Friday, November 7, 2025
Home Blog Page 1857

“ಡಿಕೆಶಿಯವರಿಗೆ 70 ಶಾಸಕರ ಬೆಂಬಲವಿದೆ, ಅವರನ್ನು ಸಿಎಂ ಮಾಡೇ ತೀರುತ್ತೇವೆ”

ಬೆಂಗಳೂರು, ಅ.28- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾಂಗ್ರೆಸ್‍ನಲ್ಲಿನ 70 ಶಾಸಕರ ಬೆಂಬಲ ಇದೆ ಎಂದು ಪುನರುಚ್ಚರಿಸಿರುವ ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್, ಈ ಐದು ವರ್ಷದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದಿದ್ದಾರೆ.

ಅಧಿಕಾರ ಹಂಚಿಕೆ, ಪಕ್ಷ ಹಾಗೂ ಸರ್ಕಾರದ ಕುರಿತಂತೆ ಶಾಸಕರು ಹಾಗೂ ನಾಯಕರು ಬಹಿರಂಗ ಹೇಳಿಕೆ ನೀಡಬಾರದು ಎಂದು ಇಂದು ಬೆಳಗ್ಗೆಯಷ್ಟೆ ಕಟ್ಟಪ್ಪಣೆ ಮಾಡಿದರು. ಅದರ ಹೊರತಾಗಿಯೂ ಮತ್ತೆ ಶಿವಗಂಗಾ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಾಡಿದ್ದು ಡಿ.ಕೆ.ಶಿವಕುಮಾರ್ ನೂರಕ್ಕೆ ನೂರರಷ್ಟು ಮುಖ್ಯಮಂತ್ರಿಯಾಗೇ ಆಗುತ್ತಾರೆ ಎಂದು ಹೇಳಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ನಾನು ಮತ್ತು ನಮ್ಮ ಸ್ನೇಹಿತರು ಬಣ ರಾಜಕೀಯದ ಬಗ್ಗೆ ಮಾತನಾಡಿಲ್ಲ. ನಾವು ಹೇಳಿರುವುದು ಒಂದೇ ಬಣ, ಕಾಂಗ್ರೆಸ್ ಬಣ. 60ರಿಂದ 70 ಶಾಸಕರು ಡಿ.ಕೆ.ಶಿವಕುಮಾರ್ ಬೆಂಬಲಕ್ಕೆ ಇದ್ದೇವೆ ಎಂದು ನಾನು ಸಹಜವಾಗಿ ಹೇಳಿದ್ದೇನೆ. ಉಳಿದವರ ಬೆಂಬಲ ಇಲ್ಲ ಎಂದಲ್ಲ. 135 ಶಾಸಕರು ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಇದ್ದಾರೆ. ಇದರಲ್ಲಿ ಹಿರಿಯರು, ಕಿರಿಯರು ಎಂಬುದಿಲ್ಲ ಎಂದರು.

ಪ್ರಮುಖವಾಗಿ ನಮ್ಮ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಕೊಟ್ಟು, ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಿ ಗೆಲ್ಲಿಸಿದ ಡಿ.ಕೆ.ಶಿವಕುಮಾರ್ ಅವರ ಪರವಾಗಿ 70 ಶಾಸಕರಿದ್ದೇವೆ ಎಂದು ಹೇಳುವುದರಲ್ಲಿ ತಪ್ಪಿಲ್ಲ. ಪರ-ವಿರೋಧ ಎಂದು ಹೇಳಲು ನಾವು ಬಯಸುವುದಿಲ್ಲ. ನಾವು ಡಿ.ಕೆ.ಶಿವಕುಮಾರ್ ಪರವಾಗಿದ್ದೇವೆ ಎಂದು ಹೇಳಿದ್ದೇವೆಯೇ ಹೊರತು ಮತ್ತೊಬ್ಬರಿಗೆ ವಿರುದ್ಧವಾಗಿದ್ದೇವೆ ಎಂದು ಹೇಳಿಲ್ಲ. ನಾವು ಎಲ್ಲರೂ ಒಂದು ಎಂದರು.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ. ನಾನು ಮೊದಲೇ ಈ ಬಗ್ಗೆ ಹೇಳಿದ್ದೇನೆ. ಚುನಾವಣೆ ಫಲಿತಾಂಶದ ಬಳಿಕ ಅವರೇ ಮುಖ್ಯಮಂತ್ರಿಯಾಗಬೇಕಿತ್ತು. ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿಯಾಗುವ ವಾಡಿಕೆ ಕಾಂಗ್ರೆಸ್‍ನಲ್ಲಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಸಿದ್ದರಾಮಯ್ಯಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ.

ಕೊನೆಯ ಅವಕಾಶ ಎಂದು ಮತ್ತು ಹಿಂದಿನ ಐದು ವರ್ಷ ಮುಖ್ಯಮಂತ್ರಿಯಾಗಿ ಒಳ್ಳೆಯ ಆಡಳಿತ ನೀಡಿದ್ದಾರೆ ಎಂಬ ಕಾರಣಕ್ಕೆ ಎಲ್ಲಾ ಶಾಸಕರು ಗೌರವಯುತವಾಗಿ ಬೆಂಬಲ ನೀಡಿದ್ದರು. ಅದನ್ನು ಪರಿಗಣಿಸಿ ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಿದೆ. ತದನಂತರ ಡಿ.ಕೆ.ಶಿವಕುಮಾರ್ ಅವರನ್ನು ನಾವೇಲ್ಲಾ ಸೇರಿ ನೂರಕ್ಕೆ ನೂರು ಮುಖ್ಯಮಂತ್ರಿ ಮಾಡೇ ಮಾಡುತ್ತೇವೆ ಎಂದರು.

ಸಹಜವಾಗಿ ಅಧಿಕಾರದ ಅವಧಿಯನ್ನು ಎರಡು ಭಾಗವಾಗಿ ವಿಂಗಡಿಸುತ್ತೇವೆ. ಐದು ವರ್ಷ ಇದ್ದರೆ ಅದರಲ್ಲಿ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗುವ ಸಾಧ್ಯತೆ ಇರುತ್ತದೆ. ಆ ಹಿನ್ನೆಲೆಯಲ್ಲಿ ಈ ಐದು ವರ್ಷದ ಒಳಗೆ ಡಿ.ಕೆ.ಶಿವಕುಮಾರ್‍ರನ್ನು ಮುಖ್ಯಮಂತ್ರಿ ಮಾಡುತ್ತೇವೆ. ಪಕ್ಷ ಸಂಘಟನೆ ಮಾಡಿ ಡಿ.ಕೆ.ಶಿವಕುಮಾರ್ ನಮ್ಮನ್ನು ಗೆಲ್ಲಿಸಿದ್ದಾರೆ ಎಂಬ ಭಾವನೆ ಇರುವ ಎಲ್ಲರೂ ಅವರಿಗೆ ಬೆಂಬಲವಾಗಿದ್ದಾರೆ ಎಂದಿದ್ದಾರೆ.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಧರ್ಮಶಾಲಾ, ಅ. 28- ಗಾಯದ ಸಮಸ್ಯೆ ಯಿಂದ ಬಳಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಆರಂಭಿಕ 5 ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಸ್ಪೋಟಕ ಆರಂಭಿಕ ಆಟಗಾರ ಟ್ರಾವಿಸ್ ಹೆಡ್ ಅವರು 2 ಮಹತ್ತರ ದಾಖಲೆ ಬರೆಯುವ ಮೂಲಕ ಬಲವಾಗಿ ಕಮ್ ಬ್ಯಾಕ್ ಮಾಡಿದ್ದಾರೆ.

2 ಎಸೆತಗಳಲ್ಲಿ 21 ರನ್ ಸಿಡಿಸಿದ ಟ್ರಾವಿಸ್ ಹೆಡ್:
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಸ್ಪೋಟಕ ಆಟಗಾರರಾದ ಡೇವಿಡ್ ವಾರ್ನರ್ ಹಾಗೂ ಟ್ರಾವಿಸ್ ಹೆಡ್ ಆರಂಭಿಕ 2 ಓವರ್‍ಗಳಲ್ಲಿ ಎಚ್ಚರಿಕೆ ಆಟ ಪ್ರದರ್ಶಿಸಿದರು. ಆದರೆ 3ನೇ ಓವರ್‍ನಲ್ಲಿ ನ್ಯೂಜಿಲೆಂಡ್‍ನ ವೇಗಿ ಮ್ಯಾಟ್ ಹೆನ್ರಿ ಓವರ್‍ನಲ್ಲಿ 2 ನೋಬಾಲ್‍ನ ಲಾಭ ಪಡೆದ ಟ್ರಾವಿಸ್ ಹೆಡ್ ನೋ ಬಾಲ್ ಎಸೆತದಲ್ಲಿ 2 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ 2 ಎಸೆತಗಳಲ್ಲೇ 21 ರನ್ ಗಳಿಸಿ ವಿಶ್ವದಾಖಲೆ ಬರೆಯಲು ವಾರ್ನರ್‍ರೊಂದಿಗೆ ಕೈಜೋಡಿಸಿದರು.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

59 ಎಸೆತಗಳಲ್ಲೇ ಶತಕ:
ಧರ್ಮಶಾಲಾದ ಬ್ಯಾಟಿಂಗ್ ಪಿಚ್‍ನಲ್ಲಿ ಸಿಡಿಲಬ್ಬರದ ಪ್ರದರ್ಶನ ತೋರಿದ ಟ್ರಾವಿಸ್ ಹೆಡ್ 59 ಎಸೆತಗಳಲ್ಲೇ ಶತಕ ಸಿಡಿಸುವ ಮೂಲಕ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದರು. ನೆದರ್‍ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಗ್ಲೆನ್ ಮ್ಯಾಕ್ಸ್‍ವೆಲ್ 40 ಎಸೆತಗಳಲ್ಲೇ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದರೆ, ದಕ್ಷಿಣ ಆಫ್ರಿಕಾದ ಐಡೆನ್ ಮ್ಯಾರ್ಕಮ್ ( 48 ಎಸೆತ), ಆಸೀಸ್‍ನ ಟ್ರಾವಿಸ್ ಹೆಡ್ (59 ಎಸೆತ), ಹರಿಣ ನಾಡಿನ ಹೆನ್ರಿಚ್ ಕ್ಲಾಸೆನ್ ( 61 ಎಸೆತ), ರೋಹಿತ್ ಶರ್ಮಾ (63 ಎಸೆತ) ವೇಗದ ಶತಕ ಸಿಡಿಸಿದ ಟಾಪ್ 5 ಬ್ಯಾಟರ್‍ಗಳಾಗಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಸಿದ್ದು-ಪರಂ ರಹಸ್ಯ ಸಭೆ

ಬೆಂಗಳೂರು,ಅ.28- ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಹಲವು ಸಚಿವರು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮನೆಯಲ್ಲಿ ಭೋಜನಕೂಟ ನಡೆಸಿರುವುದು, ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಟ್ಟಿರುವುದು ಹಲವು ಕುತೂಹಲಗಳನ್ನು ಕೆರಳಿಸಿದೆ.

ಸದಾಶಿವನಗರದ ಪರಮೇಶ್ವರ್ ಮನೆಯಲ್ಲಿ ನಡೆದ ಬೋಜನಕೂಟದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಭಾಗವಹಿಸಿದ್ದರು. ಎರಡುವರೆ ವರ್ಷದ ಬಳಿಕ ಅಧಿಕಾರ ಹಂಚಿಕೆ ಸೂತ್ರ ಜಾರಿಯಾಗಲಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ನಿನ್ನೆಯಷ್ಟೆ ಹೇಳಿಕೆ ನೀಡಿದ್ದರು.

ಅದರ ಬೆನ್ನಲ್ಲೆ ರಾತ್ರಿಯೇ ಬೋಜನಕೂಟ ನಡೆಸಿರುವುದು ತೆರೆಮರೆಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಗಂಭೀರತೆಯನ್ನು ಬಹಿರಂಗ ಪಡಿಸಿದೆ. ಇದೊಂದು ಸೌಜನ್ಯದ ಭೇಟಿಯಷ್ಟೆ. ನಾನು, ಮುಖ್ಯಮಂತ್ರಿಯವರು, ಮಹದೇವಪ್ಪ, ಸತೀಶ್ ಜಾರಕಿಹೊಳಿಯವರು ಊಟಕ್ಕೆ ಸೇರಿದ್ದೇವು, ಇದರಲ್ಲಿ ರಾಜಕೀಯ ಇಲ್ಲ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಸತೀಶ್ ಜಾರಕಿಹೊಳಿ ಕೂಡ ಮಾತನಾಡಿದ್ದು, ರಾಜಕಾರಣಿಗಳು ಸಭೆ ಸೇರಿದ್ದಾಗ ರಾಜಕಾರಣ ಚರ್ಚೆಯಾಗದೆ ಇರುತ್ತದೆಯೇ. ಆದರೆ ಸದ್ಯಕ್ಕೆ ಗಂಭೀರವಾಗಿ ತೆಗೆದುಕೊಳ್ಳುವಂತಹದ್ದೇನು ಇಲ್ಲ. ಯಾವುದೇ ಸಮಸ್ಯೆಗಳಿದ್ದರೂ ನಮ್ಮಲ್ಲೆ ಬಗೆ ಹರಿಸಿಕೊಳ್ಳುತ್ತೇವೆ ಎಂದು ಕುತೂಹಲ ಕೆರಳಿಸಿದ್ದಾರೆ.

ನಾನಾ ರೀತಿಯ ಚರ್ಚೆಗಳು:
ಪರಮೇಶ್ವರ್ ಮನೆಯಿಂದ ಕೂಗಳತೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನೆಯಿದೆ. ಡಿ.ಕೆ.ಶಿವಕುಮಾರ್ ನಿನ್ನೆ ಮನೆಯಲ್ಲೇ ಇದ್ದರೂ ಕೂಡ ಅವರನ್ನು ಬೋಜನಕೂಟಕ್ಕೆ ಆಹ್ವಾನ ಮಾಡದೆ ಇರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಮುಖ್ಯಮಂತ್ರಿ ಸಮ್ಮುಖದಲ್ಲಿ ನಡೆದ ರಹಸ್ಯ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಡಿ.ಕೆ.ಶಿವಕುಮಾರ್ ಅವರ ಹಸ್ತಕ್ಷೇಪದ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಲಾಗಿದೆ. 24 ಮಂದಿ ಶಾಸಕರೊಂದಿಗೆ ವಿದೇಶಿ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಯೋಜನೆ ರೂಪಿಸಿದ್ದು, ಇದು ಪಕ್ಷದಲ್ಲಿ ಬಲಾಬಲ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಲಿದೆ ಎಂಬ ವ್ಯಾಖ್ಯಾನಗಳಿವೆ.

ಶಾಸಕರೊಂದಿಗೆ ವಿದೇಶಿ ಅಥವಾ ಪ್ರತ್ಯೇಕ ಪ್ರವಾಸವನ್ನು ಕೈ ಬಿಡಿ ಎಂದು ಸಿದ್ದರಾಮಯ್ಯನವರು ಸತೀಶ್ ಜಾರಕಿಹೊಳಿ ಅವರ ಮನವೋಲಿಸಿದ್ದಾರೆ. ಹಾಗೆಯೇ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ರ್ಪಧಿಸಲು ಸತೀಶ್ ಜಾರಕಿಹೊಳಿ ಅವರ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡಿಸುವ ಬಗ್ಗೆಯೂ ಭರವಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ನಿಗಮ ಮಂಡಳಿ ನೇಮಕಾತಿ, ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ, ಬೆಳಗಾವಿ ಜಿಲ್ಲಾ ರಾಜಕಾರಣ, ಅಧಿಕಾರ ಹಂಚಿಕೆಯ ಸೂತ್ರ, ಮುಖ್ಯಮಂತ್ರಿ, ಸಚಿವರು ಹಾಗೂ ಉಪಮುಖ್ಯಮಂತ್ರಿ ಹುದ್ದೆಗಳ ಕುರಿತು ಶಾಸಕರು ನೀಡುತ್ತಿರುವ ಹೇಳಿಕೆಗಳು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೆ ಅನುಸರಿಸಬೇಕಾದ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿವೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ದಾಳ:
ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಎಂದು ಕೆಲ ಶಾಸಕರು ಬಹಿರಂಗ ಹೇಳಿಕೆ ನೀಡುತ್ತಿದ್ದಂತೆ ಸಕ್ರಿಯರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿರುವುದು ನಾನಾ ರೀತಿಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ.

ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಜಾತಿವಾರು ಪ್ರಾತಿನಿಧ್ಯಕ್ಕನುಗುಣವಾಗಿ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿಗಳ ಹುದ್ದೆಗಳು ಸೃಷ್ಟಿಯಾಗಬೇಕು ಎಂದು ಹೇಳಿಕೆ ನೀಡಿದರು. ಅದನ್ನು ಇನ್ನಷ್ಟು ಲಂಭಿಸಿದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಪರಿಶಿಷ್ಟ ಜಾತಿ, ಪಂಗಡ, ಅಲ್ಪಸಂಖ್ಯಾತರ ಜೊತೆಗೆ ಲಿಂಗಾಯಿತ ಹಾಗೂ ಮಹಿಳಾ ಖೋಟಾವೂ ಸೇರಿ ಐದು ಮಂದಿಯನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದಿದ್ದರು.

ಸಚಿವ ಎಂ.ಬಿ.ಪಾಟೀಲ್ ಹಾಗೂ ಇತರರು ಇದಕ್ಕೆ ಧ್ವನಿಗೂಡಿಸಿದರು. ಪರಿಶಿಷ್ಟ ಪಂಗಡಕ್ಕೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಹೈಕಮಾಂಡ್ ಗಮನ ಸೆಳೆದಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದರು. ಒಂದಷ್ಟು ದಿನ ಈ ಚರ್ಚೆಗಳು ನಡೆದಿದ್ದವು. ಪರಿಶಿಷ್ಟ ಜಾತಿಯಿಂದ ಪರಮೇಶ್ವರ್, ಪಂಗಡದಿಂದ ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.

ಪ್ರಮುಖವಾಗಿ ಪರಮೇಶ್ವರ್ ಅವರು ಖುದ್ದು ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿ ಹಲವು ಬಾರಿ ವೈಪಲ್ಯ ಅನುಭವಿಸಿದ್ದಾರೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡು ಕೂದಲೆಳೆಯ ಅಂತರದಲ್ಲಿ ಅವಕಾಶ ಕಳೆದುಕೊಂಡ ಅವರು ಪಕ್ಷದ ಅಧ್ಯಕ್ಷರಾಗಿರುವ ಕಾರಣಕ್ಕೆ ವಿಧಾನಪರಿಷತ್‍ಗೆ ನಾಮನಿರ್ದೇಶನಗೊಂಡು ಸಚಿವ ಸ್ಥಾನ ಪಡೆದುಕೊಂಡಿದ್ದರು. ಅವಕಾಶ ಸಿಕ್ಕಾಗಲೆಲ್ಲಾ ದಲಿತ ಮುಖ್ಯಮಂತ್ರಿ ಹುದ್ದೆಯ ಪ್ರಸ್ತಾಪ ಮಾಡುತ್ತಿದ್ದರು. ಆ ವೇಳೆ ಕೆ.ಹೆಚ್.ಮುನಿಯಪ್ಪ ಹಾಗೂ ಸಚಿವರಾಗಿದ್ದ ಹೆಚ್.ಆಂಜನೇಯ ಅವರು ಮುಂದೆ ಬಂದು ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಎಂದು ಹೇಳುತ್ತಿದ್ದರು.

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್

ಅಲ್ಲಿಗೆ ದಲಿತ ಸಮುದಾಯಗಳ ಒಳಪಂಗಡಗಳಲ್ಲೇ ಪೈಪೋಟಿ ಉಂಟಾಗಿ ದಲಿತ ಮುಖ್ಯಮಂತ್ರಿ ಹುದ್ದೆ ಚರ್ಚೆ ನಗಣ್ಯವಾಗುತ್ತಿತ್ತು. ಮುನಿಯಪ್ಪ, ಆಂಜನೇಯ ಆಗ ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿದ್ದರು ಎಂಬುದು ವಿಶೇಷ. ಸುದೀರ್ಘ ಅವ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರ ಪ್ರತಿಸ್ರ್ಪಧಿ ಬಣದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪರಮೇಶ್ವರ್ ಕಾಂಗ್ರೆಸ್ ಸರ್ಕಾರದಲ್ಲೂ ಅದೇ ಹುದ್ದೆಯ ನಿರೀಕ್ಷೆಯಲ್ಲಿದ್ದರಾದರೂ ಹೈಕಮಾಂಡ್ ಅವಕಾಶ ನೀಡಿಲ್ಲ. ಡಿ.ಕೆ.ಶಿವಕುಮಾರ್ ಅವರೊಬ್ಬರಿಗೆ ಮಾತ್ರ ಪ್ರಮುಖ ಹುದ್ದೆ ನೀಡಿದೆ ಎಂಬ ಅಸಮಧಾನಗಳು ಕೇಳಿ ಬರುತ್ತಿವೆ.

ಸಿದ್ದರಾಮಯ್ಯ ಜನನಾಯಕ, ಹೆಚ್ಚು ಶಾಸಕರ ಬೆಂಬಲ ಹೊಂದಿದ್ದಾರೆ ಎಂಬ ವ್ಯಾಖ್ಯಾನಗಳಿವೆ. ಅದರ ಹೊರತಾಗಿಯೂ ಅಧಿಕಾರ ಹಂಚಿಕೆಯ ಸೂತ್ರ ಸಿದ್ಧವಿದೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಕೆಲ ಶಾಸಕರು ಹೇಳುತ್ತಿದ್ದಾರೆ. ಅಂತಹ ಸಂದರ್ಭ ಬಂದರೆ ಮತ್ತೆ ದಲಿತ, ಲಿಂಗಾಯಿತ, ಅಲ್ಪಸಂಖ್ಯಾತ ಮುಖ್ಯಮಂತ್ರಿ ಹುದ್ದೆಗಳ ಪ್ರಸ್ತಾಪವಾಗುವ ಸಾಧ್ಯತೆ ಇದೆ.

ಕೊಹ್ಲಿ ಟೀಂ ಇಂಡಿಯಾದ 6ನೇ ಬೌಲರ್..?

2023ರ ವಿಧಾನಸಭೆ ಚುನಾವಣೆಯ ಫಲಿತಾಂಶದ ಯಶಸ್ಸನ್ನು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗಷ್ಟೆ ನೀಡುತ್ತಿದ್ದ ಚರ್ಚೆಗಳಿಂದ ಸಿಡಿಮಿಡಿಗೊಂಡಿದ್ದ ಪರಮೇಶ್ವರ್ 2013ರ ಚುನಾವಣೆಯ ಗೆಲವಿನ ಯಶಸ್ಸು ತಮಗೆ ಸಿಗಲಿಲ್ಲ ಎಂಬ ಅಸಮಧಾನವನ್ನು ಬಹಿರಂಗವಾಗಿಯೇ ಹೊರ ಹಾಕಿದ್ದರು. ಸಿದ್ದರಾಮಯ್ಯ ಅವರ ಜೊತೆ ಮುಸುಕಿನ ಗುದ್ದಟ್ಟಾ ನಡೆಸುತ್ತಿದ್ದ ಪರಮೇಶ್ವರ್ ಈಗ ಅವರ ಆಪ್ತ ಬಣದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದಾರೆ. ದೀರ್ಘ ಕಾಲದ ಮಿತ್ರ ಡಿ.ಕೆ.ಶಿವಕುಮಾರ್ ವಿರುದ್ಧವಾಗಿ ಪರಮೇಶ್ವರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರಾಣಿಯಾಗಿ ಬಳಕೆಯಾಗಲಿದ್ದಾರೆ ಎಂಬ ಅನುಮಾನಗಳು ಕೇಳಿ ಬಂದಿವೆ.

ವಿರೋಧ ಪಕ್ಷಗಳು ಆರೋಪಿಸುವಂತೆ ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರು ಬಾಗಿಲು ಎಂಬಂತಹ ಪರಿಸ್ಥಿತಿಯನ್ನು ಸ್ವತಃ ಆ ಪಕ್ಷದ ನಾಯಕರೇ ಸೃಷ್ಟಿಸುತ್ತಿದ್ದಾರೆ.

5 ವರ್ಷ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ : ಸಚಿವ ಮಹದೇವಪ್ಪ

ಬೆಂಗಳೂರು, ಅ.28- ಪರಮೇಶ್ವರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವವರಿಗೆ ಬುದ್ದಿ ಇಲ್ಲ ಎಂದಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಮುಂದಿನ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮುಂದಿನ ಎರಡುವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ, ಚೆನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆಗಳ ನಡುವೆ ಮಹದೇವಪ್ಪ ಅವರ ಮಾತುಗಳು ಭಾರೀ ಚರ್ಚೆಗೆ ಗ್ರಾಸವಾಗಿವೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಮಹದೇವಪ್ಪ, ನಿನ್ನೆ ಗೃಹ ಸಚಿವ ಪರಮೇಶ್ವರ್ ಮನೆಯಲ್ಲಿ ನಾವು ಒಂದಿಷ್ಟು ಮಂದಿ ಊಟಕ್ಕೆ ಕರೆದಿದ್ದೇವು. ಅದರಲ್ಲಿ ವಿಶೇಷವೇನಿಲ್ಲ. ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದರು. ಡಿ.ಕೆ.ಶಿವಕುಮಾರ್ ಅವರನ್ನು ಭೋಜನಕೂಟಕ್ಕೆ ಆಹ್ವಾನ ನೀಡಿದಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.

ಭೋಜನಕೂಟದಲ್ಲಿ ಯಾವುದೇ ರಾಜಕೀಯ ಚರ್ಚೆ ಇಲ್ಲ ಎಂದು ಪದೇ ಪದೇ ಪುನರುಚ್ಚರಿಸಿದ ಅವರು, ಪರಮೇಶ್ವರ್‍ರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಹೇಳುವವರಿಗೆ ಬುದ್ದಿ ಇಲ್ಲ. ಐದು ವರ್ಷದವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು. ಈ ಮೂಲಕ ಡಿ.ಕೆ.ಶಿವಕುಮಾರ್ ಬಣದ ಶಾಸಕರಿಗೆ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಹದೇವಪ್ಪ ಟಾಂಗ್ ನೀಡಿದ್ದಾರೆ.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಅಲ್ಲವೇ ಎಂದು ಪ್ರಶ್ನೆಯೊಂದಕ್ಕೆ ಮರುಪ್ರಶ್ನೆ ಹಾಕಿದ್ದಾರೆ. ಬಿಜೆಪಿ-ಜೆಡಿಎಸ್‍ನಿಂದ ಸರ್ಕಾರ ಬೀಳಿಸುವ ಪ್ರಯತ್ನಗಳ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ರೈಲು ಹೋಗುತ್ತಿರುತ್ತದೆ. ಬೋಗಿ ಅಲುಗಾಡುತ್ತದೆ. ರೈಲು ಬೀಳುವುದಿಲ್ಲ. ವಿಪಕ್ಷಗಳ ಆಸೆ ಈಡೇರುವುದಿಲ್ಲ ಎಂದರು.

ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ದೊಡ್ಡಮಟ್ಟದಲ್ಲಿ ನಡೆಯುತ್ತಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಭೋಜನಕೂಟದಲ್ಲಿ ನಾವು ಊಟವನ್ನಷ್ಟೆ ಮಾಡಿದ್ದೇವೆ ಎಂದರು.

ರಾಮನಗರದ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಎದುರು ಸಿಇಒ ಕಾಲು ಮೇಲೆ ಕಾಲು ಹಾಕಿಕೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮಹದೇವಪ್ಪ, ಇದರ ಬಗ್ಗೆ ಶಿಷ್ಟಾಚಾರದ ನಿಯಮಗಳು ಏನಿವೆ ಎಂದು ಪರಿಶೀಲಿಸಬೇಕಿದೆ ಎಂದರು.

40 ಅಕ್ರಮ ಕಟ್ಟಡಗಳ ತೆರವಿಗೆ ಬಿಬಿಎಂಪಿ ಆದೇಶ

ಬೆಂಗಳೂರು,ಅ.28- ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರದಲ್ಲಿ ನಿರ್ಮಿಸುತ್ತಿದ್ದ 40 ಅಕ್ರಮ ಕಟ್ಟಡಗಳನ್ನು ತೆರವು ಮಾಡುವಂತೆ ಬಿಬಿಎಂಪಿ ಅಧಿಕಾರಿಗಳು ಖಡಕ್ ಸೂಚನೆ ನೀಡಿದ್ದಾರೆ. ಮಹದೇವಪುರ ವಲಯದಲ್ಲಿ ನಿರ್ಮಾಣಗೊಳ್ಳುತ್ತಿದ್ದ 40 ಕ್ಕೂ ಹೆಚ್ಚು ಅಧಿನಕೃತ ಕಟ್ಟಡಗಳಿಗೆ ಬಿಬಿಎಂಪಿ ಈಗಾಗಲೇ ನೋಟೀಸ್ ಜಾರಿ ಮಾಡಿದ್ದು, ಕೂಡಲೇ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿದೆ.

ಆಂಧ್ರ ಮೂಲದ ಬಿಲ್ಡರ್ ಒಬ್ಬರು ಮಹದೇವಪುರ ವಲಯದ ವೈಟ್ ರೋಸ್ ಲೇಔಟ್ 40ಕ್ಕೂ ಹೆಚ್ಚು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘಟನೆಗಳು ಡಿಸಿಎಂ ಹಾಗೂ ಸಿಎಂ ಗೆ ದೂರು ನೀಡಿದ್ದರೂ ಈ ಕುರಿತಂತೆ ಪರಿಶೀಲನೆ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರು ಸೂಚನೆ ಮೇರೆಗೆ ಬಿಬಿಎಂಪಿ ಅಧಿಕಾರಿಗಳು 40 ಕಟ್ಟಡಗಳಿಗೆ ನೋಟೀಸ್ ಜಾರಿ ಮಾಡಿದ್ದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವ ಬಿಲ್ಡರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿವಕುಮಾರ್ ಅವರ ಆದೇಶದನ್ವಯ ಮಹದೇವಪುರ ಜಂಟಿ ಅಯುಕ್ತೆ ದಾಕ್ಷಾಯಿಣಿ ಅವರು ನೋಟೀಸ್ ನೀಡಿದ್ದಾರೆ.

ಪಿಜಿ ಸೇರಿದಂತೆ ವಸತಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಸುಳ್ಳು ಮಾಹಿತಿ ನೀಡಿ ಅಕ್ರಮ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ನೀರಿನ ಸಂಪರ್ಕ ಪಡೆಯಲಾಗಿರುವುದು ಹಾಗೂ ಬಿಬಿಎಂಪಿಯಿಂದ ನಕ್ಷೆ ಮಂಜೂರು ಮಾಡಿಸಿಕೊಳ್ಳದಿರುವುದು ದಾಖಲೆ ಪರಿಶೀಲನೆ ವೇಳೆ ಕಂಡು ಬಂದಿದೆ..

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಬೆಂಗಳೂರು, ಅ.28- ನಗರ ವ್ಯಾಪ್ತಿಯ ಎಲ್ಲಾ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಿರಬೇಕು. ಸಿಸಿ ಕ್ಯಾಮೆರಾ ಅಳವಡಿಸದ ಮಾಲೀಕರಿಗೆ ದಂಡ ವಿಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರು ಎಚ್ಚರಿಕೆ ನೀಡಿದ್ದಾರೆ.

ಯಲಹಂಕ ಉಪನಗರದ ಅಂಬೇಡ್ಕರ್ ಭವನದಲ್ಲಿ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಪಬ್ಲಿಕ್ ಸೇಫ್ಟಿ ಆ್ಯಕ್ಟ್ ಪ್ರಕಾರ 100ಕ್ಕೂ ಹೆಚ್ಚು ಸಾರ್ವಜನಿಕರು ಬರುವ ಅಂಗಡಿಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮರ ಅಳವಡಿಸಬೇಕು ಎಂದು ನಿಯಮವಿದೆ. ಸಿಸಿ ಕ್ಯಾಮೆರಾಗಳನ್ನೂ ಪೋಲೀಸರ ಮಾರ್ಗದರ್ಶನದಲ್ಲಿ ಅಳವಡಿಸಬೇಕು ಎಂದು ಹೇಳಿದರು.

ರಸ್ತೆ ಸುತ್ತಮುತ್ತಲಿನ ಪ್ರದೇಶಗಳು ಕಾಣುವಂತೆ, ಸಿಸಿ ಕ್ಯಾಮೆರಾ ಅಳವಡಿಸಬೇಕು ಅವುಗಳು ಹೆಚ್ಚು ಕ್ವಾಲಿಟಿ ಇರಬೇಕು, ಸ್ಟೋರೇಜ್ ಹೆಚ್ಚಾಗಿ ಇರಬೇಕು, ಕ್ಯಾಮೆರಾ ಯಾವಕಡೆ ಇರಬೇಕು, ನಿರ್ವಹಣೆ ಮಾಡುವುದರ ಬಗ್ಗೆ ಪೋಲೀಸರು ಸಲಹೆ ನೀಡುತ್ತಾರೆ. ಒಂದು ಸಿಸಿ ಟಿವಿ, ಒಬ್ಬರು ಪೋಲೀಸ್ ರೀತಿ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ರಸ್ತೆಗಳಲ್ಲಿ ವಾಹನ ನಿಲುಗಡೆ, ಎಲ್ಲೆಂದರಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆಯಿಂದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುವ ಹೋಟೆಲ್, ರೆಸ್ಟೋರೆಂಟ್‍ಗಳ ಬಗ್ಗೆ ಸಾಕಷ್ಟು ದೂರು ಹೇಳಿದರು. ಈ ಬಗ್ಗೆ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಲು ಸ್ಥಳೀಯ ಪೋಲೀಸರಿಗೆ ಆಯುಕ್ತರು ಆದೇಶಿಸಿದರು.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಇನ್ನು ಬೇಕರಿಗಳ ಬಗ್ಗೆ ಬಹಳಷ್ಟು ದೂರುಗಳು ಕೇಳಿ ಬಂದಿದ್ದು, ಬೇಕರಿ ಬಳಿ ಧೂಮಪಾನ ಮಾಡುವುದು, ಪಡ್ಡೆ ಹುಡುಗರು ಅಲ್ಲಿ ತಮ್ಮ ಅಡ್ಡ ಮಾಡಿಕೊಂಡು ಹೆಣ್ಣುಮಕ್ಕಳಿಗೆ ಚುಡಾಯಿಸುವ ಚಾಳಿ ಹೆಚ್ಚಾಗಿದೆ ಎಂದು ಆಯುಕ್ತರ ಮುಂದೆ ಸಾರ್ವಜನಿಕರು ಅಳಲು ತೋಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ದಯಾನಂದ ಅವರು ಈ ಬಗ್ಗೆ ಈಗಾಗಲೇ ಸಾಕಷ್ಟು ದೂರುಗಳು ಬಂದಿದ್ದು, ಬೇಕರಿಗಳ ಬಳಿ ಧೂಮಪಾನ ನಿಷೇಧಿಸಲಾಗಿದೆ. ಎಲ್ಲಾ ಬೇಕರಿಗಳ ಬಳಿ ಧೂಮಪಾನ ನಿಷೇಧ ಬೊರ್ಡ್ ಅಳವಡಿಸುವಂತೆ ಬೇಕರಿ ಮಾಲೀಕರಿಗೆ ಸೂಚಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಆದೇಶಿಸಿದರು. ಮಾದಕ ವಸ್ತು ಜಾಲದ ಬಗ್ಗೆ ನಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರತಿ ತಿಂಗಳ ಕೊನೆಯ ದಿನ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಡ್ರಗ್ಸ್ ಜಾಲದ ಬಗ್ಗೆ ಅರಿವು ಮೂಡಿಸುತ್ತಿದ್ದಾರೆಂದು ಆಯುಕ್ತರು ತಿಳಿಸಿದರು.

ಇಂತಹ ಅಂಪೈರ್ ಗಳಿದ್ದರೆ ಭಾರತ ವಿಶ್ವಕಪ್ ಗೆಲ್ಲಲ್ಲ : ಹರ್ಭಜನ್‍ ಸಿಂಗ್

ಚೆನ್ನೈ, ಅ. 28- ತವರಿನ ಅಂಗಳದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. ಆದರೆ ಅಂಪೈರ್‌ಗಳು ನೀಡುವ ನಿರ್ಣಯದಿಂದಲೇ ರೋಹಿತ್ ಶರ್ಮಾ ಸೋಲುವ ಭೀತಿ ಎದುರಾಗಿದೆ ಎಂದು ಭಾರತ ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು ಅಂಪೈರ್‌ಗಳ ವಿರುದ್ಧ ಕಿಡಿಕಾರಿದ್ದಾರೆ.

ಶುಕ್ರವಾರ (ಅಕ್ಟೋಬರ್ 27) ರಂದು ಚೆನ್ನೈನ ಎಂ.ಎ. ಚಿದಂಬರಂ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ರಣರೋಚಕ ವಿಶ್ವಕಪ್ ಪಂದ್ಯದಲ್ಲಿ ಹರಿಣಗಳು 1 ವಿಕೆಟ್‍ನ ಗೆಲುವು ಪಡೆದು ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನಕ್ಕೇರಿದರೆ, ಅಂಪೈರ್ ಮಾಡಿದ್ದ ಎಡವಟ್ಟಿನಿಂದ ಬಾಬರ್ ಆಝಮ್ ಪಡೆ ಸೆಮಿಫೈನಲ್ ರೇಸ್‍ನಿಂದ ಬಹುತೇಕ ಹೊರಬಿದ್ದಿದೆ. ಇದರಿಂದ ಬೇಸತ್ತ ಟರ್ಬನೇಟರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಪಂದ್ಯದಲ್ಲಿ ಪಾಕಿಸ್ತಾನದ ವೇಗಿ ಹ್ಯಾರಿಸ್ ರೌಫ್ ಅವರು ಮಾಡಿದ್ದ ಎಸೆತವನ್ನು ದಕ್ಷಿಣ ಆಫ್ರಿಕಾದ ತರ್ಬೆಜ್ ಶಾಂಸಿ ಅವರು ಪ್ಯಾಡ್ ಮೇಲೆ ಎಳೆದುಕೊಂಡು ಎಲ್‍ಬಿಡ್ಲ್ಯು ಬಲೆಗೆ ಬಿದ್ದಿದ್ದರು. ಆದರೆ ಅಂಪೈರ್ ನಾಟೌಟ್ ಎಂದು ಘೋಷಿಸಿದ್ದರು. ಪಾಕಿಸ್ತಾನ ತೆಗೆದುಕೊಂಡ ರಿವ್ಯೂನಲ್ಲಿ ಶಾಂಸಿ ಔಟಾಗಿರುವುದು ಸ್ಪಷ್ಟವಾಗಿದ್ದರೂ ಕೂಡ 3ನೇ ಅಂಪೈರ್ ನಾಟೌಟ್ ತೀರ್ಪು ನೀಡಿದ್ದರಿಂದ ಶಾಂಸಿ ಔಟಾಗುವುದರಿಂದ ತಪ್ಪಿಸಿಕೊಂಡರು. ಅಂಪೈರ್ ತೆಗೆದುಕೊಂಡ ಈ ಕೆಟ್ಟ ತೀರ್ಪಿನಿಂದಾಗಿ ಪಾಕಿಸ್ತಾನ 1 ವಿಕೆಟ್‍ನಿಂದ ಸೋಲುವಂತಾಯಿತು.

ಅಂಪೈರ್ ತೀರ್ಪಿಗೆ ಭಜ್ಜಿ ಕಿಡಿ:
ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಮುಗಿದ ಬೆನ್ನಲ್ಲೇ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹರ್ಭಜನ್ ಸಿಂಗ್ ಟ್ವೀಟ್ ಮಾಡಿ, `ಇಂದಿನ ಪಂದ್ಯದಲ್ಲಿ ಯಾರೂ ಗೆಲುವು ಸಾಧಿಸಿ, ಯಾವ ತಂಡ ಸೋಲು ಕಂಡಿತು ಎಂಬುದು ಮುಖ್ಯವಾಗುವುದಿಲ್ಲ, ಯಾವ ತಂಡಗಳು ಕಾದಾಟ ನಡೆಸುತ್ತಿವೆ ಎಂಬುದು ಕೂಡ ನಗಣ್ಯ. ಆದರೆ ಅಂಪೈರ್‍ಗಳು ತೆಗೆದುಕೊಂಡ ನಿಯಮ ಸರಿಯಾಗಿರಲಿಲ್ಲ. ಮುಂದಿನ ಪಂದ್ಯಗಳಲ್ಲಿ ಈ ರೀತಿ ಅನ್ಯಾಯ ಟೀಮ್‍ಇಂಡಿಯಾ ಜೊತೆಗೂ ಆಗಬಹುದು. ಅಂಪೈರ್‍ಗಳ ತಪ್ಪು ತೀರ್ಮಾನದಿಂದಲೇ ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ಸೋಲು ಕಂಡರೆ ಆಗ ಏನು ಮಾಡುವುದು’ ಎಂದು ಹರ್ಭಜನ್‍ಸಿಂಗ್ ಆಕ್ರೋಶ ವ್ಯಕ್ತಪಡಿಸಿದದಾರೆ.

ಪಾಕ್ ವಿರುದ್ಧ ಗೆದ್ದು ‘ಜೈ ಹನುಮಾನ್’ ಎಂದ ದಕ್ಷಿಣ ಆಫ್ರಿಕಾ ಆಟಗಾರ

ಚೆನ್ನೈ, ಅ. 28- ಸುಂದರ ಬೌಂಡರಿ ಸಿಡಿಸುವ ಮೂಲಕ ಪಾಕಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾದ 1 ವಿಕೆಟ್ ನ ರೋಚಕ ಗೆಲುವಿಗೆ ಕಾರಣವಾದ ಕೇಶವ ಮಹಾರಾಜ್ ಅವರುಜೈ ಶ್ರೀ ಹುಮಾನ್’ ಎಂಬ ಉದ್ಘೋಷ ಕೂಗುವ ಮೂಲಕ ಗೆಲುವಿನ ಸಂತಸವನ್ನು ಹಂಚಿಕೊಂಡಿದ್ದಾರೆ.

ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಪಾಕಿಸ್ತಾನ ನೀಡಿದ 271 ರನ್‍ಗಳ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ 45.3 ಓವರ್‍ಗಳ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 260 ರನ್ ಗಳಿಸಿ ಸೋಲಿನ ದವೆಡೆಗೆ ಸಿಲುಕಿತ್ತು.

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್

ಈ ಸಂದರ್ಭದಲ್ಲಿ ಹರಿಣಗಳ ಗೆಲುವಿಗೆ ಬಲ ತುಂಬಿದ್ದ ಕೇಶವ ಮಹಾರಾಜ್, ಅಮೆಗತಿಯ ಆಟಕ್ಕೆ ಮುಂದಾಗಿ 21 ಎಸೆತಗಳಲ್ಲಿ ಕೇವಲ 7 ರನ್ ಗಳಿಸಿದರು. 47.2ನೇ ಓವರ್‍ನಲ್ಲಿ ಪಾಕಿಸ್ತಾನದ ಸ್ಪಿನ್ನರ್ ಮೊಹಮ್ಮದ್ ನವಾಜ್ ಬೌಲಿಂಗ್‍ನಲ್ಲಿ ಬೌಂಡರಿ ಗಳಿಸುವ ಮೂಲಕ ತಂಡಕ್ಕೆ 1 ವಿಕೆಟ್ ಗಳ ರೋಚಕ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಅಂಕಪಟ್ಟಿಯಲ್ಲಿ ಟಾಪ್ 1 ಅಲಂಕರಿಸಿತು.

ಎಲ್ಲಾ ಹನುಮನ ಮಹಿಮೆ:
ನಾನು ಪಂದ್ಯದಲ್ಲಿ ದೇವರಲ್ಲಿ ನಂಬಿದ್ದೆ. ದಕ್ಷಿಣ ಆಫ್ರಿಕಾದ ಹುಡುಗರಿಂದ ಎಂತಹ ಸುಂದರ ಇನಿಂಗ್ಸ್ ಮೂಡಿಬಂದಿದೆ. ತಬ್ರೈಜ್ ಶಾಂಸಿ (60ಕ್ಕೆ 4) ಹಾಗೂ ಐಡೆನ್ ಮ್ಯಾರ್ಕಮ್ (91 ರನ್) ಅವರ ಆಟವನ್ನು ನೋಡಲು ಅತ್ಯಮೋಘವಾಗಿತ್ತು.ಜೈ ಶ್ರೀ ಹನುಮಾನ್’ ಎಂದು ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಆಟಗಾರ ಕೇಶವ ಮಹಾರಾಜ್ ತಮ್ಮ ಅಕೃತ ಇನ್ಸಾಟಾಗ್ರಾಮ್‍ನಲ್ಲಿ ದಿನದ ಅತ್ಯಂತ ಸುಂದರ ಫೋಟೋದೊಂದಿಗೆ ಬರೆದಿದ್ದಾರೆ.

ಮತ್ತೆ ಗಗನಕ್ಕೇರಿದ ಈರುಳ್ಳಿ ಬೆಲೆ

ಬೆಂಗಳೂರು, ಅ.28- ಟೊಮ್ಯಾಟೋ ಬಳಿಕ ಈಗ ಈರುಳ್ಳಿ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. 20-30ರೂ. ಆಸುಪಾಸಿನಲ್ಲಿದ್ದ ಈರುಳ್ಳಿ ಕೆಜಿಗೆ 60-70ರೂ.ಗೆ ತಲುಪಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳತೊಡಗಿದೆ. ಕಳೆದ ತಿಂಗಳಷ್ಟೇ ಟೊಮ್ಯಾಟೋ ಬೆಲೆ ಗಗನಕ್ಕೇರಿದ್ದು ಕೆಜಿಗೆ 200ರೂ. ತಲುಪಿತ್ತು. ಗ್ರಾಂ ಲೆಕ್ಕದಲ್ಲಿ ಜನರು ಟೊಮ್ಯಾಟೋ ಕೊಳ್ಳುವ ಪರಿಸ್ಥಿತಿ ಬಂದಿತ್ತು. ಈಗ ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗಿದೆ.

ಚಿಲ್ಲರೆ ಮಾರುಕಟ್ಟೆಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಲೆ ಏರಿಕೆಯಾಗಿದ್ದು, ಸಂಕಷ್ಟಕ್ಕೆ ಸಿಲುಕಿದ್ದಾರೆ. ನವದೆಹಲಿ, ಬೆಂಗಳೂರು, ಕೋಲ್ಕತ್ತಾ, ಮುಂಬೈ, ಚೆನ್ನೈ ಸೇರಿದಂತೆ ಬಹುತೇಕ ಎಲ್ಲ ನಗರಗಳಲ್ಲೂ ಕೂಡ ಈರುಳ್ಳಿ ಬೆಲೆ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ದೇಶದೆಲ್ಲೆಡೆ ಈರುಳ್ಳಿ ಬೆಲೆ ಏರಿಕೆಯಾಗುತ್ತಲೇ ಇದ್ದು, ಬೆಲೆ ಏರಿಕೆಯಿಂದ ಜನ ತತ್ತರಿಸತೊಡಗಿದ್ದಾರೆ.

ಕಳೆದ ಸಾಲಿನಲ್ಲಿ ಇದೇ ಸಮಯದಲ್ಲಿ ಕೆಜಿಗೆ 25 ರಿಂದ 30ರೂ. ಇತ್ತು. ಆದರೆ, ಈಗ 50 ರಿಂದ 60ರೂ. ತಲುಪಿದೆ. ದೆಹಲಿಯಲ್ಲಿ 50ರೂ., ಬೆಂಗಳೂರಿನಲ್ಲಿ 55ರೂ., ತೆಲಂಗಾಣದಲ್ಲಿ 60ರೂ. ಆಗಿದೆ. ಕೆಲವೆಡೆ ಅತಿವೃಷ್ಟಿಯಿಂದ ಬೆಳೆ ಹಾನಿಯಾದರೆ ಮತ್ತೆ ಕೆಲವೆಡೆ ಅನಾವೃಷ್ಠಿಯಿಂದ ಬೆಳೆ ಇಲ್ಲದೆ ಈರುಳ್ಳಿ ಕೊರತೆ ಕಂಡುಬಂದಿದೆ.

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್

ಹೀಗಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ದೇಶಾದ್ಯಂತ ಈರುಳ್ಳಿ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಿಗೆ ಹೊರೆಯಾಗುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲು ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ ಈರುಳ್ಳಿ ದರ ಭಾರೀ ಏರಿಕೆ ಕಂಡಿದೆಯೋ ಅಲ್ಲೆಲ್ಲ ಕೇಂದ್ರದ ಬಳಿ ಇರುವ ದಾಸ್ತಾನಿನಿಂದ ಈರುಳ್ಳಿ ಸರಬರಾಜು ಮಾಡಿ ರಿಯಾಯಿತಿ ದರದಲ್ಲಿ ಅಂದರೆ ಕೆಜಿಗೆ 25ರೂ.ನಂತೆ ಮಾರಾಟ ಮಾಡಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನ ತತ್ತರಿಸಿದ್ದಾರೆ. ಒಂದೆಡೆ ಬರಗಾಲ, ಮತ್ತೊಂದೆಡೆ ಬೆಲೆ ಏರಿಕೆ, ಬಸ್ ದರ, ವಿದ್ಯುತ್ ದರ, ಆಹಾರ ಪದಾರ್ಥಗಳ ದರದ ಜತೆಗೆ ಹಣ್ಣು-ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಈಗ ಈರುಳ್ಳಿ ಬೆಲೆ ಕೂಡ ಗಗನಕ್ಕೇರುತ್ತಿದ್ದು, ಜನ ತತ್ತರಿಸಿಹೋಗಿದ್ದಾರೆ.

ಬಾಂಗ್ಲಾದಲ್ಲಿ ಹಿಂಸಾಚಾರ ಭುಗಿಲೇಳುವ ಸಾಧ್ಯತೆ

ಕಳೆದ ಬಾರಿ ರಾಜ್ಯದಲ್ಲಿ ಭಾರೀ ಮಳೆಯಿಂದ ಈರುಳ್ಳಿ ಬೆಳೆ ಹಾಳಾಗಿತ್ತಾದರೂ ಈರುಳ್ಳಿ ಬೆಲೆ ಏರಿಕೆಯಾಗಿರಲಿಲ್ಲ. ಆದರೆ, ಈ ಬಾರಿ ಮಳೆ ಇಲ್ಲದೆ ಬೆಳೆ ಇಲ್ಲದೆ ಜನಸಾಮಾನ್ಯರಿಗೆ ಈರುಳ್ಳಿ ಕೈಗೆಟಕುತ್ತಿಲ್ಲ. ಪ್ರತಿದಿನ ಜನಸಾಮಾನ್ಯರಿಗೆ ಅಗತ್ಯವಾಗಿರುವ ಈರುಳ್ಳಿ, ಆಲೂಗಡ್ಡೆ, ಟೊಮ್ಯಾಟೋ ಬೆಲೆ ಏರಿಕೆಯಾದರೆ ಜೀವನ ನಡೆಸುವುದು ಕಷ್ಟಸಾಧ್ಯ. ಸರ್ಕಾರ ಮಧ್ಯ ಪ್ರವೇಶಿಸಿ ದಿನವಹಿ ವಸ್ತುಗಳು ಕೈಗೆಟಕುವ ದರದಲ್ಲಿ ಜನಸಾಮಾನ್ಯರಿಗೆ ಸಿಗುವಂತೆ ನೋಡಿಕೊಳ್ಳಬೇಕಾಗಿದೆ.

ಸರ್ಕಾರ ಬೀಳಿಸಲು ಷಡ್ಯಂತ್ರ, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ವಾರ್ನಿಂಗ್

ಬೆಂಗಳೂರು, ಅ.28- ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಶಾಸಕರ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಧ್ವನಿಗೂಡಿಸಿದ್ದಾರೆ. ಹೈದೆರಾಬಾದ್‍ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ, ಮಂಡ್ಯದ ಶಾಸಕ ರವಿ ಗಣಿಗಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯವರು ನಡೆಸುತ್ತಿರುವ ಪ್ರಯತ್ನಗಳು, ಒಡ್ಡುತ್ತಿರುವ ಆಮಿಷಗಳು ಹಾಗೂ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ ಎಂದರು.

ರವಿ ಗಣಿಗಾ ಯಾರೋ ಒಬ್ಬ ಹುಡುಗನ ಹೆಸರು ಹೇಳಿದ್ದಾರೆ. ಆತನಿಗಿಂತಲೂ ದೊಡ್ಡ, ದೊಡ್ಡ ನಾಯಕರು ಸರ್ಕಾರ ಪತನಗೊಳಿಸುವ ಷಡ್ಯಂತ್ರದ ಹಿಂದೆ ಇದ್ದಾರೆ. ಆದರೆ ಅವರ ಪ್ರಯತ್ನ ಫಲಿಸುವುದಿಲ್ಲ. ಸರ್ಕಾರ ಪತನಗೊಳಿಲಸುವುದು ಸಾಧ್ಯವಿಲ್ಲ ಎಂದು ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

ಅನಗತ್ಯ ಹೇಳಿಕೆ ಕೊಟ್ಟರೆ ನೊಟೀಸ್:
ಪಕ್ಷದ ಆಂತರಿಕ ವಿಚಾರ, ಸರ್ಕಾರ ಹಾಗೂ ಅಕಾರದ ಬಗ್ಗೆ ಮಾಧ್ಯಮಗಳ ಮುಂದೆ ಶಾಸಕರಿರಲಿ, ನಾಯಕರಿರಲಿ ಯಾರೇ ಆದರೂ ಅನಗತ್ಯ ಹೇಳಿಕೆ ನೀಡಬಾರದು ಮನವಿ ಹಾಗೂ ಎಚ್ಚರಿಕೆ ಎರಡು ಮಾದರಿಯಲ್ಲೂ ಕೇಳಿಕೊಳ್ಳುತ್ತೇನೆ. ಇಷ್ಟರ ನಂತರವೂ ಹೇಳಿಕೆ ನೀಡಿದರೆ ವಿಧಿ ಇಲ್ಲದೆ ಅವರಿಗೆ ನೊಟೀಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಬಿರುಸಿನ ಚಟುವಟಿಕೆ ನಡೆಸುತ್ತಿದೆ. ಈಗಾಗಲೇ ಕಾಂಗ್ರೆಸ್‍ನ ಶಾಸಕರನ್ನು ಭೇಟಿ ಮಾಡಿ ತಲಾ 50 ಕೋಟಿ ರೂಪಾಯಿ ನೀಡುವ ಹಾಗೂ ಸಚಿವ ಸ್ಥಾನದ ಆಮಿಷವೊಡ್ಡಲಾಗಿದೆ. ಕಾಂಗ್ರೆಸ್ ತೊರೆಯುವುದಾದರೆ ದೆಹಲಿಗೆ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿಸುವುದಾಗಿ ಆಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಯತ್ನ ನಡೆಯುತ್ತಿದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿ ಗಣಿಗ ಹೇಳಿದರು.

ತಮಿಳುನಾಡಿನ 12 ಮೀನುಗಾರರನ್ನು ಬಂಧಿಸಿದ ಮಾಲ್ಡೀವ್ಸ್

ಕಳೆದ ಎರಡು ತಿಂಗಳಿನಿಂದಲೂ ಈ ರೀತಿಯ ಚಟುವಟಿಕೆಗಳು ನಡೆಯುತ್ತಲೇ ಇವೆ ಎಂದು ಆರೋಪಿಸಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಗ್ಗೆ ಹಲವು ಬಾರಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಜೆಡಿಎಸ್-ಬಿಜೆಪಿ ನಡುವೆ ಮೈತ್ರಿಯಾದ ಬಳಿಕವಂತೂ ಕಾಂಗ್ರೆಸ್ ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಭಾರಿ ಕಸರತ್ತು ನಡೆಸಲಾಗುತ್ತಿದೆ ಎಂಬ ಟೀಕೆಗಳಿವೆ.

ಅದರ ಬೆನ್ನಲ್ಲೆ ಜೆಡಿಎಸ್ ನಾಯಕರು ಆಗಿರುವ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಒಂದರ ಮೇಲೊಂದು ಆರೋಪ ಮಾಡಲಾರಂಭಿಸಿದ್ದಾರೆ. ಬಿಜೆಪಿ ಪಾಳೆಯದಲ್ಲಿ ವಿರೋಧ ಪಕ್ಷದ ನಾಯಕರಿಲ್ಲದಿದ್ದರೂ ಪ್ರಮುಖ ನಾಯಕರು ಕಾಲಕಾಲಕ್ಕೆ ಸರ್ಕಾರವನ್ನು ಮುಜುಗರಕ್ಕೀಡು ಮಾಡುವ ಆರೋಪ ಮಾಡಲಾರಂಭಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಪಂಚಖಾತ್ರಿಗಳ ಪೈಕಿ ನಾಲ್ಕು ಯೋಜನೆಗಳನ್ನು ಜಾರಿಗೊಳಿಸಿರುವ ಯಶಸ್ಸಿನಲ್ಲೇ ತೇಲುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಎದಿರಾಗಿ ಬಿಜೆಪಿ ಜೆಡಿಎಸ್ ಪಕ್ಷಗಳು ಖಾತ್ರಿ ಜಾರಿಯಲ್ಲಿ ಜನಪರ ನಿಲುವಿಲ್ಲ ಎಂದು ಬಿಂಬಿಸುವ ಪ್ರಯತ್ನ ನಡೆಸುತ್ತಿದೆ. ಹಾಗೆಯೇ ಹಲವು ಭ್ರಷ್ಟಚಾರದ ಆರೋಪಗಳನ್ನು ಮಾಡಿದ್ದು ಈ ಸರ್ಕಾರ ಅಧಿಕಾರದಿಂದ ನಿರ್ಗಮಿಸಬೇಕು ಎಂದು ಬಿಜೆಪಿಯ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು ಹೇಳಿಕೆ ನೀಡಿದ್ದಾರೆ.

136 ಶಾಸಕರ ಸಂಖ್ಯಾಬಲ ಹೊಂದಿರುವ ಕಾಂಗ್ರೆಸ್ ಸರ್ಕಾರವನ್ನು ಪತನ ಗೊಳಿಸಲು ಬಿಜೆಪಿಗೆ ಪಕ್ಷೇತರರನ್ನು ಹೊರತು ಪಡಿಸಿದರೆ 28 ಶಾಸಕರ ಸಂಖ್ಯಾಬಲದ ಅಗತ್ಯವಿದೆ. 66 ಶಾಸಕರ ಸಂಖ್ಯೆಯನ್ನು ಹೊಂದಿರುವ ಬಿಜೆಪಿ 19 ಶಾಸಕರನ್ನು ಹೊಂದಿರುವ ಜೆಡಿಎಸ್ ಈಗಾಗಲೇ ಮೈತ್ರಿ ಮಾಡಿಕೊಂಡಿದೆ. ಎರಡು ಪಕ್ಷಗಳ ಬಲಾಬಲದ ಬಳಿಕ ಸರ್ಕಾರ ರಚನೆ ಮಾಡಲು 28 ಮಂದಿ ಶಾಸಕರು ಬೇಕಿದೆ. ಇನ್ನೂ ನಾಲ್ವರು ಪಕ್ಷೇತರ ಶಾಸಕರಿದ್ದಾರೆ. ಅವರಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಮಾನ್ಯತೆ ಇಲ್ಲ. ಹೊಸ ಸರ್ಕಾರ ರಚನೆಯ ಸಂದರ್ಭ ಎದುರಾದರೆ ಅವರು ಬಿಜೆಪಿಯ ಜೊತೆ ಕೈ ಜೊಡಿಸುವುದರಲ್ಲಿ ಯಾವುದೇ ಅನುಮಾನಗಳಲ್ಲ.

ಈ ಹಿಂದೆ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದವನ್ನು ಪತನಗೊಳಿಸುವಾಗ 17 ಮಂದಿ ಶಾಸಕರನ್ನು ಆಪರೆಷನ್ ಕಮಲದ ಮೂಲಕ ಸೆಳೆದುಕೊಳ್ಳಲಾಗಿತ್ತು. ಮಹಾರಾಷ್ಟ್ರದಲ್ಲಿ ಮಹಾವಿಕಾಸ ಅಘಾಡಿ ಸರ್ಕಾರದಲ್ಲಿ 47ಕ್ಕೂ ಹೆಚ್ಚು ಶಾಸಕರನ್ನು ಸೆಳೆದು ಸಮ್ಮಿಶ್ರ ಸರ್ಕಾರ ಪತನಗೊಳಿಸಲಾಗಿದೆ.

ಮಧ್ಯ ಪ್ರದೇಶದಲ್ಲಿ 32 ಶಾಸಕರನ್ನು ಸೆಳೆದು ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಕ್ಕೆ ಅಗತ್ಯ ಇರುವುದು ಎಲ್ಲಾ ಲೆಕ್ಕಾಚಾರಗಳ ಬಳಿಕ 24 ಶಾಸಕರು ಮಾತ್ರ. ಹೀಗಾಯೇ ತೆರೆಮರೆಯ ಚಟುವಟಿಕೆಗಳು ಬಿರಿಸುಗೊಂಡಿವೆ ಎಂದು ಹೇಳಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನೇಪಥ್ಯಕ್ಕೆ ಸರಿದಿದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇತ್ತೀಚೆಗೆ ಹೆಚ್ಚು ಸಕ್ರಿಯವಾಗಿದ್ದಾರೆ.

ಅದು ಕೂಡ ಕಾಂಗ್ರೆಸ್ ನಾಯಕರ ನಿದ್ದೆ ಗೆಡಿಸಿದೆ. ಲೋಕಸಭೆ ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರದ ಅಸ್ತಿತ್ವಕ್ಕೆ ಎಳ್ಳು ನೀರು ಬಿಡಬಹುದು ಎಂಬ ಲೆಕ್ಕಾಚಾರಗಳು ಉಲ್ಟಾ ಆಗುತ್ತಿದ್ದು, ಚುನಾವಣೆಗೂ ಮುನ್ನವೇ ಕಾರ್ಯಚರಣೆಗಳು ಬಿರಿಸು ಪಡೆದಿರುವುದು ಕಾಂಗ್ರೆಸಿಗರಿಗೆ ಆತಂಕ ಮೂಡಿಸಿವೆ.

ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೆ ನಿನ್ನೆ ರಾತ್ರಿ ಗೃಹ ಸಚಿವ ಪರಮೇಶ್ವರ್ ಅವರ ಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳು ಬೋಜನಕೂಟ ನಡೆಸಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.