Home Blog Page 1823

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-11-2023)

ನಿತ್ಯ ನೀತಿ :
ಸಮಸ್ಯೆ ಸೃಷ್ಟಿಸೋ ಸಾವಿರ ಮಂದಿ ಬಂದರೂ ಭರವಸೆ ಅನ್ನೋ ಒಬ್ಬ ಗುರು ಜತೆ ಇದ್ದರೆ ಸಾಕು.

ಪಂಚಾಂಗ : ಭಾನುವಾರ, 12-11-2023
ಶೋಭಕೃತ್ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ
ತಿಥಿ: ಚತುರ್ದಶಿ / ನಕ್ಷತ್ರ: ಸ್ವಾತಿ / ಯೋಗ: ಆಯುಷ್ಮಾನ್ / ಕರಣ: ಚತುಷ್ಪಾದ / ಸೂರ್ಯೋದಯ : ಬೆ.06.17

ಸೂರ್ಯಾಸ್ತ : 05.51
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ಇಂದಿನ ರಾಶಿಭವಿಷ್ಯ :
ಮೇಷ
: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಹೊಂದುತ್ತೀರಿ.
ವೃಷಭ: ಹಣದ ಕೊರತೆಯಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಿಥುನ: ಸೋದರ ಸಂಬಂಗಳು ಒಡವೆ ಮಾಡಿಸಿ ಕೊಡುವ ಸಾಧ್ಯತೆ ಇದೆ.

ಕಟಕ: ಇತರರಲ್ಲಿರುವ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುವಿರಿ.
ಸಿಂಹ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ಕನ್ಯಾ: ಕೌಟುಂಬಿಕ ವಿಷಯದಲ್ಲಿ ಗಂಭೀರ ವಿವಾದ, ಘರ್ಷಣೆಗಳು ನಡೆಯಬಹುದು.

ತುಲಾ: ಕೆಲವು ವ್ಯಾಪಾರ ಯೋಜನೆಗಳನ್ನು ತಡೆ ಹಿಡಿಯಬೇಕಾದ ಸಂದರ್ಭಗಳು ಬರಬಹುದು.
ವೃಶ್ಚಿಕ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ. ಅಗತ್ಯವಿರುವ ವಸ್ತುಗಳನ್ನು ಖರೀದಿಸಿ.
ಧನುಸ್ಸು: ಬಂಧುಗಳಿಂದ ಸಮಸ್ಯೆ ಎದುರಾಗಲಿದೆ. ಹಿತಶತ್ರುಗಳ ಕಾಟ ಹೆಚ್ಚಾಗಲಿದೆ.

ಮಕರ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಕುಂಭ: ಉನ್ನತ ಸ್ಥಾನಮಾನ ದೊರೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.
ಮೀನ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿರುದ್ಧ ಎಫ್ಐಆರ್ ದಾಖಲು

ನವದೆಹಲಿ,ನ.11- ಕೃತಕ ಬುದ್ಧಿಮತ್ತೆ ಮೂಲಕ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ಮಾಡಿರುವ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.ದೆಹಲಿ ಪೊಲೀಸರು ಸಂಬಂತ ಸೆಕ್ಷನ್ಗಳ ಅಡಿಯಲ್ಲಿ ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಎಐ ಬಳಸಿ ರಶ್ಮಿಕಾ ಮಂದಣ್ಣ ಅವರ ನಕಲಿ ಸೃಷ್ಟಿಸಿ ರಚಿಸಿರುವ ವೀಡಿಯೊಗೆ ಸಂಬಂಧಿಸಿದಂತೆ, ಐಪಿಸಿಯ ಎಫ್ಐಆರ್ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು 66 ಇ ಅನ್ನು ದೆಹಲಿ ಪೊಲೀಸ್ ವಿಶೇಷ ಕೋಶದಲ್ಲಿ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೇ ಬದಲಾದ ಕಾಂಗ್ರೆಸ್ ತಂತ್ರಗಾರಿಕೆ

ಹಿಂದಿನ ದಿನ, ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೊದ ಹಲವಾರು ಮಾಧ್ಯಮ ವರದಿಗಳು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ನಂತರ ದೆಹಲಿ ಮಹಿಳಾ ಆಯೋಗವು ಕ್ರಮ ಕೈಗೊಳ್ಳುವಂತೆ ಕೋರಿದೆ ಎಂದು ಅಕೃತ ಹೇಳಿಕೆ ತಿಳಿಸಿದೆ.

ಭಾರತೀಯ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ಫೇಕ್ ವೀಡಿಯೊ ಹಲವಾರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ ಎಂಬ ಮಾಧ್ಯಮ ವರದಿಗಳ ಕುರಿತು ದೆಹಲಿ ಮಹಿಳಾ ಆಯೋಗವು ಸ್ವಯಂ-ಮೋಟೊ ಪ್ರಕರಣ ದಾಖಲಿಸಿದೆ. ವರದಿಯ ಪ್ರಕಾರ, ನಟಿ ಈ ವಿಷಯದಲ್ಲಿ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಯಾರೋ ಹೇಳಿದ್ದಾರೆ. ವಿಡಿಯೋದಲ್ಲಿ ಆಕೆಯ ಚಿತ್ರವನ್ನು ಅಕ್ರಮವಾಗಿ ಮಾರ್ಫಿಂಗ್ ಮಾಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಬಂಧನವಾಗಿಲ್ಲ ಮತ್ತು ನವೆಂಬರ್ 17 ರೊಳಗೆ ಆರೋಪಿಗಳ ವಿವರಗಳೊಂದಿಗೆ ಎಫ್ಐಆರ್ ಪ್ರತಿಯನ್ನು ನೀಡುವಂತೆ ಆಯೋಗವು ಸೂಚಿಸಿದೆ.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವುದೇ ಬಂಧನಗಳನ್ನು ಮಾಡಲಾಗಿಲ್ಲ ಎಂದು ಆಯೋಗವು ತಿಳಿದುಕೊಂಡಿದೆ.

ಇದು ಅತ್ಯಂತ ಗಂಭೀರವಾದ ವಿಷಯವಾಗಿದೆ. ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ದಯವಿಟ್ಟು ಈ ವಿಷಯದಲ್ಲಿ ದಾಖಲಾಗಿರುವ ಎಫ್ಐಆರ್ನ ಪ್ರತಿಯನ್ನು, ಈ ವಿಷಯದಲ್ಲಿ ಬಂತ ಆರೋಪಿಗಳ ವಿವರಗಳನ್ನು ಒದಗಿಸಿ. ಮತ್ತು ಈ ವಿಷಯದ ಬಗ್ಗೆ ವಿವರವಾದ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿಯನ್ನು ಡಿಸಿಡಬ್ಲ್ಯು ಹೇಳಿಕೆಯಲ್ಲಿ ತಿಳಿಸಿದೆ.

ಪಕ್ಷಗಳಲ್ಲಿ ಗುಂಪುಗಳು ಇರೋದು ಸಹಜ : ಸತೀಸ್ ಜಾರಕಿಹೊಳಿ

ಬೆಂಗಳೂರು, ನ.11- ಎಲ್ಲಾ ಪಕ್ಷಗಳು ಮೂರು ಗುಂಪು ಇದ್ದೆ ಇರುತ್ತದೆ. ಒಂದನ್ನು ಸಮಾಧಾನ ಮಾಡಿದರೆ ಉಳಿತ ಎರಡು ಗುಂಪುಗಳು ದೂರ ಹೋಗುತ್ತವೆ ಎಂದು ಲೋಕೋಪಯೋಗಿ ಸಚಿವ ಸತೀಸ್ ಜಾರಕಿಹೊಳಿ ಹೇಳಿದರು. ವಿಜಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲಿ ಕಂಡು ಬರುತ್ತಿರುವ ಭಿನ್ನಮತಗಳ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಸಹಜ ಬೆಳವಣಿಗೆ ಎಲ್ಲಾ ಪಕ್ಷದಲ್ಲೂ ಇರುತ್ತದೆ. ಅಂತಹದ್ದನ್ನು ಸರಿದೂಗಿಸುವ ಸಾಮಥ್ರ್ಯ ಅಧ್ಯಕ್ಷರಾಗಿರುವವರಿಗೆ ಇರಬೇಕು ಎಂದರು. ವಿಜಯೆಂದ್ರರನ್ನು ರಾಜ್ಯಾಧ್ಯಕ್ಷರನ್ನು ಮಾಡುವುದು ಬಿಜೆಪಿಗೆ ಅನಿವಾರ್ಯವಾಗಿತ್ತು.

ಒಂದೆಡೆ ಮತಬ್ಯಾಂಕ್ ಆಗಿರುವ ಲಿಂಗಾಯಿತ ಸಮುದಾಯವನ್ನು ಓಲೈಸಿಕೊಳ್ಳಬೇಕಿತ್ತು, ಮತ್ತೊಂದೆಡೆ ಯಡಿಯೂರಪ್ಪರನ್ನು ಉಳಿಸಿ ಕೊಳ್ಳಬೇಕಿತ್ತು. ಅದಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಈ ಹಿಂದೆ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಸಿದ ಕಾರಣಕ್ಕೆ ಬಿಜೆಪಿ ಸೋಲು ಕಂಡಿತ್ತು. ಯಡಿಯೂರಪ್ಪ ಇದ್ದರೆ 100 ಸ್ಥಾನಗಳ ಹತ್ತಿರ ಬರುತ್ತದೆ, ಇಲ್ಲವಾದರೆ 60ಕ್ಕೆ ಕುಸಿಯುತ್ತದೆ ಎಂದು ನಾನು ಬಹಳ ಹಿಂದೆಯೇ ಹೇಳಿದ್ದೆ. ಹಾಗೇ ಆಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆ ತಾವು ಹೊಂದಾಣಿಕೆಯಾಗುವ ಸಾಧ್ಯತೆಯೇ ಇಲ್ಲ, ಅಂತಹದ್ದೇನು ನಡೆದೆ ಇಲ್ಲ. ಡಿ.ಕೆ.ಸುರೇಶ್ ನಮ್ಮ ಮನೆಗೆ ಅನೇಕ ಬಾರಿ ಬಂದಿದ್ದಾರೆ. ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಮೊನ್ನೆ ಡಿ.ಕೆ.ಶಿವಕುಮಾರ್ ಬಂದಿದ್ದಾರೆ.

ನಮ್ಮ ಭಾಗದ ಶಾಸಕರು ಮೈಸೂರು ದಸರಾ ಪ್ರವಾಸಕ್ಕೆ ಹೊರಟ್ಟಿದ್ದ ಉದ್ದೇಶವೇ ಬೇರೆ. ಈಗ ನಮ್ಮ ಮನೆಗೆ ಅಧ್ಯಕ್ಷರು ಸೇರಿದಂತೆ ಅನೇಕರು ಭೇಟಿಗೂ ಅದಕ್ಕೂ ಸಂಬಂಧ ಇಲ್ಲ . ಸದ್ಯಕ್ಕೆ ಯಾವುದೇ ಹುದ್ದೆಯನ್ನು ನಾವು ಕೇಳಿಲ್ಲ. ಲೋಕಸಭೆ ಚುನಾವಣೆ ಗೆಲ್ಲುವುದು ನಮ್ಮ ಮುಂದಿರುವ ಸವಾಲು ನಾವು ಅದಕ್ಕೆ ಹೆಚ್ಚು ಆದ್ಯತೆ ನೀಡುತ್ತೇವೆ.

ಬಳಿಕ ಮಿಕ್ಕ ವಿಷಯಗಳ ಚರ್ಚೆಯಾಗಲಿದೆ. ತಾವು ಉಪಮುಖ್ಯಮಂತ್ರಿ ಹುದ್ದೆಗಾಗಿ ಬೇಡಿಕೆ ಇಟ್ಟಿಲ್ಲ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಮ್ಮೊಂದಿಗೆ ಚರ್ಚೆ ಮಾಡಿಲ್ಲ ಎಂದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಬೆಳಗಾವಿ ಜಿಲ್ಲೆಯ ಮಾಜಿ ಶಾಸಕ ಅಂಜಲಿ ನಿಂಬಾಳ್ಕರ್ ಬೇಡಿಕೆಯಿಟ್ಟಿದ್ದಾರೆ. ಅವರಿಗೆ ಅವಕಾಶ ಕೊಡುವುದು ಬಿಡುವುದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಹೇಳಿದರು.

ವಿಜಯೇಂದ್ರ ನೇಮಕ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ

ಬೆಂಗಳೂರು, ನ.11- ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ನೀವು ಯಾರನ್ನು ಬೇಕಾದರೂ ಕೇಳಿ ನೋಡಿ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ನಾನು ಒಂದು ದಿನವೂ ದೆಹಲಿಗೆ ಹೋಗಿ ಕೇಳಿರಲಿಲ್ಲ, ಹೈಕಮಾಂಡ್ ಮುಂದೆ ಮನವಿ ಮಾಡಿರಲಿಲ್ಲ. ಹಲವು ವಿಚಾರಗಳನ್ನು ಅಳೆದು ತೂಗಿ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.’

ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆಗಿದೆ, ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಸಮಾಜದ ಬೆಂಬಲ ಇನ್ನೂ ಹೆಚ್ಚು ಸಿಗಲಿದೆ. ಮುಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿ ಅವರಿಗೆ ಒಳ್ಳೆಯ ಉಡುಗೊರೆ ಕೊಡಬೇಕೆಂಬುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

ಅತ್ತೂ ಕರೆದು ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ್ದಾರೆ : ಶೆಟ್ಟರ್ ಲೇವಡಿ

ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜಾ್ಯಧ್ಯಕ್ಷ ಸ್ಥಾನ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ. ದೆಹಲಿಗೆ ಹೋಗಿ ನನ್ನ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಅಂತಾನೂ ಕೇಳಿರಲಿಲ್ಲ. ದೊಡ್ಡ ಸ್ಥಾನ ಸಿಕ್ಕಿದಾಗ ಸವಾಲುಗಳು ಸಹಜ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಆದರೆ ಹಾದಿ ಕಠಿಣ ಇದೆ. ನಾನೂ ಕೂಡ ರಾಜ್ಯ ಪ್ರವಾಸ ಮಾಡಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದರು.

ಅಮಿತ್ ಶಾ, ನಡ್ಡಾ ಅವರು ಸೂಕ್ತ ಸಮಯಕ್ಕೆ ಒಳ್ಳೆಯ ನಿರ್ಧಾರ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜಾ್ಯದ್ಯಂತ ಪ್ರವಾಸ ಮಾಡಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ. ಈ ಬಾರಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.ಮೋದಿ ಅವರಂತಹ ಮಹಾನ್ ವ್ಯಕ್ತಿ ದೇಶದ ಪ್ರಧಾನಿಯಾಗಿದ್ದಾರೆ.

ದೆಹಲಿಯಲ್ಲಿ ಕುಳಿತು ವಿಜಯೇಂದ್ರನನ್ನು ಅಧ್ಯಕ್ಷನನ್ನಾಗಿ ಮಾಡಿ ಅಂತ ಯಾರನ್ನೂ ಕೇಳಿಲ್ಲ. ಬೇಕಾದರೆ ನೀವುಗಳು ವಿಚಾರಿಸಿ. ನಾವು ಪ್ರವಾಸ ಮಾಡಿದ ಮೇಲೆ ಜನರ ರೆಸ್ಪಾನ್ಸ್ ಹೇಗಿದೆ ಅಂತ ನೋಡಿದ ಮೇಲೆ ನಮ್ಮ ಬಲ ಗೊತ್ತಾಗಲಿದೆ. 25 ಕ್ಷೇತ್ರ ಗೆಲ್ಲೋದು ಸುಲಭವಲ್ಲ. ರಾಜಾ್ಯದ್ಯಂತ ಓಡಾಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಎಲ್ಲರೂ ಒಟ್ಟಾಗಿ ಹೋದಲ್ಲಿ ಯಶಸ್ಸು ಖಚಿತ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಮಾಜಿ ಸಚಿವ ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಈಗ ಅಧಿಕಾರದಲ್ಲಿ ಇಲ್ಲ. ಹೀಗಾಗಿ ಇದು ವಂಶವಾದ ಆಗೋದಿಲ್ಲ ಎಂದು ವಂಶವಾದ ರಾಜಕೀಯಕ್ಕೆ ಹೊಸ ವ್ಯಾಖ್ಯಾನ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷನನ್ನಾಗಿ ಆಯ್ಕೆ ಮಾಡುವ ಮೂಲಕ ಯುವಕರಿಗೆ ಅವಕಾಶ ನೀಡಿದಂತಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಆಗ ಯಶಸ್ಸು ಸಿಗಲಿದೆ. ಸದ್ಯ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜ್ಯಪಾಲರು ಆತ್ಮವಿಮರ್ಶೆ ಮಾಡಿಕೊಳ್ಳಲಿ : ಸಚಿವ ಗುಂಡೂರಾವ್

ಬೆಂಗಳೂರು, ನ.11- ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವಾದರೂ ಹಲವು ರಾಜ್ಯಗಳ ರಾಜ್ಯಪಾಲರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದ್ದಾರೆ.ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ಪಂಜಾಬ್ ರಾಜ್ಯಪಾಲರ ನಡೆಯ ವಿರುದ್ಧ ಸುಪ್ರೀಂ ಕೋರ್ಟ್ ಅತ್ಯಂತ ಕಟುವಾದ ಭಾಷೆಯಲ್ಲಿ ಎಚ್ಚರಿಕೆ ನೀಡಿದೆ.

ಬೆಂಕಿಯ ಜೊತೆ ಆಟ ಬೇಡ ಎಂಬ ಸುಪ್ರೀಂ ಅಭಿಪ್ರಾಯ ಕೇವಲ ರಾಜ್ಯಪಾಲರಿಗೆ ಕೊಟ್ಟ ಎಚ್ಚರಿಕೆಯಲ್ಲ. ಬದಲಿಗೆ ರಾಜ್ಯಪಾಲರ ಮೂಲಕ ಒಕ್ಕೂಟ ವ್ಯವಸ್ಥೆಯ ಆಶಯವನ್ನೇ ಹಾಳು ಮಾಡಲು ಹೊರಟಿರುವ ಕೇಂದ್ರ ಸರ್ಕಾರಕ್ಕೆ ಪರೋಕ್ಷವಾಗಿ ಕೊಟ್ಟಿರುವ ಎಚ್ಚರಿಕೆಯೂ ಹೌದು ಎಂದಿದ್ದಾರೆ.

ರಾಷ್ಟ್ರಪತಿಗಳ ಮೂಲಕ ರಾಜ್ಯಗಳಿಗೆ ನೇಮಕವಾಗುವ ರಾಜ್ಯಪಾಲರು ಸಾಂವಿಧಾನಿಕ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಬೇಕು. ವಿಪರ್ಯಾಸವೆಂದರೆ ಬಿಜೆಪಿಯೇತರ ರಾಜ್ಯಗಳಲ್ಲಿ ರಾಜ್ಯಪಾಲರಾಗಿ ನಿಯುಕ್ತರಾಗಿರುವ ಕೆಲವು ರಾಜ್ಯಪಾಲರು ಬಿಜೆಪಿಯ ಏಜೆಂಟ್ಗಳಾಗಿದ್ದಾರೆ. ಅವೇಶನದಲ್ಲಿ ಅಂಗೀಕಾರವಾದ ಮಸೂದೆಗಳನ್ನು ಅನಗತ್ಯವಾಗಿ ತಡೆ ಹಿಡಿಯುವುದು, ಬಿಕ್ಕಟ್ಟು ಸೃಷ್ಟಿಸುವುದು ಸಾಮಾನ್ಯವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೇ ಬದಲಾದ ಕಾಂಗ್ರೆಸ್ ತಂತ್ರಗಾರಿಕೆ

ರಾಜ್ಯಪಾಲರ ನಡೆಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ಎಚ್ಚರಿಕೆ ಗಂಭೀರವಾಗಿದೆ. ಪಂಜಾಬ್, ಕೇರಳ, ತಮಿಳುನಾಡು ರಾಜ್ಯಪಾಲರು ಕೇಂದ್ರದ ಮರ್ಜಿಗೆ ಬಿದ್ದು ಪಕ್ಷಪಾತವಾಗಿ ನಡೆದುಕೊಳ್ಳದೆ, ಸಂವಿಧಾನದ ಘನತೆ ಎತ್ತಿ ಹಿಡಿದಿದ್ದರೆ ಸುಪ್ರೀಂ ಇಷ್ಟು ಕಟುವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿರಲಿಲ್ಲ. ಸುಪ್ರೀಂ ಕೋರ್ಟ್ನ ಎಚ್ಚರಿಕೆಯ ಹಿನ್ನೆಲೆಯಲ್ಲಿ ಅವರೆಲ್ಲರೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದಿದ್ದಾರೆ.

ಈ ವಿಷಯದಲ್ಲಿ ನಮ್ಮ ಕರ್ನಾಟಕದ ರಾಜ್ಯಪಾಲ ಥಾವರ್ಚಂದ್ ಗೆಲ್ಹೋಟ್ ಅವರು ನಿಶ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿದ್ದಾರೆ. ಅವರ ಸರಳ ಸಜ್ಜನಿಕೆ ನಡವಳಿಕೆಯಿಂದ ಎಲ್ಲರ ವಿಶ್ವಾಸ ಗಳಿಸುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನೇಮಕದ ಬೆನ್ನಲ್ಲೇ ಬದಲಾದ ಕಾಂಗ್ರೆಸ್ ತಂತ್ರಗಾರಿಕೆ

ಬೆಂಗಳೂರು, ನ.11- ಯುವ ಶಾಸಕ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಚುರುಕಾಗಿರುವ ಕಾಂಗ್ರೆಸ್ ಲಿಂಗಾಯಿತ ಮತಗಳನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಲಾರಂಭಿಸಿದೆ. ಬಿ.ಎಸ್.ಯಡಿ ಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಕ್ಕೆ ಪ್ರಾಯಶ್ಚಿತ ಅನುಭವಿಸಿದ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಪರಿಣಾಮ ಅನುಭವಿಸಿತ್ತು. ಪರಿಸ್ಥಿತಿಯ ಲಾಭ ಪಡೆದ ಕಾಂಗ್ರೆಸ್ ಬಿಜೆಪಿಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಅವರನ್ನು ಸೆಳೆದುಕೊಂಡು ಕೇಸರಿ ಪಡೆಗೆ ಭಾರೀ ಪೆಟ್ಟು ನೀಡಿತ್ತು.

ಯಡಿಯೂರಪ್ಪನವರು ತಮಗೆ ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷ ಮುಖ್ಯ ಎಂಬ ಸಿದ್ಧಾಂತಕ್ಕೆ ಕಟಿ ಬದ್ಧರಾಗಿ, ತಮ್ಮ ವಯೋ ಸಹಜ ಆಯಾಸವನ್ನು ಮರೆತು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೂ ಅದು ಅಷ್ಟು ಪರಿಣಾಮ ಬೀರಿರಲಿಲ್ಲ. ಬಿಜೆಪಿಯಲ್ಲಿರುವ ಹಲವು ಲಿಂಗಾಯಿತ ವೀರಶೈವ ನಾಯಕರು ಕಾಂಗ್ರೆಸ್ನತ್ತ ಮುಖ ಮಾಡಿದ್ದರು.

ಅವರನ್ನು ಸೆಳೆಯಲು ಕಾಂಗ್ರೆಸ್ ಕೂಡ ಗಾಳ ಹಾಕಿ ಕುಳಿತಿತ್ತು. ಈಗ ವಿಜಯೇಂದ್ರ ರಾಜ್ಯಾಧ್ಯಕ್ಷರಾಗುತ್ತಿದ್ದಂತೆ ಪರಿಸ್ಥಿತಿ ಬದಲಾಗಿದೆ. ಯಡಿಯೂರಪ್ಪ ಕುಟುಂಬದ ಮೇಲೆ ಸಮುದಾಯದ ಅವ್ಯಕ್ತವಾದ ವಿಶ್ವಾಸ ಹೆಚ್ಚಾಗುವ ಸಾಧ್ಯತೆಗಳಿವೆ. ಇದು ಕಾಂಗ್ರೆಸ್ನ ಆಪರೆಷನ್ ಹಸ್ತಕ್ಕೆ ಅಡೆಯಾಗುವುದಲ್ಲದೆ, ಲಿಂಗಾಯಿತ ಸಮುದಾಯದ ವಿಶ್ವಾಸ ಗಳಿಸುವ ಕೈ ಪಡೆಯ ವೇಗಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕಾಂಗ್ರೆಸ್ ತಂತ್ರಗಾರಿಕೆಯನ್ನು ಬದಲಾವಣೆ ಮಾಡಲು ಮುಂದಾಗಿದೆ.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಲಿಂಗಾಯಿತ ವೀರಶೈವ ಸಮುದಾಯ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ನವರಾದರೂ ಸಮುದಾಯದ ವಿಷಯ ಬಂದಾಗ ಮುಲ್ಲಾಜಿಲ್ಲದೆ ಮಾತನಾಡಿ ಮುಜುಗರ ಉಂಟು ಮಾಡುತ್ತಿದ್ದಾರೆ. ಪಕ್ಷದಲ್ಲೇ ಇರುವ ಎಂ.ಬಿ.ಪಾಟೀಲ್ ಲಿಂಗಾಯಿತ ವೀರಶೈವ ನಾಯಕರಾಗುವ ಅವಕಾಶಗಳಿದ್ದಾಗ್ಯೂ ಏಕವ್ಯಕ್ತಿ ನಾಯಕತ್ವದ ಒಳೈಕೆಗೆ ಹೆಚ್ಚಿನ ಸಮಯ ಕಳೆಯುವ ಮೂಲಕ, ಹತ್ತರಲ್ಲಿ ಹನ್ನೊಂದನೆ ನಾಯಕರಾಗಿ ಉಳಿದು ಹೋಗಿದ್ದಾರೆ. ಈಶ್ವರ್ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಬಸವರಾಜ ರಾಯರೆಡ್ಡಿ ಸೇರಿದಂತೆ ಇತರ ನಾಯಕರು ಪ್ರಾದೇಶಿಕವಾಗಿ ಸೀಮಿತವಾಗಿದ್ದಾರೆ.

ಹೀಗಾಗಿ ಕಾಂಗ್ರೆಸ್ ವಲಸಿಗರಾದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿಯವರಿಗೆ ಹೆಚ್ಚು ಮಣೆ ಹಾಕಿ ಹೊಸ ನಾಯಕತ್ವ ಬೆಳೆಸಲು ಚಿಂತನೆ ನಡೆಸಿದೆ.ವಿಜಯೇಂದ್ರ ಈ ಮೊದಲು ಹಲವು ಬಾರಿ ಕಾಂಗ್ರೆಸ್ಗೆ ಟಕ್ಕರ್ ನೀಡಿ ಸೋಲಿನ ರುಚಿ ಉಣಿಸಿದ್ದಾರೆ. ಈಗ ಅವರ ಬೆನ್ನಿಗೆ ಅಗಾಧ ಶಕ್ತಿಯಾಗಿ ಬಿ.ಎಸ್.ಯಡಿಯೂರಪ್ಪ ಸರ್ವ ಪ್ರಮಾಣದಲ್ಲೂ ಇರುವುದು ಕಾಂಗ್ರೆಸ್ಗೆ ಹೊಸ ಸವಾಲಾಗಿ ಪರಿಣಮಿಸಿದೆ. ಲೋಕಸಭೆ ಚುನಾವಣೆವರೆಗೂ ಲಿಂಗಾಯಿತ ವೀರಶೈವ ಸಮುದಾಯವನ್ನು ಕಾಯ್ದಿಟ್ಟುಕೊಳ್ಳಲು ಕಾಂಗ್ರೆಸ್ ನಡೆಸುತ್ತಿದ್ದ ಹೋರಾಟ ಹಿಮ್ಮುಖವಾಗುವ ಸಾಧ್ಯತೆ ಇದೆ. ಲಿಂಗಾಯಿತ ಸಮುದಾಯದ ಮತಗಳು ಒಂದು ಕಡೆ ಗಟ್ಟಿಗೊಳ್ಳುವ ನಿರೀಕ್ಷೆಗಳಿರುವುದರಿಂದ ಕಾಂಗ್ರೆಸ್ ಉಳಿದ ಒಕ್ಕಲಿಗ, ಹಿಂದುಳಿದ ವರ್ಗ, ಪರಿಶಿಷ್ಟ, ಅಲ್ಪಸಂಖ್ಯಾತ ಮತಗಳನ್ನು ಕೇಂದ್ರೀಕರಿಸುವ ಲೆಕ್ಕಾಚಾರದಲ್ಲಿದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕಾಂತರಾಜು ಆಯೋಗದ ವರದಿಗೆ ಒಕ್ಕಲಿಗ ಹಾಗೂ ಲಿಂಗಾಯಿತ ವೀರಶೈವ ಪ್ರಬಲ ಸಮುದಾಯಗಳು ವಿರೋಧ ವ್ಯಕ್ತ ಪಡಿಸುತ್ತಿವೆ. ಮನೆಯಲ್ಲೆ ಕುರಿತು ಸಮೀಕ್ಷಾ ವರದಿ ಬರೆಯಲಾಗಿದೆ. ಅದನ್ನು ಅಂಗೀಕರಿಸಬಾರದು, ಮರು ಸಮೀಕ್ಷೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಈಗಾಗಲೇ ಶಾಮನೂರು ಶಿವಶಂಕರಪ್ಪ ಪ್ರಕಟಿಸಿದ್ದಾರೆ.

ಕಾಂತರಾಜು ವರದಿಯನ್ನು ಬೆಳಗಾವಿ ಅವೇಶನದಲ್ಲಿ ಮಂಡಿಸಿ ಸಾರ್ವಜನಿಕ ಚರ್ಚೆಗೆ ಅವಕಾಶ ಮಾಡಿಕೊಡುವ ಮೂಲಕ ಕಾಂಗ್ರೆಸ್ ಬಿಜೆಪಿಗೆ ಎದಿರೇಟು ಹಾಕಲು ತಯಾರಿ ನಡೆಸಿದೆ ಎಂದು ಹೇಳಲಾಗಿದೆ.

ಅತ್ತೂ ಕರೆದು ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ್ದಾರೆ : ಶೆಟ್ಟರ್ ಲೇವಡಿ

ಬೆಂಗಳೂರು, ನ.11- ಪಕ್ಷದ ರಾಜ್ಯಾಧ್ಯಕ್ಷರ ನೇಮಕದಲ್ಲಿ ಬಿಜೆಪಿ ಹೈಕಮಾಂಡ್ ವಿಫಲವಾಗಲಿದೆ. ಆರು ತಿಂಗಳಿನಿಂದ ಖಾಲಿ ಇದ್ದ ಹುದ್ದೆಗೆ ಅತ್ತೂ ಕರೆದು ನೇಮಕ ಮಾಡಿಸಿಕೊಂಡಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ತಿಂಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇತ್ತು. ಇಷ್ಟು ದಿನ ಯಾಕೆ ನೇಮಕ ಮಾಡಲಿಲ್ಲ. ಈ ಅವಯಲ್ಲಿ ತಳಮಟ್ಟದಲ್ಲಿ ಏನಾಗಿದೆ ಎಂದು ಕಾರ್ಯಕರ್ತರನ್ನು ಕೇಳಿದರೆ ಗೋತ್ತಾಗುತ್ತದೆ.ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಣೆ ಬರಹ ಗೊತ್ತಾಗಿದೆ. ಈಗ ಎಷ್ಟೇ ರಿಪೇರಿ ಮಾಡಿದರೂ ಸರಿ ಹೋಗುವುದಿಲ್ಲ ಎಂದರು.

ಕಾಂಗ್ರೆಸ್ ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗಳಿಸಿ ಬಲಾಢ್ಯವಾಗಿದೆ. ಗಟ್ಟಿಯಾದ, ಉತ್ತಮ ಆಡಳಿತ ನೀಡುತ್ತಿದೆ. ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ. ಪಂಚಖಾತ್ರಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗುತ್ತಿವೆ. ಅವುಗಳಿಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಪರಿಣಾಮದಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 10 ರಿಂದ 12 ಸ್ಥಾನ ಗೆಲ್ಲಲಿದೆ, ಸಂದರ್ಭಾನುಸಾರ 20ಕ್ಕೆ ಹೋಗಬಹುದು ಎಂದರು.

ಬಿಜೆಪಿಯ 12 ಸಂಸದರಿಗೆ ಟಿಕೆಟ್ ನೀಡುವುದಿಲ್ಲ ಎಂಬ ವದ್ಧಂತಿಯ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ, ಅದು ಆ ಪಕ್ಷಕ್ಕೆ ಬಿಟ್ಟ ವಿಚಾರ. ವಿಜೆಯೇಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದರಿಂದ ರಾಜಕಾರಣದಲ್ಲಾಗುವ ಪರಿಣಾಮಗಳನ್ನು ಕಾದು ನೋಡಬೇಕಿದೆ. ತಾವು ಬಿಜೆಪಿ ಬಿಟ್ಟು ಬಂದಿದ್ದರಿಂದ ಅದರ ನಷ್ಟ ಸರಿ ತೂಗಿಸಲು ವಿಜಯೇಂದ್ರರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ನಾನು ಹೇಳುವುದಿಲ್ಲ. ನನ್ನ ಬಗ್ಗೆ ನಾನು ಹೇಳಿಕೊಳ್ಳುವುದಿಲ್ಲ ಎಂದರು.

ಆರು ತಿಂಗಳಿನಿಂದ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಧಾನಮಂಡಲಗಳ ಉಭಯ ಸದನಗಳ ವಿರೋಧ ಪಕ್ಷದ ನಾಯಕರ ಹುದ್ದೆಗಳು ಖಾಲಿ ಇದ್ದವು. ಡಿಸೆಂಬರ್ 4ರಿಂದ ಬೆಳಗಾವಿ ಅವೇಶನ ಶುರುವಾಗಲಿದೆ. ಆ ವೇಳೆಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆಯಾಗಬೇಕು, ಇಲ್ಲವಾದರೆ ಮುಜುಗರ ಅನುಭವಿಸಬೇಕಾಗುತ್ತದೆ. ಮುಂದಿನ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ನಡೆಸಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗುತ್ತಿದೆ. ಅದನ್ನು ಕಾದು ನೋಡುತ್ತೇವೆ ಎಂದರು.

ಕಾಂತರಾಜು ವರದಿಯ ಬಗ್ಗೆ ವಾದ ವಿವಾದಗಳಿವೆ, ಸಮಗ್ರ ಪರಿಶೀಲನೆ ನಡೆಯಬೇಕು , ಸರ್ಕಾರ ಯೋಗ್ಯ ನಿರ್ಧಾರ ತೆಗೆದುಕೊಳ್ಳಬೇಕು ಎಂದ ಅವರು, ಆಪರೇಷನ್ ಕಮಲ ನಡೆಸುತ್ತೇವೆ, ಮುಂದಿನ ಜನವರಿ ವೇಳೆಗೆ ಸರ್ಕಾರ ಪತನವಾಗಲಿದೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಹಿಂದೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡಿ ಏನಾಗಿದೆ ಎಂದು ಗೊತ್ತಿದೆ.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಮಧ್ಯ ಪ್ರವೇಶದಲ್ಲಿ ಆಪರೆಷನ್ ಕಮಲ ಮಾಡಿದರು. ರಾಜಸ್ಥಾನದಲ್ಲಿ ಆಪರೇಷನ್ ಮಾಡಲು ಹೋಗಿ ಕೈ ಸುಟ್ಟುಕೊಂಡರು. ಕರ್ನಾಟದಲ್ಲಿ 40-50 ಶಾಸಕರನ್ನು ಸೆಳೆದುಕೊಳ್ಳುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಮೊದಲು ಬಿಜೆಪಿಯನ್ನು ಸರಿಯಾಗಿಟ್ಟುಕೊಳ್ಳಲಿ, ಕಾಂಗ್ರೆಸ್ ಸರ್ಕಾರ ಕೆಡವುತ್ತೇವೆ ಎಂದುಕೊಂಡಿದ್ದರೆ ಅದು ಸಾಧ್ಯವಾಗುವುದಿಲ್ಲ ಎಂದರು.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ನನಗಿರುವ ಮಾಹಿತಿ ಪ್ರಕಾರ ಮಧ್ಯಪ್ರದೇಶ, ತೆಲಂಗಾಣ, ಚತ್ತೀಸ್ಗಡ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ರಾಜಸ್ಥಾನದಲ್ಲಿ ಪೈಪೊಟಿ ಇದೆ. ಒಳ್ಳೆಯ ಫಲಿತಾಂಶವಂತೂ ಬರುತ್ತದೆ. ಇಂಡಿಯಾ ಮೈತ್ರಿಕೂಡದಲ್ಲಿ ಸ್ಥಾನ ಹಂಚಿಕೆ ಸಂದರ್ಭದಲ್ಲಿ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿರುತ್ತವೆ. ಚುನಾವಣೆ ಕಾಲಕ್ಕೆ ಎಲ್ಲವೂ ಸರಿ ಹೋಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಅನಗತ್ಯ. ಹೈಕಮಾಮಡ್ ಯಾವ ರೀತಿಯ ಹೇಳಿಕೆಯನ್ನು ನೀಡಿಲ್ಲ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉಳಿದ ಚರ್ಚೆಗಳು ಅನಗತ್ಯ. ಯಾರೋ ಒಬ್ಬರು ಹೇಳಿದಕ್ಕೆ ಮಹತ್ವ ನೀಡುವ ಅಗತ್ಯ ಇಲ್ಲ ಎಂದರು. ಬಿಜೆಪಿಯ ಶಾಸಕ ಚಿಕ್ಕನಗೌಡರು ದೀಪಾವಳಿ ಹಬ್ಬದ ನಂತರ ರಾಜಕೀಯ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ರೊಂದಿಗೆ ಭೇಟಿ ಮಾಡಿಸಿದ್ದೇನೆ. ಮುಂದಿನ ನಿರ್ಧಾರವನ್ನು ಕಾದು ನೋಡುತ್ತಿದ್ದೇವೆ ಎಂದರು.

ಬಿಜೆಪಿಯ ಮಡಿಕೆ ತಳ ಒಡೆದು ಹೋಗಿದೆ : ಸಚಿವ ಚಲುವರಾಯಸ್ವಾಮಿ ಲೇವಡಿ

ಬೆಂಗಳೂರು, ನ.11- ಬಿಜೆಪಿಯೆಂಬ ಮಡಿಕೆಯ ತಳ ಒಡೆದು ಹೋಗಿದೆ. ಎಷ್ಟೇ ನೀರು ತುಂಬಿದರೂ ನಿಲ್ಲಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಹೊಸದಾಗಿ ಅಧ್ಯಕ್ಷರಾಗಿರುವ ವಿಜೆಯೇಂದ್ರ ಒಳ್ಳೆಯವರು, ಆತ ನನ್ನ ಸ್ನೇಹಿತ, ಯಡಿಯೂರಪ್ಪನವರ ಬಗ್ಗೆ ನನಗೆ ಗೌರವ ಇದೆ ಎಂದರು.

ಯಡಿಯೂರಪ್ಪರನ್ನು ಕೆಳಗಿಸಿದಾಗಲೇ ಅವತ್ತೇ ಬಿಜೆಪಿಯ ಮಡಿಕೆ ಹೊಡೆದು ಹೋಗಿದೆ. ವಿಜೆಯೇಂದ್ರರನ್ನು ಮಂತ್ರಿ ಮಾಡಿ ಎಂದಾಗ ಮಾಡಲಿಲ್ಲ. ಈಗ ತಮ್ಮ ಪರಿಸ್ಥಿತಿ ಗೋತ್ತಾಗಿ ರಾಜ್ಯಧ್ಯಕ್ಷನ್ನಾಗಿ ನೇಮಿಸಿ ಪ್ಯಾಚ್ ಅಪ್ ಮಾಡಲು ಹೋಗಿದ್ದಾರೆ ಎಂದರು.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಏನೇ ಮಾಡಿದರೂ ಬಿಜೆಪಿ ಬಲವೃದ್ಧಿಗೊಳ್ಳುವುದಿಲ್ಲ. ಹಿಂದೆ ಯಡಿಯೂರಪ್ಪ ಇದ್ದಾಗ ಬಿಜೆಪಿಗೆ ಬಲ ಇತ್ತು, ಆದರೂ 115 ಸ್ಥಾನ ಗೆಲ್ಲಲು ಅವರಿಂದ ಆಗಲಿಲ್ಲ. ಈಗ ಗೆಲ್ಲುತ್ತಾರಾ ಎಂದರು. ಯಾವುದೇ ಕಾರಣಕ್ಕೂ ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಲ್ಲ. ಅನಿವಾರ್ಯತೆಯಲ್ಲಿ ಹುಡುಕಿ ಹುಡುಕಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಯನ್ನು ಹೇಗೆ ಸೇರಿಸಿಕೊಳ್ಳಲು ಓಡಾಡುತ್ತಾರೆ, ಕುಮಾರಸ್ವಾಮಿಯೂ ಹೇಗೆ ಬಿಜೆಪಿ ಜೊತೆ ಸೇರಿಕೊಳ್ಳಲು ಪ್ರಯತ್ನಿಸುತ್ತಾರೆ. ಆ ರೀತಿ ಇವರು ಹೋಗಿದ್ದಾರೆ ಎಂದರು.

ಕುಟುಂಬ ರಾಜಕಾರಣ ಬಗ್ಗೆ ಮಾತನಾಡಲ್ಲ. ಎಲ್ಲಾ ಪಕ್ಷದಲ್ಲೂ ಇದೆ, ಕುಮಾರಸ್ವಾಮಿ ಮಾಡುತ್ತಿಲ್ಲ, ಬಿಜೆಪಿಯಲ್ಲಿ ಇಲ್ವಾ. ವಂಶಪಾರಂಪರ್ಯ ರಾಜಕಾರಣ ಎಂಬುದ್ದೇಲಾ ಅನಗತ್ಯ ಚರ್ಚೆ ಎಂದರು.

ನ.15ಕ್ಕೆ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣ

ಬೆಂಗಳೂರು, ನ.11- ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ ಇದೇ 15ರಂದು ಅಕೃತವಾಗಿ ಪಕ್ಷದ ಸಾರಥ್ಯ ವಹಿಸಿಕೊಳ್ಳಲಿದ್ದಾರೆ. ದೀಪಾವಳಿ ಹಬ್ಬದ ನಂತರ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಹಲವು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಿರ್ಗಮಿತ ಅಧ್ಯಕ್ಷ ನಳಿನ್ಕುಮಾರ್ ಕಟಿಲ್ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.

ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಉದ್ದೇಶಿಸಿರುವ ವಿಜಯೇಂದ್ರ ಅಭಿಮಾನಿಗಳು ಭರ್ಜರಿ ಕಾರ್ಯಕರ್ತರನ್ನು ಸೇರಿಸಿ ಹೊಸ ಸಂದೇಶ ರವಾನಿಸಲು ಮುಂದಾಗಿದ್ದಾರೆ.ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ವೇಳೆ ಡಿ.ಕೆ.ಶಿವಕುಮಾರ್ ಯಾವ ರೀತಿ ಕಾರ್ಯಕ್ರಮ ಆಯೋಜಿಸಿದ್ದರೋ ಅದೇ ಮಾದರಿಯಲ್ಲಿ ವಿಜಯೇಂದ್ರ ಕಾರ್ಯಕ್ರಮ ಆಯೋಜಿಸಲು ಮುಂದಾಗಿದ್ದು, ಪಕ್ಷದ ಎಲ್ಲ ನಾಯಕರನ್ನು ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಲಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಹಲವು ಗಣ್ಯರು ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವುದರಿಂದ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಗಳು ತೀರಾ ಕಡಿಮೆ.

ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ನೀಡುವ ಉದ್ದೇಶದಿಂದ ಜೆ.ಪಿ.ನಡ್ಡಾ ಅವರು ವರ್ಚುಯಲ್ ಮೂಲಕ ಭಾಗಿಯಾಗುವ ಸಂಭವವಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದಗೌಡ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನಿರ್ಮಲಾ ಸೀತಾರಾಮನ್, ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಶೋಭಾ ಕರಂದ್ಲಾಜೆ, ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಶಾಸಕರು, ಪಕ್ಷದ ಪದಾಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ ರಾಜ್ಯಾದ್ಯಂತ ಬಿಎಸ್ವೈ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಸಮಾರಂಭಕ್ಕೆ ಆಗಮಿಸಲಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ನಂತರ ಕಳೆಗುಂದಿರುವ ಬಿಜೆಪಿಗೆ ನವ ಚೈತನ್ಯ ನೀಡುವ ಉದ್ದೇಶದಿಂದಲೇ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಪಕ್ಷ ತೀರ್ಮಾನಿಸಿದೆ.

ರಾಜ್ಯದಲ್ಲಿ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಅದ್ಧೂರಿ ಸಮಾರಂಭ ಬೇಡ ಎಂದು ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರಗೆ ಸಲಹೆ ಕೊಟ್ಟಿದ್ದರು. ಆಡಂಬರವಿಲ್ಲದೆ ಕಾರ್ಯಕರ್ತರಿಗೆ ಶಕ್ತಿ ತುಂಬುವ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ಸಂದೇಶ ನೀಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಹೀಗಾಗಿ ವಿಜಯೇಂದ್ರ ತಮ್ಮ ಅಧಿಕಾರ ಸ್ವೀಕಾರ ಸಮಾರಂಭವನ್ನು ಪಕ್ಷದ ಎಲ್ಲರ ಸಮ್ಮುಖದಲ್ಲೂ ಸ್ವೀಕರಿಸಿ ಕಾರ್ಯಕರ್ತರಿಗೂ ಹೊಸ ಸಂದೇಶ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ಕಾರ್ಯಕ್ರಮಕ್ಕೆ ಬೇಕಾದ ರೂಪುರೇಷೆಗಳ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ದೊಡ್ಡಮಟ್ಟದಲ್ಲಿ ಕಾರ್ಯಕರ್ತರನ್ನು ಕರೆತರುವ ಹೊಣೆಗಾರಿಕೆಯನ್ನು ಪದಾಕಾರಿಗಳಿಗೆ ನೀಡಲಾಗಿದೆ.

ಪ್ರತಿಪಕ್ಷ ನಾಯಕನ ರೇಸ್‌ನಲ್ಲಿ ಅಶ್ವತ್ಥ್, ಅರಗ, ಅಶೋಕ್

ಬೆಂಗಳೂರು, ನ.11- ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಕೊನೆಗೂ ಎಚ್ಚೆತ್ತುಕೊಂಡಿದ್ದು, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕನ ಆಯ್ಕೆ ಸಂಬಂಧ ಶುಕ್ರವಾರ ಶಾಸಕಾಂಗ ಸಭೆ ಆಯೋಜಿಸಿದೆ.ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆಯಲಿರುವ ಶಾಸಕಾಂಗ ಸಭೆಗೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚನೆ ಕೊಡಲಾಗಿದ್ದು, ಕೇಂದ್ರದಿಂದ ವೀಕ್ಷಕರು ಕೂಡ ಆಗಮಿಸಲಿದ್ದಾರೆ.

ಮೂಲಗಳ ಪ್ರಕಾರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭಾಗವಹಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಈಗಾಗಲೇ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿರುವುದರಿಂದ ವಿಧಾನಸಭೆ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಈ ಸಮುದಾಯ ಹೊರತುಪಡಿಸಿ ಒಕ್ಕಲಿಗ ಇಲ್ಲವೆ ಹಿಂದುಳಿದ ಸಮುದಾಯಕ್ಕೆ ಸೇರಿದವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ.

ಹಿರಿತನವೇ ಮಾನದಂಡವಾದರೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಆರ್.ಅಶೋಕ್, ಬಸನಗೌಡ ಪಾಟೀಲ್ ಯತ್ನಾಳ್ ಈ ಸ್ಥಾನಕ್ಕೆ ಅರ್ಹರೂ ಹೌದು. ಆದರೆ, ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಬೊಮ್ಮಾಯಿ ಮತ್ತು ಯತ್ನಾಳ್ ರೇಸ್ನಿಂದ ಹೊರಬಿದ್ದಿದ್ದಾರೆ.

80 ಭಾರತೀಯ ಮೀನುಗಾರರ ಬಿಡುಗಡೆ ಮಾಡಿದ ಪಾಕ್

ಉಳಿದಂತೆ ಒಕ್ಕಲಿಗ ಸಮುದಾಯಕ್ಕೆ ಮಣೆ ಹಾಕುವುದಾದರೆ ಸದ್ಯ ಬಿಜೆಪಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ಟೀಕೆ ಮಾಡುತ್ತ ಬಂದಿರುವ ಮಲ್ಲೇಶ್ವರಂ ಶಾಸಕ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಹಿರಿಯರಾದ ಆರ್.ಅಶೋಕ್, ಆರಗ ಜ್ಞಾನೇಂದ್ರ ಹೆಸರುಗಳು ಪ್ರಬಲವಾಗಿ ಕೇಳಿಬರುತ್ತಿವೆ.

ಈಗಾಗಲೇ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದು, ಅವರು ಕೂಡ ಒಕ್ಕಲಿಗ ಸಮುದಾಯವನ್ನು ಪ್ರತಿನಿಸುತ್ತಾರೆ. ಪುನಃ ಅದೇ ಸಮುದಾಯಕ್ಕೆ ವಿಪಕ್ಷ ನಾಯಕ ಸ್ಥಾನ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬಂದರೆ ವಿ.ಸುನಿಲ್ಕುಮಾರ್ಗೆ ಅದೃಷ್ಟ ಒಲಿಯಬಹುದು. ಹಿಂದುಳಿದ ಸಮುದಾಯಕ್ಕೂ ಸಾಮಾಜಿಕ ನ್ಯಾಯ ಒದಗಿಸಿದ್ದೇವೆ ಎಂಬ ಸಂದೇಶವನ್ನು ರವಾನಿಸಲು ಬಿಜೆಪಿ ಮುಂದಾಗಿದೆ.

ಇನ್ನು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ, ಸದಸ್ಯರಾದ ತೇಜಸ್ವಿನಿ ರಮೇಶ್ಗೌಡ, ಶಶೀಲ್ ನಮೋಶಿ ಹೆಸರುಗಳು ಕೇಳಿಬಂದಿವೆ. ಅಂತಿಮವಾಗಿ ಶುಕ್ರವಾರ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಯಾರ ಪರವಾಗಿ ಹೆಚ್ಚಿನ ಬೆಂಬಲ ಸಿಗಲಿದೆಯೋ ಅವರಿಗೆ ಈ ಸ್ಥಾನಗಳು ಒಲಿಯಲಿವೆ.

ಯಾವುದೇ ರೀತಿಯ ಅಪಸ್ವರ, ಅಸಮಾಧಾನಕ್ಕೆ ಅವಕಾಶವಿಲ್ಲದಂತೆ ಪ್ರಜಾಸತ್ತಾತ್ಮಕ ಮಾರ್ಗದಲ್ಲೇ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ಕೊಟ್ಟು ಎರಡೂ ಸದನಗಳ ನಾಯಕ ಮತ್ತು ಉಪನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಗಮನ ಹರಿಸಿದೆ.