Friday, November 7, 2025
Home Blog Page 1903

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಎಲ್‍ಇಟಿ ಉಗ್ರರು ಹತ್ಯೆ

ಶ್ರೀನಗರ, ಅ.10-ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಲಷ್ಕರ್-ಎ-ತೊಯ್ಬಾದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುಂಡಿನ ಚಕಮಕಿ ನಡೆದಿದೆ.

ಇದರಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದ್ದು ಕಾರ್ಯಾಚರಣೆ ಮುಂದುವರೆದಿದ್ದು ,ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ಬ್ಯಾಂಕ್ ಗಾರ್ಡ್ ಸಂಜಯ್ ಶರ್ಮಾನನ್ನು ಇದೇ ಎಲ್‍ಇಟಿ ಉಗ್ರರು ಹತ್ಯೆ ಮಾಡಿದ್ದರು ಎಂದು ಹೇಳಿದ್ದಾರೆ. ಹತರಾದ ಭಯೋತ್ಪಾದಕರನ್ನು ಮೋರಿಫತ್ ಮಕ್ಬೂಲ್ ಮತ್ತು ಜಾಜಿಮ್ ಫಾರೂಕ್ ಅಲಿಯಾಸ್ ಅಬ್ರಾರ್ ಎಂದು ಗುರುತಿಸಲಾಗಿದೆ.

ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾಶ್ಮೀರ ವಲಯ) ವಿಜಯ್ ಕುಮಾರ್ ತಿಳಿಸಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (10-10-2023)

ನಿತ್ಯ ನೀತಿ: ನಮಗೆ ಕಷ್ಟ ಬಂದಾಗ ನಗುವವರು ಶತ್ರುಗಳು, ಧೈರ್ಯ ಹೇಳುವವರು ಬಂಧುಗಳು, ಕಣ್ಣೀರು ಒರೆಸುವವರು ಸ್ನೇಹಿತರು. ಆದರೆ ಯಾರಿಗೂ ಕಾಣದ ಹಾಗೆ ಮರೆಯಲ್ಲಿ ನಿಂತು ಕಣ್ಣೀರು ಹಾಕುವವರು ತಂದೆ-ತಾಯಿಗಳು.

ಪಂಚಾಂಗ ಮಂಗಳವಾರ / 10-10-2023 / ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಮಘ / ಯೋಗ: ಸಾಧ್ಯ / ಕರಣ: ಕೌಲವ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.04
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ಕುಟುಂಬದವರೊಂದಿಗೆ ಮಾತನಾಡು ವಾಗ ಬುದ್ಧಿವಂತಿಕೆಯಿಂದ ಪದ ಬಳಸಬೇಕು.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಮಿಥುನ: ವೃತ್ತಿ ಕ್ಷೇತ್ರದಲ್ಲಿ ಉತ್ತಮ ಬದಲಾವಣೆ ಗಳಾಗುತ್ತವೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕಟಕ: ಅತಿಥಿಗಳ ಆಗಮನ ದಿಂದಾಗಿ ಖರ್ಚು- ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಸಿಂಹ: ಕುಟುಂಬ ಸದಸ್ಯರೊಂದಿಗೆ ಹೊಂದಿಕೊಂಡು ಹೋಗಲು ಪ್ರಯತ್ನಿಸಿ.
ಕನ್ಯಾ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.

ತುಲಾ: ಕೆಲವರಿಗೆ ಪ್ರೇಮ ಸಂಬಂಧದಲ್ಲಿ ತೊಂದರೆಗಳು ಎದುರಾಗಬಹುದು.
ವೃಶ್ಚಿಕ: ದೈನಂದಿನ ಜೀವನ ದಲ್ಲಿ ಉತ್ಸಾಹ ಹೆಚ್ಚಾಗಲಿದೆ.
ಧನುಸ್ಸು: ಹಳೆ ಮಿತ್ರರನ್ನು ಭೇಟಿ ಮಾಡುವಿರಿ.

ಮಕರ: ಪ್ರೀತಿಪಾತ್ರರೊಂದಿಗೆ ಯಾವುದೇ ವಿವಾದದಲ್ಲಿ ಭಾಗಿಯಾಗದಿರುವುದು ಒಳಿತು.
ಕುಂಭ: ಆಸ್ತಿ, ಅಪಾರ್ಟ್‍ಮೆಂಟ್ ಖರೀದಿಯಲ್ಲಿ ಅಧಿಕ ಹಣ ಹೂಡಿಕೆ ಮಾಡುವಿರಿ.
ಮೀನ: ಹಣದ ವಿಷಯದಲ್ಲಿ ಸ್ವಲ್ಪ ಜಾಗರೂಕರಾ ಗಿರಿ. ಪೋಷಕರ ಆರೋಗ್ಯದ ಬಗ್ಗೆ ಗಮನ ಹರಿಸಿ.

ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ

ಬೆಂಗಳೂರು, ಅ.9- ಕಬ್ಬಿಣದ ರಾಡಿನಿಂದ ಮನೆಯ ಡೋರ್ ಲಾಕ್ ಒಡೆದು ಒಳನುಗ್ಗಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ನೇಪಾಳಿಗರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 10.3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳು ನಗರದಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ಹೆಸರಘಟ್ಟ, ದಾಸೇನಹಳ್ಳಿ ಕ್ರಾಸ್‍ನ ನಿವಾಸಿಯೊಬ್ಬರು ಜು.16 ಮತ್ತು 17ರಂದು ತಮ್ಮ ಸ್ವಂತ ಊರಿಗೆ ಹೋಗಿದ್ದು, ವಾಪಸ್ಸು ಬಂದು ನೋಡಿದಾಗ ಮನೆಯ ಡೋರ್ ಲಾಕ್ ಮುರಿದು ಯಾರೋ ಕಳ್ಳರು, ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಹಣ ಕಳ್ಳತನ ಮಾಡಿರುವುದು ಕಂಡುಬಂದಿದೆ.

ಈ ಬಗ್ಗೆ ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಇಂತಹ ಕೃತ್ಯವೆಸಗಿರುವುದು ಗೊತ್ತಾಗಿದೆ.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸುಮಾರು 10.3 ಲಕ್ಷ ರೂ. ಬೆಲೆ ಬಾಳುವ 121.5 ಗ್ರಾಂ ಚಿನ್ನಾಭರಣ,
3.192 ಕೆ.ಜಿ. ಬೆಳ್ಳಿ ವಸ್ತುಗಳು, 2,020 ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಆಕ್ಟಿವಾ ಬೈಕ್, ಒಂದು ಕಬ್ಬಿಣದ ರಾಡ್, ಒಂದು ಸ್ಕ್ರೂ ಡ್ರೈವರ್‍ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿಗಳು ಮೂಲತಃ ನೇಪಾಳ ದೇಶದವರಾಗಿದ್ದು, ಪ್ರಕರಣದ ಮೊದಲನೇ ಆರೋಪಿಯು ಕೆಲವು ವರ್ಷಗಳ ಹಿಂದೆ ಮುಂಬೈಗೆ ಬಂದು ಹೋಟೆಲ್ ಕೆಲಸ ಮಾಡಿಕೊಂಡಿದ್ದನು. ಈತ ಮುಂಬೈನಲ್ಲಿದ್ದಾಗ 5 ಕನ್ನಾ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುವುದು ಗೊತ್ತಾಗಿದೆ.

ಈತ ಮತ್ತೊಬ್ಬನ ಸಹಾಯದಿಂದ ಬೆಂಗಳೂರಿಗೆ ಒಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, 2023ನೇ ಸಾಲಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಾ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
2ನೇ ಆರೋಪಿಯು 4-5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿರುತ್ತಾನೆ. ಈ ಇಬ್ಬರು ಆರೋಪಿಗಳು ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಇಂತಹ ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.

ಆರೋಪಿಗಳ ಬಂಧನದಿಂದ ಪೀಣ್ಯ ಪೊಲೀಸ್ ಠಾಣೆಯ ಒಂದು ಪ್ರಕರಣ, ಸೋಲದೇವನಹಳ್ಳಿ ಪೊಲೀಸ್ ಠಾಣೆಯ 5 ಹಗಲು ಮತ್ತು ರಾತ್ರಿ ಕನ್ನಾ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 6 ಪ್ರಕರಣಗಳು ಪತ್ತೆಯಾಗಿರುತ್ತವೆ.

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿರಿಕ್, ಕೊರಿಯರ್ ಬಾಯ್ ಕೊಲೆ

ಉತ್ತರ ವಿಭಾಗದ ಡಿಸಿಪಿ, ಸೈದುಲು ಅಡಾವತ್‍ರವರ ಮಾರ್ಗದರ್ಶನದಲ್ಲಿ ಎ.ಸಿ.ಪಿ. ಮೇರಿ ಶೈಲಜಾ, ಇನ್ಸಪೆಕ್ಟರ್ ಹರಿಯಪ್ಪ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಸಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ, ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

70ನೇ ಸಹಕಾರ ಸಪ್ತಾಹ ಸರಳ ಆಚರಣೆ : ಕೆ.ಎನ್.ರಾಜಣ್ಣ

ಬೆಂಗಳೂರು, ಅ.9- ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಇರುವುದರಿಂದ 70ನೆ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು. ಸಹಕಾರ ಸಪ್ತಾಹದ ಪೂರ್ವಸಿದ್ಧತಾ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿಯಿಂದಾಗಿ ಸಪ್ತಾಹವನ್ನು ಅದ್ಧೂರಿಯಾಗಿ ಆಚರಿಸಲಾಗದು.

ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯರನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲು ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಸಹಕಾರಿ ಸಪ್ತಾಹ ಆಚರಣೆ ಅಂಗವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಒಂದು ತಿಂಗಳಲ್ಲಿ ವರದಿ: ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರ ಹಾಗೂ ಠೇವಣಿದಾರರ ಹಿತ ಕಾಪಾಡುವ ಉದ್ದೇಶದಿಂದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿ ಇನ್ನೊಂದು ಇನ್ನೊಂದು ತಿಂಗಳಲ್ಲಿ ವರದಿ ಕೊಡಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ರಾಜಣ್ಣ ತಿಳಿಸಿದರು.

ಸಹಕಾರಿ ಸಂಸ್ಥೆಗಳಲ್ಲಿ ನಡೆದಿರುವ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ರೈತರ ಹಾಗೂ ಠೇವಣಿದಾರರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರಿಗೆ ಅನ್ಯಾಯ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬುದು ಸರ್ಕಾರದ ಉದ್ದೇಶ. ಬಹಳಷ್ಟು ಸಂಸ್ಥೆಗಳು ಒಳ್ಳೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸರ್ಕಾರಿ ವಲಯದಲ್ಲಿ ಡಿಜಿಟಲೀಕರಣ ಮಾಡುವುದರಿಂದ ಪಾರದರ್ಶಕತೆ ತರಬಹುದು, ದುರ್ಬಳಕೆ ತಡೆಯಬಹುದು. ಹೀಗಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇವೆ ಎಂದರು. ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಹಾಗೂ ಶಾಸಕ ಜಿ.ಟಿ.ದೇವೇಗೌಡರು ಮಾತನಾಡಿ, ನವೆಂಬರ್ 14 ರಿಂದ 20ರ ವರೆಗೆ 70ನೆ ಅಖಿಲ ಭಾರತ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು.

ಸಪ್ತಾಹದ ಮುಖ್ಯ ಧ್ಯೇಯ 5 ಟ್ರಿಲಿಯನ್ ಡಾಲರ್. ಆರ್ಥಿಕತೆ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಮತ್ತು ಸುಸ್ಥಿರ ಅಭಿವೃದ್ಧಿ ಗುರಿಗಳು ಎಂಬುದಾಗಿ ಘೋಷಿಸಲಾಗಿದೆ. ಪ್ರತಿದಿನವೂ ಒಂದೊಂದು ಶೀರ್ಷಿಕೆಯಡಿ ಏಳು ದಿನವೂ ರಾಜ್ಯದ ವಿವಿಧೆಡೆ ಸಪ್ತಾಹ ಆಚರಿಸಲಾಗುವುದು. ನವೆಂಬರ್ 14ರಂದು ಸಹಕಾರ ಸಂಘಸಂಸ್ಥೆಗಳಲ್ಲಿನ ಇತ್ತೀಚಿನ ಬೆಳವಣಿಗೆಗಳು, ನವೆಂಬರ್ 15ರಂದು ಸಾಲೇತರ ಸಹಕಾರ ಸಂಘಗಳ ಪುನಶ್ಚೇತನ ಹಾಗೂ ಆರ್ಥಿಕ ಸೇರ್ಪಡೆ, ನ.16ರಂದು ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಮತ್ತು ಉನ್ನತೀಕರಣ ವಿಚಾರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಟಾಸ್ ಗೆದ್ದು ಬ್ಯಾಟ್ ಮಾಡಿದ್ದೇ ಆಸ್ಟ್ರೇಲಿಯಾ ಸೋಲಿಗೆ ಕಾರಣ

ನ.17ರಂದು ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳು, ನ.18ರಂದು ಸಾರ್ವಜನಿಕ-ಖಾಸಗಿ-ಸಹಕಾರಿ ಸಹಭಾಗಿತ್ವವನ್ನು ಬಲಪಡಿಸುವುದು, ನ.19ರಂದು ಮಹಿಳೆಯರು, ಯುವಜನ ಮತ್ತು ಅಬಲ ವರ್ಗಕ್ಕೆ ಸಹಕಾರ ಸಂಸ್ಥೆಗಳು, ನ.20ರಂದು ಸಹಕಾರ ಶಿಕ್ಷಣ ಮತ್ತು ತರಬೇತಿಯ ಪರಿಷ್ಕರಣೆ ಶೀರ್ಷಿಕೆಯಡಿ ಕಾರ್ಯಕ್ರಮ ನಡೆಯಲಿದೆ ಎಂದರು.

ಸಹಕಾರ ಸಪ್ತಾಹದಲ್ಲಿ ಎಲ್ಲ ಸಹಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು. ಸಹಕಾರ ಸಪ್ತಾಹದ ಉದ್ಘಾಟನೆ, ಸಮಾರೋಪ ಹಾಗೂ ವಿವಿಧ ಕಾರ್ಯಕ್ರಮಗಳ ಸ್ಥಳವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ತಿಳಿಸಿದರು.

ತುರ್ತು ಸೇವೆಗಾಗಿ ಗೋಲ್ಡನ್ ಅವರ್ ಕ್ಯೂ ಆರ್ ಕೋಡ್ ಅಳವಡಿಕೆ

ಬೆಂಗಳೂರು, ಸೆ.9- ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದ್ದು ವಾಹನ ಸವಾರರು ಹಾಗೂ ಪ್ರಯಾಣಿಕರು ಹೈರಾಣರಾಗಿದ್ದು ತುರ್ತು ಸಂದರ್ಭದಲ್ಲಿ ಜೀವರಕ್ಷಣೆ ಪ್ರಮುಖವಾಗಿದ್ದು ಈ ನಿಟ್ಟಿನಲ್ಲಿ ನಗರ ಪ್ರಮುಖ ವೃತ್ತಗಳಲ್ಲಿ ಗೋಲ್ಡನ್ ಅವರ್ ಕ್ಯೂಆರ್ ಕೂಡ್ ಅಳವಡಿಸಲಾಗಿದೆ.

ನಗರ ಸಂಚಾರಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿಂದು ಸಂಚಾರಿ ಪೊಲೀಸರಿಗೆ ಹಮ್ಮಿಕೊಂಡಿದ್ದ ಹೃದಯ ಹಾಗೂ ಶ್ವಾಸ ಕೋಶಕ್ಕೆ ಸಂಬಂಧಿಸಿದ (ಸಿಪಿಆರ್) ತರಬೇತಿ ಕಾರ್ಯಕ್ರಮದಲ್ಲಿ ನೂತನ ಈ ಕ್ಯೂಆರ್ ಕೂಡ್‍ಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾದ ಎಂ.ಎನ್.ಅನುಚೇತ್ ಚಾಲನೆ ನೀಡಿದರು.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಕೆಲಸದ ಒತ್ತಡ ಹಾಗೂ ಜಂಜಾಟದಲ್ಲಿ ನಗರ ನಿವಾಸಿಗಳಿದ್ದು ಬಹುತೇಕ ಸಮಯ ನಗರದ ರಸ್ತೆಗಳಲ್ಲಿ ಕಾಲ ಕಳೆಯುವಂತಾಗಿದೆ ಈ ವೇಳೆ ಪ್ರತಿಯೊಬ್ಬರಿಗೂ ಆತುರವಿರುತ್ತದೆ ಇಂತಹ ಸಂದರ್ಭದಲ್ಲಿ ಹೃದಯ ಸಮಸ್ಥೆ, ಅಪಘಾತದಂತಹ ತುರ್ತು ಸಂದರ್ಭದಲ್ಲಿ ಶೀಘ್ರ ಆಸ್ಪತ್ರೆ ತಲುಪುವುದು ಸವಾಲಾಗಿದ್ದು , ಈ ನಿಟ್ಟಿನಲ್ಲಿ ನಗರದ 40 ಕಡೆ ಹೃದಯಾಕಾರವಾಗಿ ಕ್ಯೂ ಆರ್ ಕೋಟ್ ಸ್ಕ್ಯಾನಿಂಗ್ ಅಳವಡಿಸಲಾಗಿದೆ. ಇಲ್ಲಿ ತಮ್ಮ ಮೊಬೈಲ್‍ಗಳ ಮೂಲಕ ಕೂಡ್ ಅನ್ನು ಸ್ಕ್ಯಾನ್ ಮಾಡಿದರೆ ತಕ್ಷಣ ಸ್ಥಳಕ್ಕೆ ಆಂಬುಲೆನ್ಸ್ ಬರಲಿದೆ ಇದರಿಂದ ಅಮೂಲ್ಯ ಜೀವ ರಕ್ಷಣೆಗೆ ಸಹಾಯವಾಗಲಿದೆ ಎಂದು ಅವರು ಹೇಳಿದರು.

ಮಣಿಪಾಲ್ ಆಸ್ಪತ್ರೆಯ ಸಹಯೋಹದೊಂದಿಗೆ ಸಂಚಾರಿ ಪೊಲೀಸರು ಈ ನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು ತುರ್ತು ಸಂದರ್ಭದಲ್ಲಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಚಾರಿ ಪೊಲೀಸರು ಪಾಲೀಸಬೇಕಾದ ಮುಂಜಾಗೃತ ಕ್ರಮಗಳ ಕುರಿತು ವೈದ್ಯರು ತರಬೇತಿ ನೀಡಿದರು.

ಕೋವಿಡ್ ಹಗರಣದ ಬೆನ್ನುಬಿದ್ದ ಕುನ್ಹಾ

ಬೆಂಗಳೂರು,ಅ.9- ಬಿಜೆಪಿ ಸರ್ಕಾರ ಅವಧಿಯ ಮತ್ತೊಂದು ಹಗರಣದ ಬೆನ್ನು ಬಿದ್ದಿದೆ ಕಾಂಗ್ರೆಸ್ ಸರ್ಕಾರ. ಕೊರೊನಾ ಟೈಮ್ ನಲ್ಲಿ ನೂರಾರೂ ಕೋಟಿ ಹಗರಣವಾಗಿದೆ ಅಂತ ದೂರು ಬಂದ ಹಿನ್ನೇಲೆಯಲ್ಲಿ ಹಗರಣದ ತನಿಖೆ ನಡೆಸಲಾಗುತ್ತಿದೆ. ಹಗರಣದಲ್ಲಿ ಮಾಜಿ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಅರೋಪ ಕೇಳಿಬಂದಿರುವುದರಿಂದ ತನಿಖಾ ಸಮಿತಿ ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ವಿಚಾರಣೆ ತೀವ್ರಗೊಳಿಸಿದ್ದಾರೆ.

ಸಮಿತಿ ಅಧ್ಯಕ್ಷ ನಿವೃತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ಹಗರಣದ ಇಂಚಿಂಚು ಮಾಹಿತಿ ಸಂಗ್ರಹ ಮಾಡುತ್ತಿರುವುದರಿಂದ ತಪ್ಪಿತಸ್ಥರಲ್ಲಿ ನಡುಕ ಆರಂಭವಾಗಿದೆ. ಕಳೆದ ಮೂರು ದಿನಗಳಿಂದ ಪಾಲಿಕೆ ಅಯುಕ್ತರ ವಿಚಾರಣೆ ನಡೆಸ್ತಿರೋ ತನಿಖಾ ಸಮಿತಿ ಕೋವಿಡ್ ಟೈಮ್ ನಲ್ಲಿ ಬಿಬಿಎಂಪಿ ಮಾಡಿರುವ ಖರ್ಚು, ವೆಚ್ಚಗಳ ಬಗ್ಗೆ ದಾಖಲೆ ನೀಡುವಂತೆ ಸೂಚನೆ ನೀಡಿದೆ. 2019 ರಿಂದ 2022 ರವೆಗೆ ಪಾಲಿಕೆಯಲ್ಲಿ ಖರ್ಚು ಮಾಡಿರೋ ಪೈಲ್ ಗಳನ್ನೂ ನೀಡುವಂತೆಯೂ ಆದೇಶಿಸಿದ್ದಾರೆ.

ಬ್ರಾಂಡ್ ಬೆಂಗಳೂರಿಗೆ ಸಾರ್ವಜನಿಕ ಸಹಭಾಗಿತ್ವಕ್ಕಾಗಿ ಮಹತ್ವದ ಸುಧಾರಣೆಗಳ ಜಾರಿ : ಡಿಸಿಎಂ

ಈ ಅದೇಶದ ಹಿನ್ನೆಲೆಯಲ್ಲಿ ದಾಖಲೆಗಳ ಪಟ್ಟಿ ಮಾಡಿ ತನಿಖಾ ಸಂಸ್ಥೆಗೆ ಬಿಬಿಎಂಪಿ ಅರೋಗ್ಯ ಇಲಾಖೆ ಅಧಿಕಾರಿಗಳು ಹಸ್ತಾಂತರ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಪಾಲಿಕೆ ಅಯುಕ್ತರಿಗೆ ಸಮಿತಿ ಅಧ್ಯಕ್ಷರಿಂದ ಪ್ರಶ್ನೇಗಳ ಸುರಿಮಳೆ ಸುರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

2019 ರಿಂದ 2022 ರವರೆಗೆ ಕೋವಿಡ್ ಟೈಮ್ ನಲ್ಲಿ ಪಾಲಿಕೆಯಿಂದ ಎಷ್ಟು ಖರ್ಚು ಮಾಡಲಾಗಿದೆ, ಯಾವ,ಯಾವ ಕೋವಿಡ್ ಉಪಕರಣಗಳನ್ನೂ ಪರ್ಚೆಸ್ ಮಾಡಿದಿರಿ, ಅದಕ್ಕೆ ಸಂಬಂಧಿಸಿದ ಬಿಲ್ ಗಳನ್ನೂ ಸಲ್ಲಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಎಷ್ಟು ಅಂಬುಲೆನ್ಸ್ ಗಳನ್ನೂ ಬಾಡಿಗೆಗೆ ಪಡೆದಿದ್ರಿ,ಅವುಗಳ ಲಾಗ್ ಬುಕ್ ಹಾಗೂ ಬಾಡಿಗೆ ನೀಡಿರೋ ದಾಖಲೆ ನೀಡಿ.

ಸ್ಯಾನಿಟೈಸರ್ , ಮಾಸ್ಕ್, ಸಿಲಿಂಡರ್, ಹಾಸಿಗೆ, ಸೇರಿದಂತೆ ಇತರೆ ವಸ್ತುಗಳ ಖರೀದಿ ಬಿಲ್ ಗಳನ್ನೂ ನೀಡಿ, ಕೋವಿಡ್ ಟೈಮ್ ನಲ್ಲಿ ಅಸ್ಪತ್ರೆಗಳಿಗೆ , ಕೋವಿಡ್ ವಾರಿಯರ್ಸ್ ಗಳಿಗೆ ಹಾಗೂ ಅನಾಥರಿಗೆ ನೀಡಿದ ಊಟದ ಲೆಕ್ಕ ನೀಡಿ, ಇನ್ನೂ ಕೋರೋನಾ ಸೊಂಕಿತರಿಗೆ ಖಾಸಗಿ ಅಸ್ಪತ್ರೆಯಲ್ಲಿ ಎಷ್ಟು ಜನಕ್ಕೆ ಚಿಕಿತ್ಸೆ ನೀಡಿದ್ದೀರಾ ಹಾಗೂ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ಮಾಹಿತಿ ಕೇಳಲಾಗಿದೆಯಂತೆ.

BIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

ಇದರ ಜತೆಗೆ ಖಾಸಗಿ ಅಸ್ಪತ್ರೆಗೆ ನೀಡಿರೋ ಬಿಲ್ ಗಳ ದಾಖಲೆ ನೀಡಿ,,ಹೀಗೆ ಹತ್ತು ಹಲವು ಪ್ರಶ್ನೇಗಳನ್ನೂ ಕೇಳಿ, ಒಂದು ವಾರದೋಳಗೆ ಕೇಳಿರೋ ಎಲ್ಲಾ ದಾಖಲೆಗಳನ್ನೂ ನೀಡುವಂತೆ ಸೂಚನೆ ನೀಡಿರುವುದರಿಂದ ಪಾಲಿಕೆ ಅರೋಗ್ಯ ಅಧಿಕಾರಿಗಳು ಬಿಲ್‍ಗಳ ಹುಡುಕಾಟ ನಡೆಸಿ ಹಲವು ಬಿಲ್ ಗಳ ಪಟ್ಟಿ ರೆಡಿ ಮಾಡಿದ್ದಾರಂತೆ.

ರಾಜ್ಯ ಸರ್ಕಾರ ತನ್ನ ವೈಫಲ್ಯತೆಯನ್ನು ಪ್ರಧಾನಿ ಮೇಲೆ ಹೇರುತ್ತಿದೆ : ಸುಮಲತಾ

ಬೆಂಗಳೂರು,ಅ.9- ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಪಟ್ಟಂತೆ ವಾಸ್ತವ ಪರಿಸ್ಥಿತಿಯನ್ನು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲಶಕ್ತಿ ಸಚಿವರಿಗೆ ವಿವರಿಸಿರುವುದಾಗಿ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಧ್ಯಪ್ರವೇಶ ಮಾಡಬೇಕು ಎಂಬುದು ರಾಜ್ಯಸರ್ಕಾರದ ಅಸಹಾಯಕತೆಯ ವಾದ. ಇವರ ವೈಫಲ್ಯವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನೀರು ನಿರ್ವಹಣಾ ಪ್ರಾಧಿಕಾರ ಆದೇಶಗಳೇ ಅಂತಿಮ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹೀಗಿರುವಾಗ ಪ್ರಧಾನಮಂತ್ರಿಯವರು ಮಧ್ಯಪ್ರವೇಶ ಮಾಡಲು ಹೇಗೆ ಸಾಧ್ಯ. ದೇಶದ ಪ್ರಧಾನಿಯವರು ಯಾವುದೋ ಒಂದು ರಾಜ್ಯದ ಪರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ಹಿಂದೆ ತಾವು ಪ್ರಧಾನಮಂತ್ರಿ ಮತ್ತು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ವಾಸ್ತವ ಪರಿಸ್ಥಿತಿಯನ್ನು ವಿವರಿಸಿದ್ದೆ. ಆ ವೇಳೆ ಅವರು ತಮಿಳುನಾಡು ಮತ್ತು ಕರ್ನಾಟಕ ರಾಜ್ಯದಲ್ಲಿ ಅಧಿಕಾರದಲ್ಲಿರುವ ಎರಡೂ ಪಕ್ಷಗಳ ನಡುವೆ ಉತ್ತಮ ರಾಜಕೀಯ ಹೊಂದಾಣಿಕೆ ಇದೆ. ಹೀಗಾಗಿ ಅವರು ಕುಳಿತು ಮಾತುಕತೆ ನಡೆಸಿ ಸೌಹಾರ್ದಯುತ ಪರಿಹಾರ ತೆಗೆದುಕೊಳ್ಳುವುದಾದರೆ ನಮ್ಮ ಅಭ್ಯಂತರ ಇಲ್ಲ. ಆದರೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯಸರ್ಕಾರ ತಮಿಳುನಾಡಿನ ಜೊತೆ ಮಾತುಕತೆಗೆ ಮುಂದಾಗಬೇಕು ಎಂದರು.

BIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ ನಾಳೆ ನಡೆಯಲಿದೆ. ಅಲ್ಲಿ ನೀರು ಬಿಡಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಸಹಜವಾಗಿಯೇ ನೀರು ಬಿಡಿ ಎಂದೇ ಆದೇಶ ಬರುತ್ತದೆ. ರಾಜ್ಯಸರ್ಕಾರ ವಾಸ್ತವಾಂಶಗಳನ್ನು ಪ್ರಬಲವಾಗಿ ಮನವರಿಕೆ ಮಾಡಿಕೊಡುವ ವಾದ ಮಂಡಿಸುವಲ್ಲಿ ವೈಫಲ್ಯ ಅನುಭವಿಸಿವೆ. ಮೊದಲು ಎಲ್ಲಿ ಲೋಪಗಳಾಗಿವೆ ಎಂಬುದನ್ನು ಗುರುತಿಸಿ ಸರಿಪಡಿಸಬೇಕಿದೆ ಎಂದರು.

ಕಾವೇರಿ ವಿಷಯದಲ್ಲಿ ವಿಧಾನಸಭೆ ಅಧಿವೇಶನ ಕರೆದು ನಿರ್ಣಯ ಕೈಗೊಳ್ಳಬೇಕೆಂಬ ದೊಡ್ಡ ದೊಡ್ಡ ವಿಚಾರಗಳ ಬಗ್ಗೆ ತಾವು ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದರು.

ಬಿಜೆಪಿ, ಜೆಡಿಎಸ್ ಮೈತ್ರಿಯ ಬಗ್ಗೆ ತಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಬಿಜೆಪಿ ಪಕ್ಷದಿಂದ ಮೈತ್ರಿಯ ಬಗ್ಗೆ ಈವರೆಗೂ ಅಧಿಕೃತವಾಗಿ ನನಗೆ ಯಾವುದೇ ಮಾಹಿತಿ ಬಂದಿಲ್ಲ. ಯಾವ ಕಾರಣಕ್ಕೆ ಮೈತ್ರಿಯಾಗಿದೆ ಎಂಬುದು ತಮಗೆ ಗೊತ್ತಿಲ್ಲ. ಮೈತ್ರಿ ಬಳಿಕ ಸ್ಪರ್ಧೆಯ ಕುರಿತು ನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ಯಾವುದೇ ಆತುರವಿಲ್ಲ ಎಂದರು.

ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ

ಬೆಂಗಳೂರು, ಮೈಸೂರು ಎಕ್ಸ್‍ಪ್ರೆಸ್ ಹೆದ್ದಾರಿಯ ಮಾರ್ಗಗಳ ಮಧ್ಯೆ ವಿವಿಧ ನಗರಗಳನ್ನು ಸಂಪರ್ಕಿಸುವ ತಾತ್ಕಾಲಿಕ ದ್ವಾರಗಳನ್ನು ಬಂದ್ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಂಸದರು ಈ ಮೊದಲೇ ಹೇಳಿದಂತೆ ಹೆದ್ದಾರಿ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ತಾತ್ಕಾಲಿಕವಾಗಿ ಮಾತ್ರ ನಿರ್ಮಿಸಲಾಗಿತ್ತು. ಈಗ ಅವನ್ನು ಬಂದ್ ಮಾಡುವುದರಿಂದ ಹೆಚ್ಚಿನ ಪರಿಣಾಮ ಏನೂ ಆಗುವುದಿಲ್ಲ. ಹೆದ್ದಾರಿ ಸಮಸ್ಯೆ ಕುರಿತಂತೆ ತಾವು ಅಧಿಕಾರಿಗಳ ಜೊತೆ ಚರ್ಚಿಸಿ ಸರಿಪಡಿಸುವುದಾಗಿ ಹೇಳಿದರು.

ಮತ್ತೊಂದು ಪಟಾಕಿ ಘಟಕದಲ್ಲಿ ಬೆಂಕಿ ಅವಘಡ, 9 ಮಂದಿ ಬಲಿ

ಅರಿಯಲೂರು ಅ.9-ಪಟಾಕಿ ತಯಾರಿಕ ಘಟಕದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿರುವ ಘಟನೆ ವೀರಗಳೂರು ಗ್ರಾಮದಲ್ಲಿ ನಡೆದಿದೆ.ಗಾಯಗೊಂಡಿರುವ 14ರಲ್ಲಿ ಐವರನ್ನು ತಂಜಾವೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು ಪಟಾಕಿ ತಯಾರಿಕ ಘಟಕ,ಹಾಗು ಗೋದಾನಿನಲ್ಲಿ ಶೇಕರಿಸಿದ್ದ ಅಪಾರ ಪ್ರಮಾಣದ ರಾಸಾಯಿನಿಕ ವಸ್ತು ಹಾಗು ಪಟಾಕಿಗಳು ಬೆಂಕಿಗಾಹುತಿಯಾಗಿದೆ.

ದಟ್ಟ ಹೊಗೆ ಆವರಿಸಿ ಸ್ತಳೀತರನ್ನು ಬೆಚ್ಚಿಬೀಳಿಸಿದೆ.ಪಟಾಕಿಗಳನ್ನು ಸರಿಯಾಗಿ ಶೇಕರಿಸದೆ ಇದ್ದದ್ದರಿಂದ ಬಿಸಿ ಹವೆಗೆ ರಾಸಾಯನಿಕ ಪ್ರಕ್ರಿಯೆ ಉಂಟಾಗಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಎನ್ನಲಾಗಿದೆ.ಮೃತರ ದೇಹಗಳು ಗುರುತು ಸಿಗದಷ್ಟು ಸುಟ್ಟುಹೋಗಿದೆ.ಹಲವು ವಾಹನಗಳು ಕೂಡ ಹಾನಿಯಾಗಿವೆ .

ಟಾಸ್ ಗೆದ್ದು ಬ್ಯಾಟ್ ಮಾಡಿದ್ದೇ ಆಸ್ಟ್ರೇಲಿಯಾ ಸೋಲಿಗೆ ಕಾರಣ

ಜಿಲ್ಲಾಕಾರಿ ಮೇರಿ ವರ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. 7 ಅಗ್ನಿಶಾಮಕ ವಾಹನಗಳು ಆಗಮಿಸಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮೃತರಿಗೆ ಸಂತಾಪ ಸೂಚಿಸಿ ,ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂ,ಗಂಭೀರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ. ಹಾಗೂ ಸರಳವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದರು.

ರಕ್ಷಣಾ ಮತ್ತು ಪರಿಹಾರ ಚಟುವಟಿಕೆಗಳನ್ನು ತ್ವರಿತಗೊಳಿಸಲು ತನ್ನ ಸಂಪುಟದ ಸಹೋದ್ಯೋಗಿಗಳಾದ ಎಸ್ ಎಸ್ ಶಿವಶಂಕರ್ ಮತ್ತು ಸಿವಿ ಗಣೇಶನ್ ಅವರನ್ನು ನಿಯೋಜಿಸಿರುವುದಾಗಿ ಸ್ಟಾಲಿನ್ ಹೇಳಿದ್ದಾರೆ.

ಇನ್ನೊಂದು ವಾರದಲ್ಲಿ ಬರ ಅಧ್ಯಯನ ವರದಿ ಕೇಂದ್ರಕ್ಕೆ ಸಲ್ಲಿಕೆ

ಬೆಂಗಳೂರು, ಅ.9- ರಾಜ್ಯದ ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಕೇಂದ್ರ ಅಧ್ಯಯನ ತಂಡವು ಕೇಂದ್ರ ಸರ್ಕಾರಕ್ಕೆ ಇನ್ನೊಂದು ವಾರದಲ್ಲಿ ಬರ ಅಧ್ಯಯನ ಕುರಿತ ವರದಿ ಸಲ್ಲಿಸುವುದಾಗಿ ಹೇಳಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಬರ ಅಧ್ಯಯನ ತಂಡಗಳೊಂದಿಗೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಷ್ಟು ಪರಿಹಾರ ಕೊಡುತ್ತಾರೆ ಎಂಬುದನ್ನು ನೋಡಬೇಕು ಎಂದರು.

ಕೇಂದ್ರದ ಮೂರು ತಂಡಗಳು ರಾಜ್ಯದ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ ಕುಡಿಯುವ ನೀರು, ಮೇವು, ಬೆಳೆ ಪರಿಸ್ಥಿತಿ ಅವಲೋಕನ ಮಾಡಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ 4800 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದರು.ಕೇಂದ್ರ ಕೃಷಿ ಇಲಾಖೆ ಕಾರ್ಯದರ್ಶಿಗೆ ಅಧ್ಯಯನ ತಂಡ ವರದಿ ಸಲ್ಲಿಸಿದರೆ, ನಂತರ ಕೇಂದ್ರ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬಹುದು. ಕೇಂದ್ರ ಗೃಹ ಮತ್ತು ಕೃಷಿ ಸಚಿವರ ಭೇಟಿಗೆ ಸಮಯ ಕೇಳಿ ಪತ್ರ ಬರೆಯುತ್ತೇವೆ. ಸಮಯ ನೀಡಿದರೆ ಸಂಪುಟ ಉಪ ಸಮಿತಿಯ ಸದಸ್ಯರು ಭೇಟಿ ರಾಜ್ಯದ ಎದುರಿಸುತ್ತಿರುವ ಬರದ ಸಮಸ್ಯೆ ಮನವರಿಕೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

BIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಮನವಿಯನ್ನು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾವು.ಬಳಿಕ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದ್ದೆವು, ಸಿಕ್ಕಿಲ್ಲ ಎಂದರು. ಮನವಿ ಸಲ್ಲಿಕೆ ನಂತರ ಕೇಂದ್ರ ತಂಡ ರಾಜ್ಯಕ್ಕೆ ಆಗಮಿಸಿ ಪರಿಶೀಲಿಸಿದೆ. ಮನವಿ ವಸ್ತು ಸ್ಥಿತಿಯಿಂದ ಕೂಡಿದ್ದು, ಸಾಕಷ್ಟು ರೈತರಿಗೆ ಬೆಳೆ ಹಾನಿಯಿಂದ ತೊಂದರೆ ಆಗಿದೆ.

ಹಿಂಗಾರು ಮಳೆ ತೊಂದರೆ ಆಗಬಹುದು, ಕುಡಿಯುವ ನೀರಿಗೂ ತೊಂದರೆ ಆಗಬಹುದು ಎಂದು ಹೇಳಿದ್ದಾರೆ. ಸಣ್ಣ ಮತ್ತು ಅತಿ ಸಣ್ಣ ರೈತರ ಅಂಕಿ- ಅಂಶ ಕೇಳಿದ್ದು, ಅದನ್ನು ಒದಗಿಸಿಕೊಡುತ್ತೇವೆ. ವಾರದ ಒಳಗಡೆ ಕೇಂದ್ರಕ್ಕೆ ವರದಿ ಸಲ್ಲಿಕೆ ಮಾಡುವುದಾಗಿ ಹೇಳಿದ್ದಾರೆ ಎಂದರು.

ಈಗ ವಿಚಿತ್ರ ಹವಾಮಾನ ಪರಿಸ್ಥಿತಿ ಇದೆ. ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಮಳೆ ಸ್ಥಿತಿಗತಿಗಳ ಬಗ್ಗೆ ಸ್ಪಷ್ಟತೆ ಇಲ್ಲದ ವಾತಾವರಣ ಇದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತ್ರಿಯಲ್ಲಿ ಕೂಲಿ ಪಾವತಿ ಆಗಿಲ್ಲ 475 ಕೋಟಿ ರೂ. ತಕ್ಷಣ ಬಿಡುಗಡೆ ಮಾಡಬೇಕು.ಕೂಲಿ ಹಣ ಬಾಕಿಯಿಂದ ಬಡವರು ಮತ್ತಷ್ಟು ಸಂಕಷ್ಟದಲ್ಲಿದ್ದಾರೆ ಎಂದರು.

ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ

ಫಸಲು ಭೀಮಾ ಯೋಜನೆ ರೈತರಿಗೆ ಪರಿಣಾಮಕಾರಿ ಅನುಕೂಲ ಆಗುತ್ತಿಲ್ಲ. ಇದನ್ನು ಕೇಂದ್ರದ ಅಧಿಕಾರಿಗಳ ಗಮನಕ್ಕೆ ತರುವಂತೆ ಹೇಳಿದ್ದೇವೆ. ಪರಿಹಾರದ ಬಗ್ಗೆ ನಾವು ಒತ್ತಡ ಹಾಕಬಹುದು, ಆದರೆ ಅಂತಿಮ ನಿರ್ಧಾರ ಅವರದ್ದೇ ಎಂದು ಸಚಿವರು ತಿಳಿಸಿದರು.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಬೆಂಗಳೂರು, ಅ.9- ಆಸ್ಟ್ರೇಲಿಯಾ ವಿರುದ್ಧ ನಡೆದ 2023ರ ವಿಶ್ವಕಪ್ ಕ್ರಿಕೆಟ್‍ನ ಆರಂಭಿಕ ಪಂದ್ಯದಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಯುವ ಸ್ಟಾರ್ ಆಟಗಾರ ಶುಭಮನ್ ಗಿಲ್ ಅವರು ಆಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಿಂದಲೂ ಬಹುತೇಕ ಹೊರಗುಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಯ್ಕೆ ಮಂಡಳಿಯು ಡೆಂಗ್ಯು ಜ್ವರದಿಂದ ಬಳಲುತ್ತಿರುವ ಶುಭಮನ್ ಗಿಲ್ ಬದಲಿಗೆ ಇಶಾನ್ ಕಿಶನ್‍ಗೆ ಸ್ಥಾನ ಕಲ್ಪಿಸಿದ್ದರು. ಆದರೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವಲ್ಲಿ ಎಡವಿದ ವ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ರನ್ ಖಾತೆ ತೆರೆಯದೆ ಆಸೀಸ್ ಅನುಭವಿ ವೇಗಿ ಮಿಚೆಲ್ ಸ್ಟಾರ್ಕ್‍ಗೆ ವಿಕೆಟ್ ಒಪ್ಪಿಸಿ ಇತಿಹಾಸ ಪುಟ ಸೇರಿಕೊಂಡರು.

BIG NEWS : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆ

ಆಫಾಘಾನಿಸ್ತಾನ ವಿರುದ್ಧ ಅಕ್ಟೋಬರ್ 11ರಂದು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಶಾನ್ ಕಿಶನ್ ಬದಲಿಗೆ ಸಿಡಿಲಮರಿ ಶುಭಮನ್ ಗಿಲ್ ಸ್ಥಾನ ಪಡೆಯುತ್ತಾರೆ ಎಂದು ಅಂದಾಜಿಸಲಾಗಿತ್ತಾದರೂ, ಗಿಲ್ ಟೀಮ್ ಇಂಡಿಯಾದ ಜೊತೆ ನವದೆಹಲಿಗೆ ಪ್ರಯಾಣ ಬೆಳೆಸುತ್ತಾರೆ ಆದರೆ ಪ್ಲೇಯಿಂಗ್ 11ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

`ಶುಭಮನ್ ಗಿಲ್ ಅವರು ಜ್ವರದಿಂದ ಚೇತರಿಕೆಯ ಹಾದಿಯಲ್ಲಿದ್ದು ಟೀಮ್ ಇಂಡಿಯಾ ಜೊತೆಗೆ ದೆಹಲಿ ಪ್ರಯಾಣ ಮಾಡುತ್ತಾರೆ. ಅವರು ಚಂಡೀಘಡದ ತಮ್ಮ ನಿವಾಸಕ್ಕೆ ಹೋಗಿ ವಿಶ್ರಾಂತಿ ಪಡೆಯಲು ಬಯಸದೆ ಭಾರತ ತಂಡದ ಜೊತೆಗೆ ಇರುತ್ತಾರೆ, ಆದರೆ ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಬಹುತೇಕ ಅಲಭ್ಯರಾಗಿದ್ದರೂ, ಅಕ್ಟೋಬರ್ 14ರಂದು ಸಂಪ್ರದಾಯಿಕ ವೈರಿ ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಿಂದ ತಂಡಕ್ಕೆ ಲಭ್ಯವಾಗಲಿದ್ದಾರೆ’ ಎಂದು ತಿಳಿದುಬಂದಿದೆ.