Home Blog Page 1851

ಸಿದ್ದು-ಡಿಕೆಶಿ ನಡುವೆ ಅನ್ಯೋನ್ಯತೆ

0

ಬೆಂಗಳೂರು, ಅ.31- ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ, ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತ ಮಹಿಳೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಂಡಾಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ. ಇಂರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ. ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಾತ್ಮಗಾಂಧಿ ಹತ್ಯೆ, ಇಂದಿರಾಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ ದೇಶಕ್ಕೆ ಆದ ದೊಡ್ಡ ನಷ್ಟ. ಈ ಮೂವರು ದೇಶಕ್ಕಾಗಿ ಹುತಾತ್ಮರಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು. ಇವರು ದೇಶಕ್ಕಾಗಿ ಮಾಡಿದ ತ್ಯಾಗ, ಬಲಿದಾನ ನಮ್ಮ ದೇಶದ ಮಣ್ಣಿನಲ್ಲಿ ದಾಖಲಾಗಿದೆ ಎಂದರು.

ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ಟೀಕಿಸಿದರು.
1978 ರಲ್ಲಿ ನಾನು ಜನತಾಪಾರ್ಟಿಯಲ್ಲಿ ಇದ್ದೆ. ಹಾರೋಹಳ್ಳಿಗೆ ನಾನು ಓಟು ಕೇಳಲು ಹೋಗಿದ್ದೆ. ಮನೆ ಮನೆಗೆ ಹೋಗಿ ಅಲ್ಲಿ ವಿಚಾರಿಸುತ್ತಿದ್ದೆ. ಎಲ್ಲರ ಮನೆಗಳಲ್ಲಿ ಇಂದಿರಾ ಫೋಟೋ ಇರುತ್ತಿತ್ತು. ಜನ ನಾವು ಇಂದಿರಾಗಾಂಧಿಗೆ ಓಟು ಹಾಕೋದು ಎನ್ನುತ್ತಿದ್ದರು ಎಂದರು.

ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇವರ ಕೊಡುಗೆ ಅಪಾರ ಎಂದು ಪಟೇಲರ ಹೋರಾಟದ ಘಟನೆಗಳನ್ನು ಮುಖ್ಯಮಂತ್ರಿ ಸ್ಮರಿಸಿಕೊಂಡರು.

ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರ ಕಂಡು ಬರಲಿಲ್ಲ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮ್ಮದ್, ಚಂದ್ರಪ್ಪ ಸೇರಿದಂತೆ ಪಕ್ಷದ ಹಲವು ಮುಖಂಡರು ವೇದಿಕೆಯಲ್ಲಿದ್ದರು.

ಸಿದ್ದು-ಡಿಕೆಶಿ ನಡುವೆ ಅನ್ಯೋನ್ಯತೆ:
ಮಂಡ್ಯದಲ್ಲಿನ ಪತ್ರಕರ್ತರ ಸಮ್ಮೇಳನದಲ್ಲಿ ಭಾಗವಹಿಸಲು ತೆರಳಬೇಕಾಗಿದ್ದ ಮುಖ್ಯಮಂತ್ರಿಯವರು ಕಾರ್ಯಕ್ರಮದಲ್ಲಿ ಆರಂಭದಲ್ಲೇ ಮಾತನಾಡಿ ನಿರ್ಗಮಿಸಿದರು. ಆರಂಭದಲ್ಲಿ ಪುಷ್ಪಾರ್ಚನೆ ಮಾಡುವಾಗ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಒಟ್ಟಾಗಿ ಕಾಣಿಸಿಕೊಂಡರು. ನಂತರ ವೇದಿಕೆಯಲ್ಲೂ ಇಬ್ಬರು ಪರಸ್ಪರ ಪಿಸುಮಾತಿನಲ್ಲಿ ಚರ್ಚೆ ಮಾಡುತ್ತಿದ್ದದ್ದು ಕಂಡು ಬಂತು. ತಮ್ಮ ಭಾಷಣ ಮುಗಿಸಿ ಸಿದ್ದರಾಮಯ್ಯ ಅವರು ಹೊರಡಲು ಅನುವಾದಾಗ ಡಿ.ಕೆ.ಶಿವಕುಮಾರ್ ಆತ್ಮೀಯವಾಗಿ ಕೈ ಕುಲುಕಿ, ಹೊರಡುತ್ತಿದ್ದ ಸಿದ್ದರಾಮಯ್ಯ ಮತ್ತೆ ಕೆಲ ಕಾಲ ಕಾರ್ಯಕ್ರಮದಲ್ಲಿ ಕುಳಿತುಕೊಂಡರು. ವೇದಿಕೆಯಲ್ಲಿ ಮುಖ್ಯಮಂತ್ರಿಯವರ ಕಿವಿಯಲ್ಲಿ ಡಿ.ಕೆ.ಶಿವಕುಮಾರ್ ಏನನ್ನೋ ಪಿಸುಗುಟ್ಟಿದರು. ಅದಕ್ಕೆ ಸಿದ್ದರಾಮಯ್ಯ ಅವರು ಅಷ್ಟೇ ಪ್ರೀತಿಯಿಂದ ಸ್ಪಂದಿಸಿದ್ದು ಕಂಡು ಬಂತು.

ಗೃಹ ಸಚಿವ ಪರಮೇಶ್ವರ್ ಅವರ ಮನೆಯಲ್ಲಿ ನಡೆದ ಬೋಜನಕೂಟದಲ್ಲಿ ಮುಖ್ಯಮಂತ್ರಿಯವರು ಭಾಗವಹಿಸಿದ್ದರು. ಅದಕ್ಕೆ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ಇರಲಿಲ್ಲ ಎಂಬುದು ಚರ್ಚೆಗಳನ್ನು ಹುಟ್ಟು ಹಾಕಿತ್ತು. ಇತ್ತೀಚೆಗೆ ಅಕಾರ ಹಂಚಿಕೆ ವಿಷಯವಾಗಿ ಕೆಲ ಶಾಸಕರು ಹಾಗೂ ಸಚಿವರ ಹೇಳಿಕೆ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಅಸಮಧಾನ ಹೊಗೆಯಾಡುತ್ತಿದೆ ಎಂಬ ವದ್ಧಂತಿಗಳಿಗೆ ವೇದಿಕೆಯಲ್ಲಿ ಇಬ್ಬರ ಅನ್ಯೋನ್ಯ ನಡವಳಿಕೆಗಳು ಅಪವಾದವಾಗಿದ್ದವು.

ಮಹತ್ವದ ಮಾಹಿತಿ : ಸಾಮಾನ್ಯ ವರ್ಗದ ಹುದ್ದೆಗೆ ಸಿಂಧುತ್ವ ಪ್ರಮಾಣ ಪತ್ರ ಕಡ್ಡಾಯವಲ್ಲ

ಬೆಂಗಳೂರು, ಅ.31- ಮೀಸಲಾತಿ ಕೋರಿ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಆಯ್ಕೆಯಾದರೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ರಾಜ್ಯದ ನಾಗರಿಕ ಸೇವಾ ಹುದ್ದೆಗಳಿಗೆ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೀಸಲಾತಿಯಿಂದ
ಯಾವುದೇ ರಿಯಾಯಿತಿ ಪಡೆಯದೆ ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸಿಂಧುತ್ವ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸದಂತೆ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

ರಾಜ್ಯದ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ನಿಯಮಗಳು 1992ರ ಅನ್ವಯ ರಾಜ್ಯ ನಾಗರಿಕ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆಗೊಳ್ಳುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ವಿವಿಧ ಮೀಸಲಾತಿಯಡಿ ಆಯ್ಕೆ ಹೊಂದುವ ಹಾಗೂ ಸದರಿ ಮೀಸಲಾತಿಯಿಂದ ರಿಯಾಯಿತಿ ಪಡೆಯುವ ಅಭ್ಯರ್ಥಿಗಳು ಸಲ್ಲಿಸಿರುವ ಪ್ರಮಾಣ ಪತ್ರಗಳು ಸಿಂಧುವೇ ಎಂಬ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರದಿಂದ ಸಿಂಧುತ್ವ ಪ್ರಮಾಣ ಪತ್ರ ಪಡೆಯಬೇಕಾಗುತ್ತದೆ.

ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಆದರೆ, ಮೀಸಲಾತಿ ಕೋರಿ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಂತಿಮ ಆಯ್ಕೆ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಗೊಂಡಾಗಲೂ ಸಿಂಧುತ್ವ ಪ್ರಮಾಣ ಪತ್ರ ಸಲ್ಲಿಸುವಂತೆ ಕೆಲವು ನೇಮಕಾತಿ ಪ್ರಾಧಿಕಾರಿಗಳು ಅಭ್ಯರ್ಥಿಗಳಿಗೆ ಸೂಚಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೇಲಿನಂತೆ ನಿರ್ದೇಶನ ನೀಡಿದ್ದಾರೆ.

ಅಂತಿಮ ಆಯ್ಕೆ ಪಟ್ಟಿಯಲ್ಲಿ ಮೆರಿಟ್ ಆಧಾರದಲ್ಲಿ ಸಾಮಾನ್ಯ ವರ್ಗದ ಹುದ್ದೆಗಳಿಗೆ ಎದುರಾಗಿ ಆಯ್ಕೆಯಾದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅನಾವಶ್ಯಕ ತೊಂದರೆಯಾಗುವುದನ್ನು ತಪ್ಪಿಸಲು ಸಿಂಧುತ್ವ ಕಡ್ಡಾಯಗೊಳಿಸದಂತೆ ಅವರು ಸೂಚಿಸಿದ್ದಾರೆ.

BREAKING : 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು,ಅ.31- ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಸಾಹಿತಿ ಪ್ರೊ.ಸಿ.ನಾಗಣ್ಣ, ಖ್ಯಾತ ವೈದ್ಯ ಡಾ.ಸಿ.ರಾಮಚಂದ್ರ, ಪತ್ರಕರ್ತರಾದ ದಿನೇಶ್ ಅಮೀನ್‍ಮಟ್ಟು, ಜವರಪ್ಪ ಹಾಗೂ 10 ಸಂಘ ಸಂಸ್ಥೆಗಳಿಗೆ ಈ ಬಾರಿಯ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನಾಡು-ನುಡಿ,ಇತಿಹಾಸ, ಕ್ರೀಡೆ, ವಿಜ್ಞಾನ, ವೈದ್ಯಕೀಯ, ರಂಗಭೂಮಿ, ಯಕ್ಷಗಾನ, ಆಡಳಿತ, ಜಾನಪದ, ಸಾಹಿತ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುತ್ತದೆ.

ಅದರಂತೆ ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳಿಸುತ್ತಿರುವ ಶುಭ ಸಂದರ್ಭದಲ್ಲಿ ಕರ್ನಾಟಕ 50ರ ಸಂಭ್ರಮದ ಅಂಗವಾಗಿ ಇದೇ ಮೊದಲ ಬಾರಿಗೆ 10 ಸಂಘ ಸಂಸ್ಥೆಗಳಿಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

ನಾಳೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮತ್ತಿತರ ಗಣ್ಯರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಪ್ರಶಸ್ತಿಯು 5 ಲಕ್ಷ ನಗದು, 25 ಗ್ರಾಂ ಬಂಗಾರ ಪದಕ, ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ ಈ ಕೆಳಕಂಡಂತಿದೆ :

ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ : ಬಿಜೆಪಿ ವ್ಯಂಗ್ಯ

ಬೆಂಗಳೂರು,ಅ.31- ಇದು ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ತಮ್ಮ ಪಕ್ಷದಲ್ಲೇ ಕದನವನ್ನು ಶುರು ಮಾಡಿದೆ. ಇದರ ಪರಿಣಾಮವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿಎಂ ಸ್ಥಾನ ದಿಂದ ಸಿದ್ದರಾಮಯ್ಯ ಅವರನ್ನು ಇಳಿಸಿ ಸಿಎಂ ಆಗುತ್ತಾರೆ. ಈ ವಿಚಾರವನ್ನು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಪ್ರಿಯಾಂಕ್ ಖರ್ಗೆಯವರು ತಮ್ಮ ತಂದೆಯವರ ಪ್ರಭಾವ ಬಳಸಿ ಎಲ್ಲೆಲ್ಲೂ ತಮ್ಮ ನಿರ್ಧಾರಗಳೇ ನಡೆಯಲಿ ಎನ್ನುತ್ತಿದ್ದಾರೆ. ಇನ್ನೊಂದೆಡೆ ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಸತೀಶ್ ಜಾರಕಿಹೊಳಿಯವರು ಅಲುಗಾಡಿಸಿದ್ದಾರೆ. ಮತ್ತೊಂದು ಕಡೆ, ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಇತರ ಸನ್ಮಿತ್ರರು ಸಜ್ಜಾಗಿದ್ದಾರೆ ಎಂದು ಬಿಜೆಪಿ ಜಾಲತಾನ ಎಕ್ಸ್‍ನಲ್ಲಿ ಬರೆದುಕೊಂಡಿದೆ.

ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ಅವರ ಪಕ್ಷದಲ್ಲಿ ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ ಆಯ್ದ ಆಮಂತ್ರಿತರ ಡಿನ್ನರ್ ಆಯೋಜಿಸಲಾಗುತ್ತದೆ. ಹಣಕಾಸಿನ ಲೆಕ್ಕಾಚಾರಗಳಿರುವಾಗ ಈ ರೀತಿ ಭಿನ್ನಾಭಿಪ್ರಾಯಗಳು ಸಹಜವಾಗಿ ಇರುತ್ತದೆ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು, ಹೊರ ರಾಜ್ಯಗಳ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈಕಮಾಂಡ್‍ಗೆ ತಿಳಿಸಿದರೆ ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಹೇಳಿಕೊಂಡಿದೆ.

ನ.2ರಂದು ಕೇಜ್ರಿವಾಲ್ ಬಂಧನ ಸಾಧ್ಯತೆ

ನವದೆಹಲಿ, ಅ 31 (ಪಿಟಿಐ) ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ನಂತರ ನವೆಂಬರ್ 2 ರಂದು ಅವರನ್ನು ಬಂಧಿಸುವ ಆತಂಕವಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

ದೆಹಲಿಯ ಆಡಳಿತ ಪಕ್ಷವು ತನ್ನ ಉನ್ನತ ನಾಯಕರನ್ನು ಕಂಬಿ ಹಿಂದೆ ಹಾಕುವ ಮೂಲಕ ಬಿಜೆಪಿ ಅದನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‍ಎ) ಅಡಿಯಲ್ಲಿ ಕೇಜ್ರಿವಾಲ್‍ಗೆ ಸಮನ್ಸ್ ನೀಡಲಾಗಿದೆ ಮತ್ತು ಮೂಲಗಳ ಪ್ರಕಾರ, ನ 2 ರಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯ ತನಿಖಾ ಸಂಸ್ಥೆಯ ಕಚೇರಿಯಲ್ಲಿ ಇಡಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ಹೈದರಾಬಾದ್‍ನಲ್ಲಿ ಅರೆಸ್ಟ್

ಇಡಿಯಿಂದ ಕೇಜ್ರಿವಾಲ್‍ಗೆ ಸಮನ್ಸ್ ನೀಡಿರುವುದು ಇದೇ ಮೊದಲು. ಈ ಪ್ರಕರಣದಲ್ಲಿ ಅವರನ್ನು ಏಪ್ರಿಲ್‍ನಲ್ಲಿ ಕೇಂದ್ರ ತನಿಖಾ ದಳ ವಿಚಾರಣೆ ನಡೆಸಿತ್ತು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಕ್ಯಾಬಿನೆಟ್ ಸಚಿವ ಅತಿಶಿ, ಚುನಾವಣೆಯಲ್ಲಿ ಕೇಜ್ರಿವಾಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಿರುವ ಕಾರಣ ಎಎಪಿಯನ್ನು ಗುರಿಯಾಗಿಸಲು ಬಿಜೆಪಿ ಈ ತಂತ್ರಗಳನ್ನು ಬಳಸುತ್ತಿದೆ ಎಂದು ಹೇಳಿದರು.

ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ಬಂಧಿಸಲಾಗುವುದು ಎಂದು ವರದಿಗಳಿವೆ, ಅವರನ್ನು ಬಂಧಿಸಿದರೆ, ಅದು ಭ್ರಷ್ಟಾಚಾರ (ಆರೋಪ) ಕಾರಣವಲ್ಲ, ಆದರೆ ಅವರು ಬಿಜೆಪಿ ವಿರುದ್ಧ ಮಾತನಾಡಿದ್ದಾರೆ ಎಂದು ಅವರು ಹೇಳಿದರು.

ನನ್ನ ಶಕ್ತಿಯ ಮೂಲ ನನ್ನ ಅಜ್ಜಿ : ರಾಹುಲ್‍ ಗಾಂಧಿ

ನವದೆಹಲಿ,ಅ.31- ನನ್ನ ಶಕ್ತಿ ನನ್ನ ಅಜ್ಜಿ ದೇಶಕ್ಕಾಗಿ ಎಲ್ಲವನ್ನೂ ತ್ಯಾಗ ಮಾಡಿದ ಅವರೇ ನನ್ನ ಶಕ್ತಿಯ ಮೂಲ ಎಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ತಮ್ಮ ಅಜ್ಜಿ ಇಂದಿರಾಗಾಂಧಿ ಅವರ ಗುಣಗಾನ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ. ನನ್ನ ಶಕ್ತಿ, ನನ್ನ ಅಜ್ಜಿ! ನೀವು ಎಲ್ಲವನ್ನೂ ತ್ಯಾಗ ಮಾಡಿದ ಭಾರತವನ್ನು ನಾನು ಯಾವಾಗಲೂ ರಕ್ಷಿಸುತ್ತೇನೆ. ನಿಮ್ಮ ನೆನಪುಗಳು ಯಾವಾಗಲೂ ನನ್ನೊಂದಿಗೆ, ನನ್ನ ಹೃದಯದಲ್ಲಿ ಎಂದು ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39ನೇ ಪುಣ್ಯತಿಥಿಯ ಅಂಗವಾಗಿ ರಾಷ್ಟ್ರ ರಾಜಧಾನಿಯ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ ಸಲ್ಲಿಸಿದರು.

ಕೇರಳ ಬ್ಲಾಸ್ಟ್ : ಕೇವಲ 3 ಸಾವಿರ ರೂ.ನಲ್ಲಿ ತಯಾರಾಗಿತ್ತಂತೆ ಬಾಂಬ್..!

ಇದೇ ವೇಳೆ, ಭಾರತೀಯ ಜನತಾ ಪಕ್ಷದ ಸಂಸದ ವರುಣ್ ಗಾಂಧಿ ಅವರು ತಮ್ಮ ಅಜ್ಜಿಯನ್ನು ಸ್ಮರಿಸಿಕೊಂಡರು, ಅವರು ನಿಜವಾಗಿಯೂ ರಾಷ್ಟ್ರ ಮಾತೆ ಎಂದು ಬಣ್ಣಿಸಿದರು. ಸಾಟಿಯಿಲ್ಲದ ಧೈರ್ಯ ಮತ್ತು ಹೋರಾಟದ ಸಂಕೇತ ಮತ್ತು ಪ್ರಜಾಸತ್ತಾತ್ಮಕ ಸಮಾಜವಾದದ ಪ್ರವರ್ತಕರಾಗಿದ್ದ ನನ್ನ ಅಜ್ಜಿ ದಿವಂಗತ ಇಂದಿರಾಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ನಮನಗಳು ಎಂದು ವರುಣ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಕಲ್ಪದೊಂದಿಗೆ, ನೀವು ಮಾತೃತ್ವದ ಅತ್ಯಂತ ಸರಳ ಮತ್ತು ಸೌಮ್ಯವಾದ ಮೃದುತ್ವವನ್ನು ಹೊಂದಿದ್ದೀರಿ. ನೀವು ನಿಜವಾಗಿಯೂ ರಾಷ್ಟ್ರದ ಮಾತೆ ಎಂದು ಅವರು ಸ್ಮರಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಭಾರತದ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದರು.

ಭಾರತದ ಏಕತೆಗೆ ಪಟೇಲ್ ಕೊಡುಗೆ ಅವಿಸ್ಮರಣೀಯ : ಅಮಿತ್ ಶಾ

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಭಾರತದ ಮಾಜಿ ಪ್ರಧಾನಿ ಅವರ ಪುಣ್ಯತಿಥಿಯಂದು ಅವರೊಂದಿಗಿನ ಮೊದಲ ಭೇಟಿಯನ್ನು ನೆನಪಿಸಿಕೊಂಡಿದ್ದಾರೆ. ನಾನು ಅವರನ್ನು ವಿದ್ಯಾರ್ಥಿ ನಾಯಕಿಯಾಗಿ 1975 ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದಿಂದ ನಮ್ಮ ಹತ್ತಾರು ಜನರೊಂದಿಗೆ ಪ್ರಧಾನಿ ಅವರ ಮನೆಯಲ್ಲಿ ಚರ್ಚಿಸಿದಾಗ ನಾನು ಅವರನ್ನು ಮೊದಲು ಭೇಟಿಯಾದೆ. ಎರಡು ತಿಂಗಳ ನಂತರ ನಾನು ಅವರನ್ನು ಸ್ವಿಸ್‍ಗೆ ಸಂದರ್ಶನ ಮಾಡಲು ಸಾಧ್ಯವಾಯಿತು. ಯುವ ನಿಯತಕಾಲಿಕೆ (ಚಿತ್ರ) ತಿರುವನಂತಪುರದಲ್ಲಿ ಅವರ ನೆನಪಿಗಾಗಿ ಗೌರವ ಸಲ್ಲಿಸುತ್ತಿದ್ದೇನೆ ಎಂದು ಅವರು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಸಿಗದೆ ಬಿಜೆಪಿ ಮಾಜಿ ಸಂಸದನ ಪುತ್ರ ಸಾವು

ಲಕ್ನೋ, ಅ.31- ಎಮರ್ಜೆನ್ಸಿ ವಾರ್ಡ್‍ನಲ್ಲಿ ಬೆಡ್ ಕೊರತೆಯಿಂದಾಗಿ ಬಿಜೆಪಿಯ ಮಾಜಿ ಸಂಸದನ ಪುತ್ರನೊಬ್ಬ ಮೃತಪಟ್ಟ ಘಟನೆ ಉತ್ತರಪ್ರದೇಶ ಲಕ್ನೋದ ಎಸ್‍ಜಿಪಿಜಿಐ ಆಸ್ಪತ್ರೆಯಲ್ಲಿ ನಡೆದಿದೆ. ಮೃತನನ್ನು ಪ್ರಕಾಶ್ ಮಿಶ್ರಾ (41) ಎಂದು ಗುರುತಿಸಲಾಗಿದ್ದು, ಇವರು ಬಿಜೆಪಿಯ ಮಾಜಿ ಸಂಸದ ಭೈರೋನ್ ಪ್ರಸಾದ್ ಮಿಶ್ರಾ ಪುತ್ರ.

ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಸೋಮವಾರ ರಾತ್ರಿ 11 ಗಂಟೆಗೆ ಎಸ್‍ಜಿಪಿಜಿಐ ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ಬೆಡ್ ಕೊರತೆಯಿಂದಾಗಿ ತುರ್ತು ಚಿಕಿತ್ಸೆ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಗೆ ಹೋದ ಸ್ವಲ್ಪ ಸಮಯದ ಬಳಿಕ ಮಗ ಮೃತಪಟ್ಟಿರುವುದಾಗಿ ಪ್ರಸಾದ್ ಮಿಶ್ರಾ ದೂರಿದ್ದಾರೆ. ಅಲ್ಲದೆ ಮಗನ ಶವದೊಂದಿಗೆ ತುರ್ತು ವಾರ್ಡ್‍ನ ಹೊರಗೆ ಪ್ರತಿಭಟನೆ ಮಾಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನನ್ನ ಮಗನನ್ನು ಕಳೆದುಕೊಂಡಿದ್ದೇನೆ ಎಂದು ಪ್ರಸಾದ್ ಮಿಶ್ರಾ ಗೋಳಾಡಿದರು. ನನ್ನ ನಂತರ ಸುಮಾರು 20-25 ಜನರು ಚಿಕಿತ್ಸೆ ಪಡೆದರು. ನಾನು ಪ್ರತಿಭಟನೆಗೆ ಕುಳಿತಾಗ ಎಲ್ಲರೂ ವೈದ್ಯನ ಬಗ್ಗೆ ದೂರು ನೀಡುತ್ತಿದ್ದರು. ಆ ವೈದ್ಯನಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಅಂಬಾನಿಗೆ ಮತ್ತೆ ಜೀವ ಬೆದರಿಕೆ : 20 ಆಯ್ತು, 200 ಆಯ್ತು ಇದೀಗ 400 ಕೋಟಿಗೆ ಬೇಡಿಕೆ

ಆಸ್ಪತ್ರೆ ಮುಖ್ಯಸ್ಥ ಡಾ.ಆರ್.ಕೆ.ಮಾನ್ ಮಾತನಾಡಿ, ಆಸ್ಪತ್ರೆಗೆ ದಾಖಲಿಸಿದಾಗ ರೋಗಿಯನ್ನು ಐಸಿಯುಗೆ ಕರೆದೊಯ್ಯಲು ವೈದ್ಯರು ಹೇಳಿದರು. ಆದರೆ ಅಲ್ಲಿ ಬೆಡ್ಗಳು ಲಭ್ಯವಿಲ್ಲ ಎಂದು ರೋಗಿ ಕಡೆಯವರಿಗೆ ತಿಳಿಸಿದ್ದಾರೆ. ಯಾಕೆ ಬೆಡ್ ಇಲ್ಲ ಎಂದು ಹೇಳಿದರು ತಿಳಿದಿಲ್ಲ. ಈ ಸಂಬಂಧ ನಾವು ಸಮಿತಿಯನ್ನು ರಚಿಸಿದ್ದೇವೆ. ನಾವು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸದ್ಯ ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದರು.

ಘಟನೆಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಪ್ರತಿಕ್ರಿಯಿಸಿ, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಆಸ್ಪತ್ರೆಯ ತಪ್ಪಲ್ಲ. ಆದರೆ ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಪ್ಪು. ಆಸ್ಪತ್ರೆಗೆ ಏಕೆ ಬಜೆಟ್ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಘಟನೆ ಸಂಬಂಧ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಕಟ್ಟುನಿಟ್ಟಿನ ಕ್ರಮದ ಭರವಸೆ ನೀಡಿದ್ದಾರೆ. ಅಲ್ಲದೆ ಮಾಜಿ ಸಂಸದನ ಮನೆಗೆ ಭೇಟಿ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದೆ. ಈ ಸಂಬಂಧ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು ಎಂದರು.

ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ನವದೆಹಲಿ, ಅ.31- ದೇಶದ ಪ್ರಥಮ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 148ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಅನೇಕ ಗಣ್ಯರು ವಲ್ಲಭಭಾಯಿ ಪಟೇಲ್‍ಗೆ ಗೌರವ ಸೂಚಿಸಿದ್ದಾರೆ.

ನವದೆಹಲಿಯ ಪಟೇಲ್ ಚೌಕ್‍ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್, ದೆಹಲಿ ಎಲ್ಜಿ ವಿಕೆ ಸಕ್ಸೇನಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪುಷ್ಪ ನಮನ ಸಲ್ಲಿಸಿದರು.

ಪಟೇಲ್ ಅವರದ್ದು ಅದಮ್ಯ ಮನೋಭಾವ, ದೂರದೃಷ್ಟಿಯ ರಾಜಕಾರಣಿ ಮತ್ತು ಅವರು ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕತೆಗೆ ಅವರ ಕೊಡುಗೆ, ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಬಂದಿದೆ, ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಉಕ್ಕಿನ ಮನುಷ್ಯನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸರ್ದಾರ್ ಪಟೇಲ್ ಜಯಂತಿ ಸಂದರ್ಭದಲ್ಲಿ ದೇಶದ ಜನತೆಗೆ ಏಕತಾ ದಿನದ ಶುಭಾಶಯಗಳನ್ನು ಹೇಳುತ್ತೇನೆ. 2014 ರಿಂದ ಇಡೀ ದೇಶವು ಈ ದಿನವನ್ನು ಏಕತಾ ದಿನವಾಗಿ ಆಚರಿಸುತ್ತದೆ. ಸ್ವಾತಂತ್ರ್ಯದ ನಂತರ ಬ್ರಿಟಿಷರು ಭಾರತ ತೊರೆದರು ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಸಮಯಲ್ಲಿ ಪಟೇಲ್ ಅವರು ಕೆಲವೇ ದಿನಗಳಲ್ಲಿ ರಾಜರ ಆಡಳಿತದಲ್ಲಿದ್ದ 550ಕ್ಕೂ ಹೆಚ್ಚು ರಾಜ್ಯಗಳನ್ನು ಒಗ್ಗೂಡಿಸಿ ಭಾರತದ ಭೂಪಟವನ್ನು ಸಿದ್ಧಪಡಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು.

ಭಾರತದ ಏಕತೆಗೆ ಪಟೇಲ್ ಕೊಡುಗೆ ಅವಿಸ್ಮರಣೀಯ : ಅಮಿತ್ ಶಾ

ರಾಷ್ಟ್ರೀಯ ಏಕತಾ ದಿನವನ್ನು ಪ್ರತಿವರ್ಷ ಅ.31ರಂದು ಆಚರಿಸಲಾಗುತ್ತದೆ. ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿತು. ಈ ವರ್ಷ ಅವರ 145ನೇ ಜಯಂತಿ.

ಭಾರತದ ಸ್ವಾತಂತ್ರ್ಯ ಚಳವಳಿ ಮತ್ತು ಭಾರತದ ಏಕೀಕರಣಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲರು ಸಾಕಷ್ಟು ಶ್ರಮಿಸಿದ್ದರು. ಸ್ವತಂತ್ರ ಭಾರತದಲ್ಲಿ ಪಟೇಲರು ಈ ದೇಶ ಕಂಡ ಮೊದಲ ಉಪ ಪ್ರಧಾನಿ ಮತ್ತು ಮೊದಲ ಗೃಹ ಸಚಿವ. ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಪಟೇಲರು ಕಂಡಿದ್ದ ಕನಸು ಮತ್ತು ಅದಕ್ಕಾಗಿ ಅವರು ಪಟ್ಟ ಶ್ರಮವನ್ನು ಗುರುತಿಸಿ ಕೇಂದ್ರ ಸರ್ಕಾರ ಅವರ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿವಸ ಎಂದು ಜಾರಿಗೆ ತಂದಿದೆ.

ರಾಷ್ಟ್ರೀಯ ಏಕತೆ ದಿನ ಆಚರಣೆ ಏಕೆ…?
ಭಾರತ ವೈವಿಧ್ಯತೆ ಹೊಂದಿರುವ ದೇಶ, ಇಲ್ಲಿನ ಧರ್ಮ, ಸಂಸ್ಕøತಿ, ಸಂಪ್ರದಾಯ, ಭಾಷೆಗಳು ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನವಾಗಿದೆ. ವಿವಿಧತೆಯಲ್ಲಿ ಏಕತೆ, ಒಗ್ಗಟ್ಟು ಕಾಪಾಡಿಕೊಂಡು ಹೋಗುವುದು ದೇಶದ ಅಭಿವೃದ್ಧಿಗೆ ಮುಖ್ಯವಾಗಿದೆ. ಹೀಗೆ ಸದಾರ್ರ ಪಟೇಲರು ಏಕತೆಗೆ ಯಾವ ರೀತಿ ಕೊಡುಗೆ ನೀಡಿದ್ದರು ಎಂಬ ಬಗ್ಗೆ ಇಂದಿನ ಜನಾಂಗದವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸುತ್ತಿದೆ.

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕೆವಾಡಿಯಾದಲ್ಲಿ ನರ್ಮದಾ ನದಿ ತೀರದಲ್ಲಿ ಸರ್ದಾರ ಅಣೆಕಟ್ಟಿನ ಎದುರಿಗೆ ಸರ್ದಾರ್ ವಲ್ಲಭಬಾಯಿ ಪಟೇಲರ ವಿಶ್ವದ ಅತಿ ಎತ್ತರದ ಪ್ರತಿಮೆ(597 ಅಡಿ)ಯನ್ನು ಉದ್ಘಾಟಿಸಿದ್ದರು.

ಸದೃಢ ಭಾರತ ನಿರ್ಮಾಣದಲ್ಲಿ ಇಂದಿರಾಗಾಂಧಿ ಪಾತ್ರ ಸ್ಮರಣಿಯ : ಖರ್ಗೆ

ಈ ಪ್ರತಿಮೆಯು 180 ಕಿ.ಮೀ ವೇಗದ ಗಾಳಿ ಹಾಗೂ 6.5 ತೀವ್ರತೆಯ ಭೂಕಂಪವನ್ನು ತಡೆದುಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. 2010ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಈ ಯೋಜನೆಯ ಘೋಷಣೆ ಮಾಡಿದ್ದರು.

ರಾಜಸ್ತಾನ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಎಪಿ ಅಭ್ಯರ್ಥಿ ಹೈದರಾಬಾದ್‍ನಲ್ಲಿ ಅರೆಸ್ಟ್

ಕೋಟಾ,ಅ.31- ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವ್ಯಕ್ತಿಯೊಬ್ಬರನ್ನು ವಂಚನೆ ಆರೋಪದ ಮೇಲೆ ಬಂಧಿಸಲಾಗಿದೆ. ಚಿನ್ನಾಭರಣ ವ್ಯಾಪಾರಿ ಮತ್ತು ಪನ್ವಾರ್ ನಿವಾಸಿ ದೀಪೇಶ್ ಸೋನಿ (32) ರಾಜಸ್ಥಾನದ ಜಲಾವರ್‍ನ ಖಾನ್‍ಪುರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸಲು ಎಎಪಿ ಟಿಕೆಟ್ ಪಡೆದಿದ್ದಾರೆ.

ಪನ್ವಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ದಿನೇಶ್ ಶರ್ಮಾ ಮಾತನಾಡಿ, ಸೋನಿ ಆಗಾಗ್ಗೆ ಹೈದರಾಬಾದ್‍ಗೆ ವ್ಯಾಪಾರ ಪ್ರವಾಸಗಳಿಗೆ ಭೇಟಿ ನೀಡುತ್ತಿದ್ದರು ಮತ್ತು ಅ.26 ರಂದು ಹೈದರಾಬಾದ್‍ಗೆ ತೆರಳಿದ ಅವರ ಮೊಬೈಲ್ ಸ್ತಬ್ಧಗೊಂಡಿದೆ ಎಂದು ಅವರ ತಂದೆ ದೂರು ದಾಖಲಿಸಿದ್ದರು ಎಂದು ತಿಳಿಸಿದ್ದಾರೆ.

ಸೋನಿ ಅವರ ಮೊಬೈಲ್ ಫೋನ್ ಸ್ಥಳವನ್ನು ಪತ್ತೆಹಚ್ಚುವ ಮೂಲಕ, ರಾಜಸ್ಥಾನ ಪೊಲೀಸ್ ತಂಡವು ಬಸೆರಾಬಾದ್ ತಲುಪಿದಾಗ ಅವರನ್ನು ಸ್ಥಳೀಯ ಪೊಲೀಸರು ಬಂಧಿಸಿರುವುದು ತಿಳಿದುಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸದೃಢ ಭಾರತ ನಿರ್ಮಾಣದಲ್ಲಿ ಇಂದಿರಾಗಾಂಧಿ ಪಾತ್ರ ಸ್ಮರಣಿಯ : ಖರ್ಗೆ

ಸ್ಥಳೀಯ ವ್ಯಾಪಾರಿಯೊಬ್ಬರಿಗೆ ವಂಚನೆ ಮಾಡಿದ್ದಕ್ಕಾಗಿ ಸೋನಿ ವಿರುದ್ಧ ದೂರು ದಾಖಲಾಗಿದ್ದು, ಹೈದರಾಬಾದ್‍ನ ಬಸರಾಬಾದ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420 (ವಂಚನೆ) ಮತ್ತು 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

ಆತನ ವಿರುದ್ಧ ಇನ್ನೂ ಎರಡು ವಂಚನೆ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಒಂದು ಕಳೆದ ವಾರ ಮತ್ತು ಇನ್ನೊಂದು ಸೆಪ್ಟೆಂಬರ್ 15 ರಂದು ದಾಖಲಾಗಿದೆಯಂತೆ.

ಕಳೆದ ವಾರ ಪಕ್ಷ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸೋನಿ ಅವರನ್ನು ಖಾನ್‍ಪುರದಿಂದ ಎಎಪಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ಅಂಬಾನಿಗೆ ಮತ್ತೆ ಜೀವ ಬೆದರಿಕೆ : 20 ಆಯ್ತು, 200 ಆಯ್ತು ಇದೀಗ 400 ಕೋಟಿಗೆ ಬೇಡಿಕೆ

ಮುಂಬೈ,ಅ.31- ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಪದೇ ಪದೇ ಜೀವ ಬೆದರಿಕೆ ಹಾಕಲಾಗುತ್ತಿದೆ. ಮೊದಲ ಬಾರಿ 20 ಕೋಟಿ, ಎರಡನೆ ಬಾರಿ 200 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಕಿಡಿಗೇಡಿಗಳು ಇದೀಗ 400 ಕೋಟಿ ರೂ. ನೀಡುವಂತೆ ಬೆದರಿಕೆ ಇ-ಮೇಲ್ ಮಾಡಿದ್ದಾರೆ.

ಮುಖೇಶ್ ಅಂಬಾನಿ ಅವರ ಕಂಪನಿಗೆ ನಿನ್ನೆ ಈ-ಮೇಲ್ ಸಂದೇಶ ರವಾನಿಸಿರುವ ಅಪರಿಚಿತ ವ್ಯಕ್ತಿ 400 ಕೋಟಿ ರೂ. ಹಣ ನೀಡದಿದ್ದರೆ ನಿನ್ನನ್ನು ಜೀವ ಸಹಿತ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳಲ್ಲಿ ಮುಖೇಶ್ ಅಂಬಾನಿಗೆ ಕಳುಹಿಸಲಾದ ಮೂರನೇ ಬೆದರಿಕೆ ಈ-ಮೇಲ್ ಇದಾಗಿದೆ ಎಂದು ಅಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ಕೋರಿ ಮೊದಲ ಇ-ಮೇಲ್ ಬಂದ ನಂತರ ಕೈಗಾರಿಕೋದ್ಯಮಿಯ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಮುಂಬೈನಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಅದೇ ರೀತಿ ಶನಿವಾರ ಕಂಪನಿಗೆ 200 ಕೋಟಿ ರೂ.ಗಳ ಬೇಡಿಕೆ ಇರುವ ಈ-ಮೇಲ್ ಬಂದಿತ್ತು. ಕಂಪನಿಯು ಸೋಮವಾರ ಮೂರನೇ ಈ-ಮೇಲ್ ಅನ್ನು ಸ್ವೀಕರಿಸಿದೆ, ಅದರಲ್ಲಿ ಕಳುಹಿಸುವವರು ಬೇಡಿಕೆ ಹಣವನ್ನು ದ್ವಿಗುಣಗೊಳಿಸಿದ್ದಾರೆ ಎಂದು ಅಕಾರಿ ವಿವರಣೆ ನೀಡಿದ್ದಾರೆ.

ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಕವಿತಾ

ಮುಂಬೈ ಪೊಲೀಸರು, ಅಪರಾಧ ವಿಭಾಗ ಮತ್ತು ಸೈಬರ್ ಪೊಲೀಸರ ವಿಶೇಷ ತಂಡಗಳು ಈ -ಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು. ಕಳೆದ ವರ್ಷ ಮುಂಬೈ ಪೊಲೀಸರು ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ದರ್ಭಾಂಗದ ವ್ಯಕ್ತಿಯನ್ನು ಬಂಸಿದ್ದರು. ಮಾಮ್‍ನಲ್ಲಿರುವ ಸರ್ ಎಚ್‍ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸೋಟಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.