋಟ್ಯಂತರ ರೂಪಾಯಿಗಳ ಖರ್ಚು ಮಾಡಲಾಗುತ್ತಿದೆ. ಸರ್ಕಾರಿ ಕಾರ್ಯಕ್ರಮಗಳ ಆಚರಣೆಯನ್ನು ಪಿಆರ್ ಕಂಪೆನಿಗಳಿಗೆ ವಹಿಸಿ ಒಂದಕ್ಕೆ ಐದು ಪಟ್ಟು ಬಿಲ್ ಏರಿಸಿ ವೆಚ್ಚ ಮಾಡಲಾಗುತ್ತಿದೆ.

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ನೀಡಲು ಆಡಳಿತಾತ್ಮಕ ವೆಚ್ಚ ಎಂದು ನೆಪ ಹೇಳುತ್ತಾರೆ ಎಂದು ಕಾರ್ಯಕರ್ತರರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಬಾರಿಯೂ ಶಾಸಕರಿಗೆ ಆದ್ಯತೆ ನೀಡುವುದಾಗಿ ಹೇಳಲಾಗುತ್ತಿದೆ. ಹಾಗಿದ್ದರೆ ಕಾರ್ಯಕರ್ತರು ಮಾತ್ರ ದುಡಿಯಲಿಕ್ಕೆ ಮಾತ್ರ ಇರುವುದಾ ಎಂದು ಇತ್ತೀಚೆಗೆ ರಹಸ್ಯೆ ಸಭೆ ನಡೆಸಿದ ಕೆಲ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಹೀಗೆ ಆದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಗ್ಗರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗಿದೆ.

ಈ ಮೊದಲು ದೀಪಾವಳಿ ವೇಳೆಗೆ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಹೇಳಲಾಗಿತ್ತು, ಅದು ಮುಂದೂಡಿಕೆಯಾಗಿದ್ದು ಹೊಸ ವರ್ಷಕ್ಕೆ ಅವಕಾಶ ಸಿಗಲಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲ ಪಂಚರಾಜ್ಯಗಳ ಚುನಾವಣಾ ಉಸ್ತುವಾರಿಯಲ್ಲಿದ್ದು ಅವು ಮುಗಿದ ಬಳಿಕ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 4 ರಿಂದ ಬೆಳಗಾವಿ ಅಧಿವೇಶನ ನಡೆಯಲಿದೆ. ಅದು ಮುಗಿದ ಬಳಿಕ ನಿಗಮ ಮಂಡಳಿಗಳ ನೇಮಕಾತಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ಗಣೇಶ್ ಹಬ್ಬ, ದೀಪಾವಳಿ, ಹೊಸ ವರ್ಷ, ಸಂಕ್ರಾಂತಿ ಎಂದು ನಿರೀಕ್ಷಿಸುವುದೇ ನಮ್ಮ ಹಣೆಯ ಬರಹ ಎಂದು ಕಾರ್ಯಕರ್ತರು ಹಲಬುತ್ತಿದ್ದಾರೆ. ಸಂಕ್ರಾಂತಿ ಬಳಿ ಲೋಕಸಭೆ ಚುನಾವಣೆ ತಯಾರಿಗಳು ಎಂದು ನಾಯಕರು ಬ್ಯೂಸಿಯಾಗುತ್ತಾರೆ. ಅಲ್ಲಿಗೆ ಮತ್ತೆ ಒಂದು ವರ್ಷ ಕಾರ್ಯಕರ್ತರಿಗೆ ಅರ್ಧ ಚಂದ್ರ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗುತ್ತಿದೆ.

ದೀಪಾವಳಿ ಮೊದಲ ದಿನವೇ 26 ಮಂದಿ ಕಣ್ಣಿಗೆ ಹಾನಿ

ಬೆಂಗಳೂರು,ನ.13- ಎಷ್ಟೇ ಎಚ್ಚರಿಕೆ ನೀಡಿದರೂ ದೀಪಾವಳಿ ಹಬ್ಬದ ದಿನದ ಅನಾಹುತಗಳನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ದೀಪಾವಳಿ ಆರಂಭ ದಿನವಾದ ನಿನ್ನೆ ಒಂದೇ ದಿನ ನಗರದಲ್ಲಿ 26 ಕ್ಕೂ ಹೆಚ್ಚು ಪಟಾಕಿ ಸಿಡಿತ ಪ್ರಕರಣಗಳು ದಾಖಲಾಗಿವೆ.

ನಾರಾಯಣ ನೇತ್ರಾಲಯದಲ್ಲಿ 22 ಪ್ರಕರಣ ದಾಖಲು ಹಾಗೂ ಮಿಂಟೋ ಆಸ್ಪತ್ರೆಯಲ್ಲಿ 4 ಪ್ರಕರಣ ದಾಖಲಾಗಿರುವುದು ಕಂಡು ಬಂದಿದೆ. ನಾರಾಯಣ ನೇತ್ರಾಲಯದ 22 ಪ್ರಕರಣಗಳಲ್ಲಿ 10 ಮಂದಿಗೆ ಮೇಜರ್ ಸಮಸ್ಯೆ ಆಗಿದ್ದರೆ 12 ಜನರಿಗೆ ಮೈನರ್ ಇಂಜುರಿ ಆಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಮುದ್ರದಾಳದಿಂದ ತೈಲ ತೆಗೆಯಲು ಮುಂದಾದ ಒಎನ್‍ಜಿಸಿ

4 ಮಕ್ಕಳು ಸೇರಿದಂತೆ 22 ವಯಸ್ಕರಿಗೆ ಪಟಾಕಿ ಸಿಡಿತದಿಂದ ಕಣ್ಣಿಗೆ ಹಾನಿಯಾಗಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳಿದುಬಂದಿದೆ. ಇನ್ನು ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 4 ಪ್ರಕರಣ ದಾಖಲಾಗಿದ್ದು, ಇಬ್ಬರಿಗೆ ಮೇಜರ್ ಇಂಜುರಿ , ಇಬ್ಬರಿಗೆ ಮೈನರ್ ಇಂಜುರಿಯಾಗಿರುವ ಬಗ್ಗೆ ಮಿಂಟೋ ವೈದ್ಯರು ಮಾಹಿತಿ ನೀಡಿದ್ದಾರೆ.

ಶುಕ್ರ, ಮಂಗಳನತ್ತ ಇಸ್ರೋ ಚಿತ್ತ

ಬೆಂಗಳೂರು,ನ.13- ಸೂರ್ಯ, ಚಂದ್ರ ಶಿಕಾರಿ ನಂತರ ಇಸ್ರೋ ಇದೀಗ ಶುಕ್ರ ಮತ್ತು ಮಂಗಳ ಗ್ರಹಗಳ ಮೇಲೆ ಕಣ್ಣಿಟ್ಟಿದೆ. ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭೂಮಿಯ ಗ್ರಹಗಳ ನೆರೆಹೊರೆಯವರ ಮೇಲೆ ತನ್ನ ದೃಷ್ಟಿಯನ್ನು ಇರಿಸಿದೆ ಮತ್ತು ಐದು ವರ್ಷಗಳಲ್ಲಿ ಮಂಗಳ ಮತ್ತು ಶುಕ್ರನಲ್ಲಿ ದೇಶದ ಉಪಸ್ಥಿತಿಯನ್ನು ಗುರುತಿಸುವ ನಿರೀಕ್ಷೆ ಇರಿಸಿಕೊಂಡಿದೆ ಎಂದು ಬೆಂಗಳೂರಿನ ಯುಆರ್ ರಾವ್ ಉಪಗ್ರಹ ಕೇಂದ್ರದ ನಿರ್ದೇಶಕ ಡಾ ಎಂ ಶಂಕರನ್ ತಿಳಿಸಿದ್ದಾರೆ.

ಡಾ ಶಂಕರನ್ ಅವರು ಕಕ್ಷೆಯಲ್ಲಿರುವ ಡಜನ್‍ಗಟ್ಟಲೆ ಭಾರತೀಯ ಉಪಗ್ರಹಗಳ ಹಿಂದೆ ಪವರ್‍ಹೌಸ ಘಟಕದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಕೆಲವು ಸವಾಲುಗಳನ್ನು ಗುರುತಿಸಿದ್ದಾರೆ, ಆದರೆ ಮಿಷನ್ ಪರಿಕಲ್ಪನೆಗಳ ಕುರಿತು ಆಂತರಿಕ ಮಾತುಕತೆಗಳು ಈಗಾಗಲೇ ನಡೆಯುತ್ತಿವೆ ಎಂದು ಅವರು ಬಹಿರಂಗಪಡಿಸಿದರು.

ಸಮುದ್ರದಾಳದಿಂದ ತೈಲ ತೆಗೆಯಲು ಮುಂದಾದ ಒಎನ್‍ಜಿಸಿ

ಪ್ರತಿಯೊಂದೂ ತನ್ನದೇ ಆದ ಸವಾಲುಗಳೊಂದಿಗೆ ಬರುತ್ತದೆ, ಉದಾಹರಣೆಗೆ ಮಂಗಳನ ವಾತಾವರಣಕ್ಕೆ ಪ್ರವೇಶಿಸಿದಾಗ ಬಾಹ್ಯಾಕಾಶ ನೌಕೆಯು ಹೆಚ್ಚು ಬಿಸಿಯಾಗುವುದು ಮತ್ತು ಪ್ರತಿ ಕಾರ್ಯಾಚರಣೆಗೆ ಸೂಕ್ತವಾದ ಉಡಾವಣಾ ವಿಂಡೋವನ್ನು ಕಂಡುಹಿಡಿಯುವುದು. ಮಂಗಳ, ಶುಕ್ರ ಅಥವಾ ಅದಕ್ಕೂ ಮೀರಿದ ಕಾರ್ಯಾಚರಣೆಗಳಿಗೆ ಅಗತ್ಯವಾದ ಭಾರವಾದ ಪೇಲೋಡ್‍ಗಳನ್ನು – ಹೆಚ್ಚು ಇಂಧನ, ಹೆಚ್ಚಿನ ಉಪಕರಣಗಳು, ಇತ್ಯಾದಿಗಳನ್ನು ಸಾಗಿಸುವ ಸಾಮಥ್ರ್ಯವನ್ನು ಹೊಂದಿರುವ ಉಡಾವಣಾ ವಾಹನಗಳನ್ನು ಅಭಿವೃದ್ಧಿಪಡಿಸುವಂತಹ ಸಾಮಾನ್ಯ ಲಾಜಿಸ್ಟಿಕಲ್ ಸವಾಲುಗಳಿವೆ ಎಂದಿದ್ದಾರೆ.

ಕಳೆದ ಎರಡು ವರ್ಷಗಳಿಂದ… ನಾವು ಮಂಗಳ ಗ್ರಹದಲ್ಲಿ ಇಳಿಯಲು ಮಿಷನ್ ಕಾನಿಗರೇಶನ್‍ಗಳನ್ನು ಅಧ್ಯಯನ ಮಾಡುತ್ತಿದ್ದೇವೆ. ಎರಡು ವಿಷಯಗಳು ನಮ್ಮನ್ನು ತಡೆಹಿಡಿಯುತ್ತಿವೆ. ಒಂದು ಚಂದ್ರಯಾನ -2 ರ ವಿಫಲ ಲ್ಯಾಂಡಿಂಗ್, ಇದು ಲ್ಯಾಂಡಿಂಗ್‍ಗೆ ಅಗತ್ಯವಾದ ಸಂವೇದಕಗಳ ಮೇಲಿನ ನಮ್ಮ ವಿಶ್ವಾಸವನ್ನು ನಿಧಾನಗೊಳಿಸಿತು.

ಸಂವೇದಕಗಳು ಉತ್ತಮವಾಗಿ ಕಾರ್ಯನಿರ್ವಹಿಸಲಿಲ್ಲ, ಆದರೆ ನಮ್ಮ ಅಂತಿಮ ಗುರಿಯನ್ನು ನಾವು ಸಾಸಲು ಸಾಧ್ಯವಾಗದ ಕಾರಣ ಇವುಗಳು ಸಮರ್ಪಕವಾಗಿವೆಯೇ ಎಂದು ನಮಗೆ ಖಚಿತವಾಗಿರಲಿಲ್ಲ. ಈಗ ನಮಗೆ ಏನು ಮಾಡಬಹುದೆಂದು ತಿಳಿದಿದೆ, ನಾವು ಮುಂದುವರಿಯಬಹುದಾಗಿದೆ ಎಂದು ಡಾ ಶಂಕರನ್ ವಿವರಿಸಿದರು.

ನಮಗೆ ಈಗ ಒಂದು ಸಾಧ್ಯತೆಯಿದೆ ಎಂದು ನಾನು ಭಾವಿಸುತ್ತೇನೆ . ಎರಡು-ಮೂರು ವರ್ಷಗಳಲ್ಲಿ ಸುಮಾರು 20-30 ಶೇಕಡಾ ಸಾಮಥ್ರ್ಯದ ಹೆಚ್ಚಳದೊಂದಿಗೆ ನಾವು ಮಂಗಳ ಲ್ಯಾಂಡರ್ ಮಿಷನ್‍ಗಾಗಿ ಯೋಜನೆಯನ್ನು ರೂಪಿಸಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆಂಬುಲೆನ್ಸ್ ನಲ್ಲಿ ಜಾಲಿ ರೈಡ್ ಹೊರಟಿದ್ದವರಿಗೆ ದಂಡ

ಚಿಕ್ಕಮಗಳೂರು, ನ.13- ಆಂಬುಲೆನ್ಸ್ ಇರುವುದು ತುರ್ತು ಸಂದರ್ಭದಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ವೇಗವಾಗಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸಕ್ಕೆ ಆದ್ರೆ ಇಲ್ಲಿ ಓರ್ವ ಚಾಲಕ ತನ್ನ ಆರು ಮಂದಿ ಗೆಳೆಯರನ್ನು ಆಂಬುಲೆನ್ಸ್ ನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳ , ಉಡುಪಿ ದೇವಸ್ಥಾನಕ್ಕೆ ಟ್ರಿಪ್ ಹೊರಟಿದ್ರು. ಆದ್ರೆ ಕೊಟ್ಟಿಗೆಹಾರ ಆಗಿ ಉಜಿರೆ ಬರುತ್ತಿದ್ದಂತೆ ಬೆಳ್ತಂಗಡಿ ಸಂಚಾರಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಬೆಂಗಳೂರಿನಿಂದ ಕೊಟ್ಟಿಗೆಹಾರ ಮಾರ್ಗವಾಗಿ ಚಾರ್ಮಾಡಿ ಘಾಟ್ ಮೂಲಕ ಉಜಿರೆ ಕಡೆ ಹೋಗುವಾಗ ಕೊಟ್ಟಿಗೆಹಾರದಲ್ಲಿ ರಸ್ತೆ ಉದ್ದಕ್ಕೂ ಕೇಕೆ ಹಾಕುತ್ತಾ ಹೋಗುತ್ತಿದ್ದು ಇದನ್ನು ಗಮನಿಸಿದ ಸ್ಥಳೀಯರು ಬೆಳ್ತಂಗಡಿ ಸಂಚಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಂಬುಲೆನ್ಸ್‍ನ್ನು ತಡೆದು ವಿಚಾರಣೆ ಮಾಡಿದಾಗ ಗೆಳೆಯರು ಪ್ರವಾಸ ಬಂದಿರುವುದು ತಿಳಿದಿದೆ.

ಕಮಲ್‍ನಾಥ್ ನಮ್ಮವರಲ್ಲ, ಹೊರಗಿನವರು : ಶಿವರಾಜ್‍ಸಿಂಗ್ ಚೌಹಾಣ್

ಆಂಬುಲೆನ್ಸ್ ನಲ್ಲಿ ಒಟ್ಟು ಏಳು ಜನ ಬರುತ್ತಿರುವ ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅರ್ಜುನ್ ಅವರು, ತಕ್ಷಣ ತಮ್ಮ ಠಾಣೆಯ ಸಿಬ್ಬಂದಿ ಸುನಿಲ್‍ನನ್ನು ಉಜಿರೆ ಬೀಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಮಾಹಿತಿ ನೀಡಿ ವಾಹನ ನಿಲ್ಲಿಸಿ ಠಾಣೆಗೆ ತರಲು ಸೂಚಿಸಿದ್ದಾರೆ ಅದರಂತೆ ಆಂಬುಲೆನ್ಸ್ ಠಾಣೆಗೆ ತಂದು ವಿಚಾರಿಸಿದಾಗ ಆಂಬುಲೆನ್ಸ್ ನಲ್ಲಿ ಗೆಳೆಯರ ಜೊತೆ ದೇವಸ್ಥಾನ ಟ್ರಿಪ್ ಬಗ್ಗೆ ಹೇಳಿದ್ದಾರೆ. ಸಂಚಾರಿ ಪೊಲೀಸರು ಚಾಲಕನಿಗೆ 4,500 ದಂಡ ಹಾಕಿದ್ದಾರೆ.

ದೀಪಾವಳಿ ಪೂಜೆ ವೇಳೆ ಮೀನುಗಾರರ ದೋಣಿಗಳು ಬೆಂಕಿಗಾಹುತಿ

ಉಡುಪಿ, ನ.13- ದೀಪಾವಳಿ ಪೂಜೆ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಬೋಟುಗಳು ಸುಟ್ಟು ಕರಕಲಾಗಿರುವ ಘಟನೆ ಬೈಂದೂರಿನ ಗಂಗೊಳ್ಳಿಯಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಬೋಟ್ ಮಾಲೀಕರು ಪೂಜೆಯಲ್ಲಿ ಸಂಭ್ರಮದಲ್ಲಿದ್ದರು. ಮುಂಜಾನೆಯಿಂದಲೇ ಖುಷಿ ಖುಷಿಯಲ್ಲಿ ತಮ್ಮ ಬೋಟುಗಳು ಹಾಗೂ ಮೀನುಗಾರಿಕೆಗೆ ಬಳಸುವ ಯಂತ್ರಗಳು ಹಾಗೂ ವಸ್ತುಗಳಿಗೆ ಪೂಜೆ ಸಲ್ಲಿಸುತ್ತಿದ್ದರು.

ಈ ವೇಳೆ ಹಾರಿದ ಪಟಾಕಿ ಕಿಡಿ ಲಂಗರು ಹಾಕಿದ್ದ ಬೋಟುಗಳಿಗೆ ತಾಗಿ ಬೆಂಕಿ ಹತ್ತಿಕೊಂಡು ಉರಿದಿದೆ.
ಬೋಟ್‍ನ ಇಂಜಿನ್‍ಗಳಿಗೆ ಬೆಂಕಿ ಕಿಡಿ ತಗುಲಿ ನೋಡನೋಡುತ್ತಿದ್ದಂತೆ ಏಳು ಬೋಟುಗಳು ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ.

ಆಗ್ರಾ ಹೋಟೆಲ್‍ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ತಹಬದಿಗೆ ತಂದು ಅಕ್ಕಪಕ್ಕದ ಇತರ ಬೋಟುಗಳಿಗೆ ಹಬ್ಬುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಕಿ ಅವಘಡ ಮೀನುಗಾರರ ದೀಪಾವಳಿ ಸಂಭ್ರಮದಲ್ಲಿವನ್ನು ಕಸಿದುಕೊಂಡಿದೆ.

ವಿಜಯೇಂದ್ರ ಆಯ್ಕೆ : ಹಿರಿಯರ ಅಪಸ್ವರಕ್ಕೆ ಹೈಕಮಾಂಡ್ ಅಂಕುಶ

ಬೆಂಗಳೂರು,ನ.13- ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಕುರಿತು ಯಾರೂ ಕೂಡ ಅಪಸ್ವರ ಎತ್ತಬಾರದೆಂದು ಕೇಂದ್ರ ಬಿಜೆಪಿ ನಾಯಕರು ಸ್ಥಳೀಯ ನಾಯಕರಿಗೆ ಕಟ್ಟಪ್ಪಣೆ ವಿಧಿಸಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ನಂತರ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕೆಲ ಹಿರಿಯರು ಬಹಿರಂಗವಾಗಿ ಮಾತನಾಡದಿದ್ದರೂ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದರು.

ಕೆಲವರಂತೂ ಕನಿಷ್ಟ ಪಕ್ಷ ವಿಜಯೇಂದ್ರಗೆ ಶುಭಾಷಯವನ್ನು ಹೇಳದೆ ಅಂತರ ಕಾಪಾಡಿಕೊಂಡಿದ್ದರು. ಇದು ಮತ್ತೊಂದು ರೀತಯ ಭಿನ್ನಮತಕ್ಕೆ ದಾರಿ ಕಲ್ಪಿಸಲಿದೆ ಎಂಬುದನ್ನು ಅರಿತಿರುವ ಕೇಂದ್ರ ವರಿಷ್ಠರು ಪಕ್ಷದ ತೀರ್ಮಾನವನ್ನು ಯಾರೊಬ್ಬರೂ ಪ್ರಶ್ನಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಸೂಚಿಸಿದರು.

ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮುನ್ನ ಸಾಕಷ್ಟು ಆಲೋಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುತ್ತದೆ. ಅದೇ ರೀತಿ ಕರ್ನಾಟಕ ಬಿಜೆಪಿ ಘಟಕಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡುವ ಮುನ್ನ ನಾವು ಎಲ್ಲ ಸಾಧಕಬಾಧಕಗಳನ್ನು ಚರ್ಚಿಸಿದ್ದೇವೆ. ವಿಜಯೇಂದ್ರ ನೇಮಕವಾದ ನಂತರ ವಿರೋಧ ವ್ಯಕ್ತಪಡಿಸುತ್ತಿರುವ ಔಚಿತ್ಯವಾದರೂ ಏನೆಂದು ಪ್ರಶ್ನಿಸಿದ್ದಾರೆ.

ದೆಹಲಿ ಮಟ್ಟದಲ್ಲಿ ಪ್ರಭಾವಿಯಾಗಿರುವ ರಾಜ್ಯವನ್ನು ಪ್ರತಿನಿಧಿಸುವ ಪ್ರಮುಖರೊಬ್ಬರು ಕೆಲ ಹಿರಿಯರ ಜೊತೆ ದೂರವಾಣಿ ಮುಖೇನ ಚರ್ಚಿಸಿ ಹೈಕಮಾಂಡ್ ತೀರ್ಮಾನಕ್ಕೆ ವಿರೋಧ ಬೇಡ ಎಲ್ಲರೂ ಸಹಕಾರ ಕೊಡಬೇಕೆಂದು ಸೂಚಿಸಿದ್ದಾರೆ.

ತಮಿಳುನಾಡಿನ 7 ಹಳ್ಳಿಗಳಲ್ಲಿ ಶಬ್ದರಹಿತ ದೀಪಾವಳಿ ಆಚರಣೆ

ಈ ಹಿಂದೆ ಯಡಿಯೂರಪ್ಪ ಮತ್ತು ಅವರ ಕುಟುಂಬದವರಿಂದ ಬಹಿರಂಗವಾಗಿ ಮಾತನಾಡಿದ್ದರಿಂದ ಒಂದು ಸಮುದಾಯ ಮುನಿಸಿಕೊಂಡು ಫಲಿತಾಂಶದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ.
ಲೋಕಸಭೆ ಚುನಾವಣೆ ನಮ್ಮೆಲ್ಲರಿಗೂ ಬಹುದೊಡ್ಡ ಸವಾಲಾಗಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಟ ಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಬೇಕು. ಇದು ಸಾಕಾರವಾಗಬೇಕಾದರೆ ಹಿರಿಯರು, ಕಿರಿಯರು ಸಹಕಾರ ಕೊಡಬೇಕು. ಪಕ್ಷದ ವಿರುದ್ಧ ಒಂದೇ ಒಂದು ಅಪಸ್ವರ ಬೇಡವೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇವಲ ಯಡಿಯೂರಪ್ಪ ಪುತ್ರ ಎಂಬ ಕಾರಣಕ್ಕಾಗಿ ಅಧ್ಯಕ್ಷರನ್ನಾಗಿ ನೇಮಿಸಿಲ್ಲ. ಇಂತಹ ಪ್ರಮುಖ ತೀರ್ಮಾನ ತೆಗೆದುಕೊಳ್ಳುವ ಮುನ್ನ ರಾಷ್ಟ್ರೀಯ ನಾಯಕರು ಎಲ್ಲ ಆಯಾಮಗಳಲ್ಲೂ ಚರ್ಚೆ ಮಾಡಿರುತ್ತಾರೆ. ಅವರ ನಿರ್ಧಾರವು ನಮಗೆ ಒಪ್ಪಿಗೆ ಇದೆಯೋ ಇಲ್ಲವೋ ಎಂಬುದು ಮುಖ್ಯವಲ್ಲ. ಅಂತಿಮವಾಗಿ ರಾಷ್ಟ್ರೀಯ ನಾಯಕರ ನಿರ್ಧಾರವನ್ನು ಗೌರವಿಸುವುದು ಮುಖ್ಯ ಎಂದು ರಾಜ್ಯ ನಾಯಕರಿಗೆ ಹೇಳಿದ್ದಾರೆ.

ಒಂದಿಬ್ಬರು ಬಹಿರಂಗವಾಗಿ ವಿಜಯೇಂದ್ರ ವಿರುದ್ಧ ಹೇಳಿಕೆ ಕೊಟ್ಟರೆ ವಿರೋಧ ಪಕ್ಷಗಳು ಅದನ್ನೇ ಅಸ್ತ್ರ ಮಾಡಿಕೊಳ್ಳಲಿವೆ. ಇದಕ್ಕೆ ಅವಕಾಶ ಕಲ್ಪಿಸಬಾರದೆಂದರೆ ಪಕ್ಷದ ನಿರ್ಧಾರವನ್ನು ಪ್ರಶ್ನಿಸಬಾರದು. ಎಲ್ಲರೂ ಸಹಕಾರ ಕೊಡುವಂತೆ ಸೂಚನೆ ಕೊಟ್ಟಿದ್ದಾರೆ.

ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಮಾಜಿ ಸಚಿವರಾದ ವಿ.ಸೋಮಣ್ಣ, ಸಿ.ಟಿ.ರವಿ, ಬಸನಗೌಡ ಪಾಟೀಲ್ ಯತ್ನಾಳ್, ಕೆ.ಎಸ್.ಈಶ್ವರಪ್ಪ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಮತ್ತಿತರರು ಅಪಸ್ವರ ತೆಗೆದಿದ್ದರು.
ಇದೀಗ ವರಿಷ್ಠರೇ ಮಧ್ಯಪ್ರವೇಶಿಸಿ ಭಿನ್ನಮತಕ್ಕೆ ಪೂರ್ಣ ವಿರಾಮ ಹಾಕುವ ಪ್ರಯತ್ನ ಮಾಡಿದ್ದಾರೆ.