Friday, November 7, 2025
Home Blog Page 1889

ವಿಶ್ವಕಪ್ ಪಂದ್ಯ : ಭಾರತಕ್ಕೆ 192 ರನ್ ಟಾರ್ಗೆಟ್ ಪಾಕ್

ಅಹಮದಾಬಾದ್ : ಅ.14 : ಇಂದು ಅಹಮದಾಬಾದ್ ನಲ್ಲಿ ನಡೆದ ರೋಚಕ ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಪಂದ್ಯದ ಮೊದಲ ಇನ್ನಿಗ್ಸ್ ಮುಕ್ತಾಯಗೊಂಡಿದ್ದು, ಭಾರತಕ್ಕೆ ಪಾಕಿಸ್ತಾನ 192 ರನ್ ಗಳ ಸಾಧಾರಣ ಗುರಿ ನೀಡಿದೆ. ಟಾಸ್ ಸೋತು ಬ್ಯಾಂಟಿಂಗ್ ಗೆ ಇಳಿದ ಪಾಕ್ ರನ್ ಕಲೆಹಾಕಲು ಹರಸಾಹಸಪಟ್ಟಿತು, ಆರಂಭಿಕರಾಗಿ ಬ್ಯಾಟಿಂಗ್ ಗೆ ಇಳಿದ ಅಬ್ದುಕ್ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ರನ್ ಕಲೆಹಾಕಲು ಪರದಾಡಿದರು, ಅಬ್ದುಕ್ ಶಫೀಕ್ ಕೇವಲ 20ರನ್ ಗಳಿಸಿ ವಿಕೆಟ್ ಸಿರಾಜ್ ಗೆ ಒಪ್ಪಿಸಿದರೆ, 36 ರನ್ ಗಳಿಸಿದ ಇಮಾಮ್ ಹಾರ್ದಿಕ್ ಎಸೆತದಲ್ಲಿ ಕ್ಯಾಚ್ ಕೊಟ್ಟು ಹೊರನಡೆದರು.

ನಂತರ ಬಂದ ನಾಯಕ ಬಾಬರ್ ಅಜಂ ಶಾಂತಚಿತ್ತದಿಂದ ಇನ್ನಿಂಗ್ಸ್ ಕಟ್ಟುಲು ಪ್ರಯತ್ನಿಸಿದರೂ , ಅಜಂಗೆ ಸಾಥ್ ಕೊಟ್ಟ ಮೊಹಮ್ಮದ್ ರಿಜ್ವಾನ್ ಉತ್ತಮ ಜೊತೆಯಾಟ ಪ್ರದರ್ಶಿಸಿದರಾದರೂ. ನಾಯಕ ಬಾಬರ್ ಅರ್ಧ ಶತಕ ಸಿಡಿಡಿ ವಿಕೆಟ್ ಒಪ್ಪಿಸಿದರೆ ಅಹಮದ್ ರಿಜ್ವಾನ್ ಕೂಡ 49 ರನ್ ಗಳಿಸಿ ಅರ್ಧ ಶತಕ ವಂಚಿತರಾಗಿ ಹೊರನಡೆದರು.

ವಿಪಕ್ಷಗಳ ಮೇಲಷ್ಟೇ ಏಕೆ ಐಟಿ ದಾಳಿ..? : ಸಚಿವ ಪ್ರಿಯಾಂಕ್ ಖರ್ಗೆ

ನಂತರ ಬಂದ ಬ್ಯಾಟರ್ ಗಳು ಎರಡಂಕಿ ದಾಟಲೂ ಕೂಡ ಸಾಧ್ಯವಾಗದೆ ಒಬ್ಬರ ಹಿಂದೆ ಒಬ್ಬರು ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ಸಾಗಿದರು. ಅಂತಿಮಗಾಗಿ ಪಾಕ್ 42.5 ಓವರ್ ನಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 191 ರನ್ ಗಳಿಸಲಷ್ಟೇ ಶಕ್ತವಾಯಿತು.

ಇನ್ನು ಉತ್ತಮ ಪ್ರದರ್ಶನ ನೀಡಿದ ಭಾರತೀಯ ಬೌಲರ್ ಗಳಾದ ಬೂಮ್ರಾ, ಸಿರಾಜ್, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದು ಮಿಂಚಿದರು.

ಈ ವರೆಗೂ ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಯಾವುದೇ ಪಂದ್ಯದಲ್ಲಿ ಸೋಲು ಕಂಡಿಲ್ಲ, ಅದೇ ರೀತಿ ಈ ಪಂದ್ಯದಲ್ಲೂ ಬೌಲಿಂಗ್ ಪ್ರದರ್ಶನ ನೀಡಿದ್ದು ಭಾರತ ಎಂದುನಂತೆ ಗೆಲುವು ಸಾಧಿಸಲಿದೆ ಎಂಬ ನಿರೀಕ್ಷೆಗಳಿವೆ.
ಸ್ಕೋರ್ :
ಪಾಕಿಸ್ತಾನ : 191(42.5)

ಕಿಯೊನಿಕ್ಸ್ ನಲ್ಲಿ ಮುಕ್ತ ಟೆಂಡರ್ ವ್ಯವಸ್ಥೆಗೆ ಚಾಲನೆ

ಬೆಂಗಳೂರು,ಅ.14- ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸಂಪನ್ಮೂಲವನ್ನು ರಕ್ಷಿಸುವ ಸಲುವಾಗ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಆಡಿಟ್ ಜನರಲ್ ಕಚೇರಿ ಇತ್ತೀಚೆಗೆ ಕಿಯೊನಿಕ್ಸ್ ಸಂಸ್ಥೆಯ ಲೆಕ್ಕ ಪರಿಶೋಧನಾ ವರದಿಯನ್ನು ಸಲ್ಲಿಸಿದ್ದು, ಅದರಲ್ಲಿ ಹಲವು ಲೋಪಗಳನ್ನು ಗುರುತಿಸಿದೆ. ಅವುಗಳನ್ನು ಗಮನಿಸಲಾಗಿದ್ದು, ಭವಿಷ್ಯದಲ್ಲಿ ಸುಸ್ಥಿರತೆ ಹಾಗೂ ಪಾರದರ್ಶಕತೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಕಿಯೊನಿಕ್ಸ್ ಸಂಸ್ಥೆಯು ವಿವಿಧ ಸರ್ಕಾರಿ ಇಲಾಖೆಗಳು, ಮಂಡಳಿಗಳು ಮತ್ತು ನಿಗಮಗಳಿಗೆ ಒದಗಿಸಿದ ಹೆಚ್ಚಿನ ಸರಕುಗಳು ಮತ್ತು ಸೇವೆಗಳಿಗೆ ಮೂರನೇ ವ್ಯಕ್ತಿಯ ತಪಾಸಣೆ ನಡೆಸದೆ ಬಿಲ್ ಪಾವತಿಸಲಾಗಿತ್ತು. ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿ ಅಕ್ರಮ ಪಾವತಿಗಳು, ಕೆಲವು ಒಪ್ಪಂದಗಳಲ್ಲಿ ಮೂಲ ದರವನ್ನು ತಪ್ಪಾಗಿ ಅಳವಡಿಸುವುದು, ಎಂಪ್ಯಾನಲ್ಮೆಂಟ್ ಉಲ್ಲಂಘನೆಗಳು, ಬಿಲ್ಡರ್‍ಗಳು ಸಲ್ಲಿಸಿದ್ದ ಆಸಕ್ತಿಯ ಅಭಿವ್ಯಕ್ತಿಯ ಮೌಲ್ಯಮಾಪನಕ್ಕೆ ಸಮಿತಿಗಳನ್ನು ರಚಿಸದಿರುವುದು, ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಮಾಹಿತಿ ತಂತ್ರಜ್ಞಾನ ಸಂಬಂಧಿಸಿದ ಸರಬರಾಜುಗಳ ಸಂಗ್ರಹಣೆ, ಪ್ರಮಾಣಿತ ಟೆಂಡರ್ ದಾಖಲೆಗಳನ್ನು ಅಳವಡಿಸಿಕೊಳ್ಳದಿರುವುದು, ಟೆಂಡರ್ ವಿಭಜನೆ, ಒಪ್ಪಂದಗಳಲ್ಲಿ ಕಾರ್ಯಕ್ಷಮತೆಯ ಭದ್ರತೆಯನ್ನು ಗಮನಿಸಿದಿರುವುದು, ಬಿಲ್ಡರ್ಸ್‍ಗಳಿಂದ ಇಎಂಡಿ ಸಂಗ್ರಹ ಸೇರಿದಂತೆ ಹಲವು ಲೋಪಗಳು ನಡೆದಿವೆ ಎಂದು ವಿವರಿಸಲಾಗಿದೆ.

ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಕಿಯೊನಿಕ್ಸ್‍ನಲ್ಲಿ ಬಾಕಿ ಇರುವ ಬಿಲ್‍ಗಳಿಗಾಗಿ ವೆಂಡರ್‍ಗಳು ಮತ್ತು ಭಾದ್ಯಸ್ಥರು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ. ಅವುಗಳನ್ನು ಆದ್ಯತೆ ಮತ್ತು ಲೆಕ್ಕಪರಿಶೋಧನೆಗಳ ಅವಲೋಕನಗಳ ಆಧಾರದ ಮೇಲೆ ಪರಿಶೀಲಿಸಲಾಗುವುದು. ಹಣಕಾಸು ಇಲಾಖೆಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಣೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸುಗಮ ವ್ಯವಹಾರಕ್ಕಾಗಿ ಜಿಎಸ್‍ಟಿ ಪುರಾವೆಯನ್ನು ಸಮರ್ಪಕವಾಗಿ ಪರಿಶೀಲಿಸಲಾಗುತ್ತಿದೆ. ಆಡಿಟ್ ವರದಿಯಲ್ಲಿನ ಅಂಶಗಳು ಮರುಪರಿಶೀಲನೆಗೆ ಒಳಪಡಿಸಿದ್ದು, ಸರ್ಕಾರಕ್ಕೆ ಯಾವುದೇ ನಷ್ಟವಾಗದಂತೆ ಎಚ್ಚರಿಕೆ ವಹಿಸಲಾಗುವುದು. ಕರ್ನಾಟಕ ಪಾರದರ್ಶಕ ಕಾಯ್ದೆ ನಿಬಂಧನೆಗಳನ್ನು ಅನುಸರಿಸಲಾಗುವುದು.

ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ 235 ಭಾರತೀಯರು

2023 ರ ಅಕ್ಟೋಬರ್ 11 ರಂದು ನಡೆದ ಟೆಂಡರ್ ಪರಿಶೀಲನಾ ಸಂಸ್ಥೆಯ ಮೊದಲ ಸಭೆಯಲ್ಲಿ ಟೆಂಡರ್ ಪ್ರಸ್ತಾವನೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿದೆ ಎಂದು ವಿವರಿಸಿದ್ದಾರೆ. 4 ಜಿ ವಿನಾಯಿತಿಯಲ್ಲಿ ಕೆಲವು ಲೋಪಗಳು ಕಂಡುಬಂದಿವೆ. ಅವುಗಳನ್ನು ಸರಿಪಡಿಸಲು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ಜೊತೆಗೆ ಮುಕ್ತ ಟೆಂಡರ್ ವ್ಯವಸ್ಥೆಯನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

ವಿಪಕ್ಷಗಳ ಮೇಲಷ್ಟೇ ಏಕೆ ಐಟಿ ದಾಳಿ..? : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.14- ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ದಾಳಿಗಳು, ತನಿಖೆಗಳು ವಿರೋಧ ಪಕ್ಷದ ನಾಯಕರ ಮೇಲಷ್ಟೆ ಏಕೆ ನಡೆಯುತ್ತಿವೆ ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಎಲೆಕ್ಷನ್ ಕಲೆಕ್ಷನ್ ಎಂದು ಆರೋಪ ಮಾಡುವವರು ಕೇಂದ್ರದಿಂದ ತನಿಖೆ ಸಂಸ್ಥೆಗಳಿಂದ ತನಿಖೆ ಮಾಡಿಸಲಿ ಎಂದು ಸವಾಲು ಹಾಕಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಖರ್ಚಿಗೆ ಕರ್ನಾಟಕದಲ್ಲಿ ಹಣ ಸಂಗ್ರಹಿಸಿ ಕಳುಹಿಸ ಲಾಗುತ್ತಿದೆ ಎಂಬ ಆರೋಪ ನಿರಾಧಾರ ಎಂದರು. ಆದಾಯ ತೆರಿಗೆ, ಸಿಬಿಐ, ಜಾರಿ ನಿರ್ದೇಶನಾಲಯ ಎಲ್ಲವೂ ಬಿಜೆಪಿಯವರ ಕೈನಲ್ಲೇ ಇವೆ. ಅವುಗಳಿಂದ ತನಿಖೆ ಮಾಡಿಸುವುದು ಬೇಡ ಎಂದು ಯಾರು ಹೇಳಿದ್ದಾರೆ.

ಕುಮಾರಸ್ವಾಮಿಯವರು ಆರೋಪ ಮಾಡುತ್ತಿದ್ದಾರೆ. ಈಗ ಜೆಡಿಎಸ್-ಬಿಜೆಪಿ ಮೈತ್ರಿಯಾಗಿದೆ. ಹೆಚ್.ಡಿ.ಕುಮಾರಸ್ವಾಮಿ ಅವರ ಮಾತುಗಳನ್ನು ಪ್ರಧಾನಿ, ಕೇಂದ್ರ ಗೃಹ ಸಚಿವರು ಕೇಳುತ್ತಾರೆ. ತಾವು ಮಾಡಿದ ಆರೋಪಗಳಿಗೆ ಪೂರಕವಾಗಿ ದಾಖಲೆಗಳನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ನೀಡಲಿ, ತನಿಖೆ ಮಾಡಿಸಲಿ, ತಪ್ಪು ಮಾಡಿದ್ದವರು ಶಿಕ್ಷೆ ಅನುಭವಿಸುತ್ತಾರೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಪ್ರಚಾರಕ್ಕಾಗಿ ಆರೋಪ ಮಾಡುತ್ತಾ ಏಕೆ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುತ್ತೇವೆ ಎಂದು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಚೈತ್ರ ಕುಂದಾಪುರ ಪ್ರಕರಣದಲ್ಲಿ ಪ್ರಮುಖ ನಾಯಕರಿಗೆ ಹಣ ರವಾನೆಯಾಗಿದೆ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆ ಪ್ರಕರಣದಲ್ಲಿ ಏಕೆ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯದ ತನಿಖೆ ನಡೆಯುತ್ತಿಲ್ಲ. ವಿರೋಧ ಪಕ್ಷಗಳ ನಾಯಕರ ಮೇಲಷ್ಟೆ ಏಕೆ ದಾಳಿಗಳಾಗುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳು ಅಕಾರಕ್ಕೆ ಬಂದಾಗಲೆಲ್ಲಾ ಕೇಂದ್ರ ತನಿಖಾ ಸಂಸ್ಥೆಗಳನ್ನು ಛೂ ಬಿಡಲಾಗುತ್ತಿದೆ.

ಹಿಂದೆ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಬಹುತೇಕ ಕಡೆ ಈ ರೀತಿ ರಾಜಕಾರಣ ನಡೆಸಿದೆ ಎಂದರು.
ಕೇಂದ್ರ ಲೆಕ್ಕ ಪರಿಶೋಧನೆ ಸಂಸ್ಥೆ ನರೇಂದ್ರ ಮೋದಿ ಸರ್ಕಾರದಲ್ಲಿ 30 ರಿಂದ 40 ಸಾವಿರ ಕೋಟಿ ಹಗರಣಗಳಾಗಿವೆ ಎಂದು ವರದಿ ನೀಡಿದೆ. ಈ ಆರೋಪ ಕುರಿತು ತನಿಖೆ ನಡೆಯುತ್ತಿಲ್ಲ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ದಾಳಿಗಳಾಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಬಿಜೆಪಿ ಮನೆಯೊಂದು ನೂರು ಬಾಗಿಲು ಎಂಬಂತಾಗಿದೆ. ಅಲ್ಲಿ ಯಾರು ಮುಖಂಡರು ಎಂದೇ ಗೋತ್ತಾಗುತ್ತಿಲ್ಲ. ಸರ್ಕಾರ ರಚನೆಯಾಗಿ ನಾಲ್ಕೈದು ತಿಂಗಳಾದರೂ ಈವರೆಗೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ದೆಹಲಿಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯಾಗಿದೆ, ಆ ವೇಳೆ ನಡೆದ ಮಾತುಕತೆಯಲ್ಲಿ ರಾಜ್ಯದ ಒಬ್ಬ ಬಿಜೆಪಿ ನಾಯಕರು ಹಾಜರಿರಲಿಲ್ಲ. ಬಿಜೆಪಿ ಮನೆ ಖಾಲಿಯಾಗಿದೆ. ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕಾಗಿ ಸಿಬಿಐ, ಆದಾಯ ತೆರಿಗೆ ಛೂ ಬಿಡುವುದನ್ನು ಬಿಟ್ಟು ಇನ್ನೇನು ಮಾಡಲು ಬರುತ್ತದೆ ಅವರಿಗೆ ಎಂದು ಪ್ರಶ್ನಿಸಿದರು.

ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಜೆಡಿಎಸ್-ಬಿಜೆಪಿ ಬಗ್ಗೆ ಸಂಸದ ಡಿ.ವಿ.ಸದಾನಂದ ಗೌಡರು, ಮಾಜಿ ಶಾಸಕ ರೇಣುಕಾಚಾರ್ಯ ಏನು ಹೇಳಿಕೆ ನೀಡಿದ್ದಾರೆ ಎಂದು ಜನರ ಕಣ್ಣೆದುರೇ ಇದೆ. ರಾಜ್ಯ ಬಿಜೆಪಿ ನಾಯಕರು ಬೆನ್ನೆಲುಬು ಕಳೆದುಕೊಂಡಿದ್ದಾರೆ. ಅಕಾರ ಇದ್ದಾಗಲಂತೂ ರಾಜ್ಯದ ಪರವಾಗಿ ಮಾತನಾಡಲು ಆಗಿರಲಿಲ್ಲ. ಈಗ ನಮ್ಮ ಪಾಡಿಗೆ ಗೌರವವಾಗಿ ಬದುಕಲು ಬಿಡಿ ಎಂದು ಹೈಕಮಾಂಡ್ ಬಳಿ ಕೇಳಲು ಅವರಿಗೆ ಆಗುತ್ತಿಲ್ಲ ಎಂದರು.

ಹಿಂದೆ ನಾವು ದಾಖಲೆಗಳನ್ನು ಇಟ್ಟು ಆರೋಪ ಮಾಡಿದ್ದೆವು. ಅವರು ತನಿಖೆ ಮಾಡಿರಲಿಲ್ಲ. ಈಗ ಬಿಜೆಪಿಯವರು ಆರೋಪ ಮಾಡುತ್ತಾರೆ, ಮಾಡಲಿ ಆದರೆ ಆರೋಪಕ್ಕೆ ದಾಖಲೆ ಕೊಡಲಿ, ನಾವು ತನಿಖೆ ಮಾಡಲು ಸಿದ್ಧರಿದ್ದೇವೆ. ಗಾಳಿಯಲ್ಲಿ ಗುಂಡು ಹೊಡೆಯುವವರಿಗೆ ಏನು ಮಾಡಲು ಸಾಧ್ಯ ಎಂದರು. ಜನ ನಮಗೆ ಅಧಿಕಾರ ನೀಡಿರುವುದು ಉತ್ತಮ ಆಡಳಿತ ನಡೆಸಿ, ಜನರಿಗೆ ಅನುಕೂಲ ಮಾಡಿಕೊಡಲಿಕ್ಕಾಗಿ. ಬಿಜೆಪಿಯವರ ಹುಸಿ ಆರೋಪಗಳಿಗೆ ಉತ್ತರ ಹೇಳುತ್ತಾ ಕುಳಿತುಕೊಳ್ಳುವುದಿಲ್ಲ ಎಂದರು.

ಬಿಜೆಪಿಯವರಿಗೆ ತಮ್ಮ ಸರ್ಕಾರವನ್ನೇ ಉಳಿಸಿ ಕೊಳ್ಳಲಾಗಲಿಲ್ಲ. ಈಗ 135 ಶಾಸಕ ಸಂಖ್ಯಾಬಲ ಇರುವ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಾರೆ ಎಂದಾದರೆ ಮಾಡಲಿ ನಾವು ನೋಡುತ್ತೇವೆ. ರಾಜಕೀಯ ಮಾಡಲು ಅವರೊಬ್ಬರಿಗೆ ಬರುತ್ತದೆಯೇ, 100 ವರ್ಷ ನಾವು ಸುಮ್ಮನೆ ಬಂದಿದ್ದೇವೆಯೇ. ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಅವರ ಮನೆಯನ್ನೂ ಅವರು ಸರಿಯಾಗಿ ನೋಡಿಕೊಳ್ಳಲು ಬರುತ್ತಿಲ್ಲ. ಇರುವವರನ್ನು ಉಳಿಸಿಕೊಳ್ಳಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದರು.

ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್

ಪಂಚರಾಜ್ಯಗಳ ಚುನಾವಣೆ ಘೋಷಣೆಯಾದ ಮೇಲೆ ಬಿಜೆಪಿ ಆತಂಕದಲ್ಲಿದೆ. ಛತ್ತಿಸ್‍ಗಡದಲ್ಲಿ ಅಧಿಕಾರಕ್ಕೆ ಬರಲ್ಲ ಎಂದು ಬಿಜೆಪಿಯ ಸಮೀಕ್ಷೆಗಳೇ ಹೇಳುತ್ತಿವೆ. ತೆಲಂಗಾಣದಲ್ಲಿ ಬಿಜೆಪಿ ಅಡ್ರೆಸ್‍ಗೆ ಇಲ್ಲ, ಮಧ್ಯ ಪ್ರದೇಶದಲ್ಲಿ ಹಾಲಿ ಮುಖ್ಯಮಂತ್ರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮೂರನೆ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಸೋಲಿನ ಭಯ ಅವರನ್ನು ಕಾಡುತ್ತಿದೆ ಎಂದರು.

ಕುಮಾರಸ್ವಾಮಿ ದೊಡ್ಡ ನಾಯಕರು, ಅನುಭವಸ್ಥರು, ಬಹುತೇಕ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅವರು ಮಾತನಾಡುವಾಗ ಘನತೆಯಿಂದ ವರ್ತಿಸಬೇಕು. ನಮ್ಮಂತೆ ಹುಡುಗರ ರೀತಿ ಮಾಡನಾಡಲು ಸಾಧ್ಯವೇ. ಯಾವುದೇ ಆರೋಪ ಮಾಡಬೇಕಾದರೂ ದಾಖಲೆ ಇಟ್ಟು ಮಾತನಾಡಬೇಕಲ್ಲ ಎಂದರು.

ಒಲಿಂಪಿಕ್ಸ್ ಕ್ರಿಕೆಟ್ ಎಂಟ್ರಿ

ನವದೆಹಲಿ,ಅ.14- ಮಹತ್ವದ ಬೆಳವಣಿಗೆಯಲ್ಲಿ ಮುಂದಿನ 2028ರಲ್ಲಿ ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ನಡೆಯಲಿರುವ ಒಲಿಂಪಿಕ್ಸ್‍ನಲ್ಲಿ ಕ್ರಿಕೆಟ್ ಸೇರಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಹಸಿರು ನಿಶಾನೆ ತೋರಿದೆ. ಈ ಹಿಂದೆ 1900 ಇಸವಿಯಲ್ಲಿ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಒಂದು ಭಾಗವಾಗಿತ್ತು ನಂತರ ನಿಲ್ಲಿಸಲಾಗಿತ್ತು ಈಗ 128 ವರ್ಷಗಳ ನಂತರ ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಆಡಿಸಲಾಗುತ್ತದೆ.

ಇನ್ನು 5 ವರ್ಷ ಬಾಕಿ ಇದ್ದು ಟಿ-20 ಕ್ರಿಕೆಟ್‍ಮಾದರಿಯಲ್ಲಿ ಪಂದ್ಯಾವಳಿ ನಡೆಯಲಿದೆ. ಕ್ರಿಕೆಟ್ ಜೊತೆಗೆ ಸ್ಕ್ವಾಷ್,ಬೇಸ್‍ಬಾಲ್ ,ಸಾಫ್ಟ್‍ಬಾಲ್, ಫ್ಲ್ಯಾಗ್ ಫುಟ್‍ಬಾಲ್, ಲ್ಯಾಕ್ರೋಸ್,ಸೇರಿದಂತೆ ಒಟ್ಟು ಐದು ಆಟಗಳನ್ನು ಪರಿಚಯಿಸುವ ಕುರಿತು ಲಾಸ್ ಏಂಜಲೀಸ್ ಸಂಘಟನಾ ಸಮಿತಿಯ ಪ್ರಸ್ತಾವನೆಯನ್ನು ಐಒಸಿ ಕಾರ್ಯಕಾರಿ ಮಂಡಳಿಯು ಮುಂದೆ ತಂದಿತ್ತು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧ್ಯಕ್ಷರು ಅಂಗೀಕರಿಸಿದ್ದಾರೆ.

ಬಾಕಿ ಬಿಲ್ ಕುರಿತು ಸಿಎಂ ಜೊತೆ ಗುತ್ತಿಗೆದಾರರ ಸಮಾಲೋಚನೆ

ಇತ್ತೀಚೆಗೆ ಮೊದಲ ಬಾರಿಗೆ ಚೀನಾದ ಹ್ಯಾಂಗ್‍ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023 ರಲ್ಲಿ ಭಾರತದ ಪುರುಷ ಮತ್ತು ಮಹಿಳಾ ತಂಡ ಗೆದ್ದು ಚಿನ್ನದ ಪದಕವನ್ನು ಗೆದ್ದಿತ್ತು. ಭಾರತ ಪುರುಷರ ತಂಡದ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್ ವಹಿಸಿದ್ದರು. ಮಹಿಳಾ ಭಾರತೀಯ ಕ್ರಿಕೆಟ್ ತಂಡದ ಸಾರಥ್ಯವನ್ನು ಹರ್ಮನ್ಪ್ರೀತ್ ಕೌರ್ ವಹಿಸಿಕೊಂಡರು.

ಪ್ರಭಾವಿಗಳಿಗೆ ನೋಟಿಸ್ ನೀಡಲು ಆದಾಯ ತೆರಿಗೆ ಇಲಾಖೆ ಸಜ್ಜು

ಬೆಂಗಳೂರು,ಅ.14- ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿವಾಸದಲ್ಲಿ ಸಿಕ್ಕಿಬಿದ್ದಿದ್ದ 42 ಕೋಟಿ ನಗದು ಹಾಗೂ ಚಿನ್ನಾಭರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಭಾವಿಗಳಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿದೆ. ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ಸಂಬಂಧಿಕರ ಮೇಲೆ ಐಟಿ ಅಧಿಕಾರಿಗಳು ಸತತವಾಗಿ ಮೂರು ದಿನ ಶೋಧ ನಡೆಸಿದ್ದರು.

ಅದಾದ ನಂತರ ರಾಜ್ಯದಲ್ಲಿ ನಡೆದಿರುವ ಅತಿದೊಡ್ಡ ಐಟಿ ದಾಳಿ ಇದಾಗಿದ್ದು, 42 ಕೋಟಿ ನಗದು, ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನಾಭರಣಗಳು ಸಿಕ್ಕಿಬಿದ್ದಿರುವುದರ ಹಿಂದೆ ನಿಜವಾದ ನಾಯಕನನ್ನು ಪತ್ತೆ ಹಚ್ಚಲು ಐಟಿ ಮುಂದಾಗಿದೆ. ಗುರುವಾರ ಸಂಜೆ 6 ಗಂಟೆಯಿಂದ ಸತತ 40 ಗಂಟೆಗೂ ಅಧಿಕ ಕಾಲ ಅಂಬಿಕಾಪತಿ ಮನೆ, ಸಂಬಂಧಿಕರ ನಿವಾಸ, ಕಚೇರಿ ಸೇರಿದಂತೆ ಇಂಚಿಂಚು ಮಾಹಿತಿಯನ್ನು ಹೊರತೆಗೆಯುತ್ತಿರುವ ಐಟಿ ಅಧಿಕಾರಿಗಳಿಗೆ ಇದರ ಹಿಂದೆ ಕಾಣದ ಪ್ರಭಾವಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮಾನ್ಯತಾಟೆಕ್ ಪಾರ್ಕ್‍ನಲ್ಲಿ ಅಂಬಿಕಾಪತಿ ಒಡೆತನಕ್ಕೆ ಸೇರಿದ ಮನೆಯ ಲಾಕರ್‍ನೊಳಗೆ ಸಿಕ್ಕಿರುವ ಸೂಟ್‍ಕೇಸ್ ಹಲವರಿಗೆ ಕಂಟಕವಾಗುವ ಸಾಧ್ಯತೆ ಇದೆ.

ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು

ಏಕೆಂದರೆ ಇದರಲ್ಲಿ ಉಮಾಪತಿ ಕೆಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿಟ್ಟಿದ್ದರು ಎನ್ನಲಾಗಿದೆ. ಪ್ರಾರಂಭದಲ್ಲಿ ಇದನ್ನು ತೆಗೆಯಲು ಹಿಂದೇಟು ಹಾಕಿದಾಗಲೇ ಐಟಿ ಅಕಾರಿಗಳಿಗೆ ಮತ್ತಷ್ಟು ಅನುಮಾನ ಮೂಡಿಬಂದು ಬಲವಂತವಾಗಿ ತೆರೆಸಿದರು. ಆಗ ಸೂಟ್‍ಕೇಸ್‍ನಲ್ಲಿದ್ದ ಕೆಲವು ದಾಖಲೆಗಳು ಈಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದೆ.

ಈ ಹಣ ಎಲ್ಲಿಂದ ಬಂತು? ಯಾರಿಗೆ ಕೊಡಬೇಕಿತ್ತು? ಯಾರಿಂದ ಸಂಗ್ರಹಿಸಲಾಗಿತ್ತು? ಎಂಬುದರ ಬಗ್ಗೆ ದಾಖಲೆಗಳಲ್ಲಿ ಉಲ್ಲೇಖ ಮಾಡಲಾಗಿದೆ. ಹಣವನ್ನು ಬೆಂಗಳೂರಿನಿಂದ ಚೆನ್ನೈಗೆ ತೆಗೆದುಕೊಂಡು ಹೋಗಿ ಯಾರಿಗೆ ತಲುಪಿಸಬೇಕು, ಅಲ್ಲಿಂದ ಎಲ್ಲಿಗೆ ಹೋಗಬೇಕು ಹೀಗೆ ಪ್ರತಿಯೊಂದು ವಿವರಗಳನ್ನು ನಮೂದಿಸಲಾಗಿದೆ ಎಂದು ತಿಳಿದುಬಂದಿದೆ.

ಈ ದಾಖಲೆಗಳನ್ನೇ ಆಧಾರವಾಗಿಟ್ಟುಕೊಂಡಿರುವ ಐಟಿ ಅಧಿಕಾರಿಗಳು ಕೆಲವು ಪ್ರಭಾವಿ ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ದತೆ ನಡೆಸಿದೆ. ಮೇಲ್ನೋಟಕ್ಕೆ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳು, ಗುತ್ತಿಗೆದಾರರು, ಮಧ್ಯವರ್ತಿಗಳು ಹೀಗೆ ಹಲವರು ಶಾಮೀಲಾಗಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ಕೈಗೆತ್ತಿಕೊಳ್ಳಲು ಐಟಿ ಮುಂದಾಗಿದೆ.

ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ

ಪ್ರಭಾವಿಗಳಿಗೆ ನಡುಕ:
ಗುತ್ತಿಗೆದಾರನ ಬಳಿ ಐದು ಕೋಟಿಗೂ ಹೆಚ್ಚು ಹಣ ಸಿಕ್ಕಿಬಿದ್ದಿರುವುದರಿಂದ ಇದೀಗ ಪ್ರಭಾವಿ ರಾಜಕಾರಣಿಗಳು ಮತ್ತು ಗುತ್ತಿಗೆದಾರರಿಗೆ ನಡುಕ ಆರಂಭವಾಗಿದೆ. ಮೂಲಗಳ ಪ್ರಕಾರ ಸದ್ಯದಲ್ಲೇ ಹಲವರಿಗೆ ನೋಟಿಸ್ ನೀಡಲು ಐಟಿ ಸಜ್ಜಾಗಿರುವುದರಿಂದ ಯಾರ ಕೊರಳಿಗೆ ಹುರುಳಾಗಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ಹಿಂಗಾರು ಕೂಡ ಕೈಕೊಡಲಿದೆ, ಅಕ್ಟೋಬರ್‌ನಲ್ಲೂ  ಮಳೆ ಕೊರತೆ

ಬೆಂಗಳೂರು, ಅ.14- ನೈರುತ್ಯ ಮುಂಗಾರು ಹಂಗಾಮು ಮುಗಿಯುತ್ತಾ ಬಂದರೂ ರಾಜ್ಯದಲ್ಲಿ ಮಳೆ ಕೊರತೆ ಮಾತ್ರ ನಿವಾರಣೆಯಾಗಿಲ್ಲ. ಆಗಸ್ಟ್, ಸೆಪ್ಟೆಂಬರ್ ನಂತೆಯೇ ಅಕ್ಟೋಬರ್‌ನಲ್ಲೂ  ಮಳೆ ಕೊರತೆ ಮುಂದುವರೆದಿದೆ. ಈಶಾನ್ಯ ಹಿಂಗಾರಿನ ಆರಂಭವೂ ಆಶಾದಾಯಕವಾಗಿಲ್ಲ.

ಜೂನ್‍ನಲ್ಲಿ ಮುಂಗಾರು ದುರ್ಬಲಗೊಂಡಂತೆ ಹಿಂಗಾರಿನ ಆರಂಭವೂ ದುರ್ಬಲವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಮಳೆ ಯ ಅವಧಿ ಮುಗಿಯುತ್ತಿದ್ದು, ಹಿಂಗಾರು ಮಳೆ ಆರಂಭವಾಗುವ ಪರ್ವ ಕಾಲದಲ್ಲಿ ಮಳೆಯಾಗುವುದು ವಾಡಿಕೆ. ಆದರೂ ರಾಜ್ಯದಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ.

ಕಳೆದ ಎರಡು ವಾರಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು , ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗಿದ್ದರೂ ವ್ಯಾಪಕ ಪ್ರಮಾಣದ ವಾಡಿಕೆ ಮಳೆಯಾಗಿಲ್ಲ. ಹೀಗಾಗಿ ರಾಜ್ಯದ ಬಹುತೇಕ ಭಾಗ ಬರದ ಕರಾಳ ಛಾಯೆಗೆ ಸಿಲುಕಿದೆ. ರಾಜ್ಯ ಸರ್ಕಾರವೂ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಣೆ ಮಾಡಿದೆ.

ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್

ಕಾವೇರಿ ಕೊಳ್ಳದ ಜಲಾಶಯಗಳಿಗೆ ಕಳೆದ ಎರಡು ವಾರದಲ್ಲಿ ಸ್ವಲ್ಪ ಪ್ರಮಾಣದ ಒಳ ಹರಿವು ಹೆಚ್ಚಾಗಿದೆ. ಆದರೆ, ನೀರಿನ ಬಿಕ್ಕಟ್ಟು ಪರಿಹಾರವಾಗುವಷ್ಟು ಮಳೆಯಾಗಿಲ್ಲ; ಜಲಾಶಯಗಳಿಗೆ ಒಳ ಹರಿವು ಸಹ ಹೆಚ್ಚಾಗಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಜೂನ್ ಒಂದರಿಂದ ಸೆಪ್ಟೆಂಬರ್ 30ರವರೆಗೆ ರಾಜ್ಯದಲ್ಲಿ 642 ಮಿ.ಮೀ. ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ ಪ್ರಮಾಣ 852 ಮಿ.ಮೀ. ಆಗಿದೆ. ಅಂದರೆ, ವಾಡಿಕೆಗಿಂತ ಶೇ.25ರಷ್ಟು ಮಳೆ ಕೊರತೆಯಾಗಿದೆ. ರಾಜ್ಯದ ಯಾವ ಭಾಗದಲ್ಲೂ ಈ ಅವಧಿಯಲ್ಲಿ ವಾಡಿಕೆ ಪ್ರಮಾಣದ ಮಳೆಯಾಗಿಲ್ಲ.

ಕಳೆದ ಒಂದು ವಾರದಲ್ಲೂ ರಾಜ್ಯದಲ್ಲಿ ವಾಡಿಕೆಗಿಂತ ಶೇ.42 ರಷ್ಟು ಕಡಿಮೆ ಮಳೆಯಾದ ವರದಿಯಾಗಿದೆ. ಅಕ್ಟೋಬರ್ ಒಂದರಿಂದ ನಿನ್ನೆ ವರೆಗಿನ ಮಳೆ ಪ್ರಮಾಣ ಗಮನಿಸಿದರೆ ವಾಡಿಕೆಗಿಂತ ಶೆ.54 ರಷ್ಟು ಕೊರತೆ ಇದೆ. ಅಂದರೆ ಕಳೆದ ಎರಡು ವಾರದಲ್ಲಿ ಮಳೆ ಕೊರತೆ ತೀವ್ರವಾಗಿದೆ. ಈ ಅವಧಿಯಲ್ಲಿ 71 ಮಿ.ಮೀ. ವಾಡಿಕೆ ಮಳೆಯಿದ್ದು, ಕೇವಲ 33 ಮಿ. ಮೀ.ನಷ್ಟು ಮಾತ್ರ ಮಳೆಯಾದ ವರದಿಯಾಗಿದೆ.

ಕಳೆದ ಜೂನ್‍ನಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 923 ಮಿ.ಮೀ.ನಷ್ಟಿದ್ದು, 674 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ. ವಾಡಿಕೆಗಿಂತ ಶೇ. 27ರಷ್ಟು ಕೊರತೆಯಾಗಿದೆ. ಜನವರಿ ಒಂದರಿಂದ ನಿನ್ನೆಯವರೆಗೆ ವಾಡಿಕೆ ಮಳೆ ಪ್ರಮಾಣ 1042 ಮಿ.ಮೀ. ಇದ್ದು, 791 ಮಿ.ಮೀ.ನಷ್ಟು ಮಳೆಯಾಗಿದ್ದು, ವಾಡಿಕೆಗಿಂತ ಶೇ.24 ರಷ್ಟು ಮಳೆಯಾಗಿದೆ.

ಪೂರ್ವ ಮುಂಗಾರಿನ ಅವಧಿಯ ಏಪ್ರಿಲ್ ಒಂದರಿಂದ ನಿನ್ನೆವರೆಗೆ ವಾಡಿಕೆಗಿಂತ ಶೇ.24ರಷ್ಟು ಮಳೆ ಕಡಿಮೆಯಾಗಿದೆ. 1029 ಮಿ.ಮೀ.ನಷ್ಟು ವಾಡಿಕೆ ಮಳೆ ಪ್ರಮಾಣವಿದ್ದು, ಕೇವಲ 781ಮಿ.ಮೀ.ನಷ್ಟು ಮಾತ್ರ ಮಳೆಯಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

ಇದುವರೆಗಿನ ರಾಜ್ಯದ ಮಳೆಯ ವಾಸ್ತವ ಸ್ಥಿತಿ ಈ ರೀತಿ ಇದ್ದು, ಹಿಂಗಾರು ಮಳೆಯೂ ಮುಂಗಾರಿನಂತೆ ಕೈಕೊಟ್ಟರೆ, ಅಲ್ಪಸ್ವಲ್ಪ ಬೆಳೆಯೂ ರೈತರ ಕೈ ಸೇರುವುದು ಕಷ್ಟ. ಹೀಗಾಗಿ ರೈತರು ಹಿಂಗಾರು ಮಳೆಯಾಗುವುದನ್ನೇ ಎದುರು ನೋಡುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಗ್ಯಾರಂಟಿ ಸರ್ಕಾರದ ಕುರಿತು ಹಿಗ್ಗಾಮುಗ್ಗಾ ಟ್ರೊಲ್

ಬೆಂಗಳೂರು,ಅ.14- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆರಂಭದಲ್ಲಿ ಒಂದಷ್ಟು ದಿನ ಸಹನೆಯಿಂದಿದ್ದ ಕೇಸರಿ ಬೆಂಬಲಿತ ಸಾಮಾಜಿಕ ಜಾಲತಾಣದ ಕಾರ್ಯಕರ್ತರು ಇತ್ತೀಚೆಗೆ ರೊಚ್ಚಿಗೆದ್ದಿದ್ದು, ರಾಜ್ಯಸರ್ಕಾರ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರಮಣಕಾರಿಯಾಗಿ ಮುಗಿಬಿದ್ದಿದ್ದಾರೆ. ಈ ಹಿಂದಿಗಿಂತಲೂ ಹೆಚ್ಚು ತೀವ್ರವಾಗಿ ಮತ್ತು ನಿಂದನಾತ್ಮಕ ಭಾಷೆಗಳ ಮೂಲಕವೇ ಪ್ರತಿದಾಳಿ ನಡೆಸುತ್ತಿರುವುದು ಸರ್ಕಾರಕ್ಕೆ ಬಿಸಿ ತುಪ್ಪವಾಗಿದೆ.

ರಾಜ್ಯಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡುವುದಾಗಿ ಘೋಷಿಸಿತ್ತು. ಇದರ ಭಾಗವಾಗಿ ಸತ್ಯ ಶೋಧನಾ ತಂಡವನ್ನೂ ಕೂಡ ರಚಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವ ಮತ್ತು ಶಾಂತಿಗೆ ಭಂಗ ಉಂಟುಮಾಡುವಂತ ಮಾಹಿತಿಗಳನ್ನು ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಉದ್ದೇಶಪೂರಕವಾಗಿ ಬಿಜೆಪಿ ಕಾರ್ಯಕರ್ತರ ವಿರುದ್ಧ ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಕೋಮು ಪ್ರಚೋದಿತ ಪ್ರಕರಣಗಳಲ್ಲಿ ಕಾನೂನು ಕ್ರಮ ಎದುರಿಸುವ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡಗಳನ್ನು ರಚಿಸಿದೆ. ಇದರ ಜೊತೆಯಲ್ಲೇ ರಾಜ್ಯಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸುತ್ತಿದೆ ಎಂಬ ದೊಡ್ಡ ಮಟ್ಟದ ಕೂಗು ಕೂಡ ಕೇಳಿಬಂದಿತ್ತು.

ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!

ಹಂತಹಂತವಾಗಿ ಚೇತರಿಸಿಕೊಂಡಿರುವ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಇತ್ತೀಚೆಗೆ ತೀವ್ರ ಸ್ವರೂಪದ ಪ್ರತಿಕ್ರಿಯೆಗಳಿಗೆ ಮುಂದಾಗಿದ್ದಾರೆ. ರಾಜ್ಯಸರ್ಕಾರ ಪಂಚಖಾತ್ರಿ ಯೋಜನೆಗಳ ಜಾರಿಯ ಯಶಸ್ಸಿನಲ್ಲೇ ತೇಲುತ್ತಿದ್ದು, ಇದರ ಗುಂಗಿನಲ್ಲೇ ಲೋಕಸಭೆ ಚುನಾವಣೆಯನ್ನು ಗೆದ್ದು ಬೀಗುವ ಕನಸು ಕಾಣುತ್ತಿದೆ. ಆದರೆ ತೆರೆಮರೆಯಲ್ಲಿ ಪಂಚಖಾತ್ರಿ ಯೋಜನೆಗಳು ಒಂದು ವರ್ಗಕ್ಕೆ ಮಾತ್ರ ಲಾಭವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ತೆರಿಗೆಯ ದುಡ್ಡನ್ನು ತನ್ನ ಓಟ್‍ಬ್ಯಾಂಕ್ ರಾಜಕಾರಣಕ್ಕೆ ಬಳಸುತ್ತಿದೆ.

ಓಲೈಕೆಯ ರಾಜಕಾಣರಕ್ಕಾಗಿಯೇ ಸೀಮಿತವಾಗಿದೆ ಎಂಬ ವ್ಯಾಪಕ ಪ್ರಚಾರಗಳು ನಡೆದಿವೆ. ಗೃಹಜ್ಯೋತಿ, ಶಕ್ತಿಯಂತಹ ಯೋಜನೆಗಳ ಸೌಲಭ್ಯ ಪಡೆಯುವವರೂ ಕೂಡ ಅವುಗಳ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡುವ ಬದಲಿಗೆ, ರಾಜ್ಯಸರ್ಕಾರ ಒಂದು ವರ್ಗಕ್ಕೆ ಮಾತ್ರ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಸಿಡಿಮಿಡಿಗೊಳ್ಳುವುದು ಕಂಡುಬರುತ್ತಿದೆ.

ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ನಡೆದಿರುವ ನಿರಂತರವಾದ ಪ್ರಚಾರ ಕಾರಣವಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಮೊದಲಿನಿಂದಲೂ ಅತ್ಯಂತ ಬಲಿಷ್ಠವಾಗಿದೆ. ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಒಂದಿಷ್ಟು ಚುರುಕಾಗಿದ್ದುದನ್ನು ಹೊರತುಪಡಿಸಿದರೆ ಅಧಿಕಾರಕ್ಕೆ ಬರುತ್ತಿದ್ದಂತೆ ಮೈಮರೆತು ಮಲಗಿದೆ. ಜೊತೆಗೆ ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂಬ ಉದ್ಧಟತನದ ಮಾತುಗಳ ಮೂಲಕ ಸರ್ವಾಧಿಕಾರಿ ಧೋರಣೆಗಳನ್ನು ಅನುಸರಿಸುತ್ತಿದೆ.

ಬಿಜೆಪಿ ವಿಧಾನಸಭೆ ಚುನಾವಣೆ ಸೋಲಿನಿಂದ ಎಚ್ಚೆತ್ತುಕೊಂಡು ಮತ್ತೊಮ್ಮೆ ಸಾಮಾಜಿಕ ಜಾಲತಾಣವನ್ನೇ ಪ್ರಬಲ ಅಸ್ತ್ರವನ್ನಾಗಿ ಬಳಕೆ ಮಾಡಿಕೊಂಡಿದೆ. ಈ ಹಿಂದೆ ರಾಜ್ಯದಲ್ಲಿ ಆಡಳಿತದಲ್ಲಿದ್ದ ಬಿಜೆಪಿ ನಾಯಕರ ವಿರುದ್ಧ ಕೇಳಿಬಂದ ಭ್ರಷ್ಟಾಚಾರಗಳಿಗೆ ಉತ್ತರ ಹೇಳಲಾಗದೆ ಮುಜುಗರಕ್ಕೊಳಗಾಗಿದ್ದ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ರಾಜ್ಯಸರ್ಕಾರದ ಪಂಚಖಾತ್ರಿ ಯೋಜನೆಗಳು ಹಾಗೂ ಅಭಿವೃದ್ಧಿಯ ಕುರಿತಂತೆ ಮೈಕೊಡವಿ ನಿಂತಿದ್ದಾರೆ.

ಕಾಂಗ್ರೆಸ್‍ನ ಪ್ರತಿಯೊಂದು ನಡೆಯಲ್ಲೂ ಉಗ್ರ ಸ್ವರೂಪದಲ್ಲಿ ಟೀಕಿಸಲಾಗುತ್ತಿದೆ. ಜನಸಾಮಾನ್ಯರ ಮನಮುಟ್ಟುವಂತ ಪ್ರಚಾರ ಮಾಡಲಾಗುತ್ತಿದೆ. ಕೆಲವೊಮ್ಮೆ ಇದಕ್ಕೆ ಪ್ರತಿಯಾಗಿ ಸತ್ಯ ಹೇಳುವವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸುವ ಮೂಲಕ 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಈ ರೀತಿಯ ಪ್ರವೃತ್ತಿಗಳು ಕಂಡುಬಂದಿದ್ದವು. ಈಗ ಮತ್ತೊಮ್ಮೆ 2024 ರ ಚುನಾವಣೆ ವೇಳೆಯಲ್ಲೂ ಇದು ಪುನರಾವರ್ತನೆಯಾಗಿದೆ.

ಅವಾಚ್ಯ ಶಬ್ದಗಳನ್ನು ಬಳಸಿದವರ ವಿರುದ್ಧ ದೂರು ನೀಡಿದರೆ ಅಥವಾ ಕ್ರಮ ಕೈಗೊಂಡರೆ ಅದನ್ನು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಬೊಬ್ಬೆ ಹಾಕಲಾಗುತ್ತಿದೆ. ಈ ಮೊದಲು ಹಿಂದೂ ಭಾವನೆಗಳನ್ನು ಆಧರಿಸಿ ಹೆಚ್ಚು ಆಕ್ರಮಣಕಾರಿಯಾಗಿದ್ದ ಬಿಜೆಪಿ ಬೆಂಬಲಿತ ಕಾರ್ಯಕರ್ತರು ಪ್ರಸ್ತುತ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಸೈನಿಕರ ಬಲಿದಾನಕ್ಕಿಂತ ಹೆಚ್ಚಾಯ್ತಾ ಕ್ರಿಕೆಟ್ : ಬಿಸಿಸಿಐ ವಿರುದ್ಧ ರೊಚ್ಚಿಗೆದ್ದ ದೇಶಪ್ರೇಮಿಗಳು

ಧಾರ್ಮಿಕ ಭಾವನೆಗಳು ಒಂದು ಕಡೆಯಾದರೆ, ಮತ್ತೊಂದೆಡೆ ಸರ್ಕಾರದ ಪ್ರತಿಯೊಂದು ನಡೆಯನ್ನು ವೈಫಲ್ಯವೆಂದೇ ಬಿಂಬಿಸಲಾಗುತ್ತಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಪಕ್ಷ ಬಿಜೆಪಿಯ ಆಕ್ರಮಣದ ಮುಂದೆ ಸಪ್ಪೆಯಾಗಿದ್ದು, ಮೌನಕ್ಕೆ ಶರಣಾಗುವ ಅನಿವಾರ್ಯತೆಗೆ ಸಿಲುಕಿದೆ.

ನಾಳೆ ನಾಡಹಬ್ಬ ದಸರಾಗೆ ಚಾಲನೆ ನೀಡಲಿದ್ದಾರೆ ನಾದಬ್ರಹ್ಮ ಹಂಸಲೇಖ

ಮೈಸೂರು, ಅ. 14- ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ಚಾಲನೆ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.

ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!

ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿ.ಟಿ. ದೇವೇಗೌಡ ಅವರು ವಹಿಸಲಿದ್ದಾರೆ. ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮಗಳು ನೆರವೇರಲಿವೆ. ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬಾಕಿ ಬಿಲ್ ಕುರಿತು ಸಿಎಂ ಜೊತೆ ಗುತ್ತಿಗೆದಾರರ ಸಮಾಲೋಚನೆ

ಬೆಂಗಳೂರು,ಅ.14- ವಿವಿಧ ಕಾಮಗಾರಿಗಳ ಬಾಕಿ ಬಿಲ್ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುತ್ತಿಗೆದಾರರ ಸಂಘದ ಪ್ರತಿನಿಗಳ ಜೊತೆ ಸಮಾಲೋಚನೆ ನಡೆಸಿದರು. ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ ಅವರ ನಿಯೋಗ ಇಂದು ಮುಖ್ಯಮಂತ್ರಿಯವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.

ಬಾಕಿ ಬಿಲ್‍ಗಳ ಸಂಬಂಧಪಟ್ಟಂತೆ ನವೆಂಬರ್‍ವರೆಗೂ ಗಡುವು ನೀಡಿರುವ ಗುತ್ತಿಗೆದಾರರು ರಾಜ್ಯಸರ್ಕಾರ ಸ್ಪಂದಿಸದೇ ಇದ್ದರೆ ಉಗ್ರಸ್ವರೂಪದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಲೋಕೋಪಯೋಗಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಬಿಬಿಎಂಪಿ, ಸಮಾಜ ಕಲ್ಯಾಣ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸಾವಿರಾರು ಕೋಟಿ ರೂ.ಗಳ ಕಾಮಗಾರಿಗಳು ನಡೆದಿವೆ.

ಲಾಹೋಸ್ ಕಾರ್ಖಾನೆಯಲ್ಲಿ ಬಂಧಿಯಾಗಿದ್ದಾರೆ ಒಡಿಶಾದ 35 ಕಾರ್ಮಿಕರು

ಒಂದು ಅಂದಾಜಿನ ಪ್ರಕಾರ ಸುಮಾರು 20 ಸಾವಿರ ಕೋಟಿ ರೂ.ಗಳ ಬಿಲ್‍ಗಳು ಬಾಕಿ ಉಳಿದಿವೆ ಎಂದು ಹೇಳಲಾಗಿದೆ. ಈ ಕುರಿತು ಗುತ್ತಿಗೆದಾರರ ಸಂಘ ಪದೇಪದೇ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದೆ. ಈ ಹಿಂದಿನ ಸರ್ಕಾರದಲ್ಲಿ ಗುತ್ತಿಗೆ ನೀಡುವಾಗ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ, ಸಾಕಷ್ಟು ಅಕ್ರಮಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಅವುಗಳ ತನಿಖೆಗೆ ರಾಜ್ಯಸರ್ಕಾರ ಆದೇಶಿಸಿದೆ.

ಇದರ ಹೊರತಾಗಿಯೂ ಶೇ. 70 ರಷ್ಟು ಬಿಲ್‍ಗಳನ್ನು ಪಾವತಿಸಲಾಗುತ್ತಿದೆ ಎಂಬ ಮಾಹಿತಿ ಇದೆ. ಆದರೆ ರಾಜ್ಯಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಬಾಕಿ ಬಿಡುಗಡೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೀಡಾಗಿದ್ದಾರೆ ಎಂಬುದು ಸಂಘದ ಪ್ರಮುಖ ಆರೋಪಿ.

ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇ.40 ರಷ್ಟು ಕಮಿಷನ್‍ನ ಆರೋಪವನ್ನು ಗುತ್ತಿಗೆದಾರರ ಸಂಘ ಮಾಡಿತ್ತು. ಕಾಂಗ್ರೆಸ್ ಅದನ್ನೇ ಚುನಾವಣೆ ಅಸ್ತ್ರವನ್ನಾಗಿ ಬಳಸಿಕೊಂಡು ಗೆಲುವು ಕಂಡಿತ್ತು. ಅಕಾರಕ್ಕೆ ಬಂದ ಕಾಂಗ್ರೆಸ್ ಕೂಡ ಗುತ್ತಿಗೆದಾರರಿಗೆ ನೆರವಾಗುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆದಾರರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಮುಂದಾಗಿದ್ದಾರೆ.

ಕ್ರಿಸ್ಟಿಯಾನೊ ರೊನಾಲ್ಡೊಗೆ ಕಾದಿದೆ 99 ಛಡಿ ಏಟಿನ ಶಿಕ್ಷೆ..!

ಇಂದು ಕೆಂಪಣ್ಣ ಅವರ ನಿಯೋಗ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದು, ಹಲವಾರು ಸಮಸ್ಯೆಗಳನ್ನು ವಿವರಿಸಿದೆ. ಗುತ್ತಿಗೆದಾರರ ಎಲ್ಲಾ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಮತ್ತು ಹಣಕಾಸು ಲಭ್ಯತೆ ಆಧರಿಸಿ ಬಾಕಿ ಬಿಲ್‍ಗಳನ್ನು ಪಾವತಿ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಪದಾಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ, ಮೂವರು ದುರ್ಮರಣ

ರಾಮನಗರ,ಅ.14- ಬೆಂಗಳೂರು- ಮೈಸೂರು ಎಕ್ಸ್‍ಪ್ರೆಸ್ ವೇನಲ್ಲಿ ಇಂದು ಬೆಳ್ಳಂಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಗಳೂರು ನಗರದ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.

ಪೀಣ್ಯ 2ನೇ ಹಂತದ ನಿವಾಸಿ ಆಟೋ ಚಾಲಕರಾದ ರಾಜೇಶ್(45), ಇವರ ಪತ್ನಿ ಉಮಾ ಸ್ಥಳದಲ್ಲೇ ಮೃತಪಟ್ಟರೆ, ಸಂಬಂಧಿ ಲಕ್ಕಮ್ಮ(65) ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ಕು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಏಳು ಮಂದಿ ಓಮ್ನಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದಾಗ ಬೆಂಗಳೂರು-ಮೈಸೂರು ಎಕ್ಸ್‍ಪ್ರೆಸ್ ವೇ ಬಳಿ ಲಾರಿಯನ್ನು ಓವರ್‍ಟೇಕ್ ಮಾಡಲು ಹೋಗಿ ಇವರಿದ್ದ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುದ್ದಿ ತಿಳಿಯುತ್ತಿದ್ದಂತೆ ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಟ್ಟರು.

ಪಂಚರಾಜ್ಯಗಳ ಚುನಾವಣೆಯಲ್ಲಿ 42 ಕೋಟಿ ರೂ. ಪ್ರತಿಧ್ವನಿ

ಸಂಚಾರ ದಟ್ಟಣೆ: ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್‍ಪ್ರೆಸ್ ವೇ ನಲ್ಲಿ ಕೆಲವು ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಇಂದು ಮಹಾಲಯ ಅಮಾವಾಸ್ಯೆಯಾಗಿದ್ದು, ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೈಸೂರಿನತ್ತ ತೆರಳುತ್ತಿದ್ದು, ವಾಹನಗಳು ಕಿಲೊಮೀಟರ್‍ಗಟ್ಟಲೆ ಸಾಲುಗಟ್ಟಿ ನಿಂತಿದ್ದವು. ನಂತರ ಪೊಲೀಸರು ಅಪಘಾತಕ್ಕೀಡಾದ ಕಾರನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.