Friday, November 7, 2025
Home Blog Page 1852

ಸಿಕ್ಕ ಅವಕಾಶ ಸದುಪಯೋಗಪಡಿಸಿಕೊಳ್ಳುವಲ್ಲಿ ಕಾಂಗ್ರೆಸ್ ವಿಫಲ: ಕವಿತಾ

ಲಂಡನ್,ಅ.31- ಜನರಿಗೆ ಸೇವೆ ಸಲ್ಲಿಸಲು ಕಾಂಗ್ರೆಸ್ ಪಕ್ಷಕ್ಕೆ ಪದೇ ಪದೇ ಅವಕಾಶ ಸಿಕ್ಕರೂ ಅದನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ಆ ಪಕ್ಷ ವಿಫಲವಾಗಿದೆ ಎಂದು ಬಿಆರ್‍ಎಸ್ ಪಕ್ಷದ ನಾಯಕಿ ಕೆ.ಕವಿತಾ ಅಭಿಪ್ರಾಯಪಟ್ಟಿದ್ದಾರೆ.

ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದ ಆಹ್ವಾನದ ಮೇರೆಗೆ ಲಂಡನ್‍ನಲ್ಲಿರುವ ಅವರು, ತೆಲಂಗಾಣ ಅಭಿವೃದ್ಧಿ ಮಾದರಿಯು ಮುಖ್ಯ ಚುನಾವಣಾ ಯೋಜನೆಯಾಗಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು ಮೂರನೇ ಅವಧಿಗೆ ಬಹುಮತದೊಂದಿಗೆ ಅಧಿಕಾರಕ್ಕೆ ಮರಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಲಂಡನ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕವಿತಾ, ಕೇಂದ್ರ ಸರ್ಕಾರದ ಸಮೀಕ್ಷೆಯಾಗಿರುವ ಸಿಎಸ್‍ಡಿಎಸ್ ಸಮೀಕ್ಷೆಯು ತೆಲಂಗಾಣವು ಜಿಡಿಪಿ ಅನುಪಾತಕ್ಕಿಂತ ಕಡಿಮೆ ಸಾಲದಲ್ಲಿರುವ ರಾಜ್ಯ ಎಂದು ಹೇಳುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ಕಾಂಗ್ರೆಸ್‍ಗೆ ಜನರಿಗೆ ಸೇವೆ ಸಲ್ಲಿಸಲು ಪದೇ ಪದೇ ಅವಕಾಶಗಳಿವೆ. ತೆಲಂಗಾಣ ಮತ್ತು ಈ ದೇಶ ಮತ್ತು ಅವರು ಅವರನ್ನು ಪದೇ ಪದೇ ವಿಫಲಗೊಳಿಸಿದ್ದಾರೆ.

ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು

ತೆಲಂಗಾಣದ ಜನರಿಗೆ ಕುಡಿಯುವ ನೀರಿನಂತಹ ಮೂಲಭೂತ ಸೌಕರ್ಯಗಳನ್ನು ಅವರು ತಲುಪಿಸಲಿಲ್ಲ. ತೆಲಂಗಾಣದ ಜನರು ಮೂರ್ಖರಲ್ಲ, ಅವರು ಅವರನ್ನು ನಂಬುವುದಿಲ್ಲ ಏಕೆಂದರೆ ನಾವು ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ್ದೇವೆ ಆದರೆ ಅವರು ವಿಫಲರಾಗಿದ್ದಾರೆ ಅವರು ನಮಗೆ ಪದೇ ಪದೇ ದ್ರೋಹ ಮಾಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ನೇತೃತ್ವದಲ್ಲಿ ತೆಲಂಗಾಣ ಸರ್ಕಾರ ಕೈಗೊಂಡಿರುವ ವಿವಿಧ ಉಪಕ್ರಮಗಳ ಕುರಿತು ಪ್ರಮುಖ ಉಪನ್ಯಾಸ ನೀಡಲು ಬಿಆರ್‍ಎಸ್ ನಾಯಕಿ ಕವಿತಾ ಲಂಡನ್‍ಗೆ ಬಂದಿದ್ದರು. 2014ರಲ್ಲಿ ರಾಜ್ಯ ರಚನೆಯಾದಾಗ ರಾಜ್ಯ ಸಂಕಷ್ಟದಲ್ಲಿತ್ತು ಆದರೆ ಇಂದು ಸಂಪೂರ್ಣ ಚೇತರಿಸಿಕೊಂಡಿದೆ ಎಂದು ಕವಿತಾ ಅವರು ತೆಲಂಗಾಣ ಮಾದರಿಯನ್ನು ಎತ್ತಿ ಹಿಡಿದರು.

ಸದೃಢ ಭಾರತ ನಿರ್ಮಾಣದಲ್ಲಿ ಇಂದಿರಾಗಾಂಧಿ ಪಾತ್ರ ಸ್ಮರಣಿಯ : ಖರ್ಗೆ

ನವದೆಹಲಿ,ಅ.31- ಸದೃಢ ಮತ್ತು ಪ್ರಗತಿಪರ ಭಾರತ ನಿರ್ಮಾಣದಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅವರು ಸದೃಢ ಮತ್ತು ಪ್ರಗತಿಪರ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.

ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾಗಾಂಧಿ ಅವರು ನಮ್ಮ ಐಕಾನ್ ಆಗಿದ್ದು, ಅವರ ದೃಢವಾದ ಇಚ್ಛಾಶಕ್ತಿ, ದಕ್ಷ ನಾಯಕತ್ವ, ವಿಶಿಷ್ಟ ಕಾರ್ಯಶೈಲಿ ಮತ್ತು ದೂರದೃಷ್ಟಿಯಿಂದ ಬಲಿಷ್ಠ ಮತ್ತು ಪ್ರಗತಿಪರ ಭಾರತವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಖರ್ಗೆ ಎಕ್ಸ್ ಮಾಡಿದ್ದಾರೆ.

ನನಗೆ ಉಸಿರು ಇರುವವರೆಗೂ ನನ್ನ ಸೇವೆ ಎಂದಿಗೂ ನಿಲ್ಲುವುದಿಲ್ಲ ಮತ್ತು ನಾನು ಸತ್ತಾಗಲೆಲ್ಲೆ ನಾನು ಹೇಳಬಲ್ಲೆ … ನನ್ನ ಪ್ರತಿ ಹನಿ ರಕ್ತವು ಭಾರತವನ್ನು ಜೀವಂತವಾಗಿಡುತ್ತದೆ ಎಂದು ಖರ್ಗೆಯವರು ಇಂದಿರಾ ಗಾಂಧಿಯವರ ಉಲ್ಲೇಖವನ್ನು ಎಕ್ಸ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಮ್ಮ ಭೋಜನ ಕೂಟದ ಬಗ್ಗೆ ನಿಮಗೇಕೆ ಚಿಂತೆ..? : ಪರಮೇಶ್ವರ್

ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ರಾಷ್ಟ್ರ ರಾಜಧಾನಿಯಲ್ಲಿನ ಶಕ್ತಿ ಸ್ಥಳದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಪುಷ್ಪ ನಮನ ಸಲ್ಲಿಸಿದರು.

ಇಂದಿರಾ ಗಾಂಧಿ ಅವರು ಜನವರಿ 1966 ರಿಂದ ಮಾರ್ಚ್ 1977 ರವರೆಗೆ ಮತ್ತು ಮತ್ತೆ ಜನವರಿ 1980 ರಿಂದ 1984 ರಲ್ಲಿ ಹತ್ಯೆಯಾಗುವವರೆಗೆ ಭಾರತದ ಮೊದಲ ಮತ್ತು ಏಕೈಕ ಮಹಿಳಾ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-10-2023)

ನಿತ್ಯ ನೀತಿ : ಯಾವಾಗಲೂ ಸಂತೋಷವಾಗಿರಿ. ಏಕೆಂದರೆ ಸಂಜೆಗೆ ಬರಿ ಸೂರ್ಯ ಮಾತ್ರ ಮುಳುಗುವುದಿಲ್ಲ, ಅದರ ಜತೆಗೆ ನಮ್ಮ ಆಯಸ್ಸಿನ ಒಂದು ದಿನವೂ ಮುಗಿದಿರುತ್ತದೆ.

ಪಂಚಾಂಗ ಮಂಗಳವಾರ 31-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ರೋಹಿಣಿ / ಯೋಗ: ವರೀಯಾನ್ / ಕರಣ: ವಣಿಜ್
ಸೂರ್ಯೋದಯ :ಬೆ.06.13
ಸೂರ್ಯಾಸ್ತ : 05.54
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಉನ್ನತ ಅಧಿಕಾರಿಗಳಿಗೆ ವಿಧೇಯತೆ ಯಿಂದ ಇರುವ ನಿಮ್ಮ ಗುಣ ಇಷ್ಟವಾಗಲಿದೆ.
ವೃಷಭ: ಧೈರ್ಯ ಹೆಚ್ಚಾಗಿರುತ್ತದೆ. ಕಡಿಮೆ ಶ್ರಮದಲ್ಲಿ ಉತ್ತಮ ಲಾಭ ಪಡೆಯಬಹುದು.
ಮಿಥುನ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಇರುವುದು.

ಕಟಕ: ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳುವುದು ಒಳ್ಳೆಯದು.
ಸಿಂಹ: ವಿದೇಶ ವ್ಯವಹಾರಗಳಿಂದ ಹೆಚ್ಚಿನ ಲಾಭ ಗಳಿಸುವಿರಿ.
ಕನ್ಯಾ: ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರದಲ್ಲಿರುವವರು ಸೋಲು ಒಪ್ಪಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಿ.

ತುಲಾ: ಸಂದಿಗ್ಧ ಪರಿಸ್ಥಿತಿ ಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿ.
ವೃಶ್ಚಿಕ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಧನುಸ್ಸು: ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರ ಸಿಗಲಿದೆ. ಹಿರಿಯರೊಂದಿಗೆ ಚರ್ಚೆ ನಡೆಸುವಿರಿ.

ಮಕರ: ವೃತ್ತಿಯಲ್ಲಿ ನಿಮ್ಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.
ಕುಂಭ: ಸಂಗಾತಿಯ ಅನಾರೋಗ್ಯದ ಸಮಸ್ಯೆ ಕಾಡಲಿದೆ. ಶತ್ರುಗಳ ಕಾಟ.
ಮೀನ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.

ನಮ್ಮ ಭೋಜನ ಕೂಟದ ಬಗ್ಗೆ ನಿಮಗೇಕೆ ಚಿಂತೆ..? : ಪರಮೇಶ್ವರ್

ಬೆಂಗಳೂರು,ಅ.30- ನಮ್ಮ ಮನೆಯ ಬೋಜನಕೂಟದಲ್ಲಿ ನಡೆದ ಚರ್ಚೆಗಳ ಬಗ್ಗೆ ಬಿಜೆಪಿಯವರಿಗೇಕೆ ಚಿಂತೆ ಎಂದು ಗೃಹ ಸಚಿವ ಪರಮೇಶ್ವರ್ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೋಜನಕೂಟ ಕುರಿತು ಬಿಜೆಪಿಯವರು ಅನೇಕ ವ್ಯಾಖ್ಯಾನಗಳ ಮೂಲಕ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‍ನಲ್ಲಿ ಒಡೆದ ಬಾಗಿಲು, ಮೂರು, ನಾಲ್ಕು ಬಾಗಿಲು ಎಂದು ಹೇಳುತ್ತಾರೆ.

ನಮ್ಮ ಪಕ್ಷದ ಬಗ್ಗೆ ಬಿಜೆಪಿಯವರು ಮಾತನಾಡುತ್ತಾರೆ. ಬಣಗಳನ್ನು ಸೃಷ್ಟಿ ಮಾಡುತ್ತಿದ್ದಾರೆ. ಆದರೆ ನಾವು ಬಿಜೆಪಿಯವರು ಮಾತುಗಳಿಗೆ ಪ್ರಾಮುಖ್ಯತೆ ಕೊಡುವುದಿಲ್ಲ. ನಮ್ಮ ಮನೆಯ ಬೋಜನಕೂಟದಲ್ಲಿ ಏನಾದರೂ ಚರ್ಚೆಯಾಗಲಿ, ಅದು ಬಿಜೆಪಿಯವರಿಗೆ ಏಕೆ ಬೇಕು. ಯಡಿಯೂರಪ್ಪ ಮನೆಯಲ್ಲಿ ಏನಾಗುತ್ತೆ, ಬೊಮ್ಮಾಯಿ ಮನೆಯಲ್ಲಿ ಏನಾಗುತ್ತದೆ ಎಂದು ನಾವು ಕೇಳ್ಳುತ್ತೇವೆಯೇ. ನಾವು ಸುಮ್ಮನಿದ್ದೇವೆ ಎಂದು ಏನು ಬೇಕಾದರೂ ತಿರುಗಳಿಲ್ಲದಂತೆ ಮಾತನಾಡಿದರೆ ಜನ ಸಹಿಸುವುದಿಲ್ಲ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರು ಬೇಸರವಾಗಿದ್ದಾರೆ ಎಂಬುದು ಆಧಾರ ರಹಿತ, ಯಾವ ರೀತಿಯ ಅಸಮಾಧಾನಗಳು ಇಲ್ಲ. ಒಂದಿಬ್ಬರೆ ಸಚಿವರಿಗೆ ಆದ್ಯತೆ ಇದೆ ಎಂಬುದು ಸರಿಯಲ್ಲ, ಸಂಪುಟದಲ್ಲಿ 33 ಮಂದಿ ಸಚಿವರಿದ್ದಾರೆ, ಎಲ್ಲರು ಜಿಲ್ಲೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಅಧಿಕಾರ ಹಂಚಿಕೆಯಲ್ಲಿ ಸಮಾನತೆ ಇದೆ ಎಂದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವ್ಯವಸ್ಥೆಯಲ್ಲಿ ಬದಲಾವಣೆ ತರುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಗಮ-ಮಂಡಳಿಗಳ ನೇಮಕಾತಿ ಬಗ್ಗೆ ಮುಖ್ಯಮಂತ್ರಿಯವರು ಹೇಳಿದ್ದಾರೆ. ಇಲ್ಲಿ ಯಾರನ್ನೂ ನಿರ್ಲಕ್ಷ್ಯಿಸುವ ಪ್ರಶ್ನೆ ಉದ್ಭವಿಸುವುದಿಲ್ಲ. ಮುಂದಿನ ದಿನಗಳಲ್ಲಿ ನಿಗಮ ಮಂಡಳಿಗಳ ಮೂಲಕ ಅವರನ್ನು ಸರ್ಕಾರದ ಭಾಗವಾಗಿ ಮಾಡಿಕೊಳ್ಳುತ್ತೇವೆ. ಪಕ್ಷಕ್ಕಾಗಿ ದುಡಿದವರು, ಹತ್ತಾರು ವರ್ಷ ಕೆಲಸ ಮಾಡಿದವರನ್ನು ಪರಿಗಣಿಸಲಾಗುವುದು. ಈ ಕುರಿತು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ನೇಮಕಗಳ್ಳುವವರ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಸಚಿವರ ಮಕ್ಕಳೇ ಸಚಿವರಾಗ್ತಾರೆಂದು ಶಾಸಕ ಬೇಳೂರು ಗೋಪಾಲಕೃಷ್ಣ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಲು ಗೃಹ ಸಚಿವರು ನಿರಾಕರಿಸಿದರು.ಗಂ ಭೀರ ಸಮಸ್ಯೆಗಳ ಗಮನವನ್ನು ಬೇರೆಡೆಗೆ ತಿರುಗಿಸಲು ಹುಲಿ ಉಗುರು ವಿಚಾರ ಮುನ್ನೆಲೆಗೆ ತರಲಾಗಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆಡಳಿತ ವ್ಯವಸ್ಥೆಯಲ್ಲಿ ಪ್ರತಿದಿನ ಒಂದೊಂದು ಸಮಸ್ಯೆಗಳು ಕಂಡು ಬರುತ್ತವೆ. ಅರಣ್ಯ ಅಥವಾ ಪೊಲೀಸ್ ಅಧಿಕಾರಿಗಳು ಅವನ್ನು ಸರಿ ಪಡಿಸುತ್ತಾರೆ ಎಂದರು.

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡ್ತೇವೆ, ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ದೂರು ನಿರ್ದಿಷ್ಟವಾಗಿರಬೇಕು. ಅಜೆಂಡ ಇಟ್ಕೊಂಡು ಯಾರು ಮಾಡೋದಿಲ್ಲ, ಇಲಾಖೆಯ ತಪ್ಪು ಕಂಡಾಗ ಸರಿಪಡಿಸಲಾಗುತ್ತೆ .ಅದಕ್ಕೆ ಬೇರೆ ರೀತಿಯಲ್ಲಿ ವ್ಯಾಖ್ಯಾನ ಮಾಡುತ್ತಾರೆ. ಕೆಲಸ ಇಲ್ಲದ ಬಿಜೆಪಿಯವರು ಅನಗತ್ಯವಾಗಿ ವ್ಯಾಖ್ಯಾನ ಮಾಡುತ್ತಾರೆ ಎಂದರು.

ಬಿಜೆಪಿಯವರು ಟೀಕೆ ಮಾಡಿಕೊಂಡು ಇರಲಿ, ನಾವು ನಮ್ಮ ಆಡಳಿತ ನಾವು ಮಾಡುತ್ತೇವೆ, ಜನ ಸಂತೋಷವಾಗಿದ್ದಾರೆ. ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಜನ ಎಲ್ಲಾದರೂ ಪ್ರತಿಭಟನೆ ಮಾಡ್ತಿದ್ದಾರಾ? ಬಿಜೆಪಿಯವರೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮೊದಲು ಅವರಲ್ಲಿ ಇರುವ ಒಳ ಜಗಳವನ್ನು ಸರಿ ಮಾಡಿಕೊಳ್ಳಲಿ. ರಾಜ್ಯಧ್ಯಕ್ಷರನ್ನ ಮೊದಲು ಆಯ್ಕೆ ಮಾಡಲಿ. ವಿರೋಧ ಪಕ್ಷ ನಾಯಕನನ್ನ ಆಯ್ಕೆ ಮಾಡಲಿ ಎಂದು ಲೇವಡಿ ಮಾಡಿದರು.

ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಬೆಂಗಳೂರು, ಅ.30- ಉದ್ಯಮಿ ಕುಟುಂಬವೊಂದು ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಾಲಾಕಿ ಕಳ್ಳರು ಅವರ ಮನೆಗೆ ನುಗ್ಗಿ ಸುಮಾರು 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಖ್ಯಾತ ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಅವರ ಸಹೋದರ ಬ್ರಹ್ಮಿ ಅವರ ನಿವಾಸದಲ್ಲಿ ಈ ಕಳ್ಳತನ ನಡೆದಿದ್ದು, ಮನೆಗೆ ಕಾವಲಿದ್ದ ಸೆಕ್ಯೂರಿಟಿ ಗಾರ್ಡ್ ನಾಪತ್ತೆಯಾಗಿದ್ದು, ಆತನ ತಂಡವೇ ಈ ಕೃತ್ಯ ನಡೆಸಿರಬಹುದೆಂದು ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಮನೆಯ ಮೇಲ್ಚಾವಣಿಯ ಕೋಣೆಯಿಂದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಸೇಫ್ ಲಾಕರ್ ಒಡೆದು ಸುಮಾರು 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು, ಬೆಲೆಬಾಳುವ ವಸ್ತುಗಳನ್ನೆಲ್ಲ ದೋಚಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಡಿಸಿಪಿ ಸೈದುಲ್, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಮಂಜು ಸೇರಿದಂತೆ ಇತರ ಅಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ತಂಡ ರಚನೆ: ಕೆಲ ಮಾಹಿತಿ ಆಧರಿಸಿ ವಿವಿಧ ರಾಜ್ಯಗಳಿಗೆ ನಾಲ್ಕು ವಿಶೇಷ ತಂಡಗಳು ತೆರಳಿವೆ. ಮನೆ ಕಾವಲಿಗಿದ್ದ ನೇಪಾಳಿ ಮೂಲದ ಸೆಕ್ಯೂರಿಟಿ ಗಾರ್ಡ್ ನಾಪತ್ತೆಯಾಗಿದ್ದು, ಆತನ ಮೇಲೆ ಅನುಮಾನ ಮೂಡಿದೆ.

ಆಪರೇಷನ್ ಕಮಲಕ್ಕೆ ಒಂದು ಸಾವಿರ ಕೋಟಿ ಬಳಕೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.30- ಹೈಕಮಾಂಡ್‍ನಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವವರು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈಕಾಲು ಹಿಡಿದು ಒಂದು ಸಾವಿರ ಕೋಟಿ ರೂಪಾಯಿ ತಂದು ಅದನ್ನು ಇಲ್ಲಿ ಆಪರೇಷನ್ ಕಮಲ ನಡೆಸಲು ಬಳಕೆ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನ ಕೂಟದಲ್ಲಿ ಮುದ್ದೆ ಬಗ್ಗೆ ಚರ್ಚೆಯಾಗಿದೆ, ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಭೆಯಲ್ಲೇ ಇದ್ದವರು ಹೇಳುತ್ತಿದ್ದಾರೆ. ರಾಜಕೀಯ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಯಾಗಲಿ, ಉಪಮುಖ್ಯಮಂತ್ರಿಯಾಗಲಿ ಅಥವಾ ಸಭೆಯಲ್ಲಿ ಸಚಿವರಾಗಲಿ ಹೇಳುತ್ತಿಲ್ಲ.

ಬೇರೆ ಯಾರು ಮಾತನಾಡುತ್ತಿಲ್ಲ. ಬಿಜೆಪಿಯವರು ಕಲ್ಪನೆ ಮಾಡಿಕೊಂಡು ಮಾತನಾಡುತ್ತಿದ್ದಾರೆ. ಡೈನಿಂಗ್ ಟೆಬಲ್‍ನಲ್ಲಿ ನಡೆದಿದ್ದು ಬಿಜೆಪಿಯವರಿಗೆ ಹೇಗೆ ಗೋತ್ತು. ಪಾಪ ಬಿಜೆಪಿಯವರಿಗೆ ಅವರ ಪಕ್ಷದಲ್ಲೇ ಏನು ನಡೆಯುತ್ತಿದೆ ಎಂದು ಗೋತ್ತಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗ ರಾಜ್ಯದ ಒಬ್ಬ ಬಿಜೆಪಿ ನಾಯಕರು ಇರಲಿಲ್ಲ. ಕದ್ದು ಮುಚ್ಚಿ ಮೈತ್ರಿ ಮಾಡಿಕೊಳ್ಳುತ್ತಾರೆ. ಬಿಜೆಪಿಯವರು ಅವರದೇ ಪಕ್ಷದ ನಾಯಕ ಎಂ.ಪಿ.ರೇಣುಕಾಚಾರ್ಯ ಹೇಳುತ್ತಿರುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಯಾರು ಊಟಕ್ಕೆ ಸೇರಿಕೊಳ್ಳಬಾರದು. ಊಟ ಮಾಡುವಾಗ ಊರಿಗೆ ಡಂಗೂರ ಸಾರಿ ಜಾತ್ರೆ ಮಾಡಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಬಿಜೆಪಿಯವರಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅಸ್ತಿತ್ವದಲ್ಲಿ ಇರಬೇಕು ಎಂದು ತಲೆ ಬುಡ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ.
ಆಪರೇಷನ್ ಕಮಲ ನಡೆಸಿ ರಾಜ್ಯ ಸರ್ಕಾರವನ್ನು ಪತನ ಗೊಳಿಸಲು ಬಿಜೆಪಿ ಸಂಚು ನಡೆಸು ತ್ತಿರುವುದು ಗುಟ್ಟೇನು ಅಲ್ಲ. ಎಲ್ಲಿ ಸ್ಪಷ್ಟ ಬಹುಮತ ಬರುವುದಿಲ್ಲವೋ ಅಲ್ಲೆಲ್ಲಾ ಆಪರೇಷನ್ ಕಮಲ ಮಾಡುತ್ತಾರೆ. ಅದೇನು ಗಾಂ ತತ್ವದ ಮೇಲೆ ನಡೆಯುತ್ತದೆಯೇ ? ಹಣ ಕೊಟ್ಟು ಶಾಸಕರನ್ನು ಸೆಳೆಯುತ್ತಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಪಕ್ಷಾಂತರ ಮಾಡಿದವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ಉಳಿದುಕೊಂಡಿದ್ದರೆ. ಸಚಿವರಾಗಿರಲಿಲ್ಲ, ಆಪರೇಷನ್ ಕಮಲದಿಂದ ಪಡೆದ ಹಣದಿಂದ ಚುನಾವಣೆ ನಡೆಸಿ ಗೆದ್ದು ಬರಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಬಹುಮತ ಬರದೇ ಇರುವ ಮಹಾರಾಷ್ಟ್ರ, ಬಿಹಾರ, ಅಸ್ಸಾಂ, ಮಧ್ಯ ಪ್ರದೇಶದಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದ್ದರು. ರಾಜಸ್ಥಾನದಲ್ಲೂ ಪ್ರಯತ್ನ ಮಾಡಿದರು. ಕರ್ನಾಟಕದಲ್ಲೂ ಪ್ರಯತ್ನ ಮಾಡುತ್ತಿದ್ದಾರೆ. ಇದು ಬಿಜೆಪಿಯ ಸ್ಟಾಂಟರ್ಡ್ ಆಪರೇಷನ್ ಆಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ನಾಯಕರಿಗೆ ಅವರ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಒಳ್ಳೆಯ ರಾಜ್ಯಾಧ್ಯಕ್ಷನನ್ನು ಮಾಡಿಲ್ಲ. ಮೇಲ್ಮನೆ, ಕೆಳಮನೆಗಳ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಜೀವಂತ ಇದ್ದೇವೆ ಎಂದು ತೋರಿಸಿಕೊಳ್ಳಲು ಪೈಪೋಟಿ ನಡೆಸುತ್ತಿರುವರು ನಾ ಮುಂದು ತಾ ಮುಂದು ಎಂದು ಜಿದ್ದಿಗೆ ಬಿದ್ದಿದ್ದಾರೆ. ಒಂದು ಸಾವಿರ ಕೋಟಿ ರೂಪಾಯಿ ಕೋಡಿ, ಸರ್ಕಾರ ರಚನೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಕಾಲು ಬಿದ್ದಿದ್ದಾರೆ. ಅದೇ ದುಡ್ಡು ತಂದು ಇಲ್ಲಿ ಆಪರೇಷನ್ ಕಮಲ ಆಮಿಶಕ್ಕೆ ಬಳಕೆ ಮಾಡುತ್ತಿರಬಹುದು. ಬಿಜೆಪಿಯವರು ಮೊದಲಿನಿಂದಲೂ ಇದನ್ನೇ ಅಲ್ಲವೇ ಮಾಡುತ್ತಿರುವುದು, ಅದನ್ನು ಬಿಟ್ಟು ಅವರು ಬೇರೆನ್ನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಆಪರೇಷನ್ ಕಮಲ ಮಾಡುವವರು ನನ್ನನ್ನಂತೂ ಅಪ್ರೋಚ್ ಮಾಡಲ್ಲ. ನಾವೆಲ್ಲಾ ಹುಟ್ಟ ಕಾಂಗ್ರೆಸಿಗರು. ನಮ್ಮ ಹತ್ತಿರ ಬರಲ್ಲ. ಆದರೆ ನ್ಮಮ ಪಕ್ಷದ ಒಬ್ಬ ಶಾಸಕರು ಹೇಳುತ್ತಾರೆ ಎಂದರೆ ನಂಬಬೇಕಲ್ಲ. ಹಿಂದೆ ಆಪರೇಷನ್ ಕಮಲ ನಡೆದಿದೆಯಲ್ಲಾ, ದೇಶದಲ್ಲೂ ಇದು ನಡೆದಿರುವ ಇತಿಹಾಸವೇ ಇದೆ. ಕರ್ನಾಟಕದಲ್ಲೂ ಆಗಿದೆ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಾರೆ ಎಂಬುದು ನಂಬಲರ್ಹವಾಗಿದೆ ಎಂದರು.

ಅಧಿಕಾರ ಹಂಚಿಕೆ ಕಾಲ್ಪನಿಕ: ಎರಡೂವರೆ ವರ್ಷದ ಅಕಾರ ಹಂಚಿಕೆಯ ಬಗ್ಗೆ ಕೇಂದ್ರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೋತ್ತು. ಎರಡುವರೆ ವರ್ಷಕ್ಕೆ ಹಂಚಿಕೆಯಾಗಿದೆಯೇ, ಪೂರ್ಣಾವಧಿಗೆ ಆಗಿದೆಯೇ ಆ ಐದು ಮಂದಿಗೆ ಮಾತ್ರಗೋತ್ತು. ಉಳಿದ ಯಾರಿಗೂ ಮಾಹಿತಿ ಇಲ್ಲ ಎಂದರು.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ

ನಮ್ಮಲ್ಲಿ ಹೈಕಮಾಂಡ್ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಎಲ್ಲರ ಜವಾಬ್ದಾರಿಗಳು ಪೂರ್ವ ನಿರ್ಧರಿತವಾಗಿರು ತ್ತವೆ. ಅದರಂತೆ ನಡೆದುಕೊಳ್ಳುತ್ತೇವೆ. ಮುಂದೆಯೂ ನೀವೇ ಗ್ರಾಮೀಣಾಭಿವೃದ್ಧಿ ಸಚಿವರಾಗಿರಬೇಕು ಎಂದರೆ ಒಪ್ಪಿಕೊಳ್ಳಬೇಕಾಗು ತ್ತದೆ. ಮುಖ್ಯಮಂತ್ರಿ ಹುದ್ದೆ ಕುರಿತು ಅದೇ ಮಾನದಂಡ ಅನ್ವಯವಾಗುತ್ತದೆ. ಊಟಕ್ಕೆ ಸೇರಿದರು ಎಂದರೆ ಅದರಲ್ಲಿ ಹುಳುಕು ಹುಡುಕುವುದು ಎಷ್ಟು ಸರಿ ಎಂದರು.

ಹಿಂದಿನ ಸರ್ಕಾರ ಶೇ.40ರಷ್ಟು ಕಮಿಷನ್ ಪಡೆದು ಮಾಡಿದ ಲೂಟಿಯಿಂದಾಗಿರುವ ನಷ್ಟವನ್ನು ಸರಿದೂಗಿಸಲು, ಆಡಳಿತ ಸುಧಾರಣೆಗೆ, ಉದ್ಯೋಗ ಸೃಷ್ಟಿಗಾಗಿ ರಾಜ್ಯದ ಜನ ನಮಗೆ ಅಕಾರ ನೀಡಿದ್ದಾರೆ. ನಾವು ಅದಕ್ಕೆ ಆದ್ಯತೆ ನೀಡುತ್ತೇವೆ. ಅಧಿಕಾರ ಹಂಚಿಕೆ ಹಾಗೂ ಇತರ ಕಾಲ್ಪನಿಕ ವಿಚಾರಗಳಿಗೆ ಆದ್ಯತೆ ನೀಡುವುದಿಲ್ಲ ಎಂದರು.

ಕಲಬುರಗಿ ಗ್ರಾಮೀಣದಲ್ಲಿ ಪರೀಕ್ಷಾ ಅಕ್ರಮ ನಡೆದಿಲ್ಲ:ಸರ್ಕಾರಿ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಒಂದು ದಿನ ಮೊದಲೇ ಪರೀಕ್ಷಾ ಕೇಂದ್ರದ ಸುತ್ತಾ ಝೆರಾಕ್ಸ್ ಯಂತ್ರಗಳಿರುವ ಅಂಗಡಿಗಳನ್ನು ಮುಚ್ಚಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಮತ್ತು ಹ್ಯಾಂಡೆಟ್ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿತ್ತು, ಲಾಡ್ಜ್‍ಗಳನ್ನು ಹಾಗೂ ಸಂಶಯ ಬಂದ ವಾಹನಗಳನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು.

ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದರಿಂದ ಕಲಬುರಗಿ ಗ್ರಾಮೀಣ ಭಾಗದಲ್ಲಿ ಪರೀಕ್ಷೆಗೂ ಮೊದಲು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಲಬುರಗಿ ನಗರದಲ್ಲಿ ಒಬ್ಬ ಹೇಗೋ ಜಾರಿಕೊಂಡಿದ್ದ, ಆತನನ್ನು ಪರೀಕ್ಷೆ ಬರೆಯುತ್ತಿದ್ದ ಅರ್ಧ, ಮುಕ್ಕಾಲು ಗಂಟೆಯಲ್ಲೇ ಸಿಕ್ಕಿಕೊಂಡಿದ್ದಾನೆ. ಮತ್ತೊಬ್ಬ ಇರಬಹುದು ಎಂಬ ಶಂಕೆ ಇದೆ. ಹಿಂದೆ ಆದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನ್ಯಾಯವಾಗ ಬಾರದು ಎಂದು ನಾವು ಸಾಕಷ್ಟು ಎಚ್ಚರಿಕೆ ವಹಿಸಿದ್ದೇವು ಎಂದರು.

ಪ್ರಕರಣದ ಪ್ರಾಥಮಿಕ ವರದಿ ಬಂದಿದೆ, ಅದರ ಪ್ರಕಾರ ಕಲಬುರಗಿ ಗ್ರಾಮೀಣ ಪರೀಕ್ಷಾ ಕೇಂದ್ರದ ಒಳಗೆ ಅಕ್ರಮ ನಡೆದಿಲ್ಲ. ಆದರೂ ನಾವು ನಿಷ್ಪಕ್ಷಪಾತ, ಕಠಿಣ ತನಿಖೆಗೆ ಕ್ರಮ ಕೈಗೊಂಡಿದ್ದೇವೆ.

ಪರೀಕ್ಷಾ ಅಭ್ಯರ್ಥಿಗಳು ನೀಡಿದ್ದ ಪತ್ರವನ್ನು ಒಂದು ತಿಂಗಳಿನಿಂದ ಸರ್ಕಾರದ ಗಮನಕ್ಕೆ ತರದೆ ಮೂಲೆ ಗುಂಪು ಮಾಡಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿಗೆ ಕೆಲಸ ಇಲ್ಲ. ಕಳೆದ ಬಾರಿ ಅವರ ಮೂಗಿನ ಕೆಳಗೆ ಎಲ್ಲಾ ನಡೆದಿತ್ತು, ಬಿಜೆಪಿ ಕಾರ್ಯಕರ್ತರೆ ಅಕ್ರಮ ನಡೆಸಿದರೂ ಏನು ನಡೆದಿಲ್ಲ ಎಂದು ಹೇಳುತ್ತಿದ್ದರು.

ಆಗ ನಡೆದ ನೇಮಕಾತಿಗಳಲ್ಲಿನ ಅಕ್ರಮದ ಬಲಿಪಶುಗಳಾದ ಕೆಪಿಟಿಸಿಎಲ್, ಶಿಕ್ಷಕರು, ಪಿಎಸ್‍ಐ. ಎಫ್‍ಡಿಎ ಅಭ್ಯರ್ಥಿಗಳು ಪ್ರತಿ ದಿನಾ ನಮ್ಮನ್ನು ಭೇಟಿ ಮಾಡಿ ಪತ್ರ ನೀಡುತ್ತಿದ್ದಾರೆ. ಅದರ ಆಧಾರದ ಮೇಲೆ ನಾವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಹಿಂದೆ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್‍ಡಿಟೆಕ್ಟರ್ ಇರಲಿಲ್ಲ. ಝರಾಕ್ಸ್ ಅಂಗಡಿಗಳನ್ನು ಮುಚ್ಚಿರಲಿಲ್ಲ. ತಪಾಸಣೆ ನಡೆಸುತ್ತಿರಲಿಲ್ಲ. ನಾವು ಕೆಲಸ ಮಾಡಿದ್ದಕ್ಕೆ 24 ಗಂಟೆಯಲ್ಲಿ ಶಂಕಿತರು ಬಂಧನಕ್ಕೆ ಒಳಗಾಗಿದ್ದಾರೆ. ಕಲಬುರಗಿ ಗ್ರಾಮೀಣ ಭಾಗದಲ್ಲಿ ಅಕ್ರಮಗಳು ನಡೆಯಲಿಲ್ಲ. ಕಲಬುರಗಿಯಲ್ಲಿ ಒಂದು ಗಂಟೆಯಲ್ಲೇ ಆರೋಪಿಗಳನ್ನು ಬಂಸಿದ್ದೇವೆ. ಪರೀಕ್ಷಾಭ್ಯರ್ಥಿಗಳು ನೀಡಿದ್ದ ಪತ್ರದ ಮೇಲೆ ಕ್ರಮ ಕೈಗೊಂಡಿದ್ದಕ್ಕೆ ತಪ್ಪಿತಸ್ಥರು ಸಿಕ್ಕಿ ಬಿದ್ದಿದ್ದಾರೆ ಎಂದರು.

ಬಿಜೆಪಿಯವರು ಉಪದೇಶ ಮಾಡುವುದನ್ನು ನಿಲ್ಲಿಸಬೇಕು. ಈ ಹಿಂದೆ ಸದನದಲ್ಲಿ ಹೇಳಿಕೆ ನೀಡಿದ್ದ ಆಗಿನ ಸಚಿವರು, ಪಿಎಸ್‍ಐ ಹಗರಣ ಅಗೆದರೆ ಪ್ರಿಯಾಂಕ್ ಖರ್ಗೆ ಹೆಸರು ಬರುತ್ತದೆ ಎಂದು ವಿಧಾನಸಭೆಯಲ್ಲಿ ಹೇಳಿದರು. ಅವರ ಕೈನಲ್ಲೇ ಅಕಾರ ಇತ್ತಲ್ಲ. ಸಿಐಡಿ, ಸಿಬಿಐ ಎಲ್ಲವೂ ಇತ್ತು. ಏಕೆ ತನಿಖೆ ಮಾಡಲಿಲ್ಲ, ನನ್ನ ಪಾತ್ರವನ್ನು ಏಕೆ ಬಹಿರಂಗ ಪಡಿಸಲಿಲ್ಲ ಎಂದು ಪ್ರಶ್ನಿಸಿದರು.

ಪಿಎಸ್‍ಐ ಹಗರಣ ನಡೆದಾಗ ಒಂದು ವರ್ಷ ಏನು ನಡೆದೇ ಇಲ್ಲ ಎಂದು ಕಣ್ಣುಮುಚ್ಚಿಕೊಂಡು ಕುಳಿತಿದ್ದರು. ಬಿಜೆಪಿಯವರ ಬಲಗೈ ಬಂಟರೇ ಜೈಲು ಅನುಭವಿಸುತ್ತಿದ್ದಾರೆ. ಮೊದಲು ಅದರ ಬಗ್ಗೆ ಮಾತನಾಡಲಿ. ಪಿಎಸ್‍ಐ ಹಗರಣದಲ್ಲಿ ಶಾಸಕರ ಭವನದಲ್ಲೇ ಡಿಲ್‍ಗಳಾಗಿದ್ದವು ಎಂದು ಬಿಜೆಪಿಯ ಮಾಜಿ ಶಾಸಕರೇ ಹೇಳಿಕೆ ನೀಡಿದ್ದರು. ಪ್ರತಿಹುದ್ದೆಯನ್ನು 30 ಲಕ್ಷ ರೂಪಾಯಿಗೆ ಮಾರಾಟ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು. ಈಗ ನಮ್ಮ ಸರ್ಕಾರ ಪರೀಕ್ಷಾ ಕೇಂದ್ರದಲ್ಲಿ ಸಿಲುಕಿ ಬಿದ್ದ ಆರೋಪಿಗಳ ಪ್ರಕರಣವನ್ನು ಎರಡು ಮೂರು ವಾರದಲ್ಲೇ ತನಿಖೆ ಮುಗಿಸುತ್ತೇವೆ ಎಂದು ಹೇಳಿದರು.

ಲಿಖಿತ ಪರೀಕ್ಷೆಯ ಹಗರಣದಲ್ಲಿ ಸಚಿವರ ಪಾತ್ರ ಇದೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪಕ್ಕೆ ಆಧಾರಗಳೇನು ಎಂದು ಪ್ರಶ್ನಿಸಿದರು.

ಸಂತೋಷ್ ಹೆಗಡೆ, ಸಂದೇಶ್ ನಾಗರಾಜ್ ಸೇರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ..?

ಬೆಂಗಳೂರು, ಅ.30- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ನಿರ್ಮಾಪಕ ಸಂದೇಶ್ ನಾಗರಾಜ್ ಸೇರಿದಂತೆ ಹಲವು ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುವ ಸಾಧ್ಯತೆ ಇದೆ.

ಕಳೆದ 15 ದಿನಗಳಿಂದಲೂ ನಿರಂತರವಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಅಥವಾ ನಾಳೆ ಪ್ರಶಸ್ತಿ ಪ್ರಕಟಗೊಳ್ಳಲಿದೆ. 68ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 68 ಮಂದಿ ಸಾಧಕರು ಹಾಗೂ 10 ಮಂದಿ ಪ್ರಮುಖ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡುವ ಸಾಧ್ಯತೆಗಳಿವೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲಿಸಬೇಕಾದ ಮಾನದಂಡಗಳ ಕುರಿತು ಸಮಾಲೋಚನೆ ನಡೆದಿತ್ತು. ಅದರಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು. ಅನಂತರ ಆಯ್ಕೆ ಸಮಿತಿ ಸರಣಿ ಸಭೆಗಳನ್ನು ನಡೆಸಿದ್ದು, ಸಾಧಕರ ಆಯ್ಕೆಯನ್ನು ತುಲನಾತ್ಮಕವಾಗಿ ಪರಿಶೀಲಿಸಿದೆ.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳೂ ಆಗಿರುವ ಸಂತೋಷ್ ಹೆಗಡೆ ಅವರು ಲೋಕಾಯುಕ್ತರಾಗಿದ್ದಾಗ ಉತ್ತಮ ಕೆಲಸಗಳ ಮೂಲಕ ಜನಮನ್ನಣೆ ಪಡೆದಿದ್ದರು. ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ

ಮೂಲಗಳ ಪ್ರಕಾರ, ಸಾಹಿತ್ಯದಲ್ಲಿ ಕರಿಗೌಡ ಬೀಚನಹಳ್ಳಿ , ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‍ಮಟ್ಟು, ಮಾಯಾಶರ್ಮ, ರಂಗಭೂಮಿಯಲ್ಲಿ ಕೆ.ವಿ.ನಾಗರಾಜ್‍ಮೂರ್ತಿ, ಗಂಗಾಧರಸ್ವಾಮಿ, ಚಿದಂಬರ ಜಂಬೆ, ಶೇಕ್ ಮಾಸ್ಟರ್, ಸುಜಾತಮ್ಮ, ಜಾನಪದದಲ್ಲಿ ಚಂದ್ರು ಕಾಳೇನಹಳ್ಳಿ, ಚಲನಚಿತ್ರ ಕ್ಷೇತ್ರದಿಂದ ನಿರ್ಮಾಪಕ ಸಂದೇಶ್ ನಾಗರಾಜ್, ಜಾನಪದದಲ್ಲಿ ಸೋಬಾನೆ ರಾಮಣ್ಣ, ಹುಸೇನಾಬಿ ಬುಡನ್‍ಸಾಬ್, ತಿಮ್ಮಣ್ಣ ರಾಮವಾಡಗಿ,

ಸಿರಿಗಂಧ ಶ್ರೀನಿವಾಸಮೂರ್ತಿ, ಕಿರುತೆರೆಯಲ್ಲಿ ಹುಲಿ ಚಂದ್ರಶೇಖರ್, ಬಯಲಾಟದ ನಾರಾಯಣಪ್ಪ, ಕಲಾ ವಿಮರ್ಶೆಯಲ್ಲಿ ಜಿ.ಎಂ.ಹೆಗಡೆ, ಚಿತ್ರಕಲೆಯಲ್ಲಿ ಮಾರ್ಥಾ ಜಾಕಿ ಮಾರ್ವಿಚ್, ಚಿತ್ರಕಲೆಯಲ್ಲಿ ಎಚ್.ಸಿ.ಪಾಟೀಲ್, ಕಾಳಪ್ಪ ವಿಶ್ವಕರ್ಮ, ಜನಪದದಲ್ಲಿ ಸಿದ್ಧರಾಮಪ್ಪ ವಾಲಿ, ವಿಭೂತಿ ಗುಂಡಪ್ಪ ಸೇರಿದಂತೆ ಹಲವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಬಸ್‍ಗಳು

ಬೆಂಗಳೂರು, ಅ.30- ನಗರದಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಗ್ಯಾರೇಜ್ ಬಳಿ ನಿಲ್ಲಿಸಿದಂತಹ 10ಕ್ಕೂ ಹೆಚ್ಚು ಖಾಸಗಿ ಬಸ್‍ಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರೆ ಹಳ್ಳಿಯ ವೀರಭದ್ರ ನಗರದಲ್ಲಿನ ಪಿಇಎಸ್ ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗ್ಯಾರೇಜ್ ಮುಂಭಾಗದ ಆವರಣದಲ್ಲಿ ರಿಪೇರಿ ಬಸ್‍ಗಳು, ಬೇರೆ ಬೇರೆ ಸಂಸ್ಥೆಗಳಿಗೆ ಸೇರಿದ ಬಸ್‍ಗಳು, ಕಂಪನಿ ಬಸ್‍ಗಳು ಹಾಗೂ ವಾಹನಗಳನ್ನು ನಿಲ್ಲಿಸಲಾಗಿತ್ತು.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಒಂದು ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಮುಗಿಲೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಅಕ್ಕಪಕ್ಕವಿದ್ದ ಬಸ್‍ಗಳು, ವಾಹನಗಳಿಗೂ ಬೆಂಕಿ ತಾಗಿದ್ದರಿಂದ ಹೊತ್ತಿ ಉರಿದಿವೆ. ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ 15 ವಾಹನಗಳೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿ ತಹಬದಿಗೆ ತರಲು ಹರಸಾಹಸ ಪಟ್ಟರು.

ಹೈಕಮಾಂಡ್‍ ಷರತ್ತಿಗೆ ಶಾಕ್ ಅದ ನಿಗಮ ಮಂಡಳಿ ಆಕಾಂಕ್ಷಿಗಳು

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಹೊತ್ತಿ ಉರಿದಿದ್ದರಿಂದ ಗ್ಯಾರೇಜ್ ಪಕ್ಕದಲ್ಲೇ ಇದ್ದಂತಹ ಶೆಡ್‍ಗಳಲ್ಲಿನ ನಿವಾಸಿಗಳು ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಕಿ ಅವಘಡದಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಕೆಲಕಾಲ ಆತಂಕಗೊಂಡರು.

ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಒಂದು ಬಸ್‍ನಿಂದ ಹಲವು ಬಸ್‍ಗಳಿಗೆ ತಾಗಿ ಬೆಂಕಿ ಆವರಿಸಿಕೊಂಡಿದ್ದರಿಂದ 10ಕ್ಕೂ ಹೆಚ್ಚು ಬಸ್‍ಗಳು ಸುಟ್ಟು ಹೋಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಅಲ್ಪಪ್ರಮಾಣದ ಹಾನಿಯಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ರಾಹುಲ್ ಕುಮಾರ್ ಶಹಪುರವಾಡ್ ಅವರು ಆಗಮಿಸಿ ಮಾಹಿತಿ ಪಡೆದುಕೊಂಡರು. ಗಿರಿನಗರ ಠಾಣೆ ಪೊಲೀಸರು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಬಸ್‍ನಲ್ಲಿ ಡೀಸೆಲ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆಯೇ, ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಬೆಳ್ತಂಗಡಿ,ಅ.30- ಧರ್ಮಸ್ಥಳದಲ್ಲಿ ಬಸದಿಯಲ್ಲಿರುವ ಮೂಲ ಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ದೇವಸ್ಥಾನದಲ್ಲಿ ಮುಖ್ಯ ಆರಾಧ್ಯ ದೇವರಾದ ಶ್ರೀ ಮಂಜುನಾಥ ಸ್ವಾಮಿ ಶಾಂತಿ, ತಾಳ್ಮೆಯ ಸಾಕಾರ ಮೂರ್ತಿಗಳಾಗಿದ್ದು, ಇಲ್ಲಿ ಯಾವಾಗಲೂ ಶಾಂತಿ, ನೆಮ್ಮದಿ, ಸಾಮರಸ್ಯ ನೆಲೆಸಿರುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ. ತಾನು ಮತ್ತು ಕುಟುಂಬದವರು ಎಲ್ಲರೂ ಶಾಂತಚಿತ್ತರಾಗಿದ್ದೇವೆ. ಇಲ್ಲಿ ಶ್ರದ್ಧಾ-ಭಕ್ತಿಯಿಂದ ಬರುವ ಎಲ್ಲಾ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳಕ್ಕೆ ಉಭಯ ಧರ್ಮಸಂರಕ್ಷಣಾ ರಥಗಳು ಭವ್ಯ ಮೆರವಣಿಗೆಯಲ್ಲಿ ಬಂದಾಗ ಹಾಗೂ ಉಜಿರೆಯಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಬಂದ ಸಂದರ್ಭದಲ್ಲಿ ಅವರು ಮಾತನಾಡಿದರು.

ಶ್ರೀ ಮಂಜುನಾಥ ಸ್ವಾಮಿ ವಿಷಕಂಠನಾಗಿದ್ದು, ವಿಷವನ್ನು ಕಂಠದಲ್ಲಿಟ್ಟುಕೊಂಡು ಲೋಕಕಲ್ಯಾಣ ಮಾಡುವ ದೇವರು ದುಶ್ಟಶಕ್ತಿಗಳನ್ನು ನಾಶಮಾಡಿ ಶಿಷ್ಟರ ರಕ್ಷಣೆ ಮಾಡುತ್ತಾರೆ. ಧರ್ಮಸ್ಥಳದ ಅಭಿಮಾನಿ ಭಕ್ತರೆ ಸ್ವಯಂ-ಪ್ರೇರಣೆಯಿಂದ ಕ್ಷೇತ್ರದ ರಕ್ಷಣೆಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಮಾಡಿರುವ ಸೇವೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್

ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕøತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಯೊಂದಿಗೆ ಅಪಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ. ತಮ್ಮ ಮನ, ವಚನ, ಕಾಯ ಪವಿತ್ರವಾಗಿದೆ. ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆ ಸನ್ನಿಯಲ್ಲಿ ಪ್ರತಿ ತಿಂಗಳು ಸಂಕ್ರಾಂತಿಯಂದು ತಾನು ವರದಿ ಒಪ್ಪಿಸಬೇಕು. ಅವರ ಅಭಯ, ಅನುಗ್ರಹ ತಾನು ಮಾಡುವ ಎಲ್ಲಾ ಸೇವಾಕಾರ್ಯಗಳಿಗೆ ಇದೆ ಎಂದು ಹೇಳಿದರು.

ಪ್ರಬಲ ಇಚ್ಛಾಶಕ್ತಿ, ನೈತಿಕ ಬಲ, ದೃಢ ಸಂಕಲ್ಪ ಹಾಗೂ ಭಕ್ತರು ಮತ್ತು ಅಭಿಮಾನಿಗಳ ಬೆಂಬಲದಿಂದ ನಮ್ಮ ಸೇವಾಕಾರ್ಯಗಳು ಮುಂದೆ ಇನ್ನಷ್ಟು ದುಪ್ಪಟ್ಟಾಗಲಿವೆ. ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವ ತನಗೆ ವಜ್ರಕವಚವಾಗಿ ರಕ್ಷಣೆ ನೀಡುತ್ತದೆ ಎಂದು ಹೆಗ್ಗಡೆ ಅವರು ವಿಶ್ವಾಸ ವ್ಯಕ್ತಪಡಿಸಿದರು.


ಸಭೆಯ ಆರಂಭದಲ್ಲಿ ಹೆಗ್ಗಡೆಯವರು ವೇದಿಕೆಯ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲಾ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ಫಲಿಮಾರು ಮಠದ ಶ್ರೀ ವಿದ್ಯಾೀಶ ಸ್ವಾಮೀಜಿ ಸೇರಿದಂತೆ 15 ಮಂದಿ ಮಠಾೀಶರು ಉಪಸ್ಥಿತರಿದ್ದರು. ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ಇದ್ದರು.

ಕನ್ನಡಿಗರ ನೆಲದ ಪ್ರೀತಿಗೆ ಹೃದಯ ತುಂಬಿ ಬಂದಿದೆ : ಎಚ್‍ಡಿಕೆ

ದುಬೈ,ಅ.30- ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕøತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಯುಎಇ ಒಕ್ಕಲಿಗರ ಸಂಘ ಇಂದು ದುಬೈನಲ್ಲಿನ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕøತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೇ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೆ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದರೋ ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಅವರು ನುಡಿದರು.

ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು

ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು.

ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು: ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇಂದು ತಾಂತ್ರಿಕವಾಗಿ ನಾವು ಬಹಳಷ್ಟು ಸಾಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ, ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೇ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದುಬೈ ಕನ್ನಡಿಗರು, ಅದರಲ್ಲಿಯೂ ಮಕ್ಕಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಮಂಜುನಾಥ್, ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.