Friday, November 7, 2025
Home Blog Page 1900

ಹರಿದಾಡುತ್ತಿದೆ ಇಸ್ರೇಲ್-ಹಮಾಸ್ ಯುದ್ಧದ ನಕಲಿ ವಿಡಿಯೋಗಳು

ನವದೆಹಲಿ,ಅ.11- ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ವಿಡಿಯೋ ತುಣುಕುಗಳು ನಕಲಿಯಾಗಿದೆ. ಎಕ್ಸ್ ಸೇರಿದಂತೆ ಹಲವಾರು ಸಾಮಾಜಿಕ ತಾಲತಾಣಗಳಲ್ಲಿರುವ ವೀಡಿಯೊಗಳನ್ನು ಕಳೆದ ಕೆಲವು ದಿನಗಳಲ್ಲಿ ಮಧ್ಯಪ್ರಾಚ್ಯದಲ್ಲಿ ಚಿತ್ರೀಕರಿಸಿದವು ಎನ್ನಲಾಗಿದೆ.

ಇಸ್ರೇಲ್‍ಗೆ ಸಹಾಯ ಮಾಡಲು ಅಮೆರಿಕ ಬಿಲಿಯನ್‍ಗಟ್ಟಲೆ ಡಾಲರ್‍ಗಳನ್ನು ಕಳುಹಿಸುತ್ತಿದೆ ಎಂದು ಹೇಳುವ ಮೂಲಕ ಎಕ್ಸ್ ನಲ್ಲಿನ ಬಳಕೆದಾರರು ವೈಟ್ ಹೌಸ್‍ನಿಂದ ನಕಲಿ ಸುದ್ದಿ ಬಿಡುಗಡೆಯನ್ನು ಹಂಚಿಕೊಂಡಿದ್ದಾರೆ. ಜೋ ಬಿಡೆನ್ ಅಂತಹ ಯಾವುದೇ ಘೋಷಣೆ ಮಾಡಿಲ್ಲ ಎಂದು ಶ್ವೇತಭವನ ದೃಢಪಡಿಸಿದೆ.

ಹಮಾಸ್ ಮಕ್ಕಳನ್ನು ಕೊಂದಿದೆ ಎಂದು ಹೇಳುವ ಇಸ್ರೇಲಿಗಳು ಹೇಗೆ ನಕಲಿ ವೀಡಿಯೊಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ನೋಡಿ ಎಂಬ ಶೀರ್ಷಿಕೆಯೊಂದಿಗೆ ಎಕ್ಸ್ ನಲ್ಲಿ ವೀಡಿಯೊ ವೈರಲ್ ಆಗುತ್ತಿದೆ. ವೃತ್ತಿಪರ ಕ್ಯಾಮರಾ ಉಪಕರಣಗಳನ್ನು ಬಳಸಿ ಗಾಯಗೊಂಡ ಮಗುವನ್ನು ನೆಲದ ಮೇಲೆ ಮಲಗಿರುವಂತೆ ನಕಲಿ ವೀಡಿಯೊ ತೋರಿಸುತ್ತದೆ. ವೀಡಿಯೊದಲ್ಲಿ ಕೆಲವು ಪುರುಷರು ಮಗುವಿಗೆ ಅವನ ಭಂಗಿಯನ್ನು ಬದಲಾಯಿಸಲು ನಿರ್ದೇಶಿಸುವುದನ್ನು ಕಾಣಬಹುದು. ಒಬ್ಬ ವ್ಯಕ್ತಿಯು ಸ್ವಯಂಚಾಲಿತ ರೈಫಲ್ ಅನ್ನು ತ್ತೊಯ್ಯುತ್ತಿರುವುದನ್ನು ಕಾಣಬಹುದಾಗಿದೆ.

ಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ

ರಾಯಿಟರ್ಸ್ ವೀಡಿಯೋವನ್ನು ವಾಸ್ತವಿಕವಾಗಿ ಪರಿಶೀಲಿಸಿದೆ ಮತ್ತು ಇದು ಸೆರೆಯಲ್ಲಿರುವ ಪ್ಯಾಲೇಸ್ಟಿನಿಯನ್ ಅಹ್ಮದ್ ಮನಸ್ರಾ ಅವರ ಕಥೆಯನ್ನು ಆಧರಿಸಿದ ಪ್ಯಾಲೆಸ್ಟೈನ್ ಕಿರುಚಿತ್ರ ಖಾಲಿ ಪ್ಲೇಸ್‍ನ ಚಿತ್ರೀಕರಣದ ತುಣುಕಾಗಿದೆ ಎಂದು ಹೇಳಿದೆ. ಯುದ್ಧವಿಮಾನಗಳು ಹಾರುತ್ತಿರುವ ನಕಲಿ ವೀಡಿಯೊವನ್ನು ಬಲಪಂಥೀಯ ರಾಜಕೀಯ ಪಕ್ಷವಾದ ಬ್ರಿಟನ್ ಫಸ್ಟ್‍ನ ನಾಯಕ ಪಾಲ್ ಗೋಲ್ಡಿಂಗ್ ಕೂಡ ಪೋಸ್ಟ್ ಮಾಡಿದ್ದಾರೆ.

ಗಾಜಾದ ಮೇಲೆ ಇಸ್ರೇಲ್ ನರಕಾಗ್ನಿಯನ್ನು ಸುರಿಸಲಿದೆ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ಆದಾಗ್ಯೂ, ವೀಡಿಯೊವನ್ನು ವೀಡಿಯೊ ಗೇಮ್ ಸಿಮ್ಯುಲೇಟರ್‍ನಲ್ಲಿ ರಚಿಸಲಾಗಿದೆ ಮತ್ತು ಇದನ್ನು ಈ ಹಿಂದೆ ಟಿಕ್‍ಟಾಕ್‍ನಲ್ಲಿ ಪೋಸ್ಟ್ ಮಾಡಲಾಗಿತ್ತು.

5ನೇ ದಿನಕ್ಕೆ ಕಾಲಿಟ್ಟ ಇಸ್ರೇಲ್-ಹಮಾಸ್ ಯುದ್ಧ, ಇಲ್ಲಿದೆ ಲೇಟೆಸ್ಟ್ ಅಪ್ಡೇಟ್ಸ್

ಜೆರುಸಲೇಮ್,ಅ.11-ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಕದನ ಐದನೇ ದಿನಕ್ಕೆ ಕಾಲಿಟ್ಟಿದೆ. ಎರಡು ಕಡೆಗಳಲ್ಲಿ ಸಾವಿರಾರು ಮಂದಿ ಕೊಲ್ಲಲ್ಪಟ್ಟಿದ್ದಾರೆ. ಹಮಾಸ್ ಗುಂಪಿನಿಂದ ಗಾಜಾ ಪಟ್ಟಿಯನ್ನು ಪುನಃ ವಶಪಡಿಸಿಕೊಳ್ಳಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ.

ಇಸ್ರೇಲ್‍ನಲ್ಲಿನ ಸಾವಿನ ಸಂಖ್ಯೆ 1,000 ಕ್ಕಿಂತ ಹೆಚ್ಚಿದೆ, ಆದರೆ ಗಾಜಾ ಅಧಿಕಾರಿಗಳು ಇದುವರೆಗೆ 765 ಜನರು ಮಾತ್ರ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದ್ದಾರೆ. ಇಸ್ರೇಲ್‍ನಲ್ಲಿ ಸುಮಾರು 1,500 ಹಮಾಸ್ ಉಗ್ರಗಾಮಿಗಳ ಶವಗಳನ್ನು ವಶಪಡಿಸಿಕೊಂಡಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.

ಗಾಜಾ ಪಟ್ಟಿಯಲ್ಲಿರುವ ಪ್ಯಾಲೆಸ್ತೀನ್‍ನ ಮನೆಯ ಮೇಲೆ ಎಚ್ಚರಿಕೆ ನೀಡದೆ ಇಸ್ರೇಲ್ ಪ್ರತಿ ಬಾರಿ ಬಾಂಬ್ ಬೀಳಿಸಿದಾಗಲೂ ಒಬ್ಬ ಒತ್ತೆಯಾಳನ್ನು ಗಲ್ಲಿಗೇರಿಸುವುದಾಗಿ ಹಮಾಸ್ ಬೆದರಿಕೆ ಹಾಕಿದೆ. ನಮ್ಮ ಜನರನ್ನು ಎಚ್ಚರಿಕೆಯಿಲ್ಲದೆ ಗುರಿಪಡಿಸುವ ಪ್ರತಿಯೊಬ್ಬ ನಾಗರಿಕ ಒತ್ತೆಯಾಳುಗಳಲ್ಲಿ ಒಬ್ಬನನ್ನು ಮರಣದಂಡನೆಯೊಂದಿಗೆ ಎದುರಿಸಲಾಗುವುದು ಎಂದು ಹಮಾಸ್ ಶಸ್ತ್ರ ವಿಭಾಗವು ಇಸ್ರೇಲ್‍ಗೆ ಎಚ್ಚರಿಕೆ ನೀಡಿದೆ. ಉಗ್ರರ ಬಳಿ ಮಕ್ಕಳು ಸೇರಿದಂತೆ 150 ಒತ್ತೆಯಾಳುಗಳಿರುವುದು ಉಲ್ಲೇಖಾರ್ಹ.

ಇಸ್ರೇಲ್ ಗಾಜಾ ಪಟ್ಟಿಯನ್ನಯ ವಶಪಡಿಸಿಕೊಂಡು ನೀರಿನ ಪೂರೈಕೆಯನ್ನು ಕಡಿತಗೊಳಿಸಿದ ನಂತರ ಈ ಬೆದರಿಕೆ ಬಂದಿದೆ. ಈ ಕ್ರಮವು ಈಗಾಗಲೇ ಭೀಕರವಾದ ಮಾನವೀಯ ಪರಿಸ್ಥಿತಿ ಮತ್ತಷ್ಟು ಹದಗೆಡುವ ಆತಂಕವನ್ನು ಹುಟ್ಟುಹಾಕಿದೆ. ಸಿರಿಯಾದಿಂದ ಇಸ್ರೇಲಿ ಭೂಪ್ರದೇಶಕ್ಕೆ ಹಲವಾರು ಉಡಾವಣೆಗಳು ನಡೆದಿವೆ ಎಂದು ಇಸ್ರೇಲ್ ಸೇನೆ ನಿನ್ನೆ ಹೇಳಿದೆ. ಸಿರಿಯಾದಲ್ಲಿ ಉಡಾವಣೆಯ ಮೂಲದ ಕಡೆಗೆ ಸೈನಿಕರು ಫಿರಂಗಿ ಮತ್ತು ಮಾರ್ಟರ್ ಶೆಲ್‍ಗಳೊಂದಿಗೆ ಪ್ರತಿಕ್ರಿಯಿಸುತ್ತಿದ್ದಾರೆ ಎಂದು ಇಸ್ರೇಲಿ ಸೇನೆಯ ಹೇಳಿಕೆ ತಿಳಿಸಿದೆ.

ಹಮಾಸ್ ಮಂಗಳವಾರ ಲೆಬನಾನ್‍ನಿಂದ ಇಸ್ರೇಲ್ ಕಡೆಗೆ ರಾಕೆಟ್‍ಗಳನ್ನು ಹಾರಿಸಿತು, ಹಿಜ್ಬುಲ್ಲಾಗೆ ಸೇರಿದ ಸ್ಥಾನಗಳ ಮೇಲೆ ಇಸ್ರೇಲಿ ದಾಳಿಯನ್ನು ಪ್ರೇರೇಪಿಸಿತು. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇಸ್ರೇಲಿ ನಾಗರಿಕರ ದೊಡ್ಡ ಪ್ರಮಾಣದ ಹತ್ಯೆಯನ್ನು ಐಸಿಸ್ ಮಾಡಿದ ದುಷ್ಕøತ್ಯಗಳಿಗೆ ಹೋಲಿಸಿದರು, ಅವರು ಸಿರಿಯಾ ಮತ್ತು ಇರಾಕ್‍ನ ವಿಶಾಲ ಪ್ರದೇಶಗಳನ್ನು ನಿಯಂತ್ರಿಸಿದಾಗ. ಹಮಾಸ್ ಭಯೋತ್ಪಾದಕರು ಮಕ್ಕಳನ್ನು ಬಂಧಿಸಿ, ಸುಟ್ಟುಹಾಕಿದರು ಮತ್ತು ಗಲ್ಲಿಗೇರಿಸಿದರು. ಅವರು ಅನಾಗರಿಕರು. ಹಮಾಸ್ ಐಸಿಸ್ ಉಗ್ರರು ಎಂದು ನೆತನ್ಯಾಹು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ನಾಲ್ವರ ಬಂಧನ, 14 ಕೆಜಿ ಬೆಳ್ಳಿ ಆಭರಣ ವಶ

ಯುಕೆ, ಫ್ರಾನ್ಸ್ , ಜರ್ಮನಿ ಮತ್ತು ಇಟಲಿಯಂತೆ ಯುಎಸ್ ಇಸ್ರೇಲ್‍ಗೆ ತನ್ನ ಸಂಪೂರ್ಣ ಬೆಂಬಲವನ್ನು ನೀಡಿದೆ. ನಾವು ಪ್ಯಾಲೇಸ್ಟಿನಿಯನ್ ಜನರ ಕಾನೂನುಬದ್ಧ ಆಕಾಂಕ್ಷೆಗಳನ್ನು ಗುರುತಿಸುತ್ತೇವೆ ಆದರೆ ಹಮಾಸ್ ಪ್ಯಾಲೆಸ್ತೀನ್ ಜನರಿಗೆ ಹೆಚ್ಚಿನ ಭಯೋತ್ಪಾದನೆ ಮತ್ತು ರಕ್ತಪಾತವನ್ನು ಹೊರತುಪಡಿಸಿ ಏನನ್ನೂ ನೀಡುವುದಿಲ್ಲ ಎಂದು ಅವರ ನಾಯಕರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಧ್ಯಕ್ಷ ಜೋ ಬಿಡೆನ್ ಮಂಗಳವಾರ ಭಾವನಾತ್ಮಕ ಭಾಷಣದಲ್ಲಿ ಯುಎಸ್ ಮಿತ್ರ ಇಸ್ರೇಲ್ ಮೇಲೆ ಹಮಾಸ್ ದಾಳಿಯನ್ನು ದುಷ್ಟ ಪ್ರಕ್ರಿಯೆ ಎಂದು ಖಂಡಿಸಿದರು ಮತ್ತು ವಾಷಿಂಗ್ಟನ್ ಈ ಪ್ರದೇಶಕ್ಕೆ ಹೆಚ್ಚಿನ ಮಿಲಿಟರಿ ಸ್ವತ್ತುಗಳನ್ನು ನಿಯೋಜಿಸಲು ಸಿದ್ಧವಾಗಿದೆ ಎಂದು ಹೇಳಿದರು.

ನಿಗಮ ಮಂಡಳಿಗಳಿಗೆ 30 ಶಾಸಕರ ಪಟ್ಟಿ ಹೈಕಮಾಂಡ್‍ಗೆ ಸಲ್ಲಿಕೆ

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-10-2023)

ನಿತ್ಯ ನೀತಿ : ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು. ಅವರು ನಿನ್ನ ಎದುರು ಸುಳಿದಾಗಲೆಲ್ಲ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.

ಪಂಚಾಂಗ ಬುಧವಾರ 11-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಮಘಾ / ಯೋಗ: ಶುಭ / ಕರಣ: ಗರಜೆ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.03
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.
ವೃಷಭ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.

ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.
ಕಟಕ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭ ಗಳು ಬರಬಹುದು.
ಸಿಂಹ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ. ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಸಿಗಲಿದೆ.
ತುಲಾ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.
ವೃಶ್ಚಿಕ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.

ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.
ಮಕರ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.
ಕುಂಭ: ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾಸುವುದು ಬಹಳ ಕಷ್ಟವಾಗಲಿದೆ. ಪೋಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಮೀನ: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.

ಜೈನ ಮಂದಿರದಲ್ಲಿ ಕಳ್ಳತನ ಮಾಡಿದ್ದ ನಾಲ್ವರ ಬಂಧನ, 14 ಕೆಜಿ ಬೆಳ್ಳಿ ಆಭರಣ ವಶ

ಬೆಂಗಳೂರು,ಅ.10- ಜೈನ ಮಂದಿರದಲ್ಲಿ ಕನ್ನಕಳವು ಮಾಡಿದ್ದ ನಾಲ್ವರು ಅಂತರಾಜ್ಯ ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 9.75 ಲಕ್ಷ ರೂ. ಮೌಲ್ಯದ 14 ಕೆ.ಜಿ. ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಆದಿನಾಥ ಜೈನ ಮಂದಿರದಲ್ಲಿ ಸೆ.9ರಂದು ರಾತ್ರಿ ಕಳ್ಳರು ದೇವಾಲಯದ ಒಳಗೆ ನುಗ್ಗಿ ಬೆಳ್ಳಿ ಆಭರಣವನ್ನು ಕಳವು ಮಾಡಿಕೊಂಡು ಹೋಗಿದ್ದ ಬಗ್ಗೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳು ಮತ್ತು ಮಾಲು ಪತ್ತೆ ಮಾಡಲು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಒಂದು ವಿಶೇಷ ತಂಡವನ್ನು ರಚಿಸಿದ್ದರು.

ಈ ತಂಡವು ಆರೋಪಿಗಳ ಬಗ್ಗೆ ಹಲವು ಮಾಹಿತಿಗಳನ್ನು ಸಂಗ್ರಹಿಸಿ, ರಾಜಸ್ತಾನ ರಾಜ್ಯದ ಪಾಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ , ಒಟವಾಟೋ ಕಿ ಪಾಲಿ ಎಂಬ ಗ್ರಾಮದಲ್ಲಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಕಳವು ಮಾಡಿದ್ದ 14 ಕೆ.ಜಿ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 9.75 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಒಂದೇ ಮಳೆಗೆ ನಲುಗಿದ ಬೆಂಗಳೂರು, 50 ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳ

ಈ ಪ್ರಕರಣದಲ್ಲಿ ತಲೆಮರೆಸಿ ಕೊಂಡಿರುವ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶೇಖರ್ ಮತ್ತು ಕಬ್ಬನ್ ಪಾರ್ಕ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಬಾಲಕೃಷ್ಣ ಅವರ ಮಾರ್ಗದರ್ಶನ ಲ್ಲಿ ಇನ್ಸ್‍ಪೆಕ್ಟರ್ ರವಿ ಅವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ತಂಡದ ಉತ್ತಮ ಕಾರ್ಯವನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ಘನತ್ಯಾಜ್ಯ ವಿಲೇವಾರಿಗೆ 100 ಎಕರೆ ಜಾಗ

ಬೆಂಗಳೂರು,ಅ.10- ಬೆಂಗಳೂರಿನ ನಾಲ್ಕು ಮೂಲೆಗಳನ್ನು ಘನತ್ಯಾಜ್ಯ ವಿಲೇವಾರಿಗೆ ತಲಾ 100 ಎಕರೆ ಜಾಗ ಗುರುತಿಸಲಾಗುವುದೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದಿಲ್ಲಿ ತಿಳಿಸಿದರು. ವಿಧಾನಸೌಧದಲ್ಲಿ ಇಂದು ನಡೆದ ತಿಪ್ಪೇಗೊಂಡನಹಳ್ಳಿ ಜಲಾಶಯ ವ್ಯಾಪ್ತಿಯ ವಿವಿಧ ವಲಯಗಳ ಬಫರ್ ಅಂತರ ಕಡಿಮೆ ಮಾಡುವುದು ಸೇರಿದಂತೆ ಜಲಸಂಪನ್ಮೂಲ ಇಲಾಖೆಯ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಘನತ್ಯಾಜ್ಯ ವಿಲೇವಾರಿಗೆ ಗುರುತಿಸಲಾದ ಅರಣ್ಯ ಭೂಮಿಯಾಗಿದ್ದರೆ ಪರ್ಯಾಯ ಜಾಗವನ್ನು ಅರಣ್ಯ ಇಲಾಖೆಗೆ ನೀಡಲಾಗುವುದು, ಇಲ್ಲವೇ ಹಣ ನೀಡಲಾಗುವುದು ಎಂದರು. ಆನೇಕಲ್, ದಾಸರಹಳ್ಳಿ ಸೇರಿದಂತೆ ಕೆಲವೆಡೆ ಊರಿನ ಬಳಿಯೇ ಕಸ ವಿಲೇವಾರಿ ಘಟಕಗಳಿವೆ. ಅವುಗಳನ್ನು ಸ್ಥಳಾಂತರ ಮಾಡಲು ಸಿದ್ದತೆ ಮಾಡಲಾಗಿದೆ, ಕಲ್ಲುಗುಡ್ಡೆಗಳಿಂದ ಕೂಡಿದ ಪ್ರದೇಶ ವಾಸನೆ ಬರದಂತಹ ಜಾಗವನ್ನು ಗುರುತಿಸಲು ಸೂಚಿಸಲಾಗಿದೆ ಎಂದರು. ಬೆಂಗಳೂರು ಸುತ್ತಮುತ್ತಲಿನ ಅರಣ್ಯ ಮತ್ತು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಇಂದಿನ ಸಭೆ ನಡೆಸಲಾಗಿತ್ತು.

ಬಿಡಿಎ ಮತ್ತು ಬೆಂಗಳೂರು ಜಲಮಂಡಳಿ ಅರಣ್ಯ ಇಲಾಖೆಯಿಂದ ತೊಂದರೆಯಾಗುತ್ತಿದ್ದು, ಬಫರ್ ವಲಯಗಳಲ್ಲಿ ಮರಗಳಿಲ್ಲದಿದ್ದರೆ ಆಕ್ಷೇಪವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮೌಖಿಕವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. 2003ರಲ್ಲಿ ಸುಮಾರು ಒಂದು ಸಾವಿರ ನಿವೇಶನಗಳನ್ನು ಬಿಡಿಎಯಿಂದ ಹಂಚಿಕೆ ಮಾಡಲಾಗಿದೆ. ಅಂತಹ ನಿವೇಶನಗಳಲ್ಲಿ ಮನೆ ಕಟ್ಟಲು ಅರಣ್ಯ ಇಲಾಖೆಯಿಂದ ಅಡ್ಡಿ ಆಗುತ್ತಿತ್ತು. ಮರಗಳಿಲ್ಲದಿದ್ದರೆ ಆಕ್ಷೇಪ ಮಾಡುವುದಿಲ್ಲ ಭರವಸೆ ಅರಣ್ಯ ಇಲಾಖೆಯಿಂದ ಸಿಕ್ಕಿದೆ ಎಂದರು.

ತಿಪ್ಪೆಗೊಂಡನಹಳ್ಳಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಕೆಲವು ಕಾನೂನು ಬಾಹಿರ ಕಟ್ಟಡಗಳು ತಲೆ ಎತ್ತುತ್ತಿವೆ. ಈ ಹಿನ್ನೆಲೆಯಲ್ಲಿ ತಿಪ್ಪೆಗೊಂಡನಹಳ್ಳಿ ಜಲಾಶಯದ ಮಾಲಿನ್ಯವಾಗದಂತೆ ನೆಲಮಂಗಲ, ಡಾಬಸ್‍ಪೇಟೆ, ಶಿವಗಂಗೆ ಪ್ರದೇಶದಲ್ಲಿ ಕೆಂಪು ವಲಯಗಳ ಕೈಗಾರಿಕೆಗಳನ್ನು ಮಾಡಬಾರದು ಹಾಗೂ ರಾಜಕಾಲುವೆಯ 500 ಮೀ. ಅಂತರದಲ್ಲಿ ಯೋಜನೆಗೆ ಅನುಮೋದನೆ ನೀಡಬಾರದೆಂಬ ನಿಯಮವಿದೆ, ಇಲ್ಲಿನ ಜನರ ಸಮಸ್ಯೆಗಳಿಗೆ ಖಾಯಂ ಪರಿಹಾರ ರೂಪಿಸಲು ಕಾನೂನು ನಗರಾಭಿವೃದ್ಧಿ ಇಲಾಖೆ, ಅರಣ್ಯ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಕ್ರಮ ಕೈಗೊಳ್ಳಲಿದೆ ಎಂದರು.

ಸೋಲಾರ್ ವಿದ್ಯುತ್
ತಿಪ್ಪೆಗೊಂಡನಹಳ್ಳಿ ಹಾಗೂ ಹೆಸರಘಟ್ಟ ಜಲಾಶಯದ ಬಳಿ ಬೆಂಗಳೂರು ಜಲಮಂಡಳಿಯ ಜಮೀನು ಇದ್ದು ಆ ಜಮೀನಿನಲ್ಲಿ ಮಂಡಳಿಯ ಬಳಕೆಗಾಗಿ ಸೋಲಾರ್ ವಿದ್ಯುತ್ ಉತ್ಪಾದಿಸಲು ತೀರ್ಮಾನಿಸಲಾಗಿದೆ ಎಂದರು. ಜಲಮಂಡಳಿಯು ಒಂದು ಸಾವಿರ ಕೋಟಿ ರೂ. ವಿದ್ಯುತ್ ಬಿಲ್ ಪಾವತಿಸುತ್ತಿದೆ. ಪ್ರತಿ ಯುನಿಟ್‍ಗೆ 6 ರೂ. ವೆಚ್ಚ ತಗುಲುತ್ತಿದ್ದು, ಸೋಲಾರ್ ವಿದ್ಯುತ್ ಉತ್ಪಾದನೆಯಾದರೆ ಪ್ರತಿ ಯುನಿಟ್‍ಗೆ 4 ರೂ. ವೆಚ್ಚವಾಗಲಿದೆ. ಉತ್ಪಾದಿತ ಸೌರ ವಿದ್ಯುತನ್ನು ಜಲಮಂಡಳಿಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಮೇಕೆದಾಟು ಜಲಾಶಯದಲ್ಲಿ ಮುಳುಗಡೆಯಾಗುವ ಅರಣ್ಯ ಭೂಮಿಗೆ ಪರ್ಯಾಯವಾಗಿ ರಾಮನಗರ, ಮಂಗಳೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ನೀಡಲಾಗುವುದು. ಬೆಂಗಳೂರು ಸುತ್ತಮುತ್ತ ಆನೆ, ಚಿರತೆ ಹಾವಳಿ ತಡೆಗೆ ರಕ್ಷಣೆ ಒದಗಿಸುವಂತೆ ಅರಣ್ಯ ಇಲಾಖೆ ಕೋರಿದ್ದು, ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದರು.

470 ಕೋಟಿ ರೂ. ಸೈಬರ್ ವಂಚನೆ ಪತ್ತೆ, 27.68 ಕೋಟಿ ರೂ.ವಾರಸುದಾರರಿಗೆ ಹಸ್ತಾಂತರ

ಪ್ರತಿಕ್ರಿಯೆ ಇಲ್ಲ
ತಮಿಳುನಾಡು ಸರ್ಕಾರ ಕೈಗೊಂಡಿರುವ ನಿರ್ಣಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ನಮ್ಮ ರೈತರ ಹಿತವನ್ನು ಕಾಪಾಡಿದ್ದೇವೆ. ರಾಜ್ಯದಲ್ಲಿರುವ ಬರ ಪರಿಸ್ಥಿತಿ ಕೃತಕವೋ ವಾಸ್ತವವೋ ಎಂಬುವುದು ಎಲ್ಲರಿಗೂ ಗೊತ್ತಿದೆ. ಕೇಂದ್ರದ ತಂಡ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದೆ ಎಂದರು. ಬಿಜೆಪಿಯವರು ಮಾರ್ಗದರ್ಶನ ಮಾಡಿದ್ದಂತೆ ನಾವು ಆರ್ ಆರ್ ನಗರದ ವಿಧಾನ ಸೌಧ ಕ್ಷೇತ್ರದಲ್ಲಿ ಅನುದಾನದ ವಿಚಾರದಲ್ಲಿ ಕ್ರಮಕೈಗೊಂಡಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಐಸಿಸಿ ಪ್ರಶಸ್ತಿಗಾಗಿ ಗಿಲ್-ಸಿರಾಜ್ ಫೈಟ್

ಸಭೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಂಸದರಾದ ಡಿವಿ ಸದಾನಂದ, ಡಿಕೆ ಸುರೇಶ್, ಶಾಸಕರಾದ ಎಸ್‍ಟಿ ಸೋಮಶೇಖರ್, ಶ್ರೀನಿವಾಸ್, ಎಸ್ ರವಿ, ಶಶಿ ಕಿರಣ್ ಶೆಟ್ಟಿ, ಜಲಸಂಪನ್ಮೂಲ ಇಲಾಖೆ ಅಪರಮುಖಿ ಕಾರ್ಯದರ್ಶಿ ರಾಕೇಶ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಯರಾಮ್ ಮತ್ತಿತರರು ಪಾಲ್ಗೊಂಡಿದ್ದರು.

ಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ

ಬೆಂಗಳೂರು, ಅ. 10- ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯ ದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಕಾರಿಗಳು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೂಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದ ರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಉಪಸ್ಥಿತರಿದ್ದರು.

ನಿಗಮ ಮಂಡಳಿಗಳಿಗೆ 30 ಶಾಸಕರ ಪಟ್ಟಿ ಹೈಕಮಾಂಡ್‍ಗೆ ಸಲ್ಲಿಕೆ

ಬೆಂಗಳೂರು,ಅ.10- ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆಯುತ್ತಾ ಬಂದಿದ್ದು, ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡದಿರುವ ಕುರಿತು ಅಸಮಾಧಾನ ಹೊಗೆಯಾಡುತ್ತಿರುವ ನಡುವೆಯೇ, 30 ಮಂದಿ ಶಾಸಕರನ್ನು ಪ್ರಮುಖ ನಿಗಮಗಳಿಗೆ ಅಧ್ಯಕ್ಷರನ್ನಾಗಿ ಮಾಡುವ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಲ್ಲಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‍ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದು, ಶೇ. 50-50 ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.

ಆರ್ಥಿಕವಾಗಿ ಸುಸ್ಥಿತಿಯಲ್ಲಿರುವ 70 ಕ್ಕೂ ಹೆಚ್ಚು ನಿಗಮಗಳಿಗೆ ಏಕಕಾಲಕ್ಕೆ ತಲಾ 30 ತಿಂಗಳ ಅವಧಿಯಂತೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ನಿರ್ದೇಶಕರನ್ನು ನೇಮಿಸಲು ಚಿಂತನೆ ನಡೆದಿದೆ. ಇದನ್ನು ಮೂರು ಭಾಗಗಳಾಗಿ ವಿಂಗಡಿಸಿ 24 ತಿಂಗಳುಗಳಿಗೆ ಸೀಮಿತಗೊಳಿಸಿದರೆ ಇನ್ನಷ್ಟು ಮಂದಿಗೆ ಅಧಿಕಾರ ಹಂಚಿಕೆ ಮಾಡಬಹುದು. ಆಗ ಎಲ್ಲರಿಗೂ ಆದ್ಯತೆ ನೀಡಲು ಸಾಧ್ಯವಾಗಲಿದೆ ಎಂಬ ವಾದಗಳು ಕೇಳಿಬಂದಿದೆ.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಸಚಿವ ಸಂಪುಟದಲ್ಲಿ ಅವಕಾಶ ಸಿಗದೆ ಅಸಮಾಧಾನಗೊಂಡಿರುವ ಕಾಂಗ್ರೆಸ್‍ನ ಶಾಸಕರನ್ನು ಓಲೈಸಲು ನಿಗಮಮಂಡಳಿಗಳಲ್ಲಿ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿಗಮಮಂಡಳಿಗಳಲ್ಲಿ ಕಾರ್ಯಕರ್ತರಿಗೆ, ಮುಖಂಡರಿಗೆ ಹೆಚ್ಚಿನ ಅವಕಾಶ ನೀಡಬೇಕು. ಅಕಾರ ಅವಕಾಶ ವಂಚಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ.

ಶಾಸಕರಿಗೆ ಆದ್ಯತೆ ನೀಡುತ್ತಾ ಹೋದರೆ ಕಾಂಗ್ರೆಸ್‍ನ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಳ್ಳುತ್ತಾರೆ. ಲೋಕಸಭೆ, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇದು ಅಡ್ಡಪರಿಣಾಮ ಬೀರಲಿದೆ. ಹೀಗಾಗಿ ಪಕ್ಷದ ಕಾರ್ಯಕರ್ತರಿಗೆ, ಮುಖಂಡರಿಗೆ ಒತ್ತು ನೀಡಬೇಕು ಎಂಬುದು ಡಿ.ಕೆ.ಶಿವಕುಮಾರ್ ಅವರ ಆಗ್ರಹವಾಗಿದೆ.

ಆದರೆ ಇದರ ಹೊರತಾಗಿಯೂ ಮುಖ್ಯಮಂತ್ರಿಯವರು 30 ಮಂದಿ ಶಾಸಕರ ಪಟ್ಟಿಯನ್ನು ಹೈಕಮಾಂಡ್ ಮುಂದೆ ಮಂಡಿಸಿದ್ದು, ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ಅಭಿಪ್ರಾಯ ತಿಳಿಸುವುದಾಗಿ ಹೈಕಮಾಂಡ್ ಹೇಳಿದೆ ಎಂದು ಮೂಲಗಳು ತಿಳಿಸಿವೆ.

ಶತಕ ಸಿಡಿಸಿ ವಿಶಿಷ್ಟ ದಾಖಲೆ ಬರೆದ ಡೇವಿಡ್ ಮಲಾನ್

ಈ ಹಿಂದೆ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಸದಸ್ಯರ ಆಯ್ಕೆ ವೇಳೆಯಲ್ಲೂ ರಾಜ್ಯ ಕಾಂಗ್ರೆಸಿಗರನ್ನು ಕಡೆಗಣಿಸಲಾಗಿದೆ ಎಂಬ ಆಕ್ಷೇಪಗಳಿದ್ದವು. ಕೆಲವು ಸಚಿವರ ವಿರೋಧವನ್ನೂ ಲೆಕ್ಕಿಸದೆ ಮೂರು ಸದಸ್ಯರನ್ನು ವಿಧಾನಪರಿಷತ್‍ಗೆ ಚುನಾಯಿಸಲಾಗಿತ್ತು. ಈಗ ನಿಗಮಮಂಡಳಿ ನೇಮಕಾತಿ ವಿಷಯದಲ್ಲೂ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಿದೆಯೇ, ಇಲ್ಲವೇ ಎಂಬುದು ಕುತೂಹಲ ಕೆರಳಿಸಿದೆ.

ಅರಣ್ಯ ಅಕ್ರಮ ಒತ್ತುವರಿ ತೆರವು ಅನಿವಾರ್ಯ : ಈಶ್ವರ್ ಖಂಡ್ರೆ

ಬೆಂಗಳೂರು,ಅ.10- ಅರಣ್ಯ ಇಲಾಖೆಯಿಂದ ಸಕ್ರಮ ವಾಗಿರುವವರನ್ನು ಒಕ್ಕಲೆಬ್ಬಿಸುವುದಿಲ್ಲ, ಅಕ್ರಮ ಒತ್ತುವರಿಗಳನ್ನು ತೆರವು ಮಾಡುವುದು ಅನಿವಾರ್ಯ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಅಲ್ಲಿಯೇ ನೆಲೆಸಿರುವವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ರಮಬದ್ಧವಾಗಿ, ನಿಯಮಬದ್ಧವಾಗಿ, ಕಾನೂನಾತ್ಮಕವಾಗಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಶಾಸಕರು ಮತ್ತು ಸಾರ್ವಜನಿಕರು ಪ್ರಕೃತಿ ಮತ್ತು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

1978 ರ ಪೂರ್ವದಲ್ಲಿ ವಾಸಿಸುತ್ತಿರುವವರು ಮತ್ತು ಅರಣ್ಯದಂಚಿನಲ್ಲಿ ವಾಸ ಮಾಡುತ್ತಿರುವವರನ್ನು ಗುರುತಿಸಿ ಪಟ್ಟಿ ಮಾಡಲು ಸೂಚಿಸಲಾಗಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಈ ಪ್ರಕರಣವನ್ನು ಮೂರು ತಿಂಗಳ ಒಳಗಾಗಿ ಇತ್ಯರ್ಥಪಡಿಸಲು ನಿರ್ಧರಿಸಿದ್ದೇವೆ. ಸಾವಿರಾರು ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಇದರಿಂದ ಬಡವರಿಗೆ, ರೈತರಿಗೆ, ಬುಡಕಟ್ಟು ಸಮುದಾಯದವರಿಗೆ ಅನುಕೂಲವಾಗಲಿದೆ ಎಂದರು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಅರಣ್ಯವನ್ನು ಅಕ್ರಮವಾಗಿ ಒತ್ತುವರಿ ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಅದನ್ನು ತೆರವು ಮಾಡಲಾಗುವುದು. ನಮ್ಮ ಸರ್ಕಾರ ಮೊದಲಿನಿಂದಲೂ ಪರಿಸರ ರಕ್ಷಣೆ ಹಾಗೂ ಸಾರ್ವಜನಿಕ ಹಕ್ಕುಗಳ ವಿಷಯದಲ್ಲಿ ಸಕಾರಾತ್ಮಕವಾಗಿದೆ. ಸಣ್ಣ ಪ್ರಮಾಣದ ಜಮೀನುಗಳಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಮತ್ತು ನಿವಾಸಿಗಳಿಗೆ ತೊಂದರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಸೇರಿ ಶ್ರೀಶೈಲ ಜಗದ್ಗುರುಗಳನ್ನು ನಿನ್ನೆ ಭೇಟಿ ಮಾಡಿದ್ದೇವೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗಣೇಶ್ ಹುಕ್ಕೇರಿ ಸೇರಿದಂತೆ ಹಲವು ನಾಯಕರು ಇದ್ದರು. ಶ್ರೀಗಳ ಜೊತೆ ರಾಜಕೀಯ ಹೊರತಾಗಿ ಹಲವಾರು ವಿಚಾರಗಳನ್ನು ಚರ್ಚಿಸಿದ್ದೇವೆ ಎಂದರು.

ಪಟಾಕಿ ದುರಂತ : ತಹಸೀಲ್ದಾರ್, ಇನ್‌ಸ್ಪೆಕ್ಟರ್‌ ಸೇರಿ ಮೂವರು ಅಮಾನತು

ಬೆಂಗಳೂರು,ಅ.10-ಅತ್ತಿಬೆಲೆ ಪಟಾಕಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂಬಂಧ ತಹಸೀಲ್ದಾರ್, ಇನ್ಸ್‍ಪೆಕ್ಟರ್ ಮತ್ತು ರೀಸನಲ್ ಫೈಯರ್ ಆಫೀಸರ್ ಅವರ ಅಮಾನತಿಗೆ ಸೂಚನೆ ನೀಡಿದ್ದಾರೆ.

ಪಟಾಕಿ ದುರಂತ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯಾದ್ಯಂತ ಪ್ರತಿಯೊಂದು ಪಟಾಕಿ ಪರವಾನಗಿದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್‍ಪೆಕ್ಟರ್ ವರದಿ, ಛಾಯಾಚಿತ್ರಗಳೊಂದಿಗೆ ಚೆಕ್‍ಬಂಧಿ ನಿಗದಿ ಮಾಡಿ ವರದಿ ಸಲ್ಲಿಸಲಾಗಿದೆ.

ಪೊಲೀಸ್ ಅೀಧಿಕ್ಷಕರು ಜಿಲ್ಲಾಧಿಕಾರಿಗಳಿಗೆ ಘಟನೆ ಸಂಬಂಧ ವರದಿ ಸಲ್ಲಿಸಿದ್ದಾರೆ. ಅದರ ಆಧಾರದಲ್ಲಿ ಜಿಲ್ಲಾಧಿಕಾರಿಗಳು ಪರವಾನಗಿ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ತಹಸೀಲ್ದಾರ್‍ ರಿಂದಲೂ ವರದಿ ಪಡೆದಿದ್ದಾರೆ ಎಂದು ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.

ಎಕ್ಸ್‍ಫ್ಲೋಸೀವ್ ಆಕ್ಟ್‌ನಲ್ಲಿ ಲೈಸೆನ್ಸ್ ಕೊಡುವಾಗ ನೀವು ಎಚ್ಚರಿಕೆ ವಹಿಸಬೇಕು. 14 ಜನರ ಜೀವಕ್ಕೆ ಹೊಣೆ ಯಾರು. ಕಾಯ್ದೆಯಲ್ಲಿರುವ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಸಲ್ಲಿಸಿದ ವರದಿ ಸರಿ ಇದೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಬೇಕೆಂದು ತಾಕೀತು ಮಾಡಿದರು.

ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸೆನ್ಸ್ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡನ್‍ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು ಎಂದು ಸಭೆಯ ಗಮನಕ್ಕೆ ತರಲಾಯಿತು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ ಸುರಕ್ಷತಾ ಕ್ರಮ ಕೈಗೊಳ್ಳದ ಗೋಡನ್ ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳುವುದಲ್ಲದೆ, ಅವುಗಳ ಪರವಾನಗಿಗಳನ್ನು ರದ್ದುಗೊಳಿಸಬೇಕೆಂದು ಸೂಚಿಸಿದರು.
ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತದೆ. ಬಿಬಿಎಂಪಿ, ವಿದ್ಯುತ್, ಅಗ್ನಿಶಾಮಕ, ಟ್ರಾಫಿಕ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ನಿರಪೇಕ್ಷಣಾ ಪತ್ರ ಪಡೆದು ಲೈಸನ್ಸ್ ನೀಡಲಾಗುತ್ತದೆ.

5 ವರ್ಷಕ್ಕೊಮ್ಮೆ ನವೀಕರಣಕ್ಕೆ ನಿರಪೇಕ್ಷಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಪೋಟಕದ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಗಳ ತಿದ್ದುಪಡಿ ಅಗತ್ಯವಿದೆ ಎಂದ ಅವರು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು. ರಾಜ್ಯಕ್ಕೆ ಅನ್ವಯಿಸುವ ನಿಯಮ ಬದಲಿಸಲು ಸೂಚನೆ ನೀಡಿದರು.
ಅತ್ತಿಬೆಲೆಯಲ್ಲಿ ನಿಗದಿಯಾದ ಮಾನದಂಡ ಪೂರೈಸದಿದ್ದರೂ ತಪಾಸಣಾ ವರದಿ ನೀಡಿ, ಶಿಫಾರಸ್ಸು ಮಾಡಿದ ಸರ್ಕಲ್ ಇನ್ಸ್‍ಪೆಕ್ಟರ್, ತಹಸೀಲ್ದಾರ್, ಪ್ರಾದೇಶಿಕ ಅಗ್ನಿಶಾಮಕ ಅಕಾರಿಗಳನ್ನು ಅಮಾನತು ಮಾಡಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಅತ್ತಿಬೆಲೆ ಹೊಸೂರು ಗಡಿಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕೆಂದು ಹೇಳಿದ ಅವರು, ಈ ಕುರಿತು ನ್ಯಾಯಾಲಯಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲಾ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನು ಖಾತರಿಪಡಿಸಿಕೊಳ್ಳಬೇಕೆಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ರಾಜಕೀಯ ಸಮಾವೇಶ ಹಾಗೂ ವಿವಾಹ ಸಂದರ್ಭಗಳಲ್ಲಿ ಸುರಕ್ಷಿತ ದೃಷ್ಟಿಯಿಂದ ಪಟಾಕಿ ಬಳಕೆಯನ್ನು ನಿಷೇಧಿಸುವಂತೆ ಸಲಹೆ ಮಾಡಿದರು.

ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಸಭೆಯಲ್ಲಿ ಮುಖ್ಯಕಾರ್ಯದರ್ಶಿ ವಂದಿತಾಶರ್ಮಾ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಸಿಎಂ ಅವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಘೋಯೆಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಕಾರಿ ಕೆ.ಎ.ದಯಾನಂದ ಮತ್ತಿತರರು ಉಪಸ್ಥಿತರಿದ್ದರು.

ಒಂದೇ ಮಳೆಗೆ ನಲುಗಿದ ಬೆಂಗಳೂರು, 50 ಜನರ ಪ್ರಾಣ ಉಳಿಸಿದ ಅಗ್ನಿಶಾಮಕ ದಳ

ಬೆಂಗಳೂರು,ಅ.10- ನಗರದಲ್ಲಿ ನಿನ್ನೆ ಸುರಿದ ಭಾರಿ ಮಳೆ ಸಂದರ್ಭದಲ್ಲಿ ಗರ್ಭಿಣಿ ಸೇರಿದಂತೆ 50 ಕ್ಕೂ ಹೆಚ್ಚು ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಬಳಿಯ ರಸ್ತೆ ಮಳೆ ನೀರಿನಿಂದ ಸಂಪೂರ್ಣ ಮುಳುಗಿ ಹೋಗಿತ್ತು.

ಸುಮಾರು 50 ಮೀಟರ್ ಉದ್ಧದ ರಸ್ತೆಯಲ್ಲಿ ರಾಜಕಾಲುವೆ ನೀರು ತುಂಬಿ ಹರಿದು ಅವಾಂತರ ಸೃಷ್ಟಿಯಾಗಿತ್ತು.
ಈ ಅವಾಂತರದಲ್ಲಿ 15ಕ್ಕೂ ಅಧಿಕ ವಾಹನದಲ್ಲಿದ್ದ 50 ಹೆಚ್ಚು ಜನ ಪರದಾಡುವ ಪರಿಸ್ಥಿತಿ ಎದುರಾಗಿತ್ತು. ಕ್ಷಣಕ್ಷಣಕ್ಕೂ ನೀರಿನ ಮಟ್ಟ ಏರಿಕೆಯಾಗಿ ವಾಹನದಲ್ಲಿದ್ದವರು ಪರದಾಡುವಂತಾಗಿತ್ತು.

ಇದೇ ಸಮಯದಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಯಿಂದ 50ಕ್ಕೂ ಅಧಿಕ ಮಂದಿಯನ್ನು ರಕ್ಷಣೆ ಮಾಡಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದ್ದು, ದೇವರಂತೆ ಬಂದು ಜೀವ ಕಾಪಾಡಿದ ಅಗ್ನಿಶಾಮಕ ದಳದವರನ್ನು ಜನ ಕೊಂಡಾಡಿದ್ದಾರೆ. ಸತತ ಹಲವು ಗಂಟೆಗಳ ಕಾಲ ಎಡಬಿಡದೆ ಸುರಿದ ಮಳೆಯಿಂದ ನಗರದ ಹಲವೆಡೆ ಮನೆಗಳು, ಅಂಡರ್ ಪಾಸ್ ಗಳು ಜಲಾವೃತಗೊಂಡಿದ್ದವು.

ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಲೀ ಮೆರಿಡಿಯನ್ ಅಂಡರ್ ಪಾಸ್ ನೀರಿನಿಂದ ತುಂಬಿ ಹೋಗಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದ್ದರಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ವಾಹನ ದಟ್ಟಣೆ ಉಂಟಾಗಿತ್ತು. ಮಳೆಯಿಂದ ಲೀ ಮೆರಿಡಿಯನ್ ಅಂಡರ್ ಪಾಸ್ ಜಲಾವೃತಗೊಂಡಿರುವುದರಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದೆ.

ಇತ್ತೀಚಿಗಷ್ಟೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೆಡಿ ಮಾಡಲಾಗಿದ್ದ ಅಂಡರ್ ಪಾಸ್ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಹಾಕಲಾಗಿರುವ ರೂ-ï ಟಾಪ್ ಹಾಕಿದ್ದರು ನೀರು ತುಂಬಿರುವುದರಿಂದ ಬಿಬಿಎಂಪಿಯವರ ಮಾನ ಹರಾಜು ಹಾಕಿದಂತಾಗಿದೆ.

ಇನ್ನೂ ಮೂರು ದಿನ ಭಾರಿ ಮಳೆ: ಹವಾಮಾ ಇಲಾಖೆಯವರು ನಗರದಲ್ಲಿ ಅಲರ್ಟ್ ಘೋಷಣೆ ಮಾಡಿದ್ದು, ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಿದೆ.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ ಇದ್ದು, ಸಿಲಿಕಾನ್ ಸಿಟಿಯಲ್ಲಿ ಇನ್ನೆರಡು ದಿನ ಮೋಡ ಮುಸುಕಿನ ವಾತಾವರಣ ಮುಂದುವರೆಯಲಿದೆ. ಸಂಜೆಯಾಗ್ತಿದ್ದಂತೆ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಲಾಗಿದೆ.

ಎಲ್ಲೆಲ್ಲಿ ಎಷ್ಟು ಮಳೆ
ಕೆಂಗೇರಿ – 9.45 ಸೆಂ.ಮೀ
ಗೊಲ್ಲಹಳ್ಳಿ – 8.65 ಸೆಂ.ಮೀ
ಆರ್.ಆರ್.ನಗರ (ವಾರ್ಡ್ -1) – 7.8 ಸೆಂ.ಮೀ
ಆರ್.ಆರ್.ನಗರ (ವಾರ್ಡ್ -2) – 7.65 ಸೆಂ.ಮೀ
ಕೊಟ್ಟಿಗೆಪಾಳ್ಯ – 7.6 ಸೆಂ.ಮೀ
ಏರ್ ಪೋರ್ಟ್ (1) – 7.5 ಸೆಂ.ಮೀ
ನಾಯಂಡನಹಳ್ಳಿ – 7.05 ಸೆಂ.ಮೀ
ಬಿಳೇಕಹಳ್ಳಿ (ಮಹದೇವಪುರ ಝೋನ್ ) – 7 ಸೆಂ.ಮೀ
ರಾಜ್ ಮಹಲ್ ಗುಟ್ಟಹಳ್ಳಿ – 6.6 ಸೆಂ.ಮೀ
ನಾಗಪುರ (ವೆಸ್ಟ್ ಝೋನï) – 6.5 ಸೆಂ.ಮೀ
ಮಾರತಹಳ್ಳಿ ( ಈಸ್ಟ್ ಝೋನ್ ) – 6.4 ಸೆಂ.ಮೀ
ಅರಕೆರೆ ( ಬೊಮ್ಮನಹಳ್ಳಿ ಝೋನï) 6.3 ಸೆಂ.ಮೀ
ಪೀಣ್ಯ ಇಂಡಸ್ಟ್ರಿಯಲ್ ಏರಿಯಾ – 6.3 ಸೆಂ.ಮೀ
ಕೋರಮಂಗಲ – 6.1 ಸೆಂ.ಮೀ
ವಿದ್ಯಾಪೀಠ – 6.05 ಸೆಂ.ಮೀ
ದಯಾನಂದನಗರ -6.05 ಸೆಂ.ಮೀ