Home Blog Page 1834

ಐಸಿಸಿ ಪ್ರತಿಷ್ಠಿತ ಪ್ರಶಸ್ತಿ ಪಟ್ಟಿಯಿಂದ ಕೊಹ್ಲಿ, ರೋಹಿತ್ ಔಟ್

ಬೆಂಗಳೂರು,ನ.7- ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು ಅಕ್ಟೋಬರ್ ತಿಂಗಳ ಉತ್ತಮ ಆಟಗಾರರ ಪ್ರಶಸ್ತಿಯ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನು ಹೆಸರನ್ನು ಹೊರಗಿಡಲಾಗಿದೆ.

2023ರ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಫಾರ್ಮ್‍ನಲ್ಲಿರುವ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಅವರು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 174 ರನ್ ಗಳಿಸಿರುವುದಲ್ಲದೆ ವಿಕೆಟ್ ಕೀಪರ್ ಹಾಗೂ ಫೀಲ್ಡರ್ ರೂಪದಲ್ಲಿ ಒಟ್ಟು 10 ಕ್ಯಾಚ್‍ಗಳನ್ನು ಪಡೆದಿರುವುದಲ್ಲದೆ ಅಕ್ಟೋಬರ್ ತಿಂಗಳಿನಲ್ಲಿ 3 ಶತಕ ಸೇರಿದಂತೆ 431 ರನ್‍ಗಳನ್ನು ಬಾರಿಸಿದ್ದು ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆಯಲು ಕಾರಣವಾಗಿದೆ.

ಇನ್ನು ಭಾರತೀಯ ಸಂಜಾತ ನ್ಯೂಜಿಲೆಂಡ್‍ನ ಯುವ ಆಟಗಾರ ರಚಿನ್ ರವೀಂದ್ರ ಅವರು ಕೂಡ ವಿಶ್ವಕಪ್ ಟೂರ್ನಿಯಲ್ಲಿ ಆಕ್ಟೋಬರ್ ಮಾಸದಲ್ಲಿ ಆಡಿದ 6 ಪಂದ್ಯಗಳಿಂದ 81.20 ಸರಾಸರಿಯಲ್ಲಿ 406 ರನ್ ಗಳಿಸಿದ್ದು 2 ಶತಕ ಗಳಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ರಚಿನ್ 389 ರನ್ ಬಾರಿಸಿದ್ದರು.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ವಿಶ್ವಕಪ್ ಟೂರ್ನಿಯಲ್ಲಿ ಅತ್ಯಮೋಘ ಬೌಲಿಂಗ್ ಪ್ರದರ್ಶನ ತೋರುತ್ತಿದ್ದು ಅಕ್ಟೋಬರ್ ತಿಂಗಳಿನಲ್ಲಿ 3.91 ಸರಾಸರಿಯಲ್ಲಿ 14 ವಿಕೆಟ್ ಪಡೆದಿದ್ದಾರೆ. ಅಫಾಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 39 ರನ್‍ಗಳನ್ನು ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದಲ್ಲದೆ 16 ರನ್ ಗಳಿಸುವ ಮೂಲಕ ಆಲ್‍ರೌಂಡ್ ಪ್ರದರ್ಶನ ನೀಡಿ ತಂಡದ ಗೆಲುವಿಗೆ ಸಹಕರಿಸಿದ್ದರು.

ಅಲ್ಲದೆ ಡಿಫೆಂಡಿಂಗ್ ಚಾಂಪಿಯನ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 32 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆಯೇ ಐಸಿಸಿ ಪ್ರಕಟಿಸಿರುವ ಅಕ್ಟೋಬರ್ ತಿಂಗಳ ಪ್ರಶಸ್ತಿಗೆ ಬುಮ್ರಾ ಹೆಸರು ಪಾತ್ರವಾಗಿದೆ.

ಸಚಿನ್ ಪುತ್ರಿ ಜೊತೆ ಸಪ್ತಪದಿ ತುಳಿಯಲಿದ್ದಾರಂತೆ ಶುಭಮನ್ ಗಿಲ್..?!

ಬೆಂಗಳೂರು,ನ.7- ಟೀಮ್ ಇಂಡಿಯಾದ ಯುವ ಕ್ರಿಕೆಟಿಗ ಶುಭಮನ್ ಗಿಲ್ ಹಾಗೂ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ಸದ್ಯದಲ್ಲೇ ವಿವಾಹವಾಗಲಿದ್ದಾರೆ ಎಂದು ಯುಎಇಯ ಖ್ಯಾತ ಕ್ರಿಕೆಟಿಗ ಚಿರಾಗ್ ಸೂರಿ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕಳೆದ ಕೆಲವು ವಷಗಳಿಂದ ಗಿಲ್ ಹಾಗೂ ಸಾರಾ ನಡುವೆ ಕುಚು ಕುಚು ನಡೆಯುತ್ತಿದೆ ಎಂಬ ಸುದ್ದಿಗಳು ಗುಟ್ಟಾಗೇನೂ ಉಳಿದಿಲ್ಲ. ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯ ವೇಳೆಯೂ ಅಭಿಮಾನಿಗಳು ಗಿಲ್ , ಫೀಲ್ಡಿಂಗ್ ಮಾಡುವಾಗ ಅಭಿಮಾನಿಗಳು ಸಾರಾ ಎಂದು ಕೂಗುವ ಮೂಲಕ ಕಿಚಾಯಿಸಿದ್ದರು.

ಈಗ ಶುಭಮನ್ ಗಿಲ್ ಅವರು ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಲ್ಲೀನನಾಗಿದ್ದು, ಈ ನಡುವೆಯೇ ಇತ್ತೀಚೆಗೆ ಮುಂಬೈನ ಜಿಯೋ ವಲ್ರ್ಡ್ ಪ್ಲಾಜಾದಲ್ಲಿ ನಡೆದ ಸಮಾರಂಭದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಅಲ್ಲದೆ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಕ್ರೀಡಾಂಗಣಕ್ಕೆ ಆಗಮಿಸಿದ್ದ ಸಾರಾ, ಗಿಲ್ ಅವರನ್ನು ಹುರಿದುಂಬಿಸಿದ್ದರು. ಆ ಪಂದ್ಯದಲ್ಲಿ ಯುವ ಆರಂಭಿಕ ಅರ್ಧಶತಕ ಸಿಡಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯದ ವೇಳೆ ಗಿಲ್ 95 ರನ್‍ಗಳಿಗೆ ಔಟಾಗಿದ್ದಾಗ ಸಾರಾ ಸ್ಟ್ಯಾಡಿಂಗ್ ಎವಿಯೇಷನ್ ನೀಡಿದ್ದರು. ಈ ಘಟನೆಗಳಿಂದ ಗಿಲ್ ಹಾಗೂ ಸಾರಾ ವಿವಾಹವಾಗುತ್ತಾರೆ ಎಂಬ ಸುದ್ದಿಗಳಿಗೆ ರೆಕ್ಕೆಪುಕ್ಕಗಳು ಹುಟ್ಟಿಕೊಂಡಿವೆ.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಸಂದರ್ಶನವೊಂದರಲ್ಲಿ ಮುಂದೆ ಮದುವೆಯಾಗುವ ಕ್ರಿಕೆಟಿಗ ಯಾರು ಎಂಬ ಪ್ರಶ್ನೆಯನ್ನು ಯುಎಇ ಕ್ರಿಕೆಟಿಗ ಚಿರಾಗ್ ಸೂರಿಗೆ ಕೇಳಲಾಗಿದ್ದು, ಅದಕ್ಕೆ ಶುಭಮನ್ ಗಿಲ್ ಅವರು ತಮ್ಮ ಸುದೀರ್ಘ ಕಾಲದ ಗೆಳತಿಯನ್ನು ವಿವಾಹ ಆಗಲಿದ್ದಾರೆ ಎಂಬ ಉತ್ತರ ನೀಡಿದ್ದಾರೆ.

`ಕ್ರಿಕೆಟ್ ಲೋಕದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ, ಬಹುಶಃ ತನ್ನ ತಂದೆಯನನು ಕಳೆದ 40-50 ವರ್ಷಗಳಿಂದ ಕ್ರಿಕೆಟ್ ಆಡುವುದನ್ನು ನೋಡಿರಬಹುದು. ಈಗ ತಮ್ಮ ಮುಂದಿನ ಜೀವನದಲ್ಲೂ ಮತ್ತೊಬ್ಬ ಕ್ರಿಕೆಟಿಗನ ಆಟವನ್ನು ನೋಡಬಹುದು’ ಎಂದು ಚಿರಾಗ್ ಹೇಳಿದ್ದಾರೆ. ಚಿರಾಗ್ ಅವರು ತಮ್ಮ ವೃತ್ತಿ ಜೀವನದಲ್ಲಿ ಆಡಿರುವ 18 ಪಂದ್ಯಗಳಿಂದ 2 ಶತಕ ಹಾಗೂ 3 ಅರ್ಧಶತಕಗಳ ನೆರವಿನಿಂದ 500 ರನ್‍ಗಳನ್ನು ಬಾರಿಸಿದ್ದಾರೆ.

ಪರೀಕ್ಷಾ ಅಕ್ರಮ ಪ್ರಕರಣ ಸಿಐಡಿ ತನಿಖೆ

ಬೆಂಗಳೂರು,ನ.7-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ನಡೆಸಲಾದ ಪರೀಕ್ಷಾ ಅಕ್ರಮ ಕುರಿತು ಅಗತ್ಯಬಿದ್ದರೆ ಸಿಐಡಿ ತನಿಖೆ ನಡೆಸಲು ಸಿದ್ದ ಇರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಗೋಡೆ ಹಾರಿ ತಪ್ಪಿಸಿಕೊಂಡು ಹೋಗಲು ಅಧಿಕಾರಿಗಳೇ ಸಹಕರಿಸಿದ್ದಾರೆ.

ಆತ ಇರುವ ಬಗ್ಗೆ ಐಪಿಎಸ್ ಅಧಿಕಾರಿಯೇ ಮಾಹಿತಿ ನೀಡಿದರೂ ಬಂಧಿಸದೆ ನಾಪತ್ತೆಯಾಗಲು ನೆರವು ನೀಡಲಾಗಿದೆ ಎಂಬ ಕುರಿತು ತನಿಖೆ ನಡೆಸುತ್ತೇವೆ. ಯಾವುದೇ ಅಧಿಕಾರಿ ಶಾಮೀಲಾಗಿದ್ದರೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಸಿದರು.

ಈಗಾಗಲೇ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರ್.ಡಿ.ಪಾಟೀಲ್ ಹೆಸರು ಪದೇ ಪದೇ ಇಂಥ ಪ್ರಕರಣಗಳಲ್ಲಿ ಕೇಳಿಬರುತ್ತಿದೆ. ಇನ್ನು ಮುಂದೆ ಕಠಿಣ ಕ್ರಮ ಕೈಗೊಂಡು ಆರೋಪಿಗಳಿಗೆ ಭಯ ಹುಟ್ಟುವಂತೆ ಮಾಡಲಾಗುವುದು. ನಮ್ಮ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಅಕ್ರಮದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಗೃಹ ಇಲಾಖೆ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಅದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯ ಎಂದು ಸ್ಪಷ್ಟಪಡಿಸಿದರು. ತನಿಖೆ ಉತ್ತಮ ಹಾದಿಯಲ್ಲಿದೆ ಎಲ್ಲ ರೀತಿಯ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ.

ಒಂದು ವೇಳೆ ಸಿಐಡಿ ತನಿಖೆ ಅಗತ್ಯವಾದರೆ ಅದಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮಗೆ ಪ್ರಕರಣದಲ್ಲಿ ಸತ್ಯಾಂಶ ಗೊತ್ತಾಗಬೇಕು. ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುತ್ತಿದ್ದೇವೆ ಎಂದು ಹೇಳಿದರು.

ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರಿಕೆ

ಬೆಂಗಳೂರು,ನ.7- ಕಳೆದ ನಾಲ್ಕೈದು ದಿನಗಳಿಂದ ಚೇತರಿಕೆ ಕಂಡಿರುವ ಹಿಂಗಾರು ನಿನ್ನೆ ಸಂಜೆ ಹಾಗೂ ರಾತ್ರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಜಧಾನಿ ಬೆಂಗಳೂರು, ರಾಮನಗರ, ಮಂಡ್ಯ ಸೇರಿದಂತೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಉತ್ತಮ ಮಳೆಯಾಗಿದ್ದರೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ.

ಬೆಂಗಳೂರಿನ ಜಕ್ಕೂರಿನಲ್ಲಿ 164 ಮಿ.ಮೀನಷ್ಟು ಭಾರೀ ಮಳೆಯಾಗಿದೆ. ಉತ್ತರಕರ್ನಾಟಕ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲೂ ಮಳೆಯಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ ಚಿಕ್ಕಮಗಳೂರು, ದಕ್ಷಿಣ ಕನ್ನಡ, ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ನಿನ್ನೆ ಸಂಜೆ ಆರಂಭವಾದ ಮಳೆ ತಡರಾತ್ರಿಯವರೆಗೂ ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿದಿದೆ. ಇದರಿಂದ ರಸ್ತೆಗಳು ಕಾಲುವೆಗಳಂತೆ ನೀರು ತುಂಬಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿತ್ತು. ರಾಜ್ಯದ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಿರುವುದರಿಂದ ಸಣ್ಣ ಕೆರೆ-ಕಟ್ಟೆಗಳಿಗೂ ನೀರು ಬಂದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಲವೆಡೆ ಹಳ್ಳ-ಕೊಳ್ಳಗಳು ಕೂಡ ತುಂಬಿ ಹರಿದಿವೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿ ಗಾಳಿಯಿಂದಾಗಿ ರಾಜ್ಯದ ಒಳನಾಡಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹವಾಮಾನ ಮುನ್ಸೂಚನೆ ಪ್ರಕಾರ ಇನ್ನು ಮೂರು ದಿನಗಳ ಕಾಲ ಮಳೆ ನಿರೀಕ್ಷಿಸಬಹುದಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ತಜ್ಞರು ತಿಳಿಸಿದ್ದಾರೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ವಾಯುಭಾರ ಕುಸಿತವಾಗಿ ಮಾರ್ಪಡಾಗುವ ಸಾಧ್ಯತೆಗಳಿವೆ.

ಅಲ್ಲದೆ ಬಂಗಾಳಕೊಲ್ಲಿಯಲ್ಲಿ ಟ್ರಫ್ ನಿರ್ಮಾಣ ವಾಗಿರುವುದರಿಂದ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಕರಾವಳಿ ಹಾಗೂ ಮಳೆನಾಡು ಭಾಗದಲ್ಲಿ ಇಂದು ಸಂಜೆ ಹಾಗೂ ರಾತ್ರಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಅವರು ಹೇಳಿದ್ದಾರೆ.

ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ಸಂತಸವಾಗಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಅನುಕೂಲವಾಗಿದ್ದರೆ ಕೊಯ್ಲಿಗೆ ಬಂದಿದ್ದ ಮುಂಗಾರು ಬೆಳೆಗಳಿಗೆ ಹಾನಿ ಉಂಟಾಗಿದೆ.

ವಾಯು ಮಾಲಿನ್ಯ ಜನರ ಆರೋಗ್ಯ ಹತ್ಯೆಗೆ ಸಮ ; ಸುಪ್ರೀಂ ಕೋರ್ಟ್

ನವದೆಹಲಿ,ನ.7- ಉಸಿರುಗಟ್ಟಿಸುವ ಗಾಳಿಯ ಗುಣಮಟ್ಟವೂ ಜನರ ಆರೋಗ್ಯದ ಹತ್ಯೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ರಾಜಧಾನಿ ನವದೆಹಲಿಯ ವಾಯು ಮಾಲಿನ್ಯ ರಾಜಕೀಯ ಕದನವಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದ್ದು, ಉಸಿರುಗಟ್ಟಿಸುವ ಗಾಳಿಯ ಗುಣಮಟ್ಟವು ಜನರ ಆರೋಗ್ಯದ ಹತ್ಯೆಗೆ ಕಾರಣವಾಗಿದೆ ಎಂದು ಒತ್ತಿ ಹೇಳಿದೆ.

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

ನೆರೆಯ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣದಲ್ಲಿ ಬೆಳೆಗಳ ಅವಶೇಷಗಳನ್ನು ಸುಡುವುದು ಪ್ರತಿ ಚಳಿಗಾಲದಲ್ಲಿ ದೆಹಲಿಯ ವಾಯುಮಾಲಿನ್ಯದಲ್ಲಿ ಭಾರಿ ಏರಿಕೆಗೆ ಪ್ರಮುಖ ಅಂಶವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಬೆಳೆ ಸುಡುವುದು ಒಂದು ಪ್ರಮುಖ ಸಮಸ್ಯೆಯಾಗಿದೆ. ಅದನ್ನು ವಿಂಗಡಿಸಬೇಕಾಗಿದೆ. ನಂತರ ವಾಹನ ಮಾಲಿನ್ಯ ಇವುಗಳನ್ನು ಸರಿಪಡಿಸಿದ ನಂತರ ನ್ಯಾಯಾಲಯವು ಏನಾದರೂ ಮಾಡಬೇಕಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಕಾಂಗ್ರೆಸ್ ಜಾತಿಗಣತಿ ಮೋಡಿಗೆ ಮರುಳಾಗಬೇಡಿ : ಮಾಯಾವತಿ

ಅಶೋಕ್ ನಗರ, ನ.7- ಕಾಂಗ್ರೆಸ್ ಪಕ್ಷದ ಜಾತಿ ಗಣತಿ ಕಾರ್ಯಕ್ಕೆ ಜನ ಮರುಳಾಗಬಾರದು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಮನವಿ ಮಾಡಿಕೊಂಡಿದ್ದಾರೆ. ಇದೇ ನ.17 ರಂದು ನಡೆಯಲಿರುವ ಮಧ್ಯಪ್ರದೇಶದ ಚುನಾವಣೆ ಅಂಗವಾಗಿ ಅಶೋಕ್ ನಗರದಲ್ಲಿ ಆಯೋಜಿಸಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾತಿ ಗಣತಿಗಾಗಿ ಕಾಂಗ್ರೆಸ್‍ನ ಬೇಡಿಕೆಗೆ ಸಿಲುಕಿಕೊಳ್ಳಬೇಡಿ ಎಂದು ಜನರನ್ನು ಕೇಳಿಕೊಂಡಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡುವುದನ್ನು ಕಾಂಗ್ರೆಸ್ ವಿಳಂಬ ಮಾಡಿರುವ ಕಾಂಗ್ರೆಸಿಗರು ಮಾಡುತ್ತಿರುವ ಜಾತಿಯಾಧಾರಿತ ಜನಗಣತಿ ಮೋಡಿಗೆ ಮಾರುಹೋಗಬೇಡಿ ಎಂದು ಅವರು ಮನವಿ ಮಾಡಿಕೊಂಡರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಸ್ವಾತಂತ್ರ್ಯದ ನಂತರ, ಕಾಂಗ್ರೆಸ್ ಆಳ್ವಿಕೆಯಲ್ಲಿ, ಕಾಕಾ ಕಾಲೇಲ್ಕರ್ ಆಯೋಗ ಮತ್ತು ಮಂಡಲ್ ಆಯೋಗವು ಒಬಿಸಿಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿತು. ಆದರೆ ಕಾಂಗ್ರೆಸ್ ಕಾರ್ಯನಿರ್ವಹಿಸಲಿಲ್ಲ ಆದರೆ ಈಗ ಗೆಲುವಿಗಾಗಿ ಕಾಂಗ್ರೆಸ್ ಜಾತಿ ಗಣತಿ ಬಯಸುತ್ತಿದೆ ಎಂದಿದ್ದಾರೆ. ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಬಿಜೆಪಿ ಶೋಷಣೆ ಮಾಡಿದೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.

ಬಿಎಸ್‍ಪಿ ಮಧ್ಯಪ್ರದೇಶ ಚುನಾವಣೆಯಲ್ಲಿ ಗೊಂಡ್ವಾನಾ ಗಂತಂತ್ರ ಪಾರ್ಟಿ (ಜಿಜಿಪಿ) ಜೊತೆ ಮೈತ್ರಿ ಮಾಡಿಕೊಂಡು ತನ್ನ ಎಲ್ಲಾ ಶಕ್ತಿಯೊಂದಿಗೆ ಹೋರಾಡುತ್ತಿದೆ ಎಂದು ಅವರು ಹೇಳಿದರು.

ಕಸದ ಸಮಸ್ಯೆ ಉಲ್ಬಣ, ಸಾರ್ವಜನಿಕರ ಆಕ್ರೋಶ

ಬೆಂಗಳೂರು,ನ.7- ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ತಕ್ಷಣವೇ ಕಸ ಸುರಿಯುವುದನ್ನು ನಿಲ್ಲಿಸದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಸಾರ್ವಜನಿಕರು ಎಚ್ಚರಿಸಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿಟ್ಟಗಾನಹಳ್ಳಿ, ಕಣ್ಣೂರು, ಬಂಡೆಹೊಸೂರು ಸೇರಿದಂತೆ ಮತ್ತಿತರ ಕಡೆ ಬಿಬಿಎಂಪಿಯವರು ಪ್ರತಿದಿನ 500 ಟ್ರಕ್‍ಗಳಲ್ಲಿ ಕಸ ತಂದು ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೋಗರುಜನೆಗಳು ಆವರಿಸಿವೆ ಎಂದು ಸಾರ್ವಜನಿಕರು ದೂರಿದ್ದಾರೆ.

ಬಿಬಿಎಂಪಿಯು ಸಂಗ್ರಹಿಸುವ ಶೇ.90ರಷ್ಟು ಕಸವನ್ನು ಕಣ್ಣೂರು, ಮಿಟಗಾನಹಳ್ಳಿಯ ಕಲ್ಲು ಕ್ವಾರಿಯಲ್ಲಿ ಘನತ್ಯಾಜ್ಯವನ್ನು ತಂದು ಸುರಿಯುತ್ತಿರುವ ಪರಿಣಾಮ ಕುಡಿಯುವ ನೀರು ಕಲುಷಿತಗೊಂಡಿದ್ದು, ಅಂತರ್ಜಲದ ಮೇಲೂ ಪರಿಣಾಮ ಬೀರಿದೆ.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಇತ್ತೀಚಿನ ಕಳೆದ ಹಲವು ತಿಂಗಳಿನಿಂದ ಸಾರ್ವಜನಿಕರಿಗೆ ತಲೆನೋವು, ಮೈಕೈ ಅಲರ್ಜಿ, ಶೀತ, ನೆಗಡಿ, ಕೆಮ್ಮು ಸೇರಿದಂತೆ ಹಲವಾರು ರೋಗರುಜನೆಗಳು ಕಾಣಿಸಿಕೊಂಡಿದ್ದು, ಜನತೆ ಆತಂಕಗೊಂಡಿದ್ದಾರೆ. ಕಣ್ಣೂರು ಹಾಗೂ ಮಿಟಗಾನಹಳ್ಳಿಯ ಕಲ್ಲು ಕ್ವಾರಿಯಲ್ಲಿ ಬಿಬಿಎಂಪಿಯವರು ಸುರಿಯುತ್ತಿರುವ ಘನತ್ಯಾಜ್ಯದಿಂದ ಸುಮಾರು 300 ಕೋಟಿ ಲೀಟರ್ ಲಿಚಿಡ್ ಎಂಬ ವಿಷಕಾರಿ ರಾಸಾಯನಿಕ ನೀರು ಉತ್ಪತ್ತಿಯಾಗುತ್ತದೆ. ಇದರ ಒಂದು ಹನಿ ಭೂಮಿ ಮೇಲೆ ಬಿದ್ದರೆ ಮನುಷ್ಯನ ಆರೋಗ್ಯದ ಮೇಲೆ ಭಾರೀ ದುಷ್ಪರಿಣಾಮ ಬೀರುತ್ತದೆ ಎಂದು ಸ್ವತಃ ಪಾಲಿಕೆ ಅಧಿಕಾರಿಗಳೇ ಒಪ್ಪಿಕೊಳ್ಳುತ್ತಾರೆ.

2016ರಿಂದಲೂ ಇಲ್ಲಿ ಘನತ್ಯಾಜ್ಯವನ್ನು ಪಾಲಿಕೆ ಅಧಿಕಾರಿಗಳು ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಕೆರೆಗಳು ಕಲುಷಿತಗೊಂಡಿವೆ. ಈ ನೀರನ್ನು ಕುಡಿದು ಜಾನುವಾರುಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರಿದೆ. ಪ್ರತಿದಿನ ಕಸ ಸುರಿಯುತ್ತಿರುವುದರಿಂದ ದುರ್ನಾತ ಬೀರುತ್ತಿದ್ದು, ಜನತೆ ಮೂಗು ಮುಚ್ಚಿಕೊಂಡು ತಿರಗಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉಸಿರಾಡುವ ಗಾಳಿಯೂ ಕೂಡ ಕಲುಷಿತಗೊಂಡಿರುವುದರಿಂದ ಸಾರ್ವಜನಿಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಘನತ್ಯಾಜ್ಯವನ್ನು ತಂದು ಸುರಿಯಬೇಡಿ ಎಂದು ಸಾರ್ವಜನಿಕರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪಾಲಿಕೆ ಅಕಾರಿಗಳು ಸಬೂಬು ಉತ್ತರ ನೀಡಿ ಸಾಗ ಹಾಕುತ್ತಿದ್ದಾರೆ. ಸೋಮವಾರ ಮಾಜಿ ಸಚಿವ ಹಾಗೂ ಟಾಸ್ಕ್‍ಫೋರ್ಸ್ ಅಧ್ಯಕ್ಷ ಅರವಿಂದ ಲಿಂಬಾವಳಿ, ಕ್ಷೇತ್ರದ ಶಾಸಕಿ ಮಂಜುಳ, ಇಒ ವಸಂತಕುಮಾರ್, ಕಣ್ಣುರು ಪಂಚಾಯ್ತಿ ಅಧ್ಯಕ್ಷ ಅಶೋಕ್ ಗೌಡ ಸೇರಿದಂತೆ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿದ್ದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಇಲ್ಲಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವುದಾಗಿ ಭರವಸೆ ಕೊಟ್ಟಿದ್ದಾರೆ. ಘನತ್ಯಾಜ್ಯದಿಂದ ಉತ್ಪತ್ತಿಯಾಗುವ ಕೊಳಚೆ ನೀರನ್ನು ಸಮರ್ಪಕವಾಗಿ ಸಂಸ್ಕರಣೆ ಮಾಡುತ್ತಿಲ್ಲ.ಇದು ಕೆರೆಯೊಡಲು ಸೇರುತ್ತಿದ್ದು, ನೀರೆಲ್ಲ ಕಲುಷಿತಗೊಳ್ಳುತ್ತಿದೆ ಎಂದು ಸಾರ್ವಜನಿಕರು ತುಷಾರ್ ಗಿರಿನಾಥ್ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಕೂಡಲೇ ಘನತ್ಯಾಜ್ಯ ಸುರಿಯುವುದನ್ನು ನಿಲ್ಲಿಸಬೇಕು. ಭವಿಷ್ಯದಲ್ಲಿ ಇದು ಇನ್ನಷ್ಟು ಅನಾಹುತ ಉದ್ಘವಿಸುವ ಸಾದ್ಯತೆ ಇದೆ. ನಮ್ಮ ಮಕ್ಕಳು ಬದುಕಬೇಕಾದರೆ ಇಲ್ಲಿಗೆ ಶಾಶ್ವತ ಪರಿಹಾರವನ್ನು ರೂಪಿಸಬೇಕು ಇಲ್ಲದಿದ್ದರೆ ಹೋರಾಟ ನಡೆಸುವುದು ಅನಿವಾರ್ಯ ಎಂದು ಸಾರ್ವಜನಿಕರು ಎಚ್ಚರಿಕೆ ಕೊಟ್ಟಿದ್ದಾರೆ.

ಮಿಜೋರಾಂನಲ್ಲಿ ಬಿಜೆಪಿ ಜೊತೆ ಮೈತ್ರಿಯಿಲ್ಲ : ಝೋರಾಮ್‍ತಂಗ

ಐಜ್ವಾಲ್,ನ.7- ಆಡಳಿತಾರೂಢ ಎಂಎನ್‍ಎಫ್ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದರಿಂದ ಮಿಜೋರಾಂನಲ್ಲಿ ಹಂಗ್ ಅಸೆಂಬ್ಲಿ ಇರುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಝೋರಾಮ್‍ತಂಗ ಅವರು, ರಾಜ್ಯದಲ್ಲಿ ಬಿಜೆಪಿಯೊಂದಿಗೆ ತಮ್ಮ ಪಕ್ಷವು ಮೈತ್ರಿ ಹೊಂದಿಲ್ಲ ಆದರೆ, ಕೇಂದ್ರದಲ್ಲಿ ಎನ್‍ಡಿಎಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಝೋ ಬುಡಕಟ್ಟುಗಳನ್ನು ಒಗ್ಗೂಡಿಸುವ ನಮ್ಮ ಪ್ರಯತ್ನಗಳು ಪಕ್ಷಕ್ಕೆ ಚುನಾವಣಾ ಲಾಭವನ್ನು ತರುತ್ತವೆ ಎಂದು ಪ್ರತಿಪಾದಿಸಿದ ಅವರು, ಮ್ಯಾನ್ಮಾರ್, ಬಾಂಗ್ಲಾದೇಶ ಮತ್ತು ಮಣಿಪುರದಿಂದ ಪಲಾಯನ ಮಾಡುವ ಜನರು ತಮ್ಮ ಪಕ್ಷವು ಆಳುವ ಮಿಜೋರಾಂನಲ್ಲಿ ಸುರಕ್ಷಿತರಾಗಿದ್ದಾರೆ ಎಂದು ಹೇಳಿದರು.

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

40 ಸದಸ್ಯ ಬಲದ ಮಿಜೋರಾಂ ವಿಧಾನಸಭೆಗೆ ಬಿಗಿ ಭದ್ರತೆಯ ನಡುವೆ ಮತದಾನ ನಡೆಯುತ್ತಿದ್ದು, ಸಂಜೆ 4ರವರೆಗೆ ಮತದಾನ ನಡೆಯಲಿದೆ. ಐಜ್ವಾಲ್‍ನಲ್ಲಿ ಮತ ಚಲಾಯಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಝೋರಾಮ್‍ತಂಗ, ಹಣಕಾಸಿನ ಅಡಚಣೆಗಳ ಹೊರತಾಗಿಯೂ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಮತ್ತು ಉತ್ತಮ ಅಭ್ಯರ್ಥಿಗಳನ್ನು ಹಾಕುವಲ್ಲಿ ಪ್ರತಿಸ್ರ್ಪಧಿ ಪಕ್ಷಗಳ ವೈಫಲ್ಯ ಸೇರಿದಂತೆ ಹಲವಾರು ಅಂಶಗಳಿಂದಾಗಿ ತಮ್ಮ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್‍ಎಫ) ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿದರು.

ತಮ್ಮ ಪಕ್ಷವನ್ನು ಕೇಸರಿ ಪಕ್ಷದಿಂದ ದೂರವಿಡುವ ಪ್ರಯತ್ನದಲ್ಲಿ, ನಾವು ಕೇಂದ್ರದಲ್ಲಿ ಎನ್‍ಡಿಎ ಜೊತೆ ಪಾಲುದಾರರಾಗಿದ್ದೇವೆ ಮತ್ತು ನಮ್ಮ ಬೆಂಬಲವು ಪ್ರಾಥಮಿಕವಾಗಿ ಸಮಸ್ಯೆ ಆಧಾರಿತವಾಗಿದೆ. ರಾಜ್ಯದಲ್ಲಿ ನಾವು ಬಿಜೆಪಿಯೊಂದಿಗೆ ಯಾವುದೇ ಸಂಬಂಧ ಅಥವಾ ಮೈತ್ರಿ ಹೊಂದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ನಾವು ಅಧಿಕಾರವನ್ನು ಉಳಿಸಿಕೊಂಡರೆ, ಅಗತ್ಯವಿದ್ದಲ್ಲಿ ಪೂರ್ವನಿರ್ಮಿತ ಮನೆಗಳನ್ನು ನಿರ್ಮಿಸುವ ಮೂಲಕ ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ನಿರಾಶ್ರೀತರಿಗೆ ಮತ್ತು ಮಣಿಪುರದಿಂದ ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗೆ ಪುನರ್ವಸತಿ ಕಲ್ಪಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಝೋರಂತಂಗ ಹೇಳಿದರು.

ಅಮಿತ್ ಶಾಗೆ ಸವಾಲು ಹಾಕಿದ ಬಘೇಲ್

ನವದೆಹಲಿ,ನ.7-ಮಹಾದೇವ್ ಬೆಟ್ಟಿಂಗ್ ಆ್ಯಪ್ ಕುರಿತಂತೆ ಯಾವುದೇ ಚರ್ಚೆಗೆ ನಾನು ಸಿದ್ದ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬಿಜೆಪಿ ಪಂಥಾಹ್ವಾನ ನೀಡಿದ್ದಾರೆ. ಛತ್ತೀಸ್‍ಗಢ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗುತ್ತಿದ್ದಂತೆ ಮಹಾದೇವ್ ಆ್ಯಪ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಆಹ್ವಾನಕ್ಕೆ ಪ್ರತಿಕ್ರಿಯಿಸಿರುವ ಬಘೇಲ್, ತಮ್ಮ ಸರ್ಕಾರದ ಸಾಧನೆಗಳ ಕುರಿತು ಚರ್ಚೆಗೆ ಆಹ್ವಾನ, ದಿನಾಂಕ, ಸಮಯ ಮತ್ತು ಸ್ಥಳವನ್ನು ಹೆಸರಿಸಲು ಕೇಂದ್ರ ಗೃಹ ಸಚಿವರನ್ನು ಕೇಳಿಕೊಂಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ನಾನು ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ, ಅದೇ ಪಾಂಡರಿಯಾ ಅಸೆಂಬ್ಲಿಗೆ (ಆಸನ) ನೀವು ನನಗೆ (ನನ್ನ ಸರ್ಕಾರ ಮಾಡಿದ ಕೆಲಸದ ಬಗ್ಗೆ) ಚರ್ಚೆಗೆ ಹೋಗುತ್ತೇನೆ. ನೀವು ಇನ್ನೂ ವೇದಿಕೆ, ದಿನಾಂಕ ಮತ್ತು ಸಮಯವನ್ನು ಹೇಳಿಲ್ಲ. ಆದರೆ ಸಾರ್ವಜನಿಕರು ವೇದಿಕೆಯನ್ನು ಸಿದ್ಧಪಡಿಸಿದ್ದಾರೆ ಎಂದು ಬಘೆಲ್ ಹೇಳಿದರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಎರಡು ಆಸನಗಳ ಕಪ್ಪು ಸೋಫಾದ ಛಾಯಾಚಿತ್ರ – ಇಬ್ಬರು ನಾಯಕರ ಹೆಸರನ್ನು ಹೊಂದಿರುವ ಫಲಕಗಳಿರುವ ಚಿತ್ರ ಹಾಕಿ ದಯವಿಟ್ಟು ದಿನಾಂಕ ಮತ್ತು ಸಮಯವನ್ನು ನನಗೆ ತಿಳಿಸಿ… ಎಂದು ಅವರು ಎಕ್ಸ್ ಮಾಡಿದ್ದಾರೆ. ಆದರೆ, ಬಘೇಲ್ ಅವರ ಈ ಸವಾಲಿಗೆ ಅಮಿತ್ ಶಾ ಇನ್ನು ಪ್ರತಿಕ್ರಿಯೆ ನೀಡಿಲ್ಲ.

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಕೊಂದ ಕಾಮುಕ

ಭುವನೇಶ್ವರ, ನ.7 (ಪಿಟಿಐ) ಒಡಿಶಾ ರಾಜಧಾನಿ ಭುವನೇಶ್ವರದ ಕೊಳೆಗೇರಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಆಕೆಯ ಕತ್ತು ಸೀಳಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏರ್‍ಫೀಲ್ಡ ಪೊಲೀಸ್ ಠಾಣೆ ವ್ಯಾಪ್ತಿಯ ಸಮೀಪದ ಸುಂದರಪದ ಪ್ರದೇಶದ ಸಾಹಿಯಲ್ಲಿರುವ ತನ್ನ ಮನೆಯಲ್ಲಿ ಬಾಲಕಿ ಒಂಟಿಯಾಗಿದ್ದಾಗ ಈ ದುಷ್ಕøತ್ಯ ನಡೆಸಲಾಗಿದೆ.

ಸ್ಲಮ್‍ನ ನಿವಾಸಿಯಾಗಿರುವ ಆರೋಪಿಯು ಮನೆಗೆ ನುಗ್ಗಿ ಅಪರಾಧ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಲಸ ಮುಗಿಸಿ ಮರಳಿದ ಬಳಿಕ ಮನೆಯಲ್ಲಿ ಬಾಲಕಿ ಪತ್ತೆಯಾಗದಿದ್ದು, ತೀವ್ರ ಹುಡುಕಾಟ ನಡೆಸಿದ ಬಳಿಕ ಹಾಸಿಗೆಯ ಕೆಳಗೆ ಆಕೆಯ ಶವ ಪತ್ತೆಯಾಗಿದೆ ಎಂದು ಬಾಲಕಿಯ ಪೋಷಕರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯೊಂದಿಗೆ ಬಾಲಕಿ ಚಾಕೊಲೇಟ್ ಖರೀದಿಸಲು ತನ್ನ ಅಂಗಡಿಗೆ ಬಂದಿದ್ದಳು ಎಂದು ಸಮೀಪದ ಅಂಗಡಿ ಮಾಲೀಕರು ಹೇಳಿದ್ದಾರೆ. ಆರೋಪಿ ಆಕೆಯ ಮನೆಗೆ ಪ್ರವೇಶಿಸಿ ಹೊರಬರುವುದನ್ನು ಇತರ ಜನರು ಸಹ ನೋಡಿದ್ದಾರೆ ಎಂದು ಅವರು ಹೇಳಿದರು.

BREAKING : ಅಮೆರಿಕದ ಒತ್ತಡಕ್ಕೆ ಮಣಿದ ಇಸ್ರೇಲ್, ಯುದ್ಧದ ಅಲ್ಪ ವಿರಾಮಕ್ಕೆ ಒಪ್ಪಿಗೆ

ಆರೋಪಿ ಪತ್ತೆಗೆ ವಿಶೇಷ ದಳ ಶೋಧ ಆರಂಭಿಸಿದೆ ಎಂದು ಏರ್‍ಫೀಲ್ಡ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಅಶೋಕ್ ನಾಯಕ್ ತಿಳಿಸಿದ್ದಾರೆ. ಆರೋಪಿ ಒಬ್ಬನೇ ಅಪರಾಧ ಎಸಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ನಾಯಕ್ ಹೇಳಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವೈಜ್ಞಾನಿಕ ತಂಡವು ಸ್ಥಳದಿಂದ ಪುರಾವೆಗಳನ್ನು ಸಂಗ್ರಹಿಸಲಿದೆ ಎಂದು ಅವರು ಹೇಳಿದರು.