Home Blog Page 1845

ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಚುಂಬಿಸಿ ಪರಾರಿಯಾದ ಕಿಡಿಗೇಡಿಗಳು

ಲಕ್ನೋ,ನ.3- ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಐಐಟಿ ಕ್ಯಾಂಪಸ್‍ನ ವಿದ್ಯಾರ್ಥಿನಿಯನ್ನು ಮೂವರು ಅಪರಿಚಿತ ವ್ಯಕ್ತಿಗಳು ವಿವಸ್ತ್ರಗೊಳಿಸಿ ಆಕೆಗೆ ಚುಂಬಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ಮೂವರು ಅಪರಿಚಿತ ವ್ಯಕ್ತಿಗಳು ಮಹಿಳಾ ವಿದ್ಯಾರ್ಥಿನಿಯನ್ನು ಕಿಸ್ ಮಾಡಿ ವಿವಸ್ತ್ರಗೊಳಿಸಿದ್ದಾರೆ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರು ಕೃತ್ಯದ ವಿಡಿಯೋ ಕೂಡ ರೆಕಾರ್ಡ್ ಮಾಡಿದ್ದಾರೆ.

ಘಟನೆಯಲ್ಲಿ ಹೊರಗಿನವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೊರಗಿನವರು ಕ್ಯಾಂಪಸ್‍ಗೆ ಪ್ರವೇಶಿಸುವುದನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯ (ಬಿಎಚ್‍ಯು) ಕ್ಯಾಂಪಸ್‍ನಿಂದ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಅನ್ನು ಪ್ರತ್ಯೇಕಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಗಳೊಂದಿಗಿನ ಸಭೆಯ ನಂತರ ಸಂಸ್ಥೆಯು ಈ ಪ್ರಸ್ತಾಪವನ್ನು ಶಿಕ್ಷಣ ಸಚಿವಾಲಯದೊಂದಿಗೆ ಚರ್ಚಿಸುವುದಾಗಿ ತಿಳಿಸಿದೆ.

ಶಾಸಕರಿಗೆ 50 ಕೋಟಿ ಆಫರ್ : ಸಿಒಡಿ ಆಂತರಿಕ ವಿಚಾರಣೆ

ಕ್ಯಾಂಪಸ್‍ನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಶೀಘ್ರದಲ್ಲೇ ಕ್ಯಾಂಪಸ್‍ನಲ್ಲಿ ಹೆಚ್ಚಿನ ಸಿಸಿಟಿವಿಗಳನ್ನು ಅಳವಡಿಸಲಾಗುವುದು ಎಂದು ರಿಜಿಸ್ಟ್ರಾರ್ ಹೇಳಿದರು. ರಾತ್ರಿ 10 ರಿಂದ ಬೆಳಗಿನ ಜಾವ 5 ಗಂಟೆಯವರೆಗೆ ವಿದ್ಯಾರ್ಥಿಗಳ ಓಡಾಟವನ್ನು ನಿರ್ಬಂಧಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ವಿದ್ಯಾರ್ಥಿನಿ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ ಆಕೆಯ ಮೇಲೆ ಹಲ್ಲೆನಡೆಸಲಾಗಿದೆ. ಅವರು ಕರ್ಮಾನ್ ಬಾಬಾ ದೇವಸ್ಥಾನದ ಬಳಿ ಇದ್ದಾಗ ಮೂವರು ಪುರುಷರು ಮೋಟಾರ್ ಸೈಕಲ್‍ನಲ್ಲಿ ಬಂದು ಅವಳನ್ನು ಬಲವಂತವಾಗಿ ಒಂದು ಮೂಲೆಗೆ ಕರೆದೊಯ್ದು ಅವಳ ಸ್ನೇಹಿತನಿಂದ ಬೇರ್ಪಡಿಸಿದ ನಂತರ ಅವಳ ಬಾಯಿಯನ್ನು ಬಿಗಿದರು.

ನಂತರ ಆರೋಪಿ ಮಹಿಳೆಯನ್ನು ಬಟ್ಟೆ ಬಿಚ್ಚಿಸಿ ವಿಡಿಯೋ ಮಾಡಿ ಫೋಟೋ ಕ್ಲಿಕ್ಕಿಸಿದ್ದಾನೆ. ಅವರು 15 ನಿಮಿಷಗಳ ನಂತರ ಆಕೆಯನ್ನು ಹೋಗಲು ಬಿಟ್ಟು ಆಕೆಯ ಫೋನ್ ಸಂಖ್ಯೆಯನ್ನು ತೆಗೆದುಕೊಂಡರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟೀಮ್‍ಇಂಡಿಯಾ ನಾಯಕತ್ವ ಹೆಮ್ಮೆ ತಂದಿದೆ : ರೋಹಿತ್

ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಕ್ಯಾಂಪಸ್‍ನಲ್ಲಿ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾಲಯದ ಆಡಳಿತದೊಂದಿಗೆ ಜಂಟಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನ ಅಧಿಕಾರಿಗಳ ಮನೆ ಮೇಲೆ ಇಡಿ ದಾಳಿ

ನವದೆಹಲಿ,ನ.3- ಜೀವನ್ ಮಿಷನ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇಂದು ರಾಜಸ್ಥಾನದಲ್ಲಿ ಚುನಾವಣೆಗೆ ಒಳಪಟ್ಟಿರುವ ಉನ್ನತ ಐಎಎಸ್ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ಮಾಡಿದೆ.ಪಿಎಚ್‍ಇ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೋಧ್ ಅಗರ್ವಾಲ್ ಅವರ ಮನೆ ಸೇರಿದಂತೆ ರಾಜ್ಯದ ರಾಜಧಾನಿ ಜೈಪುರ ಮತ್ತು ದೌಸಾದ 25 ಕ್ಕೂ ಹೆಚ್ಚು ಸ್ಥಳಗಳ ಮೇಲೆ ತನಿಖಾ ಸಂಸ್ಥೆ ದಾಳಿ ಮಾಡಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಹಗರಣಕ್ಕೆ ಸಂಬಂಧಿಸಿದ ಇತರ ಆರೋಗ್ಯ ಅಧಿಕಾರಿಗಳನ್ನು ಇಡಿ ಅಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲೂ ಇಡಿ ರಾಜ್ಯದಲ್ಲಿ ಇದೇ ರೀತಿಯ ದಾಳಿ ನಡೆಸಿತ್ತು.

ನಾವು 5 ವರ್ಷ ಆಡಳಿತ ನಡೆಸುತ್ತೇವೆ : ಸಿದ್ದರಾಮಯ್ಯ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಕೇಂದ್ರ ಸರ್ಕಾರ ಮತ್ತು ಇಡಿ ಎರಡಕ್ಕೂ ತಿರುಗೇಟು ನೀಡಿದ್ದು, ಪ್ರತಿಪಕ್ಷ ನಾಯಕರನ್ನು ಬೆದರಿಸಲು ಮತ್ತು ರಾಜ್ಯ ಸರ್ಕಾರಗಳನ್ನು ಉರುಳಿಸಲು ದೇಶಾದ್ಯಂತ ಏಜೆನ್ಸಿಯ ದಾಳಿಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿ ಈ ದಾಳಿಗಳನ್ನು ಪಾಕಿಸ್ತಾನದಿಂದ ಮಿಡತೆ ಸಮೂಹ ಕ್ಕೆ ಹೋಲಿಸಿದ್ದಾರೆ,

ರಾಜಸ್ಥಾನವು ತನ್ನ 200 ಸದಸ್ಯರ ವಿಧಾನಸಭೆಯನ್ನು ನವೆಂಬರ್ 25 ರಂದು ಆಯ್ಕೆ ಮಾಡುತ್ತದೆ ಮತ್ತು ಡಿಸೆಂಬರ್ 3 ರಂದು ಇತರ ನಾಲ್ಕು ರಾಜ್ಯಗಳ ಮತಗಳೊಂದಿಗೆ ಮತಗಳನ್ನು ಎಣಿಸಲಾಗುವುದು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (03-11-2023)

ನಿತ್ಯ ನೀತಿ : ಕೋಪ ಮಾತಿನಲ್ಲಿರಬೇಕು, ಮನಸ್ಸಿನಲ್ಲಲ್ಲ. ಪ್ರೀತಿ ಮನಸ್ಸಿನಲ್ಲಿರ ಬೇಕು, ಬರೀ ಮಾತಿನಲ್ಲಲ್ಲ.

ಪಂಚಾಂಗ ಶುಕ್ರವಾರ 03-11-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಪುನರ್ವಸು / ಯೋಗ: ಸಿದ್ಧ
ಕರಣ: ಗರಜೆ

ಸೂರ್ಯೋದಯ : ಬೆ.06.14
ಸೂರ್ಯಾಸ್ತ : 05.53
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ಸ್ವಂತ ಉದ್ಯಮದಲ್ಲಿ ಹೊಸ ಬಗೆಯ ಪೈಪೋಟಿ ಇರಲಿದೆ. ಆರೋಗ್ಯದಲ್ಲಿ ಏರುಪೇರು.
ವೃಷಭ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಮಿಥುನ: ಕುಟುಂಬದ ಅಗತ್ಯಗಳನ್ನು ಪೂರೈಸುವುದರಲ್ಲಿ ಅನೇಕ ಬಾರಿ ನಿಮಗಾಗಿ ಸಮಯ ನೀಡುವುದನ್ನೇ ಮರೆತುಹೋಗುತ್ತೀರಿ.

ಕಟಕ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಶಾಶ್ವತ ಸಿಗಲಿದೆ.
ಸಿಂಹ: ತಾವು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗುವಿರಿ.
ಕನ್ಯಾ: ದೂರ ಪ್ರಯಾಣ. ಖರ್ಚು ಹೆಚ್ಚಾಗುವ ಸಂಭವ. ಮಾತನಾಡುವಾಗ ಎಚ್ಚರಿಕೆ ಇರಲಿ.

ತುಲಾ: ಕಿರಿಯ ಸಹೋದರ ರೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವಿರಿ.
ವೃಶ್ಚಿಕ: ನಿಮ್ಮ ಸುತ್ತಲೂ ನಡೆಯುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ಜಾಗರೂಕರಾಗಿರಿ.
ಧನುಸ್ಸು: ಗಣ್ಯ ವ್ಯಕ್ತಿಗಳ ಭೇಟಿಯಿಂದ ವ್ಯಾಪಾರ- ವ್ಯವಹಾರಗಳಿಗೆ ಅನುಕೂಲವಾಗಲಿದೆ.

ಮಕರ: ಪತ್ನಿಯ ಬೆಂಬಲದೊಂದಿಗೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವಿರಿ.
ಕುಂಭ: ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದರೆ ಅವರ ಗೌರವಕ್ಕೆ ಚ್ಯುತಿ ಬರಬಹುದು.
ಮೀನ: ಉದ್ಯೋಗದಲ್ಲಿ ನಿರಾತಂಕವಾಗಿ ಮುನ್ನಡೆ ಯುವಿರಿ. ವೈಯಕ್ತಿಕವಾಗಿ ಉನ್ನತಿ ಸಾಧಿಸುವಿರಿ.

ಶಾಸಕರಿಗೆ 50 ಕೋಟಿ ಆಫರ್ : ಸಿಒಡಿ ಆಂತರಿಕ ವಿಚಾರಣೆ

ಮೈಸೂರು, ನ.2- ಕಾಂಗ್ರೆಸ್‍ನ ನಾಲ್ವರು ಶಾಸಕರಿಗೆ ತಲಾ ಐವತ್ತು ಕೋಟಿ ಆಮಿಷವೊಡ್ಡಿ, ಸರ್ಕಾರವನ್ನು ಪತನಗೊಳಿಸಲು ನಡೆಸಿದ ಆಪರೇಷನ್ ಕಮಲ ಪ್ರಯತ್ನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದು. ಸಿಒಡಿಯಿಂದ ಆಂತರಿಕ ವಿಚಾರಣೆಯಾಗುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕಾಂಗ್ರೆಸ್‍ನ 11ಶಾಸಕರನ್ನು ಸಂಪರ್ಕಿಸುವ ಯತ್ನ ನಡೆಸಿದ್ದಾರೆ. ಆ ಪಟ್ಟಿಸಿಒಡಿ ಕೈನಲ್ಲಿದೆ. ಅದರಲ್ಲಿ ನಾಲ್ವರನ್ನು ಬಿಜೆಪಿಯವರು ಭೇಟಿ ಮಾಡಿ ಮಾತುಕತೆ ನಡೆಸಿರುವ ಮಾಹಿತಿಯನ್ನು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಬಹಿರಂಗ ಪಡಿಸಿದ್ದಾರೆ. ಆ ಕುರಿತು ಮುಖ್ಯಮಂತ್ರಿಯವರು ಈ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ ಎಂದರು.

ಬಿಜೆಪಿಯವರು ಏನೇ ಪ್ರಯತ್ನ ಮಾಡಿದರು ಐದು ವರ್ಷ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಸಾಧ್ಯವಿಲ್ಲ. ಕಳೆದ ಒಂಬತ್ತುವರೆ ವರ್ಷದಲ್ಲಿ 10 ರಾಜ್ಯಗಳಲ್ಲಿ ಬಿಜೆಪಿ ಆಪರೇಷನ್ ಕಮಲ ಮಾಡಿ ಸರ್ಕಾರಗಳನ್ನು ಬೀಳಿಸಿದೆ. ರಾಜ್ಯದಲ್ಲೂ ಆ ಪ್ರಯತ್ನಗಳು ನಡೆದಿವೆ. ಶಾಸಕರ ಪಕ್ಷಾಂತರದ ಆಪರೇಷನ್ ಫಲಿತಾಂಶದ ಬಗ್ಗೆ 10 ದಿನ ಕಾದು ನೋಡಿ. ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಗೋತ್ತಾಗಲಿದೆ. ನಾವಂತೂ ಬೇರೆ ಪಕ್ಷಗಳ ಶಾಸಕರನ್ನು ಸೆಳೆಯುವುದಿಲ್ಲ. ಅಲ್ಲಿನ ಪರಿಸ್ಥಿತಿಯಿಂದ ಅಸಮಾಧಾನಗೊಂಡು ಬರುವವರ ಸಂಖ್ಯೆ ಹೆಚ್ಚಿದೆ ಎಂದರು.

ಬಿಜೆಪಿ ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿ ಪ್ರಾಮುಖ್ಯತೆ ಕಳೆದುಕೊಂಡು ಜೋಕರ್ ಆಗಿದ್ದಾರೆ. ಆಪರೇಷನ್ ಕಮಲದ ನೇತೃತ್ವ ವಹಿಸಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ಬೀಳಿಸಿದ ಅವರನ್ನೇ ಬಿಜೆಪಿಯವರು ಒಂದು ವರ್ಷದಲ್ಲಿ ಸಂಪುಟದಿಂದ ಕಿತ್ತು ಹಾಕಿದರು. ಅದು ಯಾವ ಕಾರಣಕ್ಕೆ ಎಂದು ರಮೇಶ್ ಜಾರಕಿಹೊಳಿಯವರು ಹೇಳಬೇಕು. ಇಂತಹ ನಗೆಪಾಟಿಲಿಗೀಡಾಗುವ ವ್ಯಕ್ತಿಗಳಿಗೆ ನಮ್ಮ ನಾಯಕರು ಪ್ರತಿಕ್ರಿಯಿಸಬಾರದು ಎಂದ ಅವರು, ಮಾಜಿ ಸಚಿವ ಹೆಚ್.ವಿಶ್ವನಾಥ್ ಬಾಂಬೆ ಡೇ ಪುಸ್ತಕ ಬರೆಯುತ್ತಿದ್ದು, ಅದರಲ್ಲಿ ಯಾರು ಕೈನಲ್ಲಿ ಬೀರ್ ಬಾಟಲ್ ಹಿಡಿದುಕೊಂಡಿದ್ದರು. ಏನೇನು ಮಾಡುತ್ತಿದ್ದರು ಎಂದು ಪುಸ್ತಕದಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್

ಕೇಂದ್ರ ಸರ್ಕಾರ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ನಾಲ್ಕುವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ಆದಾಯ ರವಾನೆಯಾಗುತ್ತಿದೆ. ಅಲ್ಲಿಂದ ವಾಪಾಸ್ ಬರುತ್ತಿರುವುದು 50 ಸಾವಿರ ಕೋಟಿ ರೂಪಾಯಿ ಮಾತ್ರ. ನೀತಿ ಆಯೋಗದ ನಿಯಮದ ಪ್ರಕಾರ ರಾಜ್ಯಗಳಿಗೆ ಶೇ. 42ರಷ್ಟು ತೆರಿಗೆ ಪಾಲು ನೀಡಬೇಕು. ಬಿಜೆಪಿಯವರ ಮೆಹರರ್ಬಾನಿ ಬೇಕಿಲ್ಲ. ನಮ್ಮ ಪಾಲು ನಮಗೆ ಕೊಡಿ ಎಂದು ಆಗ್ರಹಿಸಿದರು.
ಸಂಸದ ಪ್ರತಾಪ್ ಸಿಂಹ್ ಮಹಿಷ ದಸರಾ ಹೆಸರಿನಲ್ಲಿ 15ದಿನ ಗಲಾಟೆ ಮಾಡಿದರು.

ಬಸ್ ನಿಲ್ದಾಣದ ಮೇಲೆ ಗುಂಬಸ್ ನಿರ್ಮಾಣವಾಗಿದೆ ಎಂದು ಒಂದು ತಿಂಗಳು ಗಲಾಟೆ ನಡೆಸಿದರು. ಹಿಜಾಬ್, ಹಲಾಲ್ ಎಂಬ ಕಿಡಿ ಹೊತ್ತಿಸುವ ಗಲಾಟೆಗಳನ್ನಷ್ಟೆ ಮಾಡುತ್ತಿದ್ದಾರೆ. ಇದನ್ನು ಬಿಟ್ಟು ಜನರ ಸಮಸ್ಯೆಗಳ ಬಗ್ಗೆ ಏನು ಚರ್ಚೆ ಮಾಡಿದ್ದಾರೆ ತೋರಿಸಲಿ. ಅವರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಹುಣಸೂರು, ಚಾಮುಂಡೇಶ್ವರಿ ಸೇರಿ ಹಲವು ಕ್ಷೇತ್ರಗಲ್ಲಿ ಬರ ಇದೆ. ಇದಕ್ಕೆ ಸ್ಪಂದಿಸಲು ಪ್ರತಾಪ್ ಸಿಂಹರ ಪ್ರಯತ್ನವೇನು. ಕನಿಷ್ಠ ಕೇಂದ್ರ ಸರ್ಕಾರಕ್ಕೆ ಒಂದು ಪತ್ರವನ್ನಾದರೂ ಬರೆದಿದ್ದಾರೆಯೇ ಎಂದು ಪ್ರಶ್ನಿಸಿದರು. ನಾವು ಅವರ ಕಚೇರಿಗೆ ಹೋಗಿ ಕೇಂದ್ರಕ್ಕೆ ಪತ್ರ ಬರೆಸಲು ಯತ್ನಿಸುತ್ತೇವೆ ಎಂದು ಹೇಳಿದರು.

ಬಿಜೆಪಿಯಲ್ಲಿ ಈವರೆಗೂ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆಯಾಗಿಲ್ಲ. ಕೆಲವು ದಿನ ಅಶ್ವಥ್‍ನಾರಾಯಣ, ಅಶೋಕ್, ಶೋಭಾ ಕರಂದ್ಲಾಜೆ ಹೆಸರುಗಳು ಕೇಳಿ ಬಂದವು. ಬಸವನಗೌಡ ಯತ್ನಾಳ್ ತಲೆಯ ಮೇಲೆ ಏನೇನನ್ನೋ ಸುರಿದುಕೊಂಡರೂ ಪ್ರಯೋಜನವಾಗಲಿಲ್ಲ. ರಾಷ್ಟ್ರೀಯ ಪಕ್ಷ ಎನ್ನುತ್ತಾರೆ. ಈವರೆಗೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗಿಲ್ಲ. ಈ ಬಗ್ಗೆ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆಯೇ ಹೊರತು, ಬಿಜೆಪಿಯವರು ಏಕೆ ಮೌನವಾಗಿದ್ದಾರೆ ಎಂದು ಪಶ್ನಿಸಿದರು.

ಏರ್ಖಾಂಡ್‍ನಲ್ಲಿ ನಾಲ್ಕು ವರ್ಷ ವಿರೋಧ ಪಕ್ಷದ ನಾಯಕನ್ನೇ ನೇಮಕ ಮಾಡಿರಲಿಲ್ಲ. ರಾಜ್ಯದಲ್ಲೂ ಅಂತಹ ನಿರ್ಲಕ್ಷ್ಯವನ್ನು ಬಿಜೆಪಿ ಹೈಕಮಾಂಡ್ ಮಾಡಲಿದೆಯೇ. ರಾಜ್ಯದಲ್ಲಿ ಈಗಾಗಲೇ ಯಡಿಯೂರಪ್ಪ ಹಾಗೂ ಈಶ್ವರಪ್ಪ ಕತೆ ಮುಗಿಸಿದ್ದಾರೆ. ರಾಜ್ಯ ನಾಯಕತ್ವವನ್ನು ಸಂಪೂರ್ಣ ಮೂಲೆ ಗುಂಪು ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಿ ವಿದ್ಯುತ್ ಖರೀದಿಯಲ್ಲಿ ಕಮಿಷನ್ ಪಡೆಯಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ. ರಾಜ್ಯ ಸರ್ಕಾರ ವಿದ್ಯುತ್ ಖರೀದಿಸುತ್ತಿರುವುದು ಕೇಂದ್ರ ಗ್ರೀಡ್‍ನಿಂದ ಕೇಂದ್ರ ಸಚಿವರು ಕಮಿಷನ್ ನೀಡುತ್ತಿದ್ದಾರೆಯೇ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ 28,471 ಮೇಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿದ್ದರೂ, ಹಾಲಿ ಉತ್ಪಾದನೆಯಾಗುತ್ತಿರುವುದು 15 ಸಾವಿರ ಮಾತ್ರ. ಮಳೆ ಕೊರತೆಯಿಂದ ಜಲ ವಿದ್ಯುತ್ ಇಲ್ಲ. ಉಷ್ಣವಿದ್ಯುತ್ ಉತ್ಪಾದನೆಯಲ್ಲೂ ಹಿನ್ನೆಡೆಯಾಗಿದೆ. ಕೇಂದ್ರ ಸರ್ಕಾರ 4415 ಮೇಗಾವ್ಯಾಟ್ ಬದಲು, ಒಂದು ಸಾವಿರ ಮೇಗಾವ್ಯಾಟ್ ಮಾತ್ರ ಪೂರೈಸುತ್ತಿದೆ. ಇನ್ನೂ 3400 ಮೇಗಾವ್ಯಾಟ್ ಬರುತ್ತಿಲ್ಲ. ರಾಜ್ಯಕ್ಕೆ ಪ್ರತಿದಿನ 18 ಸಾವಿರ ಮೇಗಾವ್ಯಾಟ್ ಬೇಡಿಕೆ ಇದೆ. ಕೊರತೆ ಇರುವ ಮೂರು ಸಾವಿರ ಮೇಗಾವ್ಯಾಟ್ ನಿರ್ವಹಣೆ ಮಾಡುತ್ತಿದ್ದೇವೆ.

ಕೇಂದ್ರ ಗ್ರೀಡ್‍ನಿಂದ ಒಂದು ಸಾವಿರ ಮೇಗಾವ್ಯಾಟ್ ಖರೀದಿಸುತ್ತಿದ್ದೇವೆ. ಇದಕ್ಕೆ ಕೇಂದ್ರ ಸರ್ಕಾರ ಮತ್ತು ಅಲ್ಲಿನ ಸಚಿವರು ಕಮಿಷನ್ ಕೊಡುತ್ತಾರೆಯೇ, ವಿರೋಧ ಪಕ್ಷಗಳು ಮಾತನಾಡುವಾಗ ಸಾಮಾನ್ಯ ಜ್ಞಾನ ಬೇಡವೇ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಖಾಸಗಿಯಿಂದ ವಿದ್ಯುತ್ ಖರೀದಿ ಮಾಡುತ್ತಿಲ್ಲ. ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಉತ್ಪಾದನೆ-ಪೂರೈಕೆ ನಡುವೆ ಐದು ಸಾವಿರ ಮೇಗಾವ್ಯಾಟ್ ವ್ಯತ್ಯಾಸವಿದೆ. ರಾಜ್ಯ ಸರ್ಕಾರ ಉಚಿತವಾಗಿ ವಿದ್ಯುತ್ ನೀಡುತ್ತಿರುವುದರಿಂದ ಬಹಳಷ್ಟು ಮಂದಿ ಹೆಚ್ಚು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್

ಕೇಂದ್ರ ಸರ್ಕಾರದ ಅಕಾರಿಗಳು ಅಧ್ಯಕ್ಷತೆಯಲ್ಲಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನೀರು ನಿರ್ವವಣಾ ಪ್ರಾಕಾರಗಳು ತಮಿಳುನಾಡು ಸರ್ಕಾರ ನೀಡುವ ಮನವಿ ಆಧರಿಸಿ ಪದೇ ಪದೇ ನೀರು ಬಿಡುವಂತೆ ಆದೇಶಿಸುತ್ತಿದೆ. ರಾಜ್ಯದಲ್ಲಿರುವ ನೀರಿನ ಕೊರತೆಯನ್ನು ಅಧ್ಯಯನ ನಡೆಸಲು ತಜ್ಞರ ತಂಡ ಕಳುಹಿಸಬೇಕು ಎಂದು ಹಲವು ಬಾರಿ ಮನವಿ ಮಾಡಿದರು. ಕೇಂದ್ರ ಜಲಶಕ್ತಿ ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಇದರ ಹಿಂದೆ ರಾಜ್ಯದಲ್ಲಿ ಗಲಾಟೆಯಾಗಲಿ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿ ಎಂಬ ದುರುದ್ದೇಶ ಇದೆ ಎಂದರು.

ತಮಿಳುನಾಡಿನಲ್ಲಿ ಅಕಾರದಲ್ಲಿರುವ ಡಿಎಂಕೆ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆ ಹರಿಸಿ ಎಂದು ಬಿಜೆಪಿಯವರು ಬಾಲಿಶವಾಗಿ ಹೇಳುತ್ತಿದ್ದಾರೆ. ಏನು ಚರ್ಚೆ ಮಾಡಬೇಕು, ನೀವು ನೀರು ಕೇಳಬೇಕು ಎಂದು ಡಿಎಂಕೆಯನ್ನು ಮನವೋಲಿಸಬೇಕೆ. 120 ವರ್ಷಗಳ ಸಮಸ್ಯೆ ಈ ರೀತಿ ಮನವೋಲಿಕೆಯಿಂದ ಬಗೆಹರಿಯುತ್ತದೆಯೇ ಎಂದು ಪ್ರಶ್ನಿಸಿದರು.

ನಾವು 5 ವರ್ಷ ಆಡಳಿತ ನಡೆಸುತ್ತೇವೆ : ಸಿದ್ದರಾಮಯ್ಯ

ಕೊಪ್ಪಳ, ನ.2- ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದೆ, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಕೊಪ್ಪಳದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.

ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು.

ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು.

ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು.

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು.

ಶನಿವಾರ ದುಬೈನಿಂದ ಎಚ್‍ಡಿಕೆ ವಾಪಸ್

ಬೆಂಗಳೂರು,ನ.2- ಕಳೆದ ಐದಾರು ದಿನಗಳಿಂದ ದುಬೈ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನ.4 ರಂದು ನಗರಕ್ಕೆ ವಾಪಸ್ಸಾಗಲಿದ್ದಾರೆ.

ಯುಎಇ ಒಕ್ಕಲಿಗರ ಸಂಘದ ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಳ್ಳಲು ಕುಮಾರಸ್ವಾಮಿ ಅವರು ದುಬೈ ಪ್ರವಾಸ ಕೈಗೊಂಡಿದ್ದರು. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್ ಮೊದಲಾದವರು ಸಹ ದುಬೈನಲ್ಲಿ ನಡೆದ ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್

ದುಬೈನಲ್ಲಿರುವ ಕನ್ನಡಿಗರೊಂದಿಗೆ ಕುಮಾರಸ್ವಾಮಿ ನಿನ್ನೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದರು. ನಾಳೆಯವರೆಗೆ ದುಬೈನಲ್ಲಿ ಉಳಿಯಲಿರುವ ಕುಮಾರಸ್ವಾಮಿ ಶನಿವಾರ ಬೆಳಗಿನ ಜಾವ ನಗರಕ್ಕೆ ಆಗಮಿಸುವರು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಕುಮಾರಸ್ವಾಮಿ ಮರಳಿದ ಬಳಿಕ ಪ್ರಚಲಿತ ರಾಜಕೀಯ ವಿದ್ಯಾಮಾನ, ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣೆ ಸಿದ್ದತೆ ಹಾಗೂ ಬರಪೀಡಿತ ಪ್ರದೇಶಗಳಲ್ಲಿ ಪ್ರವಾಸ ಕೈಗೊಳ್ಳುವ ಕುರಿತಂತೆ ಸಭೆ ನಡೆಸಲಿದ್ದಾರೆ.

ಈ ಸಂಬಂಧ ನ.4ರಂದು ಶಾಸಕರು, ಮಾಜಿ ಶಾಸಕರು ಹಾಗೂ ಜಿಲ್ಲಾಧ್ಯಕ್ಷರ ಸಭೆ ಕರೆಯಲಾಗಿದ್ದು, ಅಷ್ಟರಲ್ಲಿ ಕುಮಾರಸ್ವಾಮಿ ರಾಜ್ಯಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.

ಟೀಮ್‍ಇಂಡಿಯಾ ನಾಯಕತ್ವ ಹೆಮ್ಮೆ ತಂದಿದೆ : ರೋಹಿತ್

ಮುಂಬೈ, ನ.2- ವಿಶ್ವಕಪ್‍ನಂತಹ ಮಹಾಟೂರ್ನಿಯಲ್ಲಿ ತವರಿನ ಅಂಗಳದಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸುತ್ತಿರುವುದು ತುಂಬಾ ಹೆಮ್ಮೆ ತಂದಿದೆ ಎಂದು ಹಿಟ್‍ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಹೇಳಿದ್ದಾರೆ.

ಮುಂಬೈನ ವಾಂಖೆಡೆ ಕ್ರೀಡಾಂಗಣ ದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಪಂದ್ಯದ ಟಾಸ್ ವೇಳೆ ಮಾತನಾಡಿದ ರೋಹಿತ್ ಶರ್ಮಾ, ನಾನು ಟಾಸ್ ಗೆದ್ದಿದ್ದರೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೆ, ಮೈದಾನ ಕೂಡ ಬ್ಯಾಟಿಂಗ್‍ಗೆ ಹೆಚ್ಚು ಸಹಕರಿಸುತ್ತಿದೆ. ಸಂಜೆ ಸಮಯದಲ್ಲಿ ಕ್ರೀಡಾಂಗಣಕ್ಕೆ ಅಳವಡಿಸಿರುವ ಲೈಟ್‍ಗಳ ನಡುವೆ ಬೌಲಿಂಗ್ ಮಾಡಲು ಹೆಚ್ಚು ತಿರುವು ಸಿಗಲಿದೆ.

ನಮ್ಮ ವೇಗದ ಬೌಲರ್‍ಗಳು ಕೂಡ ಉತ್ತಮ ಬೌಲಿಂಗ್ ಸಂಘಟಿಸುತ್ತಿದ್ದಾರೆ. ನಾನು ಹುಟ್ಟಿ ಬೆಳೆದ ಕ್ರೀಡಾಂಗಣದಲ್ಲಿ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಪ್ರತಿನಿಸುತ್ತಿರುವುದಕ್ಕೆ ತುಂಬಾ ಹೆಮ್ಮೆ ಎನಿಸಿದೆ' ಎಂದು ಹೇಳಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್

ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ನಮಗೆ ಒಳ್ಳೆಯ ಆರಂಭ ಸಿಕ್ಕಿದ್ದು ಅದನ್ನು ಮುಂದುವರಿಸಿಕೊಂಡು ಹೋಗಲು ಬಯಸುತ್ತೇವೆ. ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ತಂಡವನ್ನು ಸಮತೋಲನದಲ್ಲಿ ಕಾಯ್ದುಕೊಳ್ಳುವುದು ತುಂಬಾ ಸವಾಲಿನ ಕೆಲಸವಾಗಿರುವುದರಿಂದ ತಂಡದ ಪ್ಲೇಯಿಂಗ್ 11ನಲ್ಲಿ ಯಾವುದೇ ಬದಲಾವಣೆ ಮಾಡದೆ ಹಿಂದಿನ ಪಂದ್ಯದಲ್ಲಿದ್ದ ತಂಡದೊಂದಿಗೆ ಶ್ರೀಲಂಕಾ ವಿರುದ್ಧ ಪೈಪೋಟಿ ನಡೆಸುತ್ತಿದ್ದೇವೆ’ ಎಂದು ರೋಹಿತ್ ಶರ್ಮಾ ತಿಳಿಸಿದರು.

ಟ್ರಕ್ ಡಿಕ್ಕಿ ಹೊಡೆದು ಗರ್ಭಿಣಿ ಸೇರಿ ಇಬ್ಬರು ಮಹಿಳೆಯರ ಸಾವು

ಬೆಂಗಳೂರು, ನ.2- ಆಸ್ಪತ್ರೆಗೆ ಹೋಗಲು ರಸ್ತೆ ದಾಟುತ್ತಿದ್ದ ಗರ್ಭಿಣಿ ಹಾಗೂ ಆಕೆಯ ಸ್ನೇಹಿತೆಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ದಾರುಣವಾಗಿ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ಆಂಧ್ರಪ್ರದೇಶದ ಮದನಪಲ್ಲಿ ನಿವಾಸಿಗಳಾದ ರುತಿಯಾ (28) ಮತ್ತು ಲಕ್ಷ್ಮಮ್ಮ (25) ಮೃತಪಟ್ಟ ದುರ್ದೈವಿಗಳು. ರುತಿಯಾ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ತೋರಿಸಲು ಬೆಂಗಳೂರು ಅಷ್ಟಾಗಿ ಪರಿಚಯವಿಲ್ಲದ ಕಾರಣ ಪಕ್ಕದ ಮನೆಯ ನಿವಾಸಿ ಲಕ್ಷ್ಮಮ್ಮ ಅವರನ್ನು ಕರೆದುಕೊಂಡು ಆಂಧ್ರದಿಂದ ಇಂದು ಬೆಳಗ್ಗೆ ನಗರಕ್ಕೆ ಬಂದಿದ್ದಾರೆ.

ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ

ಇಂದು ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ನಗರದ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೃದಯಾಲಕ್ಕೆ ಹೋಗಲು ಆಸ್ಪತ್ರೆ ಸಮೀಪ ಇವರಿಬ್ಬರು ರಸ್ತೆ ದಾಟುತ್ತಿದ್ದಾಗ ಅತಿ ವೇಗಾವಾಗಿ ಬಂದ ಟ್ರಕ್ ಇವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಹೆಬ್ಬಗೋಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಬ್ಬರು ಮಹಿಳೆಯರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳ್ಳತನ, ಕಾರು ಚಾಲಕ ಸೇರಿ ನಾಲ್ವರ ಬಂಧನ

ಬೆಂಗಳೂರು, ನ.2- ಚಿತ್ರದುರ್ಗದ ಅಡಿಕೆ ವ್ಯಾಪಾರಿಯ ಕಾರಿನಲ್ಲಿದ್ದ ಒಂದು ಕೋಟಿ ಹಣ ಕಳ್ಳತನ ಮಾಡಿದ್ದ ಕಾರಿನ ಚಾಲಕ ಸೇರಿದಂತೆ ನಾಲ್ವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿ 90.19 ಲಕ್ಷ ರೂ. ನಗದು, ಕಳ್ಳತನ ಮಾಡಿದ ಹಣದಲ್ಲಿ ಖರೀದಿಸಿದ ಮೊಬೈಲ್‍ಗಳು, ವಾಚ್‍ಗಳು, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರು ಚಾಲಕ ಮೂಲತಃ ಚಿತ್ರದುರ್ಗ ಜಿಲ್ಲೆ ಹೋಳಲಕೆರೆ ತಾಲ್ಲೂಕಿನ ತಾಳ್ಯ ಗ್ರಾಮದ ಸ್ವಾಮಿ (34), ಈತನ ಸ್ನೇಹಿತೆ ನಗರದ ಮಹದೇವಪುರದ ನಿವಾಸಿ ಅನುಪಮ (38) ಈಕೆಯ ಸ್ನೇಹಿತ ಚಿತ್ರದುರ್ಗದ ಜಜಲರ ಹಟ್ಟಿ ನಿವಾಸಿ ಪವನ್ (30) ಹಾಗೂ ಹಾಸನ ಜಿಲ್ಲೆ ಸಕಲೇಶಪುರದ ಮಹೇಶ್ವರಿ ನಗರ ನಿವಾಸಿ ಕಾರ್ತಿಕ್ (27) ಬಂಧಿತ ಆರೋಪಿಗಳು.

ಅಂತರ್‍ರಾಜ್ಯ ಅಡಿಕೆ ವ್ಯಾಪಾರಿ, ಚಿತ್ರದುರ್ಗದ ಭೀಮಸಮುದ್ರ ನಿವಾಸಿ ಉಮೇಶ್ ಎಂಬುವವರು ವಿವಿಧ ರಾಜ್ಯಗಳಿಗೆ ತೆರಳಿ ಅಡಿಕೆಯನ್ನು ಖರೀದಿಸುತ್ತಾರೆ. ಅದರಂತೆ ಅಕ್ಟೋಬರ್ 20ರಂದುಅಡಿಕೆ ಖರೀದಿಸಲು ಒಂದು ಕೋಟಿ ಹಣವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಕಾರಿನಲ್ಲಿ ಚಾಲಕ ಸ್ವಾಮಿ ಜೊತೆ ಹೋಗಿದ್ದು, ಮೊದಲು ಚಿತ್ರದುರ್ಗದಲ್ಲೇ ಖರೀದಿಗೆ ಹೋದಾಗ ವ್ಯಾಪಾರ ಕುದುರಿಲ್ಲ.

ಹಾಗಾಗಿ ವಾಪಸ್ಸು ಅಲ್ಲಿಂದ ಶಿರಾಕ್ಕೆ ಬಂದಿದ್ದಾರೆ. ಶಿರಾದಲ್ಲೂ ಅಡಿಕೆ ವ್ಯಾಪಾರ ಸರಿಬರಲಿಲ್ಲ. ನಂತರ ತುಮಕೂರಿಗೆ ಹೋಗಿದ್ದಾರೆ ಅಲ್ಲಿಯೂ ಅಡಿಕೆ ತೆಗೆದುಕೊಂಡಿಲ್ಲ. ವಾಪಸ್ಸು ಊರಿಗೆ ಹೋಗುವ ಮುನ್ನ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳು ಹಾಗೂ ಸ್ನೇಹಿತನ ಮಕ್ಕಳನ್ನು ಮಾತನಾಡಿಸಿಕೊಂಡು ಹೋಗೋಣವೆಂದು ನಿರ್ಧರಿಸಿ ಬೆಂಗಳೂರಿಗೆ ಬಂದಿದ್ದಾರೆ.

ಮೊದಲು ನಗರದ ಗಾಂನಗರಕ್ಕೆ ಬಂದು ಹೋಟೆಲ್‍ವೊಂದರ ಮುಂಭಾಗ ಕಾರ್ ಪಾರ್ಕಿಂಗ್ ಮಾಡಿ ಊಟ ಮುಗಿಸಿಕೊಂಡು ಚಂದ್ರಲೇಔಟ್‍ನ ಪಿಜಿಗೆ ಹೋಗಿ ಮಕ್ಕಳನ್ನು ಮಾತನಾಡಿಸಿಕೊಂಡು ನಂತರ ವಾಪಸ್ಸು ಭೀಮಸಮುದ್ರಕ್ಕೆ ಹಿಂದಿರುಗಿದ್ದಾರೆ.

ರಾತ್ರಿ ಮನೆಗೆ ಹೋದ ಉಮೇಶ್ ಅವರು ಹಣವಿದ್ದ ಬ್ಯಾಗ್ ತೆಗೆದುಕೊಳ್ಳಲು ಕಾರಿನ ಡಿಕ್ಕಿ ತೆಗೆದು ನೋಡಿದಾಗ ಒಂದು ಕೋಟಿ ಹಣವಿದ್ದ ಬ್ಯಾಗ್ ಇರಲಿಲ್ಲ. ಇದರಿಂದ ಗಾಬರಿಯಾದ ಉಮೇಶ್ ಅವರು ಏನು ಮಾಡಬೇಕೆಂದು ತೋಚದೆ, ಹಣ ಎಲ್ಲಿ ಕಳ್ಳತನವಾಗಿದೆ ಎಂದು ತಿಳಿಯದೇ ಅ.21ರಂದು ವಾಪಸ್ಸು ಬೆಂಗಳೂರಿಗೆ ಬಂದು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ತಮ್ಮ ಕಾರಿನ ಚಾಲಕ ಸ್ವಾಮಿ ಮೇಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಬರ ಅಧ್ಯಯನ ಮಾಡುತ್ತಿರುವ ತಂಡ ನಾಟಕ ಕಂಪನಿ: ಶಿವರಾಜ ತಂಗಡಗಿ

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರುಕಾರು ಚಾಲಕ ಸ್ವಾಮಿಯನ್ನು ವಿಚಾರಣೆಗೆ ಒಳಪಡಿಸಿದಾಗ ಆತನ ಸ್ನೇಹಿತರು ಸೇರಿ ಒಂದು ಕೋಟಿ ಹಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಉಮೇಶ್ ಅವರ ಬಳಿ ಸ್ವಾಮಿ ಹದಿನೈದು ವರ್ಷದಿಂದ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಉಮೇಶ್ ಅವರು ಅಡಿಕೆ ವ್ಯಾಪಾರಕ್ಕೆ ಹೋಗುವಾಗ ಕೋಟಿ ಕೋಟಿ ಹಣ ತೆಗೆದುಕೊಂಡು ಹೋಗುತ್ತಾರೆಂಬ ವಿಷಯವನ್ನು ಸ್ನೇಹಿತೆ ಅನುಪಮಾಗೆ ತಿಳಿಸಿದ್ದನು.

ಅಡಿಕೆ ವ್ಯಾಪಾರಿ ಬಳಿ ಕೋಟಿ ಕೋಟಿ ಹಣ ಇರುವುದನ್ನು ತಿಳಿದುಕೊಂಡ ಅನುಪಮಾ, ಸ್ವಾಮಿಯ ಸಹಾಯದಿಂದ ಕಾರಿನ ನಕಲಿ ಕೀ ಮಾಡಿಸಿಕೊಂಡು, ಮತ್ತೆ ಯಾವಾಗ ಬೆಂಗಳೂರಿಗೆ ಬರುತ್ತೀರೆಂದು ಸ್ವಾಮಿಯನ್ನು ವಿಚಾರಿಸಿ ಸ್ನೇಹಿತ ಪವನ್‍ಗೆ ತಿಳಿಸಿದ್ದಾಳೆ. ಅದರಂತೆ ಪವನ್ ತನ್ನ ಸ್ನೇಹಿತ ಕಾರ್ತಿಕ್ ಜೊತೆ ಗಾಂನಗರಕ್ಕೆ ಹೋಗಿದ್ದು, ವ್ಯಾಪಾರಿ ಉಮೇಶ್ ಅವರ ಕಾರು ಹೋಟೆಲ್ ಮುಂದೆ ನಿಂತಿದ್ದಾಗ ನಕಲಿ ಕೀ ಬಳಸಿ ಡಿಕ್ಕಿಯಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ ವಿಚಾರ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಲೆಗೆ ಬೀಳಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾಪೈಸೆ ಬರ ಪರಿಹಾರ ನೀಡಿಲ್ಲ : ಪರಮೇಶ್ವರ್

ಆರೋಪಿಗಳಿಂದ ಕಳ್ಳತನ ಮಾಡಿದ್ದ ಒಂದು ಕೋಟಿ ಹಣದ ಪೈಕಿ 90, 19, 500 ರೂ. ನಗದು, ಕಳ್ಳತನ ಮಾಡಿದ್ದ ಹಣದಲ್ಲಿ ಖರೀದಿಸಿದ್ದ 6.49 ಲಕ್ಷ ರೂ. ಮೌಲ್ಯದ 2 ಆ್ಯಪಲ್ ಕಂಪನಿಯ ಐಫೆÇೀನ್‍ಗಳು, ಒಂದು ಜೊತೆ ಹಿಯರ್ ಫೋನ್, 2 ಫಾಸಿಲ್ ಕಂಪನಿಯ ವಾಚ್‍ಗಳು, ಒಂದು ಆ್ಯಪಲ್ ಕಂಪನಿಯ ಐ ವಾಚ್, 61.670 ಗ್ರಾಂ ತೂಕದ ಚಿನ್ನಾಭರಣಗಳು, ಆರೋಪಿಗಳು ಕೃತ್ಯಕ್ಕೆ ಬಳಸಿದ್ದ 4 ಮೊಬೈಲ್ ಫೆÇೀನ್‍ಗಳು, ಒಂದು ಮಾರುತಿ ಸಿಯಾಜ್ ಡೆಲ್ಟಾ ಕಾರ್, ಒಂದು ಫೋಲೋ ಕಾರ್ ಮತ್ತು ಒಂದು ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಪಶ್ಚಿಮ ವಿಭಾಗದ ಉಪ-ಫೋಲೀಸ್ ಆಯುಕ್ತ ಗಿರೀಶ್ ಅವರ ನೇತೃತ್ವದಲ್ಲಿ ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಫೋಲೀಸ್ ಆಯುಕ್ತ ರಮೇಶ್, ಇನ್ಸ್‍ಪೆಕ್ಟರ್ ಮಾರುತಿ ಮತ್ತು ಸಿಬ್ಬಂದಿ ತಂಡ ಅವಿರತವಾಗಿ ಶ್ರಮಿಸಿ ನಾಲ್ವರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗದೆ.

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು,ನ.2-ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳ ಪರೀಕ್ಷೆ ವೇಳೆ ಮಾರಕ ಝಿಕಾ ವೈರಸ್ ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಆರಂಭಿಕ ಹಂತದಲ್ಲೇ ಮಾರಕ ವೈರಸ್‍ಗೆ ಕಡಿವಾಣ ಹಾಕಲು ಮುಂದಾಗಿರುವ ಆರೋಗ್ಯ ಇಲಾಖೆ ತಲಕಾಯಲಬೆಟ್ಟ ಗ್ರಾಮದ 5 ಕಿಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳಲ್ಲಿ 31 ಗರ್ಭಿಣಿಯರ ರಕ್ತ ಮಾದರಿಗಳನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಿದೆ. ಇನ್ನೂ ಜೊತೆಯಲ್ಲಿ 4 ಮಂದಿ ಜ್ವರಪೀಡಿತರ ರಕ್ತ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ.

ಮಾದರಿ ಪರೀಕ್ಷೆಗಳ ವರದಿ ಬರಲು 15 ದಿನಗಳಾಗಲಿದ್ದು, ವರದಿ ಬಂದ ನಂತರ ಝಿಕಾ ವೈರಸ್ ಇದೆಯೋ ಇಲ್ಲವೋ ಎಂಬುದು ಖಚಿತವಾಗಲಿದೆ. ಅಲ್ಲಿಯವರೆಗೂ ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ. ಉತ್ತಮ ಪೋಷಕಾಂಶಯುಕ್ತ ಆಹಾರ ಸೇವನೆಗೆ ಸೂಚನೆ ನೀಡಲಾಗಿದೆ. ಸೊಳ್ಳೆ ಪರದೆ ಬಳಸಿಕೊಂಡು ಮಲಗಲು ಸೂಚಿಸಲಾಗಿದೆ. ಸೊಳ್ಳೆ ಕಡಿತದಿಂದ ಸ್ವಯಂ ರಕ್ಷಣೆ ಮಾಡಿಕೊಂಡು ಝಿಕಾ ವೈರಸ್ ಆತಂಕದಿಂದ ದೂರ ಇರಲು ಸಲಹೆ ನೀಡಲಾಗುತ್ತಿದೆ.

ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಓದಿ ನಗೆಪಾಟಲಿಗೀಡಾದ ಸಚಿವ ತಂಗಡಗಿ

ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳ ಪರೀಕ್ಷೆ ನಡೆಸಿದ್ದರು. ಜಿಲ್ಲೆಯ 6 ಕಡೆಗಳಲ್ಲೂ ಸೊಳ್ಳೆಗಳ ಪರೀಕ್ಷೆ ನಡೆದಿತ್ತು. ತಲಕಾಯಲ ಬೆಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಈ ಬೆಟ್ಟ ವ್ಯಾಪ್ತಿಯ 5 ಕಿ.ಮೀ. ಸುತ್ತ ಮುತ್ತಲ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ತಲಕಾಯಲಬೆಟ್ಟದಲ್ಲಿ ಕೀಟಶಾಸ್ತ್ರಜ್ಞರು ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದು ದೃಢಪಡಿಸಿದ ಬೆನ್ನಲ್ಲೇ ವಿಶೇಷ ಸಭೆ ನಡೆಸಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ತಲಕಾಯಲಬೆಟ್ಟದಿಂದ 5 ಕಿ.ಮೀ. ವ್ಯಾಪ್ತಿಯ ವೆಂಕಟಾಪುರ, ದಿಟ್ಟೂರಹಳ್ಳಿ, ಬಚ್ಚನಹಳ್ಳಿ, ವಡ್ಡಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 30 ಮಂದಿ ಗರ್ಭಿಣಿಯರು ಮತ್ತು ಜ್ವರ ಪೀಡಿತ 7 ಮಂದಿ ರಕ್ತವನ್ನು ಪಡೆದು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ.

ಮಾರಕ ಝಿಕಾ ವೈರಸ್ ಗರ್ಭಿಣಿಯರಿಗೆ ಹರಡುವ ಸೋಂಕು. ಇದು ಮುಖ್ಯವಾಗಿ ಸೊಳ್ಳೆಗಳಿಂದ ಹರಡುವ ಕಾಯಿಲೆ. ಪ್ರಾರಂಭದಲ್ಲಿ ಸೌಮ್ಯ ಲಕ್ಷಣ ಇರಲಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಣಾಂತಿಕ ರೋಗವಾಗಿ ಬದಲಾಗುತ್ತದೆ. ಝಿಕಾ ಸ್ವತಃ ಮಾರಣಾಂತಿಕ ಅಲ್ಲದಿದ್ದರೂ ಅಪಾಯ ತಂದೊಡ್ಡಲಿದೆ. ಈ ರೋಗದ ಲಕ್ಷಣಗಳು ಒಂದು ವಾರದೊಳಗೆ ಕಣ್ಮರೆಯಾಗುತ್ತವೆ. ಗರ್ಭಿಣಿ ಸೋಂಕಿಗೆ ಒಳಗಾದಾಗ ಈ ರೋಗವು ಹುಟ್ಟಲಿರುವ ಮಗುವಿನ ಮೇಲೆ ವಿನಾಶಕಾರಿ ಪರಿಣಾಮ ಬೀರುತ್ತದೆ.

ಎಗಿಫ್ಟಿ ಮತ್ತು ಈಡಿಯಸ್ ಅಲ್ಲೋ ಪಿಕ್ಸಸ್ ಸೊಳ್ಳೆಗಳಿಂದ ಝಿಕಾ ವೈರಸ್ ಮನುಷ್ಯನಿಗೆ ಹರಡುತ್ತದೆ. ಸೊಳ್ಳೆಯು ಸೋಂಕಿತ ವ್ಯಕ್ತಿಯನ್ನು ಕಚ್ಚಿದ ನಂತರ, ಕಾ ವೈರಸ್ ಸೊಳ್ಳೆಯ ವ್ಯವಸ್ಥೆ ಪ್ರವೇಶಿಸುತ್ತದೆ. ಅದರ ದೇಹದಲ್ಲಿ ಪುನರಾವರ್ತಿಸುತ್ತದೆ ಮತ್ತು ಅದರ ಲಾಲಾರಸ ಗ್ರಂಥಿ ಗಳಿಗೆ ಹರಡುತ್ತದೆ. ಈ ವೈರಸ್ ಸೊಳ್ಳೆಯಲ್ಲಿ ಎಂಟರಿಂದ ಹತ್ತು ದಿನಗಳವರೆಗೆ ಕಾವು ಕೊಡುತ್ತದೆ. ಅಂತಹ ಸೊಳ್ಳೆ. ಕಚ್ಚಿದಾಗ ವೈರಸ್ ವ್ಯಕ್ತಿಗೆ ಹರಡುತ್ತದೆ. ಸೊಳ್ಳೆ ಕಚ್ಚಿದ ನಂತರ ವ್ಯಕ್ತಿಯಲ್ಲಿ ಕಾ ವೈರಸ್‍ನ ಕಾವು ಕಾಲಾವಧಿ ಮೂರರಿಂದ 12 ದಿನಗಳವರೆಗೆ ಇರುತ್ತದೆ.

ಝಿಕಾ ವೈರಸ್ ಲಕ್ಷಣಗಳು ಝಿಕಾ ವೈರಸ್ ಒಳಗಾದವರು ಸಾಮಾನ್ಯವಾಗಿ ಜ್ವರ, ತಲೆನೋವು, ತುರಿಕೆ, ಕಣ್ಣಿನ ಬಣ್ಣ ಬದಲಾವಣೆ, ಮೈ ಕೈ ನೋವಿನ ರೋಗದ ಲಕ್ಷಣ ಗಳನ್ನು ಅನುಭವಿಸುತ್ತಾರೆ ಅಥವಾ ತುಂಬಾ ಸೌಮ್ಯವಾದ ರೋಗಲಕ್ಷಣಗಳನ್ನು ಅನುಭವಿಸುತ್ತಾರೆ. ಡೆಂಗ್ಯೂ ಮತ್ತು ಚಿಕೂನ್ ಗುನ್ಯಾದಂತೆ ಇರುತ್ತದೆ. ಜ್ವರ, ದದ್ದು, ತಲೆನೋವು, ಕೀಲುನೊವು, ಆಯಾಸ, ಕೆನ್ನೆಗಳ ಊತ, ಬೆವರುವುದು, ತಣ್ಣಗಾಗುವುದು, ವಾಂತಿ, ರಕ್ತಸಿಕ್ತ ಕಣ್ಣುಗಳು ಲಕ್ಷಣಗಳು ಗೋಚರಿಸುತ್ತವೆ.

ರಾಜಸ್ಥಾನ : ಇಡಿ ಅಧಿಕಾರಿಗಳನ್ನೇ ಬಂಧಿಸಿದ ಎಸಿಬಿ

ಝಿಕಾ ಬರದಂತೆ ತಡೆಗೆಟ್ಟುವುದು ಹೇಗೆ?:
ಸೋಂಕು ಬಂದ ಮೇಲೆ ಪರದಾಡುವುದಕ್ಕಿಂತ ಸೋಂಕು ಬಾರದಂತೆ ತಡೆಯುವುದು ಅತೀ ಅಗತ್ಯ. ಇದಕ್ಕಾಗಿ ಕೆಲವು ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಬೇಕು. ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.

ಗರ್ಭಿಣಿಯರು, ಬಾಣಂತಿಯರು ಸೇರಿದಂತೆ ಎಲ್ಲರೂ ಸೊಳ್ಳೆಗಳ ಕಾಟ ತಡೆಗೆ ಕ್ರಮಕೈಗೊಳ್ಳಬೇಕು. ಪ್ರಸ್ತುತ ಝಿಕಾ ವೈರಸ್ ಸೋಂಕಿಗೆ ಯಾವುದೇ ನಿರ್ದಿಷ್ಟ ಔಷಧ ಇಲ್ಲ. ವಿಜ್ಞಾನಿಗಳು ದೀರ್ಘ ಕಾಲದವರೆಗೆ ವೈರಸ್ ಹಾನಿಕರವಲ್ಲ ಅಂತ ಭಾವಿಸಿದ್ದರು. ಸದ್ಯ ರೋಗ ಲಕ್ಷಣಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಆದ್ದರಿಂದ ವೈದ್ಯರು ಜ್ವರ ಕಡಿಮೆ ಮಾಡುವ ಔಷಧಿ ನೀಡುತ್ತಾರೆ. ವಾಂತಿ ಮತ್ತು ದದ್ದುಗಳಿಗೆ ಔಷಧಗಳನ್ನು ಸೂಚಿಸಬಹುದು.

ಇನ್ನೂ ಮುಂಜಾಗ್ರತಾ ಕ್ರಮವಾಗಿ ಜ್ವರದಿಂದ ಬಳಲುತ್ತಿರುವವರ ಮೇಲೆ ನಿಗಾವಹಿಸಲಾಗಿದೆಯಾದರೂ ಝಿಕಾ ವೈರಸ್ ಸೋಂಕು ಹುಟ್ಟುವ ಮಕ್ಕಳ ಅಂಗವೈಕಲ್ಯಕ್ಕೆ ತುತ್ತಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಗರ್ಭಿಣಿಯರ ಮೇಲೂ ನಿಗಾ ವಹಿಸಲಾಗಿದೆ.