Thursday, November 6, 2025
Home Blog Page 1856

ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ

ಬೆಂಗಳೂರು, ಅ. 29- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ ಅಂತಿಮವಾಗುವುದು ಅನುಮಾನವಾಗಿದೆ. ದಸರಾ ಉತ್ಸವದ ನಂತರ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ರಾಜ್ಯದಲ್ಲಿನ ಲೋಕಸಭಾ ಕ್ಷೇತ್ರಗಳ ಹಂಚಿಕೆ ಬಗ್ಗೆ ನಿರ್ಧಾರ ಕೈಗೊಂಡು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಪಂಚರಾಜ್ಯ ಚುನಾವಣಾ ಕಾರ್ಯದಲ್ಲಿ ಬಿಜೆಪಿ ನಾಯಕರು ನಿರತರಾಗಿರುವ ಹಿನ್ನೆಲೆಯಲ್ಲಿ ಮಾತುಕತೆ ಮುಂದಕ್ಕೆ ಹೋಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಪಸ್ ಬಂದ ನಂತರ ಮಾತುಕತೆಯಾಗಬಹುದು. ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುವವರೆಗೂ ಎರಡೂ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ವಿರಳ ಎಂದು ಹೇಳಿವೆ. ನವೆಂಬರ್ ಮೊದಲ ವಾರದಲ್ಲಿ ದೆಹಲಿಗೆ ತೆರಳಲಿದ್ದು, ಆ ಸಂದರ್ಭದಲ್ಲಿ ಕ್ಷೇತ್ರ ಹಂಚಿಕೆ ಮಾತುಕತೆ ನಡೆಸುವ ಬಗ್ಗೆ ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ಬಿಜೆಪಿ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಸುವ ಆಸಕ್ತಿ ತೋರಿದೆ. ರಾಜ್ಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯನ್ನು ಜೆಡಿಎಸ್ ಕೋರಿದೆ. ಕೋಲಾರ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಸಂಸದರಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಗಂಭೀರ ಚರ್ಚೆ ನಡೆದು ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್, ಜಂಟಿಯಾಗಿ ಚುನಾವಣೆ ಎದುರಿಸಲು ಸಿದ್ಧವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಸಿರುವ ಕಾಂಗ್ರೆಸ್‍ಗೆ ಕಡಿವಾಣ ಹಾಕಲು ಬಿಜೆಪಿ ಜತೆ ಸೇರಿದೆ. ಮೈತ್ರಿ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಉಂಟಾಗಿರುವ ಕೆಲವು ಗೊಂದಲಗಳು ಸೀಟು ಹಂಚಿಕೆಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು, ಅ.29-ಹಿಂಗಾರು ಸ್ವಲ್ಪ ಪ್ರಮಾಣದ ಚೇತರಿಕೆ ಕಂಡಿದ್ದು, ಮೂರು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.

ಅಕ್ಟೋಬರ್ ಒಂದರಿಂದ ಈತನಕ ರಾಜ್ಯದ ಬಹುತೇಕ ಕಡೆ ಒಣ ಹವೆ ಮುಂದುವರೆದಿದೆ. ಕೆಲವು ಕಡೆ ಚದುರಿದಂತೆ ಮಳೆಯಾಗಿದ್ದರೂ ಕೂಡ ವಾಡಿಕೆ ಪ್ರಮಾಣದಲ್ಲಿ ಆಗಿಲ್ಲ. ಹಿಂಗಾರು ಮಳೆ ಕೂಡ ವಿಳಂಬವಾಗಿ ಆರಂಭಗೊಂಡಿದೆ. ಅಲ್ಲದೆ, ಮುಂಗಾರಿನಂತೆ ಹಿಂಗಾರು ಕೂಡ ದುರ್ಬಲವಾಗಿದೆ.

ಮಂಗಳವಾರದವರೆಗೆ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಕಂಡುಬರುತ್ತಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ. ಬೆಂಗಳೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಂಗಳವಾರದವರೆಗೆ 5ರಿಂದ 15 ಮಿ.ಮೀ.ವರೆಗೂ ಸಾಧಾರಣಾ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಅವರು ಹೇಳಿದರು.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ಒಣ ಹವೆ ಮುಂದುವರೆಯಲಿದೆ. ಮಳೆಯಾದರೂ ಅತ್ಯಲ್ಪ ಪ್ರಮಾಣದಲ್ಲಾಗಬಹುದು ಅಷ್ಟೇ. ಆಗಸ್ಟ್‍ನಿಂದ ಈತನಕ ಸತತ ಮಳೆ ಕೊರತೆಯನ್ನು ರಾಜ್ಯ ಎದುರಿಸುತ್ತಿದೆ. ತೀವ್ರಬರದ ಛಾಯೆ ಆವರಿಸಿದ್ದು, ಮುಂದಿನ ಮಳೆಗಾಲದವರೆಗೂ ರಾಜ್ಯವು ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಈಗಾಗಲೇ ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಒಣಗಿವೆ ಎಂದರು.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ನಿನ್ನೆಯವರೆಗಿನ ಮಾಹಿತಿ ನೋಡಿದರೂ ರಾಜ್ಯದಲ್ಲಿ ವಾಡಿಕೆಗಿಂತ ಶೇ. 25ರಷ್ಟು ಕೊರತೆ ಉಂಟಾಗಿರುವುದು ಕಂಡುಬರುತ್ತದೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಮಳೆಯೇ ಆಗಿಲ್ಲ. ಹೀಗಾಗಿ ಶೇ.97ರಷ್ಟು ಮಳೆ ಕೊರತೆಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆವರೆಗೆ ರಾಜ್ಯದಲ್ಲಿ ಮಳೆ ಕೊರತೆಯೇ ಹೆಚ್ಚಾಗಿದೆ. ಅಂದರೆ, ವಾಡಿಕೆಗಿಂತ ಶೇ.67ರಷ್ಟು ಮಳೆ ಕೊರತೆ ದಾಖಲಾಗಿದೆ.

ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿರುವುದರಿಂದ ದಿನದಿಂದ ದಿನಕ್ಕೆ ಜಲಾಶಯಗಳ ಒಳ ಹರಿವು ಕ್ಷೀಣಿಸುತ್ತಿದೆ. ಈಗಾಗಲೇ ಕೆಲವು ಜಲಾಶಯಗಳ ಒಳಹರಿವು ನಿಂತು ಹೋಗಿದೆ. ಹೀಗಾಗಿ ಲಭ್ಯವಿರುವ ನೀರನ್ನೇ ಬೆಳೆ ಹಾಗೂ ಕುಡಿಯುವ ನೀರಿಗೆ ಮಿತವಾಗಿ ಲೆಕ್ಕಾಚಾರದ ಮೇಲೆ ಬಳಕೆ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಬೆಂಗಳೂರು, ಅ.29- ವಿಧಾನ ಪರಿಷತ್‍ನ ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಅವರಿಗೆ ಟಿಕೇಟ್ ನೀಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಸಲುವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಬಿಜೆಪಿಯಿಂದ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿದರು.

ವಿಧಾನ ಚುನಾವಣೆಯಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಈಗ ಮರಳಿ ಅದೇ ವಿಧಾನ ಪರಿಷತ್ ಕ್ಷೇತ್ರದಲ್ಲಿ ಸ್ರ್ಪಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ರಾಮೋಜಿ ಗೌಡ ಬೆಂಗಳೂರು ಪದವಿಧರರ ಕ್ಷೇತ್ರದಲ್ಲಿ ಈ ಮೊದಲು ಸ್ರ್ಪಧಿಸಿ ಹಿನ್ನೆಡೆ ಅನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವಕಾಶ ಪಡೆದಿದ್ದಾರೆ.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸ್ರ್ಪಧಿಸಲು ಕೆ.ಕೆ. ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯ ಕೆಲವು ಭಾಗಗಳ ವ್ಯಾಪ್ತಿಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ರ್ಪಧಿಸಿದ ಡಿ.ಟಿ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ತಮ್ಮ ಪತಿ ಶ್ರೀನಿವಾಸ್ ಅವರೊಂದಿಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ತಿಂಗಳ ಒಳಗಾಗಿಯೇ ಕಾಂಗ್ರೆಸ್ ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

ಬೀದರ್, ಕಲಬುರಗಿ, ಯಾದಗಿರ್, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲಾ ವ್ಯಾಪ್ತಿಗಳನ್ನೊಳಗೊಂಡ ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಚಂದ್ರಶೇಖರ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.

ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಸಿಎಂ ಮಧ್ಯಪ್ರವೇಶಕ್ಕೆ ಶರವಣ ಆಗ್ರಹ

ಬೆಂಗಳೂರು, ಅ.29- ಹುಲಿ ಉಗುರು ಪೆಂಡೆಂಟ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಕರ್ನಾಟಕ ಜುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ.ಶರವಣ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹುಲಿ ಉಗುರು ಪೆಂಡೆಂಟ್ ಹೆಸರಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಆಭರಣ ಮಾಲೀಕರಿಗೆ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ರಾಜ್ಯದ ಚಿನ್ನಾಭರಣ ಅಂಗಡಿಗಳ ಮಾಲೀಕರು ಮತ್ತು ಅಕ್ಕಸಾಲಿಗರು ಭಯ ಭೀತರಾಗಿದ್ದಾರೆ ಎಂದರು.

ಈಗಾಗಲೇ ಸರ್ಕಾರ ಹಲವು ವಿಚಾರಗಳಲ್ಲಿ ವೈಫಲ್ಯ ಕಂಡಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಮರೆಮಾಚಲು ಅರಣ್ಯ ಇಲಾಖೆ ಹುಲಿ ಉಗುರಿನ ಪೆಂಡೆಂಟ್ ವಿಚಾರದ ಹಿನ್ನೆಲೆಯಲ್ಲಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದೆ. ಹಿಂದೂ ಧರ್ಮದ ಆರ್ಚಕರನ್ನು, ಸಿನಿಮಾ ತಾರೆಯರನ್ನು, ರಾಜಕಾರಣಿಗಳನ್ನು ಟಾರ್ಗೆಟ್ ಮಾಡಲಾಗಿದೆ. ವನ್ಯಜೀವಿ ಕಾಯ್ದೆಗಳ ಬಗ್ಗೆ ಜನರಿಗೆ ಅರಿವು ಮೂಡಿಸದೇ ದಿಢೀರ್ ದಾಳಿ ನಡೆಸಲಾಗುತ್ತಿದೆ ಎಂದು ದೂರಿದರು.

ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಆಭರಣ ಮಾಲೀಕರಿಗೆ ನೋಟಿಸ್ ನೀಡದೆ ಏಕಾಏಕಿ ದಾಳಿ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೋಟಿಸ್ ನೀಡದೆ ಅರಣ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಬಾರದು. ಪೆಂಡೆಂಟ್ ವಿಚಾರದಲ್ಲಿ ವಜಾಭರಣ ಅಂಗಡಿಗಳ ಮಾಲೀಕರಿಗೆ ಮಾನಸಿಕ ಕಿರುಕುಳ ನೀಡಿದರೆ. ರಾಜ್ಯವ್ಯಾಪಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಕರೆ ಕೊಡಬೇಕಾದಿತು ಎಂದು ಎಚ್ಚರಿಸಿದರು.

ಕಾನೂನು ಎಲ್ಲರಿಗೂ ಸಮಾನ ಎಂದು ಹೇಳುತ್ತಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ಅಧಿಕಾರಿಗಳು ಈ ಬಗ್ಗೆ ಜಾಗೃತಿ ಮೂಡಿಸಲಿ. ಅರಣ್ಯ ಉತ್ಪನ್ನ ಹೊಂದಿರುವ ವ್ಯಕ್ತಿಗಳು ತಾವಾಗಿಯೇ ಅದನ್ನು ಸರ್ಕಾರಕ್ಕೆ ವಾಪಸ್ ನೀಡಲು ಒಂದು ಗಡುವು ನೀಡಲಿ. ಜನರಿಗೆ ತಿಳುವಳಿಕೆ ನೀಡದೆ ಸಾರ್ವಜನಿಕರ ಮೇಲೆ ದಾಳಿ ನಡೆಸಿ, ಮೊಕದ್ದಮೆ ಹೂಡಲು ಹೊರಟಿರುವುದು ಸರಿಯಲ್ಲ.

ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ

ಹುಲಿ ಉಗುರು ಸೇರಿದಂತೆ ಕೆಲ ವನ್ಯಜೀವಿ ಉತ್ಪನ್ನಗಳಿಗೆ ಬಂಗಾರದ ಅಲಂಕಾರಿಕ ವಿನ್ಯಾಸ ಮಾಡುವ ಸಂಪ್ರದಾಯವಿದೆ. ಇದನ್ನು ಬಂಗಾರದ ಕವಚದಿಂದಲೂ ಅಲಂಕಾರ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಚಿನ್ನಾಭರಣ ಮಾರಾಟಗಾರರ ಮೇಲೆ ಕ್ರಮ ಜರುಗಿಸಲು ಹೊರಟಿರುವುದು ಸರಿಯಲ್ಲ ಎಂದರು.

ಇಂಡಿಯನ್ ಜ್ಯೂವೆಲರಿ ಅಸೋಸಿಯೇಷನ್ ಉಪಾಧ್ಯಕ್ಷ ಚೇತನ್ ಕುಮಾರ್ ಮೆಹ್ತಾ, ಬೆಂಗಳೂರು ಜ್ಯೂವೆಲರಿ ಅಸೋಸಿಯೇಷನ್ ಅಧ್ಯಕ್ಷ ಸುರೇಶ್ ಗನ್ನಾ, ಸುಮೇಶ್ ವಡೇರಾ ಮತ್ತತಿರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ರಾಜಸ್ಥಾನ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು

ಜೈಪುರ, ಅ.29-ರಾಜಸ್ಥಾನದ ಹನುಮಾನ್‍ಗಢ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕುಟುಂಬ ಸಮೇತರಾಗಿ ಕಾರ್ಯಕ್ರಮವೊಂದಲ್ಲಿ ಬಾಗಿಯಾಗಿ ಮನೆಗೆ ಮರಳುತ್ತಿದ್ದಾಗ ಮುಂಜಾನೆ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಪರಮ್‍ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‍ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವೇದ್ ಪಾಲ್ ತಿಳಿಸಿದ್ದಾರೆ.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ಗಂಭೀರವಾಗಿ ಗಾಯಗೊಂಡಿರುವ ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ನನ್ನು ಬಿಕಾನೇರ್‍ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಸಮಯ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿತ್ತು

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ಕೊಚ್ಚಿ, ಅ.29- ಕ್ರೈಸ್ತ ಸಮುದಾಯದ ಪ್ರಾರ್ಥನೆ ವೇಳೆ ಬಾಂಬ್ ದಾಳಿ ನಡೆದು ಒಬ್ಬರು ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯರ್ನಾಕುಲಂನಲ್ಲಿ ನಡೆದಿದೆ. ಇಂದು ಬೆಳಗ್ಗೆ ಯೆಹೋವನ ಸಾಕ್ಷಿ ಸಮಾವೇಶಕ್ಕಾಗಿ ಸಮುದಾಯ ಕೇಂದ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಯುತ್ತಿತ್ತು. ಈ ವೇಳೆ ಈ ದಾಳಿ ನಡೆದಿದೆ ಎಂದು ಪೆಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇದು ಉಗ್ರರ ಕೃತ್ಯ ಎಂದು ತಿಳಿದುಬಂದಿದ್ದು, ಸುಮಾರು ಮೂರು ಬಾರಿ ಸ್ಪೋಟ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ನಿನ್ನೆಯಷ್ಟೆ ಪ್ಯಾಲಸ್ಟೇನ್ ಬೆಂಬಲಿಸಿ ಬೃಹತ್ ರ್ಯಾಲಿ ನಡೆದಿತ್ತು. ಈ ನಡುವೆ ಇಂದು ಬೆಳಗ್ಗೆ ನಡೆದಿರುವ ಉಗ್ರರ ದಾಳಿ ಭಾರೀ ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಹಾಗೂ ಭದ್ರತಾ ಪಡೆಗಳು ಕೂಡ ದೌಡಾಯಿಸಿವೆ.

ಸರ್ಕಾರಿ ಸೇವೆ ಪರೀಕ್ಷೆಯಲ್ಲಿ ವಂಚನೆ : 10 ಜನರ ಬಂಧನ

ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ತಪಾಸಣೆ ವೇಳೆ ಸ್ಥಳೀಯವಾಗಿ ಸಿದ್ಧಪಡಿಸಿರುವ ಸ್ಪೋಟಕವನ್ನು ಈ ದಾಳಿಗೆ ಬಳಸಲಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಅದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಘಟನೆಯಿಂದಾಗಿ ಕೇರಳದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರ ತನಿಖಾ ತಂಡ ಹಾಗೂ ಭಯೋತ್ಪಾದನಾ ನಿಗ್ರಹ ದಳದ ಹಿರಿಯ ಅಧಿಕಾರಿಗಳು ಕೂಡ ಕೇರಳಕ್ಕೆ ಭೇಟಿ ನೀಡಿದ್ದು, ಇದು ಪೂರ್ವ ನಿಯೋಜಿತ ಉಗ್ರರ ಕೃತ್ಯ ಎಂದು ಅಂದಾಜಿಸಿದೆ.

ಕಳೆದ ಶುಕ್ರವಾರದಿಂದ ಈ ಸಮಾವೇಶ ನಡೆಯುತ್ತಿದ್ದು, ಇಂದು ಅಂತಿಮಗೊಳ್ಳುತ್ತಿರುವ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ಮೂಲಗಳ ಪ್ರಕಾರ, ಒಂದು ಹಾಲ್‍ನಲ್ಲಿ ಅನೇಕ ಸ್ಪೋಟಗಳು ಸಂಭವಿಸಿವೆ. ಕೆಲ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ದಕ್ಷಿಣ ಭಾರತದ ಹಲವು ರಾಜ್ಯಗಳಿಗೂ ಈಗ ಕೇಂದ್ರ ಸರ್ಕಾರ ಕಟ್ಟೆಚ್ಚರಕ್ಕೆ ಸೂಚನೆ ನೀಡಿದ್ದು, ಗಡಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ

ಭುವನೇಶ್ವರ್, ಅ. 29-ಕಳೆದ 2022-23 ರ ಆರ್ಥಿಕ ವರ್ಷದಲ್ಲಿ ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇಕಡಾ 37 ಕ್ಕೆ ಏರಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿ ನಡೆದ ರೋಜ್‍ಗಾರ್ ಮೇಳ ದಲ್ಲಿ ಮಾತನಾಡಿದ ಅವರು ಕಳೆದ 2017-18ರಲ್ಲಿ ಈ ಪ್ರಮಾಣ ಶೇ.23ರಷ್ಟಿತ್ತು 5 ವರ್ಷದಲ್ಲಿ ಶೇ.10 ಕಿಂತ ಹೆಚ್ಚು ಏರಿಕೆಯಾಗಿದೆ ಇದರ ನಡುವೆ 2017-18ರಲ್ಲಿ ಶೇ.6ರಷ್ಟಿದ್ದ ನಿರುದ್ಯೋಗ ದರವು 2022-23ರಲ್ಲಿ ಶೇ.3.7ಕ್ಕೆ ಇಳಿದಿದೆ ಎಂದರು.

ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿದೆ ಇದರ ಜೊತೆಗೆ ಮಹಿಳೆಯರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುತ್ತಾರೆ,ಸಮಾಜದಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ, ಎಂದು ಅವರು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳು ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಕೇಂದ್ರವು ನೀತಿ ನಿರೂಪಣೆ ಮತ್ತು ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ, ಬದಲಾಗುತ್ತಿರುವ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲು ಕೆಲಸ ಮಾಡುವ ಮಹಿಳೆಯರಿಗೆ ಕೌಶಲ್ಯವನ್ನು ಹೆಚ್ಚಿಸಲು ಪ್ರಾಮುಖ್ಯತೆಯನ್ನು ನೀಡಲಾಗಿತ್ತಿದೆ ಎಂದು ಸಚಿವರು ಒತ್ತಿ ಹೇಳಿದರು. ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸಚಿವರು 172 ಮಂದಿಗೆ ವಿವಿಧ ಕೇಂದ್ರೀಯ ಸಂಸ್ಥೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಸರ್ಕಾರಿ ಸೇವೆ ಪರೀಕ್ಷೆಯಲ್ಲಿ ವಂಚನೆ : 10 ಜನರ ಬಂಧನ

ಲಕ್ನೋ, ಅ.29- ರಾಜ್ಯಸರ್ಕಾರಿ ಸೇವೆಗಳ ಆಯ್ಕೆಗಾಗಿ ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ ನಡೆಸಿದ ಪ್ರಾಥಮಿಕ ಅರ್ಹತಾ ಪರೀಕ್ಷೆಯಲ್ಲಿ ಅಕ್ರಮದಲ್ಲಿ ಬಾಗಿಯಾಗಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ 10 ಜನರನ್ನು ಬಂಧಿಸಿದೆ.

ಕೇಂದ್ರವೊಂದರಲ್ಲಿ ಆರೋಪಿಗಳು ಪರೀಕ್ಷೆಯ ಸಮಯದಲ್ಲಿ ಬ್ಲೂಟೂತ್ ಸಾಧನಗಳು ಸೇರಿದಂತೆ ವಿವಿಧ ಅಕ್ರಮ ವಿಧಾನಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಎಸ್‍ಟಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರ ಗ್ಯಾಂಗ್ ನಾಯಕರಾದ ದೀಪಕ್ ಕುಮಾರ್ ಪಟೇಲ್ ಮತ್ತು ಅಜಯ್ ಕುಮಾರ್ ಪಟೇಲ್ ಎಂದು ಗುರುತಿಸಲಾಗಿದೆ. ದೀಪಕ್‍ನನ್ನು ಪ್ರತಾಪ್‍ಗಢದಲ್ಲಿ ಅಜಯ್ ಕುಮಾರ್ ಪಟೇಲ್‍ನನ್ನು ಪ್ರಯಾಗ್‍ರಾಜ್‍ನಲ್ಲಿ ಬಂಧಿಸಲಾಗಿದೆ ಇತರೆ ಆರೋಪಿಗಳಾದ ದಿಲೀಪ್, ಸುಜಿತ್ ಕುಮಾರ್, ಪಂಕಜ್ ಕುಮಾರ್, ಜಿತೇಂದ್ರ ಕುಮಾರ್ ವರ್ಮಾ, ಅನುರಾಗ್ ಕುಮಾರ್, ರವೀಂದ್ರ ಸಿಂಗ್ ಮತ್ತು ಉದಯವೀರ್ ಸಿಂಗ್ ಲಕ್ನೋ ನಗರದಲ್ಲೇ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ವಾರಣಾಸಿಯ ಪರೀಕ್ಷಾ ಕೇಂದ್ರದ ಉಸ್ತುವಾರಿಯನ್ನು ಸಹ ಬಂಧಿಸಲಾಗಿದೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾಯ್ಧೆ ಅಡಿ ಎಫ್‍ಐಆರ್‍ಗಳನ್ನು ದಾಖಲಿಸಿ ,ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ಪರೀಕ್ಷೆ ಬರೆಯಲು ಕಿವಿಯೊಳಗಿನ ಬ್ಲೂಟೂತ್ ಸಾಧನವನ್ನು ಬಳಸಿ ಉಳಿದವರು ಕಾಪಿ ಮಾಡ,ಕೆಲವರಿಗೆ ಉತ್ತರ ಹೇಳಿಕೊಡಲಾಗಿದೆಎಂದು ಮೂಲಗಳು ತಿಳಿಸಿವೆ. 8 ಮೊಬೈಲ್ ಫೋನ್‍ಗಳು ಮತ್ತು ಇತರ ವಸ್ತುಗಳನ್ನು ಎಸ್‍ಟಿಎಫ್ ವಶಪಡಿಸಿಕೊಂಡಿದೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿದ್ದು-ಪರಂ ರಹಸ್ಯ ಸಭೆ

ಉತ್ತರ ಪ್ರದೇಶ ಅೀನ ಸೇವೆಗಳ ಆಯ್ಕೆ ರಾಜ್ಯದ 35 ಜಿಲ್ಲೆಗಳಾದ್ಯಂತ 1,058 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-10-2023)

ನಿತ್ಯ ನೀತಿ : ಸಂಸ್ಕಾರ, ಸಂಸ್ಕøತಿಗಳು ನಮ್ಮ ನಡವಳಿಕೆಗಳನ್ನು ತಿದ್ದುವುದಕ್ಕಿವೆಯೇ ಹೊರತು ನಮ್ಮ ಅನ್ಯೋನ್ಯತೆಯನ್ನು ದೂರ ಮಾಡುವುದಕ್ಕಲ್ಲ.

ಪಂಚಾಂಗ ಭಾನುವಾರ 29-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಭರಣಿ / ಯೋಗ: ಸಿದ್ಧಿ / ಕರಣ: ಬಾಲವ

ಸೂರ್ಯೋದಯ : ಬೆ.06.12
ಸೂರ್ಯಾಸ್ತ : 05.54
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುವರು.
ವೃಷಭ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾಧಿಸುವಿರಿ.
ಕುಂಭ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಸ್ಥಗಿತಗೊಂಡ ಕೆಲಸ-ಕಾರ್ಯಗಳು ಸಹ ಪ್ರಗತಿಯಾಗುತ್ತವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಬೆಂಗಳೂರು, ಅ.28- ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳಿಗೆ ಇದುವರೆಗೂ ಪ್ರತ್ಯೇಕ ಸಚಿವಾಲಯ ಇರಲಿಲ್ಲ ಎಂದರು.

ಸಚಿವಾಲಯ ಸ್ಥಾಪಿಸಿರುವುದರಿಂದ ಆ ವರ್ಗದ ಅಭಿವೃದ್ಧಿ ಸಾಧ್ಯವಾಗಲಿದೆ. ಎಸ್‍ಇಪಿ ಟಿಎಸ್‍ಪಿ ಹಣ ಆ ಸಮುದಾಯದ ಅಭಿವೃದ್ಧಿಗೆ ಖರ್ಚು ಆಗಬೇಕು. ಆರೇಳು ಸಾವಿರ ಇದ್ದ ಅನುದಾನವು ನಾನು ಮೊದಲ ಬಾರಿ ಅಧಿಕಾರದಿಂದ ಕೆಳಗಿಳಿಯುವ ವೇಳೆ 30 ಸಾವಿರ ಕೋಟಿ ರೂ. ಆಗಿತ್ತು. ಈಗ 34 ಸಾವಿರ ಕೋಟಿ ಹಣ ಅನುದಾನ ಇದೆ ಎಂದು ಹೇಳಿದರು.

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನುದಾನ ಹೆಚ್ಚು ಆಗಲಿಲ್ಲ. ಶೇ. 24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆ ಇದ್ದಾರೆ, ಜನಸಂಖ್ಯೆಗೆ ಅನುಗುಣವಾಗಿ ಹಣ ಇಡಲಾಗುತ್ತದೆ ಎಂದರು.

ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದಲ್ಲೇ ಹೆಚ್ಚು ಹಣ ಈ ವರ್ಗಗಳಿಗೆ ನೀಡಲಾಗಿದೆ. ಯಾವುದೇ ಸರ್ಕಾರ ಬಂದರೂ ಕಾನೂನು ಬದಲಾವಣೆ ಇಲ್ಲ. ನಾವು 88 ಸಾವಿರ ಕೋಟಿ ರೂ. ಈ ವರ್ಗಗಳಿಗೆ ಖರ್ಚು ಮಾಡಿದ್ದೇವೆ. ಇದಕ್ಕೆ ನೀವು ಅರ್ಹರು ಹಾಗಾಗಿ ಖರ್ಚು ಮಾಡಿದ್ದೇವೆ ಎಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕøತರ ಪ್ರತಿ ಸಾಧಕರಿಗೆ ರೂ. 5 ಲಕ್ಷ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿಯನ್ನು ಉದ್ಘಾಟಿಸಿದರು.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಕಾರ್ಯಕ್ರಮದಲ್ಲಿ ರಾಜನಹಳ್ಳಿಯ ಮಹರ್ಷಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿ.ಎಸ್. ಉಗ್ರಪ್ಪ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.