Home Blog Page 1836

ಪರೀಕ್ಷಾ ಅಕ್ರಮದಲ್ಲಿ 32 ಮಂದಿ ಸೆರೆ : ಸಚಿವ ಪ್ರಿಯಾಂಕ್ ಖರ್ಗೆ

ಕಲ್ಬುರ್ಗಿ,ನ.6- ಸರ್ಕಾರದ ವಿವಿಧ ಹುದ್ದೆಗಳಿಗೆ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ಸಂಬಂಧಪಟ್ಟಂತೆ ಕಲ್ಬುರ್ಗಿಯಲ್ಲಿ 13 ಜನ, ಯಾದಗಿರಿಯಲ್ಲಿ 19 ಮಂದಿಯನ್ನು ಬಂಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಅಕ್ರಮ ತಡೆಗೆ ಸಾಕಷ್ಟು ಮುಂಜಾಗ್ರತೆ ವಹಿಸಲಾಗಿತ್ತು. 24 ಗಂಟೆಗೂ ಮುನ್ನ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗಿತ್ತು. 200 ಮೀಟರ್ ಅಂತರದಲ್ಲಿ ವಾಹನ ನಿಲುಗಡೆ ನಿಷೇಧ, ಪ್ರತಿಯೊಂದು ವಸತಿ ಗೃಹ ಹಾಗೂ ವಾಹನಗಳ ತಪಾಸಣೆ, ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟಕ್ಟರ್ ಮತ್ತು ಹ್ಯಾಂಡ್‍ಹೆಲ್ಡ್ ಡಿಟಕ್ಟರ್‍ಗಳನ್ನು ಅಳವಡಿಸಲಾಗಿತ್ತು.

ಅದರ ಹೊರತಾಗಿಯೂ ಅಕ್ರಮ ನಡೆಸುವವರು ವಿಶೇಷವಾದ ಶರ್ಟ್‍ಗಳನ್ನು ಧರಿಸಿದ್ದಾರೆ. ಬ್ಲೂಟೂತ್ ಸಲಕರಣೆ ಅತ್ಯಂತ ಚಿಕ್ಕದಾಗಿದ್ದು, ಪತ್ತೆಹಚ್ಚಲು ಕಷ್ಟಸಾಧ್ಯವಾಗುವಂತೆ ಬಳಕೆ ಮಾಡಿದ್ದಾರೆ. ಆದರೂ ಪೊಲೀಸರು ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿಗಳು ತೀವ್ರ ತಪಾಸಣೆ ನಡೆಸಿದಾಗ ನಗರದಲ್ಲಿ ಒಂದು ಪ್ರಕರಣ, ಯಾದಗಿರಿಯಲ್ಲಿ ಮೂರ್ನಾಲ್ಕು ಕಡೆ ಅಕ್ರಮಗಳು ಪತ್ತೆಯಾಗಿವೆ. ಕಲ್ಬುರ್ಗಿಯಲ್ಲಿ 13, ಯಾದಗಿರಿಯಲ್ಲಿ 19 ಮಂದಿಯನ್ನು ಬಂಸಲಾಗಿದೆ ಎಂದು ತಿಳಿಸಿದರು.

CIC ಮುಖ್ಯಸ್ಥರಾಗಿ ನೇಮಕಗೊಂಡ ದೇಶದ ಮೊದಲ ದಲಿತ ಅಧಿಕಾರಿ

ಹಿಂದಿನ ಸರ್ಕಾರದ ಅವಧಿಯಲ್ಲಿ ಪರೀಕ್ಷಾ ಅಕ್ರಮಗಳ ತಡೆಗೆ ಮುಂಜಾಗ್ರತೆ ವಹಿಸಿರಲಿಲ್ಲ. ನಾವು ಬಿಗಿ ಕ್ರಮ ಕೈಗೊಂಡಿದ್ದರಿಂದಾಗಿ ಅಕ್ರಮಗಳು ಕಡಿಮೆಯಾಗಿವೆ. ಸಾಮಾನ್ಯವಾಗಿ ಪರೀಕ್ಷೆಗೆ ಶೇ.15ರಿಂದ 20ರಷ್ಟು ಜನ ಗೈರು ಹಾಜರಾಗುತ್ತಾರೆ. ಪರೀಕ್ಷಾ ಅಕ್ರಮ ನಡೆಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಈ ಬಾರಿ ಗೈರು ಹಾಜರಿಯ ಪ್ರಮಾಣ ಶೇ.40ರಷ್ಟಾಗಿದೆ ಎಂದು ಹೇಳಿದರು.

ಮೂಲಗಳ ಪ್ರಕಾರ ಪರೀಕ್ಷಾ ಅಕ್ರಮಗಳಲ್ಲಿ ಬಂತರಾಗಿರುವವರ ಪೈಕಿ ಶೇ.90ರಷ್ಟು ಅಫ್ಜಲಪುರ ತಾಲ್ಲೂಕಿನವರಾಗಿದ್ದಾರೆ. ಬಹುತೇಕ ಆರೋಪಿಗಳ ವಾಟ್ಸಪ್‍ಗೆ ಪರೀಕ್ಷೆಯ ಹಿಂದಿನ ದಿನ ಕರೆ ಬಂದಿದೆ. ಕೆಲವರು ಆ ಸಂಖ್ಯೆಯನ್ನು ಸರ್ಕಾರ್ ಎಂದು ಸೇವ್ ಮಾಡಿಕೊಂಡಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಜತೆಗೂ ಈ ಸಂಖ್ಯೆಯಲ್ಲಿ ಸಂವಹನ ನಡೆದಿರುವ ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಬ್ರೇಕ್

ಬೆಂಗಳೂರು, ನ.6- ಕಾಂಗ್ರೆಸ್‍ನ ಶಾಸಕರ ವಿದೇಶಿ ಪ್ರವಾಸ ಸದ್ಯಕ್ಕಿಲ್ಲ. ಮುಂದೆ ಅವಕಾಶ ಬಂದಾಗ ನೋಡೋಣ, ವರಿಷ್ಠರ ಗಮನಕ್ಕೆ ತಂದು ಪ್ರವಾಸ ಮಾಡುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾನಮನಸ್ಕರು ಸೇರಿದಾಕ್ಷಣ ಅದನ್ನು ಗುಂಪು ಅಥವಾ ಪಕ್ಷ ವಿರೋಧಿ ಚಟುವಟಿಕೆ ಎಂದು ಬಿಂಬಿಸಲಾಗುವುದಿಲ್ಲ. ಸದ್ಯಕ್ಕೆ ಕದನ ವಿರಾಮ ಜಾರಿಯಲ್ಲಿದೆ, ಎಲ್ಲವೂ ತಣ್ಣಗಿದೆ, ಬಹಳಷ್ಟು ಕೆಲಸ ಮಾಡಬೇಕಿದೆ ಎಂದರು.

ದಲಿತ ಮುಖ್ಯಮಂತ್ರಿ ವಿಚಾರ 2013ರಲ್ಲೂ ಚಾಲನೆಯಲ್ಲಿತ್ತು, ಐದು ವರ್ಷ ಪೂರ್ತಿ ಚರ್ಚೆಯಲ್ಲಿತ್ತು. ಕೊನೆಗೆ ಫಿಚ್ಚರ್ ರಿಲೀಸ್ ಆಗಲಿಲ್ಲ, ಹಾಗಿದೆ ನಮ್ಮ ಪರಿಸ್ಥಿತಿ. 2008ರಿಂದ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕು ಎಂದಿತ್ತು ಅವಕಾಶ ಸಿಗಲಿಲ್ಲ, ಪರಮೇಶ್ವರ್ ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಿಎಂ ಆಗಲಿಲ್ಲ. ಆ ಸಮುದಾಯದಲ್ಲಿ ಅವಕಾಶಕ್ಕಾಗಿ ಕೂಗು ಕೇಳಿ ಬರುತ್ತಲೇ ಇದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಬೇಕಿದೆ ಎಂದರು.

ವಾಲ್ಮಿಕಿ ಸಮುದಾಯದ ಸ್ವಾಮೀಜಿ ಯವರು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಯಾಗಬೇಕು ಎಂದು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದಾರೆ. ಸಮುದಾಯದ ಸಭೆ ನಡೆದಾಗಲೆಲ್ಲಾ ಈ ವಿಚಾರ ಚರ್ಚೆಯಾಗುತ್ತದೆ. ಅದೇ ರೀತಿ ದಲಿತರಲ್ಲಿ, ಲಿಂಗಾಯಿತರಲ್ಲಿ, ಒಕ್ಕಲಿಗರಲ್ಲೂ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆ ಇದೆ. ಅದೇ ರೀತಿ ನನ್ನ ಹೆಸರು ರೇಸ್‍ನಲ್ಲಿ ಇದೆ, ಅದರಲ್ಲಿ ವಿಶೇಷವೇನು ಇಲ್ಲ ಎಂದರು.

ಮುಖ್ಯಮಂತ್ರಿಯವರು ಕರೆದಿದ್ದ ಉಪಹಾರ ಕೂಟದಲ್ಲಿ ಭಾಗವಹಿಸಲು ಆಗಲಿಲ್ಲ. ಅಂದು ನನಗೆ ಆರೋಗ್ಯ ಸರಿ ಇರಲಿಲ್ಲ, ಹಾಗಾಗಿ ಭಾಗವಹಿಸಲಿಲ್ಲ. ಸಭೆಯಲ್ಲಿ ಇರಲಿಲ್ಲ ಎಂದಾಕ್ಷಣ ನಾವು ಹೊರಗಿದ್ದೇವೆ ಎಂದರ್ಥವಲ್ಲ. ಏನೇ ತೀರ್ಮಾನವಾದರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ, ತೀರ್ಮಾನಗಳನ್ನು ಪಾಲನೆ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‍ನಲ್ಲಿ ಎರಡು ಮೂರು ಶಕ್ತಿ ಕೇಂದ್ರಗಳು ಇವೆ ಎಂಬುದು ವದ್ಧಂತಿ ಮಾತ್ರ. ನಮ್ಮಲ್ಲಿ ಇರುವುದು ಒಂದೇ ಶಕ್ತಿ ಕೇಂದ್ರ, ಅದು ದೆಹಲಿಯಲ್ಲಿದೆ. ಅಧಿಕಾರ ಹಂಚಿಕೆಯ ಬಗ್ಗೆ ಯಾರು ಚರ್ಚೆ ಮಾಡಬಾರದು ಎಂಬದಕ್ಕೆ ಎಲ್ಲರೂ ಬದ್ಧರಾಗಿಬೇಕಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಪಂಚರಾಜ್ಯಗಳ ಚುನಾವಣಾ ಪ್ರಚಾರದಲ್ಲಿ ರಾಜಕೀಯ ಕಾರಣಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ ಲೂಟಿ ಮಾಡುತ್ತಿದೆ ಎಂದು ಪ್ರಧಾನಿ ಮಾಡಿರುವ ಆರೋಪದಲ್ಲಿ ಹುರುಳಿಲ್ಲ, ಹಿಂದೆ ನಾವು ಬಿಜೆಪಿ ಸರ್ಕಾರದ ವಿರುದ್ಧ ಶೇ.40ರಷ್ಟು ಕಮಿಷನ್ ಪಡೆದ ಹಾಗೂ ಪೇ ಸಿಎಂ ಆರೋಪ ಮಾಡಿದ್ದೇವು. ಪ್ರಧಾನಿಯವರು ಅದನ್ನು ಒಪ್ಪಿಕೊಳ್ಳುತ್ತಾರೆಯೇ, ರಾಜಕೀಯದಲ್ಲಿ ಆರೋಪ ಮಾಡುವುದು ಸುಲಭ ಸಾಬೀತು ಪಡಿಸುವುದು ಕಷ್ಟ ಎಂದು ಪ್ರಶ್ನಿಸಿದರು.

ರಾಜಕೀಯದಲ್ಲಿ ಮಾತನಾಡುವವರಿಗೆ ಪ್ರಾಮುಖ್ಯತೆ ಸಿಗಬಾರದು. ಟಿವಿ ಮುಂದೆ ಬಂದವರು ಮಾತ್ರವೇ ನಾಯಕರಲ್ಲ. ಮಾತನಾಡದವರಿಗೂ ಅವಕಾಶಗಳು ಸಿಗಬೇಕು. ಕೆಲವರಿಗೆ ಪ್ರಾಕ್ಟಿಕಲ್ ಗೋತ್ತಿರುತ್ತದೆ, ಇನ್ನೂ ಕೆಲವರಿಗೆ ಥಿಯೆರಿ ಗೋತ್ತಿರುತ್ತದೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಎಂದರು.

ಜಾತಿ ಜನಗಣತಿ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಸಬೇಕಿದೆ. ಬಳಿಕ ಸಂಪುಟದಲ್ಲಿ ಚರ್ಚೆಯಾಗಬೇಕು. ಒಮ್ಮೇಲೆ ಒಪ್ಪಿಕೊಳ್ಳುವುದಿಲ್ಲ. ವಿಧಾನಮಂಡಲದ ಉಭಯ ಸದನಗಳಲ್ಲೂ ಚರ್ಚೆಯಾಗಬೇಕು. ಅಲ್ಲಿ ಸಮುದಾಯಗಳವಾರು ಇರುವ ಆಕ್ಷೇಪಗಳನ್ನು ಹೇಳಬಹುದಾಗಿದೆ, ಸರಿ ಇದ್ದರೆ ಒಪ್ಪಿಕೊಳ್ಳಬಹುದು, ಇಲ್ಲವಾದರೆ ಮರು ಸಮೀಕ್ಷೆ ನಡೆಸಬಹುದು ಎಂದರು.

ಪ್ಲಾಟ್‍ಫಾರ್ಮ್ ಮೇಲೆ ಬಸ್ ಉರುಳಿ ಇಬ್ಬರ ಸಾವು

ಎಂಟು ವರ್ಷಗಳ ಹಿಂದೆ ನಡೆಸಿದ ಸಮೀಕ್ಷೆ ಸರಿಯಾಗಿತ್ತು. ಜನಗಣತಿ ವರದಿಗಳನ್ನು ಸಾಮಾನ್ಯವಾಗಿ ಐದಾರು ವರ್ಷಗಳ ಹಿಂದಿನದವುಗಳನ್ನೇ ಪರಿಗಣಿಸಲಾಗುತ್ತದೆ. ಒಕ್ಕಲಿಗ, ಲಿಂಗಾಯಿತ ಸಮುದಾಯಕ್ಕೆ ತಮ್ಮ ಜನಸಂಖ್ಯೆ ಕಡಿಮೆ ತೋರಿಸಲಾಗಿದೆ ಎಂಬ ಆತಂಕ ಇದೆ, ಉಪಜಾತಿಗಳನ್ನು ಕೈ ಬಿಡಲಾಗಿದೆ ಎಂಬ ಆಕ್ಷೇಪ ಇದೆ.

ಈಗಲೂ ಉಪಜಾತಿಗಳನ್ನು ಸೇರಿಸಿ ಲೆಕ್ಕ ಮಾಡಬಹುದು. ವರದಿ ಜಾರಿಯಾದರೆ ರಾಜಕೀಯವಾಗಿ ಮಹತ್ವದ ಬದಲಾವಣೆಯೇನು ಆಗುವುದಿಲ್ಲ. ಹೆಚ್ಚೆಂದರೆ ಜನಸಂಖ್ಯೆಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ರೂಪಿಸಬಹುದು. ಬಹಳಷ್ಟು ಸಣ್ಣಪುಟ್ಟ ಜಾತಿಗಳು ಪರಿಗಣನೆಯಾಗಿ ಉಳಿದಿಲ್ಲ. ಎಸ್‍ಸಿ ಎಂದರೆ ನಾಲ್ಕೈದು ಜಾತಿ, ಪರಿಶಿಷ್ಟ ಪಂಗಡ ಎಂದರೆ ಮೂರ್ನಾಲ್ಕು ಸಮುದಾಯಗಳ ಹೆಸರುಗಳಷ್ಟೆ ಕೇಳಿ ಬರುತ್ತವೆ.

50 ಸಾವಿರ, ಲಕ್ಷದಷ್ಟು ಜನಸಂಖ್ಯೆ ಹೊಂದಿರುವ ಬಹಳಷ್ಟು ಸಮುದಾಯಗಳು ಪರಿಗಣನೆಗೆ ಒಳಗಾಗುತ್ತಿಲ್ಲ. ಈ ಕಾರಣಕ್ಕಾಗಿ ಜಾತಿ ಜನಗಣತಿ ವರದಿ ಚರ್ಚೆಯಾಗಿ ದಾಖಲೆಯಾಗಿ ಉಳಿಯಬೇಕು, ವರದಿಯಿಂದ ಸಾಮಾಜಿಕ ನ್ಯಾಯ ಸಿಗಲಿದೆ ಎಂಬ ನಂಬಿಕೆ ಇದೆ, ಅದರಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದರು.

ರೈತರ ಪಂಪ್ ಸೆಟ್‍ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ

ಬೆಂಗಳೂರು,ನ.6- ರಾಜ್ಯದಲ್ಲಿ ಸೃಷ್ಟಿಯಾಗಿರುವ ವಿದ್ಯುತ್ ಅಭಾವವನ್ನು ನೀಗಿಸಲು 1500 ಕೋಟಿ ರೂ.ಗಳ ಅಗತ್ಯವಿದ್ದು, ಅದನ್ನು ಅನುದಾನದ ಉಳಿತಾಯ ಹಾಗೂ ಮರು ಹಂಚಿಕೆ ಮೂಲಕ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ ಮತ್ತು ಪೂರೈಕೆ ನಡುವಿನ ವ್ಯತ್ಯಾಸದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ರಾಜ್ಯದಾದ್ಯಂತ ಐಪಿ ಸೆಟ್‍ಗಳಿಗೆ ನಿರಂತರ ಏಳು ಗಂಟೆಗಳ ಅವಧಿಗೆ ವಿದ್ಯುತ್ ಒದಗಿಸಲು ಗಂಟೆಗೆ 600 ಮೆಗಾವ್ಯಾಟ್ ಹಾಗೂ ಪ್ರತಿದಿನಕ್ಕೆ 14 ಮಿಲಿಯನ್ ಯುನಿಟ್‍ಗಳ ಅಗತ್ಯವಿದೆ. ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಪ್ರತಿದಿನ ಏಳು ತಾಸು ವಿದ್ಯುತ್ ನೀಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಯಿತು.

2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ.45ರಷ್ಟು ಹೆಚ್ಚಿದೆ.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಕೃಷಿ ಬಳಕೆಯಲ್ಲಿ ಶೇ. 55ರಿಂದ 119 ರಷ್ಟು ಹೆಚ್ಚಳವಾಗಿದೆ. ಇತರ ವಿಭಾಗಗಳಲ್ಲಿ ಶೇ. 9 ರಿಂದ 14 ರಷ್ಟು ಹೆಚ್ಚಳವಾಗಿದೆ. ಮಳೆ ಕೊರತೆ, ವಾಡಿಕೆಗಿಂತ ಮೊದಲೇ ಐಪಿ ಸೆಟ್ ಗಳ ಬಳಕೆ ಪ್ರಾರಂಭವಾಗಿರುವುದು ಹಾಗೂ ಕೋವಿಡ್ 19 ರ ನಂತರದ ಆರ್ಥಿಕ ಪುನಶ್ಚೇತನ ಇದಕ್ಕೆ ಕಾರಣವಾಗಿದೆ ಎಂದರು.ಕಳೆದ ಬಾರಿ ಪ್ರಗತಿ ಪರಿಶೀಲನೆಯ ನಂತರ ರಾಯಚೂರು, ಬಳ್ಳಾರಿ ಉಷ್ಣವಿದ್ಯುತ್ ಸ್ಥಾವರಗಳ ಉತ್ಪಾದನೆ ಹೆಚ್ಚಾಗಿದೆ.

ಉತ್ತರ ಪ್ರದೇಶ, ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಂದ ವಿದ್ಯುತ್ ಪಡೆಯಲಾಗುತ್ತಿದೆ ಎಂದು ತಿಳಿಸಿದರು.
ಸೆಕ್ಷನ್ 11 ಅಡಿ ಬೇರೆ ರಾಜ್ಯಗಳಿಗೆ ವಿದ್ಯುತ್ ನೀಡದಂತೆ ಆದೇಶ ಹೊರಡಿಸಿ, ವಿದ್ಯುತ್ ಪಡೆಯಲಾಗುತ್ತಿದೆ. ಆ ಮೂಲಕ ವಿದ್ಯುತ್ ವಿತರಣೆ ಸಹಜ ಸ್ಥಿತಿಗೆ ಬಂದಿದೆ. ನೋಡಲ್ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ ಎಂದರು.

ವಿವಿಧ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯಲ್ಲಿ ರೈತರ ಅಗತ್ಯತೆಗನುಗುಣವಾಗಿ ಐದರಿಂದ ಏಳು ಗಂಟೆಗಳ ಅವಗೆ ನಿರಂತರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ವಿವರಿಸಲಾಗಿದೆ.
ಮುಂದಿನ ವರ್ಷದಲ್ಲಿ ಐಪಿ ಸೆಟ್‍ಗಳಿಗೆ ವಿದ್ಯುತ್ ಪೂರೈಕೆಯನ್ನು ಸೌರವಿದ್ಯುತ್ ಮೂಲದಿಂದ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮುಂದಿನ ವರ್ಷದ ವೇಳೆಗೆ ಹಗಲು ವೇಳೆಯಲ್ಲಿಯೇ ರೈತರಿಗೆ ವಿದ್ಯುತ್ ನೀಡಲು ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಭಾಗವಹಿಸಿದ್ದರು.

ಪ್ರತಿ ತಿಂಗಳು 20ರೊಳಗೆ ಸಂದಾಯವಾಗಲಿದೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆ ಹಣ

ಬೆಂಗಳೂರು,ನ.6- ರಾಜ್ಯ ಸರ್ಕಾರದ ಬಹುನಿರೀಕ್ಷಿತ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳಿಗೆ ಪ್ರತಿ ತಿಂಗಳ 20ರೊಳಗೆ ಹಣ ಸಂದಾಯ ಮಾಡುವುದಾಗಿ ಆರ್ಥಿಕ ಇಲಾಖೆ ತಿಳಿಸಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಜಾರಿಗೊಳಿಸುತ್ತಿರುವ ಅನ್ನಭಾಗ್ಯಯೋಜನೆಯಲ್ಲಿ ಅಕ್ಕಿ ಬದಲಾಗಿ ನಗದು ಪಾವತಿ ಸಲಾಗುತ್ತಿದೆ. ಅದನ್ನು ತಿಂಗಳ ಆರಂಭದ 10ರಿಂದ 15ರೊಳಗೆ ಪಾವತಿಸಬೇಕು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಪಡಿತರಚೀಟಿ ಹೊಂದಿರುವ ಪ್ರತಿ ಕುಟುಂಬದ ಮನೆಯ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ನಗದನ್ನು ಏಕೀಕೃತ ನೇರ ನಗದು ರೂಪದಲ್ಲಿ ವರ್ಗಾವಣೆ ಮಾಡಲಾಗುತ್ತಿದ್ದು ಅದನ್ನು 15ರಿಂದ 20ರೊಳಗೆ ಪಾವತಿಸಬೇಕಿದೆ. ಈ ಎರಡೂ ಯೋಜನೆಗಳಿಗೂ ಆರ್ಥಿಕ ಇಲಾಖೆ ಪ್ರತಿ ತಿಂಗಳ 20ರೊಳಗೆ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿಸಲಾಗಿದೆ.

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಯಡಿ ನೀಡಲಾಗುತ್ತಿರುವ ಹಲವಾರು ಮಾಸಾಶನಗಳನ್ನು 1ರಿಂದ 5ನೇ ತಾರೀಖಿನೊಳಗೆ ಪಾವತಿ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ತಿಳಿಸಲಾಗಿದೆ. ಪ್ರತಿ ಕಲ್ಯಾಣ ಯೋಜನೆಯ ಹಾಗೂ ಸಬ್ಸಿಡಿ ಸ್ಕೀಮ್‍ಗಳಲ್ಲಿ ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆಗಳ ಜೋಡನೆ ಮಾಡಿ ಡಿಬಿಟಿ ಮೂಲಕ ಅಡೆತಡೆ ಇಲ್ಲದೆ ಹಣ ಪಾವತಿಸಲಾಗುತ್ತಿದೆ.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಸರ್ಕಾರ ನೌಕರರ ವೇತನ ಪಾವತಿ ಸಮಯದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಬಿಲ್‍ಗಳನ್ನು ಪಾವತಿಸಬೇಕಾದರೆ ಒತ್ತಡ ಹೆಚ್ಚಾಗುತ್ತದೆ. ಡಿಬಿಟಿಯಲ್ಲಿ ವಿಳಂಬವಾಗುತ್ತಿದೆ. ಪ್ರತಿ ಕಡತದ ಪರಿಶೀಲನೆಗೂ ವಿಳಂಬವಾಗುತ್ತದೆ ಎಂದು ವಿವರಿಸಲಾಗಿದೆ.

ಪಾವತಿ ಮತ್ತು ವಿತರಣೆ ವ್ಯವಸ್ಥೆಗಳ ನಡುವೆ ಸಮನ್ವಯೀಕರಣ ಅಗತ್ಯವಿದೆ ಗೃಹಲಕ್ಷ್ಮಿ, ಅನ್ನಭಾಗ್ಯಮತ್ತು ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳ ಸಂಖ್ಯೆಹೆಚ್ಚಾಗಿದೆ. ಆದ್ದರಿಂದ ಆರ್ಥಿಕ ಇಲಾಖೆಯ ಖಜಾನೆ ಘಟಕಕ್ಕೆ ಫಲಾನುಭವಿಗಳ ಪಟ್ಟಿಯನ್ನು ನಿಗದಿತ ಅವಯೊಳಗೆ ತಲುಪಿಸಬೇಕು. ಸದರಿ ಬಿಲ್‍ಗಳನ್ನು ಸೃಷ್ಟಿಸಿ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಬಸ್ ಪ್ರಯಾಣ ದರ ಏರಿಕೆ ಸದ್ಯಕ್ಕಿಲ್ಲ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ನ.6-ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ನಾಲ್ಕು ಸಾರಿಗೆ ನಿಗಮಗಳನ್ನು ಆರ್ಥಿಕವಾಗಿ ಸ್ವಾಲಂಬಿಯಾಗಿ ರೂಪಿಸಲು ಅಧ್ಯಯನ ನಡೆಸಿ ವರದಿ ನೀಡುವಂತೆ ಸರ್ಕಾರದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಎಂ.ಆರ್.ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದರು. ಸಮಿತಿ ಹಲವು ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಆಗಿನ ಮುಖ್ಯಮಂತ್ರಿಯವರಿಗೂ ನೀಡಿದೆ. ತಾವು ಸಚಿವರಾದ ಮೇಲೆ ತಮಗೂ ತಲುಪಿಸಿದೆ ಎಂದು ಹೇಳಿದರು.

ಸಮಿತಿಯ ಶಿಫಾರಸ್ಸಿನಲ್ಲಿ ಪ್ರಮುಖವಾಗಿ ಪ್ರಯಾಣ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಸಮಿತಿ ಮಾದರಿಯಲ್ಲಿ ಪ್ರತ್ಯೇಕವಾದ ಸ್ವಾಯತ್ತ ಸಮಿತಿ ರಚಿಸುವಂತೆ ಶಿಫಾರಸ್ಸು ಮಾಡಲಾಗಿದೆ. 2015ರಲ್ಲಿ ದರ ಪರಿಷ್ಕರಣೆಯಾಗಿತ್ತು. ಆ ವೇಳೆ ಡೀಸೆಲ್ ಬೆಲೆ 50ರಿಂದ 60 ರೂ.ನಷ್ಟಿತ್ತು. ಈಗ ತೀವ್ರವಾಗಿ ಏರಿಕೆಯಾಗಿದೆ. ಸಾರಿಗೆ ಸಿಬ್ಬಂದಿಗಳ ವೇತನ 2017 ಮತ್ತು 2022ರಲ್ಲಿ ಪರಿಷ್ಕರಣೆಯಾಗಿದೆ.

ಬಿಡಿಭಾಗಗಳ ಬೆಲೆ ಕೂಡ ಹೆಚ್ಚಾಗಿದೆ. ಆದರೂ ಯಾವುದೇ ಸರ್ಕಾರಗಳು ಬಸ್ ಪ್ರಯಾಣ ದರ ಪರಿಷ್ಕರಣೆಗೆ ಅನುಮತಿ ನೀಡುತ್ತಿಲ್ಲ. ಹೀಗೇ ಆದರೆ ಸಾರಿಗೆ ನಿಗಮಗಳು ಶಾಶ್ವತವಾಗಿ ನಷ್ಟದಲ್ಲಿರಬೇಕಾಗುತ್ತದೆ. ಆ ಕಾರಣಕ್ಕೆ ದರ ಪರಿಷ್ಕರಣೆಗೆ ಸ್ವಾಯತ್ತವಾಗಿ ನಿರ್ಣಯ ಕೈಗೊಳ್ಳುವ ಸಮಿತಿ ರಚಿಸುವಂತೆ ಶ್ರೀನಿವಾಸ್‍ಮೂರ್ತಿಯವರು ಶಿಫಾರಸ್ಸು ಮಾಡಿದ್ದಾರೆ.

“ಭಾರತ-ಕೆನಡಾ ಮುನಿಸು ಸದ್ಯಕ್ಕೆ ಮುಗಿಯಲ್ಲ”

ಆ ವರದಿ ಸರ್ಕಾರದ ಮುಂದಿದೆ. ಮುಖ್ಯಮಂತ್ರಿ ಹಾಗೂ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ ನಮ್ಮ ಮುಂದೆ ದರ ಏರಿಕೆಯ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. ರಾಜ್ಯದಲ್ಲಿರುವ 25 ಸಾವಿರ ಹಳ್ಳಿಗಳ ಪೈಕಿ 300ರಿಂದ 400 ಗ್ರಾಮಗಳನ್ನು ಹೊರುತಪಡಿಸಿ ಉಳಿದೆಲ್ಲ ಕಡೆ ಬಸ್ ಸೇವೆ ಒದಗಿಸಲಾಗುತ್ತಿದೆ. ನಷ್ಟವಾದರೂ ಕೂಡ ಜನರಿಗೆ ಸೇವೆ ನೀಡಬೇಕು ಎಂಬ ಕಾರಣಕ್ಕೆ ಸರ್ಕಾರ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಮುಂದುವರೆಸುತ್ತದೆ.ಇದರಿಂದಾಗಿ ನಷ್ಟ ಸಹಜ. ಖಾಸಗಿ ಸಾರಿಗೆಯವರು ನಷ್ಟವಾಗುವ ಕಡೆ ಬಸ್ ಸೇವೆ ಒದಗಿಸುವುದಿಲ್ಲ ಎಂದರು.

ಬಿಬಿಎಂಪಿಗೆ ಚುನಾವಣೆ ನಡೆಸಲು ಎಲ್ಲ ರೀತಿಯ ತಯಾರಿಗಳಾಗಿವೆ. ಆದರೆ ಹಿಂದುಳಿದ ವರ್ಗಗಳ ಮೀಸಲಾತಿ ವಿಷಯ ಇತ್ಯರ್ಥವಾಗದ ಹಿನ್ನಲೆಯಲ್ಲಿ ವಿಳಂಬವಾಗುತ್ತಿದೆ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಹಾರಾಷ್ಟ್ರದವರು ಹಿಂದುಳಿದ ವರ್ಗಗಳ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಿದ್ದಾರೆ. ಮಧ್ಯಪ್ರದೇಶದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಮೀಸಲಾತಿ ನೀಡಲಾಗಿದೆ. ನಮ್ಮಲ್ಲಿ ಕಾಂತರಾಜು ಆಯೋಗದ ವರದಿ ಸಲ್ಲಿಕೆಯಾದ ಬಳಿಕ ಹಿಂದುಳಿದ ಸಮುದಾಯಗಳ ಜನಸಂಖ್ಯೆ ಎಷ್ಟು ಎಂಬುದು ಗೊತ್ತಾಗಲಿದೆ. ಅದನ್ನು ಆಧರಿಸಿ ಮೀಸಲಾತಿ ನೀಡಬಹುದು.

ಪ್ರಸ್ತುತ ಸಂದರ್ಭದಲ್ಲಿ ಒಬಿಸಿ ಮೀಸಲಾತಿ ಇಲ್ಲದೆ ಬಿಬಿಎಂಪಿ ಚುನಾವಣೆ ನಡೆಸಬೇಕಾಗುತ್ತದೆ. ಅದು ಸಾಧ್ಯವಿಲ್ಲ. ಈ ತಿಂಗಳೊಳಗೆ ಒಬಿಸಿ ಮೀಸಲಾತಿ ವಿಷಯ ಇತ್ಯರ್ಥವಾದರೆ ಒಂದು ತಿಂಗಳೊಳಗೆ ಚುನಾವಣೆ ನಡೆಸಲು ಆಯೋಗ ಸಿದ್ದವಿದೆ ಎಂದರು.

ಬರಕ್ಕಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಸರ್ಕಾರಕ್ಕೆ ದೊಡ್ಡ ಸಂಕಷ್ಟವಾಗಿದೆ : ಹೆಚ್‌ಡಿಕೆ

ಬೆಂಗಳೂರು,ನ.6- ನಾವು ಹಮ್ಮಿಕೊಳ್ಳಲಿರುವ ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್-ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಎಂದು ಕಾಲೆಳೆದಿದ್ದಾರೆ.

ಅಲ್ಲದೆ, ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ವ್ಯಂಗ್ಯವಾಡಿದ್ದಾರೆ.

ರೈತ ಸಾಂತ್ವನ ಯಾತ್ರೆಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರ್ಕಾರ ಹೇಗೆ ಸ್ಪಂದಿಸುತ್ತಿದೆ, ಅದಕ್ಕೆ ನಿಮ್ಮ ನೇತೃತ್ವದ ಸರ್ಕಾರ ಎಷ್ಟು ಗಂಭೀರ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರ್ಕಾರ ದ ಅಪರಿಮಿತ ಅಸಡ್ಡೆಯನ್ನು ಅರಿಯದಷ್ಟು ಮುಗ್ಧನೇ ನಾನು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ ಅಲ್ಲವೇ ಎಂದು ಅವರು ಕುಟುಕಿದ್ದಾರೆ.

236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮËಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿ ವಿಶ್ವವಿಖ್ಯಾತ ವಿತ್ತತಜ್ಞರಾಗಿ ಮೆರೆಯುತ್ತಿರುವವರು ನೀವು. ಅಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ಜೋಪಾನ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರ್ಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.

ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೆ ೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು ಎಂದುಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿನ್ನರ್-ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಕೊಂಡು ಆಪರೇಷನ್ ಹಸ್ತದ ಬಗ್ಗೆಯೇ ನಿಮ್ಮ ಸಚಿವರ ಬಳಿ ಅಲವತ್ತುಕೊಳ್ಳುತ್ತಿದ್ದೀರಿ. ಪಂಚರಾಜ್ಯಗಳಿಗೆ ಹಣ ಹೊಂಚಲು ರಾಜ್ಯವನ್ನು ದೋಚುವುದು ಹೇಗೆಂದು ಗುಟ್ಟು ಗುಟ್ಟಾಗಿ ಪಾಠ ಮಾಡುತ್ತಿದ್ದೀರಿ. ಜೆಡಿಎಸ್, ಬಿಜೆಪಿ ಶಾಸಕರು ಹಾಗೂ ಸೋತ ಅಭ್ಯರ್ಥಿಗಳನ್ನು ಆಪರೇಷನ್ ಮಾಡಲು ಗುಳ್ಳೆನರಿಗಳಂತೆ ಅವರ ಮನೆಗಳ ಮುಂದೆ ಕತ್ತಲಾದ ಮೇಲೆ ಹೊಂಚು ಹಾಕಿ ಕೂರುತ್ತಿದ್ದೀರಿ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ

ಕುತ್ತಿಗೆಗೆ ಗ್ಯಾರಂಟಿ ಬೋರ್ಡ್ ಹಾಕಿಕೊಂಡು ಹಾದಿ-ಬೀದಿಯಲ್ಲಿ ಓಡಾಡುತ್ತಿದ್ದೀರಿ. ಐದು ತಿಂಗಳಿಗೇ ಭದ್ರತೆಯ ಗ್ಯಾರಂಟಿ ಇಲ್ಲದೆ ಬಾಲಗ್ರಹಪೀಡಿತ ನಿಮ್ಮ ಸರ್ಕಾರ ಭಿನ್ನಮತಪೀಡಿತವಾಗಿದೆ. ಕುರ್ಚಿ ಉಳಿಸಿಕೊಳ್ಳಲು ನೀವೂ ಹೆಣಗಾಡುತ್ತಿದ್ದೀರಿ. ಹೌದಲ್ಲವೇ? ಉತ್ತರ ನೀಡಿ ಸನ್ಮಾನ್ಯ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು,ನ.6- ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚನೆ ನೀಡಿದ್ದಾರೆ.

ದೆಹಲಿಯ ಬಿ, ಸಿ ಗ್ರೂಪ್ ನೌಕರರಿಗೆ ದೀಪಾವಳಿ ಬೋನಸ್ ಘೋಷಣೆ

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವಂತೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಭಯೋತ್ಪಾದನೆ ನಿಗ್ರಹಕ್ಕೆ ಸೇನೆಯಿಂದ AI ತಂತ್ರಜ್ಞಾನ ಅಳವಡಿಕೆ

ನವದೆಹಲಿ,ನ.6- ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ ದೇಶದ ಗಡಿಯೊಳಗೆ ನುಗ್ಗಲು ಭಯೋತ್ಪಾದಕರಿಗೆ ಉತ್ತೇಜಿಸುವ ಪಾಕಿಸ್ತಾನಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಲ್ಲದೇ ಪದೇ ಪದೇ ಗಡಿಯಲ್ಲಿ ಸಮಸ್ಯೆ ಹುಟ್ಟು ಹಾಕಿ ಕಾಲು ಕೆದರಿ ಜಗಳಕ್ಕೆ ನಿಲ್ಲುವ ಚೀನಾ ತಂಟೆಯನ್ನೂ ಬಂದ್ ಮಾಡಲು ರಕ್ಷಣಾ ಇಲಾಖೆ ಮುಂದಾಗಿದೆ.

ರಕ್ಷಣೆಗೆ ಬಳಸುವ ಎಐ ತಂತ್ರಜ್ಞಾನದಲ್ಲಿ ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಕ್ಯಾಮೆರಾಗಳು, ಮಾನವರಹಿತ ವಿಮಾನಗಳು ಮತ್ತು ರೆಡಾರ್‍ಗಳನ್ನು ಒಳಗೊಂಡಿವೆ. ಇವುಗಳು ನೈಜ ಸಮಯದಲ್ಲಿ ಮಾನಿಟರಿಂಗ್ ಮಾಡುವ ಸಾಫ್ಟ್‍ವೇರ್‍ಗಳನ್ನು ಸಹ ಹೊಂದಿವೆ. ಈ ಮೂಲಕ ಗಡಿಯಲ್ಲಿ ಶತ್ರುಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ಇಡಲಾಗುತ್ತದೆ.

ಜರ್ಮನ್ ವಿದೇಶಾಂಗ ಸಚಿವೆಯನ್ನು ಚುಂಬಿಸಲೆತ್ನಿಸಿದ ಕ್ರೋವೆಷಿಯನ್ ಸಚಿವ

ಗಡಿಗಳಲ್ಲಿ ಗಸ್ತು ತಿರುಗಲು ಸಹ ಎಐ ಚಾಲಿತ ಡ್ರೋನ್‍ಗಳು ಮತ್ತು ರೋಬೋಟ್‍ಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಮಾನವ ಹಸ್ತಕ್ಷೇಪ ಹಾಗೂ ಅಪಾಯಗಳ ಪ್ರಮಾಣವನ್ನು ತಗ್ಗಿಸಲಿದೆ. ಈ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 75 ಹೊಸದಾಗಿ ಅಭಿವೃದ್ಧಿಪಡಿಸಿದ ಎಐ ತಂತ್ರಜ್ಞಾನಗಳನ್ನು ಕಳೆದ ಜುಲೈನಲ್ಲಿ ಎಐ ಇನ್ ಡಿಫೆನ್ಸ್ ವಿಚಾರ ಸಂಕಿರಣದಲ್ಲಿ ಮೊದಲ ಬಾರಿಗೆ ಮಾಹಿತಿ ನೀಡಿದ್ದರು. ಈ ವೇಳೆ ಅಲ್ಲಿ ರೋಬೋಟಿಕ್ಸ್, ಕಣ್ಗಾವಲು ಕ್ಯಾಮೆರಾಗಳನ್ನು ಪ್ರದರ್ಶಿಸಲಾಗಿತ್ತು.

ಈ ವರ್ಷದ ಆರಂಭದಲ್ಲಿ ನಡೆದ ಏಷ್ಯಾದ ಅತಿದೊಡ್ಡ ಏರ್ ಶೋಗಳಲ್ಲಿ ಒಂದಾದ ಏರೋ ಇಂಡಿಯಾದಲ್ಲಿ ಎಐ ಆಧಾರಿತ ಕಣ್ಗಾವಲು ಸಾಫ್ಟ್‍ವೇರ್ ರಕ್ಷಣಾ ಕ್ಷೇತ್ರದಲ್ಲಿ ಬಳಸುವ ವಿಧಾನವನ್ನು ಪರಿಚಯಿಸಲಾಗಿತ್ತು. ಈ ಬಗ್ಗೆ ಸೇನೆಗೆ ತರಬೇತಿ ಸಹ ನೀಡಲಾಗಿದೆ. ಹೆಚ್ಚಿನ ತರಬೇತಿಗಾಗಿ ಅಮೆರಿಕದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.

ಈಗಾಗಲೇ ಸಾಫ್ಟ್‍ವೇರ್ ಆಧಾರಿತ ಕ್ಯಾಮೆರಾಗಳನ್ನು ಪೂರ್ವ ಲಡಾಖ್ ಸೆಕ್ಟರ್‍ನಲ್ಲಿರಿಸಲಾಗಿದೆ. ಇದು ಚೀನಾಕ್ಕೆ ನಿಕಟವಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ ಅಪಾಯದ ಸ್ಥಳಗಳಾದ ಕಾಶ್ಮೀರದಿಂದ ಸಿಕ್ಕಿಂವರೆಗೆ ಭಾರತದ ಸೂಕ್ಷ್ಮ ಗಡಿಗಳಲ್ಲಿ ಎಐ ತಂತ್ರಜ್ಞಾನ ವರದಾನವಾಗಿದೆ. ಈ ಸಾಫ್ಟ್‍ವೇರ್ ಯಾವುದೇ ಚಲನೆ, ಶಸ್ತ್ರಾಸ್ತ್ರಗಳು, ವಾಹನಗಳು, ಟ್ಯಾಂಕರ್ಗಳು ಅಥವಾ ಕ್ಷಿಪಣಿಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಲೈವ್ ಮತ್ತು ರೆಕಾರ್ಡ್ ಮಾಡುತ್ತದೆ. ಅಲ್ಲದೇ ಅದರ ಸಂಪೂರ್ಣ ಮಾಹಿತಿಯನ್ನು ಸೇನೆಗೆ ರವಾನಿಸುತ್ತದೆ.

ಭಾರತೀಯ ಸೇನೆಯು ಪ್ರತಿ ವರ್ಷ ಎಐ ತಂತ್ರಜ್ಞಾನಕ್ಕಾಗಿ ಸರಿಸುಮಾರು 400 ಕೋಟಿ ರೂ.ಗಳನ್ನು ವಿನಿಯೋಗಿಸಲಿದೆ. ಈ ವಿಚಾರದಲ್ಲಿ ಅಮೆರಿಕ ಹಾಗೂ ಚೀನಾ ಮುಂದಿದ್ದರೂ ಅವುಗಳಿಗೆ ಸರಿಯಾಗಿ ನಿಲ್ಲಲು ಭಾರತ ಸಮರ್ಥವಾಗಿದೆ.

ಇಸ್ರೇಲ್‍ನಲ್ಲಿ ಪ್ಯಾಲೆಸ್ತೇನಿಯನ್ ಮಿಲಿಟರಿಗೆ ಸಂಬಂಸಿದ ವ್ಯಕ್ತಿಗಳನ್ನು ಕಂಡು ಹಿಡಿಯಲು ಮತ್ತು ಅವರ ಮೇಲೆ ನಿಗಾ ಇಡಲು ಎಐ ಬಳಕೆ ಮಾಡಲಾಗುತ್ತಿದೆ. ಈ ತಂತ್ರಜ್ಞಾನವು ಸೇನಾ ಸಿಬ್ಬಂದಿಯ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮೊಬೈಲ್‍ಗಳನ್ನು ಅನ್‍ಲಾಕ್ ಮಾಡುವ ಮೂಲಕ ಅವರ ಮಾಹಿತಿ ಕಲೆಹಾಕುತ್ತದೆ. ಅವರ ಮೇಲೆ ಈ ಮೂಲಕ ನಿಗಾ ವಹಿಸುತ್ತದೆ.

ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಸದಸ್ಯತ್ವ ಅನರ್ಹಗೊಳ್ಳುವ ಸಾಧ್ಯತೆ

ನವದೆಹಲಿ,ನ.6- ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿಯಿಂದ ನಗದು ಮತ್ತು ಬೆಲೆ ಬಾಳುವ ಉಡುಗೊರೆ ಪಡೆದ ಆರೋಪಕ್ಕೆ ಸಿಲುಕಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರ ಅವರ ಸದಸ್ಯತ್ವ ಅನರ್ಹಗೊಳ್ಳುವ ಸಾಧ್ಯತೆ ಇದೆ.

ಪ್ರಸಕ್ತ ಲೋಕಸಭೆ ಅವ ಮುಗಿಯುವವರೆಗೂ ಮೊಯಿತ್ರ ಅವರ ಸದಸ್ಯತ್ವವನ್ನು ಅನರ್ಹಗೊಳಿಸಲು ಲೋಕಸಭೆಯ ನೈತಿಕ ಸಮಿತಿ ನಿರ್ಧರಿಸಿದೆ. ಈ ಸಂಬಂಧ ನಾಳೆ ನೈತಿಕ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ವಿನೋದ್‍ಕುಮಾರ್ ಸೋಂಕ್ ನೇತೃತ್ವದ ಲೋಕಸಭೆಯ ನೈತಿಕ ಸಮಿತಿಯು ನಾಳೆ ಸಭೆ ಸೇರಲಿದ್ದು, ತೃಣಮೂಲ ಸಂಸದ ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳ ವಿಚಾರಣೆಗಾಗಿ ನಗದು ಕರಡು ವರದಿಯನ್ನು ಪರಿಗಣಿಸಲು ತೀರ್ಮಾನಿಸಿದೆ.

16 ಮಿಲಿಯನ್ ಟನ್ ಸರಕು ಸಾಗಿಸಿದ ಅದಾನಿ ಒಡೆತನದ ಮುಂದ್ರಾ ಬಂದರು

ಪ್ರಸ್ತುತ ಲೋಕಸಭೆಯ ಉಳಿದ ಅವಗೆ ಅನರ್ಹತೆ ಸೇರಿದಂತೆ ಮೊಯಿತ್ರಾ ವಿರುದ್ಧ ಕಠಿಣ ಕ್ರಮಕ್ಕೆ ಸಮಿತಿಯು ಶಿಫಾರಸು ಮಾಡಬಹುದು ಎಂದು ಮೂಲಗಳು ತಿಳಿಸಿವೆ. ಸಮಿತಿಯಲ್ಲಿ ಬಿಜೆಪಿಗೆ ಬಹುಮತ ಇರುವುದರಿಂದ ಮೊಯಿತ್ರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ವರದಿಯಲ್ಲಿ ಶಿಫಾರಸ್ಸು ಮಾಡಲಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿವೆ.

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು, ಬೆಲೆ ಬಾಳುವ ಉಡುಗೊರೆ ಹಾಗೂ ವಿದೇಶಿ ಪ್ರವಾಸ ಕೈಗೊಂಡಿರುವುದಕ್ಕೆ ಸೂಕ್ತವಾದ ಸಾಕ್ಷ್ಯಾಧಾರಗಳು ಲಭ್ಯವಾಗಿವೆ. ಈ ಹಿನ್ನಲೆಯಲ್ಲಿ ಮೊಯಿತ್ರ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವ ಸಾಧ್ಯತೆಗಳೇ ಹೆಚ್ಚಾಗಿವೆ. ಈ ಹಿಂದೆ 2005ರಲ್ಲಿ ಪ್ರಶ್ನೆ ಕೇಳಲು ಹಣ ಪಡೆದಿದ್ದ 11 ಸಂಸದರ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿತ್ತು. 2007ರಲ್ಲಿ ಸುಪ್ರೀಂಕೋರ್ಟ್ ಅನರ್ಹತೆಯನ್ನು ಎತ್ತಿ ಹಿಡಿದಿತ್ತು.

ಇದನ್ನೇ ಆಧಾರವಾಗಿಟ್ಟುಕೊಂಡಿರುವ ನೈತಿಕ ಸಮಿತಿಯು ಪಶ್ಚಿಮ ಬಂಗಾಳದ ಕೃಷ್ಣಾನಗರದ ಟಿಎಂಸಿ ಸಂಸದರಾಗಿರುವ ಮೊಯಿತ್ರ ಅವರನ್ನು ಅನರ್ಹಗೊಳಿಸಲು ಮುಂದಾಗಿದೆ. ಈ ಹಿಂದೆ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದ ಮೊಯಿತ್ರ ತಮಗೆ ಅಧ್ಯಕ್ಷರು ಅತ್ಯಂತ ಕೊಳಕು ಮತ್ತು ಅಸಂಬದ್ಧ ಪ್ರಶ್ನೆಗಳನ್ನು ಕೇಳಿದ್ದರೆಂದು ರಂಪಾಟ ಎಬ್ಬಿಸಿದ್ದರು.

ಟಿಡಿಪಿ ಬದಲು ಬಿಜೆಪಿಗೆ ಪವನ್ ಕಲ್ಯಾಣ್ ಬೆಂಬಲ

ಮೊಯಿತ್ರ ಉದ್ಯಮಿ ದರ್ಶನ್ ಹಿರಾನಂದಿನಿಯಿಂದ ನಗದು ಮತ್ತು ಬೆಲೆ ಬಾಳುವ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಬಿಜೆಪಿ ಶಾಸಕ ಅಶ್ವಿನ್ ದುಬೆ ಆರೋಪಿಸಿ ತನಿಖೆ ನಡೆಸಬೇಕೆಂದು ದಾಖಲೆಗಳ ಸಮೇತ ಲೋಕಸಭೆಯ ನೈತಿಕ ಸಮಿತಿಗೆ ದೂರು ಸಲ್ಲಿಸಿದ್ದರು.

ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಕಾರು ಚಾಲಕ ವಶಕ್ಕೆ

ಬೆಂಗಳೂರು, ನ.6-ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅವರ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾರು ಚಾಲಕನನ್ನು ಸುಬ್ರಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ. ಐದು ವರ್ಷಗಳಿಂದ ಪ್ರತಿಮಾ ಅವರ ಕಾರು ಚಾಲಕನಾಗಿದ್ದ ಕಿರಣ್‍ನನ್ನು ಚಾಮರಾಜನಗರ ಜಿಲ್ಲೆಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕಳೆದ ಐದು ವರ್ಷಗಳಿಂದ ಕಿರಣ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಇವರ ತಂದೆ ಸುರೇಶ್ ಸಹ ಇದೇ ಇಲಾಖೆಯಲ್ಲಿ ಕಾರು ಚಾಲಕರಾಗಿದ್ದಾರೆ.

ಕೆಲ ವಿಚಾರದಲ್ಲಿ ಪ್ರತಿಮಾ ಹಾಗೂ ಕಿರಣ್ ನಡುವೆ ಭಿನ್ನಾಭಿಪ್ರಾಯ ಇದ್ದುದರಿಂದ ಹತ್ತು ದಿನಗಳ ಹಿಂದೆಯಷ್ಟೇ ಕಿರಣ್‍ನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕ ಚೇತನ್‍ನನ್ನು ನಿಯೋಜಿಸಿಕೊಂಡಿದ್ದರು. ಇದೇ ಕಾರಣಕ್ಕೆ ಕಿರಣ್ ಮಹಿಳಾ ಅಧಿಕಾರಿ ಪ್ರತಿಮಾ ಅವರ ಮೇಲೆ ದ್ವೇಷ ಸಾಧಿಸಿ ಈತನೇ ಅವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿ ಆತನ ಹುಡುಕಾಟ ನಡೆಸುತ್ತಿದ್ದಾಗ ಕಿರಣ್ ಮೊಬೈಲ್ ಸ್ವಿಚ್‍ಆಫ್ ಮಾಡಿಕೊಂಡು ಚಾಮರಾಜನಗರ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿರುವ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ಚಾಮರಾಜನಗರ ಜಿಲ್ಲೆಗೆ ತೆರಳಿ ಕಿರಣ್‍ನನ್ನು ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ತೀವ್ರ ವಿಚಾರಣೆಗೊಳಪಡಿಸಿ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದ ರಾಹುಲ್ ಗಾಂಧಿ

ಹಿನ್ನೆಲೆ: ಮೊನ್ನೆ ಸಂಜೆ ಪ್ರತಿಮಾ ಅವರು ಕೆಲಸ ಮುಗಿಸಿಕೊಂಡು ಇಲಾಖೆ ಕಾರಿನಲ್ಲಿ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‍ಮೆಂಟ್ ಪಕ್ಕದ ತಮ್ಮ ಮನೆಗೆ ಡ್ರಾಪ್ ಪಡೆದ ಕೆಲವೇ ನಿಮಿಷದಲ್ಲಿ ಅವರ ಕೊಲೆ ನಡೆದು ಹೋಗಿತ್ತು.

ಪ್ರತಿಮಾ ಅವರ ಕುತ್ತಿಗೆಗೆ ಹಗ್ಗದಿಂದ ಬಿಗಿದು ಬಳಿಕ ಚಾಕುವಿನಿಂದ ಕತ್ತು ಇರಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ಮೊನ್ನೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ.

ನಿನ್ನೆ ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತನಿಖೆಗಾಗಿ ರಚಿಸಲಾಗಿದ್ದ ಮೂರು ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕ ಜೀವನ, ವೃತ್ತಿ ಜೀವನ, ಹಣಕಾಸು ಈ ಮೂರು ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.