Home Blog Page 1853

ರಾಕ್‍ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಬೆಂಗಳೂರು, ಅ.30- ಉದ್ಯಮಿ ಕುಟುಂಬವೊಂದು ವಿದೇಶ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಚಾಲಾಕಿ ಕಳ್ಳರು ಅವರ ಮನೆಗೆ ನುಗ್ಗಿ ಸುಮಾರು 4 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಖ್ಯಾತ ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಅವರ ಸಹೋದರ ಬ್ರಹ್ಮಿ ಅವರ ನಿವಾಸದಲ್ಲಿ ಈ ಕಳ್ಳತನ ನಡೆದಿದ್ದು, ಮನೆಗೆ ಕಾವಲಿದ್ದ ಸೆಕ್ಯೂರಿಟಿ ಗಾರ್ಡ್ ನಾಪತ್ತೆಯಾಗಿದ್ದು, ಆತನ ತಂಡವೇ ಈ ಕೃತ್ಯ ನಡೆಸಿರಬಹುದೆಂದು ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಮನೆಯ ಮೇಲ್ಚಾವಣಿಯ ಕೋಣೆಯಿಂದ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಸೇಫ್ ಲಾಕರ್ ಒಡೆದು ಸುಮಾರು 3 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು, ಬೆಲೆಬಾಳುವ ವಸ್ತುಗಳನ್ನೆಲ್ಲ ದೋಚಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಡಿಸಿಪಿ ಸೈದುಲ್, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಮಂಜು ಸೇರಿದಂತೆ ಇತರ ಅಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ತಂಡ ರಚನೆ: ಕೆಲ ಮಾಹಿತಿ ಆಧರಿಸಿ ವಿವಿಧ ರಾಜ್ಯಗಳಿಗೆ ನಾಲ್ಕು ವಿಶೇಷ ತಂಡಗಳು ತೆರಳಿವೆ. ಮನೆ ಕಾವಲಿಗಿದ್ದ ನೇಪಾಳಿ ಮೂಲದ ಸೆಕ್ಯೂರಿಟಿ ಗಾರ್ಡ್ ನಾಪತ್ತೆಯಾಗಿದ್ದು, ಆತನ ಮೇಲೆ ಅನುಮಾನ ಮೂಡಿದೆ.

ಆಪರೇಷನ್ ಕಮಲಕ್ಕೆ ಒಂದು ಸಾವಿರ ಕೋಟಿ ಬಳಕೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.30- ಹೈಕಮಾಂಡ್‍ನಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವವರು ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ಹೋಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈಕಾಲು ಹಿಡಿದು ಒಂದು ಸಾವಿರ ಕೋಟಿ ರೂಪಾಯಿ ತಂದು ಅದನ್ನು ಇಲ್ಲಿ ಆಪರೇಷನ್ ಕಮಲ ನಡೆಸಲು ಬಳಕೆ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನ ಕೂಟದಲ್ಲಿ ಮುದ್ದೆ ಬಗ್ಗೆ ಚರ್ಚೆಯಾಗಿದೆ, ಹುದ್ದೆ ಬಗ್ಗೆ ಚರ್ಚೆಯಾಗಿಲ್ಲ ಎಂದು ಸಭೆಯಲ್ಲೇ ಇದ್ದವರು ಹೇಳುತ್ತಿದ್ದಾರೆ. ರಾಜಕೀಯ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಯಾಗಲಿ, ಉಪಮುಖ್ಯಮಂತ್ರಿಯಾಗಲಿ ಅಥವಾ ಸಭೆಯಲ್ಲಿ ಸಚಿವರಾಗಲಿ ಹೇಳುತ್ತಿಲ್ಲ.

ಬೇರೆ ಯಾರು ಮಾತನಾಡುತ್ತಿಲ್ಲ. ಬಿಜೆಪಿಯವರು ಕಲ್ಪನೆ ಮಾಡಿಕೊಂಡು ಮಾತನಾಡುತ್ತಿದ್ದಾರೆ. ಡೈನಿಂಗ್ ಟೆಬಲ್‍ನಲ್ಲಿ ನಡೆದಿದ್ದು ಬಿಜೆಪಿಯವರಿಗೆ ಹೇಗೆ ಗೋತ್ತು. ಪಾಪ ಬಿಜೆಪಿಯವರಿಗೆ ಅವರ ಪಕ್ಷದಲ್ಲೇ ಏನು ನಡೆಯುತ್ತಿದೆ ಎಂದು ಗೋತ್ತಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಾಗ ರಾಜ್ಯದ ಒಬ್ಬ ಬಿಜೆಪಿ ನಾಯಕರು ಇರಲಿಲ್ಲ. ಕದ್ದು ಮುಚ್ಚಿ ಮೈತ್ರಿ ಮಾಡಿಕೊಳ್ಳುತ್ತಾರೆ. ಬಿಜೆಪಿಯವರು ಅವರದೇ ಪಕ್ಷದ ನಾಯಕ ಎಂ.ಪಿ.ರೇಣುಕಾಚಾರ್ಯ ಹೇಳುತ್ತಿರುವುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಯಾರು ಊಟಕ್ಕೆ ಸೇರಿಕೊಳ್ಳಬಾರದು. ಊಟ ಮಾಡುವಾಗ ಊರಿಗೆ ಡಂಗೂರ ಸಾರಿ ಜಾತ್ರೆ ಮಾಡಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.

ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಬಿಜೆಪಿಯವರಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಹೀಗಾಗಿ ಅಸ್ತಿತ್ವದಲ್ಲಿ ಇರಬೇಕು ಎಂದು ತಲೆ ಬುಡ ಇಲ್ಲದ ಹೇಳಿಕೆ ನೀಡುತ್ತಿದ್ದಾರೆ.
ಆಪರೇಷನ್ ಕಮಲ ನಡೆಸಿ ರಾಜ್ಯ ಸರ್ಕಾರವನ್ನು ಪತನ ಗೊಳಿಸಲು ಬಿಜೆಪಿ ಸಂಚು ನಡೆಸು ತ್ತಿರುವುದು ಗುಟ್ಟೇನು ಅಲ್ಲ. ಎಲ್ಲಿ ಸ್ಪಷ್ಟ ಬಹುಮತ ಬರುವುದಿಲ್ಲವೋ ಅಲ್ಲೆಲ್ಲಾ ಆಪರೇಷನ್ ಕಮಲ ಮಾಡುತ್ತಾರೆ. ಅದೇನು ಗಾಂ ತತ್ವದ ಮೇಲೆ ನಡೆಯುತ್ತದೆಯೇ ? ಹಣ ಕೊಟ್ಟು ಶಾಸಕರನ್ನು ಸೆಳೆಯುತ್ತಾರೆ. ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಪಕ್ಷಾಂತರ ಮಾಡಿದವರು ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ಉಳಿದುಕೊಂಡಿದ್ದರೆ. ಸಚಿವರಾಗಿರಲಿಲ್ಲ, ಆಪರೇಷನ್ ಕಮಲದಿಂದ ಪಡೆದ ಹಣದಿಂದ ಚುನಾವಣೆ ನಡೆಸಿ ಗೆದ್ದು ಬರಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಗೆ ಬಹುಮತ ಬರದೇ ಇರುವ ಮಹಾರಾಷ್ಟ್ರ, ಬಿಹಾರ, ಅಸ್ಸಾಂ, ಮಧ್ಯ ಪ್ರದೇಶದಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದ್ದರು. ರಾಜಸ್ಥಾನದಲ್ಲೂ ಪ್ರಯತ್ನ ಮಾಡಿದರು. ಕರ್ನಾಟಕದಲ್ಲೂ ಪ್ರಯತ್ನ ಮಾಡುತ್ತಿದ್ದಾರೆ. ಇದು ಬಿಜೆಪಿಯ ಸ್ಟಾಂಟರ್ಡ್ ಆಪರೇಷನ್ ಆಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ನಾಯಕರಿಗೆ ಅವರ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಒಳ್ಳೆಯ ರಾಜ್ಯಾಧ್ಯಕ್ಷನನ್ನು ಮಾಡಿಲ್ಲ. ಮೇಲ್ಮನೆ, ಕೆಳಮನೆಗಳ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಿಕೊಟ್ಟಿಲ್ಲ. ಅದಕ್ಕಾಗಿ ಜೀವಂತ ಇದ್ದೇವೆ ಎಂದು ತೋರಿಸಿಕೊಳ್ಳಲು ಪೈಪೋಟಿ ನಡೆಸುತ್ತಿರುವರು ನಾ ಮುಂದು ತಾ ಮುಂದು ಎಂದು ಜಿದ್ದಿಗೆ ಬಿದ್ದಿದ್ದಾರೆ. ಒಂದು ಸಾವಿರ ಕೋಟಿ ರೂಪಾಯಿ ಕೋಡಿ, ಸರ್ಕಾರ ರಚನೆ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೈ ಕಾಲು ಬಿದ್ದಿದ್ದಾರೆ. ಅದೇ ದುಡ್ಡು ತಂದು ಇಲ್ಲಿ ಆಪರೇಷನ್ ಕಮಲ ಆಮಿಶಕ್ಕೆ ಬಳಕೆ ಮಾಡುತ್ತಿರಬಹುದು. ಬಿಜೆಪಿಯವರು ಮೊದಲಿನಿಂದಲೂ ಇದನ್ನೇ ಅಲ್ಲವೇ ಮಾಡುತ್ತಿರುವುದು, ಅದನ್ನು ಬಿಟ್ಟು ಅವರು ಬೇರೆನ್ನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಆಪರೇಷನ್ ಕಮಲ ಮಾಡುವವರು ನನ್ನನ್ನಂತೂ ಅಪ್ರೋಚ್ ಮಾಡಲ್ಲ. ನಾವೆಲ್ಲಾ ಹುಟ್ಟ ಕಾಂಗ್ರೆಸಿಗರು. ನಮ್ಮ ಹತ್ತಿರ ಬರಲ್ಲ. ಆದರೆ ನ್ಮಮ ಪಕ್ಷದ ಒಬ್ಬ ಶಾಸಕರು ಹೇಳುತ್ತಾರೆ ಎಂದರೆ ನಂಬಬೇಕಲ್ಲ. ಹಿಂದೆ ಆಪರೇಷನ್ ಕಮಲ ನಡೆದಿದೆಯಲ್ಲಾ, ದೇಶದಲ್ಲೂ ಇದು ನಡೆದಿರುವ ಇತಿಹಾಸವೇ ಇದೆ. ಕರ್ನಾಟಕದಲ್ಲೂ ಆಗಿದೆ. ಬಿಜೆಪಿ ಆಪರೇಷನ್ ಕಮಲ ಮಾಡುತ್ತಾರೆ ಎಂಬುದು ನಂಬಲರ್ಹವಾಗಿದೆ ಎಂದರು.

ಅಧಿಕಾರ ಹಂಚಿಕೆ ಕಾಲ್ಪನಿಕ: ಎರಡೂವರೆ ವರ್ಷದ ಅಕಾರ ಹಂಚಿಕೆಯ ಬಗ್ಗೆ ಕೇಂದ್ರದಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ಗೋತ್ತು. ಎರಡುವರೆ ವರ್ಷಕ್ಕೆ ಹಂಚಿಕೆಯಾಗಿದೆಯೇ, ಪೂರ್ಣಾವಧಿಗೆ ಆಗಿದೆಯೇ ಆ ಐದು ಮಂದಿಗೆ ಮಾತ್ರಗೋತ್ತು. ಉಳಿದ ಯಾರಿಗೂ ಮಾಹಿತಿ ಇಲ್ಲ ಎಂದರು.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ

ನಮ್ಮಲ್ಲಿ ಹೈಕಮಾಂಡ್ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಎಲ್ಲರ ಜವಾಬ್ದಾರಿಗಳು ಪೂರ್ವ ನಿರ್ಧರಿತವಾಗಿರು ತ್ತವೆ. ಅದರಂತೆ ನಡೆದುಕೊಳ್ಳುತ್ತೇವೆ. ಮುಂದೆಯೂ ನೀವೇ ಗ್ರಾಮೀಣಾಭಿವೃದ್ಧಿ ಸಚಿವರಾಗಿರಬೇಕು ಎಂದರೆ ಒಪ್ಪಿಕೊಳ್ಳಬೇಕಾಗು ತ್ತದೆ. ಮುಖ್ಯಮಂತ್ರಿ ಹುದ್ದೆ ಕುರಿತು ಅದೇ ಮಾನದಂಡ ಅನ್ವಯವಾಗುತ್ತದೆ. ಊಟಕ್ಕೆ ಸೇರಿದರು ಎಂದರೆ ಅದರಲ್ಲಿ ಹುಳುಕು ಹುಡುಕುವುದು ಎಷ್ಟು ಸರಿ ಎಂದರು.

ಹಿಂದಿನ ಸರ್ಕಾರ ಶೇ.40ರಷ್ಟು ಕಮಿಷನ್ ಪಡೆದು ಮಾಡಿದ ಲೂಟಿಯಿಂದಾಗಿರುವ ನಷ್ಟವನ್ನು ಸರಿದೂಗಿಸಲು, ಆಡಳಿತ ಸುಧಾರಣೆಗೆ, ಉದ್ಯೋಗ ಸೃಷ್ಟಿಗಾಗಿ ರಾಜ್ಯದ ಜನ ನಮಗೆ ಅಕಾರ ನೀಡಿದ್ದಾರೆ. ನಾವು ಅದಕ್ಕೆ ಆದ್ಯತೆ ನೀಡುತ್ತೇವೆ. ಅಧಿಕಾರ ಹಂಚಿಕೆ ಹಾಗೂ ಇತರ ಕಾಲ್ಪನಿಕ ವಿಚಾರಗಳಿಗೆ ಆದ್ಯತೆ ನೀಡುವುದಿಲ್ಲ ಎಂದರು.

ಕಲಬುರಗಿ ಗ್ರಾಮೀಣದಲ್ಲಿ ಪರೀಕ್ಷಾ ಅಕ್ರಮ ನಡೆದಿಲ್ಲ:ಸರ್ಕಾರಿ ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿತ್ತು. ಒಂದು ದಿನ ಮೊದಲೇ ಪರೀಕ್ಷಾ ಕೇಂದ್ರದ ಸುತ್ತಾ ಝೆರಾಕ್ಸ್ ಯಂತ್ರಗಳಿರುವ ಅಂಗಡಿಗಳನ್ನು ಮುಚ್ಚಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಮತ್ತು ಹ್ಯಾಂಡೆಟ್ ಮೆಟಲ್ ಡಿಟೆಕ್ಟರ್ ಅಳವಡಿಸಲಾಗಿತ್ತು, ಲಾಡ್ಜ್‍ಗಳನ್ನು ಹಾಗೂ ಸಂಶಯ ಬಂದ ವಾಹನಗಳನ್ನು ಪರಿಶೀಲನೆಗೆ ಒಳಪಡಿಸಲಾಗಿತ್ತು.

ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದರಿಂದ ಕಲಬುರಗಿ ಗ್ರಾಮೀಣ ಭಾಗದಲ್ಲಿ ಪರೀಕ್ಷೆಗೂ ಮೊದಲು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಲಬುರಗಿ ನಗರದಲ್ಲಿ ಒಬ್ಬ ಹೇಗೋ ಜಾರಿಕೊಂಡಿದ್ದ, ಆತನನ್ನು ಪರೀಕ್ಷೆ ಬರೆಯುತ್ತಿದ್ದ ಅರ್ಧ, ಮುಕ್ಕಾಲು ಗಂಟೆಯಲ್ಲೇ ಸಿಕ್ಕಿಕೊಂಡಿದ್ದಾನೆ. ಮತ್ತೊಬ್ಬ ಇರಬಹುದು ಎಂಬ ಶಂಕೆ ಇದೆ. ಹಿಂದೆ ಆದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನ್ಯಾಯವಾಗ ಬಾರದು ಎಂದು ನಾವು ಸಾಕಷ್ಟು ಎಚ್ಚರಿಕೆ ವಹಿಸಿದ್ದೇವು ಎಂದರು.

ಪ್ರಕರಣದ ಪ್ರಾಥಮಿಕ ವರದಿ ಬಂದಿದೆ, ಅದರ ಪ್ರಕಾರ ಕಲಬುರಗಿ ಗ್ರಾಮೀಣ ಪರೀಕ್ಷಾ ಕೇಂದ್ರದ ಒಳಗೆ ಅಕ್ರಮ ನಡೆದಿಲ್ಲ. ಆದರೂ ನಾವು ನಿಷ್ಪಕ್ಷಪಾತ, ಕಠಿಣ ತನಿಖೆಗೆ ಕ್ರಮ ಕೈಗೊಂಡಿದ್ದೇವೆ.

ಪರೀಕ್ಷಾ ಅಭ್ಯರ್ಥಿಗಳು ನೀಡಿದ್ದ ಪತ್ರವನ್ನು ಒಂದು ತಿಂಗಳಿನಿಂದ ಸರ್ಕಾರದ ಗಮನಕ್ಕೆ ತರದೆ ಮೂಲೆ ಗುಂಪು ಮಾಡಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿಗೆ ಕೆಲಸ ಇಲ್ಲ. ಕಳೆದ ಬಾರಿ ಅವರ ಮೂಗಿನ ಕೆಳಗೆ ಎಲ್ಲಾ ನಡೆದಿತ್ತು, ಬಿಜೆಪಿ ಕಾರ್ಯಕರ್ತರೆ ಅಕ್ರಮ ನಡೆಸಿದರೂ ಏನು ನಡೆದಿಲ್ಲ ಎಂದು ಹೇಳುತ್ತಿದ್ದರು.

ಆಗ ನಡೆದ ನೇಮಕಾತಿಗಳಲ್ಲಿನ ಅಕ್ರಮದ ಬಲಿಪಶುಗಳಾದ ಕೆಪಿಟಿಸಿಎಲ್, ಶಿಕ್ಷಕರು, ಪಿಎಸ್‍ಐ. ಎಫ್‍ಡಿಎ ಅಭ್ಯರ್ಥಿಗಳು ಪ್ರತಿ ದಿನಾ ನಮ್ಮನ್ನು ಭೇಟಿ ಮಾಡಿ ಪತ್ರ ನೀಡುತ್ತಿದ್ದಾರೆ. ಅದರ ಆಧಾರದ ಮೇಲೆ ನಾವು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದೇವೆ. ಹಿಂದೆ ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್‍ಡಿಟೆಕ್ಟರ್ ಇರಲಿಲ್ಲ. ಝರಾಕ್ಸ್ ಅಂಗಡಿಗಳನ್ನು ಮುಚ್ಚಿರಲಿಲ್ಲ. ತಪಾಸಣೆ ನಡೆಸುತ್ತಿರಲಿಲ್ಲ. ನಾವು ಕೆಲಸ ಮಾಡಿದ್ದಕ್ಕೆ 24 ಗಂಟೆಯಲ್ಲಿ ಶಂಕಿತರು ಬಂಧನಕ್ಕೆ ಒಳಗಾಗಿದ್ದಾರೆ. ಕಲಬುರಗಿ ಗ್ರಾಮೀಣ ಭಾಗದಲ್ಲಿ ಅಕ್ರಮಗಳು ನಡೆಯಲಿಲ್ಲ. ಕಲಬುರಗಿಯಲ್ಲಿ ಒಂದು ಗಂಟೆಯಲ್ಲೇ ಆರೋಪಿಗಳನ್ನು ಬಂಸಿದ್ದೇವೆ. ಪರೀಕ್ಷಾಭ್ಯರ್ಥಿಗಳು ನೀಡಿದ್ದ ಪತ್ರದ ಮೇಲೆ ಕ್ರಮ ಕೈಗೊಂಡಿದ್ದಕ್ಕೆ ತಪ್ಪಿತಸ್ಥರು ಸಿಕ್ಕಿ ಬಿದ್ದಿದ್ದಾರೆ ಎಂದರು.

ಬಿಜೆಪಿಯವರು ಉಪದೇಶ ಮಾಡುವುದನ್ನು ನಿಲ್ಲಿಸಬೇಕು. ಈ ಹಿಂದೆ ಸದನದಲ್ಲಿ ಹೇಳಿಕೆ ನೀಡಿದ್ದ ಆಗಿನ ಸಚಿವರು, ಪಿಎಸ್‍ಐ ಹಗರಣ ಅಗೆದರೆ ಪ್ರಿಯಾಂಕ್ ಖರ್ಗೆ ಹೆಸರು ಬರುತ್ತದೆ ಎಂದು ವಿಧಾನಸಭೆಯಲ್ಲಿ ಹೇಳಿದರು. ಅವರ ಕೈನಲ್ಲೇ ಅಕಾರ ಇತ್ತಲ್ಲ. ಸಿಐಡಿ, ಸಿಬಿಐ ಎಲ್ಲವೂ ಇತ್ತು. ಏಕೆ ತನಿಖೆ ಮಾಡಲಿಲ್ಲ, ನನ್ನ ಪಾತ್ರವನ್ನು ಏಕೆ ಬಹಿರಂಗ ಪಡಿಸಲಿಲ್ಲ ಎಂದು ಪ್ರಶ್ನಿಸಿದರು.

ಪಿಎಸ್‍ಐ ಹಗರಣ ನಡೆದಾಗ ಒಂದು ವರ್ಷ ಏನು ನಡೆದೇ ಇಲ್ಲ ಎಂದು ಕಣ್ಣುಮುಚ್ಚಿಕೊಂಡು ಕುಳಿತಿದ್ದರು. ಬಿಜೆಪಿಯವರ ಬಲಗೈ ಬಂಟರೇ ಜೈಲು ಅನುಭವಿಸುತ್ತಿದ್ದಾರೆ. ಮೊದಲು ಅದರ ಬಗ್ಗೆ ಮಾತನಾಡಲಿ. ಪಿಎಸ್‍ಐ ಹಗರಣದಲ್ಲಿ ಶಾಸಕರ ಭವನದಲ್ಲೇ ಡಿಲ್‍ಗಳಾಗಿದ್ದವು ಎಂದು ಬಿಜೆಪಿಯ ಮಾಜಿ ಶಾಸಕರೇ ಹೇಳಿಕೆ ನೀಡಿದ್ದರು. ಪ್ರತಿಹುದ್ದೆಯನ್ನು 30 ಲಕ್ಷ ರೂಪಾಯಿಗೆ ಮಾರಾಟ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು. ಈಗ ನಮ್ಮ ಸರ್ಕಾರ ಪರೀಕ್ಷಾ ಕೇಂದ್ರದಲ್ಲಿ ಸಿಲುಕಿ ಬಿದ್ದ ಆರೋಪಿಗಳ ಪ್ರಕರಣವನ್ನು ಎರಡು ಮೂರು ವಾರದಲ್ಲೇ ತನಿಖೆ ಮುಗಿಸುತ್ತೇವೆ ಎಂದು ಹೇಳಿದರು.

ಲಿಖಿತ ಪರೀಕ್ಷೆಯ ಹಗರಣದಲ್ಲಿ ಸಚಿವರ ಪಾತ್ರ ಇದೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪಕ್ಕೆ ಆಧಾರಗಳೇನು ಎಂದು ಪ್ರಶ್ನಿಸಿದರು.

ಸಂತೋಷ್ ಹೆಗಡೆ, ಸಂದೇಶ್ ನಾಗರಾಜ್ ಸೇರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ..?

ಬೆಂಗಳೂರು, ಅ.30- ಅರವತ್ತೆಂಟನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗಡೆ, ನಿರ್ಮಾಪಕ ಸಂದೇಶ್ ನಾಗರಾಜ್ ಸೇರಿದಂತೆ ಹಲವು ಮಂದಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗುವ ಸಾಧ್ಯತೆ ಇದೆ.

ಕಳೆದ 15 ದಿನಗಳಿಂದಲೂ ನಿರಂತರವಾಗಿ ನಡೆಯುತ್ತಿರುವ ಆಯ್ಕೆ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಅಥವಾ ನಾಳೆ ಪ್ರಶಸ್ತಿ ಪ್ರಕಟಗೊಳ್ಳಲಿದೆ. 68ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ 68 ಮಂದಿ ಸಾಧಕರು ಹಾಗೂ 10 ಮಂದಿ ಪ್ರಮುಖ ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ನೀಡುವ ಸಾಧ್ಯತೆಗಳಿವೆ.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲಿಸಬೇಕಾದ ಮಾನದಂಡಗಳ ಕುರಿತು ಸಮಾಲೋಚನೆ ನಡೆದಿತ್ತು. ಅದರಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು. ಅನಂತರ ಆಯ್ಕೆ ಸಮಿತಿ ಸರಣಿ ಸಭೆಗಳನ್ನು ನಡೆಸಿದ್ದು, ಸಾಧಕರ ಆಯ್ಕೆಯನ್ನು ತುಲನಾತ್ಮಕವಾಗಿ ಪರಿಶೀಲಿಸಿದೆ.

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳೂ ಆಗಿರುವ ಸಂತೋಷ್ ಹೆಗಡೆ ಅವರು ಲೋಕಾಯುಕ್ತರಾಗಿದ್ದಾಗ ಉತ್ತಮ ಕೆಲಸಗಳ ಮೂಲಕ ಜನಮನ್ನಣೆ ಪಡೆದಿದ್ದರು. ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ

ಮೂಲಗಳ ಪ್ರಕಾರ, ಸಾಹಿತ್ಯದಲ್ಲಿ ಕರಿಗೌಡ ಬೀಚನಹಳ್ಳಿ , ಪತ್ರಿಕೋದ್ಯಮದಲ್ಲಿ ದಿನೇಶ್ ಅಮೀನ್‍ಮಟ್ಟು, ಮಾಯಾಶರ್ಮ, ರಂಗಭೂಮಿಯಲ್ಲಿ ಕೆ.ವಿ.ನಾಗರಾಜ್‍ಮೂರ್ತಿ, ಗಂಗಾಧರಸ್ವಾಮಿ, ಚಿದಂಬರ ಜಂಬೆ, ಶೇಕ್ ಮಾಸ್ಟರ್, ಸುಜಾತಮ್ಮ, ಜಾನಪದದಲ್ಲಿ ಚಂದ್ರು ಕಾಳೇನಹಳ್ಳಿ, ಚಲನಚಿತ್ರ ಕ್ಷೇತ್ರದಿಂದ ನಿರ್ಮಾಪಕ ಸಂದೇಶ್ ನಾಗರಾಜ್, ಜಾನಪದದಲ್ಲಿ ಸೋಬಾನೆ ರಾಮಣ್ಣ, ಹುಸೇನಾಬಿ ಬುಡನ್‍ಸಾಬ್, ತಿಮ್ಮಣ್ಣ ರಾಮವಾಡಗಿ,

ಸಿರಿಗಂಧ ಶ್ರೀನಿವಾಸಮೂರ್ತಿ, ಕಿರುತೆರೆಯಲ್ಲಿ ಹುಲಿ ಚಂದ್ರಶೇಖರ್, ಬಯಲಾಟದ ನಾರಾಯಣಪ್ಪ, ಕಲಾ ವಿಮರ್ಶೆಯಲ್ಲಿ ಜಿ.ಎಂ.ಹೆಗಡೆ, ಚಿತ್ರಕಲೆಯಲ್ಲಿ ಮಾರ್ಥಾ ಜಾಕಿ ಮಾರ್ವಿಚ್, ಚಿತ್ರಕಲೆಯಲ್ಲಿ ಎಚ್.ಸಿ.ಪಾಟೀಲ್, ಕಾಳಪ್ಪ ವಿಶ್ವಕರ್ಮ, ಜನಪದದಲ್ಲಿ ಸಿದ್ಧರಾಮಪ್ಪ ವಾಲಿ, ವಿಭೂತಿ ಗುಂಡಪ್ಪ ಸೇರಿದಂತೆ ಹಲವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಮತ್ತೊಂದು ಅಗ್ನಿ ಅವಘಡ, ಹೊತ್ತಿ ಉರಿದ ಬಸ್‍ಗಳು

ಬೆಂಗಳೂರು, ಅ.30- ನಗರದಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಗ್ಯಾರೇಜ್ ಬಳಿ ನಿಲ್ಲಿಸಿದಂತಹ 10ಕ್ಕೂ ಹೆಚ್ಚು ಖಾಸಗಿ ಬಸ್‍ಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೆರೆ ಹಳ್ಳಿಯ ವೀರಭದ್ರ ನಗರದಲ್ಲಿನ ಪಿಇಎಸ್ ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗ್ಯಾರೇಜ್ ಮುಂಭಾಗದ ಆವರಣದಲ್ಲಿ ರಿಪೇರಿ ಬಸ್‍ಗಳು, ಬೇರೆ ಬೇರೆ ಸಂಸ್ಥೆಗಳಿಗೆ ಸೇರಿದ ಬಸ್‍ಗಳು, ಕಂಪನಿ ಬಸ್‍ಗಳು ಹಾಗೂ ವಾಹನಗಳನ್ನು ನಿಲ್ಲಿಸಲಾಗಿತ್ತು.

ಇಂದು ಬೆಳಿಗ್ಗೆ 11 ಗಂಟೆ ಸುಮಾರಿನಲ್ಲಿ ಒಂದು ಬಸ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಮುಗಿಲೆತ್ತರಕ್ಕೆ ಹೊಗೆ ಆವರಿಸಿಕೊಂಡಿದ್ದು, ಅಕ್ಕಪಕ್ಕವಿದ್ದ ಬಸ್‍ಗಳು, ವಾಹನಗಳಿಗೂ ಬೆಂಕಿ ತಾಗಿದ್ದರಿಂದ ಹೊತ್ತಿ ಉರಿದಿವೆ. ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ 15 ವಾಹನಗಳೊಂದಿಗೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿ ತಹಬದಿಗೆ ತರಲು ಹರಸಾಹಸ ಪಟ್ಟರು.

ಹೈಕಮಾಂಡ್‍ ಷರತ್ತಿಗೆ ಶಾಕ್ ಅದ ನಿಗಮ ಮಂಡಳಿ ಆಕಾಂಕ್ಷಿಗಳು

ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಹೊತ್ತಿ ಉರಿದಿದ್ದರಿಂದ ಗ್ಯಾರೇಜ್ ಪಕ್ಕದಲ್ಲೇ ಇದ್ದಂತಹ ಶೆಡ್‍ಗಳಲ್ಲಿನ ನಿವಾಸಿಗಳು ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಕಿ ಅವಘಡದಿಂದಾಗಿ ಸುತ್ತಮುತ್ತಲಿನ ನಿವಾಸಿಗಳು ಕೆಲಕಾಲ ಆತಂಕಗೊಂಡರು.

ನೋಡನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಒಂದು ಬಸ್‍ನಿಂದ ಹಲವು ಬಸ್‍ಗಳಿಗೆ ತಾಗಿ ಬೆಂಕಿ ಆವರಿಸಿಕೊಂಡಿದ್ದರಿಂದ 10ಕ್ಕೂ ಹೆಚ್ಚು ಬಸ್‍ಗಳು ಸುಟ್ಟು ಹೋಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಅಲ್ಪಪ್ರಮಾಣದ ಹಾನಿಯಾಗಿದ್ದು, ಹೆಚ್ಚಿನ ಅನಾಹುತ ತಪ್ಪಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಡಿಸಿಪಿ ರಾಹುಲ್ ಕುಮಾರ್ ಶಹಪುರವಾಡ್ ಅವರು ಆಗಮಿಸಿ ಮಾಹಿತಿ ಪಡೆದುಕೊಂಡರು. ಗಿರಿನಗರ ಠಾಣೆ ಪೊಲೀಸರು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು, ಬಸ್‍ನಲ್ಲಿ ಡೀಸೆಲ್ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದೆಯೇ, ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಬೆಳ್ತಂಗಡಿ,ಅ.30- ಧರ್ಮಸ್ಥಳದಲ್ಲಿ ಬಸದಿಯಲ್ಲಿರುವ ಮೂಲ ಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ದೇವಸ್ಥಾನದಲ್ಲಿ ಮುಖ್ಯ ಆರಾಧ್ಯ ದೇವರಾದ ಶ್ರೀ ಮಂಜುನಾಥ ಸ್ವಾಮಿ ಶಾಂತಿ, ತಾಳ್ಮೆಯ ಸಾಕಾರ ಮೂರ್ತಿಗಳಾಗಿದ್ದು, ಇಲ್ಲಿ ಯಾವಾಗಲೂ ಶಾಂತಿ, ನೆಮ್ಮದಿ, ಸಾಮರಸ್ಯ ನೆಲೆಸಿರುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ. ತಾನು ಮತ್ತು ಕುಟುಂಬದವರು ಎಲ್ಲರೂ ಶಾಂತಚಿತ್ತರಾಗಿದ್ದೇವೆ. ಇಲ್ಲಿ ಶ್ರದ್ಧಾ-ಭಕ್ತಿಯಿಂದ ಬರುವ ಎಲ್ಲಾ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳಕ್ಕೆ ಉಭಯ ಧರ್ಮಸಂರಕ್ಷಣಾ ರಥಗಳು ಭವ್ಯ ಮೆರವಣಿಗೆಯಲ್ಲಿ ಬಂದಾಗ ಹಾಗೂ ಉಜಿರೆಯಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಬಂದ ಸಂದರ್ಭದಲ್ಲಿ ಅವರು ಮಾತನಾಡಿದರು.

ಶ್ರೀ ಮಂಜುನಾಥ ಸ್ವಾಮಿ ವಿಷಕಂಠನಾಗಿದ್ದು, ವಿಷವನ್ನು ಕಂಠದಲ್ಲಿಟ್ಟುಕೊಂಡು ಲೋಕಕಲ್ಯಾಣ ಮಾಡುವ ದೇವರು ದುಶ್ಟಶಕ್ತಿಗಳನ್ನು ನಾಶಮಾಡಿ ಶಿಷ್ಟರ ರಕ್ಷಣೆ ಮಾಡುತ್ತಾರೆ. ಧರ್ಮಸ್ಥಳದ ಅಭಿಮಾನಿ ಭಕ್ತರೆ ಸ್ವಯಂ-ಪ್ರೇರಣೆಯಿಂದ ಕ್ಷೇತ್ರದ ರಕ್ಷಣೆಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಮಾಡಿರುವ ಸೇವೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್

ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕøತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಯೊಂದಿಗೆ ಅಪಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ. ತಮ್ಮ ಮನ, ವಚನ, ಕಾಯ ಪವಿತ್ರವಾಗಿದೆ. ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆ ಸನ್ನಿಯಲ್ಲಿ ಪ್ರತಿ ತಿಂಗಳು ಸಂಕ್ರಾಂತಿಯಂದು ತಾನು ವರದಿ ಒಪ್ಪಿಸಬೇಕು. ಅವರ ಅಭಯ, ಅನುಗ್ರಹ ತಾನು ಮಾಡುವ ಎಲ್ಲಾ ಸೇವಾಕಾರ್ಯಗಳಿಗೆ ಇದೆ ಎಂದು ಹೇಳಿದರು.

ಪ್ರಬಲ ಇಚ್ಛಾಶಕ್ತಿ, ನೈತಿಕ ಬಲ, ದೃಢ ಸಂಕಲ್ಪ ಹಾಗೂ ಭಕ್ತರು ಮತ್ತು ಅಭಿಮಾನಿಗಳ ಬೆಂಬಲದಿಂದ ನಮ್ಮ ಸೇವಾಕಾರ್ಯಗಳು ಮುಂದೆ ಇನ್ನಷ್ಟು ದುಪ್ಪಟ್ಟಾಗಲಿವೆ. ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವ ತನಗೆ ವಜ್ರಕವಚವಾಗಿ ರಕ್ಷಣೆ ನೀಡುತ್ತದೆ ಎಂದು ಹೆಗ್ಗಡೆ ಅವರು ವಿಶ್ವಾಸ ವ್ಯಕ್ತಪಡಿಸಿದರು.


ಸಭೆಯ ಆರಂಭದಲ್ಲಿ ಹೆಗ್ಗಡೆಯವರು ವೇದಿಕೆಯ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲಾ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ಫಲಿಮಾರು ಮಠದ ಶ್ರೀ ವಿದ್ಯಾೀಶ ಸ್ವಾಮೀಜಿ ಸೇರಿದಂತೆ 15 ಮಂದಿ ಮಠಾೀಶರು ಉಪಸ್ಥಿತರಿದ್ದರು. ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ಇದ್ದರು.

ಕನ್ನಡಿಗರ ನೆಲದ ಪ್ರೀತಿಗೆ ಹೃದಯ ತುಂಬಿ ಬಂದಿದೆ : ಎಚ್‍ಡಿಕೆ

ದುಬೈ,ಅ.30- ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕøತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಯುಎಇ ಒಕ್ಕಲಿಗರ ಸಂಘ ಇಂದು ದುಬೈನಲ್ಲಿನ ಶೇಕ್ ರಶೀದ್ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕøತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.

ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೇ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೆ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದರೋ ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಅವರು ನುಡಿದರು.

ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು

ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು.

ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು: ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಇಂದು ತಾಂತ್ರಿಕವಾಗಿ ನಾವು ಬಹಳಷ್ಟು ಸಾಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ, ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೇ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ನಾಡಪ್ರಭು ಕೆಂಪೇಗೌಡರ ಉತ್ಸವದಲ್ಲಿ ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ದುಬೈ ಕನ್ನಡಿಗರು, ಅದರಲ್ಲಿಯೂ ಮಕ್ಕಳು ಪ್ರದರ್ಶಿಸಿದ ಸಾಂಸ್ಕøತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಮಂಜುನಾಥ್, ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ಕನ್ನಡ ಬಂಧುಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರ ಮಿಂಚಿನ ದಾಳಿ

ಬೆಂಗಳೂರು, ಅ.30-ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಮಿಂಚಿನ ದಾಳಿ ನಡೆಸಿ ಸರ್ಕಾರಿ ಭ್ರಷ್ಠ ಅಧಿಕಾರಿಗಳ ಬಂಡವಾಳ ಬಯಲಿಗೆಳೆದಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ದೂರುಗಳ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆಗಳು , ಕಚೇರಿ, ತೋಟದ ಮನೆ ಹಾಗೂ ವಿವಿದೆಡೆ ಇಂದು ಏಕಾಕಾಲಕ್ಕೆ ರಾಜ್ಯಾದ್ಯಂತ ಚಿತ್ರದುರ್ಗ, ತುಮಕೂರು,ಹಾಸನ, ಕಲಬುರಗಿ, ದಾವಣಗೆರೆ ,ಬೆಂಗಳೂರು ,ಬೆಳಗಾವಿ ,ಬೀದರ್, ಕಲಬುರಗಿ ಸೇರಿದಂತೆ ಸುಮಾರು 15 ಜಿಲ್ಲೆಗಳಲ್ಲಿ 95ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ಹಾಸನ: ಹಾಸನದಲ್ಲಿ ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ನಾರಾಯಣ ಅವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿದ್ದೆಯಿಂದ ಏಳುವ ಮುಂಚೆಯೇ ಲೋಕಾಯುಕ್ತ ಎಸ್‍ಪಿ ಮಲ್ಲಿಕ್ ನೇತೃತ್ವದ ಅಕಾರಿಗಳ ತಂಡ ಮನೆಯ ಬಾಗಿಲು ತಟ್ಟಿದೆ. ಡಿವೈಎಸ್‍ಪಿ ತಿರುಮಲೇಶ್, ಪೊಲೀಸ್ ಇನ್ಸ್‍ಪೆಕ್ಟರ್‍ಗಳಾದ ಬಾಲು, ಶಿಲ್ಪಾ ನೇತೃತ್ವದಲ್ಲಿ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ಅವರ ನಿವಾಸದಲ್ಲಿ ಚಿನ್ನಾಭರಣ, ಆಸ್ತಿ ದಾಖಲೆ ಹಾಗೂ ಗೊರೂರಿನಲ್ಲಿರುವ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್‍ನಲ್ಲಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಹಾಗು ಕಛೇರಿ, ಸಂಬಂಧಿಕರ ಮನೆಯಲ್ಲೂ ಶೋಧಕಾರ್ಯ ನಡೆದಿದೆ. ದಾಳಿ ಸಂದರ್ಭದಲ್ಲಿ ಅಪಾರ ಪ್ರಮಾಣದ ನಗದು ಹಣ ,ಚಿನ್ನಾಭರಣ ಆಸ್ತಿ ಪತ್ರದ ದಾಖಲೆಗಳು ಪತ್ತೆಯಾಗಿದ್ದು, ಅವುಗಳನ್ನು ಪರಿಶೀಲಿಸುತ್ತಿದ್ದಾರೆ.

ವಾರಕ್ಕೆ 70 ಗಂಟೆಗೂ ಹೆಚ್ಚು ದುಡಿಯುತ್ತಿದ್ದಾರೆ ಭಾರತೀಯ ನಾರಿಯರು

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ 9 ಕಡೆ ದಾಳಿ ನಡೆದಿದ್ದು ಹಾವೇರಿ ಪ್ರಾದೇಶಿಕ ಅರಣ್ಯಾಕಾರಿ (ಆರ್‍ಎಫ್‍ಓ) ಅಪರ ಮೇಶಪ್ಪ ಪೇರಲನವರ್ ಹಾಗು ನ್ಯಾಮತಿ ಪ್ರಾದೇಶಿಕ ಅರಣ್ಯಾಧಿಕಾರಿ (ಆರ್‍ಎಫ್‍ಓ) ಮಾಲತೇಶ್‍ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಅವರ ಮನೆ ,ಕಚೇರಿ ಮೇಲೆ 20ಕ್ಕೂ ಹೆಚ್ಚು ಸಿಬ್ಭಂದಿ ದಾಳಿ ಮಾಡಿದ್ದಾರೆ.

ಭಾನುವಾರದ ರಜೆಯ ಮಜಾ ಮಾಡಿ ಮಲಗಿದ್ದವರು ಬೆಳಿಗ್ಗೆ ದಿಢೀರ್ ಎಂಟ್ರೀ ಕೊಟ್ಟ ಲೋಕಾಯುಕ್ತ ಪೊಲೀಸರನ್ನು ಕಂಡು ಅಧಿಕಾರಿ ಮನೆಯವರು ದಂಗಾಗಿದ್ದಾರೆ. ಮನೆಯಲ್ಲಿದ್ದ ನಗದು, ವಿವಿದೆಡೆ ಅಕ್ರಮವಾಗಿ ಸಂಪಾದಿಸಿದ ಆಸ್ತಿ ಪತ್ತೆ ಮಾಡಲಾಗಿದೆ.

ಬೀದರ್ : ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಮತ್ತು ದೇವದುರ್ಗದ ಕೃಷ್ಣ ಜಲಾನಯನ ಇಲಾಖೆಯ ಕಾರ್ಯಪಾಲಕ ಅಭಿಯಂತರ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ಲೋಕಾಯುಕ್ತ ಎಸ್ಪಿ ಎಸ್.ಎಸ್.ಕರ್ನೂಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು ಹಲವು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಕಲಬುರಗಿ ಪಾಲಿಕೆಯ ಟೌನ್ ಪ್ಲ್ಯಾನರ್ ಅಧಿಕಾರಿ ಅಪ್ಪಾಸಾಹೇಬ್ ಕಾಂಬಳೆ ಅವರ ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಹೊಂದಿರುವ ಕಾರ್ಖಾನೆ ಮೇಲೆ ದಾಳಿ ಮಾಡಿರುವ ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು : ಬೆಂಗಳೂರಿನ ಪಾಲಿಕೆ ಅಧಿಕಾರಿ ವಲಯಕ್ಕೂ ಲೋಕಾಯುಕ್ತ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಗ್ಗನಹಳ್ಳಿ ವಾರ್ಡ್ ಎಆರ್‍ಓ ಚಂದ್ರಪ್ಪ ಬಿರಜ್ಜನವರ್ ಅವರ ಮನೆ, ಕಚೇರಿ ಸೇರಿ ಮೂರು ಕಡೆ ದಾಳಿ ನಡೆಸಲಾಗಿದೆ. ಈ ಹಿಂದೆ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದಿದ್ದ ಎಆರ್ ಓ ಚಂದ್ರಪ್ಪ ಲೋಕಾಯುಕ್ತ ಟ್ರ್ಯಾಪ್ ಗೆ ಒಳಗಾಗಿದ್ದರು. ಅದರ ಮುಂದುವರಿದ ಭಾಗವಾಗಿ ದಾಳಿ ಮುಂದುವರಿಸಿರೋ ಲೋಕಾಯುಕ್ತ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ : ದಾವಣಗೆರೆಯಲ್ಲಿ ಕೈಗಾರಿಕೆ ಮತ್ತು ಸುರಕ್ಷತಾ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಮನೆ ಮೇಲೂ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಹಾಗೂ ಅವರ ಸ್ವಂತ ಊರಾದ ಕೊಳ್ಳೆಗಾಲ ಸೇರಿದಂತೆ ಒಟ್ಟು ಮೂರು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿರುವ ಅಧಿಕಾರಿಗಳು. ಬೆಂಗಳೂರಿನ ಉಪಕಾರ್ ಲೇಔಟ್, ಆಂಧ್ರಹಳ್ಳಿ , ಕೊಳ್ಳೆಗಾಲ ಮನೆಯಲ್ಲಿ ಶೋಧ ನಡೆಸಲಾಗಿದೆ.

ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಬ್ಯಾಡರಹಳ್ಳಿ ತಂದೆಯ ಮನೆ, ಬಿಇಎಲ್, ವಿನಾಯಕ ನಗರ ಸೇರಿದಂತೆ ವಿವಿದೆಢೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯಲ್ಲಿ 8 ಲಕ್ಷ ನಗದು ಹಣ, ಹತ್ತು ದುಬಾರಿ ಬೆಲೆಯ ವಾಚ್‍ಗಳು, ಎಂಟು ಕೂಲಿಂಗ್ ಸನ್ ಗ್ಲಾಸ್ ಗಳು, ಚಿನ್ನ ಬೆಳ್ಳಿ ವಸ್ತುಗಳು, ಎರಡು ಕಾರು, ಆಸ್ತಿ ಪತ್ರಗಳು ಪತ್ತೆಯಾಗಿದೆ.

ಬೆಳಗಾವಿ : ಬೆಳಗಾವಿಯ ಪಂಚಾಯತ್ ರಾಜ್ ಇಲಾಖೆ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ಡಿಎಸ್ಪಿ ಜೆ.ರಘು ತಂಡದಿಂದ ದಾಳಿ ನಡೆಸಿದ್ದಾರೆ.
ವಿಶ್ವೇಶ್ವರಯ್ಯ ನಗರದ ಶ್ರದ್ಧಾ ಅಪಾರ್ಟ್‍ಮೆಂಟ್‍ನಲ್ಲಿರುವ ಅವರ ನಿವಾಸ, ಬೆಳಗಾವಿ ನಿವಾಸ, ಕಿತ್ತೂರು, ಖಾನಾಪುರದಲ್ಲಿ ಇರೋ ನಿವಾಸದ ಮೇಲೂ ಏಕಕಾಲಕ್ಕೆ ದಾಳಿ ನಡೆಸಿರುವ ಪೊಲೀಸರು ಅಕ್ರಮ ಸಂಪತ್ತು ಬಯಲಿಗೆಳೆದಿದ್ದಾರೆ.

ತುಮಕೂರು: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನೀಯರ್ ನಾಗೇಂದ್ರಪ್ಪ ಅವರ ಮನೆ, ಕಚೇರಿ ಸೇರಿ ವಿವಿದೆಡೆ ಲೋಕಾಯುಕ್ತ ಡಿಎಸ್ಪಿ ಮಂಜುನಾಥ್. ಡಿಎಸ್ಪಿ.ಹರೀಶ್. ನೇತೃತ್ವದಲ್ಲಿ ದಾಳಿ ನಡೆದಿದೆ.

ಇನ್ಪೆಕ್ಟರ್ ಶಿವರುದ್ರಪ್ಪ ಮೇಟಿ,ಸತ್ಯನಾರಾಯಣ, ಸಲೀಂ ನೇತೃತ್ವದ ತಂಡ ತುಮಕೂರು ನಗರದ ಬಟವಾಡಿಯಲ್ಲಿರುವ ಮನೆ ಹಾಗೂ ಶಿರಾ ತಾಲ್ಲೂಕಿನ ಮದ್ದೇರಹಳ್ಳಿ, ರಾಗಲಹಳ್ಳಿಯಲ್ಲಿರುವ ನಿವಾಸ , ಫಾರಂ ಹೌಸ್ ಮೇಲೂ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮುಂದುವರೆದಿದೆ.

ಹೈಕಮಾಂಡ್‍ ಷರತ್ತಿಗೆ ಶಾಕ್ ಅದ ನಿಗಮ ಮಂಡಳಿ ಆಕಾಂಕ್ಷಿಗಳು

ಬೆಂಗಳೂರು, ಅ.30- ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳಿಗೆ ಚಾಲನೆ ನೀಡುತ್ತಿದ್ದಂತೆ ಆಕಾಂಕ್ಷಿಗಳಲ್ಲಿ ತಳಮಳ ಹೆಚ್ಚಾಗಿದ್ದು, ಹೈಕಮಾಂಡ್‍ನ ಷರತ್ತುಗಳು ಬಿಸಿ ತುಪ್ಪವಾಗಿ ಪರಿಣಮಿಸಿವೆ. ಮೊದಲ ಹಂತದಲ್ಲಿ 30 ಮಂದಿ ಶಾಸಕರಿಗೆ, ಅದರಲ್ಲೂ ಎರಡಕ್ಕಿಂತ ಹೆಚ್ಚು ಬಾರಿ ಆಯ್ಕೆಯಾಗಿರುವವರಿಗೆ ಸಂವೃದ್ಧಿಯಾಗಿರುವ ನಿಗಮಗಳ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ನಿನ್ನೆ ತಡರಾತ್ರಿವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ. ಪರಸ್ಪರ ಇಬ್ಬರು ತಮ್ಮಲ್ಲಿರುವ ಆಕಾಂಕ್ಷಿಗಳ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿದ್ದು, ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಜಾತಿ, ಧರ್ಮ, ಪ್ರಾದೇಶಿಕತೆ, ಪಕ್ಷ ನಿಷ್ಠೆ ಹಾಗೂ ಸಕ್ರಿಯ ಪಾಲ್ಗೋಳ್ಳುವಿಕೆಯನ್ನು ಪರಿಗಣಿಸಲಾಗಿದೆ.

ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ನಿಗಮ ಮಂಡಳಿಗಳಲ್ಲಿ ಅಧಿಕಾರ ಹಿಡಿಯುವ ಕನಸು ಕಾಣುತ್ತಿದ್ದವರಿಗೆ ರಾಜ್ಯ ನಾಯಕರು ಕೆಲ ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಮೊದಲು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ಪಡೆದುಕೊಂಡು, ಮುಂದಿನ ಸಚಿವ ಸಂಪುಟ ವಿಸ್ತರಣೆಯ ವೇಳೆ ಲಾಬಿ ನಡೆಸಿ, ಸಂಪುಟಕ್ಕೆ ಸೇರಿಕೊಳ್ಳುವ ಸನ್ನಾಹ ನಡೆಸಿದ್ದವರಿಗೆ ತಳಮಳ ಸೃಷ್ಟಿಸಿವೆ.

ನಿಗಮ ಮಂಡಳಿಯಲ್ಲಿ ಸ್ಥಾನ ಪಡೆದವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ನೀಡಲಾಗುವುದಿಲ್ಲ ಎಂದು ಹೈಕಮಾಂಡ್ ಸಂದೇಶವನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಕಾಂಕ್ಷಿಗಳಿಗೆ ತಲುಪಿಸಿದ್ದಾರೆ. ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಾದರೂ ಅವಕಾಶ ನೀಡಲಾಗುವುದೇ ಎಂಬ ಪ್ರಶ್ನೆಗೂ ಸ್ಪಷ್ಟ ಉತ್ತರ ಸಿಗುತ್ತಿಲ್ಲ. ಆ ಕಾಲಕ್ಕನುಗುಣವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರಬೇಕಾಗುತ್ತದೆ ಎಂಬ ಸಂದೇಶಗಳು ರವಾನೆಯಾಗುತ್ತಿವೆ. ಹೀಗಾಗಿ ಬಹಳಷ್ಟು ಹಿರಿಯ ಹಾಗೂ ಪ್ರಭಾವಿ ಶಾಸಕರು ನಿಗಮ ಮಂಡಳಿಗಳನ್ನು ಒಪ್ಪಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.

ಈ ಹಿಂದೆ ಚಾಮರಾಜನಗರ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಲಾಗಿತ್ತು. ಆದರೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರು ಪಕ್ಷದ ಸಲಹೆಯನ್ನು ತಿರಸ್ಕರಿಸಿದ್ದರು. ಬಳಿಕ ವಿಧಾನಸಭೆ ಉಪಾಧ್ಯಕ್ಷ ಸ್ಥಾನವನ್ನು ಸಚಿವ ಸ್ಥಾನದ ಮತ್ತೊಬ್ಬ ಆಕಾಂಕ್ಷಿ ರುದ್ರಪ್ಪ ಲಮಾಣಿ ಅವರಿಗೆ ನೀಡಲಾಗಿದೆ. ಅವಕಾಶ ತಳ್ಳಿ ಹಾಕಿದ ಪುಟ್ಟರಂಗಶೆಟ್ಟಿ ಈಗ ಸಚಿವ ಸ್ಥಾನವೂ ಇಲ್ಲ, ಉಪಾಧ್ಯಕ್ಷ ಸ್ಥಾನವೂ ಇಲ್ಲದಂತಾಗಿ ದಿನ ಬೇಳಗಾದರೆ ಮುಖ್ಯಮಂತ್ರಿಯವರ ವಿರುದ್ಧ ಅಸಮಧಾನ ವ್ಯಕ್ತಪಡಿಸಿಕೊಂಡು ತಿರುಗಾಡುತ್ತಿದ್ದಾರೆ.

ಏಷ್ಯನ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದ ಶೂಟರ್ ಅನೀಶ್

ಇದೇ ಪರಿಸ್ಥಿತಿ ತಮಗೆ ಬರಬಹುದು ಎಂಬ ಅಳುಕು ಬಹಳಷ್ಟು ಶಾಸಕರನ್ನು ಕಾಡುತ್ತಿದೆ. ಪ್ರಾದೇಶಿಕ, ಸಾಮಾಜಿಕ ನ್ಯಾಯ ಲೆಕ್ಕಾಚಾರದಲ್ಲಿ ಬಹಳಷ್ಟು ಮಂದಿ ತಮಗೆ ಸಚಿವ ಸ್ಥಾನ ಸಿಗಲೇಬೇಕು ಎಂಬ ನಿರೀಕ್ಷೆಯಲ್ಲಿ ಇರುವವರು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನಿರಾಕರಿಸುತ್ತಿದ್ದಾರೆ. ಉಳಿದವರು ಇರುವುದರಲ್ಲೇ ಸಂವೃದ್ಧಿಯಾದ ನಿಗಮ ಮಂಡಳಿಯಲ್ಲಿ ಅಧಿಕಾರ ಹಿಡಿಯಲು ಲಾಬಿ ನಡೆಸುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದ್ದು, ಶಾಸಕರು ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಶಾಸಕರಂತೆ ಪ್ರಮುಖ ನಾಯಕರಿಗೂ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನದಲ್ಲಿ ಅರ್ಧಚಂದ್ರ ಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ 15ರಿಂದ 20 ವಿಧಾನ ಪರಿಷತ್ ಸ್ಥಾನಗಳು ತೆರವಾಗುತ್ತಿವೆ. ಬಹಳಷ್ಟು ಮಂದಿ ಅವುಗಳ ಮೇಲೆ ಕಣ್ಣಿಟ್ಟಿದ್ದಾರೆ. ಇನ್ನೂ ಕೆಲವರು ಲೋಕಸಭೆ ಚುನಾವಣೆ ಸ್ಪರ್ಧೆಯ ನಿರೀಕ್ಷೆಯಲ್ಲಿದ್ದಾರೆ. ಅವರುಗಳಿಗೆ ಯಾವುದಾರು ಒಂದು ಆಯ್ಕೆ ಮಾಡಿಕೊಳ್ಳುವಂತೆ ಷರತ್ತು ಮುಂದಿಡಲಾಗಿದೆ.

ಹೀಗಾಗಿ ಬಹಳಷ್ಟು ನಾಯಕರು ಕೂಡ ಗೊಂದಲದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಲಾಗುವುದೇ ಎಂಬುದು ಖಚಿತವಿಲ್ಲ. ಪಕ್ಷದಿಂದ ನಡೆಸಲಾಗುವ ಸಮೀಕ್ಷೆ, ಹೈಕಮಾಂಡ್‍ನ ಅಂದಾಜು, ಸಾಮಾಜಿಕ ನ್ಯಾಯ ಆಧಾರದ ಮೇಲೆ ಲೋಕಸಭೆ ಚುನಾವಣೆ ಟಿಕೆಟ್‍ಗಳು ಹಂಚಿಕೆಯಾಗಲಿವೆ, ಯಾರಿಗೆ ಅವಕಾಶ ಸಿಗಲಿದೆ ಎಂಬ ಖಚಿತತೆ ಇಲ್ಲ.

ಚುನಾವಣೆಯನ್ನು ನಂಬಿಕೊಂಡು ಈಗ ಸಿಗುವ ನಿಗಮ ಮಂಡಳಿಯ ಅಧಿಕಾರವನ್ನು ಕಳೆದುಕೊಳ್ಳಲು ಸಾಧ್ಯವೇ ಎಂಬ ಗೊಂದಲದಲ್ಲಿ ಪ್ರಮುಖ ನಾಯಕರಿದ್ದಾರೆ. ವಿಧಾನ ಪರಿಷತ್ ಸ್ಥಾನಕ್ಕೆ ಬಹಳಷ್ಟು ಮಂದಿ ಟವಲ್ ಹಾಕಿದ್ದಾರೆ. ಅಂತಹವರು ನಿಗಮಮಂಡಳಿಯನ್ನು ಒಪ್ಪಿಕೊಂಡರೆ ರಾಜಕೀಯ ಭವಿಷ್ಯವೇ ಸೀಮಿತಗೊಳ್ಳುತ್ತದೆ ಎಂಬ ದುಗುಡದಲ್ಲಿದ್ದಾರೆ.

ಅಲ್ಲಿ-ಇಲ್ಲಿ-ಎಲ್ಲಾ ಕಡೆ ಅವಕಾಶ ಗಿಟ್ಟಿಸಿ, ಅಧಿಕಾರ ಅನುಭವಿಸುವ ಕನಸು ಕಾಣುತ್ತಿದ್ದವರಿಗೆ ಹೈಕಮಾಂಡ್‍ನ ಷರತ್ತು ನುಂಗಲಾರದ ಬಿಸಿ ತುಪ್ಪವಾಗಿದೆ. ಪ್ರಭಾವಿ ನಾಯಕರ ಕೃಪಾಕಟಾಕ್ಷದಿಂದ ಹೇಗೋ ಬೇಳೆ ಬೇಯಿಸಿಕೊಳ್ಳಬಹುದು ಎಂದುಕೊಂಡವರಿಗೆ ತ್ರಿಶಂಕು ಸ್ಥಿತಿ ನಿರ್ಮಾಣವಾಗಿದೆ.

ಮತ್ತೆ ಬಾಲ ಬಿಚ್ಚಿದ ಎಂಇಎಸ್, ಕನ್ನಡಿಗರ ಆಕ್ರೋಶ

ಬೆಂಗಳೂರು, ಅ.30- ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದ್ದಂತೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೆ ಬಾಲಬಿಚ್ಚಲಾರಂಭಿಸಿದೆ. ಅತ್ತ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಕರಾಳ ದಿನಾಚರಣೆಗೆ ನಮ್ಮ ಪ್ರತಿನಿಧಿ ಬರುತ್ತಾರೆ ಎಂದು ಹೇಳುವ ಮೂಲಕ ಉರಿಯೋ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಹೀಗಾಗಿ ಬೆಳಗಾವಿ ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದೆ.

ನಾಡದ್ರೋಹಿ ಎಂಇಎಸ್ ಪದೇ ಪದೇ ಮುಖಭಂಗ ಅನುಭವಿಸಿದರೂ ಮತ್ತದೆ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಕರಾಳ ದಿನಾಚರಣೆಗೆ ಮುಂದಾಗಿದೆ. ಕರಾಳ ದಿನಾಚಣೆಗೆ ಅನುಮತಿ ಕೇಳಿದ್ದ ನಾಡದ್ರೋಹಿಗಳಿಗೆ ಮುಖಭಂಗವಾಗಿದೆ.

ಬೆಳಗಾವಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕರಾಳ ದಿನಾಚಣೆಗೆ ಅನುಮತಿ ನಿರಾಕರಿಸಿದ್ದು, ನಾಡದ್ರೋಹಿಗಳ ನಿದ್ದೆಗೆಡಿಸಿದೆ. ಆದರೂ ಶತಾಯ ಗತಾಯ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಮಾಡಲು ನಾಡದ್ರೋಹಿಗಳು ತೆರೆ ಮರೆಯಲ್ಲಿ ಕಸರತ್ತು ನಡೆಸಿದ್ದು, ಈ ಹಿನ್ನೆಲೆ ಸಭೆ ಕರೆದು ಕರಾಳ ದಿನಾಚರಣೆ ಕುರಿತು ಚರ್ಚೆ ನಡೆಸಿದ ಎಂಇಎಸ್ ಮುಖಂಡರು, ಸಭೆಯಲ್ಲಿ ಮಹಾರಾಷ್ಟ್ರದ ನಾಯಕರನ್ನು ಕರೆತರಲು ಮುಂದಾಗಿದ್ದಾರೆ ಎನ್ನಲಾಗಿದೆ.

ಭೌಗೋಳಿಕ ರಾಜಕೀಯ ಉದ್ವಿಗ್ನತೆಗೆ ಅಮೆರಿಕ ಕಾರಣ ; ರಷ್ಯಾ

ಇನ್ನು ಕರ್ನಾಟಕ ರಾಜ್ಯೋತ್ಸವ ಹೊಸ್ತಿಲ್ಲಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಗಡಿ ಖ್ಯಾತೆ ತೆಗೆದಿದ್ದಾರೆ. ಗಡಿ ವಿವಾದ ಕೆದಕಿದ ಮಹಾ ಸಿಎಂ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ. ಇದರಿಂದ ಬೆಳಗಾವಿಯ ಎಂಇಎಸ್ ಪುಂಡರಿಗೆ ಆನೆ ಬಲ ಬಂದಂತಾಗಿದೆ.

ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಮಹಾರಾಷ್ಟ್ರ ಸರ್ಕಾರದ ಬೆಂಬಲವಿದೆ. ನ.1ರಂದು ಎಂಇಎಸ್‍ನಿಂದ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಲಾಗ್ತಿದೆ. ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಪ್ರತಿನಿ ಕಳುಹಿಸುವೆ ಎಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಸಿಎಂ ಏಕನಾಥ ಸಿಂಧೆ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್

ನವದೆಹಲಿ, ಅ.30- ಸತ್ಯದ ಗೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು ಎಂದು ಮೂಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಗಜೇಂದ್ರ ಸಿಂಗ್ ಶೇಖಾವತ್, ಸಿದ್ದರಾಮಯ್ಯನವರ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ, ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ವಿಷಾದಿಸಿದ್ದಾರೆ.

ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ಧ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ. ಮೊದಲನೆಯದಾಗಿ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ ಎಂದು ಗಜೇಂದ್ರ ಸಿಂಗ್ ಶೇಖಾವತ್ ಸಮರ್ಥಿಸಿಕೊಂಡಿದ್ದಾರೆ.

ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ ಭಾರತೀಯರ ರಕ್ಷಣೆಗೆ ಕ್ರಮ : ಜೈಶಂಕರ್

ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‍ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ಎಂದು ಪ್ರಶ್ನೆಸಿದ್ದಾರೆ.

2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ – ತ್ವರಿತ ನೀರಾವರಿ ಕಾರ್ಯಕ್ರಮದಡಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ.

ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ಎಂದು ಅಂಕಿ-ಅಂಶಗಳ ಸಮೇತ ತಿರುಗೇಟು ಕೊಟ್ಟಿದ್ದಾರೆ. ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ ಎಂದು ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕಾದ ನಷ್ಟ ತುಂಬಿಕೊಡಲು 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ರೂ.5,495 ಕೋಟಿ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ನಮ್ಮದೇ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ, ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ಶಿಫಾರಸನ್ನು ತಿರಸ್ಕರಿಸಿ, ನಾಡದ್ರೋಹ ಎಸಗಿದರು ಎಂದು ಪೋಸ್ಟ್ ಹಾಕಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೇ ಮೋದಿ ಮುಖ ನೋಡಿ ಮತ ನೀಡಿ ಎನ್ನುವ ನಿಮ್ಮವರ ಅನ್ಯಾಯಕ್ಕೆ ಕನ್ನಡಿಗರು ಯಾರ ಬಳಿ ನ್ಯಾಯ ಕೇಳಬೇಕು?.

ಸಾಲು ಸಾಲು ರೈಲು ದುರಂತ : ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ಕೇಂದ್ರ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಆನ್ಸರ ಮಾಡಿ ಮೋದಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು. ಇದಕ್ಕೆ ಕೇಂದ್ರ ಸಚಿವರು ತಿರುಗೇಟು ನೀಡಿದ್ದಾರೆ.