Thursday, November 6, 2025
Home Blog Page 1823

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೇ ಬದಲಾದ ಕಾಂಗ್ರೆಸ್ ತಂತ್ರಗಾರಿಕೆ

ಬೆಂಗಳೂರು, ನ.11- ಯುವ ಶಾಸಕ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಚುರುಕಾಗಿರುವ ಕಾಂಗ್ರೆಸ್ ಲಿಂಗಾಯಿತ ಮತಗಳನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಲಾರಂಭಿಸಿದೆ. ಬಿ.ಎಸ್.ಯಡಿ ಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಕ್ಕೆ ಪ್ರಾಯಶ್ಚಿತ ಅನುಭವಿಸಿದ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಪರಿಣಾಮ ಅನುಭವಿಸಿತ್ತು. ಪರಿಸ್ಥಿತಿಯ ಲಾಭ ಪಡೆದ ಕಾಂಗ್ರೆಸ್ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರನ್ನು ಸೆಳೆದುಕೊಂಡು ಕೇಸರಿ ಪಡೆಗೆ ಭಾರೀ ಪೆಟ್ಟು ನೀಡಿತ್ತು.

ಯಡಿಯೂರಪ್ಪನವರು ತಮಗೆ ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷ ಮುಖ್ಯ ಎಂಬ ಸಿದ್ಧಾಂತಕ್ಕೆ ಕಟಿ ಬದ್ಧರಾಗಿ, ತಮ್ಮ ವಯೋ ಸಹಜ ಆಯಾಸವನ್ನು ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೂ ಅದು ಅಷ್ಟು ಪರಿಣಾಮ ಬೀರಿರಲಿಲ್ಲ. ಬಿಜೆಪಿಯಲ್ಲಿರುವ ಹಲವು ಲಿಂಗಾಯಿತ ವೀರಶೈವ ನಾಯಕರು ಕಾಂಗ್ರೆಸ್ನತ್ತ ಮುಖ ಮಾಡಿದ್ದರು.

ಅವರನ್ನು ಸೆಳೆಯಲು ಕಾಂಗ್ರೆಸ್ ಕೂಡ ಗಾಳ ಹಾಕಿ ಕುಳಿತಿತ್ತು. ಈಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಪರಿಸ್ಥಿತಿ ಬದಲಾಗಿದೆ. ಯಡಿಯೂರಪ್ಪ ಕುಟುಂಬದ ಮೇಲೆ ಸಮುದಾಯದ ಅವ್ಯಕ್ತವಾದ ವಿಶ್ವಾಸ ಹೆಚ್ಚಾಗುವ ಸಾಧ್ಯತೆಗಳಿವೆ. ಇದು ಕಾಂಗ್ರೆಸ್ನ ಆಪರೆಷನ್ ಹಸ್ತಕ್ಕೆ ಅಡೆಯಾಗುವುದಲ್ಲದೆ, ಲಿಂಗಾಯಿತ ಸಮುದಾಯದ ವಿಶ್ವಾಸ ಗಳಿಸುವ ಕೈ ಪಡೆಯ ವೇಗಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿದೆ.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಲಿಂಗಾಯಿತ ವೀರಶೈವ ಸಮುದಾಯ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ನವರಾದರೂ ಸಮುದಾಯದ ವಿಷಯ ಬಂದಾಗ ಮುಲ್ಲಾಜಿಲ್ಲದೆ ಮಾತನಾಡಿ ಮುಜುಗರ ಉಂಟು ಮಾಡುತ್ತಿದ್ದಾರೆ. ಪಕ್ಷದಲ್ಲೇ ಇರುವ ಎಂ.ಬಿ.ಪಾಟೀಲ್ ಲಿಂಗಾಯಿತ ವೀರಶೈವ ನಾಯಕರಾಗುವ ಅವಕಾಶಗಳಿದ್ದಾಗ್ಯೂ ಏಕವ್ಯಕ್ತಿ ನಾಯಕತ್ವದ ಒಳೈಕೆಗೆ ಹೆಚ್ಚಿನ ಸಮಯ ಕಳೆಯುವ ಮೂಲಕ, ಹತ್ತರಲ್ಲಿ ಹನ್ನೊಂದನೆ ನಾಯಕರಾಗಿ ಉಳಿದು ಹೋಗಿದ್ದಾರೆ. ಈಶ್ವರ್ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಬಸವರಾಜ ರಾಯರೆಡ್ಡಿ ಸೇರಿದಂತೆ ಇತರ ನಾಯಕರು ಪ್ರಾದೇಶಿಕವಾಗಿ ಸೀಮಿತವಾಗಿದ್ದಾರೆ.

ಹೀಗಾಗಿ ಕಾಂಗ್ರೆಸ್ ವಲಸಿಗರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿಯವರಿಗೆ ಹೆಚ್ಚು ಮಣೆ ಹಾಕಿ ಹೊಸ ನಾಯಕತ್ವ ಬೆಳೆಸಲು ಚಿಂತನೆ ನಡೆಸಿದೆ.ವಿಜಯೇಂದ್ರ ಈ ಮೊದಲು ಹಲವು ಬಾರಿ ಕಾಂಗ್ರೆಸ್ಗೆ ಟಕ್ಕರ್ ನೀಡಿ ಸೋಲಿನ ರುಚಿ ಉಣಿಸಿದ್ದಾರೆ. ಈಗ ಅವರ ಬೆನ್ನಿಗೆ ಅಗಾಧ ಶಕ್ತಿಯಾಗಿ ಬಿ.ಎಸ್.ಯಡಿಯೂರಪ್ಪ ಸರ್ವ ಪ್ರಮಾಣದಲ್ಲೂ ಇರುವುದು ಕಾಂಗ್ರೆಸ್ಗೆ ಹೊಸ ಸವಾಲಾಗಿ ಪರಿಣಮಿಸಿದೆ. ಲೋಕಸಭೆ ಚುನಾವಣೆವರೆಗೂ ಲಿಂಗಾಯಿತ ವೀರಶೈವ ಸಮುದಾಯವನ್ನು ಕಾಯ್ದಿಟ್ಟುಕೊಳ್ಳಲು ಕಾಂಗ್ರೆಸ್ ನಡೆಸುತ್ತಿದ್ದ ಹೋರಾಟ ಹಿಮ್ಮುಖವಾಗುವ ಸಾಧ್ಯತೆ ಇದೆ. ಲಿಂಗಾಯಿತ ಸಮುದಾಯದ ಮತಗಳು ಒಂದು ಕಡೆ ಗಟ್ಟಿಗೊಳ್ಳುವ ನಿರೀಕ್ಷೆಗಳಿರುವುದರಿಂದ ಕಾಂಗ್ರೆಸ್ ಉಳಿದ ಒಕ್ಕಲಿಗ, ಹಿಂದುಳಿದ ವರ್ಗ, ಪರಿಶಿಷ್ಟ, ಅಲ್ಪಸಂಖ್ಯಾತ ಮತಗಳನ್ನು ಕೇಂದ್ರೀಕರಿಸುವ ಲೆಕ್ಕಾಚಾರದಲ್ಲಿದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜು ಆಯೋಗದ ವರದಿಗೆ ಒಕ್ಕಲಿಗ ಹಾಗೂ ಲಿಂಗಾಯಿತ ವೀರಶೈವ ಪ್ರಬಲ ಸಮುದಾಯಗಳು ವಿರೋಧ ವ್ಯಕ್ತ ಪಡಿಸುತ್ತಿವೆ. ಮನೆಯಲ್ಲೆ ಕುರಿತು ಸಮೀಕ್ಷಾ ವರದಿ ಬರೆಯಲಾಗಿದೆ. ಅದನ್ನು ಅಂಗೀಕರಿಸಬಾರದು, ಮರು ಸಮೀಕ್ಷೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಈಗಾಗಲೇ ಶಾಮನೂರು ಶಿವಶಂಕರಪ್ಪ ಪ್ರಕಟಿಸಿದ್ದಾರೆ.

ಕಾಂತರಾಜು ವರದಿಯನ್ನು ಬೆಳಗಾವಿ ಅವೇಶನದಲ್ಲಿ ಮಂಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡುವ ಮೂಲಕ ಕಾಂಗ್ರೆಸ್ ಬಿಜೆಪಿಗೆ ಎದಿರೇಟು ಹಾಕಲು ತಯಾರಿ ನಡೆಸಿದೆ ಎಂದು ಹೇಳಲಾಗಿದೆ.

ಅತ್ತೂ ಕರೆದು ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ್ದಾರೆ : ಶೆಟ್ಟರ್ ಲೇವಡಿ

ಬೆಂಗಳೂರು, ನ.11- ಪಕ್ಷದ ರಾಜ್ಯಾಧ್ಯಕ್ಷರ ನೇಮಕದಲ್ಲಿ ಬಿಜೆಪಿ ಹೈಕಮಾಂಡ್ ವಿಫಲವಾಗಲಿದೆ. ಆರು ತಿಂಗಳಿನಿಂದ ಖಾಲಿ ಇದ್ದ ಹುದ್ದೆಗೆ ಅತ್ತೂ ಕರೆದು ನೇಮಕ ಮಾಡಿಸಿಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ತಿಂಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇತ್ತು. ಇಷ್ಟು ದಿನ ಯಾಕೆ ನೇಮಕ ಮಾಡಲಿಲ್ಲ. ಈ ಅವಯಲ್ಲಿ ತಳಮಟ್ಟದಲ್ಲಿ ಏನಾಗಿದೆ ಎಂದು ಕಾರ್ಯಕರ್ತರನ್ನು ಕೇಳಿದರೆ ಗೋತ್ತಾಗುತ್ತದೆ.ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಣೆ ಬರಹ ಗೊತ್ತಾಗಿದೆ. ಈಗ ಎಷ್ಟೇ ರಿಪೇರಿ ಮಾಡಿದರೂ ಸರಿ ಹೋಗುವುದಿಲ್ಲ ಎಂದರು.

ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗಳಿಸಿ ಬಲಾಢ್ಯವಾಗಿದೆ. ಗಟ್ಟಿಯಾದ, ಉತ್ತಮ ಆಡಳಿತ ನೀಡುತ್ತಿದೆ. ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ. ಪಂಚಖಾತ್ರಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿವೆ. ಅವುಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಪರಿಣಾಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 10 ರಿಂದ 12 ಸ್ಥಾನ ಗೆಲ್ಲಲಿದೆ, ಸಂದರ್ಭಾನುಸಾರ 20ಕ್ಕೆ ಹೋಗಬಹುದು ಎಂದರು.

ಬಿಜೆಪಿಯ 12 ಸಂಸದರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವದ್ಧಂತಿಯ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ವಿಜೆಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದರಿಂದ ರಾಜಕಾರಣದಲ್ಲಾಗುವ ಪರಿಣಾಮಗಳನ್ನು ಕಾದು ನೋಡಬೇಕಿದೆ. ತಾವು ಬಿಜೆಪಿ ಬಿಟ್ಟು ಬಂದಿದ್ದರಿಂದ ಅದರ ನಷ್ಟ ಸರಿ ತೂಗಿಸಲು ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ನಾನು ಹೇಳುವುದಿಲ್ಲ. ನನ್ನ ಬಗ್ಗೆ ನಾನು ಹೇಳಿಕೊಳ್ಳುವುದಿಲ್ಲ ಎಂದರು.

ಆರು ತಿಂಗಳಿನಿಂದ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಧಾನಮಂಡಲಗಳ ಉಭಯ ಸದನಗಳ ವಿರೋಧ ಪಕ್ಷದ ನಾಯಕರ ಹುದ್ದೆಗಳು ಖಾಲಿ ಇದ್ದವು. ಡಿಸೆಂಬರ್ 4ರಿಂದ ಬೆಳಗಾವಿ ಅವೇಶನ ಶುರುವಾಗಲಿದೆ. ಆ ವೇಳೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆಯಾಗಬೇಕು, ಇಲ್ಲವಾದರೆ ಮುಜುಗರ ಅನುಭವಿಸಬೇಕಾಗುತ್ತದೆ. ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಅದನ್ನು ಕಾದು ನೋಡುತ್ತೇವೆ ಎಂದರು.

ಕಾಂತರಾಜು ವರದಿಯ ಬಗ್ಗೆ ವಾದ ವಿವಾದಗಳಿವೆ, ಸಮಗ್ರ ಪರಿಶೀಲನೆ ನಡೆಯಬೇಕು , ಸರ್ಕಾರ ಯೋಗ್ಯ ನಿರ್ಧಾರ ತೆಗೆದುಕೊಳ್ಳಬೇಕು ಎಂದ ಅವರು, ಆಪರೇಷನ್ ಕಮಲ ನಡೆಸುತ್ತೇವೆ, ಮುಂದಿನ ಜನವರಿ ವೇಳೆಗೆ ಸರ್ಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಹಿಂದೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ಏನಾಗಿದೆ ಎಂದು ಗೊತ್ತಿದೆ.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಮಧ್ಯ ಪ್ರವೇಶದಲ್ಲಿ ಆಪರೆಷನ್ ಕಮಲ ಮಾಡಿದರು. ರಾಜಸ್ಥಾನದಲ್ಲಿ ಆಪರೇಷನ್ ಮಾಡಲು ಹೋಗಿ ಕೈ ಸುಟ್ಟುಕೊಂಡರು. ಕರ್ನಾಟದಲ್ಲಿ 40-50 ಶಾಸಕರನ್ನು ಸೆಳೆದುಕೊಳ್ಳುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಮೊದಲು ಬಿಜೆಪಿಯನ್ನು ಸರಿಯಾಗಿಟ್ಟುಕೊಳ್ಳಲಿ, ಕಾಂಗ್ರೆಸ್ ಸರ್ಕಾರ ಕೆಡವುತ್ತೇವೆ ಎಂದುಕೊಂಡಿದ್ದರೆ ಅದು ಸಾಧ್ಯವಾಗುವುದಿಲ್ಲ ಎಂದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ನನಗಿರುವ ಮಾಹಿತಿ ಪ್ರಕಾರ ಮಧ್ಯಪ್ರದೇಶ, ತೆಲಂಗಾಣ, ಚತ್ತೀಸ್ಗಡ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಜಸ್ಥಾನದಲ್ಲಿ ಪೈಪೊಟಿ ಇದೆ. ಒಳ್ಳೆಯ ಫಲಿತಾಂಶವಂತೂ ಬರುತ್ತದೆ. ಇಂಡಿಯಾ ಮೈತ್ರಿಕೂಡದಲ್ಲಿ ಸ್ಥಾನ ಹಂಚಿಕೆ ಸಂದರ್ಭದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಚುನಾವಣೆ ಕಾಲಕ್ಕೆ ಎಲ್ಲವೂ ಸರಿ ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಅನಗತ್ಯ. ಹೈಕಮಾಮಡ್ ಯಾವ ರೀತಿಯ ಹೇಳಿಕೆಯನ್ನು ನೀಡಿಲ್ಲ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉಳಿದ ಚರ್ಚೆಗಳು ಅನಗತ್ಯ. ಯಾರೋ ಒಬ್ಬರು ಹೇಳಿದಕ್ಕೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದರು. ಬಿಜೆಪಿಯ ಶಾಸಕ ಚಿಕ್ಕನಗೌಡರು ದೀಪಾವಳಿ ಹಬ್ಬದ ನಂತರ ರಾಜಕೀಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರೊಂದಿಗೆ ಭೇಟಿ ಮಾಡಿಸಿದ್ದೇನೆ. ಮುಂದಿನ ನಿರ್ಧಾರವನ್ನು ಕಾದು ನೋಡುತ್ತಿದ್ದೇವೆ ಎಂದರು.

ಬಿಜೆಪಿಯ ಮಡಿಕೆ ತಳ ಒಡೆದು ಹೋಗಿದೆ : ಸಚಿವ ಚಲುವರಾಯಸ್ವಾಮಿ ಲೇವಡಿ

ಬೆಂಗಳೂರು, ನ.11- ಬಿಜೆಪಿಯೆಂಬ ಮಡಿಕೆಯ ತಳ ಒಡೆದು ಹೋಗಿದೆ. ಎಷ್ಟೇ ನೀರು ತುಂಬಿದರೂ ನಿಲ್ಲಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಹೊಸದಾಗಿ ಅಧ್ಯಕ್ಷರಾಗಿರುವ ವಿಜೆಯೇಂದ್ರ ಒಳ್ಳೆಯವರು, ಆತ ನನ್ನ ಸ್ನೇಹಿತ, ಯಡಿಯೂರಪ್ಪನವರ ಬಗ್ಗೆ ನನಗೆ ಗೌರವ ಇದೆ ಎಂದರು.

ಯಡಿಯೂರಪ್ಪರನ್ನು ಕೆಳಗಿಸಿದಾಗಲೇ ಅವತ್ತೇ ಬಿಜೆಪಿಯ ಮಡಿಕೆ ಹೊಡೆದು ಹೋಗಿದೆ. ವಿಜೆಯೇಂದ್ರರನ್ನು ಮಂತ್ರಿ ಮಾಡಿ ಎಂದಾಗ ಮಾಡಲಿಲ್ಲ. ಈಗ ತಮ್ಮ ಪರಿಸ್ಥಿತಿ ಗೋತ್ತಾಗಿ ರಾಜ್ಯಧ್ಯಕ್ಷನ್ನಾಗಿ ನೇಮಿಸಿ ಪ್ಯಾಚ್ ಅಪ್ ಮಾಡಲು ಹೋಗಿದ್ದಾರೆ ಎಂದರು.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಏನೇ ಮಾಡಿದರೂ ಬಿಜೆಪಿ ಬಲವೃದ್ಧಿಗೊಳ್ಳುವುದಿಲ್ಲ. ಹಿಂದೆ ಯಡಿಯೂರಪ್ಪ ಇದ್ದಾಗ ಬಿಜೆಪಿಗೆ ಬಲ ಇತ್ತು, ಆದರೂ 115 ಸ್ಥಾನ ಗೆಲ್ಲಲು ಅವರಿಂದ ಆಗಲಿಲ್ಲ. ಈಗ ಗೆಲ್ಲುತ್ತಾರಾ ಎಂದರು. ಯಾವುದೇ ಕಾರಣಕ್ಕೂ ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಲ್ಲ. ಅನಿವಾರ್ಯತೆಯಲ್ಲಿ ಹುಡುಕಿ ಹುಡುಕಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಯನ್ನು ಹೇಗೆ ಸೇರಿಸಿಕೊಳ್ಳಲು ಓಡಾಡುತ್ತಾರೆ, ಕುಮಾರಸ್ವಾಮಿಯೂ ಹೇಗೆ ಬಿಜೆಪಿ ಜೊತೆ ಸೇರಿಕೊಳ್ಳಲು ಪ್ರಯತ್ನಿಸುತ್ತಾರೆ. ಆ ರೀತಿ ಇವರು ಹೋಗಿದ್ದಾರೆ ಎಂದರು.

ಕುಟುಂಬ ರಾಜಕಾರಣ ಬಗ್ಗೆ ಮಾತನಾಡಲ್ಲ. ಎಲ್ಲಾ ಪಕ್ಷದಲ್ಲೂ ಇದೆ, ಕುಮಾರಸ್ವಾಮಿ ಮಾಡುತ್ತಿಲ್ಲ, ಬಿಜೆಪಿಯಲ್ಲಿ ಇಲ್ವಾ. ವಂಶಪಾರಂಪರ್ಯ ರಾಜಕಾರಣ ಎಂಬುದ್ದೇಲಾ ಅನಗತ್ಯ ಚರ್ಚೆ ಎಂದರು.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು, ನ.11- ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಇದೇ 15ರಂದು ಅಕೃತವಾಗಿ ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ನಂತರ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಹಲವು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟಿಲ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ವಿಜಯೇಂದ್ರ ಅಭಿಮಾನಿಗಳು ಭರ್ಜರಿ ಕಾರ್ಯಕರ್ತರನ್ನು ಸೇರಿಸಿ ಹೊಸ ಸಂದೇಶ ರವಾನಿಸಲು ಮುಂದಾಗಿದ್ದಾರೆ.ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಡಿ.ಕೆ.ಶಿವಕುಮಾರ್ ಯಾವ ರೀತಿ ಕಾರ್ಯಕ್ರಮ ಆಯೋಜಿಸಿದ್ದರೋ ಅದೇ ಮಾದರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದು, ಪಕ್ಷದ ಎಲ್ಲ ನಾಯಕರನ್ನು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ಗಣ್ಯರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ.

ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡುವ ಉದ್ದೇಶದಿಂದ ಜೆ.ಪಿ.ನಡ್ಡಾ ಅವರು ವರ್ಚುಯಲ್ ಮೂಲಕ ಭಾಗಿಯಾಗುವ ಸಂಭವವಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ರಾಜ್ಯಾದ್ಯಂತ ಬಿಎಸ್ವೈ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆಗುಂದಿರುವ ಬಿಜೆಪಿಗೆ ನವ ಚೈತನ್ಯ ನೀಡುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಪಕ್ಷ ತೀರ್ಮಾನಿಸಿದೆ.

ರಾಜ್ಯದಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಮಾರಂಭ ಬೇಡ ಎಂದು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ಸಲಹೆ ಕೊಟ್ಟಿದ್ದರು. ಆಡಂಬರವಿಲ್ಲದೆ ಕಾರ್ಯಕರ್ತರಿಗೆ ಶಕ್ತಿ ತುಂಬುವ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಸಂದೇಶ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಹೀಗಾಗಿ ವಿಜಯೇಂದ್ರ ತಮ್ಮ ಅಧಿಕಾರ ಸ್ವೀಕಾರ ಸಮಾರಂಭವನ್ನು ಪಕ್ಷದ ಎಲ್ಲರ ಸಮ್ಮುಖದಲ್ಲೂ ಸ್ವೀಕರಿಸಿ ಕಾರ್ಯಕರ್ತರಿಗೂ ಹೊಸ ಸಂದೇಶ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬೇಕಾದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ದೊಡ್ಡಮಟ್ಟದಲ್ಲಿ ಕಾರ್ಯಕರ್ತರನ್ನು ಕರೆತರುವ ಹೊಣೆಗಾರಿಕೆಯನ್ನು ಪದಾಕಾರಿಗಳಿಗೆ ನೀಡಲಾಗಿದೆ.

ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಅಶ್ವತ್ಥ್, ಅರಗ, ಅಶೋಕ್

ಬೆಂಗಳೂರು, ನ.11- ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಎಚ್ಚೆತ್ತುಕೊಂಡಿದ್ದು, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕನ ಆಯ್ಕೆ ಸಂಬಂಧ ಶುಕ್ರವಾರ ಶಾಸಕಾಂಗ ಸಭೆ ಆಯೋಜಿಸಿದೆ.ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಗೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ಕೊಡಲಾಗಿದ್ದು, ಕೇಂದ್ರದಿಂದ ವೀಕ್ಷಕರು ಕೂಡ ಆಗಮಿಸಲಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭಾಗವಹಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿರುವುದರಿಂದ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಈ ಸಮುದಾಯ ಹೊರತುಪಡಿಸಿ ಒಕ್ಕಲಿಗ ಇಲ್ಲವೆ ಹಿಂದುಳಿದ ಸಮುದಾಯಕ್ಕೆ ಸೇರಿದವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಹಿರಿತನವೇ ಮಾನದಂಡವಾದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ಈ ಸ್ಥಾನಕ್ಕೆ ಅರ್ಹರೂ ಹೌದು. ಆದರೆ, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಬೊಮ್ಮಾಯಿ ಮತ್ತು ಯತ್ನಾಳ್ ರೇಸ್ನಿಂದ ಹೊರಬಿದ್ದಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಉಳಿದಂತೆ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕುವುದಾದರೆ ಸದ್ಯ ಬಿಜೆಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತ ಬಂದಿರುವ ಮಲ್ಲೇಶ್ವರಂ ಶಾಸಕ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಹಿರಿಯರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಈಗಾಗಲೇ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಅವರು ಕೂಡ ಒಕ್ಕಲಿಗ ಸಮುದಾಯವನ್ನು ಪ್ರತಿನಿಸುತ್ತಾರೆ. ಪುನಃ ಅದೇ ಸಮುದಾಯಕ್ಕೆ ವಿಪಕ್ಷ ನಾಯಕ ಸ್ಥಾನ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದರೆ ವಿ.ಸುನಿಲ್ಕುಮಾರ್ಗೆ ಅದೃಷ್ಟ ಒಲಿಯಬಹುದು. ಹಿಂದುಳಿದ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದೇವೆ ಎಂಬ ಸಂದೇಶವನ್ನು ರವಾನಿಸಲು ಬಿಜೆಪಿ ಮುಂದಾಗಿದೆ.

ಇನ್ನು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಸದಸ್ಯರಾದ ತೇಜಸ್ವಿನಿ ರಮೇಶ್ಗೌಡ, ಶಶೀಲ್ ನಮೋಶಿ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ಶುಕ್ರವಾರ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಯಾರ ಪರವಾಗಿ ಹೆಚ್ಚಿನ ಬೆಂಬಲ ಸಿಗಲಿದೆಯೋ ಅವರಿಗೆ ಈ ಸ್ಥಾನಗಳು ಒಲಿಯಲಿವೆ.

ಯಾವುದೇ ರೀತಿಯ ಅಪಸ್ವರ, ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಪ್ರಜಾಸತ್ತಾತ್ಮಕ ಮಾರ್ಗದಲ್ಲೇ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟು ಎರಡೂ ಸದನಗಳ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಗಮನ ಹರಿಸಿದೆ.

ಲಾಲು ಪ್ರಸಾದ್ ಯಾದವ್ ಸಹವರ್ತಿ ಸೆರೆ

ನವದೆಹಲಿ, ನ.11- (ಪಿಟಿಐ) ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಅವರ ಪುತ್ರ ತೇಜಸ್ವಿ ಯಾದವ್ ಅವರ ಸಹವರ್ತಿ ಅಮಿತ್ ಕತ್ಯಾಲ್ ಎಂಬುವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ಅಕೃತ ಮೂಲಗಳು ತಿಳಿಸಿವೆ.

ಕತ್ಯಾಲ್ ಅವರನ್ನು ಶುಕ್ರವಾರ ಏಜೆನ್ಸಿ ವಶಕ್ಕೆ ತೆಗೆದುಕೊಂಡಿತು ಮತ್ತು ವಿಚಾರಣೆಯ ನಂತರ ಬಂಸಲಾಯಿತು ಎನ್ನಲಾಗಿದ್ದು, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇಡಿ ವಿಚಾರಣೆಗಾಗಿ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಸುಮಾರು ಎರಡು ತಿಂಗಳ ಕಾಲ ವಿಚಾರಣೆಗಾಗಿ ಏಜೆನ್ಸಿಯ ಸಮನ್ಸ್ನಿಂದ ಕತ್ಯಾಲ್ ತಪ್ಪಿಸಿಕೊಳ್ಳುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ತನ್ನ ವಿರುದ್ಧದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿತ್ತು.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಲಾಲು ಪ್ರಸಾದ್, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಸಹೋದರಿಯರು ಮತ್ತು ಇತರರ ಆವರಣಗಳ ಮೇಲೆ ಏಜೆನ್ಸಿಯು ಮಾರ್ಚ್ನಲ್ಲಿ ಕಟ್ಯಾಲ್ನ ಆವರಣದ ಮೇಲೆ ದಾಳಿ ನಡೆಸಿತು. ಇಡಿ ಪ್ರಕಾರ ಕತ್ಯಾಲ್ ಅವರು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಸುಪ್ರೀಂ ಲಾಲೂ ಅವರ ಆಪ್ತ ಸಹವರ್ತಿ ಮತ್ತು ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ನ ಮಾಜಿ ನಿರ್ದೇಶಕರಾಗಿದ್ದಾರೆ.

ಎ ಕೆ ಇನೋಸಿಸ್ಟಮ್ಸï ಪ್ರೈವೇಟ್ ಲಿಮಿಟೆಡ್ ಪ್ರಕರಣದಲ್ಲಿ ಫಲಾನುಭವಿ ಕಂಪನಿ ಎಂದು ಹೇಳಲಾಗಿದೆ ಮತ್ತು ಅದರ ನೋಂದಾಯಿತ ವಿಳಾಸವು ದಕ್ಷಿಣ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಕಟ್ಟಡವಾಗಿದೆ, ಇದನ್ನು ತೇಜಸ್ವಿ ಯಾದವ್ ಬಳಸುತ್ತಿದ್ದರು.
ಲಾಲೂ ಪ್ರಸಾದ್ ಅವರು ಯುಪಿಎ-1 ಸರ್ಕಾರದಲ್ಲಿ ರೈಲ್ವೇ ಸಚಿವರಾಗಿದ್ದ ಅವಗೆ ಸಂಬಂಧಿಸಿದ ಹಗರಣವಾಗಿದೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಅಮೃತಸರ, ನ.11- ಮೀನುಗಾರಿಕೆ ವೇಳೆ ಅಂತಾರಾಷ್ಟ್ರೀಯ ಗಡಿ ದಾಟಿ ಬಂತರಾಗಿದ್ದ 80 ಭಾರತೀಯ ಮೀನುಗಾರರನ್ನು ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿದೆ.ಪಂಜಾಬ್‍ನ ಅಮೃತಸರದ ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತೀಯ ಸೇನೆಯ ಅಧಿಕಾರಿಗಳು ಮೀನುಗಾರರನ್ನು ಬರಮಾಡಿಕೊಂಡರು. ಬಿಡುಗಡೆಯಾದ ಮೀನುಗಾರರು ತಮ್ಮ ಅನುಭವವನ್ನು ಎಎನ್‍ಐಗೆ ತಿಳಿಸಿದ್ದು, ಮೀನುಗಾರಿಕೆ ಮಾಡುವಾಗ ತಪ್ಪಾಗಿ ಪಾಕಿಸ್ತಾನದ ಗಡಿ ದಾಟಿದ್ದೇವೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಜೈಲುಗಳಲ್ಲಿ ಬಂಯಾಗಿರುವ ಇತರ ಭಾರತೀಯ ಮೀನುಗಾರರನ್ನೂ ಬಿಡುಗಡೆ ಮಾಡುವಂತೆ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.ಮಾಧ್ಯಮದ ಜೊತೆ ಮಾತನಾಡಿದ ಮೀನುಗಾರರೊಬ್ಬರು, ನಾವು ಆಕಸ್ಮಿಕವಾಗಿ ಚಂಡಮಾರುತದ ನಡುವೆ ಅಂತರರಾಷ್ಟ್ರೀಯ ಗಡಿಯನ್ನು ದಾಟಿದ್ದೇವೆ. ನಾವು ಮೂರು ವರ್ಷಗಳ ಕಾಲ ಜೈಲಿನಲ್ಲಿದ್ದೆವು. ನಾವು ಒಟ್ಟು 12 ಜನರಿದ್ದೇವೆ ಮತ್ತು ಈಗ ಎಲ್ಲರೂ ಹಿಂತಿರುಗಿದ್ದಾರೆ ಎಂದರು.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಇನ್ನೂ 184 ಮಂದಿ ಜೈಲಿನಲ್ಲಿದ್ದಾರೆ. ಅವರನ್ನೂ ವಾಪಸ್ ಕರೆತರುವಂತೆ ನಾನು ಸರ್ಕಾರವನ್ನು ಒತ್ತಾಯಿಸಲು ಬಯಸುತ್ತೇನೆ. ಅವರಲ್ಲಿ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಇತರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದರು.

ನಾವು ಗಡಿ ದಾಟಿದಾಗ ನಮಗೆ ಅರ್ಥವಾಗಲಿಲ್ಲ. ಪಾಕಿಸ್ತಾನ ನೌಕಾಪಡೆ ಬಂದು ನಮ್ಮನ್ನು ಬಂಸಿತು. ನಾನು ಬಂದು ಸುಮಾರು 3 ವರ್ಷ, 3 ತಿಂಗಳ ನಂತರ. ನಮ್ಮ ದೋಣಿಗಳನ್ನು ಬಿಡುಗಡೆ ಮಾಡಲು ನಾನು ಸರ್ಕಾರವನ್ನು ಒತ್ತಾಯಿಸುತ್ತೇನೆ. ಅವು ತುಂಬಾ ದುಬಾರಿಯಾಗಿದೆ ಎಂದು ಇನ್ನೊಬ್ಬ ಮೀನುಗಾರ ಹೇಳಿದರು.

ಮಧ್ಯಪ್ರದೇಶ ಸಿಎಂ ರೇಸ್‍ನಲ್ಲಿ ನಾನಿಲ್ಲ : ಜ್ಯೋತಿರಾದಿತ್ಯ ಸಿಂಧಿಯಾ

ಭೋಪಾಲ್,ನ.11- ಮಧ್ಯಪ್ರದೇಶದ ಮುಖ್ಯಮಂತ್ರಿಯಾಗುವ ರೇಸ್‍ನಲ್ಲಿ ನಾನಿಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟಪಡಿಸಿದ್ದಾರೆ.ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ನಾಗರಿಕ ವಿಮಾನಯಾನ ಸಚಿವರು, ಮುಖ್ಯಮಂತ್ರಿ ಹುದ್ದೆಗೆ ಸ್ರ್ಪಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಏಕೆಂದರೆ ಅವರು ಯಾವಾಗಲೂ ಪಕ್ಷದ ಕಾರ್ಯಕರ್ತರಾಗಿದ್ದಾರೆ ಮತ್ತು ಹಾಗೆಯೇ ಉಳಿಯುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‍ನಲ್ಲಿ ಅಕಾರಕ್ಕಾಗಿ ಪೈಪೋಟಿ ನಡೆಸುವ ಜನರಿದ್ದಾರೆ, ಅವರಲ್ಲಿ ಗುಂಪುಗಳಿವೆ, ಅವರು ಮುಖ್ಯಮಂತ್ರಿಯಾಗಲು ಸ್ಕೀಮ್‍ಗಳನ್ನು ಹೊಂದಿದ್ದಾರೆ, ಮತ್ತು ಚುನಾವಣೆಗೆ ಮುನ್ನ ಕಾಂಗ್ರೆಸ್‍ನಲ್ಲಿ ಎಂಟು ನಾಯಕರು ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ನಾವೆಲ್ಲರೂ ಕಾರ್ಯಕರ್ತರು ಮತ್ತು ಹಾಗೆಯೇ ಉಳಿಯುತ್ತೇವೆ ಎಂದು ಸಿಂಧಿಯಾ ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಂಪೂರ್ಣ ಬಿಜೆಪಿಯು ಪ್ರಧಾನಿ ನೇತೃತ್ವದಲ್ಲಿ ಚುನಾವಣೆಯಲ್ಲಿ ಹೋರಾಡುತ್ತಿದೆ… ನಾನು ಈ ರೇಸ್‍ನಲ್ಲಿ (ಮುಖ್ಯಮಂತ್ರಿ ಸ್ಥಾನಕ್ಕಾಗಿ) ಇಲ್ಲ. ನಾನು ಸೇವಕ, ನಾನು ರೇಸ್‍ನಲ್ಲಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ನ. 2 ರಂದು ಬಿಜೆಪಿ ನಾಯಕರು ಸಿಂಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಸೇರಿಸದಿರುವ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ಸಿಂಧ್ಯಾ ಕುಟುಂಬವನ್ನು ಕುರ್ಚಿಯ ರೇಸ್‍ನಲ್ಲಿ ಎಂದಿಗೂ ಸೇರಿಸಬೇಡಿ (ಮುಖ್ಯಮಂತ್ರಿ ಸ್ಥಾನವನ್ನು ಉಲ್ಲೇಖಿಸಿ) ಸಿಂಯಾ ಕುಟುಂಬವು ಅಭಿವೃದ್ಧಿ, ಪ್ರಗತಿ ಮತ್ತು ಸಾರ್ವಜನಿಕ ಸೇವೆಯ ಉತ್ಸಾಹದಿಂದ ಹಗಲಿರುಳು ಕೆಲಸ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇತರ ಹಿಂದುಳಿದ ವರ್ಗಗಳ (ಒಬಿಸಿ) ಮತದಾರರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿರುವ ಇಂಡಿಯಾ ಒಕ್ಕೂಟದಲ್ಲಿ ಭ್ರಷ್ಟಾಚಾರ ತುಂಬಿತುಳುಕುತ್ತಿದೆ ಎಂದು ಕೇಂದ್ರ ಸಚಿವರು ತಮ್ಮ ಹಿಂದಿನ ಪಕ್ಷವಾದ ಕಾಂಗ್ರೆಸ್‍ಗೆ ತಿರುಗೇಟು ನೀಡಿದರು.

ಬಿಬಿಎಂಪಿ ಪೌರ ಕಾರ್ಮಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು,ನ.11- ಪೌರ ಕಾರ್ಮಿಕರ ಕುಟುಂಬಕ್ಕೆ ಗುಡ್ ನ್ಯೂಸ್ ನೀಡಿರುವ ಬಿಬಿಎಂಪಿಯವರು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೆಣ್ಣು ಮಕ್ಕಳ ಮದುವೆಗೆ ಪಾಲಿಕೆಯಿಂದ ಒಂದು ಲಕ್ಷ ಉಚಿತ ಸಹಾಯಧನ ನೀಡುವುದಾಗಿ ಘೋಷಿಸಿದ್ದಾರೆ. ಪಾಲಿಕೆಯ ಪೌರಕಾರ್ಮಿಕರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಕುಟುಂಬದ ಹೆಣ್ಣು ಮಗಳ ಸರಳ ವಿವಾಹಕ್ಕೆ ಪಾಲಿಕೆಯಿಂದ ರೂ.1.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದೆ.

ಇದೇ ಸಂದರ್ಭದಲ್ಲಿ ಸಹಾಯಧನಕ್ಕೆ ಕೆಲವು ಷರತ್ತುಗಳನ್ನು ಪಾಲಿಕೆ ವಿಸಿದೆ. ಅರ್ಜಿದಾರರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಮಾರು ಮೂರು ವರ್ಷಕ್ಕೂ ಮೇಲ್ಪಟ್ಟು ವಾಸಿಸುತ್ತಿರಬೇಕು. ಸದರಿ ಸೌಲಭ್ಯವನ್ನು ಖಾಯಂ ಹಾಗೂ ನೇರ ವೇತನ ಪೌರಕಾರ್ಮಿಕರು ಮಾತ್ರ ಪಡೆಯಲು ಅರ್ಹರು.

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ

ಸೇವಾ ಪುಸ್ತಕದಲ್ಲಿ ವಿವಾಹ ಆಗುವ ಮಗಳು ನಾಮಿನಿ ಆಗಿರುವುದು ಕಡ್ಡಾಯವಾಗಿರುತ್ತದೆ, ನೇರ ವೇತನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಗಳು ಎಂದು ಖಚಿತಪಡಿಸಲು ಆಧಾರ್ ಹಾಗೂ ಪಡಿತರ ಚೀಟಿಯನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.,

ತಹಶೀಲ್ದಾರ್ ರವರಿಂದ ಚಾಲ್ತಿಯಲ್ಲಿರುವ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು, ಪೌರಕಾರ್ಮಿಕರು ಗುರುತಿನ ಚೀಟಿ ಕಡ್ಡಾಯ, ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದವರಿಗೆ ಸೌಲಭ್ಯವನ್ನು ಪಡೆಯಲು ಕುಟುಂಬದ ವಾರ್ಷಿಕ ವರಮಾನ ರೂ.3.00 ಲಕ್ಷ ಮೀರಿರಬಾರದು ಎಂಬ ನಿಯಮ ಹಾಕಲಾಗಿದೆ.

ಆದರೆ, ಪೌರಕಾರ್ಮಿಕರಿಗೆ ಆದಾಯ ಮಿತಿ ಅನ್ವಯಿಸುವುದಿಲ್ಲ, ವಿವಾಹ ನಿಶ್ಚಯವಾಗಿರುವ ಬಗ್ಗೆ ಮದುವೆಯ ಆಮಂತ್ರಣ ಪತ್ರವನ್ನು ಸಲ್ಲಿಸುವುದು, ವಿಧವಾ ಹೆಣ್ಣು ಮಗಳು ಸದರಿ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ, ಸಹಾಯಧನವನ್ನು ವಧುವಿನ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಒಂದು ವೇಳೆ ಸಲ್ಲಿಸಲಾಗಿರುವ ದಾಖಲೆಗಳು ನಕಲಿ ಅಥವಾ ಸುಳ್ಳು ಎಂದು ಕಂಡು ಬಂದಲ್ಲಿ ಕಾನೂನಿನ ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ನ.18ರಂದು ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ಪ್ರದಾನ

ಬೆಂಗಳೂರು,ನ.11-ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಡಾ.ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲು ಬಿಬಿಎಂಪಿ ನೌಕರರ ಕನ್ನಡ ಸಂಘ ತೀರ್ಮಾನಿಸಿದೆ.ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ನ.18 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್‍ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮವನ್ನು ಬಿಬಿಎಂಪಿ ಆಡಳಿತಾಗಾರ ರಾಕೇಶ್‍ಸಿಂಗ್ ಉದ್ಘಾಟಿಸಲಿದ್ದಾರೆ. ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಖ್ಯಾತ ಚಿತ್ರ ನಟ ರಮೇಶ್ ಅರವಿಂದ್, ನಟಿಯರಾದ ಭವ್ಯ, ಭಾವನಾ ಮತ್ತಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಿದ್ದಾರೆ.

ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಮೇಯರ್ ಜೆ.ಹುಚ್ಚಪ್ಪ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ವಿಶೇಷ ಆಯುಕ್ತರಾದ ತ್ರಿಲೋಕ್ ಚಂದ್ರ, ಮೌನೀಶ್ ಮೌದ್ಗಿಲ್, ಹರೀಶ್ ಕೆ, ಉಪ ಅಯುಕ್ತ ಮಂಜುನಾಥ್ ಸ್ವಾಮಿ, ಜಂಟಿ ಆಯುಕ್ತೆ ಪಲ್ಲವಿ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ್ ಸಂಗಾ ಮತ್ತಿರರು ಹಾಜರಿರಲಿದ್ದಾರೆ.

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ

ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದತ್ತ, ಕರ್ನಾಟಕ ಅಮೆಚೂರ್ ಯೋಗ ಕ್ರೀಡಾ ಸಂಘದ ಅಧ್ಯಕ್ಷ ಜಿ.ಎನ್.ಕೃಷ್ಣ ಮೂರ್ತಿ, ಖ್ಯಾತ ಚಿತ್ರನಟ, ನಟಿಯರಾದ ಸುಂದರ್ ರಾಜ್,ಪ್ರಮೀಳಾ ಜೋಷಾಯಿ, ರಕ್ಷಾ, ರಿಷಿಗೌಡ, ಪ್ರೇಮಗೌಡ, ಅಪೂರ್ವ, ಪ್ರತಿಭಾ, ಸಿಂ ಆಸ್ಪತ್ರೆ ಸಾರ್ವಜನಿಕ ಸಂಪರ್ಕಾಕಾರಿ ಸುಚಿತ್ರಾ, ಅಂತಾರಾಷ್ಟ್ರೀಯ ಡೊಳ್ಳು ಕುಣಿತ ಕಲಾವಿದ ಡೊಳ್ ಚಂದ್ರು ಸೇರಿದಂತೆ ಮಾಧ್ಯಮ ಲೋಕದ ಹಲವಾರು ಮಂದಿಗೆ ಡಾ.ಪುನೀತ್ ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಅದೇ ರೀತಿ ಬಿಬಿಎಂಪಿಯ ಉತ್ತಮ ಸೇವೆ ಸಲ್ಲಿಸಿರುವ ದಕ್ಷ ಅಕಾರಿಗಳಿಗೂ ಪುನೀತ್‍ರಾಜ್‍ಕುಮಾರ್ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಮೃತ್‍ರಾಜ್ ವಿವರಣೆ ನೀಡಿದ್ದಾರೆ.