Home Blog Page 1831

ನಮ್ಮ ಗ್ಯಾರಂಟಿಗಳು ಪ್ರಧಾನಿಯ ನಿದ್ದೆಗೆಡಿಸಿದೆ : ಡಿಕೆಶಿ

ಬೆಂಗಳೂರು,ನ.8- ಲೋಕಸಭೆ ಚುನಾವಣೆಗೂ ಮುನ್ನಾ ರಾಜ್ಯ ಸರ್ಕಾರದಲ್ಲಿ ಗೊಂದಲ ಮೂಡಿಸಬೇಕು ಎಂದು ಬಿಜೆಪಿಯ ಕೆಲಸವಿಲ್ಲದ ನಾಯಕರು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಮ್ಮ ಒಬ್ಬನೆ ಒಬ್ಬ ಶಾಸಕನನ್ನು ಕರೆದುಕೊಳ್ಳಲು ಅವರಿಗೆ ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮಗೆ ಬಹಳಷ್ಟು ಮಾಹಿತಿಗಳಿವೆ. ಸದ್ಯಕ್ಕೆ ನಾವು ಏನನ್ನು ಬಹಿರಂಗ ಪಡಿಸುವುದಿಲ್ಲ ಎಂದರು.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಪಡ್ನಾವೀಸ್ ನಡೆಸಿರುವ ಸಭೆಗೆ ರಾಜ್ಯದ ಕಾಂಗ್ರೆಸ್ ಶಾಸಕರು ಹೋಗಿಲ್ಲ. ಆದರೆ ಬಿಜೆಪಿಯವರು ಲೋಕಸಭೆ ಚುನಾವಣೆಗೂ ಮುನ್ನಾ ಗೊಂದಲ ಮಾಡಲು ಯತ್ನಿಸುತ್ತಿದ್ದಾರೆ. ಅವರ ಪಕ್ಷದಲ್ಲಿಯೇ ಸಾಕಷ್ಟು ಗೊಂದಲ ಇದೆ, ನಾಯಕತ್ವ ಇನ್ನೂ ತೀರ್ಮಾನವಾಗಿಲ್ಲ. ಅದರ ನಡುವೆ ನಮ್ಮ ಶಾಸಕರ ಕುಶಲ ವಿಚಾರಿಸಲು, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುವಂತೆ ಬಂದು, ಹೊರ ಹೋಗುವಾಗ ರಾಜಕೀಯ ಮಾತನಾಡಿದ್ದಾಗಿ ಬಿಂಬಿಸುತ್ತಿದ್ದಾರೆ.

ಇಂತಹ ನೂರು ಪ್ರಯತ್ನ ಮಾಡಲಿ, ಮಾಡದಿರಲಿ, ನಮಗೆ ಎಲ್ಲಾ ಮಾಹಿತಿ ಗೋತ್ತಿದೆ. ಬಿಜೆಪಿಯ ಕೆಲವು ನಿರೋದ್ಯೋಗಿಗಳು, ಏಜೆಂಟರು ಓಡಾಡುತ್ತಿದ್ದಾರೆ. ಬಿಜೆಪಿಯವರು ಸಂಪರ್ಕ ಮಾಡಿ ಚರ್ಚೆ ಮಾಡಿದ ಬಳಿಕ ನಮ್ಮ ಶಾಸಕರು ನಮಗೆ ಮಾಹಿತಿ ನೀಡುತ್ತಿದ್ದಾರೆ ಎಂದರು.

ಮಹಿಳೆಯರ ಕುರಿತು ಹೊಲಸು ನಾಲಿಗೆ ಹರಿಬಿಟ್ಟಿದ್ದ ನಿತೀಶ್ ಕುಮಾರ್ ಕ್ಷಮೆಯಾಚನೆ

ನಾನು ಮನೆಯ ಮುಖ್ಯಸ್ಥ:
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಗೆ ನಿನ್ನೆ ದಿಡೀರ್ ಭೇಟಿ ನೀಡಿದ ಬಗ್ಗೆ ಪತಿಕ್ರಿಯಿಸಿದ ಅವರು, ನಾನು ಮನೆಯ ಮುಖ್ಯಸ್ಥ, ಎಲ್ಲರ ಮನೆಗೂ ಹೋಗುತ್ತೇನೆ. ಕೆಲವರನ್ನು ನಮ್ಮ ಮನೆಗೆ ಕರೆಸಿಕೊಳ್ಳುತ್ತೇನೆ. ಅದರಲ್ಲಿ ವಿಶೇಷವೇನು ಇಲ್ಲ. ರಾಮಲಿಂಗಾರೆಡ್ಡಿ ಮನೆಗೆ ಹೋಗಿದ್ದೇನೆ, ಪರಮೇಶ್ವರ್ ನಮ್ಮ ಮನೆಗೆ ಬರುತ್ತೇನೆ ಎಂದಿದ್ದರು ನಾನೇ ಬರುತ್ತೇನೆ ಎಂದು ಹೇಳಿದ್ದೇನೆ. ಸತೀಶ್ ಜಾರಕಿಹೊಳಿ ನಮ್ಮ ಮನೆಗೆ ಬರುವುದಾಗಿ ಹೇಳಿದರು, ಬೇಡ ನಾನೇ ಬರುತ್ತೇನೆ ಎಂದು ಹೋಗಿದ್ದೆ ಎಂದರು.

ನಮ್ಮ ಮನೆಯಲ್ಲಿ ಜಾಗವೇ ಇರುವುದಿಲ್ಲ. ಜನ ಒಬ್ಬರ ಮೇಲೆ ಒಬ್ಬರು ನುಗ್ಗುತ್ತಿರುತ್ತಾರೆ. ಮನೆಯಲ್ಲಿ ಸಮಯವೂ ಇರುವುದಿಲ್ಲ, ಜಾಗವೂ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮಯವನ್ನೇ ನೀಡಲಾಗುತ್ತಿಲ್ಲ, ಇದಕ್ಕಾಗಿ ಕ್ಷಮೆ ಕೇಳುತ್ತೇನೆ ಎಂದರು.

ಕಾಂಗ್ರೆಸ್‍ನಲ್ಲಿಲ ಸತೀಶ್ ಜಾರಕಿಹೊಳಿ ಮೂರನೇ ಶಕ್ತಿ ಕೇಂದ್ರವಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಪ್ರತಿಕ್ರಿಯಿಸಿದ ಅವರು, ಒಬ್ಬರೆ ಕೆಪಿಸಿಸಿ ಅಧ್ಯಕ್ಷ ಹಾಗೂ ಒಬ್ಬರೆ ಮುಖ್ಯಮಂತ್ರಿ ಮಾತ್ರ. ಮೂರನೇ ಶಕ್ತಿ ಕೇಂದ್ರ ಇಲ್ಲ. ರಾಜ್ಯದ ಐದು ವರ್ಷ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ, ಅದು ಮುಗಿದ ಬಳಿಕ 2028ಕ್ಕೆ ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸ ಇದೆಯಲ್ಲಾ ಅದೇ ಸಂತೋಷ ಎಂದರು.

ಸಂಪುಟದಲ್ಲಿ ಬದಲಾವಣೆ ಇಲ್ಲ:
ಪಂಚರಾಜ್ಯಗಳ ಚುನಾವಣೆಯ ನಂತರ ರಾಜ್ಯ ಸಚಿವ ಸಂಪುಟ ಪುನಃರಚನೆಯಾಗಲಿದೆ ಎಂಬುದು ಆಧಾರ ರಹಿತ. ಸದ್ಯಕ್ಕೆ ಅಂತಹ ಯಾವ ಬದಲಾವಣೆಗಳು ಇಲ್ಲ. ನಿಗಮ ಮಂಡಳಿಗೆ ನೇಮಕಾತಿ ಕುರಿತು ಚರ್ಚೆ ನಡೆಸಲು ನವೆಂಬರ್ 15ರ ಬಳಿಕ ಎಐಸಿಸಿ ನಾಯಕರು ರಾಜ್ಯಕ್ಕೆ ಬರುತ್ತಾರೆ ಎಂದರು. ಕೆಪಿಸಿಸಿ ಅಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸಚಿವರಾಗಿದ್ದಾರೆ. ಹೊಸ ತಂಡ ಬರಬೇಕು ಎಂದು ಹೈಕಮಾಂಡ್‍ನವರೊಂದಿಗೆ ಚರ್ಚೆ ಮಾಡಿದ್ದೇವೆ. ಎಐಸಿಸಿ ಅಧ್ಯಕ್ಷರು ನಮ್ಮ ರಾಜ್ಯದವರೆ ಇದ್ದಾರೆ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಪ್ರಧಾನಿ ನಿದ್ದೆ ಕೆಟ್ಟಿದೆ:
ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಮಂತ್ರಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪ್ರಧಾನಿ ನಮ್ಮನ್ನು ಅಷ್ಟು ನೆನೆಸಿಕೊಳ್ಳುತ್ತಿದ್ದಾರಲ್ಲ ಸಂತೋಷ, ನಮ್ಮ ಗ್ಯಾರಂಟಿ, ರಾಜ್ಯದ ಜನರ ತೀರ್ಮಾನ ಪ್ರಧಾನಿಯವರ ನಿದ್ದೆ ಗೆಡಿಸಿದೆ ಎಂದರು. ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಐದರಲ್ಲೂ ಗೆಲ್ಲುತ್ತದೆ. ಮಿಜೋರಾಂನ ಬಗ್ಗೆ ಮಾಹಿತಿ ಇಲ್ಲ. ಉಳಿದಂತೆ ಎಲ್ಲಾ ಕಡೆ ಗೆಲ್ಲುತ್ತೇವೆ. ಉತ್ತರ ಭಾರತದಲ್ಲೆ ರಾಜಸ್ಥಾನದಲ್ಲಿ ಉತ್ತಮ ಅಭಿವೃದ್ಧಿಯ ಕೆಲಸಗಳಾಗಿವೆ ಎಂದರು.

ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡುವ ಅಂತಹ ಪರಿಸ್ಥಿತಿ ಯಾಕೆ ಬಂತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಬೇಕು. ನಮಗೆ 136 ಶಾಸರಕ ಹಾಗೂ ಪಕ್ಷೇತರರ ಬೆಂಬಲ ಇದೆ. ಜೆಡಿಎಸ್‍ನವರು ಒಗ್ಗಟ್ಟು ಪ್ರದರ್ಶನ ಮಾಡುವ ಪರಿಸ್ಥಿತಿ ಬಂದಿರುವುದು ಏಕೆಂದು ಆ ಪಕ್ಷದ ನಾಯಕರೇ ಹೇಳಬೇಕು ಎಂದರು.

ಮುಖ್ಯಮಂತ್ರಿಯವರು ಹೇಳಿದಂತೆ ಬಿಜೆಪಿ-ಜೆಡಿಎಸ್‍ನ ಬಹಳಷ್ಟು ಮಂದಿ ಕಾಂಗ್ರೆಸ್‍ಗೆ ಬರುತ್ತಾರೆ. ಇದೇ 15ಕ್ಕೆ ಅಡ್ಮಿಷನ್ ದಿನಾಂಕ ನಿಗದಿಯಾಗಿದೆ ಎಂದು ಡಿ.ಕೆ.ಶಿವಕುಮಾರ ಜೇಬು ತಡಕಾಡಿದರು.
ಬಹುಶಃ ಮನೆಯಲ್ಲಿ ಅಪಾಯಿಂಟ್ ಮೆಂಟ್ ಕಾರ್ಡ್ ಅನ್ನು ಮನೆಯಲ್ಲಿ ಬಿಟ್ಟಿರಬಹುದು. ಎಷ್ಟು ಜನ ಅಡ್ಮಿಷನ್ ತೆಗೆದುಕೊಳ್ಳುತ್ತಾರೆ ಎಂದು 14ರ ಸಂಜೆ ತಿಳಿಸುತ್ತೇನೆ ಎನ್ನುವ ಮೂಲಕ ನವೆಂಬರ್ 15ರಂದು ಪ್ರಭಾವಿ ನಾಯಕರು ಕಾಂಗ್ರೆಸ್ ಸೇರುತ್ತಿರುವ ಸುಳಿವು ನೀಡಿದರು.

ಎಲ್ಲಾ ಜಾತಿಗಳು ನ್ಯಾಯ:
ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ಪರಿಶಿಷ್ಟರ ಬೇಡಿಕೆಗಳ ಈಡೇರಿಕೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು. ನಮ್ಮ ಪಕ್ಷದಲ್ಲಿ ಕೆಲವು ಬದ್ಧತೆಗಳಿವೆ. ಚಿತ್ರದುರ್ಗದ ಸಮಾವೇಶದಲ್ಲಿ ಕಾಂಗ್ರೆಸ್ ನಿರ್ಣಯ ಕೈಗೊಂಡಿದೆ. ಎಲ್ಲವನೂ ಹಂತ ಹಂತವಾಗಿ ಜಾರಿ ಮಾಡುತ್ತೇವೆ. ಎಲ್ಲಾ ಸಮಾಜಕ್ಕೂ ನ್ಯಾಯ ಕೊಡಿಸುತ್ತೇವೆ, ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.
ಬಿಬಿಎಂಪಿ ಇಂಜಿನಿಯರ್ ಇನ್ ಛೀಪ್ ಪ್ರಹ್ಲಾದ್ ಅವರ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿರುವ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿಲ್ಲ. ಬಜೆಟ್ ಘೋಷಿತ ಯೋಜನೆಗಳ ಪ್ರಕಾರ ಕೆಲಸ ನಡೆಯುತ್ತಿದೆ. ಹೊಸ ಬಜೆಟ್ ಕೊಟ್ಟಿಲ್ಲ, ಡಿಸೆಂಬರ್‍ಗೆ ವೇಳೆಗೆ ಹಣಕಾಸು ಹೊಂದಾಣಿಕೆ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ ಎಂದರು.

ಅದಾನಿ ಸಂಸ್ಥೆಯಲ್ಲಿ ಅಮೆರಿಕದಿಂದ 553 ಮಿಲಿಯನ್ ಡಾಲರ್ ಹೂಡಿಕೆ

ರಾಜ್ಯದಲ್ಲಿ ಹೊಸ ಕಾರು ಖರೀದಿ ಸೇರಿದಂತೆ ಅನಗತ್ಯ ವೆಚ್ಚಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು,
ಡಿಸೇಲ್ ಕಾರುಗಳನ್ನು ಬದಲಾವಣೆ ಮಾಡಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇರುವ ನನ್ನ ಕಾರನ್ನು ಬದಲಾಯಿಸಬೇಕಿದೆ. ಇಲ್ಲಿ ಹೊಸ ಬುಕ್ಕಿಂಗ್‍ಗೆ ಅವಕಾಶ ಇಲ್ಲ. ಬೆಂಗಳೂರಿಗೆ ಹೋಗಿ ಕಾರು ಬುಕ್ ಮಾಡಿ ಬದಲಾವಣೆ ಮಾಡಬೇಕಿದೆ. ಡಿಸೇಲ್ ಕಾರು ದಲಾಯಿಸಿ ಪೆಟ್ರೋಲ್ ಕಾರು ಖರೀದಿಸಲು ಅಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದರು.

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಲಾಗಿದೆ. ಮೈಸೂರು ದಸರಾಗೆ ಜನವೋ ಜನ. ಜಂಬು ಸವಾರಿ ದಿನ ನಾನು ಮುಖ್ಯಮಂತ್ರಿಯವರ ಜೊತೆ ಬಸ್‍ನಲ್ಲಿ ಬಂದು ಬಿಟ್ಟೆ. ನನ್ನ ಪತ್ನಿ ಅವರ ಮನೆಯಲ್ಲಿದ್ದರು. ನನ್ನ ಮಾವನ ಮನೆಗೂ ಅರಮನೆಗೂ ಒಂದು ಕಿಲೋ ಮೀಟರ್. ನನ್ನ ಪತ್ನಿಯನ್ನು ಕರೆ ತರುವಂತೆ ಪೆÇಲೀಸ್ ಗಾಡಿ ಕಳುಹಿಸಿದೆ ಆದರೆ ಜನರ ನಡುವೆ ಕರೆ ತರಲಾಗಲಿಲ್ಲ, ನಾನು ಹೋಗಿ ಬಟ್ಟೆ ಬದಲಾಯಿಸಿಕೊಂಡು ಬರಬೇಕು ಎಂದು ಕೊಂಡಿದ್ದೆ, ಅದು ಆಗಲಿಲ್ಲ ಅಷ್ಟು ಜನ. ಉಚಿತ ಪ್ರಯಾಣ ಎಂದು ಮಹಿಳೆಯರು ಮಾತ್ರ ಬರುತ್ತಿಲ್ಲ, ಜೊತೆಗೆ ಪತಿ, ಮಕ್ಕಳನ್ನು ಕರೆ ತರುತ್ತಾರೆ. ಪ್ರಯಾಣ ದರ 500 ರೂಪಾಯಿ ಉಳಿಸಿದರೆ ಊಟ, ವಸತಿ ಎಂದು ಒಂದುವರೆ ಸಾವಿರ ರೂಪಾಯಿ ಖರ್ಚು ಮಾಡುತ್ತಿದ್ದಾರೆ ಎಂದರು.

ಬೆಂಗಳೂರಿಗೆ 24 ಟಿಎಂಸಿ ನೀರು ಮೀಸಲಿಡಲು ಆದೇಶ : ಡಿಸಿಎಂ

ಬೆಂಗಳೂರು, ನ.8- ಕಾವೇರಿ ನ್ಯಾಯಾೀಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹಂಚಿಕೆಯಾಗಿರುವಂತೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಿಗೆ 24 ಟಿಎಂಸಿ ನೀರನ್ನು ಮೀಸಲಿಡಲು ರಾಜ್ಯ ಸರ್ಕಾರ ಆದೇಶ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಸಚಿವರು ಆಗಿರುವ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ಅಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಮ್ಮ ಅಧಿಕಾರಿಗಳು ಮೇಕೆದಾಟು ವಿಚಾರ ಪ್ರಸ್ತಾಪ ಮಾಡಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಲು ದಿನಾಂಕ ನಿಗದಿ ಮಾಡುವುದಾಗಿ ಪ್ರಾಧಿಕಾರದವರು ಭರವಸೆ ನೀಡಿದ್ದಾರೆ. ಬಹುಶಃ ಮುಂದಿನ ವಾರ ವಿಚಾರಣೆಗೆ ಸಮಯ ನಿಗದಿಯಾಗಬಹುದು. ನಾವು ಅದಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದೇವೆ. ನಮಗೆ ಎಷ್ಟು ನೀರು ಬೇಕು, ಎಷ್ಟು ಉಳಿತಾಯವಾಗಲಿದೆ, ಸಮುದ್ರಕ್ಕೆ ಎಷ್ಟು ಹರಿದು ಹೋಗುತ್ತದೆ ಎಂಬ ಮಾಹಿತಿಯನ್ನು ಸಲ್ಲಿಸಲಿದ್ದೇವೆ.

ನಮಗೆ ಕುಡಿಯುವ ನೀರಿಗೆ 24 ಟಿಎಂಸಿ ಬೇಕು ಎಂದು ಸುಪ್ರೀಂಕೋರ್ಟ್ ಆದೇಶದ ಪ್ರಕಾರವೇ ಮೀಸಲಿಟ್ಟಿದ್ದೇವೆ. ಅದನ್ನು ಬಿಡಬ್ಯೂಎಸ್‍ಎಸ್‍ಬಿ ಬಳಸಿಕೊಳ್ಳಬೇಕು ಎಂದು ನಿನ್ನೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಈ ಮೊದಲು 18 ಟಿಎಂಸಿ ನಿಗದಿ ಮಾಡಲಾಗಿತ್ತು. ಉಳಿಕೆ ಆರು ಟಿಎಂಸಿಯನ್ನು ಬಳಕೆ ಮಾಡಲು ಪರಿಶೀಲನೆ ನಡೆಸಿ ಅನುಮತಿ ನೀಡಲಾಗಿದೆ. ಗರಿಷ್ಠ 24 ಟಿಎಂಸಿಗೆ ಮಿತಿಗೊಳಿಸಿ ಆದೇಶಿಸಲಾಗಿದೆ. ಇನ್ನೂ ಮುಂದೆ ಅಣೆಕಟ್ಟೆಗಳಲ್ಲಿ 24 ಟಿಎಂಸಿಯನ್ನು ಮೀಸಲಿರಿಸಿ ನಂತರ ಉಳಿದ ನೀರನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದರು.

3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್

ಕೆಆರ್‍ಎಸ್‍ನಲ್ಲಿ ನೀರಿದೆ ನಮಗೆ ಬಿಡಿ ಎಂದು ತಮಿಳುನಾಡಿನವರು ಕೇಳುತ್ತಾರೆ. ಇನ್ನೂ ಮುಂದೆ ಕುಡಿಯುವ ನೀರಿಗೆ 24 ಟಿಎಂಸಿಯನ್ನು ಮೀಸಲಿಡಬೇಕು. ಇದು 2018ರ ಸುಪ್ರೀಂಕೋರ್ಟ್ ಆದೇಶದಲ್ಲೇ ಉಲ್ಲೇಖವಿದೆ. ನಮ್ಮ ಹಕ್ಕನ್ನು ನಾವು ಕಳೆದುಕೊಳ್ಳುವುದಿಲ್ಲ. ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದಾದರೆ ನಮ್ಮ ಅಭ್ಯಂತರ ಇಲ್ಲ. ನ್ಯಾಯಾಲಯದ ಆದೇಶದ ಪ್ರಕಾರವೇ ನಿರ್ಧಾರ ಕೈಗೊಂಡು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನೀರು ಸರಬರಾಜು, ಒಳಚರಂಡಿ ಮಂಡಳಿ 24 ಟಿಎಂಸಿ ಬಳಸಿಕೊಳ್ಳಲು ಅನುಮತಿಸಿಸಲಾಗಿದೆ ಎಂದರು.

ಬೆಂಗಳೂರು ಸುತ್ತಮುತ್ತಾ ಆನೆಕಲ್‍ನಲ್ಲಿ ಬೆಂಗಳೂರು ಬೆಳೆದಿದೆ, ವಿಮಾನ ನಿಲ್ದಾಣಕ್ಕೆ ನೀರು ಪೂರೈಸಲೇಬೇಕು.
ಹಿಂದೆ ತಾವು ನಗರಾಭಿವೃದ್ಧಿ ಸಚಿವರಾಗಿದ್ದಾಗ ಹೆಬ್ಬಾಳದ ಮುಂದಕ್ಕೆ ನೀರು ಕೊಡಬಾರದು ಎಂದು ನಿರ್ಧರಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಆದೇಶ ಬದಲಿಸಿವೆ, ಹೀಗಾಗಿ ಎಲ್ಲಾ ಕಡೆಗೂ ನೀರು ಹಂಚಿಕೆ ಮಾಡಬೇಕಿದೆ, ಬೆಂಗಳೂರು ಉತ್ತರ ಭಾಗದಲ್ಲಿ ಬೆಳೆಯುತ್ತಿದೆ ಎಂದರು.

ಅದಾನಿ ಸಂಸ್ಥೆಯಲ್ಲಿ ಅಮೆರಿಕದಿಂದ 553 ಮಿಲಿಯನ್ ಡಾಲರ್ ಹೂಡಿಕೆ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಅನುಕೂಲವಾಗಲಿದೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ತಮಿಳುನಾಡಿನಲ್ಲಿ ಕೆಲ ನದಿಗಳ ಅಂತರ್ ಜೋಡಣೆಯ ಪ್ರಸ್ತಾವನೆ ಮಾಡಿರುವುದರ ಬಗ್ಗೆ ಸದ್ಯಕ್ಕೆ ನಾನು ಪ್ರತಿಕ್ರಿಯಿಸುವುದಿಲ್ಲ. ತಮಿಳುನಾಡಿಗೆ ಪ್ರತಿ ವರ್ಷ 177 ಟಿಎಂಸಿ ನೀರನ್ನು ಬಿಡುತ್ತೇವೆ ಅದರ ಬಗ್ಗೆ ಅವರಿಗೆ ಚಿಂತೆ ಬೇಡ. ನಾವು ನಮ್ಮ ರಾಜ್ಯದಲ್ಲಿ ಆಂತರಿಕವಾಗಿ ನದಿ ಜೋಡಣೆ ಮಾಡುತ್ತೇವೆಯೋ, ಅಣೆಕಟ್ಟುತ್ತೇವೆಯೋ ಅದರ ಬಗ್ಗೆ ತಮಿಳುನಾಡು ತಲೆ ಕೆಡಿಕೊಳ್ಳುವ ಅಗತ್ಯ ಇಲ್ಲ. ಮಳೆ ಇಲ್ಲದೆ ಸಂಕಷ್ಟ ಸಂದರ್ಭದಲ್ಲೂ ತಮಿಳುನಾಡಿಗೆ 2 ಸಾವಿರ ಎರಡುವರೆ ಸಾವಿರ ಬಿಡಿ ಎನ್ನುತ್ತಾರೆ, ಸಂಕಷ್ಟ ಕಾಲದಲ್ಲಿ ಇದನ್ನು ಪಾಲನೆ ಮಾಡುವುದು ಕಷ್ಟವಾಗುತ್ತದೆ. ನಿನ್ನೆ ಮೊನ್ನೆ ಮಳೆಯಾಗಿದ್ದರಿಂದ ಕೆಆರ್‍ಎಸ್‍ಗೆ ಒಳ ಸ್ವಲ್ಪ ಹರಿವು ಹೆಚ್ಚಾಗಿದೆ ಎಂದರು.

ಅಡ್ವಾಣಿ ಹುಟ್ಟುಹಬ್ಬಕ್ಕೆ ಮೋದಿ, ಶಾ ಸೇರಿ ಗಣ್ಯರಿಂದ ಶುಭಾಶಯ

ನವದೆಹಲಿ, ನ.8- ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಗಣ್ಯರು ಜನ್ಮದಿನದ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಎಲ್.ಕೆ. ಅಡ್ವಾಣಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನಮ್ಮ ರಾಷ್ಟ್ರವನ್ನು ಬಲಪಡಿಸಿದ ಸ್ಮರಣೀಯ ಕೊಡುಗೆಗಳನ್ನು ನೀಡಿದ ಸಮಗ್ರತೆ ಮತ್ತು ಸಮರ್ಪಣೆಗೆ ದಾರಿದೀಪವಾಗಿದ್ದಾರೆ. ಅವರ ದೂರದೃಷ್ಟಿಯ ನಾಯಕತ್ವವು ರಾಷ್ಟ್ರೀಯ ಪ್ರಗತಿ ಮತ್ತು ಏಕತೆಯನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ನಾನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಬಯಸುತ್ತೇನೆ. ರಾಷ್ಟ್ರ ನಿರ್ಮಾಣದ ಕಡೆಗೆ ಅವರ ಪ್ರಯತ್ನಗಳು 140 ಕೋಟಿ ಭಾರತೀಯರಿಗೆ ಸೂರ್ತಿ ನೀಡುತ್ತಲೇ ಇರುತ್ತವೆ ಎಂದು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಹಿರಿಯ ನಾಯಕನಿಗೆ ಶುಭ ಹಾರೈಸಿದ್ದಾರೆ ಮತ್ತು 96 ವರ್ಷ ವರ್ಷದ ಅಡ್ವಾಣಿ ಎಲ್ಲಾ ಬಿಜೆಪಿ ಕಾರ್ಯಕರ್ತರಿಗೆ ಸೂರ್ತಿಯ ಮೂಲವಾಗಿದ್ದಾರೆ ಎಂದು ಹೇಳಿದ್ದಾರೆ.

ಗೌರವಾನ್ವಿತ ಲಾಲ್ ಕೃಷ್ಣ ಅಡ್ವಾಣಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಜೀ ಅವರು ತಮ್ಮ ಅವಿರತ ಶ್ರಮ ಮತ್ತು ಸಂಘಟನಾ ಕೌಶಲ್ಯದಿಂದ ಪಕ್ಷವನ್ನು ಬೆಳೆಸಲು ಮತ್ತು ಕಾರ್ಯಕರ್ತರನ್ನು ಕಟ್ಟಲು ಶ್ರಮಿಸಿದ್ದಾರೆ. ಬಿಜೆಪಿಯ ಪ್ರಾರಂಭದಿಂದ ಅಕಾರಕ್ಕೆ ಬರುವವರೆಗೆ ಅಡ್ವಾಣಿ ಜಿ ಅವರು ಅನುಪಮ ಕೊಡುಗೆ ನೀಡಿದ್ದಾರೆ. ಅವರು ಪ್ರತಿಯೊಬ್ಬ ಕಾರ್ಯರ್ತನಿಗೆ ಸೂರ್ತಿ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಶಾ ಟ್ವೀಟ್ ಮಾಡಿದ್ದಾರೆ.

3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್

ಲಾಲ್ ಕೃಷ್ಣ ಅಡ್ವಾಣಿ ಎಲ್.ಕೆ. ಅಡ್ವಾಣಿ ಅವರ ಪೂರ್ಣ ಹೆಸರು. ಇವರು ನವೆಂಬರ್ 8, 1927ರಲ್ಲಿ ಸ್ವಾತಂತ್ರ್ಯ ಪೂರ್ವ ಭಾರತದ ಸಿಂಧ್ ಪಾಂತ್ಯದ ಗೊರೆಗಾಂವ್‍ನಲ್ಲಿ ಜನಿಸಿದರು. ಕಿಶಿಂಚಂದ್ ಅಡ್ವಾಣಿ ಹಾಗೂ ಜ್ಞಾನಿದೇವಿ ಇವರ ತಂದೆ-ತಾಯಿ. ಇವರಿಗೆ ಶೀಲಾ ಎಂಬ ಸಹೋದರಿ ಇದ್ದಾರೆ. ಅಡ್ವಾಣಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್) ದ ಮೂಲಕ ಭಾರತದ ರಾಜಕೀಯ ರಂಗಕ್ಕೆ ಧುಮುಕಿದವರು.

ಮದುವೆ ದಿನವೇ ಪ್ರೇಯಸಿಗೆ ಕೈಕೊಟ್ಟು ಪ್ರಿಯಕರ ಪರಾರಿ

ತುಮಕೂರು, ನ.8- ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ನಂತರ ಪ್ರೀತಿ ಹುಟ್ಟಿ ಜೊತೆಯಾಗಿ ಓಡಾಡಿಗೊಂಡಿದ್ದ ಪ್ರಿಯಕರ ಇದೀಗ ಮದುವೆ ದಿನವೇ ಪ್ರೇಯಸಿಯನ್ನು ನಡು ರಸ್ತೆಯಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಇದೀಗ ಪ್ರೇಯಸಿ ಪೊಲೀಸ್ ಠಾಣೆ ಮೆಟ್ಟಿಲೇರಿ ನ್ಯಾಯ ಒದಗಿಸುವಂತೆ ಕಣ್ಣೀರಿಟ್ಟಿದ್ದಾಳೆ. ಎರಡೂವರೆ ವರ್ಷಗಳಿಂದ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡು ಇದೀಗ ಮದುವೆಯಾಗದೆ ಪರಾರಿಯಾಗಿದ್ದಾನೆಂದು ತುಮಕೂರು ಮೂಲದ ಯುವತಿ ಬೆಂಗಳೂರು ಮೂಲದ ಪ್ರಿಯಕರ ಗಜೇಂದ್ರ ವಿರುದ್ದ ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬೆಂಗಳೂರಿನ ನೆಲಗದರನಹಳ್ಳಿ ವಾಸವಾಗಿರುವ ಗಜೇಂದ್ರ ಹಾಗು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ನಿವಾಸಿ, ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಕಳೆದ ಎರಡು ವರ್ಷಗಳಿಂದ ಇವರಿಬ್ಬರು ಪ್ರೀತಿಸುತ್ತಿದ್ದರು ಮತ್ತು ಹಲವೆಡೆ ಜೊತೆಯಾಗಿ ಸುತ್ತಾಡಿದ್ದರು.

3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್

ಮದುವೆಯಾಗುತ್ತೇನೆ ಎಂದು ಪುಸಲಾಯಿಸಿ ತನ್ನ ಪ್ರೇಯಸಿಯನ್ನು ಇತ್ತೀಚೆಗೆ ಲಾಡ್ಜ್ ಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದ ಗಜೇಂದ್ರ, ಈಗ ಏಕಾಏಕಿ ಮನೆಯಲ್ಲಿ ಒಪ್ಪುತ್ತಿಲ್ಲ ನಾವಿಬ್ಬರು ಬೇರೆಯಾಗೋಣ ಎಂದು ಹೊಸ ವರಸೆ ತೆಗೆದಿದ್ದ. ಇದರಿಂದ ಆತಂಕಗೊಂಡು ಯುವತಿ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಗಜೇಂದ್ರನನ್ನು ಕರೆಸಿದ ಪೊಲೀಸರು ಆತನಿಗೆ ಬುದ್ಧಿ ಹೇಳಿದ್ದರು. ನಂತರ ಆತ ಯುವತಿಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡು ಠಾಣೆಯಲ್ಲೇ ಮುಚ್ಚಳಿಕೆ ಪತ್ರವನ್ನೂ ಸಹ ಬರೆದುಕೊಟ್ಟಿದ್ದ.

ಬೆಂಗಳೂರಿನ ಪೀಣ್ಯಾದ ದುಗ್ಗಾಲಮ್ಮ ದೇವಾಲಯ ಬಳಿ ಇವರಿಬ್ಬರ ಮದುವೆಗಾಗಿ ಎಲ್ಲಾ ತಯಾರಿ ಮಾಡಲಾಗಿತ್ತು. ಇಬ್ಬರೂ ತುಮಕೂರಿನಿಂದ ಕಾರಿನಲ್ಲಿ ಬರುವಾಗ ನೆಲಗದರನಹಳ್ಳಿ ಬಳಿ ಕಾರು ನಿಲ್ಲಿಸಿ ಅಲ್ಲಿಂದ ಇಳಿದು ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಗಜೇಂದ್ರ ಊರಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಈತ ಯುವತಿಗೆ ದೂರದ ಸಂಬಂಧಿ ಆಗಿದ್ದಾನೆ. ಈ ಬಗ್ಗೆ ಗಜೇಂದ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಇನ್ನೂ 3 ದಿನ ಮಳೆ

ಬೆಂಗಳೂರು, ನ.8- ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಹಿಂಗಾರು ಚುರುಕಾಗಿದ್ದು, ಶುಕ್ರವಾರದವರೆಗೆ ಮಳೆ ಮುಂದು ವರೆಯಲಿದೆ. ಆದರೆ, ಮಳೆ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ. ಹಿಂಗಾರು ಚೇತರಿಸಿಕೊಂಡಿದ್ದರೂ ರಾಜ್ಯಾದ್ಯಂತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಚದುರಿದಂತೆ ಅಲ್ಲಲ್ಲಿ ಮಾತ್ರ ಮಳೆಯಾಗಿದೆ.

ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರದ ಜಲಾಶಯಗಳ ಒಳ ಹರಿವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಕೆಲವೆಡೆ ಮಳೆಯಾಗಿದೆ.

ಸೋಮವಾರಕ್ಕೆ ಹೋಲಿಸಿದರೆ ನಿನ್ನೆ ಮಳೆ ಪ್ರಮಾಣ ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ನಿನ್ನೆ ಮಧ್ಯಾಹ್ನವೇ ಮಳೆ ಆರಂಭಗೊಂಡು ಜನ ಜೀವನ ಅಸ್ತವ್ಯಸ್ತಗೊಳಿಸಿತ್ತು. ಬಹಳಷ್ಟು ಕಡೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದೆ.

ತೀವ್ರ ಬರಪರಿಸ್ಥಿತಿ ಎದುರಿಸುತ್ತಿದ್ದ ರಾಜ್ಯಕ್ಕೆ ಹಿಂಗಾರು ಚೇತರಿಕೆಯಾಗಿ ಮಳೆಯಾಗುತ್ತಿರುವುದು ಜನರಲ್ಲಿ ಅದರಲ್ಲೂ ರೈತರಿಗೆ ಖುಷಿ ತಂದಿದೆ. ಆದರೆ, ಕೊಯ್ಲಿಗೆ ಬಂದಿದ್ದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಈ ಮಳೆಯಿಂದ ತೊಂದರೆಯಾಗಿದೆ. ಕೆಲವೆಡೆ ಅಗಾಗ್ಗೆ ಮಳೆ ಬಂದರೆ, ಮತ್ತೆ ಕೆಲವೆಡೆ ಜಿಟಿ-ಜಿಟಿ ಮಳೆಯಾಗಿದೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಹವಾಮಾನ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದ್ದು, ಆನಂತರ ಇಳಿಮುಖವಾಗಲಿದೆ. ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಟ್ರಪ್‍ನಿಂದಾಗಿ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಮಳೆಯ ಅಬ್ಬರ ಕಡಿಮೆಯಾದರೂ ಹಗುರದಿಂದ ಸಾಧಾರಣ ಮಳೆ ಮುಂದುವರೆಯಲಿದೆ. ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ಮುಂದಿನ ಮೂರು ದಿನಗಳ ಅವಯಲ್ಲಿ ದಾವಣಗೆರೆ, ಹರಪನಹಳ್ಳಿ, ಚನ್ನಗಿರಿ, ಹಾವೇರಿ, ಗದಗ, ಹುಬ್ಬಳ್ಳಿ, ಸವದತ್ತಿ, ಬಾಗಲಕೋಟೆ, ಜಮಖಂಡಿ, ವಿಜಯಪುರ, ಇಂಡಿ ಭಾಗದಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ 15ರಿಂದ 20 ಮಿ.ಮೀ., ಉತ್ತರ ಒಳನಾಡಿನಲ್ಲಿ 25ರಿಂದ 40 ಮಿ. ಮೀ. ನಷ್ಟು ಮಳೆಯಾಗುವ ಸೂಚನೆಗಳಿವೆ.

ಗಾಜಾ ಹೃದಯಭಾಗ ತಲುಪಿದ ಇಸ್ರೇಲ್ ಸೇನೆ

ಅದೇ ರೀತಿ ಮುಂದಿನ ಹತ್ತು ದಿನಗಳ ಅವಯಲ್ಲಿ ದಕ್ಷಿಣ ಒಳನಾಡಿನಲ್ಲಿ 20ರಿಂದ 40 ಮಿ.ಮೀ., ಮಲೆನಾಡಿನಲ್ಲಿ 30ರಿಂದ 60 ಮಿ.ಮೀ., ಕರಾವಳಿಯಲ್ಲಿ 35ರಿಂದ 50 ಮಿ.ಮೀ. ಹಾಗೂ ಉತ್ತರ ಒಳನಾಡಿನಲ್ಲಿ 20ರಿಂದ 50 ಮಿ.ಮೀ.ನಷ್ಟು ಮಳೆಯಾಗಲಿದೆ ಎಂದು ಅವರು ವಿವರಿಸಿದರು.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ಅಕ್ಟೋಬರ್‍ನಲ್ಲಿ 131ಮಿ.ಮೀ. ವಾಡಿಕೆ ಮಳೆಗೆ ಕೇವಲ 47 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದು, ಶೇ.65 ರಷ್ಟು ಮಳೆ ಕೊರತೆ ಉಂಟಾಗಿತ್ತು. ಸೋಮವಾರ ರಾಜ್ಯದಲ್ಲಿ ವಾಡಿಕೆಗಿಂತ ನಾಲ್ಕು ಪಟ್ಟು ಮಳೆಯಾಗಿದೆ.

ಕಳೆದೊಂದು ವಾರದಲ್ಲಿ 30 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ದುಪ್ಪಟ್ಟು ಮಳೆಯಾಗಿದೆ. ಆದರೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್ ಒಂದರಿಂದ 7ರ ನಡುವಿನ ಅವಯಲ್ಲಿ ವಾಡಿಕೆಗಿಂತ ಶೇ.160ರಷ್ಟು ಅಧಿಕ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಶೇ.29ರಷ್ಟು ಕಡಿಮೆಯಾಗಿದೆ. ಮಲೆನಾಡಿನಲ್ಲಿ ಶೇ.132 ಹಾಗೂ ಶೇ.208ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಹಿಂಗಾರು ಹಂಗಾಮಿನ ಅವಯ ಅಕ್ಟೋಬರ್ ಒಂದರಿಂದ ನವೆಂಬರ್ 7ರ ನಡುವಿನ ಅವಯಲ್ಲಿ ವಾಡಿಕೆಗಿಂತ ಶೇ.47ರಷ್ಟು ಮಳೆ ಕೊರತೆ ರಾಜ್ಯದಲ್ಲಿ ಕಂಡುಬಂದಿತ್ತು. ಅದೇ ರೀತಿ ಜೂನ್ ನಿಂದ ಈವರೆಗೆ ಶೇ.28ರಷ್ಟು, ಏಪ್ರಿಲ್‍ನಿಂದ ಇಲ್ಲಿವರೆಗೆ ಶೇ.25ರಷ್ಟು ಹಾಗೂ ಜನವರಿಯಿಂದ ಈತನಕ ಶೇ.25ರಷ್ಟು ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಅರೆಸ್ಟ್

ದಿಸ್ಪುರ (ಅಸ್ಸಾಂ) ನ.8 -ಪುರೋಹಿತರು, ನಾಮಘರಿಯಾಗಳು ಮತ್ತು ಸಂತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಕಾಂಗ್ರೆಸ್ ನಾಯಕನನ್ನು ಜಲೇಶ್ವರ ವಿಧಾನಸಭಾ ಕ್ಷೇತ್ರದ (ಅಸ್ಸಾಂ) ಹಾಲಿ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಎಂದು ಗುರುತಿಸಲಾಗಿದೆ ಎಂದು ಅಸ್ಸಾಂ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಡಿಜಿಪಿ ಜಿಪಿ ಸಿಂಗ್ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‍ಐ ವರದಿ ಮಾಡಿದೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಬಂಧಿತ ಶಾಸಕ ಅಫ್ತಾಬುದ್ದೀನ್ ಮೊಲ್ಲಾ ಅವರ ವಿರುದ್ದ ಡಿಸ್‍ಪುರ್ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 295(ಎ)/ 153ಎ(1)(ಬಿ)/505(2) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ನ.4 ರಂದು ಗೋಲ್ಪಾರಾ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪುರೋಹಿತರು, ನಾಮಘರಿಯಾಗಳು ಮತ್ತು ಧರ್ಮದರ್ಶಿಗಳನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ರೇಸಾರ್ಟ್‍ನಲ್ಲಿ ಜೆಡಿಎಸ್ ಶಾಸಕರ ವಾಸ್ತವ್ಯ

ಬೆಂಗಳೂರು, ನ.8-ಆಪರೇಷನ್ ಹಸ್ತ ನಡೆಸುವ ಸುಳಿವಿನ ಬೆನ್ನಲೇ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದಾರೆ. ನಿನ್ನೆಯಿಂದ ಹಾಸನದ ರೆಸಾರ್ಟ್‍ನಲ್ಲಿ ಬೀಡು ಬಿಟ್ಟಿರುವ ಜೆಡಿಎಸ್ ಶಾಸಕರು ಪಕ್ಷ ಸಂಘಟನೆ, ಬಿಜೆಪಿಯೊಂದಿಗಿನ ಮೈತ್ರಿ, ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಲೋಕಸಭಾ ಚುನಾವಣೆ ಸಿದ್ಧತೆ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.

ಹಾಸನಾಂಬೆಯ ದರ್ಶನ ಪಡೆದಿರುವ ಜೆಡಿಎಸ್ ಶಾಸಕರು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇತೃತ್ವದಲ್ಲಿ ಒಗ್ಗಟ್ಟಿನ ಪ್ರದರ್ಶನ ಮಾಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಪಕ್ಷದ ಶಾಸಕರಿಗೆ ಮಾರ್ಗದರ್ಶನ ಮಾಡಿದ್ದಾರೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಆಸೆ, ಆಮಿಷಗಳಿಗೆ ಒಳಗಾಗಬೇಡಿ, ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಜನಪರ ಹೋರಾಟ ಮಾಡಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡೋಣ. ಮುಂದೆ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಎಂಬ ಸಂದೇಶ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ರಾಷ್ಟ್ರೀಯ ಪಕ್ಷಗಳಲ್ಲಾಗುತ್ತಿರುವ ಬದಲಾವಣೆ ಸೇರಿದಂತೆ ಹಲವು ಪ್ರಚಲಿತ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಪಕ್ಷಕ್ಕೆ ಆಗುತ್ತಿರುವ ಲಾಭ, ನಷ್ಟದ ಲೆಕ್ಕಾಚಾರವನ್ನು ಮಾಡಲಾಗಿದೆ. ಲೋಕಸಭಾ ಚುನಾವಣೆಯ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚಿಸಿ ಒಗ್ಗಟ್ಟಿನಿಂದ ಪಕ್ಷದ ಬೆಳವಣಿಗೆಗೆ ಶ್ರಮಿಸಲು ತೀರ್ಮಾನಿಸಲಾಗಿದೆ. ಯಾವುದೇ ಕಾರಣಕ್ಕೂ ಪಕ್ಷಾಂತರಕ್ಕೆ ಮುಂದಾಗಿ ಶಾಸಕ ಸ್ಥಾನ ಕಳೆದುಕೊಳ್ಳಬೇಡಿ ಎಂಬ ಕಿವಿ ಮಾತು ಹೇಳಿದ್ದಾರೆ.

ಆಪರೇಷನ್ ಹಸ್ತ ಮಾಡಲಾಗುತ್ತದೆ ಎಂಬ ಉಹಾಪೋಹದ ಹಿನ್ನೆಲೆಯಲ್ಲಿ ಜೆಡಿಎಸ್ ಶಾಸಕರು ಹಾಸನಾಂಬೆ ಸನ್ನಿಯಲ್ಲಿ ಒಟ್ಟಾಗಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

2ನೇ ಹಂತದ ಭಾರತ್ ಜೋಡೋ ಯಾತ್ರೆ ಸಿದ್ಧತೆ

ನವದೆಹಲಿ, ನ.8- ಮಿಜೋರಾಂ, ಛತ್ತೀಸ್‍ಗಡ , ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನ ಸಭೆಗಳಿಗೆ ಚುನಾವಣೆ ಬಳಿಕ, ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ 2ನೇ ಹಂತದ ಭಾರತ್ ಜೋಡೋ ಯಾತ್ರೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಡಿಸೆಂಬರ್ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ.

ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್‍ನಲ್ಲಿ ನಡೆಯುವ ಸಾಧ್ಯತೆಯಿದೆ. ಕಾರ್ಯಕ್ರದಲ್ಲಿ ಭಾಗವಹಿಸುವವರು ಕಾಲ್ನಡಿಗೆಯಲ್ಲಿ ಮೆರವಣಿಗೆ ಅಥವಾ ವಾಹನಗಳನ್ನು ಬಳಸಬಹುದಾಗಿದೆ. ಆದರೆ, ರಾಹುಲ್ ಗಾಂ ಈ ಮೊದಲಿನಂತೆ ಕಾಲ್ನಡಿಗೆಯಲ್ಲೇ ಯಾತ್ರೆ ಮಾಡಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ತೆಲಂಗಾಣದಲ್ಲಿ ಮೋದಿ ಬೆಂಬಲಕ್ಕೆ ನಿಂತ ಪವನ್ ಕಲ್ಯಾಣ್

ಭಾರತ್ ಜೋಡೋ ಯಾತ್ರೆಯ ಮೊದಲ ಹಂತವು 2022ರ ಸೆಪ್ಟೆಂಬರ್ 7 ರಿಂದ ಜನವರಿ 2023ರವರೆಗೂ ನಡೆಯಿತು. ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾಗಿ ಸರಿಸುಮಾರು 4,080 ಕಿಮೀ ಗಳಷ್ಟು ದೂರ ಕ್ರಮಿಸಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಯಾತ್ರೆಯನ್ನು ಮುಕ್ತಾಯಗೊಳಿಸಲಾಗಿತ್ತು.

ಯಾತ್ರೆಯು 12 ರಾಜ್ಯಗಳ 75 ಜಿಲ್ಲೆಗಳ ಮೂಲಕ 126 ದಿನಗಳಲ್ಲಿ ಸಾಗಿತು, ಇದು ಭಾರತದ ಸುದೀರ್ಘ ಪಾದಯಾತ್ರೆಯಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಯಾತ್ರೆಯಲ್ಲಿ ಭಾಗವಹಿಸುವ ಇತರರು ಆಯಾ ರಾಜ್ಯಗಳಲ್ಲಿ ತಳಮಟ್ಟದ ಜನಸಂಖ್ಯೆಯೊಂದಿಗೆ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಜನಾಂದೋಲನದ ಪ್ರಾಥಮಿಕ ಉದ್ದೇಶವು ಕಾಂಗ್ರೆಸ್‍ನಿಂದ ಪ್ರಚಾರ ಮಾಡಲ್ಪಟ್ಟಿದೆ.

ಜನರ ಜೊತೆಗೆ ರಾಹುಲ್ ಗಾಂಧಿ ಅವರೂ ಸಹ ಸಂವಾದ ನಡೆಸಿ, ಸಮಸ್ಯೆಗಳನ್ನು ಆಲಿಸಿದ್ದರು. ಕೇಂದ್ರ ಸರ್ಕಾರದ ಆಡಳಿತ, ಬಿಜೆಪಿ ವಿಭಜಕ ರಾಜಕೀಯದ ವಿರುದ್ಧ ಭಾರತವನ್ನು ಒಂದು ಗೂಡಿಸುವುದು. ನಿರುದ್ಯೋಗ ಮತ್ತು ಅಸಮಾನತೆಯಂತಹ ಇತರ ಸಾಮಾಜಿಕ-ಆರ್ಥಿಕ ಸಮಸ್ಯೆಗಳ ಬಗ್ಗೆ ರಾಹುಲ್ ಗಾಂಧಿ ಚರ್ಚಿಸಿದ್ದರು.

ಕಳೆದ ಸೆಪ್ಟೆಂಬರ್‍ನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಪಕ್ಷವು 2ನೇ ಹಂತದ ಭಾರತ್ ಜೋಡೋ ಯಾತ್ರೆ ಯೋಜಿಸುತ್ತಿದೆ. ಯೋಜನೆಯು ನಿರ್ಮಾಣ ಹಂತದಲ್ಲಿದೆ ಎಂದು ಹೇಳಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರು ರಾಹುಲ್ ಗಾಂಧಿ ಅವರನ್ನು ಪೂರ್ವದಿಂದ ಪಶ್ಚಿಮಕ್ಕೆ ಮತ್ತೊಂದು ಭಾರತ್ ಜೋಡೋ ಯಾತ್ರೆ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಮಹಿಳೆಯರ ಕುರಿತು ಹೊಲಸು ನಾಲಿಗೆ ಹರಿಬಿಟ್ಟಿದ್ದ ನಿತೀಶ್ ಕುಮಾರ್ ಕ್ಷಮೆಯಾಚನೆ

ಪಾಟ್ನಾ, ನ.8- ಮಹಿಳೆಯರು ಕುರಿತು ವಿವಾದತ್ಮಾಕ ಹೇಳಿಕೆ ನೀಡಿ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೊನೆಗೂ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದು, ಕ್ಷಮೆಯಾಚಿಸಿದ್ದಾರೆ. ನಾನು ಯಾರ ಮನಸ್ಸುನ್ನು ನೋಯಿಸಬೇಕೆಂಬ ಕಾರಣಕ್ಕಾಗಿ ಈ ಹೇಳಿಕೆ ನೀಡಿರಲಿಲ್ಲ. ಒಂದು ವೇಳೆ ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ, ನಾನು ಈ ಕೂಡಲೇ ಜನಸಂಖ್ಯೆ ನಿಯಂತ್ರಣದ ಬಗ್ಗೆ ತಪ್ಪು ಸಂದೇಶವನ್ನು ನೀಡಿದ್ದರೆ ತಮ್ಮ ಹೇಳಿಕೆಯನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಮಹಿಳಾ ಅಭಿವೃದ್ಧಿಯಲ್ಲಿ ರಾಜ್ಯವು ಮುಂದಿದೆ. ನನ್ನ ಹೇಳಿಕೆಗೆ ನಾನು ಕ್ಷಮೆಯಾಚಿಸುತ್ತೇನೆ, ನನ್ನ ಹೇಳಿಕೆಯು ತಪ್ಪು ಸಂದೇಶವನ್ನು ಕಳುಹಿಸಿದ್ದರೆ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಹೇಳಿದರು. ನಿನ್ನೆ ವಿಧಾನಸಭೆಯಲ್ಲಿ ಜನಸಂಖ್ಯಾ ನಿಯಂತ್ರಣದ ವಿಷಯದಲ್ಲಿ ಮಹಿಳೆಯರಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡುವ ಬಿಹಾರ ಸಿಎಂ ನಿತೀಶ್ ಕುಮಾರ್, ವಿದ್ಯಾವಂತ ಮಹಿಳೆ ತನ್ನ ಪತಿ ಸಂಭೋಗದ ಸಮಯದಲ್ಲಿ ಸಂಯಮದಿಂದ ವರ್ತಿಸುವುದನ್ನು ಹೇಗೆ ತಡೆಯಬಹುದು ಎಂಬ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದು ಭಾರೀ ವಿವಾದವನ್ನು ಸೃಷ್ಟಿಸಿತ್ತು.

ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ರೋಹಿಂಗ್ಯಾ ನಾಯಕನ ಬಂಧನ

ನಿತೀಶ್ ಕುಮಾರ್ ಹೇಳಿಕೆಗೆ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು, ನಿತೀಶ್ ಕುಮಾರ್ ಅವರ ಕ್ಷಮೆಯಾಚನೆಯನ್ನು ಬಯಸುವುದಿಲ್ಲ, ಬದಲಿಗೆ ಅವರ ರಾಜೀನಾಮೆ ಎಂದು ಒತ್ತಾಯಿಸಿದ್ದರು. ಇದರ ನಡುವೆಯೇ ರಾಷ್ಟ್ರೀಯ ಮಹಿಳಾ ಆಯೋಗ ತಮ್ಮ ಹೇಳಿಕೆ ಕುರಿತು ವಿವರಣೆ ನೀಡುವಂತೆ ನೋಟೀಸ್ ಜಾರಿ ಮಾಡಿತ್ತು.

ಮಹಿಳೆಯರ ಬಗ್ಗೆ ನಿತೀಶ್ ಕುಮಾರ್ ಹೇಳಿಕೆಗೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‍ಸಿಡಬ್ಲ್ಯೂ) ಆಕ್ರೋಶ ವ್ಯಕ್ತಪಡಿಸಿ ನಿತೀಶ್ ಕುಮಾರ್ ಕೂಡಲೇ ಕ್ಷಮೆಯಾಚಿಸಬೇಕು ಎಂದು ಎನ್‍ಸಿಡಬ್ಲ್ಯೂ ಮುಖ್ಯಸ್ಥೆ ರೇಖಾ ಶರ್ಮಾ ಒತ್ತಾಯಿಸಿದ್ದರು.

ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಆಡಿರುವ ಅಸಭ್ಯ ಮಾತುಗಳಿಂದ ಪ್ರತಿಯೊಬ್ಬ ಮಹಿಳೆಯ ಘನತೆ ಹಾಗೂ ಗೌರವಕ್ಕೆ ಧಕ್ಕೆಯುಂಟಾಗಿದೆ. ಅವರ ಭಾಷಣದಲ್ಲಿ ಬಳಸಲಾದ ಭಾಷೆಯು ಸಮಾಜಕ್ಕೆ ಕಪ್ಪು ಚುಕ್ಕೆಯಾಗಿದೆ. ನಾವು ಅಂತಹ ನಡವಳಿಕೆ ವಿರುದ್ಧ ಬಲವಾಗಿ ನಿಲ್ಲುತ್ತೇವೆ ಎಂದು ರೇಖಾ ತಿಳಿಸಿದ್ದಾರೆ.

ಬಿಹಾರ ಮುಖ್ಯಮಂತ್ರಿಯನ್ನು ಟೀಕಿಸಿರುವ ಬಿಜೆಪಿಯ ಬಿಹಾರ ಘಟಕವು ನಿತೀಶ್ ಕುಮಾರ್ ಅವರನ್ನು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಅಸಭ್ಯ ರಾಜಕಾರಣಿ ಎಂದು ಟೀಕಾ ಪ್ರಹಾರ ನಡೆಸಿತ್ತು. ಮುಖ್ಯಮಂತ್ರಿ ಇನ್ನು ಮುಂದೆ ಸುಸಂಸ್ಕೃತ ಸಮಾಜವನ್ನು ಪ್ರತಿನಿಸಲು ಯೋಗ್ಯರಲ್ಲ ಎಂದು ಹೇಳಿದರು. ನಿತೀಶ್ ಕುಮಾರ್ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಸಚಿವ ಗಿರಿರಾಜ್ ಸಿಂಗ್ ಹೇಳಿದ್ದರು.

ಮೋದಿ ವಿರುದ್ಧ ಹರಿಹಾಯ್ದ ಅಸಾದುದ್ದೀನ್ ಓವೈಸಿ
ಏನಿದು ವಿವಾದ:
ಮದುವೆಯ ನಂತರ ಪುರುಷರು ತಮ್ಮ ಪತ್ನಿಯರನ್ನು ಸಂಭೋಗಿಸಲು ಕೇಳುತ್ತಾರೆ, ಆದರೆ ಬಿಹಾರದಲ್ಲಿ ವಿದ್ಯಾವಂತ ಮಹಿಳೆಯರು ತಮ್ಮ ಗಂಡಂದಿರನ್ನು ಸರಿಯಾದ ಸಮಯದಲ್ಲಿ ಹಾಗೆ ಮಾಡುವುದನ್ನು ನಿಲ್ಲಿಸುವಂತೆ ಕೇಳುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದ್ದರು. ಇದರಿಂದಾಗಿ ಬಿಹಾರದ ಜನಸಂಖ್ಯೆ ನಿಯಂತ್ರಣದಲ್ಲಿದೆ ಎಂದಾಗ ಹಿಂದೆ ಕುಳಿತಿದ್ದ ಕೆಲ ಶಾಸಕರು ನಗುತ್ತಿದ್ದರು.

ಕಳೆದ ವಾರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ, ನಿತೀಶ್ ಕುಮಾರ್ ಅವರು 1987ರಲ್ಲಿ ಸ್ರ್ಪಧಿಸಿದ್ದ ಚುನಾವಣೆಯಲ್ಲಿ ಸಿಪಿಐ ಮತ್ತು ಸಿಪಿಐ-ಎಂ ತನಗೆ ಸಹಾಯ ಮಾಡಿದೆ ಎಂದು ಹೇಳಿಕೊಂಡಿದ್ದರು. ಆದರೆ, ಆ ವರ್ಷ ಯಾವುದೇ ಚುನಾವಣೆ ನಡೆದಿರಲಿಲ್ಲ. ಇತ್ತೀಚೆಗಷ್ಟೇ ಜನತಾ ದರ್ಬಾರ್‍ನಲ್ಲಿ ಗೃಹ ಸಚಿವರನ್ನು ಕರೆಸುವಂತೆ ಅಲ್ಲಿನ ಅಧಿಕಾರಿಗಳನ್ನು ಕೇಳಿಕೊಂಡಿದ್ದು, ಈ ಹುದ್ದೆಯನ್ನು ತಾವೇ ನಿರ್ವಹಿಸಿದ್ದರಿಂದ ಎಡವಟ್ಟು ಎದುರಿಸಬೇಕಾಯಿತು.

ಸಿಎಂ ಹೇಳಿಕೆ ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದ್ದು. ಲೈಂಗಿಕ ಶಿಕ್ಷಣದ ವಿಷಯ ಚರ್ಚೆಯಾದಾಗಲೆಲ್ಲಾ ಜನರು ಹಿಂಜರಿಯುತ್ತಾರೆ. ಇದನ್ನು ಈಗ ಶಾಲೆಗಳಲ್ಲಿ ಕಲಿಸಲಾಗುತ್ತದೆ. ಶಾಲೆಗಳಲ್ಲಿ ವಿಜ್ಞಾನ ಮತ್ತು ಜೀವಶಾಸ್ತ್ರವನ್ನು ಕಲಿಸಲಾಗುತ್ತದೆ. ಮಕ್ಕಳು ಅದನ್ನು ಕಲಿಯುತ್ತಾರೆ. ಜನಸಂಖ್ಯೆಯ ಹೆಚ್ಚಳವನ್ನು ತಡೆಯಲು ಪ್ರಾಯೋಗಿಕವಾಗಿ ಏನು ಮಾಡಬೇಕು ಎಂಬುದನ್ನು ಹೇಳಿದ್ದಾರೆ ಎಂದು ತೇಜಸ್ವಿ ಯಾದವ್ ಸಮರ್ಥಿಸಿಕೊಂಡಿದ್ದರು.

3ನೇ ಬಾರಿಗೆ ನ್ಯೂಜೆರ್ಸಿ ಸೆನೆಟ್‍ಗೆ ಆಯ್ಕೆಯಾದ ವಿನ್ ಗೋಪಾಲ್

ನ್ಯೂಯಾರ್ಕ್, ನ. 8 (ಪಿಟಿಐ) ನ್ಯೂಜೆರ್ಸಿ ಸೆನೆಟ್‍ನಲ್ಲಿ ಅನಿವಾಸಿ ಭಾರತೀಯ ಸೆನೆಟರ್ ವಿನ್ ಗೋಪಾಲ್ ಅವರು ಮೂರನೇ ಅವಧಿಗೆ ಮರು ಆಯ್ಕೆಯಾಗಿದ್ದಾರೆ. 38 ವರ್ಷದ ಡೆಮೋಕ್ರಾಟ್ ಸೆನೆಟರ್ ಗೋಪಾಲ್ ಅವರು ನ್ಯೂಜೆರ್ಸಿಯ 11 ನೇ ಕಾಂಗ್ರೆಷನಲ್ ಡಿಸ್ಟ್ರಿಕ್ಟ್‍ನಲ್ಲಿ ರಿಪಬ್ಲಿಕನ್ ಚಾಲೆಂಜರ್ ಸ್ಟೀವ್ ಡ್ನಿಸ್ಟ್ರಿಯನ್ ಅವರನ್ನು ಸೋಲಿಸಿ ಸತತ ಮೂರನೆ ಬಾರಿಗೆ ಮರು ಆಯ್ಕೆಯಾಗಿದ್ದಾರೆ.

ಗೋಪಾಲ್ ಪ್ರಸ್ತುತ ನ್ಯೂಜೆರ್ಸಿ ಸ್ಟೇಟ್ ಸೆನೆಟ್‍ನ ಅತ್ಯಂತ ಕಿರಿಯ ಸದಸ್ಯ ಮತ್ತು ರಾಜ್ಯದ ಇತಿಹಾಸದಲ್ಲಿ ಸೆನೆಟ್‍ಗೆ ಚುನಾಯಿತರಾದ ಮೊದಲ ದಕ್ಷಿಣ ಏಷ್ಯಾದ ಅಮೆರಿಕನ್ ಆಗಿದ್ದಾರೆ. ನ್ಯೂಜೆರ್ಸಿಯ ಶಾಸಕಾಂಗವು ರಾಜ್ಯ ಸೆನೆಟ್ ಮತ್ತು ಅಸೆಂಬ್ಲಿಯನ್ನು ಒಳಗೊಂಡಿದೆ ಮತ್ತು 40 ಜಿಲ್ಲೆಗಳಿಂದ 120 ಸದಸ್ಯರನ್ನು ಹೊಂದಿದೆ. ಪ್ರತಿ ಜಿಲ್ಲೆಯು ಸೆನೆಟ್‍ನಲ್ಲಿ ಒಬ್ಬ ಪ್ರತಿನಿಧಿಯನ್ನು ಮತ್ತು ಅಸೆಂಬ್ಲಿಯಲ್ಲಿ ಇಬ್ಬರು ನಾಲ್ಕು ಮತ್ತು ಎರಡು ವರ್ಷಗಳ ಅವಧಿಯನ್ನು ಪೂರೈಸುತ್ತದೆ.

ಗೋಪಾಲ, 2017 ರಲ್ಲಿ ಮೊದಲ ಬಾರಿಗೆ ಚುನಾಯಿತರಾದರು ಮತ್ತು 2021 ರಲ್ಲಿ ಮರು ಆಯ್ಕೆಯಾದರು, ಡಿನಿಸ್ಟ್ರಿಯನ್‍ಗೆ ಶೇಕಡಾ 58 ರಿಂದ 38 ರಷ್ಟು ಮತಗಳನ್ನು ಪಡೆದರು. ಅವರು ತಮ್ಮ ಯಶಸ್ಸಿಗೆ ಅವರ ಘಟಕ ಸೇವೆಗಳು ಮತ್ತು ದ್ವಿಪಕ್ಷೀಯತೆ ಕಾರಣ ಎಂದು ಹೇಳಿದರು.

ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ರೋಹಿಂಗ್ಯಾ ನಾಯಕನ ಬಂಧನ

ನೀವೆಲ್ಲರೂ ಇಂದು ರಾತ್ರಿ ಇತಿಹಾಸವನ್ನು ನಿರ್ಮಿಸಿದ್ದೀರಿ! ಫಲಿತಾಂಶ ಪ್ರಕಟವಾದ ನಂತರ ವರದಿಯಲ್ಲಿ ಗೋಪಾಲ್ ಹೇಳಿರುವುದಾಗಿ ಉಲ್ಲೇಖಿಸಲಾಗಿದೆ. ಗೋಪಾಲ್ ಪ್ರಸ್ತುತ ಸೆನೆಟ್ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿದ್ದಾರೆ ಮತ್ತು ಸೆನೆಟ್ ಬಹುಮತದ ಸಮ್ಮೇಳನದ ನಾಯಕರಾಗಿದ್ದಾರೆ. ಅವರ ಅಭಿಯಾನದ ಪ್ರಕಾರ ಅವರು ಈ ಹಿಂದೆ ಸೆನೆಟ್ ಮಿಲಿಟರಿ ಮತ್ತು ವೆಟರನ್ಸ ಅಫೇರ್ಸ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಅವರು ಸೆನೆಟ್ ಸರ್ಕಾರ, ವಾಜರಿಂಗ್ , ಪ್ರವಾಸೋದ್ಯಮ ಮತ್ತು ಐತಿಹಾಸಿಕ ಸಂರಕ್ಷಣಾ ಸಮಿತಿಯ ಉಪಾಧ್ಯಕ್ಷರು ಮತ್ತು ಆರೋಗ್ಯ, ಮಾನವ ಸೇವೆಗಳು ಮತ್ತು ಹಿರಿಯ ನಾಗರಿಕರ ಸಮಿತಿಯ ಸದಸ್ಯರೂ ಆಗಿದ್ದಾರೆ.