Home Blog Page 1855

ಗಾಜಾ ಮೇಲೆ ವಿನಾಶಕಾರಿ ಇಸ್ರೇಲ್ ದಾಳಿ ನಿಲ್ಲಿಸಬೇಕು : ಸೋನಿಯಾ

ನವದೆಹಲಿ, ಅ 30 (ಪಿಟಿಐ) ಇಸ್ರೇಲ್ -ಹಮಾಸ್ ಸಂಘರ್ಷದ ಕುರಿತ ವಿಶ್ವಸಂಸ್ಥೆಯ ಇತ್ತೀಚಿನ ನಿರ್ಣಯದ ಸಂದರ್ಭದಲ್ಲಿ ಭಾರತ ಗೈರುಹಾಜರಾಗಿರುವುದನ್ನು ಕಾಂಗ್ರೆಸ್ ಬಲವಾಗಿ ವಿರೋಧಿಸುತ್ತದೆ ಎಂದು ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಆದರೆ ಹಮಾಸ್ ದಾಳಿಯನ್ನು ತಮ್ಮ ಪಕ್ಷವು ನಿಸ್ಸಂದಿಗ್ಧವಾಗಿ ಖಂಡಿಸಿದೆ. ಇಸ್ರೇಲ್‍ನೊಂದಿಗೆ ಶಾಂತಿಯಿಂದ ಸಹಬಾಳ್ವೆ ನಡೆಸುತ್ತಿರುವ ಸಾರ್ವಭೌಮ ಸ್ವತಂತ್ರ, ಕಾರ್ಯಸಾಧ್ಯ ಮತ್ತು ಸುರಕ್ಷಿತ ರಾಜ್ಯವಾದ ಪ್ಯಾಲೆಸ್ಟೈನ್‍ಗಾಗಿ ನೇರ ಮಾತುಕತೆಗಳನ್ನು ಬೆಂಬಲಿಸುವುದು ತನ್ನ ಪಕ್ಷದ ದೀರ್ಘಕಾಲದ ನಿಲುವಾಗಿದೆ ಎಂದು ಅವರು ಹೇಳಿದರು.

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ಇಸ್ರೇಲ್ ಈ ಕೂಡಲೇ ಮಿಲಿಟರಿ ಚಟುವಟಿಕೆಯನ್ನು ನಿಲ್ಲಿಸಲು ಗಟ್ಟಿಯಾದ ಮತ್ತು ಅತ್ಯಂತ ಶಕ್ತಿಯುತ ಧ್ವನಿಗಳಿಗೆ ಕರೆ ನೀಡಿದರು. ನಮ್ಮ ಸಾಮೂಹಿಕ ಆತ್ಮಸಾಕ್ಷಿಯು ಕಲಕಿ ಮತ್ತು ಜಾಗೃತಗೊಳ್ಳುವ ಮೊದಲು ಇನ್ನೂ ಎಷ್ಟು ಜೀವಗಳನ್ನು ತೆಗೆದುಕೊಳ್ಳಬೇಕಾಗುತ್ತದೆ? ಅವರು ಪ್ರಶ್ನಿಸಿದ್ದಾರೆ.

ದಾಳಿಯು ಇಸ್ರೇಲ್‍ಗೆ ವಿನಾಶಕಾರಿಯಾಗಿದೆ. ಸಭ್ಯ ಜಗತ್ತಿನಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಬಲವಾಗಿ ನಂಬುತ್ತದೆ ಮತ್ತು ಮರುದಿನವೇ ಹಮಾಸ್‍ನ ದಾಳಿಯನ್ನು ನಿಸ್ಸಂದಿಗ್ಧವಾಗಿ ಖಂಡಿಸಿತು ಎಂದು ಅವರು ಹೇಳಿದರು.

ಗಾಜಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ರೇಲಿ ಮಿಲಿಟರಿಯ ವಿವೇಚನಾರಹಿತ ಕಾರ್ಯಾಚರಣೆ ಯಿಂದ ಈ ದುರಂತವು ಸಂಕೀರ್ಣವಾಗಿದೆ ಎಂದು ಗಾಂಧಿ ಹೇಳಿದರು, ಇದು ಹೆಚ್ಚಿನ ಸಂಖ್ಯೆಯ ಮುಗ್ಧ ಮಕ್ಕಳು, ಮಹಿಳೆಯರು ಮತ್ತು ಪುರುಷರು ಸೇರಿದಂತೆ ಸಾವಿರಾರು ಸಾವುಗಳಿಗೆ ಕಾರಣವಾಯಿತು.

ಪರಸ್ತ್ರೀ ವ್ಯಾಮೋಹಕ್ಕೆ ಹೆತ್ತಮಗನನ್ನು ಕೊಂದ ಪಾಪಿ ತಂದೆ

ಇಸ್ರೇಲಿ ರಾಜ್ಯದ ಶಕ್ತಿಯು ಈಗ ಅಸಹಾಯಕವಾಗಿರುವ ಜನಸಂಖ್ಯೆ ಮೇಲೆ ಸೇಡು ತೀರಿಸಿಕೊಳ್ಳುವುದರ ಮೇಲೆ ಕೇಂದ್ರೀಕರಿಸಿದೆ. ಪ್ರಪಂಚದ ಅತ್ಯಂತ ಪ್ರಬಲವಾದ ಮಿಲಿಟರಿ ಶಸ್ತ್ರಾಸ್ತ್ರಗಳ ವಿನಾಶಕಾರಿ ಶಕ್ತಿಯನ್ನು ಮಕ್ಕಳು, ಮಹಿಳೆಯರು ಮತ್ತು ಪುರುಷರ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಇಸ್ರೇಲ್ -ಪ್ಯಾಲೆಸ್ತೀನ್ ವಿಚಾರದಲ್ಲಿ ಕಾಂಗ್ರೆಸ್ ನಿಲುವನ್ನು ವಿವರಿಸಿದ ಅವರು, ನ್ಯಾಯವಿಲ್ಲದೆ ಶಾಂತಿ ಸಾಧ್ಯವಿಲ್ಲ ಎಂದು ಹೇಳಿದರು.

ಸಾಲು ಸಾಲು ರೈಲು ದುರಂತ : ಮೋದಿ ಸರ್ಕಾರಕ್ಕೆ ಖರ್ಗೆ ತರಾಟೆ

ನವದೆಹಲಿ, ಅ 30 (ಪಿಟಿಐ)- ಕೇಂದ್ರ ಸರ್ಕಾರಕ್ಕೆ ಹೊಸ ರೈಲು ಯೋಜನೆಗಳಿಗೆ ಹಸಿರು ನಿಶಾನೆ ತೋರಿಸುವುದರಲ್ಲಿ ಇರುವ ಉತ್ಸಾಹ ರೈಲು ಸುರಕ್ಷೆ ಕಲ್ಪಿಸುವುದರಲ್ಲಿ ಇರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ರೈಲು ಹಳಿತಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೈಲು ಪ್ರಯಾಣಿಕರ ಸುರಕ್ಷತೆಗೆ ಹೆಚ್ಚು ಒತ್ತು ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹೌರಾ-ಚೆನ್ನೈ ಮಾರ್ಗದಲ್ಲಿ ನಿನ್ನೆ ಸಂಜೆ ಎರಡು ರೈಲುಗಳು ಡಿಕ್ಕಿ ಹೊಡೆದು ಕನಿಷ್ಠ 13 ಜನರು ಸಾವನ್ನಪ್ಪಿ, 50 ಜನರು ಗಾಯಗೊಂಡಿದ್ದರು. ರೈಲು ಅಪಘಾತ ಕುರಿತಂತೆ ಎಕ್ಸ್‍ನಲ್ಲಿನ ಪೋಸ್ಟ್‍ನಲ್ಲಿ ಖರ್ಗೆ ಅವರು, ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ ದುರಂತದಲ್ಲಿ ಕೆಲವು ಅಮೂಲ್ಯ ಜೀವಗಳು ಬಲಿಯಾಗಿ ಹಲವಾರು ಜನರು ಗಾಯಗೊಂಡಿರುವುದಕ್ಕೆ ತೀವ್ರ ದುಃಖವಾಗಿದೆ ಎಂದು ಬರೆದುಕೊಂಡಿದ್ದಾರೆ.

ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು

ಮೃತರ ಕುಟುಂಬಗಳಿಗೆ ನಮ್ಮ ಆಳವಾದ ಸಂತಾಪಗಳು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅವರು ವಿನಂತಿಸಿದರು.

ಬಾಲಸೋರ್ ರೈಲು ದುರಂತದ ನಂತರ ಕೇಂದ್ರ ಸರ್ಕಾರದ ಸುರಕ್ಷತೆಯ ಎಲ್ಲಾ ಹಕ್ಕುಗಳು ಗಾಳಿಯಲ್ಲಿ ಆವಿಯಾಗಿವೆ ಎಂದು ಅವರು ಹೇಳಿದರು. ರೈಲುಗಳನ್ನು ಅಬ್ಬರ ಮತ್ತು ಪ್ರಚಾರದೊಂದಿಗೆ ಫ್ಲ್ಯಾಗ್ ಮಾಡುವ ಅದೇ ಉತ್ಸಾಹವು ರೈಲ್ವೆ ಸುರಕ್ಷತೆ ಮತ್ತು ಕೋಟ್ಯಂತರ ದೈನಂದಿನ ಪ್ರಯಾಣಿಕರ ಯೋಗಕ್ಷೇಮದ ಬಗ್ಗೆಯೂ ಸಹ ತೋರಿಸಬೇಕು ಎಂದು ಖರ್ಗೆ ಹೇಳಿದರು.

ಗಡಿ ನುಸುಳಲು ಯತ್ನಿಸಿದ ಉಗ್ರ ಮಟಾಷ್

ಶ್ರೀನಗರ, ಅ 30 (ಪಿಟಿಐ)-ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರನೊಬ್ಬನನ್ನು ಹತ್ಯೆ ಮಾಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು

ಇದರೊಂದಿಗೆ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರನ್ ಸೆಕ್ಟರ್‍ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ನಿನ್ನೆ ರಾತ್ರಿ ವಿಫಲಗೊಳಿಸಲಾಯಿತು. ಇಂದು ಬೆಳಗ್ಗೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಉಗ್ರನೊಬ್ಬನ ಮೃತದೇಹ ಪತ್ತೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳ ಬ್ಲಾಸ್ಟ್ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಕೊಚ್ಚಿ, ಅ30 (ಪಿಟಿಐ) – ಕೇರಳದ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ನಡೆದ ಸೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಎರ್ನಾಕುಲಂ ಜಿಲ್ಲೆಯ ಮಲಯತ್ತೂರಿನ 12 ವರ್ಷದ ಲಿಬಿನಾ ಎಂದು ಗುರುತಿಸಲಾಗಿದೆ.

ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಇಂದು ಮುಂಜಾನೆ ಕಲಮಸ್ಸೆರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಸ್ಪತ್ರೆಯ ವೈದ್ಯಕೀಯ ಮಂಡಳಿಯು ಹೊರಡಿಸಿದ ಹೇಳಿಕೆಯಲ್ಲಿ, ಬಾಲಕಿಯ ದೇಹದ ಶೇಕಡಾ 95 ರಷ್ಟು ತೀವ್ರ ಸುಟ್ಟಗಾಯಗಳೊಂದಿಗೆ ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಬೆಂಬಲವನ್ನು ಪಡೆದಿದ್ದರೂ, ಆಕೆಯ ಸ್ಥಿತಿಯು ಕ್ಷೀಣಿಸುತ್ತಲೇ ಇದ್ದು, ಇಂದು ಮುಂಜಾನೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು

ಕಲಮಸ್ಸೆರಿಯ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್‍ನಲ್ಲಿ ನಡೆದ ಬಹು ಸ್ಪೋಟಗಳಲ್ಲಿ 50 ಕ್ಕೂ ಹೆಚ್ಚು ವ್ಯಕ್ತಿಗಳು ಗಾಯಗೊಂಡಿದ್ದರು ಅದರಲ್ಲೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆಯ ಕೆಲವು ಗಂಟೆಗಳ ನಂತರ, ರಾಜ್ಯದ ತ್ರಿಶೂರ್ ಜಿಲ್ಲೆಯಲ್ಲಿ ತಾನು ಯೆಹೋವನ ಸಾಕ್ಷಿಗಳ ಸದಸ್ಯ ಎಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬರು ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ.

ಪರಸ್ತ್ರೀ ವ್ಯಾಮೋಹಕ್ಕೆ ಹೆತ್ತಮಗನನ್ನು ಕೊಂದ ಪಾಪಿ ತಂದೆ

ಜಮ್‍ಷೆಡ್‍ಪುರ, ಅ 30 (ಪಿಟಿಐ) ಪರಸ್ತ್ರೀ ವ್ಯಾಮೋಹಕ್ಕೆ ಒಳಗಾದ ವ್ಯಕ್ತಿಯೊಬ್ಬ ತನ್ನ ಕರುಳ ಕುಡಿಯನ್ನೇ ನಿರ್ದಯಿಯಾಗಿ ಕೊಲೆ ಮಾಡಿರುವ ಘಟನೆ ಜಮ್‍ಷೆಡ್‍ಪುರದ ಖಾಕ್ರಿಪಾಡಾ ಪ್ರದೇಶದಲ್ಲಿ ನಡೆದಿದೆ.
ಹೆತ್ತ ಮಗನನ್ನೆ ಕೊಲೆ ಮಾಡಿದ ಪಾಪಿ ತಂದೆಯನ್ನು ಗೋಪಾಲಪು ಕಟಿನ್‍ಪದಾ ಪ್ರದೇಶದ ನಿವಾಸಿ ಅಜಯ್ ನಮ್ತಾ ಎಂದು ಗುರುತಿಸಲಾಗಿದೆ.

ಈತ ತನ್ನ ಅಪ್ರಾಪ್ತ ಮಗನನ್ನು ಕೊಳದಲ್ಲಿ ಮುಳುಗಿಸಿ ಕೊಲೆ ಮಾಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಆರೋಪಿ ತನ್ನ ಮಗನನ್ನು ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು

ಆರೋಪಿಯು ಮಹಿಳೆಯೊಬ್ಬರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಪತ್ನಿ ಮತ್ತು ಮಗನೊಂದಿಗೆ ಇರಲು ಇಷ್ಟವಿರಲಿಲ್ಲ ಹೀಗಾಗಿ ತನ್ನ ಮಗನನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-10-2023)

ನಿತ್ಯ ನೀತಿ : ನಮಗೆ ಬೇಕಾದಲ್ಲಿ ಬೆರೆತು ನಡೆಯೋಣ. ಸಾಕಾದಲ್ಲಿ ಸರಿದು ನಡೆಯೋಣ. ಎರಡೂ ಬೇಡವಾದಲ್ಲಿ ನಮ್ಮ ಮಾಡಿಗೆ ನಾವು ಯಾರ ಮನಸ್ಸನ್ನೂ ನೋಯಿಸದೆ ಸುಮ್ಮನೆ ಇರೋಣ.

ಪಂಚಾಂಗ ಸೋಮವಾರ 30-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಕೃತ್ತಿಕಾ / ಯೋಗ: ವ್ಯತೀಪಾತ / ಕರಣ: ತೈತಿಲ

ಸೂರ್ಯೋದಯ : ಬೆ.06.13
ಸೂರ್ಯಾಸ್ತ : 05.54
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ರಾಶಿ ಭವಿಷ್ಯ
ಮೇಷ
: ಹೊಸ ವ್ಯವಹಾರ ಪ್ರಾರಂಭಿಸುವ ಆಲೋಚನೆಗಳು ಮನಸ್ಸಿಗೆ ಬರಬಹುದು.
ವೃಷಭ: ಉದ್ಯೋಗದಲ್ಲಿರುವವರ ನೆರವಿನಿಂದ ಹೊಸದನ್ನು ಕಲಿಯುವ ಅವಕಾಶವಿರುತ್ತದೆ.
ಮಿಥುನ: ಗುರು-ಹಿರಿಯರ ಬಗ್ಗೆ ಗೌರವ ಮತ್ತು ಆತಿಥ್ಯ ಭಾವನೆ ನಿಮ್ಮ ಮನಸ್ಸಿನಲ್ಲಿ ಹೆಚ್ಚಾಗುತ್ತದೆ.

ಕಟಕ: ಫೋಷಕರು ಹಾಗೂ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಸಿಂಹ: ಕೆಲಸದ ಸ್ಥಳದಲ್ಲಿ ಸ್ನೇಹಿತರೊಂದಿಗೆ ಸಂತಸದಿಂದಿರುವಿರಿ.
ಕನ್ಯಾ: ಅತಿಥಿಗಳ ಆಗಮನದಿಂದ ಮನೆಯ ವಾತಾವರಣ ಆಹ್ಲಾದಕರ ವಾಗಿರುತ್ತದೆ. ಅದೃಷ್ಟ ನಿಮ್ಮಕಡೆ ಇರುತ್ತದೆ.

ತುಲಾ: ಕುಟುಂಬ ಜೀವನವು ಎಲ್ಲಾ ಕುಟುಂಬ ಸದಸ್ಯರೊಂದಿಗೆ ಆನಂದದಾಯಕ ಮತ್ತು ಆರಾಮದಾಯಕವಾಗಿರುತ್ತದೆ.
ವೃಶ್ಚಿಕ: ಅದೃಷ್ಟವು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಮನಸ್ಸಿನಲ್ಲಿ ಸಂತಸ ಮೂಡುತ್ತದೆ.
ಧನುಸ್ಸು: ಸ್ವಂತ ಉದ್ಯಮ ಆರಂಭಿಸುವುದು ಕಷ್ಟಸಾಧ್ಯ. ನೌಕರರಿಗೆ ನೆಮ್ಮದಿಯ ದಿನ.

ಮಕರ: ಸ್ನೇಹಿತರು ಮತ್ತು ಸಂಬಂಧಿಕರೊಂದಿಗಿನ ಸಂಬಂಧ ಬಹಳ ಉತ್ತಮವಾಗಿರಲಿದೆ.
ಕುಂಭ: ಮಾತಿನಲ್ಲಿ ಮಾಧುರ್ಯವಿರುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ಪೂರ್ಣಗೊಳ್ಳಲಿವೆ.
ಮೀನ: ಸ್ನೇಹಿತರು ಮತ್ತು ಸಂಬಂಧಿಕರೊಂದಿಗಿನ ಸಂಬಂಧ ಬಹಳ ಉತ್ತಮವಾಗಿರಲಿದೆ.

ಕಿಲ್ಲರ್ ಬಿಎಂಟಿಸಿಗೆ ಮತ್ತಿಬ್ಬರು ಬಲಿ

ಬೆಂಗಳೂರು. ಅ.29- ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಅದರಲ್ಲೂ ಕಿಲ್ಲರ್ ಬಿಎಂಟಿಸಿ ಬಸ್‍ಗೆ ಬಲಿಯಾಗುತ್ತಿರುವವರ ಸಂಖ್ಯೆ ಅಧಿಕ ವಾಗುತ್ತಿದೆ. ವಿಜಯನಗರ ಸಂಚಾರಿ ಫೋಲಿಸ್ ಠಾಣೆ ಹಾಗೂ ಹುಳಿಮಾವು ಠಾಣಾ ವ್ಯಾಪ್ತಿಗಳಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಬಿಎಂಟಿಸಿ ಬಸ್‍ಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ.

ಗೋವಿಂದರಾಜನಗರ ಮುಖ್ಯರಸ್ತೆಯ ಬೈಟು ಕಾಫಿ ಮಳಿಗೆ ಮುಂಭಾಗ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಂಕದಕಟ್ಟೆಯ ನಿವಾಸಿ ಕುಮಾರ್(45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ವಿಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಹಿಂದುಳಿದ ವರ್ಗ ಆಯೋಗದ ವರದಿ ಸ್ವೀಕರಿಸುತ್ತೇವೆ : ಸಿದ್ದರಾಮಯ್ಯ

ಯುವತಿ ಬಲಿ:
ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆ ಸಮೀಪದ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುತ್ತಿದ್ದ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ವೀಣಾ(20) ಅಪಘಾತ ದಲ್ಲಿ ಮೃತಪಟ್ಟ ಗಾರ್ಮೆಂಟ್ಸ್ ಉದ್ಯೋಗಿ. ಇವರು ಹುಳಿಮಾವಿನಲ್ಲಿ ಪಾಸವಾಗಿದ್ದರು. ಅರಕೆರೆ ಬಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೀಣಾ ನಿನ್ನೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಗಂಭೀರವಾದ ಪೆಟ್ಟು ಬಿದ್ದು ಸಾವನ್ನಪ್ಪಿ ದ್ದಾರೆ.

ಈ ಸಂಬಂಧ ಹುಳಿಮಾವು ಸಂಚಾರಿ ಠಾಣೆ ಫೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.

ಬುಲೆಟ್ ಬೈಕ್-ಸ್ಕೂಟರ್ ಡಿಕ್ಕಿ : ಬಿಎಸ್‍ಎಫ್ ಯೋಧ ಸೇರಿ ಇಬ್ಬರು ಸಾವು

ಬೆಂಗಳೂರು,ಅ.29-ಬೈಕ್ ಹಾಗೂ ಮೊಪೆಡ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬಿಎಸ್‍ಎಫ್ ಯೋಧ ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಒಬ್ಬ ಗಾಯಗೊಂಡಿರುವ ಘಟನೆ ಕಳೆದ ರಾತ್ರಿ ಬಳ್ಳಾರಿ ರಸ್ತೆಯ ಗಡಿ ಭದ್ರತಾ ಪಡೆಯ ಗೇಟ್-2ರ ಬಳಿ ಸಂಭವಿಸಿದೆ.

ಬಾಗಲೂರಿನ ನಿವಾಸಿ ಹಾಗೂ ಬಿಎಸ್‍ಎಫ್ ಕೇಂದ್ರದಲ್ಲಿ ಹೆಡ್ ಕುಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಸುಧಾಕರ್ ಹಾಗೂ ಯೂಟೂಬರ್ ಗಿರೀಶ್ ಅಲಿಯಾಸ್ ಗಣಿ ಮೃತ ದುರ್ದೈವಿಗಳಾಗಿದ್ದಾರೆ. ಕಳೆದ ರಾತ್ರಿ 10.30ರ ಸಂದರ್ಭದಲ್ಲಿ ತಮ್ಮ ಬುಲೆಟ್ ಬೈಕ್‍ನಲ್ಲಿ ಗಿರಿ ಮತ್ತು ಆತನ ಸ್ನೇಹಿತ ಬಾಗಲೂರು ಕಡೆಗೆ ಹೋಗುತ್ತಿದ್ದರು.

ಹಿಂದುಳಿದ ವರ್ಗ ಆಯೋಗದ ವರದಿ ಸ್ವೀಕರಿಸುತ್ತೇವೆ : ಸಿದ್ದರಾಮಯ್ಯ

ಈ ವೇಳೆ ಗೇಟ್-2ರಿಂದ ಮುಖ್ಯರಸ್ತೆಗೆ ತಮ್ಮ ಆ್ಯಕ್ಟಿವಾ ಹೋಂಡಾದಲ್ಲಿಸುಧಾಕರ್ ಹೊರ ಬಂದಾಗ ಪರಸ್ಪರ ಡಿಕ್ಕಿ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಮೂವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸುಧಾಕರ್ ಹಾಗೂ ಗಿರಿ ಮೃತಪಟ್ಟಿದ್ದಾರೆ.

ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸುದ್ದಿ ತಿಳಿದ ಯಲಹಂಕ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೈಡನ್ ನಿವಾಸದ ಮೇಲೆ ಹಾರಾಡಿದ ವಿಮಾನ

ವಾಷಿಂಗ್‍ಟನ್,ಅ.29- ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ತಂಗಿದ್ದ ಡೆಲವೇರ್ ನಿವಾಸದ ಬಳಿ ನಾಗರೀಕ ವಿಮಾನ ಹಾರಾಟ ನಡೆಸಿ ಆತಂಕಹುಟ್ಟಿಸಿದ ಘಟನೆ ನಡೆದಿದೆ. ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿ ಭದ್ರತ ಲೋಪ ಉಂಟಾಗಿದೆ. ಎಚ್ಚೆತ್ತ ಅಮೆರಿಕದ ಯುದ್ಧ ವಿಮಾನಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ವಿಮಾನವನ್ನು ಹತ್ತಿರದ ವಿಮಾನ ನಿಲ್ಧಾಣದಲ್ಲಿ ಕೆಳಗಿಳಿಸಿದೆ,

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಲ್ಮಿಂಗ್ಟನ್‍ನ ಉತ್ತರಕ್ಕೆ ನಾಗರಿಕ ವಿಮಾನವೊಂದು ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು ಅಧ್ಯಕ್ಷರು ವಿಲ್ಮಿಂಗ್ಟನ್‍ನಲ್ಲಿರುವ ಅವರ ಮನೆಯಲ್ಲೇ ಇದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ರಹಸ್ಯ ಸೇವೆ ಮತ್ತು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್‍ನ ಏಜೆಂಟ್‍ಗಳು ಈ ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಿಮಾನ ಪೈಲೆಟ್‍ನನ್ನು ಬಂಸಲಾಗಿದೆ ವಿಮಾನಯಾನ ಕಂಪನಿ ಮೇಲೂ ಪ್ರಕರಣ ದಾಖಲಿಸಲಾಗಿದೆ.

ನಗುಮುಖದ`ಅರಸ’ನ 2ನೇ ಪುಣ್ಯಸ್ಮರಣೆಗೆ ಹರಿದು ಬಂದ ಅಭಿಮಾನಿ ಸಾಗರ

ಬೆಂಗಳೂರು, ಅ.29- ಕನ್ನಡಿಗರ ಅಚ್ಚುಮೆಚ್ಚಿನ ಸುಪುತ್ರ, ಕರ್ನಾಟಕ ರತ್ನ ಪುನಿತ್ ರಾಜಕುಮಾರ್ ನಮ್ಮನ್ನೆಲ್ಲ ಆಗಲಿ ಇಂದಿಗೆ ಎರಡು ವರ್ಷ ಕಳೆದೇ ಹೋಯಿತು. ಆದರೆ ಅವರ ನೆನಪುಗಳು ಪ್ರತಿಯೊಬ್ಬರ ಮನಗಳಲ್ಲಿ ಅಚ್ಚಳಿಯದೆ ಹಾಗೆ ಉಳಿದುಕೊಂಡಿವೆ. ಎರಡು ವರ್ಷಗಳ ಹಿಂದೆ ಇದೇ ತಿಂಗಳು ಇದೇ ದಿನ ಅಚಾನಕ್ಕಾಗಿ ಯಾರಿಗೂ ಹೇಳದೆ ಬಾರದ ಲೋಕಕ್ಕೆ ಪಯಣ ಬೆಳೆಸಿದ ರಾಜಕುಮಾರನಿಗೆ ಮಿಡಿದ ಹೃದಯಗಳು ಅಗಣಿತ.

ತಮ್ಮ ಮನೆಯಲ್ಲಿ ಒಬ್ಬ ಸದಸ್ಯರನ್ನು ಕಳೆದುಕೊಂಡಿದ್ದಕ್ಕಿಂತ ಹೆಚ್ಚು ಶೋಕವನ್ನು ವ್ಯಕ್ತಪಡಿಸಿದರು. ಯಾರೇ ಒಬ್ಬ ಗಣ್ಯ ವ್ಯಕ್ತಿ ಇಹಲೋಕ ತ್ಯಜಿಸಿದಾಗ ಒಂದು ಅಥವಾ ಎರಡು ಮೂರು ತಿಂಗಳೊಳಗೆ ಜನ ಮರೆತು ಹೋಗುತ್ತಾರೆ ಆದರೆ ಅಪ್ಪು ವಿಷಯದಲ್ಲಿ ಹಾಗಾಗಲಿಲ್ಲ. ಎರಡು ವರ್ಷ ಕಳೆದರೂ ಮರೆಯಲು ಇಷ್ಟಪಡದ ಅಭಿಮಾನಿಗಳು, ಪ್ರತಿದಿನ ಪ್ರತಿಕ್ಷಣ ನೆನೆಯುತ್ತಾ ದೊಡ್ಮನೆ ಹುಡುಗನಿಗೆ ಈ ರೀತಿಯ ಸಾವು ನ್ಯಾಯವಲ್ಲ ಎಂದು ಇಂದಿಗೂ ದೇವರನ್ನು ಜನ ಶಪಿಸುತ್ತಾರೆ. ಕೆಲ ಅಭಿಮಾನಿಗಳಂತೂ ಜೊತೆಯಲ್ಲಿಯೇ ಪಯಣ ಬೆಳೆಸಿದ್ದು ಉಂಟು.

ಅಪ್ಪು ಈಗ ಕೇವಲ ಮಾನವನಲ್ಲ ದೇವಮಾನವ. ಲಕ್ಷಾಂತರ ದೇವರ ಮನೆಗಳಲ್ಲಿ ಪರಮಾತ್ಮನಾಗಿದ್ದಾನೆ. ತನಗಾಗಿ ಗುಡಿ ಗೋಪುರ ಕಟ್ಟಿಸಿಕೊಂಡಿದ್ದಾನೆ. ಪ್ರತಿಯೊಂದು ಊರು, ಬೀದಿ, ಜಾತ್ರೆಗಳಲ್ಲಿ ಕಟೌಟ್‍ಗಳ ಮೂಲಕ ರಾರಾಜಿಸುತ್ತಿದ್ದಾರೆ. ಕೆಲವು ಜಾತ್ರೆ ತೇರುಗಳಲ್ಲಿ ದೇವರೊಂದಿಗೆ ಅಪ್ಪು ಪೋಟೋ ಇಟ್ಟು ಪೂಜಿಸಿದ್ದು ಉಂಟು. ಅಷ್ಟರಮಟ್ಟಿಗೆ ಪುನೀತ್ ರಾಜಕುಮಾರ ಅಜರಾಮರವಾಗಿ ಕನ್ನಡಿಗರು ಎದೆಯಲ್ಲಿ ಹಾರದ ಜ್ಯೋತಿಯಾಗಿ ಮಿನುಗುತ್ತಿದ್ದಾರೆ.

ಬೆಂಗಳೂರು ನಗರ ಅಷ್ಟೇ ಅಲ್ಲದೆ ಪ್ರತಿಯೊಂದು ಊರು ಗಲ್ಲಿಗಳಲ್ಲಿ ಇಂದು ಅಪ್ಪು ಸ್ಮರಣೆ ನಡೆಯುತ್ತಿದೆ. ಅಭಿಮಾನಿಗಳು ಅನ್ನಸಂತರ್ಪಣೆ ಜೊತೆಗೆ ಬ್ಲಡ್ ಡೊನೇಷನ್ ಕ್ಯಾಂಪ, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಬಡ ಶಾಲಾ ಮಕ್ಕಳಿಗೆ ಆರ್ಥಿಕ ನೆರವು, ಪುಸ್ತಕಗಳ ವಿತರಣೆ ಯಂತಹ ನೂರಾರು ಸಮಾಜಸೇವಾ ಕಾರ್ಯಗಳು ಪುನೀತ್ ಅವರ ಹೆಸರಿನಲ್ಲಿ ನಡೆಯುತ್ತಿವೆ.

ಪುನೀತ್ ರಾಜಕುಮಾರ್ ಬದುಕಿದ್ದಾಗ ಸಮಾಜಕ್ಕಾಗಿ ಅವರ ಜೀವ ಸದಾ ಮಿಡಿಯುತ್ತಿತ್ತು. ಅದು ಅಂದು ಯಾರಿಗೂ ಗೊತ್ತಾಗಿರಲಿಲ್ಲ. ಸ್ವಂತ ಮನೆಯವರಿಗೂ ಹೇಳಿಕೊಂಡಿರಲಿಲ್ಲ ಅಂದರೆ ಒಂದು ಕೈಯಲ್ಲಿ ಕೊಟ್ಟಿದ್ದು ಮತ್ತೊಂದು ಕೈಗೆ ಗೊತ್ತಾಗಬಾರದು ಎಂದು ನಂಬಿದವರು. ಕೊನೆಯವರೆಗೂ ಹಾಗೆಯೇ ಬದುಕಿದ್ದರು. ಅವರು ಮಾಡಿದ ದಾನ ಧರ್ಮಕ್ಕೆ ಇಡೀ ಭಾರತ ಶಿರಭಾಗಿ ನಮಿಸಿತ್ತು.

ಅಪ್ಪು ಅಭಿನಯದ ಕೊನೆಯ ಚಿತ್ರ ಗಂಧದಗುಡಿಯಲ್ಲೂ, ಸಾಮಾಜಿಕ ಚಿಂತನೆ ಮೆರೆದಿದ್ದಾರೆ. ಗಿಡ ಬೆಳೆಸಿ ಕಾಡನ್ನು ಉಳಿಸಿ ಮುಂದಿನ ಪೀಳಿಗೆ ಸುಖವಾಗಿ ಬದುಕಲು ವನ್ಯ ಸಂಪತ್ತು ಮುಖ್ಯ. ನಾವೆಲ್ಲರೂ ಕೈಜೋಡಿಸಬೇಕು. ಪ್ರಕೃತಿಯೊಂದಿಗೆ ಕಾಲ ಕಳೆದಾಗ ನಮ್ಮನ್ನು ನಾವು ಒರೆತುಕೊಳ್ಳಬಹುದು ಎಂಬ ಮಹತ್ತರ ಸಂದೇಶವನ್ನು ನಮ್ಮನ್ನ ಅಗಲಿ ಹೋಗುವಾಗ ಸಾರಿದ್ದಾರೆ. ಈಗ ಅಭಿಮಾನಿಗಳು ಅಪ್ಪು ಹೇಳಿದಂತೆ ಗಿಡಗಳನ್ನು ಹಂಚುವ ಕಾರ್ಯದಲ್ಲಿ ತೊಡಗುತ್ತಾ ನೀಡುವ ಪ್ರಕ್ರಿಯೆಯನ್ನು ಶುರುಮಾಡಿಕೊಂಡಿದ್ದಾರೆ.

ಯುವರತ್ನನ ಅಗಲಿಕೆ, ಇರುವ ತನಕ ಸಂತೋಷದಿಂದ, ಸಾಮರಸ್ಯದಿಂದ ಬದುಕಿ, ಅಭಲರಿಗೆ ನೆರವಾಗುತ್ತಾ ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂಬ ದೊಡ್ಡ ಪಾಠ ಕಲಿಸಿದೆ. ಈಗ ಎಲ್ಲಾ ಕಡೆ ಅಪ್ಪು ಅಂತಹ ದೊಡ್ಡ ಮನುಷ್ಯನೇ ಎಲ್ಲವನ್ನು ಬಿಟ್ಟು ಹೋದ ನಾವು ಅವರ ದೂಳು ಸಮಾನ, ಯಾವಾಗ ಬೇಕಾದರೂ ಉಸಿರು ನಿಲ್ಲಬಹುದು, ಜೀವನನ ನಶ್ವರ ಎಂದು ಹೇಳುತ್ತಾ ತಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ.

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.. 2ನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸಮಾ ನಿರ್ಮಾಣ ಮಾಡಲಾಗಿದೆ. ರಾಜ್ ಕುಟುಂಬಸ್ಥರು ಸಮಾ ನಿರ್ಮಿಸಿದ್ದು ಸ್ಮಾರಕ ನಿರ್ಮಾಣ ಕೆಲಸ ನಡೆದಿದೆ.

ಪುನೀತ್ ರಾಜ್ ಕುಮಾರ್ ಸ್ಮಾರಕವನ್ನು ಬಿಳಿ ಮಾರ್ಬಲ್ಸïನಲ್ಲಿ ನಿರ್ಮಾಣ ಮಾಡಲಾಗಿದೆ. ಸ್ಮಾರಕದ ಮೇಲೆ ಪುನೀತ್ ರಾಜ್ ಕುರ್ಮಾ ಫೋಟೋ ಕೂಡ ಇದೆ. ಸ್ಮಾರಕದ ಸುತ್ತಲ್ಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಅಣ್ಣಾವ್ರ ಸ್ಮಾರಕದ ರೀತಿಯಲ್ಲೇ ಪುನೀತ್ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಪುನೀತ್ ಅಗಲಿಕೆಯ ನೋವು ಇನ್ನು ಕುಟುಂಬಸ್ಥರನ್ನು ಕಾಡುತ್ತಿದೆ. ಬೆಳಗ್ಗೆ 9 ಗಂಟೆಗೆ ಪುನೀತ್ ರಾಜïಕುಮಾರ್ ಕುಟುಂಸ್ಥರು ಸಮಾ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜïಕುಮಾರ್ ಹಾಗೂ ಮಕ್ಕಳು ಪೂಜೆ ಸಲ್ಲಿಸಿದರು ರಾಘಣ್ಣ, ಶಿವಣ್ಣ ಸೇರಿದಂತೆ ಕುಟಂಬಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಳೆದ 1 ತಿಂಗಳಿನಿಂದ ಅಪ್ಪು ಸಮಾ ನಿರ್ಮಾಣ ಕೆಲಸ ನಡೆಯುತ್ತಿತ್ತು. ರಾಜ್ ಕುಮಾರ್ ಸ್ಮಾರಕದ ರೀತಿಯಲ್ಲೇ ಅಪ್ಪು ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಅಪ್ಪು 2ನೇ ವರ್ಷದ ಪುಣ್ಯ ಸ್ಮರಣೆಯನ್ನು ಸಾರ್ಥಕವಾಗಿ ಆಚರಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಬೆಳಗ್ಗೆಯಿಂದ ರಾತ್ರಿವರೆಗೂ ಸ್ಮಾರಕದ ಬಳಿ ನಿರಂತರ ಅನ್ನದಾನ ಇರಲಿದೆ. ಅಪ್ಪು ನೆನಪಲ್ಲಿ ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ಶಿಬಿರ ಕೂಡ ಆಯೋಜಿಸಲಾಗಿದೆ.