Thursday, November 6, 2025
Home Blog Page 1824

4 ವರ್ಷದ ಬಾಲಕಿ ಮೇಲೆ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅತ್ಯಾಚಾರ


ದೌಸಾ,ನ.11- ನಾಲ್ಕು ವರ್ಷದ ಬಾಲಕಿ ಮೇಲೆ ಸಬ್ ಪೊಲೀಸ್ ಸಬ್​ಇನ್ಸ್‌ಪೆಕ್ಟರ್‌ ಅ ಒಬ್ಬ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.ನಾಲ್ಕು ವರ್ಷದ ಬಾಲಕಿಯ ಮೇಲೆ ಎಸ್‍ಐ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಸ್‍ಐನನ್ನು ಥಳಿಸಿದ್ದಾರೆ.

ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಬಂಸಿ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಸಮೀಪದಲ್ಲಿ ವಾಸಿಸುವ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‍ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರು ಅತ್ಯಾಚಾರ ಆರೋಪ ಮಾಡಿರುವ ಬಗ್ಗೆ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಅಗತ್ಯ ಕ್ರಮ ಕೈಗೊಳ್ಳಲಾಗುವುದು ಸಿಂಗ್ ಹೇಳಿದರು.

ಸುದ್ದಿ ತಿಳಿಯುತ್ತಿದ್ದಂತೆ ರಾಹುವಾಸ್ ಪೊಲೀಸ್ ಠಾಣೆಯ ಸುತ್ತ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದ ರು. ಅವರು ಭೂಪೇಂದ್ರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಥಳಿಸಿದರು.

ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಮಾತನಾಡಿ, ಲಾಲ್ಸೋಟ್‍ನಲ್ಲಿ ಏಳು ವರ್ಷದ ದಲಿತ ಬಾಲಕಿಯ ಮೇಲೆ ಪೊಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅದನ್ನು ಪಡೆಯಲು ನಾನು ಸ್ಥಳಕ್ಕೆ ಬಂದಿದ್ದೇನೆ. ಅಮಾಯಕ ಮಗುವಿಗೆ ನ್ಯಾಯ ಕೊಡಿ ಎಂದ ಬಿಜೆಪಿ ಸಂಸದರು ಬಾಲಕಿಯ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಸಾಲು ಸಾಲು ರಜೆ : ಊರುಗಳತ್ತ ಹೊರಟ ಬೆಂಗಳೂರಿನ ಜನ, ಬಸ್ಸು, ರೈಲುಗಳು ಪುಲ್ ರಶ್, ಟ್ರಾಫಿಕ್ ಜಾಮ್

ಬೆಂಗಳೂರು, ನ.11- ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು, ಬಸ್‍ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ.ನಿನ್ನೆ ಕೆಲಸ ಮುಗಿಸಿಕೊಂಡು ಬಹುತೇಕ ಜನರು ನಿನ್ನೆ ರಾತ್ರಿಯೇ ಪ್ರಯಾಣಿ ಬೆಳೆಸಿದ್ದು, ನಗರದ ಮೆಜೆಸ್ಟಿಕ್ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ ಶಾಂತಿನಗರ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ಬಾರಿ ಸಂಖ್ಯೆಯಲ್ಲಿ ಪ್ರಯಾಣಿಕರು ಜಮಾಯಿಸಿದ್ದು, ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದ ದೃಶ್ಯಗಳು ಕಂಡುಬಂತು.

ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಜೊತೆಗೆ ಬಿಎಂಟಿಸಿ ಬಸ್‍ಗಳನ್ನು ಸಹ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಎಲ್ಲಾ ಬಸ್‍ಗಳಲ್ಲಿ ಪ್ರಯಾಣಿಕರು ತುಂಬಿ ತುಳುಕುತ್ತಿದ್ದರು. ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವ ಹಿನ್ನೆಲೆಯಲ್ಲಿ ಸಾಮಾನ್ಯ ಬಸ್‍ಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿ ಕಂಡು ಬಂತು.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಕಳೆದ ಒಂದು ತಿಂಗಳ ಹಿಂದೆಯೇ ಶಿವಮೊಗ್ಗ, ಹುಬ್ಬಳ್ಳಿ, ಧಾರಾವಾಡ, ರಾಯಚೂರು, ಗುಲ್ಬರ್ಗ, ಮಡಿಕೇರಿ, ಮಂಗಳೂರು, ಕೊಡಗು ಸೇರಿದಂತೆ ದೂರದ ಊರುಗಳಿಗೆ ತೆರಳುವ ಪ್ರಯಾಣಿಕರು ಮುಂಗಡವಾಗಿ ಟಿಕೇಟ್‍ಗಳನ್ನು ಕಾಯ್ದಿರಿಸಿದ್ದರು. ಪ್ರಯಾಣಿಕರ ಸಂಖ್ಯೆಗಣುಗುಣವಾಗಿ ಕೆಎಸ್‍ಆರ್‍ಟಿಸಿ ವತಿಯಿಂದ ಯಾವುದೇ ತೊಂದರೆಯಾಗದಂತೆ ಹೆಚ್ಚುವರಿ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ರೈಲುಗಳು ಪುಲ್ ರಶ್
ದೇಶದಾದ್ಯಂತ ಸಡಗರದಿಂದ ದೀಪಾವಳಿ ಹಬ್ಬವನ್ನು ಆಚರಿಸಲಿದ್ದು, ಉದ್ಯೋಗಕ್ಕಾಗಿ ರಾಜಧಾನಿಯಲ್ಲಿ ನೆಲೆಸಿರುವ ವಿವಿಧ ರಾಜ್ಯಗಳ ಜನರು ಸಹ ತಮ್ಮ ತಮ್ಮ ಊರುಗಳತ್ತ ತೆರಳುತ್ತಿದ್ದು, ರೈಲುಗಳಲ್ಲೂ ಸಹ ಜಾಗವಿಲ್ಲದಂತೆ ಪ್ರಯಾಣಿಸುತ್ತಿದ್ದಾರೆ. ಕಳೆದ ಒಂದು ತಿಂಗಳ ಹಿಂದೆಯೇ ಮುಂಗಡ ಟಿಕೇಟ್ ಕೂಡ ಕಾಯ್ದಿರಿಸಿಕೊಂಡು ಪ್ರಯಾಣ ಬೆಳೆಸುತ್ತಿದ್ದಾರೆ.

ಖಾಸಗಿ ಬಸ್‍ಗಳಿಗೂ ಡಿಮಾಂಡ್
ಹೆಚ್ಚಿನ ಸಂಖ್ಯೆಯಲ್ಲಿ ಜನರು ಊರುಗಳತ್ತ ತೆರಳುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಖಾಸಗಿ ಬಸ್ ಮಾಲೀಕರು ಟಿಕೇಟ್ ದರವನ್ನು ದುಪ್ಪಟ್ಟು ಮಾಡಿದ್ದು, ಜಗಳ ಮಾತಿನ ಚಕಮಕಿಯೊಂದಿಗೆ ವಿ ಇಲ್ಲದೆ ಪ್ರಯಾಣಿಸುವಂತಾಗಿತ್ತು.

ಟ್ರಾಫಿಕ್ ಜಾಮ್
ಕಳೆದ ರಾತ್ರಿಯಿಂದಲೇ ಮೆಜೆಸ್ಟಿಕ್ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಬಂದಿದ್ದರಿಂದ ಮೆಜೆಸ್ಟಿಕ್ ಸುತ್ತಮುತ್ತ ತಡರಾತ್ರಿಯವರೆಗೂ ಸಂಚಾರಿ ದಟ್ಟಣೆ ಉಂಟಾಗಿತ್ತು. ಇನ್ನೂ ತುಮಕೂರು ರಸ್ತೆ ಗೊರಗುಂಟೆ ಪಾಳ್ಯ, ನೆಲಮಂಗಲ ಟೋಲ್, ಅತ್ತಿಬೆಲೆ, ಆನೇಕಲ್ ಟೋಲ್, ದೇವನಹಳ್ಳಿ ಟೋಲ್‍ಗಳಲ್ಲೂ ಸಹ ಕಾರು ಬಸ್‍ಗಳು ಕಿಲೋಮೀಟರ್‍ಗಟ್ಟಲೇ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ಕಂಡುಬಂದವು.

ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮುಂದಿವೆ ಬೆಟ್ಟದಷ್ಟು ಸವಾಲುಗಳು

ಬೆಂಗಳೂರು, ನ.11- ಸಾಕಷ್ಟು ಸವಾಲುಗಳ ನಡುವೆಯೇ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರಿಗೆ ಭವಿಷ್ಯದಲ್ಲಿ ಬೆಟ್ಟದಷ್ಟು ಸವಾಲುಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುವುದು ಅಷ್ಟು ಸರಳವಾಗಿಲ್ಲ.
ವಿಧಾನಸಭಾ ಚುನಾವಣೆ ಸೋಲಿನ ನಂತರ ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವುದಂತಾಗಿದೆ. ಈಗಾಗಲೇ ಅನೇಕರು ಪಕ್ಷ ಬಿಟ್ಟು ಅನ್ಯ ಪಕ್ಷಗಳ ಕಡೆ ಮುಖ ಮಾಡಿದ್ದಾರೆ, ಉಳಿದವರು ಕೂಡಾ ಕಮಲಕ್ಕೆ ಗುಡ್ ಬೈ ಹೇಳುವ ಲೆಕ್ಕಾಚಾರದಲ್ಲಿ ಇದ್ದಾರೆ.

ಬಿಜೆಪಿಯಲ್ಲಿ ಬಹಿರಂಗವಾಗಿ ಎಲ್ಲವೂ ಚೆನ್ನಾಗಿದ್ದಂತೆ ಕಾಣಿಸಿದರೂ ಎಲ್ಲ ಪಕ್ಷಗಳಲ್ಲಿ ಇರುವಂತೆ ಇಲ್ಲಿಯೂ ಆಂತರಿಕ ಸಂಘರ್ಷ, ಗುಂಪುಗಾರಿಕೆ ಸಾಕಷ್ಟಿದೆ. ಜಾತಿ, ಸಂಘ ಪರಿವಾರ, ವಲಸೆ ಬಂದವರು.. ಹೀಗೆ ನಾನಾ ಸಂಗತಿಗಳನ್ನು ಅವಲಂಬಿಸಿ ಇರುವ ಈ ಗುಂಪುಗಾರಿಕೆ ನಿಯಂತ್ರಣ ಕೂಡ ವೈಯಕ್ತಿಕ ಸಾಮಥ್ರ್ಯಕ್ಕೆ ಒಂದು ಅಳತೆಗೋಲಿನಂತೆ ಇರುವುದರಿಂದ ಇದು ಕೂಡ ಅವರಿಗೆ ಸವಾಲಾಗಿ ಪರಿಣಮಿಸಲಿದೆ.

ರಾಜ್ಯಾಧ್ಯಕ್ಷ ಪಟ್ಟಕ್ಕೇರುತ್ತಿದಂತೆ ವಿಜಯೇಂದ್ರಗೆ ತಲೆನೋವು ಶುರು, ಸ್ವಪಕ್ಷದವರಿಂದಲೇ ಅಸಮಾಧಾನ

ಬಿಜೆಪಿ ಎಂದರೆ ಕಾರ್ಯಕರ್ತರ ಪಕ್ಷ ಎಂದೇ ಹೆಸರುವಾಸಿ. ಚುನಾವಣೆ ಸಂದರ್ಭದಲ್ಲಿ ಮಾತ್ರವಲ್ಲ, ಪಕ್ಷಕ್ಕಾಗಿ ಏನೇ ಮಾಡಬೇಕಾಗಿ ಬಂದರೂ ಬಿಜೆಪಿಯ ತಳಮಟ್ಟದ ಕಾರ್ಯಕರ್ತರ ಪಾತ್ರ, ಅವರ ಸಂಘಟಿತ ಪ್ರಯತ್ನ ಮಹತ್ವದ್ದು. ಅಪಾರ ಸಂಖ್ಯೆಯಲ್ಲಿರುವ ಈ ಕಾರ್ಯಕರ್ತರನ್ನು ಒಗ್ಗೂಡಿಸಿ, ಉತ್ಸಾಹ ತುಂಬಿ, ಪಕ್ಷಕ್ಕಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಶ್ರಮಿಸುವಂತೆ ಮಾಡುವ ಸವಾಲನ್ನೂ ವಿಜಯೇಂದ್ರ ನಿಭಾಯಿಸಬೇಕಾಗಿದೆ.

ಪಕ್ಷದಲ್ಲಿ ಅನೇಕ ಹಿರಿತಲೆಗಳಿದ್ದು, ಪ್ರಭಾವಿಗಳಾಗಿರುವ ಅವರ ಮಾತನ್ನು ಅಷ್ಟು ಸುಲಭದಲ್ಲಿ ತೆಗೆದುಹಾಕಲು ಸಾಧ್ಯವಿಲ್ಲ. ಅಲ್ಲದೆ, ಈಗಾಗಲೇ ಕೆಲವರು ಮಾಜಿ ಸಿಎಂ ಬಿಎಸ್‍ವೈ ಅಕಾರದಲ್ಲಿದ್ದಾಗಲೇ ಬಹಿರಂಗವಾಗಿ ಅಸಮಾಧಾನ ತೋರ್ಪಡಿಸಿದ್ದು, ಅಂಥವರನ್ನು ಬಿಎಸ್‍ವೈ ಪುತ್ರ ನಿಭಾಯಿಸುವುದು ಸುಲಭವಲ್ಲ. ಇನ್ನೊಂದೆಡೆ ಬಿಜೆಪಿ ಹೈಕಮಾಂಡ್ ಹೊಸ ಮುಖಗಳಿಗೆ, ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಯುವ ನಾಯಕರನ್ನೂ ಕಡೆಗಣಿಸುವಂತಿಲ್ಲ. ಹೀಗೆ ಹಿರಿ-ಕಿರಿಯರಿಬ್ಬರನ್ನೂ ಒಟ್ಟಿಗೇ ಸಾಮರಸ್ಯದಲ್ಲಿ ಇರಿಸಿಕೊಂಡು ಪಕ್ಷವನ್ನು ಮುನ್ನಡೆಸುವುದು ಕೂಡ ದೊಡ್ಡ ಸವಾಲೇ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತು ಅಕಾರ ಕಳೆದುಕೊಂಡಿರುವ ಬಿಜೆಪಿಗೆ ಈ ಲೋಕಸಭಾ ಚುನಾವಣೆಯ ಗೆಲುವು ಮಹತ್ವದ್ದು ಹಾಗೂ ಪ್ರತಿಷ್ಠೆಯ ಸಂಗತಿ ಆಗಿರುವುದರಿಂದ ವಿಜಯೇಂದ್ರ ಅವರಿಗೆ ಸಂಸತ್ ಚುನಾವಣೆ ಸಂಕಟ ಎನಿಸಿದರೂ ಅಚ್ಚರಿ ಏನಿಲ್ಲ. ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಏನೆಲ್ಲ ತಪ್ಪುಗಳಾದವು, ಹಿನ್ನಡೆಗೆ ಕಾರಣಗಳು ಏನು ಎಂಬುದನ್ನೆಲ್ಲ ತಿಳಿದು ಲೋಕಸಭೆ ಚುನಾವಣೆಯಲ್ಲಿ ಪಕ್ಷ ಭರ್ಜರಿ ಗೆಲವು ಸಾಸುವಂತೆ ಮಾಡುವ ದೊಡ್ಡ ಸವಾಲು ವಿಜಯೇಂದ್ರ ಮುಂದಿದೆ.

ರಾಜ್ಯದಲ್ಲಿ ಸ್ಪಷ್ಟ ಬಹುಮತದಿಂದ ಗೆದ್ದು ಅಕಾರ ಪಡೆದು, ಗ್ಯಾರಂಟಿಗಳ ಜÁರಿಯಿಂದ ಹಿಗ್ಗಿರುವ ಕಾಂಗ್ರೆಸ್ ಪಕ್ಷ ಈ ಸಲ ಬಿಜೆಪಿಗೆ ಭಾರಿ ಪ್ರತಿಸ್ರ್ಪ ಆಗಿರಲಿದೆ. ಅಕಾರದಲ್ಲಿ ಇರುವುದರಿಂದ ಈಗಾಗಲೇ ಒಂದಷ್ಟು ಆಯಕಟ್ಟಿನ ಜಾಗ-ಕ್ಷೇತ್ರಗಳ ಮೇಲೆ ಹಿಡಿತ ಸಾಸಿರುವ ಕಾಂಗ್ರೆಸ್ ವಿರುದ್ಧ ಕಾರ್ಯತಂತ್ರ ಹೆಣೆಯುವುದು ಕೂಡ ಭಾರಿ ಸಂಗತಿಯೇ. ಅದರಲ್ಲೂ ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್ ಅವರಂಥ ಎರಡು ಪ್ರಬಲ ಸಮುದಾಯದ ನಾಯಕರ ನೇತೃತ್ವದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮಣಿಸಲು ವಿಜಯೇಂದ್ರ ಕೈಮೀರಿದ ಪ್ರಯತ್ನ ಮಾಡಬೇಕಾಗಿರುವುದು ಮತ್ತೊಂದು ಸವಾಲು.

ನೂತನ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ರಾಜ್ಯ ಬಿಜೆಪಿಯ ಚುಕ್ಕಾಣಿಯನ್ನು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಂತಾದವರು ವಿಜಯೇಂದ್ರ ಅವರಿಗೆ ನೀಡಿದ್ದಾರೆ. ಪಕ್ಷದ ವರಿಷ್ಠರು, ಕೇಂದ್ರ ನಾಯಕರು ಇಂಥ ದೊಡ್ಡ ಜವಾಬ್ದಾರಿ ಕೊಟ್ಟಿದ್ದು, ಇದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಅವರು ತಮ್ಮ ಮೇಲೆ ಇರಿಸಿರುವ ವಿಶ್ವಾಸವನ್ನು ಉಳಿಸಿಕೊಳ್ಳಲೇಬೇಕಾದ ಅತ್ಯಂತ ಮಹತ್ವದ ಸವಾಲು ವಿಜಯೇಂದ್ರ ಮುಂದಿದೆ.

ರಾಜ್ಯಾಧ್ಯಕ್ಷ ಪಟ್ಟಕ್ಕೇರುತ್ತಿದಂತೆ ವಿಜಯೇಂದ್ರಗೆ ತಲೆನೋವು ಶುರು, ಸ್ವಪಕ್ಷದವರಿಂದಲೇ ಅಸಮಾಧಾನ

ಬೆಂಗಳೂರು, ನ.11- ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ, ಹಾಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸ್ವಪಕ್ಷದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಬಿಜೆಪಿ ಹೈಕಮಾಂಡ್ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರನ್ನು ನೇಮಕ ಮಾಡುವಂತೆ ಆದೇಶ ನೀಡಿದೆ. ಇದು ಸದ್ಯ ರಾಜ್ಯ ಕಮಲ ಪಾಳಯದಲ್ಲಿ ಅಸಮಾಧಾನಕ್ಕೆ ನಾಂದಿ ಹಾಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ ಅವರು ಬದಲಾಗದೆ ಇರೋದು ಕಾರ್ಯಕರ್ತ ಅನ್ನೋದು, ನಾನೊಬ್ಬ ಈಗ ಸಾಮಾನ್ಯ ಕಾರ್ಯಕರ್ತ ಅಷ್ಟೆ. 35 ವರ್ಷಗಳ ರಾಜಕೀಯದಲ್ಲಿ ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದ್ರೆ ನಮ್ಮ ಮಾತೆ ನಮಗೆ ತಿರುಗುಬಾಣವಾಗುತ್ತದೆ ಎಂದು ಹೇಳಿದರು.

ಪಕ್ಷ ನೇಮಕ ಮಾಡಿದೆ, ವೈಚಾರಿಕ ಭದ್ರತೆ ಜೊತೆಗೆ ಪಕ್ಷ ಕಟ್ಟಿ ಬೆಳೆಸುವ ಕೆಲಸ ಮಾಡಬೇಕಿದೆ. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆಲ್ಲಿಸುವ ಹೊಣೆಗಾರಿಕೆ ಇದೆ. ಅಸಮಾಧಾನದ ಬಗ್ಗೆ ಈಗ ನಾನು ಏನೂ ಮಾತನಾಡಲ್ಲ. ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೀನಿ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೆ ಜವಾಬ್ದಾರಿ ನಿರ್ವಹಿಸಿದ್ದೇನೆ ಎಂದು ಹೇಳುತ್ತಾ ತಲೆ ಮೇಲೆ ಕೈಯಿಟ್ಟುಕೊಂಡು ತೆರಳಿದರು.

ಜೈ ಶ್ರೀರಾಮ್ ಘೋಷಣೆ ಏಕತೆಯ ಸಂಕೇತ : ಜಾವೇದ್ ಅಖ್ತರ್

ಇದೇ ಸಮಯದಲ್ಲಿ ರಾಜ್ಯದಲ್ಲಿ ಬಿಎಸ್‍ವೈ ರೀತಿ ವಿಜಯೇಂದ್ರ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮಂತೆ ಸಾಕಷ್ಟು ಜನ ಸೋತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಕೆಲಸ ಮಾಡಬೇಕಿದೆ. ಸಾಕಷ್ಟು ನಾಯಕರು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಾಗಿದ್ದರು. ಎಲ್ಲರಿಗೂ ಎಲ್ಲಾ ಸಮಯದಲ್ಲಿ ಸಮಾಧಾನ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನದಂತೆ ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಸಿ.ಟಿ.ರವಿ ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ , ಸಿ.ಟಿ. ರವಿ, ಬಸನಗೌಡ ಪಾಟೀಲ್ ಯತ್ನಾಳ್, ವಿ. ಸೋಮಣ್ಣ, ಆರ್. ಅಶೋಕ್, ಅಶ್ವಥ್ ನಾರಾಯಣ್ ಸೇರಿದಂತೆ ಹಲವರ ಹೆಸರು ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‍ನಲ್ಲಿ ಪ್ರಮುಖವಾಗಿ ಕೇಳಿ ಬಂದಿತ್ತು. ಆದರೀಗ ಅವರನ್ನೆಲ್ಲ ಹಿಂದಿಕ್ಕಿ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ಗೆದ್ದಿದ್ದಾರೆ. ಇನ್ನೇನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೇ ಬಿಜೆಪಿ ರಾಜ್ಯಾಧ್ಯಕ್ಷೆ ಆಗೇ ಬಿಡ್ತಾರೆ ಎಂಬ ಸುದ್ದಿ ದಟ್ಟವಾಗಿಯೇ ಹರಿದಾಡುತ್ತಿತ್ತು.

ಮಾತ್ರವಲ್ಲದೆ, ಮಾಜಿ ಸಚಿವ ಸಿ.ಟಿ.ರವಿ ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಅಷ್ಟೇ ಈ ರೇಸ್‍ನಲ್ಲಿದ್ದ ಮಾಜಿ ಸಚಿವ ವಿ.ಸೋಮಣ್ಣಗೂ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್‍ಗೂ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿಲ್ಲ. ಹೀಗಾಗಿ ಆಕಾಂಕ್ಷಿಗಳಲ್ಲಿ ಹೈಕಮಾಂಡ್‍ನ ಈ ನಿರ್ಧಾರ ಬೇಸರ ತಂದಿದೆ.

ಜೈ ಶ್ರೀರಾಮ್ ಘೋಷಣೆ ಏಕತೆಯ ಸಂಕೇತ : ಜಾವೇದ್ ಅಖ್ತರ್

ಮುಂಬೈ,ನ.11- ಧರ್ಮ ಮತ್ತು ರಾಜಕೀಯದ ಬಗ್ಗೆ ಬಹಿರಂಗ ಅಭಿಪ್ರಾಯಗಳಿಗೆ ಹೆಸರಾಗಿರುವ ಬಾಲಿವುಡ್ ಹಿರಿಯ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಜೈ ಶ್ರೀರಾಮ್ ಘೋಷಣೆ ಏಕತೆಗೆ ಉತ್ತಮ ಉದಾಹರಣೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆಯೋಜಿಸಿದ್ದ ದೀಪೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಮ ಮತ್ತು ಸೀತೆ ಆದರ್ಶ ಸತಿ-ಪತಿಗಳಾಗಿದ್ದರು ಎಂದು ಬಣ್ಣಿಸಿದ್ದಾರೆ.

ಅನೇಕ ದೇವತೆಗಳಿದ್ದಾರೆ, ಆದರೆ ನಾವು ಆದರ್ಶ ಪತಿ ಮತ್ತು ಆದರ್ಶ ಪತ್ನಿಯ ಬಗ್ಗೆ ಮಾತನಾಡುವಾಗ, ರಾಮ ಮತ್ತು ಸೀತೆ ನೆನಪಿಗೆ ಬರುತ್ತಾರೆ. ಜೈ ಶ್ರೀರಾಮ್ ಘೋಷಣೆ ಪ್ರೀತಿ ಮತ್ತು ಏಕತೆಗೆ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಅಖ್ತರ್ ಹೇಳಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ಅವರು ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು ಮತ್ತು ಕ್ಷೀಣಿಸುತ್ತಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೆಲವರು ಯಾವಾಗಲೂ ಅಸಹಿಷ್ಣುತೆ ಹೊಂದಿರುತ್ತಾರೆ ಆದರೆ, ಹಿಂದೂಗಳು ಹಾಗಲ್ಲ, ಅವರ ವಿಶೇಷತೆ ಎಂದರೆ ಅವರು ಉದಾರ ಮತ್ತು ದೊಡ್ಡ ಹೃದಯ.

ಇದು ಹಿಂದೂ ಸಂಸ್ಕøತಿ, ಇದು ನಾಗರಿಕತೆ. ಇದು ನಮಗೆ ಪ್ರಜಾಸತ್ತಾತ್ಮಕ ಧೋರಣೆಗಳನ್ನು ಕಲಿಸಿದೆ. ಆದ್ದರಿಂದ ಪ್ರಜಾಪ್ರಭುತ್ವವಿದೆ. ಈ ದೇಶದಲ್ಲಿ ನಾವು ಸರಿ ಮತ್ತು ಎಲ್ಲರೂ ತಪ್ಪು ಎಂದು ಯೋಚಿಸುವುದು ಹಿಂದೂಗಳ ಕೆಲಸವಲ್ಲ ಎಂದಿದ್ದಾರೆ ಆಖ್ತರ್. ಭಗವಾನ್ ರಾಮ ಮತ್ತು ಸೀತೆ ಕೇವಲ ಹಿಂದೂ ದೇವರು ಮತ್ತು ದೇವತೆಗಳಲ್ಲ ಅವರು ಭಾರತದ ಸಾಂಸ್ಕೃತಿಕ ಪರಂಪರೆ ಎಂದು ಗೀತರಚನೆಕಾರರು ಸೇರಿಸಿದ್ದಾರೆ.

ಕೃಪಲಾನಿ, ಅಜಾದ್‍ಗೆ ಪ್ರಧಾನಿ ಮೋದಿ ನಮನ

ನವದೆಹಲಿ, ನ 11 (ಪಿಟಿಐ) : ಸ್ವಾತಂತ್ರ್ಯ ಹೋರಾಟಗಾರರಾದ ಆಚಾರ್ಯ ಕೃಪಲಾನಿ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

ಮಾಜಿ ಕಾಂಗ್ರೆಸ್ ಅಧ್ಯಕ್ಷ ಮತ್ತು ಸಮಾಜವಾದಿ ನಾಯಕ ಕೃಪಲಾನಿ ಅವರನ್ನು ಮೋದಿಯವರು ವಸಾಹತುಶಾಹಿ ವಿರುದ್ಧದ ಭಾರತದ ಹೋರಾಟದ ನಿಜವಾದ ದಾರಿದೀಪ ಎಂದು ನೆನಪಿಸಿಕೊಂಡರು.

ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಮಾನತೆಯನ್ನು ಬಲಪಡಿಸಲು ಅವರ ದಣಿವರಿಯದ ಕೆಲಸವು ನಮ್ಮ ರಾಷ್ಟ್ರದ ಬಟ್ಟೆಯ ಮೇಲೆ ಶಾಶ್ವತವಾದ ಛಾಪು ಮೂಡಿಸಿದೆ. ಅವರ ಜೀವನ ಮತ್ತು ಕೆಲಸವು ಯಾವಾಗಲೂ ಸ್ವಾತಂತ್ರ್ಯ ಮತ್ತು ನ್ಯಾಯದ ಮËಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಪ್ರಧಾನಿ ಎಕ್ಸ್‍ನಲ್ಲಿ ಹೇಳಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ಮೌಲಾನಾ ಆಜಾದ್ ಅವರನ್ನು ಸ್ಮರಿಸಿದ ಮೋದಿ ಅವರು ಸ್ವತಂತ್ರ ಭಾರತದ ಮೊದಲ ಶಿಕ್ಷಣ ಸಚಿವರಾಗಿ ಆಳವಾದ ವಿದ್ವಾಂಸರು ಮತ್ತು ಭಾರತದ ಸ್ವಾತಂತ್ರ್ಯ ಹೋರಾಟದ ಆಧಾರಸ್ತಂಭ ಎಂದು ಬಣ್ಣಿಸಿದರು.

ಶಿಕ್ಷಣಕ್ಕೆ ಅವರ ಬದ್ಧತೆ ಶ್ಲಾಘನೀಯವಾಗಿದೆ. ಆಧುನಿಕ ಭಾರತವನ್ನು ರೂಪಿಸುವಲ್ಲಿ ಅವರ ಪ್ರಯತ್ನಗಳು ಅನೇಕ ಜನರಿಗೆ ಮಾರ್ಗದರ್ಶನ ನೀಡುತ್ತಲೇ ಇವೆ ಎಂದು ಅವರು ಹೇಳಿದರು.

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಹರಿದು ಬಂದ ಅಭಿನಂದನೆಗಳ ಮಹಾಪೂರ

ಬೆಂಗಳೂರು, ನ 11 (ಪಿಟಿಐ) : ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ ವೈ ವಿಜಯೇಂದ್ರ ಅವರನ್ನು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತಿತರ ನಾಯಕರು ಅಭಿನಂದಿಸಿದ್ದಾರೆ. ಬಿಜೆಪಿಯ ಹೊಸ ಪಾಲುದಾರ ಪಕ್ಷವಾಗಿರುವ ಜೆಡಿಎಸ್ ಪಕ್ಷದ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಆ ಪಕ್ಷದ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರು ವಿಜಯೇಂದ್ರ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈಗಾಗಲೇ ಯುವ ನಾಯಕರಾಗಿ (ಬಿಜೆಪಿ) ಸಂಘಟನೆಯಲ್ಲಿ ಸಕ್ರಿಯರಾಗಿರುವ ಅವರಿಗೆ ಚಿಕ್ಕವಯಸ್ಸಿನಲ್ಲೇ ಬಹುದೊಡ್ಡ ಜವಾಬ್ದಾರಿ ನೀಡಲಾಗಿದೆ. ತಮಗೆ ವಹಿಸಿರುವ ಈ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಹೀಗಾಗಿ ವಿಜಯೇಂದ್ರ ಅವರಿಗೆ ನಾನು ಶುಭ ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

    ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಕುಮಾರಸ್ವಾಮಿ ನಡೆಸಿದ ಸಭೆಯ ನಂತರ ಜೆಡಿಎಸ್ ಮತ್ತು ಬಿಜೆಪಿ ಸೆಪ್ಟೆಂಬರ್‍ನಲ್ಲಿ ಮೈತ್ರಿಯನ್ನು ಘೋಷಿಸಿದ್ದವು ಮತ್ತು ಎನ್‍ಡಿಎಗೆ ಸೇರ್ಪಡೆಗೊಂಡವು.

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಮೈತ್ರಿಯ ವಿವರಗಳನ್ನು ಉಭಯ ಪಕ್ಷಗಳು ಇನ್ನೂ ಔಪಚಾರಿಕಗೊಳಿಸಬೇಕಾಗಿಲ್ಲ, ಇದರಲ್ಲಿ ವಿಜಯೇಂದ್ರ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆಯಿದೆ.ಯಡಿಯೂರಪ್ಪನವರ ಮಗ ಎಂಬ ಅರ್ಹತೆಯ ಮೇರೆಗೆ ಬಿಜೆಪಿಯ ಹೊಸ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರ ಅವರಿಗೆ ಅಭಿನಂದನೆಗಳು ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಕಾಲೇಳೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಸೇರಿದಂತೆ ಪ್ರಮುಖ ನಾಯಕರು ವಿಜಯೇಂದ್ರ ಅವರನ್ನು ದೂರವಾಣಿ ಮೂಲಕ ಅಭಿನಂದಿಸಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಎಸ್ ಎಂ ಕೃಷ್ಣ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಕೂಡ ಅವರಿಗೆ ದೂರವಾಣಿ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಮೊದಲ ಬಾರಿಗೆ ಶಾಸಕರಾಗಿರುವ 47 ವರ್ಷ ವಯಸ್ಸಿನವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಗಳ ಅವಯನ್ನು ಪೂರ್ಣಗೊಳಿಸಿದ ದಕ್ಷಿಣ ಕನ್ನಡದಿಂದ ಮೂರು ಬಾರಿ ಲೋಕಸಭಾ ಸದಸ್ಯರಾಗಿದ್ದ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಬಂದಿದ್ದಾರೆ. ಮತ್ತು ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ಕಳೆದ ವರ್ಷ ವಿಸ್ತರಣೆಯನ್ನು ನೀಡಲಾಗಿತ್ತು.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ವಿಜಯೇಂದ್ರ ಅವರು ಸಾಮಾನ್ಯ ಕಾರ್ಯಕರ್ತರಿಂದ ಪಕ್ಷದಲ್ಲಿ ಬೆಳೆದ ಸಂಘಟನಾ ಪುರುಷ ಎಂದು ಕರೆದರು ಮತ್ತು ಅವರ ನೇಮಕವು ಪಕ್ಷಕ್ಕೆ ಹೊಸ ಚೈತನ್ಯವನ್ನು ತಂದಿದೆ.ವಿಜಯೇಂದ್ರ ನೇತೃತ್ವದಲ್ಲಿ ಬೂತ್ ಮಟ್ಟದಿಂದ ಪಕ್ಷವನ್ನು ಒಗ್ಗಟ್ಟಿನಿಂದ ಬಲಪಡಿಸಲಾಗುವುದು ಮತ್ತು ಕಾಂಗ್ರೆಸ್ ದುರಾಡಳಿತದ ವಿರುದ್ಧ ಬಿಜೆಪಿ ಹೋರಾಟ ನಡೆಸಲಿದೆ ಎಂದರು.

ಆಯೋಧ್ಯೆ ಮಹಾಮಸ್ತಕಾಭಿಷೇಕ ಎಲ್ಲರಿಗೂ ಸಂತೋಷದ ಕ್ಷಣ : ಆರ್‌ಎಸ್‌ಎಸ್

ನವದೆಹಲಿ, ನ.11 (ಪಿಟಿಐ) : ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭವು ಎಲ್ಲ ದೇಶವಾಸಿಗಳಿಗೆ ಸಂತೋಷದ ಮಹಾನ್ ಕ್ಷಣ ಎಂದು ಆರ್‌ಎಸ್‌ಎಸ್ ಹೇಳಿದೆ ಮತ್ತು ಈ ದಿನವನ್ನು ಹಬ್ಬ ವಾಗಿ ಆಚರಿಸಲು ಜನರಿಗೆ ಕರೆ ನೀಡಿದೆ.

ಈ ವಾರದ ಆರಂಭದಲ್ಲಿ ಗುಜರಾತ್‍ನ ಕಚ್ ಜಿಲ್ಲೆಯ ಭುಜ್‍ನಲ್ಲಿ ತನ್ನ ರಾಷ್ಟ್ರೀಯ ಕಾರ್ಯಕಾರಿಣಿಯ ಮೂರು ದಿನಗಳ ಸಭೆಯಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘ ದೇವಾಲಯದ ಉದ್ಘಾಟನೆ ಮತ್ತು ದೇಶಾದ್ಯಂತ ಅದಕ್ಕೆ ಸಂಬಂಸಿದ ಕಾರ್ಯಕ್ರಮಗಳ ಕುರಿತು ಚರ್ಚಿಸಿತು.

ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ, ಆರ್‍ಎಸ್‍ಎಸ್ ಕಾರ್ಯಕರ್ತರು ಜನವರಿ 1 ರಿಂದ 15 ರ ನಡುವೆ ರಾಷ್ಟ್ರವ್ಯಾಪಿ ಮನೆ-ಮನೆ ಪ್ರಚಾರವನ್ನು ಆರಂಭಿಸಲಿದ್ದು, ಉದ್ಘಾಟನೆಗೆ ಜನರಿಗೆ ಆಹ್ವಾನ ನೀಡಲಿದ್ದಾರೆ ಎಂದು ಅದರ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸುದ್ದಿಗಾರರಿಗೆ ತಿಳಿಸಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ನಮ್ಮ ಪೂಜ್ಯ ಶ್ರೀರಾಮನ ಭವ್ಯವಾದ ದೇವಾಲಯವನ್ನು ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿದೆ ಮತ್ತು ಮೂರ್ತಿ ಪ್ರತಿಷ್ಠಾಪನೆ ಸಮಾರಂಭವು ಜನವರಿ 22 ರಂದು ನಡೆಯಲಿದೆ. ನಂತರ ವಿದೇಶದಲ್ಲಿ ವಾಸಿಸುವವರು ಸೇರಿದಂತೆ ನಮಗೆಲ್ಲರಿಗೂ ಇದು ಸಂತೋಷದ ಕ್ಷಣವಾಗಿದೆ. ವರ್ಷಗಳ ಪ್ರಯತ್ನದಿಂದ ಅಯೋಧ್ಯೆಯಲ್ಲಿ ನಮ್ಮ ಭಗವಾನ್ ಶ್ರೀರಾಮನ ಭವ್ಯವಾದ ಮಂದಿರವನ್ನು ನಿರ್ಮಿಸಲಾಗುತ್ತಿದೆ ಎಂದು ಆರ್‍ಎಸ್‍ಎಸ್‍ನ ರಾಷ್ಟ್ರೀಯ ಪ್ರಚಾರ ಮುಖ್ಯಸ್ಥ ಸುನೀಲ್ ಅಂಬೇಕರ್ ಇಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು.

ದೇಶಾದ್ಯಂತ ಜನರು ತಮ್ಮ ತಮ್ಮ ಪ್ರದೇಶಗಳಲ್ಲಿನ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಈ ಆಚರಣೆ ಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಅವರು ಹೇಳಿದರು.ಇದು ಉತ್ಸವದ ಸಂದರ್ಭವಾಗಿದೆ. ಎಲ್ಲರೂ ಅಯೋಧ್ಯೆಗೆ ಹೋಗುವುದಿಲ್ಲ. ಜನರು ಈ ಹಬ್ಬವನ್ನು ತಮ್ಮ ಹತ್ತಿರದ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಆಚರಿಸುತ್ತಾರೆ. ರಾತ್ರಿ ಸಮಯದಲ್ಲಿ ಎಲ್ಲರೂ ತಮ್ಮ ಮನೆಗಳಲ್ಲಿ ದೀಪಗಳನ್ನು ಬೆಳಗಿಸಬೇಕು. ಇಂತಹ ಮನವಿಯನ್ನು ಆರ್‍ಎಸ್‍ಎಸ್ ಮಾಡಿದೆ ಎಂದು ಅಂಬೇಕರ್ ಹೇಳಿದರು.

ಭಗವಾನ್ ರಾಮನು ಗೌರವ, ಪ್ರೀತಿ ಮತ್ತು ಧರ್ಮ ದ ಸಂಕೇತವಾಗಿದೆ ಮತ್ತು ಪಟ್ಟಾಭಿಷೇಕ ಸಮಾರಂಭವನ್ನು ಹಬ್ಬದಂತೆ ಆಚರಿಸಲು ಜನರಿಗೆ ಕರೆ ನೀಡಿದರು.ಇದು ನಮಗೆಲ್ಲರಿಗೂ ಸಂತೋಷದ ಕ್ಷಣವಾಗಿರುತ್ತದೆ. ಇದು ಸಾಮರಸ್ಯದ ಕ್ಷಣವಾಗಿರುತ್ತದೆ ಎಂದು ಅವರು ಹೇಳಿದರು ಮತ್ತು ಮತ್ತು, ದೇವಸ್ಥಾನದಲ್ಲಿ ವಿಗ್ರಹದ ಪ್ರತಿಷ್ಠಾಪನೆಯೊಂದಿಗೆ, ಭಾರತವು ತನ್ನ ಮೆರವಣಿಗೆಯನ್ನು ಮುಂದುವರೆಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಹಾಮಸ್ತಕಾಭಿಷೇಕ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ದೇಶಾದ್ಯಂತ ಸಾವಿರಾರು ಭಕ್ತರನ್ನು ಆಹ್ವಾನಿಸಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-11-2023)

ನಿತ್ಯ ನೀತಿ: ಇತಿಹಾಸ ಹೇಳುತ್ತೆ ಕಳೆದುಹೋದ ದಿನ ಸುಖವಾಗಿತ್ತು ಅಂತ. ವಿಜ್ಞಾನ ಹೇಳುತ್ತೆ ನಾಳೆ ಬರುವ ದಿನ ಸುಖವಾಗಿರುತ್ತದೆ ಅಂತ. ಆದರೆ ಧರ್ಮ ಹೇಳುತ್ತೆ ಸತ್ಯವಾದ ಮನಸ್ಸು ಹಾಗೂ ಸ್ವಚ್ಛವಾದ ಹೃದಯವಿದ್ದರೆ ಪ್ರತಿಕ್ಷಣ ಸುಖವಾಗಿರುತ್ತೆ ಎಂದು.

ಪಂಚಾಂಗ ಶನಿವಾರ 11-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಚಿತ್ತಾ / ಯೋಗ: ಪ್ರೀತಿ / ಕರಣ: ವಿಷ್ಟಿ

ಸೂರ್ಯೋದಯ ; ಬೆ.06.16
ಸೂರ್ಯಾಸ್ತ : 05.51
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಕುಟುಂಬದವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ವೃಷಭ: ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.
ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.

ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.

ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.
ವೃಶ್ಚಿಕ: ಮಾನಸಿಕ ಶಾಂತಿ ಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋಧಿಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.

ಮಕರ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.

ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಮೇಲ್ಮನವಿ ಅರ್ಜಿ ಹೈಕೋರ್ಟ್ ಅಂಗಳಕ್ಕೆ

ನವದೆಹಲಿ,ನ.10- ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್ ಸೂಚಿಸಿದೆ.

ಪ್ರಕರಣದ ಚಾರಣೆಯನ್ನು ನ್ಯಾ. ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.

ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಡೆಸದೆ ಹೈಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿದೆ ಎಂದು ಈ ಹಿಂದೆ ಸಿಬಿಐ ನ್ಯಾಯಾಲಯಕ್ಕೆ ತಿಳಿಸಿತ್ತು. ಸುಳ್ಳಿನ ಆಧಾರದಲ್ಲಿ ಸಂಪೂರ್ಣ ತನಿಖೆಗೆ ತಡೆ ನೀಡಲಾಗಿದೆ ಎಂದು ಸಿಬಿಐ ಪರ ವಾದ ಮಂಡಿಸಿದ ಎಎಸ್‍ಜಿ ಎಸ್.ರಾಜು ನ್ಯಾಯಾಲಯಕ್ಕೆ ತಿಳಿಸಿದ್ದರು. ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, ಡಿ.ಕೆ. ಶಿವಕುಮಾರ್ ಪರ ವಾದ ಮಂಡಿಸಿದ್ದರು. ಈ ಪ್ರಕರಣ ಸಂಬಂಧ ಜೂನ್‍ನಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ತಡೆ ನೀಡಿತ್ತು. ನಂತರ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ತನಿಖೆಗೆ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್‍ನ ಮಧ್ಯಂತರ ಆದೇಶವನ್ನು ತೆರವು ಮಾಡಲು ಅ.17ರಂದು ನ್ಯಾಯಾಲಯ ನಿರಾಕರಿಸಿತ್ತು.
ಏಪ್ರಿಲ್ 2013ರಿಂದ ಏಪ್ರಿಲ್ 2018ರ ನಡುವೆ ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರಿಂದ ಸ್ವಾೀನಕ್ಕೆ ಪಡೆಯಲಾದ ಒಟ್ಟು ಮೌಲ್ಯವು 128 ಕೋಟಿಯಿಂದ 162 ಕೋಟಿಗೆ ಏರಿಕೆಯಾಗಿದೆ.

ಇದು ಸುಮಾರು ಶೇ. 45 ಅಥವಾ ರೂ. 75 ಕೋಟಿಯಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು. ಈಗಲ್ಟನ್ ರೆಸಾರ್ಟ್‍ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

ಒತ್ತಡಕ್ಕೆ ಮಣಿದು ರಾಜಕೀಯ ನಿವೃತ್ತಿ ಘೋಷಿಸಿಲ್ಲ : ಡಿ.ವಿ.ಸದಾನಂದಗೌಡ

ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಅರ್ಜಿ ವಜಾ ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಭಾಗೀಯ ಪೀಠ ತನಿಖೆಗೆ ತಡೆ ನೀಡಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಸಿಬಿಐ ತನಿಖೆ ತಡೆ ಕೋರಿ ಡಿ.ಕೆ ಶಿವಕುಮಾರ್ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಮೊದಲು ತಡೆ ನೀಡಿದ್ದ ಕೋರ್ಟ್ ಇತ್ತಿಚೀಗೆ ತಡೆ ರದ್ದು ಮಾಡಿ ಸಿಬಿಐ ತನಿಖೆಗೆ ಆದೇಶ ನೀಡಿತ್ತು.

ಏನಿದು ಪ್ರಕರಣ?
2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು.

ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.

ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.