Home Blog Page 1838

ನೇಪಾಳ ಭೂಕಂಪ : ನೆಲೆ ಕಳೆದುಕೊಂಡು ನರಳುತ್ತಿರುವ ಜನ, ನೆರವಿಗೆ ಅಧಿಕಾರಿಗಳ ಹರಸಾಹಸ

ಕಠ್ಮಂಡು, ನ.5- ಪ್ರಬಲ ಭೂಕಂಪವು 157 ಜನರನ್ನು ಬಲಿ ತೆಗೆದುಕೊಂಡ ಬಳಿಕ ಪಶ್ಚಿಮ ನೇಪಾಳದ ಪರ್ವತ ಪ್ರದೇಶದ ಜನರು ಸೂರಿಲ್ಲದೆ ರಾತ್ರಿ ಇಡೀ ಕೊರೆಯುವ ಚಳಿಯಲ್ಲಿ ಕಳೆಯುವಂತಾದ್ದು, ಸಂತ್ರಸ್ತರ ನೆರವಿಗೆ ಧಾವಿಸಲು ನೇಪಾಳದ ಅಧಿಕಾರಿಗಳು ಹರಸಾಹಸ ಪಟ್ಟಿದ್ದಾರೆ.

ಅನಾಹುತವನ್ನು ಎದುರಿಸಲು ಅಸಮರ್ಪಕ ವಿಧಾನಗಳಿಂದ ಪರಿಸ್ಥಿತಿ ಅಸ್ತವ್ಯಸ್ತವಾದ್ದು, ಕಡಿಮೆ ಸಂಪನ್ಮೂಲ ಮತ್ತು ಕಳಪೆ ಸುಸಜ್ಜಿತ ಜಿಲ್ಲಾ ಆಸ್ಪತ್ರೆಗಳು ಸಂಕಷ್ಟದಲ್ಲಿದೆ. ಜಾಜರಕೋಟ್‍ನ ಸಹಾಯಕ ಮುಖ್ಯ ಜಿಲ್ಲಾ ಅಧಿಕಾರಿ ಹರಿಶ್ಚಂದ್ರ ಶರ್ಮಾ ಮಾತನಾಡಿ, ಕಠ್ಮಂಡು ಮತ್ತು ಸುರ್ಖೇತ್‍ನಿಂದ ಹೆಚ್ಚಿನ ವೈದ್ಯರು ಮತ್ತು ವೈದ್ಯಕೀಯ ತಂಡಗಳು ಆಗಮಿಸುವುದರೊಂದಿಗೆ ಪರಿಸ್ಥಿತಿ ಹೆಚ್ಚಾಗಿ ನಿಯಂತ್ರಣಕ್ಕೆ ಬಂದಿದೆಯಾದರೂ ಆಸ್ಪತ್ರೆಯಲ್ಲಿ ಅಪಾರ ಸಂಖ್ಯೆಯ ಸಂತ್ರಸ್ತರನ್ನು ಎದುರಿಸಲು ಮಾನವ ಸಂಪನ್ಮೂಲ ಮತ್ತು ಸಲಕರಣೆಗಳ ಕೊರತೆಯಿದೆ ಎಂದಿದ್ದಾರೆ.

ಭೂಕಂಪ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಇಂದಿನಿಂದ ಪರಿಹಾರ ವಿತರಣೆ ಆರಂಭವಾಗಲಿದೆ. ಶುಕ್ರವಾರ ರಾತ್ರಿಯಿಂದಲೇ ರಕ್ಷಣಾ ಕಾರ್ಯಗಳು ಆರಂಭವಾಗಿ ಮುಕ್ತಾಯಗೊಂಡಿದೆ ಎಂದು ಎಂದು ಜಾಜರ್‍ಕೋಟ್‍ನ ಮುಖ್ಯ ಜಿಲ್ಲಾ ಅಕಾರಿ ಸುರೇಶ್ ಸುನರ್ ಖಚಿತಪಡಿಸಿದ್ದಾರೆ.

ಧೈರ್ಯ ಮತ್ತು ದಕ್ಷತೆಯೇ ಪ್ರತಿಮಾ ಪ್ರಾಣಕ್ಕೆ ಮುಳುವಾಯ್ತಾ..?

1,000ಕ್ಕೂ ಹೆಚ್ಚು ಮನೆಗಳು ಪರಿಣಾಮವನ್ನು ಎದುರಿಸುತ್ತಿವೆ. ಇದರ ಪರಿಣಾಮವಾಗಿ ಲಕ್ಷಾಂತರ ಮೌಲ್ಯದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಶುಕ್ರವಾರ ರಾತ್ರಿ ಸಂಭವಿಸಿದ ಭೂಕಂಪದಲ್ಲಿ ಜಾಜರ್ಕೋಟ್ ಅತಿ ಹೆಚ್ಚು ಹಾನಿಯನ್ನು ಅನುಭವಿಸಿದೆ, ಜಾಜರ್ಕೋಟ್ ಒಂದರಲ್ಲೇ 105 ಸಾವುನೋವುಗಳು ವರದಿಯಾಗಿವೆ.

ಮುಂದುವರೆದ ರಕ್ಷಣಾ ಕಾರ್ಯಚರಣೆ: ನೇಪಾಳ ಸೇನೆ, ಸಶಸ್ತ್ರ ಪೊಲೀಸ್ ಪಡೆ ಮತ್ತು ನೇಪಾಳ ಪೊಲೀಸರ ಸುಮಾರು 4,000 ಸಿಬ್ಬಂದಿಯನ್ನು ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ನೇಪಾಳ ರೆಡ್ ಕ್ರಾಸ್ ಸೊಸೈಟಿ ಮತ್ತು ಇತರ ಸಂಸ್ಥೆಗಳಿಂದ ಹತ್ತಾರು ಸ್ವಯಂಸೇವಕರನ್ನು ಸಜ್ಜುಗೊಳಿಸಲಾಗಿದೆ.

ನಾವು ಪ್ರಾಥಮಿಕವಾಗಿ ಮೊದಲ ದಿನದಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮೇಲೆ ಕೇಂದ್ರೀಕರಿಸಿದ್ದೇವೆ. ಮೊದಲ 72 ಗಂಟೆಗಳನ್ನು ಯಶಸ್ವಿ ರಕ್ಷಣೆಗಾಗಿ ಸುವರ್ಣ ಅವ ಎಂದು ಪರಿಗಣಿಸಲಾಗಿರುವುದರಿಂದ, ನಾವು ಇನ್ನೂ ಕೆಲವು ದಿನಗಳವರೆಗೆ ಹುಡುಕಾಟ ಮತ್ತು ರಕ್ಷಣೆಗೆ ಆದ್ಯತೆ ನೀಡುತ್ತೇವೆ ಎಂದು ನೇಪಾಳ ಸೇನಾ ವಕ್ತಾರ ಬ್ರಿಗೇಡಿಯರ್ ಜನರಲ್ ಕೃಷ್ಣ ಭಂಡಾರಿ ತಿಳಿಸಿದ್ದಾರೆ.

ವೈದ್ಯಕೀಯ ಮತ್ತು ವಾಯುಯಾನ ತಂಡಗಳು ಸೇರಿದಂತೆ ಮೂರು ಬೆಟಾಲಿಯನ್‍ಗಳ ಸಿಬ್ಬಂದಿಯನ್ನು ಭೂಕಂಪದಿಂದ ಹೆಚ್ಚು ಹಾನಿಗೊಳಗಾದ ಎರಡು ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಒಂದು ಬೆಟಾಲಿಯನ್ 800 ರಿಂದ 1,000 ಸಿಬ್ಬಂದಿಯನ್ನು ಹೊಂದಿದೆ. ಸಜ್ಜುಗೊಂಡ ಅನೇಕ ಸೈನಿಕರು ಜನರಿಗೆ ಕುಸಿದ ರಚನೆಗಳನ್ನು ಹುಡುಕಲು ಮತ್ತು ತ್ವರಿತ ಪ್ರತಿಕ್ರಿಯೆಗಳನ್ನು ನೀಡಲು ತರಬೇತಿ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭೂಕಂಪದ ಕುರಿತು ಹೆಚ್ಚಿನ ಅಧ್ಯಯನ ಮತ್ತು ಸಂಶೋಧನೆ ನಡೆಸಲು ಲೈಂಚೌರ್‍ನ ರಾಷ್ಟ್ರೀಯ ಭೂಕಂಪದ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್‍ನ ಭೂಕಂಪನ ತಜ್ಞರ ತಂಡವು ಜಾಜರ್‍ಕೋಟ್‍ಗೆ ತಲುಪಿದೆ.

ಸಂಪುಟ ಸಭೆ:
ಕಠ್ಮಂಡುವಿನಿಂದ ಪಶ್ಚಿಮಕ್ಕೆ 500 ಕಿಮೀ ದೂರದಲ್ಲಿರುವ ಜಾಜರ್‍ಕೋಟ್ ಜಿಲ್ಲೆಯಲ್ಲಿ ಮೊನ್ನೆ ರಾತ್ರಿ ಭೂಕಂಪಿಸಿ ನೂರಾರು ಮನೆಗಳನ್ನು ನಾಶವಾಗಿವೆ. ದುರಂತದಲ್ಲಿ ಮೃತಪಟ್ಟ ಒಟ್ಟು 157 ಜನರ ಪೈಕಿ ಇದುವರೆಗೆ 120 ಮಂದಿಯ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ. ಭೂಕಂಪದಲ್ಲಿ ಸುಮಾರು 253 ಜನರು ಗಾಯಗೊಂಡಿದ್ದಾರೆ.
ಭೂಕಂಪದಿಂದ ಬದುಕುಳಿದವರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಕುರಿತು ನಿರ್ಧರಿಸಲು ಪ್ರಧಾನಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಸಂಪುಟ ಸಭೆ ನಡೆಸಿದ್ದಾರೆ.

ಪಶ್ಚಿಮ ನೇಪಾಳದಲ್ಲಿ ವಿಶೇಷವಾಗಿ ಜಜರ್ಕೋಟ್ ಮತ್ತು ಪಶ್ಚಿಮ ರುಕುಮ್ ಜಿಲ್ಲೆಗಳಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮತ್ತು ಪರಿಹಾರ ವಿತರಣೆ ಸೇರಿದಂತೆ ಇತರ ನಿರ್ವಹಣೆಗಾಗಿ ವಿದೇಶಿ ಸಹಾಯವನ್ನು ಪಡೆಯಲು ಆತುರವಿಲ್ಲ ಎಂದು ಸರ್ಕಾರ ಹೇಳಿದೆ.

ಇಂದು ಬೆಳಿಗ್ಗೆ ಸಚಿವ ಸಂಪುಟ ಸಭೆ ನಡೆಸಿ ಸೂಕ್ತ ನಿರ್ಧಾರದೊಂದಿಗೆ ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಂಡಿರುವುದಾಗಿ ಪ್ರಚಂಡ ತಿಳಿಸಿದ್ದಾರೆ. ನಿನ್ನೆ ಸಂಜೆಯಿಂದಲೇ ಹೊದಿಕೆಗಳು, ಬಟ್ಟೆ ಮತ್ತು ಆಹಾರ ಪದಾರ್ಥಗಳಂತಹ ಪರಿಹಾರ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ವಿವಿಧ ಸಂಸ್ಥೆಗಳು ನೀಡಿದ ಪರಿಹಾರ ಸಾಮಗ್ರಿಗಳ ವಿತರಣೆಯನ್ನು ಸಹ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಧೈರ್ಯ ಮತ್ತು ದಕ್ಷತೆಯೇ ಪ್ರತಿಮಾ ಪ್ರಾಣಕ್ಕೆ ಮುಳುವಾಯ್ತಾ..?

ಬೆಂಗಳೂರು,ನ.5- ಪ್ರತಿಮಾ ಅವರು ಧಕ್ಷ ಹಾಗೂ ಧೈರ್ಯವಂತ ಅಕಾರಿಯಾಗಿದ್ದರು. ಅವರ ಸಾವು ನಿಜಕ್ಕೂ ಆಘಾತ ತಂದಿದೆ ಎಂದು ಬೆಂಗಳೂರು ನಗರ ಜಿಲ್ಲಾಕಾರಿ ದಯಾನಂದ್ ತಿಳಿಸಿದ್ದಾರೆ. ಇಂದು ಸುಬ್ರಹ್ಮಣ್ಯಪುರದ ದೊಡ್ಡಕಲ್ಲಸಂದ್ರದ ಬಳಿ ಮನೆಯಲ್ಲಿ ಕೊಲೆಯಾದ ಪ್ರತಿಮಾ ಅವರ ನಿವಾಸಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗಣಿಗಾರಿಕೆ ವಿಭಾಗದಲ್ಲಿ ಒತ್ತಡದಲ್ಲಿ ಕೆಲಸ ಮಾಡುತ್ತಾರೆ. ಅಕ್ರಮಗಳನ್ನು ತಡೆಯುವುದು ಮತ್ತು ಪರಿಸರ ಸಂರಕ್ಷಣೆ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಮಾ ಅವರು ನಿರ್ಭೀತಿಯಿಂದ ಕೆಲಸ ಮಾಡಿದ್ದರು ಎಂದು ತಿಳಿಸಿದ್ದಾರೆ.

ಸಾವಯವ ಕೃಷಿಯಾಯ್ತು ಈಗ ಅಡುಗೆಗೂ ಸಾವಯವ

ರಾಮನಗರದಲ್ಲಿ ಕೆಲಸ ಮಾಡಿ ಸುಮಾರು ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದರು. ಇತ್ತೀಚೆಗೆ ಅಕ್ರಮ ಗಣಿಗಾರಿಕೆ ಕುರಿತಂತೆ ಅಕಾರಿಗಳ ಸಭೆ ನಡೆಸಲಾಗಿತ್ತು ಅಲ್ಲಿ ಅವರು ಭಾಗವಹಿಸಿದ್ದರು. ಎಲ್ಲರಿಗೂ ಅಕ್ರಮ ಗಣಿಗಾರಿಕೆ ತಡೆಯುವಂತೆ ಸೂಚನೆ ನೀಡಲಾಗಿತ್ತು. ಅದರಂತೆ ಅವರು ಪ್ರಕರಣವೊಂದರಲ್ಲಿ ತನಿಖೆ ನಡೆಸಿ ನನಗೆ ವರದಿ ನೀಡಿದ್ದರು ಎಂದು ತಿಳಿಸಿದ್ದಾರೆ.

ಪ್ರತಿಮಾ ಅವರಿಗೆ ಕೆಲಸದ ವೇಳೆ ಯಾರಾದರೂ ಅಡಚಣೆ ಉಂಟು ಮಾಡಿದ್ದಾರಾ? ಬೆದರಿಕೆ ಹಾಕಿದ್ದರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜಿಲ್ಲಾಕಾರಿಗಳು, ಈ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಕೆಲವರು ಅಡ್ಡಿಪಡಿಸುತ್ತಾರೆ ಆದರೆ ಈ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ. ಪೊಲೀಸರು ಎಲ್ಲ ಹಂತದಲ್ಲೂ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚುತ್ತಾರೆ ಶಿಕ್ಷೆಯಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಾವಯವ ಕೃಷಿಯಾಯ್ತು ಈಗ ಅಡುಗೆಗೂ ಸಾವಯವ

ಲಕ್ನೋ, ನ.5-ಇಲ್ಲಿಂದ ಸುಮಾರು 128 ಕಿಮೀ ದೂರದಲ್ಲಿರುವ ಬಹ್ರೈಚ್‍ನಲ್ಲಿರುವ ಥಾರು ಬುಡಕಟ್ಟು ಜನಾಂಗಕ್ಕೆ ಸೇರಿದ ಸುಮಾರು 200ಕ್ಕೂ ಹೆಚ್ಚು ಮಹಿಳೆಯರು ತಮ್ಮ ಕುಟುಂಬದ ಪೌಷ್ಟಿಕಾಂಶದ ಅಗತ್ಯವನ್ನರಿತು ಸಾವಯವ ಕೃಷಿ ಮತ್ತು ಅಡುಗೆಗೆ ಮುಂದಾಗಿದ್ದಾರೆ.
ಪೋಷ್ಟಿಕಾಂಶವಿಲ್ಲದೆ ದುರ್ಬಲಗೊಂಡಿದ್ದ ಮಹಿಳೆಯರ ಕುಟುಂಬದಲ್ಲಿ ಅತ್ಯಂತ ಕಡಿಮೆ ಪೌಷ್ಠಿಕಾಂಶದ ಮಟ್ಟವನ್ನು ಸಮೀಕ್ಷೆಯು ಸೂಚಿಸಿದ ನಂತರ, ನಾಲ್ಕು ತಾರು ಗ್ರಾಮಗಳು ಸೇರಿದಂತೆ ಆರು ಗ್ರಾಮಗಳಲ್ಲಿ 35 ಸ್ವ-ಸಹಾಯ ಗುಂಪುಗಳ ಸದಸ್ಯರಾಗಿರುವ ಮಹಿಳೆಯರು ಪೋಷ್ಟಿಕಾಂಶಕ್ಕಾಗಿ ಸಾವಯವ ಕೃಷಿ ಮಾಡಲು ಸ್ವತಃ ಮುಂದಾಗಿದ್ದಾರೆ.

ಸಾಂಕ್ರಾಮಿಕ ರೋಗ ಕೋವಿಡ್‍ನಿಂದ ಉಂಟಾದ ಹಾನಿಯನ್ನು ನಿರ್ಣಯಿಸಲು ನಡೆಸಿದ ಸಮೀಕ್ಷೆಯಲ್ಲಿ ಮಹಿಳೆಯರ ಕುಟುಂಬಗಳ ಪೌಷ್ಟಿಕಾಂಶದ ಮಟ್ಟವು ತುಂಬಾ ಕಡಿಮೆಯಾಗಿದೆ ಮತ್ತು ಅವರಿಗೆ ಏನಾದರೂ ಮಾಡಬೇಕಾಗಿದೆ ಎಂದು ಉಲ್ಲೇಖಿಸಲಾಗಿತ್ತು.

ಉತ್ತಪ್ರದೇಶದ ಥಾರು ಬುಡಕಟ್ಟು ಮಹಿಳೆಯರು ಕುಟುಂಬಗಳ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸಲು ಸಾವಯವ ಅಡಿಗೆ ತೋಟಕ್ಕೆ ತಿರುಗಿದ್ದಾರೆ. ಅವರಿಗೆ ತರಕಾರಿಗಳ ಮೂಲಕ ಪೌಷ್ಟಿಕಾಂಶದ ಆಹಾರವನ್ನು ಒದಗಿಸುವ ಆಲೋಚನೆಯು ಈಗ ಅವರ ಅಡುಗೆ ತೋಟಗಳಲ್ಲಿ ಬೇರೂರಿದೆ ಎಂದು ವಿಶ್ವ ವನ್ಯಜೀವಿ ನಿ-ಭಾರತದ ಹಿರಿಯ ಯೋಜನಾಕಾರಿ ದಬೀರ್ ಹಸನ್ ತಿಳಿಸಿದ್ದಾರೆ.

ಪೌಷ್ಠಿಕಾಂಶದ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾ ಮಹಿಳೆಯರೊಂದಿಗೆ ಪದೇ ಪದೇ ಓರಿಯಂಟೇಶನ್ ಮಾಡಲಾಯಿತು. 75 ಜನರೊಂದಿಗೆ ಪ್ರಾರಂಭಿಸಿ ಈಗ ಎರಡು ಋತುಗಳ ನಂತರ, ಈ ಮಹಿಳೆಯರು ಸಹ ಯೋಜನೆಯ ವೆಚ್ಚದ 25 ಪ್ರತಿಶತಕ್ಕೆ ಕೊಡುಗೆ ನೀಡಲು ಪ್ರಾರಂಭಿಸಿದ್ದಾರೆ.

ಇದಕ್ಕೆ ಮೊದಲು ಡಬ್ಲ್ಯುಡಬ್ಲ್ಯುಎಫ್ ಯೋಜನೆಯ ಸಂಪೂರ್ಣ ವೆಚ್ಚವನ್ನು ಭರಿಸುತ್ತಿತ್ತು, ಅರಣ್ಯ, ವನ್ಯಜೀವಿ ಮತ್ತು ಹವಾಮಾನ ಬದಲಾವಣೆಗೆ ಸಂಬಂಸಿದ ಕ್ಷೇತ್ರಗಳಲ್ಲಿ 60ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಬ್ಲ್ಯುಡಬ್ಲ್ಯುಎಫ್ ಹಸನ್ ತಿಳಿಸಿದ್ದಾರೆ.
ಈ ಮಹಿಳೆಯರ ಆರೋಗ್ಯದ ಮೇಲೆ ಈ ಯೋಜನೆಯ ಪ್ರಭಾವವನ್ನು ಪರಿಶೀಲಿಸಲು, ಉತ್ತರ ಪ್ರದೇಶ ಆರೋಗ್ಯ ಇಲಾಖೆಯು ಅವರ ಪೌಷ್ಟಿಕಾಂಶದ ಅಗತ್ಯತೆಗೆ ಸಂಬಂಸಿದ ಇತ್ತೀಚಿನ ಡೇಟಾವನ್ನು ಸಂಗ್ರಹಿಸಲು ಮತ್ತು ಅದರ ಫಲಿತಾಂಶದೊಂದಿಗೆ ಹೋಲಿಸಲು ಮನೆ-ಮನೆಗೆ ಸಮೀಕ್ಷೆಯನ್ನು ನಡೆಸುವಲ್ಲಿ ತೊಡಗಿಸಿಕೊಂಡಿದೆ.

ಎಎನ್‍ಎಂ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮಟ್ಟದ ಆರೋಗ್ಯ ಇಲಾಖೆ ಕಾರ್ಯಕರ್ತರ ತರಬೇತಿಯನ್ನು ಇತ್ತೀಚೆಗೆ ನಡೆಸಲಾಗಿದ್ದು, ಈ ಮಹಿಳೆಯರು ಮತ್ತು ಅವರ ಕುಟುಂಬದ ಸದಸ್ಯರ ಪೌಷ್ಟಿಕಾಂಶದ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮೀಕ್ಷೆ ನಡೆಸಲಾಯಿತು, ಇದು ಮಾರ್ಗದರ್ಶನಕ್ಕೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಫಕೀರಪುರಿ ಗ್ರಾಮದ ತಾರುವಿನ ಮೀರಾದೇವಿ ಅವರು ಮನೆ ಸುತ್ತಮುತ್ತ ಪಾಲಕ್, ಮೆಂತ್ಯ, ಹೂಕೋಸು, ಬಟಾಣಿ, ಕೊತ್ತಂಬರಿ, ಮೂಲಂಗಿ, ಕ್ಯಾರೆಟ್, ಟರ್ನಿಪ್ ಮುಂತಾದ ತರಕಾರಿಗಳನ್ನು ಬೆಳೆದು ಇಳುವರಿಯನ್ನು ಪಡೆದಿದ್ದಾರೆ.

ಫಕೀರ್ಪುರಿಯ ಸುಜೆರಾಣಿ ಎಂಬ ಮತ್ತೊಬ್ಬ ಮಹಿಳೆ ತಜ್ಞರ ಮಾರ್ಗದರ್ಶನದೊಂದಿಗೆ ಸಾವಯವ ಕೃಷಿಯಿಂದ ಪೋಷ್ಟಿಕಾಂಶಯುಕ್ತ ಅಡುಗೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ನಮಗೆ ಹೆಚ್ಚಿನ ಸಹಾಯ ಸಿಕ್ಕರೆ, ನಾವು ಕಷ್ಟಪಟ್ಟು ದುಡಿದು ಹೆಚ್ಚು ತರಕಾರಿಗಳನ್ನು ಬೆಳೆಯಲು ಸಿದ್ಧ ಎಂದಿದ್ದಾರೆ.

ಬೆಂಗಳೂರಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ಡಬ್ಲ್ಯುಡಬ್ಲ್ಯುಎಫ್‍ನಿಂದ ಬೀಜ ಪಡೆದು ಉತ್ತಮ ಇಳುವರಿ ಬಂದಿದೆ, ಟೊಮೇಟೊ, ಅವರೆಕಾಯಿ, ಹೂಕೋಸು ಎಲ್ಲವೂ ಚೆನ್ನಾಗಿ ಬೆಳೆಯುತ್ತಿದೆ, ನಾಟಿ ಮಾಡಿದ ಸಸಿಗಳು ಸಿದ್ಧವಾದಾಗ ಹಣ್ಣುಗಳ ಸ್ಥಿತಿ ಹೇಗಿದೆ ಎಂದು ನೋಡೋಣ ಎಂದು ರಾಮಪುರ ಗ್ರಾಮದ ಸೀಮಾದೇವಿ ಹೇಳುತ್ತಾರೆ.

ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕ್ಷೇತ್ರದ ತೋಟಗಾರಿಕೆ ನಿರೀಕ್ಷಕ ಎ.ಕೆ.ವರ್ಮಾ ಮಾತನಾಡಿ, ತಮ್ಮ ಇಲಾಖೆಯು ಉತ್ತಮ ಗುಣಮಟ್ಟದ ಬೀಜಗಳು ಮತ್ತು ತರಕಾರಿಗಳು ಮತ್ತು ಹಣ್ಣುಗಳ ಸಸಿಗಳನ್ನು ಒದಗಿಸುತ್ತದೆ, ಇವುಗಳನ್ನು ಸ್ವಸಹಾಯ ಸಂಘಗಳ ಮಹಿಳೆಯರು ಬಳಸುತ್ತಿದ್ದಾರೆ. ಅಗತ್ಯವಿರುವ ಕಡೆ ತರಬೇತಿಯನ್ನೂ ನಡೆಸಿ ಕಾಲಕಾಲಕ್ಕೆ ಮಾರ್ಗದರ್ಶನ ನೀಡುತ್ತೇವೆ ಎಂದಿದ್ದಾರೆ.

ಭವಿಷ್ಯದಲ್ಲಿ ಈ ಯೋಜನೆಯಿಂದ ಈ ಮಹಿಳೆಯರು ಆರ್ಥಿಕವಾಗಿ ಹೇಗೆ ಪ್ರಯೋಜನ ಪಡೆಯಬಹುದು. ಸಾವಯವ ವಸ್ತುಗಳ ಬಗ್ಗೆ ಹೆಚ್ಚುತ್ತಿರುವ ಜಾಗೃತಿಯೊಂದಿಗೆ, ಅವರು ಬೆಳೆದ ತರಕಾರಿಗಳು ಮತ್ತು ಇತರ ವಸ್ತುಗಳು ಹೆಚ್ಚುವರಿ ಆದಾಯವನ್ನು ಗಳಿಸಲು ಉತ್ತಮ ಅವಕಾಶವನ್ನು ಹೊಂದಿವೆ.

ಈಗ ನಾವು ಅದನ್ನು ಪ್ರಾಯೋಗಿಕ ಆಧಾರದ ಮೇಲೆ ನಡೆಸುವ ಮೂಲಕ ಮಹಿಳೆಯರನ್ನು ಸ್ವಾವಲಂಬಿಯಾಗಿಸಲು ತೋಟಗಾರಿಕೆ ಇಲಾಖೆ ಮತ್ತು ಕೃಷಿ ವಿಜ್ಞಾನ ಕೇಂದ್ರಗಳೊಂದಿಗೆ ಹ್ಯಾಂಡ್‍ಹೋಲ್ಡ್ ಮಾಡಲು ಮತ್ತು ಲಿಂಕ್ ಮಾಡಲು ಯೋಜಿಸುತ್ತೇವೆ. ಉತ್ಪನ್ನಗಳ ಕೃಷಿ ಮಾಡಲು ಅವರಿಗೆ ಮಾರ್ಗದರ್ಶನ ನೀಡಲು ಪ್ರಯತ್ನಿಸಲಾಗುವುದು ಎಂದು ಹಸನ್ ತಿಳಿಸಿದ್ದಾರೆ.

ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ : ಕಾರಜೋಳ

ಹುಬ್ಬಳ್ಳಿ, ನ.5- ಮನೆಯಿಂದ ಹಣ ಖರ್ಚು ಮಾಡಿ ಚುನಾವಣೆ ಮಾಡುವ ಒಂದು ಕಾಲವಿತ್ತು. ಆದರೆ, ಇದೀಗ ಕಾಂಗ್ರೆಸ್‍ನವರು ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಆಯ್ಕೆಯಾಗಿದ್ದಾರೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಭರವಸೆ ಕೊಟ್ಟು ಅವುಗಳನ್ನು ಪಕ್ಷದ ಹಣದಿಂದ ಕೊಡದೆ ಸರ್ಕಾರದ ಖಜಾನೆಯಿಂದ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸ್ವಂತ ಹಣದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಸರ್ಕಾರದ ಖಜಾನೆಯಲ್ಲಿನ ಹಣವನ್ನು ಖರ್ಚು ಮಾಡಿ ಮೋಸ ಮಾಡಿ ಅಧಿಕಾರಕ್ಕೆ ಬಂದರು.

ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಯಾವುದೇ ಅಭಿವೃದ್ಧಿಯಾಗಿಲ್ಲ. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಹಿಂಗಾರು, ಮುಂಗಾರು ಕೈಕೊಟ್ಟಿದೆ. ಧಾರವಾಡ ಜಿಲ್ಲೆಯಲ್ಲಿಯೇ 2 ಲಕ್ಷ 20 ಸಾವಿರ ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಬೆಂಗಳೂರಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ರೈತರು ಬೋರವೇಲïಗಳನ್ನು ಉಪಯೋಗಿಸಲು ಸರಿಯಾಗಿ ವಿದ್ಯುತ್ ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ರೈತರಿಗೆ 2 ತಾಸು ವಿದ್ಯುತ್ ಕೊಡುತ್ತೇನೆ ಎಂದು ಹೇಳುತ್ತಾರೆ. ಆದರೆ ಎರಡು ತಾಸು ಸಹ ಸರಿಯಾಗಿ ವಿದ್ಯುತ್ ನೀಡಲಾಗುತ್ತಿಲ್ಲ. ಈ ಹಿಂದೆ ನಮ್ಮ ಸರ್ಕಾರವಿದ್ದಾಗ ಪ್ರತಿ ವರ್ಷ ವಿದ್ಯುತ್ ಮಾರಾಟ ಮಾಡಿ 2-3 ಸಾವಿರ ಕೋಟಿ ಹಣವನ್ನು ಸರ್ಕಾರದ ಖಜÁನೆಗೆ ಕೊಟ್ಟಿದ್ದೇವೆ.ಆದರೆ ಕಾಂಗ್ರೆಸ್‍ನವರು ಗ್ಯಾರಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಿ ತಿರುಗಾಡಿದರೇ ಹೊರತು ಮಳೆಯಿಲ್ಲ ವಿದ್ಯುತ್ ಸಮಸ್ಯೆ ಆಗುತ್ತದೆ ಎನ್ನುವ ಬಗ್ಗೆ ಯೋಚನೆ ಮಾಡಲು ಹೋಗಲಿಲ್ಲ.

ಈ ಸರ್ಕಾರಕ್ಕೆ ಯಾವುದೇ ರೀತಿಯ ಮುಂದಾಲೋಚನೆಯಿಲ್ಲ. ಕಲ್ಲಿದ್ದಲನ್ನು ಮೊದಲೇ ಖರೀದಿ ಮಾಡಿ ಶೇಖರಿಸಿ ಇಟ್ಟಿದ್ದರೆ ನಮಗೆ ಯಾವುದೇ ವಿದ್ಯುತ್ ಸಮಸ್ಯೆ ಆಗುತ್ತಿರಲಿಲ್ಲ. ಸಿದ್ದರಾಮಯ್ಯ ಗಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡುವ ಕೆಲಸ ಮಾಡುತ್ತಾರೆ. ಇದೀಗ ಕಲ್ಲಿದ್ದಲು ಖರೀದಿ ಮಾಡಲು ಹೋದರೆ ಆಗುವುದಿಲ್ಲ. ರಾಜ್ಯದಲ್ಲಿ ವಿದ್ಯುತ್ ಅಭಾವಕ್ಕೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರಣ.ಆದರೆ ಪ್ರತಿಯೊಂದು ವಿಚಾರದಲ್ಲಿಯೂ ಕಾಂಗ್ರೆಸ್‍ನವರು ನರೇಂದ್ರ ಮೋದಿ ಅವರ ಕಡೆಗೆ ಬೊಟ್ಟು ಮಾಡುವುದನ್ನು ಫ್ಯಾಷನ್ ಮಾಡಿಕೊಂಡಿದ್ದಾರೆ.

ಇವತ್ತು ಜಿಲ್ಲೆಯ ನಾಲ್ಕು ತಾಲೂಕಿನ ಜನರು ಗುಳೆ ಹೊರಟ್ಟಿದ್ದಾರೆ. ರೈತರು ಜಾನುವಾರುಗಳನ್ನು ಸಾಕುವುದು ಕಷ್ಟವಾಗಿದೆ. ಮೇವು ಸಿಗುತ್ತಿಲ್ಲ, ರೈತರಿಗೆ ಮೇವು ಬ್ಯಾಂಕ್ ಮಾಡಿ, ಮೇವು ಪೂರೈಸುವ ಕೆಲಸ ಸರ್ಕಾರ ಮಾಡಬೇಕಿತ್ತು, ಆದರೆ ಮಾಡಿಲ್ಲ. ಕುಡಿಯುವ ನೀರಿನ ಸಮಸ್ಯೆಯಾಗಿದೆ, ಅದನ್ನು ನಿವಾರಿಸುವ ಕೆಲಸವನ್ನೂ ಸರ್ಕಾರ ಮಾಡಿಲ್ಲ ಎಂದು ಹರಿಹಾಯ್ದರು.

ಹಾಸನಾಂಬೆ ವಿಶೇಷ ದರ್ಶನ ಪಾಸ್‌ಗಳಿಂದ ಎರಡೇ ದಿನಗಳಲ್ಲಿ ಭಕ್ತರಿಂದ 24 ಲಕ್ಷ ರೂ. ಸಂಗ್ರಹ

ಹಾಸನ, ನ.5- ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ನ.3 ಹಾಗೂ ನ.4ರ ವಿಶೇಷ ದರ್ಶನಕ್ಕೆ 1000ರೂ. ಮುಖ ಬೆಲೆಯ 860 ಪಾಸ್ ಮಾರಾಟವಾಗಿದ್ದು 8,60,000 ರೂ. ಸಂಗ್ರಹಿಸಲಾಗಿದೆ.300 ಮುಖ ಬೆಲೆಯ 5178 ಪಾಸ್ ಮಾರಾಟ ಮಾಡಲಾಗಿ 15,53,400ರೂ. ಸಂಗ್ರಹಿಸಲಾಗಿದ್ದು, ಒಟ್ಟು 23,13,400ರೂ. ಸಂಗ್ರಹವಾಗಿದೆ ಎಂದು ಎಡಿಎಲ್ ಆರ್.ಸುಜಯ್ ಮಾಹಿತಿ ನೀಡಿದ್ದಾರೆ. ಲಾಡು ಮಾರಾಟದಿಂದ 5,12,340 ಸಂಗ್ರಹಿಸಲಾಗಿದೆ. ಆಳ್ವಾಸ್ ಸಾಂಸ್ಕøತಿಕ ಕಾರ್ಯಕ್ರಮ: ನಗರದ ಕಲಾ ಕಾಲೇಜಿನಲ್ಲಿ ಸಂಜೆ 7 ಗಂಟೆಗೆ ಹಮ್ಮಿಕೊಂಡಿರುವ ಆಳ್ವಾಸ್ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಆಗಮಿಸುವ ನಿರೀಕ್ಷೆ ಇದೆ.

ರಾಜ್ಯದಲ್ಲಿ ವಿಶೇಷವಾದ ಸಾಂಸ್ಕøತಿಕ ಕಾರ್ಯಕ್ರಮ ಆಯೋಜನೆಯಲ್ಲಿ ಪ್ರಖ್ಯಾತಿ ಪಡೆದಿರುವ ಆಳ್ವಾಸ್ ನುಡಿಸಿರಿ ತಂಡವು ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಯೋಜನೆ ಮಾಡುತ್ತಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವ ನಿರೀಕ್ಷೆ ಇದೆ. ಈ ಸಂಬಂಧ ಪೊಲೀಸ್ ಇಲಾಖೆಯಿಂದಲೂ ಅಗತ್ಯ ಬಂದೋಬಸ್ತ ವ್ಯವಸ್ಥೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸ್ಕೌಟ್ಸ್ ಮತ್ತು ಗೈಡ್ಸ್ ತಂಡದಿಂದ ಅಳಿಲು ಸೇವೆ:

ಹಾಸನಾಂಬ ದರ್ಶನೋತ್ಸವ ಪ್ರಾರಂಭವಾದ ದಿನದಿಂದ ಸ್ಕೌಟ್ಸ್ ಮತ್ತು ಗೈಡ್ಸ್ ತಂಡದ ಸದಸ್ಯರು ಭಕ್ತಾದಿಗಳಿಗೆ ದರ್ಶನಕ್ಕೆ ನೆರವಾಗುವ ಮೂಲಕ ಅಳಿಲು ಸೇವೆ ನೀಡುತ್ತಿದ್ದು , ಸುಮಾರು 200 ಮಂದಿ ನಿಯೋಜನೆಗೊಂಡಿದ್ದಾರೆ.

ಪ್ರತಿದಿನ ಭಕ್ತಾದಿಗಳಿಗೆ ನೀರು- ಮಜ್ಜಿಗೆ ವಿತರಿಸುತ್ತಿರುವ ಇವರ ತಂಡ ವಿಕಲಚೇತನ, ವೃದ್ಧ ಭಕ್ತಾದಿಗಳಿಗೆ ವೀಲ್ ಚೇರ್‍ಗಳ ಮೂಲಕ ದೇವಾಲಯದ ಆವರಣಕ್ಕೆ ಕರೆದುಕೊಂಡು ಬಂದು ದೇವರ ದರ್ಶನ ಮಾಡಿಸಿ ಪುನಃ ನಿಗದಿತ ಸ್ಥಳಕ್ಕೆ ತಲುಪಿಸುತ್ತಿದ್ದಾರೆ.

ಮಡಿಕೇರಿಯ ಬಾಂಬ್ ಸ್ಕ್ವಾಡ್‍ನಿಂದ ಪರಿಶೀಲನೆ:
ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇವಾಲಯದ ಆವರಣಕ್ಕೆ ಅಲಂಕಾರಕ್ಕೆ ಬಳಸುವ ಹೂವು ಹಾಗೂ ಇತರ ವಸ್ತುಗಳ ಪರಿಶೀಲನೆಗಾಗಿಯೇ ಪೊಲೀಸ್ ಇಲಾಖೆಯಿಂದ ನಿಯೋಜನೆಗೊಂಡಿರುವ ತಂಡವು ಇಂದು ಪರಿಶೀಲನೆ ನಡೆಸಿತು.ಮಡಿಕೇರಿಯಿಂದ ಆಗಮಿಸಿರುವ 8 ಮಂದಿಯ ತಂಡ ಇಂದು ಹಾಸನಾಂಬ ದೇವಾಲಯದ ಆವರಣ ಹಾಗೂ ದೇವಾಲಯದ ಸುತ್ತಮುತ್ತ ಹೊರಗಡೆಯಿಂದ ತಂದು ಅಲಂಕಾರಕ್ಕೆ ಬಳಸಲಾಗುತ್ತಿರುವ ಹೂವಿನ ಹಾರ ಹಾಗೂ ಇತರೆ ವಸ್ತುಗಳನ್ನು ಬಾಂಬ ಪತ್ತೆ ಉಪಕರಣದ ಮೂಲಕ ಎಎಸ್‍ಐ ಶಿವಾನಂದಾ ಹಾಗೂ ರಂಗನಾಥ್ ಪರಿಶೀಲನೆ ನಡೆಸಿದರು.

ದರ್ಶನೋತ್ಸವ ಹಿನ್ನೆಲೆ ವಿವಿಧ ಕಾರ್ಯಕ್ರಮ:

ಹಾಸನಾಂಬ ದರ್ಶನೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಈ ಬಾರಿ ವಿಶೇಷವಾಗಿ ಆಯೋಜಿಸಲಾಗಿದ್ದ ಆಗಸದಿಂದ ಹಾಸನ ಹೆಲಿ ಟೂರಿಸಂ, ಪ್ಯಾರಾಸೆಲಿಂಗ್, ಪ್ಯಾರಾ ಮೋಟರಿಂಗ್, ಪ್ಯಾಕೇಜ್ ಸಾರಿಗೆ ಪ್ರವಾಸದಲ್ಲಿ ಬಹುತೇಕ ಮಂದಿ ಪ್ರಯೋಜನ ಪಡೆದಿದ್ದಾರೆ.

ಹೆಲಿ ಟೂರಿಸಂನಲ್ಲಿ ನ.3ರಂದು 85 ಮಂದಿ ಆಗಸದಲ್ಲಿ ಹಾರಾಟ ನಡೆಸಿದ್ದಾರೆ. ಇಂದು 135 ಮಂದಿ ಹೆಲಿಕ್ಯಾಪ್ಟರ್‍ನಲ್ಲಿ ಹಾಸನ ನಗರ ಸೇರಿದಂತೆ ಹಾಸನಾಂಬ ದೇವಾಲಯ ವೀಕ್ಷಣೆ ಮಾಡಿದ್ದು, ಪ್ರತಿ ಬಾರಿಯೂ ಐದರಿಂದ ಆರು ಮಂದಿ ಹೆಲಿಕ್ಯಾಪ್ಟರ್‍ನಲ್ಲಿ ಸಂಚರಿಸಿದ್ದು ಇದುವರೆಗೆ ಒಟ್ಟು 210 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ.

ಪ್ರತಿ ವ್ಯಕ್ತಿಗೆ 4300ರೂ. ದರ ನಿಗದಿ ಮಾಡಲಾಗಿದ್ದು, ಇನ್ನು ಎರಡು ದಿನಗಳ ಕಾಲ ಕಾರ್ಯಕ್ರಮ ಮುಂದುವರೆಯಲಿದ್ದು ಇಂದು ಮತ್ತು ನಾಳೆ ಹೆಚ್ಚಿನ ಸಂಖ್ಯೆಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಹಾಸನ ನಗರ ವೀಕ್ಷಣೆ ಮಾಡಲಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ಅಭಿಯಂತರ ಮನು ತಿಳಿಸಿದ್ದಾರೆ.

ನ.3ರಂದು ಪ್ಯಾರಾ ಸೈಲಿಂಗ್‍ನಲ್ಲಿ 50 ಮಂದಿ, ಪ್ಯಾರಾ ಮೋಟರಿಂಗ್‍ನಲ್ಲಿ 15 ಮಂದಿ ಆಗಸದಲ್ಲಿ ಹಾರಾಟ ನಡೆಸಿದ್ದು, 30 ಮಂದಿ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ ಎಂದು ಅಕಾರಿ ನಂದಕುಮಾರ್ ಮಾಹಿತಿ ನೀಡಿದ್ದಾರೆ.

ಕೆಎಸ್‍ಆರ್‍ಟಿಸಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಪ್ರಕೃತಿ ಪ್ರವಾಸೋದ್ಯಮ ಪ್ಯಾಕೇಜ್ ಟೂರ್ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಹೆಚ್ಚಿನ ಉತ್ಸಾಹ ಕಂಡಂತೆ ಕಾಣುತ್ತಿಲ್ಲ. ಇಂದು ಸಕಲೇಶಪುರ ಮಾರ್ಗ 425 ರೂ.ಗಳ ಪ್ಯಾಕೇಜ್ ಟೂರ್‍ಗೆ ಹಾಗೂ ಬೇಲೂರು ಮಾರ್ಗದ 350 ರೂ.ನ ಪ್ಯಾಕೇಜ್ ಸ್ಟೋರಿಗೆ ಎರಡು ಬಸ್‍ಗಳನ್ನು ನಿಯೋಜನೆ ಮಾಡಲಾಗಿದ್ದು, ಎರಡು ಮಾರ್ಗಗಳಿಂದ 45 ಮಂದಿ ಪ್ರವಾಸ ಮಾಡಿದ್ದಾರೆ ಎಂದು ಸಾರಿಗೆ ಇಲಾಖೆಯ ಅಧಿಕಾರಿ ರಕ್ಷಿತ್ ಮಾಹಿತಿ ನೀಡಿದ್ದಾರೆ.

ಇಂದು ಹಾಗೂ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.ಜಿಲ್ಲಾಡಳಿತದಿಂದ ನ.2ರಂದು ನಗರದ ಹಾಸನಾಂಬ ಕಲಾ ಕ್ಷೇತ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಸುಮಾರು 40 ಮಂದಿ ಮಹಿಳೆಯರು ಭಾಗವಹಿಸಿದ್ದು, ಇವರಲ್ಲಿ ಪ್ರಥಮ ಬಹುಮಾನ 5000, ದ್ವಿತೀಯ ಬಹುಮಾನ 2000 ಹಾಗೂ ತೃತೀಯ 1000 ಬಹುಮಾನ ವಿತರಣೆ ಮಾಡಲಾಗಿದೆ. ಉಳಿದ 32 ಸ್ರ್ಪಗಳಿಗೆ ತಲಾ 500 ರೂ. ಸಮಾಧಾನಕರ ಬಹುಮಾನ ವಿತರಿಸಲಾಗಿದೆ ಎಂದು ಅಕಾರಿ ಸುಧಾ ಅವರು ತಿಳಿಸಿದ್ದಾರೆ.

ಬೆಂಗಳೂರಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯ ಭೀಕರ ಹತ್ಯೆ

ಬೆಂಗಳೂರು, ನ.5- ನಗರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ(37) ಕೊಲೆಯಾಗಿರುವ ಅಧಿಕಾರಿ.

ಸುಬ್ರಮಣ್ಯಪುರ ವ್ಯಾಪ್ತಿಯ ದೊಡ್ಡಕಲ್ಲಸಂದ್ರ, ಕುವೆಂಪು ನಗರದ ಗೋಕುಲ ಅಪಾರ್ಟ್‍ಮೆಂಟ್‍ನ ಪಕ್ಕದಲ್ಲಿರುವ ಮನೆಯೊಂದರಲ್ಲಿ ಪ್ರತಿಮಾ ಅವರು 5 ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು. ಹತ್ತು ವರ್ಷದ ಹಿಂದೆ ಮದುವೆಯಾಗಿದ್ದ ಪ್ರತಿಮಾ ಅವರಿಗೆ ಒಬ್ಬ ಮಗನಿದ್ದಾನೆ. ಕೌಟುಂಬಿಕ ಸಮಸ್ಯೆಯಿಂದಾಗಿ ಪತಿಯಿಂದ ದೂರವಿದ್ದ ಪ್ರತಿಮಾ ಅವರು ಒಬ್ಬಂಟಿಯಾಗಿ ಈ ಮನೆಯಲ್ಲಿ ವಾಸವಾಗಿದ್ದರು. ಇವರ ಪತಿ ಹಾಗೂ ಮಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಮಾ ಅವರು ನಿನ್ನೆ ಎಂದಿನಂತೆ ಕೆಲಸಕ್ಕೆ ತೆರಳಿ ರಾತ್ರಿ 8 ಗಂಟೆ ಸುಮಾರಿಗೆ ಸರ್ಕಾರಿ ವಾಹನದಲ್ಲಿ ಮನೆಗೆ ಬಂದಿದ್ದು, ಚಾಲಕ ಇವರನ್ನು ಮನೆ ಬಳಿ ಡ್ರಾಪ್ ಮಾಡಿ ತೆರಳಿದ್ದಾನೆ.
ಪ್ರತಿಮಾ ಅವರು ಮನೆಗೆ ಬರುವುದನ್ನೇ ಕಾದಿದ್ದ ದುಷ್ಕರ್ಮಿಗಳು ಕೆಲವೇ ನಿಮಿಷಗಳಲ್ಲಿ ಇವರ ಮನೆಗೆ ನುಗ್ಗಿ ಚಾಕುವಿನಿಂದ ಪ್ರತಿಮಾ ಅವರಿಗೆ ಇರಿದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಪ್ರತಿಮಾ ಅವರ ಅಣ್ಣ, ಬಿಬಿಎಂಪಿ ಗುತ್ತಿಗೆದಾರರಾಗಿರುವ ಪ್ರತೀಶ್ ಅವರು ಸಹೋದರಿಯ ಮೊಬೈಲ್‍ಗೆ ರಾತ್ರಿ ಕರೆ ಮಾಡಿದಾಗ ಸ್ವೀಕರಿಸಿಲ್ಲ. ಎರಡು-ಮೂರು ಬಾರಿ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಬೆಳಗ್ಗೆ ಹೋಗಿ ವಿಚಾರಿಸೋಣ ಎಂದು ಸುಮ್ಮನಾಗಿದ್ದಾರೆ.
ಇಂದು ಬೆಳಗ್ಗೆ ಸಹೋದರಿ ಪ್ರತಿಮಾ ಅವರ ಮನೆಗೆ ಅಣ್ಣ ಪ್ರತೀಶ್ ಬಂದು ನೋಡಿದಾಗಲೇ ಸಹೋದರಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರು ಹಾಗೂ ಸಂಬಂಧಿಕರಿಗೆ ವಿಷಯ ತಿಳಿಸಿದ್ದಾರೆ.

ದೀಪಾವಳಿ ಬೋನಸ್ ರೂಪದಲ್ಲಿ ನೌಕರರಿಗೆ ಬೈಕ್ ಉಡುಗೊರೆ ನೀಡಿದ ಮಾಲೀಕ

ಸ್ಥಳಕ್ಕಾಗಮಿಸಿದ ಸುಬ್ರಮಣ್ಯಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಶ್ವಾನದಳದವರು ಸ್ಥಳಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ಶಹಪುರ ವಾಡ್ ಅವರು ಭೇಟಿ ನೀಡಿದ್ದರು.

ಉದ್ದೇಶಪೂರ್ವಕವಾಗಿ ಮೊದಲೇ ಸಂಚು ರೂಪಿಸಿ ಪ್ರತಿಮಾ ಅವರು ಕಚೇರಿಯಿಂದ ಮನೆಗೆ ಬರುವುದನ್ನೇ ಕಾದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಳ್ಳತನವಾಗದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ನನ್ನ ಸಹೋದರಿಯನ್ನು ಯಾರು, ಯಾತಕ್ಕಾಗಿ ಕೊಲೆ ಮಾಡಿದ್ದಾರೆಂಬುದು ಗೊತ್ತಿಲ್ಲ. ಯಾರೇ ಆಗಲಿ ಅವರನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸುವ ವಿಶ್ವಾಸ ನನಗಿದೆ ಎಂದು ಸಹೋದರ ಪ್ರತೀಶ್ ತಿಳಿಸಿದ್ದಾರೆ.

ಬೆಂಗಳೂರು ನಗರ ಡಿಸಿ ದಯಾನಂದ್ ಅವರು ಸ್ಥಳಕ್ಕೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕೆಲಸದ ವಿಚಾರದಲ್ಲಿ ಪ್ರತಿಮಾ ಅವರಿಗೆ ಯಾವುದೇ ಅಸಮಾದಾನ ಇರಲಿಲ್ಲ. ಕೆಲಸ ಸಂಬಂಧ ಅವರು ಯಾರ ಬಗ್ಗೆಯೂ ಯಾವುದೇ ಗಂಭೀರ ಆರೋಪ ಮಾಡಿರಲಿಲ್ಲ ಎಂಬುವುದು ಗೊತ್ತಾಗಿದೆ ಎಂದು ತಿಳಿಸಿದರು.

ಮೂರು ತಂಡ ರಚನೆ:
ಹಂತಕರ ಪತ್ತೆಗಾಗಿ ಎಸಿಪಿ ಪವನ್ ಅವರ ನೇತೃತ್ವದಲ್ಲಿ ಮೂರು ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ. ಇವರ ಮನೆಯ ರಸ್ತೆ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಟಿವಿಗಳನ್ನು ಪರಿಶೀಲಿಸಿ ಅದರಲ್ಲಿ ಸೆರೆಯಾಗಿರುವ ದುಷ್ಕರ್ಮಿಗಳ ಚಹರೆಯನ್ನು ಆಧರಿಸಿ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.

ಆತಂಕ:
ಒಂಟಿಯಾಗಿದ್ದ ಮಹಿಳಾ ಅಕಾರಿಯ ಕೊಲೆಯಾಗಿರುವ ವಿಷಯ ಬೆಳ್ಳಂಬೆಳ್ಳಗ್ಗೆ ಬೆಳಕಿಗೆ ಬರುತ್ತಿದ್ದಂತೆ ಅಕ್ಕ-ಪಕ್ಕದ ನಿವಾಸಿಗಳು, ಸುತ್ತಮುತ್ತಲಿನ ನಾಗರಿಕರು ಆತಂಕಗೊಂಡಿದ್ದಾರೆ.

ದೀಪಾವಳಿ ಬೋನಸ್ ರೂಪದಲ್ಲಿ ನೌಕರರಿಗೆ ಬೈಕ್ ಉಡುಗೊರೆ ನೀಡಿದ ಮಾಲೀಕ

ಕೊಯಮತ್ತೂರು, ನ.5- ತನ್ನ ಯಶಸ್ಸಿಗೆ ಕಾರಣರಾದ ಕಾರ್ಮಿಕರಿಗೆ ದೀಪಾವಳಿ ಹಬ್ಬದ ಬೋನಸ್ ರೂಪದಲ್ಲಿ ದುಬಾರಿ ಬೆಲೆಯ ಬೈಕ್ಗಳು ಹಾಗೂ ಎಲೆಕ್ಟ್ರಿಕ್ ಉಪಕರಣಗಳನ್ನು ಮಾಲೀಕರೊಬ್ಬರು ಉಡುಗೊರೆ ನೀಡಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ. ತ್ರಿಪುರದ ವಂಜಿಪಾಳ್ಯಮ್ ನ ಪಿ. ಶಿವಕುಮಾರ್ ಅವರೇ ತಮ್ಮ ನೌಕರರಿಗೆ ದುಬಾರಿ ಮೌಲ್ಯದ ಉಡುಗೊರೆ ನೀಡಿರುವ ಮಾಲೀಕ ರಾಗಿದ್ದಾರೆ.

ಶಿವಕುಮಾರ್ (42) ಅವರು ನೀಲಗಿರಿಸ್ನಲ್ಲಿ 190 ಎಕರೆ ಟೀ ಎಸ್ಟೇಟ್, ಹಾಗೂ ಕೊಟಾಗಿರಿ ಬಳಿ 315 ಎಕರೆ ಜಮೀನಿನಲ್ಲಿ ಹೂವು, ತರಾಕಾರಿ ಹಾಗೂ ಇನ್ನಿತರ ಕೃಷಿ ಸಂಬಂತ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅವರ ಬಳಿ 2 ದಶಕಕ್ಕೂ ಹೆಚ್ಚು ಕಾಲದಿಂದ 627 ಕಾರ್ಮಿಕರು ಕೆಲಸ ಮಾಡುತ್ತಿ ದ್ದಾರೆ.

1 ಶತಕೋಟಿ ಡಾಲರ್‌ಗಿಂತ ಹೆಚ್ಚು ಆದಾಯ ಕಳೆದುಕೊಂಡ ಅಫ್ಘಾನಿಸ್ತಾನ

ಶಿವಕುಮಾರ್ ಅವರಿಗೆ ತಂದೆಯ ಮೂಲದಿಂದ ಬಂದ ಗಾರ್ಮೆಂಟ್ಸ್ ಅನ್ನು ನಡೆಸುತ್ತಿದ್ದಾರೆ. ಆರಂಭದಲ್ಲಿ ಶಿವಕುಮಾರ್ ಅವರ ಬಳಿ ಕೇವಲ 60 ಎಕರೆ ಭೂಮಿ ಇತ್ತು. ಆದರೆ ನೌಕರರು ಹಾಗೂ ಕಾರ್ಮಿಕರ ಶ್ರಮದ ಫಲದಿಂದ ತಾನು ಸಾಕಷ್ಟು ಭೂಮಿ ಹಾಗೂ ಹಣವನ್ನು ಗಳಿಸಿದ್ದರು. ತನ್ನ ಏಳಿಗೆಗೆ ಕಾರಣರಾದ ನೌಕರರನ್ನು ಪ್ರೋತ್ಸಾಹಿಸುವ ಸಲುವಾಗಿ ಶಿವಕುಮಾರ್ ಅವರು ನೌಕರರು ಹಾಗೂ ಕಾರ್ಮಿಕರಿಗೆ ಬೋನಸ್ ನೀಡುವುದರ ಜೊತೆಗೆ ಮನೆಗೆ ಬೇಕಾಗುವ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೂಡ ಉಡುಗೊರೆ ರೂಪದಲ್ಲಿ ನೀಡುತ್ತಿದ್ದರು.

ನೌಕರರಿಗೆ ದುಬಾರಿ ಬೈಕ್ ನೀಡಿದ ಮಾಲೀಕ:
ಶಿವಕುಮಾರ್ ಅವರು ನೌಕರರನ್ನು ಮತ್ತಷ್ಟು ಉತ್ತೇಜಿಸುವ ಸಲುವಾಗಿ ಈ ವರ್ಷದ ದೀಪಾವಳಿ ಹಬ್ಬದ ಉಡುಗೊರೆ ರೂಪದಲ್ಲಿ ಮ್ಯಾನೇಜರ್, ಸೂಪರ್ವೈಸರ್, ಸ್ಟೋರ್ ಕೀಪರ್, ಕ್ಯಾಷಿಯರ್, ಚಾಲಕರು ಸೇರಿದಂತೆ 15 ಜನರಿಗೆ 2 ಲಕ್ಷ ಮೌಲ್ಯದ ದುಬಾರಿ ಬೈಕ್ಗಳು ಹಾಗೂ ಉಳಿದ ನೌಕರರು ಹಾಗೂ ಕಾರ್ಮಿಕರಿಗೆ ಎಲ್ಇಡಿ ಟಿವಿಗಳು ಸೇರಿದಂತೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಉಡುಗೊರೆ ರೂಪದಲ್ಲಿ ನೀಡಿದ್ದಾರೆ.

`ನನ್ನ ಬೆಳವಣಿಗೆಗೆ ನೌಕರರು ಸಾಕಷ್ಟು ಶ್ರಮ ವಹಿಸಿದ್ದಾರೆ ಆದ್ದರಿಂ ದಲೇ ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ಅವರಿಗೆ ಪ್ರತಿ ವರ್ಷ ಬೋನಸ್ ಜೊತೆಗೆ ಎಲೆಕ್ಟ್ರಾನಿಕ್ ವಸ್ತುಗಳನ್ನು ಉಡುಗೊರೆ ರೂಪದಲ್ಲಿ ನೀಡುತ್ತಿದ್ದೇನೆ. ಈ ಬಾರಿ 15 ನೌಕರರಿಗೆ 2 ಲಕ್ಷ ಮೌಲ್ಯದ ಬೈಕ್ಗಳು ಹಾಗೂ ಉಳಿದ ನೌಕರರಿಗೆ ಎಲ್ಸಿಟಿ ಟಿವಿಗಳು ಹಾಗೂ ಹಲವು ದುಬಾರಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಜೊತೆಗೆ ಶೇ. 18ರಷ್ಟು ಬೋನಸ್ ಕೊಟ್ಟಿದ್ದೇನೆ’ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಕ್ಕಳಿಗೆ ಉಚಿತ ಶಿಕ್ಷಣ:
ತನ್ನಲ್ಲಿ ಕೆಲಸ ಮಾಡುವ ನೌಕರರ ಮಕ್ಕಳಿಗೆ ಇಂಗ್ಲೀಷ್ ಶಾಲೆಯ ಸೌಲಭ್ಯ ಸಿಗಲಿ ಎಂಬ ಉದ್ದೇಶದಿಂದ ಕಳೆದ 3 ವರ್ಷಗಳಿಂದ ನಲಗೊಂಡ ಪಂಚಾಯಿತಿ ಪ್ರಾಥಮಿಕ ಶಾಲೆಯ ಪಕ್ಕ ಶಾಲೆಯೊಂದನ್ನು ತೆರೆದಿದ್ದಾರೆ. ಈ ಶಾಲೆಯಲ್ಲಿ 320 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು ಎಸ್ಟೇಟ್ನಲ್ಲಿ ಕೆಲಸ ಮಾಡುವ ನೌಕರರ 80 ಮಕ್ಕಳು ಕೂಡ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರ ಶಿಕ್ಷಣದ ವೆಚ್ಚವನ್ನು ತಾವೇ ಬರಿಸುತ್ತಿದ್ದಾರೆ. ಅಲ್ಲದೆ ತನ್ನಲ್ಲಿ ಕೆಲಸ ಮಾಡುವವರ ನೌಕರರು ಹಾಗೂ ಕಾರ್ಮಿಕರ ಆರೋಗ್ಯದ ದುಬಾರಿ ವೆಚ್ಚವನ್ನು ಕೂಡ ಶಿವಕುಮಾರ್ ಭರಿಸುತ್ತಿದ್ದಾರೆ.

ದತ್ತಪೀಠವನ್ನು ಹಿಂದೂ ಪೂಜಾ ಕೇಂದ್ರವಾಗಿ ಉಳಿಸಲು ಸಿಎಂ ಮಧ್ಯಸ್ಥಿಕೆಗೆ ಮುತಾಲಿಕ್ ಆಗ್ರಹ

ಚಿಕ್ಕಮಗಳೂರು,ನ.5-  ತಾಲೂಕಿನ ದತ್ತಪೀಠ ಹಿಂದೂಗಳ ಪೂಜಾ ಕೇಂದ್ರವಾಗಿ ಉಳಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಸ್ಥಿಕೆ ವಹಿಸಬೇಕೆಂದು ರಾಷ್ಟ್ರೀಯ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದರು.20ನೇ ವರ್ಷದ ದತ್ತಮಾಲಾ ಅಭಿಯಾನದ ಅಂಗವಾಗಿ ನಗರದ ಶಂಕರ ಮಠದ ಮುಂಭಾಗ ಏರ್ಪಡಿಸಿದ್ದ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು,  ಎಲ್ಲಾ ದಾಖಲೆಗಳು ಹಾಗೂ  ಸರ್ಕಾರಿ ದಾಖಲೆಗಳ ಪ್ರಕಾರ ದತ್ತಪೀಠ ಹಿಂದೂಗಳಿಗೆ ಸೇರಿದ್ದಾಗಿದೆ. ಈಗಾಗಲೇ ಇಬ್ಬರೂ ಹಿಂದು ಅರ್ಚಕರ ನೇಮಕಗೊಂಡು ತ್ರಿಕಾಲ ಪೂಜೆ ನಡೆಯುತ್ತಿದೆ ಎಂದರು.

ಮುಸ್ಲಿಮರ ಪವಿತ್ರ ಗ್ರಂಥ ಖುರಾನ್ ನ ಪ್ರಕಾರ ವಿವಾದವಿರುವ ಸ್ಥಳದಲ್ಲಿ ದರ್ಗಾ ಪ್ರಾರ್ಥನೆ ಸಲ್ಲಿಸುವಂತಿಲ್ಲ ಹಾಗಾಗಿ   ದತ್ತ ಪೀಠದಿಂದ ಸ್ವಲ್ಪವೇ ದೂರದಲ್ಲಿರುವ  ನಾಗೇನಹಳ್ಳಿ ಯಲ್ಲಿ ದರ್ಗಾ ಇದ್ದು ಅಲ್ಲಿ ಉರುಸ್ ಮಾಡಿಕೊಳ್ಳಲು ನಮ್ಮ ಯಾವುದೇ ಅಭ್ಯಂತರ ಇಲ್ಲ  ದತ್ತ ಪೀಠದ ಆವರಣದಲ್ಲಿರುವ ಗೋರಿಗಳನ್ನ ಸ್ಥಳಾಂತರಿಸಿ ಸಂಪೂರ್ಣ ಹಿಂದೂ ಭಕ್ತರ ಶ್ರದ್ಧಾ ಕೇಂದ್ರವಾಗಿ ಪರಿವರ್ತಿಸಲು ಹಿಂದೂ ಮುಸ್ಲಿಂ ಮುಖಂಡರನ್ನು ಚಿಕ್ಕಮಗಳೂರಿನಲ್ಲಿ ಸಭೆ ಸೇರಿಸಿ ಸೌಹಾರ್ದವಾಗಿ   ಬಗೆಹರಿಸಲು  ಮುಖ್ಯಮಂತ್ರಿಗಳು   ಮಧ್ಯಸ್ಥಿಕೆ ವಹಿಸಬೇಕೆಂದು ಮುಖ್ಯಮಂತ್ರಿಗಳನ್ನು  ಒತ್ತಾಯಿಸಿದರು.

 ಬಿಗಿ ಪೊಲೀಸ್ ಸರ್ಪಗಾವಲಿನಲ್ಲಿ  ಶೋಭ ಯಾತ್ರೆ

 ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದು ಬಸ್ತ್‍ನೊಂದಿಗೆ ಶೋಭ ಯಾತ್ರೆ ಹಾಗೂ ದತ್ತಪೀಠದಲ್ಲಿ ದತ್ತಮಾಲಾ ವಿಸರ್ಜನೆ ನಡೆಯಿತು.  ದತ್ತ ಮಾಲೆ ಧರಿಸಿದ ನೂರಾರು ಕಾರ್ಯಕರ್ತರು ಹಾಗೂ ದತ್ತ ಭಕ್ತರು ಶೋಭಾ   ಯಾತ್ರೆಯಲ್ಲಿ ಪಾಲ್ಗೊಂಡಿದ್ದರು ರಾಜ್ಯದ ಹುಬ್ಬಳ್ಳಿ, ಬೆಳಗಾಂ, ಬಾಗಲಕೋಟೆ, ಕೋಲಾರ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಸೇರಿದಂತೆ ವಿವಿಧ   ಜಿಲ್ಲೆಗಳಿಂದ ಹಾಗೂ ಜಿಲ್ಲೆಯ  ತಾಲೂಕುಗಳಿಂದ ದತ್ತ ಮಾಲೆ ಧರಿಸಿ  ದತ್ತಮಾಲಾಧಾರಿಗಳು ಯಾತ್ರೆಯಲ್ಲಿ ಭಾಗವಹಿಸಿದ್ದರು.

ನಗರದ ಶಂಕರ ಮಠದಿಂದ ಹೊರಟ ಶೋಭಾ ಯಾತ್ರೆಯಲ್ಲಿ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ರಾಜ್ಯಾಧ್ಯಕ್ಷ  ಗಂಗಾಧರ ಕುಲಕರ್ಣಿ, ಚಿಕ್ಕಮಗಳೂರು ವಿಭಾಗದ ಅಧ್ಯಕ್ಷ ರಂಜಿತ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ನವೀನಾ  ರಂಜಿತ್, ಜೇವರ್ಗಿ ಮಠದ ಸಿದ್ದಲಿಂಗ ಸ್ವಾಮೀಜಿ, ಅಲ್ಲಂ ಪುರದ ರಾಜೇಂದ್ರ ಸೇರಿದಂತೆ ಪಾಲ್ಗೊಂಡಿದ್ದರು.

ಸಿಎಂ ಕುರ್ಚಿ ಕಿತ್ತಾಟಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಡಿಕೆಶಿ

 ಶಂಕರ್ ಮಠದಿಂದ ಹೊರಟ ಮೆರವಣಿಗೆ ಬಸವನಹಳ್ಳಿ ಮುಖ್ಯ  ರಸ್ತೆಯ ಮೂಲಕ ಆಜಾದ್ ಪಾರ್ಕ್ ತಲುಪಿತು. ಬೆಳಿಗ್ಗೆನಿಂದ ಸಂಜೆವರೆಗೂ ಬಸವನಹಳ್ಳಿ ಮುಖ್ಯರಸ್ತೆ ಹಾಗೂ ಎಂಜಿ ರಸ್ತೆಯಲ್ಲಿ ವಾಹನಗಳ ನಿಲುಗಡೆ ಹಾಗೂ ಸಂಚಾರ ನಿಷೇಸಲಾಗಿತ್ತು .ಎರಡು ರಸ್ತೆಗಳ ಅಡ್ಡ ರಸ್ತೆಗಳಿಗೆ ಬ್ಯಾರಿಕೆಡ್ ಹಾಕಲಾಗಿತ್ತು. ಶೋಭ ಯಾತ್ರೆ ಯುದ್ಧಕ್ಕೂ ದತ್ತ ಭಕ್ತರು ಭಜನೆ ಹಾಗೂ ಜಯ ಘೋಷಗಳನ್ನು ಕೂಗಿದರು. ಮೆರವಣಿಗೆಯಲ್ಲಿ ಶ್ರೀರಾಮನ ಸ್ತಬ್ಧಚಿತ್ರ ಗಮನ ಸೆಳೆಯಿತು.

 ಆಜಾದ್ ಪಾರ್ಕಿನಿಂದ ವಿವಿಧ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿದ ದತ್ತ ಭಕ್ತರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಬ್ಯಾರಿಕ್ಯಾಡ್‍ನಲ್ಲಿ ಸಾಲಿನಲ್ಲಿ ನಿಂತು ದತ್ತ ಗುಹೆ ಪ್ರವೇಶಿಸಿ ದತ್ತಪಾದಿಕೆಗಳ ದರ್ಶನ ಪಡೆದರು.

ದತ್ತಪೀಠ ಮುಳ್ಳಯ್ಯನಗಿರಿ ಸೀತಾಳಯನ್ ಗಿರಿ, ಹೊನ್ನಮ್ಮನ ಹಳ್ಳ, ಗಾಳಿಕೆರೆ ಹಾಗೂ ಮಾಣಿಕ್ಯದಾರ ವಿವಿಧ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಸಲಾಗಿತ್ತು. ಅತ್ತಿ ಗುಂಡಿ ಮಾಣಿಕ್ಯದಾರ ಹಾಗೂ ನಗರದಲ್ಲಿ ಮೆರವಣಿಗೆ ಹೋಗುವ ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕ್ಯಾಮೆರಾ ಕಾರ್ಯಾಚರಣೆ ಮಾಡಲಾಗಿತ್ತು.

“ಕಾಂಗ್ರೆಸ್‍ನ ಒಬ್ಬ ಶಾಸಕನನ್ನು ಸೆಳೆಯಲೆತ್ನಿಸಿದರೆ ಬಿಜೆಪಿ-ಜೆಡಿಎಸ್‍ನಿಂದ 25 ಶಾಸಕರು ಕಾಂಗ್ರೆಸ್‍ಗೆ ಬರ್ತಾರೆ”

ಬೆಂಗಳೂರು,ನ.5- ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್‍ನ ಒಬ್ಬ ಶಾಸಕನನ್ನೂ ಸೆಳೆಯಲು ಬಿಜೆಪಿಯವರು ಯತ್ನಿಸಿದರೆ ಬಿಜೆಪಿ-ಜೆಡಿಎಸ್‍ನಿಂದ 25 ಶಾಸಕರು ಕಾಂಗ್ರೆಸ್‍ಗೆ ಬರಲು ಸಿದ್ದರಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲೂ ಬರ ಇದೆ. ರಾಜ್ಯ ಬಿಜೆಪಿಯಲ್ಲೂ ನಾಯಕತ್ವದ ಬರ ಇದೆ ಎಂದು ಲೇವಡಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ನಡೆದು ಆರು ತಿಂಗಳಾಗಿದೆ. ಬಜೆಟ್ ಅವೇಶನ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಮುಗಿದಿವೆ. ಆದರೆ ಈವರೆಗೂ ವಿಧಾನಸಭೆ-ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರನ್ನೇ ನೇಮಿಸಲಾಗಿಲ್ಲ. ಹೈಕಮಾಂಡ್ ನಾಯಕರು ರಾಜ್ಯದ ಬಿಜೆಪಿಗರನ್ನು ಹತ್ತಿರಕ್ಕೂ ಸೇರಿಸುತ್ತಿಲ್ಲ ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ನಾಯಕತ್ವದ ದಾರಿದ್ರ್ಯ ಇದೆ ಎಂಬುದನ್ನು ಒಪ್ಪಿಕೊಳ್ಳಲಾಗಿದೆ. ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ಹೇಳಲಾಗುತ್ತಿದೆ. ಬಿಜೆಪಿಯ ಬಸವರಾಜ ಬೊಮ್ಮಾಯಿ, ಅಶ್ವಥ್ ನಾರಾಯಣ, ಬಸನಗೌಡ ಪಾಟೀಲ್ ಯತ್ನಾಳ್, ವಿ.ಸುನೀಲ್ ಕುಮಾರ್ ಸೇರಿದಂತೆ ಎಲ್ಲರೂ ಅಸಮರ್ಥರೇ.ವಿರೋಧ ಪಕ್ಷದ ನಾಯಕನಾಗಲು ಇವರ್ಯಾರು ಲಾಯಕ್ಕಿಲ್ಲವೇ ಎಂದು ಪ್ರಶ್ನಿಸಿದರು.

1 ಶತಕೋಟಿ ಡಾಲರ್‌ಗಿಂತ ಹೆಚ್ಚು ಆದಾಯ ಕಳೆದುಕೊಂಡ ಅಫ್ಘಾನಿಸ್ತಾನ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್‍ನ 19 ಶಾಸಕರು ಬೇಷರತ್ ಬೆಂಬಲ ನೀಡಲಿದ್ದಾರೆ ಎಂಬ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ನಾಟಕೀಯವಾಗಿದೆ. ಅವರ ಹೇಳಿಕೆಗೆ ಅವರೇ ಸ್ಪಷ್ಟನೆ ನೀಡಬೇಕು. ನಮ್ಮಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿರುವ ಅವರು ಯಶಸ್ವಿಯಾಗುವುದಿಲ್ಲ ಎಂದರು.

ಕಾಂಗ್ರೆಸ್‍ನ 50 ಶಾಸಕರು ಬಿಜೆಪಿ ಹೈಕಮಾಂಡ್ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಶಾಸಕ ಮುರುಗೇಶ್ ನಿರಾಣಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ನಿರಾಣಿ ಸೋತು ಸುಣ್ಣವಾಗಿದ್ದಾರೆ. ಈಗ ಅವರು ಶಾಸಕರೂ ಕೂಡ ಅಲ್ಲ. ನಮ್ಮ ಶಾಸಕರ ಬಗ್ಗೆ ಅವರಿಗೇನು ಗೊತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ಮೊದಲು ಅವರ ಮನೆಯನ್ನು ನೋಡಿಕೊಳ್ಳಲಿ. ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ನಿಲ್ಲಿಸಲಿ. ಕಾಂಗ್ರೆಸ್‍ನ ಒಬ್ಬ ಶಾಸಕರನ್ನು ಸೆಳೆಯಲು ಯತ್ನಿಸಿದರೆ, ನಮ್ಮ ಕಡೆಗೆ ಅವರಿಂದ ಐದಾರು ಮಂದಿ ಬರುತ್ತಾರೆ. ಈಗಾಗಲೇ ಜೆಡಿಎಸ್-ಬಿಜೆಪಿಯ 25 ಶಾಸಕರು ಕಾಂಗ್ರೆಸ್‍ಗೆ ಬರಲು ತಯಾರಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‍ನ 60 ಮಂದಿ ಶಾಸಕರನ್ನು ಸೆಳೆಯುವುದು ಸರಳವಲ್ಲ,ಅಸಾಧ್ಯ ಎಂದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ 20 ಕ್ಷೇತ್ರಗಳನ್ನು ಗೆಲ್ಲಬೇಕಿದೆ ಎಂದು ಹೈಕಮಾಂಡ್ ನಮಗೆ ಗುರಿ ನಿಗದಿ ಮಾಡಿದೆ. ಕನಿಷ್ಟ 18ರಿಂದ 20 ಶಾಸಕರನ್ನು ಗೆಲ್ಲಲು ನಾವು ಕೂಡ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಸಚಿವರ ನೇತೃತ್ವದ ವೀಕ್ಷಕರ ಸಮಿತಿಗಳು ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಿ ವರದಿ ನೀಡುತ್ತಿವೆ ಎಂದು ಹೇಳಿದರು.

ಬಿಜೆಪಿಯವರು ಬರ ಅಧ್ಯಯನ ಮಾಡುವ ಬದಲು ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹೆಚ್ಚಿನ ಅನುದಾನ ಕೊಡಿಸಲು ಪ್ರಯತ್ನ ಮಾಡಲಿ. ಕೇಂದ್ರ ಸರ್ಕಾರ ಎನ್‍ಡಿಆರ್‍ಎಫ್‍ನಡಿ ನೀಡುವ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ 7800 ಕೋಟಿ ರೂ. ಬೆಳೆ ನಷ್ಟವಾಗಿದೆ. ಕೇಂದ್ರ ನೀಡುವ ಪರಿಹಾರ 480ರಿಂದ 500 ಕೋಟಿ ರೂ. ಇದು ಯಾವುದಕ್ಕೂ ಸಾಲುವುದಿಲ್ಲ.

ಕನಿಷ್ಟ ಅರ್ಧದಷ್ಟಾದರೂ ಪರಿಹಾರ ಕೊಡಬೇಕು. ಎನ್‍ಡಿಆರ್‍ಎಫ್‍ನ ನಿಯಮಾವಳಿಗಳನ್ನು ಪರಿಷ್ಕರಣೆ ಮಾಡುವಂತೆ ಮುಖ್ಯಮಂತ್ರಿಯವರ ಮೂರು ತಿಂಗಳಿಂದಲೂ ಕೇಂದ್ರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ರಾಜ್ಯ ಬಿಜೆಪಿಗರು ಮೊದಲು ಆ ಕಡೆ ಗಮನಹರಿಸಲಿ ಎಂದು ಹೇಳಿದರು.

ಮಥುರಾದಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದು ನಿಷೇಧ

ಮಥುರಾ(ಯುಪಿ), ನ.5- ದೀಪಾವಳಿ ಹಿನ್ನಲೆಯಲ್ಲಿ ಕೃಷ್ಣ ಜನ್ಮಸ್ಥಾನ ದೇವಸ್ಥಾನ ಮತ್ತು ಪಕ್ಕದ ಶಾಹಿ ಈದ್ಗಾ ಮಸೀದಿಯ ಸುತ್ತಮುತ್ತಲಿನ ಕೆಂಪು ಮತ್ತು ಹಳದಿ ವಲಯಗಳಲ್ಲಿ ಪಟಾಕಿ ಸಂಗ್ರಹ, ಮಾರಾಟ ಮತ್ತು ಸಿಡಿಸುವುದನ್ನು ನಿಷೇಸಲಾಗಿದೆ ಎಂದು ಮಥುರಾ ಜಿಲ್ಲಾಡಳಿತ ತಿಳಿಸಿದೆ.

ಎರಡೂ ದೇವಾಲಯಗಳು 13.37 ಎಕರೆ ಪ್ರದೇಶದಲ್ಲಿ ಕೆಂಪು ವಲಯದಲ್ಲಿವೆ. ಆದರೆ ಅದರ ಹೊರಗೆ 20 ಎಕರೆ ಪ್ರದೇಶವು ಗೋವಿಂದನಗರ ಮತ್ತು ಜಗನ್ನಾಥಪುರಿ ಮುಂತಾದ ಪ್ರದೇಶಗಳನ್ನು ಒಳಗೊಂಡಿರುವ ಹಳದಿ ವಲಯವಾಗಿದೆ. ನಗರದ ಉಳಿದ ಭಾಗಗಳನ್ನು ಹಸಿರು ವಲಯ ಎಂದು ಗುರುತಿಸಲಾಗಿದೆ.

ಸಿಎಂ ಕುರ್ಚಿ ಕಿತ್ತಾಟಕ್ಕೆ ಮತ್ತೊಂದು ಟ್ವಿಸ್ಟ್ ಕೊಟ್ಟ ಡಿಕೆಶಿ

ಕೃಷ್ಣ ಜನ್ಮಸ್ಥಾನ ಮತ್ತು ಶಾಹಿ ಈದ್ಗಾ ಭದ್ರತೆಯ ದೃಷ್ಟಿಯಿಂದ ಹಿಂದಿನ ವರ್ಷದಂತೆ ಈ ವರ್ಷವೂ ದೇವಾಲಯ ಮತ್ತು ಮಸೀದಿಯ ಕೆಂಪು ಮತ್ತು ಹಳದಿ ವಲಯಗಳಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲು ಅನುಮತಿಸಲಾಗುವುದಿಲ್ಲ ಎಂದು ನಗರ ಮ್ಯಾಜಿಸ್ಟ್ರೇಟ್ ಕಚೇರಿ ತಿಳಿಸಿದೆ.

ದೀಪಾವಳಿ ಸಂದರ್ಭದಲ್ಲಿ ದೇವಾಲಯಕ್ಕೆ ಭೇಟಿ ನೀಡುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಕಾರಿಗಳು ತಿಳಿಸಿದ್ದಾರೆ. ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಮತ್ತು ದೀಪಾವಳಿ ನಂತರವೂ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದರು.