Home Blog Page 1908

ಪ್ಯಾಲೆಸ್ತೇನ್‍ನ ಉಗ್ರರ ನೆರವಿಗೆ ಬಂದ ಇರಾನ್ ಸೇನೆ

ಜೆರುಸಲೇಮ್, ಅ.8- ಮಧ್ಯಪ್ರಾಚ್ಯದ ರಾಷ್ಟ್ರಗಳಾದ ಇಸ್ರೇಲ್ ಮತ್ತು ಪ್ಯಾಲೆಸ್ತೇನ್‍ನ ಹಮಾಸ್ ಉಗ್ರರ ನಡುವೆ ಏರ್ಪಟ್ಟಿರುವ ಯುದ್ಧ ತೀವ್ರಗೊಂಡಿದ್ದು, ಸಾವಿನ ಸಂಖ್ಯೆ ಸಾವಿರ ದಾಟಿದೆ. ಜಗತ್ತಿನ ಅತ್ಯಂತ ಬಲಿಷ್ಠ ಹಾಗೂ ಚಾಣಾಕ್ಯ ಸೇನೆ ಹೊಂದಿರುವ ರಾಷ್ಟ್ರವೆಂದೇ ಬಿಂಬಿತವಾಗಿರುವ ಇಸ್ರೇಲ್‍ನ ಎಲ್ಲಾ ದಿಕ್ಕುಗಳಿಂದಲೂ ಸುತ್ತುವರಿದಿರುವ ಹಮಾಸ್ ಉಗ್ರರಿಗೆ ನೆರೆಯ ಇರಾನ್ ಸೇನೆ ನೆರವು ನೀಡಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದರ ನಡುವೆ ಇಸ್ರೇಲ್‍ನ ಕೆಲವು ಗ್ರಾಮಗಳನ್ನು ವಶಕ್ಕೆ ಪಡೆದಿರುವ ಉಗ್ರರು ಅಲ್ಲಿರುವ ನಿವಾಸಿಗಳನ್ನು ಒತ್ತೆಯಾಳಾಗಿಟ್ಟುಕೊಂಡಿದ್ದಾರೆ ಎಂದು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಇದರ ನಡುವೆ ಫ್ರಾನ್ಸ್, ರಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಇಸ್ರೇಲ್‍ಗೆ ಬೆಂಬಲ ಸೂಚಿಸಿ, ತಮ್ಮ ಶಸ್ತ್ರಾಸ್ತ್ರಗಳನ್ನು ಒದಗಿಸಿ ಉಗ್ರರನ್ನು ಸದೆಬಡೆಯಲು ಮುಂದಾಗಿವೆ.

ಇಸ್ರೇಲ್‍ನ ವಾಯುಪಡೆ ಪ್ರತಿದಾಳಿ ನಡೆಸಿದ್ದು, ಪ್ಯಾಲೆಸ್ತೇನ್‍ನ ಗಾಜಾಪಟ್ಟಿಯ ಬಳಿ ಸುಮಾರು 400 ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಸ್ರೇಲ್‍ನ ಹಲವು ವಸತಿ ಪ್ರದೇಶಗಳು ಉಗ್ರರ ರಾಕೆಟ್ ದಾಳಿಯಿಂದ ಹಾನಿಗೊಂಡಿದ್ದು, ಸುಮಾರು 600 ಜನ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ.

ಹೊಸ ಮದ್ಯದಂಗಡಿಗೆ ಅನುಮತಿ ನೀಡುವಂತೆ ಸಿಎಂ ಮೇಲೆ ಶಾಸಕರ ಒತ್ತಡ

ಕ್ಷಿಪಣಿ ದಾಳಿಗಳಿಂದ ಎರಡೂ ದೇಶಗಳ ಗಡಿಭಾಗದಲ್ಲಿ ಕಟ್ಟಡಗಳು ಧ್ವಂಸಗೊಂಡಿದ್ದು, ವಾಹನಗಳು ಹತ್ತಿ ಉರಿಯುತ್ತಿವೆ. ಜನರು ಭೀತಿಯಿಂದ ಬಂಕರ್‍ಗಳಲ್ಲಿ, ಕ್ಷಿಪಣಿ ನಿರೋಧಕ ಸ್ಥಳಗಳಲ್ಲಿ ಹಾಗೂ ಸುರಕ್ಷತಾ ನೆಲೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಇಸ್ರೇಲ್‍ಗೆ ಭೇಟಿ ನೀಡಿರುವ ಹಲವು ರಾಷ್ಟ್ರಗಳ ಪ್ರವಾಸಿಗರ ಸುರಕ್ಷತೆ ಕುರಿತು ಆಯಾ ದೇಶಗಳ ಕಾಳಜಿ ವ್ಯಕ್ತವಾಗಿದೆ. ಭಾರತದ ಬಾಲಿವುಡ್‍ನ ಕೆಲವು ನಟ, ನಟಿಯರು ಇಸ್ರೇಲ್‍ಗೆ ತೆರಳಿದ್ದಾರೆ, ಜೊತೆಗೆ ಔದ್ಯೋಗಿಕ ಉದ್ದೇಶಕ್ಕಾಗಿ ನೆಲೆಸಿರುವವರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆಗಳು ಚಾಲ್ತಿಯಲ್ಲಿವೆ.

ಸಂಪರ್ಕಕ್ಕೆ ಸಿಗದೇ ಇರುವವರ ಹುಡುಕಾಟಗಳು ಮುಂದುವರೆದಿವೆ ಎಂದು ಭಾರತದ ರಾಯಭಾರಿ ಕಚೇರಿ ಮೂಲಗಳು ಹೇಳಿವೆ. ಇಸ್ರೇಲ್ ಯುದ್ಧ ಘೋಷಣೆ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಹಲವು ದೇಶಗಳ ನಡುವೆ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ. ಅಮೆರಿಕಾ, ಕೆನಡಾ, ರಷ್ಯಾ, ಬ್ರಿಟನ್, ಆಸ್ಟ್ರೇಲಿಯಾದಂತ ರಾಷ್ಟ್ರಗಳು ಉಗ್ರರ ದಾಳಿಯನ್ನು ಖಂಡಿಸಿದರೆ, ಸೌದಿ ಅರೇಬಿಯಾ ಹಾಗೂ ಎಮಿರೆಕ್ಸ್ ರಾಷ್ಟ್ರಗಳು ಕಾದು ನೋಡುವ ತಂತ್ರಕ್ಕೆ ಶರಣಾಗಿವೆ.

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,000 ಕ್ಕೆ ಏರಿಕೆ

ಉಕ್ರೇನ್ ಯುದ್ಧದ ನಂತರ ಈಗ ಮತ್ತೆ ಮಧ್ಯಪ್ರಾಚ್ಯದಲ್ಲಿನ ಎರಡು ರಾಷ್ಟ್ರಗಳ ಸಂಘರ್ಷ ವಿಶ್ವದ ಮೇಲೆ ಯುದ್ಧದ ಕಾರ್ಮೋಡದ ಕರಿನೆರಳನ್ನು ಹೆಚ್ಚಿಸಿದೆ. ಇಸ್ರೇಲ್ ಸಂಘರ್ಷದಿಂದಾಗಿ ರಕ್ಷಣಾ ಸಾಮಗ್ರಿಗಳು, ಆಹಾರ ಹಾಗೂ ತಾಂತ್ರಿಕತೆ ಪೂರೈಕೆಯಲ್ಲಿ ವ್ಯತ್ಯಯವಾಗುವ ಆತಂಕವಿದ್ದರೆ, ಅರಬ್ ರಾಷ್ಟ್ರಗಳ ಮಧ್ಯಪ್ರವೇಶದಿಂದ ತೈಲ ಮಾರುಕಟ್ಟೆ ಏರಿಳಿತಗೊಳ್ಳುವ ನಿರೀಕ್ಷೆಯಿದೆ.

ಲೋಕಸಭೆ ಚುನಾವಣೆ : ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸದ್ಯದಲ್ಲೇ ಹೈಕಮಾಂಡ್‍ಗೆ ರವಾನೆ

ಬೆಂಗಳೂರು,ಅ.8- ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಚಿವರುಗಳ ನೇತೃತ್ವದ ವೀಕ್ಷಕರ ಸಮಿತಿ ಬಹುತೇಕ ಜಿಲ್ಲೆಗಳಲ್ಲಿ ಸಭೆ ನಡೆಸಿ ಅಭಿಪ್ರಾಯ ಕ್ರೂಢಿಕರಿಸಿದ್ದು, ಒಂದೆರಡು ವಾರಗಳಲ್ಲಿ ಕೆಪಿಸಿಸಿ ಸಮಗ್ರ ವರದಿಯನ್ನು ಕ್ರೂಢೀಕರಿಸಿ ಹೈಕಮಾಂಡ್‍ಗೆ ರವಾನಿಸುವ ನಿರೀಕ್ಷೆಗಳಿವೆ.

ಪ್ರತಿಯೊಂದು ಲೋಕಸಭಾ ಕ್ಷೇತ್ರಕ್ಕೂ ಸಚಿವರುಗಳ ತಂಡವನ್ನು ನಿಯೋಜಿಸಲಾಗಿದೆ. ಈಗಾಗಲೇ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವೀಕ್ಷಕರ ಸಭೆಗಳು ನಡೆದಿವೆ.

ಕೆಲವು ಜಿಲ್ಲೆಗಳಲ್ಲಿ ಆಕಾಂಕ್ಷಿಗಳು ಬಹಿರಂಗವಾಗಿ ಹಕ್ಕು ಪ್ರತಿಪಾದಿಸಿದ್ದಾರೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಂಭವನೀಯ ಆಕಾಂಕ್ಷಿಗಳ ಪಟ್ಟಿಯನ್ನು ಕೆಪಿಸಿಸಿಗೆ ರವಾನಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಮುಖ್ಯಮಂತ್ರಿಯವರಿಗೆ ಮತ್ತು ಅಧ್ಯಕ್ಷರಿಗೆ ಬಿಡಲಾಗಿದೆ. ವಿಧಾನಸಭಾ ಚುನಾವಣಾ ಮಾದರಿಯಲ್ಲೇ ಲೋಕಸಭೆಗೂ ಮುಂಚಿತವಾಗಿಯೇ ಅಭ್ಯರ್ಥಿಗಳನ್ನು ಘೋಷಿಸಲು ಕಸರತ್ತುಗಳು ನಡೆಯುತ್ತಿವೆ.

ಈಗಾಗಲೇ ಕೆಲವರು ತಮಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಲಾಬಿ ನಡೆಸುತ್ತಿದ್ದಾರೆ. ಇನ್ನೂ ಕೆಲವು ಕಡೆ ಪ್ರಭಾವಿ ಆಕಾಂಕ್ಷಿಗಳೇ ಸ್ಪರ್ಧೆಗೆ ನಿರಾಸಕ್ತಿ ತೋರಿಸುತ್ತಿದ್ದಾರೆ. ಶತಾಯಗತಾಯ 20 ಕ್ಷೇತ್ರಗಳನ್ನು ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಅಳೆದೂ ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮುಂದಾಗಿವೆ.

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,000 ಕ್ಕೆ ಏರಿಕೆ

ಜೆಡಿಎಸ್, ಬಿಜೆಪಿಯ ಮೈತ್ರಿ ಕಾಂಗ್ರೆಸ್‍ಗೆ ಲಾಭವಾಗಲಿದೆ. ಮೈತ್ರಿ ಪಕ್ಷದಲ್ಲೇ ಅಪಸ್ವರಗಳು ಕಾಂಗ್ರೆಸ್‍ನ ಮತದ ಕ್ರೂಢೀಕರಣವನ್ನು ಹೆಚ್ಚಿಸಲಿವೆ ಎಂಬ ಅಂದಾಜುಗಳಿವೆ. ಹೀಗಾಗಿ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸುವ ಉಮೇದಿನಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಹೆಚ್ಚು ಕಡಿಮೆಯಾದರೆ ಅದು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಸಚಿವರ ನೇತೃತ್ವದ ವೀಕ್ಷಕರ ವರದಿ ಪಕ್ಷದ ಆಂತರಿಕ ಸಮೀಕ್ಷೆ, ಜಿಲ್ಲಾ ಸಮಿತಿಗಳ ಅಭಿಪ್ರಾಯ ಹಾಗೂ ಆಕಾಂಕ್ಷಿಗಳ ಪಕ್ಷ ಸಂಘಟನೆಯ ಪಾಲ್ಗೊಳ್ಳುವಿಕೆ ಮತ್ತು ಸೈದ್ಧಾಂತಿಕ ಬದ್ಧತೆಯನ್ನು ಓರಗೆ ಹಚ್ಚಲು ನಿರ್ಧರಿಸಲಾಗಿದೆ.

ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿಯಿಂದ ರಾಜ್ಯವನ್ನು ಪ್ರತಿನಿಧಿಸುವ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ನಾಳೆ ನಡೆಯುವ ಸಭೆ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದು, ಕಾಂಗ್ರೆಸ್ ಘಟಕಗಳಿಗೆ ಸ್ಪಷ್ಟ ಮಾರ್ಗಸೂಚಿಗಳನ್ನು ರವಾನಿಸಲಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ತಿಂಗಳ ಅಂತ್ಯದಲ್ಲಿಯೇ ಅಭ್ಯರ್ಥಿಗಳ ಆಯ್ಕೆಯಲ್ಲಿ ಸ್ಪಷ್ಟತೆ ಬರಲಿದ್ದು, ನವೆಂಬರ್ ಅಥವಾ ಡಿಸೆಂಬರ್ ವೇಳೆಗೆ ಅಧಿಕೃತವಾಗಿ ಪಟ್ಟಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ.

ಹೊಸ ಮದ್ಯದಂಗಡಿಗೆ ಅನುಮತಿ ನೀಡುವಂತೆ ಸಿಎಂ ಮೇಲೆ ಶಾಸಕರ ಒತ್ತಡ

ಬೆಂಗಳೂರು,ಅ.8- ಹೊಸದಾಗಿ ಮದ್ಯದಂಗಡಿಗಳಿಗೆ ಪರವಾನಗಿ ಕೊಡಲು ಅನುಮತಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆಡಳಿತಾರೂಢ ಪಕ್ಷದ ಶಾಸಕರು ಭಾರೀ ಒತ್ತಡ ಹೇರಲಾರಂಭಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟದ ಬಹುತೇಕ ಸಚಿವರು, ಕಾಂಗ್ರೆಸ್ ಶಾಸಕರು, ವಿರೋಧ ಪಕ್ಷದಲ್ಲಿರುವ ಕೆಲವು ಶಾಸಕರೂ ಕೂಡ ಹೊಸ ಮದ್ಯದಂಗಡಿಗಳಿಗೆ ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿಯವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಈ ವಿಷಯದಲ್ಲಿ ಭಿನ್ನ ಅಭಿಪ್ರಾಯಗಳು ಕೇಳಿಬಂದಿವೆ. ಕಳೆದ 30 ವರ್ಷಗಳಿಂದಲೂ ಹೊಸ ಮದ್ಯ ಮಾರಾಟದ ಸನ್ನದ್ಧುಗಳನ್ನು ನೀಡಿಲ್ಲ. ಈಗಿರುವ ಪರವಾನಗಿಗಳನ್ನೇ ನಾಲ್ಕರಿಂದ ಐದು ಕೋಟಿ ರೂ.ಗಳಿಗೆ ಮಾರಾಟ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಹೊಸ ಸನ್ನದ್ಧುಗಳನ್ನು ನೀಡಬೇಕು, ಇದರಿಂದ ಉದ್ಯೋಗವಕಾಶಗಳು ಹೆಚ್ಚುತ್ತವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಆದರೆ ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಾಸಗಟಾಗಿ ತಳ್ಳಿಹಾಕಿದ್ದು, ನನ್ನ ಪ್ರಕಾರ ಹೊಸ ಮದ್ಯ ಮಾರಾಟಕ್ಕೆ ಪರವಾನಗಿಗಳನ್ನು ನೀಡುವ ಅಗತ್ಯ ಇಲ್ಲ ಎಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಹಲವಾರು ಜನಪರ ಭರವಸೆಗಳನ್ನು ನೀಡಿದ್ದಂತೆ ಬಂಡವಾಳಿಶಾಹಿಗಳಿಗೂ ಕೆಲವು ಆಶ್ವಾಸನೆಗಳನ್ನು ಕೊಟ್ಟಿತ್ತು. ಸಂಪನ್ಮೂಲ ಕ್ರೂಢೀಕರಣ, ಪಕ್ಷ ಸಂಘಟನೆ ದೃಷ್ಟಿಯಿಂದಾಗಿ ಕಾಲಕಾಲಕ್ಕೆ ಕೆಲವು ಭರವಸೆಗಳನ್ನು ನೀಡಲಾಗಿದೆ. ಅವುಗಳ ಈಡೇರಿಕೆಗೆ ಸಂಪುಟದಲ್ಲಿ ಸದಸ್ಯರಾಗಿರುವವರು ಹರಸಾಹಸ ನಡೆಸುತ್ತಿದ್ದಾರೆ.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಒಂದು ವೇಳೆ ಹೊಸ ಪರವಾನಗಿಗಳನ್ನು ನೀಡಲು ಮುಂದಾದರೆ ಸಾವಿರಾರು ಕೋಟಿ ರೂ.ಗಳ ಭ್ರಷ್ಟಾಚಾರ ನಡೆಯುವ ಆತಂಕ ಇದೆ. ಇದು ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಅಸ್ತ್ರವಾಗಲಿದೆ ಎಂದು ಗುಪ್ತಚರ ಇಲಾಖೆ ಮುಖ್ಯಮಂತ್ರಿಯವರಿಗೆ ವರದಿ ನೀಡಿದೆ.

ಇತ್ತೀಚೆಗೆ ಕಲ್ಬುರ್ಗಿ, ಬಿಜಾಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದಲ್ಲಿ ಮದ್ಯ ಮಾರಾಟವನ್ನು ವಿರೋಸಿ ಸ್ತ್ರೀಶಕ್ತಿ ಸಂಘಗಳ ನೇತೃತ್ವದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ಅದಕ್ಕೆ ಬೆಂಬಲವಾಗಿ ಆಡಳಿತಾರೂಢ ಕಾಂಗ್ರೆಸ್‍ನ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಮದ್ಯ ಮಾರಾಟ ಮಾಡಿದ ಪಾಪದ ಹಣದಲ್ಲಿ ಸರ್ಕಾರ ನಡೆಸಬಾರದು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು.

ಅಬಕಾರಿ ಸಚಿವರು ಗ್ರಾಮ ಪಂಚಾಯಿತಿಗೊಂದರಂತೆ ಮದ್ಯ ಮಾರಾಟ ಪರವಾನಗಿ ನೀಡುವ ಚಿಂತನೆ ನಡೆಸಿದ್ದಾರೆ. ಇದು ಒಳ್ಳೆಯದಲ್ಲ. ಗ್ರಾಮೀಣ ಭಾಗದಲ್ಲಿ ಮಹಿಳೆಯರು ಮದ್ಯ ಮಾರಾಟದ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದಾರೆ. ನಮಗೆ ಉಚಿತ ಅಕ್ಕಿ ಬೇಡ, ಗೃಹಲಕ್ಷ್ಮಿ ಹಣವೂ ಬೇಡ, ಮದ್ಯ ಮಾರಾಟವನ್ನು ನಿಲ್ಲಿಸಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದಲ್ಲಿ ಅನಕೃತವಾದ ಮದ್ಯ ಮಾರಾಟದಿಂದ ಸಾಮಾಜಿಕ ಸ್ವಾಸ್ಥ್ಯ ಕೆಡುತ್ತಿದೆ, ಸಂಸಾರಗಳು ಬೀದಿಪಾಲಾಗುತ್ತಿವೆ. ಹೀಗಾಗಿ ಹೆಚ್ಚುವರಿ ಮದ್ಯ ಮಾರಾಟಕ್ಕೆ ಅನುಮತಿ ನೀಡಬಾರದು ಎಂದು ಬಿ.ಆರ್.ಪಾಟೀಲ್ ಒತ್ತಾಯಿಸಿದರು.

ಶಾಸಕರ ವಲಯದಲ್ಲಿ ವಿರೋಧ ವ್ಯಕ್ತಪಡಿಸುವ ಒಂದು ವರ್ಗವಿದ್ದರೆ, ಪರವಾನಗಿ ನೀಡಲೇಬೇಕು ಎಂದು ಹಠ ಹಿಡಿಯುತ್ತಿರುವ ಮತ್ತಷ್ಟು ಶಾಸಕರು ವಾದ, ವಿವಾದಗಳಿಗೆ ತಲೆ ಕೆಡಿಸಿಕೊಳ್ಳದೆ ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಪಂಚಖಾತ್ರಿಗಳನ್ನು ಜಾರಿಗೊಳಿಸಿರುವ ರಾಜ್ಯಸರ್ಕಾರ ಅದಕ್ಕೆ ಅಗತ್ಯವಾದ ಹಣಕಾಸು ಕ್ರೂಢೀಕರಣಕ್ಕೆ ವಿವಿಧ ರೀತಿಯ ಮೂಲಗಳನ್ನು ಆಶ್ರಯಿಸಿದೆ. ಅದರಲ್ಲಿ ಪ್ರಮುಖವಾಗಿ ಅಬಕಾರಿ ತೆರಿಗೆಯೂ ಸೇರಿದೆ.
ಪ್ರತಿ ತಾಲೂಕಿನಲ್ಲೂ ಶೇ. 30 ರಷ್ಟು ಹೆಚ್ಚು ಮದ್ಯ ಮಾರಾಟ ಮಾಡಬೇಕು ಎಂಬ ಗುರಿ ನಿಗದಿ ಪಡಿಸಲಾಗಿದೆ. ಹೀಗಾಗಿ ಸರ್ಕಾರದ ಅಧಿಕೃತ ಸಂಸ್ಥೆ ಎಂಎಸ್‍ಐಎಲ್‍ಗಳೂ ಸೇರಿದಂತೆ ಹಲವಾರು ಕಡೆ ಗ್ರಾಮೀಣ ಭಾಗದ ಅನಧಿಕೃತ ಮಾರಾಟಕ್ಕೆ ಮದ್ಯ ಪೂರೈಕೆ ಮಾಡಲಾಗುತ್ತಿದೆ.

ಅನಧಿಕೃತವಾದ ಮದ್ಯ ಮಾರಾಟದಿಂದ ಸರ್ಕಾರಕ್ಕೂ ಆದಾಯ ಬರುವುದಿಲ್ಲ. ಸಮಾಜದ ಸ್ವಾಸ್ಥ್ಯವೂ ಪಾಲನೆ ಆಗುವುದಿಲ್ಲ. ಹೀಗಾಗಿ ನೇರವಾಗಿ ಪರವಾನಗಿ ನೀಡುವುದೇ ಸೂಕ್ತ ಎಂಬ ವಾದಗಳು ಇವೆ. ವಾದ ವಿವಾದ ಏನೇ ಇದ್ದರೂ ಒಂದು ಕಾಲದಲ್ಲಿ ಸರ್ಕಾರವನ್ನೆ ಅಲುಗಾಡಿಸುತ್ತಿದ್ದ ಅಬಕಾರಿ ಲಾಬಿ ಈಗ ಮತ್ತೊಮ್ಮೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರ ನಡುವೆಯೇ ಭಿನ್ನಾಭಿಪ್ರಾಯ ಸೃಷ್ಟಿಸುವ ಸಾಧ್ಯತೆಗಳಿವೆ.

ಪಶ್ಚಿಮ ಬಂಗಾಳದ ನಗರಾಭಿವೃದ್ಧಿ ಸಚಿವ ನಿವಾಸದ ಮೇಲೆ ಸಿಬಿಐ ದಾಳಿ

ಕೋಲ್ಕತ್ತಾ, ಅ.8- ರಾಜ್ಯದಲ್ಲಿನ ಪೌರ ಸಂಸ್ಥೆಗಳ ನೇಮಕಾತಿಯಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಇಂದು ಬೆಳಿಗ್ಗೆ ಇಲ್ಲಿ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತ್ತಾದ ಮೇಯರ್ ಆಗಿದ್ದ ಹಕೀಮ್ ಅವರು ಪ್ರಸ್ತುತ ಮಮತಾ ಸರ್ಕಾರದಲ್ಲಿ ನಗರಾಭಿವೃದ್ಧಿ ಮತ್ತು ಮುನ್ಸಿಪಲ್ ವ್ಯವಹಾರಗಳ ಸಚಿವರಾಗಿದ್ದರೆ.

ಸಿಬಿಐ ಅಧಿಕಾರಿಗಳ ತಂಡವು ಕೇಂದ್ರ ಪಡೆಗಳ ದೊಡ್ಡ ತುಕಡಿಯೊಂದಿಗೆ ದಕ್ಷಿಣ ಕೋಲ್ಕತ್ತಾದ ಚೆಟ್ಲಾ ಪ್ರದೇಶದಲ್ಲಿ ಹಕೀಮ್ ಅವರ ನಿವಾಸ ಇಂದು ಬೆಳ್ಳಂಬೆಳಿಗೆ ತಲುಪಿ ಶೋಧ ಕಾರ್ಯ ನಡೆಸಿದ್ದಾರೆ. ಇಬ್ಬರು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮನೆಯ ಹೊರಗೆ ಜಮಾಯಿಸಿ ಟಿಎಂಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಗುರುವಾರ, ಜಾರಿ ನಿರ್ದೇಶನಾಲಯ (ಇಡಿ) ಆಹಾರ ಮತ್ತು ಸರಬರಾಜು ಸಚಿವ ರಥಿನ್ ಘೋಷ್ ಅವರ ನಿವಾಸ ಸೇರಿದಂತೆ ಅನೇಕ ಸ್ಥಳಗಳಲ್ಲಿ ಶೋಧ ನಡೆಸಿತು.

ಕಳೆದ 2014 ಮತ್ತು 2018 ರ ನಡುವೆ ರಾಜ್ಯದ ವಿವಿಧ ನಾಗರಿಕ ಸಂಸ್ಥೆಗಳು ವಿತ್ತೀಯ ಪರಿಗಣನೆಗೆ ವಿರುದ್ಧವಾಗಿ ಸುಮಾರು 1,500 ಜನರನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿವೆ ಎಂದು ಕೇಂದ್ರ ತನಿಖಾ ಸಂಸ್ಥೆಗಳು ಆರೋಪಿಸಿವೆ.

ಪಟಾಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆರಿಕೆ, ಇಬ್ಬರ ಬಂಧನ

ಬೆಂಗಳೂರು, ಅ.8- ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ನಿನ್ನೆ ರಾತ್ರಿ 12 ಶವಗಳನ್ನು ಗೋದಾಮಿನಿಂದ ಹೊರತೆಗೆಯಲಾಗಿದ್ದು, ತಡರಾತ್ರಿ ಇನ್ನೆರಡು ಶವಗಳು ಸಿಕ್ಕಿವೆ. ಎಲ್ಲ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದರಲ್ಲಿ ಇನ್ನೂ ಕೆಲವರ ಗುರುತು ಸಿಕ್ಕಿಲ್ಲ. ಅವರುಗಳ ಗುರುತುಗಳನ್ನು ಪತ್ತೆಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ದುರಂತದಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದು, ಸೆಂಟ್‍ಜಾನ್ ಮತ್ತು ಆಕ್ಸ್‍ಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಗ್ಗೆ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಇಬ್ಬರನ್ನು ಬಂಧಿಸಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‍ಪಿ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ರಾಮಸ್ವಾಮಿ ರೆಡ್ಡಿ ಮತ್ತು ನವೀನ್ ಅವರನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ವಿವರಿಸಿದರು.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಘಟನೆಗೆ ಇನ್ನೂ ನಿಖರವಾದ ಕಾರಣ ತಿಳಿದುಬಂದಿಲ್ಲ. ನಮ್ಮ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು. ನಿನ್ನೆ ಮಧ್ಯಾಹ್ನ 3.30ರ ಸಂದರ್ಭದಲ್ಲಿ ಪಟಾಕಿ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಏಳು ವಾಹನಗಳೊಂದಿಗೆ ಸ್ಥಳಕ್ಕೆ ದಾವಿಸಿ ಸತತ ಪ್ರಯತ್ನ ನಡೆಸಿ ತಡರಾತ್ರಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೂ 14 ಜೀವಗಳು ಬಲಿಯಾಗಿದ್ದು, ಕೆಲವು ಶವಗಳು ಗುರುತು ಸಿಗದ ರೀತಿಯಲ್ಲಿ ಸುಟ್ಟುಹೋಗಿವೆ.

ಭೇಟಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ತಮಿಳುನಾಡಿನ ಸಚಿವರು, ಶಾಸಕರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮ ವಹಿಸದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪಟಾಕಿಯನ್ನು ಸಂಗ್ರಹಿಸಲು ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕೆಲವರು ತಮಿಳುನಾಡಿನ ಹೊಸೂರು, ಶಿವಕಾಶಿ ಸೇರಿದಂತೆ ಹಲವೆಡೆ ಪಟಾಕಿ ಖರೀದಿಸಲು ತೆರಳುತ್ತಾರೆ. ಅದನ್ನು ಕರ್ನಾಟಕದ ಗಡಿಭಾಗ ಅತ್ತಿಬೆಲೆಯಲ್ಲಿ ಸಂಗ್ರಹಿಸಿದರೆ ಹೆಚ್ಚಿನ ಹಣ ಸಂಪಾದಿಸಬಹುದು ಎಂದು ಕೆಲವರು ಗೋದಾಮುಗಳಲ್ಲಿ ಇದನ್ನು ಶೇಖರಿಸಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಅಕ್ಕಪಕ್ಕದಲ್ಲಿರುವುದರಿಂದ ಸ್ಥಳೀಯ ನಿವಾಸಿಗಳನ್ನು ಅಲ್ಲಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಒಟ್ಟಾರೆ ಸಂಭವಿಸಿದ ಈ ಘೋರ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದ್ದು, ಮೃತರಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ.

ಮನೆಗೆ ಆಕಸ್ಮಿಕ ಬೆಂಕಿ : ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ, ಅ.8- ಮನೆಗೆ ಬೆಂಕಿ ಬಿದ್ದು ಒಂದೇ ಕುಟುಂಬದ ಮೂವರು ಸಜೀವವಾಗಿ ದಹನಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕೆಕೋಡ್‍ನಲ್ಲಿ ಇಂದು ಮುಂಜಾನೆ ನಡೆದಿದೆ.

ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್(30) ಮೃತ ದುರ್ದೈವಿಗಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಇನ್ನೊಬ್ಬ ಪುತ್ರ ಭರತ್ (28)ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರ್ಚಕರಾಗಿದ್ದ ರಾಘವೇಂದ್ರ ಅವರು ಕುಟುಂಬ ಸಮೇತ ಹೊಸನಗರ ರಸ್ತೆಯ ಅರಳಸುರಳಿ ಗಣಪತಿ ಕಟ್ಟೆ ರೈಸ್ ಮಿಲ್ ಸಮೀಪ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ಇತ್ತೀಚೆಗೆ ಮನೆಯ ಕೋಣೆಯಲ್ಲಿ ಕಟ್ಟಿಗೆ ಸಂಗ್ರಹಿಸಿಟ್ಟಿದ್ದರು. ಅದಕ್ಕೆ ಬೆಂಕಿ ಬಿದ್ದು ಪೂರ್ತಿ ಮನೆ ಆವರಿಸಿ ಈ ಅವಘಡ ಸಂಭವಿಸಿದೆ.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಅಧಿಕಾರಿ ಮಿಥುನ್ ಕುಮಾರ್ , ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಸಾಮೂಹಿಕ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 2,000 ಕ್ಕೆ ಏರಿಕೆ

ಇಸ್ಲಾಮಾಬಾದ್, ಅ.8- ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳಿಂದ ಮೃತಪಟ್ಟವರ ಸಂಖ್ಯೆ 2,000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರೆ.

ಭೂಕಂಪದ ಕಂಪನಕ್ಕೆ 465 ಮನೆಗಳು ನಾಶವಾಗಿದ್ದು, 135 ಮನೆಗಳು ಹಾನಿಗೊಳಗಾಗಿವೆ. ಕೆಲವರು ಕುಸಿದ ಕಟ್ಟಡಗಳ ಅಡಿಯಲ್ಲಿ ಸಿಲುಕಿರುವವರ ಹುಡುಕಾಟ ಮತ್ತು ರಕ್ಷಣಾ ಪ್ರಯತ್ನಗಳು ಮುಂದುವರೆದಿದ್ದು, ಸಾವು-ನೋವುಗಳ ಸಂಖ್ಯೆ ಇನ್ನೂ ಹೆಚ್ಚುವ ನಿರೀಕ್ಷೆಯಿದೆ ಎಂದು ಯುಎನ್ ಹೇಳಿದೆ.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ವಿಪತ್ತು ಪ್ರಾಧಿಕಾರದ ವಕ್ತಾರ ಮೊಹಮ್ಮದ್ ಅಬ್ದಲ್ ಜಾನ್ ಅವರು ಹೆರಾತ್ ಪ್ರಾಂತ್ಯದ ಝೆಂಡಾ ಜಾನ್ ಜಿಲ್ಲೆಯ ನಾಲ್ಕು ಗ್ರಾಮಗಳು ಭೂಕಂಪ ಮತ್ತು ನಂತರದ ಆಘಾತಗಳ ತೀವ್ರತೆಯನ್ನು ಅನುಭವಿಸಿವೆ.

ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ವಾಯುವ್ಯಕ್ಕೆ ಸುಮಾರು 40 ಕಿಲೋಮೀಟರ್ (25 ಮೈಲಿ) ದೂರದಲ್ಲಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಇದು 6.3, 5.9 ಮತ್ತು 5.5 ರ ತೀವ್ರತೆಯ ಮೂರು ಪ್ರಬಲವಾದ ನಂತರದ ಆಘಾತಗಳನ್ನು ಮತ್ತು ಕಡಿಮೆ ಆಘಾತಗಳನ್ನು ಅನುಸರಿಸಿತು.

ಸೋಮಶೇಖರ್ ಅಸಮಾಧಾನ ತಣಿಸುವ ಜವಾಬ್ದಾರಿ ಬಿಎಸ್‍ವೈ ಹೆಗಲಿಗೆ

ಬೆಂಗಳೂರು, ಅ.8-ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದನ್ನು ಬರಂಗವಾಗಿ ವಿರೋಧಿಸಿದ ಮಾಜಿ ಸಚಿವ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿಗೆ ಕಂಟಕವಾಗಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸೋಮಶೇಖರ್ ಅಪಸ್ವರ ಎತ್ತಿದ ಬೆನ್ನಲ್ಲೇ, ಇನ್ನು ಮುಂದೆ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುವ ಹೇಳಿಕೆ ನೀಡದಂತೆ ಸೋಮಶೇಖರ್ ಅವರಿಗೆ ಮನವರಿಕೆ ಮಾಡಿಕೊಡುವ ಮತ್ತು ಸೂಚನೆ ನೀಡುವ ಜವಾಬ್ದಾರಿಯನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿಯು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೀಡಿದೆ.

2018 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ 17 ವಿರೋಧ ಪಕ್ಷದ ಶಾಸಕರಲ್ಲಿ ಸೋಮಶೇಖರ್ ಅವರು ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸಲು ಸಹಾಯ ಮಾಡಿದ್ದರು. ಸೋಮಶೇಖರ್ ಅವರು ಉಪ ಚುನಾವಣೆಯಲ್ಲಿ ಗೆದ್ದು ಮಾಸ್ ಲೀಡರ್ ಆಗಿ ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ವಿರುದ್ಧವಾಗಿ ಹೋದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಬಿಜೆಪಿ ಹಿಂದೇಟು ಹಾಕಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವ ಸೋಮಶೇಖರ್, ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು. ಹೀಗಾಗಿ ರಾಜ್ಯ ಬಿಜೆಪಿ ನಾಯಕರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

`ನಾವು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು. ಸೋಮಶೇಖರ್ ಕೂಡ ಇದಕ್ಕೆ ಹೊರತಾಗಿಲ್ಲ. ಒಂದು ವೇಳೆ ಅವರು ಬಯಸಿದರೇ ಪಕ್ಷ ತೊರೆದು ಸಂತೋಷವಾಗಿರುವ ಪಕ್ಷಕ್ಕೆ ಸೇರಲಿ ಎಂದು ಮಾಜಿ ಸಚಿವ, ಬಿಜೆಪಿ ರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸೋಮಶೇಖರ್ ಯಾವಾಗಲೂ ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಿದ್ದಾರೆ ಎಂದು ಮತ್ತೊಬ್ಬ ಹಿರಿಯ ನಾಯಕ ಸಿ.ಟಿ. ರವಿ ಟೀಕಿಸಿದ್ದಾರೆ. ಅಕಾರ ಇಲ್ಲವೆಂದರೆ ಕೆಲವರಿಗೆ ಉಸಿರು ಕಟ್ಟುತ್ತೆ, ಎಸಿ ರೂಮ್‍ನಲ್ಲಿದ್ದರೆ ವಾತಾವರಣ ಚೆನ್ನಾಗಿರುತ್ತದೆ ಎಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದ್ದಾರೆ. ಇವರಿಗೆ ಯಾವಾಗಲೂ ಅಕಾರದಲ್ಲಿರಬೇಕು.

ಆಗ ಎಲ್ಲವೂ ಚೆನ್ನಾಗಿರುತ್ತದೆ. ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣವಿದೆ ಎಂಬ ಮಾಜಿ ಸಚಿವ ಎಸ್‍ಟಿ ಸೋಮಶೇಖರ್ ಹೇಳಿಕೆಗೆ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಮೈತ್ರಿ ಕುರಿತು ವರಿಷ್ಠರ ನಿರ್ಧಾರವನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಸೋಮಶೇಖರ್ ತೆಗೆದುಕೊಂಡಿದ್ದಾರೆ ಎಂದು ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಸೋಮಶೇಖರ್ ಹೇಳಿದ್ದೇನು? ಮೇಲಿನವರು ಸುಲಭವಾಗಿ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.

ಅಂಡಮಾನ್ ಸಮುದ್ರದಲ್ಲಿ ಭೂಕಂಪ

ಕೆಳಹಂತದ ಕಾರ್ಯಕರ್ತರು ಹಿಂಸೆ ಅನುಭವಿಸುತ್ತಾರೆ. ಉಸಿರುಕಟ್ಟುವ ವಾತಾವರಣ ಸೃಷ್ಟಿಯಾಗಿದೆ. ಮೈತ್ರಿಗೆ ವೈಯಕ್ತಿಕವಾಗಿ ನನ್ನ ವಿರೋಧದೆ. ಅಧಿಕೃತ ಘೋಷಣೆ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳುವೆ ಎಂದಿದ್ದರು. ಮೈತ್ರಿ ಅಧಿಕೃತವಾಗಿ ಘೋಷಣೆಯಾದ ಬಳಿಕ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಶಾಸಕ ಸೋಮಶೇಖರ್, ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಜೆಡಿಎಸ್ ವಿರುದ್ಧ ಆರು ವಿಧಾನಸಭಾ ಚುನಾವಣೆಗಳಲ್ಲಿ ಹೋರಾಡಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್‍ನ ಹಲವು ಶಾಸಕರು ಮೈತ್ರಿಗೆ ವಿರುದ್ಧವಾಗಿದ್ದರೂ ಬರಂಗವಾಗಿ ಮಾತನಾಡುತ್ತಿಲ್ಲ ಎಂದು ಸ್ವಪಕ್ಷೀಯರ ವಿರುದ್ದವೇ ಗುಡುಗಿದ್ದರು.

ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮೊದಲಿನಿಂದಲೂ ಪರಸ್ಪರ ರುದ್ಧವಾಗಿ ಇದ್ದವರು. ಪಕ್ಷದ ಕಾರ್ಯಕರ್ತರು ಅನುಭಸಿದ ಕಿರುಕುಳವನ್ನು ಹತ್ತಿರದಿಂದ ಕಂಡಿದ್ದೇನೆ. ಪಕ್ಷಗಳು ಒಂದಾದರೂ, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಅಸಾಧ್ಯವಾಗಿದೆ. ಮೈತ್ರಿ ವಿರೋಧಿಸಿ ಈಗಾಗಲೇ ಹಲವು ಕಾರ್ಯಕರ್ತರು, ಬೆಂಬಲಿಗರು ಕಾಂಗ್ರೆಸ್ ಸೇರುವ ನಿರ್ಧಾರ ಮಾಡಿದ್ದಾರೆ. ಇದು ನನ್ನ ಕ್ಷೇತ್ರದ ಸಮಸ್ಯೆ ಮಾತ್ರವಲ್ಲ. ಇತರೆ ಶಾಸಕರೂ ತಮ್ಮ ಕ್ಷೇತ್ರಗಳಲ್ಲಿ ಇಂತಹ ಸಮಸ್ಯೆ ಎದುರಿಸುತ್ತಿದ್ದಾರೆ’ ಎಂದು ಹೇಳಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

`ನಾನೂ ಸಹ 20 ವರ್ಷಗಳಿಂದ ಜೆಡಿಎಸ್ ಜತೆ ಸೆಣಸಾಟ ನಡೆಸಿಕೊಂಡು ಬಂದಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಹೊಂದಾಣಿಕೆಯಾದರೂ, ಕಾರ್ಯಕರ್ತರು ಪರಸ್ಪರ ಮತ ಚಲಾಯಿಸಲಿಲ್ಲ. ಇದರಿಂದ ಮೈತ್ರಿ ಎಷ್ಟು ಸ್ಥಾನದಲ್ಲಿ ಗೆಲುವು ಪಡೆಯಿತು ಎನ್ನುವುದು ಎಲ್ಲರಿಗೂ ಗೊತ್ತಿದೆ’ ಎಂದು ಗತ ಮೈತ್ರಿ ನೆನಪಿಸಿದ್ದರು.

2019ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಾಗ ಏನಾಯಿತು? ಅವರು ಗೆದ್ದಿದ್ದು ಒಂದೇ ಒಂದು ಸ್ಥಾನ ಎಂದ ಅವರು, ಜೆಡಿಎಸ್-ಬಿಜೆಪಿ ಮೈತ್ರಿಕೂಟಕ್ಕೂ ಇದೇ ಫಲಿತಾಂಶ ಬರಲಿದೆ ಎಂದು ಭವಿಷ್ಯ ನುಡಿದ್ದಾರೆ.

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು.

ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು, ಅ.8-ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.

ದುರಂತದಿಂದ ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದುದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತದ ಸಾವು ಕಂಡಿರುವ ಘಟನೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಅವರು ಹೇಳಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.