Thursday, November 6, 2025
Home Blog Page 1827

ಇನ್ನೋವಾ ಕಾರಿನಿಂದ ಸರಣಿ ಅಪಘಾತ, ಮೂವರ ದುರ್ಮರಣ

ಮುಂಬೈ, ನ.10 (ಪಿಟಿಐ) ಇಲ್ಲಿನ ಬಾಂದ್ರಾ-ವರ್ಲಿ ಸೀ ಲಿಂಕ್‍ನಲ್ಲಿ ವೇಗವಾಗಿ ಬಂದ ಟೊಯೊಟಾ ಇನ್ನೋವಾ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಉತ್ತರ ದಿಕ್ಕಿನ ಲೇನ್‍ನಲ್ಲಿ ಸಮುದ್ರ ಸಂಪರ್ಕದ ಬಾಂದ್ರಾ ತುದಿಯಲ್ಲಿರುವ ಟೋಲ್ ಬೂತ್‍ಗೆ ಸುಮಾರು 100 ಮೀಟರ್ ಮೊದಲು ಇನ್ನೋವಾ ಮೊದಲು ಮರ್ಸಿಡಿಸ್ ಬೆಂಜ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ವಲಯ 9 ರ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಕೃಷ್ಣಕಾಂತ್ ಉಪಾಧ್ಯಾಯ ಹೇಳಿದ್ದಾರೆ.

ಮೊಹಮ್ಮದ್ ಶಮಿಯನ್ನು ಮದುವೆಯಾಗಲು ಷರತ್ತು ವಿಧಿಸಿದ ಬಾಲಿವುಡ್ ನಟಿ

ಇನ್ನೋವಾ ಚಾಲಕ ಸೇರಿದಂತೆ ಗಾಯಗೊಂಡಿರುವ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ. ಇನ್ನೋವಾ ಹೊರತುಪಡಿಸಿ ಇನ್ನೂ ಐದು ವಾಹನಗಳು ಸಮುದ್ರ ಕೊಂಡಿಯಲ್ಲಿ ಅಪಘಾತಕ್ಕೀಡಾಗಿವೆ ಎಂದು ಅವರು ಹೇಳಿದರು.ಅಪಘಾತದ ಸಮಯದಲ್ಲಿ ಚಾಲಕ ಸೇರಿದಂತೆ ಏಳು ಜನರು ಇನ್ನೋವಾದಲ್ಲಿ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಮೇರೆಗೆ ಇನ್ನೋವಾ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-11-2023)

ನಿತ್ಯ ನೀತಿ : ಜಗತ್ತಿನಲ್ಲಿ ಎಲ್ಲರನ್ನೂ ಸಮಾನವಾಗಿ ನೋಡುವುದು ಗಡಿಯಾರ ಮಾತ್ರ. ಬಡವರಿಗೂ ಒಂದೇ… ಶ್ರೀಮಂತರಿಗೂ ಒಂದೇ…

ಪಂಚಾಂಗ ಶುಕ್ರವಾರ 10-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಹಸ್ತ / ಯೋಗ: ವಿಷ್ಕಂಭ / ಕರಣ: ಗರಜೆ

ಸೂರ್ಯೋದಯ : ಬೆ.06.16
ಸೂರ್ಯಾಸ್ತ : 05.51
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಬಂಧುಗಳೊಂದಿಗೆ ವೈಮನಸ್ಸು ಉಂಟಾಗ ದಂತೆ ನೋಡಿಕೊಳ್ಳಿ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.
ವೃಷಭ: ವ್ಯಾಪಾರದಲ್ಲಿ ಎಚ್ಚರಿಕೆಯಿಂದಿರಿ. ಉತ್ತಮ ಫಲಿತಾಂಶಗಳನ್ನು ನೋಡಬಹುದು.
ಮಿಥುನ: ದಾಂಪತ್ಯದಲ್ಲಿ ಸಮಸ್ಯೆ ಉಂಟಾಗ ಬಹುದು. ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಒಳಿತು.

ಕಟಕ: ದೂರ ಪ್ರಯಾಣ ಮಾಡುವಿರಿ. ಸಹೋದರರೊಂದಿಗೆ ವಾದ-ವಿವಾದಕ್ಕಿಳಿಯದಿರಿ.
ಸಿಂಹ: ಕಚೇರಿಯಲ್ಲಿ ಸಮಾಧಾನದಿಂದ ಕಾರ್ಯನಿರ್ವಹಿಸಿ.
ಕನ್ಯಾ: ವೃತ್ತಿ ಜೀವನದಲ್ಲಿ ಏರುಪೇರು ಉಂಟಾಗಿ ಗೊಂದಲ ಮೂಡಬಹುದು.

ತುಲಾ: ಮಾನಸಿಕ ಚಾಂಚಲ್ಯ ಕಾಡಲಿದೆ. ವ್ಯಾಪಾರ ಸ್ಥಳದಲ್ಲಿ ಮೈಮರೆಯದೆ ವ್ಯವಹರಿಸಿ.
ವೃಶ್ಚಿಕ: ಪರಿಶ್ರಮ ಪಟ್ಟರೂ ಉದ್ದೇಶಿತ ಕಾರ್ಯಗಳಲ್ಲಿ ವಿಫಲವಾಗಲಿದೆ. ಪರರ ವಿಷಯದಲ್ಲಿ ಜಾಗ್ರತೆ ಇರಲಿ.
ಧನುಸ್ಸು: ಆಹಾರದ ವಿಷಯದಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ಮಕರ: ವಿನಾಕಾರಣ ಅಧಿಕ ಭಯದಿಂದ ಆತಂಕಕ್ಕೆ ಒಳಗಾಗುವಿರಿ. ಹಣಕಾಸು ವಿಷಯದಲ್ಲಿ ಹುಷಾರಾಗಿರಿ.
ಕುಂಭ: ಕುಟುಂಬದಲ್ಲಿ ನೀವು ನಿರೀಕ್ಷಿಸರದೆ ಇರುವ ಘಟನೆಗಳು ಅನಿರೀಕ್ಷಿತವಾಗಿ ನಡೆಯಲಿವೆ.
ಮೀನ: ಮುಖಭಂಗವಾಗುವಂಥ ಮಾತುಗಳ ಬಳಕೆ ಮಾಡದಿರುವುದು ಒಳಿತು. ಓದಿನಲ್ಲಿ ಏಕಾಗ್ರತೆ ವಹಿಸಿ.

ಕಲಾ ಲೋಕದ ರಾಯಭಾರಿಗೆ 68ನೇ ಹುಟ್ಟುಹಬ್ಬ

ಶಂಕರ್ ನಾಗ್ ಎಂದಾಕ್ಷಣ ಕನ್ನಡಿಗರಲ್ಲಿ ಒಂದು ರೋಮಾಂಚನ. ಕಲಾ ಲೋಕದ ರಾಯಭಾರಿ, ಕನ್ನಡ ಸಿನಿ ಜಗತ್ತಿನಲ್ಲಿ ಅಜರಾಮರವಾಗಿ ಉಳಿಯುವ ದೈತ್ಯ ಪ್ರತಿಭೆ. ಅವರು ನಮ್ಮೊಂದಿಗೆ ಇದ್ದಿದ್ದರೆ ಇಂದು 68ನೇ ಹುಟ್ಟುಹಬ್ಬದ ಆಚರಣೆ ಮಾಡಿಕೊಳ್ಳುತ್ತಿದ್ದರು. ಆದರೆ ಆ ಅದೃಷ್ಟ ಇಲ್ಲ ಎನ್ನುವುದೇ ನಮ್ಮೆಲ್ಲರ ದುರದೃಷ್ಟಕ ಸಂಗತಿ. ಹೊನ್ನಾವರ ತಾಲ್ಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಜನಿಸಿದರೂ ಕೂಡ ಕಡಿಮೆ ಅವಧಿಯಲ್ಲಿ ಇವರು ಮಾಡಿದ ಸಾಧನೆ ಅಪಾರ.

ಕಲೆಯ ಬಗ್ಗೆ ಅಪಾರ ಪ್ರೇಮ:
ಓದು ಮುಗಿದ ನಂತರ ಕಲೆಯ ಮೇಲೆ ಅಪಾರ ಅಭಿಮಾನ ಮತ್ತು ಪ್ರೀತಿ ಇದ್ದ ಕಾರಣ ಮುಂಬೈನ ಮರಾಠಿ ರಂಗಮಂದಿರದ ಕಡೆಗೆ ಪಯಣ ಬೆಳೆಸಿದ ಇವರು, ಮರಾಠಿ ರಂಗಭೂಮಿಯನ್ನು ಕರಗತ ಮಾಡಿಕೊಂಡರು. ಅಷ್ಟೇ ಅಲ್ಲದೆ ಮರಾಠಿ ಚಿತ್ರಮಂದಿರಕ್ಕೂ ಪ್ರವೇಶ ಮಾಡಿ ಚಿತ್ರವನ್ನು ಮಾಡಿ ಅದಕ್ಕೆ ರಾಷ್ಟ್ರೀಯ ಪ್ರಶಸ್ತಿ ಪಡೆದರು. ಅಷ್ಟರಮಟ್ಟಿಗೆ ತಾನು ಹಿಡಿದ ಕೆಲಸವನ್ನು ಶ್ರದ್ಧೆಯಿಂದ ಮಾಡಿ ಮುಗಿಸುವ ಚಾಣಾಕ್ಷ. ಅಲ್ಲಿಂದ ಕಲಾ ಬದುಕಿನಲ್ಲಿ ಮಾಡಿದ್ದೆಲ್ಲವೂ ಇತಿಹಾಸವೇ.

ನಿರ್ದೇಶಕರಾಗಿಯೂ ಯಶಸ್ಸು ಕಂಡ ಶಂಕರನಾಗ್:
ಇವರ ಪ್ರತಿಭೆಯನ್ನು ಅರಿತ ಗಿರೀಶ್ ಕಾರ್ನಾಡರ ಒಂದಾನೊಂದು ಕಾಲದಲ್ಲಿ ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸಿದರು. ಇವರ ಅದೃಷ್ಟ ಮತ್ತು ಪ್ರತಿಭೆ ಎರಡೂ ಇವರನ್ನು ಕೈ ಹಿಡಿಯುತ್ತದೆ. ಏಕೆಂದರೆ ಇವರು ಮಾಡಿದ ಮೊದಲ ಚಿತ್ರಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಪಡೆಯುತ್ತಾರೆ. ನಂತರ 12 ವರ್ಷಗಳ ಕಾಲ 92 ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗವನ್ನು ಆಳುತ್ತಾರೆ. ತಮ್ಮ ಸಹೋದರ ಅನಂತ ನಾಗ್ ಅವರೊಡನೆ ಮಿಂಚಿನ ಓಟ, ಜನ್ಮ ಜನ್ಮದ ಅನುಬಂಧ ಮತ್ತು ಗೀತಾ ಚಿತ್ರಗಳನ್ನು ನಿರ್ಮಿಸಿ ನಿರ್ಮಾಣದಲ್ಲೂ ಯಶಸ್ಸನ್ನು ಕಾಣುತ್ತಾರೆ.

ಮೆಟ್ರೋ ಕನಸು ಕಂಡಿದ್ದರು:
ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್.ಕೆ. ನಾರಾಯಣ್ ಅವರ ಮಾಲ್ಗುಡಿ ಡೇಸ್ ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿ ಭಾರತದ ಬೆಳ್ಳಿ ಪರದೆಯ ಮೇಲೆ ಸುವರ್ಣ ಅಕ್ಷರಗಳ ಮೂಲಕ ಇತಿಹಾಸ ಕೆತ್ತಿದರು.

ಡಾ.ರಾಜ್‍ಕುಮಾರ್ ಅವರ ಒಂದು ಮುತ್ತಿನ ಕಥೆ ಚಿತ್ರವನ್ನು ನಿರ್ದೇಶನ ಮಾಡಿದ ಶಂಕರ್ ನಾಗ್, ನೀರಿನೊಳಗೆ ಕ್ಯಾಮೆರಾಗಳನ್ನು ಇಟ್ಟು ಚಿತ್ರೀಕರಿಸುವ ಕಲೆಯನ್ನು ಅಂದೇ ಅವರು ಕರಗತ ಮಾಡಿಕೊಂಡಿದ್ದರು. ಅಷ್ಟರಮಟ್ಟಿಗೆ ದೂರಾಲೋಚನೆ ಅವರದ್ದು. 40 ವರ್ಷಗಳ ಹಿಂದೆಯೇ ಮೆಟ್ರೋ ಕನಸನ್ನು ಕಂಡಿದ್ದ ಇವರು ಸಮಾಜ ಸೇವೆಗೆ ಯಾವಾಗಲೂ ತಮ್ಮನ್ನ ತೊಡಗಿಸಿಕೊಳ್ಳುತ್ತಿದ್ದರು.

ದೀಪಾವಳಿಯಲ್ಲಿ ಸ್ಥಳೀಯ ಉತ್ಪನ್ನ ಖರೀದಿಸಿ ಸೆಲ್ಫಿ ಕಳುಹಿಸಿ : ಮೋದಿ

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್. ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟಪಟ್ಟು ಮದುವೆಯಾದರು. ಮಗಳು ಕಾವ್ಯ. ಈ ದಂಪತಿ ಸಂಕೇತ್ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ಅನೇಕ ನಾಟಕಗಳನ್ನು ಬರೆದು ನಿರ್ದೇಶಿಸಿ ಕಲಾವಿದರನ್ನು ಬೆಳೆಸಿದರು. ಅಷ್ಟೇ ಅಲ್ಲದೆ ನಾಟಕಗಳಿಗಾಗಿ ಒಂದು ರಂಗಮಂದಿರ ನಿರ್ಮಿಸಬೇಕೆಂಬ ಕನಸು ಅವರಲ್ಲಿ ಇತ್ತು. ಅದು ಈಡೇರುವ ಮುನ್ನವೇ ಇಹಲೋಕ ತ್ಯಜಿಸಿದರು. ನಂತರ ಅವರ ಕನಸನ್ನು ನನಸು ಮಾಡಿದ್ದು ಅವರ ಪತ್ನಿ ಅರುಂಧತಿ ನಾಗ್. ಇವರು ಕಟ್ಟಿ ಬೆಳೆಸುತ್ತಿರುವ ರಂಗಶಂಕರ ಇಂದು ಬೃಹದಾಕಾರವಾಗಿ ಬೆಳೆದು ಸಾವಿರಾರು ಕಲಾವಿದರಿಗೆ ಅನ್ನ ನೀಡುತ್ತಿದೆ
ಮತ್ತು ಕನ್ನಡ ರಂಗಭೂಮಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಕಲೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದೆ.

ಮೊಹಮ್ಮದ್ ಶಮಿಯನ್ನು ಮದುವೆಯಾಗಲು ಷರತ್ತು ವಿಧಿಸಿದ ಬಾಲಿವುಡ್ ನಟಿ

ಬೆಂಗಳೂರು, ನ. 9- 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 16 ವಿಕೆಟ್ ಗಳೊಂದಿಗೆ ಟೀಮ್ ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆದಿರುವ ಮೊಹಮ್ಮದ್ ಶಮಿಯನ್ನು 2ನೇ ವಿವಾಹವಾಗಲು ಬಾಲಿವುಡ್ ನಟಿ ಪಾಯಲ್ ಘೋಶ್ ಷರತ್ತು ಬದ್ಧ ಸಮ್ಮತಿ ಸೂಚಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಶಮಿ ಅವರ ಬೌಲಿಂಗ್ ಪ್ರದರ್ಶನಕ್ಕೆ ಕ್ಲೀನ್ ಬೌಲ್ಡ್ ಆಗಿರುವ ಪಯಾಲ್ ಘೋಶ್, ಶಮಿ ನಿಮ್ಮ ಇಂಗ್ಲಿಷ್ ಭಾಷೆಯನ್ನು ಸುಧಾರಿಸಿಕೊಳ್ಳಿ ನಾನು ನಿಮ್ಮನ್ನು ಮದುವೆಯಾಗಲು ರೆಡಿ ಎಂದು ಪಾಯಲ್ ಘೋಶ್ ತಮ್ಮ ಅಧಿಕೃತ ಟ್ವಿಟ್ಟರ್ ಗೋಡೆ ಮೇಲೆ ಬರೆದುಕೊಂಡಿದ್ದಾರೆ.

ರೂಪದರ್ಶಿಯಾಗಿದ್ದ ಪಾಯಲ್ ಘೋಶ್ ಅವರು ತೆಲುಗಿನ ಪ್ರಯಾಣಂ ಸಿನಿಮಾ ಮೂಲಕ ತಮ್ಮ ಸಿನಿಮಾ ಜರ್ನಿ ಆರಂಭಿಸಿ, ನಂತರ ವರ್ಷಧಾರೆ, ಊಸರವಳ್ಳಿ, ಮಿಸ್ಟರ್ ರಾಸ್ಕಲ್, ಪಟೇಲ್ ಕಿ ಪಂಜಾಬ್ ಶಾದಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವುದಲ್ಲದೆ, ರಾಮದಾಸ್ ಅತ್ವಾಲೆ ಅವರ ರಾಜಕೀಯ ಪಕ್ಷದ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿ 2020ರಲ್ಲಿ ಆಯ್ಕೆಯಾಗಿದ್ದರು.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಶಮಿ ಅವರು ಹಿಂದೆ ರೂಪದರ್ಶಿ ಹಸೀನಾ ಜಹಾನ್ ಅವರು ವಿವಾಹವಾಗಿದ್ದು ಇವರಿಗೆ ಒಬ್ಬ ಹೆಣ್ಣು ಮಗುವಿದ್ದು, ಇತ್ತೀಚೆಗೆ ವಿಚ್ಛೇದನಗೊಂಡಿದ್ದು ತಿಂಗಳಿಗೆ 12 ಲಕ್ಷ ರೂ. ಜೀವನಾಂಶ ಭರಿಸುವಂತೆ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪನ್ನು ಪ್ರಶ್ನಿಸಿ ಹಸೀನ್ ಇದೀಗ ಉನ್ನತ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇನ್ನು ಕೋರ್ಟ್ ಮಗುವನ್ನು ತಾಯಿಯ ಮಡಿಲಿಗೆ ಒಪ್ಪಿಸಿದೆ. ಮಗು ಆರೈಕೆಗೆ ಮಾಸಿಕ 80 ಸಾವಿರ ರೂ. ಮತ್ತು ಹಸೀನ್ ಅವರಿಗೆ ಮಾಸಿಕ 40 ಸಾವಿರ ರೂ. ಜೀವನಾಂಶ ನೀಡಬೇಕು ಎಂದು ಕೋರ್ಟ್ ಆದೇಶಿಸಿತ್ತು.

ಮೇಕೆದಾಟು ಯೋಜನೆಯನ್ನು ಆರಂಭಿಸುತ್ತೇವೆ : ಡಿಕೆಶಿ

ಬೆಂಗಳೂರು, ನ.9- ಮೇಕೆದಾಟು ಯೋಜನೆಯನ್ನು ನಮ್ಮ ಸರ್ಕಾರ ಆರಂಭಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ನಾವು ಶುರು ಮಾಡುತ್ತೇವೆ.

ವಿಚಾರಣೆಗೆ ಸಮುಯ ನಿಗದಿ ಮಾಡುವುದಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ತಿಳಿಸಿದೆ. 2018ರ ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 24 ಟಿಎಂಸಿಯನ್ನು ನಿಗದಿ ಮಾಡಿತ್ತು. ಅದನ್ನು ಬಳಸಿಕೊಳ್ಳಲು ನಾವು ಸರ್ಕಾರಿ ಆದೇಶ ಹೊರಡಿಸಿದ್ದೇವೆ. ಮೇಕೆದಾಟು ಯೋಜನೆ ಕುರಿತು ವಿಚಾರಣೆ ನಡೆಯುವ ವೇಳೆ ರಾಜ್ಯಕ್ಕೆ ಎಷ್ಟು ನೀರಿನ ಅಗತ್ಯ ಇದೆ ಎಂದು ಸಮರ್ಥ ವಾದ ಮಂಡಿಸಬೇಕಿದೆ. ಅದಕ್ಕೆ ತಯಾರಿಯಾಗಿ 24 ನೀರು ಬಳಕೆಯ ಆದೇಶ ಹೊರಡಿಸಲಾಗಿದೆ ಎಂದರು.

ಪ್ರತಿನಿತ್ಯ ಬೆಳಗ್ಗೆ 10ರಿಂದ 10.30ರವರೆಗೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಭೇಟಿಗೆ ಸಮಯ ನೀಡುತ್ತೇನೆ. ತಮ್ಮ ಕ್ಷೇತ್ರದಲ್ಲಿನ ಕೆಲಸ ಹಾಗೂ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವರಿಗೆ ಅವಕಾಶ ನೀಡಲಾಗುವುದು. ಹೊರಗಡೆ ಹೋಗುವ ದಿನ ಹೊರತಾಗಿ ಬೆಂಗಳೂರಿನಲ್ಲಿರುವ ಎಲ್ಲಾ ದಿನ ಸಮಯಾವಕಾಶ ನೀಡಲಾಗುವುದು, ಶಾಸಕರಿಗೆ ಮೊದಲ ಆದ್ಯತೆ ನೀಡಲು ನಿರ್ಧಸಲಾಗಿದೆ ಎಂದರು.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಕಾಂಗ್ರೆಸ್ ಪಕ್ಷದಲ್ಲಿ ಯಾರೇಲ್ಲಾ 3ಕ್ಕಿಂತ ಹೆಚ್ಚು ವರ್ಷಗಳಿಂದ ಪದಾಧಿಕಾರಿಗಳಾಗಿದ್ದಾರೆ ಅವರ ಸ್ಥಾನಕ್ಕೆ ಬೇರೆಯವರಿಗೆ ಅವಕಾಶ ನೀಡಬೇಕು ಎಂಬ ಚರ್ಚೆ ಆಗಿದೆ. ಇನ್ನು ಲೋಕಸಭೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಶೇ.75ರಷ್ಟು ಮಂತ್ರಿಗಳು ತಮ್ಮ ಜಿಲ್ಲೆಗಳಿಗೆ ಹೋಗಿ ಸಭೆ ಮಾಡಿದ್ದಾರೆ, ಉಳಿದವರು ಸಭೆ ಮಾಡಿ ಆದಷ್ಟು ಬೇಗ ತಮ್ಮ ವರದಿ ನೀಡಲಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಗಳ ಪರಿಶೀಲನೆ ನಡೆಸುತ್ತಿರುವುದು ಬಹಳ ಸಂತೋಷದ ವಿಷಯ. ಅವರು ಅಲ್ಲಿಗೆ ಹೋಗಲಿ. ಅವರಿಗೆ ಬೇಕಾದರೆ ಬಸವರಾಜ ಬೊಮ್ಮಾಯಿ ಹಾಗೂ ಲೋಕಾಯುಕ್ತ ವರದಿಗಳನ್ನು ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದರು.

ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ ಸಾಧ್ಯತೆ

ಬೆಂಗಳೂರು,ನ.9- ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ನೇಮಕಗೊಳ್ಳುವ ಸಾಧ್ಯತೆ ಇದೆ. ಕಳೆದ ವರ್ಷ ಮೇ 31ರಿಂದಲೂ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ವಂದಿತಾ ಶರ್ಮ ಅವರು ಈ ತಿಂಗಳ ಅಂತ್ಯಕ್ಕೆ ನಿವೃತ್ತರಾಗಲಿದ್ದಾರೆ.

ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹರಿಯಾಣ ಮೂಲದ ರಜನೀಶ್ ಗೋಯಲ್ ನೇಮಕವಾಗುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ವರ್ಷದ ಜುಲೈವರೆಗೂ ಸೇವಾವ ಹೊಂದಿರುವ ರಜನೀಶ್ ಗೋಯಲ್ ಪ್ರಸ್ತುತ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಸಾರ್ವಜನಿಕ ಆಡಳಿತದಲ್ಲಿ ಡಾಕ್ಟರೇಟ್ ಪಡೆದಿರುವ ಅವರು 1986ರ ಆ.25ರಂದು ಐಎಎಸ್ ಸೇವೆಗೆ ಸೇರ್ಪಡೆಯಾದರು. ಇವರ ಪತ್ನಿ ಶಾಲಿನಿ ರಜನೀಶ್ ಕೂಡ ಪ್ರಸ್ತುತ ಐಎಎಸ್ ಅಧಿಕಾರಿಯಾಗಿದ್ದಾರೆ.
ಮುಂದಿನ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿಗಳಾದ ವಿ.ಮಂಜುಳ, ಅಜಯ್ ಸೇಠ್, ಡಾ.ಇ.ವಿ.ರಮಣರೆಡ್ಡಿ, ಅನಿಲ್‍ಕುಮಾರ್ ಝಾ ಜೇಷ್ಠತಾ ಪಟ್ಟಿಯಲ್ಲಿದ್ದಾರೆ. ಆದರೆ ಸರ್ಕಾರ ರಜನೀಶ್ ಗೋಯಲ್ ಅವರ ಕುರಿತು ಒಲವು ಹೊಂದಿದೆ ಎಂದು ಹೇಳಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಕಕ್ಕೆ ಸಂಬಂಧಪಟ್ಟಂತೆ ನಿರ್ಧಾರ ಕೈಗೊಳ್ಳಲಿರುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ನೀಡುವ ಸಾಧ್ಯತೆಗಳಿರುವುದಾಗಿ ಮೂಲಗಳು ತಿಳಿಸಿವೆ.

ಶುಭಮನ್ ಗಿಲ್‍ಗೆ ಲವ್ ಇಮೋಜಿ ಕಳುಹಿಸಿದ ಸಾರಾ ತೆಂಡೂಲ್ಕರ್..!

ಬೆಂಗಳೂರು, ನ.9- ಐಸಿಸಿ ಪ್ರಕಟಿಸಿದ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಯುವ ಆಟಗಾರ ನಂಬರ್ 1 ಬ್ಯಾಟ್ಸ್‍ಮನ್ ಆಗಿ ಹೊರ ಹೊಮ್ಮಿದ ಸುದ್ದಿಗಿಂತ , ಸಾರಾ ತೆಂಡೂಲ್ಕರ್ ಅವರು ಗಿಲ್‍ಗೆ ಶುಭಾಶಯ ಕೋರಿರುವುದು ಭಾರೀ ಸದ್ದು ಮಾಡುತ್ತಿದೆ.

ಪಾಕಿಸ್ತಾನದ ನಾಯಕ ಬಾಬರ್ ಆಝಮ್‍ರನ್ನು ಹಿಂದಿಕ್ಕಿ ಒಡಿಐನ ನಂಬರ್ 1 ಆಗಿ ಗಿಲ್ ಹೊರಹೊಮ್ಮುತ್ತಿದ್ದಂತೆ ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ಅವರ ನಕಲಿ ಪರೋಡಿ ಎಕ್ಸ್ (ಟ್ವಿಟ್ಟರ್) ಖಾತೆಯು ಶುಭಮನ್ ಗಿಲ್ ಅವರ ಚಿತ್ರದೊಂದಿಗೆ ಟ್ವೀಟ್ ಮಾಡಿದ್ದು, ಇದರಲ್ಲಿ ಲವ್ ಮತ್ತು ಕಿಸ್ ಇಮೋಜಿಗಳನ್ನು ಬಳಸಲಾಗಿದೆ.

ಇದು ಸಾರಾ ತೆಂಡೂಲ್ಕರ್ ಅವರ ಅಧಿಕೃತ ಟ್ವಿಟ್ಟರ್ ಖಾತೆಯಲ್ಲ ಎಂದು ಹೇಳುತ್ತಿದ್ದರೂ, ಸಾರಾ ತೆಂಡೂಲ್ಕರ್ ಪರೋಡಿ ಖಾತೆಯು ಬ್ಲೂ ಟಿಕ್‍ಗೆ ಮಾನ್ಯತೆ ಪಡೆದಿದೆ. ಶುಭಮನ್ ಗಿಲ್ ಹಾಗೂ ಸಾರಾತೆಂಡೂಲ್ಕರ್ ಅವರ ಮಧ್ಯೆ ಖುಲ್ಲಾ ಖುಲ್ಲಾ ಪ್ರೇಮವಿದ್ದು ಇಬ್ಬರು ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ವದಂತಿಗಳು ಹರಡಿರುವಾಗಲೇ, ಸಾರಾ ತೆಂಡೂಲ್ಕರ್ ಅವರ ಪರೋಡಿ ಖಾತೆಯು ಹಾಕಿರುವ ಲವ್ ಇಮೋಜಿಯು ಇಬ್ಬರ ನಡುವಿನ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕಗಳನ್ನು ನೀಡಲಿದೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಅಂದಹಾಗೆ ಟೀಮ್ ಇಂಡಿಯಾ ಪರ ಐಸಿಸಿ ಒಡಿಐ ರ್ಯಾಂಕಿಂಗ್‍ನಲ್ಲಿ ನಂಬರ್ 1 ಬ್ಯಾಟ್ಸ್‍ಮನ್ ಪಟ್ಟವನ್ನು ಈ ಹಿಂದೆ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಅವರು ಕೂಡ ಸಾಕಷ್ಟು ಬಾರಿ ಅಲಂಕರಿಸಿದ್ದರು. ಈಗ ಪ್ರಿನ್ಸ್ ಗಿಲ್ ಅವರು ವಿಶ್ವ ಶ್ರೇಷ್ಠ ಬ್ಯಾಟರ್ ಆಗಿ ಅಪತ್ಯ ಸ್ಥಾಪಿಸಿದ್ದಾರೆ.

ಡಿಸಿಎಂ ಡಿಕೆಶಿ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಶಾಸಕರ ಸಭೆ

ಬೆಂಗಳೂರು,ನ.9- ಆಡಳಿತ ಪಕ್ಷದ ಶಾಸಕರಲ್ಲಿ ಇರುವ ಅಸಮಧಾನವನ್ನು ಹೋಗಲಾಡಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ತಮ್ಮ ನಿವಾಸದಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಶಾಸಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶಾಸಕರಿಗೆ ಲಭ್ಯವಾಗುತ್ತಿಲ್ಲ ಎಂಬ ಆಕ್ಷೇಪಗಳು ಇತ್ತೀಚೆಗೆ ಕೇಳಿ ಬರಲಾರಂಭಿಸಿದ್ದವು. ಜಿಲ್ಲೆಗಳ ಮಟ್ಟದಲ್ಲಿ ಸಚಿವರ ಜೊತೆಗೆ ಕೆಲ ಶಾಸಕರು ಅಸಮಧಾನ ಹೊರ ಹಾಕಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಶಾಸಕರು, ಸಚಿವರ ಭೇಟಿಗಾಗಿಯೇ ಪ್ರತ್ಯೇಕ ಕೊಠಡಿ ನಿರ್ಮಿಸಿದ್ದಾರೆ. ಡಿ.ಕೆ.ಶಿವಕುಮಾರ್ ತಮ್ಮ ಮನೆಯಲ್ಲಿ ಬೆಳಗ್ಗೆ ಒಂದು ಗಂಟೆ ಕಾಲ ಶಾಸಕರಿಗಾಗಿ ಸಮಯ ಮೀಸಲಿಟ್ಟಿದ್ದಾರೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಇಂದು ಬೆಳಗ್ಗೆ ಸದಾಶಿವನಗರದ ನಿವಾಸದಲ್ಲಿ ಸಚಿವರಾದ ಶಿವಾನಂದ್ ಪಾಟೀಲ್, ಸಂತೋಷ್ ಲಾಡ್, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್, ಶಾಸಕರಾದ ಜಿ ಎಸ್ ಪಾಟೀಲ್, ತರೀಕೆರೆ ಶ್ರೀನಿವಾಸ್, ಶಾಂತನಗೌಡ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಮಾನಪ್ಪ ವಜ್ಜಲ್, ಡಾ ರಂಗನಾಥ್, ವಿಧಾನ ಪರಿಷತ್ ಸದಸ್ಯ ಸುನಿಲ್ ಪಾಟೀಲ್, ಮಾಜಿ ಸಚಿವರಾದ ಬಾಬುರಾವ್ ಚಿಂಚನಸೂರ್, ಶಿವರಾಮ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಮತ್ತಿತರರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ವರ್ಗಾವಣೆ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತಂತೆ ಶಾಸಕರ ಅಹವಾಲುಗಳನ್ನು ಡಿ.ಕೆ.ಶಿವಕುಮಾರ್ ಅಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಲೋಕಸಭೆ ಚುನಾವಣೆಗ ತಯಾರಿಗಳನ್ನು ನಡೆಸುವಂತೆಯೂ ಶಾಸಕರಿಗೆ ಸಲಹೆ ನೀಡಿದ್ದಾರೆ.

ತಾ.ಪಂ,ಜಿ.ಪಂ ಮೀಸಲಾತಿ ನಿಗದಿಗೆ ಹೈಕೋರ್ಟ್ ಗಡುವು

ಬೆಂಗಳೂರು,ನ.9- ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾ ಯಿತಿಗಳ ಚುನಾವಣೆಗಾಗಿ ಕ್ಷೇತ್ರಗಳ ಪುನರ್ ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ನಾಲ್ಕು ವಾರಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆಯಾಗಿತ್ತು. ಆದರೆ, ಕೆಲವು ಆಕ್ಷೇಪಣೆಗಳು ಬಂದಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಮರುವಿಂಗಡಣೆಯನ್ನು ಮರು ನಿಗದಿ (ರೀಡೂ) ಮಾಡಬೇಕಾಗಿದೆ. ಆನಂತರ ಕ್ಷೇತ್ರವಾರು ಮೀಸಲಾತಿ ನಿಗದಿಪಡಿಸಬೇಕಾಗುತ್ತದೆ. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಮಯ ಅವಕಾಶ ಬೇಕೆಂದು ಕೋರಿದರು.

ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಯ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದೆ. ಇದನ್ನು ಪೂರ್ಣಗೊಳಿಸಲು ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಅಡ್ವೇಕೇಟ್ ಜನರಲ್ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಕೊನೆಯ ಅವಕಾಶವನ್ನು ನೀಡಿತು.

ಇದನ್ನು ಒಪ್ಪದ ನ್ಯಾಯಪೀಠ ಸಂವಿಧಾನ ನಿಯಮದಂತೆ ಚುನಾವಣೆ ನಡೆಸಬೇಕು. ಈಗಾಗಲೇ ಹತ್ತು ವಾರಗಳ ಕಾಲಾವಕಾಶ ನೀಡಲಾಗಿದೆ. ಪುನಃ ಸಮಯವನ್ನು ವಿಸ್ತರಣೆ ಮಾಡಲು ಬರುವುದಿಲ್ಲ. ನಾಲ್ಕು ವಾರಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿಪಡಿಸಿ ಅಂತಿಮಗೊಳಿಸಬೇಕೆಂದು ನಿರ್ದೇಶನ ನೀಡಿ ಮುಂದಿನ ಅರ್ಜಿ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ಜಿ.ಪಂ, ತಾ.ಪಂ.ಗಳಿಗೆ 2021ರ ಏಪ್ರಿಲ್ -ಮೇ ತಿಂಗಳಲ್ಲಿ ಅವ ಪೂರ್ಣಗೊಂಡಿತ್ತು. ಮೊದಲು ಕೊರೊನಾ ಕಾರಣಕ್ಕೆ ಚುನಾವಣೆ ಆಗಿರಲಿಲ್ಲ. ನಂತರ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತು. ಈ ಮಧ್ಯೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ರಾಜ್ಯ ಸರ್ಕಾರ ಹೊಸದಾಗಿ ಸೀಮಾ ನಿರ್ಣಯ ಆಯೋಗ ರಚಿಸಿತು. ಈ ಆಯೋಗವು ಎರಡು ವರ್ಷ ಪ್ರಹಸನ ನಡೆಸಿ ಕೊನೆಗೂ ಈ ವರ್ಷ ಮಾರ್ಚ್‍ನಲ್ಲಿ ಕ್ಷೇತ್ರ ಪುನರ್‍ವಿಂಗಡಣೆ ಅಧಿಸೂಚನೆ ಹೊರಡಿಸಿತು. ಅಷ್ಟರಲ್ಲೇ ವಿಧಾನಸಭೆ ಚುನಾವಣೆ ಘೋಷಣೆ ಆಯಿತು.

ಹಾಗಾಗಿ ಜಿಪಂ, ತಾಪಂ ಚುನಾವಣೆ ನನೆಗುದಿಗೆ ಬಿತ್ತು. ಈ ವಿಚಾರದಲ್ಲಿ ಸರ್ಕಾರ ನ್ಯಾಯಾಲಯಕ್ಕೆ ಅನೇಕ ಸಬೂಬುಗಳನ್ನು ಹೇಳುತ್ತಲೇ ಬಂದಿತ್ತು. ಇದಕ್ಕಾಗಿ ಹೈಕೋರ್ಟ್ ಸರ್ಕಾರಕ್ಕೆ ಅನೇಕ ಬಾರಿ ಚಾಟಿ ಬೀಸಿದೆ, ಛೀಮಾರಿ ಹಾಕಿದೆ. 5 ಲಕ್ಷ ರೂ. ದಂಡ ಸಹ ಹಾಕಿತ್ತು.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಪ್ರಕರಣ ಹೈಕೋರ್ಟ್‍ನಲ್ಲಿ 2023ರ ಮೇ 29ಕ್ಕೆ ವಿಚಾರಣೆಗೆ ಬಂದಿದ್ದಾಗ ಈಗಷ್ಟೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಚಿವರಿಗೆ ಖಾತೆಗಳ ಹಂಚಿಕೆಯಾಗಿದ್ದು, ಜಿಪಂ, ತಾಪಂ ಚುನಾವಣೆಗೆ ಸಂಬಂಧಿಸಿದ ಇಲಾಖೆಯ ಸಚಿವರು ಇನ್ನಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ. ಜಿ.ಪಂ., ತಾ.ಪಂ. ಚುನಾವಣೆ, ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶದಲ್ಲಿನ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ಅದನ್ನು ಪಾಲಿಸಲು ಸ್ವಲ್ಪ ಸಮಯ ಬೇಕು. ಅದಕ್ಕಾಗಿ ನಾಲ್ಕು ವಾರ ಕಾಲಾವಕಾಶ ನೀಡಬೇಕೆಂದು ಸರ್ಕಾರ ಹೈಕೋರ್ಟ್‍ಗೆ ಮನವಿ ಮಾಡಿತ್ತು.

ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ನಿಗದಿತ ಸಮಯದಲ್ಲಿ ಚುನಾವಣೆ ನಡೆಸಲು ಅನುವು ಮಾಡಿಕೊಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆಗೆ ಸೀಮಾ ನಿರ್ಣಯ ಆಯೋಗ ರಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಆಯೋಗ ಈ ಪಿಐಎಲ್ ಸಲ್ಲಿಸಿದೆ.

ಮುಗಿಯದ `ಕೈ’ ಗೊಂದಲ : ಜಾರಕಿಹೊಳಿ ಸಮಾಧಾನಕ್ಕೆ ತೆರೆಮರೆ ಕಸರತ್ತು

ಬೆಂಗಳೂರು,ನ.9- ಸರ್ಕಾರದಲ್ಲಿ ಎಲ್ಲವೂ ಸುಗಮವಾಗಿದೆ ಎಂದು ಹೇಳುತ್ತಲೇ ಒಬ್ಬರಾದ ನಂತರ ಒಬ್ಬರಂತೆ ಬೆಳಗಾವಿಯ ಸಾಹುಕಾರರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಿನ್ನೆ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ.

ಒಂದೆಡೆ ಆಪರೇಷನ್ ಕಮಲ ಚಾಲ್ತಿಯಲ್ಲಿದೆ. ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಸಮಸ್ಯೆಗಳಿರುತ್ತವೆ, ಬಗೆಹರಿಯುತ್ತವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳುತ್ತಾರೆ. ಮತ್ತೊಂದೆಡೆ ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರಿಸ್ಥಿತಿಯನ್ನು ಸರಿದೂಗಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಎರಡು ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏಕಾಏಕಿ ಸತೀಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದರು. ಎಲ್ಲವೂ ಸರಿ ಇದೆ ಎಂದು ಹೇಳುತ್ತಲೇ ತೆರೆಮರೆಯಲ್ಲಿ ಸಾಕಷ್ಟು ಗೊಂದಲಗಳನ್ನು ಕಾಂಗ್ರೆಸ್ ತೋರಿಸಿಕೊಳ್ಳುತ್ತಿದೆ. ಸತೀಶ್ ಜಾರಕಿಹೊಳಿಯವರು ತಮ್ಮ ಕುಟುಂಬದ ಸದಸ್ಯರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ತಮ್ಮ ಪುತ್ರನಿಗೆ ಚುನಾವಣೆಯಲ್ಲಿ ಸ್ರ್ಪಸಲು ಅವಕಾಶ ನೀಡಬೇಕೆಂದು ಪ್ರಸ್ತಾವನೆ ಮುಂದಿಡುವ ಮೂಲಕ ಪೈಪೋಟಿಗಿಳಿದಿದ್ದಾರೆ ಎಂದು ಹೇಳಲಾಗಿದೆ.

ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್‍ : ಗಂಗೂಲಿ

ಜಾರಕಿಹೊಳಿ ಕುಟುಂಬದ ಜೊತೆ ಲಕ್ಷ್ಮಿಹೆಬ್ಬಾಳ್ಕರ್ ಪೈಪೋಟಿ ನಡೆಸುತ್ತಿರುವುದು ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ಏರಿಳಿತಗಳಿಗೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ನಡೆಸುತ್ತಿರುವುದು ಕೂಡ ಬೆಂಕಿಗೆ ತುಪ್ಪ ಸುರಿದಂತಾಗಿವೆ ಎಂಬ ವ್ಯಾಖ್ಯಾನಗಳಿವೆ.

ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.