Thursday, November 6, 2025
Home Blog Page 1855

ಬೈಡನ್ ನಿವಾಸದ ಮೇಲೆ ಹಾರಾಡಿದ ವಿಮಾನ

ವಾಷಿಂಗ್‍ಟನ್,ಅ.29- ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ತಂಗಿದ್ದ ಡೆಲವೇರ್ ನಿವಾಸದ ಬಳಿ ನಾಗರೀಕ ವಿಮಾನ ಹಾರಾಟ ನಡೆಸಿ ಆತಂಕಹುಟ್ಟಿಸಿದ ಘಟನೆ ನಡೆದಿದೆ. ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿ ಭದ್ರತ ಲೋಪ ಉಂಟಾಗಿದೆ. ಎಚ್ಚೆತ್ತ ಅಮೆರಿಕದ ಯುದ್ಧ ವಿಮಾನಗಳು ತಕ್ಷಣವೇ ಮುನ್ನೆಚ್ಚರಿಕೆ ವಹಿಸಿ ವಿಮಾನವನ್ನು ಹತ್ತಿರದ ವಿಮಾನ ನಿಲ್ಧಾಣದಲ್ಲಿ ಕೆಳಗಿಳಿಸಿದೆ,

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿಲ್ಮಿಂಗ್ಟನ್‍ನ ಉತ್ತರಕ್ಕೆ ನಾಗರಿಕ ವಿಮಾನವೊಂದು ನಿರ್ಬಂಧಿತ ವಾಯುಪ್ರದೇಶವನ್ನು ಪ್ರವೇಶಿಸಿತು ಅಧ್ಯಕ್ಷರು ವಿಲ್ಮಿಂಗ್ಟನ್‍ನಲ್ಲಿರುವ ಅವರ ಮನೆಯಲ್ಲೇ ಇದ್ದರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ರಹಸ್ಯ ಸೇವೆ ಮತ್ತು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್‍ನ ಏಜೆಂಟ್‍ಗಳು ಈ ಘಟನೆ ಬಗ್ಗೆ ತನಿಖೆ ಆರಂಭಿಸಿದ್ದಾರೆ. ವಿಮಾನ ಪೈಲೆಟ್‍ನನ್ನು ಬಂಸಲಾಗಿದೆ ವಿಮಾನಯಾನ ಕಂಪನಿ ಮೇಲೂ ಪ್ರಕರಣ ದಾಖಲಿಸಲಾಗಿದೆ.

ನಗುಮುಖದ`ಅರಸ’ನ 2ನೇ ಪುಣ್ಯಸ್ಮರಣೆಗೆ ಹರಿದು ಬಂದ ಅಭಿಮಾನಿ ಸಾಗರ

ಬೆಂಗಳೂರು, ಅ.29- ಕನ್ನಡಿಗರ ಅಚ್ಚುಮೆಚ್ಚಿನ ಸುಪುತ್ರ, ಕರ್ನಾಟಕ ರತ್ನ ಪುನಿತ್ ರಾಜಕುಮಾರ್ ನಮ್ಮನ್ನೆಲ್ಲ ಆಗಲಿ ಇಂದಿಗೆ ಎರಡು ವರ್ಷ ಕಳೆದೇ ಹೋಯಿತು. ಆದರೆ ಅವರ ನೆನಪುಗಳು ಪ್ರತಿಯೊಬ್ಬರ ಮನಗಳಲ್ಲಿ ಅಚ್ಚಳಿಯದೆ ಹಾಗೆ ಉಳಿದುಕೊಂಡಿವೆ. ಎರಡು ವರ್ಷಗಳ ಹಿಂದೆ ಇದೇ ತಿಂಗಳು ಇದೇ ದಿನ ಅಚಾನಕ್ಕಾಗಿ ಯಾರಿಗೂ ಹೇಳದೆ ಬಾರದ ಲೋಕಕ್ಕೆ ಪಯಣ ಬೆಳೆಸಿದ ರಾಜಕುಮಾರನಿಗೆ ಮಿಡಿದ ಹೃದಯಗಳು ಅಗಣಿತ.

ತಮ್ಮ ಮನೆಯಲ್ಲಿ ಒಬ್ಬ ಸದಸ್ಯರನ್ನು ಕಳೆದುಕೊಂಡಿದ್ದಕ್ಕಿಂತ ಹೆಚ್ಚು ಶೋಕವನ್ನು ವ್ಯಕ್ತಪಡಿಸಿದರು. ಯಾರೇ ಒಬ್ಬ ಗಣ್ಯ ವ್ಯಕ್ತಿ ಇಹಲೋಕ ತ್ಯಜಿಸಿದಾಗ ಒಂದು ಅಥವಾ ಎರಡು ಮೂರು ತಿಂಗಳೊಳಗೆ ಜನ ಮರೆತು ಹೋಗುತ್ತಾರೆ ಆದರೆ ಅಪ್ಪು ವಿಷಯದಲ್ಲಿ ಹಾಗಾಗಲಿಲ್ಲ. ಎರಡು ವರ್ಷ ಕಳೆದರೂ ಮರೆಯಲು ಇಷ್ಟಪಡದ ಅಭಿಮಾನಿಗಳು, ಪ್ರತಿದಿನ ಪ್ರತಿಕ್ಷಣ ನೆನೆಯುತ್ತಾ ದೊಡ್ಮನೆ ಹುಡುಗನಿಗೆ ಈ ರೀತಿಯ ಸಾವು ನ್ಯಾಯವಲ್ಲ ಎಂದು ಇಂದಿಗೂ ದೇವರನ್ನು ಜನ ಶಪಿಸುತ್ತಾರೆ. ಕೆಲ ಅಭಿಮಾನಿಗಳಂತೂ ಜೊತೆಯಲ್ಲಿಯೇ ಪಯಣ ಬೆಳೆಸಿದ್ದು ಉಂಟು.

ಅಪ್ಪು ಈಗ ಕೇವಲ ಮಾನವನಲ್ಲ ದೇವಮಾನವ. ಲಕ್ಷಾಂತರ ದೇವರ ಮನೆಗಳಲ್ಲಿ ಪರಮಾತ್ಮನಾಗಿದ್ದಾನೆ. ತನಗಾಗಿ ಗುಡಿ ಗೋಪುರ ಕಟ್ಟಿಸಿಕೊಂಡಿದ್ದಾನೆ. ಪ್ರತಿಯೊಂದು ಊರು, ಬೀದಿ, ಜಾತ್ರೆಗಳಲ್ಲಿ ಕಟೌಟ್‍ಗಳ ಮೂಲಕ ರಾರಾಜಿಸುತ್ತಿದ್ದಾರೆ. ಕೆಲವು ಜಾತ್ರೆ ತೇರುಗಳಲ್ಲಿ ದೇವರೊಂದಿಗೆ ಅಪ್ಪು ಪೋಟೋ ಇಟ್ಟು ಪೂಜಿಸಿದ್ದು ಉಂಟು. ಅಷ್ಟರಮಟ್ಟಿಗೆ ಪುನೀತ್ ರಾಜಕುಮಾರ ಅಜರಾಮರವಾಗಿ ಕನ್ನಡಿಗರು ಎದೆಯಲ್ಲಿ ಹಾರದ ಜ್ಯೋತಿಯಾಗಿ ಮಿನುಗುತ್ತಿದ್ದಾರೆ.

ಬೆಂಗಳೂರು ನಗರ ಅಷ್ಟೇ ಅಲ್ಲದೆ ಪ್ರತಿಯೊಂದು ಊರು ಗಲ್ಲಿಗಳಲ್ಲಿ ಇಂದು ಅಪ್ಪು ಸ್ಮರಣೆ ನಡೆಯುತ್ತಿದೆ. ಅಭಿಮಾನಿಗಳು ಅನ್ನಸಂತರ್ಪಣೆ ಜೊತೆಗೆ ಬ್ಲಡ್ ಡೊನೇಷನ್ ಕ್ಯಾಂಪ, ಉಚಿತ ಆರೋಗ್ಯ ತಪಾಸಣಾ ಶಿಬಿರಗಳು, ಬಡ ಶಾಲಾ ಮಕ್ಕಳಿಗೆ ಆರ್ಥಿಕ ನೆರವು, ಪುಸ್ತಕಗಳ ವಿತರಣೆ ಯಂತಹ ನೂರಾರು ಸಮಾಜಸೇವಾ ಕಾರ್ಯಗಳು ಪುನೀತ್ ಅವರ ಹೆಸರಿನಲ್ಲಿ ನಡೆಯುತ್ತಿವೆ.

ಪುನೀತ್ ರಾಜಕುಮಾರ್ ಬದುಕಿದ್ದಾಗ ಸಮಾಜಕ್ಕಾಗಿ ಅವರ ಜೀವ ಸದಾ ಮಿಡಿಯುತ್ತಿತ್ತು. ಅದು ಅಂದು ಯಾರಿಗೂ ಗೊತ್ತಾಗಿರಲಿಲ್ಲ. ಸ್ವಂತ ಮನೆಯವರಿಗೂ ಹೇಳಿಕೊಂಡಿರಲಿಲ್ಲ ಅಂದರೆ ಒಂದು ಕೈಯಲ್ಲಿ ಕೊಟ್ಟಿದ್ದು ಮತ್ತೊಂದು ಕೈಗೆ ಗೊತ್ತಾಗಬಾರದು ಎಂದು ನಂಬಿದವರು. ಕೊನೆಯವರೆಗೂ ಹಾಗೆಯೇ ಬದುಕಿದ್ದರು. ಅವರು ಮಾಡಿದ ದಾನ ಧರ್ಮಕ್ಕೆ ಇಡೀ ಭಾರತ ಶಿರಭಾಗಿ ನಮಿಸಿತ್ತು.

ಅಪ್ಪು ಅಭಿನಯದ ಕೊನೆಯ ಚಿತ್ರ ಗಂಧದಗುಡಿಯಲ್ಲೂ, ಸಾಮಾಜಿಕ ಚಿಂತನೆ ಮೆರೆದಿದ್ದಾರೆ. ಗಿಡ ಬೆಳೆಸಿ ಕಾಡನ್ನು ಉಳಿಸಿ ಮುಂದಿನ ಪೀಳಿಗೆ ಸುಖವಾಗಿ ಬದುಕಲು ವನ್ಯ ಸಂಪತ್ತು ಮುಖ್ಯ. ನಾವೆಲ್ಲರೂ ಕೈಜೋಡಿಸಬೇಕು. ಪ್ರಕೃತಿಯೊಂದಿಗೆ ಕಾಲ ಕಳೆದಾಗ ನಮ್ಮನ್ನು ನಾವು ಒರೆತುಕೊಳ್ಳಬಹುದು ಎಂಬ ಮಹತ್ತರ ಸಂದೇಶವನ್ನು ನಮ್ಮನ್ನ ಅಗಲಿ ಹೋಗುವಾಗ ಸಾರಿದ್ದಾರೆ. ಈಗ ಅಭಿಮಾನಿಗಳು ಅಪ್ಪು ಹೇಳಿದಂತೆ ಗಿಡಗಳನ್ನು ಹಂಚುವ ಕಾರ್ಯದಲ್ಲಿ ತೊಡಗುತ್ತಾ ನೀಡುವ ಪ್ರಕ್ರಿಯೆಯನ್ನು ಶುರುಮಾಡಿಕೊಂಡಿದ್ದಾರೆ.

ಯುವರತ್ನನ ಅಗಲಿಕೆ, ಇರುವ ತನಕ ಸಂತೋಷದಿಂದ, ಸಾಮರಸ್ಯದಿಂದ ಬದುಕಿ, ಅಭಲರಿಗೆ ನೆರವಾಗುತ್ತಾ ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಬೇಕು ಎಂಬ ದೊಡ್ಡ ಪಾಠ ಕಲಿಸಿದೆ. ಈಗ ಎಲ್ಲಾ ಕಡೆ ಅಪ್ಪು ಅಂತಹ ದೊಡ್ಡ ಮನುಷ್ಯನೇ ಎಲ್ಲವನ್ನು ಬಿಟ್ಟು ಹೋದ ನಾವು ಅವರ ದೂಳು ಸಮಾನ, ಯಾವಾಗ ಬೇಕಾದರೂ ಉಸಿರು ನಿಲ್ಲಬಹುದು, ಜೀವನನ ನಶ್ವರ ಎಂದು ಹೇಳುತ್ತಾ ತಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಂಡಿದ್ದಾರೆ.

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.. 2ನೇ ವರ್ಷದ ಪುಣ್ಯಸ್ಮರಣೆಗೆ ಅಪ್ಪು ಸಮಾ ನಿರ್ಮಾಣ ಮಾಡಲಾಗಿದೆ. ರಾಜ್ ಕುಟುಂಬಸ್ಥರು ಸಮಾ ನಿರ್ಮಿಸಿದ್ದು ಸ್ಮಾರಕ ನಿರ್ಮಾಣ ಕೆಲಸ ನಡೆದಿದೆ.

ಪುನೀತ್ ರಾಜ್ ಕುಮಾರ್ ಸ್ಮಾರಕವನ್ನು ಬಿಳಿ ಮಾರ್ಬಲ್ಸïನಲ್ಲಿ ನಿರ್ಮಾಣ ಮಾಡಲಾಗಿದೆ. ಸ್ಮಾರಕದ ಮೇಲೆ ಪುನೀತ್ ರಾಜ್ ಕುರ್ಮಾ ಫೋಟೋ ಕೂಡ ಇದೆ. ಸ್ಮಾರಕದ ಸುತ್ತಲ್ಲೂ ಸಾದೇನಹಳ್ಳಿ ಕಲ್ಲಿನ ಚಪ್ಪಡಿ ಹೊದಿಸಲಾಗಿದೆ. ಅಣ್ಣಾವ್ರ ಸ್ಮಾರಕದ ರೀತಿಯಲ್ಲೇ ಪುನೀತ್ ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಪುನೀತ್ ಅಗಲಿಕೆಯ ನೋವು ಇನ್ನು ಕುಟುಂಬಸ್ಥರನ್ನು ಕಾಡುತ್ತಿದೆ. ಬೆಳಗ್ಗೆ 9 ಗಂಟೆಗೆ ಪುನೀತ್ ರಾಜïಕುಮಾರ್ ಕುಟುಂಸ್ಥರು ಸಮಾ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜïಕುಮಾರ್ ಹಾಗೂ ಮಕ್ಕಳು ಪೂಜೆ ಸಲ್ಲಿಸಿದರು ರಾಘಣ್ಣ, ಶಿವಣ್ಣ ಸೇರಿದಂತೆ ಕುಟಂಬಸ್ಥರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಳೆದ 1 ತಿಂಗಳಿನಿಂದ ಅಪ್ಪು ಸಮಾ ನಿರ್ಮಾಣ ಕೆಲಸ ನಡೆಯುತ್ತಿತ್ತು. ರಾಜ್ ಕುಮಾರ್ ಸ್ಮಾರಕದ ರೀತಿಯಲ್ಲೇ ಅಪ್ಪು ಸ್ಮಾರಕ ನಿರ್ಮಾಣ ಮಾಡಲಾಗಿದೆ.

ಅಪ್ಪು 2ನೇ ವರ್ಷದ ಪುಣ್ಯ ಸ್ಮರಣೆಯನ್ನು ಸಾರ್ಥಕವಾಗಿ ಆಚರಿಸಲು ಅಭಿಮಾನಿಗಳು ಮುಂದಾಗಿದ್ದಾರೆ. ಬೆಳಗ್ಗೆಯಿಂದ ರಾತ್ರಿವರೆಗೂ ಸ್ಮಾರಕದ ಬಳಿ ನಿರಂತರ ಅನ್ನದಾನ ಇರಲಿದೆ. ಅಪ್ಪು ನೆನಪಲ್ಲಿ ಅಭಿಮಾನಿಗಳಿಂದ ರಕ್ತದಾನ, ನೇತ್ರದಾನ ಶಿಬಿರ ಕೂಡ ಆಯೋಜಿಸಲಾಗಿದೆ.

ಖರ್ಗೆ ತವರಲ್ಲೇ ಪರೀಕ್ಷಾ ಅಕ್ರಮ ನಡೆದದ್ದೇ ಹೇಗೆ..? : ಜೋಶಿ

ಹುಬ್ಬಳ್ಳಿ,ಅ.29- ನಮ್ಮ ಸರ್ಕಾರದಲ್ಲಿ ಪಿಎಸ್‍ಐ ಹಗರಣ ಹೊರಬಂತು. ನಾವು ಐಜಿ ಅವರನ್ನೆ ಜೈಲಿಗೆ ಕಳುಹಿಸಿದೆವು. ಪರೀಕ್ಷೆಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಾಕಷ್ಟು ತಂತ್ರಜ್ಞಾನ ಬಂದಿದೆ. ಆದರೆ, ಯಾಕೆ ಹೀಗೆ ಆಯಿತು. ಅದು ಮಲ್ಲಿಕಾರ್ಜುನ ಖರ್ಗೆ ಅವರ ಜಿಲ್ಲೆಯಲ್ಲಿಯೇ ಯಾಕೆ ಈ ಸ್ಕ್ಯಾಮ್ ಆಗುತ್ತಿದೆ ಎಂದು ಗೊತ್ತಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮಗಳು ಕಲಬುರಗಿಯಲ್ಲೇ ಯಾಕೆ ಆಗುತ್ತಿದೆ ಎಂಬುವುದನ್ನು ತಿಳಸಬೇಕು ಎಂದರು. ಕಾಂಗ್ರೆಸ್ ಪಾರ್ಟಿ ಗೊಂದಲದಿಂದ ರಾಜ್ಯದ ಜನ ಅಂತಂತ್ರ ವಾಗಿದ್ದಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ . ಇನ್ನೂ ಎರಡು ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಟಿದ್ದಾರೆ. ಉಪ ಮುಖ್ಯಮಂತ್ರಿ ಶಿವಕುಮಾರ್ ಬಿಟ್ಟು ಸಭೆ ಮಾಡುವ ಸ್ಥಿತಿಗೆ ಸಿದ್ದರಾಮಯ್ಯ ತಲುಪಿದ್ದಾರೆ. ಇದು ರಾಜಕೀಯ ಹೈಡ್ರಾಮಾ ಕಾಂಗ್ರೆಸಿನಲ್ಲಿ ನಿತ್ಯ ಭಿನ್ನಮತ ಹೆಚ್ಚಾಗುತ್ತಿದೆ ಅಧಿಕಾರಕ್ಕಾಗಿ ಒಳ ಜಗಳ ನಡೆಯುತ್ತಿದ್ದು ಇದನ್ನು ಡೈವರ್ಟ್ ಮಾಡಲು ಹುಲಿ ಉಗುರು ಪೆಂಡೆಂಟ್ ವಿಚಾರ ತಂದಿದ್ದಾರೆ ಎಂದು ಟಾಂಗ್ ನೀಡಿದರು.

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರನ್ನು ಒಟ್ಟಾಗಿ ಹಿಡಿದಿಟ್ಟುಕೊಳ್ಳುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾವಾಗಿದೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಜಗಳ ತಾರಕ್ಕೇರಿದೆ ಇದನ್ನು ಡೈವರ್ಟ್ ಮಾಡಲು ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.

ಈ ಸರ್ಕಾರವನ್ನು ತೆಗೆಯಲು ಬಿಜೆಪಿ ಯಾವುದೇ ಚಿಂತನೆ ಮಾಡಿಲ್ಲ. ಜನ ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟಿದ್ದಾರೆ ಐದು ವರ್ಷ ನಡೆಸಲಿ. ಆದರೆ, ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಾಲಿಶ ಹೇಳಿಕೆ ನೀಡೋದು ಬಿಡಬೇಕು. ಐದಾರು ಸ್ಥಾನಗಳು ಕಡಿಮೆ ಇದ್ದರೆ ಸರ್ಕಾರ ರಚನೆ ಬಗ್ಗೆ ಯೋಚನೆ ಮಾಡಬಹುದು. ಆದ್ರೆ 70 ಶಾಸಕರನ್ನು ಕರೆದುಕೊಂಡು ಯಾರು ಸರ್ಕಾರ ರಚನೆ ಮಾಡಲು ಯೋಚನೆ ಮಾಡುತ್ತಿದ್ದಾರೆ.

ಇದು ಸಾಧ್ಯನಾ ಎಂದ ಅವರು ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಪ್ರಾಮುಖ್ಯತೆ ಕಡಿಮೆ ಮಾಡಲು ಸಿದ್ದರಾಮಯ್ಯ ಡ್ರಾಮಾ ನಡೆಸಿದ್ದಾರೆ. ಇನ್ನೂ ಎರಡುವರೆ ವರ್ಷಕ್ಕೆ ಮತ್ತು ಲೋಕಸಭಾ ಚುನಾವಣೆಗೆ ಬಳಿ ಉಪ ಮುಖ್ಯಮಂತ್ರಿ ಡಿಕೆಶಿಗೆ ಅಕಾರ ಬಿಟ್ಟುಕೊಡಬೇಕು ಅಂತ ಸಿದ್ದರಾಮಯ್ಯ ಈ ನಾಟಕ ನಡೆಸಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಭಿಮಾನ ಕರ್ನಾಟಕ ಅಂತ ಮಾತನಾಡುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ರಾಜ್ಯದ ಪರವಾಗಿ ಯಾವುದೇ ಸಹಕಾರ ನೀಡುತ್ತಿಲ್ಲ . ಕೇಂದ್ರ ಜಲ ಸಂಪನ್ಮೂಲಗಳ ವಿಚಾರದಲ್ಲಿ ಅವರು ಸಹಕಾರ ಕೊಟ್ಟಿಲ್ಲ ಇದನ್ನು ಅವರು ಎದೆ ಮುಟ್ಟಿಕೊಂಡು ಹೇಳಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸ್ಪಷ್ಟನೆ ಕೇಳಿದರು.

ಕುಚ್ವಿತ ಬುದ್ಧಿ ಇರಬಾರದು:
ಮಾಜಿ ಸಿಎಂ ಬೊಮ್ಮಾಯಿ ಅನಾರೋಗ್ಯದ ಬಗ್ಗೆ ಶಾಸಕ ಎನ್ ಎಚ್ ಕೋನರೆಡ್ಡಿ ಅಪಹಾಸ್ಯ ವಿಚಾರ ಕುರಿತು ಸಹ ಪ್ರತಿಕ್ರಿಯೆ ನೀಡಿದ ಅವರು, ಅನಾರೋಗ್ಯ ಮತ್ತು ಸಾವಿನ ವಿಚಾರದಲ್ಲಿ ವ್ಯಕ್ತಿ ಯಾರೇ ಇರಲಿ ಈ ರೀತಿಯಾಗಿ ಕೆಳಮಟ್ಟದಲ್ಲಿ ಮಾತನಾಡ ಬಾರದು. ಈ ರೀತಿಯ ಕುಚ್ವಿತ ಬುದ್ದಿ ಮಾಡಬಾರದು. ಇದು ಅವರ ಸಂಸ್ಕೃತಿ ಸಂಸ್ಕಾರವನ್ನು ತೋರಿಸುತ್ತದೆ. ರಾಜಕಾರಣಿಗಳು ಆಗಿದ್ದರು ನಾವು ಮನುಷ್ಯರು ಇದನ್ನು ನೆನಪಿಟ್ಟುಕೊಳ್ಳಬೇಕು. ಜನ ನಮ್ಮನ್ನು ನೋಡುತ್ತಿರುತ್ತಾರೆ ಎಂದರು.

ರೋಹಿತ್, ಕೊಹ್ಲಿ ವಿಶ್ವಶ್ರೇಷ್ಠ ಆಟಗಾರರು : ಬಾಬರ್ ಆಝಮ್

ಬೆಂಗಳೂರು, ಅ.29- ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಆಟಗಾರರು ಎಂದು ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಝಮ್ ಮುಕ್ತಕಂಠದಿಂದ ಗುಣಗಾನ ಮಾಡಿದ್ದಾರೆ.

ಸ್ಟಾರ್ ಸ್ಪೋಟ್ರ್ಸ್‍ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಲಗೈ ಬ್ಯಾಟರ್ ಗೆ ವಿಶ್ವದ ನಿಮ್ಮ ಅತ್ಯುತ್ತಮ ಕ್ರಿಕೆಟಿಗರ ಹೆಸರನ್ನು ತಿಳಿಸಿ ಎಂದು ಕೇಳಿದಾಗ, ಬಾಬರ್ ಆಝಮ್, ರೋಹಿತ್ ಶರ್ಮಾ , ವಿರಾಟ್ ಕೊಹ್ಲಿ ಹಾಗೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸ್ ಅವರ ಹೆಸರನ್ನು ತೆಗೆದುಕೊಂಡಿದ್ದಾರೆ.

ನಾನು ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಕೇನ್ ವಿಲಿಯಮ್ಸ್ ಅವರ ಹೆಸರ ತೆಗೆದುಕೊಳ್ಳಲು ಬಯಸುತ್ತೇನೆ. ಏಕೆಂದರೆ ನಾನು ಅವರ ಆಟವನ್ನು ಅನುಕರಿಸುತ್ತೇನೆ. ಅವರು ವಿಶ್ವದ ಅತ್ಯಂತ ಪರಿಣಾಮಕಾರಿ ಆಟಗಾರರಾಗಿದ್ದಾರೆ. ಅಲ್ಲದೆ ವಿಶ್ವದ ಅತಿ ಶ್ರೇಷ್ಠ ಬ್ಯಾಟರ್ಸ್‍ಗಳಾಗಿದ್ದಾರೆ. ಅವರು ಪಂದ್ಯದ ಸಂಕಷ್ಟದ ಪರಿಸ್ಥಿತಿಯನ್ನು ತುಂಬಾ ಸೂಕ್ಷ್ಮವಾಗಿ ಅದರಿಂದ ಹೇಗೆ ಹೊರಬರಬೇಕೆಂಬುದನ್ನು ತುಂಬಾ ಚೆನ್ನಾಗಿ ಅರಿತುಕೊಂಡಿದ್ದಾರೆ. ಆದ್ದರಿಂದಲೇ ಅವರು ವಿಶ್ವದ ಉತ್ತಮ ಆಟಗಾರರಾಗಿದ್ದಾರೆ' ಎಂದು ಬಾಬರ್ ಆಝಮ್ ಹೇಳಿದ್ದಾರೆ.

ವಿದ್ಯುತ್ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ : ಕೇಂದ್ರ

ಅವರ ಬ್ಯಾಟಿಂಗ್ ಶೈಲಿಯನ್ನು ನೋಡಲು ತುಂಬಾ ಸಂತೋಷವಾಗುತ್ತದೆ. ಅಲ್ಲದೆ ಅವರು ತಂಡವು ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದ್ದಾಗ ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದಿಂದ ತಂಡವನ್ನು ಪಾರು ಮಾಡುವ ಗುಣವು ನನಗೆ ತುಂಬಾ ಇಷ್ಟವಾಗಿದೆ’ ಎಂದು ಪಾಕ್ ನಾಯಕ ತಿಳಿಸಿದ್ದಾರೆ.

`ಪಂದ್ಯದಲ್ಲಿ ಬೌಲರ್‍ಗಳು ಉತ್ತಮ ಬೌಲಿಂಗ್ ಪ್ರದರ್ಶನ ತೋರುತ್ತಿರುವ ಸಂದರ್ಭದಲ್ಲಿ ಒಬ್ಬ ಬ್ಯಾಟ್ಸ್‍ಮನ್‍ಗೆ ರನ್ ಗಳಿಸಲು ತುಂಬಾ ಕಷ್ಟದ ಸಂಗತಿಯಾಗಿರುತ್ತದೆ. ಆದರೆ ಅವರು (ರೋಹಿತ್, ಕೊಹ್ಲಿ ಹಾಗೂ ಕೇನ್ ವಿಲಿಯಮ್ಸನ್) ಇಂತಹ ಸಂದರ್ಭದಲ್ಲಿ ತಮ್ಮ ನೈಜ ಆಟದಿಂದ ಪಾರು ಮಾಡುವ ರೀತಿಯು ನನಗೆ ತುಂಬಾ ಇಷ್ಟವಾಗಿದೆ. ಆದ್ದರಿಂದಲೇ ಅವರು ನನ್ನ ಪ್ರಕಾರ ವಿಶ್ವದ ಅತ್ಯುತ್ತಮ ಆಟಗಾರರಾಗಿದ್ದಾರೆ’ ಎಂದು ಬಾಬರ್ ಆಝಮ್ ಹೇಳಿದ್ದಾರೆ.

ಭಾರತಕ್ಕೆ ಮೊದಲ ಬ್ಯಾಟಿಂಗ್ ಚಾಲೆಂಜಿಂಗ್ : ರೋಹಿತ್

ಲಕ್ನೋ, ಅ.29- ಸೆಮಿಫೈನಲ್ ರೇಸ್‍ನಿಂದ ಹೊರಬಿದ್ದಿರುವ ಇಂಗ್ಲೆಂಡ್ ಹಾಗೂ ಪಾಯಿಂಟ್ಸ್ ಟೇಬಲ್‍ನಲ್ಲಿ 2ನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಪರಸ್ಪರ ಕಾದಾಟ ನಡೆಸುತ್ತಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ನಾವು ಈ ಪಂದ್ಯವನ್ನು ಗೆಲ್ಲಲು ನಮ್ಮಿಂದ ಆಗುವ ಎಲ್ಲ ನ್ಯಾಯವನ್ನು ಸಲ್ಲಿಸುತ್ತೇವೆ. ಕ್ರೀಡಾಂಗಣದಲ್ಲಿ ಪೂರ್ಣ ಪ್ರಮಾಣದ ಪ್ರೇಕ್ಷಕರ ಎದುರು ಆಡುವುದು ನಿಜಕ್ಕೂ ಸಂತಸಕರ ಸಂಗತಿಯಾಗಿದೆ. ಈ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಆಸ್ಟ್ರೇಲಿಯಾ ವಿರುದ್ಧ ಆಡಿದ ಪ್ಲೇಯಿಂಗ್ 11ನೊಂದಿಗೆ ಅಖಾಡಕ್ಕೆ ಇಳಿಯುತ್ತಿದ್ದೇವೆ' ಎಂದು ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಟಾಸ್ ಸಂದರ್ಭದಲ್ಲಿ ಹೇಳಿದ್ದಾರೆ. ನಮಗೆ 2 ಅಂಕ ತುಂಬಾ ಮುಖ್ಯ: ರೋಹಿತ್ ಶರ್ಮಾ ನಾವು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದೆವೆ.

ಕೇರಳ ಬ್ಲಾಸ್ಟ್ : ರಾಜ್ಯದಲ್ಲೂ ಕಟ್ಟೆಚ್ಚರವಹಿಸಲು ಪೊಲೀಸರಿಗೆ ಪರಮೇಶ್ವರ್ ಸೂಚನೆ

ನಾವು ಇದುವರೆಗೂ ಆಡಿದ ಎಲ್ಲ ಪಂದ್ಯಗಳಲ್ಲೂ ಚೇಸಿಂಗ್ ವೇಳೆಯೇ ಗೆಲುವು ಸಾಧಿಸಿದ್ದೇವೆ. ಇದೊಂದು ಹೊಸ ಪಂದ್ಯವಾಗಿದ್ದು , ನಮ್ಮ ಸಾಮಥ್ರ್ಯವನ್ನು ತೋರಿಸುವುದು ಮುಖ್ಯ ಆಗುತ್ತದೆ. ಆದ್ದರಿಂದ ನಾವು ಎರಡನೇ ಅವಧಿಯಲ್ಲಿ ಬ್ಯಾಟಿಂಗ್ ಮಾಡುತ್ತಿಲ್ಲ ಎಂಬುದು ಮುಖ್ಯ ಆಗುವುದಿಲ್ಲ.

ಪಂದ್ಯ ಗೆದ್ದು 2 ಅಂಕಗಳನ್ನು ಸಂಪಾದನೆ ಮಾಡುವುದು ನಮ್ಮ ಮುಖ್ಯ ಗುರಿಯಾಗಿದೆ. ಅದಕ್ಕಾಗಿ ನಾವು ಉತ್ತಮ ಪ್ರದರ್ಶನ ತೋರಲು ಸಿದ್ಧವಾಗಿದ್ದೇವೆ. ನಾವು ಈಗ ನಿಂತಿರುವ ಜಾಗದಿಂದಲೇ ಉತ್ತಮ ಪ್ರದರ್ಶನ ತೋರಲು ಬಯಸುತ್ತೇವೆ. ಕಳೆದ ಪಂದ್ಯದಲ್ಲಿ ಇದ್ದ ಪ್ಲೇಯಿಂಗ್ 11ನೊಂದಿಗೆ ನಾವು ಇಂಗ್ಲೆಂಡ್ ತಂಡವನ್ನು ಎದುರಿಸುತ್ತಿದ್ದೇವೆ’ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

ಹಿಂದುಳಿದ ವರ್ಗ ಆಯೋಗದ ವರದಿ ಸ್ವೀಕರಿಸುತ್ತೇವೆ : ಸಿದ್ದರಾಮಯ್ಯ

ಬೆಂಗಳೂರು ಅ.29- ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವತಿಯಿಂದ ನಡೆಸಲಾಗಿರುವ ಸಮೀಕ್ಷಾ ವರದಿಯನ್ನು ಪಡೆದುಕೊಂಡು, ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಪ್ರೇರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ.

ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದಿದ್ದಾರೆ.

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು. ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಸಲು ಸಾಧ್ಯವಿಲ್ಲ ಎಂದರು.

ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಸಲಾಗಿತ್ತು. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ. ಅಂಬೇಡ್ಕರ್ ಅವರು ಶೂದ್ರ ಸಮುದಾಯ ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದರು. ಈ ಚರಿತ್ರೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಸಮುದಾಯದಿಂದ ಮೆಡಿಕಲ್ ಕಾಲೇಜು ಮಾಡಬೇಕು ಎನ್ನುವುದು ಅವೈಜ್ಞಾನಿಕ. ಮೆಡಿಕಲ್ ಕಾಲೇಜು ನಡೆಸುವುದು ದುಬಾರಿ ಆದ್ದರಿಂದ ಬಡವರು ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಸೀಟು ನೀಡಿ ನೆರವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ಯಾರಾ ಮೆಡಿಕಲ್ ಕಾಲೇಜುಗಳನ್ನು, ಹಾಸ್ಟೆಲ್ ಗಳನ್ನು ಮತ್ತು ಐಟಿಐ ಗಳನ್ನು ಸಮಾಜದಿಂದ ಆರಂಭಿಸಿದರೆ ಬಡವರು ಮತ್ತು ಗ್ರಾಮೀಣ ಮಕ್ಕಳಿಗೆ ನೆರವಾಗುತ್ತದೆ ಎಂದರು.

ನಾನು ಬಿಎಸ್ಸಿ ಓದುವಾಗ ಹೋಟೆಲ್‍ನಿಂದ ಸಾರು ತಂದು ರೂಮಲ್ಲಿ ಅನ್ನ ಮಾಡಿಕೊಂಡು ಊಟ ಮಾಡಬೇಕಿತ್ತು. ಇಂಥಾ ಸ್ಥಿತಿಯಲ್ಲಿ ಸಹಸ್ರಾರು ವಿದ್ಯಾರ್ಥಿಗಳು ಇರುವುದರಿಂದ ನಾನು ವಿದ್ಯಾಸಿರಿ ಕಾರ್ಯಕ್ರಮ ಜಾರಿಗೆ ತಂದೆ ಎಂದು ನುಡಿದರು.

ಹಿಂದೆ ಗ್ರಾಮೀಣ ಭಾಗಗಳಲ್ಲಿ ವೈದ್ಯ ಹುದ್ದೆಗಳು ಹೆಚ್ಚಿದ್ದು ವೈದ್ಯರ ಸಂಖ್ಯೆ ಕಡಿಮೆ ಇತ್ತು. ಈಗ ಪರಿಸ್ಥಿತಿ ಬದಲಾಗಿ ಖಾಲಿ ಹುದ್ದೆಗಳಿಗಿಂತ ವೈದ್ಯರ ಸಂಖ್ಯೆ ದುಪ್ಪಟ್ಟಾಗಿದೆ. ಆದ್ದರಿಂದ ಖಾಲಿವಿರುವ ಗ್ರಾಮೀಣ ವೈದ್ಯ ಹುದ್ದೆಗಳನ್ನಷ್ಟೆ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿ ನಿಯಮಾವಳಿಗೆ ತಿದ್ದುಪಡಿ ತರುವಂತಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ

ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳನ್ನು ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಸನ್ಮಾನಿಸಿ, ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ನಡೆಯಿತು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾಪೆರ್ರ್ಟರ್ ಬಿ.ಎನ್.ನಿತೀಶ್ ಪುರುಷೋತ್ತಮ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಪರೀಕ್ಷೆ ಅಕ್ರಮ : 22 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಯಾದಗಿರಿ/ಕಲಬುರಗಿ,ಅ.29-ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಯನ್ನು ಚುರುಕುಗೊಳಿಸಿರುವ ರಾಜ್ಯ ಪೊಲೀಸರು ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳನ್ನು ದಾಖಲಿಸಿ 22 ಜನರನ್ನು ವಶಕ್ಕೆ ಪಡೆದಿದ್ದಾರೆ.

ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲೆಯಲ್ಲಿ 5 ಪ್ರಕರಣಗಳನ್ನು ದಾಖಲಾಗಿದ್ದು, 9 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ, ವಿಚಾರಣೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ತಿಳಿಸಿದ್ದಾರೆ.

ನಗರದ ನ್ಯೂ ಕನ್ನಡ ಪಿಯು ಕಾಲೇಜ್, ಸಬಾ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್, ಎಲ್‍ಕೆಇಟಿ ಬಾಲಕೀಯರ ಪಿಯು ಕಾಲೇಜ್ ಹಾಗೂ ಮಹಾತ್ಮಗಾಂ ಪಿಯು ಕಾಲೇಜ್‍ಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಬ್ಲೂಟೂತ್ ಬಳಸಿರುವುದು ದೃಢಪಟ್ಟಿದೆ, ಈದೇ ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ 1 ಪ್ರಕರಣ ದಾಖಲಾಗಿದ್ದು, ಅಲ್ಲಿ 5 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಅವರ ಪತ್ತೆಗೆ ಬಲೆ ಬೀಸಲಾಗಿದೆ.

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಕಲಬುರಗಿ ನಗರ ವ್ಯಾಪ್ತಿಯಲ್ಲಿ 2 ಪ್ರಕರಣ ದಾಖಲಾಗಿದ್ದು, 5 ಜನರನ್ನು ವಶಕ್ಕೆ ಪಡೆಯಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಈ ಸಂಜೆಗೆ ತಿಳಿಸಿದ್ದಾರೆ. ಶನಿವಾರ ನಡೆದ ಪರೀಕ್ಷಾ ಕೇಂದ್ರಗಳಲ್ಲಿ ಜಿಲ್ಲಾಡಳಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳನ್ನು ಪರಿಶೀಲನೆ ಮಾಡುವ ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಿಲ್ಲ, ಪರಿಣಾಮ ಅಕ್ರಮಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಅಕ್ರಮದ ಪ್ರಮುಖ ಆರೋಪಿ ಪುಟ್ಟು ಎಂದು ಹೇಳಲಾಗುತ್ತಿದ್ದು, ಈತನ ಜೊತೆ ಕಲಬುರಗಿ ಜಿಲ್ಲೆಯ ಅಫಜಲ್ಪುರ ತಾಲೂಕಿನ ಸೊನ್ನ ಗ್ರಾಮದ ಒಬ್ಬ ಸಾಥ್ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಬ್ಲೂಟೂತ್ ಉಪಕರಣ ಬಳಕೆ, 9 ಜನ ಬಂಧನ:
ಈ ಹಿಂದೆ ರಾಜ್ಯದಲ್ಲಿ ನಡೆದ 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಮೊದಲು ಬೆಳಕಿಗೆ ಬಂದಿದ್ದೇ ಕಲಬುರಗಿಯಲ್ಲಿ. ಈ ಪ್ರಕರಣ ಮಾಸುವ ಮುನ್ನವೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ ಎಫ್‍ಡಿಎ ಹುದ್ದೆಗಳಿಗಾಗಿ ಶನಿವಾರ ನಡೆದ ಪ್ರವೇಶ ಪರೀಕ್ಷೆಯಲ್ಲಿ 3 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಅತ್ಯಾಧುನಿಕ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ 22 ಜನರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ಕೇರಳದಲ್ಲಿ ಬಾಂಬ್ ಸ್ಪೋಟದ ದೇಶದಾದ್ಯಂತ ಹೈಅಲರ್ಟ್

ನವದೆಹಲಿ, ಅ.29- ಕೇರಳದಲ್ಲಿ ಬಾಂಬ್ ಸ್ಪೋಟ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಕೇರಳದ ಎರ್ನಾಕುಲಂನಲ್ಲಿರುವ ಕಲಮಸರಿಯಲ್ಲಿರುವ ಬೃಹತ್ ಸಮಾವೇಶ ಭವನದಲ್ಲಿ ಬಾಂಬ್ ಸ್ಪೋಟಗೊಂಡು ಒಬ್ಬ ಮಹಿಳೆ ಮೃತಪಟ್ಟಿದ್ದು, 36 ಮಂದಿ ಗಾಯಗೊಂಡಿದ್ದಾರೆ.

ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ

ಧಾರ್ಮಿಕ ಸಮಾವೇಶದ ಮೇಲೆ ನಡೆದಿರುವ ವ್ಯವಸ್ಥಿತ ದಾಳಿಯ ಹೊಣೆಯನ್ನು ಈವೆರೆಗೂ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ. ಅಂತರಾಷ್ಟ್ರೀಯ ವಿದ್ಯಮಾನಗಳಲ್ಲಿ ಹಮಾಸ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ನಡೆಯುತ್ತಿದೆ. ಇದರ ಹಿನ್ನೆಲೆಯಲ್ಲಿ ದಾಳಿಗಳಾಗುವ ಅಂದಾಜಿದ್ದು, ಕಾಕತಾಳೀಯ ಎಂಬಂತೆ ಕೇರಳದಲ್ಲಿ ಬಾಂಬ್ ಸ್ಪೋಟವಾಗಿದೆ. ಅದರ ಬೆನ್ನಲೇ ದೇಶಾದ್ಯಂತ ಸೂಕ್ಷ್ಮ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ.

ರಾಜ್ಯ ಪೊಲೀಸ್ ಘಟಕಗಳಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ತಾಕೀತು ಮಾಡಿದೆ. ಪಂಚರಾಜ್ಯಗಳ ಚುನಾವಣೆ ನಡೆಯುತ್ತಿದ್ದು, ಪ್ರಚಾರ ಕಾರ್ಯಕ್ರಮಗಳಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಕೇರಳ ಬ್ಲಾಸ್ಟ್ : ರಾಜ್ಯದಲ್ಲೂ ಕಟ್ಟೆಚ್ಚರವಹಿಸಲು ಪೊಲೀಸರಿಗೆ ಪರಮೇಶ್ವರ್ ಸೂಚನೆ

ಮಂಗಳೂರು ಅ.29- ಕೇರಳದ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರು ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಈಗಾಗಲೇ ಕ್ರಮವಹಿಸಲಾಗಿದೆ.

ಮಡಿಕೇರಿ, ಮೈಸೂರು, ಮಂಗಳೂರು ದಸರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿತ್ತು. ಮುಂದುವರೆದ ಭಾಗವಾಗಿ ಈಗ ಬಾಂಬ್ ಸೋಟದ ಬಳಿಕ ಮತಷ್ಟು ನಿಗಾ ವಹಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದಿದ್ದಾರೆ.

ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ

ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿರುವುದು ಕಳವಳಕಾರಿ. ಅದನ್ನು ನಿಗ್ರಹಿಸಲು ಸಾಕಷ್ಟು ಆಧುನಿಕ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಬಿಟ್ ಕಾಯಿನ್ ಹಗರಣದ ಬಳಿಕ ರಾಜ್ಯದ ಪೊಲೀಸರು ಕೂಡ ರಾಷ್ಟ್ರೀಯ ಅಂತರಾಷ್ಟ್ರೀಯ ಗುಣಮಟ್ಟದ ಸಾಫ್ಟ್‍ವೇರ್ ಬಳಸುತ್ತಿದ್ದಾರೆಂದು ತಿಳಿಸಿದರು.

ವಿದ್ಯುತ್ ಮೇಲೆ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ : ಕೇಂದ್ರ

ನವದೆಹಲಿ, ಅ.29- ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ ಸರ್ಕಾರವು ಯಾವುದೇ ತೆರಿಗೆ ವಿಧಿಸಬಾರದೆಂದು ತಾಕೀತು ಮಾಡಲಾಗಿದೆ. ರಾಜ್ಯಗಳ ವ್ಯಾಪ್ತಿಯಲ್ಲಿ ಉತ್ಪಾದನೆಗೊಳ್ಳುವ ವಿದ್ಯುತ್ ಅನ್ನು ಅನ್ಯರಾಜ್ಯಗಳಿಗೆ ಮಾರಾಟ ಅಥವಾ ಸರಬರಾಜು ಮಾಡುವ ವೇಳೆ ಹಚ್ಚುವರಿ ತೆರಿಗೆ ವಿಧಿಸುತ್ತಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ.

ಈ ರೀತಿ ತೆರಿಗೆ ವಿಸುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕವಾಗಿದೆ ಎಂದು ತಿಳಿಯಲಾಗಿದೆ. ಉಷ್ಣ, ಜಲ, ಪವನ, ಸೌರ, ಅಣು ಸೇರಿದಂತೆ ಹಲವು ಮಾದರಿಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ಬೇರೆ ರಾಜ್ಯಗಳಿಗೆ ಮಾರಾಟ ಮಾಡುವಾಗ ಸೆಸ್, ಲೇವಿ ಟ್ಯಾಕ್ಸ್, ಶುಲ್ಕ , ಸುಂಕ, ಹೆಚ್ಚುವರಿ ತೆರಿಗೆ ಸೇವಾ ತೆರಿಗೆ ಸೇರಿದಂತೆ ವಿವಿಧ ಮಾದರಿಯಲ್ಲಿ ದರ ನಿಗದಿ ಮಾಡಿರುವುದು ಕಂಡು ಬಂದಿದೆ.

ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ

ಕೇಂದ್ರ ವಿದ್ಯುತ್ ಕಾಯಿದೆಯ ಪರಿಚ್ಛೇದ 7ರ ಪ್ರಕಾರ ಈ ರೀತಿ ತೆರಿಗೆ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲವೆಂದು ತಿಳಿಸಿದೆ. ಸಂವಿಧಾನದ ಕಲಂ -286ನ್ನು ಕೂಡ ಉಲ್ಲೇಖಿಸಿದ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸರಕು ಮತ್ತು ಸೇವಾ ತೆರಿಗೆಯನ್ನು ಪರಿಷ್ಕರಣೆ ಮಾಡಲು ಅವಕಾಶ ಇಲ್ಲ. ಹೊರರಾಜ್ಯಗಳಿಗೆ ಸರಬರಾಜು ಮಾಡಲು ಮತ್ತು ನಿಗತ ಶುಲ್ಕ ವಸೂಲಿಗೆ ಅವಕಾಶ ಇದೆ.

ಕೇಂದ್ರದ ಘಟಕಗಳಿಂದ ಉತ್ಪಾದನೆಯಾಗುವ ವಿದ್ಯುತನ್ನು ಖರೀದಿಸುವ ರಾಜ್ಯ ಸರ್ಕಾರಗಳು ಅದನ್ನು ಮರಳಿ ಅನ್ಯ ರಾಜ್ಯಗಳಿಗೆ ಪೂರೈಸುವ ವೇಳೆ ಹೆಚ್ಚುವರಿ ತೆರಿಗೆ ವಿಸುತ್ತಿರುವುದು ಕಂಡು ಬಂದಿದೆ. ಇಂದಿನ ದಿನಗಳಲ್ಲಿ ಈ ರೀತಿಯ ನಡವಳಿಕೆಗಳನ್ನು ಪುನರಾವರ್ತಿಸಬಾರೆಂದು ಕೇಂದ್ರ ಸರ್ಕಾರ ಎಚ್ಚರ ನೀಡಿದೆ.