Thursday, November 6, 2025
Home Blog Page 1821

ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಪಕ್ಷ ಬಿಡುವ ತಯಾರಿಯಲ್ಲಿದ್ದ ಮಾಜಿ ಶಾಸಕರು, ಸಚಿವರು ಯೂಟರ್ನ್

0

ಬೆಂಗಳೂರು,ನ.12- ವಿಧಾನಸಭೆ ಚುನಾವಣೆ ಹೀನಾಯ ಸೋಲಿನ ನಂತರ ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಅನ್ಯ ಪಕ್ಷಗಳತ್ತ ಮುಖ ಮಾಡಿದ್ದ ಅನೇಕರು ಇದೀಗ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ತಮ್ಮ ನಿರ್ಧಾರವನ್ನು ಬದಲಾಯಿಸಿದ್ದಾರೆ.

ದೀಪಾವಳಿ ಹಬ್ಬದ ನಂತರ ಮಾಜಿ ಸಚಿವರು ಹಾಗು ಮಾಜಿ ಶಾಸಕರು ಸೇರಿದಂತೆ ಅನೇಕರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಕಡೆ ಸಾಮೂಹಿಕ ವಲಸೆ ಹೋಗುವ ನಿರ್ಧಾರಕ್ಕೆ ಬಂದಿದ್ದರು. ಎಲ್ಲವೂ ನಿರೀಕ್ಷೆಯಂತೆ ನಡೆದಿದ್ದರೆ ಇದೇ 15ರಂದು ಅನೇಕರು ಕಮಲಬಿಟ್ಟು ಕೈ ಹಿಡಿಯುವ ತವಕದಲ್ಲಿದ್ದರು.

ಆದರೆ ಇದೀಗ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಪಕ್ಷದ ಸಾರಥ್ಯ ವಹಿಸಿರುವುದರಿಂದ ಬಹುತೇಕರು ಪಕ್ಷದಲ್ಲೇ ಮುಂದುವರೆಯುವ ಒಮ್ಮತಕ್ಕೆ ಬಂದಿದ್ದಾರೆ. ಮಾಜಿ ಸಚಿವರಾದ ಶಂಕರ್ ಪಟೇಲ್ ಮುನೇನಕೊಪ್ಪ, ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಮಾಡಾಳು ವಿರೂಪಾಕ್ಷಪ್ಪ, ಕುಮಾರ ಬಂಗಾರಪ್ಪ ಮತ್ತಿತರ ಪಕ್ಷದ ಪ್ರಮುಖರು ಬಿಜೆಪಿ ಬಿಡುವ ಪಟ್ಟಿಯಲ್ಲಿದ್ದರು.

ಮಾಜಿ ಮುಖ್ಯಮಂತ್ರಿಯೊಬ್ಬರು ಇವರೆಲ್ಲರನ್ನೂ ಕಾಂಗ್ರೆಸ್‍ಗೆ ಸೇರಿಸಲು ವೇದಿಕೆಯನ್ನು ಸಹ ಸಿದ್ದಪಡಿಸಿದ್ದರು. ಇದೀಗ ಖುದ್ದು ಯಡಿಯೂರಪ್ಪನವರೇ ಅಸಮಾಧಾನಗೊಂಡಿರುವವರನ್ನು ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಯಾರೊಬ್ಬರು ಪಕ್ಷ ಬಿಟ್ಟು ಹೋಗಬೇಡಿ. ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಕೈ ಬಲಪಡಿಸಿ ಮತ್ತೊಮ್ಮೆ ಅವರನ್ನು ಮೂರನೇ ಬಾರಿಗೆ ಅಧಿಕಾರಕ್ಕೆ ತರಬೇಕು. ಕರ್ನಾಟಕದಿಂದ ನಾವು 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಸ್ಥಾನಗಳನ್ನು ಗೆದ್ದು ಉಡುಗೊರೆ ನೀಡೋಣ ನಿಮ್ಮ ರಾಜಕೀಯ ಭವಿಷ್ಯವನ್ನು ನಾನು ಕಾಪಾಡುತ್ತೇನೆ ಎಂದು ಭರವಸೆ ಕೊಟ್ಟಿದ್ದಾರೆ.

ವಿಜಯೇಂದ್ರ ಅಧ್ಯಕ್ಷರಾದರೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸೋಣ ಎಲ್ಲರೂ ಜೊತೆಗಿದ್ದು ಅವರ ಕೈ ಬಲಪಡಿಸಬೇಕು. ಪಕ್ಷ ಬಿಟ್ಟು ಹೋದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ನನ್ನ ಮಾತಿನಲ್ಲಿ ನಂಬಿಕೆ ಇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದೀಗ ತಮ್ಮ ರಾಜಕೀಯ ಗುರುಗಳ ಭರವಸೆಯಂತೆ ಪಕ್ಷ ಬಿಡಲು ತೀರ್ಮಾನಿಸಿದ್ದ ಅನೇಕರು ಬಿಜೆಪಿಯಲ್ಲೇ ಮುಂದುವರೆಯುವ ಅಚಲ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಟ್ರಕ್‍ಗೆ ಕಾರು ಅಪ್ಪಳಿಸಿ ಒಂದೇ ಕುಟುಂಬದ ನಾಲ್ವರ ಸಾವು

ಕಳೆದ ಎರಡು ದಿನಗಳಿಂದ ಖುದ್ದು ಯಡಿಯೂರಪ್ಪನವರೇ ದೂರವಾಣಿ ಮೂಲಕ ಅನೇಕರೊಂದಿಗ ಮಾತುಕತೆ ನಡೆಸುತ್ತಿದ್ದು, ಕಷ್ಟಕಾಲದಲ್ಲಿದ್ದಾಗ ಪಕ್ಷದ ಜೊತೆಗಿದ್ದರೆ ಖಂಡಿತವಾಗಿಯೂ ನಿಮಗೆ ಸೂಕ್ತವಾದ ಸ್ಥಾನಮಾನವನ್ನು ನೀಡಲಾಗುತ್ತದೆ. ಅಲ್ಪ ಆಸೆಗಾಗಿ ಆತುರಪಟ್ಟು ನಿಮ್ಮ ರಾಜಕೀಯ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

ಮೌನಕ್ಕೆ ಜಾರಿದ ಪ್ರಮುಖರು:
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗುತ್ತಿದ್ದಂತೆ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದವರು ಮೌನಕ್ಕೆ ಜಾರಿದ್ದಾರೆ. ಪದಗಳ ಮೂಲಕ ಅಸಮಾಧಾನ ಹೊರಹಾಕದಿದ್ದರೂ ನಡವಳಿಕೆಯಲ್ಲಿ ಅಸಮಾಧಾನ ಸ್ಪಷ್ಟವಾಗಿದೆ.

ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಬಿಎಸ್‍ವೈ ಆಪ್ತರು, ಪಕ್ಷ ನಿಷ್ಠರು, ಅಭಿಮಾನಿಗಳು ಶುಭ ಹಾರೈಸುತ್ತಿದ್ದರೆ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದವರು ಯಾವ ಪ್ರತಿಕ್ರಿಯೆ ನೀಡದೆ ಅಸಮಾಧಾನಗೊಂಡಿದ್ದಾರೆ.

ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಗರಂ ಆಗಿದ್ದು, ಅವಕಾಶ ಕೈತಪ್ಪಿದ್ದಕ್ಕೆ ಸಿಡಿಮಿಡಿಗೊಂಡಿದ್ದಾರೆ. ವಿಜಯನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿ ಸಿಟ್ಟಿನಲ್ಲೇ ತೆರಳಿದ್ದಾರೆ.

ವಿಜಯೇಂದ್ರ ರಾಜಜ್ಯಾಧ್ಯಕ್ಷ ಆಯ್ಕೆಗೆ ಕೋಟ ಶ್ರೀನಿವಾಸ ಪೂಜಾರಿ ಹರ್ಷ ಇನ್ನು ಮತ್ತೊಂದು ಕಡೆ ಶಾಸಕ ಅರವಿಂದ ಬೆಲ್ಲದ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಾರಿಗೂ ಸಿಕ್ಕಿಲ್ಲ, ಪ್ರತಿಕ್ರಿಯೆ ನೀಡಿಲ್ಲ. ಈ ನಡುವೆ ಮಾಜಿ ಸಚಿವ ಸಿ.ಟಿ ರವಿ ಪ್ರತಿಕ್ರಿಯೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತಿದೆ, ನಿಗೂಢ ಅರ್ಥ ಬರುವಂತೆ ಪ್ರತಿಕ್ರಿಯೆ ನೀಡಿದ್ದಾರೆ.

2024ರ ನಂತರ ವೈಯಕ್ತಿಕ ರಾಜಕಾರಣ:
ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ರ್ಪಧಿ ಆಗಿರಲಿಲ್ಲ, ಹಾಗಾಗಿ ನನಗೆ ಯಾವುದೇ ಅಸಮಾಧಾನ ಇಲ್ಲ. ನಾವೇನು ಸನ್ಯಾಸಿಗಳಲ್ಲ, ಈಗೇನಿದ್ದರೂ ಮೋದಿ ಸರ್ಕಾರ ಅಧಿಕಾರಕ್ಕೆ ತರುವುದಷ್ಟೆ ನನ್ನ ಗುರಿ, ಅದಕ್ಕಷ್ಟೇ ಸಮಯ ನೀಡಲಿದ್ದೇನೆ. ನಮ್ಮ ವೈಯಕ್ತಿಕ ರಾಜಕಾರಣ 2024ರ ನಂತರವಾಗಲಿದೆ. ಈಗೇನಿದ್ದರೂ ರಾಷ್ಟ್ರ ಹಿತದ ರಾಜಕಾರಣ, ಮೋದಿ ಸರ್ಕಾರ ಮತ್ತೆ ತರಬೇಕು ಎನ್ನುವುದಷ್ಟೇ ಆಗಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹ ಯೋಗ್ಯತೆ ಬಹಳಷ್ಟು ಜನರಿಗಿದೆ. ಆದರೆ ಯಾವ ಸಂದರ್ಭಕ್ಕೆ ಯಾರು ಸೂಕ್ತ ಎಂದು ಹೈಕಮಾಂಡ್ ನಿರ್ಧರಿಸಲಿದೆ. ಈಗ ಅದನ್ನೇ ಹೈಕಮಾಂಡ್ ಮಾಡಿದೆ ಎಂದು ಸಿ.ಟಿ.ರವಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ರಾಜ್ಯದೆಲ್ಲೆಡೆ ‘ಗರಡಿ’ ಚಿತ್ರ ಯಶಸ್ವಿ ಪ್ರದರ್ಶನ

ಊರಿಗೆ ನ್ಯಾಯಾ ಒದಗಿಸುವ ಗರಡಿ ಮನೆ. ಅಲ್ಲಿ ಯಾರೇ ನ್ಯಾಯ ಕೇಳಿ ಬಂದರು ಸದಾ ನಿಲ್ಲುವ ನ್ಯಾಯಸ್ಥಾನ. ಇದರ ಮುಖ್ಯಸ್ಥ ಕೊರೋಫಟ್ ರಂಗಪ್ಪ. ನ್ಯಾಯ, ನೀತಿ, ಧರ್ಮ ಪಾಲನೆ ಇವನ ರಕ್ತದಲ್ಲಿ ಬಂದಿರುತ್ತದೆ. ಅನ್ಯಾಯವನ್ನು ಎಂದಿಗೂ ಸಹಿಸುವುದಿಲ್ಲ. ಆದರೆ ಇವನ ದೌರ್ಬಲ್ಯವೆಂದರೆ ಯಾವುದು ಸರಿ ಯಾವುದು ತಪ್ಪು ಎಂದು ತಿಳಿಯದೆ ತೀರ್ಪು ಕೊಡುವುದು. ಈ ಮನಸ್ಥಿತಿಯ ಕೆಲವೊಂದು ಅವಾಂತರಗಳಿಗೆ ಕಾರಣವಾಗುತ್ತದೆ. ಅವಾಂತರಗಳೇ ಗರಡಿಮನೆಯ ಕಥಾವಸ್ತುವಿನ ತಿರುವುಗುಗಳು. ಇದು ಈ ವಾರ ತೆರೆಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಗರಡಿ ಚಿತ್ರದ ಪರಿಚಯ.

ಕನ್ನಡ ಮಣ್ಣಿನ ಪುರಾತನ ಕ್ರೀಡೆ ಗರಡಿ. ಇದನ್ನೇ ಚಿತ್ರದ ಕಥೆಯನ್ನಾಗಿ ಆಯ್ದುಕೊಂಡ ನಿರ್ದೇಶಕ ಯುವರಾಜ ಭಟ್, ತುಂಬಾ ಅಧ್ಯಯನ ಮಾಡಿ ಮರೆಯಾಗುತ್ತಿರುವ ಕಲೆಯನ್ನು ಯುವ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಗರಡಿ ಮನೆ ಎಂದರೇನು, ಅಲ್ಲಿನ ವಾತಾವರಣ ಹೇಗಿರುತ್ತದೆ, ಗರಡಿ ಮನೆಯ ಜಟ್ಟಿಗಳ ತಾಲೀಮು ಹೇಗಿರುತ್ತದೆ, ಯಾವೆಲ್ಲ ಗರಡಿ ಸಲಕರಣೆಗಳನ್ನು ಉಪಯೋಗಿಸಿ ತಮ್ಮ ದೇಹವನ್ನು ಕಟ್ಟುತ್ತಾರೆ. ಅಷ್ಟೇ ಅಲ್ಲದೆ ಊರಿನಲ್ಲಿನ ಗರಡಿ ಮನೆ ಕೇವಲ ಕಸರತ್ತಿಗಷ್ಟೇ ಅಲ್ಲದೆ ಊರಿಗೆ ಏನೇ ತೊಂದರೆ ಬಂದರು, ಯಾವ ರೀತಿ ನಿಲ್ಲುತ್ತದೆ ಎಂಬೆಲ್ಲಾ ಅಂಶಗಳ ಮೇಲೆ ಈ ಚಿತ್ರ ಬೆಳಕು ಚೆಲ್ಲುತ್ತದೆ.

ಕೋರಫಿಟ್ ರಂಗಪ್ಪನ ಪಾತ್ರದಲ್ಲಿ ಬಿಸಿ ಪಾಟೀಲ್ ಮತ್ತೆ ಕೌರವನನ್ನು ನೆನಪಿಸುತ್ತಾರೆ. ಗರಡಿ ಮನೆಯ ಮೇಷ್ಟ್ರು ಪಾತ್ರದಲ್ಲಿ ತೂಕದ ಅಭಿನಯ ನೀಡಿ ಪಟ್ಟುಗಳ ಪರಿಚಯ ಮಾಡಿಕೊಡುತ್ತಾರೆ. ರೆಟ್ಟೆ ಹಳ್ಳಿಯಲ್ಲಿ ನಡೆಯುವ ಗರಡಿ ಟೂರ್ನಮೆಂಟ್ ಕಥೆಯ ಕೇಂದ್ರ ಬಿಂದು. ರಂಗಪ್ಪ ತಾನು ಮಾತು ಕೊಟ್ಟಹಾಗೆ ಕಲಿಸಿದ ಶಿಷ್ಯನನ್ನು ಕುಸ್ತಿಯಲ್ಲಿ ಗೆಲ್ಲಿಸುವುದು, ಮತ್ತೊಂದು ಕಡೆ ತಾನು ನಂಬಿ ಬದುಕಿರುವ ನ್ಯಾಯ ನೀತಿ ನಿಷ್ಠೆಯನ್ನು ಬಿಡದೆ ಕಾಪಾಡುವುದು. ಇವೆರಡರ ನಡುವೆ ಚಿತ್ರದಲ್ಲಿ ಸಂಘರ್ಷ ಏರ್ಪಡುತ್ತದೆ.

ಗರಡಿ ಮನೆ ಅಂಗಳದಲ್ಲಿ ಹುಡುಗಿಯ ಪ್ರೀತಿ ಪ್ರವೇಶವಾಗುತ್ತದೆ. ಇದಕ್ಕೂ ನಿರ್ದೇಶಕ ಯೋಗರಾಜ್ ಭಟ್ ನ್ಯಾಯ ಒದಗಿಸಿ ಜಟ್ಟಿ ಕುಸ್ತಿ ನಡುವೆ ಪ್ರೀತಿಯ ಬೆಳ್ಳಿಗೆರೆಯನ್ನು ಎಳೆದು ಕಾದಾಟದಲ್ಲೂ ಪ್ರೇಕ್ಷಕರನ್ನ ರೋಮ್ಯಾಂಟಿಕ್ ಮೂಡ್ ಗೆ ಕೊಂಡೊಯ್ಯುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ.ನಾಯಕ ಸೂರ್ಯ ಮತ್ತು ಸೊನಾಲ್ ಮೆಂಥೇರ್ ಇದನ್ನು ಅದ್ಭುತವಾಗಿ ನಿಭಾಯಿಸುವಲ್ಲಿ ಸಾತ್ ಕೊಟ್ಟಿದ್ದಾರೆ.ಹಾಗೆ ಖಳನಟನಾಗಿ ರವಿಶಂಕರ್ ಎಂದಿನಂತೆ ಅಬ್ಬರಿಸಿದ್ದಾರೆ

ಅಂದ ಹಾಗೆ ಬಿಸಿ ಪಾಟೀಲ್ ಅಳಿಯ ವಿಜಯ್ ಮೊದಲ ಚಿತ್ರದಲ್ಲಿ ತನ್ನ ದೇಹದಾಢ್ಯವನ್ನು ಪ್ರದರ್ಶಿಸಿ ತೆರೆಯ ಮೇಲೆ ಖಳನಾಯಕನಾಗಿ ಎಲ್ಲರ ಮನ ಗೆದ್ದಿದ್ದಾರೆ‌. ಹೊಡಿರೆಲೆ ಹಲಿಗೆ ವಿಶೇಷ ಹಾಡಿನಲ್ಲಿ ನಿಶ್ವಿಕ ನಾಯ್ಡು ಕುಣಿದು ಕೊಪ್ಪಳಸಿ ಪಡ್ಡೆ ಹುಡುಗರನ್ನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟರೆ ನಿರ್ದೇಶಕ ಯೋಗರಾಜ್ ಭಟ್ ಕೊಟ್ಟಿರುವ ಪಾತ್ರಗಳಿಗೆ ಪ್ರತಿಯೊಬ್ಬರೂ ನ್ಯಾಯವಾದಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ಕೆಲವೇ ಕಥೆಗಳಲ್ಲಿ ಗರಡಿ ಕೂಡ ಒಂದು. ಇಂತಹ ಚಿತ್ರಗಳು ಆಗಾಗ ಬಂದಾಗ ಯುವ ಪೀಳಿಗೆಗೆ ಕೆಲವೊಂದು ಐತಿಹಾಸಿಕ ಮತ್ತು ಸಾಂಸ್ಕೃತಿಕ ಅಂಶಗಳು ಅರಿವಾಗುತ್ತವೆ. ಇವೆಲ್ಲವನ್ನು ಯಶಸ್ವಿಯಾಗಿ ಈ ಚಿತ್ರ ಪ್ರೇಕ್ಷಕರಿಗೆ ಕಟ್ಟಿಕೊಡುತ್ತದೆ

ಶಿಶುವಿಹಾರಗಳಲ್ಲಿ ಮದ್ದುಗುಂಡು ಮುಚ್ಚಿಟ್ಟಿರುವ ಹಮಾಸ್ ಉಗ್ರರು

ನವದೆಹಲಿ,ನ.12- ಹಮಾಸ್ ಉಗ್ರರು ಮಕ್ಕಳಿಗೆ ಪಾಠ ಹೇಳಿಕೊಡುವ ಶಿಶುವಿಹಾರಗಳಲ್ಲಿ ತಮ್ಮ ಶಸ್ತ್ರಾಸ್ತ್ರಗಳನ್ನು ಬಚ್ಚಿಟ್ಟಿದ್ದಾರೆ ಎಂಬ ಅಂಶವನ್ನು ಇಸ್ರೇಲ್ ಬಯಲು ಮಾಡಿದೆ. ಗಾಜಾ ಪಟ್ಟಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ತಮ್ಮ ಸೈನಿಕರು ಶಿಶುವಿಹಾರದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಪೋಟಕ ಸಾಧನಗಳನ್ನು ಪತ್ತೆ ಮಾಡಿದ್ದಾರೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಇಸ್ರೇಲಿ ರಕ್ಷಣಾ ಪಡೆಗಳು ಶಾಲೆಯನ್ನು ಹಮಾಸ್ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಬಳಸುತ್ತಿದೆ ಎಂದು ಹೇಳಿಕೊಂಡಿದೆ.

ಶಾಲೆಗಳಲ್ಲಿ ಮದ್ದುಗುಂಡುಗಳಿರುವ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡ ಇಸ್ರೇಲ್ ಸೇನೆಯು, ಐಡಿಎಫ್ ಪಡೆಗಳು ಉತ್ತರ ಗಾಜಾದಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಗಜಾನ್ ಶಿಶುವಿಹಾರದೊಳಗೆ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಪೋಟಕ ಸಾಧನಗಳನ್ನು ಕಂಡುಕೊಂಡವು.

ಗಾಜಾದಲ್ಲಿ ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕರೆಗಳನ್ನು ಇಸ್ರೇಲ್ ತಿರಸ್ಕರಿಸಿದೆ, ಹಮಾಸ್ ನಾಶವಾಗುವವರೆಗೆ ಮುತ್ತಿಗೆ ಹಾಕಿದ ಪಟ್ಟಿಯಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಯುದ್ಧ ಮುಗಿದ ನಂತರ ಗಾಜಾದ ಆಡಳಿತಕ್ಕೆ ಮರಳುವ ಪ್ಯಾಲೇಸ್ಟಿನಿಯನ್ ಅಧಿಕಾರದ ಕಲ್ಪನೆಯನ್ನು ತಳ್ಳಿಹಾಕಿದ್ದಾರೆ.

ಟ್ರಕ್‍ಗೆ ಕಾರು ಅಪ್ಪಳಿಸಿ ಒಂದೇ ಕುಟುಂಬದ ನಾಲ್ವರ ಸಾವು

ಗಾಜಾದಿಂದ ದಕ್ಷಿಣ ಇಸ್ರೇಲ್‍ಗೆ ಇನ್ನೂ ರಾಕೆಟ್‍ಗಳನ್ನು ಹಾರಿಸಲಾಗುತ್ತಿದೆ ಎಂದು ಇಸ್ರೇಲ್ ಹೇಳಿದೆ, ಅಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರನ್ನು ಕಳೆದ ತಿಂಗಳು ಹಮಾಸ್ ಒತ್ತೆಯಾಳುಗಳಾಗಿ ತೆಗೆದುಕೊಂಡಿದೆ ಎಂದು ಹೇಳಿದೆ.

ಅಕ್ಟೋಬರ್ 7 ರಿಂದ ವಾಯು ಮತ್ತು ಫಿರಂಗಿ ದಾಳಿಯಲ್ಲಿ 11,078 ಗಾಜಾ ನಿವಾಸಿಗಳು ಕೊಲ್ಲಲ್ಪಟ್ಟಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ, ಅವರಲ್ಲಿ ಸುಮಾರು ಶೇ.40 ರಷ್ಟು ಮಕ್ಕಳಿದ್ದಾರೆ.

ಕಣಿವೆಯಲ್ಲಿ ಗುಂಡಿನ ಚಕಮಕಿ

ರಜೌರಿ, ನ.12 (ಪಿಟಿಐ) ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಗ್ರಾಮ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಭಯೋತ್ಪಾದಕರು ದಾಳಿಯಲ್ಲಿ ಏಳು ಜನರನ್ನು ಕೊಂದ ಹಳ್ಳಿಯಾದ ಮೇಲಿನ ಧಂಗ್ರಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ನಡೆದ ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ

ಗ್ರಾಮದ ಮನೆಯೊಂದರ ಹೊರಗೆ ಕೆಲವು ಅನುಮಾನಾಸ್ಪದ ಚಲನೆಯನ್ನು ಗಮನಿಸಿದ ವಿಡಿಜಿಗಳು ಸುಮಾರು ಎರಡು ಡಜನ್ ಸುತ್ತು ಗುಂಡು ಹಾರಿಸಿದ್ದಾರೆ ಎಂದು ಅವರು ಹೇಳಿದರು. ಮುಂಜಾಗ್ರತಾ ಕ್ರಮವಾಗಿ ಗ್ರಾಮ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಪೊಲೀಸರು ಮತ್ತು ಸೇನೆಯು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮಾಸ್ ಮೇಲಿನ ದಾಳಿ ನಿಲ್ಲಿಸುವ ಪ್ರಶ್ನೆಯೇ ಇಲ್ಲ ; ನೆತನ್ಯಾಹು

ಗಾಜಾಪಟ್ಟಿ, ನ.12- ಯಾವುದೇ ಕಾರಣಕ್ಕೂ ಅಮಾಸ್ ಮೇಲಿನ ದಾಳಿಯನ್ನು ನಿಲ್ಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಘೋಷಿಸಿದ್ದಾರೆ. ಕದನ ವಿರಾಮಕ್ಕಾಗಿ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಕರೆಗಳನ್ನು ಕಡೆಗಣಿಸಿರುವ ಅವರು ಗಾಜಾದ ಆಡಳಿತಾರೂಢ ಹಮಾಸ್ ಉಗ್ರಗಾಮಿಗಳನ್ನು ಹತ್ತಿಕ್ಕಲು ಇಸ್ರೇಲ್‍ನ ಯುದ್ಧವು ಪೂರ್ಣ ಬಲದಿಂದ ಮುಂದುವರಿಯುತ್ತದೆ ಎಂದು ಹೇಳಿದರು.

ಗಾಜಾದಲ್ಲಿ ಉಗ್ರಗಾಮಿಗಳು ಒತ್ತೆಯಾಳುಗಳಾಗಿದ್ದ ಎಲ್ಲಾ 239 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದರೆ ಮಾತ್ರ ಕದನ ವಿರಾಮ ಸಾಧ್ಯ ಎಂದು ನೆತನ್ಯಾಹು ದೂರದರ್ಶನದ ಭಾಷಣದಲ್ಲಿ ಹೇಳಿದರು.

ಯುದ್ಧದ ಈಗ ಆರನೇ ವಾರಕ್ಕೆ ಪ್ರವೇಶಿಸುತ್ತಿರುವಾಗ, ಗಾಜಾವನ್ನು ಸೇನಾಮುಕ್ತಗೊಳಿಸಲಾಗುವುದು ಮತ್ತು ಇಸ್ರೇಲ್ ಅಲ್ಲಿ ಭದ್ರತಾ ನಿಯಂತ್ರಣವನ್ನು ಉಳಿಸಿಕೊಳ್ಳುತ್ತದೆ ಎಂದು ಇಸ್ರೇಲಿ ನಾಯಕಹೇಳಿದೆ. ಈ ಸ್ಥಾನವು ಇಸ್ರೇಲ್‍ನ ನಿಕಟ ಮಿತ್ರರಾಷ್ಟ್ರವಾದ ಯುನೈಟೆಡ್ ಸ್ಟೇಟ್ಸ್‍ನಿಂದ ತೇಲುತ್ತಿರುವ ಯುದ್ಧಾನಂತರದ ಸನ್ನಿವೇಶಗಳಿಗೆ ವಿರುದ್ಧವಾಗಿ ಕಂಡುಬರುತ್ತದೆ, ಇದು ಭೂಪ್ರದೇಶದ ಇಸ್ರೇಲಿ ಮರುಆಕ್ರಮಣವನ್ನು ವಿರೋಧಿಸುತ್ತದೆ ಎಂದು ಹೇಳಿದೆ.

ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್

ಭದ್ರತಾ ನಿಯಂತ್ರಣದ ಅರ್ಥವೇನು ಎಂದು ಕೇಳಿದಾಗ, ಉಗ್ರಗಾಮಿಗಳನ್ನು ಬೇಟೆಯಾಡಲು ಇಸ್ರೇಲಿ ಪಡೆಗಳು ಅಗತ್ಯವಿದ್ದಾಗ ಗಾಜಾವನ್ನು ಪ್ರವೇಶಿಸಲು ಶಕ್ತವಾಗಿರಬೇಕು ಎಂದು ನೆತನ್ಯಾಹು ಹೇಳಿದರು.

ಕೊನೆಯ ಜನರೇಟರ್‍ನಲ್ಲಿ ಇಂಧನ ಖಾಲಿಯಾಗಿದೆ ಎಂದು ಗಾಜಾದ ಅತಿದೊಡ್ಡ ಆಸ್ಪತ್ರೆಯ ಉದ್ರಿಕ್ತ ವೈದ್ಯರು ಹೇಳಿದ ನಂತರ ಇಸ್ರೇಲ್‍ನ ಮೇಲೆ ಒತ್ತಡ ಹೆಚ್ಚುತ್ತಿದೆ, ಇದು ಅಕಾಲಿಕ ಮಗು, ಇನ್ಕ್ಯುಬೇಟರ್‍ನಲ್ಲಿ ಮತ್ತೊಂದು ಮಗು ಮತ್ತು ಇತರ ನಾಲ್ವರು ರೋಗಿಗಳ ಸಾವಿಗೆ ಕಾರಣವಾಯಿತು. ಸಾವಿರಾರು ಜನರು ಯುದ್ಧದಲ್ಲಿ ಗಾಯಗೊಂಡರು, ವೈದ್ಯಕೀಯ ಸಿಬ್ಬಂದಿ ಮತ್ತು ಸ್ಥಳಾಂತರಗೊಂಡರು. ನಾಗರಿಕರು ಹೋರಾಟದಲ್ಲಿ ಸಿಕ್ಕಿಬಿದ್ದರು.

ಇತ್ತೀಚಿನ ದಿನಗಳಲ್ಲಿ, ಉತ್ತರ ಗಾಜಾದ ಶಿಫಾ ಮತ್ತು ಇತರ ಆಸ್ಪತ್ರೆಗಳ ಬಳಿ ಹೋರಾಟ ತೀವ್ರಗೊಂಡಿದೆ ಮತ್ತು ಸರಬರಾಜುಗಳು ಖಾಲಿಯಾಗಿವೆ. ಹಮಾಸ್ ಆಸ್ಪತ್ರೆಗಳಲ್ಲಿ ಮತ್ತು ಅದರ ಕೆಳಗೆ ಕಮಾಂಡ್ ಪೋಸ್ಟ್‍ಗಳನ್ನು ಸ್ಥಾಪಿಸಿದೆ, ನಾಗರಿಕರನ್ನು ಮಾನವ ಗುರಾಣಿಗಳಂತೆ ಬಳಸಿಕೊಂಡಿದೆ ಎಂದು ಇಸ್ರೇಲಿ ಮಿಲಿಟರಿ ಪುರಾವೆಗಳನ್ನು ಒದಗಿಸದೆ ಆರೋಪಿಸಿದೆ. ಶಿಫಾದಲ್ಲಿನ ವೈದ್ಯಕೀಯ ಸಿಬ್ಬಂದಿ ಅಂತಹ ಹಕ್ಕುಗಳನ್ನು ನಿರಾಕರಿಸಿದ್ದಾರೆ ಮತ್ತು ಇಸ್ರೇಲ್ ವಿವೇಚನಾರಹಿತ ದಾಳಿಯಿಂದ ನಾಗರಿಕರಿಗೆ ಹಾನಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಇಸ್ರೇಲಿ ಮಿಲಿಟರಿ ಗುಪ್ತಚರದ ಮಾಜಿ ಮುಖ್ಯಸ್ಥ ಅಮೋಸ್ ಯಾಡ್ಲಿನ್ ಬ್ರಾಡ್‍ಕಾಸ್ಟರ್ ಚಾನೆಲ್ 12 ಗೆ ಇಸ್ರೇಲ್ ಹಮಾಸ್ ಅನ್ನು ಹತ್ತಿಕ್ಕುವ ಗುರಿಯನ್ನು ಹೊಂದಿದ್ದು, ಆಸ್ಪತ್ರೆಗಳ ನಿಯಂತ್ರಣವನ್ನು ತೆಗೆದುಕೊಳ್ಳುವುದು ಪ್ರಮುಖವಾಗಿದೆ ಆದರೆ ರೋಗಿಗಳು, ಇತರ ನಾಗರಿಕರು ಮತ್ತು ಇಸ್ರೇಲಿ ಒತ್ತೆಯಾಳುಗಳನ್ನು ನೋಯಿಸದೆ ಸಾಕಷ್ಟು ಯುದ್ಧತಂತ್ರದ ಸೃಜನಶೀಲತೆ ಅಗತ್ಯವಿದೆ ಎಂದು ಹೇಳಿದರು.

ಇಬ್ಬರು ಮಕ್ಕಳು ಸೇರಿದಂತೆ ಜನರೇಟರ್ ಸ್ಥಗಿತಗೊಂಡ ನಂತರ ಶಿಫಾದಲ್ಲಿ ಆರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ

ದೀಪಾವಳಿ ವೇಳೆ ಲಕ್ಷ್ಮೀಪೂಜೆ ಏಕೆ ಮಾಡಬೇಕು..? ಹೇಗೆ ಮಾಡಬೇಕು..?

ಸಾಮಾನ್ಯವಾಗಿ ಅಮಾವಾಸ್ಯೆಯನ್ನು ಅಶುಭದಿನವೆಂದು ಪರಿಗಣಿಸಲಾಗುತ್ತದೆ; ಆದರೆ ಈ ಅಮಾವಾಸ್ಯೆಯು ಅದಕ್ಕೆ ಅಪವಾದವಾಗಿದೆ. ಈ ದಿನವು ಶುಭದಿನವೆಂದು ಮನ್ನಣೆ ಪಡೆದಿದೆ; ಆದರೆ ಅದು ಎಲ್ಲ ಕಾರ್ಯಗಳಿಗಲ್ಲ. ಆದುದರಿಂದ ಈ ದಿನವನ್ನು ಶುಭದಿನ ಎನ್ನುವುದಕ್ಕಿಂತ ಆನಂದದ ದಿನ ಎನ್ನುವುದೇ ಯೋಗ್ಯವಾಗಿದೆ. ಈ ದಿನ ಶ್ರೀವಿಷ್ಣುವು ಲಕ್ಷ್ಮೀಸಹಿತ ಎಲ್ಲ ದೇವತೆಗಳನ್ನು ಬಲಿಚಕ್ರವರ್ತಿಯ ಸೆರೆಮನೆಯಿಂದ ಮುಕ್ತಗೊಳಿಸಿದನು.

ಅನಂತರ ಆ ಎಲ್ಲ ದೇವತೆಗಳು ಕ್ಷೀರಸಾಗರದಲ್ಲಿ ಹೋಗಿ ಮಲಗಿದರು ಎನ್ನುವ ಕಥೆ ಇದೆ. ಈ ದಿನ ‘ಪ್ರಾತಃಕಾಲದಲ್ಲಿ ಮಂಗಲಸ್ನಾನ ಮಾಡಿ ದೇವರ ಪೂಜೆ, ಮಧ್ಯಾಹ್ನ ಪಾರ್ವಣಶ್ರಾದ್ಧ ಹಾಗೂ ಬ್ರಾಹ್ಮಣಭೋಜನ ಮತ್ತು ಪ್ರದೋಷಕಾಲದಲ್ಲಿ ಎಲೆ-ಬಳ್ಳಿಗಳಿಂದ ಶೃಂಗರಿಸಿದ ಮಂಟಪದಲ್ಲಿ ಲಕ್ಷ್ಮೀ, ಶ್ರೀವಿಷ್ಣು ಮುಂತಾದ ದೇವತೆಗಳು ಮತ್ತು ಕುಬೇರನ ಪೂಜೆಯನ್ನು ಮಾಡುತ್ತಾರೆ. ಇವು ಈ ದಿನದ ವಿಧಿಗಳಾಗಿವೆ.

ಲಕ್ಷ್ಮೀಯ ಪೂಜೆಯನ್ನು ಮಾಡುವಾಗ ಒಂದು ಚೌರಂಗದ ಮೇಲೆ ಅಕ್ಷತೆಗಳಿಂದ ಅಷ್ಟದಳ ಕಮಲ ಅಥವಾ ಸ್ವಸ್ತಿಕವನ್ನು ಬಿಡಿಸಿ ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಸ್ಥಾಪಿಸುತ್ತಾರೆ. ಕೆಲವು ಕಡೆಗಳಲ್ಲಿ ಕಲಶದ ಮೇಲೆ ತಾಮ್ರದ ತಟ್ಟೆಯನ್ನಿಟ್ಟು ಅದರ ಮೇಲೆ ಲಕ್ಷ್ಮೀಯ ಮೂರ್ತಿಯನ್ನು ಇಡುತ್ತಾರೆ.

ಕಲಶದ ಮೇಲೆ ಲಕ್ಷ್ಮೀಯ ಸಮೀಪದಲ್ಲಿಯೇ ಕುಬೇರನ ಪ್ರತಿಮೆಯನ್ನು ಇಡುತ್ತಾರೆ. ಅನಂತರ ಲಕ್ಷ್ಮೀ ಮತ್ತು ಇತರ ದೇವತೆಗಳಿಗೆ ಲವಂಗ, ಏಲಕ್ಕಿ ಮತ್ತು ಸಕ್ಕರೆಯನ್ನು ಹಾಕಿ ತಯಾರಿಸಿದ ಹಸುವಿನ ಹಾಲಿನ ಖವೆಯ ನೈವೇದ್ಯವನ್ನು ಅರ್ಪಿಸುತ್ತಾರೆ. ಕೊತ್ತಂಬರಿ, ಬೆಲ್ಲ, ಭತ್ತದ ಅರಳು, ಬತ್ತಾಸು ಇತ್ಯಾದಿ ಪದಾರ್ಥಗಳನ್ನು ಲಕ್ಷ್ಮೀಗೆ ಅರ್ಪಿಸಿ ನಂತರ ಅವುಗಳನ್ನು ಆಪ್ತೇಷ್ಟರಿಗೆ ಹಂಚುತ್ತಾರೆ.

ನಂತರ ಕೈಯಲ್ಲಿನ ದೀವಟಿಗೆಯಿಂದ ಪಿತೃಗಳಿಗೆ ಮಾರ್ಗದರ್ಶನ ಮಾಡುತ್ತಾರೆ. ಬ್ರಾಹ್ಮಣರಿಗೆ ಮತ್ತು ಇತರ ಹಸಿದ ವರಿಗೆ ಊಟವನ್ನು ಕೊಡುತ್ತಾರೆ. ರಾತ್ರಿ ಜಾಗರಣೆ ಮಾಡುತ್ತಾರೆ. ಆಶ್ವಯುಜ ಅಮಾವಾಸ್ಯೆಯ ರಾತ್ರಿ ಲಕ್ಷಿ ಯು ಎಲ್ಲೆಡೆಗೆ ಸಂಚರಿಸಿ ತನ್ನ ನಿವಾಸಕ್ಕಾಗಿ ಯೋಗ್ಯ ಸ್ಥಾನವನ್ನು ಹುಡುಕುತ್ತಾಳೆ ಎಂದು ಪುರಾಣದಲ್ಲಿ ಹೇಳಲಾಗಿದೆ.

ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಎಲ್ಲಿ ಸ್ವಚ್ಛತೆ, ಶೋಭೆ ಇರುತ್ತದೆಯೋ ಅಲ್ಲಿ ಅವಳು ಆಕರ್ಷಿತಳಾಗುತ್ತಾಳೆ. ಅಲ್ಲದೆ ಯಾವ ಮನೆಯಲ್ಲಿ ಚಾರಿತ್ರ್ಯವುಳ್ಳ, ಕರ್ತವ್ಯದಕ್ಷ, ಸಂಯಮವುಳ್ಳ, ಧರ್ಮನಿಷ್ಠ ದೇವಭಕ್ತರು ಮತ್ತು ಕ್ಷಮಾಶೀಲ ಪುರುಷರು ಹಾಗೂ ಗುಣವತಿ ಮತ್ತು ಪತಿವ್ರತಾ ಸ್ತ್ರೀಯರು ಇರುತ್ತಾರೆಯೋ ಅಲ್ಲಿ ವಾಸಿಸಲು ಲಕ್ಷ್ಮೀಯು ಇಷ್ಟಪಡುತ್ತಾಳೆ.’ ಈ ಪೂಜೆಯಲ್ಲಿ ಕೊತ್ತಂಬರಿ ಮತ್ತು ಭತ್ತದ ಅರಳನ್ನು ಅರ್ಪಿಸುತ್ತಾರೆ.

ಇದಕ್ಕೆ ಕಾರಣವೇನೆಂದರೆ ಕೊತ್ತಂಬರಿಯು (ಧನಿಯಾ) ಧನವಾಚಕ ಶಬ್ದವಾಗಿದೆ ಮತ್ತು ಅರಳು ಸಮೃದ್ಧಿಯ ಪ್ರತೀಕವಾಗಿವೆ. ಸ್ವಲ್ಪ ಭತ್ತಗಳನ್ನು ಹುರಿದರೂ ಕೈತುಂಬಾ ಅರಳುಗಳಾಗುತ್ತವೆ. ಲಕ್ಷ್ಮೀಯ ಸಮೃದ್ಧಿಯಿರಬೇಕೆಂದು ಸಮೃದ್ಧಿಯ ಪ್ರತೀಕವಾಗಿರುವ ಅರಳನ್ನು ಅರ್ಪಿಸುತ್ತಾರೆ. ಆನಂತರ ಕಲಾಪ್ರೇಮಿ ಜನರಿಗೆ ಪ್ರಿಯವಾಗಿರುವ ಹಂಸವಾಹಿನಿ, ಜ್ಞಾನಸ್ವರೂಪಿಣಿ, ಜ್ಞಾನಿಯರಿಗೆ ವಿದ್ಯಾದಾನವನ್ನು ಮಾಡುವ ಮತ್ತು ಬಂದಿರುವ ಲಕ್ಷ್ಮೀಯನ್ನು ಯೋಗ್ಯರೀತಿಯಲ್ಲಿ ಉಪಯೋಗಿಸಲು ವಿವೇಕವನ್ನು ಜಾಗೃತಗೊಳಿಸುವ ಶ್ರೀಸರಸ್ವತಿ ದೇವಿಯ ಪೂಜೆಯನ್ನು ಮಾಡಬೇಕು.

ಅಲಕ್ಷ್ಮೀಯ ನಿರ್ಮೂಲನ : ಗುಣಗಳನ್ನು ನಿರ್ಮಾಣ ಮಾಡಿದರೂ ದೋಷಗಳು ನಾಶವಾಗ ಬೇಕು; ಆಗಲೇ ಗುಣಗಳಿಗೆ ಮಹತ್ವವು ಬರುತ್ತದೆ. ಇಲ್ಲಿ ಲಕ್ಷ್ಮೀಪ್ರಾಪ್ತಿಯ ಉಪಾಯವಾಯಿತು, ಹಾಗೆಯೇ ಅಲಕ್ಷಿ ಯ ನಾಶವೂ ಆಗಬೇಕು. ಇದಕ್ಕಾಗಿ ಈ ದಿನದಂದು ಹೊಸ ಪೊರಕೆಯನ್ನು ಖರೀದಿಸುತ್ತಾರೆ. ಅದಕ್ಕೆ ‘ಲಕ್ಷ್ಮೀ’ ಎನ್ನುತ್ತಾರೆ.

‘ನಡುರಾತ್ರಿಯಲ್ಲಿ ಹೊಸ ಪೊರಕೆಯಿಂದ ಕಸಗುಡಿಸಿ ಅದನ್ನು ಮೊರದಲ್ಲಿ ತುಂಬಿ ಹೊರಗೆ ಹಾಕಬೇಕು’ ಎಂದು ಹೇಳಲಾಗಿದೆ. ಇದಕ್ಕೆ ‘ಅಲಕ್ಷ್ಮೀ (ಕಸ, ದಾರಿದ್ರ್ಯ) ನಿರ್ಮೂಲನ’ ಎನ್ನುತ್ತಾರೆ. ಸಾಮಾನ್ಯವಾಗಿ ರಾತ್ರಿ ಸಮಯದಲ್ಲಿ ಕಸವನ್ನು ಗುಡಿಸುವುದಿಲ್ಲ ಅಥವಾ ಹೊರಗೆ ಹಾಕುವುದಿಲ್ಲ. ಕೇವಲ ಈ ರಾತ್ರಿ ಮಾತ್ರ ಹಾಗೆ ಮಾಡುವುದಿರುತ್ತದೆ. ಕಸ ಗುಡಿಸುವಾಗ ಮೊರ ಮತ್ತು ಚರ್ಮದ ವಾದ್ಯವನ್ನು ಬಾರಿಸಿ ಅಲಕ್ಷಿ ಯನ್ನು ಓಡಿಸುತ್ತಾರೆ.

(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ ‘ಹಬ್ಬ, ಧಾರ್ಮಿಕ ಉತ್ಸವ ಮತ್ತು ವ್ರತಗಳು’)

ಸಂಗ್ರಹ : ಶ್ರೀ. ವಿನೋದ ಕಾಮತ್,
ರಾಜ್ಯ ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : 9342599299)

ಟ್ರಕ್‍ಗೆ ಕಾರು ಅಪ್ಪಳಿಸಿ ಒಂದೇ ಕುಟುಂಬದ ನಾಲ್ವರ ಸಾವು

ಕೋಟಾ, ನ.12 (ಪಿಟಿಐ) ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರು ಪುಷ್ಕರ್‍ಗೆ ತೆರಳುತ್ತಿದ್ದಾಗ ಹಿಂದೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ. ಮೃತರನ್ನು ಮಧ್ಯಪ್ರದೇಶದ ಅರ್ಗ-ಮಾಲ್ವಾ ಜಿಲ್ಲೆಯ ಗಂಗುಖೇಡಿ ಗ್ರಾಮದ ನಿವಾಸಿಗಳಾದ ದೇವಿ ಸಿಂಗ್ (50), ಅವರ ಪತ್ನಿ ಮಾಂಖೋರ್ ಕನ್ವರ್ (45), ಅವರ ಸಹೋದರ ರಾಜಾರಾಂ (40) ಮತ್ತು ಸೋದರಳಿಯ ಜಿತೇಂದ್ರ (20) ಎಂದು ಗುರುತಿಸಲಾಗಿದೆ.

ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್

12.30 ರ ಸುಮಾರಿಗೆ ನಾಲ್ವರನ್ನು ಹೊತ್ತೊಯ್ಯುತ್ತಿದ್ದ ಎಸ್‍ಯುವಿ ಹಿಂದೋಲಿ ಪಟ್ಟಣದ ಬಳಿ ಹಿಂದಿನಿಂದ ಹೆವಿ ಡ್ಯೂಟಿ ಟ್ರಕ್‍ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಹಿಂದೋಳಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್ ಮನೋಜ್ ಸಿಕರ್ವಾಲ್ ತಿಳಿಸಿದ್ದಾರೆ.

ಎಸ್‍ಯುವಿ ಬಹುಶಃ ವೇಗವಾಗಿ ಚಲಿಸುತ್ತಿತ್ತು ಮತ್ತು ಮುಂದೆ ಇದ್ದ ಟ್ರಕ್ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದರಿಂದ ವಾಹನವು ಅದರೊಳಗೆ ನುಗ್ಗಿತು ಎಂದು ಅವರು ಹೇಳಿದರು.

ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ನವದೆಹಲಿ, ನ.12 (ಪಿಟಿಐ) – ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಿಮಾಚಲ ಪ್ರದೇಶದ ಲೆಪ್ಚಾ ತಲುಪಿ ಅಲ್ಲಿನ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಹಬ್ಬ ಆಚರಿಸಿದರು. 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ, ಮೋದಿ ಅವರು ದೀಪಾವಳಿಯನ್ನು ಆಚರಿಸಲು ಮಿಲಿಟರಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವುದುನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ.

ಎಕ್ಸ್ ನಲ್ಲಿನ ಪೋಸ್ಟ್‍ನಲ್ಲಿ, ನಮ್ಮ ಧೈರ್ಯಶಾಲಿ ಭದ್ರತಾ ಪಡೆಗಳೊಂದಿಗೆ ದೀಪಾವಳಿ ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೂ ಮುನ್ನ ಅವರು ದೀಪಾವಳಿಯ ಶುಭಾಶಯಗಳನ್ನು ಕೋರಿದರು ಮತ್ತು ಜನರಿಗೆ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ಹಾರೈಸಿದರು.

ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ

ಎಲ್ಲರಿಗೂ ದೀಪಾವಳಿಯ ಶುಭಾಶಯಗಳು! ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಮೋದಿ ಹೇಳಿದರು.

ಡ್ರಗ್ಸ್ ದಂಧೆಯಲ್ಲಿ ಸಿಕ್ಕಿಬಿದ್ದ 15 ವರ್ಷದ ಬಾಲಕ

ಭುವನೇಶ್ವರ್, ನ.12 (ಪಿಟಿಐ)- ಹದಿನೈದು ವರ್ಷದ ಬಾಲಕ ಲಕ್ಷಾಂತರ ಮೌಲ್ಯದ ಬ್ರೌನ್ ಶುಗರ್ ಸಾಗಿಸುತ್ತಿದ್ದ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಬಾಲಕಿನ ಬಳಿ ಇದ್ದ 1.26 ಕೆಜಿ ತೂಕದ ಬ್ರೌನ್ ಶುಗರ್ ವಶಪಡಿಸಿಕೊಂಡಿದ್ದ ಆತನನ್ನು ಮೂರು ವರ್ಷಗಳ ಕಾಲ ಬಾಲಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಜುವೆನೈಲ್ ಜಸ್ಟೀಸ್ ಬೋರ್ಡ್‍ನವರು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‍ಸ್ಟೆನ್ಸ್ (ಎನ್‍ಡಿಪಿಎಸ್) ಕಾಯ್ದೆ 1985 ರ ಅಡಿಯಲ್ಲಿ ಅಪರಾಧಿ ಎಂದು ಘೋಷಿಸಿದ ನಂತರ ಹುಡುಗನನ್ನು ಬರ್ಹಾಂಪುರದ ವಿಶೇಷ ಮನೆಯಲ್ಲಿ ಇರಿಸಿದ್ದಾರೆ.

ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸಮಾಲೋಚನೆ, ನಡವಳಿಕೆ ಮಾರ್ಪಾಡು ಚಿಕಿತ್ಸೆ, ಮನೋವೈದ್ಯಕೀಯ ಬೆಂಬಲ ಮತ್ತು ತಂಗಿರುವ ಅವಯಲ್ಲಿ ಚಿಕಿತ್ಸೆ ಸೇರಿದಂತೆ ಸುಧಾರಣಾ ಸೇವೆಗಳನ್ನು ಒದಗಿಸಲು ಮನೆಗೆ ನಿರ್ದೇಶಿಸಿದೆ. ಆಗಸ್ಟ್ 12, 2021 ರಂದು ಖುರ್ಧಾ ಬಸ್ ನಿಲ್ದಾಣದ ಬಳಿ 1.26 ಕೆಜಿ ಬ್ರೌನ್ ಶುಗರ್‍ನೊಂದಿಗೆ ರಾಜ್ಯ ಪೊಲೀಸರ ವಿಶೇಷ ಕಾರ್ಯಪಡೆಯಿಂದ ಬಾಲಕ ಇತರ ಮೂವರ ಜೊತೆಗೆ ಸಿಕ್ಕಿಬಿದ್ದಿದ್ದಾನೆ.

ರಾಜ್ಯದ ಬೊಕ್ಕಸಕ್ಕೆ ನಷ್ಟವುಂಟುಮಾಡಿದ ಆರೋಪ : ಮಾಜಿ ಸಚಿವ ಸೇರಿ 8 ಮಂದಿ ವಿರುದ್ಧ ಕೇಸ್

ಹುಡುಗನಿಗೆ ಶಿಕ್ಷೆ ವಿಧಿಸುವ ಮೊದಲು ಹನ್ನೊಂದು ಸಾಕ್ಷಿಗಳು ಮತ್ತು ಇತರ ಸಾಕ್ಷ್ಯಗಳನ್ನು ಮಂಡಳಿಯು ಪರಿಶೀಲಿಸಿತು. ವಯಸ್ಕರಾದ ಉಳಿದ ಆರೋಪಿಗಳ ವಿಚಾರಣೆ ಸದ್ಯಕ್ಕೆ ನಡೆಯುತ್ತಿದೆ.

ಶರದ್‍ ಪವಾರ್ ಅಸ್ವಸ್ಥ

ಪುಣೆ, ನ.12 (ಪಿಟಿಐ) ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅಸ್ವಸ್ಥಗೊಂಡಿದ್ದಾರೆ. ಅವರು ಮಹಾರಾಷ್ಟ್ರದ ಪುಣೆ ಜಿಲ್ಲೆಯ ತಮ್ಮ ಸ್ವಗ್ರಾಮ ಬಾರಾಮತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದಾಗ ಅಸ್ವಸ್ಥಗೊಂಡಿದ್ದಾರೆ ಮತ್ತು ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪವಾರ್ ಅವರು ಶನಿವಾರ ಸಂಜೆ ತಮ್ಮ ಕುಟುಂಬದ ನಿಯಂತ್ರಣದಲ್ಲಿರುವ ವಿದ್ಯಾ ಪ್ರತಿಷ್ಠಾನದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು, ಅವರು ಅಸ್ವಸ್ಥರಾಗಿದ್ದರು ಮತ್ತು ತಕ್ಷಣ ವೈದ್ಯರು ಪರೀಕ್ಷಿಸಿದರು ಎಂದು ಅವರು ಹೇಳಿದರು.

ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಮನ ಬೆಳಗಲಿ : ಪ್ರಧಾನಿ ಮೋದಿ

82 ವರ್ಷದ ನಾಯಕ ದೀಪಾವಳಿಗೆ ಬಾರಾಮತಿಯಲ್ಲಿದ್ದರು. ಇಂದು ಅವರ ಪುಣೆ ಜಿಲ್ಲೆಯ ಪುರಂದರ ಅವರ ನಿಗದಿತ ಭೇಟಿಯನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.