Friday, November 7, 2025
Home Blog Page 1893

ರಾಜ್ಯದ 216 ತಾಲ್ಲೂಕುಗಳು ಬರಪೀಡಿತ ; ಸರ್ಕಾರ ಘೋಷಣೆ

ಬೆಂಗಳೂರು,ಅ.13- ಹೆಚ್ಚುವರಿಯಾಗಿ 21 ಬರಪೀಡಿತ ತಾಲ್ಲೂಕುಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿವೆ. 189 ತೀವ್ರ ಬರಪೀಡಿತ ತಾಲ್ಲೂಕು 17 ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಕೇಂದ್ರ ಸರ್ಕಾರದ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಗೆ ನೀಡಿರುವ ಬೆಳೆ ಹಾನಿ ಸಮೀಕ್ಷೆಯ ವರದಿ ಆಧರಿಸಿ 216 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ.

ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ 17 ತಾಲ್ಲೂಕು ತೀವ್ರ ಬರಪೀಡಿತವಾಗಿದ್ದು, 4 ತಾಲ್ಲೂಕು ಸಾಧಾರಣ ಬರಪೀಡಿತವಾಗಿವೆ. ಈ ಹಿಂದೆ ಘೋಷಣೆ ಮಾಡಿದ್ದ 195 ತಾಲ್ಲೂಕುಗಳ ಪೈಕಿ 161 ತಾಲ್ಲೂಕುಗಳು ಬರಪೀಡಿತವಾಗಿದ್ದವು. ಸಾಧಾರಣ ಬರಪೀಡಿತವೆಂದು ಗುರುತಿಸಲಾಗಿದ್ದ 34 ತಾಲ್ಲೂಕುಗಳ ಪೈಕಿ 22 ತಾಲ್ಲೂಕುಗಳ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿರುವ ವರದಿ ಆಧರಿಸಿ 11 ತಾಲ್ಲೂಕುಗಳು ತೀವ್ರ ಬರ ಹಾಗೂ 11 ಸಾಧಾರಣ ಬರ ಎಂದು ಘೋಷಿಸುವ ಅರ್ಹತೆ ಪಡೆದಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್

ಸೆಪ್ಟೆಂಬರ್ ಅಂತ್ಯದವರಿಗೆ ಬರ ಪರಿಸ್ಥಿತಿ ಕಂಡು ಬಂದ 28 ತಾಲ್ಲೂಕುಗಳ ಪೈಕಿ 18 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 4 ಸಾಧಾರಣ ಬರಪೀಡಿತ ಎಂದು ಗುರುತಿಸಲಾಗಿದೆ. ಹೆಚ್ಚುವರಿ 21 ಬರಪೀಡಿತ ತಾಲ್ಲೂಕುಗಳ ಪೈಕಿ ಬೆಳಗಾವಿ, ಖಾನಾಪುರ, ಚಾಮರಾಜನಗರ, ಅಳ್ನಾವರ, ಅಣ್ಣೀಗೇರಿ, ಕಲಘಟಗಿ, ಮುಂಡರಗಿ, ಆಲೂರು, ಅರಸೀಕೆರೆ, ಹಾಸನ, ಬ್ಯಾಡಗಿ, ಹಾನಗಲ್, ಶಿಗ್ಗಾವಿ, ಪೊನ್ನಂಪೇಟೆ, ಕೆಆರ್ ನಗರ, ಹೆಬ್ರಿ ಹಾಗೂ ದಾಂಡೇಲಿ ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.

ಯಳಂದೂರು, ಮೂಡಿಗೆರೆ, ತರೀಕೆರೆ, ಸಿದ್ದಾಪುರ ಸಾಧಾರಣ ಬರಪೀಡಿತ ತಾಲ್ಲೂಕುಗಳಾಗಿವೆ. ಸೆಪ್ಟೆಂಬರ್‍ನಲ್ಲಿ 34 ಸಾಧಾರಣ ಬರಪೀಡಿತವೆಂದು ಘೋಷಿಸಲಾಗಿತ್ತು. ಆ ತಾಲ್ಲೂಕುಗಳಲ್ಲಿ ಮರುಬೆಳೆ ಸಮೀಕ್ಷೆ ಅನ್ವಯ 11 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಅವುಗಳೆಂದರೆ ಬೆಂಗಳೂರು ಉತ್ತರ, ಗುಂಡ್ಲುಪೇಟೆ, ಹನೂರು, ಬೇಲೂರು, ಚನ್ನರಾಯಪಟ್ಟಣ, ಹೊಳೇನರಸೀಪುರ, ಸೋಮವಾರಪೇಟೆ, ಮಾಲೂರು, ದೇವದುರ್ಗ, ಮಸ್ಕಿ, ತುಮಕೂರು.

ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದರೆ ಕೊಳ್ಳೇಗಾಲ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮಂಗಳೂರು, ಮೂಡಬಿದ್ರೆ, ಸಕಲೇಶಪುರ, ಚನ್ನಪಟ್ಟಣ, ಮಾಗಡಿ, ಬ್ರಹ್ಮಾವರ ಹಾಗೂ ಕಾರವಾರ ತಾಲ್ಲೂಕುಗಳು. ಮುಂಗಾರು ಹಂಗಾಮಿನಲ್ಲಿ ಬರಪೀಡಿತವಾಗಿರುವ 216 ತಾಲ್ಲೂಕುಗಳಲ್ಲಿ ಬರ ನಿರ್ವಹಣೆ ಕಾರ್ಯಕ್ರಮವನ್ನು ಜಿಲ್ಲಾಕಾರಿಗಳು ಮುಂದಿನ 6 ತಿಂಗಳವರೆಗೆ ಕೈಗೊಳ್ಳಬೇಕಾಗಿದೆ.

ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು

ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಬರ ಪರಿಹಾರ ಮಾರ್ಗಸೂಚಿ ಅನ್ವಯ ಬರಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ.

ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲ : ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು, ಅ.13- ಬಿಜೆಪಿಯವರು ಆಡಳಿತದಲ್ಲಿದ್ದಾಗ ವಿದ್ಯುತ್ ಉತ್ಪಾದನೆಗೆ ಯಾವುದೇ ಕ್ರಮ ಕೈಗೊಳ್ಳದೆ ಇದ್ದರಿಂದ ಈಗ ರಾಜ್ಯದ ಜನ ಹಾಗೂ ರೈತರು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಆರೋಪಿಸಿದ್ದಾರೆ. ಬಿಜೆಪಿಯ ಟೀಕೆಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯವನ್ನು ಕತ್ತಲೆಗೆ ತಳ್ಳಿರುವುದು ನಾವಲ್ಲಲ್ಲ, ಬಿಜೆಪಿಯವರು. ಹಿಂದೆ ನಾಲ್ಕು ವರ್ಷಗಳ ಕಾಲ ವಿದ್ಯುತ್ ಉತ್ಪಾದನೆಗೆ ಬಿಜೆಪಿಯವರು ಯಾವುದೇ ಕೆಲಸ ಮಾಡಲಿಲ್ಲ. ಅವರ ವೈಪಲ್ಯದಿಂದ ರಾಜ್ಯದ ಜನ ಅನುಭವಿಸುವಂತಾಗಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಮೊದಲ ಹಂತದಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಹಲವು ಯೋಜನೆಗಳೊಂದಿಗೆ ಕೇಂದ್ರ ವಿದ್ಯುತ್ ಗ್ರಿಡ್‍ಗೆ ಸಾಕಷ್ಟು ವಿದ್ಯುತ್ ಸೇರ್ಪಡೆ ಮಾಡಲಾಗಿತ್ತು. ಬಿಜೆಪಿಯವರು ನಾಲ್ಕು ವರ್ಷ ಏನನ್ನು ಮಾಡಲಿಲ್ಲ. ಕೂಡಗಿಯಲ್ಲಿನ 250 ಮೆಘಾವ್ಯಾಟ್ ವಿದ್ಯುತ್ ಮಂಜೂರಾತಿಯನ್ನು ಬಳಸಿಕೊಳ್ಳದೆ ದೆಹಲಿಗೆ ಬಿಟ್ಟುಕೊಟ್ಟರು ಎಂದಿದ್ದಾರೆ.

ಕೋವಿಡ್‍ನಂತರ ಹಾಗೂ ಬರಗಾಲದಿಂದಾಗಿ ವಿದ್ಯುತ್ ಬಳಕೆ ದುಪಟ್ಟಾಗಿದೆ. ಕಳೆದ ವರ್ಷ ಮಾರ್ಚ್, ಜೂನ್‍ನಲ್ಲಿ 16 ಸಾವಿರ ಮೇಗಾವ್ಯಾಟ್ ಬೇಡಿಕೆ ಇತ್ತು, ಈಗ ಸೆಪ್ಟಂಬರ್​ನಲ್ಲೇ ಅಷ್ಟು ಬೇಡಿಕೆ ಬಂದಿದೆ. ಅದಕ್ಕಾಗಿ ತೊಂದರೆಯಾಗಿದೆ. ರಾಜ್ಯದಲ್ಲಿ 1500 ಮೆಗಾವ್ಯಾಟ್ ಕೊರತೆ ಇದೆ. ಅಷ್ಟನ್ನು ಖರೀದಿ ಮಾಡುತ್ತಿದ್ದೇವೆ. ಬಿಜೆಪಿಯವರು ಹೇಳಿದಂತೆ ವಿದ್ಯುತ್ ಕಡಿತ ಮಾಡುತ್ತಿಲ್ಲ. ಎಲ್ಲವನ್ನೂ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸರಿ ಹೋಗಲಿದೆ ಎಂದರು.

ನಾನು ಕಾಣೆಯಾಗಿದ್ದೇನೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ವೇಳೆಯಲ್ಲೇ ನಾನು ಕೇಂದ್ರ ಇಂಧನ ಸಚಿವರನ್ನು ಭೇಟಿಯಾಗಿರುವ ಪೋಟೋವನ್ನು ಹಂಚಿಕೊಂಡಿದ್ದೇನೆ. ರಾಜ್ಯಕ್ಕೆ ಅಗತ್ಯ ಇರುವ ಹೆಚ್ಚಿನ ವಿದ್ಯುತ್ ಪಡೆದುಕೊಳ್ಳಲು ಕೇಂದ್ರ ಸಚಿವರು, ಕೇಂದ್ರ ಇಂಧನ ಇಲಾಖೆ ಕಾರ್ಯದರ್ಶಿ ಸೇರಿದಂತೆ ಹಲವು ಅಧಿಕಾರಿಗಳನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುತ್ತಿದ್ದೆ. ನಾನು ದೆಹಲಿಯಲ್ಲಿ ರಾಜ್ಯದ ಪರವಾಗಿ ಕೆಲಸ ಮಾಡಿದ್ದೆ ಎಂದು ಹೇಳಿದರು.

ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್..!

ರಾಜ್ಯವನ್ನು ಕತ್ತಲೆಗೆ ತಳ್ಳಿದ್ದು ಬಿಜೆಪಿಯವರು, ನಾಲ್ಕು ತಿಂಗಳಿನಿಂದ ಬೆಳಕು ಬಂದಿದೆ. ರಾಜ್ಯವನ್ನು ಕತ್ತಲಿನಲ್ಲಿ ಇಟ್ಟ ಕಾರಣಕ್ಕಾಗಿ ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ, ಅಧಿಕಾರ ಕಳೆದುಕೊಂಡು ಹತಾಶರಾಗಿರುವ ಬಿಜೆಪಿಯವರು ಏನಾದರೂ ಒಂದು ಮಾಡಲೇಬೇಕು ಎಂದು ಹೊರಟ್ಟಿದ್ದಾರೆ. ಅವರ ಅಪಪ್ರಚಾರದಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು.

ವಿದ್ಯುತ್ ಉತ್ಪಾದನೆಗೆ ನಮ್ಮ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ಉಪಸ್ಥಾವರಗಳ ಪಕ್ಕದಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಂಡಿದ್ದೇವೆ. ಪ್ರಧಾನ ಮಂತ್ರಿ ರೈತರ ಇಂಧನ ಭದ್ರತೆ ಮತ್ತು ಉನ್ನತಿ ಅಭಿಯಾನ (ಕುಸುಮ-ಎ) ಅಡಿಯಲ್ಲಿ ಮೂರುವರೆ ಲಕ್ಷ ಪಂಪ್‍ಸೆಟ್‍ಗಳಿಗೆ ಸೌರ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಮಂಜೂರಾಗಿತ್ತು, ಹಿಂದಿನ ಸರ್ಕಾರ ಅದರಲ್ಲಿ ಒಂದನ್ನು ಬಳಸಿಕೊಳ್ಳಲಿಲ್ಲ. ಕುಸುಮ ಬಿ ಮತ್ತು ಸಿ ನಲ್ಲಿ 35 ಸಾವಿರ ಮಾಡಬೇಕಿತ್ತು. ಅದನ್ನು ಬಿಜೆಪಿಯವರು ಅಧಿಕಾರಲ್ಲಿದ್ದಾಗ ಮಾಡಲಿಲ್ಲ. ಈಗ ರೈತರಿಗೆ ತೊಂದರೆಯಾಗಿದೆ ಎಂದರು.

ಕೋಟಿ ಕೋಟಿ ಬೆಲೆ ಬಾಳುವ ಚಿನ್ನ, ನಗದು ವಶ

ರಾಜ್ಯದಲ್ಲಿ ಎಂಟು ಸಾವಿರ ಮೇಗಾವ್ಯಾಟ್ ಇದ್ದಂತಹ ಬೇಡಿಕೆ, ಈಗ ಏಕಾಏಕಿ 16 ಸಾವಿರ ಮೇಗಾವ್ಯಾಟ್‍ಗೆ ಹೆಚ್ಚಾಗಿದೆ. ಅದನ್ನು ನಿಭಾಯಿಸುವುದು ಯಾರಿಗಾದರೂ ಕಷ್ಟ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡುತ್ತಿದ್ದಾರೆ. ಅವರಿಗೆ ಮಾಹಿತಿ ಇಲ್ಲದಿದ್ದರೆ ಅವರ ಅಣ್ಣ ಹೆಚ್.ಡಿ.ರೇವಣ್ಣನನ್ನು ಕೇಳಿ ತಿಳಿದುಕೊಳ್ಳಲಿ. ಇಲ್ಲವಾದರೆ ನಾನೇ ಸರಿಯಾದ ಮಾಹಿತಿ ಕೊಡುತ್ತೇನೆ ಎಂದರು.

ರಾಜ್ಯದಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಸೆಕ್ಟನ್ 11 ಜಾರಿಗೆ ತರಲಾಗುತ್ತಿದೆ. ಬೇಡಿಕೆ ಈಡೇರಿಸಲು ಉತ್ತರ ಪ್ರದೇಶ, ಪಂಜಾಬ್‍ನಿಂದ ಹೆಚ್ಚು ವಿದ್ಯುತ್ ಖರೀದಿಸುತ್ತಿದ್ದೇವೆ ಎಂದು ವಿವರಿಸಿದರು.

ತೆರಿಗೆ ಪಾವತಿಸದೆ ಸಂಚಾರಿಸುತಿದ್ದ ಬಸ್‍ಗಳ ಜಪ್ತಿ

ಬೆಂಗಳೂರು, ಅ.13- ತೆರಿಗೆ ಪಾವತಿಸದೆ ಸಂಚಾರ ಮಾಡುವ ಖಾಸಗಿ ಬಸ್‍ಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ಸಾರಿಗೆ ಇಲಾಖೆ ಅಕಾರಿಗಳು ಹಲವು ಬಸ್‍ಗಳನ್ನು ಜಪ್ತಿ ಮಾಡಿ ಭಾರೀ ಪ್ರಮಾಣದ ದಂಡ ವಿಧಿಸಿದ್ದಾರೆ.

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾದ ಮಲ್ಲಿಕಾರ್ಜುನ, ಜಂಟಿ ಆಯುಕ್ತರಾದ ಶೋಭಾ ಅವರ ಮಾರ್ಗದರ್ಶನದಲ್ಲಿ ಕಸ್ತೂರಿನಗರದ ಸಾರಿಗೆ ಪೂರ್ವ ಕಚೇರಿಯ ಆರ್‍ಟಿಒ ಶ್ರೀನಿವಾಸ ಪ್ರಸಾದ್ ಅವರು ಕಾರ್ಯಾಚರಣೆ ನಡೆಸಿದ್ದು, ಅಖಿಲ ಭಾರತ ರಹದಾರಿ ಹೊಂದಿದ್ದ ಖಾಸಗಿ ಐಶರಾಮಿ ಬಸ್‍ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್.

30 ಸೀಟುಗಳ ಈ ಸ್ಲಿಪರ್ ಕೋಚ್‍ಗೆ ಜುಲೈ 1ನಿಂದ ಎರಡು ತ್ರೈಮಾಸಿಕದಲ್ಲಿ ತೆರಿಗೆ ಪಾವತಿಸಿಲ್ಲ ಎಂದು ಹೇಳಲಾಗಿದೆ. ದಂಡ ಮತ್ತು ತೆರಿಗೆ ಹಿಂಬಾಕಿ ಸೇರಿ 2,19,780 ರೂಪಾಯಿ ಪಾವತಿಸುವಂತೆ ಸಾರಿಗೆ ಇಲಾಖೆ ಬಸ್ ಮಾಲೀಕರಿಗೆ ನೋಟಿಸ್ ನೀಡಿದೆ. ಇದಲ್ಲದೆ ರಹದಾರಿ ನಿಯಮಾವಳಿಗಳನ್ನು ಉಲ್ಲಂಘಿಸಿದ್ದ ಎಂಟು ಬಸ್ ಗಳನ್ನು ಸಾರಿಗೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಇಸ್ರೇಲ್‍ನಿಂದ ತಾಯ್ನಾಡಿಗೆ ಬಂದಿಳಿದ ಭಾರತೀಯರು

ನವದೆಹಲಿ,ಅ.13- ಇಸ್ರೇಲ್-ಹಮಾಸ್ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್‍ನಿಂದ 212 ಭಾರತೀಯರಿದ್ದ ಮೊದಲ ವಿಮಾನ ಇಂದು ಮುಂಜಾನೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಈ ವಿಮಾನವು ನಿನ್ನೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಿತ್ತು. ನಸುಕಿನಲ್ಲೇ ನವದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದರು.

ನವದೆಹಲಿಗೆ ಬಂದಿಳಿದ ನಂತರ ಮಾತನಾಡಿದ ಇಸ್ರೇಲ್ ವಿದ್ಯಾರ್ಥಿ ಶುಭಂ ಕುಮಾರ್, ನಾವು ಕೇಂದ್ರ ಸರ್ಕಾರ ಕೃತಜ್ಞರಾಗಿರುತ್ತೇವೆ. ಹೆಚ್ಚಿನ ವಿದ್ಯಾರ್ಥಿಗಳು ಸ್ವಲ್ಪ ಭಯಭೀತರಾಗಿದ್ದರು. ಭಾರತದ ರಾಯಭಾರ ಕಚೇರಿಯ ಮೂಲಕ ಭಾರತೀಯ ನಾಗರಿಕರಿಗೆ ಸಂಬಂಧಿಸಿದ ಕೆಲವು ಅಧಿಸೂಚನೆಗಳು ಮತ್ತು ಲಿಂಕ್‍ಗಳನ್ನು ನೋಡಿದ ನಂತರ ನಮ್ಮ ಆತ್ಮಸ್ಥೈರ್ಯ ಹೆಚ್ಚಿತು ಎಂದು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಸುಮಾರು 212 ಜನರನ್ನು ವಾಪಸ್ ಕರೆತರಲಾಗಿದೆ. ಇಸ್ರೇಲ್‍ನಿಂದ ಭಾರತೀಯ ಪ್ರಜೆಗಳನ್ನು ಕರೆತರಲು ಅಗತ್ಯವಿದ್ದರೆ ವಾಯುಪಡೆಯನ್ನೂ ಬಳಸಿಕೊಳ್ಳಲಾಗುವುದು. ಸದ್ಯಕ್ಕೆ ಚಾರ್ಟರ್ ಫೈಟ್‍ಗಳನ್ನು ಬಳಸಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ನಿ ತಿಳಿಸಿದ್ದಾರೆ.

ಚರ್ಮರೋಗ ತಜ್ಞರಿಂದ ನಾಯ್ಡು ಆರೋಗ್ಯ ತಪಾಸಣೆ

ಆಪರೇಷನ್ ಅಜಯ್ ಚಾಲನೆಯಲ್ಲಿದೆ. ವಿಮಾನದಲ್ಲಿದ್ದ 212 ನಾಗರಿಕರು ನವದೆಹಲಿಯ ಮಾರ್ಗದಲ್ಲಿದ್ದಾರೆ ಎಂದು ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಿಳಿಸಿದ್ದರು. ಅದರಂತೆ 212 ಭಾರತೀಯ ಪ್ರಜೆಗಳನ್ನು ಹೊತ್ತ ಆಪರೇಷನ್ ಅಜಯ್‍ನ ಮೊದಲ ವಿಮಾನವು ಟೆಲ್ ಅವೀವ್‍ನಿಂದ ದೆಹಲಿಗೆ ಹೊರಟಿದೆ. ಇಸ್ರೇಲ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿಮಾನದಲ್ಲಿರುವ ಪ್ರತಿಯೊಬ್ಬರಿಗೂ ಸುರಕ್ಷಿತ ಪ್ರಯಾಣ ಬಯಸುತ್ತದೆ ಎಂದು ಭಾರತೀಯ ಮಿಷನ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿತ್ತು.

ಭಾರತೀಯ ನಾಗರಿಕರನ್ನು ಕರೆದೊಯ್ಯಲು ಮೊದಲ ಚಾರ್ಟರ್ ವಿಮಾನ ಇಂದು ರಾತ್ರಿ ಟೆಲ್ ಅವಿವ್ ತಲುಪಲಿದೆ ಮತ್ತು ನಾಳೆ ಬೆಳಿಗ್ಗೆ ಭಾರತಕ್ಕೆ ಮರಳುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಸುಮಾರು 18,000 ಭಾರತೀಯರು ಪ್ರಸ್ತುತ ಇಸ್ರೇಲ್‍ನಲ್ಲಿ ನೆಲೆಸಿದ್ದಾರೆ ಮತ್ತು ಸುಮಾರು ಒಂದು ಡಜನ್ ನಷ್ಟು ಜನರು ವೆಸ್ಟ್ ಬ್ಯಾಂಕ್‍ನಲ್ಲಿದ್ದಾರೆ ಮತ್ತು ಮೂರರಿಂದ ನಾಲ್ಕು ಜನರು ಗಾಜಾದಲ್ಲಿದ್ದಾರೆ ಎಂದು ತಿಳಿಸಿದ್ದರು.

ವಾರಾಂತ್ಯದಲ್ಲಿ ಹಮಾಸ್ ಬಂಡುಕೋರರು ಇಸ್ರೇಲಿ ಪಟ್ಟಣಗಳ ಮೇಲೆ ನಡೆಸಿದ ಸರಣಿ ದಾಳಿಯಿಂದ ಅಲ್ಲಿ ಉದ್ವಿಗ್ನತೆ ಉಂಟಾಗಿದ್ದರಿಂದ ಸ್ವದೇಶಕ್ಕೆ ಹಿಂತಿರುಗಲು ಬಯಸುವ ಭಾರತೀಯರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಆಪರೇಷನ್ ಅಜಯ್ ಪ್ರಾರಂಭಿಸಿದೆ.

ಗಾಜಾ ಸರ್ವನಾಶಕ್ಕೆ ಸಿದ್ಧವಾದ ಇಸ್ರೇಲ್, ವಿನಾಶಕಾರಿ ದಾಳಿ ನಡೆಸದಂತೆ ವಿಶ್ವಸಂಸ್ಥೆ ಕರೆ

ಮಾಹಿತಿ ಪ್ರಕಾರ ಸುಮಾರು 18000 ಭಾರತೀಯರು ಇಸ್ರೇಲ್‍ನಲ್ಲಿದ್ದಾರೆ. ಇದರಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈವರೆಗೆ ಯುದ್ಧದಿಂದ ಯಾವುದೇ ಭಾರತೀಯರು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಗಾಯಗೊಂಡಿರುವ ಒಬ್ಬ ವ್ಯಕ್ತಿಯೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ, ಪ್ರಸ್ತುತ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ.

ಮಾಧ್ಯಮ ವರದಿಗಳ ಪ್ರಕಾರ, ಇಸ್ರೇಲ್‍ನಲ್ಲಿ ಇದುವರೆಗೆ 222 ಸೈನಿಕರು ಸೇರಿದಂತೆ 1300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲಿ ಸೇನೆ ಹೇಳಿದೆ. 1973 ರಲ್ಲಿ ಈಜಿಪ್ಟ್ ಮತ್ತು ಸಿರಿಯಾದೊಂದಿಗೆ ವಾರಗಳ ಕಾಲ ನಡೆದ ಯುದ್ಧದ ನಂತರ ಇಷ್ಟು ದೊಡ್ಡ ಸಂಖ್ಯೆಯ ಸಾವುನೋವುಗಳು ಸಂಭವಿಸಿರಲಿಲ್ಲ. ಇನ್ನು ಅಲ್ಲಿನ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, ಹಮಾಸ್ ಆಳ್ವಿಕೆಯ ಗಾಜಾ ಪಟ್ಟಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 1,417 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ : ಯತ್ನಾಳ್

ಬೆಂಗಳೂರು,ಅ.13- ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಕಲೆಕ್ಷನ್ ಜಾತ್ರೆ ನಡೆಸುತ್ತಿದೆ. ಮಹದೇವಪ್ಪನ ದುಡ್ಡು , ಕಾಕ ಪಾಟೀಲನ ದುಡ್ಡು , ದಯಾನಂದನ ದುಡ್ಡು ಎಂದು ಯತ್ನಾಳ್ ಕುಹುಕವಾಡಿದ್ದಾರೆ.

ಸಿಕ್ಕಿಬಿದ್ದಿರುವ 42 ಕೋಟಿ ನಗದಿನಲ್ಲಿ 4ನೇ 1ರಷ್ಟು ರಾಜಸ್ಥಾನಕ್ಕೆ, 4ನೇ 1ರಷ್ಟು ಮಧ್ಯಪ್ರದೇಶಕ್ಕೆ, 4ನೇ 1ರಷ್ಟು ತೆಲಂಗಾಣಕ್ಕೆ ಹಾಗೂ 4ನೇ 1ರಷ್ಟು ಛತ್ತೀಸ್‍ಘಡಕ್ಕೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ನಾಯಕಿ ಮಾಜಿ ಕಾಪೆರ್ರೇಟರ್ ಅಶ್ವಥಮ್ಮ ಅವರ ಪತಿ ಅಂಬಿಕಾಪತಿಯ ಮಗಳ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ 42 ಕೋಟಿ ಹಣ! ಈತ ಯಾರ ಚಿರಂಜೀವಿಯವರ ಪರವಾಗಿ ಹಣ ಸಂಗ್ರಹ ಮಾಡುತ್ತಿದ್ದ ಎಂದು ಗುತ್ತಿಗೆದಾರರು ಕೇಳಿದರೆ ನಿಜ ಹೊರಬರಬಹುದು ಎಂದು ಹೇಳಿದ್ದಾರೆ.

ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನೇ ಸರ್ಕಾರದ ಪರವಾಗಿ ವಸೂಲಿಗಿಳಿದರೆ ಗುತ್ತಿಗೆದಾರರನ್ನು ಕಾಪಾಡುವವರು ಯಾರು? ಈ ಹಣ ಯಾರದ್ದು ಎಂಬುದರ ಬಗ್ಗೆ ತನಿಖೆಯಾಗಲಿ ಎಂದು ಯತ್ನಾಳ್ ಒತ್ತಾಯಿಸಿದ್ದಾರೆ.

ಕುಡುಕ ತಂದೆಯ ಕತ್ತು ಸೀಳಿ ಕೊಂದ ಮಗ

ನವದೆಹಲಿ, ಅ 13 (ಪಿಟಿಐ)- ಕುಡಿತದ ಚಟಕ್ಕೆ ದಾಸನಾಗಿದ್ದ ತಂದೆಯನ್ನೆ ಹೆತ್ತ ಮಗ ಕತ್ತು ಸೀಳಿ ಕೊಂದಿರುವ ಘಟನೆ ಪಶ್ಚಿಮ ದೆಹಲಿಯ ಪಂಜಾಬಿ ಬಾಗ್‍ನಲ್ಲಿ ನಡೆದಿದೆ. ತಂದೆಯನ್ನೇ ಕೊಂದ ಹಂತಕ ಮಗನನ್ನು ರಿಂಕು ಯಾದವ್ ಎಂದು ಗುರುತಿಸಲಾಗಿದೆ.

ತಂದೆ ಸತೀಶ್ ಯಾದವ್ ಅವರ ಮದ್ಯದ ಚಟದಿಂದ ಬೇಸತ್ತ ರಿಂಕು ಅವರ ಕತ್ತು ಸೀಳಿ ಕೊಂದಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ತಂದೆಯ ಶವವನ್ನು ಪಶ್ಚಿಮ ವಿಹಾರ್‍ನಲ್ಲಿರುವ ಸ್ಮಶಾನಕ್ಕೆ ತಂದ ನಂತರ ಆತ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಗಾಜಾ ಸರ್ವನಾಶಕ್ಕೆ ಸಿದ್ಧವಾದ ಇಸ್ರೇಲ್, ವಿನಾಶಕಾರಿ ದಾಳಿ ನಡೆಸದಂತೆ ವಿಶ್ವಸಂಸ್ಥೆ ಕರೆ

ಅಂತ್ಯಕ್ರಿಯೆಗೆ ಬಂದಿದ್ದ ಯಾರೋ ಶವದ ಕುತ್ತಿಗೆ ಮತ್ತು ಮುಂದೋಳಿನ ಮೇಲೆ ಕತ್ತರಿಸಿದ ಗುರುತು ಗಮನಿಸಿದರು. ಇದನ್ನು ಪಾದ್ರಿಯ ಗಮನಕ್ಕೆ ತರಲಾಯಿತು, ನಂತರ ಅವರು ಯಾದವ್ ಅವರನ್ನು ಕೇಳಿದರು ಆದರೆ ತೃಪ್ತಿಕರ ಉತ್ತರ ನೀಡದಿದ್ದಾಗ ಅನುಮಾನಗೊಂಡು ಪೊಲೀಸರಿಗೆ ದೂರು ನೀಡಲಾಯಿತ್ತು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ರಿಂಕುವನ್ನು ವಿಚಾರಣೆಗೊಳಪಡಿಸಿದಾಗ ಆತ ಕುಡಿತದ ಚಟಕ್ಕೆ ದಾಸನಾಗಿ ಕುಟುಂಬದವರಿಗೆ ಕಿರುಕುಳ ನೀಡುತ್ತಿದ್ದ ತಂದೆಯನ್ನು ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ವಿವರಣೆ ನೀಡಿದ್ದಾರೆ.

ಬೆಂಗಳೂರಲ್ಲಿ ಐಟಿ ದಾಳಿ : ಮಂಚದ ಕೆಳಗಿದ್ದ ಕಾಂಚಾಣ ಕಂಡು ಅಧಿಕಾರಿಗಳು ಶಾಕ್..!

ಬೆಂಗಳೂರು,ಅ.13- ಖಚಿತ ಮಾಹಿತಿ ಮೇರೆಗೆ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಮಾಜಿ ಕಾಪೊರೇಟರ್ ಪತಿ ಮನೆ ಮೇಲೆ ಮಿಂಚಿನ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು 42 ಕೋಟಿ ನಗದು ಪತ್ತೆಹಚ್ಚಿದ್ದಾರೆ. ಇತ್ತೀಚಿನ ವರ್ಷಗಳಲ್ಲೇ ಇದು ಐಟಿಯ ಅತಿದೊಡ್ಡ ದಾಳಿ ಇದಾಗಿದ್ದು , ದಾಳಿಯ ವೇಳೆ ಸಿಕ್ಕಿರುವ ಕಂತೆ ಕಂತೆ ನೋಟುಗಳನ್ನು ಕಂಡು ಸ್ವತಃ ಅಧಿಕಾರಿಗಳೇ ದಂಗಾಗಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಬಿಬಿಎಂಪಿ ಮಾಜಿ ಸದಸ್ಯೆ ಅಶ್ವಥಮ್ಮ ಅವರ ಮನೆ ಮೇಲೆ ನಿನ್ನೆ ರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದೇ ಸಂದರ್ಭದಲ್ಲಿ ಆರ್‍ಟಿನಗರದ ಆತ್ಮಾನಂದ ಫ್ಲಾಟ್ ಮೇಲೆ ಅಶ್ವಥಮ್ಮ ಅವರ ಬಾಮೈದ ಪ್ರದೀಪ್‍ಗೆ ಸೇರಿದ ಫ್ಲಾಟ್‍ನಲ್ಲಿ ದಾಳಿ ನಡೆಸಿದ ವೇಳೆ ಮಂಚದ ಕೆಳಗೆ 23 ಬಾಕ್ಸ್‍ನಲ್ಲಿ ಸಂಗ್ರಹಿಸಿಟ್ಟಿದ್ದ 500 ರೂ. ಮುಖಬೆಲೆಯ ಒಟ್ಟು 42 ಕೋಟಿ ನಗದನ್ನು ಪತ್ತೆ ಮಾಡಿದ್ದಾರೆ. ಅಂಬಿಕಾಪತಿಯ ಪುತ್ರಿಯ ಆರ್‍ಟಿನಗರದಲ್ಲಿರುವ ವೈಟ್‍ಹೌಸ್ ಫ್ಲಾಟ್ ಮೇಲೂ ಐಟಿ ದಾಳಿ ನಡೆಸಿದೆ. ಮತ್ತೊಂದು ಪ್ರಕರಣದಲ್ಲಿ ಗುತ್ತಿಗೆದಾರ ಹೇಮಂತ್ ಅವರ ಬನಶಂಕರಿ ನಿವಾಸದ ಮೇಲೂ ದಾಳಿ ಮಾಡಲಾಗಿದೆ.

ಸದ್ಯಕ್ಕೆ ಪತ್ತೆಯಾಗಿರುವ ಕೋಟ್ಯಂತರ ಹಣ ಯಾರಿಗೆ ಸೇರಿದ್ದು, ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಫ್ಲಾಟ್ ಯಾರ ಒಡೆತನಕ್ಕೆ ಸೇರಿದೆ, ಹಣದ ಮೂಲ ಯಾವುದು, ಎಲ್ಲಿಗೆ ಸಂಗ್ರಹಿಸಲಾಗುತಿತ್ತು ಎಂಬುದರ ಬಗ್ಗೆ ಯಾವ ಗುಟ್ಟನ್ನು ಐಟಿ ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಇಷ್ಟು ದೊಡ್ಡ ಮೊತ್ತದ ಹಣವನ್ನು ಕಾರಿನ ಮೂಲಕ ಚೆನ್ನೈನಿಂದ ತೆಲಂಗಾಣಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗುತ್ತಿತ್ತು.

ಇಸ್ರೇಲ್-ಹಮಾಸ್ ಯುದ್ಧ, ದೆಹಲಿಯಲ್ಲಿ ಬಿಗಿ ಬಂದೋಬಸ್ತ್

ಐಟಿ ಅಧಿಕಾರಿಗಳು ದಾಳಿ ನಡೆಸುವ ಒಂದು ಗಂಟೆಗೂ ಮುನ್ನ ಇದೇ ಫ್ಲಾಟ್‍ನಿಂದ 15 ಕೋಟಿ ಹಣವನ್ನು ಸಾಗಿಸಲಾಗಿತ್ತು. ಇನ್ನು ಒಂದೇ ಒಂದು ಗಂಟೆ ತಡವಾಗಿದ್ದರೂ ಈಗ ಪತ್ತೆಯಾಗಿರುವ ನಗದು ಕೂಡ ಅಲ್ಲಿಂದ ಬೇರೊಂದು ಸ್ಥಳಕ್ಕೆ ತೆಗೆದುಕೊಂಡು ಹೋಗಲು ಸಿದ್ದತೆ ನಡೆಸಲಾಗಿತ್ತು. ಇದೀಗ ಐಟಿ ಅಧಿಕಾರಿಗಳು ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹಾಗೂ ಮಾಜಿ ಬಿಬಿಎಂಪಿ ಸದಸ್ಯೆ ಅಶ್ವಥಮ್ಮ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಬ್ಯಾಂಕ್ ಖಾತೆಗಳು, ಚಿರ-ಚರಾಸ್ತಿಗಳು ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ದಾಳಿ ನಡೆಸಿದ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿತ್ತು. ಒಂದೇ ಒಂದು ಸಣ್ಣ ಸುಳಿವನ್ನೂ ಸಹ ನೀಡದೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.ದಾ ಳಿಯ ಸಂದರ್ಭದಲ್ಲಿ ಅಧಿಕಾರಿಗಳಿಗೆ ಬಳಕೆಯಾಗದ 2000 ಮುಖ ಬೆಲೆಯ ನೋಟುಗಳು ಸಹ ಪತ್ತೆಯಾಗಿದೆ.

ಚರ್ಮರೋಗ ತಜ್ಞರಿಂದ ನಾಯ್ಡು ಆರೋಗ್ಯ ತಪಾಸಣೆ

ಪೂರ್ವ ಗೋದಾವರಿ,ಅ.13- ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಚರ್ಮ ಅಲರ್ಜಿಯಾಗಿರುವ ಬಗ್ಗೆ ಜೈಲು ಅಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚರ್ಮರೋಗ ತಜ್ಞರ ತಂಡ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಅವರನ್ನು ತಪಾಸಣೆ ನಡೆಸಿತು.

ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ನೋಡಿಕೊಳ್ಳಲು ಚರ್ಮರೋಗ ವಿಭಾಗದ ಒಬ್ಬರು ಸಹಾಯಕ ಪ್ರಾಧ್ಯಾಪಕರು ಮತ್ತು ಚರ್ಮರೋಗ ವಿಭಾಗದ ಸಹಾಯಕ ಪ್ರಾಧ್ಯಾಪಕರನ್ನು ನಿಯೋಜಿಸಲಾಗಿದೆ ಎಂದು ಜೈಲು ಅ„ಕಾರಿಗಳು ತಿಳಿಸಿದ್ದಾರೆ.

50 ವರ್ಷದ ಹಿಂದಿನ ಕೊಲೆ ಪ್ರಕರಣದಲ್ಲಿ 80 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಬಹುಕೋಟಿ ಕೌಶಲ ಅಭಿವೃದ್ಧಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನಾಯ್ಡು ಅವರನ್ನು ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆ (ಸಿಐಡಿ) ಕಳೆದ ತಿಂಗಳು ಬಂಧಿಸಿತ್ತು. ಕೌಶಲಾಭಿವೃದ್ಧಿ ಪ್ರಕರಣದಲ್ಲಿ ಚಂದ್ರಬಾಬು ಅವರು 33 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದು, ಅಮರಾವತಿ ಒಳವರ್ತುಲ ರಸ್ತೆ ಪ್ರಕರಣದಲ್ಲಿ ಅಕ್ಟೋಬರ್ 16 ರವರೆಗೆ ಆಂಧ್ರಪ್ರದೇಶ ಹೈಕೋರ್ಟ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಬಹುಕೋಟಿ ರೂಪಾಯಿ ಫೈಬರ್ ನೆಟ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರಿಗೆ ಪ್ರಸನರ್ ಇನ್ ಟ್ರಾನ್ಸಿಟ್ (ಪಿಟಿ) ವಾರಂಟ್ ಹೊರಡಿಸಲು ಇಲ್ಲಿನ ಎಸಿಬಿ ನ್ಯಾಯಾಲಯ ಆಂಧ್ರಪ್ರದೇಶ ಸಿಐಡಿಗೆ ಅನುಮತಿ ನೀಡಿದೆ.

ಸೋಮವಾರ ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆಯೊಳಗೆ ತೆಲುಗು ದೇಶಂ ಪಕ್ಷದ ಮುಖ್ಯಸ್ಥರನ್ನು ದೈಹಿಕವಾಗಿ ಹಾಜರುಪಡಿಸುವಂತೆ ವಿಜಯವಾಡದ ಎಸಿಬಿ ನ್ಯಾಯಾಲಯ ಆದೇಶಿಸಿದೆ. ಕೌಶಲಾಭಿವೃದ್ಧಿ ಪ್ರಕರಣ ಮತ್ತು ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣದ ನಂತರ ನಾಯ್ಡು ಅವರನ್ನು ಆರೋಪಿಯನ್ನಾಗಿ ಹೆಸರಿಸಲಾದ ಮೂರನೇ ಅಕ್ರಮ ಪ್ರಕರಣ ಇದಾಗಿದೆ.

ಕೇರಳದ ರೆಸಾರ್ಟ್‍ನಲ್ಲಿ ಶಸ್ತ್ರಸಜ್ಜಿತ ಶಂಕಿತ ಮಾವೋವಾದಿಗಳು ಪ್ರತ್ಯಕ್ಷ

ಫೈಬರ್‍ನೆಟ್ ಹಗರಣವು ಎಪಿ ಫೈಬರ್‍ನೆಟ್ ಯೋಜನೆಯ ಹಂತ-1 ರ 330 ಕೋಟಿಯ ವರ್ಕ್ ಆರ್ಡರ್ ಅನ್ನು ಅನುಕೂಲಕರ ಕಂಪನಿಗೆ ನಿಯಮಗಳನ್ನು ಉಲ್ಲಂಸಿ ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ದುರ್ಬಳಕೆ ಮಾಡುವ ಮೂಲಕ ಟೆಂಡರ್ ಪ್ರಕ್ರಿಯೆಯಲ್ಲಿ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ. ನಾಯ್ಡು ಅವರು ಇಂಧನ, ಮೂಲಸೌಕರ್ಯ ಮತ್ತು ಹೂಡಿಕೆ ಇಲಾಖೆಗಳ ಫೋರ್ಟ್ಫೋಲಿಯೊವನ್ನು ಹೊಂದಿದ್ದಾಗ ಹಗರಣ ನಡೆದಿದೆ ಎನ್ನಲಾಗಿದೆ.

ಕೋಟಿ ಕೋಟಿ ಬೆಲೆ ಬಾಳುವ ಚಿನ್ನ, ನಗದು ವಶ

ಮುಂಬೈ,ಅ.13-ಚಿನ್ನ ಕರಗಿಸುವ ಕೇಂದ್ರ ಮತ್ತು ಆಭರಣ ಮಳಿಗೆಗಳ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, 3.62 ಕೋಟಿ ರೂ.ಮೌಲ್ಯದ ಕಳ್ಳಸಾಗಣೆ ಚಿನ್ನ, 2.95 ಕೋಟಿ ರೂ.ನಗದು ಮತ್ತು 2.1 ಕಿಲೋಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಡಿಆರ್‍ಐ ಪ್ರಕಟಣೆ ತಿಳಿಸಿದೆ. ಇದರಲ್ಲಿ ನಾಲ್ವರು ಕೀನ್ಯಾದ ಐದು ಮಹಿಳೆಯರು ಮತ್ತು ಕಳ್ಳಸಾಗಣೆ ಚಿನ್ನದ ವಾಹಕಗಳಾಗಿ ಬಳಸಲಾದ ತಾಂಜಾನಿಯಾದವರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ನಿರ್ದಿಷ್ಟ ಗುಪ್ತಚರದ ಮಾಹಿತಿ ಮೇರೆಗೆ ಡಿಆರ್‍ಐ ರಹಸ್ಯವಾಗಿ ಕಳ್ಳಸಾಗಣೆ ಚಿನ್ನವನ್ನು ಕರಗಿಸಲು ಬಳಸುತ್ತಿರುವ ಆವರಣದಲ್ಲಿ ಶೋಧನೆ ನಡೆಸಿತು ಮತ್ತು ಕಳ್ಳಸಾಗಣೆ ಮಾಡಿದ ಚಿನ್ನವನ್ನು ಖರೀದಿಸಿದ ಆಭರಣ ವ್ಯಾಪಾರಿಯ ಆವರಣದಲ್ಲಿ ಶೋಧನೆ ನಡೆಸಿತು ಎಂದು ಪ್ರಕಟಣೆ ತಿಳಿಸಿದೆ.

50 ವರ್ಷದ ಹಿಂದಿನ ಕೊಲೆ ಪ್ರಕರಣದಲ್ಲಿ 80 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಮಂಬೈನ ಚಿನ್ನ ಮಳಿಗೆಯ ಶೋಧನೆಯಲ್ಲಿ, ಭಾರತಕ್ಕೆ ಅಕ್ರಮವಾಗಿ ಸಾಗಿಸಲಾಗಿದ್ದ 2.1 ಕೆ.ಜಿ ಚಿನ್ನ, 1 ಲಕ್ಷ ಡಾಲರ್ ಮೊತ್ತದ 84.15 ಲಕ್ಷ ಭಾರತೀಯ ಹಣ, ಜೊತೆಗೆ 2.32 ಕೋಟಿ ನಗದು, ಇವುಗಳೆಲ್ಲವೂ ಕಳ್ಳಸಾಗಣೆ ಚಿನ್ನದಿಂದ ಮಾರಾಟವಾದ ಆದಾಯವಾಗಿದ್ದು, ಕರಗುವ ಘಟಕದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ.

ಚಿನ್ನ ಕರಗುವ ಸೌಲಭ್ಯದ ಮಾಲೀಕರು, ನಿರ್ವಾಹಕರು ಪುನರಾವರ್ತಿತ ಅಪರಾಧಿಯಾಗಿದ್ದು, ಅವರು ಇತರ ಪ್ರಕರಣಗಳಲ್ಲಿಯೂ ಬೇಕಾಗಿದ್ದಾರೆ ಎಂದು ತಿಳಿದುಬಂದಿದೆ. ಆಫ್ರಿಕಾದಿಂದ ಬಂದಿರುವ ಆರೋಪಿಗಳು ತಮ್ಮ ವ್ಯವಹಾರವನ್ನು ನಡೆಸುತ್ತಿದ್ದ ಎರಡು ಹೋಟೆಲ್‍ಗಳಲ್ಲೂ ಶೋಧನೆ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಚಿನ್ನವನ್ನು ವಿವಿಧ ವಾಹಕಗಳಿಂದ ಸಂಗ್ರಾಹಕರು ಸಂಗ್ರಹಿಸಿದ್ದಾರೆ, ಹೆಚ್ಚಾಗಿ ಕೀನ್ಯಾ ಮತ್ತು ತಾಂಜೇನಿಯಾದವರು, ನಂತರ ಅದನ್ನು ಕರಗಿಸಲು ಮತ್ತು ಆಭರಣಗಳಿಗೆ ನಗದುಗಾಗಿ ಮಾರಾಟ ಮಾಡಲು ರವಾನಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

50 ವರ್ಷದ ಹಿಂದಿನ ಕೊಲೆ ಪ್ರಕರಣದಲ್ಲಿ 80 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಮೆಲ್ಟರ್‍ನಿಂದ ಸಂಗ್ರಹಿಸಿದ ಹಣವನ್ನು ಸಂಗ್ರಾಹಕರಿಗೆ ಮರುಪಾವತಿಸಲಾಯಿತು, ಅವರು ಹಣವನ್ನು ವಿವಿಧ ವಾಹಕಗಳ ನಡುವೆ ಹಂಚುತ್ತಿದ್ದರು. ಇದು ಆಫ್ರಿಕನ್ ಪ್ರಜೆಗಳನ್ನು ವಾಹಕಗಳಾಗಿ ಒಳಗೊಂಡಿರುವ ಕಳ್ಳಸಾಗಣೆ ಸಿಂಡಿಕೇಟ್‍ಗಳ ಅತ್ಯಂತ ಮಹತ್ವದ ತಿರುವಾಗಿರುವುದು ವಿಶೇಷ. ಈ ವರ್ಷದ ಏಪ್ರಿಲ್‍ನಲ್ಲಿ, ಸುಡಾನ್ ಪ್ರಜೆಗಳನ್ನು ವಾಹಕಗಳಾಗಿ ಬಳಸಿದ ಅಂತಹ ಮತ್ತೊಂದು ಸಿಂಡಿಕೇಟ್ ಅನ್ನು ಡಿಆರ್‍ಐ ಭೇದಿಸಿತು.

ಇಸ್ರೇಲ್-ಹಮಾಸ್ ಯುದ್ಧ, ದೆಹಲಿಯಲ್ಲಿ ಬಿಗಿ ಬಂದೋಬಸ್ತ್

ನವದೆಹಲಿ,ಅ.13- ಇಸ್ರೇಲ್‍ ಮತ್ತು ಹಮಾಸ್ ಬಂಡುಕೋರರ ನಡುವಿನ ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭಾವ್ಯ ಪ್ರತಿಭಟನೆಗಳ ದೃಷ್ಟಿಯಿಂದ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಶುಕ್ರವಾರದ ಪ್ರಾರ್ಥನೆಯ ವೇಳೆ ದೆಹಲಿ ಪೊಲೀಸ್ ಸಿಬ್ಬಂದಿ ಭಾರೀ ಬಲದೊಂದಿಗೆ ಬೀದಿಗಳಲ್ಲಿ ಇರುತ್ತಾರೆ.

ಯಹೂದಿ ಧಾರ್ಮಿಕ ಸಂಸ್ಥೆಗಳು ಮತ್ತು ಇಸ್ರೇಲ್ ರಾಯಭಾರ ಕಚೇರಿಗಳಿಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಮೆರಿಕ, ಯುಕೆ, ಫ್ರಾನ್ಸ್ ಮತ್ತು ಜರ್ಮನಿ ಸೇರಿದಂತೆ ಹಲವು ದೇಶಗಳು ಇಸ್ರೇಲ್‍ನಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ದೃಷ್ಟಿಯಿಂದ ಸಂಭಾವ್ಯ ಯಹೂದಿ ಗುರಿಗಳು ಮತ್ತು ಪ್ಯಾಲೇಸ್ಟಿನಿಯನ್ ಪರ ಪ್ರತಿಭಟನಾಕಾರರ ಸುತ್ತಲೂ ಭದ್ರತೆಯನ್ನು ಹೆಚ್ಚಿಸಿದ ನಂತರ ದೆಹಲಿಯಲ್ಲೂ ಅದೇ ರೀತಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಪಂಚ ಗ್ಯಾರಂಟಿಗಳಿಂದ 1 ಕೋಟಿ ಜನ ಮೇಲ್ದರ್ಜೆಗೆ : ಸಚಿವ ಹೆಚ್.ಕೆ.ಪಾಟೀಲ್

ಹಮಾಸ್‍ನಿಂದ ಇಸ್ರೇಲ್‍ನ ರಕ್ತಸಿಕ್ತ ದಾಳಿಯ ನಂತರ, ಸಾರ್ವಜನಿಕ ಸುವ್ಯವಸ್ಥೆಯ ಹಿತದೃಷ್ಟಿಯಿಂದ ಫ್ರಾನ್ಸ್ಎಲ್ಲಾ ಪ್ಯಾಲೆಸ್ತೀನ್ ಪರ ಪ್ರದರ್ಶನಗಳನ್ನು ನಿಷೇಧಿಸಿದೆ. ನಿಷೇಧದ ವಿಮರ್ಶಕರು ಇದು ವಾಕ್ ಮತ್ತು ಸಭೆಯ ಸ್ವಾತಂತ್ರ್ಯವನ್ನು ಉಲ್ಲಂಸುತ್ತದೆ ಎಂದು ವಾದಿಸಿದ್ದಾರೆ.

ಹಮಾಸ್‍ನ ಅನಿರೀಕ್ಷಿತ ಭೂ-ಸಮುದ್ರ-ವಾಯು ದಾಳಿಗೆ ಇಸ್ರೇಲ್ ಪ್ರತೀಕಾರಕ್ಕೆ ಮುಂದಾದ ನಂತರ ಗಾಜಾದಲ್ಲಿ 1,500 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟರು. ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ದಾಳಿ ಪ್ರಾರಂಭವಾದ ಕೂಡಲೇ, ಯುದ್ಧದ ಸ್ಥಿತಿ ಎಂದು ಘೋಷಿಸಿದರು ಮತ್ತು ಗಾಜಾವನ್ನು ಭಗ್ನಾವಶೇಷಕ್ಕೆ ಇಳಿಸುವುದಾಗಿ ಪ್ರತಿಜ್ಞೆ ಮಾಡಿದರು.