Home Blog Page 1911

ನ್ಯೂಸ್‍ಕ್ಲಿಕ್ ಮಾಜಿ ಸಿಬ್ಬಂದಿಯ ಕೇರಳದ ನಿವಾಸದ ಮೇಲೆ ದೆಹಲಿ ಪೊಲೀಸರ ದಾಳಿ

ಪತ್ತನಂತಿಟ್ಟ ಅ.7 (ಪಿಟಿಐ) ದೆಹಲಿ ಪೊಲೀಸರು ಕೇರಳದ ಕೊಡುಮೋನ್ ಬಳಿಯ ನ್ಯೂಸ್‍ಕ್ಲಿಕ್ ಮಾಜಿ ಉದ್ಯೋಗಿ ಅನುಷಾ ಪೌಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ತನಿಖೆಯ ಭಾಗವಾಗಿ ಅವರ ಲ್ಯಾಪ್‍ಟಾಪ್ ಮತ್ತು ಫೋನ್ ಅನ್ನು ಪರೀಕ್ಷೆಗಾಗಿ ವಶಪಡಿಸಿಕೊಂಡಿದ್ದಾರೆ.

ದೆಹಲಿ ಪೊಲೀಸರ ಮೂವರು ಸದಸ್ಯರ ತಂಡ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡ ನಂತರ, ನ್ಯೂಸ್‍ಕ್ಲಿಕ್ ಮತ್ತು ಸಿಪಿಐ(ಎಂ) ಜೊತೆಗಿನ ಸಂಬಂಧದ ಬಗ್ಗೆ ಆಕೆಯನ್ನು ಪ್ರಶ್ನಿಸಲಾಗಿದೆ ಎಂದು ಪಾಲ್ ಸುದ್ದಿಗಾರರಿಗೆ ತಿಳಿಸಿದರು.

ಅವರು ರೈತರ ಪ್ರತಿಭಟನೆ, ಎನ್‍ಆರ್‍ಸಿ-ಸಿಎಎ ವಿರೋಧಿ ಪ್ರತಿಭಟನೆಗಳು ಅಥವಾ ಕೇಂದ್ರದ ಕೋವಿಡ್-19 ನಿರ್ವಹಣೆಯ ಬಗ್ಗೆ ವರದಿ ಮಾಡಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಕೇಳಲಾಯಿತು. ನರೇಂದ್ರ ಮೋದಿ ಸರ್ಕಾರ ಮತ್ತು ಆರೆಸ್ಸೆಸ್ ವಿರುದ್ಧ ಧ್ವನಿ ಎತ್ತುತ್ತಿದ್ದ ಸಂಸ್ಥೆ ಮತ್ತು ಅದರ ನೌಕರರಿಗೆ ಬೆದರಿಕೆ ಹಾಕಲು ಇದು ಕಾರಣವಾಗಿದೆ ಎಂದು ಅವರು ಹೇಳಿದರು. ಆಪ್ತ ಕುಟುಂಬದ ಸದಸ್ಯರ ಚಿಕಿತ್ಸೆಗಾಗಿ ಪಾಲ್ ಕೇರಳದಲ್ಲಿ ನೆಲೆಸಿದ್ದರು.

ರಾಚಿನ್ ಯುವರಾಜ್‍ಸಿಂಗ್‍ರನ್ನು ನೆನಪಿಸುತ್ತಾರೆ : ಅನಿಲ್‍ಕುಂಬ್ಳೆ

ಸಿಪಿಐ(ಎಂ)ನ ದೆಹಲಿ ರಾಜ್ಯ ಕಾರ್ಯದರ್ಶಿ ಕೆ ಎಂ ತಿವಾರಿ ಅವರಿಗೆ ತಿಳಿದಿದೆಯೇ ಎಂದು ದೆಹಲಿ ಪೊಲೀಸರು ತನ್ನನ್ನು ಕೇಳಿದರು ಎಂದು ಅವರು ಹೇಳಿದರು. ಖಂಡಿತ, ನನಗೆ ಅವರು ಗೊತ್ತು ಎಂದು ಅವರಿಗೆ ಹೇಳಿದೆ. ಅವರು ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ. ನಾನು ಸಿಪಿಐ (ಎಂ) ಕಾರ್ಯಕರ್ತ. ನಾನು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫೆ ಇಂಡಿಯಾದ ದೆಹಲಿ ಘಟಕದ ರಾಜ್ಯ ಸಮಿತಿ ಸದಸ್ಯ. ಮತ್ತು ಅದರ ರಾಜ್ಯ ಖಜಾಂಚಿ, ಅವರು ಹೇಳಿದರು.

ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಡಿಸಿಎಂ ಮುಂದೆ ಪೌರಕಾರ್ಮಿಕ ಮಹಿಳೆ ಅಳಲು

ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಅನುದಾನ ಬರುತ್ತಿಲ್ಲ ಎಂದು ಪೌರಕಾರ್ಮಿಕ ಮಹಿಳೆ ಖುದ್ದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಳಿ ಅಸಮಾಧಾನ ತೋಡಿಕೊಂಡ ಘಟನೆ ನಡೆದಿದೆ. ಬಿಬಿಎಂಪಿಯಲ್ಲಿ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಪೌರಕಾರ್ಮಿಕರ ನಿಯೋಗ ಇಂದು ಡಿ.ಕೆ.ಶಿವಕುಮಾರ್ ಅವರ ಮನೆಗೆ ಬಂದಿತ್ತು.

ಈ ವೇಳೆ ಇದೇ 12 ರಂದು ಕಾರ್ಯಕ್ರಮ ನಿಗದಿಯಾಗಿದೆ ಎಂದು ನಿಯೋಗದ ಸದಸ್ಯರು ತಿಳಿಸಿದರು. ನೀವು ಕಾರ್ಯಕ್ರಮ ಏರ್ಪಡಿಸುವಾಗ ನನ್ನ ಸಮಯ ನೋಡಿಕೊಂಡು ನಿಗದಿ ಮಾಡಬೇಕು. ನಿಮ್ಮಷ್ಟಕ್ಕೆ ನೀವೇ ದಿನಾಂಕ ನಿಗದಿ ಮಾಡಿದರೆ ನಮಗೆ ಬಿಡುವಿರುವುದಿಲ್ಲ. ಬರದೇ ಇದ್ದರೆ ನಿಮಗೆ ಅಪಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ಈ ವೇಳೆ ನಿಯೋಗದ ಮುಖಂಡರು ಮುಂದಿನ ಬಾರಿ ನಿಮ್ಮ ಸಮಯ ನೋಡಿಕೊಂಡೇ ಸಮಯ ನಿಗದಿ ಮಾಡುತ್ತೇವೆ. ಈ ಬಾರಿ ಬಂದು ಹೋಗಿ ಎಂದು ಮನವಿ ಮಾಡಿಕೊಂಡಿದ್ದಾರೆ. ಮುಂದುವರೆದ ನಿಯೋಗದ ಸದಸ್ಯರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪೌರಕಾರ್ಮಿಕರನ್ನು ಖಾಯಂ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಖಾಯಂ ಮಾಡಿ ಎಂದು ಬೇಡಿಕೆ ಮುಂದಿಟ್ಟರು.

ಈ ಹಂತದಲ್ಲಿ ಪ್ರತಿಮನೆಯ ಯಜಮಾನಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಸೇರಿದಂತೆ ಪಂಚಖಾತ್ರಿ ಯೋಜನೆಗಳನ್ನು ಜಾರಿಗೊಳಿಸ ಲಾಗುತ್ತಿದೆ. ಹೀಗಾಗಿ ಸ್ವಲ್ಪ ತಾಳ್ಮೆಯಿಂದಿರಿ. ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆಯನ್ನು ಪರಿಶೀಲನೆ ನಡೆಸುತ್ತೇವೆ ಎಂದು ಹೇಳಿದರು.

ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ

ಈ ವೇಳೆ ನಿಯೋಗದಲ್ಲಿದ್ದ ಮಹಿಳೆಯೊಬ್ಬರು, ಎಲ್ಲಿ ಸ್ವಾಮಿ ನಮಗೆ ಹಣ ಬರುತ್ತಿಲ್ಲ ಎಂದು ಹೇಳಿದರು. ಇದರಿಂದ ಸಿಡಿಮಿಡಿಗೊಂಡ ಡಿ.ಕೆ.ಶಿವಕುಮಾರ್, ಎಲ್ಲರಿಗೂ ಹಣ ಬರುತ್ತಿದೆ. ಯಾರು ದಾಖಲೆಗಳನ್ನು ಸರಿಯಾಗಿ ಕೊಟ್ಟಿಲ್ಲವೋ ಅವರಿಗೆ ಬಂದಿಲ್ಲ. ನೀವು ಮೊದಲು ದಾಖಲೆಗಳನ್ನು ಸರಿಪಡಿಸಿಕೊಳ್ಳಿ ಎಂದು ಖಾರವಾಗಿ ಹೇಳಿದ್ದಲ್ಲದೆ, ಎಲ್ಲಾ ಮಹಿಳೆಯರೂ ಉಚಿತವಾಗಿ ಬಸ್‍ನಲ್ಲಿ ಓಡಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಪೌರ ಕಾರ್ಮಿಕರ ದಿನಾಚರಣೆಗೂ ಮುನ್ನ 10 ಅಥವಾ 12 ರಂದು ಯಾರಾದರೂ ಬಂದು ನನಗೆ ನೆನಪಿಸಿ ಎಂದು ನಿಯೋಗದ ಸದಸ್ಯರಿಗೆ ಹೇಳಿ ಡಿ.ಕೆ.ಶಿವಕುಮಾರ್ ನಿರ್ಗಮಿಸಿದರು.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-10-2023)

ನಿತ್ಯ ನೀತಿ : ಮೌಢ್ಯತೆಯ ಕಂದರಕ್ಕೆ ತಳ್ಳುವವರಿಂದ ಆತ್ಮೋನ್ನತಿಯ ಮಾರ್ಗದರ್ಶನ ನೀಡಲು ಸಾಧ್ಯವಿಲ್ಲ.

ಪಂಚಾಂಗ ಶನಿವಾರ 07-10-2023
ಶೋಭಕೃತ್‍ನಾಮ ಸಂವತ್ಸರ / ದಕ್ಷಿಣಾಯನ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ / ನಕ್ಷತ್ರ: ಪುನರ್ವಸು / ಯೋಗ: ಶಿವ / ಕರಣ: ತೈತಿಲ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.06
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ
: ಆಸ್ತಿ ವಿಚಾರದಲ್ಲಿ ಕಲಹ. ಧನ ಹಾನಿ. ಸಹೋದರತ್ವದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಮಾನಸಿಕ ಅಸ್ಥಿರತೆ ಕಾಡಲಿದೆ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.

ಕಟಕ: ಮೇಲಧಿಕಾರಿಗಳಿಂದ ಪ್ರಶಂಸೆ. ಅನಿರೀಕ್ಷಿತ ಬಂಧುಗಳ ಆಗಮನ.
ಸಿಂಹ: ಮಕ್ಕಳ ಆರೋಗ್ಯದಲ್ಲಿ ಚೇತರಿಕೆ. ನಿವೇಶನ ಖರೀದಿಸುವಿರಿ.
ಕನ್ಯಾ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ. ವ್ಯಾಪಾರದಲ್ಲಿ ಲಾಭ.

ತುಲಾ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ವೃಶ್ಚಿಕ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗ ಮಾಡುವವರಿಗೆ ಶುಭ.
ಧನುಸ್ಸು: ಶಾರೀರಿಕ ಸಮಸ್ಯೆ. ಸಣ್ಣ ವ್ಯಾಪಾರಸ್ಥರಿಗೆ ಕೊಂಚ ಲಾಭ. ಅಕಾರಿ ವರ್ಗದವರಿಗೆ ತೊಂದರೆ.

ಮಕರ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.
ಕುಂಭ: ಚಿನ್ನಾಭರಣ ಖರೀದಿ, ಶುಭ ದಿನ.
ಮೀನ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.

ರಾಚಿನ್ ಯುವರಾಜ್‍ಸಿಂಗ್‍ರನ್ನು ನೆನಪಿಸುತ್ತಾರೆ : ಅನಿಲ್‍ಕುಂಬ್ಳೆ

ಬೆಂಗಳೂರು, ಅ.6 – ನ್ಯೂಜಿಲೆಂಡ್ ಯುವ ಅಲ್‍ರೌಂಡರ್ ರಾಚಿನ್ ರವೀಂದ್ರ ಅವರು ಚಿರ ಯುವಕರಾಗಿದ್ದ ಯುವರಾಜ್‍ಸಿಂಗ್ ಅವರ ಆಟವನ್ನು ಮರುಕಳಿಸಿದ್ದಾರೆ ಎಂದು ಕನ್ನಡಿಗ, ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಅನಿಲ್ ಕುಂಬ್ಳೆ ಅವರು ಗುಣಗಾಣ ಮಾಡಿದ್ದಾರೆ.

2023ನೇ ಸಾಲಿನ ಐಸಿಸಿ ಪುರುಷರ ಒಡಿಐ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ ನ್ಯೂಜಿಲೆಂಡ್‍ನ ಯುವ ಆಲ್‍ರೌಂಡರ್ 96 ಎಸೆತಗಳಲ್ಲೇ ಅಜೇಯ 123 ರನ್ ಗಳನ್ನು ಸಿಡಿಸಿದ್ದರು.

ಇಂಗ್ಲೆಂಡ್ ನೀಡಿದ 283 ರನ್ ಗಳ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ ಆರಂಭಿಕ ಆಟಗಾರ ವಿಲ್ ಯಂಗ್ ರನ್ನ ಬಹುಬೇಗ ಕಳೆದುಕೊಂಡಿತು. ಆದರೆ ಆರಂಭಿಕ ಆಟಗಾರ ಡೆವೊನ್ ಕಾನ್ವೆ (152ರನ್) ಹಾಗೂ ರಚಿನ್ ರವೀಂದ್ರ (12 ರನ್) ಅವರು 2ನೇ ವಿಕೆಟ್‍ಗೆ ಅಜೇಯ 273 ದಾಖಲೆಯ ಜೊತೆಯಾಟ ಆಡಿ 36.2 ಓವರ್‍ಗಳಲ್ಲೇ 283 ರನ್ ಗಳಿಸಿ ಗೆಲುವಿನ ಕೇಕೆ ಹಾಕಿದರು.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ರಾಚಿನ್‍ಗೆ ಜಂಬೂ ಪ್ರಶಂಸೆ:
ಪಾಕಿಸ್ತಾನ ವಿರುದ್ಧದ ಪೂರ್ವ ಅಭ್ಯಾಸ ಪಂದ್ಯದಲ್ಲೇ ರಾಚಿನ್ ರವೀಂದ್ರ ಅವರ ಬ್ಯಾಟಿಂಗ್ ಸಾಮಥ್ರ್ಯವನ್ನು ಕಂಡಿದ್ದೇವೆ. ಅವನು ಆರಂಭಿಕನಾಗಿ ಬ್ಯಾಟಿಂಗ್ ಆರಂಭಿಸಿದ್ದು ತುಂಬಾ ವಿಶೇಷವಾಗಿತ್ತು. ವಿಶ್ವಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲೇ ಚಾಂಪಿಯನ್ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿರುವುದು ಅವರ ಆತ್ಮವಿಶ್ವಾಸ ಹೆಚ್ಚಿಸಿದೆ.

ರಾಚಿನ್ ಅವರು ಬ್ಯಾಟಿಂಗ್ ನೋಡುತ್ತಿದ್ದರೆ, ನಮ್ಮ ಕಣ್ಣಮುಂದೆ ಚಿರಯುವಕ ಯುವರಾಜ್ ಸಿಂಗ್ ಅವರ ಆಟವು ತೇಲಿಬರುತ್ತದೆ’ ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ. ರಾಚಿನ್ ರವೀಂದ್ರ ಚೊಚ್ಚಲ ವಿಶ್ವಕಪ್ ಪಂದ್ಯದಲ್ಲಿ ತಮ್ಮ ಆಲ್‍ರೌಂಡರ್ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠರಾದರು.

ಕಾವಾಡಿಗರ ಹಟ್ಟಿಗೆ 4 ಕೋಟಿ ರೂ. ನೆರವು : ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ, ಅ.6- ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರ ಹಟ್ಟಿಯ ಅಭಿವೃದ್ದಿಗೆ 3 ಎಕರೆ ಜಾಗ, 4 ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಕಲುಷಿತ ನೀರು ಕುಡಿದು ಆರು ಮಂದಿ ಮೃತಪಟ್ಟಿದ್ದ ಕಾವಾಡಿಗರಹಟ್ಟಿಯಲ್ಲಿ ಸಂತ್ರಸ್ಥ ಕುಟುಂಬಗಳ ಬಂಧುಗಳನ್ನು ಮಾತನಾಡಿಸಿದ ಬಳಿಕ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಈ ಭರವಸೆ ನೀಡಿದರು.

ಸಂತ್ರಸ್ತ ಕುಟುಂಬಗಳ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಲಿದೆ. ಈ ಕುಟುಂಬಗಳ ಸದಸ್ಯರಿಗೆ ಉದ್ಯೋಗವನ್ನೂ ಕೊಡುತ್ತೇವೆ. ಮನೆಯನ್ನೂ ಕಟ್ಟಿಸಿಕೊಡುತ್ತೇವೆ ಎಂದರು. ಶುದ್ಧ ಕುಡಿಯುವ ನೀರು ಕೊಡುವುದು ನಮ್ಮ ಕರ್ತವ್ಯ. ಘಟನೆ ಘಟಿಸಿದ ತಕ್ಷಣ ಸ್ಥಳೀಯ ಶಾಸಕರು, ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದೆ. ತಕ್ಷಣಕ್ಕೆ 10 ಲಕ್ಷ ಪರಿಹಾರ ನೀಡಿದೆವು ಎಂದು ವಿವರಿಸಿದರು.

ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ

ಮೊದಲೇ ಶುದ್ಧ ನೀರಿನ ವ್ಯವಸ್ಥೆ ಇದ್ದಿದ್ದರೆ ಈ ಅನಾಹುತ ನಡೆಯುತ್ತಿರಲಿಲ್ಲ. ಘಟನೆ ಬಳಿಕ ಶುದ್ದ ಕುಡಿಯುವ ನೀರಿಗೆ ತೊಂದರೆ ಆಗದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದೆ ಇಂತಹ ಅನಾಹುತ ನಡೆದರೆ ಸಂಬಂಧ ಪಟ್ಟ ಅvಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಖಚಿತ ಎಂದು ಎಚ್ಚರಿಸಿದರು.

123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಿದೆ. ಬರ ಪೀಡಿತ ಜಿಲ್ಲೆಗಳ ಸಂಖ್ಯೆ ಹೆಚ್ಚುತ್ತಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. 30 ಸಾವಿರ ಕೋಟಿಯಷ್ಟು ನಷ್ಟ ಆಗಿದೆ. ನಾವು ಎನ್‍ಡಿಆರ್‍ಎಫ್ ಅಡಿಯಲ್ಲಿ ಕೇಂದ್ರಕ್ಕೆ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಬಂದಿದ್ದು ನಾಳೆ ಚಿತ್ರದುರ್ಗಕ್ಕೂ ಬರಲಿದೆ ಎಂದು ವಿವರಿಸಿದರು.

ಮೈತ್ರಿಗೆ ಜೆಡಿಎಸ್-ಬಿಜೆಪಿಯಲ್ಲಿ ಅಪಸ್ವರ

ಇಂದು ಇಡೀ ದೇಶದಲ್ಲಿ ಬರಗಾಲದ ಸ್ಥಿತಿ ಇದೆ. ರಾಜ್ಯದಲ್ಲೂ ಬರ ಇದ್ದು ಕುಡಿಯುವ ನೀರು, ರಾಸುಗಳಿಗೆ ಮೇವು- ನೀರು ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಉದ್ಯೋಗ ಸೃಷ್ಟಿ ಮಾಡಬೇಕು. ಕೆಲಸಕ್ಕಾಗಿ ವಲಸೆ ಹೋಗುವ ಸ್ಥಿತಿ ಬರದಂತೆ ನೋಡಿಕೊಳ್ಳಲು ಎಚ್ಚರಿಸಿದ್ದೇನೆ ಎಂದರು.

ನಮ್ಮ ಸರ್ಕಾರ ಬಡವರ, ಮಧ್ಯಮ ವರ್ಗದವರ ಸಂಕಷ್ಟ ಬಗೆಹರಿಸುವ ಸಲುವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು. ಕೃಷಿ ಸಚಿವ ಚಲುವರಾಯಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕ ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ ಸೇರಿ ದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಶಿವಮೊಗ್ಗ ಗಲಭೆಕೋರರ ಮೇಲೆ ನಿರ್ದಾಕ್ಷಿಣ್ಯ ಕ್ರಮ : ಡಿಸಿಎಂ

ಬೆಂಗಳೂರು,ಅ.6- ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಕಾನೂನು ಕೈಗೆತ್ತಿಕೊಂಡಿರುವ ಎಲ್ಲರ ವಿರುದ್ಧವೂ ಸರ್ಕಾರ ನಿರ್ದಾಕ್ಷಿಣ್ಯವಾದ ಕಾನೂನು ಕ್ರಮ ಜರುಗಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ತಪ್ಪು ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರ ಸತ್ಯ ಶೋಧನಾ ಸಮಿತಿ ಏನು ಬೇಕಾದರೂ ಮಾಡಿಕೊಳ್ಳಲಿ. ಅವರು ಸಮಾಜವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಕಬ್ಬಿಣದಲ್ಲಿ ಎರಡು ಕೆಲಸಗಳನ್ನು ಮಾಡಬಹುದು. ಒಂದು ಸೂಜಿಯನ್ನಾಗಿ ಬದಲಾಯಿಸಿ ಸಮಾಜವನ್ನು ಹೊಲಿಯಬಹುದು. ಮತ್ತೊಂದು ಕತ್ತರಿ ತಯಾರಿಸಿ ಸಮಾಜವನ್ನು ಕತ್ತರಿಸಬಹುದು. ನಾವು ಸೂಜಿಯನ್ನು ತಯಾರಿಸಿ ಸಮಾಜವನ್ನು ಹೊಲೆಯುವ ಕೆಲಸ ಮಾಡುತ್ತಿದ್ದೇವೆ.

ಅವರು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಇದು ನಮಗೂ ಮತ್ತು ಬಿಜೆಪಿಯವರಿಗೂ ಇರುವ ವ್ಯತ್ಯಾಸ ಎಂದು ತಿರುಗೇಟು ನೀಡಿದರು.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ಘಟನಾ ಸ್ಥಳಕ್ಕೆ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಭೇಟಿ ನೀಡಿದ್ದರು. ಅಲ್ಲಿ ಹಿಂದೂ, ಮುಸ್ಲಿಂ ಎಂಬ ಬೇಧವಿಲ್ಲದೆ ಎಲ್ಲಾ ಸಮುದಾಯದವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ಬಿಜೆಪಿಯವರು ಒಂದು ಸಮುದಾಯದವರನ್ನು ಮಾತ್ರ ಭೇಟಿ ಮಾಡಿದ್ದಾರೆ. ಇದರಲ್ಲೇ ಅವರು ಸಮಾಜವನ್ನು ವಿಭಜಿಸುವ ಸಂಚು ಸ್ಪಷ್ಟವಾಗುತ್ತದೆ ಎಂದರು.

ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಇಲ್ಲ. ಕಾನೂನನ್ನು ಕೆಣಕಿದರೆ ಅದರ ಪರಿಣಾಮ ಏನು ಎಂಬುದು ತಪ್ಪಿತಸ್ಥರಿಗೆ ಅರಿವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಎಸ್.ಎಂ.ಕೃಷ್ಣ ಅವರ ಕಾಲದಲ್ಲೇ ಕುವೆಂಪು ಅವರ ಪದ್ಯ ಬಳಸಿಕೊಂಡು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಪರಿಕಲ್ಪನೆಯನ್ನು ಆರಂಭಿಸಿತ್ತು. ನಮ್ಮ ನಾಡಗೀತೆಯಲ್ಲೇ ಸರ್ವ ಜನರನ್ನು ಒಳಗೊಂಡ ಮೂಲ ಉದ್ದೇಶಗಳಿವೆ ಎಂದರು.

ಮತದಾರರಿಗೆ ಉಚಿತ ಕೊಡುಗೆ : ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ನವದೆಹಲಿ, ಅ.6- ಚುನಾವಣೆ ಹೊಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಮತದಾರರಿಗೆ ಉಚಿತ ಕೊಡುಗೆಗಳನ್ನು ಘೋಷಣೆ ಮಾಡುವ ರಾಜಕೀಯ ಪಕ್ಷಗಳ ಮಾನ್ಯತೆಯನ್ನೇ ರದ್ದು ಮಾಡಬೇಕು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವಾಗಲೇ ಸುಪ್ರೀಂ ಕೋರ್ಟ್ ನೀಡಿರುವ ನೋಟಿಸ್ ಭಾರೀ ಮಹತ್ವ ಪಡೆದುಕೊಂಡಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಲಂಚ ನೀಡಲು ತೆರಿಗೆದಾರರ ಹಣವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆಯಲ್ಲಿ ಸುಪ್ರೀಂಕೋರ್ಟ್ ಈ ನೋಟಿಸ್ ಜಾರಿ ಮಾಡಿತು.

ಮತದಾರರಿಗೆ ತೆರಿಗೆ ಹಣದಲ್ಲಿ ಉಚಿತವಾಗಿ ಕೊಡುಗೆಗಳನ್ನು ನೀಡುತ್ತಿರುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಸರ್ಕಾರಕ್ಕೂ ಸುಪ್ರೀಂಕೋರ್ಟ್ ಸೂಚಿಸಿದೆ.

ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು, ಕೇಂದ್ರ, ಚುನಾವಣಾ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‍ಗೆ ನೋಟಿಸ್ ಜಾರಿ ಮಾಡಿದ್ದು, ತೆರಿಗೆದಾರರ ಹಣವನ್ನು ಎರಡು ರಾಜ್ಯ ಸರ್ಕಾರಗಳು ಮತದಾರರ ಆಮಿಷಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿತು.

ಸರ್ಕಾರ ಚುನಾವಣೆಗೂ ಮುನ್ನ ಹಣ ಹಂಚುವುದಕ್ಕಿಂತ ಕ್ರೂರವಾದ ಸಂಗತಿ ಇನ್ನೊಂದಿಲ್ಲ. ಇದು ಪ್ರತಿ ಬಾರಿಯೂ ನಡೆಯುತ್ತಿದ್ದು, ಅಂತಿಮವಾಗಿ ತೆರಿಗೆದಾರರ ಮೇಲೆ ಹೊರೆ ಬೀಳುತ್ತದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.

ನಾಲ್ಕು ವಾರಗಳಲ್ಲಿ ನೋಟಿಸ್‍ಗೆ ಪ್ರತಿಕ್ರಿಯಿಸುವಂತೆ ಪೀಠ ಹೇಳಿದೆ. ಭಟ್ತುಲಾಲ್ ಜೈನ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಈ ವಿಷಯದ ಕುರಿತು ಬಾಕಿ ಉಳಿದಿರುವ ಅರ್ಜಿಯೊಂದಿಗೆ ಅದನ್ನು ಸೇರಿಸಲು ಆದೇಶಿಸಿತು ದೇಶದಲ್ಲಿ ಹೆಚ್ಚುತ್ತಿರುವ ಉಚಿತ ಯೋಜನೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿ, ಉಚಿತ ಯೋಜನೆಗಳು ದೇಶವನ್ನು ಆರ್ಥಿಕ ವಿನಾಶದತ್ತ ಕೊಂಡೊಯ್ಯುತ್ತಿವೆ. ಉಚಿತ ಯೋಜನೆಗಳಿಂದ ಯಾರೂ ಪ್ರಯೋಜನ ಪಡೆಯುತ್ತಿಲ್ಲ ಎಂದು ಅಭಿಪ್ರಾಯಟ್ಟಿದೆ.

ಈ ಹಿಂದೆ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್, ಇಂತಹ ಉಚಿತ ಘೋಷಣೆಗಳನ್ನು ಮುಂದುವರಿಸಿದರೆ, ಈ ಪ್ರಕ್ರಿಯೆಯು ದೇಶವನ್ನು ಆರ್ಥಿಕ ವಿನಾಶದತ್ತ ಕೊಂಡೊಯ್ಯುತ್ತದೆ. ಸರ್ಕಾರ ಈ ಬಗ್ಗೆ ಕಾನೂನು ತರುವವರೆಗೆ ನ್ಯಾಯಾಲಯ ಮಧ್ಯಪ್ರವೇಶಿಸಿ ಮಾರ್ಗಸೂಚಿಗಳನ್ನು ನಿರ್ಧರಿಸಬಹುದು ಎಂದು ಹೇಳಿದ್ದರು.

ಚುನಾವಣಾ ಪ್ರಚಾರದ ವೇಳೆ ವಿವಿಧ ಪಕ್ಷಗಳು ನೀಡಿರುವ ಉಚಿತ ಯೋಜನೆಗಳ ಭರವಸೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿತ್ತು. ಈ ಪಿಐಎಲ್‍ಗಳನ್ನು ಸಂಸತ್ತಿನಲ್ಲಿ ಚರ್ಚಿಸಬೇಕು ಎಂಬ ಸಲಹೆಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿತ್ತು.

ಯಾವುದೇ ರಾಜಕೀಯ ಪಕ್ಷಗಳು ಉಚಿತ ಯೋಜನೆಗಳನ್ನು ನೀಡುವಂತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಕೇಂದ್ರ ಚುನಾವಣಾ ಆಯೋಗ ಆಯೋಗ, ಹಣಕಾಸು ಆಯೋಗ, ಭಾರತ ಸರ್ಕಾರ, ವಿರೋಧ ಪಕ್ಷಗಳು, ರಿಸರ್ವ್ ಬ್ಯಾಂಕ್ ಮತ್ತು ಎಲ್ಲಾ ಪಾಲುದಾರರನ್ನು ಉಚಿತ ಘೋಷಣೆಯ ಸಾಧಕ-ಬಾಧಕಗಳನ್ನು ಸೂಚಿಸಲು ಆಹ್ವಾನಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಪ್ರಣಾಳಿಕೆಯಲ್ಲಿ ನೀಡಿರುವ ಉಚಿತ ಭರವಸೆಗಳು ಆರ್ಥಿಕತೆಯ ಮೇಲೆ ನೇರ ಪರಿಣಾಮ ಬೀರುತ್ತವೆ ಎಂದು ನ್ಯಾಯಾಲಯ ಹೇಳಿದೆ. ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಗಳಲ್ಲಿ ನೀಡಿರುವ ಉಚಿತ ಭರವಸೆಗಳನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‍ನಲ್ಲಿ ತಾತ್ವಿಕ ಬೆಂಬಲವನ್ನು ನೀಡಿದೆ. ಈ ಸಮಸ್ಯೆಯನ್ನು ಪರಿಹರಿಸಲು ಕಾರ್ಯವಿಧಾನ ಅಥವಾ ಪರಿಣಿತ ಸಂಸ್ಥೆಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಂತಹ ಉಚಿತ ಘೋಷಣೆಗಳು ಆರ್ಥಿಕತೆಗೆ ಹೊರೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದು ಆರ್ಥಿಕತೆಗೆ ಅಪಾಯಕಾರಿ. ಕೇಂದ್ರ ಸರ್ಕಾರವನ್ನು ಪ್ರತಿನಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಗೊಂದಲದ ಘೋಷಣೆಗಳು ಮತದಾರರ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯವನ್ನು ಕುಗ್ಗಿಸುತ್ತದೆ. ಈ ಉಚಿತ ಭರವಸೆಗಳು ಮತದಾರರ ಮೇಲೆ ಏನು ಮತ್ತು ಹೇಗೆ ಪರಿಣಾಮ ಬೀರಲಿವೆ ಎಂಬುದು ಮತದಾರರಿಗೆ ತಿಳಿದಿರಬೇಕು. ಇದರಲ್ಲಿ ನಾವು ಆರ್ಥಿಕ ಬಿಕ್ಕಟ್ಟಿನತ್ತ ಸಾಗುತ್ತಿದ್ದೇವೆ. ಭಾರತೀಯ ಚುನಾವಣಾ ಆಯೋಗವು ಈ ವಿಷಯವನ್ನು ಪರಿಶೀಲಿಸಬೇಕು ಎಂದು ತುಷಾರ್ ಮೆಹ್ತಾ ಸಲಹೆ ನೀಡಿದ್ದರು.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ಈ ವಿಚಾರವನ್ನು ಚುನಾವಣಾ ಆಯೋಗವೇ ನಿಭಾಯಿಸಬೇಕು ಎಂದು ಸರ್ಕಾರ ಈ ಹಿಂದೆಯೇ ಹೇಳಿದ್ದರಿಂದ ಇದು ಗಮನಾರ್ಹವಾಗಿದೆ. ಆದಾಗ್ಯೂ, ಕಳೆದ ಜುಲೈ 26 ರಂದು ಈ ವಿಷಯದ ವಿಚಾರಣೆಯ ಸಂದರ್ಭದಲ್ಲಿ, ಚುನಾವಣಾ ಸಮಿತಿಯು ಸರ್ಕಾರದ ಮೇಲೆ ಜವಾಬ್ದಾರಿಯನ್ನು ಹಾಕಿದ್ದು, ಸುಪ್ರೀಂ ಕೋರ್ಟ್ ಈಗ ಕೇಂದ್ರ, ನೀತಿ ಆಯೋಗ, ಹಣಕಾಸು ಆಯೋಗ, ಭಾರತೀಯ ರಿಸರ್ವ್ ಬ್ಯಾಂಕ್ ಸೇರಿದಂತೆ ಎಲ್ಲಾ ಮಧ್ಯಸ್ಥಗಾರರಿಗೆ ಈ ವಿಷಯದ ಬಗ್ಗೆ ಚರ್ಚಿಸಲು ಮತ್ತು ಅದನ್ನು ಎದುರಿಸಲು ರಚನಾತ್ಮಕ ಸಲಹೆಗಳೊಂದಿಗೆ ಬರಲು ಸೂಚನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆಯಲ್ಲಿ ಉಚಿತ ಯೋಜನೆಗಳ ಬಗ್ಗೆ ಉಚಿತ ರೇವಾರಿ ಸಂಸ್ಕೃತಿ ಎಂದು ಕರೆದಿದ್ದಾರೆ. ಹಾಗೆ, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಈ ಬಗ್ಗೆ ಪ್ರಧಾನಿ ಮೋದಿ ಮೇಲೆ ದಾಳಿ ನಡೆಸುತ್ತಿದೆ. ಬಿಜೆಪಿ ನಾಯಕರ ಮನವಿಯಲ್ಲಿ, ಉಚಿತ ಯೋಜನೆಗಳು ದೇಶದ ಆರ್ಥಿಕತೆಗೆ ಹಾನಿಯನ್ನುಂಟುಮಾಡುತ್ತವೆ ಎಂದು ದೂರಿದೆ.

ದೆಹಲಿಯಲ್ಲಿ ಅಕಾರದಲ್ಲಿರುವ ಎಎಪಿ ಪರವಾಗಿ ಸುಪ್ರೀಂ ಕೋರ್ಟ್‍ನಲ್ಲಿ ಅಫಿಡವಿಟ್ ಕೂಡ ಸಲ್ಲಿಸಲಾಗಿದ್ದು, ಅದರಲ್ಲಿಯೂ ಪಕ್ಷವಾಗಬೇಕೆಂದು ಒತ್ತಾಯಿಸಲಾಗಿದೆ. ಇದೇ ವೇಳೆ ಆಮ್ ಆದ್ಮಿ ಪಕ್ಷದ ಪರವಾಗಿ ಸಮಾಜ ಕಲ್ಯಾಣ ಯೋಜನೆಗೂ ಉಚಿತ ಕೊಡುಗೆಗಳಿಗೂ ವ್ಯತ್ಯಾಸವಿದೆ ಎಂದು ವಾದಿಸಲಾಯಿತು. ಉಚಿತ ಕೊಡುಗೆಗಳನ್ನು ಘೋಷಿಸಿದ ಪಕ್ಷಗಳ ಮಾನ್ಯತೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಶಾಮನೂರು ಶಿವಶಂಕರಪ್ಪ ಅಸಮಾಧಾನ ತಣಿಸುವ ಹೊಣೆ ಈಶ್ವರ್ ಖಂಡ್ರೆ ಹೆಗಲಿಗೆ

ಬೆಂಗಳೂರು,ಅ.6- ಕಾಂಗ್ರೆಸ್‍ನ ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರ ಅಸಮಾಧಾನವನ್ನು ತಣಿಸುವ ಜವಾಬ್ದಾರಿಯನ್ನು ಸಚಿವರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರಿಗೆ ವಹಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಕರೆದಿದ್ದ ಕಾಂಗ್ರೆಸ್‍ನ ಸಚಿವರು ಹಾಗೂ ಶಾಸಕರ ಔತಣಕೂಟದಲ್ಲಿ ಹಲವಾರು ಮಹತ್ವದ ವಿಚಾರಗಳು ಚರ್ಚೆಯಾಗಿವೆ. ಅದರಲ್ಲಿ ಶ್ಯಾಮನೂರು ಶಿವಶಂಕರಪ್ಪ ನೀಡಿರುವ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂಬ ಹೇಳಿಕೆ ಪ್ರಮುಖವಾಗಿ ವಿಮರ್ಶೆಗೆ ಒಳಗಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಯಾಮನೂರು ಅವರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮನ್ನೇ ಗುರಿಯಾಗಿಸಿಕೊಂಡು ಮಾಡುತ್ತಿರುವ ಟೀಕೆಗೆ ಸಂಪುಟದ ಸಚಿವರುಗಳು ಮೌನ ಸಮ್ಮತಿ ವ್ಯಕ್ತಪಡಿಸುತ್ತಿದ್ದಾರೆ ಎಂಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಿ.ಕೆ.ಹರಿಪ್ರಸಾದ್ ಅವರು ಆಡಳಿತ ವ್ಯವಸ್ಥೆಯಲ್ಲಿ ಕೆಲಸ ಮಾಡಿಲ್ಲ. ಅವರ ಟೀಕೆಗಳು ಬೇರೆಯ ಸ್ವರೂಪದಲ್ಲಿರುತ್ತವೆ. ಆದರೆ ಶ್ಯಾಮನೂರು ಶಿವಶಂಕರಪ್ಪ ಅವರು ಸಂಪುಟದಲ್ಲಿ ಸಚಿವರಾಗಿದ್ದವರು, ಹಿರಿಯ ನಾಯಕರು, ಶಾಸಕರಾಗಿ ಸುದೀರ್ಘ ಅನುಭವ ಹೊಂದಿದ್ದಾರೆ. ಆಡಳಿತ ಯಂತ್ರ ಹೇಗೆ ಕೆಲಸ ಮಾಡುತ್ತದೆ ಎಂಬ ಮಾಹಿತಿ ಅವರಿಗಿದೆ. ಅಂತವರು ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಬೇಕಿರಲಿಲ್ಲ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಒಂದು ವೇಳೆ ಯಾರಿಗಾದರೂ ತೊಂದರೆಯಾಗಿದ್ದರೆ ಅದನ್ನು ನೇರವಾಗಿ ತಮ್ಮ ಬಳಿ ಚರ್ಚೆ ಮಾಡಬಹುದಿತ್ತು. ಎಲ್ಲರ ಮಾತನ್ನೂ ಕೇಳಲು ತಾವು ಸಿದ್ಧರಿದ್ದು, ಯಾರನ್ನೂ ನಿರ್ಲಕ್ಷಿಸುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹಿರಿಯ ನಾಯಕರುಗಳ ಟೀಕೆಗಳು ಪಕ್ಷಕ್ಕೆ ಮತ್ತು ಸರ್ಕಾರಕ್ಕೆ ಹಾನಿ ಉಂಟುಮಾಡುತ್ತದೆ ಎಂಬುದು ಎಲ್ಲರಿಗೂ ತಿಳಿದಿರಬೇಕು ಎಂದು ಹೇಳಿದ್ದಾರೆ.

ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ

ಇಂತಹ ವಿವಾದಾತ್ಮಕ ಹೇಳಿಕೆ ಕೇಳಿಬಂದ ಸಂದರ್ಭದಲ್ಲಿ ಸಚಿವರು ತಕ್ಷಣ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಬೇಕು. ಶ್ಯಾಮನೂರು ಅವರ ಹೇಳಿಕೆಗೆ ಶಾಸಕರಾದ ಬಸವರಾಜರಾಯರೆಡ್ಡಿ ಅವರು ಪತ್ರಿಕಾಗೋಷ್ಠಿ ನಡೆಸಿ, ಸ್ಪಷ್ಟನೆ ನೀಡಿದ್ದಾರೆ. ಉಳಿದಂತೆ ಎಲ್ಲಾ ಸಚಿವರೂ ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಪುಟದಲ್ಲಿ 8 ಮಂದಿ ಲಿಂಗಾಯತ ಸಮುದಾಯ ಸಚಿವರಿದ್ದಾರೆ. ಶ್ಯಾಮನೂರು ಶಿವಶಂಕರಪ್ಪ ಅವರು ಹೇಳಿಕೆ ನೀಡಿದ ಬಳಿಕ ಯಾರೂ ಅವರನ್ನು ಭೇಟಿ ಮಾಡಿ ಸ್ಪಷ್ಟನೆ ನೀಡುವ ಪ್ರಯತ್ನ ಮಾಡಿಲ್ಲ. ಇದು ಬೇರೆ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಲಿದೆ. ಮುಂದಿನ ದಿನಗಳಲ್ಲಿ ಸಚಿವರು ಜಾಗರೂಕರಾಗಿರಬೇಕು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಪ್ರತಿಯೊಂದು ವಿಷಯವೂ ಸೂಕ್ಷ್ಮ ಹಾಗೂ ಸಂಕೀರ್ಣವಾಗಿದ್ದು, ನಾವು ಕಾಲಕಾಲಕ್ಕೆ ಅದಕ್ಕೆ ಪ್ರತಿಕ್ರಿಯಿಸದೇ ಇದ್ದರೆ ರಾಜಕೀಯವಾಗಿ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಭಯೋತ್ಪಾದಕರು, ಜಿಹಾದಿಗಳು ಮತ್ತು ಗುಂಡಾಗಳ ತಾಣವಾಗಿದೆ : ಬಿಜೆಪಿ ವಾಗ್ದಾಳಿ

ಪಂಚಖಾತ್ರಿಗಳ ವಿಷಯದಲ್ಲಿ ನಕಾರಾತ್ಮಕ ಪ್ರಚಾರ ಹೆಚ್ಚಾಗುತ್ತಿದೆ. ಅಭಿವೃದ್ಧಿಗೆ ಹಣ ನೀಡಲಾಗುತ್ತಿಲ್ಲ ಎಂಬ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಬಜೆಟ್‍ನಲ್ಲಿ ಘೋಷಣೆ ಮಾಡಿದ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ತಮ್ಮ ಸರ್ಕಾರ ಬದ್ಧವಾಗಿದೆ. ಉಳಿದಂತೆ ಹಿಂದಿನ ಸರ್ಕಾರದ ಯೋಜನೆಗಳಲ್ಲಿ ಕೆಲವು ಲೋಪದೋಷಗಳಿದ್ದು, ಅವುಗಳ ತನಿಖೆಯಾಗದ ಹೊರತು ಮುಂದುವರೆಸುವುದು ಸರಿಯಲ್ಲ. ಈ ವಾಸ್ತವತೆಯನ್ನು ಜನಪ್ರತಿನಿಗಳು ಅರ್ಥ ಮಾಡಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ 6.05 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು

ಬೆಂಗಳೂರು, ಅ.6: ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಒತ್ತುವರಿಯಾಗಿದ್ದ ಸುಮಾರು 10 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ. ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ವಾರ ಯಲಹಂಕದ ಬಾಗಲೂರಿನ ಬಳಿ 25 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಈಗ ಕಾರ್ಯಾಚರಣೆ ಮುಂದುವರಿಸಿ ಇನ್ನಷ್ಟು ಒತ್ತುವರಿ ತೆರವು ಮಾಡಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ನಿರ್ದೇಶಿಸಲಾಗಿತ್ತು.

ಒಬಿಸಿ ಮೀಸಲಾತಿ ನಿರ್ಧಾರದಿಂದ ಕಾಂಗ್ರೆಸ್ ಚುನಾವಣಾ ಹಾದಿ ಸುಗಮ

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ.

ಒತ್ತುವರಿದಾರರ ವಿವರ:

* ಕೋಗಿಲು ಗ್ರಾಮದ ಸರ್ವೆ ನಂ. 100 ರ ಹಿಡುವಳಿದಾರರಾದ ಉಡುಪ ಅವರಿಂದ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರಲ್ಲಿ 0-10 ಗುಂಟೆ ಜಮೀನನ್ನು ಒತ್ತುವರಿ ಮಾಡಿದ್ದು, ಇದನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ಎಸ್.ಜಯರಾಮ್ ಬಿನ್ ಸುಬ್ರಮಣ್ಯ ಮೊದಲಿಯಾರ್ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-20 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ಸುಬ್ಬಣ್ಣ ಬಿನ್ ಚಿಕ್ಕಮುನಿಯಪ್ಪ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 2-29 ಎಕರೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಬರಪೀಡಿತ ಪ್ರದೇಶಗಳಲ್ಲಿ ಕೇಂದ್ರ ತಂಡಗಳಿಂದ ಪರಿಸ್ಥಿತಿ ಅವಲೋಕನ

* ದೊಡ್ಡಕ್ಕಮ್ಮ ಕೋಂ ಲೇಟ್ ಕೆ.ಮುನಿಯಪ್ಪ, ಮುನಿರಾಜು ಮತ್ತು ಎಂ. ಮಂಜುನಾಥ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0-12 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ವೈ.ಜಿ.ಕೇಶವ ಬಿನ್ ಗೋವಿಂದಪ್ಪ ಅವರಿಗೆ ಸಂಬಂಧಿಸಿದಂತೆ, ನಂ.ಎಲ್ಎನ್ ಡಿ/ಎಸ್ ಆರ್/1/104/78-79 ರಂತೆ ಅಬ್ದುಲ್ ಸತ್ತಾರ್ ರವರಿಗೆ 2-00 ಎಕರೆ ಮಂಜೂರಾಗಿತ್ತು. ನಂತರ ಕ್ರಯವಿಕ್ರಯ ನಡೆದು, ವೈ.ಜಿ ಕೇಶವ ಬಿನ್ ಗೋವಿಂದಪ್ಪ ರವರಿಗೆ ಖಾತೆ ದಾಖಲಾಗಿತ್ತು. ವಿಶೇಷ ಜಿಲ್ಲಾಧಿಕಾರಿಗಳ ಆದೇಶದಂತೆ ಸರ್ಕಾರದ ಹೆಸರಿಗೆ ಖಾತೆ ದಾಖಲಾಗಿ, ಗೋಮಾಳ ಶೀರ್ಷಿಕೆಯಲ್ಲಿ ಖಾತೆ ಮುಂದುವರೆಯುತ್ತಿದೆ. 2.00 ಎಕರೆ ಜಮೀನಿನ ಪ್ರಕರಣ ವಿಶೇಷ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಆದರೆ, ಇವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.05 ಗುಂಟೆ ಜಮೀನನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಗಿದೆ.

* ರಮೇಶ್ ಬಿನ್ ಚಿಕ್ಕಪಾಪಮ್ಮ ಅವರು ಹೆಚ್ಚುವರಿಯಾಗಿ ಸ್ವಾಧೀನ ಹೊಂದಿರುವ 0.12 ಎಕರೆ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ. ಇದೇ ಗ್ರಾಮದಲ್ಲಿ ಬ್ಲಾಕ್ ನಂ.12ರಲ್ಲಿ 0.15 ಗುಂಟೆ ವಿಸ್ತೀರ್ಣದಲ್ಲಿ 4 ಮನೆಗಳು ನಿರ್ಮಾಣವಾಗಿದ್ದು, ತೆರವುಗೊಳಿಸಲು ಮೌಖಿಕವಾಗಿ 2 ದಿನಗಳ ಕಾಲಾವಕಾಶ ಕೋರಿದ್ದರು. ಅದರಂತೆ ಕಾಲಾವಕಾಶ ನೀಡಿ, ಸೂಕ್ತ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಲಾಗಿದೆ.

ಬಿಜೆಪಿಯವರು ನಕಲಿ ಹಿಂದೂಗಳು : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು,ಅ.6- ಬಿಜೆಪಿಯವರು ನಕಲಿ ಹಿಂದುಗಳು, ರಾಜಕೀಯ ಲಾಭಕ್ಕಾಗಿ ಮಾತ್ರ ಹಿಂದುತ್ವದ ಜಪ ಮಾಡುತ್ತಾರೆ. ಕಾಂಗ್ರೆಸಿಗರು ನಿಜವಾದ ಹಿಂದುಗಳು, ಸಾವಿರಾರು ವರ್ಷಗಳಿಂದಲೂ ನಾವು ಧರ್ಮಪಾಲನೆ ಮಾಡುತ್ತಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹುಟ್ಟಿದ ದಿನದಿಂದಲೂ ಹಿಂದುತ್ವವನ್ನೇ ಆಚರಣೆ ಮಾಡುತ್ತಿದೆ. ನಾವು ಕಟ್ಟಿರುವ ದೇವಸ್ಥಾನಗಳನ್ನು, ಧರ್ಮಕ್ಕೆ ನೀಡಿದಷ್ಟು ದೇಣಿಗೆಗಳನ್ನು ಬಿಜೆಪಿಯವರು ನೀಡಿಲ್ಲ. 20-30 ವರ್ಷಗಳ ಹಿಂದಿನಂದಷ್ಟೇ ಬಿಜೆಪಿಯವರು ಹಿಂದುತ್ವದ ಚರ್ಚೆ ಮಾಡುತ್ತಾರೆ. ನಾವು ಸಾವಿರಾರು ವರ್ಷಗಳಿಂದಲೂ ನಿಜವಾದ ಹಿಂದುಗಳು. ಅವರಂತೆ ರಾಜಕಾರಣದ ನಕಲಿ ಹಿಂದೂಗಳಲ್ಲ ಎಂದರು.

ಕಾಂಗ್ರೆಸಿಗರು ಯಾವತ್ತು ಒಂದು ಧರ್ಮಕ್ಕೆ ಆದ್ಯತೆ ನೀಡುವುದಿಲ್ಲ. ಎಲ್ಲಾ ಧರ್ಮಗಳನ್ನು ಸಮಾನವಾಗಿ ನೋಡುತ್ತದೆ. ಆದರೆ ಬಿಜೆಪಿಯವರು ಆ ರೀತಿಯಲ್ಲ. ಒಂದು ಧರ್ಮಕ್ಕೆ ಸೀಮಿತವಾಗಿ ರಾಜಕಾರಣ ಮಾಡುತ್ತಾರೆ. ಧರ್ಮ ಒಡೆಯುವ ಕೆಲಸ ಮಾಡುತ್ತಾರೆ ಎಂದು ಟೀಕಿಸಿದರು.

ಯಾವುದೇ ಸಮಯದಲ್ಲಿ ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

ಬಿಜೆಪಿಯವರು ಸರ್ಕಾರ ರಚಿಸಿದ ವೇಳೆ 279 ಕೋಮುಗಲಭೆಯ ಪ್ರಕರಣಗಳನ್ನು ಹಿಂಪಡೆದರು. 7000 ಕ್ಕೂ ಹೆಚ್ಚು ಮಂದಿ ರೌಡಿ ಶೀಟರ್‍ಗಳನ್ನು ಪಟ್ಟಿಯಿಂದ ಕೈಬಿಟ್ಟಿದ್ದಾರೆ. ಕಾಂಗ್ರೆಸ್ ಆ ರೀತಿ ಧರ್ಮಾಧಾರಿತವಾಗಿ ನಿರ್ಧಾರ ತೆಗೆದುಕೊಂಡಿಲ್ಲ. ರೈತರು, ಕನ್ನಡಪರ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ಉದ್ದೇಶದ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಪೊಲೀಸರ ಮೇಲೆ ಹಲ್ಲೆ ಮಾಡಿರುವುದು ಗಂಭೀರ ಸ್ವರೂಪದ ಅಪರಾಧಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದರು.

ತಪ್ಪಿತಸ್ಥರು ಯಾವುದೇ ಪಕ್ಷ ಅಥವಾ ಧರ್ಮದವರಾದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಆದರೆ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್‍ಗಿರಿ ಮಾಡುತ್ತಾರೆ, ಪಬ್ ಗಲಾಟೆಯಾಯಿತು, ಇದರಲ್ಲೆಲ್ಲಾ ಭಾಗವಹಿಸಿದ್ದವರು ಯಾರು, ಬಿಜೆಪಿ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು, ರಾಜಕಾರಣಕ್ಕಾಗಿ ಇಂತಹ ನಕಲಿ ಹಿಂದುತ್ವವನ್ನು ಬಿಜೆಪಿ ಮೊದಲಿನಿಂದಲೂ ಬಳಕೆ ಮಾಡುತ್ತಿದೆ ಎಂದರು.

ಶಿವಮೊಗ್ಗ ಗಲಾಟೆ ಸಂದರ್ಭದಲ್ಲಿ ಇನ್ನಷ್ಟು ಬಿಗಿ ಬಂದೋಬಸ್ತ್ ಅನ್ನು ಆಯೋಜನೆ ಮಾಡಬೇಕಿತ್ತು. ಅಲ್ಲಿ ಮೊದಲಿನಿಂದಲೂ ಕೋಮು ಸಂಘರ್ಷಗಳಾಗುತ್ತಿದ್ದವು, ಮುನ್ನೆಚ್ಚರಿಕೆ ವಹಿಸಬೇಕಿತ್ತು. ಗಲಾಟೆ ನಂತರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಗಿದೆ. ತಪ್ಪಿತಸ್ಥರಿಗೆ ಧರ್ಮ ಸಂಘಟನೆಗಳ ಹೆಸರಿನಲ್ಲಿ ರಿಯಾಯಿತಿ ನೀಡಬಾರದು ಎಂದು ಹೇಳಿದರು.

ಬಿಜೆಪಿಯವರು ವೇಷ ಮರೆಸಿಕೊಂಡು ಗಲಭೆ ಮಾಡುತ್ತಾರೆ ಎಂದು ತಾವು ಶಿವಮೊಗ್ಗ ಘಟನೆ ಕುರಿತಾಗಿ ಹೇಳಿದ್ದಲ್ಲ. 20-30 ವರ್ಷಗಳಿಂದಲೂ ಬಿಜೆಪಿಯವರು ನಡೆದುಕೊಳ್ಳುವ ರೀತಿಯ ಬಗ್ಗೆ ಹೇಳಿದ್ದೇನೆ ಎಂದರು.
ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೋ ಗೊತ್ತಿಲ್ಲ. ಆದರೆ ನಿನ್ನೆ ಮುಖ್ಯಮಂತ್ರಿಯವರು ಕರೆದ ಔತಣಕೂಟದಲ್ಲಿ ಲಿಂಗಾಯತ ಸಮುದಾಯದ ಈಶ್ವರ್‍ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶ್ಯಾಮನೂರು ಶಿವಶಂಕರಪ್ಪ ಅವರ ಪುತ್ರರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಎಲ್ಲರೂ ಭಾಗವಹಿಸಿದ್ದರು.

ಭಾರತಕ್ಕೆ ಹಸ್ತಾಂತರದ ವಿರುದ್ಧ ಮನವಿ ಸಲ್ಲಿಸಲು ರಾಣಾಗೆ ಕಾಲಾವಕಾಶ

ಆಡಳಿತ ವ್ಯವಸ್ಥೆಯಲ್ಲಿ ಯಾರಿಗೂ ಅನ್ಯಾಯವಾಗಿಲ್ಲ. ಜಿಲ್ಲಾಧಿಕಾರಿಗಳ ಹಾಗೂ ಇತರ ಉನ್ನತ ಹಂತದಲ್ಲಿ ಯಾವ ಮಟ್ಟದ ಆದ್ಯತೆ ನೀಡಲಾಗಿದೆ ಎಂಬ ಮಾಹಿತಿಯನ್ನು ಚರ್ಚಿಸಲಾಗಿದೆ. ಆ ರೀತಿ ವ್ಯತ್ಯಾಸಗಳಿದ್ದರೆ ಶ್ಯಾಮನೂರು ಶಿವಶಂಕರಪ್ಪ ಮತ್ತು ಸಿದ್ದರಾಮಯ್ಯನವರು ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು ಎಂಬ ಚರ್ಚೆಗಳು ಕೇಳಿಬಂದಿವೆ.