Home Blog Page 1841

ಇಬ್ಬರು ಪಿಎಫ್‍ಐ ಸದಸ್ಯರ ಬಂಧನ

ಜೈಪುರ,ನ.4-ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಲಾಗಿದೆ.

ಜೊತೆಗೆ ಪಿಎಫ್‍ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ. ಎನ್‍ಐಎ ಪ್ರಕಾರ, ಬಂಧಿತರನ್ನು ವಾಜಿದ್ ಅಲಿ ಮತ್ತು ಮುಬಾರಿಕ್ ಅಲಿ ಎಂದು ಗುರುತಿಸಲಾಗಿದೆ, ಜೊತೆಗೆ ಪಿಎಫ್‍ಐನ ಇತರ ಮೂವರು ಸದಸ್ಯರಾದ ಮೊಹಮ್ಮದ್ ಆಸಿಫ್, ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಸೊಹೈಲ್?ನನ್ನು ಕೂಡ ವಶಕ್ಕೆ ಪಡೆದಿದೆ.

2047ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಕೇಂದ್ರ ಸರ್ಕಾರವನ್ನು ಹಿಂಸಾತ್ಮಕ ಕೃತ್ಯಗಳ ಮೂಲಕ ಉರುಳಿಸುವುದು ಅವರ ಗುರಿಯಾಗಿದೆ. ರಾಜಸ್ಥಾನ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಸ್ಲಿಂ ಯುವಕರನ್ನು ತೊಡಗಿಸಿಕೊಳ್ಳುವಲ್ಲಿ ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಆಸಿಫ್ ಭಾಗಿಯಾಗಿದ್ದಾರೆ ಎಂದು ಎನ್‍ಐಎ ಹೇಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ

ಎನ್‍ಐಎ ಪ್ರಕಾರ, ಝಕಾತ್ (ಸಾಮಾಜಿಕ ಅಭಿವೃದ್ಧಿಗಾಗಿ ಒಂದು ರೀತಿಯ ದತ್ತಿ ನಿಧಿ) ಸೋಗಿನಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಂದ ಹಣವನ್ನು ಸಂಗ್ರಹಿಸಿದೆ ಆದರೆ ಶಸ್ತ್ರಾಸ್ತ್ರ ತರಬೇತುದಾರರನ್ನು ಬೆಂಬಲಿಸಲು ಮತ್ತು ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ. ಪಿಎಫ್‍ಐಅನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 2022 ರಲ್ಲಿ ನಿಷೇಧಿಸಿತ್ತು.

ದೆಹಲಿಗೆ ಹೊಂದಿಕೊಂಡ ಹಲವು ನಗರಗಳಲ್ಲಿ ಕಂಪಿಸಿದ ಭೂಮಿ

ನವದೆಹಲಿ,ನ.4- ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ದೆಹಲಿಗೆ ಹೊಂದಿಕೊಂಡಂತಿರುವ ಹಲವು ನಗರಗಳಲ್ಲಿ ಶುಕ್ರವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ. ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು ಮಾಹಿತಿ ನೀಡಿದೆ.

ಕಂಪನದ ಕೇಂದ್ರ ಸ್ಥಾನದಿಂದ ಅಂದಾಜು 500 ಕಿ.ಮೀ. ದೂರವಿರುವ, ಭಾರತದ ರಾಜಧಾನಿ ದೆಹಲಿಯಲ್ಲೂ ಕಂಪನದ ಅನುಭವಗಳಾಗಿವೆ. ಆದರೆ, ಯಾವುದೇ ಕಟ್ಟಡ ಹಾನಿ ಅಥವಾ ಸಾವು ನೋವು ಸಂಭವಿಸಿಲ್ಲ. ದೆಹಲಿ – ರಾಷ್ಟ್ರ ರಾಜಧಾನಿ ಪ್ರಾಂತ್ಯ (ದೆಹಲಿ – ಎನ್ ಸಿಆರ್) ಹಾಗೂ ನೊಯ್ಡಾ ಮುಂತಾದ ಕಡೆಗಳಲ್ಲಿ ಕಂಪನದ ಅನುಭವ ಉಂಟಾಗಿದೆ.

ನೇಪಾಳದಲ್ಲಿ ಸಂಭವಿಸಿದ ಈ ಪ್ರಬಲ ಭೂಕಂಪದಿಂದಾಗಿ ಭಾರತದ ಜನರೂ ಭಯಭೀತರಾಗಿದ್ದಾರೆ. ರಾತ್ರಿ 11.32ರ ಸುಮಾರಿಗೆ ಭೂಕಂಪ ಸಂಭವಿಸಿದ್ದರಿಂದ ಜನರು ಮನೆಯಿಂದ ಹೊರ ಬರಬೇಕಾಯಿತು. ದೆಹಲಿಯ ಪಕ್ಕದಲ್ಲಿರುವ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದ್ದು, ಬಹುಮಹಡಿ ಕಟ್ಟಡಗಳಲ್ಲಿ ವಾಸಿಸುವ ಅನೇಕ ಜನರು ಹೊರಬಂದಿದ್ದಾರೆ.

ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ

ಉತ್ತರ ಪ್ರದೇಶದ ಲಕ್ನೋ, ಬಸ್ತಿ, ಬಾರಾಬಂಕಿ, ಫಿರೋಜಾಬಾದ್, ಅಮೇಥಿ, ಗೊಂಡಾ, ಪ್ರತಾಪಗಢ, ಭದೋಹಿ, ಬಹ್ರೈಚ್, ಗೋರಖ್ಪುರ ಮತ್ತು ಡಿಯೋರಿಯಾ ಜಿಲ್ಲೆಗಳಲ್ಲಿ ಭೂಕಂಪನದ ಅನುಭವವಾಗಿದೆ, ಜೊತೆಗೆ ಬಿಹಾರದ ಕತಿಹಾರ್, ಮೋತಿಹಾರಿ ಮತ್ತು ಪಾಟ್ನಾದಲ್ಲೂ ಭೂಮಿ ನಡುಗಿದೆ.

ನೇಪಾಳದಲ್ಲಿ ಪ್ರಬಲ ಭೂಕಂಪ, 129 ಮಂದಿ ಸಾವು

ಕಠ್ಮಂಡು,ನ.4-ಭಾರತಕ್ಕೆ ಹೊಂದಿಕೊಂಡಿರುವ ನೆರೆಯ ಪುಟ್ಟ ರಾಷ್ಟ್ರ ನೇಪಾಳದಲ್ಲಿ ಕಳೆದ ತಡರಾತ್ರಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 129 ಮಂದಿ ಸಾವನ್ನಪ್ಪಿ, ಒಂದು ಸಾವಿರಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಭೂಕಂಪದಿಂದಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಪ್ರಬಲ ಭೂಕಂಪ ಸಂಭವಿಸಿರುವುದರಿಂದ ನೇಪಾಳ ತತ್ತರಿಸಿ ಹೋಗಿದೆ. ಘಟನೆಯಲ್ಲಿ ಜಾಜರ್ ಕೋಟ್‍ನ ನಲ್ಗಢ್ ಪುರಸಭೆಯ ಉಪಮೇಯರ್ ಸರಿತಾ ಸಿಂಗ್ ಅವರು ಸಾವನ್ನಪ್ಪಿದ್ದಾರೆ.

ಉಪಮೇಯರ್ ಸಿಂಗ್ ಅವರು ಪಾಲಿಕೆಯ ಪ್ರಧಾನ ಕಚೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿದ್ದರು. ಈ ವೇಳೆ ಭೂಕಂಪನದಿಂದ ಕಟ್ಟಡದಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಕರ್ನಾಲಿ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಡಿಐಜಿ ಭೀಮ್ ಧಾಕಲ್ ಮಾಹಿತಿ ನೀಡಿದ್ದಾರೆ. ಉಪಮೇಯರ್ ಸರಿತಾ ಸಿಂಗ್ ನೇಪಾಳಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದರು.

ಭಾರತ-ನೇಪಾಳ ಗಡಿಯಲ್ಲಿರುವ ಕತಿಹಾರ್, ಮೋತಿಹಾರಿ ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಕಂಪನದ ಅನುಭವವಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದುವು ನೇಪಾಳದ ಅಯೋಧ್ಯೆಯ ಉತ್ತರಕ್ಕೆ 227 ಕಿಮೀ ಮತ್ತು ಕಠ್ಮಂಡುವಿನಿಂದ 331 ಕಿಮೀ ಪಶ್ಚಿಮ ವಾಯುವ್ಯದಲ್ಲಿ 10 ಕಿಮೀ ಆಳದಲ್ಲಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯನ್ನು ಈ ಕಂಪನಗಳು ಹೊಂದಿದ್ದವು ಎಂದು ಅಮೆರಿಕದ ಜಿಯೋಲಜಿಕಲ್ ಸರ್ವೆ ಇಲಾಖೆ ತಿಳಿಸಿದೆ.

ಭೂಕಂಪದಿಂದ ಹಲವು ಮನೆಗಳು ಧ್ವಂಸಗೊಂಡಿವೆ. ರುಕುಮ್ ವೆಸ್ಟ್‍ನಲ್ಲಿ 35 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳಿ ಅಧಿಕಾರಿಗಳು ದೃಢಪಡಿಸಿದ್ದಾರೆ, ಜಜಕೋರ್ಟ್ ಜಿಲ್ಲೆಯಲ್ಲಿ ಇದುವರೆಗೆ 34 ಜನರು ಸಾವನ್ನಪ್ಪಿದ್ದಾರೆ. ಭೂಕಂಪದ ನಂತರ ರಕ್ಷಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.

ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ

ತಕ್ಷಣದ ರಕ್ಷಣೆ ಮತ್ತು ಪರಿಹಾರಕ್ಕಾಗಿ ಎಲ್ಲಾ 3 ಭದ್ರತಾ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ ಎಂದು ನೇಪಾಳ ಪಿಎಂಒ ಟ್ವೀಟ್ ಮಾಡಿದೆ. ನೇಪಾಳದಲ್ಲಿನ ತೀವ್ರತೆ ಭೂಕಂಪನವನ್ನು ಕಣ್ಣಾರೆ ಕಂಡ ಜನರು, ಭಯಬೀತರಾಗಿದ್ದು, ಭೂಕಂಪ ಪೀಡಿತ ಪ್ರದೇಶಗಳಲ್ಲಿ ಕಟ್ಟಡಗಳು ಉರುಳುತ್ತಿದ್ದುದು, ಅದರ ಅಡಿಗಳಲ್ಲಿ ಜನರು ಸಿಲುಕಿಕೊಂಡು ಜೋರಾಗಿ ಕೂಗಾಡುತ್ತಿದ್ದುದ್ದನ್ನು ಕಣ್ಣಾರೆ ಕಂಡಿದ್ದಾರೆ.

ಅಲ್ಲದೇ ಧರೆಗುರುಳಿದ ಕಟ್ಟಡಗಳಲ್ಲಿ ಅನೇಕ ಮಂದಿ ಸಿಲುಕಿದ್ದಾರೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ನೇಪಾಳದ ಪಶ್ಚಿಮ ಭಾಗದಲ್ಲಿರುವ ಜಾಜರ್ ಕೋಟ್ ಜಿಲ್ಲೆಯಲ್ಲಿ 26 ಮಂದಿ ಸಾವಿಗೀಡಾಗಿದ್ದಾರೆ, ರುಕ್ಕುಮ್ ಜಿಲ್ಲೆಯಲ್ಲಿ 33 ಮಂದಿ ಸಾವಿಗೀಡಾಗಿದ್ದಾರೆ. ಈಗಾಗಲೇ 70 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಆದರೆ, ಸರ್ಕಾರ ಈ ಬಗ್ಗೆ ಅಕೃತ ಪ್ರಕಟಣೆ ಹೊರಡಿಸಿಲ್ಲ.

ಸಹಸ್ರಾರು ವರ್ಷಗಳ ಹಿಂದೆ ಭಾರತವಿರುವ ಭೂಭಾಗವು, ಯೂರೇಷಿಯನ್ ಭೂಭಾಗವನ್ನು ಒತ್ತಿಕೊಂಡು ಹೋಗಿದ್ದರಿಂದಾಗಿ ಹಿಮಾಲಯ ಪರ್ವತಗಳು ಸೃಷ್ಟಿಯಾಗಿವೆ ಎಂದು ಹೇಳಲಾಗಿದೆ.

ಆದರೆ, ಭಾರತದ ಭೂಭಾಗವು, ಯುರೇಷಿಯನ್ ಭೂಭಾಗವನ್ನು ಸ್ಪರ್ಶಿಸಿದ್ದ ಭಾಗದಲ್ಲೇ ನೇಪಾಳ ದೇಶವಿದೆ. ಹಾಗಾಗಿ, ಇಲ್ಲಿ ಪ್ರಾಕೃತಿಕ ವಿಕೋಪಗಳು ಸಾಮಾನ್ಯ ಸಂಗತಿಗಳಾಗಿದ್ದು ಅದರಲ್ಲೂ ವಿಶೇಷವಾಗಿ ಆ ದೇಶ ಆಗಾಗ್ಗೆ ಭೂಕಂಪನಗಳಿಗೆ ಈಡಾಗುತ್ತಿರುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸುಮಾರು ಆರು ತಿಂಗಳ ಹಿಂದೆಯೂ ಅಲ್ಲಿ ಒಂದೇ ದಿನ ಎರಡು ಬಾರಿ ಭೂಮಿ ಕಂಪಿಸಿತ್ತು.

40 ಸೆಕೆಂಡುಗಳ ಕಾಲ ನಡುಗಿದ ಭೂಮಿ: ಭೂಕಂಪವು ರಾತ್ರಿ 11.47 ಕ್ಕೆ ಅಪ್ಪಳಿಸಿತು. ಅದರ ಕೇಂದ್ರಬಿಂದುವು ಜಜಕೋರ್ಟ್‍ನ ಭೂಮಿಯಿಂದ 10 ಕಿ.ಮೀ. ಆಳದಲ್ಲಿದೆ ಕಂಡು ಬಂದಿದೆ. ಭೂಕಂಪನದ ಪ್ರಭಾವ ಭಾರತ ಮತ್ತು ಚೀನಾದಲ್ಲಿಯೂ ಕಂಡುಬಂದಿದೆ. ಭಾರತದಲ್ಲೂ ಸುಮಾರು 20 ರಿಂದ 40 ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಡಿಯೋ ವೈರಲ್: ರಾತ್ರಿ 11.32ರ ವೇಳೆಗೆ ಭೂಕಂಪನದ ಅನುಭವವಾಗಿದೆ. ಜನರು ಊಟ ಮಾಡಿ ಮಲಗಲು ತಯಾರಿ ನಡೆಸುತ್ತಿದ್ದ ಸಮಯದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ ಜನರು ತಮ್ಮ ಮನೆಗಳಿಂದ ಹೊರ ಓಡಿ ಬಂದಿದ್ದಾರೆ. ಬಳಿಕ ಜನರು ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪದ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಮನೆಯ ಮತ್ತು ರಸ್ತೆ ದೀಪಗಳು ಹಾಗೂ ಸೀಲಿಂಗ್ ಫ್ಯಾನ್ ಅಲುಗಾಡುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಪ್ರಧಾನಿ ಸಂತಾಪ: ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರು ಭೂಕಂಪದಿಂದ ಜೀವ ಮತ್ತು ಆಸ್ತಿ ನಷ್ಟಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಜಜಕೋರ್ಟ್‍ನ ರಾಮಿದಂಡಾದಲ್ಲಿ ಸಂಭವಿಸಿದ ಭೂಕಂಪದಿಂದ ಜೀವ ಮತ್ತು ಆಸ್ತಿ ನಷ್ಟಕ್ಕೆ ಪ್ರಧಾನಿ ಪುಷ್ಪ ಕಮಲ್ ದಹಲ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ ಎಂದು ನೇಪಾಳದ ಪಿಎಂಒ ಟ್ವೀಟ್ ಮಾಡಿದೆ.

ಪೊಲೀಸ್ ಸಿಬ್ಬಂದಿಗಳು ಕಡ್ಡಾಯವಾಗಿ ಪರೇಡ್‍ನಲ್ಲಿ ಭಾಗವಹಿಸಿ : ದಯಾನಂದ

ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಪ್ರಾಣಹಾನಿ ಮತ್ತು ಹಾನಿಯಿಂದ ತೀವ್ರ ದುಃಖವಾಗಿದೆ. ಭಾರತವು ನೇಪಾಳದ ಜನರೊಂದಿಗೆ ನಿಲ್ಲಲಿದೆ. ನಾವು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲು ಸಿದ್ಧರಿದ್ದೇವೆ. ನಾವು ದುಃಖತಪ್ತ ಕುಟುಂಬಗಳೊಂದಿಗೆ ಇರಲಿದ್ದೇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸುತ್ತೇವೆ.ನರೇಂದ್ರ ಮೋದಿ ಪ್ರಧಾನ ಮಂತ್ರಿ

ಮಾನವೀಯ ಯುದ್ಧ ವಿರಾಮಕ್ಕೆ ಒಪ್ಪದ ಇಸ್ರೇಲ್

ಜೆರುಸಲೇಂ, ನ.4 ಇಸ್ರೇಲ್-ಹಮಾಸ್ ಯುದ್ಧದಲ್ಲಿ ಮಾನವೀಯ ವಿರಾಮಕ್ಕಾಗಿ ಅಮೆರಿಕದ ಕರೆಗಳನ್ನು ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿರಸ್ಕರಿಸಿದ್ದಾರೆ. ಒತ್ತೆಯಾಳುಗಳನ್ನು ಬಿಡುಗಡೆ ಮಾಡದ ಹೊರತು ನಾವು ಪೂರ್ಣವಾಗಿ ಮುಂದೆ ಹೋಗುತ್ತಿದ್ದೇವೆ ಎಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರಿಗೆ ನೆತನ್ಯಾಹು ಕಡ್ಡಿ ಮುರಿದಂತೆ ತಿಳಿಸಿದ್ದಾರೆ.

ಕಳೆದ ತಿಂಗಳು ಯುದ್ಧವು ಸೋಟಗೊಂಡ ನಂತರ ಬ್ಲಿಂಕೆನ್ ಇಸ್ರೇಲ್‍ಗೆ ತನ್ನ ಮೂರನೇ ಭೇಟಿಯಲ್ಲಿದ್ದಾರೆ ಮತ್ತು ಶನಿವಾರ ಜೋರ್ಡಾನ್‍ನಲ್ಲಿ ನಾಯಕರನ್ನು ಭೇಟಿಯಾಗಲಿದ್ದಾರೆ. ಸಂಘರ್ಷವು ಪ್ರಾದೇಶಿಕವಾಗುತ್ತದೆ ಎಂಬ ಭಯದ ನಡುವೆ, ಲೆಬನಾನ್‍ನ ಇರಾನ್ ಬೆಂಬಲಿತ ಹೆಜ್ಬುಲ್ಲಾ ಉಗ್ರಗಾಮಿ ಗುಂಪಿನ ನಾಯಕ ಹಸನ್ ನಸ್ರಲ್ಲಾ ಅವರು ಸಾರ್ವಜನಿಕ ಭಾಷಣದಲ್ಲಿ ತಮ್ಮ ಗುಂಪು ಯುದ್ಧದಿಂದ ಹೊರಗುಳಿಯಲು ಯುಎಸ್ ಎಚ್ಚರಿಕೆಗಳಿಂದ ಹಿಂಜರಿಯಲಿಲ್ಲ ಎಂದು ಹೇಳಿದರು.

ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ

ಇಸ್ರೇಲಿ ಪಡೆಗಳು ಗಾಜಾ ನಗರದಲ್ಲಿ ಉಗ್ರಗಾಮಿ ಕೋಶಗಳ ಮೇಲೆ ನಗರದೊಳಗೆ ಉದ್ದೇಶಿತ ದಾಳಿಯನ್ನು ಪ್ರಾರಂಭಿಸಿದವು. ಇಸ್ರೇಲ್-ಹಮಾಸ್ ಯುದ್ಧದಲ್ಲಿ ಪ್ಯಾಲೆಸ್ತೀನ್ ಸಾವಿನ ಸಂಖ್ಯೆ 9,227 ಕ್ಕೆ ತಲುಪಿದೆ ಎಂದು ಗಾಜಾದಲ್ಲಿ ಹಮಾಸ್ ನಡೆಸುತ್ತಿರುವ ಆರೋಗ್ಯ ಸಚಿವಾಲಯ ತಿಳಿಸಿದೆ. ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಹಿಂಸಾಚಾರ ಮತ್ತು ಇಸ್ರೇಲಿ ದಾಳಿಗಳಲ್ಲಿ 140 ಕ್ಕೂ ಹೆಚ್ಚು ಪ್ಯಾಲೆಸ್ಟೀನಿಯನ್ನರು ಕೊಲ್ಲಲ್ಪಟ್ಟರು.

ಇಸ್ರೇಲ್‍ನಲ್ಲಿ 1,400 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು, ಅವರಲ್ಲಿ ಹೆಚ್ಚಿನವರು ಅಕ್ಟೋಬರ್ 7 ರ ಹಮಾಸ್ ದಾಳಿಯಲ್ಲಿ ಹೋರಾಟವನ್ನು ಪ್ರಾರಂಭಿಸಿದರು ಮತ್ತು 242 ಒತ್ತೆಯಾಳುಗಳನ್ನು ಇಸ್ರೇಲ್‍ನಿಂದ ಗಾಜಾಕ್ಕೆ ಉಗ್ರಗಾಮಿ ಗುಂಪು ತೆಗೆದುಕೊಂಡಿತು.

ಕಾಂಗ್ರೆಸ್ ಪ್ರಚಾರಕ್ಕೆ ಬೆಟ್ಟಿಂಗ್ ಹಣ ಬಳಕೆಯಾಗುತ್ತಿದೆ ; ಸ್ಮತಿ ಇರಾನಿ

ನವದೆಹಲಿ, ನ.4 (ಪಿಟಿಐ) ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಅಕ್ರಮ ಬೆಟ್ಟಿಂಗ್ ದಂಧೆಯಿಂದ ಬಂದಿರುವ 500 ಕೋಟಿ ರೂಪಾಯಿ ಹವಾಲಾ ಹಣವನ್ನು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನಮ್ಮ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಜನರು ಇಂತಹ ಅಕ್ರಮಗಳನ್ನು ಕಂಡಿಲ್ಲ ಎಂದು ಕೇಂದ್ರ ಸಚಿವೆ ಸ್ಮತಿ ಇರಾನಿ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದಾರೆ. ಬಘೇ ಲ್ ಅವರು ಜನರ ಬೆಂಬಲದಿಂದ ಚುನಾವಣೆಯನ್ನು ಎದುರಿಸುತ್ತಿದ್ದಾರೆ ಹೊರತು ಹವಾಲಾ ಮತ್ತು ಬೆಟ್ಟಿಂಗ್ ಆಪರೇಟರ್‍ಗಳ ಬೆಂಬಲದಿಂದಲ್ಲ ಎಂದು ಅವರು ಆರೋಪಿಸಿದರು.

ನವೆಂಬರ್ 7 ಮತ್ತು 17 ರಂದು ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತನ್ನನ್ನು ಗುರಿಯಾಗಿಸಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸುತ್ತಿದೆ ಎಂಬ ಬಘೇಲೆ ಅವರ ಆರೋಪಕ್ಕೆ ತಿರುಗೇಟು ನೀಡಿದ ಇರಾನಿ ಅವರು ಜಾರಿ ನಿರ್ದೇಶನಾಲಯದ ತನಿಖೆಯು ಛತ್ತೀಸ್‍ಗಢ ಮತ್ತು ಆಂಧ್ರಪ್ರದೇಶದ ಪೊಲೀಸರ ತನಿಖೆಯ ವಿವರಗಳನ್ನು ಆಧರಿಸಿದೆ ಎಂದಿದ್ದಾರೆ.

ಸೋವಿಯತ್ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತೆ : ಅಲಿ ಬರಾಕಾ

ತನಿಖೆಯನ್ನು ಉಲ್ಲೇಖಿಸಿ, ಅಕ್ರಮ ಬೆಟ್ಟಿಂಗ್ ಆಪರೇಟರ್‍ಗಳಿಂದ 64 ಕೋಟಿ ರೂ.ಗೂ ಹೆಚ್ಚು ರಕ್ಷಣೆ ಹಣವನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್‍ನ ಪ್ರಚಾರಕ್ಕೆ ಹಣಕ್ಕಾಗಿ ಬೆಟ್ಟಿಂಗ್ ಹಣದ ಬಳಕೆ ಮತ್ತು ಬಘೇಲ್‍ಗೆ ನೀಡಿದ ಕಿಕ್‍ಬ್ಯಾಕ್‍ಗಳ ಬಗ್ಗೆ ಆರೋಪಿಗಳ ಧ್ವನಿ ಸಂದೇಶಗಳು ಮತ್ತು ಹೇಳಿಕೆಗಳಿವೆ ಎಂದು ಅವರು ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‍ಗಢದ ಮುಖ್ಯಮಂತ್ರಿಗೆ ಇದುವರೆಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂಬ ಫೋರೆನ್ಸಿಕ್ ವಿಶ್ಲೇಷಣೆ ಮತ್ತು ಕ್ಯಾಶ್ ಕೊರಿಯರ್ ನೀಡಿದ ಹೇಳಿಕೆಯು ಆಘಾತಕಾರಿ ಆರೋಪಗಳಿಗೆ ಕಾರಣವಾಗಿದೆ ಎಂದು ಇಡಿ ಶುಕ್ರವಾರ ಹೇಳಿಕೊಂಡಿದೆ.

ಜಾರ್ಖಂಡ್ ಕಾಂಗ್ರೆಸ್ ನಾಯಕನಿಗೆ ಗುಂಡೇಟು

ಹಜಾರಿಬಾಗ್, ನ.4 (ಪಿಟಿಐ) ಜಮೀನು ವಿವಾದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರೊಬ್ಬರ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯಲ್ಲಿ ನಡೆದಿದೆ. ಗುಂಡೇಟಿನಿಂದ ಗಾಯಗೊಂಡಿರುವ ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ ಸಂಜೆ ಕೊರ್ರಾ ಪ್ರದೇಶದ ಕ್ಯಾನರಿ ಹಿಲ್ ರಸ್ತೆಯಲ್ಲಿ ತಾವು ಖರೀದಿಸಿದ ಭೂಮಿಯಲ್ಲಿ ನಿರ್ಮಾಣ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಲು ಹೋದಾಗ ಈ ಘಟನೆ ನಡೆದಿದೆ. ಭೂ ಮಾಫಿಯಾದ ಕಿಂಗ್‍ಪಿನ್ ಅಶೋಕ್ ಸಾವೊ ನೇತೃತ್ವದಲ್ಲಿ ದಾಳಿಕೋರರೊಂದಿಗೆ ಅವರು ವಾಗ್ವಾದ ನಡೆಸಿದರು, ನಂತರ ಅವರು ಅವರ ಮೇಲೆ ಗುಂಡು ಹಾರಿಸಿದರು ಎಂದು ಡಿಎಸ್ಪಿ (ಹೆಡ್ ಕ್ವಾರ್ಟರ್ಸï) ರಾಜೀವ್ ಕುಮಾರ್ ಹೇಳಿದ್ದಾರೆ.

ಮಗನನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡು ಹಾರಿಸಿದ ತಂದೆ

ಪ್ರಕಾಶ್ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಕಾರಿ ತಿಳಿಸಿದ್ದಾರೆ. ಪೊಲೀಸರು ಸಾವೊನನ್ನು ಬಂಧಿಸಿದ್ದಾರೆ, ಆದರೆ ಅವನ ಐವರು ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು.

ಐಪಿಸಿಯ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗಿದೆ.

ಮಧ್ಯಪ್ರದೇಶದಲ್ಲಿ 39 ಕಾಂಗ್ರೆಸ್ ನಾಯಕರ ಉಚ್ಚಾಟನೆ

ಭೋಪಾಲï, ನ.4 (ಪಿಟಿಐ) – ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ರ್ಪಧಿಸಲು ಮುಂದಾಗಿರುವ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದೆ.

ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಕಮಲ್ ನಾಥ್ ಅವರ ನಿರ್ದೇಶನದ ಮೇರೆಗೆ ಈ 39 ನಾಯಕರನ್ನು ಕಾಂಗ್ರೆಸ್‍ನಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜೀವ್ ಸಿಂಗ್ ತಿಳಿಸಿದ್ದಾರೆ. ಈ ಉಚ್ಚಾಟಿತ ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ ಅಥವಾ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ), ಸಮಾಜವಾದಿ ಪಕ್ಷ (ಎಸ್‍ಪಿ) ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಟಿಕೆಟ್‍ನಲ್ಲಿ ಚುನಾವಣೆಗೆ ಸ್ರ್ಪಧಿಸುತ್ತಿದ್ದಾರೆ ಎಂದು ಅದು ಹೇಳಿದೆ.

ಮಾಜಿ ಸಂಸದ ಪ್ರೇಮಚಂದ್ ಗುಡ್ಡು (ಅಲೋಟ್), ಮಾಜಿ ಶಾಸಕ ಅಂತರ್ ಸಿಂಗ್ ದರ್ಬಾರ್ (ಮೊವ್), ಮಾಜಿ ಶಾಸಕ ಯದ್ವೇಂದ್ರ ಸಿಂಗ್ (ನಾಗೋಡ್), ಪಕ್ಷದ ರಾಜ್ಯ ಪಕ್ಷದ ವಕ್ತಾರ ಅಜಯ್ ಸಿಂಗ್ ಯಾದವ್ (ಖರ್ಗಾಪುರ್), ನಾಸಿರ್ ಇಸ್ಲಾಂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಸೋವಿಯತ್ ಒಕ್ಕೂಟದಂತೆ ಅಮೆರಿಕ ಕೂಡ ನಾಶವಾಗುತ್ತೆ : ಅಲಿ ಬರಾಕಾ

230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದೆ.
ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುಕ್ಕಾಣಿ ಹಿಡಿಯಲು ಶ್ರಮಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಕೇಸರಿ ಪಕ್ಷವನ್ನು ಅಧಿಕಾರದಿಂದ ದೂರ ತಳ್ಳಲು ಪ್ರಯತ್ನಿಸುತ್ತಿದೆ.

ಮಹಾರಾಷ್ಟ್ರ : ಔಷಧ ಕಂಪನಿಯಲ್ಲಿ ಬೆಂಕಿ, ಏಳು ಮಂದಿ ನಾಪತ್ತೆ

ಮುಂಬೈ, ನ.4 (ಪಿಟಿಐ) – ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‍ಕೇರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಗಳು ಕಡ್ಡಾಯವಾಗಿ ಪರೇಡ್‍ನಲ್ಲಿ ಭಾಗವಹಿಸಿ : ದಯಾನಂದ

ಇಂದು ಬೆಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಈ ಮೃತರು ಸೇರಿದ್ದಾರೆ. ನಾಪತ್ತೆಯಾಗಿರುವ ಏಳು ಜನರ ಪತ್ತೆಗಾಗಿ ನಮ್ಮ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.

ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ನಂತರ ರಾಸಾಯನಿಕ ಹೊಂದಿರುವ ಬ್ಯಾರೆಲ್‍ಗಳಿಗೆ ಬೆಂಕಿ ತಗುಲಿದ್ದು, ಬೆಂಕಿ ಕೆನ್ನಾಲಿಗೆಗೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಮೋದಿ ವಿರುದ್ಧದ ಗೀಚು ಬರಹ ಖಂಡಿಸಿ ಪ್ರತಿಭಟನೆ ವೇಳೆ ನಾಲ್ವರು ವಿದ್ಯಾರ್ಥಿಗಳ ಮೇಲೆ ಹಲ್ಲೆ

ಪುಣೆ, ನ.4 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಆಕ್ಷೇಪಾರ್ಹ ಗೀಚುಬರಹದ ವಿರುದ್ಧ ಇಲ್ಲಿನ ಸಾವಿತ್ರಿಬಾಯಿ ಫುಲೆ ಪುಣೆ ವಿಶ್ವವಿದ್ಯಾನಿಲಯದಲ್ಲಿ (ಎಸ್‍ಪಿಪಿಯು) ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಎಡಪಂಥೀಯ ಸಂಘಟನೆಗೆ ಸೇರಿದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವಿಶ್ವವಿದ್ಯಾನಿಲಯದ ಹಾಸ್ಟೆಲ್‍ನಲ್ಲಿ ಮೋದಿ ಬಣ್ಣ ಹಚ್ಚಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶ್ವವಿದ್ಯಾನಿಲಯದ ಆಡಳಿತ ಕಚೇರಿಯ ಮುಖ್ಯ ಕಟ್ಟಡದ ಬಳಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ಹಾಸ್ಟೆಲ್‍ನಲ್ಲಿ ಕಂಡುಬಂದ ಪ್ರಧಾನಿಯ ಮೇಲಿನ ಆಕ್ಷೇಪಾರ್ಹ ಗೀಚುಬರಹಕ್ಕೆ ಪ್ರತಿಕ್ರಿಯೆಯಾಗಿ, ನೂರಾರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಬೆಂಬಲಿಗರು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ನಡೆಸಿದರು. ಆದರೆ, ಎಡಪಂಥೀಯ ಸಂಘಟನೆಯ ನಾಲ್ವರು ವಿದ್ಯಾರ್ಥಿಗಳು ಭೇಟಿ ನೀಡಿದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು.

ಇದ್ದಕ್ಕಿದ್ದಂತೆ ಫುಲ್ ಆಕ್ಟಿವ್ : ಚರ್ಚೆಗೆ ಗ್ರಾಸವಾಯ್ತು ಬಿಎಸ್‍ವೈ ನಡೆ

ಪ್ರತಿಭಟನೆಯ ವೇಳೆ ಜಗಳ ನಡೆದಿದ್ದು, ಇದರಲ್ಲಿ ನ್ಯೂ ಸೋಷಿಯಲಿಸ್ಟ್ ಆಲ್ಟರ್ನೇಟಿವ್‍ಗೆ ಸೇರಿದ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ನಂತರ ಪೊಲೀಸರು ಈ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿ ಸಂಜೆ ಬಿಡುಗಡೆ ಮಾಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿಯ ಪ್ರತಿಭಟನಾ ಸ್ಥಳದಲ್ಲಿ ಎಡಪಂಥೀಯ ಗುಂಪಿನ ನಾಲ್ವರು ವಿದ್ಯಾರ್ಥಿಗಳು ತಮ್ಮ ಸಂಘಟನೆಯ ಧ್ವಜಗಳನ್ನು ಹಿಡಿದುಕೊಂಡು ಹೋಗುತ್ತಿರುವ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದಾಗ, ಈ ನಾಲ್ವರು ವಿದ್ಯಾರ್ಥಿಗಳು ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದರು

ಪಾಕ್ ವಾಯುಪಡೆ ತರಬೇತಿ ನೆಲೆ ಮೇಲೆ ಉಗ್ರರ ದಾಳಿ

ಇಸ್ಲಾಮಾಬಾದ್, ನ.4 (ಪಿಟಿಐ) ಪಂಜಾಬ್ ಪ್ರಾಂತ್ಯದಲ್ಲಿರುವ ಪಾಕಿಸ್ತಾನದ ವಾಯುಪಡೆಯ ತರಬೇತಿ ನೆಲೆಯೊಂದರ ಮೇಲೆ ಇಂದು ಮುಂಜಾನೆ ಭಾರೀ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸಿ ಮೂರು ವಿಮಾನಗಳನ್ನು ಹಾನಿಗೊಳಿಸಿದ್ದಾರೆ.

ಪಾಕಿಸ್ತಾನದ ವಾಯುಪಡೆಯ ಮಿಯಾನ್‍ವಾಲಿ ತರಬೇತಿ ವಾಯುನೆಲೆ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರು ಆದರೆ ಸೈನಿಕರು ದಾಳಿಕೋರರಲ್ಲಿ ಮೂವರನ್ನು ಕೊಂದು ಇತರ ಮೂವರನ್ನು ಮೂಲೆಗುಂಪು ಮಾಡುವ ಮೂಲಕ ಅದನ್ನು ವಿಫಲಗೊಳಿಸಿದ್ದಾರೆ ಎಂದು ಪಾಕಿಸ್ತಾನ ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಆದಾಗ್ಯೂ, ದಾಳಿಯ ಸಮಯದಲ್ಲಿ, ಈಗಾಗಲೇ ನೆಲಸಿರುವ ಮೂರು ವಿಮಾನಗಳು ಮತ್ತು ಇಂಧನ ಬೌಸರ್‍ಗೆ ಸ್ವಲ್ಪ ಹಾನಿ ಸಂಭವಿಸಿದೆ ಎಂದು ಹೇಳಿಕೆ ತಿಳಿಸಿದೆ.

ಇದ್ದಕ್ಕಿದ್ದಂತೆ ಫುಲ್ ಆಕ್ಟಿವ್ : ಚರ್ಚೆಗೆ ಗ್ರಾಸವಾಯ್ತು ಬಿಎಸ್‍ವೈ ನಡೆ

ಮೂರು ಭಯೋತ್ಪಾದಕರನ್ನು ಬೇಸ್ ಪ್ರವೇಶಿಸುವಾಗ ತಟಸ್ಥಗೊಳಿಸಲಾಯಿತು ಆದರೆ ಉಳಿದ ಮೂವರು ಭಯೋತ್ಪಾದಕರನ್ನು ಪಡೆಗಳ ಸಮಯೋಚಿತ ಮತ್ತು ಪರಿಣಾಮಕಾರಿ ಪ್ರತಿಕ್ರಿಯೆಯಿಂದಾಗಿ ಅವರನ್ನು ಹತ್ಯೆ ಮಾಡಲಾಗಿದೆ. ಪ್ರದೇಶವನ್ನು ಸಂಪೂರ್ಣವಾಗಿ ತೆರವುಗೊಳಿಸಲು ಸಮಗ್ರ ಜಂಟಿ ತೆರವು ಕಾರ್ಯಾಚರಣೆ ಅಂತಿಮ ಹಂತದಲ್ಲಿದೆ ಎಂದು ಅದು ಸೇರಿಸಿದೆ.

ಎಲ್ಲ ವೆಚ್ಚದಲ್ಲಿಯೂ ದೇಶದಿಂದ ಭಯೋತ್ಪಾದನೆಯ ಬೆದರಿಕೆಯನ್ನು ತೊಡೆದುಹಾಕಲು ಪಾಕಿಸ್ತಾನದ ಸಶಸ್ತ್ರ ಪಡೆಗಳು ಬದ್ಧವಾಗಿರುತ್ತವೆ ಎಂದು ಸೇನೆ ಹೇಳಿದೆ. ಬಲೂಚಿಸ್ತಾನ ಮತ್ತು ಖೈಬರ್ ಪಖ್ತುಂಖ್ವಾದಲ್ಲಿ ಕನಿಷ್ಠ 17 ಸೈನಿಕರನ್ನು ಕೊಂದ ಭಯೋತ್ಪಾದಕರ ಸರಣಿಯ ಕೆಲವು ಗಂಟೆಗಳ ನಂತರ ಈ ದಾಳಿ ನಡೆದಿದೆ.