Home Blog Page 1885

ಬಿಹಾರದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವು

ದರ್ಭಾಂಗಾ (ಬಿಹಾರ), ಅ.17 – ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತಿಬ್ಬರು ಅಸ್ವಸ್ಥರಾಗಿದ್ದಾರೆ. ಎಲ್ಲಾ ಸಂತ್ರಸ್ತ ಜನರು ರುಸ್ತಂಪುರ ಗ್ರಾಮದ ನಿವಾಸಿಗಳಾಗಿದ್ದು, ಭಾನುವಾರ ಅವರು ನಕಲಿ ಮದ್ಯ ಸೇವಿಸಿದ್ದಾರೆ ಎಂಬ ಕುಟುಂಬ ಸದಸ್ಯರ ಆರೋಪದ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ದರ್ಭಾಂಗದ ಹಿರಿಯ ಪೊಲೀಸ್ ಅಧೀಕ್ಷಕ ಅವಕಾಶ್ ಕುಮಾರ್ ತಿಳಿಸಿದ್ದಾರೆ.

ಮೃತಪಟ್ಟ ಇಬ್ಬರನ್ನು ಸಂತೋಷ್ ದಾಸ್ ಮತ್ತು ಭೂಖ್ಲಾ ಸಾಹ್ನಿ ಎಂದು ಗುರುತಿಸಲಾಗಿದ್ದು ಅವರ ನಿಧನರಾದ ಕೂಡಲೇ ಕುಟುಂಬ ಸದಸ್ಯರು ಅಂತ್ಯಸಂಸ್ಕಾರ ಮಾಡಿದ್ದಾರೆ ಆದ್ದರಿಂದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಲಿಲ್ಲ, ಆದರೂ ನಾವು ಕುಟುಂಬದವರ ಹೇಳಿಕೆಗಳನ್ನು ದಾಖಲಿಕೊಂಡಿದೇವೆ ಎಂದು ತಿಳಿಸಿದರು.

20 ಶಾಸಕರ ಜೊತೆ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಪ್ಲಾನ್!

ಮೃತರ ಜೊತೆಗೆ ಮದ್ಯ ಸೇವಿಸಿದ್ದಾರೆ ಎನ್ನಲಾದ ಲಾಲ್ತುನ್ ಸಾಹ್ನಿ ಮತ್ತು ಅರ್ಜುನ್ ದಾಸ್ ಅವರ ಹೇಳಿಕೆಗಳನ್ನು ಪಡೆಯಲಾಗಿದೆ ಪ್ರಸ್ತುತ ಅವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ನಕಲಿ ಮದ್ಯದ ವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಶೀಘ್ರದಲ್ಲೆ ಪತ್ತೆ ಹಚ್ಚಲಾಗುವುದು ಅವಕಾಶ್ ಕುಮಾರ್ ತಿಳಿಸಿದ್ದಾರೆ ಕಳೆದ 2016 ರಿಂದ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-10-2023)

ನಿತ್ಯ ನೀತಿ : ಎಲ್ಲಿ ಪ್ರೇಮವಿರುವುದೋ ಅಲ್ಲಿ ಸ್ವಾರ್ಥವಿರಬಾರದು. ಅಹಂಕಾರವಿರಬಾರದು. ಪರಿಶುದ್ಧವಾದ ಭಗವತ್ಪ್ರೇಮವಿರಬೇಕು.

ಪಂಚಾಂಗ ಮಂಗಳವಾರ 17-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ಋತು: ಶರದ್ / ಮಾಸ:ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಬಿದಿಗೆ / ನಕ್ಷತ್ರ: ಸ್ವಾತಿ / ಯೋಗ: ವಿಷ್ಕಂಭ / ಕರಣ: ಬಾಲವ

ಸೂರ್ಯೋದಯ : ಬೆ.06.11
ಸೂರ್ಯಾಸ್ತ : 5.59
ರಾಹುಕಾಲ : 3.00-4.300
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಹಿರಿಯ ಅಧಿಕಾರಿಗಳು, ಕುಟುಂಬ ದವರು ನಿಮ್ಮ ವ್ಯಕ್ತಿತ್ವವನ್ನು ಪ್ರಶಂಸಿಸುವರು.
ವೃಷಭ: ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಮಿಥುನ: ಅಧಿಕಾರಿಗಳೊಂದಿಗಿನ ವೈಮನಸ್ಯ ದೂರ ಮಾಡಿಕೊಂಡರೆ ವೃತ್ತಿಪರ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಲು ಅನುಕೂಲವಾಗಿರುತ್ತದೆ.

ಕಟಕ: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.
ಸಿಂಹ: ಕೆಲಸ-ಕಾರ್ಯಗಳು ಸಂಪೂರ್ಣವಾಗಿ ಕಾರ್ಯಗತ ಗೊಳ್ಳಬಹುದು ಮತ್ತು ಅವು ನಿಮಗೆ ಅನುಕೂಲಕರ ಫಲಿತಾಂಶ ತಂದು ಕೊಡಲಿವೆ.
ಕನ್ಯಾ: ಆಸ್ತಿ, ಅಪಾರ್ಟ್ ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.

ತುಲಾ: ನಿಮ್ಮ ಶ್ರಮ ಮತ್ತು ಅದೃಷ್ಟವು ಎಲ್ಲಾ ರೀತಿಯಲ್ಲೂ ಬೆಂಬಲ ನೀಡುತ್ತದೆ.
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹಲವಾರು ಪ್ರಯೋಜನವಾಗಲಿವೆ.
ಧನುಸ್ಸು: ಅಣ್ಣ-ತಮ್ಮಂದಿರು ನಿಮ್ಮ ವ್ಯವಹಾರಗಳಿಗೆ ಸಾಕಷ್ಟು ಸಹಾಯ ಮಾಡುವರು.

ಮಕರ: ಕಾರ್ಯಸಾಧನೆಗಾಗಿ ಪ್ರಯಾಣ ಮಾಡಬೇಕಾಗಬಹುದು. ಅಧಿಕ ಖರ್ಚು
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ಯಾವುದೇ ಕಾರ್ಯ ಕೈಗೊಂಡರೂ ಹೆಜ್ಜೆ ಹೆಜ್ಜೆಗೂ ಅಡೆತಡೆ ಎದುರಾಗಲಿದೆ.

20 ಶಾಸಕರ ಜೊತೆ ಪ್ರವಾಸಕ್ಕೆ ಸತೀಶ್ ಜಾರಕಿಹೊಳಿ ಪ್ಲಾನ್!

ಬೆಂಗಳೂರು, ಅ.16- ಉಪಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಾಸಕರ ಹಾಗೂ ಆಪ್ತಬಣದ ಪ್ರವಾಸ ಆಯೋಜನೆ ಮಾಡಲು ಮುಂದಾಗಿರುವುದು ಕುತೂಹಲ ಕೆರಳಿಸಿದೆ.

ಈ ಮೊದಲು ಸತೀಶ್ ಜಾರಕಿಹೊಳಿ ಅವರು ಮೈಸೂರು ದಸರಾ ನೋಡಲು 20 ಕ್ಕೂ ಹೆಚ್ಚು ಮಂದಿ ಶಾಸಕರನ್ನು ಗುಂಪು ಕಟ್ಟಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಅದು ತಪ್ಪಿದೆ. ಆಪ್ತ ಶಾಸಕರ ಜೊತೆ ಪ್ರವಾಸದ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ ಅವರು ವಿವಿಧ ಪಕ್ಷಗಳ ಶಾಸಕರುಗಳು ಹಲವು ಕಡೆ ಪ್ರವಾಸ ಮಾಡಿದ್ದಾರೆ. ಈ ಬಗ್ಗೆ ನಮ್ಮ ಶಾಸಕರು ಕೂಡ ಪದೇಪದೇ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಿದರು.

ವಿರಾಟ್‍ಕೊಹ್ಲಿ ವಿಶ್ವದಲ್ಲೇ ಅತ್ಯಂತ ಉತ್ತಮ ಆಟಗಾರ

ಇದು ಬಣ ರಾಜಕೀಯವಲ್ಲ. ಕಾಂಗ್ರೆಸ್‍ನ ಶಾಸಕರು ಮಾತ್ರವೇ ಹೋಗುತ್ತೇವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿಯೇ ಪ್ರವಾಸ ಮಾಡುತ್ತೇವೆ. ಮೈಸೂರು ದಸರಾ ನೋಡಲು ಬನ್ನಿ ಎಂದು ಆ ಭಾಗದ ಶಾಸಕರು ಆಹ್ವಾನ ನೀಡಿದ್ದರು. ಅದರಂತೆ ನಮ್ಮ ಆಪ್ತರು, ನಮ್ಮ ಭಾಗದ ಶಾಸಕರು, ಸಮಾನ ಮನಸ್ಕರು ಹೋಗಲು ನಿರ್ಧರಿಸಿದ್ದೆವು. ಆದರೆ ಅದಕ್ಕೆ ಸಮಯ ಸಿಗಲಿಲ್ಲ. ನಮ್ಮ ಭಾಗದಲ್ಲೇ ಕೆಲವು ಹಬ್ಬಗಳಿರುವುದರಿಂದ ಎಲ್ಲರಿಗೂ ಸಮಯ ಆಗಲಿಲ್ಲ. ಆದರೆ ಮುಂದೊಂದು ದಿನ ಸಮಯ ನಿಗದಿ ಮಾಡಿಕೊಂಡು ಪ್ರವಾಸ ಮಾಡುತ್ತೇವೆ ಎಂದರು.

ರಮಾನುಲ್ಲಾ ನಮ್ಮ ಮೇಲೆ ಒತ್ತಡ ಹೇರಿದ್ದರು

ನವದೆಹಲಿ, ಅ.16- ಆಫ್ಘಾನಿಸ್ತಾನದ ಆರಂಭಿಕ ಆಟಗಾರ ರಮಾನುಲ್ಲಾ ಗುರ್ಬಾಜ್ (80 ರನ್) ಸ್ಪೋಟಕ ಆಟ ಪ್ರದರ್ಶಿಸುವ ಮೂಲಕ ತಮ್ಮ ಮೇಲೆ ಒತ್ತಡ ಹಾಕಿದ್ದೆ ವಿಶ್ವಕಪ್ ಪಂದ್ಯ ಸೋಲಿಗೆ ಕಾರಣ ಎಂದು ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಹೇಳಿದ್ದಾರೆ.

ಆಫ್ಘಾನಿಸ್ತಾನ ನೀಡಿದ 285 ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 215 ರನ್ ಗಳಿಸಿ 65 ರನ್‍ಗಳಿಂದ ಐತಿಹಾಸಿಕ ಸೋಲು ಅನುಭವಿಸಿತು. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ಮೊದಲ ವಿಕೆಟ್‍ಗೆ ಇಮ್ರಾಹಿಂ ಜರ್ದಾನ್ ಹಾಗೂ ರಮಾನುಲ್ಲಾ ಗುರ್ಬಾಜ್ ಅವರು 114 ರನ್‍ಗಳ ಜೊತೆಯಾಟ ನೀಡುವ ನಮ್ಮ ತಂಡದ ಮೇಲೆ ಒತ್ತಡ ಹೇರಿದ್ದರು ಎಂದು ಜೋಸ್ ಬಟ್ಲರ್ ಹೇಳಿದ್ದಾರೆ. ಇದರಿಂದ ಎದುರಾಳಿ ತಂಡವು 284 ರನ್‍ಗಳ ಬೃಹತ್ ಮೊತ್ತ ಕಲೆ ಹಾಕಲು ಸಹಕಾರಿಯಾಯಿತು ಎಂದು ಬಟ್ಲರ್ ತಿಳಿಸಿದ್ದಾರೆ.

ನಾವು ಪಂದ್ಯದಲ್ಲಿ ಉತ್ತಮ ಆರಂಭ ಮಾಡಲಿಲ್ಲ, ಪಂದ್ಯದ ಮೊದಲ ಎಸೆತವನ್ನು ನಾನು ತಪ್ಪಿಸಿಕೊಂಡೆ ಮತ್ತು ಅದು ಮೊದಲ 10 ಓವರ್‍ಗಳಿಗೆ ಟೋನ್ ಅನ್ನು ಹೊಂದಿಸಿದೆ, ನಾವು ಬಯಸಿದ ಪ್ರದೇಶಗಳನ್ನು ನಾವು ಹೊಡೆದಿಲ್ಲ ಮತ್ತು ಗುರ್ಬಾಜ್‍ಗೆ ಮನ್ನಣೆ ನೀಡಿದ್ದೇವೆ . ಅವರು ನಮ್ಮನ್ನು ಸಾಕಷ್ಟು ಒತ್ತಡಕ್ಕೆ ಒಳಪಡಿಸಿದಂತೆ, ಕೆಲವು ಉತ್ತಮ ಹೊಡೆತಗಳನ್ನು ಆಡಿದರು, ಆದರೆ ಕೆಲವು ಸುಲಭವಾದ ಬೌಂಡರಿಗಳು ಇರಬಹುದು ಎಂದು ಹೇಳಿದರು.

ಜೆಡಿಎಸ್ ಸಮಾನಮನಸ್ಕರ ಸಭೆಯ ಬ್ಯಾನರ್‌ನಲ್ಲಿ ಹೆಚ್‌ಡಿಕೆ ಫೋಟೋಗೆ ಕೊಕ್

ಆಟಕ್ಕೆ ಪ್ರವೇಶಿಸಲು ನಮಗೆ ಸ್ವಲ್ಪ ಸಮಯ ತೆಗೆದುಕೊಂಡಿತು, ಮತ್ತು ನಾವು ಚೆನ್ನಾಗಿ ಹಿಂತಿರುಗಿದೆವು, ಮತ್ತು ನಂತರ ಅವರು ಕೊನೆಯಲ್ಲಿ ಇನ್ನೂ ಹೆಚ್ಚಿನದನ್ನು ಪಡೆಯಲು ಅವಕಾಶ ಮಾಡಿಕೊಡಬಹುದು ಎಂದು ಬಟರ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹೌದು, ಇದು ನಿಸ್ಸಂಶಯವಾಗಿ ದೊಡ್ಡ ಹಿನ್ನಡೆಯಾಗಿದೆ. ಪಂದ್ಯಾವಳಿ ಪ್ರಾರಂಭವಾಗುವ ಮೊದಲು ನೀವು ಮೊದಲ ಮೂರು ಪಂದ್ಯಗಳು ಹೇಗೆ ಹೊರಹೊಮ್ಮುತ್ತವೆ ಎಂಬುದರ ಕುರಿತು ವಿಭಿನ್ನವಾದ ಕಲ್ಪನೆಯನ್ನು ಹೊಂದಿದ್ದೀರಿ. ನಾವು ಸಾಕಷ್ಟು ಪಾತ್ರವನ್ನು ತೋರಿಸಬೇಕಾಗಿದೆ, ತಂಡದೊಳಗೆ ಸಾಕಷ್ಟು ಸ್ಥಿತಿಸ್ಥಾಪಕತ್ವ ಮತ್ತು ಎಲ್ಲಕ್ಕಿಂತ ಹೆಚ್ಚಿನ ನಂಬಿಕೆ. ಅಲ್ಲಿ ಸಾಕಷ್ಟು ಅತ್ಯುತ್ತಮ ಆಟಗಾರರಿದ್ದರು ಮತ್ತು ನಾವು ಇಂದು ಸಾಕಷ್ಟು ಉತ್ತಮವಾಗಿ ಆಡಿಲ್ಲ ಆದರೆ ನಾವು ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು, ಎಂದು ಅವರು ಹೇಳಿದರು.

ವಿರಾಟ್‍ಕೊಹ್ಲಿ ವಿಶ್ವದಲ್ಲೇ ಅತ್ಯಂತ ಉತ್ತಮ ಆಟಗಾರ

ಬೆಂಗಳೂರು, ಅ. 16- ಇಡೀ ವಿಶ್ವದಲ್ಲೇ ವಿರಾಟ್ ಕೊಹ್ಲಿ ಅವರು ಅತ್ಯುತ್ತಮ ಆಟಗಾರರಾಗಿದ್ದಾರೆ ಎಂದು ಆಫ್ಘಾನಿಸ್ತಾನ ತಂಡದ ನಾಯಕ ಶಹಿಡಿ ಅವರು ಗುಣಗಾಣ ಮಾಡಿದ್ದಾರೆ. ನವದೆಹಲಿಯ ಅರುಣ್‍ಜೇಟ್ಲಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಜನಕರಾದ ಇಂಗ್ಲೆಂಡ್ ವಿರುದ್ಧ 69 ರನ್‍ಗಳ ಐತಿಹಾಸಿಕ ಗೆಲುವು ಸಾಧಿಸಿದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಆಫ್ಘಾನಿಸ್ತಾನ ತಂಡದ ನಾಯಕ, ಟೀಮ್ ಇಂಡಿಯಾದ ಮಾಜಿ ನಾಯಕನ ಬ್ಯಾಟಿಂಗ್ ಕೌಶಲ್ಯವನ್ನು ಕೊಂಡಾಡಿದ್ದಾರೆ.

`ವಿರಾಟ್ ಕೊಹ್ಲಿ ಅವರು ಆಧುನಿಕ ಕ್ರಿಕೆಟ್ ಜಗತ್ತಿನ ಅತ್ಯಂತ ಅತ್ಯುತ್ತಮ ಬ್ಯಾಟ್ಸ್‍ಮನ್ ಆಗಿದ್ದಾರೆ. ಅವರ ತಾಳ್ಮೆ ಹಾಗೂ ತಂಡದೊಂದಿಗೆ ಅವರು ತಮ್ಮನ್ನು ತೊಡಗಿಸಿಕೊಳ್ಳುವ ರೀತಿ ಅತ್ಯಮೋಘವಾಗಿದೆ. ಅವರು ಮಾಡಿರುವ ದಾಖಲೆಗಳನ್ನು ನಾವು ಸುಲಭವಾಗಿ ಅಂದಾಜಿಸಬಹುದು. ಆದರೆ ಅವರು ಮಾಡಿರುವ ದಾಖಲೆಯ ಹಿಂದೆ ಅಡಗಿರುವ ಅಪಾರವಾದ ಶ್ರಮವು ಅಪಾರವಾಗಿದೆ. ಕಿಂಗ್ ಕೊಹ್ಲಿ 47 ಶತಕ ಬಾರಿಸಿದ್ದಾರೆ ಎಂದು ಹೇಳುವುದು ಸುಲಭ. ಆದರೆ ಅವರು ಈ ಸಾಧನೆ ಮಾಡಲು ಎಷ್ಟು ಕಷ್ಟಪಟ್ಟಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ’ ಎಂದು ಶಹಿಡಿ ಹೇಳಿದ್ದಾರೆ.

ಜೆಡಿಎಸ್ ಸಮಾನಮನಸ್ಕರ ಸಭೆಯ ಬ್ಯಾನರ್‌ನಲ್ಲಿ ಹೆಚ್‌ಡಿಕೆ ಫೋಟೋಗೆ ಕೊಕ್

ಆಫ್ಘಾನಿಸ್ತಾನದ ನಾಯಕ ವಿರಾಟ್ ಕೊಹ್ಲಿ ಅವರನ್ನು ಕೇವಲ ಅವರ ಆಟದಿಂದ ಮಾತ್ರ ಗುಣಗಾಣ ಮಾಡಿಲ್ಲ , ವಿಶ್ವದೆಲ್ಲೆಡೆ ಅವರು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಹಾಗೂ ಅವರು ತಮ್ಮ ಹಾಗೂ ಇತರ ತಂಡಗಳ ಆಟಗಾರರಲ್ಲಿ ಸೂರ್ತಿ ತುಂಬಿದ್ದಾರೆ. ಕ್ರಿಕೆಟ್ ಎಂಬುದು ಕೇವಲ ಆಟವಾಗಿ ಉಳಿಯದೆ ಗಡಿ, ಸಂಸ್ಕøತಿ, ಭಾಷೆಯನ್ನು ಮೀರಿ ನಿಂತಿದೆ ಎಂದು ಅವರು ಹೇಳಿದರು.

ಇಂಗ್ಲೆಂಡ್ ವಿರುದ್ಧ 69 ರನ್‍ಗಳ ಗೆಲುವು ಸಾಧಿಸುವ ಮೂಲಕ ಆಫ್ಘಾನಿಸ್ತಾನ ವಿಶ್ವಕಪ್ ಟೂರ್ನಿಯ ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.

ವಿದ್ಯುತ್ ದರ ಏರಿಕೆ ಕುರಿತು ಸ್ಪಷ್ಟನೆ ಕೊಟ್ಟ ಬೆಸ್ಕಾಂ

ಬೆಂಗಳೂರು, ಅ.16- ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದಲ್ಲಿ ಮೊದಲಿಗಿಂತಲೂ ಶೇ. 14 ಪೈಸೆಯಷ್ಟು ಕಡಿತವಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಮೊದಲು ಆಗಸ್ಟ್‍ನಲ್ಲಿ ಪ್ರತಿ ಯುನಿಟ್‍ಗೆ 1.15 ರೂಪಾಯಿ ವಿದ್ಯುತ್ ಮತ್ತು ಇಂಧನ ಖರೀದಿ ಹೊಂದಾಣಿಕೆ ವೆಚ್ಚ ನಿಗದಿಯಾಗಿತ್ತು. ಸೆಪ್ಟೆಂಬರ್‍ನಲ್ಲಿ ಅದನ್ನು ಕೆಇಆರ್‌ಸಿ ಪರಿಷ್ಕರಣೆ ಮಾಡಿದ್ದು, 14 ಪೈಸೆ ಕಡಿಮೆ ಮಾಡಿದೆ. ಹೀಗಾಗಿ ಪ್ರತಿ ಯುನಿಟ್‍ಗೆ ಪ್ರಸ್ತುತ 1.1 ಪೈಸೆ ನಿಗದಿಯಾಗಿದೆ. ಇದರ ಲಾಭವನ್ನು ಬೆಸ್ಕಾಂಗಳು ಗ್ರಾಹಕರಿಗೆ ತಲುಪಿಸುತ್ತಿವೆ.

ಪ್ರತಿಯೊಂದು ಬಿಲ್‍ನಲ್ಲೂ ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ ದರದ ಮೇಲೆ ಶುಲ್ಕ ನಿಗದಿಯಾಗುತ್ತದೆ. ಇದನ್ನು ಗ್ರಾಹಕರಿಂದಲೇ ಸಂಗ್ರಹಿಸಬೇಕೆಂಬುದು ಕೇಂದ್ರ ಸರ್ಕಾರದ ಅಧಿಸೂಚನೆಯಾಗಿದೆ.
ಇತ್ತೀಚೆಗೆ ಕಲ್ಲಿದ್ದಲ ಸಾಗಾಣಿಕೆ ಹಾಗೂ ಇತರ ವೆಚ್ಚಗಳು ತಗ್ಗಿದ್ದರಿಂದಾಗಿ ವಿದ್ಯುತ್ ಖರೀದಿ ದರ ಕಡಿಮೆಯಾಗಿದೆ. ಇದನ್ನು ಪರಿಗಣಿಸಿರುವ ಕೆಇಆರ್‍ಸಿ ಹೊಂದಾಣಿಕೆ ದರವನ್ನೂ ಕಡಿಮೆಗೊಳಿಸುವಂತೆ ಆದೇಶಸಿದೆ.

ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ

ಇದರ ಲಾಭ ಗ್ರಾಹಕರಿಗೆ ತಲುಪಿಸಲಾಗುತ್ತಿದೆ. ಯಾವುದೇ ರೀತಿಯ ವಿದ್ಯುತ್ ಶುಲ್ಕ ಏರಿಕೆಯಾಗಿಲ್ಲ ಎಂದು ಬೆಸ್ಕಾಂ ಮೂಲಗಳು ಸ್ಪಷ್ಟಪಡಿಸಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಇಂಧನ ಮತ್ತು ವಿದ್ಯುತ್ ಖರೀದಿ ಹೊಂದಾಣಿಕೆ ಶುಲ್ಕ ಪರಿಷ್ಕರಣೆಯಾಗುತ್ತದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ನಿಗದಿಯಾಗಿರುವ 1.1 ರೂ.ಗಳ ದರ ಮುಂದಿನ ಜನವರಿಯ ವೇಳೆ ಮತ್ತೊಮ್ಮೆ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.

ಜೆಡಿಎಸ್ ಸಮಾನಮನಸ್ಕರ ಸಭೆಯ ಬ್ಯಾನರ್‌ನಲ್ಲಿ ಹೆಚ್‌ಡಿಕೆ ಫೋಟೋಗೆ ಕೊಕ್

ಬೆಂಗಳೂರು,ಅ.16- ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜೆಡಿಯು ರಾಜ್ಯಾಧ್ಯಕ್ಷ ಮಹಿಮ ಪಟೇಲ್ ಪಾಲ್ಗೊಂಡಿದ್ದರು. ಮಹಿಮ ಪಾಟೀಲ್ ಪಾಲ್ಗೊಂಡಿರುವುದರಿಂದ ಇಬ್ರಾಹಿಂ ಮುಂದಿನ ನಡೆ ಏನು ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಬಿಜೆಪಿಯೊಂದಿಗಿನ ಮೈತ್ರಿಯ ಬಗ್ಗೆ ಅಸಮಾಧನ ವ್ಯಕ್ತಪಡಿಸಿ ಸಮಾನ ಮನಸ್ಕರ ಅಭಿಪ್ರಾಯ ಸಂಗ್ರಹಿಸಲು ಇಬ್ರಾಹಿಂ ಚಿಂತನ-ಮಂಥನ ಸಭೆ ಕರೆದಿದ್ದರು. ಸಭೆಯ ಬ್ಯಾನರ್‍ನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಸಿ.ಎಂ.ಇಬ್ರಾಹಿಂ ಫೋಟೋ ಮಾತ್ರ ಇತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬೇರೆ ಯಾವ ನಾಯಕರ ಫೋಟೋವು ಕೂಡ ಇರಲಿಲ್ಲ.

ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ

ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಯದ್ ಸಬಿವುಲ್ಲಾ ಸಾಹೇಬ್ ಸೇರಿದಂತೆ ಅಲ್ಪಸಂಖ್ಯಾತ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು. ಮಹಿಮ ಪಟೇಲ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ, ಮಾಜಿ ಕೇಂದ್ರ ಸಚಿವ ಜಾರ್ಜ್ ಫರ್ನಾಂಡಿಸ್ ಅವರು ಬಿಜೆಪಿಗೆ ಸೇರಿದ್ದರು. ಆಗ ಫರ್ನಾಂಡಿಸ್ ಅವರು ಪ್ರಧಾನಿಯಾಗಲಿದ್ದಾರೆ ಸಹಕಾರ ಕೊಡಿ ಎಂದು ನಮ್ಮ ತಂದೆ ಜೆ.ಎಚ್.ಪಟೇಲ್ ಅವರು ಸಮ್ಮತಿಸಿದ್ದರು ಎಂದರು.

ಸಿದ್ದಾಂತದ ಮೂಲಕ ಮತ ಯಾಚಿಸಬೇಕೇ ಹೊರತು ಹಣ, ಜಾತಿ ಆಧಾರದ ಮೇಲೆ ಕೇಳಿದರೆ ಅದು ದಂಧೆಯಾಗಲಿದೆ. ಈಗಾಗಲೇ ರಾಜಕಾರಣಿಗಳ ಬಗ್ಗೆ ಗೌರವ ಕಡಿಮೆಯಾಗಿದೆ. 2004ರಲ್ಲಿ ಜೆಡಿಎಸ್‍ನಿಂದ ಚೆನ್ನಗಿರಿ ಕ್ಷೇತ್ರದಿಂದ ಚುನಾಯಿತನಾಗಿದ್ದೆ. ಆಗ ಇಬ್ರಾಹಿಂ ಹಾಗೂ ಸಿದ್ದರಾಮಯ್ಯನವರು ನಾವು ಯಾರ ಜೊತೆಯೂ ಹೋಗುವುದಿಲ್ಲ ಎಂದಿದ್ದರು. ನಮ್ಮ ಅಭಿಪ್ರಾಯವನ್ನು ಯಾರೂ ಕೇಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್

ಅಮೆರಿಕ ಪ್ರವಾಸದಲ್ಲಿದ್ದಾಗ ದೇವೇಗೌಡರು ಫೋನ್ ಮಾಡಿ ಮಾನ ಮರ್ಯಾದೆ ಹೋಗಿದೆ ಎಂದರು. ಅಲ್ಲಿಂದ ಬರುವಷ್ಟರಲ್ಲಿ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದರು.
ಹೊಸ ಹಾದಿಯ ಬಗ್ಗೆ ಇಬ್ರಾಹಿಂ ಹಾಗೂ ನಾಡಗೌಡರು ಯೋಚಿಸುತ್ತಿದ್ದಾರೆ. ಮತ್ತೆ ಜನತಾದಳದವರು ಸೇರುವ ಸಮಯ ಬಂದಿದೆ. ಇಬ್ರಾಹಿಂ ಅವರಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಮುಂದಿನ ವಿಧಾನಸಭೆ ಚುನಾವಣೆ ನೇತೃತ್ವವನ್ನು ಇಬ್ರಾಹಿಂ ಅವರೇ ವಹಿಸಬೇಕು ಎಂದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನಾಳೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು,ಅ.16-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಸ್ರೋ ಅಧ್ಯಕ್ಷ ಹಾಗೂ ಭಾರತ ಸರ್ಕಾರದ ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಸೋಮನಾಥ್.ಎಸ್ ಅವರಿಗೆ ಬೆಂಗಳೂರು ವಿವಿಯು ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವವು ನಾಳೆ ಬೆಳಗ್ಗೆ 10.30ಕ್ಕೆ ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದ್ದು, ಈ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಘಟಿಕೋತ್ಸವದಲ್ಲಿ ಒಟ್ಟು 299 ಚಿನ್ನದ ಪದಕ ಹಾಗೂ 113 ನಗದು ಬಹುಮಾನಗಳನ್ನು ಒಟ್ಟು 193 ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ವಿವಿಯ ಕುಲಪತಿ ಪ್ರೊ.ಜಯಕರ.ಎಚ್.ಎಂ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

204 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಿದ್ದು, ಚಿನ್ನದ ಪದಕಗಳನ್ನು 25 ಗ್ರಾಂ ಬೆಳ್ಳಿಯ ನಾಣ್ಯಕ್ಕೆ 18 ಕ್ಯಾರೆಟ್‍ನ 1.3 ಗ್ರಾಂ ಚಿನ್ನದ ಎಂಬೋಜ್ ಮಾಡಲಾಗಿದೆ. ಚಿನ್ನಪದಕ ವಿಜೇತ ವಿದ್ಯಾರ್ಥಿಗಳಿಗೆ ಈ ಪದಕಗಳನ್ನು ಈ ಬಾರಿ ನೀಡಲಾಗುವುದು ಎಂದರು.

ಘಟಿಕೋತ್ಸವದಲ್ಲಿ 28,881 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದು, ಅವರಲ್ಲಿ 13,707 ವಿದ್ಯಾರ್ಥಿಗಳು ಹಾಗೂ 15,164 ವಿದ್ಯಾರ್ಥಿನಿಯರಿದ್ದಾರೆ ಎಂದು ಹೇಳಿದರು. ವಿಶ್ವವಿದ್ಯಾಲಯದ ಕುಲಾದಿಪತಿಗಳಾದ ರಾಜ್ಯಪಾಲ ಥಾವರ್‍ಚಂದ್ ಗೆಲ್ಹೋಟ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಯುವ ಉದ್ಯಮಿ ಘೆರಾದ ಸಂಸ್ಥೆಯ ಸಹಸಂಸ್ಥಾಪಕ ನಿಖಿಲ್ ಕಾಮತ್ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದರು.

ರಾಜ್ಯದ ಕರಾವಳಿ, ಒಳನಾಡಿನಲ್ಲಿ 2 ದಿನ ಮಳೆ ಸಾಧ್ಯತೆ

ವಿನೂತರಿಗೆ 8 ಚಿನ್ನದ ಪದಕ:
ಸ್ನಾತಕೋತ್ತರ ವಿಭಾಗದಲ್ಲಿ ಆಕ್ಸಫರ್ಡ್ ವಿಜ್ಞಾನ ಮತ್ತು ಕಲಾ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ವಿನೂತ.ಕೆ 8 ಚಿನ್ನದ ಪದಕ ಹಾಗೂ ಮೂರು ನಗದು ಬಹುಮಾನ ಪಡೆಯಲಿದ್ದಾರೆ. ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು 8 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

ಬೆಂಗಳೂರು ವಿವಿಯ ಭೌತಶಾಸ್ತ್ರ ವಿಭಾಗದ ಅಸೀನಬಾನು.ಡಬ್ಲ್ಯು, ಗಣಿತ ಶಾಸ್ತ್ರ ವಿಭಾಗದ ದಿವ್ಯಾ.ಟಿ.ಎಂ, ಪ್ರಾಣಿಶಾಸ್ತ್ರ ಶಾಸ್ತ್ರ ವಿಭಾಗದ ನರ್ಮತಾ.ಎ, ಸಂಸ್ಕøತ ಶಾಸ್ತ್ರ ವಿಭಾಗದ ಭವಿಷ್ಯ ತಲಾ ಆರು ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ ಎಂದು ಅವರು ತಿಳಿಸಿದರು.

ಸ್ನಾತಕ ವಿಭಾಗದಲ್ಲಿ ಎಎಸ್‍ಪಿ ಪದವಿ ಕಾಲೇಜಿನ ದೀಕ್ಷಿತ.ಆರ್ ನಾಯಕ್ ಹಾಗೂ ವಿಶ್ವಚೇತನ ಪದವಿ ಕಾಲೇಜಿನ ರವಿಕುಮಾರ.ಎಸ್.ಎಂ, ಯುವಿಸಿಯ ಮೆಕಾನಿಕಲ್ ಇಂಜಿನಿಯರ್ ವಿಭಾಗದ ಯೋಗೇಶ್ವರನ್ ಪಡೆದುಕೊಂಡಿದ್ದಾರೆ.

ಜಿಂದಾಲ್ ಮಹಿಳಾ ಕಾಲೇಜಿನ ಚೈತ್ರ.ಎಸ್, ಬೆಂಗಳೂರು ವಿವಿ ಗಣಿತ ಶಾಸ್ತ್ರ ವಿಭಾಗದ ದಿವ್ಯಾ.ಟಿ.ಎಂ, ವಿಜಯನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಶ್ವೇತ ಉದಯಕುಮಾರ ಮುರಗೋಡ ಅವರು ಬಾಬಾ ಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಈ ಬಾರಿ ಪದವಿ ಪ್ರಮಾಣಪತ್ರವನ್ನು ವಿದ್ಯಾರ್ಥಿಗಳು ಡಿಜಿ ಲಾಕರ್ ಮತ್ತು ಮ್ಯಾಡ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದು. ವಿವಿಯು ಸಂಪೂರ್ಣ ಡಿಜಟಲೀಕರಣಗೊಂಡಿದ್ದು, ಪರೀಕ್ಷೆ ಮುಗಿದ ಒಂದು ವಾರದೊಳಗೆ ಫಲಿತಾಂಶ ನೀಡಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕುಲಪತಿ ಹೇಳಿದರು. 26,056 ಪ್ರಥಮ ಶ್ರೇಣಿ, 4807 ಪ್ರಥರ್ಮ ದರ್ಜೆ, 874 ದ್ವಿತೀಯ ದರ್ಜೆ ಹಾಗೂ 137 ಪದವಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್

ಪತ್ರಿಕಾಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಶೇಖ್ ಲತೀಫ್, ಪ್ರೊ.ಸಿ.ಶ್ರೀನಿವಾಸ್ (ಮೌಲ್ಯಮಾಪನ), ವಿತ್ತಾಕಾರಿ ಡಾ.ಎಂ.ಸುನಿತ ಉಪಸ್ಥಿತರಿದ್ದರು.

ಖರ್ಗೆ-ವೇಣುಗೋಪಾಲ್ ಜೊತೆ ಡಿಕೆಶಿ ಮಹತ್ವದ ಮಾತುಕತೆ

ಬೆಂಗಳೂರು, ಅ.16- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿನಲ್ಲಿಂದು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ವೇಣುಗೋಪಾಲ್ ಅವರು ಬೆಂಗಳೂರಿಗೆ ದಿಢೀರ್ ಆಗಮಿಸಿದ್ದು, ಡಿ.ಕೆ.ಶಿವಕುಮಾರ್ ಅವರೊಂದಿಗೆ ಹೋಗಿ ಚರ್ಚೆ ನಡೆಸಿರುವುದು ಹಲವು ಕುತೂಹಲಗಳನ್ನು ಕೆರಳಿಸಿದೆ. ಮಲ್ಲಿಕಾರ್ಜುನಖರ್ಗೆಯವರು ಬೆಂಗಳೂರಿನಲ್ಲೇ ಇದ್ದಿದ್ದರಿಂದ ಕೆ.ಸಿ.ವೇಣುಗೋಪಾಲ್ ದೆಹಲಿಯಿಂದ ಆಗಮಿಸಿದ್ದಾರೆ. ನಿನ್ನೆ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಆತುರಾತುರವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ.

ದಿಢೀರ್ ಭೇಟಿ ಸಮಾಲೋಚನೆಗಳು ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ನಿರಂತರವಾಗಿ ಆದಾಯ ತೆರಿಗೆ ದಾಳಿಗಳಾಗುತ್ತಿದ್ದು, ನೂರಾರು ಕೋಟಿ ರೂ.ಗಳನ್ನು ಜಪ್ತಿ ಮಾಡಲಾಗಿದೆ. ಕಾಕತಾಳೀಯ ಎಂಬಂತೆ ದಾಳಿಗೊಳಗಾದವರು ಮತ್ತು ಕಾಂಗ್ರೆಸ್‍ನ ಪ್ರಭಾವಿ ನಾಯಕರ ನಡುವಿನ ಸಂಪರ್ಕಗಳು ಸ್ಪಷ್ಟವಾಗುತ್ತಿದೆ. ಲೋಕಸಭೆ ಚುನಾವಣೆ, ಪಂಚರಾಜ್ಯಗಳ ಚುನಾವಣೆಗಳ ನಡುವೆ ಈ ದಾಳಿಗಳು ರಾಜಕೀಯ ಪ್ರೇರಿತ ಎಂಬ ಆರೋಪಗಳು ವ್ಯಾಪಕವಾಗಿವೆ.

ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ

ದಾಳಿಯಲ್ಲಿ ಸಿಕ್ಕಿದೆ ಎಂದು ಹೇಳಲಾದ ಹಣಕಾಸಿನ ಕುರಿತು ವಿರೋಧಪಕ್ಷಗಳು ಹಲವು ರೀತಿಯ ವ್ಯಾಖ್ಯಾನಗಳನ್ನು ಮಾಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿಗಿಳಿದಿದೆ, ಗುತ್ತಿಗೆದಾರರ ಬಾಕಿ ಬಿಲ್‍ಗಳ ಪಾವತಿಯಲ್ಲಿ ಕಮಿಷನ್ ಪಡೆಯುತ್ತಿದೆ ಎಂಬೆಲ್ಲಾ ಟೀಕೆಗಳು ಕೇಳಿಬಂದಿವೆ.

ಈ ನಡುವೆ ಕೆ.ಸಿ.ವೇಣುಗೋಪಾಲ್‍ರವರು ಬೆಂಗಳೂರಿಗೆ ಆಗಮಿಸಿ ಎಐಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಮಾಲೋಚನೆ ನಡೆಸಿರುವುದು ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಲೋಕಸಭೆ ಅಧ್ಯಕ್ಷರ ಆಯ್ಕೆ, ಪಕ್ಷ ಸಂಘಟನೆ, ನಿಗಮ ಮಂಡಳಿಗಳ ನೇಮಕಾತಿ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂಬ ವ್ಯಾಖ್ಯಾನಗಳಿವೆ.

ಮಾಮೂಲಿ ಎಂಬಂತೆ ಇದೊಂದು ಸೌಜನ್ಯದ ಭೇಟಿ, ವಿಶೇಷತೆ ಇಲ್ಲ ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಆದರೆ ಕೆ.ಸಿ. ವೇಣುಗೋಪಾಲ್ ಅವರ ದಿಢೀರ್ ಭೇಟಿ, ಆತುರಾತುರವಾಗಿ ನಡೆದ ಸಮಾಲೋಚನೆಗಳು ಹಲವು ರೀತಿಯ ಚರ್ಚೆಗಳಿಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮದಲ್ಲಿ ಮೈಸೂರಿನಲ್ಲಿರುವುದರಿಂದ ಸಮಾಲೋಚನಾ ಸಭೆಯಿಂದ ಹೊರಗುಳಿದಿದ್ದರು.

ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಈ ಕುರಿತು ಚರ್ಚೆಗಳಾಗಿವೆ ಎಂದು ಹೇಳಲಾಗಿದೆ. ದಸರಾ ಹಬ್ಬಕ್ಕೂ ಮುನ್ನವೇ ನಿಗಮಮಂಡಳಿಗಳ ನೇಮಕಾತಿ ನಡೆಯುತ್ತಿದ್ದು, ಶಾಸಕರಿಗೆ ಶೇ. 50 ರಷ್ಟು, ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಶೇ. 50 ರ ಅನುಪಾತದಲ್ಲಿ ಅಧ್ಯಕ್ಷ ಸ್ಥಾನ ಹಂಚಿಕೆ ಮಾಡಲಾಗುತ್ತದೆ ಎಂಬ ವದಂತಿಗಳಿವೆ.

ಇಸ್ರೇಲ್ ಪಡೆಗಳಿಗೆ ಅಂತಿಮ ಎಚ್ಚರಿಕೆ ನೀಡಿದ ಇರಾನ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಂಭ್ರಮ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಹಾಗೆ ನಿಗಮಮಂಡಳಿಗಳ ನೇಮಕಾತಿಗೆ ಚಾಲನೆ ದೊರೆಯಲಿದೆ ಎಂಬ ನಿರೀಕ್ಷೆಗಳಿವೆ.

ಎಲ್ಲದಕ್ಕೂ ಉತ್ತರ ಕೊಡುತ್ತೇನೆ, ಸ್ವಲ್ಪ ಕಾದು ನೋಡಿ : ಡಿಕೆಶಿ

ಬೆಂಗಳೂರು, ಅ.16- ಬಿಜೆಪಿಯವರ ಎಲ್ಲಾ ಟೀಕೆಗಳಿಗೂ ಉತ್ತರ ಕೊಡುತ್ತೇನೆ, ಅವರು ಪ್ರತಿಭಟನೆ ಮಾಡಬೇಕು ಮಾಡಲಿ, ನಾವೂ ಕೂಡ ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿದ ಬಳಿಕ ಹೊಸ ಹುಮ್ಮಸ್ಸಿನೊಂದಿಗೆ ಮಾಧ್ಯಮಗಳೊಂದಿಗೆ ಮುಖಾಮುಖಿಯಾದ ಅವರು, ಸವಾಲಿನ ದಾಟಿಯಲ್ಲೇ ಪ್ರತಿಕ್ರಿಯಿಸಿದ್ದಾರೆ.

ಯಾರ್ಯಾರಿಗೆ ಏನೇನು ಉತ್ತರ ಕೊಡಬೇಕೋ ಖಂಡಿತವಾಗಿಯೂ ಕೊಡುತ್ತೇನೆ. ಹೈ ವೋಲ್ಟೇಜ್‍ಗೂ ಕೊಡುತ್ತೇನೆ, ಲೋ ವೋಲ್ಟೇಜ್‍ಗೂ ಕೊಡುತ್ತೇನೆ. ನಕಲಿಗಳಿಗೂ, ಲೂಟಿಗಳಿಗೂ ಎಲ್ಲರಿಗೂ ಉತ್ತರ ಕೊಡುತ್ತೇನೆ. ಸ್ವಲ್ಪ ಕಾದುನೋಡಿ ಎಂದರು.

ಬಿಜೆಪಿ ಪ್ರತಿಭಟನೆಗಳನ್ನು ಜನ ನಂಬುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಆದಾಯ ತೆರಿಗೆ ದಾಳಿಯ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರು ಪ್ರತಿಭಟನೆ ಮಾಡಬೇಕು, ಅವರು ಪ್ರತಿಭಟನೆ ಮಾಡಿದರೇನೇ ಅವರ ಲೂಟಿ ಏನೆಂದು ಜನರಿಗೆ ಗೊತ್ತಾಗಲು ಸಾಧ್ಯ. ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ಹೇಳಿದರು.
ಆದಾಯ ತೆರಿಗೆ ದಾಳಿಯಲ್ಲಿ ಡಿ.ಕೆ.ಶಿವಕುಮಾರ್‍ರ ಹೆಸರು ಥಳಕು ಹಾಕಲಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯಿಸಿಲು ನಿರಾಕರಿಸಿದರು.