Home Blog Page 1898

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-10-2023 )

ನಿತ್ಯ ನೀತಿ : ಭಕ್ತನ ಭಕ್ತಿಯ ಮಾರ್ಗ ಭಗವಂತನನ್ನು ತೋರಿಸುತ್ತದೆ. ಆದರೆ ಅಂತರಂಗ, ಬಹಿರಂಗದಲ್ಲಿ ಭಾವ ಶುದ್ಧಿಯಿಲ್ಲದಿದ್ದರೆ ಯಾವ ಮಾರ್ಗವೂ ಫಲಿಸದು.

ಪಂಚಾಂಗ ಗುರುವಾರ 12-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಶುಕ್ಲ / ಕರಣ: ಗರಜೆ

ಸೂರ್ಯೋದಯ : ಬೆ.06.10
ಸೂರ್ಯಾಸ್ತ : 06.03
ರಾಹುಕಾಲ : 1.30-3.00
ಯಮಗಂಡ ಕಾಲ : 6.00-7.30
ಗುಳಿಕ ಕಾಲ : 9.00-10.30

ರಾಶಿ ಭವಿಷ್ಯ
ಮೇಷ
: ಕೆಲಸದಲ್ಲಿ ಯಶಸ್ಸನ್ನು ಸಾಧಿಸಲು ನೆರೆಹೊರೆಯವರು ನಿಮಗೆ ಸಹಾಯ ಮಾಡುವರು.
ವೃಷಭ: ಹೊಸ ಉದ್ಯೋಗಗಳು ಮತ್ತು ಉದ್ಯೋಗ ಬದಲಾವಣೆಗೆ ಉತ್ತಮ ಸಮಯ.
ಮಿಥುನ: ಸಂಸಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಂದ ಕಿರಿಕಿರಿ. ಉದ್ಯೋಗ ಸ್ಥಳದಲ್ಲಿ ಕೆಲಸದ ಒತ್ತಡ.

ಕಟಕ: ಸ್ಥಿರ ಮನಸ್ಸಿನಿಂದ ಯತ್ನಿಸಿದರೆ ಯಾವುದೇ ಕೆಲಸ-ಕಾರ್ಯಗಳಲ್ಲಿ ಜಯ ಸಾಧಿಸುವಿರಿ.
ಸಿಂಹ: ಇಲ್ಲಸಲ್ಲದ ವಿಚಾರ ಗಳಿಗೆ ಕಿವಿಗೊಟ್ಟು ಮನಸ್ಸಿನ ನೆಮ್ಮದಿ ಹಾಳುಕೊಳ್ಳಬೇಡಿ.
ಕನ್ಯಾ: ಸ್ವಲ್ಪ ಪ್ರಯತ್ನದಿಂದ ಅಥವಾ ಶ್ರಮವಿಲ್ಲದೆ ಹಣ ದೊರೆಯುವ ಸಾಧ್ಯತೆಗಳಿವೆ.

ತುಲಾ: ಹೊಸ ಉದ್ಯೋಗ ಹುಡುಕುತ್ತಿದ್ದವರಿಗೆ ಉತ್ತಮ ಅವಕಾಶಗಳು ಸಿಗಲಿವೆ.
ವೃಶ್ಚಿಕ: ಹೊಸ ಜವಾಬ್ದಾರಿ ಗಳನ್ನು ಒಪ್ಪಿಕೊಳ್ಳುವ ಸಂದರ್ಭಗಳು ಎದುರಾಗಬಹುದು.
ಧನುಸ್ಸು: ಪಿತ್ರಾರ್ಜಿತ ಆಸ್ತಿಯಿಂದ ಉತ್ತಮ ಲಾಭ ದೊರೆಯಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ.

ಮಕರ: ಹಣ ಸುಲಭವಾಗಿ ದೊರೆಯುತ್ತದೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಖರ್ಚು ಮಾಡದಿರಿ
ಕುಂಭ: ದಾಂಪತ್ಯ ಜೀವನದಲ್ಲಿ ಭಿನ್ನಾಭಿಪ್ರಾಯ ಗಳು ದೂರವಾಗಿ ಉತ್ತಮ ಬದಲಾವಣೆಗಳಾಗಲಿವೆ.
ಮೀನ: ಹಣದ ಕೊರತೆ ಇರುವುದಿಲ್ಲ. ಹಿಂದೆ ಮಾಡಿದ್ದ ಸಾಲವನ್ನು ಸಹ ತೀರಿಸುವಿರಿ.

ಎಲ್ಲೆಂದರಲ್ಲಿ ಪಟಾಕಿ ಮಾರಾಟ ಮಾಡುವಂತಿಲ್ಲ

ಬೆಂಗಳೂರು,ಅ.11- ಅತ್ತಿಬೆಲೆ ಪಟಾಕಿ ದುರಂತದ ನಂತರ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಈ ಬಾರಿ ಎಲ್ಲೆಂ ದರಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಲು ನಿರಾಕರಿಸಿದೆ. ನಗರದ ಪ್ರಮುಖ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕೆಲ ಪ್ರದೇಶಗಳಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡದಂತೆ ಬಿಬಿಎಂಪಿ ಜಂಟಿ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.

ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜ್ ಮೈದಾನಗಳು, ರಕ್ಷಣಾ ಇಲಾಖೆ ಮೈದಾನಗಳು, ಕೇಂದ್ರ , ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆಗಳು ಹಾಗೂ ಖಾಸಗಿ ಮೈದಾನಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಅವಕಾಶ ಕೊಡಬಾರದು ಎಂದು ಸೂಚಿಸಲಾಗಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ಆದರೆ, ಬಿಬಿಎಂಪಿ ಮೈದಾನದಲ್ಲಿ ಮಾತ್ರ ತಾತ್ಕಾಲಿಕ ಮಳಿಗೆ ನಿರ್ಮಾಣಕ್ಕೆ ಅವಕಾಶ ನೀಡಬೇಕು ಅದು ಅಗ್ನಿಶಾಮಕ ದಳದ ಅನುಮತಿ ಇದ್ದರೆ ಮಾತ್ರ ಎಂದು ತಿಳಿಸಲಾಗಿದೆ.

ಬೆಂಗಳೂರು ಕಂಬಳಕ್ಕೆ ಗುದ್ದಲಿ ಪೂಜೆ

ಬೆಂಗಳೂರು,ಅ.11- ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯುವ ಬೆಂಗಳೂರು ಕಂಬಳ, ನಮ್ಮ ಕಂಬಳ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ರಾಜಕೀಯವಾಗಿ ಆರೋಪ, ಪ್ರತ್ಯಾರೋಪಗಳಿಂದ ಹೆಚ್ಚು ಚರ್ಚೆಗೆ ಒಳ ಗಾಗಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಮಾಜಿ ಮುಖ್ಯಮಂತ್ರಿ ಹಾಗೂ ಸಚಿವರೂ ಆಗಿರುವ ಡಿ.ವಿ.ಸದಾನಂದಗೌಡ, ಶಾಸಕರಾದ ಎನ್.ಎ.ಹ್ಯಾರಿಸ್, ರಿಜ್ವಾನ್ ಹರ್ಷದ್, ಸಂಗೀತ ನಿರ್ದೇಶಕ ಗುರುಕಿರಣ್, ಕರಾವಳಿ ಸಂಘಟನೆಗಳ ಮುಖ್ಯಸ್ಥರಾದ ಅಶೋಕ್ ರೈ, ಪ್ರಕಾಶ್, ಗುರುರಂಜನ್ ಶೆಟ್ಟಿ, ರಾಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕರಾವಳಿ ಸಂಸ್ಕøತಿ, ವೈವಿಧ್ಯತೆ ನಾಡಿಗೆ ಹೆಮ್ಮೆ. ಇಂದು ಬೆಂಗಳೂರಿನ ಕಂಬಳಕ್ಕೆ ಚಾಲನೆ ನೀಡಲಾಗಿದೆ. ತುಳು ನಾಡಿನ ಆಚರಣೆಗಳು ಬೆಂಗಳೂರಿನಲ್ಲಿ ನಡೆಯಲಿವೆ. ಇದಕ್ಕಾಗಿ ಚಿಕ್ಕ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತದೆ ಎಂದರು. ಕರಾವಳಿಯವರು ತಮ್ಮ ಆಚರಣೆ, ಸಂಸ್ಕøತಿಯನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲ ಇದೆ. ಬೆಂಗಳೂರಿನಲ್ಲಿ ಕರಾವಳಿ ಭಾಗದ ಸಂಘಟನೆ ಕಚೇರಿಗೆ ಅಗತ್ಯವಾದ ಸ್ಥಳಾವಕಾಶ ಮಾಡಿಕೊಡಲು ಬಿಬಿಎಂಪಿಗೆ ಸೂಚನೆ ನೀಡುವುದಾಗಿ ತಿಳಿಸಿದರು.

ಈ ಹಿಂದೆ ಡಿ.ವಿ.ಸದಾನಂದಗೌಡ ಅವರು ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಕಂಬಳಕ್ಕೆ 10 ಲಕ್ಷ ನೀಡಿದ್ದರು. ತಮ್ಮ ಸರ್ಕಾರ ಪ್ರತಿ ಕಂಬಳಕ್ಕೆ ಐದು ಲಕ್ಷದಂತೆ 20 ಕಂಬಳಕ್ಕೆ ಹಣ ನೀಡುತ್ತೇವೆ ಎಂದು ಹೇಳಿದರು.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲರೊಂದಿಗೆ ಚರ್ಚಿಸಿ ಕಂಬಳಕ್ಕೆ ಗರಿಷ್ಠ ಪ್ರಮಾಣದ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಯ ಯುವಕರು ಬೆಂಗಳೂರಿನಲ್ಲಿ ಕಂಬಳ ಮಾಡಲು ಮುಂದಾಗಿದ್ದಾರೆ. ಇದು ಶ್ಲಾಘನೀಯ. ಯಾವುದೇ ತೊಂದರೆ ಬಂದರೂ ತಲೆಕೆಡಿಸಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಯಲ್ಲಿದೆ ಎಂದು ಭರವಸೆ ನೀಡಿದರು.

ಡಿ.ವಿ.ಸದಾನಂದಗೌಡ ಮಾತನಾಡಿ, ಕಂಬಳ ನಡೆಸುವುದು ಕಷ್ಟ. ಅದನ್ನು ನಿಲ್ಲಿಸಬೇಕು ಎನ್ನುವ ಹಂತದಲ್ಲಿ ನಾನು ಮುಖ್ಯಮಂತ್ರಿಯಾಗಿದ್ದೆ. ಒಂದು ಕಂಬಳಕ್ಕೆ 10 ಲಕ್ಷ ರೂ.ಗಳಂತೆ 10 ಕಂಬಳಗಳಿಗೆ 1 ಕೋಟಿ ರೂ. ಅನುದಾನ ನಿಗದಿ ಮಾಡಿ ತಮಿಳುನಾಡಿನಲ್ಲಿ ಜಲ್ಲಿಕಟ್ಟಿನಂತೆ ಕಂಬಳವನ್ನು ರಾಜ್ಯ ಕ್ರೀಡೆ ಯಾಗಿ ಪರಿವರ್ತನೆ ಮಾಡಿದ ತೃಪ್ತಿ ತಮಗಿದೆ ಎಂದರು. ಕಂಬಳದ ಬಗ್ಗೆ ನ್ಯಾಯಾಲಯದಲ್ಲಿ ಸಾಕಷ್ಟು ವಾದ-ವಿವಾದ ನಡೆದವು. ಹೈಕೋರ್ಟ್ ನಲ್ಲಿ ಸಮರ್ಥ ವಾದ ಮಂಡಿಸಿ ನಾವು ಕಂಬಳ ಉಳಿಸಿಕೊಂಡಿದ್ದೇವೆ ಎಂದರು.

ನಾವು ನಿನ್ನೆ ಕಂಬಳದ ಬಗ್ಗೆ ಚರ್ಚೆ ನಡೆಯುವಾಗ ಮಳೆ ಬಂದಿತು. ಇದರಿಂದಾಗಿ ಉಪಮುಖ್ಯಮಂತ್ರಿಯವರಿಗೆ ತಲೆಬಿಸಿ ಕಡಿಮೆಯಾಗಿದೆ. ಇಲ್ಲವಾದರೆ ಕಂಬಳ ನಡೆಸಲು ಬಳಸುವ ನೀರಿನ ಬಗ್ಗೆ ಕೆಲ ಬುದ್ಧಿಜೀವಿಗಳು ತಗಾದೆ ತೆಗೆಯುತ್ತಾರೆ. ಅದಕ್ಕೂ ಪೂರ್ವಸಿದ್ಧರಾಗಿರಬೇಕು. ಕೆಲವರಿಗೆ ತಲೆಯಲ್ಲಿ ಮೆದುಳಿಲ್ಲ, ಮೆದುಳನ್ನು ಬ್ಯಾಗಿನಲ್ಲೇ ಇಟ್ಟುಕೊಂಡಿದ್ದಾರೆ ಎಂದು ಸದಾನಂದಗೌಡ ಕಿಡಿಕಾರಿದರು.

ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, 44 ಎಕರೆಯಲ್ಲಿ ಕಂಬಳಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಕಂಬಳ ಮತ್ತು ಅದರ ಮೈದಾನ ಒಂದು ಭಾಗವಾದರೆ, ಮತ್ತೊಂದು ವೇದಿಕೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ. ಹಳೆ ಮಿನಿ ಮಂಗಳೂರಿನ ಮಾದರಿಯನ್ನು ನಿರ್ಮಿಸಲಾಗುವುದು. ತುಳುನಾಡಿನ ಜನಪದ ಆಚರಣೆಗಳಾದ ಯಕ್ಷಗಾನ, ಹುಲಿವೇಷ ಸೇರಿದಂತೆ ಸಾಂಸ್ಕøತಿಕ ಕಾರ್ಯಕ್ರಮಗಳು, ಕರಾವಳಿ ಭಾಗದ ತಿಂಡಿ ಭಕ್ಷ್ಯಗಳನ್ನು ಬೆಂಗಳೂರಿನವರಿಗೆ ಪರಿಚಯಿಸುವ ಉದ್ದೇಶವಿದೆ ಎಂದು ವಿವರಿಸಿದರು.

1ಕೆ.ಜಿ ಆಭರಣ ಕಳ್ಳತನ ಮಾಡಿದ್ದ ಸೇಲ್ಸ್‍ಮ್ಯಾನ್ ಸೇರಿ ಇಬ್ಬರ ಬಂಧನ

ಬೆಂಗಳೂರು,ಅ.11- ಜ್ಯುವೆಲರಿ ಅಂಗಡಿಯೊಂದರಲ್ಲಿ ಸೇಲ್ಸ್‍ಮ್ಯಾನ್ ಕೆಲಸಕ್ಕೆ ಸೇರಿಕೊಂಡು ಮಾಲೀಕರ ನಂಬಿಕೆಗಳಿಸಿ ನಂತರ ಸಹಚರರೊಂದಿಗೆ ಸೇರಿಕೊಂಡು ಚಿನ್ನಾಭರಣ ದರೋಡೆಯಾಗಿದೆ ಎಂದು ನಾಟಕವಾಡಿ 1ಕೆ.ಜಿ 262 ಗ್ರಾಂ ಆಭರಣಗಳನ್ನು ಕಳ್ಳತನ ಮಾಡಿದ್ದ ಸೇಲ್ಸ್‍ಮ್ಯಾನ್ ಹಾಗೂ ಮತ್ತೊಬ್ಬ ಅಂತರ್‍ರಾಜ್ಯ ಕಳ್ಳನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಲಸೂರು ಗೇಟ್ ವ್ಯಾಪ್ತಿಯ ಜ್ಯುವೆಲರಿ ಅಂಗಡಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಯುವಕ ಕೆಲಸ ಮಾಡಿಕೊಂಡಿದ್ದು, ನಂತರದ ದಿನಗಳಲ್ಲಿ ಮಾಲೀಕರ ನಂಬಿಕೆ ಗಳಿಸಿದ್ದಾನೆ. ಸೆ.28ರಂದು ಆಂಧ್ರಪ್ರದೇಶದ ನಲ್ಲೂರಿನಲ್ಲಿರುವ ಮುಖೇಶ್ ಮತ್ತು ಶುಭಂ ಗೋಲ್ಡ್ ಜ್ಯುವೆಲರಿ ಅಂಗಡಿಯ ಮಾಲೀಕರಿಗೆ 1.ಕೆಜಿ 262 ಗ್ರಾಂ ಚಿನ್ನಾಭರಣಗಳನ್ನು ಕೊಟ್ಟು ಬರುವಂತೆ ಆತನಿಗೆ ಮಾಲೀಕರು ತಿಳಿಸಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ಸೇಲ್ಸ್ ಮ್ಯಾನ್ ನಲ್ಲೂರಿಗೆ ಹೋಗಿ, ತನ್ನ ಸಹಚರರೊಂದಿಗೆ ಸೇರಿಕೊಂಡು ಆಭರಣಗಳನ್ನು ತಮ್ಮ ಬಳಿಯೇ ಇಟ್ಟುಕೊಂಡು ನಂತರ ಮೊಬೈಲ್ ಮುಖಾಂತರ ಮಾಲೀಕರಿಗೆ ಕರೆ ಮಾಡಿ ನಲ್ಲೂರಿನಲ್ಲಿ ದರೋಡೆ ಕೋರರು ಗನ್‍ಪಾಯಿಂಟ್ ಮಾಡಿ ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿ ಚಿನ್ನಾಭರಣ ಇದ್ದ ಬ್ಯಾಗನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ತಿಳಿಸಿದ್ದಾನೆ.

ಈತನ ಮಾತನ್ನು ನಂಬಿದ ಮಾಲೀಕ ಸೇಲ್ಸ್‍ಮ್ಯಾನ್‍ನನ್ನು ನಲ್ಲೂರಿನಿಂದ ವಾಪಸ್ಸು ಕರೆದುಕೊಂಡು ಬಂದು ಅ.2ರಂದು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅಂಗಡಿಯ ಸೇಲ್ಸ್ ಮ್ಯಾನ್ ಮೇಲೆಯೇ ಅನುಮಾನಗೊಂಡು ಈತನನ್ನು ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದಾಗ ಘಟನೆಯ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ.

ನಂತರ ಸೇಲ್ಸ್‍ಮ್ಯಾನ್‍ನನ್ನು 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದು, ಆತ ನೀಡಿದ ಮಾಹಿತಿ ಮೇರೆಗೆ ರಾಜಸ್ತಾನಕ್ಕೆ ಹೋಗಿ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆದು, ಆತನಿಂದ 1 ಕೆ.ಜಿ, 262 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ 75ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.

ಚೆನ್ನೈನಿಂದ ಅಹಮದಾಬಾದ್‍ಗೆ ಶುಭ್‍ಮನ್ ಗಿಲ್ ಶಿಫ್ಟ್

ಈ ಕೃತ್ಯದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವ ಮತ್ತಿಬ್ಬರ ಆರೋಪಿಗಳ ಬಗ್ಗೆ ತನಿಖೆ ಮುಂದುವರೆದಿದೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್, ಹಲಸೂರು ಗೇಟ್ ಎಸಿಪಿ ಶಿವನಂದ ಚಲವಾದಿ ಅವರ ಮಾರ್ಗದರ್ಶನದಲ್ಲಿ, ಇನ್ಸ್‍ಪೆಕ್ಟರ್, ಹನುಮಂತ ಭಜಂತ್ರಿ ಹಾಗೂ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸಿ ತಳವು ಮಾಡಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ಇಂಧನ ಇಲಾಖೆಯಿಂದ ಅಭಾವ ನಿವಾರಣೆಗೆ ವಿದ್ಯುತ್ ಪಡಿತರ ವ್ಯವಸ್ಥೆ ಜಾರಿ

ಬೆಂಗಳೂರು,ಅ.11- ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ವಿದ್ಯುತ್ ಬೇಡಿಕೆಗೆ ಅಸಾಧಾರಣ ಪರಿಸ್ಥಿತಿ ಎದುರಾಗಿದ್ದು, ಈ ಹಿನ್ನಲೆ ವಿದ್ಯುತ್ ಪಡಿತರ ವ್ಯವಸ್ಥೆಯನ್ನು ಜಾರಿಗೊಳಿಸಲು ಇಂಧನ ಇಲಾಖೆ ಮುಂದಾಗಿದೆ.ಈ ಉದ್ದೇಶಕ್ಕಾಗಿ ಇಂಧನ ಇಲಾಖೆಯು ಶೀಘ್ರದಲ್ಲೇ ಆದ್ಯತೆ ಮತ್ತು ಆದ್ಯತೆಯೇತರ ಗ್ರಾಹಕರ ಪಟ್ಟಿಯನ್ನು ಸಿದ್ದಪಡಿಸಲಿದೆ. ಜೊತೆಗೆ ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ಬೇರೆ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಮುಂದಾಗಿದೆ.

ಕಳೆದ ವರ್ಷ ಅಕ್ಟೋಬರ್ ತಿಂಗಳ ಅವಧಿಯಲ್ಲಿ 12,000 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಈ ವರ್ಷ ಇದೇ ತಿಂಗಳ ಅವಧಿಯಲ್ಲಿ 15000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಇರುವುದರಿಂದ ಈ ಕೊರತೆಯನ್ನು ನೀಗಿಸಲು ಇಂಧನ ಇಲಾಖೆ ಪರ್ಯಾಯ ಮಾರ್ಗವನ್ನು ಹುಡುಕುತ್ತಿದೆ.

ಒಂದು ಮೂಲದ ಪ್ರಕಾರ ಪ್ರತಿದಿನ 1500-2000 ಮೆಗಾವ್ಯಾಟ್ ಉತ್ಪಾದನೆಯಲ್ಲಿ ಕೊರತೆಯನ್ನು ಎದುರಿಸುತ್ತಿದೆ. ಹೀಗಾಗಿ ಪರ್ಯಾಯ ಇಂಧನ ಮೂಲಗಳಿಂದ ಬೇಡಿಕೆಯನ್ನು ಸರಿದೂಗಿಸಲು ಹೊರರಾಜ್ಯಗಳಿಂದ ವಿದ್ಯುತ್ ಖರೀದಿ ಹಾಗೂ ಪಡಿತರ ವ್ಯವಸ್ಥೆ ಜಾರಿ ಮಾಡುವ ಸಂಭವವಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ನಿರಂತರ ಜ್ಯೋತಿ ಯೋಜನೆಯಡಿ ಗ್ರಾಹಕರ ವಿದ್ಯುತ್ ಪೂರೈಕೆಗೆ ಕೆಲ ನಿರ್ಬಂಧಗಳನ್ನು ವಿಧಿಸಲಾಗುತ್ತದೆ. ಕೈಗಾರಿಕೆಗಳು, ಆಸ್ಪತ್ರೆಗಳು ಮತ್ತು ಇತರ ಅಗತ್ಯ ಸೇವೆಗಳಿಗೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಕಡಿತ ಇರುವುದಿಲ್ಲ. ಆದಾಗ್ಯೂ ಪರಿಸ್ಥಿತಿ ಈ ಬಾರಿ ಭಿನ್ನವಾಗಿರುವುದರಿಂದ ವಿದ್ಯುತ್ ಕಡಿತ ಮಾಡದೆ ಅನ್ಯ ಮಾರ್ಗವಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಬಿಕ್ಕಟ್ಟನ್ನು ತಗ್ಗಿಸಲು ನಾವು ಈಗಾಗಲೇ ಹಲವಾರು ಪರ್ಯಾಯ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಅದರಲ್ಲಿ ಮುಖ್ಯವಾಗಿ ಹೊರರಾಜ್ಯದಿಂದ ವಿದ್ಯುತ್ ಖರೀದಿ, ಪರ್ಯಾಯ ಇಂಧನ ಮೂಲಗಳು ಇದರಲ್ಲಿ ಸೇರಿವೆ. ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಬೇಡಿಕೆಯನ್ನು ಪೂರೈಸಲು ರಾಜ್ಯವು ಅನ್ಯ ರಾಜ್ಯಗಳಿಂದ ವಿದ್ಯುತ್ ಖರೀದಿಸಲು ಆಲೋಚಿಸಿದೆ. ಪ್ರಸ್ತುತ ಅಕ್ಟೋಬರ್‌ನಿಂದ ಮೇ 2024ರವರೆಗೆ ಪೂರ್ವ ಸೌರ ಮತ್ತು ನಂತರದ ಸಮಯದಲ್ಲಿ ಉತ್ತರ ಪ್ರದೇಶದೊಂದಿಗೆ 300ರಿಂದ 600 ಮೆಗಾವಾಟ್ ವಿದ್ಯುತ್ ಖರೀದಿಗೆ ಮಾತುಕತೆ ನಡೆಸಲಾಗಿದೆ.

ನವೆಂಬರ್‌ನಿಂದ ಮೇ 2024ರವರೆಗೆ 500 ಮೆ.ವ್ಯಾ ಪೂರೈಕೆಗಾಗಿ ಪಂಜಾಬ್ ಸರ್ಕಾರದೊಂದಿಗೆ ರಾಜ್ಯ ಸರ್ಕಾರ ಮಾತುಕತೆ ನಡೆಸಿದೆ. ರಾಜ್ಯಕ್ಕೆ ವಿದ್ಯುತ್ ಪೂರೈಸಲು ಅಲ್ಲಿನ ಸರ್ಕಾರಗಳು ಮೌಖಿಕ ಸಮ್ಮತಿ ನೀಡಿವೆ. ಕಳೆದ ಆಗಸ್ಟ್‍ನಲ್ಲಿ ರಾಜ್ಯವು 17,000 ಮೆಗಾವ್ಯಾಟ್ ಬೇಡಿಕೆಯನ್ನು ದಾಖಲಿಸಿತ್ತು. ಆದರೆ ಸೆಪ್ಟೆಂಬರ್‌ನಲ್ಲಿ ಅಲ್ಪಸ್ವಲ್ಪ ಮಳೆಯಾಗಿದ್ದರಿಂದ ಬೇಡಿಕೆ ಪ್ರಮಾಣ ತುಸು ಕಡಿಮೆಯಾಗಿತ್ತು.

ಈಗ ಪುನಃ ಮಳೆ ಬಾರದ ಕಾರಣ ರೈತರಿಂದ ಬೇಡಿಕೆ ಹೆಚ್ಚಾಗುತ್ತಿದ್ದು, ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಗಮನವನ್ನು ಇಲಾಖೆ ಹರಿಸಿದೆ. ಮಳೆ ಕಡಿಮೆಯಾಗಿರುವುದರಿಂದ ಪಾವಗಡ ಸೋಲಾರ್ ಪಾರ್ಕ್‍ನಲ್ಲಿ 800 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಕುಸಿದಿದೆ. ಪವನ ಯೋಜನೆಗಳಿಂದ ವಿದ್ಯುತ್ ಉತ್ಪಾದನೆಯು ಸಾಮಾನ್ಯ 2000 ಮೆಗಾವ್ಯಾಟ್‍ನಿಂದ 400 ಮೆಗಾವ್ಯಾಟ್‍ಗೆ ಇಳಿದಿದೆ. 2000 ಮೆಗಾವ್ಯಾಟ್ ನವೀಕರಿಸಬಹುದಾದ ಮೂಲಗಳ ಕೊರತೆಯಿದೆ.

ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಪ್ರಸ್ತುತ, ರಾಜ್ಯವು ಉಷ್ಣ ಯೋಜನೆಗಳಿಂದ ಮತ್ತು ವಿದ್ಯುತ್ ಖರೀದಿಯ ಮೂಲಕ 7000 ಮೆಗಾವ್ಯಾಟ್ ಪಡೆಯುತ್ತದೆ. ರಾಜ್ಯವು ತನ್ನ ಮೂರು ಶಾಖೋತ್ಪನ್ನ ಯೋಜನೆಗಳಿಂದ 1953w ಉತ್ಪಾದಿಸುತ್ತದೆ.

ಜುಲೈ 2022ರಲ್ಲಿ ಕೃಷಿ ಕ್ಷೇತ್ರಕ್ಕೆ 1,425 ಮೆ.ವ್ಯಾಟ್ ಬಳಕೆಯಾಗಿದ್ದರೆ, ಜುಲೈ 2023 ರಲ್ಲಿ ಇದು 2,209 ಮೆಗಾ ವ್ಯಾಟ್ಗೆ ಏರಿಕೆಯಾಗಿದೆ. ಲಿಂಗನಮಕ್ಕಿ, ಸೂಫಾ ಮತ್ತು ವಾರಾಹಿ ಜಲಾಶಯದ ಜಲ ವಿದ್ಯುತ್ ಉತ್ಪಾದನೆ ಶೇ 50ರಷ್ಟು ಕಡಿಮೆಯಾಗಿದೆ. ಇನ್ನು ಅಕ್ಟೋಬರ್ 1 ರಂದು ಗಾಳಿಯಿಂದ ವಿದ್ಯುತ್ ಉತ್ಪಾದನೆ 53.63 ಮೆ.ವಾ. ಆಗಿದ್ದರೆ, ಅಕ್ಟೋಬರ್ 9 ರಂದು 4.76 ಮೆಗಾವ್ಯಾಟ್‍ಗೆ ಇಳಿದಿದೆ. ಇನ್ನೊಂದೆಡೆ ವಿದ್ಯುತ್ ಸ್ಥಾವರಗಳು ಆಗಾಗ್ಗೆ ಸ್ಥಗಿತಗೊಳ್ಳುತ್ತಿವೆ.

ವಿದ್ಯುತ್ ಸಮಸ್ಯೆಗೆ ಮಳೆ ಕೊರತೆ ಮಾತ್ರವಲ್ಲ, ಹಿಂದಿನ ಹಾಗೂ ಈಗಿನ ಸರ್ಕಾರದ ನಿರ್ಲಕ್ಷ್ಯವೂ ವಿದ್ಯುತ್ ಅಭಾವ ಸೃಷ್ಟಿಗೆ ಕಾರಣ ಎನ್ನಲಾಗಿದೆ. ಸಾರ್ವಜನಿಕ ಸ್ವಾಮ್ಯದ ಕೆಪಿಸಿಎಲ್ ನಿರ್ಲಕ್ಷ್ಯಕ್ಕೊಳಗಾಗಿದ್ದು, ವಿದ್ಯುತ್ ಜಾಲಕ್ಕೆ ಹೊಸದಾಗಿ ಒಂದೇ ಒಂದು ಯುನಿಟ್ ಸೇರಿಸಲು ಸಾಧ್ಯವಾಗಿಲ್ಲ. ಕಲ್ಲಿದ್ದಲು ಖರೀದಿ ವಿಷಯದಲ್ಲಿ ಸ್ಪಷ್ಟ ನಿರ್ಧಾರಕ್ಕೆ ಬರಲಾಗದ ಕಾರಣ ಒಂದು ವಾರಕ್ಕೆ ಬೇಕಾಗುವಷ್ಟು ದಾಸ್ತಾನಿಡಲು ಸಾಧ್ಯವಾಗಿಲ್ಲ. ಇದು ಶಾಖೋತ್ಪನ್ನ ಸ್ಥಾವರದ ಪೂರ್ಣ ಸಾಮಥ್ರ್ಯದ ವಿದ್ಯುತ್ ಉತ್ಪಾದನೆಗೆ ಅಡ್ಡಗಾಲು ಹಾಕಿದೆ ಎಂದು ಮೂಲಗಳು ಸ್ಪಷ್ಟಪಡಿಸುತ್ತಿವೆ.

ಚೆನ್ನೈನಿಂದ ಅಹಮದಾಬಾದ್‍ಗೆ ಶುಭ್‍ಮನ್ ಗಿಲ್ ಶಿಫ್ಟ್

ವಿದ್ಯುತ್ ಸಮಸ್ಯೆ ಈಗ ಸೃಷ್ಟಿಯಾಗಿರುವುದಲ್ಲ. ಮಳೆ ವೈಫಲ್ಯವೂ ಒಂದು ಕಾರಣವಾಗಿರಬಹುದು. ಇದರೊಂದಿಗೆ ಇನ್ನೂ ಹಲವು ಕಾರಣಗಳು ಸೇರಿರಬಹುದು. ಪವನ ವಿದ್ಯುತ್ ಮತ್ತು ಸೋಲಾರ್ ವಿದ್ಯುತ್ ಉತ್ಪಾದನೆ ತೀವ್ರವಾಗಿ ಕುಸಿದಿರುವ ಪರಿಣಾಮ ವಿದ್ಯುತ್ ಸಮಸ್ಯೆ ತಲೆದೋರಿದೆ. ರೈತರಿಗೆ 7 ಗಂಟೆ ವಿದ್ಯುತ್ ಬದಲಿಗೆ 2 ಗಂಟೆ ಕಡಿತ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಆಗಾಗ್ಗೆ ವಿದ್ಯುತ್ ವ್ಯತ್ಯಯ ಮಾಡಲಾಗುತ್ತಿದೆ ಎಂದು ಅಕೃತ ಮೂಲಗಳು ಹೇಳುತ್ತವೆ.

ಇಂಧನ ಸಚಿವ ಕೆಜೆ ಜಾರ್ಜ್ ಅವರು ವಿದ್ಯುತ್ ಕೊರತೆ ಇಲ್ಲ. ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ ಎಂದು ಹೇಳುತ್ತಲ್ಲೇ ಇದ್ದಾರೆ. ಆದರೆ ರಾಜ್ಯಾದ್ಯಂತ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವಿದ್ಯುತ್ ವ್ಯತ್ಯಯ, ಕೃಷಿ ಪಂಪ್ಸೆಟ್‍ಗಳಿಗೆ ವಿದ್ಯುತ್ ಕಡಿತ ಮುಂದುವರೆದಿದೆ. ಇದರಿಂದ ರೈತರು ಕಂಗಾಲಾಗಿದ್ದು, ಇಂಧನ ಇಲಾಖೆ ವಿರುದ್ಧ ಸಿಡಿದೆದ್ದಿದ್ದಾರೆ.

ಒಂದೆಡೆ ಉಚಿತ ವಿದ್ಯುತ್(ಗೃಹ ಜ್ಯೋತಿ) ಭಾಗ್ಯದ ಮಧ್ಯೆ ಬೇಡಿಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದೆ. ಇದರಿಂದ ರಾಜ್ಯ ಸರ್ಕಾರ ಸಂಕಷ್ಟ ಎದುರಾಗಿದ್ದು, ಇದನ್ನು ಹೇಗೆ ನಿಭಾಯಿಸಲಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.

ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿ ಅಮಿಷ ಹಣ ಪಡೆದು ವಂಚಿಸಿದ್ದ ಆರೋಪಿ ಬಂಧನ

ಬೆಂಗಳೂರು,ಅ.11- ಬಿಬಿಎಂಪಿಯಲ್ಲಿ ನೌಕರಿ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯೊಬ್ಬನನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಬಿಬಿಎಂಪಿ ಹೆಸರಿನಲ್ಲಿರುವ ನೇಮಕಾತಿ ಆದೇಶದ ಪ್ರತಿ, ಗುರುತಿನ ಚೀಟಿ, ಪೋನ್‍ಪೇ ಮೂಲಕ ಹಣ ಪಡೆದಿರುವ ಬಗ್ಗೆ ಸ್ಕ್ರೀನ್‍ಶಾಟ್ ಪ್ರತಿಗಳು, ಪ್ಯಾನ್ ಕಾರ್ಡ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿಬಿಎಂಪಿಯಲ್ಲಿ ಕೆಲಸ ಮಾಡಿಕೊಂಡಿರುವುದಾಗಿ ಉದ್ಯೋಗಾಕಾಂಕ್ಷಿಗಳನ್ನು ಆರೋಪಿ ನಂಬಿಸಿದ್ದಾನೆ. ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್ ನೌಕರಿಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಮೂರು ಸಾವಿರ ಹಣ ನೀಡಿದರೆ ನೇಮಕಾತಿ ಮಾಡಿಸಿಕೊಡುವುದಾಗಿ ನಂಬಿಸಿದ್ದಾನೆ. ಈತನ ಮಾತನ್ನು ನಂಬಿ ಸುಮಾರು 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ತಲಾ ಮೂರು ಸಾವಿರ ಹಣವನ್ನು ಪೋನ್‍ಪೇ ಮೂಲಕ ಪಡೆದುಕೊಂಡಿದ್ದಾನೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ನಕಲಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ ಅವುಗಳನ್ನೇ ನೈಜವಾದವುಗಳೆಂದು ನಂಬಿಸಿ, ವಾಟ್ಸಾಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿದ್ದನು. ಈ ಬಗ್ಗೆ ಅನುಮಾನಗೊಂಡು ಸಂದೀಪ್ ಎನ್ನುವವರು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡು ಒಬ್ಬಾತನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿ ವಿವಿಧ ಆದೇಶದ ಪ್ರತಿ, ಗುರುತಿನ ಚೀಟಿ ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ರವಿಚಂದ್ರನ್ ಅಶ್ವಿನ್ ಔಟ್, ಶಾರ್ದೂಲ್ ಠಾಕೂರ್‌ಗೆ ಛಾನ್ಸ್

ನವದೆಹಲಿ, ಅ.11- ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‍ಗಳ ಅಭೂತಪೂರ್ವ ಗೆಲುವು ಸಾಧಿಸಿ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇಂದು ಆಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲೂ ಟಾಸ್ ಸೋತು ಫೀಲ್ಡಿಂಗ್ ಮಾಡುತ್ತಿದೆ.

ಅಕ್ಟೋಬರ್ 8 ರಂದು ಚೆನ್ನೈನ ಚಪಾಕ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿ 10 ಓವರ್ ಗಳಲ್ಲಿ 34 ರನ್ ನೀಡಿ ಕ್ಯಾಮರೂನ್ ಗ್ರೀನ್ ಅವರ ವಿಕೆಟ್ ಪಡೆದಿದ್ದ ರವಿಚಂದ್ರನ್ ಅಶ್ವಿನ್ ಅವರಿಗೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಿಂದ ಹೊರಗಿಟ್ಟಿದ್ದಾರೆ.

ನವದೆಹಲಿಯ ಅರುಣ್‍ಜೇಟ್ಲಿ ಕ್ರೀಡಾಂಗಣವು ವೇಗಿಗಳಿಗೆ ಹೆಚ್ಚು ಸಹಕರಿಸುವುದರಿಂದ ರವಿಚಂದ್ರನ್ ಅಶ್ವಿನ್ ಅವರು ಪ್ಲೇಯಿಂಗ್ 11ನಿಂದ ಹೊರಗಿಟ್ಟು ವೇಗದ ಆಲ್ ರೌಂಡರ್ ಶಾರ್ದೂಲ್ ಠಾಕೂರ್‌ಗೆ ಸ್ಥಾನ ಕಲ್ಪಿಸುವ ಮೂಲಕ ಆಫ್ಘಾನಿಸ್ತಾನದ ಬ್ಯಾಟರ್‍ಗಳ ಮೇಲೆ ಒತ್ತಡ ಹೇರುವ ರಣತಂತ್ರವನ್ನು ಟೀಮ್ ಇಂಡಿಯಾದ ನಾಯಕ ರೋಹಿತ್ ಸರ್ಮಾ ಹೆಣೆದಿದ್ದಾರೆ.ಆದರೆ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನ ವಿರುದ್ಧ ಆಡಿದ್ದ ತಂಡವನ್ನೇ ಟೀಮ್ ಇಂಡಿಯಾ ವಿರುದ್ಧದ ಪಂದ್ಯಕ್ಕೂ ಮುಂದುವರೆಸಿದ್ದಾರೆ.

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭಿನ್ನಮತದ ಭೀತಿ

ಇಶಾನ್ ಕಿಶನ್‍ಗೆ ಕೊನೆ ಛಾನ್ಸ್?
ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ವೀರ, ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‍ಗೆ ಅವಕಾಶ ಕಲ್ಪಿಸಲಾಗಿತ್ತು. ನಾಯಕ ರೋಹಿತ್ ಶರ್ಮಾರೊಂದಿಗೆ ಇನಿಂಗ್ಸ್ ಆರಂಭಿಸಿದ ಇಶಾನ್ ಕಿಶನ್, ದೊಡ್ಡ ಮೊತ್ತಕ್ಕೆ ಕೈ ಹಾಕುವ ಮೂಲಕ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್‍ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು.

ಡಕೌಟ್ ಆಗಿರುವ ಇಶಾನ್ ಕಿಶನ್‍ಗೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅವಕಾಶ ನೀಡಲಾಗಿದ್ದು , ಈ ಪಂದ್ಯದಲ್ಲಿ ಅವರು ತಮ್ಮ ಬ್ಯಾಟ್‍ನಿಂದ ಸಾಕಷ್ಟು ರನ್ ಕಾಣಿಕೆ ನೀಡಬೇಕು. ಇಲ್ಲದಿಂದ ಮುಂದಿನ ಪಂದ್ಯಗಳಲ್ಲಿ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ.

ಟೀಮ್ ಇಂಡಿಯಾ ವಿರುದ್ಧ ಬಾಬರ್ ಆಝಮ್ ಅಬ್ಬರಿಸುತ್ತಾರೆ : ವಾಟ್ಸನ್

ಬೆಂಗಳೂರು, ಅ.11- 2023ನೇ ಸಾಲಿನ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಝಮ್ ಅವರು ಟೀಮ್ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ರನ್ ಹೊಳೆ ಹರಿಸಲಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಶೇನ್ ವಾಟ್ಸನ್ ಭವಿಷ್ಯನುಡಿದಿದ್ದಾರೆ.

ಆಫ್ಘಾನಿಸ್ತಾನ ವಿರುದ್ಧ 5 ರನ್ ಗಳಿಗೆ ತಮ್ಮ ಆಟವನ್ನು ಮುಗಿಸಿದ್ದ ಬಾಬರ್ ಆಝಮ್, ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 10 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ತಮ್ಮ ಈ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕಾಗಿ ಅವರು ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಬ್ಯಾಟಿಂಗ್‍ನಲ್ಲಿ ಸಂಪೂರ್ಣವಾಗಿ ವೈಫಲ್ಯತೆ ಕಂಡಿದ್ದರೂ, ಆಫ್ಘಾನಿಸ್ತಾನ ಹಾಗೂ ಶ್ರೀಲಂಕಾ ವಿರುದ್ಧದ ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ಹಾದಿಯಲ್ಲಿ ಸಾಗಿಸಿರುವ ಪಾಕ್ ನಾಯಕ ಬಾಬರ್ ಆಝಮ್ ಅಕ್ಟೋಬರ್ 14 ರಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಂಪ್ರದಾಯಿಕ ವೈರಿ ಟೀಮ್ ಇಂಡಿಯಾ ವಿರುದ್ಧ ತಮ್ಮ ಮುಂದಿನ ಪಂದ್ಯ ಆಡಲಿದ್ದು, ತಮ್ಮ ಎಂದಿನ ಸೋಟಕ ಫಾರ್ಮ್‍ಗೆ ಮರಳಲು ಎದುರು ನೋಡುತ್ತಿದ್ದಾರೆ.

ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ

`ಬಾಬರ್ ಆಝಮ್ ಕ್ಲಾಸ್ ಆಟಗಾರನಾಗಿದ್ದು, ಕೆಲವು ಪಂದ್ಯಗಳಿಂದ ಅವರು ರನ್ ವೈಫಲ್ತೆ ಎದುರಿಸಿದ್ದಾರೆ, ಕಳೆದ ಐದು ಇನ್ನಿಂಗ್ಸ್‍ಗಳಲ್ಲಿ 30ಕ್ಕೂ ಕಡಿಮೆ ಮೊತ್ತವನ್ನು ಗಳಿಸಿದ್ದಾರೆ. ಬಾಬರ್ ಆಝಮ್ ಅವರು ತಾವು ಎದುರಿಸುವ ಮೊದಲ ಕೆಲವು ಎಸೆತಗಳಲ್ಲಿ ಅಪಾಯಕಾರಿ ಕಂಡುಬಂದರೂ, ನಂತರ ಆರಂಭದಲ್ಲಿ ಸಿಕ್ಕ ಅವಕಾಶವನ್ನು ದೊಡ್ಡ ಮೊತ್ತವಾಗಿ ಪರಿವರ್ತಿಸಲು ಎಡವಿದ್ದು, ಟೀಮ್ ಇಂಡಿಯಾದ ವಿರುದ್ಧದ ಪಂದ್ಯದಲ್ಲಿ ತಮ್ಮ ಕಳಪೆ ಪ್ರದರ್ಶನದಿಂದ ಹೊರಬಂದು ಬೃಹತ್ ಮೊತ್ತ ಗಳಿಸುತ್ತಾರೆ’ ಎಂದು ವಾಟ್ಸನ್ ಹೇಳಿದ್ದಾರೆ.

ನವೆಂಬರ್‌ನಲ್ಲಿ ಜಾತಿಗಣತಿ ವರದಿ ಬಹಿರಂಗ..!?

ಬೆಂಗಳೂರು,ಅ.11- ಬಿಹಾರದ ನಂತರ ಕರ್ನಾಟಕದಲ್ಲಿ ನವೆಂಬರ್ ವೇಳೆಗೆ ಜಾತಿ ಜನಗಣತಿಯ ವರದಿಯನ್ನು ಬಹಿರಂಗಗೊಳ್ಳುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗಗಳ ಅಭಿವೃದ್ಧಿ ಸಚಿವ ಶಿವರಾಜ್ ತಂಗಡಗಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯನ್ನು ಭೇಟಿ ಮಾಡಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿರುವುದು ಇದಕ್ಕೆ ಪುಷ್ಟಿ ನೀಡಿದೆ.

ಪ್ರಸ್ತುತ ಸನ್ನಿವೇಶದಲ್ಲಿ ವರದಿ ಬಿಡುಗಡೆಯ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಜೊತೆ ಚರ್ಚೆ ನಡೆಸಿದ್ದು, ಈ ಹಿಂದೆ ಕಾಂತರಾಜು ನೇತೃತ್ವದ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಯಥಾವತ್ತು ಸಲ್ಲಿಕೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿ ತಯಾರಿಸಿದ ವರದಿಗೆ ಆಗಿನ ಆಯೋಗದ ಕಾರ್ಯದರ್ಶಿ ಸಹಿ ಹಾಕಿರಲಿಲ್ಲ. ಅದರ ಹೊರತಾಗಿಯೂ ವರದಿಯನ್ನು ಕಾಂತರಾಜು ಅವರು ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ನೀಡಿದ್ದರು. ಅದು ಊರ್ಜಿತವಲ್ಲ ಎಂಬ ತಾಂತ್ರಿಕ ಅಂಶಗಳು ಎದುರಾಗಿವೆ. ಕಾರ್ಯದರ್ಶಿಯವರ ಸಹಿಯನ್ನೊಳಗೊಂಡ ಕ್ರಮಬದ್ಧವಾದ ವರದಿಯನ್ನು ಮತ್ತೊಮ್ಮೆ ಸರ್ಕಾರಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಮನವೊಲಿಸಿದ ಬಿಎಸ್‌ವೈ, ಧರಣಿ ಕೈಬಿಟ್ಟ ಶಾಸಕ ಮುನಿರತ್ನ

ನವೆಂಬರ್‍ವರೆಗೂ ಕಾಲಾವಕಾಶ ನೀಡುವಂತೆ ಆಯೋಗದ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಸರಿಪಡಿಸಿದ ತಾಂತ್ರಿಕ ಅಂಶಗಳನ್ನು ಪರಿಗಣಿಸಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ ಎಂಟು ವರ್ಷಗಳ ಹಿಂದೆ ನಡೆದಿದ್ದ ಸಮೀಕ್ಷೆ ವರದಿಯನ್ನು ಪ್ರಸ್ತುತ ಅಂಗೀಕರಿಸಲು ಸಾಧ್ಯವೇ ಎಂಬ ಗೊಂದಲಗಳು ತಲೆ ಎತ್ತಿವೆ.

ಕಾಂತರಾಜು ಅವರ ಆಯೋಗದಲ್ಲಿ ಕೆಲವು ಜಾತಿಗಳ ಸಂಖ್ಯಾವಾರು ಪ್ರಮಾಣದ ಬಗ್ಗೆ ಆಕ್ಷೇಪಗಳೆವೆ. ಕೆಲವು ಸಮುದಾಯಗಳು ಇದನ್ನು ತೀವ್ರವಾಗಿ ವಿರೋಧಿಸಿಯೂ ಇವೆ. ಮನೆ ಮನೆ ಸಮೀಕ್ಷೆ ಸರಿಯಾಗಿ ನಡೆದಿಲ್ಲ. ಸಮೀಕ್ಷಾ ವರದಿಯಲ್ಲಿ ಕೆಲವು ಮಾಹಿತಿಗಳನ್ನು ಆ ವೇಳೆ ತಿರುಚಲಾಗಿದೆ ಎಂಬ ಆರೋಪಗಳಿವೆ. ಹಲವು ಗಂಭೀರ ಆರೋಪಗಳಿಂದ ಕೂಡಿರುವ ಸಮೀಕ್ಷಾ ವರದಿಯನ್ನು ಅಂಗೀಕರಿಸುವುದು ಸರಿಯಲ್ಲ ಎಂಬ ವಾದಗಳು ಕೇಳಿಬಂದಿವೆ.

ರಾಜ್ಯಸರ್ಕಾರ ಸಮೀಕ್ಷೆ ನಡೆಸುವಾಗ ಆರ್ಥಿಕ, ಸಾಮಾಜಿಕ ಮಾಹಿತಿ ಸಂಗ್ರಹ ಎಂದು ಹೇಳಿತ್ತು. ವರದಿ ಸಿದ್ಧಗೊಂಡ ಬಳಿಕ ಅದನ್ನು ಜಾತಿ ಜನಗಣತಿ ಎಂದು ಪ್ರತಿಪಾದಿಸಲಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸೌಲಭ್ಯಗಳ ಹಂಚಿಕೆ ಹಾಗೂ ಸಾಮಾಜಿಕ ನ್ಯಾಯಗಳ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಜಾತಿ ಜನಸಂಖ್ಯೆಯ ಮಾಹಿತಿಗಳು ಅಗತ್ಯ. ಆದರೆ ಅದನ್ನು ಕ್ರೂಢೀಕರಿಸಲು ಕರಾರುವಕ್ಕಾದ ಸಮೀಕ್ಷೆಗಳು ನಡೆಯಬೇಕು. ದೇಶದಲ್ಲಿ ಜನಗಣತಿಗೆ ಭಾರತೀಯ ಗಣತಿ ಆಯೋಗಕ್ಕೆ ಮಾತ್ರ ಅಕಾರ ಇದೆ ಎಂದು ಸುಪ್ರೀಂಕೋರ್ಟ್ ತೀಪೆರ್ದರಲ್ಲಿ ಸ್ಪಷ್ಟಪಡಿಸಿದೆ.

ಹೀಗಿರುವಾಗ ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ ನಡೆದಿದೆ ಎಂದು ಹೇಳಲಾದ ಸಮೀಕ್ಷಾ ವರದಿ ಕಾನೂನಾತ್ಮಕವಾಗಿ ಊರ್ಜಿತವೇ ಎಂಬುದು ಪ್ರಶ್ನಾರ್ಹವಾಗಿದೆ. ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿ ಜಾರಿಗೊಳಿಸಲು ಮುಂದಾದರೆ ಮತ್ತಷ್ಟು ಪ್ರತಿಭಟನೆಗಳು ಎದುರಾಗುವ ಸಾಧ್ಯತೆಯಿದೆ.

ಜೆಡಿಎಸ್, ಬಿಜೆಪಿ ಅಕಾರ ನಡೆಸಿದ ಸಂದರ್ಭದಲ್ಲಿ ವರದಿಯ ತಂಟೆಗೆ ಹೋಗಿರಲಿಲ್ಲ. ಸಿದ್ಧರಾಮಯ್ಯ ಅದನ್ನೇ ಗುರಿಯಾಗಿಟ್ಟುಕೊಂಡು ಹಲವು ಬಾರಿ ತಗಾದೆ ತೆಗೆದಿದ್ದರು. ಈಗ ಸಿದ್ದರಾಮಯ್ಯನವರೇ ಅಧಿಕಾರದಲ್ಲಿರುವುದರಿಂದ ವರದಿಯ ಅಂಗೀಕಾರದ ಅನಿವಾರ್ಯತೆ ಎದುರಾಗಿದೆ.

ಇದಕ್ಕೆ ಪೂರಕವಾಗಿ ಎಐಸಿಸಿ ಕೂಡ ದೇಶಾದ್ಯಂತ ಜಾತಿ ಜನಗಣತಿ ನಡೆಯಬೇಕು ಎಂದು ಪ್ರತಿಪಾದಿಸಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಲ್ಲಿ ಈ ರೀತಿಯ ಸಮೀಕ್ಷೆ ನಡೆಯಲಿದೆ ಮತ್ತು ಅವು ಅಂಗೀಕಾರಗೊಳ್ಳಲಿವೆ ಎಂದು ರಾಹುಲ್‍ಗಾಂಧಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಕೂಡ ಅದಕ್ಕೆ ದನಿಗೂಡಿಸಿದ್ದಾರೆ.

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಆದರೆ ಕಾನೂನಾತ್ಮಕವಾಗಿ ಸಾಕಷ್ಟು ತೊಂದರೆಗಳು, ಗೊಂದಲಗಳು ಇರುವುದರಿಂದ ರಾಜ್ಯಸರ್ಕಾರ ವರದಿ ಅಂಗೀಕರಿಸಿದರೆ ನ್ಯಾಯಾಲಯದಲ್ಲಿ ಅದು ಮೇಲುಗೈ ಸಾಧಿಸಲಿದೆಯೇ ಎಂಬುದು ಚರ್ಚೆಗೊಳಗಾಗುತ್ತಿದೆ. ಒಂದು ವೇಳೆ ಸರ್ಕಾರ ಹಿಂದಿನ ವರದಿಯನ್ನು ಅಂಗೀಕರಿಸಿ ಲೋಪದೋಷಗಳ ಪರಿಷ್ಕರಣೆಗೆ ಮತ್ತೊಂದು ಸಮೀಕ್ಷೆ ನಡೆಸುವ ಸಾಧ್ಯತೆಗಳ ಬಗ್ಗೆಯೂ ಸಮಾಲೋಚನೆ ನಡೆದಿವೆ ಎಂದು ಹೇಳಲಾಗುತ್ತಿದೆ.

ನಿಷೇಧಿತ PFI ಮುಖಂಡರ ಮನೆ ಮೇಲೆ NIA ದಾಳಿ

ನವದೆಹಲಿ,ಅ.11- ನಿಷೇಧಿತ ಪಿಎಫ್‍ಐ ಸಂಘಟನೆಯ ಮುಖಂಡರ ಮೇಲೆ ದೇಶದ ವಿವಿಧೆಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ದೇಶದ ವಿವಿಧೆಡೆ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಚೆನ್ನೈ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಮತ್ತಿತರ ಕಡೆ ಎನ್‍ಐಎ ದಾಳಿ ನಡೆಸಿತ್ತು. ಇದರ ಬೆನ್ನಲೇ ಇಂದು ಹಲವಾರು ರಾಜ್ಯಗಳಲ್ಲಿ ದಾಳಿ ನಡೆಸಿ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಮಧುರೈ ಜಿಲ್ಲೆಯ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಇಲ್ಲಿನ ಕಜಿಮಾರ್ ಸ್ಟ್ರೀಟ್‍ನಲ್ಲೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಜಮಾತ್ ಹಿಂದ್ ಮೂವ್‍ಮೆಂಟ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಾಜುದ್ದೀನ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಘಟನೆ ಹಲವರು ಸರ್ಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಗ್ಸ್ ಕಳ್ಳಸಾಗಣಿಕೆದಾರನಿಂದ 4.94 ಕೋಟಿ ರೂ.ನಗದು ಸೀಜ್

ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2006ರ ಮುಂಬೈ ರೈಲ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ವಾಹಿದ್ ಶೇಖ್‍ನ ಮನೆ ಮೇಲೆ ದಾಳಿ ನಡೆಸಿದೆ. ವಿಖ್ರೋಲಿಯಲ್ಲಿರುವ ಆರೋಪಿಯ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.