Friday, November 7, 2025
Home Blog Page 1908

ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಪ್ರಶಂಸಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು, ಅ. 8- ಭಾರತವು ಒಲಿಂಪಿಕ್ಸ್, ಕಾಮನ್ವೆಲ್ತ್ ಕ್ರೀಡಾಕೂಟಗಳಲ್ಲಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಂಸಿಸಿದರು. ನಗರದ ಕಂಠೀರವ ಕ್ರೀಡಾಗಂಣದಲ್ಲಿ 62 ನೇ ಓಪನ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಅಡಿಯಲ್ಲಿ ಆಯೋಜಿಸಲಾದ ಬೆಂಗಳೂರು ಮ್ಯಾರಥಾನ್ ಅನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, 19ನೇ ಏಷ್ಯನ್ ಗೇಮ್ಸ್‍ನಲ್ಲಿ ಭಾರತೀಯ ಆಟಗಾರರು ತಮ್ಮ ದಾಖಲೆ ಮುರಿದ ಪ್ರದರ್ಶನದ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಎಂದು ಶ್ಲಾಘಿಸಿದರು.

ಬೆಂಗಳೂರು ಮ್ಯಾರಥಾನ್‍ನಲ್ಲಿ ವಿಶ್ವದ ವಿವಿಧ ಭಾಗಗಳಿಂದ ಸಾವಿರಾರು ಸ್ರ್ಪಧಿಗಳು ಭಾಗವಹಿಸುತ್ತಿರುವುದು ಸಂತಸದ ವಿಷಯ. ಈ ಘಟನೆಯು ಕರ್ನಾಟಕವನ್ನು ಅಂತಾರಾಷ್ಟ್ರೀಯ ಕ್ರೀಡಾ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ ಎಂದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ಭಾರತ ಸರ್ಕಾರದ ಕ್ರೀಡಾ ಸಚಿವಾಲಯ ಮತ್ತು ಕ್ರೀಡಾ ಸಂಸ್ಥೆಗಳು ಹಾಗೂ ಕರ್ನಾಟಕ ಸರ್ಕಾರವು ಅನೇಕ ಕ್ರೀಡಾ ಯೋಜನೆಗಳನ್ನು ಮಾಡಿವೆ. ಆಟಗಾರರು ಅವುಗಳ ಲಾಭವನ್ನು ಪಡೆಯುತ್ತಿದ್ದಾರೆ. ಇದರಿಂದಾಗಿ ಕ್ರೀಡೆಯ ಮಟ್ಟ ಸುಧಾರಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದರು.

ಈ ಮ್ಯಾರಾಥಾನ್ ನಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಶುಭಕೋರಿದ ರಾಜ್ಯಪಾಲರು, ಅತ್ಯುತ್ತಮ ಪ್ರದರ್ಶನ ಮತ್ತು ಉಜ್ವಲ ಭವಿಷ್ಯಕ್ಕಾಗಿ ಭಾಗವಹಿಸುವ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರು.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಈ ಸಂದರ್ಭದಲ್ಲಿ ಕ್ರೀಡಾ ಸಚಿವರಾದ ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ , ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜ್, ಓಟದ ನಿರ್ದೇಶಕ ನಾಗರಾಜ್, ಅರ್ಜುನ್ ಪ್ರಶಸ್ತಿ ಪುರಸ್ಕೃತ ಡಾ. ರೀತ್ ಅಬ್ರಹಾಂ, ವಿಪ್ರೋ ಮುಖ್ಯಸ್ಥ ಎಚ್.ಆರ್. ಸೌರಭ್ ಗೋವಿಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಪಟಾಕಿ ದುರಂತ : ಉನ್ನತ ಮಟ್ಟದ ತನಿಖೆಗೆ ಹೆಚ್‌ಡಿಕೆ ಆಗ್ರಹ

ಬೆಂಗಳೂರು, ಅ.8-ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಆಗ್ರಹಿಸಿದ್ದಾರೆ.

ದುರಂತದಿಂದ ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದಿದ್ದಾರೆ. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದುದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತದ ಸಾವು ಕಂಡಿರುವ ಘಟನೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಅವರು ಹೇಳಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ಅವರು ತಿಳಿಸಿದ್ದಾರೆ.

ಅಂಡಮಾನ್ ಸಮುದ್ರದಲ್ಲಿ ಭೂಕಂಪ

ನವದೆಹಲಿ,ಅ.8-ಅಂಡಮಾನ್ ಸಮುದ್ರದಲ್ಲಿ ಇಂದು ಮುಂಜಾನೆ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ಪ್ರಕಾರ, ಮುಂಜಾನೆ 3:20 ಕ್ಕೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಕಂಪನಸಂಭವಿಸಿದ್ದು ಭೂಕಂಪವು ಸಮುದ್ರದ 10 ಕಿಮೀ ಆಳದಲ್ಲಿ ದಾಖಲಾಗಿದೆ.

ಕಳೆದ ತಿಂಗಳು ಕೂಡ ಇಷ್ಟೇ ತೀವ್ರತೆಯ ಕಂಪನ ಸಂಭವಿಸಿದ್ದವು ಆದರೆ ಯಾವುದೇ ಅಪಾಯವಾಗಿರಲಿಲ್ಲ ಆದರು ಈಗ ಕಟ್ಟೆಚರದಿಂದ ಇರುವಂತೆ ಸೂಚಿಸಲಾಗಿದೆ ಸಮುದ್ರದ ಅಲೆಗಳ ಅಬ್ಬರ ಹಚ್ಚಾಗಿದ್ದು ಪ್ರವಾಸಿಗರು ಹಾಗು ಸ್ಥಳೀಯರಿಗೆ ಕಡಲ ಬಳಿ ತೆರಳದಂತೆ ಮಾಹಿತಿ ನೀಡಲಾಗಿದೆ.

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಇನ್ನು ಮತ್ತೊಂದೆಡೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ರಾತ್ರಿ 11 ಗಂಟೆ ವೇಳೆಯಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದ್ದುಕಟ್ಟಡಗಳು ಕುಸಿದು ಸುಮಾರು 320 ಜನರು ಸಾವನ್ನಪ್ಪಿದ್ದಾರೆ. ಮತ್ತು ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-10-2023)

ನಿತ್ಯ ನೀತಿ : ಯಾರು ತನ್ನ ಸುಖವನ್ನು ಸಮಾಜಕ್ಕಾಗಿ ತ್ಯಾಗ ಮಾಡುವುದಕ್ಕೆ ಮುಂದಾಗುತ್ತಾರೋ ಅವರಿಗೆ ಸಮಾಜವನ್ನು ಉದ್ಧರಿಸುವಂತಹ ಕೆಲಸಗಳು ಅವರ ಕಣ್ಮುಂದೆ ಹೊಳೆಯುವುದಕ್ಕೆ ಆರಂಭಿಸುತ್ತವೆ.

ಪಂಚಾಂಗ ಭಾನುವಾರ 08-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಪುಷ್ಯ / ಯೋಗ: ಸಿದ್ಧ / ಕರಣ: ವಣಿಜ್

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.05
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ವ್ಯಾಪಾರ ಕ್ಷೇತ್ರದಲ್ಲಿ ಲಾಭವಾಗಲಿದೆ. ಅಗತ್ಯ ವಸ್ತುಗಳನ್ನು ಖರೀದಿಸುವಿರಿ.
ವೃಷಭ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸವಾಗಬಹುದು.
ಮಿಥುನ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ ಸಿಗಲಿದೆ. ಮನೆಯಲ್ಲಿ ಶಾಂತಿಯುತ ವಾತಾವರಣ.

ಕಟಕ: ದಾಯಾದಿ ಕಲಹ. ದುಷ್ಟ ಜನರಿಂದ ದೂರವಿರಿ.
ಸಿಂಹ: ಕೌಟುಂಬಿಕ ಅಗತ್ಯತೆ ಮತ್ತು ಜವಾಬ್ದಾರಿ ಪೂರೈಸಲು ಹಣ ಖರ್ಚು ಮಾಡಬೇಕಾಗುತ್ತದೆ.
ಕನ್ಯಾ: ಹಣದ ಒಳಹರಿವು ಉತ್ತಮವಾಗಿರುತ್ತದೆ.

ತುಲಾ: ಹಿತಶತ್ರುಗಳಿಂದ ತೊಂದರೆ. ಊರೂರು ಸುತ್ತಾಟ. ಮನಸ್ಸಿನಲ್ಲಿ ಭೀತಿ.
ವೃಶ್ಚಿಕ: ಬೆನ್ನು ಮತ್ತು ಸ್ನಾಯು ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಕಾರಣ ನೀವು ಕೆಲವು ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ.
ಧನುಸ್ಸು: ಮನೆಯ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ನಿಭಾಯಿಸಬೇಕು.

ಮಕರ: ಹೊಸ ಉದ್ಯಮ ಪ್ರಾರಂಭಿಸುವಿರಿ.ಮನೆ ಖರೀದಿ. ಆರೋಗ್ಯ ಪ್ರಾಪ್ತಿ.
ಕುಂಭ: ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮೀನ: ಕುಟುಂಬದವರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.

ಜೆಸಿ ರಸ್ತೆ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಸೇತುವೆ ನಿರ್ಮಾಣ

ಬೆಂಗಳೂರು,ಅ.7- ನಗರದ ಜೆಸಿ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ಸ್ಟೀಲ್ ಬ್ರಿಡ್ಜ್ ಬದಲಿಗೆ ಹೊಸ ವಿನ್ಯಾಸದ ಕಾಂಕ್ರಿಟ್ ಸೇತುವೆ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ರಾಜಧಾನಿ ಬೆಂಗಳೂರು ದಕ್ಷಿಣ ದಿಕ್ಕಿನ ಹೃದಯ ಭಾಗಕ್ಕೆ ಸಂಪರ್ಕ ಕಲ್ಪಿಸೋ ಜೆ.ಸಿ.ರಸ್ತೆಯಲ್ಲಿ ನಿರ್ಮಾಣ ಮಾಡಬೇಕಿದ ಸ್ಟೀಲ್ ಬ್ರಿಡ್ಜ್ ಬದಲಿಗೆ ಕಾಂಕ್ರಿಟ್ ಫ್ಲೈಓವರ್ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದ್ದು ಬರೋಬ್ಬರಿ 350 ಕೋಟಿ ರು. ವೆಚ್ಚದಲ್ಲಿ ಯೋಜನೆ ರೂಪಿಸಿ ಟೆಂಡರ್ ಪ್ರಕ್ರಿಯೆ ಆರಂಭಿಸಲು ಬಿಬಿಎಂಪಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಜೆ.ಸಿ.ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣ ಮಾಡಬೇಕೆಂಬ ಯೋಜನೆ ಕಳೆದ 5 ವರ್ಷಗಳಿಂದ ಇತ್ತು, ಸ್ಟೀಲ್ ಬ್ರಿಡ್ಜ್ ಎಂಬ ಕಾರಣಕ್ಕೆ ಹಾಗೂ ವಿವಿಧ ತಾಂತ್ರಿಕ ಕಾರಣಕ್ಕೆ ಯೋಜನೆ ಹಲವು ಬಾರಿ ನಿಂತು ಹೋಗಿತ್ತು. ಇದೀಗ ಬಿಬಿಎಂಪಿ ಸ್ಟೀಲ್ ಬ್ರಿಡ್ಜ್ ಪ್ರಸ್ತಾವನೆಯನ್ನು ಸಂಪೂರ್ಣವಾಗಿ ಕೈ ಬಿಟ್ಟು ಮೈಸೂರು ರಸ್ತೆಯ ಸಿರ್ಸಿ ಸರ್ಕಲ್ ಫ್ಲೈಓವರ್ ಮಾದರಿಯಲ್ಲಿ ಜೆ.ಸಿ.ರಸ್ತೆಯಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ರಾಜ್ಯ ಸರ್ಕಾರ ಈ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದೆ, ಹೀಗಾಗಿ ಜೆಸಿ.ರಸ್ತೆಫ್ಲೈ ಓವರ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಕ್ಕೆ ತಯಾರಿ ಮಾಡಿಕೊಂಡಿದ್ದು, ಮುಖ್ಯ ಆಯುಕ್ತರು ಈಗಾಗ್ಲೇ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇನ್ನೂ 2.8 ಕಿ.ಮೀ ಉದ್ದದ ಫ್ಲೈಓವರ್ ಒಟ್ಟು 88 ಪಿಲ್ಲರ್ಗಳನ್ನು ಒಳಗೊಂಡಿದ್ದು , ಪ್ಲೈಓವರ್ ಎರಡು ಭಾಗಗಳಲ್ಲಿ ಹಾಗೂ ಪ್ಲೈಓವರ್ ನ್ನ ಕೆಳ ಭಾಗದಲ್ಲಿ ಬರುವ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ರಸ್ತೆ ಮಾಡಲು ತೀರ್ಮಾನಿಸಲಾಗಿದೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಿನರ್ವ ವೃತ್ತದಿಂದ ಹಡ್ಸನ್ ವೃತ್ತ ತಲುಪಲು ಕನಿಷ್ಠ 30-40 ನಿಮಿಷ ಬೇಕಾಗುತ್ತಿದೆ. ಒಟ್ಟು ಏಳು ಸಿಗ್ನಲ್ಗಳನ್ನು ದಾಟಿಕೊಂಡು ಕೆ.ಜಿ.ರಸ್ತೆಗೆ ತಲುಪುವಷ್ಟರಲ್ಲಿ ವಾಹನ ಸವಾರರು ಸುಸ್ತಾಗಿರ್ತಾರೆ, ಈ ಪ್ಲೈಓವರ್ ನಿರ್ಮಾಣವಾದ್ರೆ ವಾಹನ ಸವಾರರು ಮಿನರ್ವ ವೃತ್ತದಿಂದ ಹಡ್ಸನ್ ವೃತ್ತದ ತುದಿಗೆ ಕೇವಲ ಐದು ನಿಮಿಷಗಳಲ್ಲಿ ತಲುಪಬಹುದಾಗಿದೆ.

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಆರ್.ವಿ.ರಸ್ತೆ, ಡಯಾಗ್ನಲ್ ರಸ್ತೆ ಹಾಗೂ ನೃಪತುಂಗ ರಸ್ತೆಯಲ್ಲಿ ಅಪ್ ರ್ಯಾಂಪ್ ನಿರ್ಮಾಣವಾಗಲಿದ್ದು, ಕೆ.ಜಿ.ರಸ್ತೆ, ಕಸ್ತೂರ ಬಾ ರಸ್ತೆ ಹಾಗೂ ಆರ್.ವಿ ರಸ್ತೆಯ ಬಳಿ ಡೌನ್ ರ್ಯಾಂಪ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಟ್ಟು ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಬಿಬಿಎಂಪಿ ಮುಂದಾಗಿದೆ, ಅಂದುಕೊಂಡಂತೆ ಅದ್ರೆ ಇದೆ ತಿಂಗಳ ಅಂತ್ಯದೋಳಗೆ ಕಾಮಗಾರಿ ಪ್ರರಂಭವಾಗುವ ಎಲ್ಲ ಲಕ್ಷಣಗಳು ಕಾಣಿಸ್ತಿವೇ,,

ಪ್ರೊಫೆಸರ್ ಕಾರು ಡಿಕ್ಕಿ : ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರಿಗೆ ಗಾಯ

ಬೆಂಗಳೂರು, ಅ.7- ಕಾಲೇಜಿನ ಪ್ರೊಫೆಸರ್ ಚಲಾಯಿಸುತ್ತಿದ್ದ ಕಾರು ಗುದ್ದಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಮಹಾರಾಣಿ ಕ್ಲಸ್ಟರ್ ಕಾಲೇಜು ಆವರಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಮಹಾರಾಣಿ ಕ್ಲಸ್ಟರ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಅಶ್ವಿನಿ ಹಾಗೂ ಬಿಎಸ್ಸಿ ಡಾಟಾ ಸೈನ್ಸ್ ವಿದ್ಯಾರ್ಥಿನಿ ನಂದಪ್ರಿಯಾ ಮತ್ತು ಉಪನ್ಯಾಸಕರಾದ ಜ್ಯೋತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಶ್ವಿನಿ ಹಾಗೂ ನಂದಪ್ರಿಯಾ ಮಾಥಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಜ್ಯೋತಿಯವರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಘಾತವೆಸಗಿದ ಪ್ರೊಫೆಸರ್ ನಾಗರಾಜು ಅವರು ಸಹ ಗಾಯಗೊಂಡಿದ್ದಾರೆ.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಇಂದು ಬೆಳಗ್ಗೆ ಇಂಗ್ಲಿಷ್ ಪ್ರೊಫೆಸರ್ ನಾಗರಾಜು ಅವರು ಮನೆಯಿಂದ ಕಾಲೇಜಿಗೆ ತಮ್ಮ ಸ್ವಿಪ್ಟ್ ಕಾರಿನಲ್ಲಿ ಬಂದಿದ್ದು ಕಾಲೇಜು ಒಳಗೆ ಬೆಳಗ್ಗೆ 9.35ರ ಸುಮಾರಿಗೆ ಬರುತ್ತಿದ್ದಂತೆ ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ಮೊದಲು ಕಾರೊಂದಕ್ಕೆ ಡಿಕ್ಕಿ ಹೊಡೆದು ನಂತರ ಉಪನ್ಯಾಸಕರಾದ ಜ್ಯೋತಿ ಹಾಗೂ ಇಬ್ಬರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ.

ಗಾಯಗೊಂಡಿರುವ ವಿದ್ಯಾರ್ಥಿಗಳ ಪೈಕಿ ಅಶ್ವಿನಿ ಅವರಿಗೆ ಗಂಭೀರ ಪೆಟ್ಟಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.ಸುದ್ದಿ ತಿಳಿದು ಹೈಗ್ರೌಂಡ್ಸ್ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರೊಫೆಸರ್ ಅವರ ಕಾರು ಅಪಘಾತಕ್ಕೆ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ.

ಸ್ಥಳಕ್ಕೆ ಆರ್‍ಟಿಓ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ ನಂತರ ಅಪಘಾತಕ್ಕೆ ನಿಖರ ಕಾರಣ ತಿಳಿದು ಬರಲಿದೆ ಎಂದು ಸಂಚಾರ ವಿಭಾಗದ ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಈ ಸಂಜೆಗೆ ತಿಳಿಸಿದ್ದಾರೆ.

ನಕಲಿ ಚಿನ್ನ ಅಡವಿಟ್ಟು 39 ಲಕ್ಷ ಪಡೆದು ವಂಚನೆ

ಬೆಂಗಳೂರು,ಅ.7- ಖಾಸಗಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನವನ್ನಿಟ್ಟು ಬರೋಬ್ಬರಿ 39 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಆರೋಪಿಗಾಗಿ ಅಶೋಕ ನಗರ ಠಾಣೆ ಪೊಲೀಸರು ಶೋಧ ಕೈಗೊಂಡಿದ್ದಾರೆ. ನಗರದ ಖಾಸಗಿ ಬ್ಯಾಂಕೊಂದರಲ್ಲಿ ಕಳೆದ ಮೇ.25ರಂದು ವ್ಯಕ್ತಿಯೊಬ್ಬ 3 ಪದರಗಳ ಒಂದು ಕೆಜಿ ಚಿನ್ನ ಲೇಪನದ ಒಡವೆ ಅಡವಿಟ್ಟು ಸಾಲ ಪಡೆಯಲು ಬಂದಾಗ ಸಿಬ್ಬಂದಿ ಆತ ತಂದಿದ್ದ ಒಡವೆಯ ಮೊದಲ ಪದರವನ್ನು ಪರೀಕ್ಷಿಸಿದಾಗ ಅಸಲಿ ಎಂದು ತಿಳಿದು ಬಂದಿದ್ದರಿಂದ ಸಾಲ ಕೊಟ್ಟಿದ್ದಾರೆ.

ವಂಚಕ 39.59 ಲಕ್ಷ ರೂ. ಸಾಲ ಪಡೆದು ಎರಡು ತಿಂಗಳಾದರೂ ಬ್ಯಾಂಕ್ ಕಡೆ ಬಂದಿಲ್ಲ. ಇದರಿಂದ ಅನುಮಾನಗೊಂಡ ಬ್ಯಾಂಕ್ ಸಿಬ್ಬಂದಿ ಆತ ಅಡವಿಟ್ಟಿದ್ದ ಚಿನ್ನವನ್ನು ಮತ್ತೆ ಸಂಪೂರ್ಣವಾಗಿ ಪರೀಕ್ಷಿಸಿದಾಗ ಆತ ಅಡವಿಟ್ಟಿರುವುದು ನಕಲಿ ಚಿನ್ನ ಎಂಬುವುದು ಗೊತ್ತಾಗಿದೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ತಕ್ಷಣ ಬ್ಯಾಂಕ್ ಮ್ಯಾನೇಜರ್ ಲಕ್ಷೇಶ್ ರಾಲಪಲ್ಲಿ ಎಂಬುವರು ಅಶೋಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕನ ಪತ್ತೆಗೆ ಬಲೆ ಬೀಸಿದ್ದಾರೆ.

ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಗಳ ಸೆರೆ

ಬೆಂಗಳೂರು, ಅ.7- ವಯಸ್ಸಾದ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ಅವರೊಂದಿಗೆ ವಿಶ್ವಾಸದಿಂದ ಮಾತನಾಡಿ ಟೀ ಕೊಡಿಸುವ ನೆಪದಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ, ಪ್ರಜ್ಞೆ ತಪ್ಪಿಸಿ ಅವರ ಮೈಮೇಲಿರುವ ಚಿನ್ನದ ಓಡವೆಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗುತಿದ್ದ ಆರೋಪಿಯನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ 6.5ಲಕ್ಷ ರೂ.ಬೆಲೆ ಬಾಳುವ 115 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಜಾಜಿನಗರದ ನಿವಾಸಿ ಕಾರ್ತಿಕ್ (39) ಹಾಗೂ ಈತನ ಸ್ನೇಹಿತನನ್ನು ಪೊಲೀಸರು ಬಂಧಿಸಿ 3 ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

ಹಳ್ಳಿಮನೆ ಹೋಟೆಲ್ ಹತ್ತಿರದಲ್ಲಿ ಜಗನ್ನಾಥ್ ಗುಪ್ತ ಎಂಬುವವರು ಕಾಂಡಿಮೆಂಟ್ಸ್ ಮತ್ತು ಚಾಟ್ಸ್ ಅಂಗಡಿ ಇಟ್ಟುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಜಗನ್ನಾಥ ಅವರಿಗೆ ಆರೋಪಿ ಕಾರ್ತಿಕ್ ಪರಿಚಯವಾಗಿ ಅವರ ವಿಶ್ವಾಸ ಗಳಿಸಿದ್ದಾನೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸೆ.22ರಂದು ಮಧ್ಯಾಹ್ನ 12ರಿಂದ 12.30ರ ಸಮಯದಲ್ಲಿ ಆರೋಪಿ ಟೀ ಕುಡಿಯುವ ಸಲುವಾಗಿ ಜಗನ್ನಾಥ್ ಗುಪ್ತ ಅವರನ್ನು ಕರೆದುಕೊಂಡು ಅಂಗಡಿಯ ಮುಂಭಾಗದಲ್ಲಿರುವ ಟೀ ಅಂಗಡಿಯ ಪಕ್ಕದ ಕಲ್ಲಿನ ಮೇಲೆ ಕೂರಿಸಿದ್ದಾನೆ. ಆರೋಪಿ ಕಾರ್ತಿಕ್ ಅಂಗಡಿಯಿಂದ ಟೀ ತೆಗೆದುಕೊಂಡು, ಅವರಿಗೆ ಗೊತ್ತಾಗದ ಹಾಗೆ ಒಂದರಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ ಇಬ್ಬರು ಟೀ ಕುಡಿದಿರುತ್ತಾರೆ. ನಂತರ ಸ್ವಲ್ಪ ಸಮಯದಲ್ಲಿ ಜಗನ್ನಾಥ್ ಗುಪ್ತ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಆ ಸಮಯದಲ್ಲಿ ಜಗನ್ನಾಥ ಅವರ ಕತ್ತಿನಲ್ಲಿದ್ದ ಸುಮಾರು 35 ಗ್ರಾಂ ತೂಕದ ಡಾಲರ್ ಸಮೇತ ಇರುವ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದನು. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೃತ್ಯ ನಡೆದ ಸ್ಥಳದಲ್ಲಿನ ಹಲವಾರು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ, ಆರೋಪಿ ಬಗ್ಗೆ ಉಪಯುಕ್ತ ಮಾಹಿತಿ ಸಂಗ್ರಹಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈತನ ಕೃತ್ಯ ಬೆಳಕಿಗೆ ಬಂದಿದ್ದು, ಕಳ್ಳತನ ಮಾಡಿದ ಚಿನ್ನದ ಒಡವೆಗಳನ್ನು ಮತ್ತೊಬ್ಬ ಆರೋಪಿಯ ಮೂಲಕ ಮಾರಾಟ ಮಾಡಿಸುತ್ತಿದ್ದುದು ತಿಳಿದು ಬಂದಿದೆ.

ಐಷಾರಾಮಿ ಪಲ್ಲಕ್ಕಿ ಸಾರಿಗೆ ಸೇವೆ ಆರಂಭ

ಈತನ ಮಾಹಿತಿ ಮೇರೆಗೆ ಮತ್ತೊಬ್ಬನನ್ನು ಬಂಧಿಸಿ ಸುಮಾರು 6.5 ಲಕ್ಷ ರೂ ಮೌಲ್ಯದ 115 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿ ಕಾರ್ತಿಕ್ ಈ ಹಿಂದೆ ಕಾಡುಗೋಡಿ ಪೊಲೀಸ್ ಠಾಣೆಯ ಕೊಲೆ ಪ್ರಕರಣ ಹಾಗೂ ವಿಜಯನಗರ ಪೊಲೀಸ್ ಠಾಣೆಯ ಅಪಹರಣ ಪ್ರಕರಣದಲ್ಲಿ ಜೈಲಿಗೆ ಹೋಗಿ, ಜಾಮೀನು ಪಡೆದು ಹೊರಬಂದ ನಂತರ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಯಸ್ಸಾದ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ಚಿನ್ನಾಭರಣ ಎಗರಿಸುತ್ತಿರುವುದು ಗೊತ್ತಾಗಿದೆ.

ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸೈದುಲು ಅಡಾವತ್ ಅವರ ಮಾರ್ಗದರ್ಶನದಲ್ಲಿ, ಎಸಿಪಿ ಕೃಷ್ಣಮೂರ್ತಿ, ಇನ್ಸ್‍ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ಬಸ್ ಪ್ರಯಾಣ ದರ ಹೆಚ್ಚಳದ ಮುನ್ಸೂಚನೆ ನೀಡಿದ ಡಿಸಿಎಂ

ಬೆಂಗಳೂರು,ಅ.7- ಸರ್ಕಾರದ ಸಾರಿಗೆ ಸಂಸ್ಥೆಗಳನ್ನು ವ್ಯವಹಾರಿಕ ಮಾದರಿಯಲ್ಲಿ ಸ್ಥಾಪಿಸಲಾಗಿದ್ದು, ಅವುಗಳ ಉಳಿವಿಗಾಗಿ ರಾಜಕೀಯ ಹಿತಾಸಕ್ತಿ ಪ್ರದರ್ಶನ ಅಗತ್ಯವಿದೆ, ಕಳೆದ ಏಳೆಂಟು ವರ್ಷಗಳಿಂದಲೂ ಪ್ರಯಾಣ ದರ ಪರಿಷ್ಕರಣೆಯಾಗಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್ ಪ್ರಯಾಣ ದರದ ಏರಿಕೆಯ ಮುನ್ಸೂಚನೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ 100 ನೂತನ ಕರ್ನಾಟಕ ಸಾರಿಗೆ ಮತ್ತು 40 ಹವಾನಿಯಂತ್ರಣರಹಿತ ಸ್ಲೀಪರ್ ಬಸ್‍ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಗೀರ್ ಅಹಮ್ಮದ್‍ಸಾರಿಗೆ ಸಚಿವರಾಗಿದ್ದಾಗ ಡೀಸೆಲ್ ಬೆಲೆ ಏರಿಕೆಗನುಗುಣವಾಗಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕಳೆದ ಏಳೆಂಟು ವರ್ಷಗಳಿಂದಲೂ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗಿಲ್ಲ ಎಂದು ಹೇಳಿದರು.
ಸಾರಿಗೆ ಸಂಸ್ಥೆಗಳ ಉದ್ದೇಶ ಕೇವಲ ಲಾಭ ಮಾಡುವುದಷ್ಟೇ ಅಲ್ಲ, ಜನರಿಗೆ ಸೇವೆ ಮಾಡಬೇಕು, ಅದೇ ಸಮಯದಲ್ಲಿ ಲಾಭದಾಯಕವಾಗಿಯೂ ಅವು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಎಲ್ಲೂ ಇಲ್ಲದಂತಹ ವಿಮಾ ಸೌಲಭ್ಯವನ್ನು ನಮ್ಮ ಸಾರಿಗೆ ನಿಗಮಗಳು ಅಳವಡಿಸಿಕೊಂಡಿವೆ. ಅಪಘಾತದಲ್ಲಿ ಸಿಬ್ಬಂದಿಗಳು ಮೃತಪಟ್ಟ ಸಂದರ್ಭದಲ್ಲಿ 1 ಕೋಟಿ ರೂ. ಪರಿಹಾರ ನೀಡುವ ವಿಮಾ ಸೌಲಭ್ಯ ಕೆಎಸ್‍ಆರ್‍ಟಿಸಿಯಲ್ಲಿದ್ದು, ಉಳಿದಂತೆ ವಿವಿಧ ನಿಗಮಗಳಿಗೂ ಅದನ್ನು ಹಂತಹಂತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಈವರೆಗೂ 72 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದು ಸರ್ಕಾರಕ್ಕೆ ಹೊರೆಯಾಗಿದೆ. ನಿಗಮಗಳಿಗೆ ಸರ್ಕಾರದಿಂದ ಹಣ ಭರಿಸುವುದು ಕಷ್ಟವಾಗುತ್ತಿದೆ. ಈ ಯೋಜನೆ ಪ್ರಸ್ತಾಪಿಸಿದ್ದಕ್ಕಾಗಿ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ. ಸಾರಿಗೆ ನಿಗಮಗಳ ಆಡಳಿತ ಮಂಡಳಿಯವರು ಶಕ್ತಿ ಯೋಜನೆಯಿಂದ ನಿಗಮ ನಡೆಸುವುದು ಕಷ್ಟ ಎಂದು ಚರ್ಚೆ ಮಾಡಿದ್ದಾರೆ. ಎಲ್ಲವೂ ಗೊತ್ತಿದೆ ಎಂದರು.

ಆದರೆ ಹೆಣ್ಣುಮಕ್ಕಳು ಉಚಿತವಾಗಿ ಪ್ರಯಾಣಿಸಬೇಕು ಎಂಬ ನಮ್ಮ ಬದ್ಧತೆ ಈಡೇರಿದೆ. ಇಂದು ಬೆಳಿಗ್ಗೆ ತಾವು ಮನೆಯಿಂದ ಹೊರಡುವಾಗ ಸಾರಿಗೆ ಬಸ್‍ಗಳ ಉದ್ಘಾಟನೆಗಾಗಿ ಹೋಗುತ್ತಿರುವುದಾಗಿ ಪತ್ನಿಗೆ ತಿಳಿಸಿದ್ದು, ಇಲ್ಲಿಂದ ಮೈಸೂರಿಗೆ ಒಮ್ಮೆ ಸಾರಿಗೆ ಬಸ್‍ನಲ್ಲಿ ಪ್ರಯಾಣಿಸುವಂತೆ ಸಲಹೆ ನೀಡಿದ್ದೇನೆ ಎಂದರು.

ಇಂದು ಉದ್ಘಾಟನೆಗೊಂಡ ಬಸ್‍ಗಳಿಗೆ ಪಲ್ಲಕ್ಕಿ ಎಂದು ಉತ್ತಮವಾದ ಹೆಸರಿಟ್ಟವರಿಗೆ ಪ್ರಶಸ್ತಿ ಕೊಡಬೇಕು ಎಂದ ಡಿ.ಕೆ.ಶಿವಕುಮಾರ್, ಹೆಸರು ಸೂಚಿಸಿದವರು ಯಾರು ಎಂದು ಸಾರಿಗೆ ಸಚಿವರಲ್ಲಿ ಕೇಳಿದರು. ಅಧಿಕಾರಿಗಳು ಸಚಿವ ರಾಮಲಿಂಗಾರೆಡ್ಡಿ ಅವರೇ ಹೆಸರಿಟ್ಟಿದ್ದಾರೆ ಎಂದಾಗ ಅವರಿಗೆ ಪ್ರಮಾಣಪತ್ರ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ, ಮಹಾರಾಜರನ್ನು ಹೊರುತ್ತಿದ್ದ ಪಲ್ಲಕ್ಕಿಯ ಹೆಸರನ್ನು ನಮ್ಮ ಸಾರಿಗೆ ಸಂಸ್ಥೆಗಳ ಬಸ್‍ಗಳಿಗೆ ಇಡಲಾಗಿದೆ. ಅವು ಹೆಣ್ಣುಮಕ್ಕಳ ಪ್ರಯಾಣಕ್ಕೆ ಲಭ್ಯವಾಗಿರುವುದು ಸಂತೋಷ. ತಾವು ಪಲ್ಲಕ್ಕಿ ಬಸ್‍ಗಳನ್ನು ಪರಿಶೀಲಿಸಿದ್ದು, ಆರಾಮದಾಯಕವಾಗಿವೆ. ಆರು ಅಡಿ ಸೀಟುಗಳಿದ್ದು, ಪ್ರಯಾಣಕ್ಕೆ ಅನುಕೂಲವಾಗಿವೆ ಎಂದರು.

ಶಾಸಕರಿಗೆ ಸಾರಿಗೆ ಬಸ್‍ಗಳಲ್ಲಿ ತಲಾ ಸೀಟುಗಳನ್ನು ಮೀಸಲಿಡಲಾಗಿದೆ. ಇದನ್ನು ಉತ್ತರ ಕರ್ನಾಟಕದಲ್ಲಿರುವವರು ಬಳಕೆ ಮಾಡಿಕೊಳ್ಳಬಹುದು. ಆದರೆ ಬಹುತೇಕ ಶಾಸಕರು ಆರ್ಥಿಕವಾಗಿ ಪ್ರಬಲವಾಗಿದ್ದು, ಬಸ್‍ನಲ್ಲಿ ಪ್ರಯಾಣಿಸುತ್ತಿಲ್ಲ ಎಂದು ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲಾ ಸಾರಿಗೆ ನಿಗಮಗಳಲ್ಲಿ 24 ಸಾವಿರ ಬಸ್‍ಗಳಿದ್ದು, 1.58 ಲಕ್ಷ ಟ್ರಿಪ್‍ಗಳು ಸಂಚರಿಸುತ್ತಿವೆ. ಪ್ರತಿವರ್ಷ ಶೇ.10 ರಷ್ಟು ಬಸ್‍ಗಳನ್ನು ಸ್ಕ್ರಾಪ್ ಮಾಡಲಾಗುತ್ತಿದೆ. ಪ್ರತಿವರ್ಷ ಹೊಸ ಬಸ್‍ಗಳನ್ನು ಖರೀದಿಸಬೇಕು ಮತ್ತು ನಿವೃತ್ತರಾಗುವ ಶೇ.10 ರಷ್ಟು ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿದೆ. 2016 ರ ನಂತರ ಸಾರಿಗೆ ನಿಗಮಗಳಲ್ಲಿ ನೇಮಕವಾಗಿಲ್ಲ, 4 ವರ್ಷಗಳಿಂದಲೂ ಹೊಸ ಬಸ್‍ಗಳನ್ನೂ ಖರೀದಿಸಿಲ್ಲ ಎಂದು ತಿಳಿಸಿದರು.

ಮನರೇಗಾ ಯೋಜನೆ ಡಿಜಿಟಲಿಕರಣದ ಹಿಂದೆ ದುರುದ್ದೇಶ : ಜೈರಾಮ್ ರಮೇಶ್

ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, 1,300 ಬಸ್‍ಗಳನ್ನು ಖರೀದಿಸಲಾಗುವುದು. ಮುಂದಿನ ನಾಲ್ಕೈದು ತಿಂಗಳಿನಲ್ಲಿ ಸಾರಿಗೆ ನಿಗಮಗಳಲ್ಲಿ 4,500 ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. 13,000 ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೆಲ್ಲವೂ ಸಾಧ್ಯವಾದ ಬಳಿಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಹಾಗೂ ರಾಜ್ಯದ ಪ್ರತಿಯೊಂದೂ ಕೊನೆ ಭಾಗಕ್ಕೂ ಸಾರಿಗೆ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂದರು.

ಕರೊನ ಕಾಲದಲ್ಲಿ 2,800 ಸಂಚಾರ ಅವಧಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮರು ಆರಂಭಿಸಬೇಕಿದೆ. 300 ರಿಂದ 400 ಕಿ.ಮೀ. ದೂರ ರಾತ್ರಿ ಪ್ರಯಾಣಿಸುವವರು ನಾನ್ ಎಸಿ ಬಸ್‍ಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ ಅಗತ್ಯಕ್ಕನುಗುಣವಾಗಿ ಅವುಗಳನ್ನು ಖರೀದಿಸಲಾಗುವುದು. ಎಕ್ಸ್‍ಪ್ರೆಸ್ ಬಸ್‍ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ರಾಜ್ಯದ ಸಾರಿಗೆ ಸಂಸ್ಥೆಗಳು ಉತ್ತಮ ಹೆಸರು ಗಳಿಸಿವೆ. ಇದುವರೆಗೂ ಕೆಎಸ್‍ಆರ್‍ಟಿಸಿಗೆ 300, ಬಿಎಂಟಿಸಿಗೆ 145 ಪ್ರಶಸ್ತಿಗಳು ಬಂದಿವೆ. ಬೇರೆ ಯಾವುದೇ ರಾಜ್ಯದ ಸಾರಿಗೆ ನಿಗಮಗಳಿಗೆ ಇಷ್ಟು ಪ್ರಶಸ್ತಿಗಳು ಬಂದಿಲ್ಲ. ಶಕ್ತಿ ಯೋಜನೆ ಆರಂಭಿಸುವಾಗ ಹಲವು ಕೊರತೆಗಳಿದ್ದವು. ಆದರೂ ಧೈರ್ಯ ಮಾಡಿ ಯೋಜನೆ ಜಾರಿಗೊಳಿಸಿದ್ದು, ಸಾಧನೆಗಳಿಗೆ ಉತ್ತಮ ಉದಾಹರಣೆಯಾಗಿದೆ. ವಿರೋಧಪಕ್ಷದವರು ಈ ವಿಷಯದಲ್ಲಿ ಮಾಡಿದ ಟೀಕೆಗಳೆಲ್ಲವೂ ಸುಳ್ಳಾಗಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಬಸ್‍ಗಳನ್ನು ಉದ್ಘಾಟಿಸಿದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ

ಮೈಸೂರು, ಅ. 7- ರಾಜ್ಯ ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಗಳಿಗೆ ಆರ್ಥಿಕ ಸಮಸ್ಯೆ ಇಲ್ಲ. ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ. ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಾದ್ಯಂತ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಬೆಳೆ ನಾಶ ಆಗಿದೆ. ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ. ತಂಡದ ಸದಸ್ಯರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಲಿದೆ ಎಂದವರು ತಿಳಿಸಿದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಕಳೆದ 70 ವರ್ಷಗಳಿಂದಲೂ ಹಿಂದುಳಿದಿರುವವರನ್ನು ಜಾತಿ ಜನಗಣತಿ ಆಧಾರದಲ್ಲಿ ಗುರುತಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾತಿ ಆಧಾರಿತ ಗಣತಿಯನ್ನು ನಡೆಸಲಾಗುವುದು ಎಂದವರು ತಿಳಿಸಿದರು.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗಲೇ ಕಾಂತ ರಾಜು ಅವರು ಕರ್ನಾಟಕದಲ್ಲಿನ ಜಾತಿ ಗಣತಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ. ನಾನು ಅವರಿಗೆ ಹೇಳಿದ್ದೇನೆ. ಆದಷ್ಟು ಬೇಗ ಕಾಂತರಾಜು ನೀಡಿದಂತೆ ವರದಿ ನೀಡುವಂತೆ ತಿಳಿಸಿದ್ದೇನೆ. ಅವರು ನವೆಂಬರ್‍ನಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮದ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಹೇಗಿದೆಯೋ ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತವೆ. ಒಟ್ಟಿನಲ್ಲಿ ಸದ್ಯದಲ್ಲಿ ಯಾವುದೇ ಲಿಕ್ಕರ್ ಅಂಗಡಿಗಳನ್ನು ತಡೆಯಲು ರಹದಾರಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೆಯೂ ಮಹಿಷ ದಸರಾ ಮಾಡಿದ್ದರು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.