Home Blog Page 1909

ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಗಳ ಸೆರೆ

ಬೆಂಗಳೂರು, ಅ.7- ವಯಸ್ಸಾದ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ಅವರೊಂದಿಗೆ ವಿಶ್ವಾಸದಿಂದ ಮಾತನಾಡಿ ಟೀ ಕೊಡಿಸುವ ನೆಪದಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ, ಪ್ರಜ್ಞೆ ತಪ್ಪಿಸಿ ಅವರ ಮೈಮೇಲಿರುವ ಚಿನ್ನದ ಓಡವೆಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗುತಿದ್ದ ಆರೋಪಿಯನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿ 6.5ಲಕ್ಷ ರೂ.ಬೆಲೆ ಬಾಳುವ 115 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಜಾಜಿನಗರದ ನಿವಾಸಿ ಕಾರ್ತಿಕ್ (39) ಹಾಗೂ ಈತನ ಸ್ನೇಹಿತನನ್ನು ಪೊಲೀಸರು ಬಂಧಿಸಿ 3 ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.

ಹಳ್ಳಿಮನೆ ಹೋಟೆಲ್ ಹತ್ತಿರದಲ್ಲಿ ಜಗನ್ನಾಥ್ ಗುಪ್ತ ಎಂಬುವವರು ಕಾಂಡಿಮೆಂಟ್ಸ್ ಮತ್ತು ಚಾಟ್ಸ್ ಅಂಗಡಿ ಇಟ್ಟುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಜಗನ್ನಾಥ ಅವರಿಗೆ ಆರೋಪಿ ಕಾರ್ತಿಕ್ ಪರಿಚಯವಾಗಿ ಅವರ ವಿಶ್ವಾಸ ಗಳಿಸಿದ್ದಾನೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಸೆ.22ರಂದು ಮಧ್ಯಾಹ್ನ 12ರಿಂದ 12.30ರ ಸಮಯದಲ್ಲಿ ಆರೋಪಿ ಟೀ ಕುಡಿಯುವ ಸಲುವಾಗಿ ಜಗನ್ನಾಥ್ ಗುಪ್ತ ಅವರನ್ನು ಕರೆದುಕೊಂಡು ಅಂಗಡಿಯ ಮುಂಭಾಗದಲ್ಲಿರುವ ಟೀ ಅಂಗಡಿಯ ಪಕ್ಕದ ಕಲ್ಲಿನ ಮೇಲೆ ಕೂರಿಸಿದ್ದಾನೆ. ಆರೋಪಿ ಕಾರ್ತಿಕ್ ಅಂಗಡಿಯಿಂದ ಟೀ ತೆಗೆದುಕೊಂಡು, ಅವರಿಗೆ ಗೊತ್ತಾಗದ ಹಾಗೆ ಒಂದರಲ್ಲಿ ನಿದ್ದೆ ಮಾತ್ರೆಯನ್ನು ಬೆರೆಸಿ ಇಬ್ಬರು ಟೀ ಕುಡಿದಿರುತ್ತಾರೆ. ನಂತರ ಸ್ವಲ್ಪ ಸಮಯದಲ್ಲಿ ಜಗನ್ನಾಥ್ ಗುಪ್ತ ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.

ಆ ಸಮಯದಲ್ಲಿ ಜಗನ್ನಾಥ ಅವರ ಕತ್ತಿನಲ್ಲಿದ್ದ ಸುಮಾರು 35 ಗ್ರಾಂ ತೂಕದ ಡಾಲರ್ ಸಮೇತ ಇರುವ ಚಿನ್ನದ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದನು. ಈ ಬಗ್ಗೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೃತ್ಯ ನಡೆದ ಸ್ಥಳದಲ್ಲಿನ ಹಲವಾರು ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ, ಆರೋಪಿ ಬಗ್ಗೆ ಉಪಯುಕ್ತ ಮಾಹಿತಿ ಸಂಗ್ರಹಿಸಿ, ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಈತನ ಕೃತ್ಯ ಬೆಳಕಿಗೆ ಬಂದಿದ್ದು, ಕಳ್ಳತನ ಮಾಡಿದ ಚಿನ್ನದ ಒಡವೆಗಳನ್ನು ಮತ್ತೊಬ್ಬ ಆರೋಪಿಯ ಮೂಲಕ ಮಾರಾಟ ಮಾಡಿಸುತ್ತಿದ್ದುದು ತಿಳಿದು ಬಂದಿದೆ.

ಐಷಾರಾಮಿ ಪಲ್ಲಕ್ಕಿ ಸಾರಿಗೆ ಸೇವೆ ಆರಂಭ

ಈತನ ಮಾಹಿತಿ ಮೇರೆಗೆ ಮತ್ತೊಬ್ಬನನ್ನು ಬಂಧಿಸಿ ಸುಮಾರು 6.5 ಲಕ್ಷ ರೂ ಮೌಲ್ಯದ 115 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿ ಕಾರ್ತಿಕ್ ಈ ಹಿಂದೆ ಕಾಡುಗೋಡಿ ಪೊಲೀಸ್ ಠಾಣೆಯ ಕೊಲೆ ಪ್ರಕರಣ ಹಾಗೂ ವಿಜಯನಗರ ಪೊಲೀಸ್ ಠಾಣೆಯ ಅಪಹರಣ ಪ್ರಕರಣದಲ್ಲಿ ಜೈಲಿಗೆ ಹೋಗಿ, ಜಾಮೀನು ಪಡೆದು ಹೊರಬಂದ ನಂತರ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಯಸ್ಸಾದ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ಚಿನ್ನಾಭರಣ ಎಗರಿಸುತ್ತಿರುವುದು ಗೊತ್ತಾಗಿದೆ.

ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸೈದುಲು ಅಡಾವತ್ ಅವರ ಮಾರ್ಗದರ್ಶನದಲ್ಲಿ, ಎಸಿಪಿ ಕೃಷ್ಣಮೂರ್ತಿ, ಇನ್ಸ್‍ಪೆಕ್ಟರ್ ಜಗದೀಶ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

ಬಸ್ ಪ್ರಯಾಣ ದರ ಹೆಚ್ಚಳದ ಮುನ್ಸೂಚನೆ ನೀಡಿದ ಡಿಸಿಎಂ

ಬೆಂಗಳೂರು,ಅ.7- ಸರ್ಕಾರದ ಸಾರಿಗೆ ಸಂಸ್ಥೆಗಳನ್ನು ವ್ಯವಹಾರಿಕ ಮಾದರಿಯಲ್ಲಿ ಸ್ಥಾಪಿಸಲಾಗಿದ್ದು, ಅವುಗಳ ಉಳಿವಿಗಾಗಿ ರಾಜಕೀಯ ಹಿತಾಸಕ್ತಿ ಪ್ರದರ್ಶನ ಅಗತ್ಯವಿದೆ, ಕಳೆದ ಏಳೆಂಟು ವರ್ಷಗಳಿಂದಲೂ ಪ್ರಯಾಣ ದರ ಪರಿಷ್ಕರಣೆಯಾಗಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್ ಪ್ರಯಾಣ ದರದ ಏರಿಕೆಯ ಮುನ್ಸೂಚನೆ ನೀಡಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ 100 ನೂತನ ಕರ್ನಾಟಕ ಸಾರಿಗೆ ಮತ್ತು 40 ಹವಾನಿಯಂತ್ರಣರಹಿತ ಸ್ಲೀಪರ್ ಬಸ್‍ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಹಿಂದೆ ಸಗೀರ್ ಅಹಮ್ಮದ್‍ಸಾರಿಗೆ ಸಚಿವರಾಗಿದ್ದಾಗ ಡೀಸೆಲ್ ಬೆಲೆ ಏರಿಕೆಗನುಗುಣವಾಗಿ ಬಸ್ ಪ್ರಯಾಣ ದರವನ್ನು ಪರಿಷ್ಕರಣೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಕಳೆದ ಏಳೆಂಟು ವರ್ಷಗಳಿಂದಲೂ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗಿಲ್ಲ ಎಂದು ಹೇಳಿದರು.
ಸಾರಿಗೆ ಸಂಸ್ಥೆಗಳ ಉದ್ದೇಶ ಕೇವಲ ಲಾಭ ಮಾಡುವುದಷ್ಟೇ ಅಲ್ಲ, ಜನರಿಗೆ ಸೇವೆ ಮಾಡಬೇಕು, ಅದೇ ಸಮಯದಲ್ಲಿ ಲಾಭದಾಯಕವಾಗಿಯೂ ಅವು ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ಎಲ್ಲೂ ಇಲ್ಲದಂತಹ ವಿಮಾ ಸೌಲಭ್ಯವನ್ನು ನಮ್ಮ ಸಾರಿಗೆ ನಿಗಮಗಳು ಅಳವಡಿಸಿಕೊಂಡಿವೆ. ಅಪಘಾತದಲ್ಲಿ ಸಿಬ್ಬಂದಿಗಳು ಮೃತಪಟ್ಟ ಸಂದರ್ಭದಲ್ಲಿ 1 ಕೋಟಿ ರೂ. ಪರಿಹಾರ ನೀಡುವ ವಿಮಾ ಸೌಲಭ್ಯ ಕೆಎಸ್‍ಆರ್‍ಟಿಸಿಯಲ್ಲಿದ್ದು, ಉಳಿದಂತೆ ವಿವಿಧ ನಿಗಮಗಳಿಗೂ ಅದನ್ನು ಹಂತಹಂತವಾಗಿ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ ಈವರೆಗೂ 72 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇದು ಸರ್ಕಾರಕ್ಕೆ ಹೊರೆಯಾಗಿದೆ. ನಿಗಮಗಳಿಗೆ ಸರ್ಕಾರದಿಂದ ಹಣ ಭರಿಸುವುದು ಕಷ್ಟವಾಗುತ್ತಿದೆ. ಈ ಯೋಜನೆ ಪ್ರಸ್ತಾಪಿಸಿದ್ದಕ್ಕಾಗಿ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ. ಸಾರಿಗೆ ನಿಗಮಗಳ ಆಡಳಿತ ಮಂಡಳಿಯವರು ಶಕ್ತಿ ಯೋಜನೆಯಿಂದ ನಿಗಮ ನಡೆಸುವುದು ಕಷ್ಟ ಎಂದು ಚರ್ಚೆ ಮಾಡಿದ್ದಾರೆ. ಎಲ್ಲವೂ ಗೊತ್ತಿದೆ ಎಂದರು.

ಆದರೆ ಹೆಣ್ಣುಮಕ್ಕಳು ಉಚಿತವಾಗಿ ಪ್ರಯಾಣಿಸಬೇಕು ಎಂಬ ನಮ್ಮ ಬದ್ಧತೆ ಈಡೇರಿದೆ. ಇಂದು ಬೆಳಿಗ್ಗೆ ತಾವು ಮನೆಯಿಂದ ಹೊರಡುವಾಗ ಸಾರಿಗೆ ಬಸ್‍ಗಳ ಉದ್ಘಾಟನೆಗಾಗಿ ಹೋಗುತ್ತಿರುವುದಾಗಿ ಪತ್ನಿಗೆ ತಿಳಿಸಿದ್ದು, ಇಲ್ಲಿಂದ ಮೈಸೂರಿಗೆ ಒಮ್ಮೆ ಸಾರಿಗೆ ಬಸ್‍ನಲ್ಲಿ ಪ್ರಯಾಣಿಸುವಂತೆ ಸಲಹೆ ನೀಡಿದ್ದೇನೆ ಎಂದರು.

ಇಂದು ಉದ್ಘಾಟನೆಗೊಂಡ ಬಸ್‍ಗಳಿಗೆ ಪಲ್ಲಕ್ಕಿ ಎಂದು ಉತ್ತಮವಾದ ಹೆಸರಿಟ್ಟವರಿಗೆ ಪ್ರಶಸ್ತಿ ಕೊಡಬೇಕು ಎಂದ ಡಿ.ಕೆ.ಶಿವಕುಮಾರ್, ಹೆಸರು ಸೂಚಿಸಿದವರು ಯಾರು ಎಂದು ಸಾರಿಗೆ ಸಚಿವರಲ್ಲಿ ಕೇಳಿದರು. ಅಧಿಕಾರಿಗಳು ಸಚಿವ ರಾಮಲಿಂಗಾರೆಡ್ಡಿ ಅವರೇ ಹೆಸರಿಟ್ಟಿದ್ದಾರೆ ಎಂದಾಗ ಅವರಿಗೆ ಪ್ರಮಾಣಪತ್ರ ನೀಡಬೇಕೆಂದು ಡಿ.ಕೆ.ಶಿವಕುಮಾರ್ ಹೇಳಿದರು.

ರಾಜ, ಮಹಾರಾಜರನ್ನು ಹೊರುತ್ತಿದ್ದ ಪಲ್ಲಕ್ಕಿಯ ಹೆಸರನ್ನು ನಮ್ಮ ಸಾರಿಗೆ ಸಂಸ್ಥೆಗಳ ಬಸ್‍ಗಳಿಗೆ ಇಡಲಾಗಿದೆ. ಅವು ಹೆಣ್ಣುಮಕ್ಕಳ ಪ್ರಯಾಣಕ್ಕೆ ಲಭ್ಯವಾಗಿರುವುದು ಸಂತೋಷ. ತಾವು ಪಲ್ಲಕ್ಕಿ ಬಸ್‍ಗಳನ್ನು ಪರಿಶೀಲಿಸಿದ್ದು, ಆರಾಮದಾಯಕವಾಗಿವೆ. ಆರು ಅಡಿ ಸೀಟುಗಳಿದ್ದು, ಪ್ರಯಾಣಕ್ಕೆ ಅನುಕೂಲವಾಗಿವೆ ಎಂದರು.

ಶಾಸಕರಿಗೆ ಸಾರಿಗೆ ಬಸ್‍ಗಳಲ್ಲಿ ತಲಾ ಸೀಟುಗಳನ್ನು ಮೀಸಲಿಡಲಾಗಿದೆ. ಇದನ್ನು ಉತ್ತರ ಕರ್ನಾಟಕದಲ್ಲಿರುವವರು ಬಳಕೆ ಮಾಡಿಕೊಳ್ಳಬಹುದು. ಆದರೆ ಬಹುತೇಕ ಶಾಸಕರು ಆರ್ಥಿಕವಾಗಿ ಪ್ರಬಲವಾಗಿದ್ದು, ಬಸ್‍ನಲ್ಲಿ ಪ್ರಯಾಣಿಸುತ್ತಿಲ್ಲ ಎಂದು ಹೇಳಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲಾ ಸಾರಿಗೆ ನಿಗಮಗಳಲ್ಲಿ 24 ಸಾವಿರ ಬಸ್‍ಗಳಿದ್ದು, 1.58 ಲಕ್ಷ ಟ್ರಿಪ್‍ಗಳು ಸಂಚರಿಸುತ್ತಿವೆ. ಪ್ರತಿವರ್ಷ ಶೇ.10 ರಷ್ಟು ಬಸ್‍ಗಳನ್ನು ಸ್ಕ್ರಾಪ್ ಮಾಡಲಾಗುತ್ತಿದೆ. ಪ್ರತಿವರ್ಷ ಹೊಸ ಬಸ್‍ಗಳನ್ನು ಖರೀದಿಸಬೇಕು ಮತ್ತು ನಿವೃತ್ತರಾಗುವ ಶೇ.10 ರಷ್ಟು ಹುದ್ದೆಗಳಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿದೆ. 2016 ರ ನಂತರ ಸಾರಿಗೆ ನಿಗಮಗಳಲ್ಲಿ ನೇಮಕವಾಗಿಲ್ಲ, 4 ವರ್ಷಗಳಿಂದಲೂ ಹೊಸ ಬಸ್‍ಗಳನ್ನೂ ಖರೀದಿಸಿಲ್ಲ ಎಂದು ತಿಳಿಸಿದರು.

ಮನರೇಗಾ ಯೋಜನೆ ಡಿಜಿಟಲಿಕರಣದ ಹಿಂದೆ ದುರುದ್ದೇಶ : ಜೈರಾಮ್ ರಮೇಶ್

ಬಜೆಟ್‍ನಲ್ಲಿ 500 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, 1,300 ಬಸ್‍ಗಳನ್ನು ಖರೀದಿಸಲಾಗುವುದು. ಮುಂದಿನ ನಾಲ್ಕೈದು ತಿಂಗಳಿನಲ್ಲಿ ಸಾರಿಗೆ ನಿಗಮಗಳಲ್ಲಿ 4,500 ಬಸ್‍ಗಳನ್ನು ಸೇರ್ಪಡೆ ಮಾಡಲಾಗುವುದು. 13,000 ಸಿಬ್ಬಂದಿಗಳನ್ನು ನೇಮಕಾತಿ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದೆಲ್ಲವೂ ಸಾಧ್ಯವಾದ ಬಳಿಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲು ಹಾಗೂ ರಾಜ್ಯದ ಪ್ರತಿಯೊಂದೂ ಕೊನೆ ಭಾಗಕ್ಕೂ ಸಾರಿಗೆ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂದರು.

ಕರೊನ ಕಾಲದಲ್ಲಿ 2,800 ಸಂಚಾರ ಅವಧಿಗಳನ್ನು ಸ್ಥಗಿತಗೊಳಿಸಲಾಗಿತ್ತು. ಅದನ್ನು ಮರು ಆರಂಭಿಸಬೇಕಿದೆ. 300 ರಿಂದ 400 ಕಿ.ಮೀ. ದೂರ ರಾತ್ರಿ ಪ್ರಯಾಣಿಸುವವರು ನಾನ್ ಎಸಿ ಬಸ್‍ಗಳಿಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಹೀಗಾಗಿ ಅಗತ್ಯಕ್ಕನುಗುಣವಾಗಿ ಅವುಗಳನ್ನು ಖರೀದಿಸಲಾಗುವುದು. ಎಕ್ಸ್‍ಪ್ರೆಸ್ ಬಸ್‍ಗಳಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತಹ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ರಾಜ್ಯದ ಸಾರಿಗೆ ಸಂಸ್ಥೆಗಳು ಉತ್ತಮ ಹೆಸರು ಗಳಿಸಿವೆ. ಇದುವರೆಗೂ ಕೆಎಸ್‍ಆರ್‍ಟಿಸಿಗೆ 300, ಬಿಎಂಟಿಸಿಗೆ 145 ಪ್ರಶಸ್ತಿಗಳು ಬಂದಿವೆ. ಬೇರೆ ಯಾವುದೇ ರಾಜ್ಯದ ಸಾರಿಗೆ ನಿಗಮಗಳಿಗೆ ಇಷ್ಟು ಪ್ರಶಸ್ತಿಗಳು ಬಂದಿಲ್ಲ. ಶಕ್ತಿ ಯೋಜನೆ ಆರಂಭಿಸುವಾಗ ಹಲವು ಕೊರತೆಗಳಿದ್ದವು. ಆದರೂ ಧೈರ್ಯ ಮಾಡಿ ಯೋಜನೆ ಜಾರಿಗೊಳಿಸಿದ್ದು, ಸಾಧನೆಗಳಿಗೆ ಉತ್ತಮ ಉದಾಹರಣೆಯಾಗಿದೆ. ವಿರೋಧಪಕ್ಷದವರು ಈ ವಿಷಯದಲ್ಲಿ ಮಾಡಿದ ಟೀಕೆಗಳೆಲ್ಲವೂ ಸುಳ್ಳಾಗಿವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಬಸ್‍ಗಳನ್ನು ಉದ್ಘಾಟಿಸಿದರು. ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ : ಸಿಎಂ

ಮೈಸೂರು, ಅ. 7- ರಾಜ್ಯ ಸರ್ಕಾರ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆ ಗಳಿಗೆ ಆರ್ಥಿಕ ಸಮಸ್ಯೆ ಇಲ್ಲ. ಎಲ್ಲವೂ ವ್ಯವಸ್ಥಿತವಾಗಿ ನಡೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಕೇಂದ್ರ ಸರ್ಕಾರಕ್ಕೆ 4860 ಕೋಟಿ ರೂ. ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ರಾಜ್ಯಾದ್ಯಂತ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 30 ಸಾವಿರಕ್ಕೂ ಹೆಚ್ಚು ಬೆಳೆ ನಾಶ ಆಗಿದೆ. ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದೆ. ತಂಡದ ಸದಸ್ಯರು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿ ಹಣ ಬಿಡುಗಡೆ ಮಾಡಲಿದೆ ಎಂದವರು ತಿಳಿಸಿದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಕಳೆದ 70 ವರ್ಷಗಳಿಂದಲೂ ಹಿಂದುಳಿದಿರುವವರನ್ನು ಜಾತಿ ಜನಗಣತಿ ಆಧಾರದಲ್ಲಿ ಗುರುತಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಜಾತಿ ಆಧಾರಿತ ಗಣತಿಯನ್ನು ನಡೆಸಲಾಗುವುದು ಎಂದವರು ತಿಳಿಸಿದರು.ಕುಮಾರಸ್ವಾಮಿ ಮುಖ್ಯ ಮಂತ್ರಿ ಆಗಿದ್ದಾಗಲೇ ಕಾಂತ ರಾಜು ಅವರು ಕರ್ನಾಟಕದಲ್ಲಿನ ಜಾತಿ ಗಣತಿ ವರದಿ ನೀಡಿದ್ದರು. ಆದರೆ ಕುಮಾರಸ್ವಾಮಿ ಅವರು ವರದಿಯನ್ನು ಸ್ವೀಕರಿಸಲಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ. ನಾನು ಅವರಿಗೆ ಹೇಳಿದ್ದೇನೆ. ಆದಷ್ಟು ಬೇಗ ಕಾಂತರಾಜು ನೀಡಿದಂತೆ ವರದಿ ನೀಡುವಂತೆ ತಿಳಿಸಿದ್ದೇನೆ. ಅವರು ನವೆಂಬರ್‍ನಲ್ಲಿ ವರದಿ ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಮುಖ್ಯಮಂತ್ರಿಗಳು ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮದ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ. ಸಾರ್ವಜನಿಕರ ಅಭಿಪ್ರಾಯ ಹೇಗಿದೆಯೋ ಅದರ ಆಧಾರದ ಮೇಲೆ ನಾವು ಕ್ರಮ ಕೈಗೊಳ್ಳುತ್ತವೆ. ಒಟ್ಟಿನಲ್ಲಿ ಸದ್ಯದಲ್ಲಿ ಯಾವುದೇ ಲಿಕ್ಕರ್ ಅಂಗಡಿಗಳನ್ನು ತಡೆಯಲು ರಹದಾರಿ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಹಿಂದೆಯೂ ಮಹಿಷ ದಸರಾ ಮಾಡಿದ್ದರು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ತಿಳಿಸಿದರು.

ಇ ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ : ಐವರ ಮನೆ ಮೇಲೆ ದಾಳಿ

ಬೆಂಗಳೂರು,ಅ.7- ಸರ್ಕಾರದ ಇ- ಪ್ರಕ್ಯೂರ್ಮೆಂಟ್ ವೆಬ್‍ಸೈಟ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ಮತ್ತಿಬ್ಬರನ್ನು ಬಂಸಿರುವ ವಿಶೇಷ ತನಿಖಾ ದಳದ ಅಧಿಕಾರಿಗಳು ಸಾಕ್ಷ್ಯಗಳ ಸಂಗ್ರಹಕ್ಕಾಗಿ ನಗರದ ಐದು ಮಂದಿ ಪ್ರಮುಖ ವ್ಯಕ್ತಿಗಳ ಮನೆಗಳು ಸೇರಿದಂತೆ 7 ಕಡೆ ದಾಳಿ ಮಾಡಿ ಶೋಧ ಕಾರ್ಯಾ ಚರಣೆ ನಡೆಸಿದ್ದಾರೆ.

2019 ರಲ್ಲಿ ಬೆಳಕಿಗೆ ಬಂದಿದ್ದ ಇ-ಪ್ರಕ್ಯೂರ್ಮೆಂಟ್ ಹ್ಯಾಕಿಂಗ್ ಪ್ರಕರಣ ದಿನೇದಿನೇ ಕುತೂಹಲ ಕೆರಳಿಸುತ್ತಿದೆ. ಪ್ರಮುಖ ಆರೋಪಿ ಶ್ರೀಕಿ ನೀಡಿದ ಮಾಹಿತಿ ಆಧರಿಸಿ ಆರಂಭದಲ್ಲೇ 18 ಮಂದಿಯನ್ನು ಬಂಧಿಸಲಾಗಿತ್ತು. ಆದರೆ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಕೆಲಸ ಮಾಡಿದ ಪ್ರಮುಖ ಆರೋಪಿಗಳು ಹಾಗೂ ಮಧ್ಯವರ್ತಿಗಳು ಪ್ರಕರಣದಿಂದ ನುಣುಚಿಕೊಂಡಿದ್ದರು. ಕೆಲವರು ತಲೆಮರೆಸಿಕೊಂಡಿದ್ದರು.

ಕಾಂಗ್ರೆಸ್ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ಹ್ಯಾಕಿಂಗ್‍ನಿಂದ ಅಕ್ರಮವಾಗಿ ಗಳಿಸಿದ ಹಣವನ್ನು ವರ್ಗಾವಣೆ ಹಾಗೂ ಪಡೆದುಕೊಂಡವರ ಬೆನ್ನು ಬಿದ್ದಿದೆ. ತನಿಖೆಯ ಪ್ರಗತಿಯಲ್ಲಿ ನಾಗ್ಪುರದ ನಿತಿನ್ ಮಿಶ್ರಾ ಮತ್ತು ದರ್ಶಿತ್ ಪಟೇಲ್ ಎಂಬಿಬ್ಬರನ್ನು ಬಂಧಿಸಲಾಗಿದೆ.

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಈ ಆರೋಪಿಗಳು 10.5 ಕೋಟಿ ರೂ. ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದರು. ಇತ್ತೀಚೆಗೆ ಪಂಜಾಬ್‍ನ ಲೂದಿಯಾನದಲ್ಲಿ ಪ್ರಮುಖ ಆರೋಪಿ ಅರವಿಂದ್ ಸಿಂಗ್‍ನನ್ನು ಬಂಧಿಸಲಾಗಿತ್ತು. ಈವರೆಗೂ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ. ಆರೋಪಿ ಶ್ರೀಕಿ ಇ-ಪ್ರಕ್ಯೂರ್ಮೆಂಟ್, ಪೋಕರ್ ಗೇಮಿಂಗ್ ಸೇರಿದಂತೆ ವಿವಿಧ ವೆಬ್‍ಸೈಟ್‍ಗಳನ್ನು ಹ್ಯಾಕ್ ಮಾಡಿ ಕೋಟ್ಯಂತರ ರೂ. ಹಣ ಲಪಟಾಯಿಸಿದ್ದ ಆರೋಪಗಳಿವೆ. ಅವುಗಳನ್ನು ವರ್ಗಾವಣೆ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ತನಿಖೆಗಳು ನಡೆಯುತ್ತಿವೆ.

ಬಿಟ್‍ಕಾಯಿನ್ ಹಾಗೂ ವೆಬ್‍ಸೈಟ್ ಹ್ಯಾಕಿಂಗ್ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿಗಳ ಮನೆ ಮೇಲೆ 7 ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಶೋಧ ಕಾರ್ಯಾಚರಣೆ ನಡೆಸುತ್ತಿರುವ ವಿಶೇಷ ತನಿಖಾ ದಳದ ಪೊಲೀಸರು 5 ಮಂದಿಯ ಮನೆ ಹಾಗೂ ಕಚೇರಿಗಳಲ್ಲಿ ಸಾಕ್ಷ್ಯಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಐಷಾರಾಮಿ ಪಲ್ಲಕ್ಕಿ ಸಾರಿಗೆ ಸೇವೆ ಆರಂಭ

ಬೆಂಗಳೂರು,ಅ.7- ಸಾರಿಗೆ ನಿಗಮಗಳಲ್ಲಿ ದೂರದ ಪ್ರಯಾಣಕ್ಕೆ ಅನುಕೂಲವಾಗುವಂತೆ ಹೈಟೆಕ್ ಸ್ಲೀಪರ್‍ಕೋಚ್ ಬಸ್‍ಗಳ ಸೇವೆಯನ್ನು ಆರಂಭಿಸಲಾಗಿದ್ದು, ಕಡಿಮೆ ಪ್ರಯಾಣ ದರದಲ್ಲಿ ಆರಾಮದಾಯಕ ಸೌಲಭ್ಯ ಒದಗಿಸಲಾಗುತ್ತಿದೆ. ಜೊತೆಗೆ ಪಲ್ಲಕ್ಕಿ ಹೆಸರಿನಲ್ಲಿ ಹೊಸ ಬ್ರಾಂಡಿಂಗ್ ಸೇವೆಯನ್ನು ಸಾರಿಗೆ ನಿಗಮಗಳು ಆರಂಭಿಸಿವೆ.

ಮುಖ್ಯಮಂತ್ರಿಸಿದ್ದರಾಮಯ್ಯನವರು ವಿಧಾನ ಸೌಧದ ಗ್ರಾಂಡ್ ಸ್ಟೆಪ್‍ಗಳಲ್ಲಿ 40 ನಾನ್ ಎಸಿ ಸ್ಲೀಪರ್‍ಕೋಚ್ ಮತ್ತು 100 ಸಾಮಾನ್ಯ ಬಸ್‍ಗಳ ಪ್ರಯಾಣಕ್ಕೆ ಚಾಲನೆ ನೀಡಿದರು. ಇವುಗಳಲ್ಲಿ 13.5 ಮೀಟರ್ ಉದ್ದದ 8 ಬಸ್‍ಗಳಿದ್ದು, ಅವುಗಳಲ್ಲಿ 4 ನಾನ್ ಎಸಿ, ಉಳಿದ 4 ಎಸಿ ಬಸ್‍ಗಳಾಗಿವೆ. ಅತ್ಯಾಧುನಿಕವಾದ ಈ ಬಸ್‍ಗಳು ಐಶಾರಾಮಿ ಸೌಲಭ್ಯ ಹೊಂದಿವೆ. ಪ್ರಮುಖವಾಗಿ ದೂರದ ಬೆಳಗಾವಿ, ಮಂಗಳೂರುನÀಂತಹ ಪ್ರದೇಶಗಳಿಂದ ರಾಜಧಾನಿ ಗೆ ಪ್ರಯಾಣಿಸುತ್ತಿವೆ. ಮುಂದಿನ ಹಂತದಲ್ಲಿ ವಿವಿಧ ಭಾಗಗಳಿಗೂ ಸಂಪರ್ಕ ಕಲ್ಪಿಸುವ ಸಾಧ್ಯತೆ ಇದೆ.

ಸ್ಲೀಪರ್‍ಕೋಚ್‍ನ ಪ್ರತಿಯೊಂದು ಬಸ್‍ನಲ್ಲೂ 36 ಸೀಟುಗಳನ್ನು ವ್ಯವಸ್ಥೆ ಮಾಡಲಾಗಿದೆ. 6 ಅಡಿ ಉದ್ದದ ಸೀಟುಗಳಲ್ಲಿ ಆರಾಮದಾಯಕವಾಗಿ ಮಲಗಬಹುದು. ಜೊತೆಗೆ ಕುಳಿತುಕೊಳ್ಳಲೂ ಅವಕಾಶವಿದೆ. ಪ್ರತ್ಯೇಕವಾದ ಲೈಟಿಂಗ್, ಮೊಬೈಲ್ ಚಾರ್ಜಿಂಗ್ ಪಾಯಿಂಟ್, ಶೂ ಅಥವಾ ಚಪ್ಪಲಿ ಇಡಲು ಸ್ಥಳಾವಕಾಶ, ಲಗೇಜ್ ಬ್ಯಾಗ್‍ಗಳಿಗೂ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಡಿಜಿಟಲ್ ವಾಚ್ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಗಳು ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಲಭ್ಯವಾಗುತ್ತಿವೆ.

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ

ಪ್ರಾಯೋಗಿಕವಾಗಿ ಆರಂಭವಾಗಿರುವ 13.5 ಅಡಿ ಉದ್ದದ ಈ ಬಸ್‍ಗಳಲ್ಲಿ ಉತ್ತಮವಾದ ಸಸ್ಪೆನ್ಷನ್, ಶಬ್ಧ ನಿಯಂತ್ರಣ, ಚಾಲಕರಿಗೆ ಅಗತ್ಯ ಸೌಲಭ್ಯಗಳಿವೆ. ಪ್ರಯಾಣಿಕರ ಅನುಭವಗಳನ್ನು ಆಧರಿಸಿ ಮುಂದೆ ಇವುಗಳನ್ನು ಮತ್ತಷ್ಟು ವಿಸ್ತರಿಸುವ ಚಿಂತನೆ ಇದೆ ಎಂದು ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಈವರೆಗೂ ಸಾರಿಗೆ ನಿಗಮಗಳಲ್ಲಿ 15 ಮತ್ತು 12 ಮೀಟರ್ ಉದ್ದದ ಬಸ್‍ಗಳು ಸಂಚರಿಸುತ್ತಿದ್ದವು. ಕಿರಿದಾದ ಮತ್ತು ಗುಡ್ಡಗಾಡು, ಅರಣ್ಯ ಪ್ರದೇಶಗಳ ರಸ್ತೆಗಳ ತಿರುವುಗಳಲ್ಲಿ ಉದ್ದದ ಬಸ್‍ಗಳ ಸಂಚಾರ ಕಷ್ಟವಾಗುತ್ತಿತ್ತು. ಈಗ 13.5 ಮೀಟರ್ ಉದ್ದದ 8 ಹೊಸ ಬಸ್‍ಗಳನ್ನು ಸೇವೆಗೆ ಸಮರ್ಪಿಸಲಾಗಿವೆ. ಇವು ಕಿರಿದಾದ ಮಾರ್ಗಗಳಲ್ಲೂ ಸುಗಮ ಸಂಚಾರ ಮಾಡಲಿವೆ.

ಇನ್ನು ದೂರದ ಪ್ರಯಾಣಕ್ಕಾಗಿರುವ ಎಕ್ಸ್‍ಪ್ರೆಸ್ ಬಸ್‍ಗಳಲ್ಲೂ ಸೀಟುಗಳ ವಿನ್ಯಾಸವನ್ನು ಪರಿಷ್ಕರಿಸಲಾಗಿದೆ. 54 ರ ಬದಲಾಗಿ 51 ಕ್ಕೆ ಸೀಟು ಸಂಖ್ಯೆಯನ್ನು ಇಳಿಸಲಾಗಿದ್ದು, ಆರಾಮದಾಯಕವಾಗಿ ಕಾಲು ಚಾಚಿಕೊಳ್ಳಲು ಸ್ಥಳಾವಕಾಶ ಮಾಡಲಾಗಿದೆ. ಬಸ್‍ನ ಎತ್ತರವನ್ನು 2 ಅಡಿ ಹೆಚ್ಚಿಸಿರುವುದರಿಂದ ಗಾಳಿ, ಬೆಳಕು ಸಂಚಾರ ಇನ್ನಷ್ಟು ಸುಧಾರಣೆಗೊಂಡು ಪ್ರಯಾಣಿಕರಿಗೆ ಮಲ್ಟಿ ಆಕ್ಸೆಲ್ ಅನುಭವ ಹಿತ ನೀಡಲಿದೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ತಿಳಿಸಿದ್ದಾರೆ. ಡಿಜಿಟಲ್ ನೇಮ್ ಬೋರ್ಡ್, ನಿರಂತರವಾಗಿ ರೆಕಾರ್ಡ್ ಆಗುವ ರಿವರ್ಸ್ ಕ್ಯಾಮರಾ, ಬೆಂಕಿ ನಂದಿಸುವ ಸಲಕರಣೆಗಳು ಮತ್ತು ಎಚ್ಚರಿಕೆಯ ಗಂಟೆ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.


ಪಲ್ಲಕ್ಕಿ ಬ್ರಾಂಡಿಂಗ್ : ಕೆಎಸ್‍ಆರ್‍ಟಿಸಿಯಲ್ಲಿ ಐರಾವತ, ಬಿಎಂಟಿಸಿಯಲ್ಲಿ ವಜ್ರ ಎಂಬ ಬ್ರಾಂಡಿಂಗ್ ಸಾರಿಗೆ ಸೇವೆಗಳು ಇದಾಗಲೇ ಚಾಲ್ತಿಯಲ್ಲಿವೆ. ಅವುಗಳ ಸಾಲಿಗೆ ಹೊಸದಾಗಿ ಸಾರಿಗೆ ನಿಗಮಗಳು ಪಲ್ಲಕ್ಕಿ ಎಂಬ ಹೊಸ ಬ್ರಾಂಡ್‍ಗೆ ಚಾಲನೆ ನೀಡಿದೆ. ಸಂತೋಷ ಪ್ರಯಾಣದಲ್ಲಿದೆ ಎಂಬ ಅಡಿಬರಹದಡಿ ಪಲ್ಲಕ್ಕಿ ಸೇವೆಗಳು ಲೋಕಾರ್ಪಣೆಗೊಂಡಿವೆ. ಶಕ್ತಿ ಯೋಜನೆಯ ಉಚಿತ ಪ್ರಯಾಣ ಸ್ಲೀಪರ್ ಕೋಚ್ ಹೊರತುಪಡಿಸಿದರೆ ಉಳಿದಂತೆ ಎಲ್ಲಾ ಎಕ್ಸ್‍ಪ್ರೆಸ್ ಸಾರಿಗೆ ಸೇವೆಯಲ್ಲೂ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ

ದೂರದ ಪ್ರಯಾಣಗಳಿಗೆ ಕೆಎಸ್‍ಆರ್‍ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್‍ಕೋಚ್‍ಗಳ ಬಸ್‍ಗಳು ಕಡಿಮೆ ಇದ್ದವು. ಅದರ ಬೇಡಿಕೆಯನ್ನು ಪರಿಗಣಿಸಿ ಹೊಸ ಬಸ್‍ಗಳನ್ನು ನಿಯೋಜಿಸಲಾಗಿದೆ. ನೂತನ ಬಸ್‍ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಸ್‍ನ ಒಳ ವಿನ್ಯಾಸಗಳನ್ನು ಪರಿಶೀಲಿಸಿದರು. ರೈಲು ಸೇವೆಯಲ್ಲಿರುವಂತೆಯೇ ಆರಾಮದಾಯಕ ವ್ಯವಸ್ಥೆಗಳಿವೆ. ನಾನು ಕೂತು, ಮಲಗಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.

6 ಗಂಟೆ ದೂರದ ಪ್ರಯಾಣ ಇರುವವರಿಗೆ ಇವು ಅನುಕೂಲವಾಗಿವೆ. ಪ್ರತಿ ಕಿ.ಮೀ.ಗೆ 2 ರೂ. ಪ್ರಯಾಣದರವನ್ನು ನಿಗದಿ ಮಾಡಲಾಗಿದೆ ಎಂದು ಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೀಟುಗಳನ್ನು ಪರಿಶೀಲಿಸಿದ್ದು, ಚೆನ್ನಾಗಿವೆ, ಪತಿ-ಪತ್ನಿ ಇಬ್ಬರೂ ಪ್ರಯಾಣಿಸಬಹುದು ಎಂದು ಹೇಳಿದರು.

ಇಸ್ರೇಲ್‍ನಲ್ಲಿ ಯುದ್ಧ ಘೋಷಣೆ

ಜೆರುಸಲೇಂ,ಅ.7-ಪ್ಯಾಲೆಸ್ತೇನ್ನ ಗಾಜಾ ಪಟ್ಟಿ ಕಡೆಯಿಂದ ಭೀಕರ ರಾಕೆಟ್ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಇಸ್ರೇಲ್ ಯುದ್ಧವನ್ನು ಘೋಷಣೆ ಮಾಡಿದೆ. ಗಾಜಾ ಪಟ್ಟಿಯಿಂದ ಹಲವು ಬಾರಿ ರಾಕೆಟ್ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಆರೋಪಿಸಿದೆ. ಹಮಾಸ್ ಉಗ್ರಗಾಮಿಗಳು 5ಸಾವಿರಕ್ಕೂ ಹೆಚ್ಚು ರಾಕೆಟ್‍ಗಳನ್ನು ಇಸ್ರೇಲ್‍ನೊಳಗೆ ನುಗ್ಗಿಸಿದ್ದಾರೆ. ಇವು ಇಸ್ರೆಲ್‍ನಾದ್ಯಂತ ಭೀಕರ ಸಾವು ನೋವುಗಳಿಗೆ ಕಾರಣವಾಗಿರುವುದು ವಿಡಿಯೋಗಳಲ್ಲಿ ಬಹಿರಂಗಗೊಂಡಿವೆ.

ಇಸ್ರೇಲ್‍ನಲ್ಲಿ ಭಯೋತ್ಪಾದಕರೆಂದು ಪರಿಗಣಿಸಲ್ಪಟ್ಟಿರುವ ಹಮಾಸ್ ಉಗ್ರಗಾಮಿಗಳ ಒಳನುಸುಳುವಿಕೆಯ ಬಗ್ಗೆ ದೇಶದ ರಕ್ಷಣಾ ಪಡೆಗಳು ಜನರಿಗೆ ಎಚ್ಚರಿಕೆ ನೀಡಿವೆ. ದಾಳಿಯಲ್ಲಿ ಪ್ಯಾರಾಗ್ಲೈಡಗರ್‍ಳನ್ನು ಬಳಸಲಾಗಿದ್ದು, ನಾಗರಿಕರ ಪ್ರಾಣ ಹಾನಿಗೆ ಕಾರಣವಾಗಿವೆ.

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ದಾಖಲೆ 100 ಪದಕ ಸಾಧನೆ

ಈ ಭೀಕರ ದಾಳಿಯ ಹಿನ್ನೆಲೆಯಲ್ಲಿ ಇಸ್ರೇಲ್ ಯುದ್ಧವನ್ನು ಘೋಷಿಸಿದೆ. ಇದು ಜಾಗತಿಕವಾಗಿ ಭಾರೀ ಸಂಚಲವನ್ನು ಸೃಷ್ಟಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಇಸ್ರೇಲ್ ರಕ್ಷಣಾ ಪಡೆ, ಗಾಜಾ ಪಟ್ಟಿಯಿಂದ ಹಲವಾರು ಭಯೋತ್ಪಾದಕರು ಇಸ್ರೇಲಿ ಭೂಪ್ರದೇಶಕ್ಕೆ ನುಸುಳಿದ್ದಾರೆ. ಗಾಜಾ ಪಟ್ಟಿಯ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳು ತಮ್ಮ ಮನೆಗಳಲ್ಲಿ ಉಳಿಯಲು ನಾವು ಮನವಿ ಮಾಡುತ್ತೇವೆ ಎಂದು ತಿಳಿಸಿದೆ. ಪವಿತ್ರ ನಗರವಾದ ಜೆರುಸಲೇಮ್ ಮತ್ತು ಇಸ್ರೇಲ್‍ನಾದ್ಯಂತ ಸೈರನ್‍ಗಳು ಮೊಳಗುತ್ತಿವೆ. ದೇಶದಾದ್ಯಂತ ಬಾಂಬ್‍ಗಳು ಸ್ಪೋಟಗೊಳ್ಳುತ್ತಿವೆ.

ಹಮಾಸ್ನ ಸಶಸ್ತ್ರ ವಿಭಾಗವು ಆಪರೇಷನ್ ಅಲ್-ಅಕ್ಸಾ ಫ್ಲಡ್ ಅನ್ನು ಪ್ರಾರಂಭಿಸಿದೆ ಎಂದು ಘೋಷಿಸಿದೆ. 20 ನಿಮಿಷಗಳ ಮೊದಲ ದಾಳಿಯಲ್ಲಿ 5ಸಾವಿರ ರಾಕೆಟ್‍ಗಳನ್ನು ಹಾರಿಸಿದೆ ಎಂದು ಹೇಳಿಕೊಂಡಿದೆ. ನಾವು ಎಲ್ಲಾ ಇಸ್ರೇಲ್ ಅಪರಾಧಗಳನ್ನು ಕೊನೆಗೊಳಿಸಲು ನಿರ್ಧರಿಸಿದ್ದೇವೆ ಎಂದು ಹಮಾಸ್ ಹೇಳಿಕೊಂಡಿದೆ. ಗಾಜಾ ಪಟ್ಟಿಗೆ ಹೊಂದಿಕೊಂಡಿರುವ ಇಸ್ರೇಲ್ ಗಡಿಯುದ್ದಕ್ಕೂ ವಾರಗಳಿಂದ ಸಂಘರ್ಷಗಳು ಉಂಟಾಗಿದ್ದವು. ಇಸ್ರೇಲಿ ಆಕ್ರಮಿತ ಪಶ್ಚಿಮ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಲಿದ್ದವು. ಇದು ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಮಾಸ್ ಉಗ್ರರು ಪ್ರತಿಕಾರದ ದಾಳಿ ನಡೆಸಿದ್ದಾರೆ.

ಇಸ್ರೇಲ್‍ನ ರಕ್ಷಣಾ ಸಚಿವ ಜೋವ್ ಗ್ಯಾಲಂಟ್ ಅವರು ಯುದ್ಧ ಸಾರುವ ಪ್ರಕ್ರಿಯೆಗೆ ಅನುಮೋದಿಸಿದ್ದಾರೆ. ಮಿಲಿಟರಿಯ ಅಗತ್ಯಗಳಿಗೆ ಅನುಗುಣವಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಯೋಧರಿಗೆ ಸೂಚಿಸಿದ್ದಾರೆ. ಇಸ್ರೇಲಿ ಬ್ರಾಡ್ಕಾಸ್ಟಿಂಗ್ ಅಥಾರಿಟಿ ವರದಿಗಳ ಪ್ರಕಾರ, ಹಮಾಜ್ ಹೋರಾಟಗಾರರು ಇಸ್ರೇಲ್ ಸ್ಡೆರೋಟ್‍ನಲ್ಲಿ ಪೊಲೀಸ್ ಠಾಣೆಯ ಮೇಲೆ ಹಿಡಿತ ಸಾಧಿಸಿದ್ದಾರೆ.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಸಂಘರ್ಷದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ. ಪ್ಯಾಲೇಸ್ಟಿನಿಯನ್ ಸೈನಿಕರು ಇಸ್ರೇಲ್‍ನ ಸ್ಡೆರೋಟ್ನಾ ಸುತ್ತಲೂ ತಿರುಗಾಡುತ್ತಿದ್ದಾರೆ. ಬೀದಿಗಳಲ್ಲಿ ನಾಗರಿಕರನ್ನು ಗುಂಡಿಕ್ಕಿ ಕೊಲ್ಲುತ್ತಿದ್ದಾರೆ ಎಂದು ಹೇಳಿದೆ. ಗಾಜಾ ಪಟ್ಟಿಯ ಗಡಿ ಮೇಲೆ ಇಸ್ರೇಲ್ ಸೇನೆಯು ತನ್ನ ನಿಯಂತ್ರಣವನ್ನು ಕಳೆದುಕೊಂಡಿದೆ ಎಂದು ಹಲವಾರು ವರದಿಗಳು ಹೇಳುತ್ತಿವೆ. ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರು ಗಾಜಾ ಪಟ್ಟಿಯಿಂದ 80 ಕಿಮೀ ವ್ಯಾಪ್ತಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಬಿಜೆಪಿ ಪೋಸ್ಟರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಅ.7-ರಾಹುಲ್‍ಗಾಂಧಿಯವರನ್ನು ರಾವಣನಿಗೆ ಹೋಲಿಕೆ ಮಾಡಿದ ಬಿಜೆಪಿಯ ವಿವಾದಿತ ಪೋಸ್ಟರ್ ಅನ್ನು ಖಂಡಿಸಿ ಕಾಂಗ್ರೆಸ್ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಬೆಂಗಳೂರಿನ ಎಲ್ಲಾ ಕಾಂಗ್ರೆಸ್ ಘಟಕಗಳೂ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಹಿರಿಯ ನಾಯಕರಾದ ಎಚ್.ಎಂ.ರೇವಣ್ಣ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಬಿಜೆಪಿಯವರಿಗೆ ರಾಹುಲ್‍ಗಾಂಧಿಯವರನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಆಕ್ಷೇಪಾರ್ಹ ಪೋಸ್ಟರ್‍ಗಳನ್ನು ಪ್ರಕಟಿಸಿ ಅವಹೇಳನ ಮಾಡುವ ಪ್ರಯತ್ನ ಮಾಡಿದೆ. ಇದು ರಾಹುಲ್‍ ಗಾಂಧಿಯವರ ಜನಪ್ರಿಯತೆ ತಗ್ಗಿಸಲು ಸಾಧ್ಯವಿಲ್ಲ.

ಈ ಹಿಂದೆ ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನ ನೀಡಿದ ಬಿಜೆಪಿಯವರು ಕಪ್ಪುಹಣವನ್ನು ವಿದೇಶದಿಂದ ತಂದು, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಕಿರುವುದಾಗಿ ಹೇಳಿದರು.

ಏಷ್ಯನ್ ಗೇಮ್ಸ್‌ನಲ್ಲಿ ಪದಕಗಳ ಸೆಂಚುರಿ ಭಾರಿಸಿದ ಭಾರತ, ಪ್ರಧಾನಿ ಅಭಿನಂದನೆ

ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಯುವಕರಲ್ಲಿ ಆಸೆ ಹುಟ್ಟಿಸಿದರು. ಅದ್ಯಾವುದೂ ಈಡೇರಿಲ್ಲ. ಕಳೆದ 9 ವರ್ಷಗಳಲ್ಲಿ ದೇಶದ ಅಭಿವೃದ್ಧಿಯನ್ನು ಹಿಮ್ಮುಖವಾಗಿ ತೆಗೆದುಕೊಂಡು ಹೋಗಿದ್ದಾರೆ. ಇದನ್ನು ಮರೆಮಾಚಲು ವಿವಾದಿತ ಕಾನೂನುಗಳನ್ನು ಜಾರಿಗೆ ತರುತ್ತಾರೆ. ಭಾವನಾತ್ಮಕ ರಾಜಕಾರಣದ ಮೂಲಕ ಜನರ ಗಮನ ಬೇರೆಡೆ ಸೆಳೆಯಲು ಯತ್ನಿಸುತ್ತಾರೆ. ಈಗ ವಿವಾದಿತ ಪೋಸ್ಟರ್‍ಗಳ ಮೂಲಕ ಅವಹೇಳನ ಮಾಡುವ ಪ್ರವೃತ್ತಿಗೆ ಕೈ ಹಾಕಿದ್ದಾರೆ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.

ಬಿಎಸ್‍ವೈ ರಾಜ್ಯ ಪ್ರವಾಸಕ್ಕೆ ವರಿಷ್ಠರಿಂದ ಇನ್ನೂ ಸಿಕ್ಕಿಲ್ಲ ಅನುಮತಿ

ಬೆಂಗಳೂರು, ಅ.7- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಇಲ್ಲಿಯವರೆಗೂ ಅನುಮತಿ ಸಿಕ್ಕಿಲ್ಲ. ತಮ್ಮ ರಾಜ್ಯ ಪ್ರವಾಸ ಕುರಿತು ಸೆಪ್ಟೆಂಬರ್ ಆರಂಭದಲ್ಲಿಯೇ ಪಕ್ಷಕ್ಕೆ ಔಪಚಾರಿಕವಾಗಿ ಪ್ರಸ್ತಾಪಿಸಿದ್ದರೂ ಸಹ ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಅವರು ಎಲ್ಲಾ 30 ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲೂಕು ನಾಯಕರನ್ನು ಭೇಟಿ ಮಾಡಲು ಪ್ರಸ್ತಾಪಿಸಿದ್ದರು. ಆ ಮೂಲಕ ಸುಮಾರು ಏಳು ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಅವರನ್ನು ಪ್ರೋತ್ಸಾಹಿಸಲು ಉದ್ದೇಶಿಸಿದರು.

ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ಆಂತರಿಕ ಅಘೋಷಿತ ಶೀತಲ ಸಮರ ಇದೆ. ಅದೇ ಕಾರಣದಿಂದ ಪಕ್ಷದ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಮೂಲಗಳು ಹೇಳುತ್ತವೆ. ಆದಾಗ್ಯೂ, ಬಿಎಸ್‍ವೈ ಹೊರಗೆ ಹೋಗಿ ಪ್ರಚಾರ ಮಾಡಿದರೆ ಮಾತ್ರ ಬಿಜೆಪಿ ಉಳಿದು ಹೆಚ್ಚಿನ ಸ್ಥಾನಗಳನ್ನು ಮರುಪಡೆಯುತ್ತದೆ. ವಿಶೇಷವಾಗಿ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷ ಅನುಮತಿ ನೀಡದಿದ್ದರೆ ಏನು ಮಾಡಲು ಸಾಧ್ಯ ಎಂದು ಅವರ ಆಪ್ತರೊಬ್ಬರು ಬೇಸರ ಹೊರ ಹಕಿದ್ದಾರೆ.

2000 ರೂ. ಮುಖಬೆಲೆಯ ನೋಟು ಬದಲಾವಣೆಗೆ ಇಂದೇ ಕೊನೆ ದಿನ

ಸತತ ಮೂರನೇ ವರ್ಷ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಪ್ರವಾಸಕ್ಕೆ ತೆರಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ಪಕ್ಷವು ಅವರನ್ನು ಕಾಯುವಂತೆ ಕೇಳಿದೆ. ಪ್ರವಾಸದ ಬಗ್ಗೆ ಯಡಿಯೂರಪ್ಪ ಅವರು ಶೀಘ್ರದಲ್ಲೇ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರ ಹೆಸರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಳಿಬರುತ್ತಿದ್ದು, ಅದಾದ ನಂತರ ಯಡಿಯೂರಪ್ಪ ತಮ್ಮ ಪ್ರವಾಸವನ್ನು ಪ್ರಾರಂಭಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆದರೆ ಕೆಲವು ಭ್ರಷ್ಟ ವ್ಯಕ್ತಿಗಳೊಂದಿಗೆ ವಿಜಯೇಂದ್ರ ಅವರ ಸಂಪರ್ಕದ ವಿಷಯವನ್ನು ಎತ್ತುತ್ತಿರುವ ಯಡಿಯೂರಪ್ಪ ಅವರನ್ನು ವಿರೋಧಿಸುವ ಗುಂಪು ಅದಕ್ಕೆ ಅಡ್ಡಗಾಲು ಹಾಕುತ್ತಿದೆ ಎನ್ನಲಾಗುತ್ತಿದೆ.

ಚೀನಾಗೆ ಮಾಹಿತಿ ನೀಡಿದ ಅಮೆರಿಕದ ಸಾರ್ಜೆಂಟ್ ಬಂಧನ

ಯಡಿಯೂರಪ್ಪ ಅವರ ಸಹಾಯಕರಲ್ಲಿ ಒಬ್ಬರಾಗಿದ್ದ ಉಮೇಶ್ ಮೇಲೆ ಇಡಿ ದಾಳಿ ನಡೆಸಿದಾಗ ಇದು ಬಹಿರಂಗವಾಗಿದೆ. ಯಡಿಯೂರಪ್ಪನವರ ವಿರೋ ಗುಂಪು ಕೂಡ ಅವರ ಮತ್ತೊಬ್ಬ ಪುತ್ರ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿಸಲು ಪ್ರಯತ್ನಿಸುತ್ತಿದೆ. ಆದರೆ, ವಿಜಯೇಂದ್ರಗೆ ಉನ್ನತ ಹುದ್ದೆ ಸಿಕ್ಕರೆ ಸಂತಸ ತರಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಒಮ್ಮೆ ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾದ ನಂತರ 2019ರಲ್ಲಿ ಮಾಡಿದಂತೆ ರಾಜ್ಯಾದ್ಯಂತ ಪಕ್ಷದ ಪರ ಪ್ರಚಾರ ಕೈಗೊಳ್ಳುವುದು ಯಡಿಯೂರಪ್ಪ ಅವರ ಕರ್ತವ್ಯ ಎಂದು ಪಕ್ಷದ ಮೂಲಗಳು ಸೂಚಿಸಿವೆ.

ಸಾರ್ವಜನಿಕರಿಗೆ ಮೈಸೂರು ಅರಮನೆ ಪ್ರವೇಶ ನಿರ್ಬಂಧ

ಮೈಸೂರು, ಅ. 7- ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ ನಡೆಯಲಿರುವ ಹಿನ್ನೆಲೆ ನವರಾತ್ರಿಯ ದಿನಗಳಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಅರಮನೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.

ಅ. 9ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ. ಅ.15ರಂದು ಖಾಸಗಿ ದರ್ಬಾರ್ ಹಿನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆಗೆ ಪ್ರವೇಶವಿರುವುದಿಲ್ಲ.

2000 ರೂ. ಮುಖಬೆಲೆಯ ನೋಟು ಬದಲಾವಣೆಗೆ ಇಂದೇ ಕೊನೆ ದಿನ

ಅ.23ರಂದು ಆಯುಧ ಪೂಜೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರು ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಅ.24ರಂದು ಜಂಬೂಸವಾರಿ ಪ್ರಯುಕ್ತ ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧವಿದ್ದು, ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂಸವಾರಿ ವೀಕ್ಷಿಸಲು ಅವಕಾಶ.

ನ.8 ರಂದು ಸಿಂಹಾಸನ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರಮನೆ ಪ್ರವೇಶವಿರುವುದಿಲ್ಲ ಎಂದು ಅರಮನೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ, 500 ಕೋಟಿ ರೂ.ಗೆ ಬೇಡಿಕೆ

ನವದೆಹಲಿ, ಅ.7- ಪ್ರಧಾನಿ ನರೇಂದ್ರ ಮೋದಿಯನ್ನು ಕೊಲ್ಲುವ ಬೆದರಿಕೆಯ ಇ-ಮೇಲ್ ತಲ್ಲಣ ಸೃಷ್ಟಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬೆದರಿಕೆ ಇಮೇಲ್ ಸ್ವೀಕರಿಸಿದೆ ಎಂದು ಹೇಳಿದೆ. ಎನ್‍ಐಎಗೆ ಬಂದಿರುವ ಬೆದರಿಕೆ ಇಮೇಲ್ ನಲ್ಲಿ ನಿಮ್ಮ ಸರ್ಕಾರದಿಂದ ನಮಗೆ 500 ಕೋಟಿ ರೂಪಾಯಿ ನೀಡಬೇಕು. ಲಾರೆನ್ಸ್ ಬಿಷ್ಣೋಯ್ ಬಿಡುಗಡೆ ಮಾಡಬೇಕು ಎಂದು ಬರೆಯಲಾಗಿದೆ.

ಇ-ಮೇಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಮತ್ತು ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಜೊತೆಗೆ ಸರ್ಕಾರದಿಂದ 500 ಕೋಟಿ ರೂ.ಗಳ ಬೇಡಿಕೆ ಇಡಲಾಗಿದೆ. ಹಣ ಪಾವತಿ ಜತೆಗೆ ದರೋಡೆಕೋರ ಲಾರೆನ್ಸ್ ಬಿಷ್ಣೋಯ್‍ರನ್ನು ಬಿಡುಗಡೆ ಮಾಡಬೇಕು ಎಂದೂ ಬರೆಯಲಾಗಿದೆ.

ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ. ಬೆದರಿಕೆ ಇಮೇಲ್ ಬಗ್ಗೆ ಎನ್‍ಐಎ ಮುಂಬೈ ಪೊಲೀಸರಿಗೆ ಎಚ್ಚರಿಕೆ ನೀಡಿದೆ. ಗುಜರಾತ್ ಪೊಲೀಸರನ್ನು ಹೊರತುಪಡಿಸಿ, ಪ್ರಧಾನಿ ಮೋದಿಯವರ ಭದ್ರತೆಗೆ ಸಂಬಂಸಿದ ಹಲವು ಏಜೆನ್ಸಿಗಳಿಗೆ ಈ ಬೆದರಿಕೆ ಇಮೇಲ್ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2000 ರೂ. ಮುಖಬೆಲೆಯ ನೋಟು ಬದಲಾವಣೆಗೆ ಇಂದೇ ಕೊನೆ ದಿನ

2023ರ ವಿಶ್ವಕಪ್‍ನ ಹಲವು ಪಂದ್ಯಗಳು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವುದರಿಂದ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಬೆದರಿಕೆಯ ಇ-ಮೇಲ್ ಎಲ್ಲಿಂದ ಬಂದಿದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಗಳು ನಡೆಯುತ್ತಿವೆ. ಎಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದಾರೆ. ಅ.5ರಂದು ಬೆಳಿಗ್ಗೆ ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‍ಗೆ ಬೆದರಿಕೆ ಇ-ಮೇಲ್ ಬಗ್ಗೆ ಎನ್‍ಐಎ ಎಚ್ಚರಿಕೆ ಸ್ವೀಕರಿಸಿದೆ.

ನಮಗೆ ನಿಮ್ಮ ಸರ್ಕಾರದಿಂದ 500 ಕೋಟಿ ರೂ. ಬೇಕು. ಬಂಧನದಲ್ಲಿರುವ ಲಾರೆನ್ಸ್ ಬಿಷ್ಣೋಯ್ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ನಾಳೆ ನರೇಂದ್ರ ಮೋದಿ ಜೊತೆಗೆ ನರೇಂದ್ರ ಮೋದಿ ಸ್ಟೇಡಿಯಂಅನ್ನು ಸ್ಪೋಟಿಸುತ್ತೇವೆ. ಭಾರತದಲ್ಲಿ ಎಲ್ಲವೂ ಮಾರಾಟವಾಗಿದೆ, ಆದ್ದರಿಂದ ನಾವೂ ಏನು ಬೇಕಾದರೂ ಖರೀದಿಸುತ್ತೇವೆ. ನೀವು ಎಷ್ಟೇ ರಕ್ಷಿಸಿದರೂ ಏನೂ ಮಾಡಲಾಗುವುದಿಲ್ಲ. ಅವರನ್ನು ನಮ್ಮಿಂದ ಉಳಿಸಲು ಸಾಧ್ಯವಾಗುವುದಿಲ್ಲ. ನೀವು ಮಾತನಾಡಲು ಬಯಸಿದರೆ ಈ ಮೇಲ್‍ನಲ್ಲಿ ಮಾತ್ರ ಮಾತನಾಡಿ ಎಂದು ಬರೆಯಲಾಗಿದೆ.

ಚೀನಾಗೆ ಮಾಹಿತಿ ನೀಡಿದ ಅಮೆರಿಕದ ಸಾರ್ಜೆಂಟ್ ಬಂಧನ

ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಉದ್ಘಾಟನಾ ಪಂದ್ಯವು ಅ.5ರಂದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‍ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಲಾರೆನ್ಸ್ ಬಿಷ್ಣೋಯ್ 2014 ರಿಂದ ಜೈಲಿನಲ್ಲಿದ್ದಾರೆ. ಅವರು ಜೈಲಿನ ಒಳಗಿನಿಂದ ತನ್ನ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದಾನೆ ಎನ್ನಲಾಗುತ್ತಿದೆ. ಲಾರೆನ್ಸ್ ವಿರುದ್ಧ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಮೂಸೆವಾಲಾ ಮೇಲಿನ ದಾಳಿಯ ಹೊಣೆಯನ್ನು ಲಾರೆನ್ಸ್ï ಬಿಷ್ಣೋಯ್ ವಹಿಸಿಕೊಂಡಿದ್ದರು.