Home Blog Page 1857

ಭಾರತದಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಶೇ.37ಕ್ಕೆ ಏರಿಕೆ

ಭುವನೇಶ್ವರ್, ಅ. 29-ಕಳೆದ 2022-23 ರ ಆರ್ಥಿಕ ವರ್ಷದಲ್ಲಿ ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇಕಡಾ 37 ಕ್ಕೆ ಏರಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿ ನಡೆದ ರೋಜ್‍ಗಾರ್ ಮೇಳ ದಲ್ಲಿ ಮಾತನಾಡಿದ ಅವರು ಕಳೆದ 2017-18ರಲ್ಲಿ ಈ ಪ್ರಮಾಣ ಶೇ.23ರಷ್ಟಿತ್ತು 5 ವರ್ಷದಲ್ಲಿ ಶೇ.10 ಕಿಂತ ಹೆಚ್ಚು ಏರಿಕೆಯಾಗಿದೆ ಇದರ ನಡುವೆ 2017-18ರಲ್ಲಿ ಶೇ.6ರಷ್ಟಿದ್ದ ನಿರುದ್ಯೋಗ ದರವು 2022-23ರಲ್ಲಿ ಶೇ.3.7ಕ್ಕೆ ಇಳಿದಿದೆ ಎಂದರು.

ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿದೆ ಇದರ ಜೊತೆಗೆ ಮಹಿಳೆಯರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುತ್ತಾರೆ,ಸಮಾಜದಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ, ಎಂದು ಅವರು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳು ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಕೇಂದ್ರವು ನೀತಿ ನಿರೂಪಣೆ ಮತ್ತು ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ, ಬದಲಾಗುತ್ತಿರುವ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲು ಕೆಲಸ ಮಾಡುವ ಮಹಿಳೆಯರಿಗೆ ಕೌಶಲ್ಯವನ್ನು ಹೆಚ್ಚಿಸಲು ಪ್ರಾಮುಖ್ಯತೆಯನ್ನು ನೀಡಲಾಗಿತ್ತಿದೆ ಎಂದು ಸಚಿವರು ಒತ್ತಿ ಹೇಳಿದರು. ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸಚಿವರು 172 ಮಂದಿಗೆ ವಿವಿಧ ಕೇಂದ್ರೀಯ ಸಂಸ್ಥೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಸರ್ಕಾರಿ ಸೇವೆ ಪರೀಕ್ಷೆಯಲ್ಲಿ ವಂಚನೆ : 10 ಜನರ ಬಂಧನ

ಲಕ್ನೋ, ಅ.29- ರಾಜ್ಯಸರ್ಕಾರಿ ಸೇವೆಗಳ ಆಯ್ಕೆಗಾಗಿ ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ ನಡೆಸಿದ ಪ್ರಾಥಮಿಕ ಅರ್ಹತಾ ಪರೀಕ್ಷೆಯಲ್ಲಿ ಅಕ್ರಮದಲ್ಲಿ ಬಾಗಿಯಾಗಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ 10 ಜನರನ್ನು ಬಂಧಿಸಿದೆ.

ಕೇಂದ್ರವೊಂದರಲ್ಲಿ ಆರೋಪಿಗಳು ಪರೀಕ್ಷೆಯ ಸಮಯದಲ್ಲಿ ಬ್ಲೂಟೂತ್ ಸಾಧನಗಳು ಸೇರಿದಂತೆ ವಿವಿಧ ಅಕ್ರಮ ವಿಧಾನಗಳನ್ನು ಬಳಸುತ್ತಿರುವುದು ಕಂಡುಬಂದಿದೆ. ಎಸ್‍ಟಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರ ಗ್ಯಾಂಗ್ ನಾಯಕರಾದ ದೀಪಕ್ ಕುಮಾರ್ ಪಟೇಲ್ ಮತ್ತು ಅಜಯ್ ಕುಮಾರ್ ಪಟೇಲ್ ಎಂದು ಗುರುತಿಸಲಾಗಿದೆ. ದೀಪಕ್‍ನನ್ನು ಪ್ರತಾಪ್‍ಗಢದಲ್ಲಿ ಅಜಯ್ ಕುಮಾರ್ ಪಟೇಲ್‍ನನ್ನು ಪ್ರಯಾಗ್‍ರಾಜ್‍ನಲ್ಲಿ ಬಂಧಿಸಲಾಗಿದೆ ಇತರೆ ಆರೋಪಿಗಳಾದ ದಿಲೀಪ್, ಸುಜಿತ್ ಕುಮಾರ್, ಪಂಕಜ್ ಕುಮಾರ್, ಜಿತೇಂದ್ರ ಕುಮಾರ್ ವರ್ಮಾ, ಅನುರಾಗ್ ಕುಮಾರ್, ರವೀಂದ್ರ ಸಿಂಗ್ ಮತ್ತು ಉದಯವೀರ್ ಸಿಂಗ್ ಲಕ್ನೋ ನಗರದಲ್ಲೇ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಿದ್ದಾರೆ.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ವಾರಣಾಸಿಯ ಪರೀಕ್ಷಾ ಕೇಂದ್ರದ ಉಸ್ತುವಾರಿಯನ್ನು ಸಹ ಬಂಧಿಸಲಾಗಿದೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾಯ್ಧೆ ಅಡಿ ಎಫ್‍ಐಆರ್‍ಗಳನ್ನು ದಾಖಲಿಸಿ ,ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರು ಪರೀಕ್ಷೆ ಬರೆಯಲು ಕಿವಿಯೊಳಗಿನ ಬ್ಲೂಟೂತ್ ಸಾಧನವನ್ನು ಬಳಸಿ ಉಳಿದವರು ಕಾಪಿ ಮಾಡ,ಕೆಲವರಿಗೆ ಉತ್ತರ ಹೇಳಿಕೊಡಲಾಗಿದೆಎಂದು ಮೂಲಗಳು ತಿಳಿಸಿವೆ. 8 ಮೊಬೈಲ್ ಫೋನ್‍ಗಳು ಮತ್ತು ಇತರ ವಸ್ತುಗಳನ್ನು ಎಸ್‍ಟಿಎಫ್ ವಶಪಡಿಸಿಕೊಂಡಿದೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿದ್ದು-ಪರಂ ರಹಸ್ಯ ಸಭೆ

ಉತ್ತರ ಪ್ರದೇಶ ಅೀನ ಸೇವೆಗಳ ಆಯ್ಕೆ ರಾಜ್ಯದ 35 ಜಿಲ್ಲೆಗಳಾದ್ಯಂತ 1,058 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಿತು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-10-2023)

ನಿತ್ಯ ನೀತಿ : ಸಂಸ್ಕಾರ, ಸಂಸ್ಕøತಿಗಳು ನಮ್ಮ ನಡವಳಿಕೆಗಳನ್ನು ತಿದ್ದುವುದಕ್ಕಿವೆಯೇ ಹೊರತು ನಮ್ಮ ಅನ್ಯೋನ್ಯತೆಯನ್ನು ದೂರ ಮಾಡುವುದಕ್ಕಲ್ಲ.

ಪಂಚಾಂಗ ಭಾನುವಾರ 29-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಭರಣಿ / ಯೋಗ: ಸಿದ್ಧಿ / ಕರಣ: ಬಾಲವ

ಸೂರ್ಯೋದಯ : ಬೆ.06.12
ಸೂರ್ಯಾಸ್ತ : 05.54
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ಸ್ನೇಹಿತರು ನೀವು ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡುವರು.
ವೃಷಭ: ಇತರರೊಂದಿಗೆ ಸೇರಿ ಮಾಡುವ ಕೆಲಸದಲ್ಲಿ ಉತ್ತಮ ಲಾಭ ದೊರೆಯಲಿದೆ.
ಮಿಥುನ: ನೆರೆಹೊರೆಯವರೊಂದಿಗಿನ ಸಂಬಂಧ ಸೌಹಾರ್ದಯುತವಾಗಿರುತ್ತದೆ.

ಕಟಕ: ದಿನದ ಆರಂಭ ಉತ್ತಮವಾಗಿರಲಿದೆ. ಕೈಗೊಂಡ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ.
ಸಿಂಹ: ಸಹೋದ್ಯೋಗಿ ಗಳೊಂದಿಗೆ ಮಾತುಕತೆ ನಡೆಸುವಾಗ ಪದಗಳನ್ನು ಎಚ್ಚರಿಕೆಯಿಂದ ಬಳಸಿ.
ಕನ್ಯಾ: ನಿಮ್ಮ ಉಜ್ವಲ ಭವಿಷ್ಯಕ್ಕೆ ಹೊಸ ಸ್ನೇಹ ಸಹಕಾರಿಯಾಗಲಿದೆ.

ತುಲಾ: ಸಂಭಾಷಣೆ ನಡೆಸುವುದರಿಂದ ಉತ್ತಮ ರೀತಿಯ ಸಂಬಂಧಗಳು ರೂಪುಗೊಳ್ಳುತ್ತವೆ.
ವೃಶ್ಚಿಕ: ಸ್ನೇಹಿತರು ಮತ್ತು ಪರಿಚಯಸ್ಥರೊಂದಿಗೆ ಹೆಚ್ಚು ಸಮಯವನ್ನು ಕಳೆಯುತ್ತೀರಿ.
ಧನುಸ್ಸು: ಶ್ರಮ ಮತ್ತು ಅದೃಷ್ಟ ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.

ಮಕರ: ಹಿರಿಯರು ಹಾಗೂ ಸಜ್ಜನರನ್ನು ಗೌರವಿಸುವಿರಿ. ಉತ್ತಮ ಪ್ರಗತಿ ಸಾಧಿಸುವಿರಿ.
ಕುಂಭ: ಹಿಂದೆ ಎದುರಿಸಿದ ತೊಂದರೆಗಳು ನಿವಾರಣೆಯಾಗುತ್ತವೆ ಮತ್ತು ಸ್ಥಗಿತಗೊಂಡ ಕೆಲಸ-ಕಾರ್ಯಗಳು ಸಹ ಪ್ರಗತಿಯಾಗುತ್ತವೆ.
ಮೀನ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಇದು ಉತ್ತಮ ದಿನವಾಗಿದೆ.

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಬೆಂಗಳೂರು, ಅ.28- ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳಿಗೆ ಇದುವರೆಗೂ ಪ್ರತ್ಯೇಕ ಸಚಿವಾಲಯ ಇರಲಿಲ್ಲ ಎಂದರು.

ಸಚಿವಾಲಯ ಸ್ಥಾಪಿಸಿರುವುದರಿಂದ ಆ ವರ್ಗದ ಅಭಿವೃದ್ಧಿ ಸಾಧ್ಯವಾಗಲಿದೆ. ಎಸ್‍ಇಪಿ ಟಿಎಸ್‍ಪಿ ಹಣ ಆ ಸಮುದಾಯದ ಅಭಿವೃದ್ಧಿಗೆ ಖರ್ಚು ಆಗಬೇಕು. ಆರೇಳು ಸಾವಿರ ಇದ್ದ ಅನುದಾನವು ನಾನು ಮೊದಲ ಬಾರಿ ಅಧಿಕಾರದಿಂದ ಕೆಳಗಿಳಿಯುವ ವೇಳೆ 30 ಸಾವಿರ ಕೋಟಿ ರೂ. ಆಗಿತ್ತು. ಈಗ 34 ಸಾವಿರ ಕೋಟಿ ಹಣ ಅನುದಾನ ಇದೆ ಎಂದು ಹೇಳಿದರು.

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನುದಾನ ಹೆಚ್ಚು ಆಗಲಿಲ್ಲ. ಶೇ. 24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆ ಇದ್ದಾರೆ, ಜನಸಂಖ್ಯೆಗೆ ಅನುಗುಣವಾಗಿ ಹಣ ಇಡಲಾಗುತ್ತದೆ ಎಂದರು.

ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದಲ್ಲೇ ಹೆಚ್ಚು ಹಣ ಈ ವರ್ಗಗಳಿಗೆ ನೀಡಲಾಗಿದೆ. ಯಾವುದೇ ಸರ್ಕಾರ ಬಂದರೂ ಕಾನೂನು ಬದಲಾವಣೆ ಇಲ್ಲ. ನಾವು 88 ಸಾವಿರ ಕೋಟಿ ರೂ. ಈ ವರ್ಗಗಳಿಗೆ ಖರ್ಚು ಮಾಡಿದ್ದೇವೆ. ಇದಕ್ಕೆ ನೀವು ಅರ್ಹರು ಹಾಗಾಗಿ ಖರ್ಚು ಮಾಡಿದ್ದೇವೆ ಎಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕøತರ ಪ್ರತಿ ಸಾಧಕರಿಗೆ ರೂ. 5 ಲಕ್ಷ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿಯನ್ನು ಉದ್ಘಾಟಿಸಿದರು.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಕಾರ್ಯಕ್ರಮದಲ್ಲಿ ರಾಜನಹಳ್ಳಿಯ ಮಹರ್ಷಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿ.ಎಸ್. ಉಗ್ರಪ್ಪ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ಬೆಂಗಳೂರು, ಅ.28- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್‍ನಲ್ಲಿನ 70 ಶಾಸಕರ ಬೆಂಬಲ ಇದೆ ಎಂದು ಪುನರುಚ್ಚರಿಸಿರುವ ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್, ಈ ಐದು ವರ್ಷದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದಿದ್ದಾರೆ.

ಅಧಿಕಾರ ಹಂಚಿಕೆ, ಪಕ್ಷ ಹಾಗೂ ಸರ್ಕಾರದ ಕುರಿತಂತೆ ಶಾಸಕರು ಹಾಗೂ ನಾಯಕರು ಬಹಿರಂಗ ಹೇಳಿಕೆ ನೀಡಬಾರದು ಎಂದು ಇಂದು ಬೆಳಗ್ಗೆಯಷ್ಟೆ ಕಟ್ಟಪ್ಪಣೆ ಮಾಡಿದರು. ಅದರ ಹೊರತಾಗಿಯೂ ಮತ್ತೆ ಶಿವಗಂಗಾ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಹೇಳಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ನಾನು ಮತ್ತು ನಮ್ಮ ಸ್ನೇಹಿತರು ಬಣ ರಾಜಕೀಯದ ಬಗ್ಗೆ ಮಾತನಾಡಿಲ್ಲ. ನಾವು ಹೇಳಿರುವುದು ಒಂದೇ ಬಣ, ಕಾಂಗ್ರೆಸ್ ಬಣ. 60ರಿಂದ 70 ಶಾಸಕರು ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಇದ್ದೇವೆ ಎಂದು ನಾನು ಸಹಜವಾಗಿ ಹೇಳಿದ್ದೇನೆ. ಉಳಿದವರ ಬೆಂಬಲ ಇಲ್ಲ ಎಂದಲ್ಲ. 135 ಶಾಸಕರು ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಇದ್ದಾರೆ. ಇದರಲ್ಲಿ ಹಿರಿಯರು, ಕಿರಿಯರು ಎಂಬುದಿಲ್ಲ ಎಂದರು.

ಪ್ರಮುಖವಾಗಿ ನಮ್ಮ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿ ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಅವರ ಪರವಾಗಿ 70 ಶಾಸಕರಿದ್ದೇವೆ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಪರ-ವಿರೋಧ ಎಂದು ಹೇಳಲು ನಾವು ಬಯಸುವುದಿಲ್ಲ. ನಾವು ಡಿ.ಕೆ.ಶಿವಕುಮಾರ್ ಪರವಾಗಿದ್ದೇವೆ ಎಂದು ಹೇಳಿದ್ದೇವೆಯೇ ಹೊರತು ಮತ್ತೊಬ್ಬರಿಗೆ ವಿರುದ್ಧವಾಗಿದ್ದೇವೆ ಎಂದು ಹೇಳಿಲ್ಲ. ನಾವು ಎಲ್ಲರೂ ಒಂದು ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ನಾನು ಮೊದಲೇ ಈ ಬಗ್ಗೆ ಹೇಳಿದ್ದೇನೆ. ಚುನಾವಣೆ ಫಲಿತಾಂಶದ ಬಳಿಕ ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿಯಾಗುವ ವಾಡಿಕೆ ಕಾಂಗ್ರೆಸ್‍ನಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಸಿದ್ದರಾಮಯ್ಯಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ.

ಕೊನೆಯ ಅವಕಾಶ ಎಂದು ಮತ್ತು ಹಿಂದಿನ ಐದು ವರ್ಷ ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂಬ ಕಾರಣಕ್ಕೆ ಎಲ್ಲಾ ಶಾಸಕರು ಗೌರವಯುತವಾಗಿ ಬೆಂಬಲ ನೀಡಿದ್ದರು. ಅದನ್ನು ಪರಿಗಣಿಸಿ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ತದನಂತರ ಡಿ.ಕೆ.ಶಿವಕುಮಾರ್ ಅವರನ್ನು ನಾವೇಲ್ಲಾ ಸೇರಿ ನೂರಕ್ಕೆ ನೂರು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದರು.

ಸಹಜವಾಗಿ ಅಧಿಕಾರದ ಅವಧಿಯನ್ನು ಎರಡು ಭಾಗವಾಗಿ ವಿಂಗಡಿಸುತ್ತೇವೆ. ಐದು ವರ್ಷ ಇದ್ದರೆ ಅದರಲ್ಲಿ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗುವ ಸಾಧ್ಯತೆ ಇರುತ್ತದೆ. ಆ ಹಿನ್ನೆಲೆಯಲ್ಲಿ ಈ ಐದು ವರ್ಷದ ಒಳಗೆ ಡಿ.ಕೆ.ಶಿವಕುಮಾರ್‍ರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಿ ಡಿ.ಕೆ.ಶಿವಕುಮಾರ್ ನಮ್ಮನ್ನು ಗೆಲ್ಲಿಸಿದ್ದಾರೆ ಎಂಬ ಭಾವನೆ ಇರುವ ಎಲ್ಲರೂ ಅವರಿಗೆ ಬೆಂಬಲವಾಗಿದ್ದಾರೆ ಎಂದಿದ್ದಾರೆ.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಧರ್ಮಶಾಲಾ, ಅ. 28- ಗಾಯದ ಸಮಸ್ಯೆ ಯಿಂದ ಬಳಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಆರಂಭಿಕ 5 ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರು 2 ಮಹತ್ತರ ದಾಖಲೆ ಬರೆಯುವ ಮೂಲಕ ಬಲವಾಗಿ ಕಮ್ ಬ್ಯಾಕ್ ಮಾಡಿದ್ದಾರೆ.

2 ಎಸೆತಗಳಲ್ಲಿ 21 ರನ್ ಸಿಡಿಸಿದ ಟ್ರಾವಿಸ್ ಹೆಡ್:
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಪೋಟಕ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಆರಂಭಿಕ 2 ಓವರ್‍ಗಳಲ್ಲಿ ಎಚ್ಚರಿಕೆ ಆಟ ಪ್ರದರ್ಶಿಸಿದರು. ಆದರೆ 3ನೇ ಓವರ್‍ನಲ್ಲಿ ನ್ಯೂಜಿಲೆಂಡ್‍ನ ವೇಗಿ ಮ್ಯಾಟ್ ಹೆನ್ರಿ ಓವರ್‍ನಲ್ಲಿ 2 ನೋಬಾಲ್‍ನ ಲಾಭ ಪಡೆದ ಟ್ರಾವಿಸ್ ಹೆಡ್ ನೋ ಬಾಲ್ ಎಸೆತದಲ್ಲಿ 2 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ 2 ಎಸೆತಗಳಲ್ಲೇ 21 ರನ್ ಗಳಿಸಿ ವಿಶ್ವದಾಖಲೆ ಬರೆಯಲು ವಾರ್ನರ್‍ರೊಂದಿಗೆ ಕೈಜೋಡಿಸಿದರು.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

59 ಎಸೆತಗಳಲ್ಲೇ ಶತಕ:
ಧರ್ಮಶಾಲಾದ ಬ್ಯಾಟಿಂಗ್ ಪಿಚ್‍ನಲ್ಲಿ ಸಿಡಿಲಬ್ಬರದ ಪ್ರದರ್ಶನ ತೋರಿದ ಟ್ರಾವಿಸ್ ಹೆಡ್ 59 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದರು. ನೆದರ್‍ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‍ವೆಲ್ 40 ಎಸೆತಗಳಲ್ಲೇ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದರೆ, ದಕ್ಷಿಣ ಆಫ್ರಿಕಾದ ಐಡೆನ್ ಮ್ಯಾರ್ಕಮ್ ( 48 ಎಸೆತ), ಆಸೀಸ್‍ನ ಟ್ರಾವಿಸ್ ಹೆಡ್ (59 ಎಸೆತ), ಹರಿಣ ನಾಡಿನ ಹೆನ್ರಿಚ್ ಕ್ಲಾಸೆನ್ ( 61 ಎಸೆತ), ರೋಹಿತ್ ಶರ್ಮಾ (63 ಎಸೆತ) ವೇಗದ ಶತಕ ಸಿಡಿಸಿದ ಟಾಪ್ 5 ಬ್ಯಾಟರ್‍ಗಳಾಗಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿದ್ದು-ಪರಂ ರಹಸ್ಯ ಸಭೆ

ಬೆಂಗಳೂರು,ಅ.28- ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಹಲವು ಸಚಿವರು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಯಲ್ಲಿ ಭೋಜನಕೂಟ ನಡೆಸಿರುವುದು, ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಟ್ಟಿರುವುದು ಹಲವು ಕುತೂಹಲಗಳನ್ನು ಕೆರಳಿಸಿದೆ.

ಸದಾಶಿವನಗರದ ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನಕೂಟದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಭಾಗವಹಿಸಿದ್ದರು. ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ಸೂತ್ರ ಜಾರಿಯಾಗಲಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ನಿನ್ನೆಯಷ್ಟೆ ಹೇಳಿಕೆ ನೀಡಿದ್ದರು.

ಅದರ ಬೆನ್ನಲ್ಲೆ ರಾತ್ರಿಯೇ ಬೋಜನಕೂಟ ನಡೆಸಿರುವುದು ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಗಂಭೀರತೆಯನ್ನು ಬಹಿರಂಗ ಪಡಿಸಿದೆ. ಇದೊಂದು ಸೌಜನ್ಯದ ಭೇಟಿಯಷ್ಟೆ. ನಾನು, ಮುಖ್ಯಮಂತ್ರಿಯವರು, ಮಹದೇವಪ್ಪ, ಸತೀಶ್ ಜಾರಕಿಹೊಳಿಯವರು ಊಟಕ್ಕೆ ಸೇರಿದ್ದೇವು, ಇದರಲ್ಲಿ ರಾಜಕೀಯ ಇಲ್ಲ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಸತೀಶ್ ಜಾರಕಿಹೊಳಿ ಕೂಡ ಮಾತನಾಡಿದ್ದು, ರಾಜಕಾರಣಿಗಳು ಸಭೆ ಸೇರಿದ್ದಾಗ ರಾಜಕಾರಣ ಚರ್ಚೆಯಾಗದೆ ಇರುತ್ತದೆಯೇ. ಆದರೆ ಸದ್ಯಕ್ಕೆ ಗಂಭೀರವಾಗಿ ತೆಗೆದುಕೊಳ್ಳುವಂತಹದ್ದೇನು ಇಲ್ಲ. ಯಾವುದೇ ಸಮಸ್ಯೆಗಳಿದ್ದರೂ ನಮ್ಮಲ್ಲೆ ಬಗೆ ಹರಿಸಿಕೊಳ್ಳುತ್ತೇವೆ ಎಂದು ಕುತೂಹಲ ಕೆರಳಿಸಿದ್ದಾರೆ.

ನಾನಾ ರೀತಿಯ ಚರ್ಚೆಗಳು:
ಪರಮೇಶ್ವರ್ ಮನೆಯಿಂದ ಕೂಗಳತೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯಿದೆ. ಡಿ.ಕೆ.ಶಿವಕುಮಾರ್ ನಿನ್ನೆ ಮನೆಯಲ್ಲೇ ಇದ್ದರೂ ಕೂಡ ಅವರನ್ನು ಬೋಜನಕೂಟಕ್ಕೆ ಆಹ್ವಾನ ಮಾಡದೆ ಇರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಮುಖ್ಯಮಂತ್ರಿ ಸಮ್ಮುಖದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪದ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಲಾಗಿದೆ. 24 ಮಂದಿ ಶಾಸಕರೊಂದಿಗೆ ವಿದೇಶಿ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಯೋಜನೆ ರೂಪಿಸಿದ್ದು, ಇದು ಪಕ್ಷದಲ್ಲಿ ಬಲಾಬಲ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಿದೆ ಎಂಬ ವ್ಯಾಖ್ಯಾನಗಳಿವೆ.

ಶಾಸಕರೊಂದಿಗೆ ವಿದೇಶಿ ಅಥವಾ ಪ್ರತ್ಯೇಕ ಪ್ರವಾಸವನ್ನು ಕೈ ಬಿಡಿ ಎಂದು ಸಿದ್ದರಾಮಯ್ಯನವರು ಸತೀಶ್ ಜಾರಕಿಹೊಳಿ ಅವರ ಮನವೋಲಿಸಿದ್ದಾರೆ. ಹಾಗೆಯೇ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ರ್ಪಧಿಸಲು ಸತೀಶ್ ಜಾರಕಿಹೊಳಿ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡಿಸುವ ಬಗ್ಗೆಯೂ ಭರವಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ನಿಗಮ ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ, ಬೆಳಗಾವಿ ಜಿಲ್ಲಾ ರಾಜಕಾರಣ, ಅಧಿಕಾರ ಹಂಚಿಕೆಯ ಸೂತ್ರ, ಮುಖ್ಯಮಂತ್ರಿ, ಸಚಿವರು ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಶಾಸಕರು ನೀಡುತ್ತಿರುವ ಹೇಳಿಕೆಗಳು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಅನುಸರಿಸಬೇಕಾದ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿವೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ದಾಳ:
ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಕೆಲ ಶಾಸಕರು ಬಹಿರಂಗ ಹೇಳಿಕೆ ನೀಡುತ್ತಿದ್ದಂತೆ ಸಕ್ರಿಯರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿರುವುದು ನಾನಾ ರೀತಿಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಾತಿವಾರು ಪ್ರಾತಿನಿಧ್ಯಕ್ಕನುಗುಣವಾಗಿ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿಗಳ ಹುದ್ದೆಗಳು ಸೃಷ್ಟಿಯಾಗಬೇಕು ಎಂದು ಹೇಳಿಕೆ ನೀಡಿದರು. ಅದನ್ನು ಇನ್ನಷ್ಟು ಲಂಭಿಸಿದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರ ಜೊತೆಗೆ ಲಿಂಗಾಯಿತ ಹಾಗೂ ಮಹಿಳಾ ಖೋಟಾವೂ ಸೇರಿ ಐದು ಮಂದಿಯನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದಿದ್ದರು.

ಸಚಿವ ಎಂ.ಬಿ.ಪಾಟೀಲ್ ಹಾಗೂ ಇತರರು ಇದಕ್ಕೆ ಧ್ವನಿಗೂಡಿಸಿದರು. ಪರಿಶಿಷ್ಟ ಪಂಗಡಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಹೈಕಮಾಂಡ್ ಗಮನ ಸೆಳೆದಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು. ಒಂದಷ್ಟು ದಿನ ಈ ಚರ್ಚೆಗಳು ನಡೆದಿದ್ದವು. ಪರಿಶಿಷ್ಟ ಜಾತಿಯಿಂದ ಪರಮೇಶ್ವರ್, ಪಂಗಡದಿಂದ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಪ್ರಮುಖವಾಗಿ ಪರಮೇಶ್ವರ್ ಅವರು ಖುದ್ದು ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿ ಹಲವು ಬಾರಿ ವೈಪಲ್ಯ ಅನುಭವಿಸಿದ್ದಾರೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡು ಕೂದಲೆಳೆಯ ಅಂತರದಲ್ಲಿ ಅವಕಾಶ ಕಳೆದುಕೊಂಡ ಅವರು ಪಕ್ಷದ ಅಧ್ಯಕ್ಷರಾಗಿರುವ ಕಾರಣಕ್ಕೆ ವಿಧಾನಪರಿಷತ್‍ಗೆ ನಾಮನಿರ್ದೇಶನಗೊಂಡು ಸಚಿವ ಸ್ಥಾನ ಪಡೆದುಕೊಂಡಿದ್ದರು. ಅವಕಾಶ ಸಿಕ್ಕಾಗಲೆಲ್ಲಾ ದಲಿತ ಮುಖ್ಯಮಂತ್ರಿ ಹುದ್ದೆಯ ಪ್ರಸ್ತಾಪ ಮಾಡುತ್ತಿದ್ದರು. ಆ ವೇಳೆ ಕೆ.ಹೆಚ್.ಮುನಿಯಪ್ಪ ಹಾಗೂ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಮುಂದೆ ಬಂದು ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಎಂದು ಹೇಳುತ್ತಿದ್ದರು.

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್

ಅಲ್ಲಿಗೆ ದಲಿತ ಸಮುದಾಯಗಳ ಒಳಪಂಗಡಗಳಲ್ಲೇ ಪೈಪೋಟಿ ಉಂಟಾಗಿ ದಲಿತ ಮುಖ್ಯಮಂತ್ರಿ ಹುದ್ದೆ ಚರ್ಚೆ ನಗಣ್ಯವಾಗುತ್ತಿತ್ತು. ಮುನಿಯಪ್ಪ, ಆಂಜನೇಯ ಆಗ ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು ಎಂಬುದು ವಿಶೇಷ. ಸುದೀರ್ಘ ಅವ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರ ಪ್ರತಿಸ್ರ್ಪಧಿ ಬಣದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪರಮೇಶ್ವರ್ ಕಾಂಗ್ರೆಸ್ ಸರ್ಕಾರದಲ್ಲೂ ಅದೇ ಹುದ್ದೆಯ ನಿರೀಕ್ಷೆಯಲ್ಲಿದ್ದರಾದರೂ ಹೈಕಮಾಂಡ್ ಅವಕಾಶ ನೀಡಿಲ್ಲ. ಡಿ.ಕೆ.ಶಿವಕುಮಾರ್ ಅವರೊಬ್ಬರಿಗೆ ಮಾತ್ರ ಪ್ರಮುಖ ಹುದ್ದೆ ನೀಡಿದೆ ಎಂಬ ಅಸಮಧಾನಗಳು ಕೇಳಿ ಬರುತ್ತಿವೆ.

ಸಿದ್ದರಾಮಯ್ಯ ಜನನಾಯಕ, ಹೆಚ್ಚು ಶಾಸಕರ ಬೆಂಬಲ ಹೊಂದಿದ್ದಾರೆ ಎಂಬ ವ್ಯಾಖ್ಯಾನಗಳಿವೆ. ಅದರ ಹೊರತಾಗಿಯೂ ಅಧಿಕಾರ ಹಂಚಿಕೆಯ ಸೂತ್ರ ಸಿದ್ಧವಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೆಲ ಶಾಸಕರು ಹೇಳುತ್ತಿದ್ದಾರೆ. ಅಂತಹ ಸಂದರ್ಭ ಬಂದರೆ ಮತ್ತೆ ದಲಿತ, ಲಿಂಗಾಯಿತ, ಅಲ್ಪಸಂಖ್ಯಾತ ಮುಖ್ಯಮಂತ್ರಿ ಹುದ್ದೆಗಳ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಕೊಹ್ಲಿ ಟೀಂ ಇಂಡಿಯಾದ 6ನೇ ಬೌಲರ್..?

2023ರ ವಿಧಾನಸಭೆ ಚುನಾವಣೆಯ ಫಲಿತಾಂಶದ ಯಶಸ್ಸನ್ನು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗಷ್ಟೆ ನೀಡುತ್ತಿದ್ದ ಚರ್ಚೆಗಳಿಂದ ಸಿಡಿಮಿಡಿಗೊಂಡಿದ್ದ ಪರಮೇಶ್ವರ್ 2013ರ ಚುನಾವಣೆಯ ಗೆಲವಿನ ಯಶಸ್ಸು ತಮಗೆ ಸಿಗಲಿಲ್ಲ ಎಂಬ ಅಸಮಧಾನವನ್ನು ಬಹಿರಂಗವಾಗಿಯೇ ಹೊರ ಹಾಕಿದ್ದರು. ಸಿದ್ದರಾಮಯ್ಯ ಅವರ ಜೊತೆ ಮುಸುಕಿನ ಗುದ್ದಟ್ಟಾ ನಡೆಸುತ್ತಿದ್ದ ಪರಮೇಶ್ವರ್ ಈಗ ಅವರ ಆಪ್ತ ಬಣದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದಾರೆ. ದೀರ್ಘ ಕಾಲದ ಮಿತ್ರ ಡಿ.ಕೆ.ಶಿವಕುಮಾರ್ ವಿರುದ್ಧವಾಗಿ ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರಾಣಿಯಾಗಿ ಬಳಕೆಯಾಗಲಿದ್ದಾರೆ ಎಂಬ ಅನುಮಾನಗಳು ಕೇಳಿ ಬಂದಿವೆ.

ವಿರೋಧ ಪಕ್ಷಗಳು ಆರೋಪಿಸುವಂತೆ ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರು ಬಾಗಿಲು ಎಂಬಂತಹ ಪರಿಸ್ಥಿತಿಯನ್ನು ಸ್ವತಃ ಆ ಪಕ್ಷದ ನಾಯಕರೇ ಸೃಷ್ಟಿಸುತ್ತಿದ್ದಾರೆ.

5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ : ಸಚಿವ ಮಹದೇವಪ್ಪ

ಬೆಂಗಳೂರು, ಅ.28- ಪರಮೇಶ್ವರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವವರಿಗೆ ಬುದ್ದಿ ಇಲ್ಲ ಎಂದಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮುಂದಿನ ಎರಡುವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ, ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗಳ ನಡುವೆ ಮಹದೇವಪ್ಪ ಅವರ ಮಾತುಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಮಹದೇವಪ್ಪ, ನಿನ್ನೆ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ನಾವು ಒಂದಿಷ್ಟು ಮಂದಿ ಊಟಕ್ಕೆ ಕರೆದಿದ್ದೇವು. ಅದರಲ್ಲಿ ವಿಶೇಷವೇನಿಲ್ಲ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದರು. ಡಿ.ಕೆ.ಶಿವಕುಮಾರ್ ಅವರನ್ನು ಭೋಜನಕೂಟಕ್ಕೆ ಆಹ್ವಾನ ನೀಡಿದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.

ಭೋಜನಕೂಟದಲ್ಲಿ ಯಾವುದೇ ರಾಜಕೀಯ ಚರ್ಚೆ ಇಲ್ಲ ಎಂದು ಪದೇ ಪದೇ ಪುನರುಚ್ಚರಿಸಿದ ಅವರು, ಪರಮೇಶ್ವರ್‍ರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳುವವರಿಗೆ ಬುದ್ದಿ ಇಲ್ಲ. ಐದು ವರ್ಷದವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು. ಈ ಮೂಲಕ ಡಿ.ಕೆ.ಶಿವಕುಮಾರ್ ಬಣದ ಶಾಸಕರಿಗೆ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಹದೇವಪ್ಪ ಟಾಂಗ್ ನೀಡಿದ್ದಾರೆ.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಮರುಪ್ರಶ್ನೆ ಹಾಕಿದ್ದಾರೆ. ಬಿಜೆಪಿ-ಜೆಡಿಎಸ್‍ನಿಂದ ಸರ್ಕಾರ ಬೀಳಿಸುವ ಪ್ರಯತ್ನಗಳ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈಲು ಹೋಗುತ್ತಿರುತ್ತದೆ. ಬೋಗಿ ಅಲುಗಾಡುತ್ತದೆ. ರೈಲು ಬೀಳುವುದಿಲ್ಲ. ವಿಪಕ್ಷಗಳ ಆಸೆ ಈಡೇರುವುದಿಲ್ಲ ಎಂದರು.

ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಭೋಜನಕೂಟದಲ್ಲಿ ನಾವು ಊಟವನ್ನಷ್ಟೆ ಮಾಡಿದ್ದೇವೆ ಎಂದರು.

ರಾಮನಗರದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಎದುರು ಸಿಇಒ ಕಾಲು ಮೇಲೆ ಕಾಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ಇದರ ಬಗ್ಗೆ ಶಿಷ್ಟಾಚಾರದ ನಿಯಮಗಳು ಏನಿವೆ ಎಂದು ಪರಿಶೀಲಿಸಬೇಕಿದೆ ಎಂದರು.

40 ಅಕ್ರಮ ಕಟ್ಟಡಗಳ ತೆರವಿಗೆ ಬಿಬಿಎಂಪಿ ಆದೇಶ

ಬೆಂಗಳೂರು,ಅ.28- ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರದಲ್ಲಿ ನಿರ್ಮಿಸುತ್ತಿದ್ದ 40 ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ. ಮಹದೇವಪುರ ವಲಯದಲ್ಲಿ ನಿರ್ಮಾಣಗೊಳ್ಳುತ್ತಿದ್ದ 40 ಕ್ಕೂ ಹೆಚ್ಚು ಅಧಿನಕೃತ ಕಟ್ಟಡಗಳಿಗೆ ಬಿಬಿಎಂಪಿ ಈಗಾಗಲೇ ನೋಟೀಸ್ ಜಾರಿ ಮಾಡಿದ್ದು, ಕೂಡಲೇ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿದೆ.

ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರ ವಲಯದ ವೈಟ್ ರೋಸ್ ಲೇಔಟ್ 40ಕ್ಕೂ ಹೆಚ್ಚು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘಟನೆಗಳು ಡಿಸಿಎಂ ಹಾಗೂ ಸಿಎಂ ಗೆ ದೂರು ನೀಡಿದ್ದರೂ ಈ ಕುರಿತಂತೆ ಪರಿಶೀಲನೆ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರು ಸೂಚನೆ ಮೇರೆಗೆ ಬಿಬಿಎಂಪಿ ಅಧಿಕಾರಿಗಳು 40 ಕಟ್ಟಡಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವ ಬಿಲ್ಡರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಕುಮಾರ್ ಅವರ ಆದೇಶದನ್ವಯ ಮಹದೇವಪುರ ಜಂಟಿ ಅಯುಕ್ತೆ ದಾಕ್ಷಾಯಿಣಿ ಅವರು ನೋಟೀಸ್ ನೀಡಿದ್ದಾರೆ.

ಪಿಜಿ ಸೇರಿದಂತೆ ವಸತಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಸುಳ್ಳು ಮಾಹಿತಿ ನೀಡಿ ಅಕ್ರಮ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ನೀರಿನ ಸಂಪರ್ಕ ಪಡೆಯಲಾಗಿರುವುದು ಹಾಗೂ ಬಿಬಿಎಂಪಿಯಿಂದ ನಕ್ಷೆ ಮಂಜೂರು ಮಾಡಿಸಿಕೊಳ್ಳದಿರುವುದು ದಾಖಲೆ ಪರಿಶೀಲನೆ ವೇಳೆ ಕಂಡು ಬಂದಿದೆ..

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಬೆಂಗಳೂರು, ಅ.28- ನಗರ ವ್ಯಾಪ್ತಿಯ ಎಲ್ಲಾ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಿರಬೇಕು. ಸಿಸಿ ಕ್ಯಾಮೆರಾ ಅಳವಡಿಸದ ಮಾಲೀಕರಿಗೆ ದಂಡ ವಿಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.

ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಪ್ರಕಾರ 100ಕ್ಕೂ ಹೆಚ್ಚು ಸಾರ್ವಜನಿಕರು ಬರುವ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಬೇಕು ಎಂದು ನಿಯಮವಿದೆ. ಸಿಸಿ ಕ್ಯಾಮೆರಾಗಳನ್ನೂ ಪೋಲೀಸರ ಮಾರ್ಗದರ್ಶನದಲ್ಲಿ ಅಳವಡಿಸಬೇಕು ಎಂದು ಹೇಳಿದರು.

ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಕಾಣುವಂತೆ, ಸಿಸಿ ಕ್ಯಾಮೆರಾ ಅಳವಡಿಸಬೇಕು ಅವುಗಳು ಹೆಚ್ಚು ಕ್ವಾಲಿಟಿ ಇರಬೇಕು, ಸ್ಟೋರೇಜ್ ಹೆಚ್ಚಾಗಿ ಇರಬೇಕು, ಕ್ಯಾಮೆರಾ ಯಾವಕಡೆ ಇರಬೇಕು, ನಿರ್ವಹಣೆ ಮಾಡುವುದರ ಬಗ್ಗೆ ಪೋಲೀಸರು ಸಲಹೆ ನೀಡುತ್ತಾರೆ. ಒಂದು ಸಿಸಿ ಟಿವಿ, ಒಬ್ಬರು ಪೋಲೀಸ್ ರೀತಿ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ರಸ್ತೆಗಳಲ್ಲಿ ವಾಹನ ನಿಲುಗಡೆ, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಹೋಟೆಲ್, ರೆಸ್ಟೋರೆಂಟ್‍ಗಳ ಬಗ್ಗೆ ಸಾಕಷ್ಟು ದೂರು ಹೇಳಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಲು ಸ್ಥಳೀಯ ಪೋಲೀಸರಿಗೆ ಆಯುಕ್ತರು ಆದೇಶಿಸಿದರು.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಇನ್ನು ಬೇಕರಿಗಳ ಬಗ್ಗೆ ಬಹಳಷ್ಟು ದೂರುಗಳು ಕೇಳಿ ಬಂದಿದ್ದು, ಬೇಕರಿ ಬಳಿ ಧೂಮಪಾನ ಮಾಡುವುದು, ಪಡ್ಡೆ ಹುಡುಗರು ಅಲ್ಲಿ ತಮ್ಮ ಅಡ್ಡ ಮಾಡಿಕೊಂಡು ಹೆಣ್ಣುಮಕ್ಕಳಿಗೆ ಚುಡಾಯಿಸುವ ಚಾಳಿ ಹೆಚ್ಚಾಗಿದೆ ಎಂದು ಆಯುಕ್ತರ ಮುಂದೆ ಸಾರ್ವಜನಿಕರು ಅಳಲು ತೋಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ದಯಾನಂದ ಅವರು ಈ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿದ್ದು, ಬೇಕರಿಗಳ ಬಳಿ ಧೂಮಪಾನ ನಿಷೇಧಿಸಲಾಗಿದೆ. ಎಲ್ಲಾ ಬೇಕರಿಗಳ ಬಳಿ ಧೂಮಪಾನ ನಿಷೇಧ ಬೊರ್ಡ್ ಅಳವಡಿಸುವಂತೆ ಬೇಕರಿ ಮಾಲೀಕರಿಗೆ ಸೂಚಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಆದೇಶಿಸಿದರು. ಮಾದಕ ವಸ್ತು ಜಾಲದ ಬಗ್ಗೆ ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿ ತಿಂಗಳ ಕೊನೆಯ ದಿನ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಡ್ರಗ್ಸ್ ಜಾಲದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆಂದು ಆಯುಕ್ತರು ತಿಳಿಸಿದರು.